ಒಟ್ಟು 7252 ಕಡೆಗಳಲ್ಲಿ , 124 ದಾಸರು , 3152 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಳಿದ್ಯಾ ಈ ಕೌತುಕ ಕೇಳಿದ್ಯಾ ಕೇಳಿದ್ಯಾ ಕೌತುಕವನ್ನು ಈಗ ಪ ಪೇಳುವೆ ನಾ ನಿಮಗಿನ್ನು ಆಹಾ ಜಾರ ಚೋರ ಕೃಷ್ಣ ಅ.ಪ. ಕರೆಯೆ ಬಂದಿಹನೊಬ್ಬ ಚೋರಾ ತನ್ನ ಕಿರಿಯಯ್ಯನಂತೆ ಅಕ್ರೂರಾ ಊರ ಹೊರ ಹೊಳಿಯಲಿ ಬಟ್ಟ ತೇರಾ ಆಹಾ ಹಿರಿಯನೆಂದು ಕಾಲಿಗೊರಗೋರಾ ರಾಮಕೃಷ್ಣರ ಭರದಿ ಅಪ್ಪಿಕೊಂಡು ಮರುಳು ಮಾಡಿದ ಸುದ್ದೀ 1 ಸೋದರಮಾವನ ಮನೆಯೋಳ್ ಬೆಳ - U್ಫದ ನಾಳಿನ ದಿನದೋಳ್ ಕೃಷ್ಣ ಪೋದರೆ ನೆರೆದ ಜನರೋಳ್ ಆಹಾ ಕಾದುವ ಮಲ್ಲರ ಮೇಲ್ಹಾರ ಬಿಲ್ಹಬ್ಬ ಸಾಧಿಸಿ ಸಮಯಕ್ಕೆ ಹೋದೆವೆಂಬ ಅರ್ತಿ 2 ಹುಟ್ಟಿದ ಸ್ಥಳವಂತೆ ಮಧುರೀ ಕಂಸ - ನಟ್ಟುಳಿಗಾಗಿ ತಾ ಬೆದರೀ ಇ - ಲ್ಲಿಟ್ಟಳಾತನ ತಂಗಿ ಚದುರೀ ತೋರಿ ಕೊಟ್ಟರೆ ತನ್ನನು ಬೆದರೀ ಆಹಾ ಇಷ್ಟು ಸ್ನೇಹವು ಶ್ರೀದವಿಠಲ ಮಾವನ ಭೆಟ್ಟಿಗಾಗಿ ಒಡಂಬಟ್ಟು ಹೋಗುವನಂತೆ 3
--------------
ಶ್ರೀದವಿಠಲರು
ಕೇಳಿದ್ಯಾ ಕೌತಕವನ್ನು ಕೇಳಿದ್ಯಾಪ ಕೇಳಿದ್ಯಾ ಕೌತಕವನ್ನು ನಾಕೇಳಿದೆ ನಿನಗಿಂತ ಮುನ್ನ ಆಹಾಚಾಳಿಕಾರ ಕೃಷ್ಣ ಪೇಳದೆ ಮಧುರೆಗೆಕೋಳಿ ಕೂಗದ ಮುನ್ನ ನಾಳೆ ಪಯಣವಂತೆಅ.ಪ. ಕರೆಯ ಬಂದಿಹನಂತೆ ಕ್ರೂರ ತಮ್ಮಕಿರಿಯಯ್ಯನಂತೆ ಅಕ್ರೂರ ಪುರಹೊರವಳಯದಿ ಬಿಟ್ಟು ತೇರ ಆಹಾಹಿರಿಯನೆಂದು ಕಾಲಿಗೆರಗಲು ರಾಮಕೃ-ಷ್ಣನ ಠಕ್ಕಿಸಿಕೊಂಡುಮರುಳುಮಾಡಿದ ಬುದ್ಧಿ 1 ಸೋದರ ಮಾವನ ಮನೆಗೆ ಬೆಳ-ಗಾದರೆ ನಾಳಿನ ಉದಯ ಪರ-ಮಾದರವಂತೆ ತ್ವರೆಯ ಅಲ್ಲಿ ತೋರಿದ ಮನಕೆ ನಾರಿಯ ಆಹಾಸಾದಿಮಲ್ಲ ಮೊದಲಾದ ಬಿಲ್ಲಹಬ್ಬಸಾಧಿಸಿಕೊಂಡು ಬರುವೆನೆಂದು ಸುದ್ದಿ 2 ಹುಟ್ಟಿದ ಸ್ಥಳವಂತೆ ಮಧುರೆ ಕಂಸ-ನಟ್ಟುಳಿಗಾರದೆ ಬೆದರಿ ತಂ-ದಿಟ್ಟ ತನ್ನ ತಂದೆ ಚದುರೆ ತೋರಿಕೊಟ್ಟಳು ಭಯವನ್ನು ಬೆದರಿ ಆಹಾಎಷ್ಟು ಹೇಳಲಿ ರಂಗವಿಠಲನು ಮಾವನಭೆಟ್ಟಿಗಾಗಿ ಒಡಂಬಟ್ಟು ಪೋಗುವ ಸುದ್ದಿ3
--------------
ಶ್ರೀಪಾದರಾಜರು
ಕೇಳಿರೋ ಕೇಳಿರೋ ಆನಂದ ನುಡಿಗಳ | ಜಾಳಿಲಿ ದೋಷವ ಹರಿನಾಮ ನೆನೆಯುತ | ಕೇಳಿ ಕೇಳಿ ಕೇಳಿ ಕೇಳಿ ಪ ಯುಗದಂತಿಲಿ ಸರ್ವ ಮತವೆಲ್ಲ ಕೆಡಲಾಗಿ | ಜಗದೋದ್ಧಾರ ಜಗದೀಶ ಬರು ತಾನೆ 1 ಸ್ವ ಶಕ್ತಿ ಕುದುರೆಯ ನೇರಿ ರಾವುತನಾಗಿ | ಅಸಮ ಪೊನ್ನೀಟೆಯ ಹಿಡಕೊಂಡು ಬರುತಾನೆ2 ನಾಕು ವೇದಗಳೆಂಬಾ ಕುದುರೆಯ ಕಾಲವು | ಬೇಕಾದ ಅವಯವ ಆರು ಶಾಸ್ತ್ರಗಳಿವೆ3 ಮೂರು ಪೌರಾಣ ಶೃಂಗಾರಾಭರಣವು | ಶರಣವತ್ಸಲನೆಂಬ ಕಡಿವಾಣ ಕುದುರೆಗೆ4 ಬೋಧ ಹಕ್ಕರಿಕೆಯು | ಭಾವಿಸೆ ಭೂ ಭಾಗವೆಂಬುದು ಪಾವುಡವು5 ಈ ಪರಿಯಿಂದಲಿ ಭೋರ್ಗರೆವುತ ಬರೆ | ತಾಪವಡಗಿ ಸುಖ ತಂಗಾಳಿ ಬಂದೀತು 6 ತಾಯಿಯ ಧ್ವನಿ ಕೇಳಿ ಮಕ್ಕಳು ಬಹುಪರಿ | ಬಾಯ ದೆರವುತಲಿ ಜನಜಡಿ ಬಹುದು7 ಅವರಿ-ಗಭಯ ಕೊಟ್ಟು ಅಧರ್ಮವೇ ಕಿತ್ತಿ ಯವನರ ಹಂತಿಯ ಕಟ್ಟಿ ತಾ ತುಳಿಸುವ 8 ಹೊಟ್ಟವ ಹಾರಿಸಿ ಘಟ್ಟಿ ತಾ ಉಳಹುವ | ಸೃಷ್ಟಿಲಿ ಧರ್ಮ ಸಂ-ಸ್ಥಾಪನೆ ಮಾಡುವಾ 9 ಮೊದಲಂತೆ ಜಗವನು ಸುಖದಲಿ ಇಡುವನು | ಮುದದಿಂದ ಸಾರಿದ ಗುರುವರ ಮಹಿಪತಿ 10
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳು ಜೀವನವೆ ನೀ ಮಧ್ವಮತವನುಸರಿಸಿ ಶ್ರೀಲೋಲನಂಘ್ರಿಯನು ನೆನೆದು ಸುಖಿಸೊ ಪ. ನರನಾಗಿ ಪುಟ್ಟುವುದು ದುರ್ಲಭವೆಲವೊ ಭೂ- ಸುರಕುಲದಿ ಜನಿಸುವುದು ಬಹು ದುರ್ಲಭ ಪರಮ ಸುಕೃತವದೇನು ಫಲಿಸಿತೊ ನಿನಗೀಗ ದೊರಕಿದೀ ಜನುಮವನು ಸಫಲ ಮಾಡೊ 1 ಅರಘಳಿಗೆ ಮಾತ್ರವೆ ಪೊತ್ತು ಪೋಗಲು ಆಯು ಕೊರತೆಂದು ತಿಳಿ ನಿನ್ನ ಕ್ಲುಪ್ತದೊಳಗೆ ಮರಳುತನದಲಿ ಬರಿದೆ ದಿನಗಳಿಯಬ್ಯಾಡೆಲವೊ ಸ್ಥಿರವಲ್ಲ ಈ ದೇಹ ಸ್ವಪ್ನಸಮವೊ 2 ದುರುಳರೊಡನಾಡಿ ದುರ್ವಿಷಯ ಲಂಪಟನಾಗಿ ನರಕಯಾತನೆಗೆ ಗುರಿಯಾಗದಿರೆಲೊ ಎರಡುದಿನದೋಡ್ಯಾಟ ಇರಬಂದುದಲ್ಲವಿದು ಪರಗತಿಗೆ ಸಾಧನ ಮಾಡಿಕೊಳ್ಳೊ 3 ಹೋಗುತಿವೆ ಹೋಗುತಿವೆ ದಿವಸ ವ್ಯರ್ಥವಾಗಿ ಹೀಗೆ ಮೈಮರೆದಿಹುದು ನಿನಗೊಳ್ಳಿತೆ ಬ್ಯಾಗ ಹರಿಯನು ಭಜಿಸು ಬಾ ಈ ಮಾತಲ್ಲ ನೀ ಹೋಗಿನೋಡಲು ಯಮನ ಬಾಧೆ ಬಿರುಸೊ4 ಏನ ಹೇಳಲಿ ನಿನ್ನ ಮಂದಮತಿಯನು ಹಿಂದೆ ಶ್ವಾನಸೂಕರ ಮೊದಲಾದ ನೀಚ- ಯೋನಿಗಳೊಳಗೆ ಬಂದು ಅಂದದನು ಕ್ರಮಿಸಿದವನು ಆ ನೋವನಾಗಲೆ ಮರೆದಿಯಲ್ಲೊ 5 ಮುನ್ನ ದುಷ್ಕರ್ಮವ ಮಾಡಿದ ಪ್ರಾಣಿಗಳು ಉನ್ನತ ನೀಚ ದೇಹಗಳ ಧರಿಸಿ ಬನ್ನಬಡುತಿಹುದು ನೀ ನೋಡಿ ನೋಡಿ ಮತ್ತೆ ದುರ್ನಡತೆಯನು ಮಾಡಲುದ್ಯೋಗಿಪೆ 6 ಎಂಬತ್ತು ನಾಲ್ಕು ಲಕ್ಷ ಯೋನಿಗಳೊಳಗೆ ಕುಂಭಿಣಿಯೊಳಗೆ ತಿರುತಿರುಗಿ ಪಾಪ ಉಂಬುದನುಚಿತವೆಂದು ಮನ ಹೇಸಿ ವಾಕರಿಸಿ ನಂಬುನಾರಾಯಣನ ಇನ್ನಾದರೂ 7 ಜನನಿಯ ಗರ್ಭವಾಸ ದುಃಖ ಅತಿಶಯವೊ ಜನನ ಮರಣದ ದುಃಖ ಬಲು ಅಧಿಕವೊ ಘನ ನರಕದಾ ದುಃಖ ಪೇಳಲೊಶವಲ್ಲ ನಿನ- ಗಿನಿತಾದರೂ ನಾಚಿಕಿಲ್ಲವೇನೊ 8 ಸಾರಿ ಪೇಳುವೆನೀಗ ಪುಟ್ಟಿ ಬೆಳೆದಳಿವ ಸಂ- ಸಾರ ಸುಖವಲ್ಲ ಮಹ ದುಃಖಪುಂಜ ಘೋರ ಸಂತಾಪಕ್ಕೆ ಕಡೆಮೊದಲಿಲ್ಲವೊ ವಾರಿಜಾಂಬಕನ ಮರೆಯೊಕ್ಕು ಬದುಕೊ 9 ಹಿಂದೆ ಬಹುಜನುಮದಲಿ ಬಂದು ಬಳಲಿದ ಬವಣೆ ಒಂದೊಂದು ನೆನೆಸಿಕೊಳಲತಿ ಕಷ್ಟವೊ ಮುಂದಾದರು ಸರಿ ಎಚ್ಚೆತ್ತು ಬಿಡದೆ ಗೋ- ವಿಂದನ ಪದಾಂಬುಜವ ಧ್ಯಾನ ಮಾಡೊ 10 ಮಾರಿ ಇಲ್ಲಿದೆಯೆಂದು ಕೇಳುತಲಿ ಪೋಗಿ ನೀ ಭೂರಿ ಭಯಕೊಳಗಹದು ನೀತಿಯಲ್ಲ ದೂರ ತಿಳಿದು ನೋಡಿ ದುರ್ಮಾರ್ಗವನು ಜರಿದು ಸೇರಿ ಸಜ್ಜನರ ಸುಪಥವ ಪಡೆಯೊ 11 ನಿನ್ನಯ ಸ್ವರೂಪಕ್ಕೆ ಹೀಗಾಗುವುದೆಂದು ಪುಣ್ಯವನೆ ಗಳಿಸಿಕೊ ಬ್ಯಾಗ ನೀನು ಇನ್ನು ಈ ಧರೆಯಲ್ಲಿ ಬಿಟ್ಟು ಹೋಗುವ ದೇಹ- ವನ್ನು ಪೋಷಿಸಿಕೊಂಡು ಹಿಗ್ಗಬೇಡ 12 ವನಿತೆಸುತರನು ಪೊರೆಯಬೇಕೆಂಬ ಬುದ್ಧಿಯಲಿ ಧನದಾಸೆಯಿಂದಲಗಣಿತ ಪಾಪವ ಕ್ಷಣದೊಳಗೆ ಸಂಪಾದಿಸಿಕೊಂಬೆ ಎಲೊ ಮೂಢ ನಿನಗಿವರು ಕೊನೆಗೆ ಸಂಗಡ ಬರುವರೆ 13 ಕೆಡಬ್ಯಾಡ ವ್ಯರ್ಥಮೋಹಕೆ ಸಿಲುಕಿ ಜವನವರು ಪಿಡಿದೊಯ್ದು ಕಡಿದಿರಿದು ಕೊಲ್ಲುವಾಗ ಬಿಡಿಸುವವರಾರಿಲ್ಲ ಈಗಳೆ ಮುಂದರಿತು ಕಡಲಶಯನನ ಪೊಂದಿ ಮುಕುತಿ ಪಡೆಯೊ 14 ಈಗಲೇನೊ ಇನ್ನು ಕ್ಷಣಕೇನು ಬಪ್ಪುದೊ ನೀ ಗರುತರಿಯದಲೆ ಹಿತ ರಾಗದಲಿ ಸರ್ವವನು ಎನ್ನದೆಂದಾಡದಿರು ನಾಗಾರಿಗಮನನಾಧೀನವೆನ್ನೊ 15 ನೀ ಮಗುಳೆ ಮಹಿಯೊಳಗೆ ಕಂಡುಕಂಡುದ ಬಯಸಿ ಭ್ರಾಮಕರ ನುಡಿಗೇಳಿ ಭ್ರಾಂತಿಗೊಳದೆ ಕಾಮಾದಿಗಳ ತ್ಯಜಿಸಿ ಸತ್ಕರ್ಮವನು ಮಾಡಿ ಶ್ರೀಮನೋ ಹರನಿಗರ್ಪಣೆಯ ಮಾಡೊ16 ಏನುಧಾವತಿಗೊಳಲೇನೇನು ಫಲವಿಲ್ಲ ಮಾನವಜನುಮ ಜೊಳ್ಳು ಮಾಡಬ್ಯಾಡ ಆನಂದತೀರ್ಥರ ಪಾದಕಮಲವ ಪೊಂದಿ ಅಚ- ಲಾನಂದವಿಠಲನ್ನ ನೀನೊಲಿಸಿಕೊ 17
--------------
ಅಚಲಾನಂದದಾಸ
ಕೇಳು ಶ್ರೀನಿವಾಸ ಕಷ್ಟವ ತಾಳಲಾರೆ ಶ್ರೀಶ ಕಂಜಜೇಶ ಪ. ಮಾತ ಕೇಳದಿರುವ ಮನ ಬಹು ಕಾತರಗೊಂಡಿರುವ ರೀತಿಯಿಂದ ಬಹು ಸೋತೆನು ಷಡ್ರಿಪು ಜಾತ ಬಂಧಿಸಿರುವ 1 ಕಟ್ಟಿ ಸಹಿಸಲಾರೆ ಮೊದಲ ವಿಠಲ ನೀ ಕೈಬಿಟ್ಟರೆ ಮಾಜದು ಅಟ್ಟಹಾಸ ತೋರೆ 2 ಉದಯ ಮೊದಲುಗೊಂಡು ನಾನಾ ವಿಧದಲಿ ಭ್ರಮೆಗೊಂಡು ಸದಯ ನಿನ್ನ ಪಾದಾಬ್ಜ ನೆನೆಯದೆ ಚದುರೆಯ ಮನಗೊಂಡು 3 ನಿತ್ಯ ಕರ್ಮವೆಲ್ಲ ಕಂಬಳಿ ಬುತ್ತಿಯಾಯಿತಲ್ಲ ಕತ್ತರಿಸಿ ಬ್ರಹ್ಮೆತ್ತಿಯನ್ನು ಪುರು- ಸಿರಿನಲ್ಲ 4 ತಲ್ಲಣಗೊಳಿಸುವುದು ತುದಿಮೋದ- ಲಿಲ್ಲದೆ ದಣಿಸುವುದು ನಿಲ್ಲೆ ನಡೆಯ ಮಲಗೆಲ್ಯು ಬಿಡದು ದೂ- ರೆಲ್ಲು ಪೇಳಗೊಡದು 5 ಮೆಲ್ಲ ಮೆಲ್ಲನೆದ್ದು ನೀ ಮನ ದಲ್ಲಿ ಸೇರುತ್ತಿದ್ದು ನಿಲ್ಲಲು ತೀರಿತಲ್ಲದೆ ಲೋಕ ದೊಳಿಲ್ಲ ಬೇರೆ ಮದ್ದು 6 ನಿತ್ಯ ನಿನ್ನ ಮುಂದೆ ಸೇವಾ ವೃತ್ತಿ ಮಾಳ್ಪದೊಂದೆ ಎತ್ತಾರಕವೆಂದಾಶ್ರಯಿಸದೆ ಮೇ- ಲೊತ್ತಿ ಬೇಗ ತಂದೆ 7 ಭೃತ್ಯರ ಬಿಡನೆಂದು ಶ್ರುತಿ ಶಿರ ವೃತ್ತಿ ವಚನವೆಂದು ಸತ್ಯವೆಂದು ನಂಬಿದ ನೀನರಿಯೆಯ ಔತ್ತರೆಯ ಬಂಧು 8 ವಿಜಯಸೂತನಿಂದ ಪಾದವ ಭಜಿಸಿದ ಮ್ಯಾಲೆನ್ನ ನಿಜ ಜನದೊಳು ಸೇರಿಸುವುದು ಚಿತ ಸಾಮಜ ವರದನೆ ಮುನ್ನ 9 ಭವ ಪರಿಪಾಲ ಪಾಲಿಸು ವ್ರಜ ಯುವತಿ ಲೋಲಾ ಪಾದ ಪಂ- ಕಜ ಕೊಡು ಗೋಪಾಲ 10
--------------
ತುಪಾಕಿ ವೆಂಕಟರಮಣಾಚಾರ್ಯ
ಕೇಳೆ ಕೊಳಲಿನ ದನಿಯ ಸಖಿಯೆ ನಾಳೆಯೆಂದೆನಬೇಡವೆ ಪ ಹೇಳೆ ಕೊಳಲಿನ ನಾದ ಸೇರಲಿ ತಾಳವನು ಬಿಡಬೇಡವೆ ಬಾಳು ಹಸನಾಗಿರಲು ಗಾನವು ಮೇಳವಿಸಬೇಕಲ್ಲವೆ ಅ.ಪ ಗಾನವೇ ಸುಖಸಂಪದದ ನೆಲೆ ಗಾನವೆ ಶಿಶುಲಾಲನೆ ಗಾನವೇ ಫಣಿಗಿಷ್ಟವಲ್ಲವೇ ಗಾನವೇ ಪಶುಪಾಲನೆ ಗೋಪಿ ನಲಿದಳು ಗಾನ ವೇದದ ಸಾಧನೆ 1 ವೈರಿ ಅಂಗಜಾತನ ಪಿತನ ಕೊಳಲಿನ ಗಾನವೇ ಮಧುಪಾನವು ಮಂಗಳಾಂಗನ ಪಾದಸೇವೆಗೆ ಮಾಂಗಿರೀಶನ ನಾಮವು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೇಳೆ ನಂದನ ಕಾಂತೆ ಹೇಳೆ ಮಗಗೆ ಬುದ್ದಿ ಬಾಲೆಯರನು ಇರಗೊಡನೆ ದಮ್ಮಯ್ಯ ಪ ಕುತ್ತಿಗೆಯೊಳಗಣ ಮುತ್ತಿನ ಸರಗಳ ಕಿತ್ತು ಹರಿದು ಚೆಲ್ಲಿ ಪೋದ ದಮ್ಮಯ್ಯ 1 ಕಟ್ಟಿದ ಕರುಗಳ ಬಿಟ್ಟು ಒಲೆಯ ಮೇಲೆ ಇಟ್ಟ ಪಾಲ್ಗಳನೆಲ್ಲ ಕುಡಿದ ಗೋಪಮ್ಮ 2 ಪಿಕ್ಕದೊಳಿಹ ಬೆಣ್ಣೆ ಚೊಕ್ಕನೆಲ್ಲವ ಮೆದ್ದು ಮರ್ಕಟಗಳಿಗಷ್ಟನಿತ್ತ ದಮ್ಮಯ್ಯ 3 ಬೇಡವೆಂದರೆ ಛಲಗೇಡಿ ಹಿಡಿದು ಎನ್ನ ನೋಡಿ ಮೋಸವ ಮಾಡಿ ಹೋದ ದಮ್ಮಯ್ಯ 4 ಮರುತಾತ್ಮಜ ಕೋಣೆ ಲಕ್ಷ್ಮೀರಮಣಗೊಮ್ಮೆ ನಾರಿ ನೀ ಬುದ್ದಿಯ ಹೇಳೆ ದಮ್ಮಯ್ಯ 5
--------------
ಕವಿ ಪರಮದೇವದಾಸರು
ಕೈಮುಗಿದು ಕೇಳಿಕೊಂಬೆ ಕರುಣಾಸಾಗರ ಶ್ರೀಕರ ಪ ಶ್ರೀಮನೋಹರ ಭಾವಿಸುತ್ತ ಭಕ್ತಿಯೀವುದೈ ಶುಭಕರ ಅ.ಪ ಕಣ್ಣ ತುಂಬ ನೋಡುವೆ ಚನ್ನ ಪಾದಯುಗಳ ನೀನಿಡುನಾ ನನ್ನಿಯಿಂ ನಮಿಪೆ ನಾರಾಯಣ 1 ಎನ್ನೊಳೆರಡು ಮಾತನಾಡು ಮೃದುನುಡಿ ಕೇಳುವೆ ಸಂ ಪನ್ನ ಕೃಪಾದೃಷ್ಟಿಯ ನೀಡು ಧನ್ಯನಾಗುವೆ ದೀನಬಂಧು2 ಬಾಲಗೋಪಾಲ ಲೀಲೆ ತೋರೋ ನಲಿಯುವೆ ಶ್ರೀಲೋಲ ಮುದ್ದಾಡುವೆ ಮುದ್ದು ಕೃಷ್ಣ3 ಎನ್ನ ಬಿನ್ನಪವ ಕೇಳು ಜನ್ಮ ಸಾರ್ಥಕವ ಮಾಡು ಇನ್ನು ಸಾವಕಾಶವೇಕೊ ಜಾಜೀಕೇಶವ ಸುವೈಭವ 4
--------------
ಶಾಮಶರ್ಮರು
ಕೈಯ ಬಿಡದಿರೋ ನಾರಾಯಣ ಜೀಯಾ ಕಾಯೆಂದು ಶರಣುಬಂದೆನ್ನ ಪ ಲೋಕದಂತೆ ನಡೆಯಲೆನುತ ಬೇಕಾದುದಿಲ್ಲವೆಂದು ತೊಳಲಿ ಶೋಕಸಾಗರದೊಳಗೆ ಮುಳುಗಿ ಶ್ರೀಕಾಂತ ನಿನ್ನ ಕಾಣಬೇಕೆಂಬೆನ್ನ 1 ಹೊಟ್ಟೆ ಬಟ್ಟೆಗಳಿಗೆ ದುಡಿಯ ಲೆಷ್ಟೆ ಕಷ್ಟಪಟ್ಟು ಬಳಲಿ ಸೃಷ್ಟಿಪಾಲಕ ಬಾಯಬಿಡುತ ಇಷ್ಟದೈವವ ಸೇರಬೇಕೆಂಬೆನ್ನ 2 ಆಶೆಯೆಂಬ ಪಾಶವೆನ್ನ ಮೋಸದಿಂದ ಬಂಧಿಸಿಹುದು ಲೇಸಕಾಣೆನು ಜಾಜೀಕೇಶವ ಪೋಷಿಸೆಂದು ಮರೆಯಹೊಕ್ಕೆನ್ನ 3
--------------
ಶಾಮಶರ್ಮರು
ಕೈಯ ಬಿಡುವರೇ ಕೃಷ್ಣ ಕೈಯ ಬಿಡುವರೇ ಪ ಹೇಯ ವಿಷಯದಲ್ಲೆ ಇರಿಸಿ ಜೀಯ ನಿನ್ನ ವಿಷಯ ಮರೆಸಿ ಭವ ಸಮುದ್ರ ಅ.ಪ ಬಿಂಬ ನೀನು ಸಿದ್ಧಪ್ರತಿಬಿಂಬ ನಾನು ಸಿಧ್ದವಿರಲು ತುಂಬಿ ಪರಿವ ನದಿಯ ಮಧ್ಯೆ ಅಂಬಿಗನೆ ತ್ಯಜಸಿದಂತೆ 1 ಕಲಿಯ ಕಾಟ ವಿಷಯ ದಾಟಗೆಲುವ ಶಕ್ತಿ ಎನಗೆ ಉಂಟೆ ಒಲಿಯದಿರಲು ನೀನೆ ದಯದಿ ಸುಲಭದೇವ ನೆನಿಸಿ ಹೀಗೆ 2 ತಾಯಿ ಬಿಡುವಳೇನು ಶಿಶುವ ಮಾಯೆ ಸುಳಿಯಲ್ಲಿರಲು ಸಹಾಯ ಮಾಡದೇನೆ ಬದಿಗ 3 ಶಿಷ್ಟನಲ್ಲ ದುಷ್ಟಕರ್ಮ ಭ್ರಷ್ಟನೆಂಬ ಮಾತು ಮೂಟೆ ಕಟ್ಟಿಪೇಳು ಬಿಟ್ಟು ನಿನ್ನ ಎಷ್ಟು ಕರ್ಮಮಾಡಲಾಪೆ 4 ಹಿಂದಿನವರು ತಾವೆ ಮುಂದೆ ಬಂದರೇನೊ ಬಿಟ್ಟು ನಿನ್ನ ಒಂದು ತೃಣವು ಚಲಿಸದಲ್ಲ ತಂದೆ ಮನವ ಮಾಡದಿರಲು 5 ನಾನು ಎಂದು ಹೀನನಾದೆ ನೀನು ಸ್ವಾಮಿ ನಾನು ಭೃತ್ಯ ಶ್ರೀನಿವಾಸ ಶರಣು ಶರಣು ಜ್ಞಾನವಿತ್ತು ಕಾಯೊ ಮುಂದೆ 6 ನಿನ್ನ ನಂಬಿ ಇರುವೆ “ಶ್ರೀ ಕೃಷ್ಣವಿಠಲ” ಸತ್ಯಸತ್ಯ ಅನ್ಯರನ್ನು ಕಾಣೆನಪ್ಪ ನಿನ್ನ ಚಿತ್ತ ನನ್ನ ಭಾಗ್ಯ 7
--------------
ಕೃಷ್ಣವಿಠಲದಾಸರು
ಕೈವಲ್ಯ ಪಡೆವರು ಜನರು - ಹರಿ ಪ ಮೂರ್ತಿ ಶ್ರೀ ಚೆನ್ನಕೇಶವನ ಮನದೊಳಗಿಟ್ಟು ಅ ಹಗೆ ಮಾಡಬೇಡಕುಲದಲ್ಲಿ ಜನಿಸಿ ಕುಚೋದ್ಯ ಮಾಡಲುಬೇಡನಲಿದು ಹರಿಯ ಪೊಗಳದ ನಾಲಗೆಯು ಬೇಡ 1 ಮಂದಮತಿಗಳ ಕೂಡ ಮಹಕಥೆಯ ನುಡಿಬೇಡಯತಿಯಾದ ಮೇಲೆ ಸತಿಸುತರಾಸೆ ಬೇಡ..................................................................ಹಿತ ತಪ್ಪಿ ನಡೆವಂಥ ಹೆಂಡತಿಯು ಬೇಡ 2 ಕೆಟ್ಟು ಹೋದವರನ್ನು ತಿರುಗಿ ಕರೆತರಬೇಡಮುಟ್ಟಾದ ಮೇಲೆ ಮೋಹಿಸಿ ಕೂಡಬೇಡಭ್ರಷ್ಟನಾಡಿದನೆಂದು ಸಿಟ್ಟಿನಲಿ ನುಡಿಬೇಡಕಷ್ಟದೆಸೆಯೊಳು ಧೈರ್ಯ ಬಿಟ್ಟು ಕೆಡಬೇಡ 3 ಜಂಭ ಬೇಡ 4 ತೀರ್ಥ ಯಾತ್ರೆಗೆ ಪೋಗಿ ತಿರುತಿರುಗಿ ಬಳಲಿ ಕೃ-ತಾರ್ಥನಾದೆನು ಎಂಬ ಘನತೆ ಬೇಡಪಾರ್ಥಸಾರಥಿ ಕಾಗಿನೆಲೆಯಾದಿಕೇಶವನಸಾರ್ಥಕದಿ ಭಜಿಸಿ ಸುಖಿಯಾಗು ಮನುಜ 5
--------------
ಕನಕದಾಸ
ಕೊಟ್ಟರೂ ಸರಿ ನೀನು ಕೊಡದಿದ್ದರೂ ಸರಿ ಕೆಟ್ಟ ಮನುಜರ ಕಾಲಕಟ್ಟರು ನಿನ್ನ ಭಕ್ತರು ನೀ ಕೊಟ್ಟುದೆ ಎಮಗಧಿಕವೆಂದು ತಿಳಿದು ನೀ ಕೊಟ್ಟಷ್ಟಕ್ಕೆ ಸಂತಸದಿ ಸ್ವೀಕರಿಸುವರು ಕಾಲ ಏಳು ಬೆಟ್ಟದೊಡೆಯ ವೆಂಕಟೇಶ
--------------
ಸರಸ್ವತಿ ಬಾಯಿ
ಕೊಟ್ಟಿಗೋತ್ಸವ ಗೀತೆ ಕೊಟ್ಟೊಗೋತ್ಸವ ನೋಡಿ ಸೃಷ್ಟಿಗೀಶ್ವರನ ಪ. ವಾಸುದೇವನ ಸಹಸ್ರಸ್ತಂಭಮಂಟಪವ ದಾಸರು ಬಂದು ಶೃಂಗಾರವ ಮಾಡಿ ದೇಶದ ಮೇಲುಳ್ಳ ಬೊಂಬೆಗಳನು ರಚಿಸಿ ಲೇಸಾದ ಮೇಲುಕಟ್ಟುಗಳ ಕಟ್ಟಿದರು 1 ಸೃಷ್ಟಿಗೀಶ್ವರನಾದ ರಂಗನಾಥನಿಗೆ ಕೊಟ್ಟಿಗೋತ್ಸವವನ್ನು ನಡೆಸಬೇಕೆನುತ ಕಟ್ಟಿ ಕಂಕಣವನ್ನು ನಾಲ್ಕುವೇದಗಳಿಂದ ಭಟ್ಟರು ಓದಿ ಪೇಳಿದರು ಸಂಭ್ರಮದಿ 2 ವಜ್ರದ ಕಿರೀಟವಿಟ್ಟು ರತ್ನದಂಗಿಯ ತೊಟ್ಟು ಅರ್ಜುನಸಖ ಸಂಭ್ರಮದಲಿ ಪೊರಟು ಸ್ವರ್ಗದ ಬಾಗಿಲೊಳಗೆ ತಾ ನಿಂದು ಮೂರ್ಜಗವೆಲ್ಲ ಮೋಹಿಸುತಲೆ ಬಂದು 3 ಮಂದಹಾಸದಲಿ ನಿಂದು ಮಂಟಪದಲಿ ಬಂದ ಆಳ್ವಾರರಿಗಾಸ್ಥಾನವಿತ್ತು ಚಂದದಿಂದ ದಿವ್ಯ ಪ್ರಬಂಧವ ಕೇಳಿ ಒಂದುಅಂಕಣ ಬಿಡದೆ ಬಂದ ಶ್ರೀರಂಗ 4 ಸಂಕ್ರಾಂತಿಯಲಿ ಶಂಕರನ ಪ್ರಿಯನು ಶಂಕೆ ಇಲ್ಲದೆ ಆಭರಣವನು ಧರಿಸಿ ಪಂಕಜಮುಖಿಯರೊಡಗೊಂಡು ಹರುಷದ ಲಂಕಾರವಾಗಿ ಬಂದನು ಮಂಟಪಕೆ 5 ಮತ್ತೆ ಮರುದಿನದಲ್ಲಿ ಭಕ್ತವತ್ಸಲನು ಮುತ್ತಿನಅಂಗಿ ಮುಂಡಾಸನಳವಡಿಸಿ ಮುತ್ತಿನಛತ್ರಿ ಚಾಮರ ಸೂರೆಪಾನದಿ ಮುತ್ತರಸಿಯ ಮಂಟಪಕೆ ನಡೆತಂದ 6 ಅರ್ಥಿಯಿಂಬಂದು ತಾ ಅಶ್ವವನೇರಿ ಮತ್ತೆ ಬೇಟೆಯಮೃಗವನೆ ಕೊಂದು ಸಂ ಕ್ರಾಂತಿಯ ಪಾರ್ವೇಟೆಯನಾಡಿ ಸಂತೋಷದಿ ಬಂದ 7 ನಾರಿವೇಷವ ಆಳ್ವಾರರಿಗೆ ಧರಿಸಿ ಪೇರಿಯ ತಾ ಬಿಟ್ಟು ತೇಜಿಯನೇರಿ ಚೋರತನವ ಮಾಡಿದ ಭಕ್ತರಿಗೆ ಮೂಲಮಂತ್ರವ ಪೇಳಿ ಮುಕ್ತಿಯನಿತ್ತ 8 ಮಿಂದು ಮಡಿಯನುಟ್ಟು ಅಂದು ರಾತ್ರಿಯಲಿ ಹ ನ್ನೊಂದು ವಿಧ ಭಕ್ಷ್ಯಗಳನು ತಾ ಗ್ರಹಿಸಿ ಬಂದ ಆಳ್ವಾರರಿಗೆ ಮುಕ್ತಿಯನಿತ್ತು ಬಂದು ಆಸ್ಥಾನದಿ ನಿಂದ ಶ್ರೀರಂಗ 9 ಭಕ್ತರು ಮಾಡಿದ ಪ್ರಬಂಧವನೆಲ್ಲ ಭಕ್ತಿಯಿಂದಲೆ ಪೇಳಿದ ಆಚಾರ್ಯರಿಗೆ ಯುಕ್ತಿ ತೋರಿದ ಪರಾಶರವ್ಯಾಸರಿಗೆ ಬ್ರಹ್ಮ ರಥವನಿತ್ತ ಬ್ರಹ್ಮಾಂಡರೂಪ 10 [ಶೌ]ರಿಯು ತಾನಿರಲು ಮೇಘಮಂಡಲದಂತೆ ತೋರುವುದು ತಾರಕೆಯಂತೆ ಮೈಯುಡುಗೆ ವಾರಿಜನಾಭನ ಮುತ್ತಿನಂಗಿಯ ನೋಡು ವವರಿಗೆ ತಾ ಆನಂದವಾಗಿಹುದು 11 ಕ್ಷೀರಸಾಗರದಲ್ಲಿ ಪವಡಿಸಿಹ ಹರಿಗೆ ಕ್ಷೀರಬಿಂದುಗಳು ಮೈಯೊಳಗೆ ಬಿದ್ದಂತೆ ವಾರಿಜನೇತ್ರಗೆ ವಜ್ರದನಾಮವು ಧರಿಸಿದರು ಹೇಮದ ಪಾದಹಸ್ತಗಳ 12 ಮುತ್ತಿನಂಗಿಸೇವೆ ನೋಡಬೇಕೆನುತ ಹತ್ತುಸಾವಿರ ಪ್ರಜೆ ಬಂದು ನಿಂತಿರಲು ಇತ್ತು ಕಾಣಿಕೆಯನು ನೋಡಿ ವೆಂಕಟರಂಗನ ಮುಕ್ತರಾದೆವೆಂದು ಭಕ್ತರು ನುಡಿದರು 13
--------------
ಯದುಗಿರಿಯಮ್ಮ
ಕೊಟ್ಟು ಕೊಂಡಾಡ ಬೇಕು ಘಟ್ಟಿಕೊಂಡು ಗುರುಭಕ್ತಿ ಗುಟ್ಟಿನೊಳು ನೋಡ ಬೇಕು ಇಟ್ಟು ದೋರುತದ ಮುಕ್ತಿ ಧ್ರುವ ಕೊಟ್ಟು ಗುರುವಿಗೆ ಮನಕೊಳ್ಳಬೇಕು ನಿಜಘನ ಇಟ್ಟಾದೆ ನಿಜಧನ ಪಡಿಬೇಕು ಸಾಧನ ಕೊಟ್ಟಾಂಗ ಕೊಂಬು ಖೂನ ಹೇಳಿ ಕೊಡುವ ಗುರು ಜ್ಞಾನ ಮುಟ್ಟಿ ಭಜಿಸುದು ಪೂರ್ಣ ಸ್ವಾಮಿ ಶ್ರೀನಾಥಾರ್ಪಣ 1 ಕೊಟ್ಟು ಕೊಂಡು ನೋಡಿ ನೇಮ ಸೃಷ್ಟಿಯೊಳು ಸುಧಾಮ ಕೊಂಡ ದಿವ್ಯಗ್ರಾಮ ಕೊಟ್ಟು ಶ್ಯಾಖದಳವಮ್ಮ ದ್ರೋಪದ್ಯಾದಳು ಸಂಭ್ರಮ ಕೃಷ್ಣಗಿದೆ ಅತಿ ಪ್ರೇಮ ಶಿಷ್ಟ ಜನರ ಸುಕ್ರಮ 2 ಮುಕ್ತಿಗಿದೇ ಮೇಲು ಭಕ್ತಿನೋಡಿ ಸಜ್ಜನರ ಯುಕ್ತಿ ಭೋಕ್ತ ಬಲ್ಲ ಗುರುಮೂರ್ತಿ ಮಾಡಬೇಕು ಭಾವ ಭಕ್ತಿ ಮುಕ್ತ ಜನರಿಗಿದೇ ಗತಿ ಕೊಟ್ಟು ಕೊಂಡಾಡುವ ಶಕ್ತಿ ಅರ್ತು ಇದೇ ಮಹಿಪತಿ ಕೊಂಡಾಡೋ ಗುರುಸ್ತುತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಂಡಜ್ಜಿ ಶ್ರೀ ಜನಾರ್ದನ ಸ್ವಾಮಿ ಸ್ತೋತ್ರ ಎಂಥಾ ಸುಂದರನೊ ಶ್ರೀಕಾಂತನೂ ||ಅ|| ಸಂತರ ಮನೋರಥ ಸಂತತ ಪಾಲಿಸಿಪಂಥಾವ ಗೆಲಿಪ ಮಹಾಂತನೋ - ಶ್ರೀಕಾಂತನೂ ಅ.ಪ. ಮಾನಿನೀಯಳ ಬಿಟ್ಟು | ಮೌನಿಯಂದದಿ ನೀನುಕಾನನವನೆ ಸೇರಿ ನೆಲೆಸೀರ್ಪುದೂ | ಮುನಿಜನ ವಂದ್ಯಾ 1 ತೊಂಡ ಜನರು ನಿನ್ನ | ಬಂಡುಣಿಯಂದದಿಪುಂಡು ಮಾಡುವರೆಂದು ಬಂದೆಯಾ | ಪುಂಡರಿಕಾಕ್ಷಾ 2 ಹಿಂಡು ಭಕ್ತರು ತಮ್ಮ | ದಿಂಡು ಮಂಡಿಪರೆಂದು ಕೊಂಡಜ್ಜಿಯಲಿ ನೆಲಿಸೀದ್ಯಾ | ಪಾಂಡವ ಪ್ರೀಯಾ 3 ವೇಲಾಪುರಿಗೆ ಪೋಗ | ಲೊಲ್ಲೆನೆಂದೆನುತಲಿಇಲ್ಲೇ ನೆಲಸಿ ಪೂಜೆಗೊಂಬುದು ಫಾಲಾಕ್ಷ ಪ್ರಿಯನೇ 4 ಎಲ್ಲಿಪೋದರೂ ಬಿಡ | ಲೊಲ್ಲರೂ ನಿನ್ನ ಜನಸಲ್ಲಿಸೆನ್ನಯ ಮನೋಭೀಷ್ಟವ | ಹೇ ಜನಾರ್ಧನಾ 5 ಆರು ಕಾಯುವರಿಲ್ಲ | ಸಾರಿದೆ ತವ ಚರಣಪೋರನಾಮಯ ಹರಿಸಯ್ಯಾ | ನಾರದ ವಂದ್ಯಾ 6 ಗುರುಗಳಂತರ ಗುರು | ಗೋವಿಂದ ವಿಠಲನೆಪರಿಪರಿ ನಿನ ಕೀರ್ತಿ ನುಡಿಸಯ್ಯಾ | ಸುರವರ ವಂದ್ಯಾ7
--------------
ಗುರುಗೋವಿಂದವಿಠಲರು