ಒಟ್ಟು 25998 ಕಡೆಗಳಲ್ಲಿ , 137 ದಾಸರು , 9262 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರ್ವವು ಹರಿಗೊಪ್ಪಿಸಿದರೆ ನಿಶ್ಚಿಂತೆ ಗರ್ವದಿಂದಲಿ ವ್ಯರ್ಥ ಕೆಡದಿರು ಭ್ರಾಂತೆ ಪ. ಲೇಶ ಸ್ವತಂತ್ರವನಿತ್ತದ ನಂಬೀ ಶಾಭಿಮಾನದಿ ಮಾಡುವ ಡೊಂಬಿ ದೋಷಗಳಿಂದಾಹ ಫಲವೆ ನೀನುಂಬಿ ವಾಸುದೇವನ ಮೂರ್ತಿಯನೆಂತು ಕಾಂಬಿ 1 ಹಸುತೃಷೆ ನಿದ್ರೆ ತಡೆಯಲೊಲ್ಲಿ ಯಾಕೆ ದಶಕರಣಗಳು ದುರ್ವಿಷಯದಿ ನೂಕೆ ವಶವಿಲ್ಲದಲೆ ಬಿದ್ದು ಬಳಲುವಿ ಯಾಕೆ ವಸುದೇವ ಸುತನ ಮರೆಯದಿರು ಜೋಕೆ 2 ಸತ್ಯ ಸಂಕಲ್ಪನಲ್ಲದೆ ಕರ್ತನಾವ ತತ್ವೇಶರರಿತು ಕರ್ಮವ ಮಾಳ್ಪ ಸೋವ ನಿತ್ಯ ನೀ ವರಿತ ಹಮ್ಮಮತೆಯ ಭಾವ ಹತ್ತದಂತಿರೆ ಕಾವ ಕರುಣಾಳು ದೇವ 3 ಒಡೆಯರಿಲ್ಲದೆ ಪೋದ ವೃಕ್ಷದ ಫಲವ ಬಡಿದು ತಿಂಬುವರು ಕಂಡವರೆಲ್ಲ ನೋಡು ಕರ್ಮ ಮಡದಿ ಮೊದಲುಗೊಂಡು ಕಡಲಶಯನಗರ್ಪಿಸುತ ಕಷ್ಟ ದೂಡು 4 ವಹಿಸು ಭಾರವ ಲಕ್ಷ್ಮೀಕಾಂತನ ಮೇಲೆ ಇಹರಹರಾದರದಿಂದ ತಲ್ಲೀಲೆ ಮಹಿಮೆಯ ಪೊಗಳಿ ತೂಗಾತನೂಯ್ಯಾಲೆ ಅಹಿಪತಿ ಗಿರಿರಾಜ ಎತ್ತುವ ಮೇಲೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಸರ್ವಸಾರಭೋಕ್ತ ಸಕಲ ಮಂಗಲದಾಯಿ ವೆಂಕಟೇಶ ನಿರ್ವಹಿಸುವವ ನೀನೆ ನಿತ್ಯಕರ್ಮಗಳಿಂದ ವೆಂಕಟೇಶ ಪ. ದೇವರ್ಷಿ ಪಿತೃಗಣರೊಳಗಿದ್ದು ರಾಜಿಪ ವೆಂಕಟೇಶ ಭೂವರರಲ್ಲಿ ವಿಭೂತಿರೂಪನು ನೀನೆ ವೆಂಕಟೇಶ ಸೇವಕ ಜನರನು ಸುಲಭದಿ ಸಲಹುವ ವೆಂಕಟೇಶ ಪಾದ ಪದ್ಮವೆ ಗತಿ ಎಂಬೆ ವೆಂಕಟೇಶ 1 ಇಂದಿರಾಧವ ಯದುನಂದನನೆನಿಸಿದೆ ವೆಂಕಟೇಶ ಸುಂದರ ವಿಗ್ರಹ ಸುಗುಣೇರ ಒಲಿಸಿದೆ ವೆಂಕಟೇಶ ಹಿಂದೆ ಮುನ್ನ ಭವದಂದವನರಿಯೆನು ವೆಂಕಟೇಶ ಮಂದಮತಿಯ ಕರ್ಮಕುಂದನು ಕ್ಷಮಿಸಯ್ಯ ವೆಂಕಟೇಶ 2 ಸ್ವೋದರಗತ ಜಗದಾಧಾರಗುಣನಿಧಿ ವೆಂಕಟೇಶ ಭೂಧರಗಿರಿವರ ಶೋಭಿತ ಮೂರುತಿ ವೆಂಕಟೇಶ ಶ್ರೀಧರಾಕಾಂತ ನಿನ್ನಾಧಾರ ನಂಬಿದೆ ವೆಂಕಟೇಶ3
--------------
ತುಪಾಕಿ ವೆಂಕಟರಮಣಾಚಾರ್ಯ
ಸರ್ವಾಂತರ್ಯಾಮಿ ನೀನೆ ಸರಿ ಸರ್ವಜ್ಞನು ಸ್ವಾಮಿ ಪ ಸರ್ವಶರೀರಕ ಸರ್ವನಿಯಾಮಕ ಅ.ಪ ಹರಿ ಕೊಡುವನು ಬಂದು ಹರಿಸುತನನು ಗುರಿಮಾಡಿದೆ 1 ಮನೆ ಕಾಣಿಸುವನು ಎಂದೂ ಜಾಣತನದಿ ಸಪ್ರಾಣರ ಮಾಡಿದೆ 2 ಕರದಪ್ಪುವನೆಂದು ಶರಣರ ಹರಣವನುಳುಹಿದೆ 3 ಶೈಲದ ಗುಹೆಯೊಳಗೆ ಮಲಗಿದ್ದ ನೃ ಪಾಲನ ಖತಿಯೊಳಗೆ ಮೇಲೆ ಶರಧಿಯೊಳಾಲಯ ಮಾಡಿದೆ 4 ದುರುಳ ಪುಲಿಯು ಬಂದು ಶರಣನ ಸಲಹಿದ ವರದವಿಠಲಹರಿ 5
--------------
ವೆಂಕಟವರದಾರ್ಯರು
ಸರ್ವಾಂತರ್ಯಾಮಿ ಸರ್ವೇಶ ಬಾರೊ ಸರ್ವಸ್ವತಂತ್ರನೆ ಸರ್ವಭಯನಾಶ ಪ ಸರ್ವತಂತ್ರನೆ ಸರ್ವವೇದದಿ ಸರ್ವತತ್ತ್ವದಿ ಸರ್ವಸಾಕ್ಷಿ ನೀ ಸರ್ವವ್ಯಾಪಕ ಸರ್ವದೇವರ ಸಾರ್ವಭೌಮ ಅ.ಪ ಜಡಬೊಂಬೆ ನಾಟಕರಚಿಸಿ ಎಡಬಿಡದೆ ಕುಣಿಸ್ಯಾಡುವಿ ಕಡುಮೋಹಗೊಳಿಸಿ ಕಡುಗೌಪ್ಯದದರೊಳು ನೆಲೆಸಿ ನೀನೆ ಅಗಣಿತ ಕಲ್ಪನೆವೆರಸಿ ಜಡಕೆ ಜಡವಾದ ತೊಡರಿನಾಟದ ಕೆಡಕು ತಪ್ಪಿಸಿ ಪಿಡಿದು ಎನ್ನನು ಒಡೆಯ ನಿನ್ನಡಿ ಭಕ್ತರಾವಾಸ ದಿಡು ಎಂದೆರಗುವೆ ಪಾಲಿಸಭಯ 1 ನಾನಾವಿಧದ ಸೃಷ್ಟಿಗಳ ಸೃಜಿಸಿ ಪೋಣಿಸಿ ಮಾಡಿಟ್ಟ ಭವವೆಂಬ ಮಾಲೆ ಏಳು ಮೋಹವ ತುಂಬಿದೆಲ ಪುಸಿ ಕಾಣದಂತೊಗೆದಿ ಮಹಾಮಾಯದ ಜಾಲ ನಾನು ನೀನೆಂಬ ಜಾಣರೆಲ್ಲ ಬಿದ್ದು ಏನುಕಾಣದೆ ತ್ರಾಣಗೆಟ್ಟರು ಹೀನಮತಿ ನಾನೇನು ಬಲ್ಲೆನು ನೀನೆ ಸಲಹೆನ್ನ ದೀನರಕ್ಷಕ 2 ಪಾವನ ಪರಮಪ್ರಕಾಶ ದೇವ ಭಾವಜನಯ್ಯ ನಿಜಭಾವಿಗಳರಸ ಕೇವಲಸುಗುಣಾಂತರ್ವಾಸ ನಿನ್ನ ಸೇವಕನೆನಿಸೆನ್ನ ಕಾಯೊ ನುತಪೋಷ ಜೀವಜೀವರಜೀವ ಚೈತ್ಯನದೇವ ದೇವರ ದೇವ ನಂಬಿದೆ ಜಾವ ಜಾವಕೆ ಒದಗುತಿಹ್ಯ ಮಹ ನೋವು ಗೆಲಿಸೆನ್ನಯ್ಯ ಶ್ರೀರಾಮ 3
--------------
ರಾಮದಾಸರು
ಸರ್ವಾಧಾರ ವಿಠಲ | ಶರ್ವ ನೊಡೆಯ ಪ ಸರ್ವವಿಧದಲ್ಲಿವನ | ಪೊರೆಯ ಬೇಕಯ್ಯ ಅ.ಪ. ಮಧ್ವಸಿದ್ದಾಂತದಲಿ | ಅಂಕುರವ ಪುಟ್ಟಿಹುದುಶುದ್ಧಭಾವದಲದನ | ವೃದ್ಧಿಗೈಸುತಲೀಮಧ್ವಸನ್ಮಾರ್ಗದಲಿ | ಪದ್ಮನಾಭನ ಪಾದಪದ್ಮವನೆ ಭಜಿಪಂಥ | ಅಧ್ಯಾನ ತೋರೋ 1 ಲೇಸು ಸಾಧನ ಹರಿಯ | ದಾಸ್ಯದಲಿ ಮನವಿರಿಸಿಆಶೆ ಪೂರೈಸಲ್ಕೆ | ಆಶಿಸುತ್ತಿಹನೋ |ವಸುದೇವಭಿದ ತೈ | ಜಸನ ರೂಪದಲಿ ಉಪದೇಶವಿತ್ತಂತೆ ಉಪ | ದೇಶವಿತ್ತಿಹೆನೋ 2 ಹರಿಗುರು ಸದ್ಭಕ್ತಿ | ವೈರಾಗ್ಯ ವಿಷಯದಲಿಕರುಣಿಸಿ ಪೊರೆಯೊ ಹರಿ | ಮರುತಂತರಾತ್ಮನಿರುತ ಸಜ್ಜನ ಸೇವೆ | ದೊರಕಿಸುತ ಸಾಧನವಪರಿಪರಿಯಲಿಂಗೈಸಿ | ಪೊರೆಯೊ ಸರ್ವೇಶಾ 3 ಕಂಸಾರಿ ಮನಮಾಡಿವಂಶ ಉದ್ದರಿಸಿವಗೆ | ಹಂಸಜನ ವಂದ್ಯಹಂಸೋಪಸನೆ ಮಾಳ್ವ | ಶ್ವಾಸ ಮಾನೀ ವಾಯುಶಂಸನವ ಕೈಗೊಂಡು | ಜೀವರೋದ್ಧಾರೀ 4 ಕ್ಲೇಶಮೋದದಿ ಸಮತೆ | ಲೇಸಾಗಿ ಕೊಟ್ಟಿವಗೆಪೋಷಿಸೋ ಹಯವದನ | ಬಾಸುರಾಂಗ ಹರೀಮೇಶ ಮಧ್ವೇಶ ಉಪ | ದೇಶ ಸಾರ್ಥಕ್ಯವನುಆಶಿಸುವೆ ಕರುಣಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಸರ್ವಾಮಯ ಹರ ವಿಠಲನೇ | ಸರ್ವದಾನೀನಿವರ ಸಲಹ ಬೇಕೊ ಪ ಶರ್ವಾದಿ ಸುರವಂದ್ಯ ಸಾರ್ವಭೌಮ ಸ್ವಾಮೀಅ.ಪ. ತ್ರಿವಿಧ ಭವ ಹಾರೀ 1 ಸರ್ವಸೃಷ್ಟೀಶನೇ ಸರ್ವಪಾಲಕ ಹರಿಯೇಸರ್ವ ಸಂಹಾರಕನೇ ಸರ್ವೋತ್ತಮಾಸರ್ವಾಂತರಾತ್ಮ ಶ್ರೀ ವೆಂಕಟೇಶನೆ ನಿನ್ನಸರ್ವದಾ ಭಜಿಸುವಗೆ ಸರ್ವಮಂಗಳವೀಯೋ 2 ಭಾವಿಮರುತಲೀತ | ಭಾವ ಭಕುತಿಗಳಿಂದಸೇವಿಸುವ ಹಯಮೊಗನ | ತವ ದಿವ್ಯ ರೂಪಾಆವ ತನುಕರಣ ಮನ | ಸರ್ವಾರ್ಪಣೆಂಬ ಮತಿಓವಿನೀನಿವಗಿತ್ತು | ಪಾವನವಗೈಯ್ಯೊ 3 ಪಂಚಬೇಧದ ಜ್ಞಾನ | ಸಂಚಿಂತನೇ ಇತ್ತುಅಂಚೆವಹ ಮತ್ತೆ ಹರಿ | ಮಂಚವಿಪಗೇಂದ್ರಾ |ಮುಂಚೆ ತರತಮ ತಿಳಿಸಿ | ವಾಂಛಿತಾರ್ಥದ ನಿನ್ನಸಂಚಿಂತನೆಯಲೇ ಇರಿಸೊ ಪಂಚಾಸ್ಯ ಪ್ರಿಯನೆ 4 ಅದ್ವೈತ ಚಿಂತನೆಯನೀವೊಲಿದು ಇವಗಿತ್ತು | ಭಾವದಲಿ ತೋರೊ ತವರೂಪ |ಈ ವಿಧದಿ ಬಿನೈಪೆ ಪವನಾಂತರಾತ್ಮ ಗುರುಗೋವಿಂದ ವಿಠಲಯ್ಯ ಪಾಲಿಸೋ ಜೀಯಾ 5
--------------
ಗುರುಗೋವಿಂದವಿಠಲರು
ಸರ್ವೇಶ್ವರ ಕಾಶೀನಿವಾಸ ವಿಶ್ವನಾಥ ಪ ಅನ್ನಪೂರ್ಣದೇವಿ ರಮಣ ವಿಶ್ವನಾಥ ದಿ ವ್ಯಾನ್ನ ಕೊಟ್ಟುಯನ್ನು ಪಾಲಿಸು ವಿಶ್ವನಾಥ 1 ತಾರಕೋಪದೇಶವನ್ನು ವಿಶ್ವನಾಥ | ನಿ ನ್ನಾರಾಧಕರಿಗೆ ಈವೆ ವಿಶ್ವನಾಥ 2 ಪಾಮರ ನಾನೈಯ್ಯ ಕೇಳು ವಿಶ್ವನಾಥ ಗುರು ರಾಮ ವಿಠಲನ ಚರಣವ ತೋರಿಸು ವಿಶ್ವನಾಥ 3
--------------
ಗುರುರಾಮವಿಠಲ
ಸರ್ವೋತ್ತಮ ಸರ್ವಜೀವನ ಪ್ರಾಣ ಸರ್ವೋತ್ತಮ ಪರಿಪೂರ್ಣ ಸರ್ವೋತ್ತಮ ಧ್ರುವ ಸತ್ಯಜ್ಞಾನ ಅನಂತ ಬ್ರಹ್ಮ ಶ್ರುತಿ ಸಾರುತಲ್ಯದೆ ನೇಮ ಮತ್ಪಾತಕ ಹಿಡಿವುದು ಬರಿ ಭ್ರಮೆ ನಿತ್ಯನಾಗಿರೋ ಘನಮಹಿಮ 1 ಸರ್ವೋತ್ತಮ ಶ್ರೀ ಹರಿ ಸಾಕ್ಷಾತ ಪೂರ್ವಾಪರ ಪ್ರಖ್ಯಾತ ದೋರ್ವನು ತಾ ಘನಮಯ ಸದೋದಿತ ಸರ್ವಾನಂದಭರಿತ 2 ವಾಸುದೇವನೊಬ್ಬನೆ ಸರ್ವೇಶ ಭಾಸ್ಕರಕೋಟಿ ಪ್ರಕಾಶ ಭಾಸುತಲೀಹ್ಯ ವರ ಗುರುದೇವೇಶ ದಾಸ ಮಹಿಪತಿ ಪ್ರಾಣೇಶ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸರ್ವೋತ್ತಮನ ಪರಮ ಪುರುಷ ಪರಮಾತ್ಮನ ವರ ಶಿರೋಮಣಿ ಪುರುಷೋತ್ತಮನ 1 ಧರೆಯ ಗೆಲಿದ ಮಹಾಶೂರನ ವರವಿತ್ತ ಉಗ್ರಾವತಾರನ 2 ಧರೆಯ ಬೇಡಿದ ಬ್ರಾಹ್ಮಣೋತ್ತಮನ ಪರಶುಪಿಡಿದ ಪರಾಕ್ರಮನ ಸ್ಥಿರ ಪದವಿತ್ತ ದೇವೋತ್ತಮನ ಗಿರಿಯನೆತ್ತಿದ ಮಹಾಮಹಿಮನ 3 ಗುಪಿತ ಪೊಕ್ಕಿದ್ದನ ಅಪರಂಪಾರ ಮಹಿಮಾನಂದನ ಒಪ್ಪುವ ತೇಜಿನೇರಿದ್ದನ ಕಪಟನಾಟಕ ಪ್ರಸಿದ್ಧನ 4 ಭಕ್ತವತ್ಸಲ ಭವನಾಶನ ಮುಕ್ತಿದಾಯಕ ದೇವ ದೇವೇಶನ ಮಹಿಪತಿ ಆತ್ಮ ಪ್ರಾಣೇಶನ ಗುರು ಭಾನುಕೋಟಿ ಪ್ರಕಾಶನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಲಹಿಕೊಂಬವರಿಲ್ಲವೋ ವೆಂಕಟರಾಯ ಗೆಲುವ ಪರಿಯ ಕಾಣೆನು ಪ ಛಲವೇಕೋ ನಿನಗಿಷ್ಟು ಹೊಲಬುದಪ್ಪಿದ ಮೇಲೆ ಫಲವಿತ್ತು ಕರುಣದಿ ಕುಲವೃಕ್ಷವನು ಕಾಯೋ ಅ.ಪ ಅರಳಿಯ ವೃಕ್ಷದೊಳು ಆನೆಯ ತಂದು ಸ್ಥಿರವಾಗಿ ಕಟ್ಟಿದಂತೆ ದುರುಳರು ಬಂದೆನ್ನ ಕೊರಳು ಕೊಯ್ದೀಗ ಪರಿ ಇರವ ಕಾಣುತ ಮುಂದೆ 1 ಮಾಡಿದ ಉಪಕಾರವ ಮರೆತು ಮುಂದೆ ಕೇಡನು ನೆನೆವರಿಗೆ ನೋಡಿದೆ ಯಾತಕೆ ಮಾಡದೆ ಶಿಕ್ಷೆಯ ಆಡಿದೆ ನಿನ್ನೊಳು ಬೇಡ ಇನ್ನವರೊಳು 2 ವಾರಿಧಿ ತೀರದಲಿ ನೆಲ್ಲನು ತಂದು ಹಾರಿಸಿ ಬಿತ್ತಿದಂತೆ ಭವ ಘೋರ ಕಾನನದೊಳು ಸೂರೆವೋದೆನು ನಿನ್ನ ಮಾರಿಹೋದೆನು ಎನ್ನ 3 ಒದಗಿದ ನ್ಯಾಯದಲಿ ಇದಿರು ಬಂದು ಕದನವ ಕಟ್ಟುತಲೆ ಬೆದರುಗೊಳಿಸಿ ಎನ್ನ ಸದನಕ್ಕೆ ಮುನಿವುದ ಅದನೆಲ್ಲ ಚರಣದ ಪದುಮಕ್ಕೆ ಅರುಹುವೆ 4 ನೊಂದೆನು ಬಹಳವಾಗಿ ಈ ಭವದ ಸಿಂಧುವ ದಾಟಿ ಹೋಗಿ ಚಂದದಿ ನಿನ್ನಯ ಚರಣಾರವಿಂದವ ಎಂದಿಗೆ ತೋರ್ಪೆಯೊ ವರಾಹತಿಮ್ಮಪ್ಪ 5
--------------
ವರಹತಿಮ್ಮಪ್ಪ
ಸಲಹು ನಂದಕುಮಾರ ಸಲಹು ಗೋಪೀತನಯ ಸಲಹು ವಸುದೇವನಿಗೆ ಪುತ್ರನೆನಿಸಿದನೆಸಲಹು ದೇವಕಿ ಜಠರದಲಿ ಬಂದನೆನಿಸಿದನೆಸಲಹು ಶ್ರೀ ರಾಮ ಶ್ರೀಕೃಷ್ಣ ಜಯ ಕೃಷ್ಣ ಸಲಹು ಸಲಹೂ ಪನಂದನೆನೆ ಸಕಲ ಸಂಪತ್ತ ಸೂಚಿಸುತಿಹುದುಚಂದದಿಂದಣಿಮಾದಿ ಸಿದ್ಧಿುರಲಾಗಿಬಂದವಿದ್ಯೆಯು ಮುಚ್ಚಲಾ ಶಕ್ತಿ ಕುತ್ಸಿತವುಹಿಂದುಗಳೆವದರಿಂದ ನಂದನಕುಮಾರ 1ಜ್ಞಾನಶಕ್ತಿಯು ತಾನು ಗುಪ್ತವಾಗಿರಲಾಗಿಧ್ಯಾನಿಸುವ ಭಕ್ತರಿಗೆ ವಿಸ್ತರಿಸಿ ಕೊಡಲುನೀನು ಗೋಪೀತನಯನೆಂಬ ನಾಮವ ತಾಳ್ದೆದೀನರಕ್ಷಾಮಣಿಯೆ ಜ್ಞಾನದಾಯಕನೆ 2ವಸುವೆನಲು ಪರಿಶುದ್ಧವಾದ ಕರಣದ ಪೆಸರುಎಸೆದು ನೀನಿರಲಲ್ಲಿ ದೇವನೆನಿಸುವದುಅಸಮ ತೇಜದಿ ಪುರುಷನೆನಿಸಿ ಸಲಹಲು ಜಗವವಸುದೇವಪುತ್ರನೆನಿಸಿತು ನಿನ್ನ ನಾಮ 3ದೇವಕಿಯು ನಿನ್ನ ಬಗೆ ಮಾಯೆ ಬ್ರಹ್ಮಾಂಡಗಳಭಾವಿಸಲು ನೀನದನು ಕುಕ್ಷಿಯೊಳಗಿರಿಸಿಸಾವಧಾನದಿ ಸಕಲದೊಳು ಸತ್ಯನಾಗಿರಲುದೇವಕಿಯ ಜಠರದಲಿ ಬಂದನೆನಿಸಿದನೆ 4ನಿತ್ಯದಲಿ ಯೋಗಿಗಳು ನಿನ್ನಲ್ಲಿ ರಮಿಸುತಿರೆಪ್ರತ್ಯಕ್ಪ್ರಕಾಶದಲಿ ಜಡಪದಾರ್ಥಗಳುಅತ್ಯಂತ ರಮಣೀಯವಾಗಿಯದರೊಳು ಜನರುನಿತ್ಯ ರಮಿಸಲು ರಾಮನೆನಿಪ ಶ್ರೀ ಹರಿಯೆ 5ಮೂರು ವರ್ಣದ ನಾಮ ಮುನಿವಂದ್ಯ ನಿನಗಿರಲುಸಾರುವುದು ಸದ್ರೂಪನೆಂದೆರಡು ವರ್ಣಮೂರನೆಯ ವರ್ಣವಾನಂದಮಯನೆನ್ನುತಿದೆಈ ರೀತಿಯಲಿ ನೀನು ಕೃಷ್ಣನೆನಿಸಿದನೆ 6ಪರಮಾತ್ಮ ನೀನಾಗಿ ಪರಿಪರಿಯ ರೂಪಿನಲಿಸುರಮುನೀಶ್ವರ ಭಾವ್ಯ ಚರಿತನೆಂದೆನಿಸಿತಿರುಪತಿಯ ವಾಸವನು ಸ್ಥಿರವಾಗಿ ನಿರ್ಧರಿಸಿುರುವ ವೆಂಕಟರಮಣ ಕರುಣರಸಪೂರ್ಣ 7ಓಂ ಯಶೋದಾವತ್ಸಲಾಯ ನಮಃ
--------------
ತಿಮ್ಮಪ್ಪದಾಸರು
ಸಲಹು ಶ್ರೀ ಗುರುರಾಯಾ | ಸಲಹು ಬುಧ ಜನಪ್ರೀಯಾ | ಸಲಹೆನ್ನ ಪರಮ ಗೇಹ್ಯಾ ಪ ಚಿಕ್ಕವನು ನಾ ಮೊದಲು | ಸೊಕ್ಕಿ ಭವಸುಳಿಯೊಳಗೆ | ಸಿಕ್ಕಿ ಬಹು ನೊಂದೆನೆಂದು | ಹೊಕ್ಕೆ ಮೊರೆ ನಿನ್ನ ಹಿಂದಿಕ್ಕಿಕೋ ದಯದಿಂದ | ಮಕ್ಕಳಂದದಲಿ ಚೆನ್ನಾಗೆನ್ನಾ 1 ಪಿಂತಿನಾ ಭವಣೆಗಳು | ಎಂತಾದರಾಗಲೀ | ಶಾಂತ ಮೂರುತಿಯೇ ಎನ್ನಾ | ಅಂತರಂಗದಲಿನ್ನು ನಿಂತು ನಿನ್ನಯ ರೂಪ | ಸಂತತವಾಗಿ ದೋರೋ ಬೀರೋ 2 ಅನ್ಯಪಥಕೆಳಿಸಿದಾ ಘನ್ನ ತಪ್ಪವ ಕ್ಷಮಿಸಿ | ನಿನ್ನ ಪದಯುಗಳ ದೋರಿ | ಸನ್ನುತವೆ ಮಹಿಪತಿ ಚಿನ್ನ ಕೃಷ್ಣನ ಸ್ವಾಮಿ | ಇನ್ನಾರೆ ದಯಮಾಡೋ ನೋಡೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಲಹು ಸಲಹು ಸಲಿಲಜನಯನಾ|ಎನ್ನಾ| ಇಳೆಯೊಳು ಮೊರೆಯ ಹೊಕ್ಕಿಹೆ ನಿನ್ನಾ ಪ ಕರುಣ ನೋಟಗಳಿಂದಲಿ ನೋಡಿ|ಸರ್ವ| ಭಾರ ಒಪ್ಪಿಸಿಕೊಂಡು ನಿಜ ನೀಡಿ| ದಾರಿದೋರುವ ಸುಮತಿಯ ನಿಲಿಸಿ|ಅತಿ| ತರಳನೆನುತ ಭಯವನೆ ಹರಿಸಿ 1 ಹರಿದುರಿತದ ಬಂಧನ ಬಲಿಯಾ|ತವ| ಚರಣದ ಭಕುತಿ ಕೊಡಲಿ ದೊರಿಯಾ| ಹರಿಗುಡದರಸನ ದಶಮುಖದಾ ಸಂಗ| ಲಿರಿಸು ದಾಸರ ಸಗಟವನೊದೆದಾ2 ತ್ರಿಪುಟಿಯ ಸಂಗ ಬಿಡಿಸು ಮನದಿ|ಎನ್ನ| ವಿಪುಳ ವಾಜಿಯೊಳಿರಿಸು ಧೃಡದಿ ಕೃಪೆಯಲಿ ಮಹಿಪತಿ ಸುತ ಪ್ರಾಣಾ|ಎನ್ನ| ಅಪರಾಧ ಕ್ಷಮಿಸಿ ಹೊರಿಯೊ ಪೂರ್ಣಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಲಹು ಸಲಹು ಸಲಿಲಜಾಂಬಕ ಸಲಹು ತ್ರಿಭುವನ ಜೀವನಾ| ವಿನುತ ಪದಪಾವನಾ| ನೆಲಿಗೆ ಪಡೆದಿಹೆ ಕಾವನಾ| ಸುಲಭನಾಗ್ಯತಿ ಸಲಿಸುತಿರುತಿಹ|ಒಲಿದು ಭಕ್ತರ ಭಾವನಾ 1 ಕರವ ದರಿತು ಶರಣವ ಬಂದೆನಾ| ಕೊರತೆ ನೋಡದೆ ಹಿಂದಿನಾ| ಅರಹು ಮತಿಯಲಿ ಮಂದನಾ| ಹರಿಯ ಸಾರ್ಥಕ ನರಜನುಮವನು | ಭರದಿ ಮಾಡು ನೀ ಇಂದಿನಾ 2 ಪತಿ ಸಖಗತಿಗೆಳೆಯ ಸುತ|ಪಿತನ ಪರಿಯಲಿ ಲಾಲಿಸಿ| ಶೃತಿ ವಿಹಿತ ತವ ಸ್ತುತಿಸ್ತವ ಪಾಡುತಿಹೆ ನೆರೆಯಲಿ ಬಾಳಸೀ| ಹಿತವನರಿಯದ ಮತಿ ವಿಹೀನೋ|ನ್ಮತರ ಸಂಗವ ಜಾಳಿಸೀ| ಪತಿತನು ದ್ಧರಿಸ್ಸತುಳ ಮಹಿಪತಿ | ಸುತ ಪ್ರಭುವೇ ದಯಪಾಲಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಲಹು ಸಲಹು ಹರಿಯೇ ದಯದಿಂದಲಿ| ಇಳೆಯೊಳು ನಾನತಿ ದೀನನು ಪ ಸನ್ಮತಿದಾಯಕ ಸನ್ಮನ ಮುನಿಜನ|ಸನ್ಮತ ಮಾ ಮನೋಹಾರಿ| ಮನ್ಮಥನಯ್ಯನೇ ಉನ್ಮತ ಸುರಹರ| ಚಿನ್ಮಯ ರೂಪ ಉದಾರಿ1 ನಿವಾರಣ ಮಾಡಿದೆ ಶೌರಿ| ಹರಣ ಸಹದಾರುಣ ವಲ್ಲಭ ಕಾರುಣ ಸುರಸಹಕಾರಿ2 ತುಹಿನ ಕಿರಣ ಕುಲಮೌಳಿ| ಮಹಿಪತಿ ನಂದನ ಹೃದಯ ಸರೋವರ| ಹಂಸಪರಮ ವನಮಾಲಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು