ಒಟ್ಟು 19658 ಕಡೆಗಳಲ್ಲಿ , 137 ದಾಸರು , 8696 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೆದರಿಕೆ ಯಾತರದೋ ತ್ರಿಜಗದಿ ಪಾದ ಸದಮಲದಾಸರಿಗೆ ಪ ಗರುಡನ ಮಂತ್ರಕೆ ಉರಗನ ಭಯವುಂಟೆ ದುರಿತದಂಜಿಕೆಯುಂಟೆ ನರಹರಿಸ್ಮರಣೆಗೆ 1 ಬಿರುಗಾಳಿ ಬೀಸಲು ಗಿರಿ ನಡುಗುವುದುಂಟೆ ಪರಿಭವ ಬಂಧಮುಂಟೆ ಸಿರಿವರನರ್ಚಕರಿಗೆ 2 ಶ್ರೀರಾಮನಡಿವಾರಿಜಭಜಕರ್ಗೆ ಸಾರಮೋಕ್ಷಂಗಳು ದೂರವಿನ್ನುಂಟೆ 3
--------------
ರಾಮದಾಸರು
ಹೆರಳು ಹಾಕುವೆ ಬಾ ಮುರಲಿಯಲ್ಲೇ ಇಟ್ಟುಗುರುಳು ಮೋರೆಯ ಮೇಲೆ ಹರವಿ ಬಿದ್ದಿಹವೋ ಕಣ್ಣಮರೆಯ ಮಾಡಿಹವೋ ಪ ಕೋಡಿನ್ಹೆರಳನ್ಹಾಕಿ ಕೂಸ ಮುಂದಲೆ ಹೂಜೋಡಿರೆ ಅರಳೆಲೆ ನೋಡಿ ಇಡುವೆನೋ 1 ಹಚ್ಚುವೆ ಕಾಡಿಗೆ ಮುಚ್ಚದೆ ತೆರಿ ಕಣ್ಣುಹೊಚ್ಚಿ ಕುಂಚಿಗೆ ನಿನ್ನ ಎತ್ತಿಕೊಳ್ಳುವೆ ಬಾ 2 ಕರವ ಪಿಡಿದಂದು ಎತ್ತುವೆ ಬಾ 3
--------------
ಇಂದಿರೇಶರು
ಹೆಳೆಲೆ ಸಖಿ ಘಮ್ಮನೆ ಸುಳಿದವನಾರೇ | ಕೇಳಮ್ಮ ಒಮ್ಮಿಂ ದೊಮ್ಮೆಲೆ ಕಂಡೆ ನಾನೀರೆ | ಒಲಿದು ಕರೆ ತಂದೆನಗಿನ್ನೊಮ್ಮೆ ದೋರೇ | ಚಲುವಿಕೆಯವನ ಉಸುರಲಾರೆ ಪ ಪದುಮ ಶಂಖ ಚಕ್ರಾಂಕಿ ತರುಣ ತಳದಾ | ಬಿದಿಗೆ ಚಂದ್ರಮನ ನೀಲಮಣಿಯಂತೆ ಹರಡಿನ ಪಾದಾ | ಚದುರ ನೂಪುರ ಗೆಜ್ಜೆ ರವದಾ 1 ಜಾನೂರು ಪೋಂಬಾಳೆ ಕಟಿ ತಟಾ | ಸುನಾಭಿ ತ್ರಿವಳಿಯ ಕೂಟಾ 2 ಕಿರಿಡೊಳ್ಳು ಮಧ್ಯ ಯಳೆ ವಾಸೆ ಹೃದಯಲಿ ಪದಕಾ | ಸಿರಿವತ್ಸ ಗ್ರೀವ ಕರ ಕಡಗ ತೋಳ ಬಂದಿ ಕುಂಡಲ ರನ್ನನೇಕಾ 3 ಕುರು ಮರಿಯಂದದಿ ಕದಪಿನಮುಖಾ | ಕಿರುನಗೆ ದಂತಾರ ನಯನ ಭ್ರೂತಿಲಕಾ | ನೊಸಲು ಕಸ್ತೂರಿ ತಿಲಕಾ 4 ತೆರಳಿದ ಬೆರಳುಂಗುರ ಸನ್ನೆ ಮಾಡುತಾ | ಗುರು ಮಹಿಪತಿ ನಂದನ ಪ್ರಭುನಿವಸತ್ಯ | ಧರಿಯೋಳಳಿವನ ಗಾಣಿ ಪರತಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೇ ದಯಾಸಾಗರ ಸ್ವಾಮಿ ವೇದ ಮಾಧವ ಮುಕುಂದ ಮನುಮುನಿ ಪ್ರೇಮಿ ಪ ವೇದಗೋಚರ ಸಾಧುಸನ್ನುತ ನಾದಪ್ರಿಯ ಭವಬಾಧೆರಹಿತ ಭೇದಹರ ಜಗ ಪಾದ ಭಜಿಸುವೆ ಪಾಲಿಸೆನ್ನ ಅ.ಪ ಮದಗಜ ಮುದದಿಂದ ಪೊರೆದಿ ಪ್ರಭುವೆ ಮದಗಜಗಮನೆಯ ಮಾನದಿಂ ಕಾಯ್ದೆ ಪದುಮವದನೆಶಾಪ ಕಳೆದೆ ಕರುಣಿ ಸದಮಲಬಾಲನ ತಪಕೆ ನೀನೊಲಿದಿ ಸುದಯಹೃದಯ ಸುಸದನಪಾಲ್ಸಿದಿ ಸದಮಲಾಂಗನೆ ಪದುಮವದನ ಮುದದಿ ನಿಮ್ಮಡಿ ಪದುಮಗಳು ಎ ನ್ಹøದಯ ಮಂದಿರದಿರಿಸಿ ರಕ್ಷಿಸು 1 ಗರುಡಂಗೆ ವರಮೋಕ್ಷ ನೀಡ್ದಿ ನಿನ್ನ ಸ್ಮರಿಪರಿಗೆ ದರುಶನಕೊಡುತಲಿ ನಡೆದಿ ತರುಣಿಯ ಎಂಜಲ ಸವಿದಿ ವನ ಚರನಿಗೆ ವಶನಾಗಿ ಅಭಯ ಪಾಲಿಸಿದಿ ಭರದಿ ದಕ್ಷಿಣಶರಧಿ ಹೂಳಿಸಿ ಮೆರೆವ ಲಂಕಾಪುರವ ಮುತ್ತಿದಿ ದುರುಳರ್ಹಾವಳಿ ದೂರಮಾಡಿ ಧರೆಯ ಭಾರವ ನಿಳುಹಿದಯ್ಯ 2 ನುಡಿಸಿದರೆನ್ನಿಂದಲಾವ ವಚನ ನುಡಿಸಿದ ಬಳಿಕದನು ನಡೆಸಿಕೊಡಭವ ನುಡಿಯಂತೆ ನಡೆಯೆನಗೆ ಸ್ಥಿರವ ಕೊಟ್ಟೆ ನ್ನೊಡಲೊಳಗದಂತೆಯಿರು ಅನುದಿನವು ಪೊಡವಿ ಮೂರನು ಒಡಲೊಳಿಟ್ಟಿಡೆ ಬಿಡದೆ ಆಳುವ ಒಡೆಯ ಶ್ರೀರಾಮ ದೃಢದಿ ನಿಮ್ಮಯ ಅಡಿಯ ನಂಬಿದೆ ಬಿಡಿಸು ಎನ್ನಯ ಮಂದಜ್ಞಾನವ 3
--------------
ರಾಮದಾಸರು
ಹೇ ಪಾಪಿ ಮನಸೇ ನೀ ನಾರಾಯಣೆನೆಲೋ ಅಪಾರ ಮಹಿಮನ ಮಹಿಮೆ ತಿಳಿದು ನೋಡೋ ಪ ‘ನಾ’ ಎಂಬೋ ಮಹದಾದಿಬೀಜದಕ್ಷರ ತುದಿ ನಾಲಿಗೆಯಿಂದ್ಹೊರಡುವನಿತರೊ ಳ್ಹಿಂದಿನ ನಾನಾಜನುಮದ ಪಾಪ ಪರ್ವತವೆಲ್ಲವು ನಿವೃತ್ತಿಯಾಗಿ ಮಹ ಪಾವನನೆನಿಪುದು 1 ‘ರಾ’ ಎಂದು ಮುಖದಿಂದ ಹೊರಟ ಕೂಡಲೆ ಸರ್ವ ರವರವನರಕದ ಯಾತನಳಿದು ಭವ ರೋಗವೆಲ್ಲನು ನೀಗಿ ಕಾಯಕರ್ಮವ ಕಡಿದು ರಾಜಿಪ ಪರಲೋಕ ಸದರವೆನಿಸುವುದೆಲೊ 2 ‘ಯ’ ಎಂದು ನುಡಿಯುತಲೆ ಜನುಮ ಸಫಲವಾಗಿ ಎಷ್ಟೋ ಕೋಟ್ಯಜ್ಞದ ಪುಣ್ಯ ಫಲವು ದೊರಕಿ ಯಮನ ಭೀತಿಯ ಗೆಲಿಸಿ ದಾಸರೊಲುಮೆ ಲಭಿಸಿ ಎಸೆವ ತ್ರಿಕಾಲಜ್ಞಾನ ಸ್ಥಿರವಾಹುದೆಲೊ 3 ‘ಣ’ ಎಂದು ಸಂಪೂರ್ಣ ಉಚ್ಚರಿಸಿದ ಮಾತ್ರವೆ ಕರತಲ ಮಾಗಿ ನಿತ್ಯ ನಿರ್ಗುಣನಂಘ್ರಿ ಕಂಗಳೊಳ್ಹೊಳೆಯುತ ನಿತ್ಯಾನಂದದ ಪದವಿ ಕೈವಶವಹದೆಲೊ 4 ನಿರಾಮಯ ಶ್ರೀರಾಮ ನಿಗಮಗೋಚರ ನಿರಂಜನ ನಿಜಗುಣನನುಪಮಮಹಿಮೆ ನಿಜಮತಿಯಿಂದರಿತು ನಿರ್ಮಲ ಮನಸಿನಿಂ ನೆನೆಯಲು ಘನಮುಕ್ತಿ ಸಾಮ್ರಾಜ್ಯ ಪಡೆಯುವಿ 5
--------------
ರಾಮದಾಸರು
ಹೇ ಮುರಾರೆ ಹೇ ಮುಕುಂದ ಪ ಪ್ರೇಮ ವೀಕ್ಷಣದಿಂದ ಪೊರೆಯೊಅ.ಪ ಈ ಮಹಾ ಕುತಾಪಗಳಲಿ ನಾಮ ಕೀರ್ತನೆಯೊಂದೆ ಎನಗೆ ಕ್ಷೇಮಕರವೆಂದರಿತು ವದನದಿ ರಾಮ ರಾಮನೆಂದು ಕೂಗುವೆ 1 ನೋಡಿದೆನೋ ಈ ಭವದ ಭೋಗವ ಬೇಡದಾಯಿತೊ ನಿನ್ನ ದಯದಿ ಈಡನರಿಯೆನೊ ನಿನ್ನ ಗುಣಗಳ ಪಾಡಿ ಹಿಗ್ಗುತ ಕುಣಿಯುವುದಕೆ 2 ಆಸೆ ಎನ್ನನು ಮೋಸ ಮಾಡಿತೊ ಕ್ಲೇಶ ಬಿಡದೊ ಈಶ ನಿನ್ನಯ ಭಜನೆಯೊಂದೆ ಲೇಸೊ ಲೇಸೊ ಹೇ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಹೇಗಿದ್ದು ಹೇಗಾದೆಯೊ ಆತ್ಮಯೋಗೀಶನಾನಂದಪುರದಲಿರುವುದ ಬಿಟ್ಟು ಪ ಬಸಿರ ಹಳ್ಳಿಗೆ ಬಂದು ಮಾಸನೂರಲಿ ನಿಂದುಕುಸುಕಾಡಿ ನುಡಿದು ನೆಲಬಟ್ಟೆವಿಡಿದುಕಿಸುಕದರಿವೆಯ ಪೊದ್ದು ಮಲಮೂತ್ರದಲಿ ಬಿದ್ದುವಸುಧೆಯಲಿ ದಿನಗಳೆದೆಯಲ್ಲ ಆತ್ಮ 1 ಎಳಗೆರೆಯಲಿ ಆಡಿ ಯೌವನದೂರಿಗೆ ಬಂದುಥಳಥಳಿಪ ಹಸ್ತಾದ್ರಿ ನೆಳಲ ಸೇರಿಅಳಲು ಸುತ ಬೆಳೆದು ದಾರಿದ್ರ್ಯ ಪೇಟೆಗೆ ಬಂದುಹಳೆಯ ಬೀಡಿಗೆ ಪಯಣವೇ ಆತ್ಮ 2 ಗನ್ನಗತಕದ ಮಾತು ಇನ್ನು ನಿನಗೇತಕೋಮುನ್ನ ಮಾಡಿದ ಕರ್ಮಭರದೊಡಲಿದೆಉನ್ನತದ ಕಾಗಿನೆಲೆಯಾದಿಕೇಶವ ಸುಪ್ರ-ಸನ್ನ ಮೂರುತಿಯ ಭಜಿಸೆಲೊ ಆತ್ಮ 3
--------------
ಕನಕದಾಸ
ಹೇಗೆ ಕಳಕೋಬೇಕೋ ಹರಿಹರಿ ನೀನೆ ಕಳೆಯಬೇಕೊ ಪ ಹ್ಯಾಗೆ ತೊಳಕೋ ಬೇಕು ತಿಳಿಯದು ಎನಗಿದು ನೀಗದಂಥ ಈ ಅಗಾಧ ರಿಣಮುಟ್ಟು ಅ.ಪ ಹೆತ್ತಮುಟ್ಟು ಅಲ್ಲ ತೊಳಕೊಳ್ಳ ಲ್ಸತ್ತ ಸೂತಕಲ್ಲ ಭವ ಸುತ್ತಿಸುತ್ತಿ ಬೆ ನ್ನ್ಹತ್ತಿ ಬಿಡದೆ ಕಾಡುತ್ತ ನೋಯಿಪ ರಿಣ1 ನಿಶ್ಚಲಯಿರಗೊಡದು ಜಗದೊಳು ತುಚ್ಛನ ಮಾಡುವುದು ಮುಚ್ಚು ಮರಿಯಾದೆಯ ಬಿಚ್ಚಿಟ್ಟು ಬಯಲಿಗೆ ಹಚ್ಚಿ ಮಾರುವಂಥ ಉಚ್ಚಿಷ್ಠ ರಿಣಮುಟ್ಟು 2 ಭಕ್ತವತ್ಸಲರಾಮ ನೀನೆ ಮುಕ್ತಿಪಥಕೆ ಸೋಮ ನಿತ್ಯ ನಿರ್ಮಲಮನ ಭಕ್ತನಿಗಿತ್ತು ರಿಣ ಮುಕ್ತನ ಮಾಡಿ ಬೇಗಂತಃಕರಣ ನೀಡೊ 3
--------------
ರಾಮದಾಸರು
ಹೇಗೆ ಮಾಡಬೇಕು ಭಜನೆಯನು ಹೇಗೆ ಮಾಡಬೇಕುಬೇಗ ಜ್ಞಾನ ಭಕ್ತಿ ವೈರಾಗ್ಯ ಬರುವಂತೆ ಭಜನೆಮಾಡಬೇಕು ಪಆಧ್ಯಾತ್ಮಿಕ 'ಷಯದಲಿ ಮೊದಲು ಬಲು ಶುದ್ಧಜ್ಞಾನ ಬೇಕುಮಹಾತ್ಮ್ಯದ ಸುಜ್ಞಾನ ಪೂರ್ವಕ ಸುಧೃಡ ಸ್ನೇಹಬೇಕುದೇಹದೌಲತ್ತಿನ ಸ್ವರೂಪವರಿತು ವೈರಾಗ್ಯ ಹುಟ್ಟಬೇಕುಈ ಮೂರು ಮನಸಿನಲಿ ಮೂಡುವಂತೆ ನಾವು ಭಜನೆ ಮಾಡಬೇಕು 1ನಾನು ನನ್ನದೆಂಬ ಅಹಂಕಾರ ದಿನದಿನಕೆ ಅಳಿಯಬೇಕುಮಾನಾಪಮಾನವು ಆದರೆ 'ಗ್ಗದೆ ಕುಗ್ಗದೆ ಇರಬೇಕುಹೆಣ್ಣು ಹೊನ್ನು ಮಣ್ಣುಗಳ 'ಷಯದಲಿ ತ್ಯಾಗ ವೈರಾಗ್ಯ ಬುದ್ಧಿಬೇಕುಪುಣ್ಯ ಪಾಪಗಳನರಿತ ಸದ್ಭಕ್ತರ ಸಂಗತಿ ಇರಬೇಕು 2ಮಧ್ವಮತದ ಸಾತ್ವಿಕರ ಸಂಗದಲಿ ಭಜನೆ ನಡೆಯಬೇಕುಶುದ್ಧಮನದ ಸಾತ್ವಿಕರ ಸಂಗದಲಿ ಭಜನೆ ನಡೆಯಬೇಕುಬುದ್ಧಿಗೇಡಿ ದುರ್ದೈ' ದುಷ್ಟರನು ದೂರದಲಿ ಇಡಬೇಕುಶ್ರದ್ಧೆುಂದ ಭೂಪತಿ'ಠ್ಠಲನನು ಭಜಿಸಿ ಕುಣಿಯಬೇಕು ನ
--------------
ಭೂಪತಿ ವಿಠಲರು
ಹೇಮದ ತೊಟ್ಟಿಲ ಭಾಮೆಯರ್ಹೂಡಿ ಕೋಮಲ ಕಾಂಚನಧಾಮವ ಮಾಡಿ ಕಾಮಜನಕನೊಳು ಕಾಮಿತ ಬೇಡಿ ಪ್ರೇಮದಿ ತೂಗಿದರ್ನಾಮದಿ ಪಾಡಿ ಜೋ ಜೋ 1 ಚೆನ್ನಿಗರರಸ ಮೋಹನ್ನ ಸುಶೀಲ ಕನ್ನಡಿ ಕದಪಿನ ಕಮನೀಯ ಬಾಲ ಪುಣ್ಯವೃಕ್ಷಗ ಫಲ ಪೂರ್ಣೇಂದು ಲೀಲ ನಿನ್ನ ರಕ್ಷಿಸಲಿ ಪ್ರಸನ್ನ ಗೋಪಾಲ ಜೋ ಜೋ 2 ಕೆಂದಾವರೆಯಂತೆ ಚೆಂದುಳ್ಳ ಚರಣ ಚಂದಿರವದನ ಗೋವಿಂದನ ಶರಣ ಮುಂದಿನ್ನು ಸೌಭಾಗ್ಯ ಹೊಂದೆನ್ನ ತರುಣ ಕಂದ ಕಂದರ್ಪನ ಸುಂದರಾಭರಣ ಜೊ ಜೋ 3 ಶ್ರೇಯಾರೋಗ್ಯ ದೀರ್ಘಾಯು ಸಂಪೂರ್ಣ ನ್ಯಾಯ ನೀತಿ ಸದುಪಾಯ ಸಂಪನ್ನ ಪ್ರೀಯನೆ ಕರ್ಣಾಂತಾಯತನಯನ ಕಾಯಲಿ ಲಕ್ಷ್ಮೀನಾರಾಯಣ ನಿನ್ನ ಜೋ ಜೋ4
--------------
ತುಪಾಕಿ ವೆಂಕಟರಮಣಾಚಾರ್ಯ
ಹೇಮಾಂಬರ ಕದಂಬ ವೆಂಕಟರಾಯಾ ಅ.ಪಎಷ್ಟೆಂದುಸುರೆ ಕೋಟಲೆಗಳಇಷ್ಟ ಮೂರುತಿಯೆ ಅಟ್ಟಿ ಬರುತ 'ಷಹುಟ್ಟು ಹೊಂದುಗಳೆಂಬ ಕಷ್ಟವ ಬಿಡಿಸೊ 'ಶಿಷ್ಟ ವೆಂಕಟರಾಯಾ1ದಂದುಗದಿಂದಾ ಎನ್ನಯಮನ ಕಂದಿಕುಂದುತಿದೆ ಇಂದು ನೀ ಬೆದರದಿರೆಂದಭಯವನಿತ್ತು ಬಂಧವ ಕಳೆಯೆನ್ನತಂದೆ ವೆಂಕಟರಾಯಾ 2ಕಡು ಮನೋವ್ಯಥೆಯಾ 'ಭಾಡಿಸುನುಡಿಯಾಲಿಸಯ್ಯಾ ಬಿಡದೆ ನೀ ಎನ್ನ ಕೈಪಿಡಿದು ಸಂಸøತಿಯೆಂಬ ಕಡಲ ದಾಂಟಿಸೊ ಎನ್ನೊಡೆಯ ವೆಂಕಟರಾಯಾ 3ಗತಿ ನೀನೆಯೆಂದು ಸಾರಿದೆ ನಿನ್ನನತಿ ದೀನ ಬಂಧು ಪತಿತ ಪಾವನ ನೆಂದತಿಶಯದಿಂ ಶೃತಿ ನುತಿಸುತಲಿದೆ ತಿರುಪತಿಯ ವೆಂಕಟರಾಯ 4ಅಪರಾಧ ಶತವಾ ಮಾಡಿದೆ ನಾನುಕೃಪೆುಂದ ಕ್ಷ'ುಸೈ ಜಪತಪವರಿಯದಚಪಲ ಚಿತ್ತನು ನಾನು 'ಮಲಪರಾನಂದನಿಪುಣ ವೆಂಕಟರಾಯಾ 5'ಪ್ರವತ್ಸಲನೆ ಯನಗೆ ನೀನುಸುಪ್ರೀತನಾಗೈ ತಪ್ಪುಗಳೆಲ್ಲವನೊಪ್ಪುಗೊಳ್ಳುತ ಸಲಹಪ್ಪ ನಿಚ್ಚಲು ತಿಮ್ಮಪ್ಪ ವೆಂಕಟರಾಯಾ 6ದುರಿತ ಭಂಜನನೆ ಮಹಾಪುಣ್ಯಚರಿತ ರಾಜಿತನೆ ನೆರೆ ನಂಬಿದರ ಪತಿಕರಿಸುವ ಬಿರುದುಳ್ಳ ಪರಮಾತ್ಮ ಮೂಡಲಗಿರಿಯ ವೆಂಕಟರಾಯಾ 7ವಾರಿಜನಾಭ ಮಹೋನ್ನತವಾರಣಾಧಾರಾ ಗಾರುಗೊಳಿಸುವ ಸಂಸಾರ ದುಃಖವನಿದನಾರಿಗುಸುರುವೆ ಕೊನೇರಿ ವೆಂಕಟರಾಯಾ 8ಮಂಗಳಾತ್ಮಕನೆ ಸೀತಾಕಾಂತಮಂಗಳ ಮ'ಮ ಮಂಗಳಗಿರಿ ನರಸಿಂಗರಾಘವ ರಘುಪುಂಗವ ಅಲಮೇಲುಮಂಗ ವೆಂಕಟರಾಯಾ9
--------------
ತಿಮ್ಮಪ್ಪದಾಸರು
ಹೇಳಯ್ಯಾ ಶ್ರೀ ಗುರುವೇ ಬಾಳುವೆನದರಂದವಿ ಸುರ ತರುವೇ ಪ ಹೀನ ಯೋನಿಯ ಮುಖದಲಿ ಬಂದು ನಾನಾ ತಾಪತ್ರಯದಿ ಬಹುನೊಂದು ನೀನೆ ಗತಿಯನುತ ಬಂದೆ ನಿಂದು ನಾನು ಭವದಿಂದ ತರಿಸುವ ಉಪಾಯವ ವಂದು 1 ಕೇಳಯ್ಯಾ ನೀ ಕಂದಾ ಹೇಳುವ ನುಡಿ ಗ್ರಹಿಸಲಾನಂದಾ ಆದಿಯಲಿ ದುರ್ಜನ ಸಂಗವಳಿದು ಸಾಧುಜನಸಂಗವನೇ ಬೆರೆದು ಬೋಧೆಯಂದಲಿ ಮನನವ ಬಲಿದು ಸಾಧಕನ ಉದ್ಯೋಗಿಸ ಸಿದ್ಧಿಯಹುದು2 ಸ್ವಾಮಿ ಸಜ್ಜನ ಸಂಗವನೇ ಬಯಸಿ ಪ್ರೇಮದಿರಬೇಕು ಇದೇ ನಿತ್ಯವೆನಿಸಿ ತಾಮತ್ತರ ಘಳಿಗಿಯೊಳು ವಲಿಸಿ ಭ್ರಮಿಸುತಿಹಿದು ಅದು ಏನೆಂದು ವಿಸ್ತರಿಸಿಹೇ3 ಕೇಳಯ್ಯಾ ಲೋಕವೆಲ್ಲಾ ಛಲನೆ ಮಾಡುವುದು ವಿಕಲ್ಲುಳ್ಳದು ನೋಡುಮನವದು ನಾಕು ತೆರದೊಳಿಸಿ ಕೊಳ್ಳಲದು ಬೇಕಾದುದನು ವಸ್ತು ಇದಿರಿಡುತಲಿಹುದು4 ನಳಿನ ಜಪರಾಸುರಗಳಿಗೆ ಛಲಿಸಲಿಕೆ ಮನ ಅಂಗನಿಗೆ ಬಲಿ ವಿಡಿದು ಮೋಹಿಸಿದ ರಾಗ ಇಳಿಯೊಳಗ ವಶಯಂತಹುದು ಮನುಜಗ5 ಕೇಳಯ್ಯಾ ಶುಕನಾರದ ಭೀಷ್ಮರ ನೋಡಾ ವಿಕಳಿಗೊಳ್ಳದೆ ಮನಕೂಡಾ ಸಕಲಗೆದ್ದರು ಅತಿಗಾಢಾ ಯುಕುತಿಲೆ ಮನೊಲಿಕೊವೈರಾಗ್ಯದಿಂದ ಧೃಡಾ6 ಹೇಳೈಯ್ಯಾ ಜ್ಞಾನಸಾಧನವೆಂಬುದನರಿಯೇ ಎನಗೆಂತಹದಿಂತಿದು ಧೋರಿಯೇ ನೀನೇ ತಾರಿಸುದಯದೆನ್ನ ಸಿರಿಯೇ ನಾನು ಎಂದೆಂದು ತವಪಾದಸ್ಮರಣಿ ಮರಿಯೆ7 ಎಂದು ಬಾಗುವ ಕಂದನನು ನೋಡಿ ಕರ ನೀಡಿ ಛಂದದಲಿ ತರಿಪಂತೆ ಮಾಡಿ ಬಂದು ಧನ್ಯ ಗೈಸಿದ ಗುರು ಮಹಿಪತಿ ಕೈಯ್ಯಗೂಡಿ8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೇಳುತಿ ಕೇಳುತಿ ಏನಿಲ್ಲವೊ ಆಳಿದಾ ಊಳಿಗನ ಬಾಳಿವಿನ್ನೇನೊ ಪ ಭಾರ ಬೆನ್ನಲಿ ಪೊತ್ತು ದೂರದೊಳು ಮುಳುಗಿ ಭೂಭಾರ ನೆಗಹಿ ಧೀರ ಕರ್ಣವು ಮಂದವೊ ಹ್ಯಾಗೊ ತಿಳಿಯದು ಘೋರ ದೈತ್ಯನ ಕೊಲ್ಲೊ ಚೀರಾಟವೊ 1 ಮೇದಿನಿ ಪತಿಯ ತುತಿಸುವ ಭರದಿ ನೀ ಧನುರ್ವೇದಗಳನೋದಿಸುವ ನಿರ್ಭರವೊ ಕಾದÀುವ ರಾಕ್ಷಸರ ಕುಲದ ಕೂಗ್ಯಾಟವೊ ಮೋದದಿ ಗೋಪಿಯರ ಕೋಲಾಟವೊ 2 ಬತ್ತಲೆ ನಿಂತು ನುಡಿಯಲಿ ಬಾರದೊಯೆಂತೊ ಹತ್ತಿದ ವಾಜಿಯು ನಿಲ್ಲದೇನೊ ಇತ್ತ ಬಾರೊ ವಾಸುದೇವವಿಟ್ಠಲರೇಯ ಮತ್ತೆ ಹೇಳೊ ನಿಲ್ಲೊ ಬಾಯೆಂತಲೆನ್ನ 3
--------------
ವ್ಯಾಸತತ್ವಜ್ಞದಾಸರು
ಹೇಳುವುದು ಬೇಡ | ಜನರ ನುಡಿ ಕೇಳದಿರಲೋ ಮೂಢ ಪ ಶ್ರೀಲೋಲನ ಕಿಂಕರರ ಬಾಗಿಲಲಿ ಬೀಳುನಾಯಿಯಂದದಲಿ ಕೆಲಕಾಲ ಅ.ಪ ದ್ರವ್ಯದಾಸೆಗಾಗಿ | ನಾರಕೀ ಭವಿತವ್ಯರಲ್ಲಿಗೆ ಹೋಗಿ ಕಾವ್ಯನಾಟಕ ಸ್ತುತಿ ಪದ್ಯಗಳನು 1 ನಾನು ಯೋಗ್ಯನೆನ್ನುತ | ತೋರಿಸಿ ಮಾನವಾಗಿದಿರದಲ್ಲಿ ನಿನಗೆ ದುರಭಿ- ಮಾನಿಯಾಗಿ ನೀ ಕೆಡುವೆಯೊ ನಿಜ ನಿಜ 2 ಕೊಂಚ ಬೇಡಬೇಕು ವಂಚನೆಯಿಲ್ಲದೆ ಭಜಿಸು ರಹಸ್ಯವ 3
--------------
ಗುರುರಾಮವಿಠಲ
ಹೇಳುವೆನು ಕೇಳಿ ಕರ್ಣಾಮೃತವ ಆಲೋಚನೆ ಸಲ್ಲ ತಿಳಿದ ಜ್ಞಾನರಿಗೆ ಪ ಲಕ್ಷಣ ಛಂದಸ್ಸು ಅಡಿಪ್ರಾಸ ಆದಿ ಅಂತಿ ಲಕ್ಷಕ್ಕೊಂದಾದರು ಮೊದಲೇ ಇಲ್ಲಾ ಅಕ್ಷಿ ಇಲ್ಲದವನು ಕೋಲು ಸಂಪಾದಿಸುವ ಅಕ್ಷಿ ಉಂಟಾದವಗೆ ಅದರಿಂದ ಫಲವೇನು 1 ಜ್ಞಾನ ಕರ್ಮರ ಲಂಬನ ಮಾಡಿ ತಿಳಿದಂಥ ಮಾನವನು ನಾನಲ್ಲ ಎಂದೆಂದಿಗೂ ಜ್ಞಾನಿಗಳ ಮನೆಯ ತೊಂಡರ ಪಾದರಕ್ಷೆಯಾ ಪಾಣಿಯಲ್ಲಿ ಪಿಡಿದವನ ನಖಧೂಳಿ ದಯದಿಂದ 2 ರಾಗತಾಳ ಭೇದ ಜತೆ ಜಾಣತನದಿಂದ ವಾಗರ ನಿಮಿತ್ಯ ಪೇಳಲಿಲ್ಲಾ ಹ್ಯಾಗಾದರೇನು ನಾರಾಯಣಚ್ಯುತನೆಂದು ಕೂಗಿ ಕಾಲವ ಕಳದೆ ಜನುಮ ಸಾಧನಕೆ 3 ಬೆಲ್ಲ ಕರದಲಿ ಪಿಡಿದು ಆವನಾದರೇನು ಎಲ್ಲಿ ತಂದರೆ ಅದು ಸೀ ಎಲ್ಲವೇ ಬಲ್ಲನವ ನರಿಯನಿವನೆಂದು ಆಡದಿರಿ ಪುಲ್ಲನಾಭನ ಸ್ಮರಣೆ ಒಂದು ಮುಕ್ತಾರ್ಥ 4 ಹರಿದೈವವೆಂದು ತಾ ಉತ್ತರೋತ್ತರ ತಿಳಿದು ಗುರುಮಧ್ವಮತದಲ್ಲಿ ಲೋಲಾಡಲು ಸಿರಿಯ ಅರಸ ವಿಜಯವಿಠ್ಠಲ ಬಂದು ವೊಲಿವನು ಗುರು ಪುರಂದರನ ದಯೆ ಎನ್ನ ಮೇಲಿರಲಾಗಿ5
--------------
ವಿಜಯದಾಸ