ಒಟ್ಟು 3758 ಕಡೆಗಳಲ್ಲಿ , 119 ದಾಸರು , 2292 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜರಿಯಬೇಡ ಹರಿಯ ಮರೆಯಬೇಡೆಂದೆಂದು |ತಿರಿಯಬೇಡ ಖಳರ ಮನೆಗೆ ಪೋಗಿ ||ಪ||ಒರೆಯಬೇಡನ್ಯರಿಗೆ ರಹಸ್ಯ ತತ್ವಗಳನು |ಬೆರೆಯಬೇಡ ಪರರ ಸತಿಯ ಸ್ವಪ್ನದಲೂ ||ಅ|| ||ಪ|| ಮೂಕವಾರ್ತೆಯ ನಿನ್ನ ಕಿವಿಗೆ ಕೇಳಿಸಬೇಡ |ಶ್ರೀಕಾಂತ ಚರಿತೆಯನು ಕೇಳದಿರಬೇಡ |ಪಾಕವನು ಮಾಡಿ ಏಕಾಂಗಿಯಾಗುಣಬೇಡ|ಭೂಕಾಂತರನುಸರಿಸಿ ಬೆಸಗೊಳ್ಳಬೇಡ || ಪಂಡಿತರು ಪಾಮರರು ಆರಿಗಾದರೂ ನಿನ್ನ |ಕಂಡವರಿಗೆಲ್ಲ ಕೌತುಕವು ತೋರಿದರೂ |ಹೆಂಡಿರು ಮಕ್ಕಳು ಅಳಿಯ ಸೋಸೆ ಮೊಮ್ಮಕ್ಕಳು |ಉಂಡುಟ್ಟು, ದ್ವಿಜರು ಸಹ ಗಂಡುಗಲಿಯಾದರೂ|| ಮಂದಮತಿಗಳ ಕೂಡೆ ಮಾತಾಡಲಿ ಬೇಡ |ನಿಂದಕರ ಕಣ್ಣೆತ್ತಿ ನೋಡಬೇಡ |ಇಂದಿರೆಯರಸ ಶ್ರೀ ವಿಜಯ ವಿಠಲರ ಚರಣ|ದ್ವಂದ್ವದಲಿ ಮಸ್ತಕವನಿಡದಿರಬೇಡ ||
--------------
ವಿಜಯದಾಸ
ಜಲಜನಾಭನ ಪೂಜೆ ಅತಿ ಸುಲಭವು ಪ ಚಲಿಸಿದ ಮನವನ್ನು ಪೊಂದಿರುವ ಸುಜನರಿಗೆ ಅ.ಪ ತಾಳ ಕೇಳುವನಲ್ಲ ಮೇಳ ಕೇಳುವನಲ್ಲ ಬಾಳೆ ಮಾವುಗಳ ವೈಭವವ ಕೇಳುವನಲ್ಲ ಸೂಳೆಯಂದದಿ ಬಹಳ ನಟನೆಗಳು ಬೇಕಿಲ್ಲ ಬಾಲಕೃಷ್ಣನಲಿ ದೃಢಭಕುತಿಯುಳ್ಳವಗೆ 1 ನವರತ್ನ ಮಂಟಪದ ಝವೆಯ ಬಯಸುವನಲ್ಲ ಹವಳಗಳ ಸರದ ವೈಭವವು ಬೇಕಿಲ್ಲ ಧವಳ ಮುಕ್ತಾಹಾರಗಳ ಬಯಸುವನಲ್ಲ ಭುವನ ಭೂಷಣನೊಳತಿ ಭಕುತಿಯುಳ್ಳವಗೆ 2 ಹೊನ್ನಿನಾಭರಣಗಳನ್ನು ಬಯಸನು ವಿವಿಧ ಅನ್ನಗಳ ರುಚಿಗೆ ಲೋಭವ ಪೊಂದನು ಅನ್ನಾದಿಮಯ ಹರಿಯು ತನ್ನಲ್ಲಿ ತುಳಸೀದಳ ವನ್ನು ಭಕುತಿಯೊಳಿಡೆ ಪ್ರಸನ್ನನಾಗುವನು 3
--------------
ವಿದ್ಯಾಪ್ರಸನ್ನತೀರ್ಥರು
ಜವದಿ ಪಾಲಿಸೊ ಪ್ಲವಗೋತ್ತುಮ ಮರುತಾ ನಂಬಿದೆ ನಿರುತಾ ಪ ಅವನಿಶಾರ್ಚಿತ ಪವನಾತ್ಮಜ ಹನುಮಾ ಭವಸುರನುತ ಭೀಮಾ ಅ.ಪ ಮಾರುತಿ ಅಂಜನ ಗರ್ಭದೊಳುದವಿಸಿ ವಾರಿಧಿಯುತ್ತರಿಸಿ ಧಾರುಣಿ ಸುತೆಗತಿ ಹರುಷವಗೊಳಿಸಿದಿ | ನೀ ದ್ವಾಪರ ಯುಗದಿ ನಾರಿಯ ಮೊರೆ ಕೇಳಿ ದುರುಳನ ಶಿರ ತರಿದಿ ಆ ನಾರಿವೇಷದಿ 1 ಅದ್ವೈತರ ನೀನಳಿಸುವಲೋಸುಗದಿ | ಸದ್ಗುರುವರ ಜಗದಿ ಮಧ್ಯಾಸದನ ಸತಿಯುದರದಿ ಜನಿಸಿದಿ | ಸದ್ವೈಷ್ಣವರ ಪೊರೆದಿ ಸಿದ್ಧಾಂತವ ಸ್ಥಾಪಿಸಿ ಬದರಿಗೆ ನೀಪೋದೆ | ಮದ್ವಾಭಿದಾನದಿ 2 ನಂಬಿದೆ ವೃಕೊಜಠರಾ ದಶಶಿರ ಪುರನಾಥಾ ಪತಿ ಶಶಿಕುಲಸಂಜಾತಾ 3
--------------
ಶಾಮಸುಂದರ ವಿಠಲ
ಜಾಣೆ ನಂಬಿದೆ ಇಸ್ಟೇಟರಾಣೀ ನೀನೊಲಿದೆನ್ನ ಪಾಣಿಯೊಳಗೆ ಬಂದು ಕಾಣಿಸಮ್ಮ ಪ ವಾಣಿ ಶ್ರೀಲಕುಮಿಶ ರುದ್ರಾಯಣಿಯರಿಗಿಂತ ಕ್ಷೋಣಿಯೊಳಗೆ ಬಹುಮಾನಿತೆ | ನೀನಮ್ಮ ಅ.ಪ ಜನಕನು ಗಳಿಸಿದ ಧನವೆಲ್ಲಾ ಕಳಕೊಂಡೆ ದನಕರ ಹೊಲಮನೆಯನು ಮಾರಿದೆ ಜನರೊಳಗಪಹಾಸ್ಯಗೊಳಗಾದೆ ಕೇಳಮ್ಮ ವನಿತೆ ಮಕ್ಕಳ ಕೈಲಿ ಕೊನೆಗೆ ಪರಟೆ ಕೊಟ್ಟೆ 1 ಉಣಲು ಅನ್ನವು ಕಾಣೆ | ಉಡಲು ವಸ್ತ್ರವು ಕಾಣೆ ಕಡುಕಷ್ಟ ಕಡಲೋಳು ಮುಳುಗಿದೆ ನೋಡಮ್ಮ ಪೊಡವಿಯೋಳ್ ನಿನ್ಹೊರತು ಕಡೆ ಹಾಯಿಸುವಂಥ ಕಾಣಿ ಕೈಪಿಡಿದು ರಕ್ಷಿಸೊ ರಕ್ಷಿಸೋ ನೀನಮ್ಮ 2 ಎಲ್ಲಾ ಹಾಳಾಯಿತು | ಸಾಲ ಬಹಳಾಯಿತು ಜೋಳಿಗೆ ಬಂದಿತು ಕೂಳಿಗೆ ಮನೆ ಮನೆ ಚಾಲುವರಿದೆನಮ್ಮಾ 3 ಹಾರಿ ಹೋಗುವದಮ್ಮಾ ಪಕ್ಕಾರಂಗು ಧಾರುಣೀಶರ ಮಧ್ಯ ತೋರೀದ ಸಮಯದಿ ಆ ರಾಣಿ ವರ್ಗವ ಥರ ಥರ ನಡುಗಿಸುವಿ 4 ಅಕ್ಕರದಲಿ ಎರಡೆಕ್ಕದೊಳು ಬಂದು ಪಕ್ಕನೆ ನೀ ಎನ್ನ ಕೈಯೊಳು ಬಾರೆ ಮುಕ್ಕಣ ಸಖ ತನ್ನ ಬೊಕ್ಕಸದೊಳಗಿನ ರೊಕ್ಕ ಹಾಕಲು ಅವನ ಲೆಕ್ಕಸೆ ನಮ್ಮ 5 ಕಾಮಿತ ದಾಯಿನಿ ಕಾಮಿನಿ ಶಿರೋಮಣಿ ಶಾಮಸುಂದರ ಸಾರ್ವಭೌಮನ ರಾಣಿ ಶ್ರೀಮಂತ ಜೋಕರನ ಪ್ರೇಮದ ಭಗಿನಿಯೆ ನಾ ಮೊರೆ ಹೊಕ್ಕೆನು ನೀ ದಯಮಾಡು ತಾಯೆ 6
--------------
ಶಾಮಸುಂದರ ವಿಠಲ
ಜಾತಿಭ್ರಷ್ಟ ಹೊಲೆಮಾದಿಗರಿವರಲ್ಲವೇನೋ ನೀತಿಬಾಹಿರರಾಗಿ ಆಚರಿಸುವವರು ಪ ಪನ್ನಂಗಶಯನ ಉನ್ನತ ಕತೆ ಕೀರ್ತ ನ್ಯನ್ನು ಕೇಳೆನೆ ಮುಖವನ್ನು ಹಿಂತಿರುವಿ ಭಿನ್ನ ಬೇಸರಿಲ್ಲದೆ ಅನ್ಯಜನ ಸುದ್ದಿಯೊಳು ಕುನ್ನಿಯಂದದಿ ದಿನಗಳನ್ನು ಕಳೆವವರು 1 ಆಲಯದ ಸತಿಯಳ ತಾಳದೆ ತುಸುತಪ್ಪು ತಾಳಿಯನ್ಹರಕೊಂಡು ದಾಳೀಯ ಹೊಡೆದು ಮೇಲುಜಾತಿಲಿ ಹುಟ್ಟಿ ಕೀಳು ಸೂಳೇರಿಗೊಲಿದು ಹೇಳಿದತೆರ ಕುಣಿದು ಬೀಳುಗಳೆವವರು 2 ಸದ್ಧರ್ಮಕಾರ್ಯಕ್ಕೆ ಇದ್ದುದ ಸಲ್ಲಿಸೆನಲು ಕದ್ದು ತಂದುಕೊಡುವೆವೆಂದಬದ್ಧ ನುಡಿಯುವವರು ಬದ್ಧ್ದ........ಬಂದು ಒದ್ದು ಕೂಡ್ರಿಸಲಾಗ ಸದ್ದಿಲ್ಲದೆ ತಂದು ಬೇಡಿದ್ದು ಕೊಡುವವರು 3 ಜ್ಞಾನಿಗಳು ಬಂದರೆ ಗೋಣೆತ್ತಿನೋಡದೆ ಹೀನಜನರಿಗೆ ಬಹುಮಾನ ಕೊಡುವವರು ಧ್ಯಾನ ದಾಸರ ತರದಿ ಜ್ಞಾನದ ಮಾತ್ಹೇಳಿ ಗೇಣ್ಹೊಟ್ಟಿಗೆ ಪರರ ಗೋಣು ಮುರಿವವರು 4 ತಾಸಿನ ಮೋಜೆಂಬ ನಾಶನ ಜಗಮಾಯ ಮೋಸನರಿಯದೆ ಯಮಪಾಶದೊಳು ಬಿದ್ದು ದಾಸಜನಪ್ರಿಯ ಜಗದೀಶ ಶ್ರೀರಾಮನ ಧ್ಯಾಸಮುರಿದು ದು:ಸ್ಸಹವಾಸದಿರುವವರು 5
--------------
ರಾಮದಾಸರು
ಜಾನಕೀರಮಣನೆ ಮಾನದಿ ಸಲಹೆನ್ನ ಪ ಮಾನಾಪಮಾನ ನಿಂದೋ ದೀನರ ಬಂಧೋ ಅ.ಪ ದಾಸದಾಸರ ದಾಸ ದಾಸನಾಗುವೆನೆಂದು ಬೇಡುವೆ ದಯಸಿಂಧೋ ನೀಡು ವರವ ಬಂಧೊ 1 ನಂದತೀರ್ಥರ ಮತ ಎಂದೊ ಎನಗೆ ಹಿತ ಪೊಂದಿಸಬೇಕೊ ಸೀತಾಪತಿಯೆ ಕೇಳೆಲೊದಾತ 2 ನಾಮಗಿರಿ ಲಕ್ಷ್ಮೀಸ್ವಾಮಿ ಶ್ರೀ ನರಹರೆ ಚರಣ ಕಮಲಯುಗ ಸ್ಮರಣೆ ಸ್ಥಿರಪಡಿಸೊ 3
--------------
ವಿದ್ಯಾರತ್ನಾಕರತೀರ್ಥರು
ಜಾಹ್ನವಿ ಜಗತ್ರಯ ಪಾವನಿ ಪ್ರಣತಕಾಮದೆ ಪದ್ಮಜಾಂಡ ಸಂಭೂತೆ ಪ ಸೃಷ್ಟೀಶ ಪದಜಾತೆ ವಿಶ್ವಮಂಗಳ ಮಹೋ ತ್ಕøಷ್ಟ ತೀರ್ಥಗಳೊಳುತ್ತಮಳೆನಿಸುವೇ ಕಷ್ಟವರ್ಜಿತವೆನಿಪ ತ್ರಿಪಥಗಾಮಿನಿ ದಯಾ ದೃಷ್ಟಿಯಿಂದಲಿ ನೋಡು ಪ್ರತಿದಿನದಿ ಎನ್ನಾ 1 ಕರ್ಮ ಸಾಕ್ಷಿಯೆನಿಸುತಿಹ ಅರ್ಕದೇವನು ಬಂದ ಸಮಯದಲ್ಲಿ ಶರ್ಕರಾಹ್ವರು ಸ್ನಾನಗೈಯೆ ದುರಿತಗಳು ಸಂ ಪರ್ಕವಾಗದ ತೆರದಿ ಸಂತೈಪೆ ದಯದಿ 2 ಕಾರುಣಿಕ ಬಹಿರಾವರಣದಿಂದ ನೀ ಪೊರಟು ವಾರಾಹಿಯೊಡಗೂಡಿ ಭಕ್ತಜನರ ಪ್ರಾರಬ್ಧ ಕರ್ಮಗಳನುಣಿಸಿ ಮುಕ್ತರನ ಮಾಳ್ಪೆ ದೂರಗೈಸುವೆ ಸಂಚಿತಾಗಾಮಿಗಳನೂ 3 ನಂದಿನೀ ನಳಿನಿ ಸುಸೀತಾ ಮಲಾಪಹರ ಳೆಂದ ಮಾತ್ರದಿ ಪುನೀತರನು ಮಾಳ್ಪೆ ಸಂದರುಶನ ಸ್ವರುಶನ ಸ್ನಾನಗಳ ಫಲ ಪು ರಂದರಾರ್ಯರೆ ಬಲ್ಲರಲ್ಪರು ಅರಿಯರು 4 ಮಾತೆ ವಿಜ್ಞಾಪಿಸುವೆ ಬಿನ್ನಪವ ಕೇಳು ಸಂ ಪ್ರೀತಿಯಿಂದಲಿ ಕರುಣಿಸೆನಗೆ ಇದನೆ ಶ್ರೋತವ್ಯ ವಕ್ತವ್ಯ ಮಂತವ್ಯ ಸ್ತವ್ಯ | ಜಗ ನ್ನಾಥ ವಿಠ್ಠಲನೊಬ್ಬನೆಂದು ತಿಳಿವಂತೇ5
--------------
ಜಗನ್ನಾಥದಾಸರು
ಜಾಹ್ನವಿ ಜನಕ ಮೂಜಗತ್ಪತಿ ಸುರಕುಲ ಸನಕಾ ದೀಜನ ಮನೋಹರ ಮಾಣಿಕ್ಯ ಕನಕಾ ವೈಜಯಂತಿ ಹಾರ ಪಾವನ್ನ ಪದಕ ಪ ಕೇಶಿಭಂಜನ ವ್ಯೋಮಕೇಶ ವಂದಿತ ಪಾದ ಕ್ಲೇಶನಾಶನ ವಾತೇಶನ ಜನಕ ಕೇಶರಿರುಹ ಮುಂಜಿಕೇಶನೆ ಕುಂಕುಮ ಶೌರಿ 1 ವಾರುಣಿ ಪತಿನುತ ವಾರುಣನ ಭಯ ನಿ ವಾರಣಾ ವಾರಣಾಶಿ ಪುರದರಸೆ ವಾರಣ ನಗರಿಯ ವಾರನಹತಪಲ್ಲ ವಾರುಣಿ ಪಾಣಿಯೆ ನಾರಾಯಣನೆ ಜೋ ಜೋ 2 ಮಾದೇವಿ ರಮಣ ಭೂಮಿದೇವಿ ಉದ್ಧಾರ ಮಾಧುರ್ಯ ವಚನ ಉಮಾದೇವಿ ವಿನುತಾ ಮಾಧಾರ ಮಹಶೂರ ಮತ್ಕುಲನೆ ಪ್ರೇ ಮಾಧವ ರಾಯಾ 3 ಗೋವಳಿ ಪರಿಪಾಲ ಗೋವಳೇರಾ ಪ್ರಿಯಾ ಗೋವುಗಳ ಕಾಯಿದ ಗೋವಳರಾಯಾ ವಿಪ್ರ ಸಂರಕ್ಷ ಗೋವಿದಾಂಪತಿ ರಂಗ ಗೋವಿಂದ ನಂದ 4 ಮಧುಕೈಟಭಾಸುರ ಮದಗರ್ವ ಮರ್ದನ ನಿತ್ಯ ಮಧುರನ್ನ ಪಾನಾ ಮಧುರಾಪುರ ಪಾಲ ಮದಗಜ ಹರಣಾ ಶಾ ಮದವರ್ಣ ಶರೀರ ಮಧುಸೂದನನೆ 5 ಇಷ್ಟಭಕ್ತರ ಕುಲ ಇಷ್ಟದೈವವೆ ಸರ್ವ ಇಷ್ಟಾರ್ಥ ಕೊಡುವ ಬಲಿಷ್ಟನು ನಿನ್ನ ಇಷ್ಟ ಅಷ್ಟಯೆಂದು ತಿಳಿಯಲಿ ವಶವಲ್ಲ ವಿಷ್ಣು ಸರ್ವೋತ್ತಮ ವಿಶ್ವನಾಟಕನೆ6 ಅಕ್ರಮದಲಿ ಸ್ವರ್ಗ ಆಕ್ರಮಿಸಿ ಬಲಿ ವಿಕ್ರಮನಾಗಿ ಕಾಲಕ್ರಮಣಿ ಮಾಡೆ ಶಕ್ರಮರ್ಚಿಸೆ ಅನುಕ್ರಮನಾಗಿ ಪ ರಾಕ್ರಮದಲಿ ಬೆಳದೆ ತ್ರಿವಿಕ್ರಮನೆ 7 ವಾಮಲೋಚನೆಯರ ವಾಮನ ಕೆಡಿಸಿದೆ ವಾಮನವಾಶಿಷ್ಟವಾ ಮುನಿವಂದ್ಯ ವಾಮನದಲಿ ದಾನವಾಮನ್ಯಗಳರನ್ನು ಅ ವಮಾನ ಮಾಡಿದೆ ಸಿರಿವಾಮನನೆ 8 ಶ್ರೀಧರ ರಮಣನೆ ಶೃಂಗಾರ ವಾರಿಧಿ ಶ್ರೀಧನ ಸಂಪತ್ತಾಶ್ರಿತ ಜನರಿಗೆ ಶ್ರೀಧೇನು ನೀನಯ್ಯಾ ಶ್ರೀ ಕರುಣಾಕರ ಶ್ರೀದೇವಿ ಉರಭೂಷಾ ಶ್ರೀಧರನಂತಾ 9 ಋಷಿಕೇಶನ ತಾತ ಋಷಿಜನ ಸಂಪ್ರೀತ ಋಷಿಕುಲೋದ್ಭವ ಪುರುಷ ರಾಮ ಮಹಾ ಋಷಿನಾಮಧೇಯನೆ ಋಷಿಪತ್ನಿ ಪಾಲನೆ ಋಷಿಗಳ ಒಡೆಯನೆ ಹೃಷಿಕೇಶ ದೇವ 10 ಪದುಮಜಾಂಡದಲ್ಲಿ ಪದುಮೆ ಮಾತನು ಕೇಳಿ ಪದುಮನಾಭಿಯಲ್ಲಿ ಪದುಮಜನ ಪೆತ್ತ ಪದುಮಾಸ್ಯ ಪದುಮಾಕ್ಷ ಪದುಮಕರನೆ ಪಾದ ಪದುಮ ಮಿಗಲು ಕಾಂತಿ ಪದುಮನಾಭನೆ11 ಧಾಮನಿಧಿಕುಲನು ಧಾಮನೆ ನಿರುತ ತ್ರಿ ಧಾಮನಿವಾಸ ಸುಧಾಮನ ಮಿತ್ರ ಧಾಮ ಪುಣ್ಯಧಾಮ ಭಕ್ತ ಹೃದ್ವನಜ ಧಾಮ ಮಧುಕರನೆ ದಾಮೋದರ ಧರ್ಮಾ 12 ಶಂಖ ಸುರಾಹರಾ ನಿಃಶಂಕ ಚರಿತ ಶಂಖಪಾಣಿ ಶಶಾಂಕ ಸುವದನ ಸಂಖ್ಯೆಯಿಲ್ಲದೆ ತಾಯಿ ಸಂಕಲೆ ಹರಿಗಡಿದೆ ಸಂಕರುಷಣನುವುಜ ಸಂಕರುಷಣನೆ 13 ಪ್ರಧಾನ ಮೂರುತಿ ಪ್ರದ್ವೀಪ ವರ್ಣ ಸುಪ್ರದಾಯಕನೆ ಪ್ರದೇಶ ಪರಿಮಾಣ ವರಪ್ರದ ಸಿದ್ಧನೆ ಪ್ರದ್ಯುಕ್ತ ಅವ್ಯಕ್ತ ಪ್ರದ್ಯುಮ್ನ ವಿಶ್ವ14 ವಾಸುವಾನುಜ ಶ್ರೀನಿವಾಸ ಪುಂಡ್ರೀಕ ವಾಸುದೇವನ ಶಮನಪುರದಲ್ಲಿ ವಾಸಮಾಡಿಸಿದಯ್ಯಾ ವಾಸವಾರ್ಚಿತ ಶ್ರೀ ವಾಸುದೇವ 15 ಅನುಗಾಲವು ನಿನ್ನ ಅನುಸರಿಸಿದೆ ನಾನು ಅನುಕೂಲವಾಗಿ ಎನ್ನನು ಸಾಕುವುದು ಅನುಮಾನವ್ಯಾತಕೆ ಅನಿಮಿತ್ತ ಬಂಧು ಅನಿರುದ್ಧ ಶ್ರೀಶಾ 16 ಪುರುಷ ಪುರುಷ ಶ್ರೇಷ್ಠ ಪುರುಷಾರ್ಥ ಕಾರಣ ಪುರುಷೇಶ್ವರ ತತ್ಪುರುಷಾದಿ ಪುರುಷ ಪುರುಷ ಬೀಜ ವೇದ ಪುರುಷ ಪರಮ ಪುರುಷ ಪುರುಷರು ಮೋಹಿಸುವ ಪುರುಷೋತ್ತಮನೆ 17 ಅಕ್ಷಯ ಬಲ ಸಹಸ್ರಾಕ್ಷ ರಕ್ಷಕ ಅಕ್ಷರಪರ ಬ್ರಹ್ಮ ಗೀರ್ವಾಣಧ್ಯಕ್ಷ ಅಕ್ಷಯ ಪಾತ್ರಿಯ ಶಾಖಾದಳವನ್ನು ಅಕ್ಷಯ ಮಾಡಿದಧೋಕ್ಷಜ ಚಕ್ರಿ 18 ನರಸಖ ನರಹರಿ ನಾರಾಯಣ ವಾ ನರ ದಳನಾಯಕ ನಾರದ ವಿನುತ ನರಕ ಉದ್ಧಾರಕ ನರಕಾಂತಕ ಕಿ ನ್ನರ ಸುರನರೋರಗ ವೃಂದ ನರಸಿಂಹ 19 ಸಚ್ಚಿದಾನಂದಾತ್ಮ ಸಚಲ ವಿಗ್ರಹನೆ ಸಚ್ಚರಾಚರದೊಳೂ ಗುಣಪರಿಪೂರ್ಣ ಸಚ್ಛಾಸ್ತ್ರದಲಿ ನಿನ್ನ ಸಾಮರ್ಥಿ ಪರಿಪೂರ್ತಿ ಸಚ್ಚೂತ ಚುತಿ ದೂರ ಚಿನ್ಮಯ ರೂಪಾ 20 ಜನನ ಮರಣ ನಾಶ ಜನನಾದಿಕರ್ತಾಂ ಜನಸುತಗತಿ ಪ್ರೇಮಾಂಜನ ಗಿರಿಧಾಮ ಜನಕವರದ ಸಜ್ಜನರಘದಹನ ದು ರ್ಜನರ ಕುಲರಾತಿ ಜನಾರ್ದನನೆ 21 ವೀಂದ್ರವಾಹನ ಮಹೇಂದ್ರಧಾರನೆ ಗ ಜೇಂದ್ರನ್ನ ಬಿಡಿಸಿ ನಕ್ಷೇಂದ್ರನ ಸೀಳಿ ನಾ ಗೇಂದ್ರ ಶಯನ ಗುಣಸಾಂದ್ರ ಗೋಕುಲ ಚಂದ್ರ ಇಂದ್ರಮಣಿ ನಿಭ ರಾಮಚಂದ್ರ ಉಪೇಂದ್ರಾ 22 ಹರಿ ಎನುತಾ ಹರಿ ಹರಿದು ಓಡಿ ಬರೆ ಹರಿದು ಪೋಗಿ ಪರಿಹರಿಸಿದ ಖಳನ ಹರಿ ಹರಿಯು ನಲಿವನೆ ಹರಿರೂಪ ಪರಿ ಹರಿನಾಮವೆ ಗತಿ ಹರಿ ಸರ್ವೋತ್ತಮಾ23 ಕೃಷ್ಣದ್ವಯಪಾಯನ ಉತ್ಕøಷ್ಟ ಮುನೇಶ ಕೃಷ್ಟಿಗೆ ಬಂದ ಕಷ್ಟ ಓಡಿಸಿದೆ ಕೃಷ್ಣವತ್ರ್ಮನೆ ಸಂತುಷ್ಟೀಲಿ ಸುಖಬಡುವ ಕೃಷ್ಣಾವತಾರ ಕೃಷ್ಣ ಕಮಲೇಶ 24 ನಿನ್ನ ಮಹಿಮೆಯನ್ನು ಬಣ್ಣಿಸಲಳವಿಲ್ಲ ನಿನ್ನೊಳಗೆ ನೀನು ಬೀಯ ಬೀಜವನು ಎನ್ನ ಪಾಲಿಸುವುದು ವಿಜಯವಿಠ್ಠಲ ಪ್ರಸನ್ನ ಭಕ್ತರ ವರದ ಬಾಲ ಗೋಪಾಲ ಜೋ ಜೋ 25
--------------
ವಿಜಯದಾಸ
ಜಿಜ್ಞಾಸುವಿನ ಲಕ್ಷಣಾ ಕೇಳು ನೀಕ್ಷಣಾ ಪರಮಸುಖಾಕಾಂಕ್ಷಕನಾ ಬಾಳಿನ ವಿಷಯದಿ ಬೇಸರಗೊಳು ತಾ ವಿರತಿಯಿಂದರುವಾ ಬೋಧ ಕೇಳ್ವನಿವಾ ಚಿತ್ತದಿ ಭಕ್ತಿಭಾವನಾ ತಾಳುತ ಸಾಧನಾ ಮಾಡುತಲಿಹನಿವ ಕಾಣಾ ಆತ್ಮಾನಾತ್ಮನಿವೇಕ ವಿಚಾರ ಕೇಳುತ ತನ್ನೊಳಗÉೀ ಮಿಥ್ಯಾರೊಪಿತ ಜೀವಭಾವನನಾ ಜರÉಯುತ ಮನದೊಳಗೇ ಮಾಡುವ ಸುವಿಚಾರಾ ಇವನೆ ಧೀರ ಪರಮಸುಖಕಾಂಕ್ಷಕನಾ ವಿಷಯದಿ ಹರಿಯುವ ಮನವÀನೆಳೆÀದು ಬೋಧದೊಳಗಿರುವಾ ಮೋದ ಹೊಂದುವ ತಾ ಶ್ರೀ ಗುರುಶಂಕರನಾ ಆನಂದರೂಪನಾಬೆರೆತು ನಾ ಸುಖಿಸುವನಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಜಿಹ್ವೆ ರಸವನುಂಬದೆ ತ್ವಕ್ಕಿಗೇನುಛಳಿ ಬಿಸಿಲ ಹದನೂ ಚನ್ನ 1ಕಾಲು ನಡೆಯದು ಕರವು ಪಿಡಿಯದಾಡದು ಮಾತನಾಲಗೆಯು ಉಳಿದವೆರಡೂತಾಳಲಾರವು ವಿಸರ್ಗಾನಂದ ಕೃತ್ಯವನುಜಾಳು ಪ್ರಾಣವದು ಕರಡುಗಾಳಿರೂಪಿನ ಪಾನವ್ಯಾನವು ಸಮಾನವೂಕೇಳುದಾನವದು ಬರಡೂಹಾಳೂರ ಕೊಳಕ್ಕೆ ಕಾಲ ನೀಡಿದ ತೆರದಿಬಾಳುವೀ ಜೀವ ಕುರುಡೂ ನೋಡು 2ಬರಿದೆ ವ್ಯವಹರಿಸಿದರೆ ಫಲವಿಲ್ಲ ನಿಮ್ಮೊಡನೆಸರಸಕೆ ರಸಜ್ಞರಲ್ಲಾಇರುವರೆಮ್ಮವರು ಮೂವರು ಬುದ್ಧ್ಯಹಂಕಾರನೆರೆ ಚಿತ್ರ ಸಂಜ್ಞರೆಲ್ಲಾಬರಿದೆಯಾಳೋಚಿಸುವನೊರ್ವ ಹೆಮ್ಮೆಯೊಳೊರ್ವನೆರೆಯೊಳಿಹನೊಬ್ಬ ಬಲ್ಲಾತಿರುಪತಿಯ ವೆಂಕಟನ ಚರಣವನು ಭಜಿಸುವರೆನೆರೆ ಜಾಣ ನಾನೆಯಲ್ಲದಿಲ್ಲಾ 3ಕಂ||ಮನ ನುಡಿಯಲಿಂದ್ರಿಯಂಗಳುಘನರೋಷದಿ ಜೀವ ತನುಗಳನು ನಿಲ್ಲೆನ್ನುತಮನವೆ ಬಾ ನಮ್ಮೊಳು ನುಡಿನಿವಗಧಿಕಾರವನು ಕೊಟ್ಟವವನಾವನಯ್ಯಾ
--------------
ತಿಮ್ಮಪ್ಪದಾಸರು
ಜೀವ ನಿಮ್ಮದೊ ಗುರು ಭಾವ ನಿಮ್ಮದೊ ಜೀವ ಭಾವದ ಶಿವಸೂತ್ರ ನಿಮ್ಮದೊ ಧ್ರುವ ಕಾಯ ಮಾಯ ನಿಮ್ಮದು ಅಂತ್ರ ಬಾಹ್ಯ ನಿಮ್ಮದು ನಿರ್ಮಿಸಿಹ್ಯ ಇದು ಉಪಾಯ ನಿಮ್ಮದು 1 ಪೃಥ್ವಿ ಅಪ್ಪು ನಿಮ್ಮದು ತೇಜ ತತ್ತ್ವ ನಿಮ್ಮದು ವಾಯುವಾಕಾಶವೆ ತಾ ತತ್ತ್ವನಿಮ್ಮದು 2 ಪ್ರಾಣವೇ ನಿಮ್ಮದು ಪಾನವೇ ನಿಮ್ಮದು ವ್ಯಾನ ಉದಾನ ಸಮಾನ ನಿಮ್ಮದು 3 ಅಂತಃಕರಣ ನಿಮ್ಮದು ಬುದ್ದಿಮನ ನಿಮ್ಮದು ಚಿತ್ತ ಚೈತನ್ಯ ಚೇತನ ನಿಮ್ಮದು 4 ನುಡಿನೋಟ ನಿಮ್ಮದು ಆಟಕೂಟ ನಿಮ್ಮದು ಕರ್ನ ಕೇಳಿಕೆಯಾಟವು ನಿಮ್ಮದು 5 ಸ್ಥೂಲ ಸೂಕ್ಷ್ಮ ನಿಮ್ಮದು ಕಾರಣವು ನಿಮ್ಮದು ಮಹಾ ಕಾರಣವು ಆನಂದ ನಿಮ್ಮದು6 ಜಾಗ್ರತೆ ನಿಮ್ಮದು ಶೀಘ್ರತಿ ನಿಮ್ಮದು ಪ್ರವೃತ್ತಿನಿವೃತ್ತಿ ಸುವ್ಯಕ್ತಿ ನಿಮ್ಮದು 7 ಸ್ವಪ್ನಾವಸ್ಥೆ ನಿಮ್ಮದು ಸುಷಪ್ತಿ ನಿಮ್ಮದು ಸರ್ವಾವಸ್ಥೆಗಳ ಲಕ್ಷಣ ನಿಮ್ಮದು 8 ಅರಹು ಮರಹು ನಿಮ್ಮದು ಖೂನ ಕುರಹು ನಿಮ್ಮದು ಸೂತ್ರ ನಿಮ್ಮದು 9 ಇಹಪರ ನಿಮ್ಮದು ಸಾಹ್ಯ ಸರ್ವ ನಿಮ್ಮದು ಗುಹ್ಯ ಗುರುತ ದೋರುವ ಸೋಹ್ಯ ನಿಮ್ಮದು 10 ಮಹಿಪತಿ ಜೀವ ನಿರ್ಮಿತ ಙÁ್ಞತಿ ನಿಮ್ಮದು ಸದ್ಗತಿಗೈಸುವ ಖ್ಯಾತಿ ನಿಮ್ಮದು 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜೀವನ ಶಟವಿ ಹೇಳುವೆ ಕೇಳುಜೀವನವೆಂಬುವ ಮಾತೇ ಶಟವಿದೇವ ಚಿದಾನಂದ ನೀನಿಹೆಶಟವಿ ಎಲೆ ಜೀವನ ಶಟವಿ ಪ ಒಗೆತನ ಶಟವಿ ಎಲೆ ಜೀವನ ಶಟವಿ 1 ಆರ ಸಂಗಡ ಜಗಳವು ಶಟವಿಆರನಾದರು ಅಣಕಿಪೆ ಶಟವಿಊರು ನನ್ನದೆಂಬ ಶಟವಿ ಎಲೆ ಜೀವನ ಶಟವಿ 2 ನನ್ನದು ನನ್ನದು ಎಂಬೆ ಶಟವಿನಿನ್ನ ತಂದೆಯು ಹೋದನೆ ಶಟವಿನನ್ನದೆನೆ ನಾಚಿಕೆ ಬಾರದು ಶಟವಿ ಜೀವನ ಶಟವಿ3 ಗುರು ಹಿರಿಯರ ನೀ ನಿಂದಿಪೆ ಶಟವಿಗುಣ ನಿನಗೇನೇನಿಲ್ಲವೊ ಶಟವಿಬರಿದೇ ಬಯಲಿಗೆ ಹಂಬಲಿಪೆ ಶಟವಿ ಎಲೆ ಜೀವನ ಶಟವಿ4 ಶರೀರವು ಸ್ಥಿರವಲ್ಲವು ಶಟವಿತೆರಳುವೆ ನೀನು ಬೆಳಗಿಗೆ ಶಟವಿತರಳನ ಆರ ಕೈಯಲಿಟ್ಟೆ ಶಟವಿ ಎಲೆ ಜೀವನ ಶಟವಿ 5 ನಿನ್ನ ಸಂಸಾರ ಸುಳ್ಳಿದು ಶಟವಿನೀರಲಿ ಅಕ್ಷರ ಬರದಂತೆ ಶಟವಿನಿನ್ನನು ಏನಂತ ಕಂಡಿಹೆ ಶಟವಿ ಎಲೆ ಜೀವನ ಶಟವಿ 6 ನಿನಗೆ ಅನಂತ ಜನ್ಮವು ಶಟವಿನೀನು ಹೆಣ್ಣು ಗಂಡಲ್ಲ ಶಟವಿನಿನಗೆ ಹೇಳಲು ಹೆಸರಿಲ್ಲ ಶಟವಿ ಎಲೆ ಜೀವನ ಶಟವಿ 7 ಪಾಪದ ವಿದ್ಯದ ಮೂಲದಿ ಶಟವಿರೂಪಿಗೆ ಬಂದಿಹೆ ನೀನೀಗ ಶಟವಿ ಆ ಪರಿಚಂದ್ರನು ಹೊಳೆದಂತೆ ಶಟವಿ ಎಲೆ ಜೀವನ ಶಟವಿ 8 ಭೂಪ ಚಿದಾನಂದನ ಹೊಂದೆಲೋ ಶಟವಿರೂಪು ವಿರೂಪು ಆಗುವಿ ಶಟವಿದೀಪದೊಳು ನಿಜದೀಪ ನೀ ಶಟವಿ ಎಲೆ ಜೀವನ ಶಟವಿ 9
--------------
ಚಿದಾನಂದ ಅವಧೂತರು
ಜೀವನ್ಮುಕ್ತನೆ ಇದ ಮಾಡು ನಿನಗುಂಟೆ ಜೋಡುದಿವಸದಿಂದಲಿ ದೃಢನಾಗಿ ಸಾಧಿಸುಕೇವಲ ಶಿವನೀನಾಗುವಿ ಆಗುವಿ ಪ ಏರಿಸು ವಾಯುವನು ಏರಿಸಿದ ಬಳಿಕಪೂರಿಸು ಕುಂಭವನು ಘಳಿಗಿಂತಿರಲಲ್ಲಿಭೇರಿಯ ಕಹಳಾರವ ಮೃದಂಗವಸಾರಿಯೆ ಕೇಳುತ ಶ್ರಮವನು ಹರಿಸುತ 1 ಆರು ನೆಲೆಗೆ ಮುಟ್ಟಿನಿಲ್ಲು ನಿಂತ ಬಳಿಕಕಾರಣ ಮೃಡನಾಳಪೊಕ್ಕು ಮರವೆಂದು ಕಳೆದಿಕ್ಕುವಾರಿಯಮೃತಧಾರೆ ತ್ರಿವೇಣಿಯಸಾರಸನದಿಯಲಿ ಮುಳುಗುತ ಮುಳುಗುತ 2 ಚಂದ್ರಮಂಡಲ ಎದುರಲಿ ಇರಲು ನೋಡುತಲಿಮುಂದೆ ಜೋತಿರ್ಮಯವಿರಲು ಬ್ರಹ್ಮವೆ ತಾನಿರಲುಇಂದ್ರಾದಿಗಳಿಗಳವಡದಿಹ ಸ್ಥಾನವಾನಂದದೆ ಎರೈ ಗುರು ಕೃಪೆಯಿಂದಲಿ 3 ಕರ್ಮ ಅವಿದ್ಯೆಯನುಳಿದುತಾಮರ ಸಾಧಿಪ ನಂದದಿ ಬೆಳಗುತ4 ನಿತ್ಯ ಆಗುವುದು ತಥ್ಯಾಯೋಗಿ ಜನಕೆ ಇದು ಪಥ್ಯಾ ಸತ್ಯವಿದು ಸತ್ಯಭೋಗೈಶ್ವರ್ಯದ ಮುಕ್ತಿಗಧಿಪತಿಯಾಗು ಚಿದಾನಂದ ಗುರು ನೀನಾಗಿಯೆ5
--------------
ಚಿದಾನಂದ ಅವಧೂತರು
ಜೋ ಜೋ ಜೋನಂತ ಸದ್ಗುಣಧಾಮಾ ಜೋ ಜೋ ಜೋ ಯದುವಂಶಲಲಾಮ ಜೋ ಜೋ ಸಕಲ ಮಲಾಪಹ ನಾಮ ಜೋ ಜೋ ಸಮಾಲಿಂಗಿಹ ಸತ್ಯಧಾಮ ಪ. ನಿಗಮತತಿಗಳೆಲ್ಲ ಪೊಗಳುತ್ತಲಿಹನ ನಗಚಾಪ ಪಿತನನ್ನು ನಗುತ ಪೆತ್ತವನ ಸ್ವಗತ ಭೇದಶೂನ್ಯ ಖಗಪ ವಾಹನನ ಮಗುವೆಂದು ಕೂಗುವ ಮಾರಜನಕನ 1 ಮೂರು ಗುಣಂಗಳ ಮೀರಿದ ಸಿರಿನಲ್ಲ ಚೋರತನದಿ ಬೆಣ್ಣೆ ಮೆಲುವರೆ ಬಲ್ಲ ಈರೇಳು ಭುವನವ ಮೂರಡಿ ಮಾಡಿದ ಧೀರಗೆ ತಕ್ಕ ತೊಟ್ಟಿಲ ಕಾಣೆನಲ್ಲ 2 ಜಾಗ್ರತ್ಸ್ವಪ್ನ ಸುಷುಪ್ತಿ ಭಾವಗಳು ಭೋಗಿ ಶಯನತ್ವದಧೀನವಾಗಿರಲು ವಾಗೀಶವಾಯುಗಳರ್ಚಿಪ ನಿನ್ನನು ತೂಗುವ ರಾಗವ್ಯಾವದೊ ಪೇಳೊ ರನ್ನ 3 ಆದರು ಕಲುಷಾವನೋದನ ನಿನ್ನಯ ಪಾದಕಮಲಗಳ ಪೊಗಳಿ ಪಾಡುವರ ಕಾದುಕೊಳ್ಳುವೆನೆಂಬ ವೇದ ಸಾರವನ್ನು ನೀ ದಯ ಮಾಡಿದರೋದುವೆನಿದನು 4 ನೀರೊಳಗಾಡಬ್ಯಾಡೆಂದರೆ ಕೇಳದೆ ಮಂದರ ಪೊತ್ತು ಬೇರನೆ ಕಿತ್ತಿ ಘೋರ ದೈತ್ಯನ ಸೀಳಿ ತೋರಿ ವಾಮನ ಮೂರ್ತಿ ಧಾರುಣೀಶರ ಕೊಂದ ಧೀರ ರಾಘವನೆ 5 ಚಿಕ್ಕತನದಿ ಬಹು ರಕ್ಕಸ ಕುಲವ ಧಿಕ್ಕರಿಸುತ ಕೈಗೆ ಸಿಕ್ಕದೆ ಓಡಿ ಮಕ್ಕಳಾಟಿಕೆಯಿಂದ ಫಕ್ಕನೆ ಮಾವನ ಸೊಕ್ಕ ಮುರಿದು ನೆಲ ತಿಕ್ಕಿದ ಹರಿಯೆ 6 ಘೋರ ಜರಾಸಂಧ ಸಾಲ್ವೈಕಲವ್ಯರ ಗಾರಗೆಡಿಸಿ ದ್ವಾರಕಾ ಪುರ ರಚಿಸಿ ಕೌರವನೊಶದಲಿ ಸೇರಿದ ಧರಣಿಯ ಮಾರುತಿಯಲಿ ಪ್ರೇಮದೋರಿ ಪಾಲಿಸಿರಿ 7 ಎರಡು ಹೆಂಗಳನಾಳುವುದೆ ಬಹು ಘೋರ ಎರಡೆಂಟು ಸಾವಿರ ಮತ್ತೆಂಟು ನೂರ ನೆರಹಿಕೊಂಡರೆ ನಿನಗಾಗದೆ ಭಾರ ಪರಮಾತ್ಮ ನಿನಗಿದು ಲೀಲಾವತಾರ 8 ಬತ್ತಲೆ ತಿರುಗಿದರಾಗದೆ ದೃಷ್ಟಿ ಕರವಾಳ ಮುಷ್ಟಿ ಸುತ್ತ ತಿರುಹಿ ಪಾಪಿಗಳ ಕೊಂದ ಜಟ್ಟಿಯ ನಿತ್ಯ ನಂಬಿದಪರಿಗಾನಂದ ಪುಷ್ಟಿ 9 ಅಣುಗಳಿಗೆ ಪರಮಾಣುವಾಗಿ ನಿಲುವಿ ಘನಕಿಂತ ಘನವಾಗಿದನುಜರ ಕೊಲುವಿ ಕನಡಿಲಿ ಪ್ರತಿಫಲಿಸುವ ವೋಲಿರುವಿ ಕನಲುತ ಭಕ್ತರು ನೆನೆವಲ್ಲಿ ಒಲಿವಿ 10 ಜೋಗಿ ಜನರ ಸಹವಾಸ ಬೇಡೆಂದರೆ ಪೋಗಿ ಪೋಗಿ ಅವರ ಮನದೊಳಗಿರುವಿ ಶ್ರೀ ಗುರು ಮಧ್ವಮುನಿಯ ಮೇಲೆ ಕರುಣದಿ ಸಾಗಿ ಬಂದಿರುವೀಗ ರೌಪ್ಯ ಪೀಠದಲಿ 11 ಶೃಂಗಾರ ವಾರುಧಿ ಶ್ರೀ ಕೃಷ್ಣಜೀಯ ಮಂಗಳ ದೇವಿಯ ಮೋಹಿಪಕಾಯ ಗಂಗೆಯ ಪಡದಂಗುಷ್ಠವನಿಟ್ಟಪಾಯ ರಂಗನಾಥ ಶ್ರೀ ವೆಂಕಟರಾಯ 12
--------------
ತುಪಾಕಿ ವೆಂಕಟರಮಣಾಚಾರ್ಯ
ಜೋ ಜೋ ಶ್ರೀಹರಿ ಮಲಗೊ ಜೋಗುಳ ಪಾಡಿ ಪಾಡಿ ತೂಗುವೆ ಮುದದಿಪ ಯೋಗಿಗಳರಸನೆ ಸಾಗರಶಯನನೆ ಭಾಗವತರಪ್ರಿಯ ಬಾಗಿ ಸ್ತುತಿಪರೊ ನಿನ್ನ ಅ.ಪ ಹರ ಬ್ರಹ್ಮಾದಿಗಳು ಕೂಡಿ ನಿನ್ನನು ಪರಿಪರಿ ವಿಧದಲಿ ಕೊಂಡಾಡಿ ಸುರರು ಗಂಧರ್ವರು ವರಋಷಿಗಳು ಕೂಡಿ ಪರಮ ಸಂಭ್ರಮದಿಂದ ಹರಿ ನಿನ್ನ ಸ್ತುತಿಪರು 1 ಗೋಕುಲದ ನಾರಿಯರು ಗೋವಿಂದ ನಿನಗೆ ಬೇಕಾದ ಪಾಲ್ಮೊಸರು ಜೋಕೆಯಿಂದಲಿ ಹೊಸ ಬೆಣ್ಣೆ ತಂದಿಹೆವೆಂದು ಅ- ನೇಕ ಬಗೆಯಲಿ ಸ್ತುತಿ ಮಾಡಿ ಬೇಡುತಲಿರುವರು 2 ದಿಟ್ಟ ಗೋಪಾಲ ಕಯ್ಯೊಳಗೊಂದು ಪುಟ್ಟ ಬಚ್ಚೆಯ ಪಿಡಿದು ಅಚ್ಚುತ ನಿನಗೀವೆವೆಂದು ಬಾಗಿಲೋಳ್ ನಿಂದು ಪುಟ್ಟ ಮಕ್ಕಳು ಬಾಯಿಬಿಟ್ಟು ಪ್ರಾರ್ಥಿಸುವರು 3 ಇನಕೋಟಿ ಪ್ರಭೆ ನಾಚಿಪ ಮುಖ ಕಮಲದ ದನುಜದಲ್ಲಣ ನಿನ್ನನು ಸನಕಾದಿಗಳು ಸ್ತುತಿಮಾಡಿ ಮೈ ಮರೆತರೊ ವನಿತೆಯರೋಕುಳಿಗಳನಾಡಿ ನರ್ತಿಸುವರೊ 4 ನಿದ್ರೆ ಮಾಡಿದರೆ ನೀನು ಈ ಜಗವೆಲ್ಲ ಉದ್ಧಾರವಾಗುವುದೇನು ನಿದ್ರೆ ಸಾಕೇಳೆಂದು ದುರ್ಗಾದೇವಿಯರು ಸ್ತುತಿಸೆ ಮುದ್ದು ಕೃಷ್ಣನೆ ಭಕ್ತರುದ್ಧಾರಕರ್ತನೆ5 ಹಯ ಮುಖ ಹರಿ ಮತ್ಸ್ಯನೆ ಕೂರ್ಮನೆ ವರಹ ಹಯಗ್ರೀವ ನರಸಿಂಹನೆ ಜಯವಟು ಭೃಗು ರಾಮಕೃಷ್ಣ ಬುದ್ಧನÉ ಕಲ್ಕಿ ಜಯ ನಾನಾ ರೂಪನÉ ಜಯವೆಂದು ಪೊಗಳ್ವರೊ6 ನವನೀತ ಚೋರನೆಂದು ನಾರಿಯರೆಲ್ಲ ನವವಿಧ ನುಡಿ ನುಡಿವರೊ ಭುವನ ಮೋಹನಸ್ವಾಮಿ ಸುಮನಸ ವಂದ್ಯನೆಕವಿ ಜನರಪ್ರಿಯ ಶ್ರೀ ಕಮಲನಾಭ ವಿಠ್ಠಲ 7
--------------
ನಿಡಗುರುಕಿ ಜೀವೂಬಾಯಿ