ಒಟ್ಟು 1057 ಕಡೆಗಳಲ್ಲಿ , 94 ದಾಸರು , 835 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಂದೆ ಪುರಂದರದಾಸರ ಸ್ಮರಿಸುವೆ ಎನ್ನಮಂದಮತಿಗಳೆದು ಹರಿಭಟನೆನಿಸುವೆ ಪ.ಗುರುವ್ಯಾಸರಾಜರ ಚರಣಾಬ್ಜ ಷಟ್ಚರಣನವಿರತಿಭಕುತಿ ಜ್ಞಾನದಾರ್ಣವನವರಉಪನಿಷದ್ವಾರಿನಿಧಿಗೆ ತಿಮಿಂಗಿಲನಹನಧರೆಯ ಕವಿಕುಲ ಶಿಖಾಮಣಿಯೆನಿಪನ 1ದಿನ ದಿನ ಯದೃಚ್ಛಾರ್ಥಲಾಭದಲಿ ತುಷ್ಟನಕನಕಲೋಷ್ಠ ಸಮಾನದೀಕ್ಷಿಸುವನಘನಸಿದ್ಧಿಗಳು ತಾವೆ ಬರಲೊಡಂಬಡದನಹರಿಗುಣಕೀರ್ತನೆಯಲ್ಲಿ ಪರವಶದಿಹನ2ಭವಜಲಧಿ ಗೋಷ್ಪದಕೆ ಸರಿದಾಟಿ ಕಾಮ ಕ್ರೋಧವಮೆಟ್ಟಿ ಭಕ್ತಿಸುಧೆಯುಂಡು ತೇಗಿಭುವಿಯಲ್ಲಿ ನಿಜಕೀರ್ತಿಯನು ಹರಹಿ ಪವನಮತದವರೆನಿಪ ದಾಸರಿಗೆ ತವರೂಪ ತೋರಿದನ 3ಕವನೋಕ್ತಿ ಮಳೆಗರೆದು ಹರಿದಾಸ ಪೈರ್ಗಳಿಗೆಅವಿರಳಾನಂದವಿತ್ತಥಿರ್üಸುವನನವಭಕುತಿ ಮನಗಂಡು ಸವೆಯದಾನಂದಪುರ ಪಥವನು ತೋರಿಸಿದಂಥ ಬಹುಕೃಪಾಕರನ 4ಗೀತ ಠಾಯಿ ಸುಳಾದ್ಯುಗಾಭೋಗ ಪದ್ಯಪದವ್ರಾತಪ್ರಬಂಧ ರಚಿಸಿ ವಿಠಲನಪ್ರೀತಿ ಬಡಿಸಿ ಕಂಡು ನಲಿವ ವೈಷ್ಣವಾಗ್ರನಾಥ ಪ್ರಸನ್ವೆಂಕಟ ಕೃಷ್ಣಪ್ರಿಯನ 5
--------------
ಪ್ರಸನ್ನವೆಂಕಟದಾಸರು
ತನಗಲ್ಲದಾ ವಸ್ತು ಎಲ್ಲಿದ್ದರೇನುಮನಕೆ ಬಾರದ ಹೆಣ್ಣು ಮತ್ತೆ ಬಂದರೆ ಏನು ? ಪ.ಆದರಣೆಯಿಲ್ಲದೂಟ ಅಮೃತಾನ್ನವಾದರೇನುವಾದಿಸುವಸತಿ - ಸುತರಿದ್ದು ಫಲವೇನು ?ಕ್ರೋಧ ಬಳೆಸುವ ಸಹೋದರರು ಇದ್ದರೇನುಮಾದಿಗರ ಮನೆಯೊಳೆ ಮದುವೆಯಾದರೇನು ? 1ನಾಲಿಗಿಲ್ಲದ ಪÀದವು ಸಂಚಿತುಂಬ ಇದ್ದರೇನುದೇವಾಂಕಿತವಿಲ್ಲದ ಕವಿತ್ವವೇನು ?ಹೇಮವಿಲ್ಲದ ಹೆಣ್ಣು ಹೆಚ್ಚು ಬಾಳಿದರೇನುಹಾವಿನ ಘಣಿಯೊಳಗೆ ಹಣವಿದ್ದರೇನು ? 2ಸನ್ಮಾನವಿಲ್ಲದೆ ದೊರೆ ಸಾವಿರಾರು ಕೊಟ್ಟರೆ ಏನುತನ್ನ ತಾನರಿಯದ ಜ್ಞಾನವೇನು ?ಎನ್ನುತ ಪುರಂದರವಿಠಲನ ನೆನೆಯದವಸಂನ್ಯಾಸಿಯಾದರೇನು ಪಂಡಿತನಾದರೇನು ? 3
--------------
ಪುರಂದರದಾಸರು
ತನುವಿನೊಳಗೆ ಅನುದಿನವಿದ್ದುಎನಗೊಂದು ಮಾತ ಪೇಳದೆ ಪೋದೆ ಹಂಸಾ ಪ.ಜಾಳಾಂದ್ರವೆಂಬದು ಒಂಬತ್ತು ಬಾಗಿಲ ಮನೆರೂವಾರವೆಂಬ ಒಂಬತ್ತು ಬಾಗಿಲ ದಾಟಿಗಾಳಿ ತಂಪಿನೊಳಿದ್ದು ತಾನು ಹಾರಿ ಪೋಪಾಗಕಾಯಕೆ ಹೇಳದೆ ಹೋಯಿತು ಒಂದು ಮಾತ 1ಹಳ್ಳ ಕೊಳ್ಳಗಳಲಿ ತಂಪಿನ ತಡಿಯಲಿಬಳ್ಳಿ ಕಾಯಿಕಾತು ಫಲವಾಯಿತುಒಳ್ಳೆಯ ತನಿಹಣ್ಣು ಉದುರಿ ತಾ ಪೋಪಾಗಬಳ್ಳಿಗೆ ಹೇಳದೆ ಹೋಯಿತು ಒಂದು ಮಾತ 2ಗಟ್ಟಿ - ಬೆಟ್ಟಗಳಲಿ ಶಾಖೆಯ ತುದಿಯಲಿಕಟ್ಟಿತು ಜೇನನು ಸುಖಕಾಗಿಗಟ್ಟಿ ತುಪ್ಪವನುಂಡು ನೊಣ ಹಾರಿ ಪೋಪಾಗಹಿಪ್ಪೆಗೆ ಹೇಳದೆ ಹೋಯಿತು ಒಂದು ಮಾತ 3ರವಿವಿಸ್ತಾರವ ಹಂಸ ಕೇಳಿದನೈ ನಿನ್ನಪೆಸರ ಪೇಳಲೆನ್ನಳವಲ್ಲರಸ ವಸ್ತುವನುಂಡು ಜ್ಯೋತಿ ತಾ ಪೋಪಾಗಪಣತಿಗೆ ಪೇಳದೆ ಹೋಯಿತು ಒಂದು ಮಾತು 4ಸಿರಿಪುರಂದರ ವಿಠಲನ ಮಾತು ಪುಸಿಯಲ್ಲಹಣೆಯ ಬರೆಹವ ಮೀರಲು ಬಲ್ಲುದೆ ?ಸರಸವನಾಣೆಯ ಮುತ್ತು ಆಗಲಿ ತಾ ಪೋಪಾಗತಿಪ್ಪಿಗೆ ಪೇಳಿದಾಯಿತು ಒಂದು ಮಾತ 5
--------------
ಪುರಂದರದಾಸರು
ತಪ್ಪುಗಳನೆಲ್ಲ ನೀನೊಪ್ಪಿಕೊಳ್ಳೊ - ನ-|ಮ್ಮಪ್ಪ ಕಾಯಬೇಕುತಿಮ್ಮಪ್ಪನೀನೆಪಸತಿ-ಸುತ ಸಂಸಾರಗಳಿಗೆ |ಮತಿ ಹೀನನಾದೆನು ವ್ಯರ್ಥ ||ಮಿತಿಗಾಣೆನಯ್ಯ ಎನ್ನ ಪಾಪಗಳಿಗೆ |ಗತಿಯದಾವುದು ಪೇಳೊ ಮುಂದೆನಗೆ 1ಬಿಸಿಲು ಬಿರುಮಳೆ ಗಾಳಿಯೊಳಗೆ-ಬಲು-|ದೆಸೆಗೆಟ್ಟು ದೇವ ತಿರುಗಿದೆ ||ಹಸಿವು-ತೃಷೆಗಳು ಬಹು ಬಾಧಿಸಲು |ಹುಸಿಯಾಡಿದೆನಯ್ಯ ಹುಟ್ಟು ಮೊದಲು 2ಸ್ನಾನ-ಸಂಧ್ಯಾವಂದನವರಿಯೆ-ನಾನಾ-|ದಾನ-ಧರ್ಮದ ಗುರುತುಗಳಿಯೆ ||ಹೀನಜನರ ಸಂಗವ ಮರೆಯೆ-ಸು-|ಙ್ಞÕನಿಗಳನು ಬಾಯೆಂದು ಕರೆಯೆ 3ಗಂಗೆ ಅಗ್ರೋದಕಗಳ ತಂದು - ನಾ-|ಮಂಗಳಮಜ್ಜನಮಾಡಲಿಲ್ಲವೆಂದೂ ||ಹೊಂಗೇದಗೆ ಪುಷ್ಪವನೊಂದು ಶ್ರೀ-|ರಂಗಗರ್ಪಿಸಲಿಲ್ಲ ಕಾಯೊ ಬಂದು 4ಪೀತಾಂಬರದಿ ವಸ್ತ್ರಗಳಿಂದ -ದಿವ್ಯ-|ನೂತನವಾದ ಆಭರಣದಿಂದ ||ಪ್ರೀತಿಪಡಿಸಲಿಲ್ಲಾದರದಿಂದ-ಹೇ-|ಸೀತಾಪತೆ ಕೃಷ್ಣ ಹರಿಮುಕುಂದ 5ಗಂಧಾಕ್ಷತೆ ಪುಷ್ಪಗಳಿಂದ -ಬರಿ-|ಒಂದುದಳಶ್ರೀ ತುಳಸಿಯಿಂದ ||ಇಂದಿರೇಶನ ಅರ್ಚಿಸದರಿಂದ -ಬಹು-|ನೊಂದು ದೂರಾದೆ ಸದ್ಗತಿಯಿಂದ 6ಏಕಾರತಿ ದೂಪಾರತಿಯ -ಎಂದು-|ಶ್ರೀಕಾಂತ ನಿನಗೆ ನಾ ಮಾಡಲಿಲ್ಲ ||ವ್ಯಾಕುಲದಲಿ ಹೋಯಿತು ಹೊತ್ತು -ಬಂದು-|ನೀ ಕರುಣಿಸು ಲಕ್ಷ್ಮೀರಮಣ 7ಪಾಯಸ ಪಂಚಭಕ್ಷ್ಯಗಳಿಂದ -ಬಲು-|ಆಯತವಾದ ಶಾಕಗಳಿಂದ ||ತೋಯೆ ಶಾಲ್ಯನ್ನ ಸದ್ಘøತದಿಂದ -ಶ್ರೀ-|ಮಾಯಾಪತಿಗೆ ಅರ್ಪಿಸಲಿಲ್ಲ 8ಮಂಗಳಾರತಿಯ ನಾ ಮಾಡಲಿಲ್ಲ-ಜಯ-|ಮಂಗಳವೆನ್ನುತ ಪಾಡಲಿಲ್ಲ ||ಕಂಗಳ ನೋಟದಿ ನೋಡಲಿಲ್ಲ -ನರ-|ಸಿಂಗನೀ ಬಾಯೆಂದು ಕರೆಯಲಿಲ್ಲ9ಹರಿಯ ಪಾದಕೆ ಬಿದ್ದವನಲ್ಲ -ನರ-|ಹರಿಗೆ ಪ್ರದಕ್ಷಿಣೆ ಮಾಡಲಿಲ್ಲ ||ಹರಿದಿನದುಪವಾಸ ವ್ರತವು ಇಲ್ಲ -ಬಲು-|ಹರಿಯ ದಾಸರ ಸಂಗ ಎನಗಿಲ್ಲ 10ಹೋಮಾರ್ಚನೆ ಔಪಾಸನವೆಲ್ಲ |ನೇಮದಿಂದಲಿ ನಾ ಮಾಡಲಿಲ್ಲ ||ಕಾಮಾತುರನಾಗಿ ಕಂಡಕಂಡ ಕಡೆ |ಸ್ವಾಮಿಯ ಕಾಣದೆ ತಿರುಗಿದೆನೊ 11ಅತಿಥಿಗಳ್ ಬಂದರೆ ಮನೆಗೆ -ಅಂದೆ-|ಗತಿಯಿಲ್ಲವಯ್ಯ ಕೊಡುವುದಕೆ ||ಯತಿಯ ಕಂಡರೆ ನಿಂದಿಸಿದೆ-ಶ್ರೀ-|ರತಿಪತಿ ಪಿತ ನೀ ದಯ ಮಾಡೊ 12ಎಷ್ಟು ಹೇಳಲಿ ಎನ್ನವಗುಣವ -ಅವು-|ಅಷ್ಟು ಇಷ್ಟೆಂದು ಎಣಿಕೆಯಿಲ್ಲ ||ದೃಷ್ಟಿಯಿಂದ ನೋಡಿ ದಯ ಮಾಡೊ -ಶ್ರೀ-|ಬೆಟ್ಟದ ವೆಂಕಟ ಪುರಂದರವಿಠಲ 13
--------------
ಪುರಂದರದಾಸರು
ತಾರಕತಾರಕತಾರಕತಾರಕವೆಂಬತವನಿಧಿಯನು ತಪಿಸುತಲಿದೆ ನೋಡಾಪಮುಗಿಲಾಕಾರದಿ ಮೋಹರಿಸುತಲಿಹ ಮಿಂಚುಗಳನೆಭುಗಿಲು ಭುಗಿಲು ಎನಿಸುವ ಕಳೆಗಳಬುದು ಬದಗಳ ನೋಡ1ಥಳಕು ಥಳಕು ಥಳಥಳನೆಂದೆಂಬ ಥರಗಳನದ ನೋಡಬೆಳಕುಗಳಹ ಬಲು ಬೆಳಗನೆ ಬೆಳಗುವ ಭೇದಗಳನೆ ನೊಡ2ತೋರುತಡುಗುವ ತೋರು ಕಿಡಿಗಳ ಕೋಟಿಗಳನೆ ನೋಡಮೀರಿಯೆ ಮಿಣಿ ಮಿಣಿ ಮಿಣಿಕಿಪ ವಿಸರದ ಮಿಶ್ರಿಗಳನೆ ನೋಡ3ಝಣಝಣರೆಂಬ ಝಾಗಟೆ ಮೊಳಗಿನ ಝೇಂಕಾರವ ನೋಡಎಣಿಸಲು ಬಾರದ ಎಡೆದೆರಪಿಲ್ಲದ ಏಕಾರವ ನೋಡ4ಸಾಗರ ಸುಖವನು ಸವಿಸವಿದುಣ್ಣುವ ಸಾಕಾರವೇ ನೋಡಯೋಗಿಎನಿಪ ಚಿದಾನಂದನೊಲಿದ ಯೋಗಿಗೆ ಇದು ನೋಡ5
--------------
ಚಿದಾನಂದ ಅವಧೂತರು
ತಾರಮ್ಮಯ್ಯ-ಯದುಕುಲ-ವಾರಿಧಿಚಂದ್ರಮನಪಮಾರಜನಕನ-ಮೋಹನಾಂಗನ-|ಸೇರಿ ಸುಖಿಸೆ ಹಾರೈಸಿ ಬಂದೆವು ಅ.ಪಬಿಲ್ಲು ಹಬ್ಬಗಳಂತೆ_ಅಲ್ಲಿ ಬೀದಿ ಶೃಂಗಾರವಂತೆ ||ಮಲ್ಲಕಾಳಗೆ ಮದ್ದಾನೆಗಳಂತೆ |ಫುಲ್ಲಾಕ್ಷನು ತಾನಲ್ಲಿಗೆ ತೆರಳಿದ 1ಮಧುರಾಪುರವಂತೆ-ಅಲ್ಲಿ-ಮಾವ ಕಂಸನಂತೆ ||ಒದಗಿದ ಮದಗಜತುರಗಸಾಲಿನಲಿ |ಮದನಮೋಹನ ಕೃಷ್ಣ ಮಧುರೆಗೆ ತೆರಳಿದ 2ಅತ್ತೆ ಮಾವನ ಬಿಟ್ಟು-ಬಂದೆವು ಹಿತ್ತಲ ಬಾಗಿಲಿಂದ ||ಭಕ್ತವತ್ಸಲನ ಬಹು ನಂಬಿದ್ದೆವು |ಉತ್ಸಾಹ ಭಂಗವ ಮಾಡಿದನಮ್ಮ 3ರಂಗನ ನೆರೆನಂಬಿ-ಬಂದೆವು-ಸಂಗ ಸುಖವ ಬಯಸಿ ||ಭಂಗಿಸಿ ನಮ್ಮನು ಹಾಗೆ ಪೋದನಮ್ಮ |ಮಂಗಳ ಮೂರುತಿಮದನಗೋಪಾಲನು4ಶೇಷಗಿರಿಯ ಮೇಲೆ-ಹರಿ ತಾ-ವಾಸವಾಗಿಹ ಕಾಣೆ ||ಸಾಸಿರನಾಮದ ಒಡೆಯನೆಂದೆನಿಸಿದ |ಶ್ರೀ ಪುರಂದರವಿಠಲರಾಯನ 5
--------------
ಪುರಂದರದಾಸರು
ತು0ಟನಿವನು ಕಾಣಮ್ಮ ಗೋಪಾಲನು|ಉಂಟೋ ಇಲ್ಲವೊ ಕೇಳಮ್ಮ ಪಎಂತೆರಡು ಸಾವಿರ ನಂತರ ಹೆಂಗಳತುಂಟು ಮಾಡಿ ರವಿಕೆಗಂಟು ಬಿಚ್ಚಿ ನಿಂತ ಅ.ಪಹಸಿರು ಪಟ್ಟೆಯನು ಉಟ್ಟು - ನಮ್ಮನೆ ಹೆಣ್ಣು|ಮೊಸರು ಕಡೆಯುತಿರಲು||ನಸುನಗುತಲಿ ಬಂದುಕುಸುಮಮಲ್ಲಿಗೆ ಮುಡಿಸಿ|ಬಸಿರುಮಾಡಿದನೆಂಥ ಹಸುಳನೆಗೋಪಿ||1ಮುದ್ದುನಾರಿಯರು ಕೂಡಿ-ನಮ್ಮನೆಯಲಿ|ಉದ್ದಿನ ವಡೆಯ ಮಾಡಲು||ಸದ್ದು ಮಾಡದೆ ಎಂದು ಎದ್ದೆದ್ದು ನೋಡುತ|ಇದ್ದ ವಡೆಯನೆಲ್ಲ ಕದ್ದು ಮೆದ್ದೋಡಿದ 2ಗೊಲ್ಲ ಬಾಲಕರ ಕೂಡಿ-ಮನೆಯಲಿದ್ದ |ಎಲ್ಲ ಬೆಣ್ಣೆಯ ಮೆಲ್ಲಲು ||ಗುಲ್ಲು ಮಾಡದೆ ನಾವು ಎಲ್ಲರು ಒಂದಾಗಿ |ತಳ್ಳ ಹೋದರೆ ನಮಗೆ ಬೆಲ್ಲವ ತೋರಿದ 3ಹೊತ್ತು ಮುಳುಗುವ ಸಮಯದಿ-ನಮ್ಮನೆ ಹೆಣ್ಣು |ಹತ್ತಿ ಹೊಸೆಯುತಿರಲು |ಮುತ್ತು ಹವಳ ಸರ ಕತ್ತಿಗೆ ಹಾಕಿ ಸೀರೆ |ಎತ್ತಿ ನೋಡಿದನು ತಾ ಬತ್ತಲೆ ನಿಂತ 4ತಿಲಕ ಕತ್ತುರಿಯನಿಟ್ಟು-ನಮ್ಮನೆ ಹೆಣ್ಣು |ಗಿಲುಕು ಮಂಚದಲಿರಲು ||ತಿಲಕ ತಿದ್ದುತ ಕುಚಕಲಶ ಪಿಡಿದು ತನ್ನ |ಕೆಲಸವ ತೀರಿಸಿದ ಪುರಂದರವಿಠಲ 5
--------------
ಪುರಂದರದಾಸರು
ತೊರವೆಪುರನಿವಾಸ ನರಸಿಂಹ ನೀಹೊರೆಯೊ ಭಕ್ತರ ಭಯಗಜಸಿಂಹಅರಿವರಾರಯ್ಯ ನಿನ್ನ ಮಹಿಮೆಯಸರಸಿಜಭವಭವಸುರವರಅಹಿಕಿನ್ನರವರಮುನಿವರ ನರವರವಂದ್ಯಪ.ಹಿರಣ್ಯಕನೆಂಬ ದೈತ್ಯ ಮಹೀತಳದಿವಿಧಿಹರವರದಲಿ ಬಲುಸೊಕ್ಕಿ ಅಂದುಪರಮಭಾಗವತಪ್ರಹ್ಲಾದನಿಗೆಪರಿಪರಿದುರಿತವ ಮರಳಿ ಮರಳಿ ಭಯಂಕರವನು ಚರಿಸಲು ನೆರೆಮೊರೆಯಿಡಲು 1ತರಳಗಂಜಿಸಿ ನಿನ್ನ ದೊರೆಯ ತೋರೊ ಎನಲುಸರವಭೂತ ಭರಿತಾನಂತನೀಗಅರಸಿದರೀ ಕಂಬದೊಳಿಹನೆನಲುಮೊರೆ ಮೊರೆದೇಳುತ ಸರಸರನೊದೆಯಲುಬೆರಬೆರ ದೋಷದಿ ವರನರಹರಿಯೆ 2ಚಿಟಿಲು ಚಿಟಿಲು ಭುಗಿಭುಗಿಲೆನುತ ಪ್ರಕಟಿಸಿ ದೈತ್ಯನುದರವನು ಸೀಳಿತ್ರುಟಿಯೊಳು ಕರುಳಮಾಲೆಯ ಧರಿಸಿಶಠನ ವಧಿಸಿ ನಿಜಭಟನ ಪೊರೆದ ಜಗಜಠರಪ್ರಸನ್ನವೆಂಕಟ ನರಸಿಂಹ3
--------------
ಪ್ರಸನ್ನವೆಂಕಟದಾಸರು
ತ್ರಿಜಗದ್ವಾ ್ಯಪಕಹರಿಎನುವರು ಸುಜನರುನಿಜದಲಿ ಪೇಳಿವದಾರಕ್ಕಾಅಜಭವಾದಿಗಳಿಗರಸನಾದಹದಿನಾಲ್ಕು ಲೋಕಕೆ ದೊರೆ ತಂಗಿ 1ನೀರೊಳು ಮುಳುಗುತ ಮೀನರೂಪದಿಸಾರುವ ಮಯ್ಯವದಾರಕ್ಕನೀರೊಳು ಮುಳುಗಿ ವೇದವ ತಂದು ಸುತಗಿತ್ತಧೀರ ಮತ್ಸ್ಯಮೂರುತಿ ತಂಗಿ 2ಭಾರಬೆನ್ನಿಲಿ ಪೊತ್ತು ಮೋರೆ ಕೆಳಗೆ ಮಾಡಿನೀರೊಳು ವಾಸಿಪದಾರಕ್ಕವಾರಿಧಿಮಥಿಸಿದಮೃತ ಸುರರಿಗೆ ಇತ್ತಧೀರಕೂರ್ಮಮೂರುತಿ ತಂಗಿ3ಕೋರೆದಾಡಿಯಲಿ ಧಾರುಣಿ ನೆಗಹಿದಫೋರನೆನುವರಿವದಾರಕ್ಕಕ್ರೂರ ಹಿರಣ್ಯಾಕ್ಷನ ಕೊಂದು ಭೂಮಿಯ ತಂದಶೂರ ವರಹ ಮೂರುತಿ ತಂಗಿ 4ಕ್ರೂರರೂಪತಾಳುತ ಕರುಳ್ವನಮಾಲೆ ಹಾಕಿದವದಾರಕ್ಕಪೋರನ ಸಲಹಲು ಕಂಬದಿಂದುಸಿದನಾರಸಿಂಹ ಮೂರುತಿ ತಂಗಿ 5ಮೂರಡಿ ಭೂಮಿಯ ದಾನವ ಬೇಡಿದಹಾರ್ವನೆನುವನಿವದಾರಕ್ಕಧೀರ ಬಲಿಯ ಭಕ್ತಿಗೆ ಮೆಚ್ಚಿ ಬಾಗಿಲು ಕಾಯ್ದವಾಮನ ಮೂರುತಿ ಇವ ತಂಗಿ 6ಮೂರು ಏಳುಬಾರಿಧಾರುಣಿ ಚರಿಸಿದಶೂರನೆನುವರಿವದಾರಕ್ಕವೀರ ಕ್ಷತ್ರಿಯರ ಮದವನಡಗಿಸಿದ ಪರಶು-ರಾಮ ಮೂರುತಿ ತಂಗಿ 7ಕೋತಿಗಳೊಡನಾಡಿ ಸೇತುವೆ ಕಟ್ಟಿದ ಪ್ರ-ಖ್ಯಾತನೆನುವರಿವದಾರಕ್ಕಮಾತರಿಶ್ವನಿಗೆ ಒಲಿದಂಥ ದಶರಥರಾಮ ಚಂದ್ರ ಮೂರುತಿ ತಂಗಿ 8ಗೋಕುಲದೊಳು ಪಾಲ್ಬೆಣ್ಣೆ ಮೊಸರುನವನೀತಚೋರನಿವದಾರಕ್ಕಲೋಕಗಳೆಲ್ಲಾ ತಾಯಿಗೆ ಬಾಯೊಳುತೋರ್ದಗೋಪಾಲಕೃಷ್ಣ ಮೂರುತಿ ತಂಗಿ 9ತ್ರಿಪುರರ ಸತಿಯರ ವ್ರತಗಳನಳಿದನುಗುಪಿತನೆನುವರಿವದಾರಕ್ಕಕಪಟನಾಟಕ ಸೂತ್ರಧಾರಿ ಶ್ರೀ-ಹರಿಬೌದ್ಧ ಮೂರುತಿ ತಂಗಿ10ಅಶ್ವುವನೇರುತ ಹಸ್ತದಿ ಖಡ್ಗ ಪುರು-ಷೋತ್ತಮನೆನುವರಿವದಾರಕ್ಕಸ್ವಸ್ತದಿ ಕಲಿಯೊಳು ಸುಜನರ ಪಾಲಿಪಕರ್ತೃ ಕಲ್ಕಿ ಮೂರುತಿ ತಂಗಿ 11ಶಂಖು ಚಕ್ರ ಗದೆ ಪದುಮವು ಸಿರದಿ ಕಿ-ರೀಟಧಾರಿ ಇವದಾರಕ್ಕಪಂಕಜಾಕ್ಷಿ ಪದ್ಮಾವತಿಪತಿಶ್ರೀ-ವೆಂಕಟೇಶ ಮೂರುತಿ ತಂಗಿ 12ಮಮತೆಲಿ ಸುಜನರ ಶ್ರಮ ಪರಿಹರಿಸುವಕಮಲಾಪತಿ ಇವದಾರಕ್ಕಕಮಲಪತ್ರಾಕ್ಷ ಶ್ರೀ ಕಮಲನಾಭ ವಿ-ಠ್ಠಲ ಮೂರುತಿ ಕೇಳಿವ ತಂಗಿ 13
--------------
ನಿಡಗುರುಕಿ ಜೀವೂಬಾಯಿ
ದಡ ಸೇರಿಸು ಭವದ ಕಡಲಿನದಡ ಸೇರಿಸು ಹರಿಯೆಕಡೆ ಮೊದಲಿಲ್ಲದ ಕ್ಲೇಶದ ವಾರಿಯಕಡು ಕಾಂಕ್ಷದ ಬಲುತೆರೆಯ ಪ.ಸಾಧು ಸಮಾಗಮ ಸಚ್ಛಾಸ್ತ್ರ ಶ್ರವಣಾದಿಗಳಿಲ್ಲದೆ ಕೆಡುವೆಮೇದಿನಿಯೊಳು ಮೂಢಾತ್ಮನು ನಾ ಶ್ರೀಪಾದವ ಹೊಂದಿಸು ಹರಿಯೆ 1ಸಾಸಿರ ನಾಮದಿ ತುಲಸೀ ಕುಸುಮವಶ್ರೀಶನಿಗರ್ಪಿಸಲಿಲ್ಲಹೇಸದೆ ಬಾರದುದನ್ನೆ ಬಯಸುತವಾಸುದೇವಕೆಟ್ಟೆನಲ್ಲ2ಮನ ವಶವಾಗದು ತನು ಮಡಿಯಾಗದುಕನಸಲಿ ಧರ್ಮವನರಿಯೆಒಣಮಾತಲಿ ದಿನ ಹೋದವು ಪರಗತಿಗನುಕೂಲಲ್ಲದು ದೊರೆಯೆ 3ದುವ್ರ್ಯಸನಕೆ ಬೇಸರೆನೆಂದಿಗೆಘನಗರ್ವಿಲಿ ವರ್ತಿಪೆನಲ್ಲಪರ್ವತ ನೆಗಹುವ ನುಡಿಯನ್ನಾಡುವೆನಿರ್ವಾಹಕಡ್ಡಿಯೊಳಿಲ್ಲ4ನನ್ನ ಗುಣದ ನಂಬಿಕೆ ನನಗಿಲ್ಲನಿನ್ನಯ ನಾಮವೆ ಗತಿಯುಇನ್ನಾದರು ಕಡೆಗಣ್ಣಲೆನೋಡುಪ್ರಸನ್ವೆಂಕಟ ಸಿರಿಪತಿಯೆ 5
--------------
ಪ್ರಸನ್ನವೆಂಕಟದಾಸರು
ದಯಮಾಡು ದಯಮಾಡು ಶ್ರೀನಿವಾಸಭವಭಯ ನಿವಾರಣ ಭಜಕ ಭಕ್ತರಘನಾಶ ಪ.ನೇಮವೆನ್ನಲಿಲ್ಲ ನಾಮದರಿಕೆಯಿಲ್ಲನಾ ಮಹಾಪಾಪಿಯು ಸ್ವಾಮಿ ನೀನೊಲಿದು ಗಡ 1ಸದ್ಧರ್ಮ ಸರಕಿಲ್ಲ ಶುದ್ಧ ಬುದ್ಧಿಯಿಲ್ಲಉದ್ಧರಿಸೆನ್ನನಿರುದ್ಧಹರಿಕರುಣಿ2ಸತ್ಕುಲ ಹೊಂದೇನು ಸತ್ಕರ್ಮ ಮಾರ್ಗಿಲ್ಲಭಕ್ತರಕ್ಷಕ ಪಾಪಮುಕ್ತ ದೇವರ ದೇವ 3ಅವಗುಣದೆಣಿಕೆಯ ವಿವರ ನೋಡದೆ ಅಯ್ಯಜವನ ಬಲೆಯನು ತಪ್ಪಿಸುವ ಸರೀಸೃಪಶಯ್ಯ4ಅಜಾಮಿಳವ್ಯಾಧಆಗಜಅಹಲ್ಯೋದ್ಧರನಿಜ ಪ್ರಸನ್ವೆಂಕಟೇಶಸುಜನಪರಿಪೋಷ5
--------------
ಪ್ರಸನ್ನವೆಂಕಟದಾಸರು
ದಾರುದಾರಿಲ್ಲೆಲೆ ರಂಗದಾರುದಾರಿಲ್ಲ ಸಂಗನೀರಜಾಕ್ಷನೀನೆ ಭವಸಾಗರತಾರಿಸಿ ಕೀರ್ತಿ ಪಡೆಯೊ ದಾತಾರ ಪ.ಮೀನವಾಮಿಷವುಂಡಂತೆ ಸುಖಮಾನಿನಿಯರ ತಡಿಯುಧೇನುಜರಿಯಾದಂತೆ ಏಳಿಲುಸೂನುಗಳ ಬಿರುನುಡಿಯುಏನು ಬಳಗಾಮೃಗ ದಗ್ಧ ವಿಪಿನದ ಸ್ನೇಹದೆ ಕಡಿಯುಪ್ರಾಣ ಪಯಣಕೆ ಬುತ್ತಿಲ್ಲಭವಸಂಧಾನ ಹರಿದರೆ ಆರಿಲ್ಲ ಒಡೆಯಾ 1ಏಸೋ ದಿನ ನೆಚ್ಚಿದಕಾಯಹೇಸಿಕೆಘನವಾಯಿತುಆಸೆಬಟ್ಟಾರ್ಥ ವೃಥಾವ್ರಯಕಾಸು ನಾಶಾಯಿತುಲೇಶ ಮಾತ್ರವು ಹಿತ ಹೊಂದದೆ ಮನದ್ವೇಷಿ ತಾನಾಯಿತು ಆಯುಷ್ಯ ಸೂತ್ರವು ಹರಿದರೆ ಭವರೋಗಭೇಷಜರಿಲ್ಲದಂತಾಯಿತು 2ಕುನ್ನಿ ಸಂತೆಗೆ ಹೋದಂತೆ ಬಹುಜನ್ಮ ನೋವಾದವುಮಣ್ಣಿನೊಳು ಹಾಲ ಕೊಡ ಒಡೆದಂತೆನನ್ನ ಧರ್ಮಕರ್ಮವುನನ್ನೆಚ್ಚರ ನನಗಿಲ್ಲವುನಿನ್ನೆಚ್ಚರವೆಲ್ಲಿಯದು ಪ್ರಸನ್ನವೆಂಕಟ ನಿನ್ನ ಯಾತ್ರೆಗೆ ನೀನೆಬೆನ್ನಾದರೆನಗೆಲ್ಲ ಗೆಲುವು 3
--------------
ಪ್ರಸನ್ನವೆಂಕಟದಾಸರು
ದೂತ ಸಂವಾದ ದೇವಿಯೊಡನಾದುದು ಪ್ರೀತಿಯಲಿ ಕೇಳಿರೆಲ್ಲದಾತೆ ಶುಂಭನ ಯುದ್ಧಕೆತಾಯೆಂದಟ್ಟಿ ಮಾತ ಮುಗಿಸಿದಳಲ್ಲಪತೆರೆಕಣ್ಣ ಮುಚ್ಚಿದ್ದಿ ಯಾಕೆ ಕಾಡೊಳಗಿರುವೆ ಕೇಳೆಲೆ ಮಹಾದೇವಿಪುರುಷರು ನಿನಗಾರು ಓರ್ವಳೆ ಮಾತಾಡು ಕೇಳೆಲೆ ಮಹಾದೇವಿಕರೆಯಲು ಬಂದೆ ಹಿಮಾಚಲಕೆ ನಿನ್ನ ಕೇಳೆಲೆ ಮಹಾದೇವಿಅರಸ ಶುಂಭನ ದೂತ ಸುಗ್ರೀವ ನಾನೀಗ ಕೇಳೆಲೆ ಮಹಾದೇವಿ1ಕಣ್ಣ ತೆರೆದು ನುಡಿದಳು ದೇವಿ ಖಳನಿಗೆ ಕೇಳೆಲೋ ಸುಗ್ರೀವನನ್ನಗೊಡವೆಏನು ನುಡಿಯಿಂದ ಕೆಲಸವೇನು ಕೇಳೆಲೋ ಸುಗ್ರೀವನಿನ್ನಧಿಕಾರವದೇನು ಶುಂಭನಾರು ನೀನಾರು ಕೇಳೆಲೊ ಸುಗ್ರೀವನನ್ನಗೊಡವೆಏನು ನುಡಿಯಿಂದ ಕೆಲಸವೇನು ಕೇಳೆಲೋ ಸುಗ್ರೀವ2ನಂಬೆನ್ನ ಮಾತನು ಕಪಟವೇನಿಲ್ಲ ಕೇಳೆಲೆ ಮಹಾದೇವಿಶುಂಭನ ಭಾಗ್ಯ ಹೇಳಲಿಕಳವಲ್ಲ ಕೇಳೆಲೆ ಮಹಾದೇವಿತುಂಬಿವೆ ಮನೆಯೊಳು ದಿವ್ಯ ರತ್ನವು ಕೇಳೆಲೆ ಮಹಾದೇವಿಶುಂಭಗೆ ನೀನು ಕಡೆರತ್ನ ದೊರಕಲು ಕೇಳೆಲೆ ಮಹಾದೇವಿ3ಕರುಣದಿ ಕಪಟವಿಲ್ಲದಲೆ ನೀನು ಕೇಳ್ವೊಡೆ ಕೇಳೆಲೋ ಸುಗ್ರೀವಇರಬಾರದು ಸುಮ್ಮಗಿದ್ದುದನಾಡಿವೆವು ಕೇಳೆಲೋ ಸುಗ್ರೀವಪುರುಷರು ಇಂದಿನವರೆಗಿಲ್ಲ ನಾ ಸ್ವತಂತ್ರ ಕೇಳೆಲೋ ಸುಗ್ರೀವಪುರುಷರಿಗೋಸ್ಕರ ನಾನು ತಪವನು ಮಾಡುವೆ ಕೇಳೆಲೋ ಸುಗ್ರೀವ4ಶುಂಭನು ಶೀಘ್ರದಿ ಕರೆತಾರೆಂದನು ನಿನ್ನ ಕೇಳೆಲೆ ಮಹಾದೇವಿಶುಂಭನ ಭಾಗ್ಯ ದೊರಕಿದಡೆ ನೀ ಕೃತಾರ್ಥೆ ಕೇಳೆಲೆ ಮಹಾದೇವಿಶುಂಭಗೆ ನಿನಗೆ ಸಕ್ಕರೆ ಹಾಲು ಬೆರೆತಂತೆ ಕೇಳೆಲೆ ಮಹಾದೇವಿಶುಂಭಗೆ ಚಾಕರ ನಿನಗೆ ಚಾಕರ ನಾನು ಕೇಳೆಲೆ ಮಹಾದೇವಿ5ಮಾಡಬಾರದ ಪ್ರತಿಜೆÕಯ ಮಾಡಿಹೆನು ಕೇಳೆಲೋ ಸುಗ್ರೀವಆಡಲಿ ಏನ ಅದೃಷ್ಟಹೀನೆಯು ಕಂಡ್ಯಾ ಕೇಳೆಲೋ ಸುಗ್ರೀವಖಾಡಾ ಖಾಡಿಯಲಿ ಜಯಿಸಿದವನೆ ಭರ್ತನೆಂದೆನೆ ಕೇಳೆಲೋ ಸುಗ್ರೀವಕೂಡಿ ಬರುವೆ ಮಾಡಿದ ಭಾಷೆಯ ಹುಸಿಯದೆ ಕೇಳೆಲೋ ಸುಗ್ರೀವ6ಕರೆಯಲು ಬಿಗಿಯಲು ಬೇಡವೆ ನೀನೀಗ ಕೇಳೆಲೆ ಮಹಾದೇವಿಥರಥರ ಸಾಲು ಸಾಲಿನ ಛತ್ರಿ ನಿನ್ನವು ಕೇಳೆಲೆ ಮಹಾದೇವಿಇರುವನು ನೀ ಹೇಳಿದಂತ ಶುಂಭನು ಕೇಳೆಲೆ ಮಹಾದೇವಿದೊರೆವುದು ನಿನಗೆ ತ್ರೈಭುವನದರಸುತನ ಕೇಳೆಲೆ ಮಹಾದೇವಿ7ಕಂಡುದಿಲ್ಲವೋ ಈವರೆಗೆನ್ನ ಜಯಿಸಿದವರನ್ನು ಕೇಳೆಲೋ ಸುಗ್ರೀವದಿಂಡುಗಡೆದರು ಎನ್ನೆದುರು ನಿಂತವರೆಲ್ಲ ಕೇಳೆಲೋ ಸುಗ್ರೀವಗಂಡನ ಪಡೆದಿರೆಶುಂಭಜಯಿಸುವನೆನ್ನ ಕೇಳೆಲೋ ಸುಗ್ರೀವಗಂಡನಾವನಿಲ್ಲದಿರೆ ಏನ ಮಾಡುವೆ ಕೇಳೆಲೋ ಸುಗ್ರೀವ8ಚಾರ್ವಾಕರ ಮಾತಾಡಲು ಬೇಡ ಕೇಳೆಲೆ ಮಹಾದೇವಿಬರ್ವಳು ನಿನ್ನ ಮಾತಿಗೆಶುಂಭಬಹನೇ ಕೇಳೆಲೆ ಮಹಾದೇವಿಉರ್ವಿಗೆ ಕರ್ತನ ಎದುರಿಗೆ ನೀ ನಿಲ್ಲುವೆಯ ಕೇಳೆಲೆ ಮಹಾದೇವಿಗರ್ವವ ಮಾಡಲು ಮುಂದಲೆ ಹಿಡಿದೊಯ್ವರು ಕೇಳೆಲೆ ಮಹಾದೇವಿ9ಎನ್ನ ಪ್ರಾರಬ್ಧವು ಇದ್ದಂತೆ ಆಗುವುದು ಕೇಳೆಲೋ ಸುಗ್ರೀವನಿನ್ನ ಮೇಲೇನು ಮಾತಿಲ್ಲವೋ ಕೇಳೆಲೋ ಸುಗ್ರೀವಎನಗೆ ಹಿತಕಾರಿ ನೀನು ಅಹಿತ ನಾನೇ ಕೇಳೆಲೋ ಸುಗ್ರೀವಇನ್ನು ಮಾತಾಡಬೇಡವೋ ಕರೆತಾನಡಿ ಕೇಳೆಲೋ ಸುಗ್ರೀವ10ಇಂತು ವಿಳಾಸ ಮಾತನಾಡಿಯೆ ಖಳನನು ಕಳುಹಿದಳು ಪರಾಂಬೆಎಂತು ಹೇಳ್ವನೋ ಶುಂಭನಾವಾಗ ಬರುವನೋ ಎನುತಲಿ ಜಗದಂಬೆಚಿಂತೆ ಹರಿಪೆ ಸುರರನು ಶುಂಭನನುಕಟ್ಟಿಎನುತಲಿ ಸರ್ವಾಂಬಚಿಂತಯಕ ತಾನಾದ ಚಿದಾನಂದ ಕರುಣೆಯು ಬಗಳಾಂಬ11
--------------
ಚಿದಾನಂದ ಅವಧೂತರು
ದ್ವಂದ್ವವೆ ವಸಂತದ ಹಬ್ಬದ್ವಂದ್ವವೆ ಇಹಪರದಲ್ಲಿ ಹಬ್ಬ ಪ.ದ್ವಂದ್ವಾಮೃತ ಕ್ಷೇಮಅಭಯವಸಂತದ್ವಂದ್ವ ಜೀವೇಶರ ತಿಳಿದವ ಶಾಂತದ್ವಂದ್ವದ ನಡೆನುಡಿ ಬಲ್ಲವ ಸಂತದ್ವಂದ್ವವರಿಯದನ ಗತಿಯೆ ವಸಂತ 1ದ್ವಂದ್ವ ಶೀತೋಷ್ಣ ಸಮಾನವ ಕಂಡುದ್ವಂದ್ವ ನಿಂದಾಸ್ತುತಿ ಸರಿಯಿಟ್ಟುಕೊಂಡುದ್ವಂದ್ವವಮಾನವಹಿಡಿದರೆ ಭಂಡುದ್ವಂದ್ವ ಪಕ್ಷಿಗಳ ಬಗೆಯ ಕೇಳಿಕೊಂಡು 2ಫಾಲ್ಗುಣ ಪೌರ್ಣಿಮೆ ಬಂದಿತಿಳೆಗೆಬಾಲಕರೆಲ್ಲ ನೆರೆವುದೊಂದು ‌ಘಳಿಗೆಹೋಳಿಯನಾಡುವ ಸಂಭ್ರಮದೊಳಗೆಕಾಳಗಬೇಡಿರೊ ನಿಮ್ಮ ನಿಮ್ಮೊಳಗೆ3ಅಜೆÕೈಕ್ಯ ಪ್ರತಿಪದ ಹಿಂದಾದರಿಂದಸುಜ್ಞಾನ ದ್ವಿತಿಯಕ್ಕೆ ತೋರುವ ಚಂದ್ರಒಗ್ಗೂಡಿ ಗೆಳೆಯರೊಮ್ಮತದಿಂದಲಗ್ಗೆಕಾರರು ಮುಂದೆ ನಡೆವುದೆ ಚಂದ 4ಭಕ್ತೆಂಬೊ ಪುರದಲ್ಲಿ ಒಂಬತ್ತು ಬೀದಿ ವಿರಕ್ತಿರಂಹಸ ಬ್ರಹ್ಮದ್ಹಾದಿಯ ಐದಿವ್ಯಕ್ತವಾಗುವ ವಸ್ತು ಓದಿಕೆ ಓದಿರಿಕ್ತದ ನುಡಿಗಳು ತಮಸಿನ ಹಾದಿ 5ದಿನಪತಿ ಅಡಗಿರೆ ಮಲಗದೆ ಎದ್ದುಮನೆಯವರನು ಎಚ್ಚರಿಸಬ್ಯಾಡಿ ಸದ್ದುನೆನೆವ ವಿಷಯಗೋಡೆ ಏರುತ್ತ ಬಿದ್ದುಮನೆ ಮನೋವಾರ್ತೆಯ ಕುರುಳನೆ ಕದ್ದು 6ಹಾರುವರ ಕೇರಿಯ ಹೊಗಬ್ಯಾಡಿಕೇಳಿಬೇರೂರವರ ಬಿಟ್ಟು ಬಿಡಿ ದೂರದಲ್ಲಿದೂರುವರೊಡನಾಟ ದುರ್ದೆಶೆಫಲವು ವಸ್ತುದೋರುವ ಮನೆಯೇವೆ ಸರಸ ವೆಗ್ಗಳವು 7ಧೂಳಿ ನೀರುರಿಗಾಳಿ ಬಯಲೊಳಗಾಡಿಮ್ಯಾಲೆ ಮೂರುರಿಯೊಳು ಮತಿಗುಂದಬ್ಯಾಡಿಹಾಳು ತುರುಕರ ಕೇರಿಯೊಳು ನಿಷ್ಫಲವುಜಾಲಗಾರರ ಕೇರಿ ಹೊಕ್ಕರೆ ಫಲವು 8ಹಿಂಚಾದ ಹಿರಿಯರ ಮಾತಲೆ ನಡೆದುವಂಚಕ ಮೂವರ ಸಂಗವ ಕಡಿದುಮಿಂಚುವ ಮಾನ್ಯರ ಪ್ರೀತಿಯ ಪಡೆದುಸಂಚಿತಪ್ರಾರಬ್ಧಾಗಾಮಿಯ ಒಡೆದು9ಮುಚ್ಚಿದ ಕದವೆರಡನು ಮುರಿಹೊಯ್ದುಇಚ್ಛೆ ಮೂರೆಂಬ ನಾಯಿಗಳಜಿಹ್ವೆಕೊಯ್ದುಬೆಚ್ಚದೆ ಮನೆ ಮೆಲ್ಲನೆ ಹೊಗಿರಣ್ಣಸಚ್ಚಿದ ಗೋರಸ ಸೂರ್ಯಾಡಿರಣ್ಣ 10ಏಕಾಧಿಪತಿಯಾಜÕ ಅಭಯವು ಬೇಕುನಾಕು ಝಾವಿನ ರಾತ್ರಿ ನಲವಿರಬೇಕುಪೋಕಕಳ್ಳಾರ್ವರ ಮೆಟ್ಟ್ಯಾಳಬೇಕುಭೂಕಾಂತಗೆ ಸೇವೆಯೊಪ್ಪಿಸಬೇಕು 11ರಮಣನೊಲ್ಲದ ಆರ್ವರ ಸಂಗವಿಡಿದುರಮಿಸುವ ಬುದ್ಧಿಜಾರಿಯ ಗಟ್ಟಿವಿಡಿದುಅಮಿತ ವೈರಾಗ್ಯಹಗ್ಗದಿ ಕೈಯಕಟ್ಟಿಶ್ರೀರಮಣನಂಘ್ರಿಗೆ ಒಪ್ಪಿಸಲು ಕಾರ್ಯ ಗಟ್ಟಿ 12ಎಲ್ಲೆಲ್ಲ್ಯಜ್ಞಾನಾಹಿ ವಿಷಯ ತೇಳುಗಳುಎಲ್ಲೆಲ್ಲಿ ನಿರ್ಜಲಸೃತಿಯ ಬಾವಿಗಳುಎಲ್ಲೆಲ್ಲಿನಿರಯಕಮ್ಮರಿ ಮಿಟ್ಟೆಗಳುಎಲ್ಲ ತಪ್ಪಿಸಿ ಜ್ಞಾನ ಬೆಳದಿಂಗಳೊಳು 13ವ್ಯಾಳ್ಯವರಿತು ತತ್ವಸಂಧಿಯ ಒಲಿದುಸೂಳಿ ಮದೆಂಟರ ಕೈಸೆರೆವಿಡಿದುಕಾಲಾಖ್ಯ ತಳವಾರನಾಳಿಗೆ ಕೊಟ್ಟುಮ್ಯಾಳದ ಗೆಳೆಯರು ಸಂತೋಷಪಟ್ಟು 14ಎಂಬತ್ತು ನಾಲ್ಕು ಲಕ್ಷಾಗಾರ ಹೊಗುತಡೊಂಬಿಯಿಲ್ಲದೆ ಬಂದ ಬನ್ನವಬಡುತಕುಂಭಿಣಿಸುರ ಕುಲ ಭೂಮಿಗೆ ಬಂದುದಂಭ ಮಾಡದಲೆ ಕುರುಳ ಒಯ್ಯಿರೆಂದು 15ರಾಗ ಮತ್ಸರಗೂಡಿದರ ಕುರುಳನೊಟ್ಟಿಭೂಗಗನ ಹೊಗುವ ಕಾಮವಕಟ್ಟಿಯೋಗವಾಗಿರುವ ಹುಬ್ಬಿನ ಕ್ಷೇತ್ರದಲಿಮ್ಯಾಗ ವಿಜ್ಞಾನಗ್ನಿ ಹಾಕಬೇಕಲ್ಲಿ 16ಲೋಭ ಹೋಳಿಕೆಯ ಹೋಳಿಗೆ ತುಪ್ಪ ಸವಿದುಲಾಭಕ್ಕೆ ಕುಣಿಯಲು ವೇತ್ರರು ಹೊಯ್ದುಶೋಭನ ರಸ ಬೊಬ್ಬೆಯ ಸಾಧುಹಿಂಡುತ್ರಿಭುವನಪತಿಕಾಮನಯ್ಯನ ದಂಡು17ಸ್ವರ್ಧುನಿಜನಕನ ಗುಣಗಣಕೀರ್ತಿಊಧ್ರ್ವಸ್ವರದಿ ಹಾಡಿ ಹೊಗಳುವಅರ್ಥಿನಿರ್ಧೂಮಜ್ವಾಲೆಯ ಬೆಳಗಲಿ ಸುತ್ತಿದುರ್ದೇಹಿಗಳ ಕಿವಿಧಾರೆಯ ಕಿತ್ತಿ 18ಅವಿದ್ಯ ಕಾಮ್ಯಕರ್ಮದ ಹೋಳಿ ಸುಟ್ಟುಹ್ಯಾವಿನ ಮೈಯ ಬೂದಿಯ ಮಾಡಿಬಿಟ್ಟುಕೋವಿದರ ಚಾತುರ್ಯಕೆ ಒಡಂಬಟ್ಟು ಚಿದ್ಭಾವ ಮಂದಿರದ ಬ್ರಹ್ಮಕೆ ಲಕ್ಷ್ಯವಿಟ್ಟು 19ಹಂಗಿಲೆ ಬೆಳೆದ ವೃಕ್ಷದ ಮೂಲ ಮುರಿದೂಧ್ರ್ವಾಂಗಕ್ಕೆ ಸುತ್ತುವ ಜಾಣರ ಬಿರಿದುರಂಗು ಮುತ್ತಿನ ಮೂಗುತಿ ಹೆಣ್ಣವಿಡಿದುಶೃಂಗಾರ ಚೇಷ್ಟೆಯ ಮಾಡಿರೊಜಡಿದು20ಬೆಳಗಿನ ಝಾವದಿ ಬೂದಿ ಚಲ್ಲ್ಯಾಡಿಗೆಳೆಯರು ನೆರೆವುದೊಂದೆ ತಾಣ ನೋಡಿಜಲಜಾಕ್ಷನುದ್ಯಮದಂಗಡಿಯಲ್ಲಿನಲಿವ ಸ್ವಾನಂದದೂಟವ ಬೇಡಿಕೊಳ್ಳಿ 21ತಿರುತಿರುಗಿ ಬಂದು ದಣಿದು ನೀವಿಂದುಹರಿಯ ಮೈ ಬೆವರಿನ ಹೊಳೆಯಲ್ಲಿ ಮಿಂದುಥರ ಥರದ್ಹದಿನಾರು ವರ್ಣಗಳಿಂದತರುಣ ತರಣಿಯಂತೆ ಹೊಳೆವುದು ಚಂದ 22ಆನಂದಮಯವಾಸುದೇವನ ಕಂಡುಆನಂದಪುರದಿ ಭಕ್ತಿಯ ನೆರೆಗೊಂಡುಆನಂದ ತೀರ್ಥಗುರು ಕೃಪೆಯಿಂದಸ್ವಾನಂದದೋಕುಳಿಯಾಡುವ ಚಂದ 23ಈ ವಿಧ ಅಧ್ಯಾತ್ಮ ಹೋಳಿಯ ಭೇದಭಾವುಕ ಜನರಿಗೆ ಪರಮಾಹ್ಲಾದದೇವ ಋಷಿಕುಲದೈವ ಮುಕುಂದಕಾವನು ಕರುಣಾಬ್ಧಿಕೇಳಿಗೋವಿಂದ24ವೇದನ ತಂದ ಹಯಾಸ್ಯನ ಹೋಳಿಭೂಧರಧರಿಸಿದಮರ ಕಾರ್ಯಕೇಳಿಮೇದಿನ ತರಲಡ್ಡಾದವನೊಮ್ಮೆ ಹೋಳಿ ಪ್ರಹ್ಲಾದನಿಷ್ಠೆಗೆಹರಿಉದಿಸಿದಕೇಳಿ25ನಾನೆಂಬೊ ದಾನವೇಂದ್ರನ ಮದ ಹೋಳಿಹೀನರಿಗಾಗಿ ಕೊಡಲಿ ಹೊತ್ತಕೇಳಿಜಾನಕಿ ತಂದ ದಶಾಸ್ಯನ ಹೋಳಿಮಾನಿನಿಯರಾಳ್ದ ವಿಡಂಬನಕೇಳಿ26ಸನ್ಮಾರ್ಗ ಬಿಟ್ಟ ಖಳರ ಮತಿ ಹೋಳಿಉನ್ಮತ್ತಕಲಿಯನರಸಿ ಕೊಂದಕೇಳಿಚಿನ್ಮಯಮೂರ್ತಿ ಭೂಭಾರವ ಹೋಳಿಜನ್ಮಿಸಿಬಹುದೆಲ್ಲ ಮೋಹನಕೇಳಿ27ಅನಂತದುರಿತರಾಶಿಗಳನ್ನು ಹೋಳಿಆನಂದ ಸುಖವೀವ ನೆನೆದರೆಕೇಳಿಅನಂತ ಅನವದ್ಯಗುಣ ಪರಿಪೂರ್ಣಅನಂತಾದ್ಭುತಕರ್ಮದೀನ ದಯಾರ್ಣ28ಈಪರಿವಿಜ್ಞಾನವಸಂತದಾಟಚೌಪದಿ ರತ್ನಮಾಲಿಕೆ ಮಾಡಿ ಪಾಠಶ್ರೀಪ್ರಸನ್ವೆಂಕಟ ಕಿಟಿರೂಪಿ ಕೃಷ್ಣತಾ ಪರಿಪಾಲಿಪ ಪುರುಷವರಿಷ್ಠ 29
--------------
ಪ್ರಸನ್ನವೆಂಕಟದಾಸರು
ಧರ್ಮಕ್ಕೆ ಕೈಬಾರದೀಕಾಲ - ಪಾಪ - |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕರ್ಮಕ್ಕೆ ಮನ ಬಾಹುದೀ ಕಲಿಕಾಲ ಪ.ದಂಡದೋಷಕೆ ಉಂಟು ಪುಂಡುಪೋಕರಿಗುಂಟು |ಹೆಂಡಿರು - ಮಕ್ಕಳಿಗಿಲ್ಲವೀ ಕಲಿಗಾಲ ||ಭಂಡೆಯರಿಗುಂಟು ದಿಂಡೆಯರಿಗುಂಟು - ಬೇಡಿ - |ಕೊಂಡಿವರಿಗಿಲ್ಲವು ಈ ಕಲಿಕಾಲ 1ಒತ್ತೆಸೂಳೆಗುಂಟು ಮತ್ತೆ ಹಾದರಕುಂಟು |ಹೆತ್ತತಾಯಿಗಿಲ್ಲ ಈ ಕಲಿಕಾಲ ||ತೊತ್ತೆಯರಿಗೆ ಉಂಟು ಅರ್ತಿಕಾರ್ತಿಗಿಲ್ಲ |ಉತ್ತಮರಿಗೆ ಇಲ್ಲವೀ ಕಲಿಕಾಲ 2ಹುಸಿದಿಟವಾಯಿತು ರಸ - ಕಸವಾಯಿತು |ಮಸಿ ಮಾಣಿಕವಾಯಿತೀಕಾಲ ||ವಸುಧೆಯೊಳಗೆ ನಮ್ಮ ಪುರಂದರವಿಠಲನ |ಬೆಸಸಿ ಪೂಜಿಪರ್ಗಿಲ್ಲ ಈ ಕಲಿಕಾಲ 3
--------------
ಪುರಂದರದಾಸರು