ಒಟ್ಟು 4196 ಕಡೆಗಳಲ್ಲಿ , 121 ದಾಸರು , 2466 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಶಾವತಾರದ ನಿಂದಾಸ್ತುತಿಗಳು ವರನ ಚಂದಮದೇನ ವರ್ಣಿಸುವೆನೆಲೆ ಸಖಿಯೆ ಪರಮಸುಂದರಗಾತ್ರನಿರವ ಕೇಳೆ ಬಿಚ್ಚಿರುವ ಕಣ್ಗಳಂ ಮುಚ್ಚಲಾರದ ವರಗೆ ಪಚ್ಚಕರ್ಪೂರದಾ ಕಪ್ಪಿದೇಕೆ ಕೊಳೆತುನಾರುತಲಿಹಗೆ ಲಲಿತವಸ್ತ್ರಗಳೇಕೆ ಹೊಲಸು ಮಯ್ಯಿಗೆ ಗಂಧ ಬಳಿಯಲೇಕೆ ಜಲಧಿಯಲಿ ವಾಸಿಪಗೆ ಪÀಲವಿಧದ ತೊಡವುಗಳೆ ನೆಲೆಯಿಲ್ಲದಾತಂಗೆ ಲಲನೆ ಸುತರೆ ಅಜ್ಞಾತಪಾದಕ್ಕೆ ಗೆಜೆ ಗೊಲಸೆ ವಿಜ್ಞಾನಮಯಗೆ ವಿವಿಧ ಸಿಂಗರವೆ ಯಜ್ಞಭೋಕ್ತಗೆ ಮತ್ತೆ ಭಕ್ಷ್ಯದೆಡೆಯೆ
--------------
ನಂಜನಗೂಡು ತಿರುಮಲಾಂಬಾ
ದಾಮ ಶೋಭಿತ ವಿಠಲ | ಸಾಮ ಸನ್ನುತನೇ ಪ ಪ್ರೇಮದಿಂದಿವಳ ಮನ | ಕಾಮ ಪೊರೈಸೋ ಅ.ಪ. ಯೇಸೊ ಜನ್ಮದ ಪುಣ್ಯ | ರಾಶಿ ಫಲ ಒದಗುತಲಿದಾಸತ್ವ ದೀಕ್ಷೆಯನು | ಆಶಿಸುತ್ತಿಹಳೋ |ದಾಸವರ್ಯರು ವಿಜಯ | ದಾಸರುತ್ಸವದಿ ಸಂ-ತೋಷದಲಿ ಬಿನ್ನಹವ | ಲೇಸು ಗೈದಿಹಳೋ 1 ಸಾರ ಚಾರು ಮೂರುತಿಯೇ 2 ಆನಂದ ಮುನಿ ಮತದಿ | ಸ್ವಾನುಭವ ದೀಕೆಯನುಜ್ಞಾನ ಭಕ್ತ್ಯಾದಿ ಸಂ | ಧಾನ ತಿಳಿಸುತಲೀ |ಮಾನನಿಧಿ ಕೈ ಪಿಡಿದು | ದೀನಳನು ಪೊರೆಯೆಂದುಪ್ರಾಣ ಪ್ರಾಣನೆ ಬೇಡ್ವೆ | ದೀನ ವತ್ಸಲನೇ 3 ಸಾಧನದಿ ಸತ್ವತೆಯ | ಹಾದಿಯಲ್ಲಿಹಳೀಕೆಸಾಧುಗಳ ಕಂಡು ಹೃದ | ಯಾದ್ರ್ರ ಭಾವದಲೀ |ಮೋದ ಬಡಿಸುತ ಸೇವೆ | ಶ್ರೀಧರನಿಗರ್ಪಿಪಳುಹೇ ದಯಾಂಬುಧೆ ಸಲಹೊ | ಸಾಧು ಜನ ವಂದ್ಯಾ 4 ಸರ್ವಕಾಲವು ದೇಶ | ಸರ್ವಗುಣದ್ರವ್ಯದಲಿದುರ್ವಿಭಾವ್ಯನ ವ್ಯಾಪ್ತಿ | ಸ್ಛುರಣೆಯನು ಕೊಡುತಾ |ಸರ್ವಾಂತರಾತ್ಮಗುರು | ಗೋವಿಂದ ವಿಠ್ಠಲನೆದರ್ವಿ ಜೀವಿಯ ಹೃದಯ | ಗಹ್ವರದಿ ತೋರೋ 5
--------------
ಗುರುಗೋವಿಂದವಿಠಲರು
ದಾರಿ ಒಳ್ಳೇದಾಗಿರಬೇಕೂ ಹರಿದಾಸನಾದ ಮೇಲೆ ಪ ಯಾರೇ ಬಂದರೂ ಸರಿ ಯಾವ ಕಾಲದಲ್ಲಿಯು ಪಾರಗಾಣದಂಥಾ ಈ ಸಂಸಾರವಾರ್ಧಿ ದಾಟುವದಿಕ್ಕೆ ಅ.ಪ ಜ್ಞಾನ ಭಕ್ತಿ ದಾನಧರ್ಮ ವೈರಾಗ್ಯದಿ ಸದ್ಗುಣಂಗಳು ತಾನೆ ತಾನಾಗೆಲ್ಲವು ಸ್ವಾಧೀನವಾಗಿರಬೇಕಾದರೆ 1 ಓದಿದರ್ಥ ಮನಕೆ ತಿಳಿದು ನಿರತವು ಸಾಧನವು ಮಾಡುತ ಅ- ನಾದಿ ಸಿದ್ಧವಾದ ತತ್ವದ ಹಾದಿ ಕಾಣಬೇಕಾದರೆ 2 ತಾಮಸಾದಿ ದುರ್ಗುಣ ನಿರ್ನಾಮವಾಗಿ ಪ್ರೇಮದಿಂ ಗುರುರಾಮವಿಠಲನ್ನ ನೆನೆವದಕ್ಕೆ 3
--------------
ಗುರುರಾಮವಿಠಲ
ದಾರಿ ತೋಚದಲ್ಲಾ ನನಗೆ ಏನು ಪ ನೀರಜಾಕ್ಷ ನಿನ್ನ ನೊಲಿಸುವ ಅ.ಪ ವಿಧಿ ಸಾಧಿಸುತ ವೇದವ್ಯಾಸ ನಿನ್ನ ಪ್ರೀತಿ ಸಾಧಿಸಲು ಮೂಢನಾನು 1 ದಂಡಕಾಲ ಕಳೆದುದಯ್ತು ಮಂಡೆಗೀಗ ಹತ್ತದವು ಫಂಡರೀಶ ಕೃಪೆಯಮಾಡೊ 2 ಹಾಡಿಪಾಡಿ ವಲಿಸಾಲು ರಾಗ ಈ ಭಾವ ತಾಳ ಕಾಣೆ ಕಾಡು ಕೋಣನಂತೆ ಇರ್ಪೆ ನೀಡಿ ಸಲಹೊ ಸರ್ವ ಶಕ್ತಿ 3 ದಾನಧರ್ಮತೀರ್ಥಯಾತ್ರೆ ನಾನು ಮಾಡೆ ಹುಟ್ಟು ಬಡವ ಶ್ವಾನನಂತೆ ತಿರಿದು ಉಂಬೆ ಸಾಧ್ಯವೇನು ನೀನೇ ನುಡಿಯೊ4 ನೆಂಟರಿಷ್ಟರೆಲ್ಲ ಎನ್ನ ಕೈಯ ಬಿಟ್ಟು ಹೋದರೈಯ ಒಂಟಿಯಾಗಿ ಅಲೆದು ಅಲವೆ ಭಂಟನೆನಿಸಿ ಕಾಯಬೇಕೊ 5 ದಾಸನಾಗಿ ಬಾಳೋದಕ್ಕೆ ಆಶೆಯಿನ್ನು ತೊಲಗಲಿಲ್ಲ ಮೊಸವೇನೆ ಬರಿಯ ವೇಷ ದೋಷದೂರ ಶ್ರೀಶವಲಿಯೊ 6 ಹಿಂದಿನವರ ಕಾಯ್ದಬಗೆಯು ಇಂದಿನವರಿಗೆ ಬರಿಯ ಕಥೆಯು ಮಂದನೆನ್ನ ಈಗ ಪಿಡಿದು ಮುಂದು ಮಾಡೊ ನಿನ್ನ ಖ್ಯಾತಿ7 ಶರಣ ಜನರ ಬಿಡನು ಎಂಬ ಖರೆಯಬಿರುದು ನಿನ್ನದೆಂದು ಹಿರಿಯರಿಂದ ಅರಿತುಬಂದೆ ಪರಮ ಕರುಣಿ ಕೈಯ ಪಿಡಿಯೊ8 ನಿನಗೆ ಯೆನ್ನ ಪೊರೆಯೆ ಕ್ಷಮಿಸಿ ದೋಷ ಪೊರೆಯೊ ಬೇಗ ನಮಿಪೆ ನಂಬಿ ನಿನ್ನನೀಗ 9
--------------
ಕೃಷ್ಣವಿಠಲದಾಸರು
ದಾರಿತೋರೋ ಮಾಯಾಕಾರ ಕರುಣಾಸಾಗರ ಪ ಪಾರುಗಾಣಲಾರೆನಯ್ಯ ದೂರಮಾಡದಿರಯ್ಯ ಅ.ಪ ಕರವ ನೀಡಿದೆ ಹರಿಯೇ ನಿನ್ನ ಭಜನೆಯೆಂಬುದ ಮರೆತು ಮೆರೆದೆನಯ್ಯ 1 ಸ್ನಾನ ನೇಮ ಜಪ ತಪಂಗಳ ಜ್ಞಾನವಿಲ್ಲವೈ ಧ್ಯಾನ ಹೋಮ ಭಜನೆ ಪೂಜೆ ಏನನರಿಯೆನಯ್ಯ 2 ನಿನ್ನ ದಾಸರದಾಸನೆಂದು ಎನ್ನ ಪಾಲಿಸೈ ಸನ್ನುತಾಂಗ ಮಾಂಗಿರೀಶ ನಿನ್ನ ನಂಬಿದೆ [ನಯ್ಯ] 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಾವನು ಗುರುಸಹವಾಸಿ ಅವನಿದ್ದದ್ದೇ ಸ್ಥಳ ಕಾಶಿ ಧ್ರುವ ಕೂಡಿದವರ ತ್ರಿತಾಪಭಂಗಾ ರೂಢಿಗೆ ಮೆರೆವಳು ಙÁ್ಞನಗಂಗಾ ಮೂಡಿಹ ಆತ್ಮಜ್ಯೋತಿ ಲಿಂಗಾ ಕಂಡಿಹ ಗುಣರಾಸೀ 1 ವಿವರಿಸಿ ತಾರಕಮಂತ್ರದ ನೆಲಿಯಾ ಕಿವಿಯೊಳು ಹೇಳಲು ಗುರುರಾಯಾ ಭವ ಭಯಾ ಸ್ವಾನಂದವ ಬೆರೆಸೀ2 ಜನದಲಿ ನಾನಾ ಸಾಧನ ಜರಿದು ಮನದಲಿ ಒಂದೇ ನಿಷ್ಠಿಯ ಹಿಡಿದು ಅನುಮಾನದ ಸಿದ್ಧಾಂತಗಳದು ಸದ್ಭಾವನೆ ಒಲಿಸೀ 3 ಪ್ರೇಮಿಯ ನಿಜಸುಖ ಪ್ರೇಮಿಕ ಬಲ್ಲಾ ಈ ಮನುಜರಿಗಿದು ಭೇದಿಸುದಲ್ಲಾ ಶ್ರೀ ಮಹಿಪತಿ ಬೋಧಿಸಿದನು ಸೊಲ್ಲಾಪೂರಿಸಿ ಮನದಾಸಿ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾಶರಥೇ ದಯಮಾಡು ನಿನ್ನ ದಾಸದಾಸನ ನೋಡುದಾಸದಾಸನ ನೋಡು ಮುದ್ದು ದಾಶರಥೇ ದಯ ಮಾಡು ಪ ನೀರಜಾಕ್ಷ ನಿಜ ಮಾಯ ಮಮತೆ ಸಂಸಾರ ಶರಧಿಯೊಳು ಬಿದ್ದುಪಾರುಗಾಣದೆ ಬರಿದೆ ಪೋಗುವಾ ತಾರಕ ಬ್ರಹ್ಮ ನೀನೆಂದೂ 1 ವಿಶ್ವ ಕುಟುಂಬನೆ ಎನಗಾ ಇಂಗುಗೊಡದೆಯೆಲ್ಲರ್ಗಲ್ಲಿ 2 ಇಂದಿರೇಶ ಮುಚುಕುಂದ ವರದ ಮುನಿ ವಂದ್ಯನೆ ದಶರಥ ಕಂದಾಚಂದದಿ ನಿನ್ನ ಪದದ್ವಂದ್ವಗಳನುದಿನ ವಂದಿಸುವೆನುಮುದದಿಂದಾ3
--------------
ಇಂದಿರೇಶರು
ದಾಶರಥೇ ದಯಮಾಡೊ ನಿನ್ನ ದಾಸರ ದಾಸನ ನೋಡೋ ಪ ನೀರಜಾಕ್ಷ ನಿಜಮಾಯಾ ಮಮತೆ ಸಂ- ಸಾರಶರಧಿಯೊಳು ಬಿದ್ದು ಪಾರಗಾಣದೆ ಪರಿದು ಪೋಗುವೆನು ತಾರಕ ನೀನೆನಗಿದ್ದು ಹರಿ ಹರಿ 1 ತುಂಬಿದ ಭಂಡಿಗೆ ಮೊರ ಭಾರವೆ ಎನ- ಗಿಂಬಿಲ್ಲವೆ ನಿನ್ನಲಿ ನಂಬಿದ ಭಕ್ತರ ಸಲಹುವ ವಿಶ್ವಕು- ಟುಂಬಿ ಎನಿಸಿಕೊಳುವಲ್ಲಿ ಹರಿ 2 ಬಲ್ಲಿದರೊಳು ಬಡವರಿಗಾಶ್ರಯ ನೀ ಬಲ್ಲೆ ಮತ್ತೆ ಎನಗೀಗ ಎಲ್ಲಿದ್ದರು ಶ್ರೀದವಿಠಲ ಬಿಡ ದಲ್ಲೂ ನಿನ್ನ ದಯ ಬೇಗ 3
--------------
ಶ್ರೀದವಿಠಲರು
ದಾಸ ಜನರ ಹೃತ್ ತೋಷನೆ ಪುರಂದರದಾಸರಾಯ ಪರಿಪೋಷಿಸೋ ಪ ಅಂಡಜವಾಹ ಬ್ರ | ಹ್ಮಾಂಡ ದೊಡೆಯನಪಿಂಡಾಂಡದಿ ಕಂ | ಢಿಗ್ಗುವ ಮೂರ್ತೇ 1 ಮಹತಿ ನಾಮಕ ವೀಣಾ | ಧರಿಸಿ ಶ್ರೀಹರಿಮಹಿಮೆ ಪೊಗಳಿ ಲೋಕ | ತಿರುಗುವನೇ 2 ಅನ್ನಂತ ಗುಣ ಗುರು | ಗೋವಿಂದ ವಿಠಲಎನ್ನಂತ ರಂಗದೀ | ಕಾಣಿಸೋ 3
--------------
ಗುರುಗೋವಿಂದವಿಠಲರು
ದಾಸ ದಾಸರ ಮನೆಯ ದಾಸಿಯರ ಮಗ ನಾನುಸಾಸಿರ ನಾಮದೊಡೆಯ ರಂಗಯ್ಯನ ಮನೆಯ ಪ ಶಂಕು ದಾಸರ ಮನೆಯ ಮಂಕುದಾಸನು ನಾನುಮಂಕುದಾಸನು ನಾನು ಮರುಳುದಾಸಸಂಕೀರ್ತನೆಯ ಮಾಡಿ ನೆನೆವ ಭಕ್ತರ ಮನೆಯ ಬಿಂಕದಿ ಬಾಗಿಲ ಕಾಯ್ವ ಬಡ ದಾಸ ನಾನಯ್ಯ 1 ಕಾಳಿದಾಸರ ಮನೆಯ ಕೀಳುದಾಸನು ನಾನುಆಳುದಾಸನು ನಾನು ಮೂಳದಾಸಫಾಲಾಕ್ಷ ಸಖ ನಿನ್ನ ಭಜಿಪ ಭಕ್ತರ ಮನೆಯಆಳಿನಾಳಿನ ದಾಸ ಅಡಿದಾಸ ನಾನಯ್ಯ 2 ಹಲವು ದಾಸರ ಮನೆಯ ಹೊಲೆಯ ದಾಸನು ನಾನುಕುಲವಿಲ್ಲದ ದಾಸ ಕುರುಬ ದಾಸಛಲದಿ ನಿನ್ನ ಭಜಿಪರ ಮನೆಯ ಮಾದಿಗ ದಾಸಸಲೆ ಮುಕ್ತಿ ಪಾಲಿಸೆನ್ನೊಡೆಯ ಕೇಶವನೆ 3
--------------
ಕನಕದಾಸ
ದಾಸ ದಾಸರು ಪೇಳುತಿಹರಲ್ಲಾ ಕೇಶವಾ ಎಂದು ತಾಸು ತಾಸಿಗೆ ಪೇಳುತಿಹರಲ್ಲಾ ಪ ರಾಮನೆಂಬರು ನಿಮಿಷ ನಿಮಿಷಕೆ ನೇಮದಿಂದಲಿ ಹರಿಯ ಭಜಿಪರು ರಾಮನಾಮವ ಹಲವು ವಿಧದಲಿ ಪ್ರೇಮದಿಂದಲಿ ಸ್ಮರಿಸುತಿಹರು 1 ಮಾತು ಮಾತಿಗೆ ಕೃಷ್ಣಯೆಂಬರು ನೀತಿ ನೀತಿಗೆ ವಿಠಲಯೆಂಬರು ಸೇತು ಬಂಧನ ಸ್ವಾಮಿ ನಾಮವ ನಿತ್ಯ ನುಡಿಯಲಿ ನೆನೆಯುತಿಹರು 2 ಕಾಲ ಕಾಲಕೆ ಶೇಷಶಾಯಿಯ ನೀಲರೂಪನ ನಾಮ ಸವಿಯುತ ಮೂರ್ತಿ ಕೀರ್ತನೆ ವೇಳೆ ವೇಳೆಗೆ ಮಾಡುತ 3 ನಿತ್ಯ ಮಾರ್ಗದಿ ನಾವೆ ರೂಪವ ಧರಿಸಿ ಭವದೊಳು ರಾವಣಾಂತ ಕನಡಿಯ ಸೇರುವ 4
--------------
ಕರ್ಕಿ ಕೇಶವದಾಸ
ದಾಸ ನಾನೆಂಬೇ ಗುರು ಭಕುತರಾ ಪ ಗುರುವೇ ಜನಕ ಘನ ಗುರುವೇ ಜನನಿಯ | ಗುರುವೇ ಗೆಳೆಯ ನಿಜ ಗುರುವೇ ಆತ್ಮನು | ಗುರುವೇ ಬಂಧುವು ಗುರುವೇ ಇಷ್ಟನು | ಗುರುವೇ ಗತಿಮತಿ ಗುರುವೆಂದವರಾ 1 ಗುರುವೇ ಚತುರ್ಮುಖ ಗುರು ಕಮಲಾಂಬಕ | ಗುರುವೇ ಸದಾಶಿವ ಗುರುವೇ ಸಂತರು | ಗುರುವೇ ಸುರಭಿಯ ಗುರು ಚಿಂತಾಮಣಿ | ಗುರು ಧನದ್ರವ್ಯನು ಗುರುವೆಂದವರಾ 2 ಗುರು ವಚನವೇ ಶೃತಿ ಗುರುದಯ ಮುಕ್ತಿಯು | ಗುರು ಗೃಹ ಕ್ಷೇತ್ರವು ಗುರು ನೋಟ ಪರಸವು | ಗುರು ಸ್ಮರಣೆಯೇ ಜಪ ಗುರು ಮಹಿಪತಿ ಪ್ರಭು | ಗುರು ಭಕ್ತಿಯೇ ತಪ ಗುರುವೆಂದವರಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಾಸ ನಾನೆಲೊ ಹರಿದಾಸ ನಾನೆಲೊ ಶ್ರೀಶ ನಿಮ್ಮ ಶ್ರೀಪಾದಕಮಲ ಪ ಭವಭವದಿ ಜನಿಸಿ ಜನಿಸಿ ಬವಣಿಸಿದ್ದನುಭವಕ್ಕೆ ತಂದು ಭವಭೀತನಾಗಿ ನಿಮ್ಮ ಪಾವನಂಘ್ರಿ ಮರೆಯಹೊಕ್ಕೆ1 ಶರಧಿ ಈಸಿ ಪರಲೋಕ ಪಥದಿ ನಿಂತು ಪರಕೆ ಪರಮಪರತರನ ಪರಮಬಿರುದುಪೊಗಳುವಂಥ 2 ಶರಣಾಗತವತ್ಸಲ ನಿನ್ನ ಚರಣನಂಬಿ ಶರಣು ಮಾಳ್ಪೆ ತರಳನಾಲಾಪ ಕರುಣದಾಲಿಸಿ ಚರಣದಾಸಸೆನಿಸಿಕೊ ಶ್ರೀರಾಮ 3
--------------
ರಾಮದಾಸರು
ದಾಸ ಪಟ್ಟವೋ ಸನ್ಯಾಸ ಪಟ್ಟವೋ ಪ ಆಸೆಯಿಂದ ನೆಲೆಯಾದಿಕೇಶವನ್ನ ನೆನೆಯದವಗೆಅ ಮಂಡೆ ಬೋಳು ಮಾಡಿ ನಾಮದುಂಡೆಯನ್ನು ಬರೆದು ಕೆಡಿಸಿಕಂಡಕಂಡವರನು ಕೂಡಿಭಂಡ ಜನ್ಮ ಹೊರೆಯುವವಗೆ 1 ಅವರಿವರ ಕೈಯ ನೋಡಿ ಹ-ಲವು ಕೆಲವು ಮಾತನಾಡಿ ಹ-ಲವ ಹಂಬಲಿಸಿ ದಿ-ನವ ಕಳೆದು ಉಳಿದು ಬಾಳುವಗೆ 2 ಬೆಂದ ಸಂಸಾರವೆಂಬಬಂಧನದೊಳಗೆ ಸಿಲುಕಿಕೊಂಡುಚೆಂದಾದಿಕೇಶವನ್ನಒಂದು ಬಾರಿ ನೆನೆಯದವಗೆ 3
--------------
ಕನಕದಾಸ
ದಾಸಕೂಟ ವರ್ಣನೆ ಸಾಟಿಯುಂಟೆ ಶ್ರೀನಿವಾಸನ ದಾಸಕೂಟದ ಮ್ಯಾಳಕೆ ಬೂಟಕದ ಮಾತಲ್ಲ ಕೇಳಿರಿ ಭಜನೆ ಮಾಡುತ ತಾಳಕೆ ಪ. ವಾಸುದೇವನ ವರ್ಣಿಸಲು ಕಮಲಾಸನಾದಿ ಸುರೇಂದ್ರರು ದಾಸಜನರ ಸಮೂಹದೊಳಗಾವಾಸವಾಡುತ ನಲಿವರು ಸೂಸುತಿಹ ಗಂಗಾದಿನದಿಗಳು ಬ್ಯಾಸರದೆ ಬಂದಿರುವವು ಕೇಶವನ ಕೊಂಡಾಟ ಧರೆಯೊಳು ಮೀಸಲಳಿಯದೆ ಮಧುರವು 1 ಬಾರಿಸುತ ತಂಬೂರಿ ತಾಳವ ನಾರದರ ಸಂಸ್ಮರಿಸುತ ಭೂರಿ ಕಿಂಕಿಣಿ ಮದ್ದಳೆಯ ಶೃಂಗಾರ ರಸವನು ಸುರಿಸುತಾ ವಾರಿಜಾಕ್ಷನ ಪರಮಮಂಗಳ ಮೂರುತಿಯ ಮುಂದಿರಿಸುತ ಮಾರುತನ ಮತವರಿತು ಬಹುಗಂಭೀರ ಸ್ವರದಿಂದರುಹುತಾ 2 ಹಿಂದೆ ಗಳಿಸಿದ ಹಲವು ದುರಿತವು ಕುಂದುವುದು ನಿಮಿಷಾರ್ಧದಿ ಅಂದಿನಂದಿನ ದೋಷದುಷ್ಕøತವೊಂದು ನಿಲ್ಲದು ಕಡೆಯಲಿ ಇಂದಿರಾಧವ ಶೇಷ ಭೂಧರ ಮಂದಿರನು ಮಹ ಹರುಷದಿ ಮುಂದೆ ನಲಿವುತ ಮನಕೆ ಪೂರ್ಣಾನಂದವೀವನು ನಗುತಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ