ಒಟ್ಟು 3814 ಕಡೆಗಳಲ್ಲಿ , 122 ದಾಸರು , 2565 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚೆನ್ನಕೇಶವದೇವರಾಯಇನ್ನು ಸುಖಿಪೆನೆಂತೆನಗೆ ಅನ್ಯಥಾ ಗತಿಯಿಲ್ಲ ಪ. ಅನುದಿನ ಸಂದಣಿಸೆ 1 ಉಡುವಾಸೆ ನುಡಿವಾಸೆ ಬೇಡುವಾಸೆ ಕೊಡುವಾಸೆಒಡಲ ತುಂಬಬೇಕೆಂಬ ಆಸೆಕೊಡದವನ ಬಡಿದು ಜಡಿವಾಸೆ ಬಿಡದಿರಲು 2 ಹಯವದನನೆ ದೇವ ನಿನ್ನ ನೆನೆಯದಿದ್ದೀಮನಕೆಭಯವೆಲ್ಲಿಹುದು ಜಗನ್ನಾಥ ನಿನ್ನದಯವನೆ ಬೀರಿ ನಿರ್ದಯನನ್ನುದ್ಧರಿಸೊ 3
--------------
ವಾದಿರಾಜ
ಚೋದ್ಯ ಚೋದ್ಯ ಸರ್ವದ ವೇದ ವೇದ್ಯ ನಂಬಿದ ಭಕ್ತ ಜನರಿಗಾಗುವ ಸುಖಸಾಧ್ಯ ಪ. ಶ್ರೀ ಮಹೀಶ ಸತ್ಯಭಾಮೆಯರರಸ ಸು- ಧಾಮ ತಂದವಲಕ್ಕಿ ಪ್ರೇಮದಿಂದಲಿ ಮೆದ್ದ 1 ಅಂಡಜವಾಹ ಬ್ರಹ್ಮಾಂಡಗಣಾತತ ಪಾಂಡುಕುವರನಿಗಾದನು ಭಂಡಿಸೂತ 2 ಆದರೀ ಕೃತಮಾಯ ಕೃತ್ಯಕದಂಡ ಸ- ನ್ಮುದದಿಂದ ವಿದುರನ ಮನೆಯ ಪಾಲುಂಡ 3 ಶ್ರೀವರೀವರಿಯಿಂದ ಸರಸಮಾಡುತಲಿರೆ ಗೋಪಿಯರಿಗೆ ಮೆಚ್ಚಿ ಗೋವುಗಳ ಕಾಯ್ದ 4 ಗೊಲ್ಲರ ಹುಡುಗರ ಪೆಗಲೇರಿ ಮೆರೆದ 5 ಘೋರ ಸಂಸಾರಪಹಾರಿ ನಾರದ ವಂದ್ಯ ಜಾರ ಚೋರ ಕೃತ್ಯ ತೋರಿದ ವರದ 6 ಮಾನವ ದೈತ್ಯ ಗಣರಿಗಾಧಾರ ಮ- ತ್ತಾವ ಕಾಲಕು ಭೇದಭೇದವ ಸೇರಾ 7 ತೇಜಸ್ತಿಮಿರಾದಿ ಸೋಜಿಗ ಶಕ್ತಿಮ- ಹೋಜಸನೀತ ಪರಾಜಯ ರಹಿತಾ 8 ಪರದೇಶಿಯ ಮೇಲೆ ಕರುಣ ಕಟಾಕ್ಷದಿ ಸಿರಿಯೊಡಗೂಡಿ ಬಂದಿರುವ ಶೃಂಗಾರ 9 ಸರ್ವಕಾಲದಿ ತನ್ನ ನೆನವಿತ್ತು ದುಷ್ಕøತ ಪರ್ವತಗಳ ಪುಡಿ ಮಾಡುವ ಧೀರ 10 ತನಯನ ಕಲಭಾಷೆ ಜನನಿ ಲಾಲಿಸುವಂತೆ ಸಾರ 11 ಪೋರಭಾವವ ಶುಭವೇರಿಸುವನು ತುಷ ವಾರಿಯು ಗಂಗೆಯ ಸೇರುವಾಕಾರ 12 ವಿದ್ಯ ಬುದ್ಧಿಗಳಿಲ್ಲದಿದ್ದರು ದಾಸರ ನಿರವದ್ಯ ಬೇಗದಲಿ 13 ಸನ್ನುತ ಕರ್ಮವ ಮನ್ನಿಸನೆಂದಿಗು ಮುರನರಕಾರಿ 14 ಚಿಂತಾಕ್ರಾಂತಿಗಳಿರದಂತೆ ಸರ್ವದ ನಿ- ರಂತರ ಪೂಜೆಗೊಂಬರ ಚಕ್ರಧಾರಿ 15 ನಿರುಪಮಾನಂದ ನಿರ್ಭರ ಪುಣ್ಯಮೂರ್ತಿ ಶ್ರೀವರ ಶೇಷ ಭೂಧರವರನ ಸತ್ಕೀರ್ತಿ 16
--------------
ತುಪಾಕಿ ವೆಂಕಟರಮಣಾಚಾರ್ಯ
ಚೋದ್ಯ ಚೋದ್ಯ ಹರಿ ನಿನ್ನ ಆಟ ಸುಲಭವಲ್ಲಾರಿಗೆ ತಿಳಿಯದೀ ಮಾಟ ಪ ಉಣಿಸುವವರೊಳು ನೀನೆ ಉಣುತಿರುವವರಲಿ ನೀನೆ ಉಣಿಸುಣಿಸಿ ಅಣಕಿಸುವ ಬಿನುಗರಲಿ ನೀನೆ ಮಣಿಯುವವರೊಳು ನೀನೆ ಮಣಿಸಿಕೊಂಬರಲಿ ನೀನೆ ಕ್ಷಣಕ್ಷಣಕೆ ಬದಲ್ವಾಗ ಬಣ್ಣಕಗರಲಿ ನೀನೆ 1 ಹೊಡೆಯುವವರಲಿ ನೀನೆ ಹೊಡೆಸುವವರಲ್ಲಿ ನೀನೆ ಹೊಡೆಸಿಕೊಳ್ವರಲಿ ನೀನೆ ಬಿಡಿಸುವವರಲಿ ನೀನೆ ದುಡಿಯುವವರಲಿ ನೀನೆ ದುಡಿಸಿ ಕೊಂಬರಲಿ ನೀನೆ ಬಡವರಲಿ ನೀನೆ ಬಲ್ಲಿದರೊಳ್ನೀನೆ 2 ಕೊಟ್ಟೊಡೆಯರಲಿ ನೀನೆ ಬಿಟ್ಟೋಡ್ವರಲಿ ನೀನೆ ಕೊಟ್ವೊವಚನತಪ್ಪುವ ಭ್ರಷ್ಟರಲಿ ನೀನೆ ಶಿಷ್ಟನಿಷ್ಟರಲಿ ನೀನೆ ಬಿಟ್ಟಾಡ್ವರಲಿ ನೀನೆ ಇಟ್ಟಿಟ್ಟು ಹಂಗಿಸುವ ದುಷ್ಟರಲಿ ನೀನೆ 3 ಪಾಪಿಷ್ಟರಲಿ ನೀನೆ ಕೋಪಿಷ್ಟರಲಿ ನೀನೆ ಶಾಪಿಸುವರಲಿ ನೀನೆ ಶಾಪಕೊಂಬರಲಿ ನೀನೆ ತಾಪತ್ರದಲಿ ನೀನೆ ಭೂಪತಿಗಳೊಳು ನೀನೆ ಅಪಾರ ಸೃಷ್ಟಿ ಸರ್ವವ್ಯಾಪಕನು ನೀನೆ 4 ಇನ್ನರಿದು ನೋಡಲು ಅನ್ಯವೊಂದಿಲ್ಲವು ನಿನ್ನಪ್ರಭೆಯೆ ಸಕಲ ಜಗವನ್ನು ಬೆಳಗುವುದು ನಿನ್ನ ರೂಪವೆ ಜಗ ಎನ್ನಯ್ಯ ಶ್ರೀರಾಮ ಭಿನ್ನಬೇದ ಬಿಡಿಸೆನ್ನ ಧನ್ಯನೆನಿಸಯ್ಯ 5
--------------
ರಾಮದಾಸರು
ಛಲ ಮಾಡುವ ಲೀಲೆಗಳರಿನ್ನಾರನು ಕಾಣಿನೊ | ತ್ಸಲನೆಂಬೊ ನಾಮವನು ಧ್ವಜವೆತ್ತಿ ಮೆರವುವದೊ ಪ ಅತಿಶ್ರೇಷ್ಠನಾಗಿ ಕೀರ್ತಿ ಪಡೆÀದು ಪಸರಿಸಿ | ಪ್ರತಿಯಿಲ್ಲ ಎನಿಸಿಕೊಂಬೆ ನಾ | ಸತತವನು ಪರರಾಶೆ ಮಾಡದಲೆ | ಚತುರತನ ಚತುರೋಪಾಯದಿ ಬಾಳುವೆ | ಕ್ಷಿತಿಯೊಳಗೆ ಅಭಿಮಾನ ಕ್ಷಿತಿಯಾಗದಂತೆ ಸು | ಮತಿಗಳಿಂದಲಿ ಬದುಕುವೆ | ಸುತ ಸಹೋದರ ನಡುವೆ | ಅತುಳ ಬಲವಂತನೆನೆಸುವೆನೆಂದು ಇದ್ದೆನಲ್ಲನೆ 1 ಜಡದೇಹವನು ಮೆಚ್ಚಿ ಮುಪ್ಪು ದೂರೆಂತೆಂದು | ಕಡು ಸಾಹಸವ ತಾಳಿದೇ ಒಡಿಯರಾರೆನಗಿಲ್ಲ ಒಬ್ಬರಿಗೆ | ಒಡಿಯನೆಂದು ಎಡೆಎಡೆಗೆ ಪೇಳಿಕೊಂಬೆ | ಮಡಗಿ ಧನವನು ಧರ್ಮ ಕೊಡದತೀ ಕೃಪಣನಾಗಿ | ಪಡವೆ ಸಂಸಾರವೆಂಬೊ ಅಹಂಕಾರವನು ತಾಳಿ | ಎಡಹಿ ಮುಂಗಾಣದ ಅಧಮನಂತೆ ಇದ್ದೆನಲ್ಲದೆ 2 ಪುರುಷ ಪಟಾಂತ್ರದವನಾಗಿ ಎಲ್ಲ | ಧಿಕ್ಕರಿಸಿ ನಿರಾಕರಿಸುವೆ | ಜರೆದು ನಿಷ್ಕರುಣದಲಿ | ವರ ಅಭ್ಯಾಗತಿಗಳನು | ಹುರುಳಗೆಡಿಸಿ ನೋಡುವೆ | ಗುರು ಹಿರಿಯರನು ಮರುಗುವಂತೆ ಕೇಡು ನುಡಿದು ಉ | ತ್ತರ ಅನುತ್ತರನಾಡುವೆ | ಪರಿಪರಿಯ ಮಾಯದ ಶರಧಿಯೊಳು ಬಿದ್ದು ಲಜ್ಜಿ ಉರಿಯೊಳಗೆ ಪೊಕ್ಕಂತೆ ಮರುಗುತ್ತಿದ್ದನಲ್ಲವೆ 3 ಅಪರಾಧವೇನಯ್ಯಾ ವಿಪರೀತ ತೋರದೆ | ಅ | ಪರಿಮಿತ ಪರಮಹಿಮನೆ | ಉಪಕಾರಕ್ಕಪಕಾರವೊ | ನಿಪುಣತನವಿರಲಿಲ್ಲವೊ | ಸಪುತೆರಡು ಲೋಕದೊಳಗಾನೆಂದು ಇದ್ದೆನಿಲ್ಲವೊ | ವಿಪುಳ ವೈಕುಂಠ ತೊಲಗಿಸದೆ ಸುಮ್ಮನಿರಬಲ್ಲನೆ4 ಪರದೈವ ನಾನೆಂದು ಪೇಳುವರ ಗಂಡನೆ | ಸರಿಗಾಣೆ ಈ ಮಹಿಯೊಳು | ಪತಿ | ಕರಿಸಿ ನಿಜಕರವ ಪಿಡಿಯಾಡದೆ | ಪರಮೇಷ್ಠಿ ಹರಿದು ತಲ್ಲಣಿಸಿ ನೆರದು ಭೀಕರಗೊಂಬರು | ಪರಮಾಣು ರೂಪ ಭಕ್ತರ ಪರುಶ | ಸಿರಿ ವಿಜಯವಿಠ್ಠಲ ವರ ವೆಂಕಟನೆ | ಶರಣಜನ ಪರಿವಾರ5
--------------
ವಿಜಯದಾಸ
ಛಲಾವ್ಯಾಕೊ ನಿನಗೆ ಎನ್ನಲಿ ಪ ಛಲಾವ್ಯಾಕೊ ಕೋಲಾಚಲವೇಂಕಟ ಫಲಾ ನೀಡಿ ನೀ ಭಲಾನೆನಿಸೊ ದೇವಾ ಅ.ಪ ಧರಾತಳದಿ ಭೂಧರಾಗ್ರಮಂದಿರ ಪರಾವರೇಶನೆ ದರಾರಿಕರಶೂರ 1 ರಮಾವರನೆ ತವ ಸಮಾನರಾಗಿಹ ಸುಮಾನಸಾರ್ಕರ ಕ್ಷಮಾತಳದಿ ಕಾಣೆ 2 ಕುಲಾಲಕೃತ ಮೃತ್ ಕಲಾಪಧರಮಹಾ ಉಲಾಯುಗಾತ್ಮಜ ಬಲಾರಿಸುತಸುಖ 3 ಶತ್ರುಬವರದೊಳು ವೃತ್ರಾರಿತನಯನ ಮಿತ್ರಾನ ತೋರಿ ಪೊರೆದ್ಯೊ ಶತ್ರುಹನನದೇವ 4 ತಕ್ಷಣದಲಿ ಸಾಸಿರಾಕ್ಷ ತನಯನ ಪೊರೆದಿ 5 ಭರ್ಮಾನಸ್ತ್ರದ ನಿಜ ಮರ್ಮವರಿತು ನೀ ಧರ್ಮಾಪೌತ್ರನ ಕಾಯ್ದಿ ಸುಧರ್ಮನಾಮಕ ನಿನಗೆ 6 ದಶಾಸ್ಯ ಮುಖಮಹನಿಶಾಚರೇಶರ ದಶಾಕಳದ ಮಹಾ ದಶಾವತಾರನೆ 7 ವಟಾದ ಎಲೆಸಂಪುಟಾದಲೊರಗುಂ - ಗುಟಾವ ನುಂಬುವ ದಿಟಾ ವಿಶ್ವೋದರ 8 ದಾತಾ ಗುರುಜಗನ್ನಾಥ ವಿಠಲ ನಿಜ ದೂತಾಪಾಲಕನೆಂದು ಖ್ಯಾತಾನಾಗಿಹ ನಿನಗೆ 9
--------------
ಗುರುಜಗನ್ನಾಥದಾಸರು
ಛಳಿಸದಿರು ಚಂಡಿ ತನುವೆ ನೀನುಒಳಗಾಗದೊರಟುತನವೆ ತರವೆ ಪಗರ್ಭವಾಸವಗಳಿಸಿದೆ ಹಾಗೆ ನೀನರ್ಭಕತ್ವದಲಾಡಿದೆ ಬಿಡದೆನಿರ್ಭಯದಿ ನೀ ಬದುಕಿದೆ ಭೋಗದಲಿದುರ್ಭಗರ ದಾರಿಗೊಲಿದೆ ನಲಿದೆ 1ಕಾಮಾಂಧಕಾರಕೆಳೆದೆ ನನ್ನ ನಿಷ್ಕಾಮದಲಿ ನಿಲಿಲೀಸದೆ ಕಳದೆನೇಮಕ್ಕೆ ನೀನಲಸಿದೆ ಶೀತೋಷ್ಣಭೀಮಕ್ಕೆ ನೀ ಬೆದರಿದೆ ಬರಿದೆ 2ಕಾಲಗಳ ಬಹು ಕಳಸಿದೆ ವ್ಯರ್ಥದಲಿಶ್ರೀಲೋಲನನುಸರಿಸದೇ ಹೋದೆಮೂಲವನೆವರೆ ಮಾಡಿದೆ ದೋಷಗಳಕೀಲುಗಳಿಗಳಿಕಾಲ್ನೀಡಿದೆ ಜಡಿದೆ 3ಮನವೀಗ ಮಾಡಿತಿನಿತಾ ನಾನಿದಕೆಮನೆ ಮಾತ್ರವಾಗೆ ಮಾತನಿಡುತಾತನುವಿನಲಿ ತಪ್ಪಿಡಿಯುತಾ ಯಾಕೆ ನೀನೆನುವೆಯನೆ ನೀನೆ ಚಿತ್ತವ್ರಾತಾ 4ಮನ ನೀನೆ ನೀನೆ ಮನವೂ ಕ್ರಿಯೆಯಮನ ಮಾಡೆ ಮೂಡ್ದೆತನುವೂ ಘನವೂನೆನೆಯಲೆರಡಿಲ್ಲ ನೀವು ಏಕತ್ವವೆನುತೆಂದೆನಿರೆ ಬಂಧವೂ ದಿಟವೂ 5ಕಾರಣವೆ ಮನವಾದರೆ ಅದರೊಡನೆಹೋರುವೆನು ನಾನು ಹೆದರೆನದರೆತೋರೆ ನೀ ಮುಂದೆ ಬೇರೆ ಬಂಧನವೂಬೀರಿತಿದು ನೀ ಕಯ್ಯಾರೆ ತಾರೆ 6ನೀ ಬಾರದಿರುವೆಯಲ್ಲ ುೀಮಾತನಾ ಬಾಯಲೆನ್ನೆನಲ್ಲಾ ಸೊಲ್ಲಾಆ ಬಗೆಯ ಮೂಡಿತಿಲ್ಲ ಇದಿರಾಗಿನೀ ಬಂದು ನಿಲಲು ಸಲ್ಲಾ ಹೊಲ್ಲಾ 7ನನಗುಂಟು ಮನಸಿಗುಂಟು ವ್ಯವಹಾರನಿನಗಾಗಬಾರದಂಟೂ ನಂಟುಜನಿಸಿಬರೆ ಬಂತುಗಂಟು ಆವರಣವೆನಗಾುತು ಪದರವೆಂಟೂ ಬಂಟೂ 8ಅನುಮಾನವಿಲ್ಲವಿಸಿದಕೆ ಪ್ರತ್ಯಕ್ಷವನುಭವಿಸಿ ಪೇಳ್ದೆನದಕೆ ಅಳುಕೆಜಿನುಗದಿರು ಮುಂದೆ ಜೋಕೆ ಹರಿಯಂಘಿü್ರಯನುಸರಿಸದಂದವೇಕೆ ಬೇಕೆ 9ಹರಿಪಾದಪದ್ಮವನ್ನು ನಾನುಬೆರೆವೆ ನೀ ಬಳಲಿಕೆಯನೂ ುನ್ನೂತರಬೇಡ ತಥ್ಯವನ್ನು ಪಡೆವದಕೆಬರೆ ಮುಂದೆ ಬಹುಮಿತ್ರನೂ ನೀನು 10ಶರೀರವಿರೆ ಶ್ರಮವು ನಿನಗೆ ಜನ್ಮಗಳಧರಿಸುತ್ತ ದಣಿವು ನಿನಗೆ ಹೀಗೆಸರಿಯಾಯ್ತು ದುಃಖ ನಮಗೆ ಇದಕಂಡುಇರುವ ಬಗೆ ವಿಶ್ವದೊಳಗೆ ಹೇಗೆ 11ಅದರಿಂದ ನೀನು ನಾನು ಒಂದಾಗಿಹುದುಗಲಾದಿಯನೀಶನೂ ತಾನುಪದವಿಯನು ಪಾಲಿಸುವನು ಬಳಿಕಲಿನ್ನುದುಸುವಕಷ್ಟಗಳನೂ ಕೊಡನೂ 12ಬರುವದಾನಂದ ನಮಗೆ ತಿರುಪತಿಯವರದ ವೆಂಕಟರಮಣಗೆ ಎರಗೆಭರಿತಾತ್ಮಗಾವು ಹೊರಗೆ ಹೀಗೆ ನಾವಿರಲುಂಟು ದೇವನೊಳಗೆ ಸಲುಗೆ 13ಕಂ||ಛಂದಾನುವೃತ್ತಿ ಮೂರ್ಖರಿಗೆಂದಾಡಿದ ನುಡಿಯು ಸತ್ಯವಾುತೀ ದೇಹವುಮುಂದೊರದೆ ಪೇಳಲುತ್ತರನೀಂದೊಡಬಡಿಸುತ್ತ ಕೇಳಿಕೊಳುತಿಹದೊಲವಿಂ
--------------
ತಿಮ್ಮಪ್ಪದಾಸರು
ಛೀ ಛೀ ಮನವೆ ನಾಚದ ತನುವೆನೀಚವೃತ್ತಿಯ ಬಿಟ್ಟುನೆನೆ ಕಂಡ್ಯ ಹರಿಯ ಪ. ಕಿವಿಗೊಟ್ಟು ಗಂಟೆಯ ನಾದಕ್ಕೆ ಹುಲ್ಲೆಯನಿವಹ ಬಲೆಗೆ ಸಿಕ್ಕಿ ಬಿದ್ದುದನರಿಯನವ ಯೌವನೆಯರ ಕೋಕಿಲಾಲಾಪದಸವಿನುಡಿಗೇಳದಚ್ಯುತನ ಕಥೆ ಕೇಳೊ 1 ಪಣ್ಣೆಂದು ಭ್ರಮಿಸಿ ಪತಂಗ ದೀಪದಿ ಬಿದ್ದುಉಣ್ಣದುರಿವುದ ನೀ ಕಂಡು ಕಂಡರಿಯಬಣ್ಣದಬಲೆಯರ ರೂಪಿಗೆ ಮರುಳಾಗಿಮಣ್ಣ ತಿನ್ನದೆ ಮಾಧವನ್ನ ನೀ ಸ್ಮರಿಸೋ 2 ಗಾಣದ ತುದಿಯ ಮಾಂಸವ ಮೆಲ್ಲುವ ಮತ್ಸ್ಯಪ್ರಾಣವ ಬಿಡುವುದಂಗನೆಯರಧರವಮಾಣದೆ ಬಯಸಿ ಕೆಡದೆ ಶ್ರೀಮನ್ನಾರಾ-ಯಣ ನಾಮಾಮೃತಸವಿ ಎಲೆ ಮನವೆ 3 ಕರಿ ಕರಿಣಿಯ ಸ್ಪರುಶಕೆ ಪೋಗಿಕುಳಿಯ ಬಿದ್ದುದ ನೀ ಕಂಡು ಕಂಡರಿಯಲಲನೆಯರಾಲಿಂಗನಕೆÀಳೆಸದೆ ಸಿರಿ-ಲಲನೇಶನಂಘ್ರಿಯ ಅಪ್ಪಿಕೋ ಮನವೆ 4 ಅಳಿ ಪರಿಮಳಕ್ಕಾಗಿ ನಳಿನದೊಳಗೆ ಸಿಕ್ಕಿಅಳಿವಂತಂಗನೆಯ ಮೈಗಂಧವ ಬಯಸಿಬಳಲದೆ ವರದ ಶ್ರೀಕೃಷ್ಣನಂಘ್ರಿಯೊಳಿಪ್ಪತುಳಸಿಯನಾಘ್ರಾಣಿಸು ಕಂಡ್ಯಮನವೆ 5
--------------
ವ್ಯಾಸರಾಯರು
ಛೀ ಹಳಿ ಥೂ ಖೋಡಿ ಪಾಪಿ ಮನವೆ, ನಿನ್ನ ಪ ಕುಹಕ ಬುದ್ಧಿಗಳೆಲ್ಲ ಬಿಡು ಕಂಡ್ಯ ಮನವೆಅ.ಪ ಬಣ್ಣದ ಬೀಸಣೆಗ್ಯಂತೆ ಹೆಣ್ಣು ತಿರುಗೋದ ಕಂಡು ಕಣ್ಣು ಸನ್ನೆಯಮಾಡಿ ಕೈ ಹೊನ್ನು ತೋರಿ ತಣ್ಣೀರು ಹೊಯಿದ ಹೊಸ ಸುಣ್ಣದಂತೆ ಕುದಿದು ನಿನ್ನ ಕಣ್ಣಿಗೆ ಮಣ್ಣು ಚೆಲ್ಲಿಕೊಂಬರೆ ಮನವೆ 1 ನೆರೆಹೊರೆ ಮನೆಗಳಲಿ ಪ್ರಸ್ಥವನ್ನು ಮಾಡಿದರೆ ಕರೆಯದೆಲೆ ಮೊದಲ್ಹೋಗಿ ಹಾಳು ಹರಟೆ ಬಡಿಗಂಟು ಸುದ್ದಿ ನೂರಾರು ಹೇಳಿ ಅವರ ಹಿರಿಯ ಮಗನಂತೆ ಉದರವ ಪೊರೆವೆ ಮನವೆ 2 ಉತ್ತಮಾನ್ನವ ನೀಡೆ ಮುಸುರೆ ಬಯಸುವಂತೆ ಚಿತ್ತದೊಲ್ಲಭನ ಸಂಗಡದಿ ನಲಿದು ಮತ್ತೆ ಉಪರತಿಗೆ ಪರಪುರುಷನ ಬಯಸುವ ತೊತ್ತು ಬುದ್ಧಿಯನೆಲ್ಲ ಬಿಡು ಕಂಡ್ಯ ಮನವೆ 3 ಪಗಡೆ ಚದುರಂಗ ಕವಡೆಯನಾಡÀ ಕರೆದರೆ ನಿಗುರುವುವು ಕರ್ಣಗಳು ಮೊಚ್ಚೆಯಂತೆ ಜಗದೀಶನ ದಿನದಿ ಜಾಗರಕೆ ಕರೆದರೆ ಮುಗಿಲ್ಹರಿದು ಬಿದ್ದಂತೆ ಧರೆಗಿಳಿವೆ ಮನವೆ 4 ವಾಸುದೇವನ ಪೂಜೆಯೊಮ್ಮೆ ಮಾಡೆಂದರೆ ಬೇಸತ್ತು ತಲೆಯ ಚಿಟ್ಟಿಕ್ಕಿ ಕುಳಿತೆ ಆ ಸಮಯದೊಳಗೊಬ್ಬ ಕಾಸು ಕೊಟ್ಟೇನೆನಲು ದಾಸಿ ಮಗನಂತೆ ಬೆನ್ನಟ್ಟಿ ಪೋದೆ ಮನವೆ 5 ಕುಳ್ಳಿರುವ ಸ್ಥಳವೆಷ್ಟು ಕೂಳು ತಿಂಬುವುದೆಷ್ಟು ಉಳ್ಳನಕ ಕೀರ್ತಿಯಪಕೀರ್ತಿಯೆಷ್ಟು ಗುಳ್ಳೆಯಂದದ ದೇಹನೆಚ್ಚಿ ನೀ ಕೆಡಬೇಡ ಉಳ್ಳಿಪÀರೆ ಸುಲಿದರೆ ಹುರುಳಿಲ್ಲ ಮನವೆ 6 ಬಿಂದು ಮಾತ್ರವೊ ಸುಖವು ದು:ಖ ಪರ್ವತದಷ್ಟು ಸಂದೇಹವಿಲ್ಲವಿದು ಶಾಸ್ತ್ರಸಿದ್ಧ ಎಂದೆಂದು ಸಿರಿಯರಸ ವಿಜಯವಿಠ್ಠಲನಂಘ್ರಿ ಕುಂದದೆ ಹೃದಯದೊಳು ನೆನೆಕಂಡ್ಯ ಮನವೆ 7
--------------
ವಿಜಯದಾಸ
ಜಗದಾದಿವಂದ್ಯನಿಗೆ ಶರಣುಪ ಪನ್ನಗಾನಗದೊಡೆಯ ಶರಣು 1 ತವಪದನಖಾಗ್ರಕೆ ಶರಣು2 ಮೂಡಲಾಗಿರಿಗೆ ಶರಣು ಗಿರಿಯ ಅಡಿದಾವರೆಗಳಿಗೆ ಶರಣು3 ನಡೆರ್ವಡಿಗಳಿಗೆ ಶರಣು4 ಮೆಟ್ಟು ಮೆಟ್ಟಲಿಗೆ ಶರಣು ಮನಮುಟ್ಟ ಮೆಟ್ಟಲೇರುತಿಹ ನಿನ್ನಿಷ್ಟ ಭಕ್ತರಿಗೆ ಶರಣು 5 ತನುಕಷ್ಟ ಹರಿಸಿ ಮನತುಷ್ಟಿಯನು ತೋರ್ವ ಬೆಟ್ಟದಂದಕ್ಕೆಲ್ಲ ಶರಣು 6 ಪರಿವಾರಕ್ಕೆಲ್ಲ ಶರಣು7 ಸ್ವರಶಬ್ದವಾಚ್ಯತವ ಶರಣು 8 ಚೆಲ್ವ ಗಾಳಿಗೋಪುರ ದ್ವಾರಕ್ಕೆ ಶರಣು 9 ಲೀಲೆಯಿಂದಲಿ ನಿನ್ನನೋಲೈಪ ಭಕ್ತರ ಪಾದಪಲ್ಲವಂಗಳಿಗೆ ಶರಣು 10 ಗೋವಿಂದ ಸಚ್ಚಿದಾನಂದ ಮುಕುಂದನೆಂದು- ಚ್ಚರಿಪ ಭಕ್ತರಿಗೆ ಶರಣು11 ಹರಿ ಹರೀ ಹರಿ ಎಂದು ಹರಿದಾರಿ ಪಿಡಿದ ವರ ಅಡಿದಾವರೆಗಳಿಗೆ ಶರಣು 12 ಪರಿಪರಿ ಭಾಧೆಯಿಂ ತರಳನ್ನ ಕಾಯ್ದ ಶ್ರೀ ನರಹರಿಯ ಚರಣಾರವಿಂದಕ್ಕೆ ಶರಣು 13 ತಿರುದಾರಿ ಮೊಣಕಾಲ ಮುರಿಗೆ ಶರಣು 14 ಭಕ್ತರಾಪತ್ತಳಿವ ಶಕ್ತಿಸಂಪತ್ತೀವ ಉತ್ತಮೋತ್ತಮ ಭಕ್ತರಾ ಮಂಟಪಕ್ಕೆ ಶರಣು 15 ಭಕ್ತಿಯಿಂದಲಿ ಸಪ್ತಗಿರಿಯ ದಾಟಿದ ಹರಿ- ಭಕ್ತಜನಸಂದೋಹಗಳಿಗೆ ಶರಣು 16 ಭಕ್ತರುಧ್ಧರಿಸಲು ನಿಂದ ಸಮೀರನಿಗೆ ಶರಣು17 ಜೀವರಿವರೆನ್ನುವರು ದರುಶನವನೀಯೆಂದು ಕ- ರವ ಮುಗಿದು ಹರಿಯ ಸ್ತುತಿಸುವಗೆ ಶರಣು 18 ಪಾವನಾ ಮೂರ್ತಿಯನು ಮಾನಸದಿ ಧೇನಿಸಲು ಭಾವಶುಧ್ದಿಯನೀವ ಜೀವೇಶನಿಗೆ ಶರಣು 19 ಸಚ್ಚಿದಾನಂದಾತ್ಮ ಶ್ರೀ ಮುಕುಂದನ ದಿವ್ಯ ಅರಮನೆಯ ಮಹಾದ್ವಾರಕ್ಕೆ ಶರಣು 20 ಸಿರಿ ಅವ್ಯಾಕೃತಾಕಾಶಾವರಣಕ್ಕೆ ಶರಣು 21 ತೀರ್ಥಮಹಿಮೋಪೇತ ಸ್ವಾಮಿಪುಷ್ಕರಣೀ- ತಟವಿರಾಜಿತ ಅಶ್ವತ್ಥವೃಕ್ಷರಾಜನಿಗೆ ಶರಣು22 ಭೂದೇವಿಯಾರಮಣ ಆದಿಭೂವರಹ ಮೂರ್ತಿಯ ಶ್ರೀಪಾದಯುಗ್ಮಕ್ಕೆ ಶರಣು 23 ಬ್ರಹ್ಮಾಂಡದೊಡೆಯನ ದಿವ್ಯ ನಿಲಯದೊಳಿರುವ ಬಹಿರಾವರಣಕ್ಕೆ ಶರಣು 24 ಸರ್ವಗುಣಸಂಪೂರ್ಣ ವೈಕುಂಠಮಂದಿರನ ಸ್ವರ್ಣಮಯ ಸುಪರ್ಣಸ್ಥಂಭಕ್ಕೆ ಶರಣು 25 ಗಮನ ನಿರ್ಗಮನವುಳ್ಳ ಸುಮನಸರ ಭಕ್ತಜನಸಂಘಕ್ಕೆ ಶರಣು26 ಅಂತರಾವರಣಕ್ಕೆ ಶರಣು 27 ಕಾಂಚನರೂಪ ಸುವರ್ಣಮುಖರೀನದಿ ವಿ- ರಾಜಿತ ತೊಟ್ಟಿತೀರ್ಥ ಸಮಸ್ತ ತೀರ್ಥಗಳಿಗೆ ಶರಣು 28 ಸುಮನಸರು ಹೃನ್ಮನದಿ ಧೇನಿಸುವ ಕಾಂಚನ ವಿಮಾನದಲಿ ಬೆಳಗುತಿಹ ಶ್ರೀ ಶ್ರೀನಿವಾಸನಿಗೆ ಶರಣು 29 ಭೂಗಿರಿಯ ಸೇರಿದ ಶ್ರೀಹರಿಗೆ ಶರಣು 30 ವಾರಿಯೊಳಗ್ಯೋಲಾಡಿ ಶ್ರೀಶೈಲದೊಳು ನಿಂ- ತ ಶ್ರೀಲೋ¯ನಾಗಿರ್ಪಗೆ ಶರಣು31 ಶೇಷ್ಠನೆನಿಸಿದ ದಿಟ್ಟ ಮೂರುತಿಗೆ ಶರಣು 32 ಧರೆಯ ಕೆದರೀ ಬಂದು ಗಿರಿಯ ವರಹನ ಬೇಡಿ ಮರುಳುಮಾಡಿದ ಮಾಯಾರಮಣನಿಗೆ ಶರಣು 33 ತರಳರೂಪವ ಕೆಡಿಸಿ ಗಿರಿಯ ಹುದರಯೊಳಡಗಿ ಸುರಜೇಷ್ಠನೆಂದೀಗ ಪೂಜೆ ಗೊಂಬುವಗೆ ಶರಣು 34 ವಟಪತ್ರಶಾಯಿ ನೀ ವಟುವಾಗಿ ಬೇಡಿ ಭ- ವಾಟವಿಯ ದಾಟಿಸಲು ನಿಂದವಗೆ ಶರಣು 35 ಪೆತ್ತಮಾತೆಯ ಹರಿಸಿ ಮೆತ್ತನಿಲ್ಲಿಗೆ ಬಂದು ಉತ್ತಮಾಗತಿಪ್ರದ ಸರ್ವೋತ್ತಮಗೆ ಶರಣು 36 ಕ್ಷಿತಿಸುತೆಯ ಮಾತನು ಹಿತದಿ ಪಾಲಿಸೆ ವೇದ- ವತಿಯ ಪತಿಯಾಗಿ ನಿಂದವಗೆ ಶರಣು 37 ಗುಟ್ಟಾಗಿ ಪಾಲ್ಕುಡಿದು ಪೆಟ್ಟಿನಾ ನೆಪದಲ್ಲಿ ದೃಷ್ಟಿಗೋಚರನಾದ ಬೆಟ್ಟದೊಡೆಯನಿಗೆ ಶರಣು38 ಉತ್ತಮಾಸ್ತ್ರೀಯರಿಗೆ ನಾಚಿ ಬತ್ತಲೆಯಾಗಿ ಹುತ್ತದೊಳು ಅಡಗಿಯೆ ಮೆರೆದವಗೆ ಶರಣು 39 ಸಿರಿಯ ಹಯವನು ಮಾಡಿ ಚರಿಸಿ ಹರಿಸಿಕೊಂಡವನಿಗೆ ಶರಣು 40 ಹಿರಣ್ಯಗರ್ಭನ ಜನಕ ಸನ್ಮಹಿಯ ಸನ್ನಿಧಿಯ ಕನಕಮಯಕವಾಟಕ್ಕೆ ಶರಣು 41 ತಟಿಕ್ಕೋಟಿನಿಭ ಪೂರ್ಣ ಸಂಪೂರ್ಣ ಲಕ್ಷಣ ಸನ್ಮಾಂಗಳಾ ಸುಂದರ ಮೂರ್ತೇ ತವ ಶರಣು42 ಮುಕ್ತಾಮುಕ್ತಗಣ ವಂದಿತಾ ತವ ಶರಣು43 ನಂದಸುನಂದನ ಜಯವಿಜಯಾದಿ ಪಾ- ಸಂಸೇವ್ಯಮಾನ ತವ ಶರಣು44 ಸರ್ವಾಂಗುಳ್ಳಂಗುಷ್ಠದಳ ವಿಲಸಿತ ಸತ್ ಪಾದ- ಪಂಕಜ ಧ್ವಜ ವಜ್ರಾಂಕುಶಾದಿ ಸುಚಿಹ್ನ ಚಿಹ್ನಿತ ತವ ಶರಣು 45 ಗುಲ್ಫಾರುಣನಖ ಧೃತಾ ದೀಧಿತಿಯುಕ್ತ ತವ ಶರಣು 46 ಬೃಹತ್ ಕಟಿತಟಶ್ರೋಣಿ ಕರಭೋರು ದ್ವಯಾನಿಶ್ರ ತವ ಶರಣು 47 ವೈಜಯಂತಿ ವನಮಾಲ ತವ ಶರಣು 48 ಪ್ರಲಯ ಪೀವರಭುಜ ತುಂಗಂಶೋರಸ್ಥ ಲಾಶ್ರಯ ತವ ಶರಣು 49 ನ್ವಿತ ತವ ಶರಣು50 ಚಾರುಪ್ರಸನ್ನವದನ ಮಂದಹಾಸ ನಿರೀಕ್ಷಣ ಸು- ಭದ್ರನಾಸ ಚಾರುಸುಕರ್ಣ ಸುಕಪೋಲಅರುಣ ತವ ಶರಣು 51 ಸಹಸ್ರ ಫÀಣಶಿರೋಮಣಿಪ್ರಭಾನ್ವಿತ ಶೇಷಶೈಲಸ್ಥ ಶಾಂತ ಪದ್ಮಪತ್ರಾಯತೇಕ್ಷಣ ತವ ಶರಣು 52 ಅನಂತವೇದೋಕ್ತ ಮಹಿಮೋಪೇತ ಸರ್ವಸ್ವರವರ್ಣ ಸರ್ವಶಬ್ದವಾಚ್ಯ ಪ್ರತಿಪಾದ್ಯ ಶರಣು 53 ಸಚ್ಚಿದಾನಂದಾತ್ಮ ಸರ್ವಸುಗುಣೋಪೇತ ಸರ್ವ ಹೃತ್ಕಮಲಸ್ಥಿತ ತವ ಶರಣು 54 ಅಣುತ್ರ್ಯಣು ತೃಟಿಲವ ಕ್ಷಣಾದಿಕಾಲ ಮಹ- ತ್ಕಾಲಾತ್ಮಕ ನಿತ್ಯನಿರ್ಮಲಮೂರ್ತೇ ತವ ಶರಣು 55 ಪರ ಮೇಷ್ಟಿವಂದಿತ ತವ ಶರಣು 56 ತೈಜಸ ಪ್ರಾಜ್ಞ ತುರ್ಯಾ ದ್ಯಷ್ಟರೂಪಾತ್ಮಕ ತವ ಶರಣು57 ಕಂಸಾರಿ ಮುರಾರಿ ಶ್ರೀಹರಿಯೆ ಶರಣು58 ಭವರೋಗಭೇಷಜ ಭಕ್ತಜನಬಂಧೋ ಮುಚುಕುಂದವರದ ಗೋವಿಂದ ಶರಣು 59 ಮುಕ್ತಾಮುಕ್ತಾಶ್ರಯ ಭಕ್ತಜನಸಂರಕ್ಷಣಾ ವ್ಯಕ್ತಾವ್ಯಕ್ತ ಮಹಿಮ ತವ ಶರಣು 60 ತತ್ತದಾಕಾರ ಜಗದಾಪ್ತ ಶರಣು 61 ಚೇತನಾಚೇತನ ವಿಲಕ್ಷಣ ಸ್ವಗತಭೇದವಿವ- ರ್ಜಿತ ಪತಿತಪಾವನಮೂರ್ತೇ ತವ ಶರಣು 62 ಕ್ಷರಾಕ್ಷರ ಪರುಷಪೂಜಿತ ಪಾದ ಪುರಾಣಪುರುಷೋತ್ತಮನೆ ಶರಣು 63 ರವಿಕೋಟಿಕಿರಣ ರತ್ನಕನಕಮಯ ಮುಕು- ಟಾನ್ವಿತ ತವಶಿರಸ್ಸಿಗೇ ತವ ಶರಣು 64 ಸುಂದರಾನಂದ ಆನನಕೆ ಶರಣು 65 ಶ್ರೀಲೋಲ ಶರಣು 66 ಪೂವಿಲ್ಲನಾ ಬಿಲ್ಲ ಪೋಲ್ವ ಹುಬ್ಬು ಕಂಜ - ದಳದೋಲ್ ಚಂಪಕಾಮುಗುಳಿಗೆಣೆನಾಸಿಕಕೆ ಶರಣು 67 ಮಕರ ಕರ್ಣಕುಂಡಲಾನ್ವಿತ ತವ ಕರ್ಣಕ್ಕೆ ಶರಣು 68
--------------
ಉರಗಾದ್ರಿವಾಸವಿಠಲದಾಸರು
ಜಗದೀಶ ವಿಠ್ಠಲನೆ | ಮಗುವ ಕಾಯೋ ಪ ಹಗಲಿರುಳು ಬೆಂಬಲಿಗ | ನಾಗಿ ನೀ ಕರುಣದಲಿಬಗೆಬಗೆಯ ಸುಖವಿತ್ತು | ಹಗರಣವ ಕಳೆಯೋ ಅ.ಪ. ಮರುತ ಮತ ತತ್ವಗಳ | ಅರಿವಿಕೆಯ ಕೊಡು ಇವಗೆಹರಿಗುರೂ ಸತ್ಸೇವೆ | ಪರಮ ಹರುಷದಲೀನಿರುತ ಗೈಯ್ಯು ಮನವ | ಕರುಣಿಸುವುದೆಂದೆನುತಪರಿಪರಿಯ ಪ್ರಾರ್ಥಿಸುವೆ ಶರಧಿಜೆಯ ರಮಣಾ 1 ಕಾಕು ಸಂಗವ ಕೊಡದೆ | ನೀ ಕೊಟ್ಟು ಸತ್ಸಂಗತೋಕನನು | ಪೊರೆಯೆಂದು | ನಾ ಕೇಳ್ವೆ ಹರಿಯೇಬೇಕಾದ ವರ ಇವಗೆ | ನೀ ಕೊಡುತ ಕಾಯುವುದುಶ್ರೀಕಾಂತ ಬೇಡುವೆನೊ ನೀ ಕರುಣಿ ಎನುತಾ 2 ಪಾವಪಾನಿಯ ಪ್ರೀಯ | ಝಾವ ಝಾವಕೆ ನಿನ್ನಪಾವನ ಸ್ಮøತಿಯಿತ್ತು | ಕಾವುದೈ ಹರಿಯೇಪಾವು ಮದ ಹರ ಗುರೂ | ಗೋವಿಂದ ವಿಠ್ಠಲನೆನೀವೊಲಿವುದಿವಗೆಂದು | ಭಾವದಲಿ ಬೇಡ್ವೆ 3
--------------
ಗುರುಗೋವಿಂದವಿಠಲರು
ಜಗನ್ನಾಥದಾಸರು ತಂಗಿ ನೀ ಕೇಳಿದ್ಯಾ ಅಂಗನಾಮಣಿ ರಂಗನೊಲಿದ ಭಾಗವತರ ಮಹಿಮೆಗಳ ಪ ಶ್ರವಣಾದಿ ನವವಿಧ ಸವಿಯ ಭಕುತಿಯಿಂದ ಪ್ರವೀಣನೆನಿಸಿ ಮಾಧವನ ಧ್ಯಾನಿಪ ಖ್ಯಾತಿ 1 ಅಮಿತ ಮಹಿಮನಂಘ್ರಿ ಕಮಲಾಖ್ಯಪರ ಖ್ಯಾತಿ 2 ಶ್ರೀದವಿಠಲನ ಪಾದಭಜಕರಾದ ಸಾಧುವರ್ಯರ ಸುಬೋಧ ಬಣ್ಣಿಪರಾರೆ 3
--------------
ಶ್ರೀದವಿಠಲರು
ಜಡಮತಿ ಮನುಜ ಡಂಭವ ತ್ಯಜಿಸೊ ದೃಢದಿಂದ್ಹರಿಪಾದ ಸತತದಿ ಭಜಿಸೋ ಪ ಒಡಲೊಳ್ವಂಚಕನಾಗಿ ಹೊರಗೆ ಬಹುಮಾನವ ಪಡೆದರೆ ಹರಿ ನಿನ್ನ ಮೆಚ್ಚುವ ನೇನೋ ಅ.ಪ ನಿರುತ ಮಾನಸದೊಳ್ ಮನೆಮಾಡಿಹ್ಯ ಪ್ರಭು ಮರೆವೆ ಪರದೆ ತೆಗೆದಿರವಿಟ್ಟು ನೋಡೋ ಅರಿಯದ ನರರು ನಿನ್ಹಿರಿಯನೆನಲು ಕರಿವರದ ಕಮಲನಾಭನರಿಯನೆ ಮರುಳೆ 1 ಮರುಳನೆ ದುರಿತವ ಸ್ಮರಿಸವನಿತರಲಿ ಅರಿಯುವ ಹರಿ ನಿನ್ನಂತರದಲಿ ನಿಂದು ಮರುಳುಮತಿಯ ನೀಗಿ ಹೊರಒಳಗೊಂದಾಗಿ ಅರೆಲವನಿಲ್ಲದೆ ಪರಮನಂ ಧ್ಯಾನಿಸೋ 2 ಧರೆಮೆಚ್ಚಿ ನಡೆದರೆ ಬರುವುದೇನೆಲೊ ನಿನ ಗ್ಹರಿಮೆಚ್ಚಿ ನಡೆವುದೆ ಪರಮಸೌಭಾಗ್ಯ ಧರೆಯಾಣ್ಮ ಶ್ರೀರಾಮ ಮರೆಯಾಗುವನೆಲೋ 3
--------------
ರಾಮದಾಸರು
ಜನಕನೇನೆನುತೆನ್ನ ಘನವಂತನಿವೆನೆಂದು ಮನದÀಂದು ಬಳಿಸಂದು ಕೊಟ್ಟನಿಂದು ವೇಷವನು ನೋಡಿದೊಡೆ ಋಷಿಯಂದಮಾಗಿಹುದೆ ಭಾಷೆಯಿಂ ಭಾವೆಯೊಲು ಭಾಸಮಹುದೆ ಚರ್ಯೆಯಿಂ ಭೂಭುಜನ ಪರ್ಯಾಯದಿಂದಿಹನೆ ವನಿತೆಯನು ಸಂತವಿಸ ಲರಿಯದವನು ವನಮೂಲ ಫಲವತಿಂದು ವಾಸಿಪಂಥದೊಳಾನೆ ಶೂರನೆಂದು ಘೋಷಿಸುವ ಶೇಷಗಿರಿವಾಸನೆಂದು
--------------
ನಂಜನಗೂಡು ತಿರುಮಲಾಂಬಾ
ಜನನ ಮರಣ ಎರಡು ಇಲ್ಲವೊ ತಾ ತಿಳಿದ ಮೇಲೆ ಪ ಮನದೊಳಿರುವ ಮಮತೆ ಅಳಿದು ಘನವಿವೇಕವಾಗಿ ಕಾಣುವ ಇನಕುಲೇಶನನ್ನು ಬಿಡದೆಅನುರಾಗದೊಳು ಭಜಿಸಿದವಗೆ ಅ.ಪ ಆರುಮೂರು ಮೀರಿ ನೋಡೆಲೈ ಅಲ್ಲಿರುವ ತಾರಕದಾರಿ ಪ್ರಣವ ಸಾರುತಿದೆ ನೋಡೈ ಘೋರ ಕತ್ತಲೆಯನರಿದು ಮಾರಜನಕನನ್ನು ನೆನೆದು ಏರಿ ಶಿಖರದೊಳಗೆಯಿರುವ ತೇರು ಕಂಡುಬಂದಬಳಿಕ 1 ದಾನವಾರಿಯನ್ನು ಕಾಣೆಲೊ ಶ್ರೀಪರಮ ಚರಿತ ಗಾನಲೋಲನನ್ನು ಕಾಣೆಲೈ ಭಾನುಕೋಟಿರೂಪನಹುದು ಗುರುವು ತುಲಸಿರಾಮದಾಸ ದೀನರಕ್ಷಕನೆಂದು ಭಜನೆ ಮಾಡಿಕೊಂಡು ಬಂದಬಳಿಕ 2
--------------
ಚನ್ನಪಟ್ಟಣದ ಅಹೋಬಲದಾಸರು
ಜನಿಸಿ ನಾ ಬುವಿಯೊಳು ನಿನಗೆ ದುಡಿಯುವುದಾಯ್ತು ಎನಗೇನುಫಲ ಪೇಳು ಮಾಯವೆ ಎಲೆ ಜೀವವೆ ಪ ನಿನಗೆ ನೀ ದುಡಿಯುವಿ ಎನಗೆ ದುಡಿಯುವುದೇನು ದಿನಸರಿಯದೆನುವುದು ನ್ಯಾಯವೆ ಎಲೆ ಕಾಯವೆ ಅ.ಪ ಘನರೋಗ ತಾಪತ್ರವನುಭವಿಸುವುದೆಲ್ಲ ನಿನಗಾಗಲ್ಲೇನು ಪೇಳು ಮಾಯವೆ ಎಲೆ ಜೀವವೆ ನಿನಗೆ ಬಂದ ಕರ್ಮವನುಭವಿಪೆಯಲ್ಲದೆ ಎನಗಾಗೆನುವುದು ನಿಜನ್ಯಾಯವೆ ಎಲೆ ಕಾಯವೆ 1 ಬನ್ನ ಬಡುವೆನಲ್ಲ ಕರ್ಮ ಮಾಯವೆ ಎಲೆ ಜೀವವೆ ಎನ್ನ ಜೋಪಾನವು ನಿನ್ನಿಂದಲೆಂಬುವುದು ಮಣ್ಣುಗೊಂಬೆ ನಿನಗೆ ನ್ಯಾಯವೆ ಎಲೆ ಕಾಯವೆ 2 ಚಳಿಮಳೆಬಿಸಿಲಿನ ಬಲುತಾಪದಲಿ ನಿನ್ನ ಸಲಹುವರಾರ್ಹೇಳು ಮಾಯವೆ ಎಲೆ ಜೀವವೆ ಚಳಿಮಳೆಬಿಸಿಲಿನ ಬಲುತಾಪ ಎನಗೆಲ್ಲಿ ಎಲುವಿನ್ಹಂದರ ನಿಂದೀನ್ಯಾಯವೆ ಎಲೆ ಕಾಯವೆ 3 ಭಿನ್ನ ಮಾತುಗಳೇನೋ ಮಾಯವೆ ಎಲೆ ಜೀವವೆ ನಿನ್ನದು ದಾವೂರು ನನ್ನದು ದಾವೂರು ಎನ್ನ ಸರಿಗಟ್ಟುವುದು ನ್ಯಾಯವೆ ಎಲೆ ಕಾಯವೆ 4 ನಾನಿಲ್ಲದಿರೆ ನಿನ್ನ ಖೂನವರಿವರಾರು ನೀನೆ ಪೇಳೆಲೋ ನಿಜ ಮಾಯವೆ ಎಲೆ ಜೀವವೆ ಹೀನನೆ ನೀನೆನ್ನ ಖೂನವರಿಯದೆ ಬಿನಗು ಶ್ವಾನನಂತೊದರುವುದು ನ್ಯಾಯವೆ ಎಲೆ ಕಾಯವೆ 5 ಹೊನ್ನೂ ಹೆಣ್ಣು ಮಣ್ಣು ಎನ್ನಿಂದ ಪಡೆದು ನೀ ಧನ್ಯನೆನಿಸುವೆಯಲ್ಲ ಮಾಯವೆ ಎಲೆ ಜೀವವೆ ನಿನ್ನಗದರ ಫಲ ಎನ್ನಗೇನೆಲೆ ಪಾಪಿ ನಿನ್ನ ಮೋಹಿಸಿ ನಾನು ಕೆಡುವೆ ಎಲೆ ಕಾಯವೆ 6 ಎನ್ನಿಂದ ಕೆಡುವೆನೆಂಬನ್ಯವಾದವು ಬೇಡ ನಿನ್ನದೆಲ್ಲವ ಬಲ್ಲೆ ಮಾಯವೆ ಎಲೆ ಜೀವವೆ ಬನ್ನ ಬಡುವೆ ಸತತ ಎನ್ನನರಿವುದು ನಿನ್ನಗಳವೇ ಎಲೆ ಕಾಯವೆ 7 ಹೇವನಿನಗ್ಯಾಕಿಷ್ಟು ಸಾವುತ್ಹುಟ್ಟುತ ನೀನು ನೋಯುವುದ ಬಲ್ಲೆ ನಾ ಮಾಯವೆ ಎಲೆ ಜೀವವೆ ಹೇವದಮಾತಲ್ಲ ಸಾವುಹುಟ್ಟೆನಗಿಲ್ಲ ಕೇವಲನಾದಿಕಾಲದಿರುವೆ ಎಲೆ ಕಾಯವೆ 8 ಕೇವಲನಾದಿಯು ಜೀವ ನೀನಾದರೆ ದೇವರೆ ನೀನಿದ್ದಿ ಮಾಯವೆ ಎಲೆ ಜೀವವೆ ದೇವರು ನಾನಲ್ಲ ದೇವ ಶ್ರೀರಾಮನ ಕೇವಲದಾಸ ನಾನಿರುವೆ ಎಲೆ ಕಾಯವೆ 9
--------------
ರಾಮದಾಸರು