ಒಟ್ಟು 2981 ಕಡೆಗಳಲ್ಲಿ , 118 ದಾಸರು , 2249 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಿಮ್ಮಿ ಸಾಲೆ ರಂಗ ದಿಮ್ಮಿ ಸಾಲೆ ಪ. ದಿಮ್ಮಿ ಸಾಲೆನ್ನಿರೊ ಗೋಮಕ್ಕಳೆಲ್ಲ ನೆರೆದುಗೋಪಾಂಗನೇರÀ ಮೇ¯ ಒಪ್ಪಿ ಭಸ್ಮ ಸೂಸುತಅ.ಪ. ಶಂಖನಾದ ಕೊಳಲ ಭೇರಿ ಪೊಂಕದಿ ಪಂಚಮಹಾವಾದ್ಯದಿಅಂಕವತ್ಸಲನ ನಿರಾತಂಕದಿಂದ ಹಿಡಿವ ಬನ್ನಿ1 ಗಂಧ ಕಸ್ತೂರಿ ಪುನುಗು ಚೆಂದದಿಂದ ಲೇಪಮಾಡಿನಂದಗೋಪಸುತನ ಮೇಲೆ ತಂದು ಸೂಸಿ ಭಸ್ಮವ 2 ಎರಳೆಗಣ್ಣಿನ ಬಾಲೇರು ಹರುಷದಿಂದ ಬಂದು ನಿಂತುವರದ ಕೆÉೀಶವನ ಮೇಲೆ ಪರಿದು ಸೂಸಿ ಭಸ್ಮವ 3 ಮತ್ತೆ ಕುಶಲದ ಬಾಲೆಯರುಗಳಿತ್ತೆರದಲಿ ಬಂದು ನಿಂತುಚಿತ್ತಜನಯ್ಯನ ಮೇಲೆತ್ತಿ ಸೂಸಿ ಭಸ್ಮವ 4 ವಾದಿರಾಜಗೊಲಿದು ಬಂದು ಸೋದೆಪುರದಲ್ಲಿ ನಿಂದಮೋದಿ ಹಯವದನನ ಮೇಲೆ ಪರಿದು ಸೂಸಿ ಭಸ್ಮವ5
--------------
ವಾದಿರಾಜ
ದೀನ ಪರಿವಾರ ಪಾಹಿ ದಾತಾರ ಮಾಂ ದೇಹಿಮೇ ಚರಣಸೇವಾಂ ಪ ಬೃಂದಾವನಶೈಲವಾಸ ಪರಮಕೃಪಾಕರ ಪಾಪನಾಶ ಸುಧೀಂದ್ರ ವಿಭೂಷ ಹೃದಯೋಲ್ಲಾಸ ಅ.ಪ ಸರ್ವೇಶ ವೆಂಕಟೇಶ ಗುರುವರ ಸುಖಧಾಮ ಸುರರಂಜನ ಅಖಿಲ ಬೃಂದಾಳಿಭೀಮ ಶ್ರೀರಾಮ ಪರಿಭಾಷಾ ಮನಿವೇಶ ಜಿತಸೋಮ 1 ಪ್ರಾಣೇಶಸುತ ಭಜನ ಸತತ ವಿರಾಜ ಪರಿ ಪೂರ್ಣದರ್ಶನ ನಿರಂತರದಾಯಕ ಮುನಿಪುಂಗವ ಹರಿಣ ಸಾರಾಂಗ 2 ಮಂಗಳ ಚರಣ ತುರಂಗ ಗಂಗಾಮೃತ ಪೂರ್ಣತೀರ್ಥ [ತುಂಗಾತೀರ ನಿವಾಸಿನೀಂ] ಮಾಂಗಿರಿರಂಗ ಸಂಪ್ರೀತ ಮಾಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದೀನನ ಸೇರಿದರೇನು ಫಲ ರಾಮ ಗುಣ ಹೀನನ ಸೇರಿದರೇನು ಫಲ ಪ ಮಕ್ಕಳು ಜನಿಸದರೇನು ಫಲ ಒಕ್ಕಲುತನದಿಂದೇನು ಫಲ 1 ಜನನೀ ಜನಕರಿಗೇನು ಫಲ ಮನುಜರಿಗೇನು ಫಲ 2 ಅರಿಯದೆ ಕೊಂಡವಗೇನು ಫಲ ಹರಿಯವನಾಗಿರಲೇನು ಫಲ 3 ಹೆಂಡತಿಯಿರಲೇನು ಫಲ ಗಂಡಸುತದಿಂದೇನು ಫಲ 4 ತೆರದಲಿ ಸಿಂಗರಸಿದರೇನು ಫಲ ಪರಿಪರಿ ಪುಣ್ಯದಿಂದೇನು ಫಲ5
--------------
ವೆಂಕಟವರದಾರ್ಯರು
ದೀನಪಾಲನ ನಾರಿಮಾನರಕ್ಷಣ ಸಿರಿ ಪ್ರಾಣರಮಣ ಹರಿ ನಾರಾಯಣ ಪ ಸೋಮಕಾಸುರಹರ ಕಾಮಿತ ಪರಿಹರ ಭೂಮಿಜೆಜನಕಜಯ ಜನಾರ್ದನ ಸ್ವಾಮಿ ಗೋವಿಂದ ಮೇಘಶ್ಯಾಮ ಮುಕ್ಕುಂದ ಭಕ್ತ ಪ್ರೇಮ ಆನಂದ ಹರಿ ನಾರಾಯಣ 1 ಪಾಷಾಣಪಾವನ ದೋಷನಿವಾರಣ ನಾಶರಹಿತ ಸುಪ್ರಕಾಶನೆ ಶೇಷಶಯನ ಗಿರಿವಾಸ ದಾಸರ ಪ್ರಾಣೇಶ ಕೇಶವ ಹರಿ ನಾರಾಯಣ 2 ವಾರಿಧಿಮಥನ ನಾರದವಂದನ ಕಾರುಣ್ಯನಿಧಿ ಕರುಣಾಂತರ್ಗತ ನಾರಸಿಂಹ ದಿವ್ಯಾಪಾರಮಹಿಮ ಸುರ ಘೋರನಿವಾರ ಹರಿ ನಾರಾಯಣ 3 ಶಾಂತ ಶಾಂತಾಕಾರ ಶಾಂತಜನಾಧಾರ ಶಾಂತಿ ಸದ್ಗುಣಧಾಮ ಶುಕ್ಲಾಂಬರ ಶಾಂತಮೂರುತಿ ಭೂಕಾಂತ ಪರಮವೇ ದಾಂತಾತೀತ ಹರಿ ನಾರಾಯಣ 4 ನಾಥ ಜಾನಕೀಪ್ರಾಣ ಭೂತಳಪಾವನ ದಾಥ ಜಗನ್ನಾಥ ವಿಶ್ವಾಂಬರ ಪಾತಕಹರ ವಿಧಿತಾತನೆ ನಿಜಸುಖ ದಾತ ಶ್ರೀರಾಮ ಹರಿ ನಾರಾಯಣ 5
--------------
ರಾಮದಾಸರು
ದೀಪವಿದ ಬೆಳಗುವೆನು ದೇವ ನೀ ನೋಡುವ್ಯಾಪಿಸಿದ ತಿಮಿರವನು ಪರಿಹರಿಸಿ ರಂಜಿಸುವ ಪಸಕಲ ದೇವಾತ್ಮಕದ ತಿಲ ತೈಲವಾಗಿರಲುಅಕಲುತ ವರ್ತಿುಂ ಮಿಳಿತವಾಗಿ ಪ್ರಕಟವಾಗಿರುವಗ್ನಿ ಪ್ರಭೆಯೊಡನೆ ಸ್ಫುಟವಾಗಿಮುಖ ಸಮೀಪದಿ ಮೂರು ಲೋಕಗಳ ಬೆಳಗುತಿಹ 1ಜ್ಞಾನವೇ ಗೋಘೃತವು ಮೂರ್ತಿಗಳೆ ವರ್ತಿಗಳುನೀನಿದಕೆ ಮೂಲ ಕಾರಣವಸ್ತುವೂಸಾನುಕೂಲದಿ ಗುಣಗಳೊಂದಾಗಿ ಚಿತ್ತಿನೊಳುಲೀನವಾಗಿರೆ ನಿರ್ಮಲಾಕೃತಿಯ ತಾಳಿರುವ 2ಎನ್ನ ಜೀವವೆ ದೀಪ ನಿನ್ನ ಪಾದವೆ ಬ್ರಹ್ಮಭಿನ್ನ ಭಾವವನುಳಿದು ಪೂರ್ಣರೂಪದಲಿನಿನ್ನೊಳಗೆ ನಿಲಿಸೆನ್ನ ಪುಣ್ಯತಮವೆಂದೆನಿಪಸ್ವರ್ಣಮಯ ತಿರುಪತಿಯ ವಾಸ ವೆಂಕಟರಮಣ 3 ಓಂ ಸಚ್ಚಿದಾನಂದವಿಗ್ರಹಾಯ ನಮಃ
--------------
ತಿಮ್ಮಪ್ಪದಾಸರು
ದುಃಖವನೆಷ್ಟೆಂದು ಹೇಳಲಿ ಸಂಸಾರ ಶರಧಿಯಿದುದುಃಖದ ಶರಧಿಯಿಂದ ಪರಮಾತ್ಮನ ಸ್ಮರಣೆಗೆ ವಿಘ್ನವಹುದು ಪ ಮಗ ಬುದ್ಧಿವಂತನಾಗಲಿಲ್ಲವೆಂದೆಂಬಮಗಳಿಗೊದಗಲಿಲ್ಲ ಅಳಿಯ ಎಂದೆಂಬಹಗರಣವಾಯಿತು ಮನೆಯೀಗ ಎಂದೆಂಬ ದುಃಖವೊಂದುಜಗಳಗಂಟಿಯು ಎನ್ನ ಹಿರಿಯ ಸೊಸೆ ಎಂದೆಂಬ ದುಃಖವೊಂದು1 ಹೆಂಡತಿ ವ್ಯಭಿಚಾರಿಯಾದಳು ಎಂದೆಂಬ ದುಃಖವೊಂದುಉಂಡೆನೆಂದರೆ ಅನ್ನವಿಲ್ಲ ಎಂದೆಂಬ ದುಃಖವೊಂದುಕಂಡಕಡೆಗೆ ಹೋಗೆ ಕೈ ಹತ್ತದೆಂದೆಂಬ ದುಃಖವೊಂದುಮುಂಡೆಯಾದಳು ಎನ್ನ ಮೊಮ್ಮಗಳು ಎಂದೆಂಬ ದುಃಖವೊಂದು 2 ನೆಂಟರಿಗೆ ಮಾಡಲೆನ್ನೊಳಿಲ್ಲವೆಂದೆಂಬ ದುಃಖವೊಂದುಒಂಟಿ ಬಯಲಿನ ಹೊಲವು ಬೆಳೆಯದು ಎಂದೆಂಬ ದುಃಖವೊಂದುಕಂಟಕಿ ನಾದಿನಿ ಹಡೆಯಲಾರಳು ಎಂದೆಂಬ ದುಃಖವೊಂದುಎಂಟು ವರಹ ಎಮ್ಮೆ ಸತ್ತಿತು ಎಂದೆಂಬ ದುಃಖವೊಂದು3 ಎದೆ ಮೇಲೆ ಕುಳಿತಿಹರು ದಾಯಾದಿಗಳೆಂದೆಂಬ ದುಃಖವೊಂದುಮುದುಕಿಗೆ ಗೆಲುವು ತಾನಿಲ್ಲವೆಂದೆಂಬ ದುಃಖವೊಂದು ಮದುವೆಗೆ ಹಾದಿಲ್ಲ ಹಾವಳಿ ಎಂದೆಂಬ ದುಃಖವೊಂದುಸದನ ಒಳ್ಳೇದಲ್ಲ ಏಳು ಮಕ್ಕಳ ತಾಯಿ ಎಂಬ ದುಃಖವೊಂದು 4 ಜೋಡಿಪೆ ಧೈರ್ಯವೆಂದರೆ ನಿಶ್ಚಯಾಗಲಿಕೆ ಕೊಡದು ಒಂದುನೋಡುವೆ ಚಿಂತಿಸಿ ಎನೆ ಚಿಂತೆ ಹರಿಯಲು ಕೊಡದು ಒಂದುಮಾಡುವೆ ಮಂತ್ರ ಪೂಜನ ಪೂಜೆ ಮಾಡಲು ಕೊಡದು ಒಂದುಕೊಡುವೆ ಗುರು ಚಿದಾನಂದನೆನೆ ಕೂಡಗೊಡದು ಎಂದು 5
--------------
ಚಿದಾನಂದ ಅವಧೂತರು
ದುಮು ದುಮು ಬಸವಂತನ ಹಬ್ಬಾ ಪ ರಾಮಕೃಷ್ಣ ಗೋವಿಂದ ಮುರಾರಿ | ಶಾಮ ಸುಂದರ ಸುರಜ ಸಹಕಾರಿ | ಕಾಮಿತ ಫಲಗಳ ನೀವ ಉದಾರಿ | ಶ್ರೀ ಮಾಧವನೇ ಕಾಯೋ ಚರಣವ ದೋರಿ 1 ಬನ್ನ ಬಡುತಲಿ ಬಲು ಭವದಲಿ ಬಂದೆ | ಮುನ್ನಿನ ತಪ್ಪವನೆಣಿಸದೆ ತಂದೆ | ಚೆನ್ನಾಗಿ ರಕ್ಷಿಸು ನಮೋ ನಮೋ ಎಂದೆ 2 ಈ ರೀತಿಯಿಂದಲಿ ಹರಿಯ ಕೊಂಡಾಡಿ | ಆ ರಾಧಿಪ ನವವಿಧದಲ್ಲಿ ಕೂಡಿ | ನಾರಕ ಭಯಗಳುವನು ಮೂಲದೀಡ್ಯಾಡೀ | ಸೂರ್ಯಾಡು ಸ್ವ ಸುಖ ಎಲೊ ಹುಚ್ಚು ಖೋಡಿ 3 ಮುನ್ನಿನ ಪುಣ್ಯದಿ ನರದೇಹ ತಾಳಿ | ಮಾನವನಾಗಿ ಹರಿಕಥೆ ಕೇಳಿ | ಚೆನ್ನಾಗಿ ವಿಷಯದಲನುದಿನ ಬಾಳೀ | ವೈರಿ ನೀನಾದೆ ಗೈಯ್ಯಾಳಿ 4 ಮೃಗಜಲ ಹೋಲುವ ವಿಷಯಾ ನಂದಾ | ಬಗೆದೆಲೋ ಶಾಶ್ವತವೆಂದು ನಿನ್ನಿಂದಾ | ಭಕುತಿಯ ಮಾರ್ಗವ ಬಿಟ್ಟೆಲೋ ಛಂದಾ | ಜಗ ದೊಳಗಾದೆಲೋ ನೀ ಮತಿ ಮಂದಾ 5 ಹೆಂಡರು ಮಕ್ಕಳು ಮಮತೆಯ ಸ್ಥೂಲಾ | ಖಂಡದಿ ಬಿದ್ದಿದೆ ಕಾಲಿಗೆ ಕೋಳಾ | ಅಂಡಲೆವುತ ಹೊಟ್ಟೆಹೊರೆದೆಲೋ ಮೂಳಾ 6 ಸುಖವಿಲ್ಲ ಇದರೊಳಗಿಂದು | ಪಾದ ಹೊಂದು 7 ತ್ವರಿತದಿ ಭಾವಭಕ್ತಿಗೆ ಗಮನವಿಟ್ಟು | ತರಳನಾಗಿ ಹೋಗದಿರೆಲೋ ಕೆಟ್ಟು 8 ಚಿನುಮಯ ಗೆಚ್ಚರಗಳೆದೆಲೋ ಭ್ರಾಂತಾ | ಕುಣಿಸ್ಯಾಡುತಿ ಹನು ಅಚ್ಯುತಾನಂತಾ 9 ಒಬ್ಬರು ಶಾಸ್ತ್ರದ ಮದದಲಿ ಬಿಗಿದು ಉಬ್ಬುಬ್ಬಿ ಕುಣಿದರು ಹೇಳಲೇನಿಂದು 10 ಅಷ್ಟಮದದಿಂದ ಕಣ್ಣು ಮುಚ್ಚಿ | ಕುಟ್ಟುವಾಗ ನೆಲ್ಲಿಕಾಲನು ಘಟ್ಟಿಸಿ 11 ಸಂತರ ಕಥೆ ಕಿವಿಯಲಿ ಕೇಳಲಿಲ್ಲಾ | ಭ್ರಾಂತನೆ ನಾಳೆ ಮುರಿವನು ಹಲ್ಲಾ 12 ನೆರೆದಹಿಸುತ ದುರ್ಮದ ಬೂದಿ ಚೆಲ್ಲಿ | ನರಜನ್ಮ ಸಾರ್ಥಕ ಮಾಡೆಲೊಹುಳ್ಳಿ 13 ಕಂದನು ಸಾರಿದಾ ಹೋಳಿಯಾ ವಂದಾ | ಭವ ಬಂದಾ 14
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದುರಿತ ಉಪಶಮನೆ | ಅಮಮ ಮಂದಗಮನೆ || ಅಗಣಿತ ಸುಮನೆ ಪ ಆ ಮಹಾ ಮಾರ್ತಾಂಡ ಪುತ್ರೆ ಮಂಗಳಗಾತ್ರೆ | ಕಾಮಿತ ಸುಫಲದಾಯೆ ಕಾಲನಿಭ ಕಾಯೆ | ಆ ಮಂಜುಗಿರಿ ಬಳಿಯ ಅಲ್ಲಿ ಪುಟ್ಟಿದ ಸಿರಿಯೆ | ಸೋಮಕುಲಪಾವನೇ ಶರಣ ಸಂಜೀವನೆ 1 ಗಂಗಾ ಸಂಗಮ ಘನತರಂಗಿಣೀ ಮಹಾಮಹಿಮೆ | ಅಂಗವಟೆ ಅತಿ ಚಲುವೆ ನಲಿದಾಡಿ ನಲಿವೆ | ಮುಂಗುರಳು ಸುಮಲತೆ ಮೂಲೋಕ ವಿಖ್ಯಾತೆ | ಕಂಗಳಲಿ ನೋಳ್ಪಂಗೆ ಹೃತ್ಕಮಲ ಭೃಂಗೆ 2 ವಾರಿನಿಧಿ ಪ್ರಥುಕುಗಾಮಿನಿ | ಹಾರ ಮುಖೆ ಸುಪ್ರಮುಖೆ | ವೀರಶಕ್ತಿ ವಿಜಯವಿಠ್ಠಲನ |ಕಾರುಣ್ಯಪಾತ್ರೆ ಸಂಗೀತಲೋಲೆ 3
--------------
ವಿಜಯದಾಸ
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ದುರಿತ ತ್ಯಜಿಸೋ | ವರ ಮಾನವಿ ಪುರದಿ ಮೆರೆವ ಪ ಆದಿಯಲ್ಲಿ ಪ್ರಹ್ಲಾದನ ಸಹೋದರನೀತ | ಯೋಧ ಶಲ್ಯ ದ್ವಾಪರದಿ ರಾಧೇಯಗೆ ಸೂತ | ಪುರಂದರ ದಾಸಾರ್ಯರ ಪ್ರೀತ | ಸಾಧುರಂಗವೊಲಿದ ಭಾಗವತರತಿ ಖ್ಯಾತ 1 ತ್ವರವಾಟದಿ ಕರುಣಿಕ ನರಸಾರ್ಯರಪುತ್ರ | ಧರೆಸುರ ಪರಿಪಾಲಕ ವರದೇಂದ್ರ ಛಾತ್ರ ತುರ ರಕ್ಷಕ ದಾಸರಾಯರ ಕರುಣಕೆ ಪಾತ್ರ ದುರಿತಾಟವಿ ವೀತಿ ಹೋತ್ರ ಘನ ಸುಚರಿತ್ರ 2 ಸೀಮದಿಂದ ಭಜಿಸುವರ ಕಾಮಿತ ಫಲವಾ | ಪ್ರೇಮದಿಂದ ಗರೆಯಲು ಸ್ತಂಭ ದೊಳಿರುವಾ || ಶಾಮಸುಂದರ ಸ್ವಾಮಿಯ ಕಥೆಪೀಯೂಷರಸವ | ಭೂಮಿ ವಿಬುಧ ಸ್ತೋಮಕೆರೆದ ಮಹಾನುಭಾವ 3
--------------
ಶಾಮಸುಂದರ ವಿಠಲ
ದುರಿತಗಜ ಪಂಚಾನನ-ನರಹರಿಯೆ ದೇವರ ದೇವ ಕಾಯೊ ಗೋವಿಂದ ಪ ಹೆಸರುಳ್ಳ ನದಿಗಳು ಒಳಗೊಂಬೊ ಸಮುದ್ರನುಬಿಸುಡುವನೆ ಕಾಲುಹೊಳೆಗಳ ಗೋವಿಂದ 1 ಒಂದು ಮೊಲಕೆ ಆರು ಹುಲಿ ಬಂದು ಕವಿದಿದೆಬಂಧನ ಬಿಡೆಸೆನ್ನ ತಂದೆ ಗೋವಿಂದ 2 ಹೆತ್ತ ಮಕ್ಕಳು ಹುಚ್ಚರಾದರೆ ತಾಯಿ ತಂದೆಎತ್ತದೆ ನೆಲಕೆ ಬಿಸುಡುವರೆ ಗೋವಿಂದ 3 ಕರ್ಮ ಬೆನ್ನ ಬಿಡದಿದ್ದರೆನಿನ್ನ ವಾಲೈಸಲ್ಯಾಕೆ ಗೋವಿಂದ4 ಆಪÀತ್ತು ತಾಪತ್ರಯ ಬೆನ್ನ ಬಿಡದಿದ್ದರೆಶ್ರೀಪತಿ ಶರಣೆನ್ನಲ್ಯಾಕೆ ಗೋವಿಂದ5 ಅರಸು ಮುಟ್ಟಲು ದಾಸಿ ರಂಭೆಯಾದಳು ದೇವಪರುಷ ಮುಟ್ಟಲು ಲೋಹ ಸ್ವರ್ಣ ಗೋವಿಂದ 6 ಮಾನಾಭಿಮಾನದೊಡೆಯ ರಂಗವಿಠಲಜ್ಞಾನಿಗಳರಸನೆ ಕಾಯೋ ಗೋವಿಂದ 7
--------------
ಶ್ರೀಪಾದರಾಜರು
ದುರಿತಾರಿಯೊಳು ಮನವಿರಿಸಿ ಸೌಖ್ಯವತಾಳು ನರಕವು ಬರದೊ ಮಾನವಾ ಪ ಪರಿಪರಿ ಜನ್ಮದೆ ಕೊರಗಿ ಕಂಗೆಡಬೇಡ ಸ್ಥಿರವಲ್ಲವೀ ದೇಹವೂ ಭರವಸದಿಂದ ಅ.ಪ ಮಂದಮತಿಯನಾಂತು ನೊಂದು ಸಾಯಲಿಬೇಡ ಕುಂದುಕೊರತೆಗಳಿಲ್ಲವೋ ವಂದಿಸಲು ಹರಿಯ 1 ಎರಡು ಕಂಬದ ಮೇಲೆ ಮೆರೆವ ಗೋಪುರವಿದು ಬಿರುಗಾಳಿಯಿಂದಲೋ ಉರುತರ ಮಳೆಯೊಳೊ ಉರುಳಿ ಬೀಳುವುದೆಂಬುದು ಬರೆದಿಡೊ ಮೂಢಾ 2 ನೀರ ಬೊಬ್ಬುಳಿಯಂತೆ ಆರಿಹೋಗುವುದಿದು ಸೇರದು ಪದುಮಾಕ್ಷನಾ ಆರುದಿನ ಬಾಳಿಗಾರು ಸಮರೆನಬೇಡ ಆರಡಿ ಕಮಲವುತಾ ಸೇರುವವೊಲು 3 ಎನಗೆ ಮುಂದೊದಗುವ ಜನ್ಮಕೋಟಿಗಳೊಳು ಅನುಗಾಲ ದೇಶವಸ್ಥೆಗಳೊಳಗೂ ವನಜನಾಭನೆ ನಿನ್ನ ಘನಪಾದಕಮಲವ ನೆನೆವ ನೆಲೆಸುವಂದದೆ ಅನವರತ ಬೇಡೋ 4 ಜೀವಾತ್ಮ ಪೋಪಾಗ ದೇವದೇವನ ಮರೆವ ಭಾವಗಳೊಳುದಯಿಪವು ಸಾವಕಾಶವ ತೊರೆದು ಮಾಂಗಿರಿರಂಗನ ದಿವ್ಯನಾಮವ ನೆನೆದು ಭಾವುಕನಾಗು 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದುರ್ಲಭ ಇದು ಕಲಿಯುಗದೊಳಗೆ ಕಾಣಾ ಎಲ್ಲರಿಗೆ ದೊರಕಬಲ್ಲದೆ ಶ್ರೀ ವಲ್ಲಭನ ಪಾದಸೇವೆ ಮಾಡೋ ನೀ ನಲಿದಾಡೋ ಎಲೆ ಮನುಜಾ ಪ ಗಂಧರ್ವರು ಸಿದ್ಧರು ವಿದ್ಯಾ ದರಸಾಧ್ಯ ಗುಹ್ಯಕ ಸುರಮುನಿಗಣ ಗರುಡಾದ್ಯರೆ ನೆರೆದು ಪುರಹರ ಮೂವನ ಬಲ್ಲಿದರೀ ಇಲ್ಲವೆನುತಲಿ ಬರಿದು ರೇಖೆಯ ಬರಿಸಿದರೊ ಡಂಗುರ ಹೊಯಿಸಿದರೊ ಎಲೆ ಮನುಜಾ 1 ಹರಿಯೆಂತೆಂದವ ಧರ್ಮಕೆ ಸಂದವ ಕರದಲಿ ದಂಡಿಗೆ ಪಿಡಿದವ ಪುಣ್ಯವ ಪಡೆದವ ಚರಣದ್ವಯದಲಿ ಗೆಜ್ಜೆಯ ಕಟ್ಟಿದವ ಅಟ್ಟಿದವ ಯಮ ಭಟರ ಹರಿಹರಿದಾಡುತ ಕುಣಿದವ ಉತ್ತಮ ಗುಣದವ ಹಿರಿದಾಗಿ ಗಾಯನ ಪಾಡಿದವ ಸುರರನ ಗೂಡಿದವ ಮಾಯವ ಬಿಡೋ ಎಲೆ ಮನುಜಾ2 ಭವಾಬ್ಧಿ ದಾಟಿದವ ಇಂಬಾಗಿ ಕಡ್ಡಿ ವಾದ್ಯವ ಹಾಕಿದವ ದುರುತವ ನೂಕಿದವ ಸಂಭ್ರಮ ತಾಳ ಕಟದವ ಊಟದವ ಸುರರೊಡನೆ ತುಂಬಿದ ದಾಸರ ಸಭೆಯೊಳಗಿದ್ದವ ನರಕವನೊದ್ದವ ಕಂಬನಿ ಪುಳಕೋತ್ಸವ ಸುರಿದವ ತತ್ವವನರಿದವ ನೀ ಸುಖದಲಿ ಬಾಳೊ ಎಲೆ ಮನುಜಾ 3 ಬೇಸರದಲೆ ಹೇಳಿ ಏಕಾದಶಿಯ ವಾಸರದಲಿ ಜಾಗರವನು ಗೈದ ಮಾನೀಸನು ಅಘನಾಶನು ಚರಣಕೆ ಏರಿಸಿದನಿವ ಬೆರೆದು ಎಲೆ ಮನುಜಾ4 ಗೋಪಾಳವನು ಬೇಡಿ ನಿತ್ಯಸುಖಿಯಾಗಿ ತಾಪತ್ರೆಯ ಮೊದಲಾದ ದುಷ್ಕರ್ಮ ಪಾಪರಹಿತನಾಗಿ ಸಿರಿ ಪದ್ಮವ ಪೊಂದಿದ ಭಜಕರು ಒಂದೇ ಗೇಣೊ ಎಲೆ ಮನುಜಾ 5
--------------
ವಿಜಯದಾಸ
ದೇವ ಕರುಣಾಳು ನೀ ಕಾವಲಾಗಿರುವುದಕೆ ಆವ ವೇತನ ಕೊಡುವೆ ಶ್ರೀ ವರನೆ ನಿನಗೆ ಪ. ರೂಢ ಕೈಪಿಡಿದು ಕಾಪಾಡುತಿಹ ಬಿರುದ ಪಾಡಿ ಪೊಗಳುತ ನಮಿಸಿ ಬೇಡಿಕೊಂಬುವೆನು ನಾ ಮಾಡಿದಪರಾಧಗಳು ನೋಡಲದ್ಭುತವು 1 ನಡೆ ತಪ್ಪು ನುಡಿ ತಪ್ಪು ನಿಂತಲ್ಲಿ ಬಹು ತಪ್ಪು ಖಡುಮೋಹ ಕೃತ ತಪ್ಪು ಕಾಮಕೃತ ತಪ್ಪು ಮಾಡದಿ ಮನೆ ಮಿತ್ರ ಧನ ಒಡವೆಯಾಶೆಯು ತಪ್ಪು ಒಡೆಯನೀ ಕ್ಷಮಿಸೆಂದು ವಂದಿಸುವೆ ನಿಂದು 2 ಯುಕ್ತಾಯುಕ್ತವನರಿಯೆ ಎನ್ನಹಂಕೃತಿ ಮರೆಯೆ ಭಕ್ತಿ ಮುಕ್ತಿದ ಸರ್ವ ಶಕ್ತಿ ಶ್ರೀ ಹರಿಯೆ ಭಕ್ತವತ್ಸಲ ವೆಂಕಟಾದ್ರಿ ಶೇಖರ ಸಿರಿಯೆ ಯುಕ್ತಿಯಿಂದಲಿ ಎನ್ನ ಪಾಲಿಸುವ ದೊರೆಯೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ದೇವ ದೇವ ಲೋಕೇಶ್ವರಾ ರಾಮ ಪ ಪಾವನಾತ್ಮ ಪರಾತ್ಪರಾ ದೋಷದೂರಾ ಜೀವ ಜೀವ ಚರಾಚರ ಗೂಢಚಾರ ಅ.ಪ ತ್ರಿಗುಣಾತ್ಮಕಲೀಲಾ ಕರುಣಾಲವಾಲಾ 1 ಧರಣಿಜಾ ಕಳತ್ರಾ ಕರುಣೈಕ ಪಾತ್ರಾ 2 ಜವ ಜೀವನೇ ಶ್ರೀಧವ ಮಾಂಗಿರೀಶ || 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್