ಒಟ್ಟು 134 ಕಡೆಗಳಲ್ಲಿ , 48 ದಾಸರು , 130 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ನೀ ತಿಳಿಯೋ ಮೂಢ ಭೇದಿಸಿ ಗೂಢ ಧನ್ಯಗೈಸುವ ಪ್ರೌಢ ಸದ್ಗುರು ದೃಢ ಧ್ರುವ ಬಂದು ಬಂದು ಹೋಪಾದೇನ ಸಾಧಿಸಿದಲ್ಲದೆ ಖೂನ ಸಂಧಿಸಿ ಬೀಳುವುದು ಹೀನ ಜನ್ಮಕೆ ನಾನಾ ಹೊಂದು ಮನವೆ ನೀ ಪೂರ್ಣ ಸದ್ಗತಿ ಸುಖ ಸಾಧನ ಎಂದೆಂದಿಗಾದ ನಿಧಾನ ಸಾಂದ್ರ ಸದ್ಘನ 1 ಮುತ್ತಿನಂಥ ಸುಜನ್ಮ ವ್ಯರ್ಥಗಳೆವುದಧರ್ಮ ಹತ್ತಿಲ್ಯಾದಾನಂದೋ ಬ್ರಹ್ಮ ತಿಳಿಯೋ ನೀವರ್ಮ ಚೆನ್ನೊಬ್ಬಳೆ ಮಾಡೊಮ್ಮ ಕಿತ್ತಿಬಿಸ್ಯಾಡೊ ದುಷ್ಕರ್ಮ ಎತ್ತ ನೋಡಲು ಸಂಭ್ರಮ ಸದ್ಗುರು ಧರ್ಮ 2 ತನ್ನ ತಿಳಿದು ನೋಡೊ ಭಿನ್ನ ಭೇದವೆಂಬುದೀಡ್ಯಾಡೊ ಸನ್ಮತ ಸುಖ ಸೂರ್ಯಾಡೊ ಅನುಮಾನ ಬಿಡೊ ನಿನ್ನೊಳೂ ಮಹಿಪತಿ ನೋಡೊ ಅನುಭವನೇ ಕೊಂಡಾಡೊ ಉನ್ಮತವಾಗಿ ನೀ ಕೂಡೊ ಘನ ಬೆರೆದಾಡೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆನವಿಗೊಮ್ಮೆ ಹರಿನಾಮಘೋಷ ಮಾಡಿ ಜನುಮ ಸಾರ್ಥಕಾಗುವುದು ಪೂರ್ಣ ನೋಡಿ ಧ್ರುವ ಜನವನ ದೊಳು ಹರಿಯ ಕೊಂಡಾಡಿ ಅನುಮಾನ ಹಿಡಿದು ಕೆಡಬ್ಯಾಡಿರೊ ನೆನವಿಗೊಮ್ಮೆ ನಾಮಘೋಷವ ಮಾಡಿ ನೆನವಿನೊಳು ನೀವು ಘನ ಬೆರದಾಡಿರೊ 1 ಹರಿಯ ನಾಮ ನೆನವುತಿಕ್ಕಿ ಚಪ್ಪಾಳಿ ದೂರಮಾಡಿ ಮನದ ಚಿಂತೆ ಮುಮ್ಮಳಿ ಸಾರಿ ದೂರುತಿದೆ ವೇದ ಪೂರ್ಣ ಕೇಳಿ ಅರಿತು ಹರಿಯ ನಾಮ ನೀವು ಬಲಗೊಳ್ಳಿರೊ 2 ಹರಿನಾಮಕಾಗಬ್ಯಾಡಿ ವಿಮುಖ ಅರಿತು ಮಾಡಿಕೊಳ್ಳಿ ಪ್ರಾಣಪದಕ ತರಳ ಮಹಿಪತಿಯ ತಾರಕ ತೋರುತಿಹ್ಯ ದು ಬ್ರಹ್ಮಸುಖವೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆನೆಮನವೇ ನಾರಾಯಣ ನಾಮವ ಅನುದಿನ ಧ್ಯಾನಿಸು ಗುರಮುಖದಂತೆ ಪ ಅನುಸಂಧಿಸುತಲಿ ಅವನಡಿ ಪಿಡಿಯುತ ಕನಿಕರದಿಂ ಕಾಯುವ ಕೈ ಹಿಡಿದು ಅ.ಪ ಅಡಿಗಡಿಗೊಂದೊಂದು ಯೋಚನೆ ಗೈವೆವೇ ಎಡಹಿ ಮುಗ್ಗುರಿಸುವೆ ಸುಡುಗಾಡೊಳಗೆ ಕಡಿದೋಡಿಸುತಲಿ ಪಾಪದ ಪಡೆಯಂ ಕಡೆಹಾಯಿಸುವನು ಕಷ್ಟದ ಕಡಲಿಂ 1 ತಮವೇ ತಾನು ಎಂಬ ಮೋಹದಿ ಕನವರಿಸುತ ಬಹು ಸಾಹಸ ತೋರ್ವೈ ಮನದೊಡೆ ಜೀವನು ಶರೀರವನು ಬಿಡೆ ಅನುಮತಿಸುತ್ತಲದ ಸುಟ್ಟು ಬಿಡುವರು 2 ತೃಷೆ ಜ್ವರ ರೋಗಗಳೊಳು ತಣಿವಂ ಕಾಣದೆ ತೊಳಲುತ್ತಿರುವೈ ಘನತರದಾಯುವು ಗತಿಸದ ಮೊದಲೆ ರಿನಕರನೊಳಗಿಹ ಶ್ರೀಶನ ನೋಡೈ 3 ಅನುಮಾನನ್ಯ ಆಶ್ರಯ ಬಿಡುಬಿಡು ತನುಮನ ತೊರೆಯನು ಆಪದ್ಭಂದು ಕೊನೆಗಳಿಗೆಯೊಳು ಕಡೆ ನುಡಿನುಡಿದು ಸನುಮತದಿಂ ಸಿರಿಯರಸನ ಪದವುಗು 4 ಸುಣ್ಣವ ತಿಂದ ತಿಮ್ಮಣನ ತೆರದಿ ನಿನ್ನ ಸ್ಥಿತಿಯ ಅನ್ಯಾಯವು ಸಹಜ ಕರ್ಮ ಬೆನ್ನನು ಬಿಡದಿದೆ ಇನ್ನು ಹೆಜ್ಜಾಜಿ ಶ್ರೀಶನ ಮರೆಹೊಗು 5
--------------
ಶಾಮಶರ್ಮರು
ನೆಲೆಗೊಂಡದೇನು ಮನಮೇಗಚಲಿಸುವೆ ನೀನು ಹಲವು ವಿಷಯದೊಳು ಪಸಿಲುಕಿದ ಬಗೆುಂದ ಹೊಲಬುದಪ್ಪಿತು[ಸಲೆ]ನಿನ್ನ ನಿಜವ ನೀ ಕಾಣು ಅ.ಪಗುರುವಿನಂಘ್ರಿಗೆ ನೀನು ನಮಿಸಿ ನಿನ್ನಮರವೆಯ ಭಾವವ ಕೆಡಿಸಿಕರಣವ ನಿಲುಕಡೆಗೊಳಿಸಿ ಬಹುಕರುಣವ ನಿನ್ನೊಳಗಿರಿಸಿಪರಮಾತ್ಮನಾಗ್ಯನ್ಯ ವಿಷಯಮೊಂದಲಾಶೆಪರಿದು ಭ್ರಾಂತಿಯಲೊಂದಿದ ಸುಖವ ಸೂಸಿ 1ಮನೆಯೊಂದು ನನಗಿಹುದೆಂದು ಅಲ್ಲಿಜನರೆಡೆಗೊಳೆ ದುಃಖ ಬಂದುಅನುಭವಿಪುದು ಯುಕ್ತವೆಂದು ಅದ[ಕನು]ಕೂಲವಾಗಬೇಕೆಂದುಅನುದಿನವನು ಸಂಧಾನದಿ ನಿಂದು ಗುರು ಕೊಟ್ಟಅನುಭವ ಬಯಲಾಗಿ ಭ್ರಮೆಗೆ ನೀ ಸಂದು 2ನೀನೊದು ಕೊಡಹೇಳಿ ಕೇಳಿ ಅಲ್ಲಿಹೀನತೆಯನು ಬಹುತಾಳಿದೀನರು ನೀವೆಂದು ಪೇಳಿ ಅನುಮಾನದ ಬಲು ಬಿರುಗಾಳಿಏನೆಂಬೆ ಬೀಸಲು [ತಾ] ನದರೊಳಗಾಳಿಜ್ಞಾನಹೋುತು ಭೇದ ಬುದ್ಧಿಯ ತಾಳಿ 3ಮಾಯಕವಾಗಿರೆ ಜಗವೂ ಬಹೂಪಾಯಗಳಿಂದ್ರಜಾಲಕವೂಆಯವರಿಯದದರಿರವೂ ತನ್ನತಾಯ ಕಾಣದ ಶಿಶುತನವೂಈಯಶೇಷವು ಸ್ವಪ್ನದನುಭವವಳಿವವುಬಾಯಮಾತಿನಜ್ಞಾನ ಕಪಟ ಸಂಭ್ರಮವೂ 4ಪರಮಾತ್ಮನೊಬ್ಬನಾಗಿಹನೂ ತಾನುಪರಿ ಪರಿ ರೂಪ ತೋರುವನುಅರಿತೆ ಭೇದವನಿದ ನೀನು ಬಹುಜರೆಯುತ ಗುಣದೋಷಗಳನುಗುರುವಾಸುದೇವರೂಪಿಲಿ ನಿನ್ನ ಕರವನುತಿರುಪತಿ ವೆಂಕಟ ಪಿಡಿಯೆ ಭ್ರಾಂತೇನು 5
--------------
ತಿಮ್ಮಪ್ಪದಾಸರು
ಪಂಚ ವೃಂದಾವನದಿ ಮೆರೆಯುತಿರುವಾ ||ಪಂಚಾಸ್ಯ ಸಂದಿಷ್ಟ ವೈಭವವ ಕೇಳಿ ಪ ವಿಪುಲ ಮತಿ ಪದಕರ್ಹ ಕಪಿಪ ರಾಮನ ಭಂಟಸ್ವಪನದಾಖ್ಯಾನವನೆ ಶಪಥ ಪೂರ್ವಕದೀ |ವಿಪ್ರಗೋಸುಗವಾಗಿ ಸುಪ್ರಕಟ ಗೈದಿಹರು ಅಪ್ರತಿಮ ಹಯಮೊಗನ ಸುಪ್ರೇಮ ಪಿಡಿದೂ 1 ಆಖ್ಯಾನ ಪೆಟ್ಟಿಗೆಯು ಅಂಧಕಾರದಲಿದ್ದುವ್ಯಾಖ್ಯಾತೃ ವೇದನಿಧಿ ಜನ್ಮತಾಳುತಲೀ |ವ್ಯಾಖ್ಯಾನ ಗೈದಾಗ್ಯು ಭಾವ ತಿಳಿಯದಲೇವೆಪ್ರಖ್ಯಾತಿ ಪಡೆಯದಲೆ ಬೀಗ ಮುದ್ರಿತದೀ 2 ಅಂಧ ಭಾವದೊಲೊಬ್ಬ ಪಂಗು ಭಾವದಲೊಬ್ಬ ಇಂದಿರೇಶನ ಮಹಿಮೆ ಪ್ರಕಟ ಗೈಯ್ಯುವಲೀ|ಅಂಧ ಪಂಗುನ್ಯಾಯ ಆಶ್ರಯಿಸಿ ಪ್ರಕಟಿಸುವಮಂದ ಜನರುದ್ಧಾರ ಕಾರ್ಯ ಗೈಸುತಲೀ 3 ಅನುಮಾನ ತೀರಥರ ಶಾಸ್ತ್ರವನೆ ಮಥಿಸುತ್ತತನುಮನ ಧನಧಾನ್ಯ ತೃಣವೆಂಬ ಕೀಲಿಯಲೀ |ಜ್ಞಾನ ಪೆಟ್ಟಿಗೆ ಬೀಗ ಮುದ್ರೆಯನೆ ತೆರೆಯುತ್ತ ಮನದ ಪಾತ್ರಿಯಲುಣ್ಣಿ ಆಖ್ಯಾನದನ್ನಾ 4 ಸಂತ ಸಂಗದಲಿಂದ ಮಂಥಿಸಲು ತತ್ವಗಳಅಂತ ರಂಗದ ಕದವು ತೆರೆದಂತರಾತ್ಮನನುಕಂತು ಪಿತನಾದ ಗುರು ಗೋವಿಂದ ವಿಠಲನ್ನಅಂತರಂಗದಿ ಕಾಂಬ ಪಂಥವಿತ್ತವರಾ 5
--------------
ಗುರುಗೋವಿಂದವಿಠಲರು
ಪಂಡರಿನಾಥ ಪಾವನ ಸುಚರಿತ ಪ ಪಾಂಡವಪ್ರಿಯದೂತ ಶರಣರ ಕಾದುಕೊಂಡಿಹ ಖ್ಯಾತ ದಾತಅ.ಪ. ಮಾತಾಪಿತನು ಭ್ರಾತನು ಹಿತನು ನಾಥನು ಜ್ಞಾತನು ಸಂತಾರಕನು ಮತಿಯೂ ನೀನೆ ಗತಿಯೂ ನೀನೆ ಕಾತರ ವ್ಯಾತರದು ಬೀತುದು ದೇವ 1 ತನುಮನಧನಗಳ ನಿನಗರ್ಪಿಸಿದೆ ಎನಿತಾದರು ಇಡು ಅನುಮಾನಿಸಿದೆ ಜನರ ನಿಂದನೆ ಮೇಣಾನಂದನೆ ಮಾನ ಅವಮಾನ ನಿನ್ನದು ದೇವ 2 ಚಿಂತೆಯ ಮರೆದೆ ಭ್ರಾಂತಿಯ ತೊರೆದೆ ಸಂತರ ಚರಣವನಾಂತೆ ದೃಢದೆ ಸ್ವಾಂತವು ಮೋದವಾಂತುದು ಶ್ರೀದ ಸಂತತ ಶ್ರೀಕಾಂತ ನಿಶ್ಚಿತ ದೇವ 3
--------------
ಲಕ್ಷ್ಮೀನಾರಯಣರಾಯರು
ಪವಮಾನ-ಪಾವನಮೂರ್ತಿಯು ನೀನು ಕಾವುದೆಮ್ಮನು ಪ ಭುವನ ಚತುರ್ದಶದಲ್ಲಿಹ ಜೀವರ ಜೀವನ ನಿನ್ನದೋ ದೇವವರೇಣ್ಯಅ.ಪ ತೃಣಜೀವರಾದಿ ಸರ್ವರೊಳು ನಿಂತು ಗುಣಕಾಲಕರ್ಮಕ್ಕನುಗುಣನಾಗಿಹ ಫಲವ ನೀನಿತ್ತು ಕ್ಷಣ ಬಿಡದೆಲೆ ನೀನಗಣಿತ ಕಾರ್ಯವ ದಣಿಯದೆ ಮಾಡಿಸಿ ಧಣಿಗರ್ಪಿಸುವಿಯೊ1 ಶ್ರೀ ಜಗದ್ಗುರುವರೇಣ್ಯನೆ ನೀನು ಋಜುಸಾರ್ವಭೌಮ ನಿಜ ಪಾದಾಂಬುಜವ ತೋರಿಸೊ ಇನ್ನು ಈ ಜಗ ಕಾರ್ಯ ನಿವ್ರ್ಯಾಜದಿ ಮಾಡುತ ನೀ ಜಯಾಪತಿಗರ್ಪಿಸಿ ಅಜಪದ ಪಡೆದೆಯೊ2 ಕೋಟಿತ್ರಯರೂಪನೆ ಕಾಯುವುದಯ್ಯ ದಾಟಿಸು ಭವಶರಧಿಯಾ ಪಾಟುಪಟ್ಟದ್ದೆಲ್ಲ ನೀನರಿಯಾ ಸಾಟಿಯುಂಟೆ ಲಲಾಟನೇತ್ರ ಬೆ ನ್ನಟ್ಟಿ ಬರಲು ಕೇದಾರಕೆ ಅಟ್ಟಿದೆ 3 ಮರಣ ಜನುಮಂಗಳು ಬಂದರೆ ಬರಲಿ ಹರಿಗುರುಗಳಲಿ ಸ್ಮರಣೆಯು ತಪ್ಪದೆ ನಿಶ್ಚಲವಿರಲಿ ಉರುತರ ಹರಿಸರ್ವೋತ್ತಮವೆಂಬುವ ತರತಮ ಭೇದವು ನಿರುತವು ಇರಲಿ 4 ಶ್ರವಣ ಮನನಾದಿ ಭಕುತಿಯನ್ನು ಪವಮಾನ ನೀ ಕೊಡು ಅನುಮಾನಿಸಬೇಡವೋ ನೀ ಇದಕ್ಕಿನ್ನು ಭವಮೋಚಕ ಶ್ರೀ ವೇಂಕಟೇಶ ಇನ್ನೊಳಹೊರಗಿಹನೆಂಬುವುದನು ತೋರೋ 5
--------------
ಉರಗಾದ್ರಿವಾಸವಿಠಲದಾಸರು
ಪಾದ ಕೂಡು | ಸಾಯಾಸಗಳನೇ ಬಿಡು ಪ ಪಾದ ಕೂಡು ಸಾಯಾಸಗಳನೇ ಬಿಡು | ಸಾಧಿಸುವದು ನೋಡು ಸದ್ಗತಿಯ ಸುಖಾಡು 1 ತನುವಿಟ್ಟು ಧನವಿಟ್ಟು ಚರಣಕ ಮನಕೊಟ್ಟು | ಅನುವಾಗಿ ತಿಳಿಗಟ್ಟು ಮದಗರ್ವಗಳ ಬಿಟ್ಟು 2 ನಿನ್ನಾ ನೀ ತಿಳಿಯಣ್ಣಾ ಮ್ಯಾಲ ದೋರುದ್ಯಾಕ ಬಣ್ಣಾ | ಇನ್ನಾರೆ ದೆರಿಕಣ್ಣಾ ಆಗದಿರು ಮಸಿಮಣ್ಣಾ 3 ತನಗ ತಾನೇವೇ ಬಂಧು ತನಗೆ ತಾನೇ ಹಗೆಯೆಂದು | ವನಜಾಕ್ಷ ಹೇಳಿದುದು ಅನುಮಾನಿಲ್ಲಿದಕಿಂದು 4 ಇನ್ನೊಂದು ಸಾಧನಿಲ್ಲಾ ಇದರಿಂದಧಿಕವಿಲ್ಲಾ | ಮನ್ನಿಸಿ ಕೇಳಿರೆಲ್ಲಾ ಮಹಿಪತಿಜನ ಸೊಲ್ಲಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಾಲಿಸೊ ಶ್ರೀಹರಿ ಎನ್ನ ಪಾಲಿಸೊ ಪಾಲಿಸೊ ನಾ ನಿನ್ನ ಕಾಲಿಗೆ ಎರಗುವೆ ಶ್ರೀಲೋಲ ನೀ ಹೃದಯಾಲಯದೊಳು ಬಂದು ಪ ಪರಿ ನಾಮಾಮೃತವನ್ನು ಪರಮ ಔಷಧÀವೆಂದು ಸುರಿದು ಸುಖಿಸುವಂತೆ 1 ಸುಂದರ ಸುಗುಣನೊಂದೊಂದು ಗುಣದ ಮಾತ್ರೆ ಸಂದೇಹವಿಲ್ಲದಾನಂದದಿಂದರೆದ್ಹಾಕಿ 2 ಭವ ಬಂಧ ಬಿಡಿಸಿನ್ನು ಅನುಮಾನವ್ಯಾತಕಾನಂತ ಹಸ್ತಗಳಿಂದ 3 ಲಕ್ಕುಮಿರಮಣನೆ ಲೆಕ್ಕಿಸೊ ಎನ ಮಾತು ದುಷ್ಟ ಜ್ವರವ ನಿನ್ನ ಚಕ್ರದಿಂದ್ಹತಮಾಡಿ 4 ಭೀತಿ ಬಡುವೆನಯ್ಯ ಭೀಮೇಶಕೃಷ್ಣನೆ ಯಾತಕೆ ತಡವಿನ್ನು ಪ್ರೀತಿಮಾಡೆನ್ನಲ್ಲಿ ಪಾಲಿಸೊ 5
--------------
ಹರಪನಹಳ್ಳಿಭೀಮವ್ವ
ಪಿಡಿದೆತ್ತೊ ಕೈಯ್ಯಾ ಕೃಷ್ಣಯ್ಯ ಪ ಪಿಡಿದೆತ್ತೊ ಕೈಯ್ಯಾ ಪಾಲ್ಗಡಲೊಡೆಯನೆ ಭವ ಕಡಲಿನೊಳಗೆ ಬಿದ್ದು ಬಾಯ್ಬಿಡುವೆ ಬೇಗದಿ ಬಂದು ಅ.ಪ ತಾವರೆನಾಭಾ ಕಾವದÀು | ಎನ್ನ ಜೀವನಲಾಭಾ ಶ್ರೀವ್ಯಾಸಮುನಿಗೊಲಿದವ | ನೆಂದರಿತು ಬಂದೆ ಶ್ರೀವೇಣುಗೋಪಾಲಕೃಷ್ಣ | ಗೋವಳರೊಡೆಯ ಭಾವ ಭಕುತಿಗಳೊಂದನರಿಯೆನು ಹೇವವಿಲ್ಲದೆ ದಿನವ ಕಳೆದೆನು ಸಾವಧಾನವ ಮಾಡಲಾಗದು ಶ್ರೀವರನೇ ನವವಿಧ ಭಕುತಿ ನೀಡುತ 1 ಅನುಮಾನವ್ಯಾಕೆ | ನೀನೆ ಗತಿ ಎನುವೆನು ಬಲ್ಲಿ ಅನುದಿನ ಸೇವಿಪೆ ಅನಘನೆ | ಎನ್ನಘ ಗಣನೆ ಮಾಡದೆ ಮುನ್ನ ಅನುವಾಗಿ ಪಾಲಿಸೊ ಮಾನವೇದ್ಯನೆ ಮನದಿ ನಿರ ತನುದಿನದಿ ನಿನ್ನಯ ಧ್ಯಾನವಿತ್ತು ಮನೋವಿಷಾದವನಳಿಯೆ ನಿನ್ನನು ಮರೆಯೆನುಪಕೃತಿ ಸತತ ಸ್ಮರಿಸುವೆ 2 ಶ್ರೀ ನರಹರಿಯೆ ಭಕುತಜನ | ವನಜದಿನಮಣಿಯೆ ಸಾನುರಾಗದಿ ಕೇಳ್ವೆ | ಹನುಮನ ಮತದಲ್ಲಿ ಅನುಚಾದ ಜ್ಞಾನವ | ಕನಸಿನಲಿ ಮನಸಿನಲಿ ಜನನಿ ಜನಕ ತನುಜೆ ವನಿತೆಯಾ ತನುವಿನಲಿ ನೆಲೆಸಿರುವ ಭ್ರಾಂತಿಯ ಹೀನಗೈಸಿ ಮನೋಭಿಲಾಷೆಯ ಭಾರ ನಿನ್ನದು 3
--------------
ಪ್ರದ್ಯುಮ್ನತೀರ್ಥರು
ಬಾರೋ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವತೋರೋ ಎನಗೆ ಮುಕುಂದ ನಲಿದಾಡು ಮನದಲಿಮಾರಪಿತ ಆನಂದನಂದನ್ನ ಕಂದ ಪ ಭವ ಘೋರ ನಾಶನವಾರಿಜಾಸನ ವಂದ್ಯ ನೀರಜಸಾರ ಸದ್ಗುಣ ಹೇ ರÀಮಾಪತೆ ಅ.ಪ. ನೋಡೋ ದಯದಿಂದೆನ್ನ-ಕರಪದುಮ ಶಿರದಲಿನೀಡೋ ಭಕ್ತಪ್ರಸನ್ನ-ನಲಿದಾಡೊ ಮನದಲಿಬೇಡಿಕೊಂಬೆನೊ ನಿನ್ನ-ಆನಂದ ಘನ್ನಮಾಡದಿರು ಅನುಮಾನವನು ಕೊಂ -ಡಾಡುವೆನು ತವ ಪಾದಮಹಿಮೆಗಳನುಜೋಡಿಸುವೆ ಕರಗಳನು ಚರಣಕೆಕೂಡಿಸೊ ತವ ದಾಸಜನರೊಳು 1 ಹೇಸಿ ವಿಷಯಗಳಲ್ಲಿ-ತೊಳಲ್ಯಾಡಿ ನಾ ಬಲುಕ್ಲೇಶ ಪಡುವುದು ಬಲ್ಲಿ-ಘನಯುವತಿಯರ ಸುಖಲೇಸು ಎಂಬುದನ್ನು ಕೊಲ್ಲಿ-ಆಸೆ ಬಿಡಿಸಿಲ್ಲಿಏಸು ಜನುಮದ ದೋಷದಿಂದಲಿಈಸುವೆನು ಇದರೊಳಗೆ-ಇಂದಿಗೆಮೋಸವಾಯಿತು ಆದುದಾಗಲಿಶ್ರೀಶ ನೀ ಕೈಪಿಡಿದು ರಕ್ಷಿಸು 2 ನೀನೆ ಗತಿಯೆನಗಿಂದು ಉದ್ಧರಿಸೊ ಬ್ಯಾಗನೆದೀನ ಜನರಿಗೆ ಬಂಧು-ನಾ ನಿನ್ನ ಸೇವಕಶ್ರೀನಿವಾಸ ಎಂದೆಂದು-ಕಾರುಣ್ಯ ಸಿಂಧುಪ್ರಾಣಪತಿ ಹೃದಯಾಬ್ಜಮಂಟಪ-ಸ್ಥಾನದೊಳಗಭಿವ್ಯಾಪ್ತ ಚಿನುಮಯಧ್ಯಾನಗೋಚರನಾಗಿ ಕಣ್ಣಿಗೆಕಾಣಿಸುವೆ ಶ್ರೀರಂಗವಿಠಲ 3
--------------
ಶ್ರೀಪಾದರಾಜರು
ಬಿಡಬೇಡೋ ರಂಗಾ ಬಿಡಬೇಡೋಕಡುಮೋಹಕದ ಕೊಳಲನೂದುವದನು ಪ ಬಿಡುವೆಯಾದರೆ ಮನಕಡು ತವಕದೊಳುತಡವರಿಸುವುದೊಲೆಡೆಯನು ನೋಡೋ ಅ.ಪ. ಕಿವಿಯೊಳು ನಾದವು ಅಮೃತವ ಸುರಿಯೆಸವಿಯುಣ್ಣುತಲೀ ಮನ ಮೈಮುರಿಯೆತಳಮಳಿಸುವದು ನಡುವೆ ನಿನಗಿದು ಸರಿಯೆಹೊರಗಿನ ಭಾವದ ಪವಣವನರಿಯೆ 1 ಕೊಳಲನೂದುತಿರಲಾನಂದೊಳುಮುಳುಗಿರಲಾಗ ಕಣ್ಣಮುಂದಸುಳಿದಾಡುವ ನಿನ್ನ ಮೂರುತಿ ಚಂದತೊಲಗಿ ಪೋಗುವದೊ ಗೋಪಿಯ ಕಂದ 2 ಮಧುರವೋ ನಿನ್ನ ಕೊಳಲು ಗಾಯನಇದರೊಳಿಲ್ಲವೊ ಲವ ಅನುಮಾನಮೊದಲು ಮುರಳಿಯ ಹಿಡಿಹಿಡಿ ಜಾಣಗದುಗಿನ ವೀರನಾರಾಯಣ 3
--------------
ವೀರನಾರಾಯಣ
ಬೆಳಗಿನೊಳು ಬೆಳಗಾಯಿತು ನೋಡಿ ಥಳಥಳಿಸುತ ಮನದೊಳಗೆ ಝಳಿಸುತಿಹದು ಜಗದೊಳಗೆ ಧ್ರುವ ಬೆಳಗಾಯಿತು ಎನ್ನೊಳಗೆ ಸುಳಿವು ದೋರಿದ ಸದ್ಗುರು ಕೃಪೆಯ ಹೇಳಲಿನ್ನೇನದರ ಖೂನ ತಿಳಿದೇನೆಂದರೆ ಎಳೆಯು ಸಿಲುಕದು ಬಲು ಸೂಕ್ಷ್ಮ ಸುಜ್ಞಾನ ಹೇಳಿ ಕಿತ್ಯಾಡುವ ಮರುಳರಿಗೆ ತಿಳಿಯದಿದರನುಸಂಧಾನ ಕಳೆಯದ ಕಲ್ಪನೆ ಅನುಮಾನಿಗಳಿಗೆ ತಿಳಿಯುವುದೆ ಸದ್ಗತಿ ಸಾಧನ 1 ಬೆಳಗಿ ಬೆಳಗು ಬೆರೆದವನೆ ತಾ ಕುಲಕೋಟಿಗಳು ಧನ್ಯ ಮಳೆಮಿಂಚಿನ ಕಳೆಕಾಂತಿಗಳಿಡುತದೋರಿದ ಸದ್ಗುರು ಪುಣ್ಯ ಗುಹ್ಯ ತಾರ್ಕಣ್ಯ ಬೆಳಗು ಬೈಗಿಲ್ಲದ ಬೆಳಗಿನ ಪ್ರಭೆ ತಿಳಿದವನೆ ಮೂಲೋಕದೊಳಗೆ ಮಾನ್ಯ 2 ಬೆಳಗಿನೊಳು ಬೆರಗಾದನು ಮಹಿಪತಿ ಅತಿ ಆಶ್ಚರ್ಯವ ನೋಡಿ ತೊಳಲಿ ಬಳಲುವ ನಿದ್ರೆಯಗಳೆದನು ತಾ ಈ ಡ್ಯಾಡಿ ನಿಜ ಒಡಮೂಡಿ ಭವ ಪಾದವ ಕೂಡಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬೆಳಿಯೋ ಬೆಳಿ ಮನವೇ ಬೆಳಿಕಂಡ್ಯಾ ಬೆಳಿ ಮನವೇ ಬೆಳಿ ನಿನ್ನ ಹೊಲವನು | ಇಳೆಯೊಳು ಯಣಿಗಾಣದ್ಹಾಂಗೆ 1 ಗುರುವಿನಭಯ ಕೊಂಡು ಸತ್ವದಾ ಹೊಲ ಹಿಡಿದು | ಜರಿದು ಸಂಗಿಗಳನ್ನೆಲ್ಲಾ 2 ವಿವೇಕವೇಯಂಬಾ ನೇಗಿಲ ಎಂಟು | ಭಾವವೆಂಬೆತ್ತುಗಳಿಂದ 3 ದೃಢಪಾಶದಿಂದಲಿ ಕಟ್ಟಿ ಯಚ್ಚರವೆಂಬಾ | ಒಡನೆ ಶಿಕ್ಷದಿ ನಡೆಸುತಾ 4 ಜ್ಞಾನ ಭಕ್ತಿ ವೈರಾಗ್ಯ ತಾಳದ ಬಲದಿ | ಅನನ್ಯ ಭಾವ ಕೂರಿಗೆಯಿಂದಾ 5 ಗುರು ಕರುಣ ಮಳೆ ಗರೆಯೆ ವೇದಾಂತ ಬೀಜ | ಭರದಿ ಬಿತ್ತಿ ನಾದುವಂತೆ 6 ಅನುಮಾನ ಕಸ ತೆಗೆದು ಬೋಧವ ಯಡಿಹಾಯ್ದು| ಧನಗಾಳ ತುಂಬಿಡುವಂತೆ 7 ವರಕ್ಷೋಭ ಯಂಬಾ ನುಡಿ ಹಕ್ಕಿ ಬರಗುಡದೆ | ಪರಮ ಜಾಗೃತಿಯ ಕವಣಿಯಿಂದಾ 8 ಬೇರೆ ಬೇರೆ ದೋರ್ವುದೆಲ್ಲಾ ವಬ್ಬುಳಿ ಮಾಡಿ | ಸಾರಿಹ ಶೃತಿ ವಾಕ್ಯದಿಂದ 9 ದೋರುವಾ ದೃಶ್ಯ ಹೆಕ್ಕಲ ಬಿಟ್ಟು ವಳಗಿರುವ | ತೂರಿ ಅಹಂಭಾವ ಹೊಟ್ಟವನು 10 ದೈನ್ಯವನು ಹಿಂಗಿ ಬಳಕೊಂಡು ಅನ್ಯರಾ ಮರೆ ಹೋಗದಂತೆ 11 ಪರಿಪೂರ್ಣಾದ ಬಳಿಕ ಒಕ್ಕಲು ತನಕ | ಮರುಳೆ ನೀ ಸಿಕ್ಕದಿರು ಕಂಡ್ಯಾ 12 ಸಂಚಿತ ಸರ್ವ ಬಿಡಿಸಿಕೊ ಸುತ ಪ್ರಭು ಗುರು ಮಹಿಪತಿ ವಲುಮೆಯಿಂದಾ 13
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೇಟೆಯ ನಾಡಿದನೇ | ಶ್ರೀ ಗುರು | ಬೇಟೆಯ ನಾಡಿದನೇ | ಭವದ ಮ | ಮಹಾಟವಿಯೊಳಗಿದ್ದ ಮನವೆಂಬ ಮೃಗದಾ ಪ ಬೋಧ ಕೊಳಲವ | ಸ್ವಾನಂದದಲಿ ಸುಸ್ವರದಲಿ | ತಾನೂದಿ ನಾದವ ಕಿವಿಯೊಳೂಡಿಸಿ ಸು | ಮ್ಮಾನದೀ ನಿಲುವಂತೆ ಮರುಳು ಮಾಡಿದ ಗುರು 1 ಪರಿ ಸಾಧನದಿಂದಲಿ ನವವಿಧ | ಪರಿಯಾದ ಭಕ್ತಿಯ ಪಾಶವನು | ಕೊರಳಿಗೆ ಸಂದಿಸಿ ದೃಢದಿಂದ ಪುನರಪಿ | ಹರಿದಾಡದಂದದಿ ನೆಲೆಗೊಳಿಸಿ ಗುರು 2 ಭಯದಿಂದ ಬೆದರಿ ಭಜ್ಜರಿಕೆಯ ಹಿಡಿದಿರೆ | ಶ್ರಯ ಸುಖದಾಯಕ ನಿಜ ಕರದೀ | ದಯದಿಂದ ಅಭಯವನಿತ್ತು ಬೋಳೈಸಿ ನಿ| ರ್ಭಯ ಮಾಡಿ ಭ್ರಾಂತಿಯ ಚಿಂತಿ ಹರಿಸಿ ಗುರು3 ಸವಿ ಸವಿ ನಾಮಾಮೃತ ಆಹಾರವನಿಕ್ಕಿ | ಜವದಿಂದ ಹೃದಯ ಭೂ ವನದೊಳಗೆ | ತವಕದಿ ವಿಶ್ರಾಂತಿ ಸ್ಥಳದಲಿ ನಿಲ್ಲಿಸಿ | ಅವನಿಲಿ ಸತ್ವ ಚರನ ಬಳಿಯಲ್ಲಿಟ್ಟು ಗುರು4 ಜನವನ ವಿಜನದೊಳಗ ತಾನೇ ತಾನಾಗಿ | ಅನುಮಾನ ಕಳೆಸಿದಾ ಅಂಜುವನಾ | ಅನುದಿನ ಸುಖದೊಳಿಪ್ಪಂತೆ ಮಾಡಿ | ದನು ನಂದನ ನಿಜ ಸಹಕಾರಿ ಮಹಿಪತಿ ಘನಗುರು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು