ಒಟ್ಟು 284 ಕಡೆಗಳಲ್ಲಿ , 61 ದಾಸರು , 256 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಪೆ ಮಾಡೋ ಕೃಷ್ಣ ಕೃಪೆಮಾಡೋ ತಪ್ಪದೆ ಪ್ರಾತಃ ಸಂಜೆ ನಿನ್ನ ಸ್ತುತಿ ಮಾಡುವಂತೆ ಪ ಚಂದ್ರಹಾಸನಂತೆ ವ್ರತ ಮಾಡಲರಿಯೆ ಅಂದಿನ ಧ್ರುವನಂತೆ ತಪಗೈಯಲಾರೆ ಕಂದ ಪ್ರಹ್ಲಾದನಂತೆ ಬಿಡದೆ ನುತಿಸಲಾರೆ ಸಂದ ನಚಿಕೇತನಂತೆ ಮೃತ್ಯುಗೆಲ್ಲಲರಿಯೆ 1 ಕರಿರಾಜನಂತೆ ಕೂಗಲರಿಯೆನೋ ಗರುಡನಂತೆ ಸದಾ ಹೊತ್ತು ತಿರುಗಲಾರೆ ಮರುತಜನಂತೆ ಭಂಟನಾಗಲರಿಯೆ ಉರಗರಾಜನಂತೆ ಶಯನಕಾಗಲಾರೆ 2 ದ್ರೌಪದಿಯಂತೆ ಅತ್ತು ಮೊರೆಯಿಡಲಾರೆ ರೂಪೆ ಭಾಮೆಯಂತೆ ಬಲು ಮೋಹಿಸಲಾರೆ ಆಪಾಟಿ ಸಖನಾಗರಿಯೆನು ಮಕರಂದನೊಲು ವಿಪ್ರನಾರಾಯಣನಂತೆ ಭಕ್ತಿಯರಿಯೆನೊ ಹರಿಯೆ 3 ಜಾಜಿಪುರೀಶ ನಿನ್ನ ಚರಣ ಸೇವೆಯ ಕೊಡೊ ಸಾಜದಿ ಮಾಡುವೆ ತಿಳಿದಂತೆ ಪಾಮರನು 4
--------------
ನಾರಾಯಣಶರ್ಮರು
ಕೊಡವನು ಹೊರಲಾರೆನೆ ಅಕ್ಕಕೊಡವನು ಹೊರಲಾರೆನೆಕೊಡವನು ಹೊರಲಾರೆ ಕಷ್ಟಪಡಲಾರೆಕೊಡವನು ಒಡೆದರೆ ಕಡೆಹಾಯುವೆನೆ ಪ ನಿತ್ಯ ಶುಚಿಯಾಗದ ಕೊಡನೆ1 ರೂಪು ದಿನದಲಿ ಮಾಸಿಹ ಕೊಡನೆಆಪತ್ತಿನಿಂದ ನರಳುವ ಕೊಡನೆಪಾಪದ ಪುಂಜದ ಪಡಿಶಂಟು ಕೊಡನೆಜೋಪಾನ ಮಾಡಲು ಜರಿವಾ ಕೊಡನೆ 2 ಎಲ್ಲಿಂದ ಬಂದಿತೋ ಎನಗೀ ಕೊಡವುಎಲ್ಲಿಯ ಪಾಪಿಯು ಮಾಡಿದ ಕೊಡವುಬಲ್ಲ ಚಿದಾನಂದನ ಮರೆಸುವ ಕೊಡವುಬಾಳನು ಕೊಡಿಸುವ ಸತಿಯೆಂಬ ಕೊಡವು 3
--------------
ಚಿದಾನಂದ ಅವಧೂತರು
ಕೊಳಲನೂದುವ ನಮ್ಮ ಚಲುವ ಕೃಷ್ಣಯ್ಯ ನಳಿನಾಕ್ಷಿಯರ ಮಧ್ಯೆ ಪೊಳೆವ ರಂಗಯ್ಯ ಪ. ಕರದ್ವಯದಲಿ ಶಂಖ ಚಕ್ರಪಿಡಿದಿಹ ಕಿರುನಗೆ ನಗುತ ಸುಲಿಪಲ್ಲಿನ ಚಲುವ ಸ್ವರಗಳ ಪಿಡಿಯುತ ವೇಣು ನುಡಿಸುವ ಸರಸಿಜನಾಭ ಹೃನ್ಮಂದಿರದಿ ಮೆರೆವ 1 ಜಗವ ಮೋಹಿಸುವಂಥ ನಗೆಯ ಮೊಗ ಚೆಲುವ ಹೆಗಲು ಎಡದಲ್ಲಿ ಗಲ್ಲ ತಗುಲಿಸಿ ಇರುವ ಸತಿ ಹೆಗಲಲಿ ಇಡುವ ನಗಧರ ನರ್ತನವಾಡಿ ಮುದವೀವ 2 ಕಾಲಕಡಗ ಗೆಜ್ಜೆ ಪಾಡಗರುಳಿಯು ಮೇಲೆ ಪೀತಾಂಬರ ಜರಿಯ ವೈಭವವು ಸಾಲ ಮುತ್ತಿನಹಾರ ಪದಕದ್ವಜ್ರಗಳು ಓಲಾಡುವ ನೀಲಾಂಬರ ಹೊದ್ದಿಹ ಒಲಪು 3 ಕಂಠ ಕೌಸ್ತುಭಮಣಿ ಅಧರದ ಕೆಂಪು ಕರ್ಣ ಕದಪು ಕನ್ನಡಿಯು ಬಂಟರಾದವರನ್ನು ಪೊರೆಯುವ ದೃಷ್ಟಿ ವೈ - ನಾಸಿಕ ಫಣೆಯ ತಿಲುಕವು 4 ಶ್ರೀಪತಿ ಮುಂಗುರುಳು ಶಿರದಲ್ಲಿ ಮಕುಟ ಪಾಪವ ದಹಿಸುವ ಪಾವನ ವೇಣು ಆಪಾದ ಮೌಳಿಯ ರೂಪದ ಚಲುವ ಗೋಪಾಲಕೃಷ್ಣವಿಠ್ಠಲ ಎನ್ನ ಕಾವ 5
--------------
ಅಂಬಾಬಾಯಿ
ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀಹರಿಯಾ ಬಲಗೊಂಬೆ ಕೋಲೆ ಪ ಮೊದಲು ನಮ್ಮ ಗುರು ರಘುಪತಿಯ ಪಾದಕ್ಕೆ ಮುದದಿಂದ ಎರಗಿ ಬಿನ್ನೈಪೆ ಕೋಲೆ ಮುದದಿಂದ ಎರಗಿ ಬಿನ್ನೈಪೆ ಮನದಲ್ಲಿ ಪದಮನಾಭನ್ನ ತೋರೆಂದು ಕೋಲೆ1 ಜನುಮ ಜನುಮದಲ್ಲಿ ಅನಿಮಿತ್ಯ ಬಂಧು ನೀಯನಗೀಯೋ ನಮ್ಮ ಸೇವೆಯ ಕೋಲೆ ಎನಾಗಿಯೋ ನಿಮ್ಮ ಸೇವೆಯ ತವ ಪಾದವನು ಧ್ಯಾನ ಮರಿಯಾದೆ ಕೋಲೆ2 ಮೂಢನಾದ ಎನ್ನನೋಡಿ ಕರುಣವನು ಮಾಡಿ ಹರಿಚರಣ ತೋರಿದ ಕೋಲೆ ಮಾಡಿ ಹರಿಚರಣ ತೋರಿದ ನಿಮ್ಮ ದಯ ಕೀಡುಂಟೆ ಜಗದಿ ಗುರುವರ್ಯ ಕೋಲೆ3 ಪತಿಪಾದ ಮಹಿಮೆ ತೋರಿಸಿ ಕೋಲೆ ಪತಿಪಾದ ಮಹಿಮಾ ತೋರಿಸಿ ಸ ದ್ಗತಿ ಪಥsÀವನ್ನು ವಿಡಿಸಿದ ಕರುಣಿಯೆ ಕೋಲೆ 4 ಅನಾಥ ರಕ್ಷಕ ಆಪತ್ತು ಬಾಂಧವ ಶ್ರೀನಿವಾಸನ್ನ ನಿಜದಾಸ ಕೋಲೆ ಶ್ರೀನಿವಾಸನ್ನ ನಿಜದಾಸ ಮಮಕುಲ ಸ್ವಾಮಿಗೆ ನಮಿಪೆ ಮನದಲ್ಲಿ ಕೋಲೆ 5 ಲಕುಮೀಶ ಹರಿ ದೇವಕಿ ತನಯಗೆ ಸಕಲಾ ಕರ್ಮಗಳಾ ಅರ್ಪಿಸೆ ಕೋಲೆ ಸಕಲಾ ಕರ್ಮಗಳಾ ಅರ್ಪಿಪೆ ನಮ್ಮಗುರು ಸುಖನಿಧಿಗಳಿಗೆ ನಮಿಸುವೆ ಕೋಲೆ 6 ಆನಮಿಸುವೆ ಮಹಾನುಭಾವ ಗುರು ನೇಮಕಲ್ಲಾರ್ಯರ ಚರಣಕ್ಕೆ ಕೋಲೆ ನೇಮಕಲ್ಲಾರ್ಯರ ಚರಣಕ್ಕೆ ಕೋಸಗಿ ಸ್ವಾಮಿರಾಚಾರ್ಯರ ಪಾದಕ್ಕೆ ಕೋಲೆ 7 ಪುರಂದರಾದಿ ದಾಸವರ್ಯರ ಸುಂದರ ಚರಣಕ್ಕೆ ಎರುಗುವೆ ಭರದಿಂದ ಕೋಲೆ ಭರದಿಂದ ಮುದಮುನಿ ಇವರನ್ನು ತೋರಿ ಪೊರೆಯಂದು ಕೋಲೆ 8 ಅಂದದಿಂದ ಆನಂದತೀರ್ಥ ರಾಘ ವೇಂದ್ರಾದಿ ಸಕಲ ವಿಭುದಾದಿ ಕೋಲೆ ರಾಘವೇಂದ್ರಾದಿ ಸಕಲ ವಿಭುದ ಆ ಕರ್ಮಂ ದೀಗಳಿಗೆ ನಮಿಸುವೆ ಕೋಲೆ 9 ವಾದಿರಾಜರ ದಿವ್ಯ ಪಾದಕ್ಕೆ ನಮಿಸುವೆ ಸಾಧಿಸಿ ಕೊಡಲಿ ಸತತಾದಿ ಕೋಲೆ ಸಾಧಿಸಿ ಕೊಡಲಿ ಸತತಾದಿ ಹರಿದಾಸ ರಾದವರ ಸೇವೆಯನಗೆಂದು ಕೋಲೆ 10 ಗಣಪಾದಿಗಳು ಸುರಮುನಿ ಪಾದಗಳಿಗಾ ನಮಿಸುವೆ ಮನಸಿಜ ಸುರಪಾಗ ಕೋಲೆ ನಮಿಸುವೆ ಮನಸಿಜ ಸುರಪಾಗ ಭೂತ ಗಣಪತಿ ಶೇಷರಪಾದ ಕಮಲಕ್ಕೆ ಕೋಲೆ 11 ಭಾರತೀವಾಣಿ ಗುರು ಮಾರುತಿ ಪಾದಕೆ ಪರಿ ಮಣಿಯುವೆ ಕೋಲೆ ಪರಿ ಮಣಿಯುತ ಹರಿಪಾದ ತೋರುತ ಮನದಲ್ಲಿ ನಿಲಿಸೆಂದು ಕೋಲೆ 12 ಲಕ್ಷ್ಮೀದೇವಿಯೆ ಲಕ್ಷಣವಂತಿಯೆ ಪಕ್ಷಿವಾಹನನ ಅರ್ಧಾಂಗಿ ಕೋಲೆ ಪಕ್ಷಿವಾಹನನ ಅರ್ಧಾಂಗಿ ಭವದಿಂದ ರಕ್ಷಿಸಲೆನ್ನ ತವಕಾದಿ ಕೋಲೆ 13 ಶಿರಿಗೋವಿಂದವಿಠಲ ವಿಶ್ವವ್ಯಾಪಕ ಮರುತಾಂತರ್ಗತನೆ ಮುರರಿಪು ನಮ್ಮ ಗುರುವರ್ಯರ ಪ್ರೀಯ ಸಲಹಯ್ಯ ಕೋಲೆ14
--------------
ಅಸ್ಕಿಹಾಳ ಗೋವಿಂದ
ಗಜೇಂದ್ರ ಮೋಕ್ಷ ವರಶಂಖಗದೆ ಪದ್ಮಕರದಿ ಚಕ್ರವ ಪಿಡಿದ ಗರುಡಗಮನ ನಮ್ಮ ಕರಿವರದಹರಿಯನ್ನ ನಿರುತ ನೆನೆನೆನೆದು ಬದಿಕಿರಯ್ಯಾ ಪ ಹರಿಧ್ಯಾನ ಹರಿಸೇವೆ ಹರಿಭಕ್ತಿ ಹರಿಚರಿತೆ ದುರಿತದುರ್ಗಕೆಕುಲಿಶ ವರಮುಕ್ತಿಸೋಪಾನ ಕಾಣಿರಯ್ಯಾ ಅ.ಪ. ಕ್ಷೀರಸಾಗರ ಮಧ್ಯೆ ಗಿರಿತ್ರಿಕೂಟ ದೊಳಗೆ ಇರುವುದೂ ಋತುಮಂತ ವರುಣನ ವರವನವು ಅಲ್ಲಿ ಪರಿಪರಿಯ ಲತೆಬಳ್ಳಿ ಸರಸಸ್ಥಾನಗಳಲ್ಲಿ ಮೆರೆವೋರು ಸುರಸಂಘ ನಾರಿಯರ ಸಹಿತಾ 1 ಪದ್ಮಗಾಶ್ರಯವಾದ ಪದ್ಮಕೊಳಾದೊಳಗೆ ಮದಿಸಿದಾ ಗಜವೊಂದು ಐದಿತು ಪರಿವಾರ ಸಹಿತ ವಿಧಿಯ ಬಲ್ಲವರಾರು ಮುದದಿರ್ದ ಆ ಗಜಕೆ ವಿಧಿ ವಕ್ರಗತಿಯಿಂದ ಪಾದವನೆ ಪಿಡಿಯಿತು ನಕ್ರವೊಂದು 2 ಒಂದು ಸಾವಿರ ವರುಷ ಕುಂದದೆಲೆ ಕರಿಮಕರಿ ನಿಂದು ಹೊರಾಡೆ ಸುರವೃಂದ ಬೆರಗಾಯಿತು ಬಂಧು ಬಳಗವು ಮತ್ತೆ ಅಂದ ಹೆಂಡಿರು ಎಲ್ಲ ಕುಂದು ಅಳಿಸದೆ ಇರಲು ಛಂದದಲಿ ಯೋಚಿಸಿತು ಗಜವೂ 3 ಏನಿದ್ದರೇನಯ್ಯ ಶ್ರೀನಿವಾಸನಕೃಪೆಯು ಇನ್ನಿಲದಾಮೇಲೆ ಕುನ್ನಿಗೆ ಸರಿಎಂದು ಹೀನ ಎನ್ನಯ ಜನ್ಮ ದೀನ ಭಾವದಿ ಹರಿಯ ಮಾನವನು ಬದಿಗಿಟ್ಟು ಧ್ಯಾನಿಸಿ ಸ್ತುತಿಸಿದಾ 4 ಸತ್ಯಶಾಶ್ವತಭೋಕ್ತ ಸೃಷ್ಟ್ಯಾದಿಕರ್ಮವಿಗೆ ನಿತ್ಯ ತೃಪ್ತನು ಆದ ಶಾಡ್ಗುಣ್ಯಪರಿಪೂರ್ಣನೆ ವಂದಿಸುವೆನೋ ಓತಪ್ರೋತದಿ ಜಗದಿ ವ್ಯಾಪ್ತ ಆಪ್ತನು ಆದ ಆರ್ತದಲಿ ಕರೆವೆನೋ 5 ಎಲ್ಲಕಡೆಯಲಿ ಇರ್ಪ ಎಲ್ಲರೂಪವ ತಾಳ್ವ ಎಲ್ಲ ಪ್ರೇರಣೆಮಾಳ್ವ ಎಲ್ಲರಿಂ ಭಿನ್ನನಿಗೆ ವಂದಿಸುವೆನೋ ಎಲ್ಲರಿಂ ಉತ್ತಮಗೆ ಎಲ್ಲರಾ ಬಿಂಬನಿಗೆ ಎಲ್ಲರ ವಾಚ್ಯನಿಗೆ ನಲ್ಲನೆಂತೆಂದು ನಾಕರೆವೆನೋ 6 ಎಲ್ಲರನು ಗೆದ್ದವಗೆ ಎಲ್ಲರಾನಲ್ಲನಿಗೆ ಎಲ್ಲ ದೋಷವಿಹೀನ ಒಳ್ಳೆ ಗುಣ ಪೂರ್ಣನ ಕರೆವೆನೋ 7 ನಿನ್ನ ತಿಳಿದವರಿಲ್ಲ ನಿನ್ನ ಮೀರಿದುದಿಲ್ಲ ಜನನ ಮರಣಗಳಿಲ್ಲ ನಿನಗಿಲ್ಲ ಸಮ ಅಧಿಕ ವಂದಿಸುವೆನೋ ನಿನ್ನನಾಮಕೆ ಗುಣಕೆ ನಿನ್ನ ಅವಯವಕೆ ನಿನ್ನ ಕ್ರಿಯ ರೂಪಗಳಿಗೆ ಇನ್ನಿಲ್ಲವೊ ಭೇದಸಾರಿ ನಾಕರೆವೆನೋ 8 ವೇದಗಮ್ಯನುನೀನೆ ವೇದದಾಯಕ ನೀನೆ ವೇದಾತೀತನು ನೀನೆ ಸಾಧು ಪ್ರಾಪ್ಯನುನೀನೆ ವಂದಿಸುವೆನೋ ಖೇದವರ್ಜಿತನೀನೆ ಅಂದ ಸಾರವು ನೀನೆ ಬಂಧನೀಡುವ ನೀನೆ ಅದ್ಭುತ ಅಚಿಂತ್ಯಶಕ್ತಿವಂತನ ಕರೆವೆನೋ 9 ಜ್ಞಾನಿಗೋಚರನೀನೆ ಗುಣಾತೀತನು ನೀನೆ ಗುಣಪ್ರವರ್ತಕನೀನೆ ಅನಾಥ ಸರ್ವಸಮ ವಂದಿಸುವೆನೋ ಜ್ಞಾನದಾಯಕನೀನೆ ಆನಂದಮಯನೀನೆ ನೀನೇ ಸರ್ವಾಧಾರ ನೀನೆ ಏಕನು ಎಂದು ಕೂಗಿ ನಾಕರೆವೆನೋ 10 ಸಾಕಾರ ನಿರಾಕಾರ ಆಕಾರ ಅಹೇಯ ಓಂಕಾರ ವಾಚ್ಯನೆ ಸಾಕಲ್ಯಸಿಗದವನೆ ಸ್ವೀಕಾರ ಮಾಡೋ ವಿಕಾರ ವರ್ಜಿತನೆ ಲೋಕೈಕವೀರಾನೆ ನೀ ಕೆವಲನು ಮುಕ್ತೇಶ ಸಲಹೋ 11 ಏನು ಕೊಡಲೊ ದೇವ ದೀನನು ನಾನಯ್ಯ ನಿನ್ನದೇ ಈ ಭಾಗ್ಯ ಮನ್ನಿಸುತ ದಯಮಾಡಿ ಸಲಹೋ ಘನ್ನಕರುಣಾಳುವೆ ಅನ್ಯರನು ನಾ ನೊಲ್ಲೆ ನಿನ್ನವನು ನಿನ್ನವನೋ ನಿನ್ನ ಚರಣಕೆ ಶರಣು ಶರಣೂ 12 ಕರಿ ತಾನು ಮೊರೆಯಿಡುತ ಕೂಗಲು ಸುರವೃಂದ ಯೋಚಿಸುತ ಹರಿಯಲ್ಲದನ್ಯತ್ರ ಅರಿಯೆವೀಗುಣವೆಂದು ಅರಿತು ಸುಮ್ಮನಿರಲೂ ಹರುಷದಿಂದಲಿ ಹರಿಯು ಗುರುಡನೇರುತ ಬರಲು ತರಿದು ನಕ್ರನ ಭರದಿ ಕರಿಯಪೊರೆಯೆ ಆದ 13 ಏನೆಂದು ವರ್ಣಿಸಲಿ ಶ್ರೀನಿವಾಸನ ಕರುಣ ದೀನ ಭಕ್ತರ ಮೇಲೆ ಸಾನುರಾಗದಿ ಕರಿಯ ಹಿಡಿದೆತ್ತಿದಾ ಇನ್ಯಾಕೆ ಭಯವಯ್ಯ ಘನ್ನ ಇಂದ್ರದ್ಯುಮ್ನನೆ ಏಳು ಮುನ್ನಿನಾ ದೋಷವಿದು ಇನ್ನು ನೀ ಧನ್ಯನಹುದೋ 14 ದೇವಲನ ಶಾಪದಲಿ ಆ ವರ ನಕ್ರನಾಗಿದ್ದ ಶ್ರೀವರನ ಭಕ್ತ ಹೂಹೂ ಗಂಧರ್ವನೆರಗಿ ಬಿದ್ದನು ಹರಿಗೇ ದೇವೇಶ ಹುಸಿನಗುತ ಈವೆ ವರವನು ಕೇಳಿ ಯಾವಾತ ಈ ಕಥೆಯ ಭಾವಶುದ್ಧದಿ ಭಜಿಸೆ ಉದಯದಲಿ ನಾ ಒಲಿವೆ ತವಕದಲಿ ಎಂದನೂ 15 ಹರಿಗೆ ಸಮರಾರಿಲ್ಲ ಹರಿಭಕ್ತ ಗೆಣೆಯಿಲ್ಲ ಸುರರು ಮೊರೆಯಿಟ್ಟರಾಗ ಹರಿವಾಯುಗುರುಗಳು ಕರುಣದಿಂದಲಿ ಇದನು ಮನ್ನಿಪುದು ಬುಧರೂ 16 ಮುದ್ದುಜಯತೀರ್ಥರ ಹೃದಯದಲಿನಲಿಯುವ ಮಧ್ವಾಂತಃಕರಣದಿ ಮುದ್ದಾಗಿ ಕುಣಿಯುವಂಥ ಮಾಧವ ಶ್ರೀಕೃಷ್ಣವಿಠಲರಾಯನು ಬೇಗ ಮೋದ ಸುರಿಸುವ ಈ ಪದವ ಪಠಿಸಲೂ 17
--------------
ಕೃಷ್ಣವಿಠಲದಾಸರು
ಗಾಡಿ ಪಾಳ್ಯ ಹನುಮಾ | ತವ ಪದಬೇಡಿ ಭಜಿಪೆ ಭೀಮಾ ಪ ಈಡು ರಹಿತ ತವ | ಮಹಿಮೆಗಳನು ಕೊಂ-ಡಾಡ ಬಲ್ಲನೇ | ಪಾಮರನು ನಾಅ.ಪ. ಸತಿ ವತ್ಸರ ಪೂರ್ವದಿಹಿತಧಾಗಮನವ | ಸೂಚಿಸಿ ಸ್ವಪ್ನದಿ 1 ಸತಿ ತೈಜಸ ಪೇಳಿದನಿಜ ಭಾವವ ತಾ | ಸುಜನರಿಗ್ವೊರೆದು2 ಮಣಿ ಸಹ ವಿರಲವನೂ ||ಘನ ಸಂತಾನವು ಇರದಿರೆ ದಂಪತಿಮನವನು ಹರಿಪದ | ವನಜದಲಿರಿಸೀ 3 ಒಡಗೂಡಿ ಸೇವಕರಾ | ತರಿದನು | ಗಿಡ ಗಂಟಿಯ ವಿವರಾ ||ಅಡವಿಯೊಳೊಡ | ಮೂಡಿದ ಬರಿ ಶಿಲೆಕಂಡು ಮನದಿ ಬಯ | ಲಾಶೆಯೊಳಿರಲೂ 4 ಮಲಗಿರೆ ಮನನೊಂದೂ | ಸ್ವಪ್ನದಿ | ಬಲ ಹನುಮಂತನು ಬಂದೂ ||ಚೆಲುವ ತನ್ನಯ ರೂಪ | ತೋರಿಸಿ ಪೇಳಲುಒಲಿಸಿ ಗಂಧದಲಿ | ಲಿಖಿಸಿ ಪೂಜಿಸಿದ 5 ಮೊಗವನು ದಕ್ಷಿಣಕೆ | ತಿರುಗಿಸಿ | ನಗವನು ಮೇಲಕ್ಕೇ ||ನೆಗಹಿ ತನ್ನ ಎಡ | ಹಸ್ತದೊಳಗೆ ಬಲಭಾಗ ಕೈಯ್ಯ ತಾ | ನಿರಿಸಿಹ ಕಟಿಯಲಿ 6 ಚಾರು ಮತಿಯಲಿ 7 ಸ್ಥಿರ ಚರ ಸುವ್ಯಾಪ್ತಾ | ಮರುತ | ಶರಣ ಜನರ ಆಪ್ತಾ ||ಸುದತರು ಭಕುತರ | ಹರಕೆ ಪೂರೈಸುವೆನಿರುತ ಹರಿಯ ಪದ | ರತಿಯನೆ ಕೊಡುವುದು 8 ಕೋವಿದರರಸನ್ನಾ | ಗುರು | ಗೋವಿಂದ ವಿಠಲನ್ನಾ ||ಓವಿ ತೋರೊ ಮಮ | ಹೃದ್ವನಜದೊಳಗೆ ಪಾವಮಾನಿಯೆ ಮ | ತ್ಪ್ರಾರ್ಥನೆ ಸಲಿಸೀ 9
--------------
ಗುರುಗೋವಿಂದವಿಠಲರು
ಗಿರಿರಾಜ ಚಿತ್ತವುದಾರ ಜೀಯಾ | ನಾ ನಿನ್ನ ಪಾದಕ್ಕೆರಗಿ ಯಾಚಿಸುತಲಿ ಮುಗಿವೆನು ಕೈಯಾ | ನೆರೆ ನಂಬಿದವರನುಎರವು ಮಾಡಲು ನಿನಗೊಳಿತೇನಯ್ಯಾ | ಪಿಡಿ ಬೇಗ ಕೈಯಾ ಪ ಕರುಣಿಗಳರಸನೆ ಕಾಮಿತ ಫಲದನೆ ಕರಿರಾಜನ ಭೀಕರ ಹರ ವಂಕಟ ಅ.ಪ. ಅಪಾರ ಮಹಿಮಾ ಆಪದ್ಬಂಧೂ | ಆಪನ್ನರ ಪಾಲಿಪ ವ್ಯಾಪಾರ ನಿನಗಲ್ಲದೆ ಮತ್ತೊಂದೂ | ನಾ ಕಾಣೆನೊ ಜಗದಿಭೂಪಾನೆ ಭೂಮಾ ಗುಣ ಗಣ ಸಿಂಧೂ | ಸ್ವಾಮಿಯೆ ಸಿರಿಗೆಂದೂ ||ಪಾಪದ ಪಂಕವು ಲೇಪವಾಗದಂ | ತೀ ಪರಿಪಾಲಿಸೊ ಶ್ರೀಪತಿ ಅಂಜನ 1 ತರು ಜಾತಿ ಮೃಗಪಕ್ಷಿಗಳಾಕಾರ | ಮೊದಲಾದ ರೂಪದಿಸುರರೂ ಕಿನ್ನರರೂ ತಮ್ಮ ಪರುವಾರ | ಒಡಗೂಡಿ ನಿನ್ನಾಶರಣರ ಚರಣಾರಾಧನೆಗೆ ವಿಸ್ತಾರ | ಈ ಬಗೆ ಶೃಂಗಾರಾ ||ದೊರೆತನ ಠೀವಿಗೆ ಧರಣಿ ಮಂಡಲದಿ | ಸರಿಗಾಣೆನೊ ಹೇ ತಿರುಪತಿ ವೆಂಕಟ 2 ಫಣಿ 3 ಕಲಿಯುಗದೊಳಗೀ ಪರ್ವತದಲ್ಲಿ | ಸರಿಗಾಣೆನೊ ಎಂದುನೆಲೆಸೀದೆ ನೀನೆ ಈ ಸ್ಥಳದಲ್ಲಿ | ವೈಕುಂಠಕಿಂತನೆಲೆಯಾ ವೆಗ್ಗಳವೆಂದು ನೀ ಬಲ್ಲಿ | ಅದ ಕಾರಣದಲ್ಲಿ ||ಜಲಜ ಭವಾದ್ಯರು ಒಲಿದೊಲಿಯುತ | ತಲೆದೂಗುವರೈ ಭಳಿರೆ ಕಾಂಚನ 4 ಸುವರ್ಣ ಮುಖರಿ ತೀರವಾಸ | ಆ ಬ್ರಹ್ಮೋತ್ಸವನವರಾತ್ರಿಯಲ್ಲಿ ನೋಡಲು ಶ್ರೀಶ | ಸಂ ಪದವಿಯನಿತ್ತುಕಾವನು ಕಲುಷದ ಭಯ ಬರಲೀಸ | ಶ್ರೀ ಶ್ರೀನಿವಾಸ ||ಶ್ರೀವರ ಭೂಧರ ವ್ಯಾಸವಿಠಲ* ಪ | ರಾವರೇಶ ಶ್ರೀ ದೇವನೆ ದೇವಾ 5
--------------
ವ್ಯಾಸವಿಠ್ಠಲರು
ಗಿರಿರಾಯಾ ಗಿರಿರಾಯಾ ಪ ಶರಣಾಗತರಿಗೆ ಕರುಣಾಕರ ವೆಂಕಟಅ.ಪ ಸ್ಮರಿಸುವೆ ನಿನ್ನನು ಸರಸಿಜಭವನುತ ಸ್ಮರತಾಮರತರು ದುರಿತವಿದೂರ 1 ಶ್ರೀಕರಭವಭಯ ನೂಕಿಸಿ ಎನ್ನನು ಸಾಕೆಲೋ ಭೂಧರಸೂಕರರೂಪ 2 ಆಪದ್ಬಾಂಧವ ಶ್ರೀಪತಿ ಎನ್ನನು ಕಾಪಾಡೆಲೊ ಸಕಲಾಪದ್ಧರ ವೆಂಕಟ3 ಕಾಮಿತ ಫಲಪ್ರದ ಈ ಮಹೀತಳದೊಳು ಸಾಮಜವರದ ಸುಧಾಮನ ಸಖ ಪೊರಿ 4 ದಾತಗುರುಜಗನ್ನಾಥವಿಠಲ ಪ್ರೀತನಾಗೊ ನಿನ್ನ ದೂತನು ನಾನೈ 5
--------------
ಗುರುಜಗನ್ನಾಥದಾಸರು
ಗುರು ಅಂತರ್ಯಾಮಿ ಶ್ರೀನಿವಾಸ ಸಿರಿರಮಣ ಶ್ರೀ ಕೃಷ್ಣ ಶ್ರೀನಿಧಿಯೆ ಶ್ರೀಶ ಪ. ಸೃಷ್ಟಿಕರ್ತನೆ ನಿನ್ನ ಲಕ್ಷಿದೇವಿಯು ಸತತ ಶ್ರೇಷ್ಠತನದಲ್ಲಿ ಪೂಜೆ ಮಾಡುತಿಹಳೊ ಅಷ್ಟು ದೇವತೆಗಳು ಆಗಮವನನುಸರಿಸಿ ಶಿಷ್ಟೇಷ್ಟನೆಂತೆಂದು ಪೂಜೆ ಮಾಡುವರೋ 1 ಅಣು ನಾನು ನಿನ್ನ ಅರ್ಚಿಸ ಬಲ್ಲೆನೇ ದೇವ ಘನಮಹಿಮ ಸ್ವೀಕರಿಸೊ ಅಲ್ಪ ಸೇವೆ ಮನ ಮಂದಿರದಿ ನಿಂತು ಅನುಗಾಲ ನಿನ್ನ ದಿವ್ಯ ಘನ ಮೂರ್ತಿಯನೆ ತೋರೋ ಪೂಜೆ ಮಾಡುವೆನೊ 2 ಸರಸಿಜಾಕ್ಷನೆ ನಿನಗೆ ಸರಸದಿಂದ ಗುಲಾಬಿ ಸರದ ಪೂಮಾಲೆಯನು ಕೊರಳಿಗ್ಹಾಕುವೆನೊ ಸುರರ ಪಾಲಿಪ ಹರಿಯೆ ಸುರಹೊನ್ನೆ ಹಾರವನು ಕರ ಚಕ್ರಯುತ ನಿನ್ನ ಕಂಧರದಿ ಧರಿಸೋ 3 ಶ್ಯಾಮವರ್ಣನೆ ರತ್ನಹಾರಗಳು ಹೊಳೆಯುತಿರೆ ಶ್ರೀ ಮನೋಹರ ಮುತ್ತಿನ್ಹಾರ ಪದಕಗಳು ಈ ಮಧ್ಯೆ ದಿವ್ಯ ಶ್ಯಾವಂತಿಗೆ ಸುಮನದಿಂ ಕಾಮಜನಕನೆ ಮಾಲೆಕಟ್ಟಿ ಹಾಕುವೆನೊ 4 ಈ ಜಗವ ಉದರದಲಿ ಧರಿಸಿ ಮೆರೆಯುವ ದೇವ ಜಾಜಿ ಪೂಮಾಲೆಯನು ಕಂಧರದಿ ಧರಿಸೊ ಭೋಜಕುಲ ತಿಲಕನೆ ಕೆಂಡ ಸಂಪಿಗೆ ಸರವ ಮಾಜದೇ ಎನ್ನಿಂದ ಸ್ವೀಕರಿಸೊ ದೇವ 5 ಪಾತಕರಹಿತ ಹರಿ ಪಾವನರೂಪನೆ ಪ್ರೀತಿಯಿಂ ಸ್ವೀಕರಿಸೊ ಕೇತಿಕೆಯ ಸರವ ಶ್ರೀತರುಣಿ ಸತ್ಯಭಾಮೆಯರು ಕದನವಗೈದ ಪ್ರೀತಿ ಪಾರಿಜಾತ ಧರಿಸಯ್ಯ 6 ಮರುಗ ದವನಗಳಿಂದ ಸುರಹೊನ್ನೆಯನೆ ಕಟ್ಟಿ ಇರುವಂತಿಗೆಯ ಹಾರ ಹರಿಯೆ ಅರ್ಪಿಸುವೆ ಪರಿಮಳವ ಬೀರುತಿಹ ಪರಿಪರಿಯ ಮಲ್ಲಿಗೆಯ ಸರಗಳನೆ ಧರಿಸಿನ್ನು ಸಾಕಾರರೂಪ 7 ದುಂಡುಮಲ್ಲಿಗೆಯ ಮೊಗ್ಗು ಪಾಂಡವರ ಪಾಲಕಗೆ ದಂಡೆಯನೆ ಕಟ್ಟಿ ನಾ ಕೊರಳಿಗ್ಹಾಕುವೆನೊ ಚಂಡವಿಕ್ರಮ ಶಂಖ ಚಕ್ರಧಾರಿಯೆ ಪಾದ ಮಂಡೆ ಪರಿಯಂತರದಿ ನೊಡಿ ದಣಿಯುವೆನೊ8 ಸತಿ ನಿನಗಾಗಿ ಕಾಷ್ಟದಳ ಮೃತ್ತಿಕೆಯ ಸೇವಿಸುವ ಜನಕೆ ಇಷ್ಟ ಫಲವನೆ ಇತ್ತು ಕೃಷ್ಣನ್ನ ತೋರಿಸುವ ಶ್ರೇಷ್ಠ ತುಳಸಿಮಾಲೆ ಕಟ್ಟಿ ಹಾಕುವೆನೊ 9 ಕಮಲನಾಭನೆ ಕೃಷ್ಣ ಕಮಲಾಪತಿಯೆ ಸ್ವಾಮಿ ಕಮಲಪಾಣಿಯೆ ದೇವ ಕಮಲಾಕ್ಷನೆ ಕಮಲಮುಖ ನಿನ್ನ ಪದಕಮಲದಲಿ ನಲಿವಂತೆ ಕಮಲದ್ಹಾರವ ಕಟ್ಟಿ ಕೊರಳೀಗ್ಹಾಕುವೆನೋ10 ಈ ಪರಿಯ ಮಾಲೆಗಳ ನೀ ಪ್ರೀತಿಯಿಂ ಧರಿಸಿ ಪಾಪಗಳ ತರಿದೆನ್ನ ಪಾವನವಗೈಯ್ಯೊ ಆಪತ್ತು ಕಳೆವ ಶ್ರೀ ಗುರು ಕಟಾಕ್ಷದಿ ನುಡಿದೆ ಗೋಪಾಲಕೃಷ್ಣವಿಠ್ಠಲನೆ ಕೃಪೆಮಾಡೊ 11
--------------
ಅಂಬಾಬಾಯಿ
ಗುರುರಾಜ ವರದ ವಿಠಲ | ಪೊರೆಯ ಬೇಕಿವಳಾ ಪ ಮರುತಂತರಾತ್ಮಕನೆ | ಪ್ರಾರ್ಥಿಸುವೆ ಹರಿಯೇ ಅ.ಪ. ಸೃಷ್ಟಾದಿ ಸತ್ಕರ್ಮ | ಸುಗುಣಮೂರುತಿದೇವಕಷ್ಟಗಳ ಪರಿಹರಿಸಿ ಕಾಪಾಡೋ ಹರಿಯೇಕೃಷ್ಣಮೂರುತಿ ದೇವ | ಅಷ್ಟ ಸೌಭಾಗ್ಯಗಳಕೊಟ್ಟು ಸಂತೈಸುವುದು | ಕಾರುಣ್ಯ ಮೂರ್ತೇ 1 ಆ ಪನ್ನ ಜನಪಾಲ | ಗೋಪಿಜನಪ್ರಿಯತಾಪತ್ರಯ ಕಳೆದು | ಕಾಪಾಡೊ ಹರಿಯೇಶ್ರೀಪತಿ ನೀನಾಗಿ | ಕೋಪಾದಿಗಳ ಕಳೆದುಕೈಪಿಡಿದು ಸಲಹೆಂದು | ಪ್ರಾರ್ಥಿಸುವೆ ಹರಿಯೇ 2 ಪತಿಸುತರು ಹಿತರಲ್ಲಿ | ಹರಿಯುವ್ಯಾಪ್ತನು ಎಂಬಮತಿಯನ್ನೆ ಕರುಣಿಸುತ | ಕಾಪಾಡೊ ಹರಿಯೇಸುಪ್ತಿಜಾಗ್ರತ ಸ್ವಾಪ | ಮಾರವಸ್ಥಾ ಸ್ವಾಮೀಆಪ್ತ ಗುರು ಗೋವಿಂದ | ವಿಠಲೆಂದು ತಿಳಿಸೊ 3
--------------
ಗುರುಗೋವಿಂದವಿಠಲರು
ಗೋಪಾಲದಾಸರ ಸ್ಮರಣೆ | ಬಹುತಾಪತ್ರಯದ ನಿವಾರಣೆ ಪ ಶ್ರೀಪತಿ ವೇಂಕಟೇಶನ | ಸಾಪರೋಕ್ಷದಿ ಕಂಡುಹಿಗ್ಗುತವ್ಯಾಪ್ತದರ್ಶಿಗಳಾಗಿ ಭಕ್ತಿಲಿ | ಆಪರಂತಪನೊಲುಮೆಗಳಿಸಿದ ಅ.ಪ. ಬಾಲ್ಯತನದಿ ವೇದಮಾತಾ | ಎಂಬಗಾಯತ್ರಿ ಮಂತ್ರವು ಜಪ್ತಾ |ಸೂರ್ಯಾಂತರ್ಗತನಾದ | ಹರಿಯನ್ನು ಕಾಣುತಾಕಾರ್ಯೋನ್ಮುಖನು ಆದ | ಪ್ರಶ್ನೆಗಳ ಪೇಳಲು 1 ಇರಲೊಂದು ಕಾಲಕ್ಕೆ ವಿಜಯಾ | ದಾಸರ್ ಬರವಾಯ್ತು ಕೇಳಿರಿ ಚರ್ಯಾ || ವರ ವಿಜಯ ದಾಸಾರ್ಯರೆಂಬರ | ಪ್ರತಿಭೆಯಾವರಣ ಮುಸುಕಿಲಿನಿರುತ್ತರರು ಆಗಿಹರ್ | ಪ್ರಶ್ನೋತ್ತರಗಳ ಕೇಳಲು2 ಮೂಷಕ | ವರಸುವಾಹನನಂಶ ಸಂಭವ 3
--------------
ಗುರುಗೋವಿಂದವಿಠಲರು
ಗೋಪಿಯ ಕಂದ ಇಗೋ ಬಂದ ತಾಪಸರೆಡೆಯಿಂದ ಗೋವಿಂದ ಪ ಆಪನ್ನರ ಕರೆ ಕೇಳಿಸಿದಾಕ್ಷಣ ಗೋಪಿಯರೆಡೆಯಿಂದ ಪರಿಪರಿದೋಡಿ ಅ.ಪ ಹಣೆಯ ಕಸ್ತೂರಿಯು ಥಳಥಳಿಸುತಿರೆ ಮಣಿ ಮಾಲೆಗಳೆಲ್ಲಾ ಮಿನುಗಾಡುತಿರೆ ಕಿಣಿ ಕಿಣಿ ನಾದದ ಗೆಜ್ಜೆ ನುಲಿಯುತಿರೆ ಫಣಿಪತಿಶಯನ ಮಾಂಗಿರಿಯೆಡೆಯಿಂದ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋವರ್ಧನೋದ್ಧಾರ ಗೋಪಿಕಾಜನಜಾರ ರುಕ್ಮಿಣೀ ಮನೋಹರ ರುಕ್ಮಗರ್ವನಿವಾರ ಚಕ್ರಧರ ಶ್ರೀರಂಗ ಶ್ಯಾಮಲಾಂಗ ಪಾಂಡುಸುತ ಸನ್ಮಿತ್ರ ಮಾಂಡವ್ಯಸನ್ನುತಾ ಖಂಡಲಾರ್ಚನಪಾತೃ ನುತಚರಿತ್ರ ದ್ವಾರಕಾಪುರಿವಾಸ ಧರ್ಮರಕ್ಷಣದೀಕ್ಷ ವೈರಿಶಿಕ್ಷಣದಕ್ಷ ಶ್ರೀಕಟಾಕ್ಷ ದ್ರೌಪದೀ ಮಾನದಾ ಪಾಹಿವರದ | ತಾಪತ್ರಯ ಹರಣ ಭಕ್ತ್ಯಧೀನ | ಆಪನ್ನಿವಾರಣಾಮೋಘ ವಚನ ಭೋ ಪರಂಧಾಮ ಶ್ರೀ ಶೈಲಧಾಮ
--------------
ನಂಜನಗೂಡು ತಿರುಮಲಾಂಬಾ
ಚಿಕ್ಕ ತಿರುಪತಿವಾಸ - ಶ್ರೀ ವೆಂಕಟೇಶ ಪ ಅಕ್ಕರದಿ ನೀನೆನ್ನ - ತಕ್ಕೈಸಬೇಕೋ ಅ.ಪ. ಚಕ್ರಧರ ದೇವಾಚೊಕ್ಕ ಮೂರುತಿ ಅಜನ | ಪೊಕ್ಕಳಾದಲಿ ಪಡೆದುಲಕ್ಕುಮಿಗೆ ಮೀರ್ದ ಪೊಂ | ಬಕ್ಕಿ ಧೇರನ ಕಾಯೋ 1 ಸಪ್ತ ಪ್ರಕಾರದಲಿ | ಆಪ್ತ ನೀ ನೆಲಿಸಿದ್ದುಗುಪ್ತ ಮಹಿಮನೆ ಜಗಕೆ | ವ್ಯಕ್ತನಾಗದಲೇ |ಕ್ಲುಪ್ತಿಯಿಂದದಿ ಹವಿ | ಭೋಕ್ತø ಯಜ್ಞನಿವೊಲಿದುವ್ಯಕ್ತನಾದೆಯೊ ಜಡದಿ | ಅವ್ಯಕ್ತ ಮೂರ್ತೇ 2 ಮೂರ್ತಿ | ಪ್ರತಿರಹಿತ ದೇವಾ 3 ವರಾಹ | ಸ್ವಾಮಿ ಪುಷ್ಕರಿಣ್ಯಾದಿಆ ಮಹಾ ತೀರ್ಥಗಳ | ವಿಮಾನ ಸ್ಥಿತನಾ |ಈ ಮನೋರೂಪದಲಿ | ನೇಮಾನು ಸಂಧಾನಕಾಮಿಸುವೆ ಶ್ರೀರಮಣ | ಭೂಮಿಗ್ವಲ್ಲಭನೇ 4 ಸರ್ವಜಗ ಸೃಜಿಸುವನೆ | ಸರ್ವವನು ಲಯಿಸುವನೆಸರ್ವಕುತ್ತಮನೆನಿಪೆ | ಶರ್ವವಂದ್ಯಾಸರ್ವ ಪ್ರೇರಕ ನೀನೆ | ಸರ್ವ ಚೇಷ್ಟಕ ನೀನೆಸರ್ವ ಸುಂದರ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಜಯಮಂಗಳಂ ವೈಕುಂಠನಿಲಯಗೆ ಪ. ಆಮನಸಿಜನಯ್ಯಗೆ ಭುಜಗಭೂಷಣ ಪ್ರಿಯಗೆ ತ್ರಿಜಗತ್ಪತಿ ಪುರುಷೋತ್ತಮಗೆ ಭಜಕರಕ್ಷಕ ಶ್ರೀ ವಿಜಯಸಾರಥಿಗೆ ದ್ವಿಜರಾಜಗಮನ ಅಜಾಮಿಳವರದಗೆ 1 ಆಪನ್ನಿವಾರಣ ಅಪ್ರಮೇಯನಿಗೆ ತಾಪತ್ರಯಹರ ಶ್ರೀಪತಿಗೆ ತಾಪಸವಂದಿತ ಕೋಪವಿರಹಿತ ಗೋಪಾಲಕನಂದನ ಯದುಪತಿಗೇ 2 ಸನಕಾದಿಮುನಿಗಳಿಂದನವರತವು ಪೂಜೆಯನು ಕೈಗೊಂಬ ವನಜಾಕ್ಷಗೆ ಘನಶೇಷಗಿರಿವಾಸ ಚಿನ್ಮಯರೂಪ ಶ್ರೀ ವನಜನಾಭವೇಂಕಟಗೆ ಮಂಗಳಂ ಶ್ರೀ ಲಕ್ಷ್ಮೀಕಾಂತಗೆ3
--------------
ನಂಜನಗೂಡು ತಿರುಮಲಾಂಬಾ