ಒಟ್ಟು 377 ಕಡೆಗಳಲ್ಲಿ , 62 ದಾಸರು , 270 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಣೆಯೇನೇ ತಂಗಿ | ಇವನಾ ಕಾಣೆಯೇನೇ ತಂಗಿ ಪ ವೇಣುವನೂದುವ ಮುದ್ದು ಮೋಹನ್ನನ ಅ.ಪ ಪೂತನಿಯಸುವಾ ಹೀರಿದನಿವನು ಮಾತೆಗೆ ಬಾಯಲಿ ಜಗವ ತೋರಿದನು 1 ಬಕ ಶಕಟಾಸುರನಿಕರವ ಸದೆದ ವಿಕಟ ಕಾಳಿಂಗನ ಹೆಡೆಯನು ತುಳಿದ 2 ಬೃಂದಾವನದಾನಂದ ಮುಕುಂದ ನಂದನಕಂದ ಮಾಂಗಿರಿಯ ಗೋವಿಂದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾರಣನೇ ಇವನು ಎಲ್ಲಕ್ಕೂ ಕಾರಣನೇ ಇವನು ಪ ಕಾರಣನಿವನು ಸಾಧಾರಣನಲ್ಲನು ಮಾರಮಣನು ಕರುಣಾರಸಮಯನು ಅ.ಪ ಇಚ್ಛೆಯಿಂದಲಿ ತಾನು ಅಖಿಲ ಜಗ ತ್ಸøಷ್ಟಿಯ ಮಾಡುವನು ಸ್ವಚ್ಛನಾದರು ತನ್ನ ಮೆಚ್ಚಿಗೆಯಿಂದಲಿ ತುಚ್ಛನೆಂಬೊ ಶಬ್ದ ವಾಚ್ಯನಾಗಿರುವನು 1 ಎಲ್ಲವ ಬಲ್ಲವನು ಈಶನು ಇಲ್ಲದ ಸ್ಥಳವಿಲ್ಲ ಚಿಲ್ಲರೆ ದೈವಗಳೆಲ್ಲರು ಈತನ ಚೆಲ್ಲಾಟಗಳಿಗೆ ಉಲ್ಲಾಸಿಸುವರು 2 ಭಿನ್ನರೂಪಗಳಿಂದ ಜಗದೊಳು ತನ್ನ ಲೀಲೆಯ ತೋರ್ಪ ಸನ್ನುತ ಭಕುತಗೆ ಮನ್ನಣೆಯಿಂದ ಪ್ರ ಸನ್ನನಾಗಿ ಉನ್ನತ ಪದವೀಯಲು 3
--------------
ವಿದ್ಯಾಪ್ರಸನ್ನತೀರ್ಥರು
ಕಿನ್ನೇಶದೂತರು ಎಳಿಯಾರೆ ಪ ಹಿಂದಿನ ದುಃಖವ ನೆನಸಿಕೊ | ನೀನು | ಬಂದದೆ ಒಂದೊಂದು ಗುಣಿಸಿಕೊ | ಮುಂದೀಗ ಎಚ್ಚತ್ತು ನೋಡಿಕೊ | ಇದು ಸಂದೇಹವೆನದೆ ನಿಜವಾಗಿ ತಿಳಿದಕೊ 1 ಗರ್ಭಯಾತನೆ ಬಲು ಹೇಸಿಕೆ | ವಳಗೆ | ನಿರ್ಬಂಧವಾಗಿ ಬೆಳೆದು ಮೇಲಕೆ | ದೊಬ್ಬುವರು ನಿನ್ನ ಕೆಳಿಯಿಕೆ | ಬಿದ್ದು ಅಬ್ಬಬ್ಬ ಐಯ್ಯಯ್ಯವೆಂದು ಅಳಲೇಕೆ2 ಬಾಯಿಗೆ ಬಜೆ ಬೆಣ್ಣೆ ಕೊಡುವರು | ತಾಯಿ | ಬಳಗವೆಲ್ಲ ಸಂತೋಷಬಡುವರು | ಆಯಿತು ಮಗುವೆಂದು ನುಡಿವರು | ಇವನ ಆಯುಷ್ಯ ಕಡಿಮೆಯೆಂದದು | ಅರಿಯದೆ ಕೆಡುವರು 3 ಚಿಕ್ಕಂದು ಎತ್ತಿ ಮುದ್ದಾಡಿ ಬೆಳಸಿ | ಅಕ್ಕರದಿಂದಲಿ ನೋಡಿ ಕೊಂಡಾಡಿ | ಫಕ್ಕನೆ ಕುಲಗೋತ್ರರ ಕೂಡಿ | ಒಬ್ಬ | ರಕ್ಕಸಿಯ ತಂದು ನಿನಗೆ ಜತಿ ಮಾಡಿ 4 ನೆಲೆ ಇಲ್ಲದ ಮಮತೆಯೊಳು | ಮುಳುಗಿ | ತಲೆಕೆಳಗಾಗಿ ನಡೆದು ಹಗಳಿರುಳು | ಕುಲನಾಶಕನೆಂಬೊದು ಬಾಳು | ಬಿಡು | ತಿಳಿಯ ಪೇಳುವೆನು ಎತಾರ್ಥವ ಕೇಳು5 ದುರ್ವಾಸನೆ ನಾರುವ ಬೀಡು | ಇದು | ಸ್ಥಿರವಲ್ಲ ಎಂದಿಗು ಹಂಬಲ ಬಿಡು | ಹರಿದಾಸರ ಸಂಗ ಮಾಡು | ಇನ್ನು | ಹರಿನಾಮಗಳ ಕೊಂಡಾಡು 6 ಆವಾವ ಜನ್ಮದಲಿ ನೀನು | ಒಮ್ಮೆ | ದೇವ ಎಂದೆನಲಿಕ್ಕೆ ನಾಲಿಗಿತ್ತೇನು | ಈ ಉತ್ತಮವಾದ ಈ ತನು | ಬಂತು | ಕೋವಿದನಾಗಿ ಶ್ರೀ ಹರಿಯನ್ನು ಕಾಣು7 ಆ ಮರ ಈ ಮರ ಎನಲಾಗಿ | ಅವನ | ತಾಮಸದ ಜ್ಞಾನ ಪರಿಹಾರವಾಗಿ | ಸ್ವಾಮಿಯ ದಯದಿಂದ ಮಹಯೋಗಿ | ಎನಿಸಿ | ಭೂಮಿಯೊಳಗೆ ಬಾಳಿದನು ಚನ್ನಾಗಿ 8 ಸಿರಿ | ರಂಗ ಯೆನಲಾಗಿ ಕಾಯ್ದ ಶ್ರೀಪತಿ | ವಿಜಯವಿಠ್ಠಲ ನಂಬು 9
--------------
ವಿಜಯದಾಸ
ಕೃಪೆಯಿಟ್ಟು ಸಲಹೆನ್ನ ಹರಿಯೆ ನರಹರಿಯೆ ದ್ವಿಪÀವರವರದನೇ ಬಾರಯ್ಯ ದೊರೆಯೆ ಪ ದುರಿತಹರÀ ವರ ಚರಣಕಮಲನೆ ಧರಣಿಧರವನು ಕರಸರೋಜದಿ ಧರಿಸಿ ಸುಜನರ ಪೊರೆದ ಮುರಳೀ- ಧರನೇ ಮೋದವಪಡಿಸಿದಂತೆ ಅ.ಪ ನಂದನಂದನ ನಿನ್ನ ಚರಣ ಒಂದೇ ಶರಣ ಎನಗೆಂದು ನಂಬಿರುವುದೇ ಒಳ್ಳೇ ಆಭರಣ ಇಂದಿರೇಶನೆ ಮಾಡೋ ಕರುಣ ಸಿಂಧುಶಯನ ಸುಂದರೀಮಣಿ ಸಹಿತದಲಿ ನೀ ಬಂದು ಎನ್ನಯ ಮಂದಿರದಲಿ ನಿಂದು ಎನ್ನವನೆಂದು ಭಾವಿಸಿ ನಂದಪಡಿಸೈ ನಂದಬಾಲನೆ 1 ದೀನಪಾಲನೆ ಭೂಮಿಭಾರ ಹಾನಿಕಾರ ಪಂಚ ಸೂನಶರನಪಿತ ವಿಗತವಿಕಾರ ಶ್ರೀನಾಥ ಸುಜನಮಂದಾರ ಮೀನಾಕಾರ ನಾನು ನಿನ್ನವನಯ್ಯ ಎನ್ನಯ ಮಾನ ಮತ್ತಪಮಾನ ನಿನ್ನದು ಹೀನಮತಿ ಇವನೆಂದು ತಿಳಿದುದಾ- ಸೀನಮಾಡದೆ ಸಾನುರಾಗದಿ 2 ಸೋಮ ಕುಲಾಂಬುಧಿಸೋಮರಾರಾಮ ಬಲರಾಮ ಸಹಜನೇ ಸುರರಿಪು ಭೀಮ ವಾಮಲೋಚನೇರಿಗೆ ಕಾಮ ಪ್ರೇಮಧಾಮ ಕಾಮಜನಕನೆ ಸಾಮಗಪ್ರಿಯ ನಾಮಗಿರಿ ಶ್ರೀ ರಾಮ ನರಹರೆ ಕಾಮಿತಾರ್ಥವನೀವ ಸುರತರುಕಾಮಧೇನು ಚಿಂತಾಮಣಿಯೆ ನೀ 3
--------------
ವಿದ್ಯಾರತ್ನಾಕರತೀರ್ಥರು
ಕೇಳೇ ಯಶೋದೆ ನಿನ್ನ ತನಯನ ಲೀಲೆಯ ಪೇಳಲು ಅಳವಲ್ಲವೇ ಪ ಬಾಳುವ ಸತಿಯರ ಧಾಳಿ ಮಾಡುವ ಯದÀು ಮೌಳಿ ಶ್ರೀ ಕೃಷ್ಣಗೆ ಪೇಳೀ ವಿವೇಕವ ಅ.ಪ ಇಂದುವದನ ಎಮ್ಮ ಮಂದಿರಗಳ ಪೊಕ್ಕು ಪೊಂದುವ ಪಾಲ್ಬೆಣ್ಣೆಯ ಇಂದು ಸಿಕ್ಕಿದನೆಂದು ಕರಗಳಿಂ ಪಿಡಿಯಲು ಮಂದಹಾಸವ ಬೀರಿ ಮನವ ಸೋಲಿಸುವನು 1 ನೀರಿಗೆ ಪೋಗಲು ಯಾರೂ ಇಲ್ಲದ ವೇಳೆ ಸೇರುವ ಎಮ್ಮೊಡನೆ ಮೀರಿ ಪೋಗಲು ಕಾಲು ಬಾರದ ಎಮ್ಮೊಳು ಸಾರಸಾಕ್ಷ ಕೃಷ್ಣ ಸರಸವ ತೋರುವ 2 ನಿನ್ನ ತನಯ ಪ್ರಸನ್ನ ಶ್ರೀಕೃಷ್ಣನು ಅನ್ಯಾಯಕಾರನಮ್ಮ ಚನ್ನಾಗಿ ಇವನಿಗೆ ಬುದ್ಧಿ ಕಲಿಸದಿರೆ ಬೆನ್ನು ಹತ್ತುವೆವು ಕನ್ಯೆಯರೆಲ್ಲರು 3
--------------
ವಿದ್ಯಾಪ್ರಸನ್ನತೀರ್ಥರು
ಕೋನೇರಿ ವಾಸ ವಿಠಲ | ನೀನೆ ಪೊರೆ ಇವನ ಪ ಕಾಣೆ ನಿನ್ಹೊರತು ಕಾ | ರುಣ್ಯ ಮೂರುತಿ ಹರಿಯೆ0ಜ್ಞಾನಗಮ್ಯನೆ ಸಲಹೊ | ಮಾಣದಲೆ ಇವನಾ ಅ.ಪ. ಸುಕೃತ | ರಾಶಿ ಫಲಿಸಿತೊ ಇವಗೆ ದಾಸ ದೀಕ್ಷೆಯಲಿ ಬಹು | ಆಶೆ ತೋರುವನೋವಾಸವಾನುಜ ನಿನ್ನ | ದಾಸತ್ವ ಪಾಲಿಸುತಪೊಷಿಸೂವುದು ಬಿಡವೆ | ಶೇಷಾದ್ರಿವಾಸಾ 1 ತೈಜಸನು ಗುರುವಾದಿ | ರಾಜಾಖ್ಯ ರೂಪದಲಿಮಾಜದಲೆ ಪೇಳ್ವ ವಿ | ಭ್ರಾಜದಂಕಿತವಾವಾಜರೂಪಯು ಹರಿಯೇ | ಯೋಜಿಸಿಹೆ ಇವಗೆನಿವ್ರ್ಯಾಜ ಕರುಣಿಯೆ ಪೂರ್ಣ | ತೇಜೌಜ ನಿಧಿಯೇ 2 ಮಧ್ವ ಸಮಯದ ಜ್ಞಾನ | ವೃದ್ಧಿ ಗೈಸಿವನಲ್ಲಿಅದ್ವೈತ ತ್ರಯದರಿವು | ಬುದ್ಧಿಗೇ ನಿಲುಕೀಅಧ್ವಯನು ಹರಿಯೆಂಬ | ಸಿದ್ಧಾಂತ ಮನಸಿನಲಿಬದ್ಧವಾಗುವ ತೆರದಿ | ಸಿದ್ಧಿಸೋ ಹರಿಯೇ 3 ಕಂಸಾರಿ ತವನಾಮ | ಶಂಸನ ಪ್ಲವದಿಂದಸಂಸಾರ ನಿಧಿ ತರಣ | ಸಂಶಯವು ರಹಿತಾಅಂಶ ಅವತಾರ ಆ | ವೇಶ ವಿಷಯಗಳ ನಿಸ್ಸಂಶಯದಿ ತಿಳಿಸಿ ಪದ | ಪಾಂಸು ಸೇವೆ ಈಯೋ 4 ಸರ್ವಜ್ಞ ಸರ್ವೇಶ ಸರ್ವಮೂಲನೆ ದೇವದುರ್ವಿಭಾವ್ಯದೆ ಹರಿಯೆ | ಶರ್ವವಂದ್ಯಾಸರ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆದರ್ವಿ ಜೀವಿಯ ಪೊರೆಯೆ | ಪ್ರಾರ್ಥಿಸುವೆ ಹರಿಯೆ 5
--------------
ಗುರುಗೋವಿಂದವಿಠಲರು
ಗುರು ಎಂಥಾ ಗಾರುಡಿಗಗುರುವಿನ ನಂಬಿ ಗುಣವೆಲ್ಲ ಕಳಕೊಂಡೆ ಪ ಶರಣು ಮಾಡೆಂದರೆ ಶರಣು ಮಾಡುತ್ತಲಿರ್ದೆಕರದಲ್ಲಿ ಏನಿತ್ತೋ ಜವೆಯ ಬೂದಿಶಿರದ ಮೇಲೆನ್ನ ಮೈಮೇಲೆ ಎಳೆಯಲು ಶರೀರವಮರೆತೆನೆ ಇದಕೆ ಸಾಕ್ಷಿಯಾದನೆ ಗುರು 1 ಆರು ಇಲ್ಲದುದ ನೋಡಿ ಬೇರೆನ್ನ ಕರೆದೊಯ್ದುಮೋರೆಯನು ಕಿವಿಯೊಳಗಿಟ್ಟು ಮಂತ್ರಿಸಿದನಾರಿ ಬದುಕು ಮನಮಕ್ಕಳನೆಲ್ಲವಸೇರಿ ಸೇರದಂತೆ ಮಾಡಿದನೆ ಗುರು2 ಭವಗೇಡಿ ಕುಲಗೇಡಿ ಸಂಗಗೇಡಿಯಾದೆಇವನ ವಿಶ್ವಾಸದ ಫಲದಲಿಂದಇವನ ಮೇಲೆ ಎನ್ನ ವ್ಯಾಕುಲ ಹತ್ತಿದೆವ್ಯವಹಾರವೆಂಬುದು ಎಡವಟ್ಟಾಯಿತು3 ಮಂತ್ರಿಸಿದ ಕ್ರಿಯೆ ಮರಳಲೀಯದೆ ಎನ್ನಮಂತ್ರ ತಂತ್ರಕ್ಕದು ಬಗ್ಗಲಿಲ್ಲಮಂತ್ರದ ಮಹಿಮೆಯು ಮಹಾಮಹಿಮೆಯುಮಾಂತ್ರಿಕರೊಳಗೆ ದೊಡ್ಡವನಹುದೋ ಗುರು 4 ಇವನ ನಂಬಿದ ಮೇಲೆ ಇವನಂತಲ್ಲದೆಭುವನಕ್ಕೆ ತಿರುಗಿ ತಾ ತಾರೆನೆವಿವರಿಸೆ ಹುರುಳಿಲ್ಲ ಹೇಳಿ ಕೇಳೋದೇನುಭುವನ ರಕ್ಷಕ ಚಿದಾನಂದನೆ ಗುರು 5
--------------
ಚಿದಾನಂದ ಅವಧೂತರು
ಗುರು ಜಗದೀಶ ವಿಠಲ | ಪೊರೆಯ ಬೇಕಿವನ ಪ ಮರುತಾಂತರಾತ್ಮ ಹರಿ | ಪ್ರಾರ್ಥಿಸುವೆ ನಿನಗೇ ಅ.ಪ. ಕಾಕು ಸಂಗವ ಕೊಡದೆ ಮಾಕಳತ್ರನೆ ಕಾಯೊ | ಜೋಕೆಯಿಂದಿವನವಾಕು ಮನ್ನಿಸಿ ಎನ್ನ | ಬೇಕಾದಭೀಷ್ಟಗಳತೋಕನಿಗೆ ಕೊಡು ನೀನೆ |ಶ್ರೀಕರಾರ್ಚಿತನೇ 1 ಶರ್ವಾದಿ ದಿವಿಜೇಡ್ಯ | ಪರ್ವಕಾಲದಿ ಬಪ್ಪಸರ್ವ ವಿಘ್ನಗಳ್ಹರಿಸಿ | ಪೊರೆಯೊ ಇವನದುರ್ವಿಭಾವ್ಯನೆ ಹರಿಯೆ | ದರ್ವಿಜೀವಿಯ ಕಾದಸರ್ವ ಭಾರವು ನಿನದೊ | ಸರ್ವಾಂತರಾತ್ಮ 2 ಸಾರ ಅಂಕಿತವಿತ್ತುಧೀರ ನೀ ಪೊರೆಯೆಂದು | ಪ್ರಾಥಿಸಿಹೆ ಹರಿಯೇ 3 ಕೃಷ್ಣೆಗಕ್ಷಯ ವಸನ | ಕೊಟ್ಟು ರಕ್ಷಿಸಿದಂಥಕೃಷ್ಣ ಮೂರುತಿ ಇವನ | ಸುಷ್ಠುಷ್ಟು ಪಾಲಿಪುದೋಶ್ರೇಷ್ಠ ಹರಿ ಗುರು ಭಕ್ತಿ | ಮತ್ತೆ ತರತಮ ಜ್ಞಾನಕೊಟ್ಟು ಕಾಪಾಡೊ ಹರಿ | ವಿಷ್ಠರಶ್ರವನೇ 4 ಜಲಧಿ | ನಾನೆ ಎಂದೆನಿಪ ತವಭವ್ಯ ನಾಮಾಮೃತವ | ಸಾರ್ವಕಾಲದಲೀತಾವಕಗೆ ಉಣಿಸುತ್ತ | ಭಾವದಲಿ ಮೈದೋರೊಗೋವಿದಾಂಪತಿಯೆ ಗುರು | ಗೋವಿಂದ ವಿಠಲ5
--------------
ಗುರುಗೋವಿಂದವಿಠಲರು
ಗುರು ಪಾಂಡುರಂಗ ವಿಠಲ | ಪರಿಪಾಲಿಸಿವನಾ ಪ ಕರಣ ನೀಯಾಮಕನೆ | ಕರುಣವನೆ ತೋರೀ ಅ.ಪ. ಕರ್ಮ ಸ್ವಾಮಿ | ಎತ್ತಿಕರ ಪಿಡಿಯೋ 1 ಕರ್ಮ ನೆರವಾಗಲಿವನೀಗೆಪರಮ ಪಾವನ ಮೂರ್ತೆ ಹರಿ ಪಾಂಡುರಂಗಾ 2 ಭವ ಕಳೆಯೋ 3 ಪದ್ಧತಿಯ ತಪ್ಪದಲೆ | ಮಧ್ವಮತದಂಗವನುಉದ್ಧರಿಸೊ ಇವನಲ್ಲಿ | ಪದ್ಮನಾಭಾಖ್ಯಾಈ ಧರೆಯ ಸಂಸಾರ | ಬದ್ಧ ಲೌಕೀಕಗಳತಿದ್ದಿ ವೈದಿಕವೆನಿಸೋ | ಹದ್ದು ವಾಹನನೇ4 ಕೃದ್ಧಖಳ ಸಂತತಿಯ | ಒದ್ದು ಕಳೆಯುತ ಹರಿಯೆಹೃದ್ಗುಹದಿ ಮೈದೋರೊ | ಶಬ್ಧಗೋಚರನೇಮಧ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆಮದ್ವಚನ ಸಲಿಸೆಂದು | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಗುರು ಪ್ರಸನ್ನ ವಿಠಲ | ಪೊರೆಯ ಬೇಕಿವನಾ ಪ ದುರಿತ ದುಷ್ಕøತ ನಿಚಯ | ಪರಿಹರಿಸಿ ವರ್ಯಾ ಅ.ಪ. ಮಧ್ವ ಮತದಲಿ ಶ್ರದ್ಧೆ | ವೃದ್ಧಿಗೈ ಸಿವನಲ್ಲಿಶ್ರದ್ಧೆ ಪತಿನುತ ಹರಿಯೆ | ಮಧ್ವಾಂತರಾತ್ಮಾಬುದ್ಧಿ ಜೀವಿಯು ಇವನು | ಸಾಧನದಿ ಶಕ್ತನಿಹನಿದ್ರೆಯಿಂದೆಚ್ಚರಿಸಿ | ಉದ್ಧರಿಸೊ ಇವನಾ 1 ಅಂಕಿತದ ಉಪದೇಶ ಕಾಂಕ್ಷಿಸುತ್ತಿಹ ಇವಗೆಬಿಂಕದಲಿ ತೈಜಸನು | ಗುರು ರೂಪಿಲಿಂದಾಲೆಂಕಕನ ಸ್ವೀಕರಿಸಿ | ಆಶಿಷವ ನಿತ್ತಿಹನುಪಂಕಜಾಸನ ವಂದ್ಯ | ಅಂಕಿತವ ನಿತ್ತೇ 2 ಸಂಸಾರ ಕ್ಲೇಶಪದ | ಪಾಂಸು ಭಜಿಪುದರಿಂದೆಸಂಶಯವು ರಹಿತಾಗಿ | ದೂರ ಓಡುವುದೋಕಂಸಾರಿ ನಿನ ಅಂಶಿ | ಅಂಶಾವತಾರಗಳಶಂಸನದಿ ಸಾಧನವ | ಗೈಸೊ ಶ್ರೀಹರಿಯೇ 3 ಭವ ವಂದ್ಯಾ 4 ಯೋಗೀಶ ಶ್ರೀ ಕೃಷ್ಣ | ಯೋಗ ಸಾಧನೆಯಿತ್ತುನೀಗು ಭವವನು ಇವಗೆ | ಭಾಗವತರೊಡೆಯಬಾಗಿ ಬೇಡುವೆ ದಯಾ | ಸಾಗರನೆ ಉದ್ಧರಿಸೊಯೋಗಿ ಜನ ವಂದ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗುರು ಮೋಹನ ವಿಠಲ ಸಲಹಬೇಕಿವನಾಕರುಣಾ ಪಯೋನಿಧಿಯೆ ಮರುತಾಂತರಾತ್ಮ ಪ ನಿಗಮವೇದ್ಯನೆ ಹರಿಯೆ | ರಘುರಾಮ ದಾಸರೊಳುಮಿಗೆ ಸುಪ್ರೇರಕನಾಗಿ | ಮಗನ ಮದುವೆಯಲೀಅಘಹರವು ತವನಾಮ | ಸದ್ಗುರೂ ಕರುಣೆಯಲಿನಗುನಗುತ ಒದಗಿಸಿದೆ | ನಗಧರನೆ ದೇವಾ 1 ಮೋದ ಪಾದ ಕಾ ನಮಿಪೇ 2 ಹರಿಗುರೂ ಸದ್ಭಕ್ತಿ | ತರತಮದ ಸುಜ್ಞಾನಕರುಣಿಸೀ ಪೊರೆ ಇವನ | ಗುರುವಂತರಾತ್ಮ |ಪರಮ ಗುರು ಕಾರುಣ್ಯ | ದರುಶನವ ಪಡೆದಿಹನುಪರಿಪರಿಯ ಸೌಖ್ಯಗಳ | ಕರುಣಿಸೋ ಹರಿಯೇ 3 ಸೊಲ್ಲು ಲಾಲಿಸುತಾ 4 ದಾವಾಗ್ನಿಯನೆ ನುಂಗಿ | ಗೋವಳರ ಪಾಲಿಸಿದೆಪಾವಮಾನಿಯ ಪ್ರೀಯ | ನೀ ವೊಲಿದು ಇವಗೇಭಾವದಲಿ ತವರೂಪ | ತೋರೆಂದು ಭಿನ್ನವಿಸೆದೇವದೇವನೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗೋಕುಲದ ಸತಿಯರೆಲ್ಲ ಶ್ರೀಕೃಷ್ಣನಾಟಗಳದೂರುತಲೆ ಪಾಡುವರು ಪ. ಕಪಟ ಸರ್ವಾಂಗದೊಳಗಿದಕೊಮಣ್ಣ ಮೆಲುವನು ತನ್ನ ತೆರೆಬಾಯಿ ತೆರೆವನಿವಚಿಣ್ಣತನದಾ ತನುವ ತೋರುತಲೆ ವನದೊಳಗೆಪಣ್ಣು ಫಲಗಳ ಸವಿವುತಅಣ್ಣನೊಡನೆ ಕೊಳಲನೂದುತಲಿ ಗೋಕುಲದಹೆಣ್ಣುಗಳ ಮರುಳು ಮಾಡುವ ಗಂಡುಗಲಿಯಿವನಿನ್ನ ಮಗ ಅಮ್ಮಮ್ಮ ಶುಕನ ನುಡಿಗಳ ಗೆಲುವಬಣ್ಣಿಸುವ ಕವಿಯದಾವ1 ಸುರರು ಸೋಲುತಿರೆಆರ್ತಿಯ ಕಳೆವರೆ ಭವರೋಗಕಿವನೆ ಮದ್ದುಇತ್ತಲೀತನ ಚೆಲುವ ಕಾಣುತಲಿ ಕಂದರ್ಪಪೃಥ್ವಿಯಲಿ ಬಿಲ್ಲ ಬಿಸುಟ 2 ಮೂರ್ತಿ ಕೀರ್ತಿಯ ಸೊಬಗುಚಿತ್ರ ಚರಿತ್ರಗಳ ಕಂಡಿರೆ ನಿಮ್ಮ ಕುಮಾರನಾದ ಹತ್ತುಸಾವಿರ ಪೆಸರು ಸಲ್ಲುವುದಮ್ಮ ಸ-ರ್ವತ್ರ ನೋಡುವ ಸುಜನರುಚಿತ್ತದೊಳಗೆಲ್ಲ ಪುರವಿಟ್ಟವರು ಅರಸುತಿರೆವ್ಯಾಪ್ತನೆಂಬುದಕೆ ತಮ್ಮ ತಮ್ಮ ಮನವೇ ಸಾಕ್ಷಿಮುಕ್ತಿ ನಮಗೇಕೆ ಹಯವದನನಂಘ್ರಿü್ರಗಳಾಣೆನಿತ್ಯದಲಿ ಇವನ ನೋಡುತಲಿಹುದು ಸಾಕೆಲೆ ಗೋಪಿ3
--------------
ವಾದಿರಾಜ
ಗೋಪಿ ಇವನು ನಿನ್ನಾ ಪ ಜಗವ ನಿರ್ಮಿಸಿ ಪಾಲಿಸಿ ಅಳಿಸುವ ಅಗಣಿತ ಸುಗುಣಾ ಭರಣನೆ ಇವನು ಅ.ಪ ಬೆಣ್ಣೆಯ ಕದ್ದನು ಸಣ್ಣವನಿಹ ಬಹು ಚಿಣ್ಣರ ಕೂಡುತ ಗೋಗಣ ಕಾಯುವ ಮನ್ಮನ ಪುಥ್ಥಳಿ ಕಳಿಸುವದಾಗದು ಎನ್ನುವ ನುಡಿಗಳ ಬದಿಗಿಡು ತಾಯಿ ಉಣ್ಣುತ ಉಣ್ಣುತ ಮೊಲೆಯನು ಕೊಂದಿಹ ಉನ್ನತ ರಕ್ಕಸಿ ಪೂತಣಿಯನ್ನಿವ ಮಣ್ಣನು ಕಂಡರು ಕಂಸನದೂತರು ಪೂರ್ಣಾನಂದನು ಸರಿ ಇವನಮ್ಮ 1 ಜಾರ ಚೋರ ಸುಕುಮಾರನು ಸುಂದರ ನಾರೇರ ವಲಿಸಿ ಸೇರಿದ ನಿಶಿಯಲಿ ಪೋರನೆಂಬ ಮನ ದೂರವಗೈದುಗ ಭೀರ ಮಹಿಮ ಜಗ ಸಾರನೆಂದರಿಯೆ ಭಾರಿಗಿರಿಯನೆತ್ತಿ ಊರಿಗೆ ಊರನು ಸೇರಿಸಿ ಪೊರೆದಿಹಪಾರಮಹಿಮ ಜಂ ಭಾರಿದರ್ಪಹರ ಪೋರನೆ ಬಿಡುಬಿಡು ನಿಗಮ ಸಂಚಾರನೆ ಖರೆಯೆ 2 ಕಾಲ್ಗಳು ಸೋಕಲು ಶಕಟನು ಬಿದ್ದನು ಶೀಳುತ ಕೊಕ್ಕನು ಬಕನಂ ಕೊಂದನು ಕಾಳಿಯ ತುಳಿಯುತ ಗರ್ವವ ನಿಳಿಸಿದ ಲೀಲಾಜಾಲದಿ ಜ್ವಾಲೆಯ ನುಂಗಿದ ಬಾಲರು ಕೇಳಲು ಆಲಯತೋರಿದ ಪಾಲಿಸಿ ವರುಣನ ತಂದೆಯ ಕಂದನ ಲೋಲನೆ ಸರಿ ಜಗಮೂಲನು ಕೇಳೆ 3 ನೀರಜ ನಾಭಗೆ ಗೊಲ್ಲತಿಯ ಗಣ ಬೀರಲ್ ಸಾಧ್ಯವೆ ಮೋಹವ ನೆಂದಿಗು ಶ್ರೀರತಿದಾಯಕ ಕೊಳ್ಳುವನೇ ರತಿ ಭವ ತಾರಕ ಶುಭ ಶೃಂಗಾರ ಪೂರ್ಣ ಪರಿವಾರದಭೀಷ್ಠವ ಖರೆ ಭೂರಿದಯಾಮಯ ನಾರಾಯಣನಿವ ದೋಷ ವಿದೂರ 4 ಮೆಲ್ಲಗೆ ಬಾಯೊಳು ಎಲ್ಲವ ತೋರಿದ ಮಲ್ಲನು ಸರ್ವರ ವಲ್ಲಭ ಸಿದ್ಧವು ಗೊಲ್ಲನ ವೇಷದಿ ಇಲ್ಲಿಹನಮ್ಮ ಇಲ್ಲವೆ ಸಮರಿವಗೆಲ್ಲಿಯ ಸತ್ಯ ಮಲ್ಲರ ಮರ್ದಿಸಿ ಕೊಲ್ಲುತ ಕಂಸನ ನಿಲ್ಲಿಸಿ ಧರ್ಮವ ಕಾಯುವ ನಮ್ಮ ಬಲ್ಲಿದ “ಶ್ರೀಕೃಷ್ಣವಿಠಲ” ಬೇಗನೆ ನಿಲ್ಲಿಸಿ ಕೊಳ್ಳದೆ ಕಳುಹೇ ತಾಯಿ 5
--------------
ಕೃಷ್ಣವಿಠಲದಾಸರು
ಗೋಪಿ ನಿನಗೆ ದೂರ ಯಾರ ಮಾತ ಕೇಳವಲ್ಲಾ ರಂಗ ಚೋರ ಪ ದಿಕ್ಕಡದಿಮ್ಮಿಲೆ ಕೂಡಿಸುವ ಬ್ರಹ್ಮಾಂಡ ನೂರಾ ಇವನ ಮಹಿಮಾ ತಿಳಿಯದವ್ವಾ ಮಾಯಕಾರ ಅ.ಪ. ಕಳ್ಳನಾಗಿ ಕಂಣಮುಚ್ಚಿ ಗತಿಯವಲ್ಲನೆ ಭಾರ ನೆಗಿವ್ಯಾನೆ 1 ಕ್ವಾರಿಲೆ ಹಾದು ದೈತ್ಯನ ಕೊಂದಾನೆ ತರಳಗಾಗಿ ಖಂಬದಿಂದ ವಡದು ಬಂದಾನೆ 2 ಧಾರೂಣಿ ಅಳೆದು ಮೂರಡಿ ಮಾಡಿದ ಅಂಬೆಯ ಮಗನಾಗಿ ಎಂಥ ಕಾಡಿದ 3 ಅಂಬು ಹೂಡಿದ ನಂಬೀದ ವಿಭೀಷಣಗೆ ಪಟ್ಟಗಟ್ಟಿದ 4 ಗೋಕುಲದೊಳಗೆ ಪುಟ್ಟಿ ಬೆಣ್ಣೆ ಮೆದ್ದಾನೆ ವಸ್ತ್ರವಿಲ್ಲದಂತೆ ತಾ ಬತ್ತಾಲೆ ನಿಂತಾನೆ 5 ಕುದುರೆಯೇರಿ ಹಾರುತ ಬಂದಾನೆ ಬೆದರಬೇಡೆಂದು ಶ್ರೀದವಿಠಲ ಅಂದಾನೆ 6
--------------
ಶ್ರೀದವಿಠಲರು
ಗೋಪಿ ನಿನ್ನ ಮಗನ ಲೂಟಿಯ ಪ ಮಾಡುತಾನೆ ಮನೆಗೆ ಬಂದು ಬಹಳ ಚೇಷ್ಟೆಯ ಅ ಮಾನಿನೀಯರೊಳಗೆ ಪೋಕಾಟವೇನಿದುಮಾನವನ್ನು ಕಳೆದ ಪರಿಯ ಹೇಳತೀರದು 1 ಪಿಡಿದ ಸೆರಗ ಬಿಡನು ಇನ್ನೇನ ಮಾಡಲಿತಡೆಯಲಾರೆವಮ್ಮ ಕೇಳೆ ಇವನ ಹಾವಳಿ 2 ಕದಳಿ ರಂಗನಬನ್ನಣೇಯ ಮಾತ ಕೇಳಿ ಬಿಡುವೆ ಪುರುಷನ 3
--------------
ಕನಕದಾಸ