ಒಟ್ಟು 67 ಕಡೆಗಳಲ್ಲಿ , 32 ದಾಸರು , 67 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬರಿದೆ ಹೋಯಿತು ಹೊತ್ತು - ಹರಿಯೆ |ಶರೀರವೆ ಸ್ಥಿರವೆಂದು ಮರೆತು ನಾನಿದ್ದೆನೆ ಪಆಸೆಯೆಂಬುದು ಎನ್ನ ಕ್ಲೇಶಪಡಿಸುತಿದೆ |ಗಾಸಿಯಾದೆನೊ ಹರಿಯೆ ||ಶೇಷಶಯನನು ನೀನು ನಿನ್ನ ನಂಬಿದೆ ನಾನು |ನಾಶವಾಯಿತು ದಿನ ಮೋಸ ಹೋದೆನಯ್ಯ 1ಸತಿಸುತರೆಂದೆಂಬ ಅತಿ ಭ್ರಾಂತಿಗೊಳಗಾದೆ |ಮತಿಹೀನ ನಾನಾದೆನೊ ||ಸತತ ನಿರಂತರ ಜಡದೇಹ ನಾನಾದೆ |ರತಿಗೆಳೆಯುತಿದೆ ಮನಸು ಹರಿಸರ್ವೋತ್ತಮನೆ 2ಪರರ ಸೇವೆಯ ಮಾಡಿ ಪರರನೆ ಕೊಂಡಾಡಿ |ಮರೆತೆನೊ ನಿನ್ನ ಧ್ಯಾನ |ಕರುಣದಿಂದಲಿ ಎನ್ನ ಕಾಯ್ದು ನೀ ಸಲಹಯ್ಯ |ಪುರಂದರವಿಠಲ ನಿನ್ನನೆ ನಂಬಿದೆ ನಾನು3
--------------
ಪುರಂದರದಾಸರು
ಬಾರೋ ಗೋಪಾಲ ಬಾಲ ಸುಶೀಲದೇವಕಿ ಬಾಲಕಂಸಾರಿಶ್ರೀಲೋಲಪಗುರುಳು ಕೂದಲು ಹೊಸ ಅರಳೆಲೆಹೊಳಪುಕೊರಳ ಕೌಸ್ತುಭಹಾರ ಸರಗಳ ಝಳಪು 1ಮುದ್ದು ಬಾಲನೆ ಹೊಸ ಬೆಣ್ಣೆಮುದ್ದೆಯ ನೀವೆಸದ್ದು ಮಾಡದೆ ಬಾರೊ ಉದ್ಧವÀಸಖನೆ 2ಕಂಠದೊಳಸಲಿ ವೈಕುಂಠ ಶ್ರೀಪತಿಗೆಸೊಂಟಗೆಜ್ಜೆಯು ಕಿರುಗಂಟಿಗಳೊಲಿಯೆ 3ಭಕ್ತಿಯಿಂದಲಿ ಕರವೆತ್ತಿ ಪ್ರಾರ್ಥಿಸುವೆನುಅಪ್ರಮೇಯನೆ ಪುರುಷೋತ್ತಮ ನಮಿಪೆ 4ಕರುಣದಿಂದಲಿ ಬಾರೊಕಮಲಸಂಭವನಯ್ಯಕಮಲನಾಭ ವಿಠ್ಠಲ ನಮಿಸುವೆ ಸತತ 5
--------------
ನಿಡಗುರುಕಿ ಜೀವೂಬಾಯಿ
ಲಿಂಗದೇಹವೆಂಬ ಪವಳಿ ಶೃಂಗರಿಸಿಅಂಗವ ನಿನಗೆ ಕಾಣಿಕೆಯ ನೀಡುವೆ ||ಮಂಗಳಮೂರುತಿಅಂಗನೆಸಹಿತ- ಭುಜಂಗಶಯನ ಎನ್ನ ಕಂಗಳುತ್ವವವೀಯೋ 2ಕಡಗ ಕಿರುಗೆಜ್ಜೆ ಪೆಂಡೆಗಳಿಂದಲೊಪ್ಪುವಉಡುಗೆ ಪೀತಾಂಬರತರಳಕೌಸ್ತುಭ||ಪಿಡಿದ ಶಂಖ ಚಕ್ರ ಕರ್ಣಕುಂಡಲದಿಂದಕಡಲಶಯನ ಎನ್ನ ಹೃದಯದೊಳಗೆ ನಿಲ್ಲೊ 3ಒಡೆಯ ನೀನೆನಗೆ ಅನಾದಿ ಕಾಲದಿಂದಬಡವನು ನಾನಿನ್ನ ದಾಸನಯ್ಯ ||ಕಡುಕರುಣದಿಂದ ದಾಸತ್ವ ನೀಡು ಗ-ರುಡಗಮನನೆ ವೆಂಕಟೇಶ ಎನ್ನ ಮನಕೆ 4ಬರಿಮನೆಯಲ್ಲವು ಪರಿವಾರವು ಉಂಟುಪರಮಪುರುಷ ನಿನ್ನ ರೂಪಗಳುಂಟು ||ಸಿರಿದೇವಿ ಸಹಿತದಿಪುರಂದರವಿಠಲನೆಕರುಣದಿಂದಲಿ ಮನ್ಮಂದಿರದೊಳಗೆ 5
--------------
ಪುರಂದರದಾಸರು
ಶ್ರೀಪತಿಯು ನಮಗೆ ಸಂಪದವೀಯಲಿ - ವಾಣೀಪತಿಯು ನಮಗೆ ದೀರ್ಘಾಯು ಕೊಡಲಿ ಪ.ಸುರರ ಗಣವನು ಪೊರೆಯೆ ವಿಷವ ಕಂಠದಲಿಟ್ಟಹರನಿತ್ಯ ನಮಗೆ ಸಹಾಯಕನಾಗಲಿಸರರೊಳುನ್ನತವಾದನಿತ್ಯ ಭೋಗಂಗಳನುಪುರುಹೂತಪೂರ್ಣ ಮಾಡಿಸಲಿ ನಮಗೆ1ವಿನುತ ಸಿದ್ಧಿಪ್ರದನು ವಿಘ್ನೇಶ ದಯದಿಂದನೆನೆದ ಕಾರ್ಯಗಳೆಲ್ಲ ನೆರವೇರಿಸಲಿದಿನದಿನದಿ ಅಶ್ವಿನಿಗಳಾ¥ತ್ತುಗಳ ಕಳೆದುಮನಕೆ ಹರುಷವನಿತ್ತು ಮನ್ನಿಸಲಿ ಬಿಡದೆ 2ನಿರುತ ಸುಜ್ಞಾನವನುಈವ ಮಧ್ವರಾಯ |ಗುರುಗಳಾಶೀರ್ವಾದ ನಮಗಾಗಲಿಪುರಂದರವಿಠಲನ ಕರುಣದಿಂದಲಿ ಸಕಲಸುರರೊಲುಮೆ ನಮಗೆ ಸುಸ್ಥಿರವಾಗಲಿ 3
--------------
ಪುರಂದರದಾಸರು
ಶ್ರೀಪತಿಯು ನಮಗೆ ಸಂಪದವೀಯಲಿ ವಾ-ಣೇಪತಿಯು ನಮಗೆ ದೀರ್ಘಾಯು ಕೊಡಲಿ ಪಸುರರ ಗಣವನು ಪೊರೆಯ ವಿಷವ ಕಂಠದಲಿಟ್ಟಹರನಿತ್ಯನಮಗೆ ಸಹಾಯಕನಾಗಲಿ ||ನರರೊಳುನ್ನತವಾದ ನಿತ್ಯಾಭೋಗಂಗಳನುಪರಹೂತ ಪೂರ್ಣ ಮಾಡಸಲಿ ನಮಗೆ 1ವಿನೂತಸಿದ್ದಿಪ್ರದನು ವಿಘ್ನೇಶ ದಯದಿಂದನೆನದ ಕಾರ್ಯಗಳೆಲ್ಲ ನೆರವೇರಿಸಲಿ ||ದಿನ ದಿನದಿ ಅಶ್ವಿನಿಗಳಾಪತ್ತುಗಳ ಕಳೆದುಮನಕೆ ಹರುಷವನಿತ್ತು ಮನ್ನಿಸಲಿ ಬಿಡದೆ 2ನಿರುತ ಸುಜಾÕನವನುಈವಮಧ್ವರಾಯಗುರುಗಳಾಶೀರ್ವಾದ ನಮಗಾಗಲಿ ||ಪುರಂಪರ ವಿಠಲನ ಕರುಣದಿಂದಲಿ ಸಕಲಸುರರೊಲುಮೆ ನಮಗೆ ಸುಸ್ಥಿರವಾಗಲಿ 3
--------------
ಪುರಂದರದಾಸರು
ಶ್ರೀಶ ಶ್ರೀಹಯವದನ ಮೂರ್ತಿಗೊಂದಿಸುವೆಸಾಸಿರ ನಾಮದ ಒಡೆಯನೀನೆಂದು ಪನಿನ್ನ ನೋಡುವ ಇಚ್ಛೆಯಿಂದ ನಿನ್ನದಾಸರುಇನ್ನು ಗಾವುದ ದೂರದಿಂದ ಬರುತಿಹರುನಿನ್ನ ಭಕ್ತರ ಕೂಡಿ ನಿನ್ನ ಸೇವೆಯ ಮಾಡಿನಿನ್ನ ದರುಶನದಿಂದ ಧನ್ಯರಾಗುವರು 1ಹರಿದಾಸರೆಲ್ಲರೂ ಪರಮಸಂಭ್ರಮದಿಂದಹರಿದಿನದಜಾಗರಹರಿಸ್ಮರಣೆಯಿಂದಪರಮವೈಭವದಿ ತನ್ನ ಸ್ಮರಿಸುತಿಹ ಸುಜನರನುಕರುಣದಿಂದಲಿಕಾವಸಿರಿರಮಣನೆಂತೆಂದು2ಆಪತ್ತು ತಾಪತ್ರಯಂಗಳೆಲ್ಲವುನೀಗಿಶ್ರೀಪತಿಯೆ ರಕ್ಷಿಸು ರಕ್ಷಿಸೆಂದೆನುತಗೋಪತೀ ಕೃಷ್ಣನ್ನಪಾಡಿ ಪೊಗಳುವರನ್ನುಕಾಪಾಡುವನು ಸಕಲಪಾಪಗಳ ಹರಿಸಿ 3ಸೋದೆಯಲಿ ನೆಲೆಸಿರುವ ವಾದಿರಾಜರಿಗೊಲಿದುಆದರದಿ ಅವರಿತ್ತ ಸೇವೆ ಕೈಗೊಂಡುಶೋಭ ಕೃತುನಾಮ ಸಂವತ್ಸರದಿ ಸುಜನರಿಗೆಶೋಭನಂಗಳನಿತ್ತು ನೀದಯದಿ ಪೊರೆವೆ 4ಕಡು ಹರುಷದಿಂದಿತ್ತ ಕಡಲೆ ಹೂರಣ ಸವಿದುದೃಢ ಭಕ್ತರನು ಪೊರೆದೆ ಕಡುಹರುಷದಿಮೃಡನಸಖನಿನ್ನಂಘ್ರಿ ಬಿಡದೆ ಧ್ಯಾನಿಪ ಭಾಗ್ಯತಡೆಯದಲೆ ಪಾಲಿಸೈ ಕಮಲನಾಭ ವಿಠ್ಠಲ 5
--------------
ನಿಡಗುರುಕಿ ಜೀವೂಬಾಯಿ
ಹರಿನೀನೇ ಗತಿಯೆಂದು ನೆರೆನಂಬಿದವರನುಮರೆತಿರುವುದು ನ್ಯಾಯವೆ? ಪಗರುಡಗಮನ ನೀ ಸಿರಿಲೋಲನಾರಿಗೆ |ಅರಸಿ ಎನ್ನನು ಕಾಯ್ವ ದೊರೆಗಳಿನ್ನಾರಯ್ಯ ಅ.ಪಮುಟ್ಟಿ ಪೂಜಿಸಿ ನಿನ್ನ ಇಷ್ಟವ ಬೇಡುವದೃಷ್ಟಿಯೆನ್ನೊಳಗಿದೆಯೆ?ಕಷ್ಟವ ಪಡಲಾರೆ ಸೃಷ್ಟಿಯೊಳಗೆ ಎನ್ನದುಷ್ಟ ಕರ್ಮವ ಬಿಡಿಸಿ ದಿಟ್ಟನೆಂದೆಣಿಸೊ 1ಭುಜಗಶಯನ ನಿನ್ನ ಭಜಕರ ಹೃದಯದಿನಿಜವಾಗಿ ನೀನಿಲ್ಲವೇ?ಅಜನ ಪಿತನೆ ಕೇಳು ತ್ರಿಜಗವೆಲ್ಲವು ನಿನ್ನಸುಜನಪಾಲಕನೆಂದು ಭಜನೆ ಮಾಳ್ಪುದ ಕಂಡು 2ಭಾಗವತರರಸನೆ ಯೋಗಿಗಳೊಡೆಯನೆಬಾಗಿ ಬಿನ್ನಯಿಪೆ ನಿನ್ನಸಾಗರ ಶಯನನೆ ನೀಗಿಸಿ ಶ್ರಮವನುಜಾಗುಮಾಡದೆ ಎನ್ನ ಬೇಗದಿ ಕಾಯಯ್ಯ3ತುಂಟರೈವರ ತುಳಿದು ಕಂಟಕನೊಬ್ಬನ ಕಳೆದು |ಎಂಟು ಮಂದಿಯ ಗರುವವನಳಿದು ||ನಂಟ ನೀ ಬಂದೆನ್ನ ಕಂಟಕವನೆ ಬಿಡಿಸಿ |ಉಂಟಾದ ವೈಕುಂಠ ಬಂಟನೆಂದೆನಿಸೊ 4ಧರಣಿಯೊಳಗೆ ನೀ ಸುಜನರ ಸಲಹುವಬಿರುದು ಪಡೆದವನಲ್ಲವೆ? ||ಸಿರಿರಮಣನೆ ಎನ್ನ ಕರುಣದಿಂದಲಿ ಕಾಯೊ |ಪರಮಪುರುಷಸಿರಿಪುರಂದರವಿಠಲ5
--------------
ಪುರಂದರದಾಸರು