ಒಟ್ಟು 335 ಕಡೆಗಳಲ್ಲಿ , 70 ದಾಸರು , 316 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡಿರೇನೇ ರಂಗನಾ ನಿಮ್ಮ ಮನೆಗಳಲ್ಲಿ ಕಂಡರೆ ಹೇಳಿರಮ್ಮಾ ಒಂದು ಮಾತಿನಲಿ ಬೆಂಡಾದೆನೇ ಅರಸುತ ನಾನಾದಾರಿಗಳಲ್ಲಿ ಪುಂಡರೀಕಾಕ್ಷನು ದೋರನು ಎಲ್ಲಿ ಮಣಿ ಕುಂಡಲ ಮಂಡಿತ ಗಂಡ ಕಪೊಲ ಪ್ರಚಂಡನ ಲೀಲೆ 1 ಒಮ್ಮೆ ಭಾವಿಕ ಗೋವಳರಾ ಆಟ ಪಾಟದಲಿರುವಾ ಒಮ್ಮೇ ಕಾಮುಖ ಗೊಲ್ಲತೇರಾ ಚಿತ್ತಕಾನಂದ ನೀವಾ ಒಮ್ಮೆ ಯಜ್ಞ ಪತ್ನಿಯರಾ ಸವಿಯಾಟ ಕವಲಿವಾ ಅಮ್ಮ ಒಂದೇ ಠಾರ್ವೆನೇ ಹೇಳುವಾ ಅವ ನಿಮ್ಮವನೇ ತಮ್ಮನೇ ಸುಮ್ಮನೇ ತಿರುಗುತ ಘಮ್ಮನೇ ಝುಮ್ಮನೇ ಹೊಳೆವಾ 2 ಪುಲ್ಲ ನಾಭನ ಕಾಣದಿರೇ ಕಣ್ಣು ಕುರುಡವು ನಮ್ಮ ಸೊಲ್ಲ ವಾಲಿಸದಿಹ ಹರಿಯಾ ಕಿವಿಬಧಿರವು ನಮ್ಮ ಅಲ್ಲಿ ಮನುಜ ಮಹಿಪತಿಸುತ ಪ್ರಭು ಪರಬೊಮ್ಮ ನಿಲದಪ್ಪಿ ಕೊಳಲು ಸಂಭ್ರಮಾ ಅವನೆಲ್ಲೆಲ್ಲ ನೋಡಲು ಅಲ್ಲಲ್ಲಿ ನಿಂದಿಹ ಇಲ್ಲದ ಸ್ಥಳವಿಲ್ಲವಮ್ಮಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಂಡೆನೋ ನಿನ್ನ ಚರಣ ಕಮಲವ ಸೊಂಡಿಲಿಂದಿಹ ಗಣಪತಿ ಕೊಡು ವರವ ಪ ಮಣಿ ಕುಂಡಲ ಭೂಷಾ ಉಂಡಲಿಗೆ ಚಕ್ಕುಲಿಯೊಳಗೆ ಸಂತೋಷ ಚಂಡ ಪ್ರಬಲನಲ ಅಖಂಡ ಪ್ರಕಾಶ ಭೂ ಮಂಡಲದೊಳು ನಿನ್ನ ಕೀರ್ತಿ ವಿಶೇಷ 1 ಚಂದನಾಗರು ಧೂಪ ದೀಪಾವಳಿಯಿಂದಾ ನಂದದಿಂದಲಿ ಪೂಜಿಪೆ ಭಕ್ತಯಿಂದ ನಂದಿವಾಹನನಿಗೆ ಮೋಹದ ಕಂದ ಮಂದಮತಿಯ ಬಿಡಿಸೈಯ್ಯ ನೀ ಮುದದಿಂದ 2 ಚಿಕ್ಕ ಮೂಷಿಕವೇರಿ ಗಕ್ಕಾನೆ ಬರುವೆ ಅಕ್ಕರಿಂದಲಿ ಭಕ್ತರೆಲ್ಲಾರ ಪೊರೆವೆ ಮಿಕ್ಕ ಮಾತುಗಳೇನೋ ಪೊಗಳಲೆನ್ನಳವೇ ಇಕ್ಕೇರಿಯೊಳು ಟೆಂಕಸಾಲೆಯೊಳಿರುವೆ 3
--------------
ಕವಿ ಪರಮದೇವದಾಸರು
ಕಥನಾತ್ಮಕ ಹಾಡುಗಳು ನೋಡಬನ್ನಿರಿ ಕಾರ್ಪರೇಶನ ಪಾಡಿರೈ ಸರ್ವೇಶನಾ ರೂಢಿಯೊಳು ಶೇಷಾದ್ರಿನಿಲಯನ ಕೂಡಿಕೊಂಡಿಲ್ಲಿರುವನ ಪ ಚಿಪ್ಪಗಿರಿ ದಾಸಾರ್ಯರೀತರು ಪಿಪ್ಪಲವ ಕಂಡಾಗಲೇ ಕಾರ್ಪರಾರಣ್ಯೆಂಬ ಪದದಿ ಸಂಕ್ಷಿಪ್ತ ಮಹಿಮೆಯ ಪೇಳ್ದರು 1 ಅಪರದಿಗ್ಭಾಗದಲಿ ನೋಡಲು ಸಪತ ಋಷಿಗಳ ಸ್ಥಾನವು ತ್ರಿಪಥಗಾಮಿನಿ ವ್ಯಕ್ತಳಾದಳು ತಪಕೆ ವಿಶ್ವಾಮಿತ್ರರ 2 ಯತ್ರಶ್ವೇತ ಶೃಂಗ ಕೃಷ್ಣಾಚೋತ್ತರ ವಾಹಿನಿಯೊಳು ತತ್ತದಾನ ಸ್ನಾನ ಕಾಸಿಗೆ ಉತ್ತಮವು ಫಲವೀಯಲು 3 ಚಾರುಕೃಷ್ಣಾತೀರವಿದರೊಳು ಕಾರ್ಪರಾಖ್ಯ ಮುನೀಂದ್ರನಾ ಘೋರತಪ ಕೊಲಿದರಳೆ ಮರದಾಗಾರನೆನಿಸಿದ ಧೀರನ 4 ನೀರಜಾಸನ ಮುಖ್ಯ ಸುರ ಪರಿಹಾರ ಸೇವಿತ ಚರಣನ ಸೇರಿದವರಘ ದೂರ ಮಾಡುವ ಘೋರನರಹರಿ ರೂಪನ 5 ಇಂತು ಅಶ್ವತ್ಥಾಂತರದಿ ಸಿರಿಕಾಂತನರಿಯನೆ ವಿಪ್ರರೊಳ್ ಶಾಂತ ನಾರಪ್ಪಯ್ಯನೆಂಬ ಮಹಾಂತರಿಲ್ಲಿರುತಿಪ್ಪರು 6 ದೊಡ್ಡವರ ಗುರುತರಿಯದಿವರನು ದಡ್ಡರೆನ್ನುತ ಭ್ರಾತ್ರರು ದೊಡ್ಡ ಕೃಷ್ಣಾನದಿಯೊಳಿವರನು ಕಟ್ಟಿ ಹಾಕಲು ಕೋಪದಿ 7 ಕಡಲಶಯನನ ಕರುಣದಿಂದಲಿ ದಡಕೆ ಸೇರಿದನಂತರ ದೃಢ ವಿರಾಗದಿ ವೆಂಕಟಾದ್ರಿಗೆ ನಡೆದರಾಗಲೆ ಹರುಷದಿ 8 ಶುಭ ಪಂಕಜ ಷಟ್ವದಾಯಿತ ಚಿತ್ತರು ಕೃಷ್ಣನಿರುತಿಹ ಬೆಟ್ಟದಡಿಯನು ಮುಟ್ಟಿಮಲಗಲು ಸ್ವಪ್ನದಿ9 ಇಲ್ಲಿ ದರ್ಶನವಿಲ್ಲ ನೀವಿರುವಲ್ಲಿ ಪುಣ್ಯಸ್ಥಾನವು ಪೋಗಿರೋ ಭೂಸುರ 10 ಧೇನು ರೂಪದಿ ಬರುವೆ ಕಾರ್ಪರ ಕಾನನದ ಅಶ್ವತ್ಥದಿ ಕಾಣುವುದು ಕ್ಷೀರಾಭಿಷೇಚನ ಧ್ಯಾನಿಸೆನ್ನನು ದ್ವಿಜವರ 11 ಇಂತುಸ್ವಪ್ನದಿ ಸೂಚಿಸಿದ ವೃತ್ತಾಂತವನು ಸಂಚಿಂತಿಸಿ ಕಂತು ಜನಕನ ಇಚ್ಛೆಯಿಂದಲೆ ಸಂತಸದಿ ಗಿರಿಗೊಂದಿಸಿ 12 ಮುಂದೆ ನಡೆದರು ಹಿಂದೆ ಗೆಜ್ಜೆಗಳಿಂದ ಬರುತಿಹ ಗೋಗಳ ಗೋವಿಂದನಂಘ್ರಿಯ ಸ್ಮರಿಸುತ 13 ಕುರುಕಿ ಹಳ್ಳಿಯ ಗ್ರಾಮದಿ ತಿರುಮಲೇಶನ ಕಂಡರು 14 ಗುರುತನು ಕಾಣುತ ಬಂದನು ಎನ್ನುತ 15 ಮುನಿವರನು ಸುಖದಿಂದಿರುತಿರೆ ತಿರೆ 16 ಬಂದರಲ್ಲಿಗೆ ತಮ್ಮ ಗ್ರಾಮದ ಬಂಧು ಬಾಲಕರೆಲ್ಲರು ಕಾಯುವದೆನುತಲಿ 17 ಚಾರು ಶಿಲೆಯೊಳಗೊಂದುದಿನ ಅಂಗಾರದಲಿ ಪ್ರಾಣೇಶನ ಪರಿಹಾರನುನಿಮಗೆಂದರು 18 ಪಾದ ನಿಷ್ಠೆಯಿಂದಲಿ ಸೇವಿಸೆ ಸಿದ್ಧಿಗಳಾಗ್ವವು 19 ನಾರಪ್ಪಯ್ಯರೆಂಬ ಮಹಾತ್ಮರು ಹರಿ ಸಂತತ 20 ಧರಣಿಯನು ಸಂಚರಿಸುತ ಚೆನ್ನೂರ ಗ್ರಾಮದಿ 21 ತೋರಿತಂದಿನ ರಾತ್ರಿಯೋಳ್ ಮಹಿಮೆಯಾ 22 ಭೂಪನ ಸ್ಪಪ್ನದಿ ತರುವನು ತೋರಿಸಿ 23 ಕಟ್ಟಿಸೆಲೊ ಭೂಪತಿಯೆ ಮಂದಿರ ಕೃಷ್ಣವೇಣಿಯ ಗರ್ಭದಿ ಶ್ರೇಷ್ಠನೆನ್ನಯ ಕರುಣದಿ 24 ಸುಪ್ರಭಾತದಲೆದ್ದು ನೃಪತಿಯು ಸ್ವಪ್ನಸೂಚಿತ ಸ್ಥಾನವ ಕ್ಷಿಪ್ರ ನೋಡುವೆನೆನುತ ಸೈನ್ಯದಿ ಕಾರ್ಪರಕೆ ಬಂದಿಳಿದನು25 ಆನೆಗಳು ಕಟ್ಟಿರುವ ಶಿಲೆಗಳು ಕಾಣಿಸುವ ವೀಗಾದರು ನನಸೇವಿಸಿದನು 26 ಮಂದಿರವಮೇಲ್ ನಿರ್ಮಿಸಿ ಇಂದಿರೇಶನ ಪದಕೆ ಭೂಸಂಬಂಧ ವೃತ್ತಿಯನೊಪ್ಪಿಸಿ27 ಹಿಂದೆ ನೋಡಲು ಚಂದ್ರಶೇಖರ ನಂದಿಪತಿ ಮಂದಿರಗಳು ವಂದೇ ವತ್ಸರದೊಳಗೆ ಶಿಲ್ಪಿಗಳಿಂದ ಕಟ್ಟಿದ ಶಿಲೆಗಳು 28 ವೃಷ್ಟಿಯ ಮಹಿಮೆಯ ಕಾಮಿತಾರ್ಥವನೀವುದು 29 ಮಾಸ ದೊ ಶರಧಿ ಸೇರುವ ಸಮಯದಿ 30 ಷೋಡಶ ಕರಗಳಿಂ ಹೊರಟನು ವೃಕ್ಷದಿ31 ತೀರ್ಥ ಸ್ನಾನದ ನರಹರಿ ದರ್ಶನ 32 ದಕ್ಷಿಣಾಯನ ಪರ್ವದಲಿ ಈ ವೃಕ್ಷದೆಡೆಯಲಿ ಸ್ನಾನವು ಮೋಕ್ಷ ಮಾರ್ಗಕೆ ಸಾಧನವು ಪ್ರದಕ್ಷಿಣಾದಿಕಮೆಲ್ಲವು33 ಮಂದಿರವ ಕಾಣುತಲೆ ಶ್ರೀಗೋವಿಂದ ಗೋವಿಂದೆನುತಲಿ ಬಂಧು ವರ್ಗ ಸಮೇತ ಭಕುತರ ವೃಂದ ಬರುವದು ನೋಡಿರೈ34 ಪಾಲಿನಭಿಷೇಕದಿ ಅರ್ಚನ ಪಾಲಕಿಯ ಸೇವಾವಧಿ ವಾಲಗವ ಕೈಕೊಳುತ ಭಕುತರ ಪಾಲಿಸುವ ನರಸಿಂಹನ 35 ವಾರವಾರಕೆ ಭಕ್ತಜನ ಪರಿವಾರ ಸೇವೆಯಕೊಳ್ಳುತ ಘೋರತರ ಸಂಸಾರ ಭಯಪರಿಹಾರ ಮಾಡುವ ದೇವನ 36 ತಪ್ಪದಲೆ ಪ್ರತಿವರ್ಷ ದ್ವಿಜ ಸಂತರ್ಪಣಾದಿಗಳಿಂದಲಿ ಕೊಪ್ಪರದಿ ನವರಾತ್ರ ಮೊದಲಾದುತ್ಸವಾದಿಗಳಾಗ್ವವು 37 ಹಿಂದೆ ಚಾತುರ್ಮಾಸ್ಯ ಕಾಲವು ಬಂದಿರಲು ವಿಭುದೇಂದ್ರರು ಬಂದರಿಲ್ಲಿಗೆ ಶಿಷ್ಯರಾದ ಯತೀಂದ್ರ ನಾರಾಯಣಾರ್ಯರು38 ಆ ಸಮಯದಿ ರಘುನಾಥ ತೀರ್ಥ ಯತೀಶರಿಲ್ಲಿಗೆ ಬಂದರು ತೋಷದಲಿ ವಿಭುದೇಂದ್ರ ತೀರ್ಥಮುನೀಶರವರಿಗೆ ಪೇಳ್ದರು39 ವೃಕ್ಷದಲಿ ಸನಿÀ್ನಹಿತ ನರಹರಿಯಕ್ಷನೆದುರಿಗೆ ನಮ್ಮಯ ಶಿಷ್ಯರೋದುವ ಗ್ರಂಥದರ್ಥ ಪರೀಕ್ಷೆ ಮಾಡಿರಿ ಎಂದರು40 ಮೌನಿರಘುನಾಥಖ್ಯರವರನು ಏನು ಓದುತಿರೆನ್ನಲು ಆನುಪೂರ್ವಿ ಸುಧಾಖ್ಯ ಗ್ರಂಥಾರ್ಥಾನುವಾದವ ಮಾಡಲು41 ಮೇದಿನಿಯಲಿ ವಾದಿಜಯ ಸಂಪಾದಿಸಿರಿ ನೀವೆಂದರೂ ಸಾದರದಿ ನಿಮಗೆಲ್ಲ ಜನ ಶ್ರೀಪಾದರಾಜರು ಎನ್ನಲಿ42 ಸೇವೆಯ ಮಾಡಲು ಒಂದು ವತ್ಸರದೊಳಗೆ ಸತ್ಯಾನಂದ ಯತಿಗಳ ಜನನವು43 ಸತ್ಯಧರ್ಮರು ಬಂದರೀ ಸುಕ್ಷೇತ್ರದರ್ಶನ ಮಾಡಲು ಮುತ್ತಿನ್ಹಾರವ ಪದಕ ಸಹಿತಾಗಿತ್ತರೀ ನರಸಿಂಹಗೆ 44 ಇದ್ದರಿಲ್ಲಿ ಜ್ಞಾನವೃದ್ಧ ಜನಾರ್ದನಾಭಿದ ಒಡೆಯರು ಶುದ್ಧ ಮನದಲಿ ನರಹರಿಯ ಪದಪದ್ಮ ಸೇವೆಯ ಮಾಡುತ45 ಬಿಡದೆ ತಪವಾಚರಿಸಿ ಕಾರ್ಪರದೊಡೆಯನನುಪಮ ಕರುಣವ ನಿತ್ಯದಲಿ ಪರಿಶುದ್ಧ ಮಧುಕರ ವೃತ್ತಿಯಿಂ ತಂದನ್ನವ ಎತ್ತಿ ವೃಕ್ಷಕೆ ಕಟ್ಟುವರು ಇದು ಬುತ್ತಿ ನಾಳೆಗೆ ಎನ್ನುತ47 ಪನ್ನಗಾರಿ ಧ್ವಜನಿಗರ್ಪಿಸಿ ಉಣ್ಣುತಿಹರಾನಂದದಿ48 ಮಂದಮತಿ ಭೂದೇವನೊಬ್ಬನು ನಿಂದೆ ಮಾಡಿದನಿವರನು ತಂದು ಕಟ್ಟಿದ ಅನ್ನ ತಂಗಳೆಂದು ತಿಳಿಯದೆ ಉಂಬರು 49 ನಿಂದೆ ಮಾಡಿದ ವಿಪ್ರನನು ಕರೆಸೆಂದರರ್ಚನ ಸಮಯದಿ ತಂದು ವೃಕ್ಷದಿ ಕಟ್ಟಿದನ್ನವ ತಂದು ಕೆಳಗಿಡಿರೆಂದರು 50 ಪೋಗಲು ವಿಪ್ರನು ಕೆಳಗಿಂತೆಂದರು
--------------
ಕಾರ್ಪರ ನರಹರಿದಾಸರು
ಕಂದನೆಂದೆನಿಸಿದ ಕೌಸಲ್ಯದೇವಿಗೆ ರಾಮ ಎನಬಾರದೆ ಇಂದಿರಾಪತಿ ರಾಮಚಂದ್ರಗೆ ಶ್ರೀರಘುರಾಮ ಎನಬಾರದೆ 1 ಶಿಶುವಾಗಿ ಅವತಾರ ಮಾಡಿದ ದಶರಥನಲಿ ರಾಮ ಎನಬಾರದೆ ಋಷಿಯಜ್ಞ ಸಲಹಿ ರಕ್ಕಸರನೆ ಕೊಂದ ಶ್ರೀರಾಮ ಎನಬಾರದೆ 2 ಸಾತ್ವಿಕ ದೈವವೆ ತಾಟಕಾಂತಕ ಶ್ರೀರಾಮ ಎನಬಾರದೆ 3 ಪಾದನಖವು ಸೋಕಿ ಪಾದನಾಶನವಾಗೆ ರಾಮ ಎನಬಾರದೆ ಶ್ರೀಪತಿ ಕರುಣದಿ ಶಿಲೆಯು ಸ್ತ್ರೀಯಾಗಲು ರಾಮ ಎನಬಾರದೆ 4 ಸಕಲ ಸದ್ಗುಣ ಪೋಗಿ ಮಿಥಿಲಾ ಪಟ್ಟಣದಿ ರಾಮ ಎನಬಾರದೆ ತ್ರಿಪುರ ಸಂಹಾರ ತ್ರಿನೇತ್ರನ ಧನುವೆತ್ತಿ ರಾಮ ಎನಬಾರದೆ 5 ಚೆಲ್ವೆ ಜಾನಕಿ ಮಲ್ಲಿಗೆಯ ವನಮಾಲೆಯು ರಾಮ ಎನಬಾರದೆ ವಲ್ಲಭಗ್ಹಾಕಲು ಫುಲ್ಲಲೋಚನೆ ಸೀತಾರಾಮ ಎನಬಾರದೆ 6 ಮಂಗಳ ಮಹಿಮೆ ಸೀತಾಂಗನೆ ಕೊರಳಿಗೆ ರಾಮ ಎನಬಾರದೆ ಮಾಂಗಲ್ಯ ಬಂಧನ ಮಾಡಿದ ಮಹಾತ್ಮನು ರಾಮ ಎನಬಾರದೆ 7 ಜಗದೇಕ ಸುಂದರಿ ಜಾನಕಿಯನೆ ಗೆದ್ದ ರಾಮ ಎನಬಾರದೆ ಜಗದೀಶ ಜನಕಗೆ ಜಾಮಾತನೆನಿಸಿದೆ ರಾಮ ಎನಬಾರದೆ 8 ಮುದ್ದು ಜಾನಕಿ ಕೂಡಿ ಅಯೋಧ್ಯಕೆ ಬರುತಿರೆ ರಾಮ ಎನಬಾರದೆ ಮಧ್ಯ ಮಾರ್ಗದಿ ಬಂದಿದ್ದನು ಭಾರ್ಗವ ರಾಮ ಎನಬಾರದೆ 9 ತನ್ನ ತಾನೇ ಗೆದ್ದು ಧನ್ಯನೆಂದೆನಿಸಿದಿ ರಾಮ ಎನಬಾರದೆ ಬ್ರಹ್ಮ ಶಂಕರರಿಂದಿನ್ನು ಉತ್ತಮನಾದ ರಾಮ ಎನಬಾರದೆ 10 ಪಟ್ಟಗಟ್ಟಲು ಪರಮೋತ್ಸವ ಕಾಲಕ್ಕೆ ರಾಮ ಎನಬಾರದೆ ದುಷ್ಟ ಕೈಕೆಯ ನಿಷ್ಠೂರ್ವೊಚನವ ಕೇಳಿದ ರಾಮ ಎನಬಾರದೆ 11 ಆ ಲಕ್ಷುಮಿಯ ಮಾತಲಕ್ಷ್ಯವ ಮಾಡದೆ ರಾಮ ಎನಬಾರದೆ ಲಕ್ಷ್ಮಣ ಲಕ್ಷ್ಮಿ ಕೂಡ್ವನವಾಸ ತಿರುಗಿದ ರಾಮ ಎನಬಾರದೆ 12 ಸತಿ ಆದೇನೆಂದಸುರೆಯ ರಾಮ ಎನಬಾರದೆ ನಾಶÀರಹಿತ ಕಿವಿ ನಾಸಿಕನಳಿಸಿದ ಶ್ರೀ ರಾಮ ಎನಬಾರದೆ 13 ದಂಡಕಾರಣ್ಯದಿ ಕಂಡು ಮಾರೀಚನ್ನ ರಾಮ ಎನಬಾರದೆ ಹಿಂದ್ಹೋಗೆ ರಾಘವ ಬಂದ ರಾವಣನಲ್ಲೆ ರಾಮ ಎನಬಾರದೆ 14 ಘಾತಕ ರಾವಣ ಜಗನ್ಮಾತೆನೊಯ್ಯಲು ರಾಮ ಎನಬಾರದೆ ಸೋತು ಜಟಾಯು ಯುದ್ಧವ ಮಾಡಿ ತಾ ಬೀಳಲು ರಾಮ ಎನಬಾರದೆ 15 ಒಲಿದು ಸುಗ್ರೀವಗೆ ವಾಲಿ ವಧೆಯ ಮಾಡಿ ರಾಮ ಎನಬಾರದೆ ವಾನರಗಳ ಕೂಡಿ ವಾರಿಧಿಕಟ್ಟಿದ ಶ್ರೀರಾಮ ಎನಬಾರದೆ16 ಲೋಕ ಮಾತೆಯ ಲಂಕಾನಾಥ ತಾ ಒಯ್ದಾಗ ರಾಮ ಎನಬಾರದೆ ಸೀತಾಕೃತಿಯನಿಟ್ಟಶೋಕ ವನದೊಳು ರಾಮ ಎನಬಾರದೆ 17 ಮಂಡೋದರಿಯ ಗಂಡನ್ನ ದಶಶಿರಗಳ ರಾಮ ಎನಬಾರದೆ ಚೆಂಡನಾಡಿದ ಕೋದಂಡ ಪಾಣಿಯ ಶ್ರೀರಾಮ ಎನಬಾರದೆ 18 ಪ್ರೀತಿಂದ್ವಿಭೀಷಣಗೆ ಪಟ್ಟವಗಟ್ಟಿ ರಾಮ ಎನಬಾರದೆ ಸಿಂಧು ದಾಟಿದ ರಾಮ ಎನಬಾರದೆ 19 ಆದಿ ಲಕ್ಷುಮಿ ಕೂಡಿ ಹೋದನಯೋಧ್ಯಕೆ ರಾಮ ಎನಬಾರದೆ ಶ್ರೀದೇವಿ ಸಹಿತ ಪಟ್ಟಣ ಹೊಕ್ಕ ಪಟ್ಟಾಭಿರಾಮ ಎನಬಾರದೆ20 ಭರತ ಸುಮಿತ್ರ ಕೌಸಲ್ಯಗೆ ಸುಖವಿಟ್ಟ ರಾಮ ಎನಬಾರದೆ ಮುಕ್ತಿದಾಯಕ ಮುಂದೆ ಬಿಡದೆ ಕಾಪಾಡುವ ರಾಮ ಎನಬಾರದೆ21 ಪತ್ನಿ ವಾರ್ತೆಯ ತಂದ ಪವನಸುತಗೆ ಒಲಿದ ರಾಮ ಎನಬಾರದೆ ಸತ್ಯ ಲೋಕದ ಆಧಿಪತ್ಯವ ಕೊಟ್ಟ ಶ್ರೀ ರಾಮ ಎನಬಾರದೆ22 ರಾಮ ರಾಮನು ಎಂದು ಕÀರೆಯೆ ಭಕ್ತಿಯ ನೋಡಿ ರಾಮ ಎನಬಾರದೆ ಪ್ರೇಮದಿ ತನ್ನ ನಿಜಧಾಮವ ಕೊಡುವೋನು ರಾಮ ಎನಬಾರದೆ 23 ಅರಸಾಗಯೋಧ್ಯವನಾಳಿ ಯದುಕುಲದಲಿ ರಾಮ ಎನಬಾರದೆ ಹರುಷದಿ ಭೀಮೇಶ ಕೃಷ್ಣನಾಗ್ಯುದಿಸಿದ ರಾಮ ಎನಬಾರದೆ 24
--------------
ಹರಪನಹಳ್ಳಿಭೀಮವ್ವ
ಕರಿ ಕಮಲೇಶ ಪ ಗರುಡಾರೂಢನು ಗಜವರದ ವೈಕುಂಠ ಕೊಡುವ ಪಾಲಿಸಿ ಪಾಂಡವರ ಮನೆ ಭಂಟ1 ಪಕ್ಷಿವಾಹನ ರಾಕ್ಷಸಾರಿ ರಾವಣನ ಶಿಕ್ಷಿಸಿ ವಿಭೀಷಣನ ರಕ್ಷಿಸಿದ ರಾಮ 2 ವಿನತೆಸುತನ ಏರಿ ಘನತರುತ್ಸವದಿ ಸವರಿದಿ ಸುರವಂದ್ಯ ಸುಜನಕ್ಕಾನಂದ 3 ಹಕ್ಕಿಯ ಪಕ್ಕದಲ್ಲ್ಯರ್ಕಕೋಟಿತೇಜ ಜಾ- ನಕ್ಕಿ ಸಹಿತಯೋಧ್ಯನಾಳುವ ರಾಮ 4 ನಗಧರ ಖಗನ್ಹೆಗಲೇರಿ ಉಲ್ಲಾಸ ನಗುವ ಭೀಮೇಶ ಕೃಷ್ಣÀ ಬರುವ ಜಗದೀಶ5
--------------
ಹರಪನಹಳ್ಳಿಭೀಮವ್ವ
ಕರುಣಿಸಬಾರದೇನು ಶರಣೆಂಬೆ ನಾನು ಕರುಣಿಸ ಬಾರದೆ ಮೊರೆಯ ಹೊಕ್ಕವನ ಶರಣಾಗತ ಪಂಜರನೆಂಬೊ ಬಿರುದಿರೆ ಪ ಸ್ತಂಭದಿ ನೀ ಬಂದು ದೈತ್ಯನ ಬೇಗ ಶೀಳಿಕೋಪದಿಂದ ಇರಲು ಆಗ ಬ್ರಹ್ಮೇಂದ್ರ ರುದ್ರ ವೃಂದ ಬೆದರಿ ಪೋಗೆ ಪ್ರಹ್ಲಾದನಾಗ ಇಂದಿರಾವರ ಗೋವಿಂದ ಕೃಪೆಯ ಮಾಡೆಂದು ಸ್ತುತಿಸೆ ಆನಂದದಿ ಕಾಯ್ದತಿ ಸುಂದರಮೂರ್ತಿ ಮುಕುಂದ ಧರಣಿಧರ ಸಿಂಧುಶಯನ ಅರವಿಂದನಯನ ಹರಿ 1 ದಶರಥ ಸುತನೆನಸಿ ಮುನಿಯಧ್ವರ ಕುಶಲದಿನ್ನುದ್ಧರಿಸಿ ಪಶುಪತಿ ಧನು ಭಂಜಿಸಿ ಸೀತೆಯ ಕೋರಿ ದಶರಥನಾಜ್ಞೆ ವಹಿಸಿ ಕಾನನದಿ ಚರಿಸಿ ಕುಶನಿಧಿಯನು ಬಂಧಿಸಿ ರಾವಣನ ದಶ ಶಿರಗಳ ಭರದಿಂದಲಿ ಖಂಡಿಸಿ ಅವನನುಜಗ ನಿಶದೊಳ್ ಶಿರಿಲಾಲಿಸಿ ಪೊರೆದ ಶ್ರೀಶಶಿಧರನÀು ಹರಿ 2 ನಕ್ರ ಭಂಗಬಡಿಸೆ ಗಜಗಳರಸ ರಂಗ ಮುರಾರಿ ದೇವೋತ್ತುಂಗ ಶ್ರೀ ಶ್ಯಾಮಲಾಂಗ ಭಕ್ತಾಭಿಮಾನಿ ಮಂಗಳಾರಸತ್ಸಂಗ ಜಗದಂತರಂಗ ವಿಹಂಗ ಸಿರಿ ನರಸಿಂಹ ಬಂದು ಶಾಪಂಗಳ ತರಿದೆ ಭುಜಂಗತಲ್ಪ ಕಾನಂಗಪಿತ 'ಹೆನ್ನೆರಂಗ' ಶರಣು ರಣರಂಗ ಭೀಮ ಹರಿ 3
--------------
ಹೆನ್ನೆರಂಗದಾಸರು
ಕರುಣಿಸುವ ಹರಿ ನಿರಂತರವು ಮನವೆ ಪಾದ ಸ್ಮರಣಿಯನು ನೆರೆನಂಬು ಪ ಕಂದ ಪ್ರಹ್ಲಾದನ ತಂದೆ ಭಾಧಿಸಲು ಗೋ ವಿಂದ ಘನ ಸ್ತಂಭದೊಳ್ ಬಂದು ತಾಮುದದಿ ಮಂದ ದನುಜನ ಬಿಡದೆ ಕೊಂದ ಶ್ರೀವರ ಮುಚು ಕುಂದ ವರದ ಯೆಂದು ನೀ ಭಜಿಸು 1 ಛಲದಿಂದ ಮಲತಾಯಿ ಸಲೆ ಧ್ರುವನ ಕಾನನಕೆ ಕಳುಹಲಾಕ್ಷಣವೆ ಶ್ರೀ ನಳಿನನಾಭ ಒಲಿದು ಪೊರಿದನು ಮಹಾಒಳಿತೆಂದು ಅವಗೆ ನಿಶ್ಚಲ ಪದವಿಯನು ಇತ್ತ ಜಲನಿಧಿಶಯನ 2 ಅರಸು ಮುನಿಶಾಪದಲಿ ಕರಿಯಾಗಿ ಜನಿಸಿ ಮ- ಕರ ಬಾಧೆಗೆ ಶಿಲ್ಕಿ ಮೊರೆಯನಿಡಲು ತ್ವರದಿ ಪೊರದಂಥ ಹೆನ್ನೆಪುರ ಲಕ್ಷ್ಮೀನರಶಿಂಹ ಸಿರಿ ಕೃಷ್ಣಾ 3
--------------
ಹೆನ್ನೆರಂಗದಾಸರು
ಕಲಿರಾಯ ಬಂದಿಹ ಕಲಿಯುಗದೊಳಗೆ ಬಲಿ ತೋರುವೆನೆನುತಲಿ ಪ ಯುಗತ್ರಯದಿ ಬಗೆ ಬಗೆ ಕಷ್ಯವ ಪಡುತಾ ಕೋ ಡಗನಂದದಿ ತನ್ಹ್ನಾಗೆಗಳಾ ಜೈಸದೆ ಅಡವಿಯೊಳಿರುತಾ ಯುಗ ನಾಲ್ಕವು ಬರಲು ಜಿಗಿಯುತ ಪಲ್ಗಳ ತೆಗೆಯುತ ತನ್ನಯ ಅಗಣಿತ ಮಹಿಮೆಯ ತೋರುವೆನೆನುತಲಿ 1 ಸತ್ಯ ಸೇರಿತು ಸತ್ಯಲೋಕವನು ನಿತ್ಯಕರ್ಮವು ತಾ ಹತ್ತಿತು ಸೂರ್ಯನ ವರ ರಥವನ್ನು ದೈತ್ಯನಾರ್ಭಟಕೆ ಶಾಸ್ತ್ರ ಹಾರಿ ಅಂತರದಲಿ ನೀಂತಿತು ಉತ್ತವು ಕ್ಷಾರಾಣವೃತಪ್ಪಾಯಿತು (?) 2 ಸ್ನಾನವು ಮನಿಯಲಿ ಅಡಗೀತು ಮೌನ ಜಪ ತಪಗಳು ಹಾನಿಯಾದವು ಕಾನನದೋಳು ನಿಂತು ಅನುಮಾನವು ಹೆಚ್ಚಿತು ದೀನನಾಥಮ್ಮಾ ಹನುಮೇಶವಿಠಲನ 3
--------------
ಹನುಮೇಶವಿಠಲ
ಕಾಯೊ ಕಾಯೊ ಜಿತಕಾಯ ಗುರು ಬಾದ ರಾಯಣ ತತ್ವಜ್ಞರಾಯ ಪ ನಾ ಯಾರಿಗೆ ಬಿನ್ನೈಪೆ | ಹೇಯಸಂಸಾರದ ಎರಡೊಂದು ಮಠದಲಿ ಧರಿಸಿ ತೂರ್ಯಾಶ್ರಮ ಸಿರಿಯರಸನ ದಿವ್ಯ ಮೂರ್ತಿಗಳ ಕರದಿಂದ ಪೂಜಿಸಿ | ಮರುತ ದೇವನ ಮತ ಪರಮಾನಂದವೆಂದು ಧರೆಗೆ ಬೀರಿದ ಕರುಣಿ 1 ಜ್ಷಾನಿಗಳರಹುವ | ವಾಣಿಯಿಂದಲಿ ದೇ ಮೌನಿವರಿಯ ಎನ್ನ | ಹೀನಪಾತಕವೆಂಬ ಕಾನನ ದಹಿಸೆಂದು | ಸಾನುರಾಗದಿ ನೋಡಿ 2 ಭೂಸುರ ಪರಿಪಾಲ | ಶ್ರೀ ಶಾಮಸುಂದರನ ಲೇಸಾಗಿ ಒಲಿಸುತಲಿ ಕಿಟಜದಲಿ ಭಾಸುರ ಘನವೇಣಿ | ಭೇಶಪುರದಿ ನೆಲಸಿ ದಾಸರ ಮನದಭಿಲಾಷೆ ನೀಡುವ ದಾನಿ 3
--------------
ಶಾಮಸುಂದರ ವಿಠಲ
ಕಾಲ ಬಂತು ಪ್ರಜೆಗೆ ಎಷ್ಟು ಪೇಳ್ವರೇನು ಕೆಲಸ ದಿಟ್ಟ ಅರಿಗಳನು ಕುಟ್ಟಿ ತೆಗೆಯದಿದ್ದಮೇಲೆ ಪ ದಂಡು ಬಂತು ಎಂದು ಜನರು ಗಂಡು ಹೆಣ್ಣು ಮಕ್ಕಳೆಲ್ಲ ಕಂದುಗಳನು ಕಟ್ಟಿ ಗೋವಿನ ಹಿಂಡ ನೆಲ್ಲ ದಾರಿಗೊಳಿಸಿ ಕಂಡ ಕಡೆಗೆ ಹೋಗಿ ಸೇರಿಕೊಂಡುಯಿರಲು ಸೋವಿನಿಂದ ದಂಡಿನವರು ದಾರಿಗಟ್ಟಿಕೊಂಡು ಸುಲಿದು ಕಡಿದ ಮೇಲೆ 1 ಅಲ್ಲಿ ಬಂತು ಇಲ್ಲಿ ಬಂತು ಎಂದು ಬೆದರಿಕೊಂಡು ಕುಣಿಗಳಲ್ಲಿ ಭತ್ತಭಾಂಡವಿಕ್ಕಿ ನಿಲ್ಲದೆಲ್ಲ ಊರಬಿಟ್ಟು ಕಲ್ಲು ಮುಳ್ಳು ಗುಡ್ಡಕಾನಿನಲ್ಲಿ ಸೇರಿಕೊಂಡು ಬಚ್ಚಿಯಿಟ್ಟ ವಸ್ತು ವಡವೆ ಅಲ್ಲಿ ನಷ್ಟವಾದ ಮೇಲೆ 2 ಮತ್ತೆ ಕುದುರೆಯಿಲ್ಲ ಮಂದಿಹೊತ್ತು ಪ್ರಜೆಗಳನ್ನು ಮಾರ್ಗ ದೊತ್ತಿನಲ್ಲಿ ತರುಬಿ ನಿಂದು ಕತ್ತಿಯನ್ನು ಕಿತ್ತು ಗೋಣ ಬರಿಸಿ ಯಾವತ್ತು ವಡವೆ ವಸ್ತುಗಳನು ಮತ್ತು ಮತ್ತು ಸುಲಿದಮೇಲೆ 3 ಮುಟ್ಟು ಪಟ್ಲೆ ಸಹಿತವರಡಿಯೆತ್ತ ಕೊಟ್ಟು ಬೀಳ ಭೂಮಿ ನಷ್ಟ ತೆತ್ತು ಹಳೆಯ ಅರಿವೆ ಬಟ್ಟೆಗಟ್ಟಿ ಬೀದಿ ಬದಿಗೆ ಹಿಂಡು ಗುರಿಯ ಕೆಟ್ಟ ಗೌಡಿ ದ್ವಿಗುಣಿಸಂಕ ತೆತ್ತು ಕೊಟ್ಟು ಪ್ರಜೆಗೆ ಘಟ್ಟ ಬೆಟ್ಟ ವಾಸ ವಾದಮೇಲೆ 4 ಇಕ್ಕಿ ಕದವ ರಾಜ್ಯವನ್ನು ಹೊಕ್ಕು ಅರಿಗಳೆಲ್ಲ ಸುಲಿದು ಸೊಕ್ಕಿನಿಂದ ಪಾಳ್ಯವನ್ನು ಹೊಕ್ಕರಯ್ಯ ನಮ್ಮ ಕಡೆಗೆ ದಿಕ್ಕಕಾಣೆ ಪ್ರಜೆಗಳನ್ನು ರಕ್ಷಿಸುವರು ಬೇರೆಉಂಟು ನಂಬಿ ಜನರು 5
--------------
ಕವಿ ಪರಮದೇವದಾಸರು
ಕೃಷ್ಣದ್ವೈಪಾಯನ ಗುರುರಾಜರ ಚರಣ ಕಮಲಕಾನಮಿಪೆ ಶಿರಬಾಗಿ ಬಿನ್ನೈಪೆ ಪ ವೇದವ್ಯಾಸರ ಕರಕಮಲಜರೆನಿಸಿ ವೇದೇಶರ ಮುಖದಿ ವೇದಾಂತ ಸುಶಾಸ್ತ್ರ ಜ್ಞಾನವ ಘಳಿಸಿ ಮೇದಿನಿಯೊಳು ಚರಿಸಿ ಮೇದಿನಿ ಸುರರಿಗೆ ಮೋದವ ಗರೆದ 1 ಧರಿಜಾರಮಣನ ಪದಪೂಜಿಸಿದಂಥ ಶ್ರೀ ವ್ಯಾಸರ ಮಂತ್ರ ಧರಿಯೊಳು ಜಪಿಸಿದರಿವರೆ ಮಹಾಂತರೆನಿಸಿದರತಿ ಶಾಂತ ವರುಣಿಸಲೊಶವೆ ಗುರುವರ ಮಠದಲಿ ಸುರಗಂಗೆಯು ಬಂದಿರುವ ಮಹಿಮೆಯನು 2 ವರ ಭೀಮಾತಟದಿ ವಿರಾಜಿಸುವಂಥ ಕುಸುಮೂರುತಿ ಸಂಸ್ಥ ಶರಣಾಗತ ಜನರಿಗೆ ಸಕಲಾಭೀಷ್ಟ ಗರಿಯುವ ಸುಸಮರ್ಥ ಧರೆಯೊಳು ಮೆರೆಯುವ 'ಶಿರಿ ಕಾರ್ಪರ ನರಹರಿ' ಯ ನೊಲಿ-ಸಿರುವ ಪರಮ ಮಹಾತ್ಮ3
--------------
ಕಾರ್ಪರ ನರಹರಿದಾಸರು
ಕೇಳು ಕಲ್ಮಷಹಾರಿ ಕರುಣಾವಾರುಧಿ ಶೌರಿ ತಾಳು ಕ್ಷಮೆಯ ಕೃಪೆದೋರಿ ಕೇಳು ಸಂಸೃತಿ ದುಃಖ ತಾಳಲಾರೆನು ಮಾತ ನಾಲಿಸು ಮಲ್ಲಕಂಸಾರಿ ಪ. ಮೂರೊಂದು ಎಂಬತ್ತು ಲಕ್ಷ ಯೋನಿಗಳನ್ನು ಸಾರಿ ಕಡೆಗೆ ಮಾನುಷ್ಯವನು ಸೇರಿದೆನಿದಿರಲಿ ಷಡ್ವೈರಿ ಗಣವೆನ್ನ ಗಾರು ಮಾಡುವುದನೇನೆಂಬೆ 1 ದೂರಾಪುರದ ಕಾಮ ವಾರುಧಿವಳಗೀಸ ಲಾರದೆ ಬಾಯಬಿಟ್ಟೊರವೆ ಕ್ಷೀರಾಬ್ಧಿಶಯನ ಥಟ್ಟನೆ ಬಂದು ಸಲಹೊ ಮು- ರಾರಿ ನೀನ್ಯಾಕೆನ್ನ ಮರೆವೆ 2 ಬುದ್ಧಿ ಬರುವ ಮೊದಲಿದ್ದ ಪರಿಯು ಮಣ್ಣ ಮುದ್ದೆಯಂತಾಯ್ತನಂತರದಿ ಹದ್ದಿನಂದದಿ ಹಂಗಿನನ್ನವ ಕಾಯುತ್ತ ಇದ್ದೆನು ಪರರ ಮಂದಿರದಿ 3 ಮಧ್ಯವಯಸ್ಸಿನೊಳ್ ಮದನನ ¨ಲೆಯೊಳು ಬಿದ್ದು ಹೊರಳಿ ಬಹು ಬಳಲಿ ಮಧ್ವವಲ್ಲಭ ನಿನ್ನ ಮರೆತೆನು ಮುಂದಾದ- ರುದ್ಧರಿಸೆನ್ನ ಬೇಗದಲಿ 4 ನೇಮವ್ರತಗಳನೊಂದಾದರು ಮಾಡದೆ ಕಾಮಲಾಲಸನಾದೆ ಬರಿದೆ ವ್ಯಾಮೋಹ ಕಡಲಿಗೆ ಕೊನೆಗಾಣೆ ಕಾರುಣ್ಯ ಧಾಮನ ಬಿಡೆ ನಿನ್ನ ಸ್ಮರಣೆ 5 ಸಾಮಜೋದ್ಧಾರ ಸಕಲಸುರವೈರಿ ನಿ- ರ್ನಾಮವತಾರ ಭೂಧಾರ ನಿತ್ಯ ಸವಿದು ಬಾಳುವ ಮುಖ್ಯ ಕಾಮಿತಾರ್ಥವ ನೀಡು ವರದಾ 6 ಸುರಮುನಿ ಪಿತೃಋಣ ಭರವ ನೀಗುವ ಮೂರು ಕಾಲ ಕಳೆದೆ ವರ ದೇವಾಲಯ ಕೂಪಾ ರಾಮಯಜ್ಞಾದಿ ಸ- ತ್ಕರಗಳ ವಾರ್ತೆಯ ತೊರೆದೆ 7 ಗುರು ಹಿರಿಯರ ಸೇವೆ ಮರೆತು ಮನಸಿನಲ್ಲಿ ಸರಿಯಲ್ಲ ಎನಗೆಂದು ತಿಳಿದೆ ಮರಿಯಾದೆ ಗೆಟ್ಟು ಮಾಯಾತಂತು ಬಂಧದೊ- ಳಿರುವೆ ಈ ಪರಿಯಿನ್ನು ಥರವೆ 8 ಲೋಕನಾಯಕ ನಿನ್ನ ಸ್ಮರಣೆ ಒಂದಿದ್ದರೆ ಸಾಕೆಂಬ ಶ್ರುತಿ ಪುರಾಣಗಳು ವಾಕಾನುವಾಕುಗಳು ಸುರಿದ ಸರ್ವಜ್ಞ ಶ್ರೀಕರ ಪಾದದ ಮತವ 9 ಸ್ವೀಕರಿಸುತ ನಿನ್ನ ಸೇವೆ ಮಾಡಲು ಬ್ಯಾರಿ- ನ್ಯಾಕಿನ್ನು ಡಾಂಭಿಕರ ವ್ಯಾಕುಲವ ಬಿಡಿಸಿ ವೆಂಕಟನಾಥ ಕರುಣಿಸ ಬೇಕು ಶ್ರೀವರ ನಿನ್ನ ಪಥವಾ 10
--------------
ತುಪಾಕಿ ವೆಂಕಟರಮಣಾಚಾರ್ಯ
ಕೊಂಡಜ್ಜಿ ಶ್ರೀ ಜನಾರ್ದನ ಸ್ವಾಮಿ ಸ್ತೋತ್ರ ಎಂಥಾ ಸುಂದರನೊ ಶ್ರೀಕಾಂತನೂ ||ಅ|| ಸಂತರ ಮನೋರಥ ಸಂತತ ಪಾಲಿಸಿಪಂಥಾವ ಗೆಲಿಪ ಮಹಾಂತನೋ - ಶ್ರೀಕಾಂತನೂ ಅ.ಪ. ಮಾನಿನೀಯಳ ಬಿಟ್ಟು | ಮೌನಿಯಂದದಿ ನೀನುಕಾನನವನೆ ಸೇರಿ ನೆಲೆಸೀರ್ಪುದೂ | ಮುನಿಜನ ವಂದ್ಯಾ 1 ತೊಂಡ ಜನರು ನಿನ್ನ | ಬಂಡುಣಿಯಂದದಿಪುಂಡು ಮಾಡುವರೆಂದು ಬಂದೆಯಾ | ಪುಂಡರಿಕಾಕ್ಷಾ 2 ಹಿಂಡು ಭಕ್ತರು ತಮ್ಮ | ದಿಂಡು ಮಂಡಿಪರೆಂದು ಕೊಂಡಜ್ಜಿಯಲಿ ನೆಲಿಸೀದ್ಯಾ | ಪಾಂಡವ ಪ್ರೀಯಾ 3 ವೇಲಾಪುರಿಗೆ ಪೋಗ | ಲೊಲ್ಲೆನೆಂದೆನುತಲಿಇಲ್ಲೇ ನೆಲಸಿ ಪೂಜೆಗೊಂಬುದು ಫಾಲಾಕ್ಷ ಪ್ರಿಯನೇ 4 ಎಲ್ಲಿಪೋದರೂ ಬಿಡ | ಲೊಲ್ಲರೂ ನಿನ್ನ ಜನಸಲ್ಲಿಸೆನ್ನಯ ಮನೋಭೀಷ್ಟವ | ಹೇ ಜನಾರ್ಧನಾ 5 ಆರು ಕಾಯುವರಿಲ್ಲ | ಸಾರಿದೆ ತವ ಚರಣಪೋರನಾಮಯ ಹರಿಸಯ್ಯಾ | ನಾರದ ವಂದ್ಯಾ 6 ಗುರುಗಳಂತರ ಗುರು | ಗೋವಿಂದ ವಿಠಲನೆಪರಿಪರಿ ನಿನ ಕೀರ್ತಿ ನುಡಿಸಯ್ಯಾ | ಸುರವರ ವಂದ್ಯಾ7
--------------
ಗುರುಗೋವಿಂದವಿಠಲರು
ಕೋಲು ಕೋಲೆ ಕೋಲು ಕೋಲನ್ನ ಕೋಲೆ ಮೂಲೆ ಮೂಲೆಯ ಹೊಕ್ಕು ಅಡಗಿರ್ದ ಕೋಲೆ ಪ ಕೆಂಜಿಗ ಉಡನು ಬಂದು ಮುಂಚಿಕವಲ ಕೊಟ್ಟು ಅಂಚೆಡೆಗಳನೆಲ್ಲ ಸುಲಿದರ್ದ ಕೋಲೆ 1 ಆನೆ ಕುದುರೆಯಿಲ್ಲ ಸೇನೆ ಬಹಳವಿಲ್ಲ ಏನೆಂದು ಬೆಸಗೊಂಬರಿಲ್ಲದ ಕೋಲೆ 2 ಮುನಿಯ ಭಾವನದಂಡು ಮನೆ ಮನೆಗಳ ಹೊಕ್ಕು ಧನಕನಕಂಗಳ ಸುಲಿದಿರ್ದ ಕೋಲೆ 3 ಮಕ್ಕಳು ಮರಿಗಳು ವೃದ್ಧ ಜವ್ವನರನ್ನು ದಿಕ್ಕುದಿಕ್ಕಿನ ಕಾನಿಗಟ್ಟಿದ ಕೋಲೆ 4 ಜನರನ್ನು ತರಿದು ಸುಲಿದು ಕರುಗಳ ತರುಗಳ ಹಿಂಡನು ಹೊಡೆದಿರ್ದ ಕೋಲೆ 5 ಕೊಟ್ಟ ಕಣ್ಣಿಯನೆಲ್ಲ ಕಿತ್ತೊಯ್ದು ಸೂಸ್ಯಾನು ಪಟ್ಟೆ ಪೀತಾಂಬರಗಳ ನೊಯ್ದ ಕೋಲೆ 6 ಕಾಣಿ ಜೀವರನೆಲ್ಲ ಹಾಡಿ ಹಿಳಿದು ಹಿಪ್ಪೆಹೀರಿದ ಕೋಲೆ 7 ಇಟ್ಟವಡವೆ ವಸ್ತು ಇಟ್ಟಲ್ಲಿ ಇಲ್ಲದೆ ಕೆಟ್ಟು ಜನರು ಹೊಟ್ಟೆ ಹೊಡಕೊಂಬರು 8 ಉಟ್ಟು ತೊಟ್ಟುದನೆಲ್ಲ ಸುಲಿದುಬೆತ್ತಲೆ ಮಾಡಿ ಬಿಟ್ಟು ಮನೆಗೆ ಬೆಂಕಿ ಕೊಟ್ಹೋದ ಕೊಲೆ 9 ಕೆಲರ ತಲೆಯ ಕುಟ್ಟಿ ಕೆಲರು ಸುಲಿದು ಬಿಟ್ಟು ಕೆಲರಿಗೆ ಮುರುವಾಳ ವಿಕ್ಕಿದ ಕೋಲೆ 10 ಅಟ್ಟಡಿಗೆಯ ನುಂಡು ಇಟ್ಟೊಡವೆಯ ಕೊಂಡು ಕುಟ್ಟಿ ಖಂಡವ ಚೂರು ಮಾಡಿದ ಕೋಲೆ 11 ಉಪ್ಪಿನಕಾಯಿ ಕೊಡ ತುಪ್ಪ ತೈಲದ ಪಾತ್ರೆ ಜಪ್ಪಿ ವಡೆದು ನೆಲ ಕುಣಿಸಿದ ಕೋಲೆ 12 ಚಿನ್ನ ಚಿಗುರು ಬೆಳ್ಳಿ ಕಂಚು ತಾಮ್ರಗಳನ್ನು ನುಣ್ಣಗೆ ಹೊರೆಗಟ್ಟಿ ಹೊತ್ತೊಯ್ದ ಕೋಲೆ 13 ಉಣ್ಣ ಉಡಲಿಕ್ಕಿಲ್ಲ ಹೊನ್ನು ಕೈಯೊಳಗಿಲ್ಲ ಎಣ್ಣೆ ಬೆಣ್ಣೆಗೆ ಬಾಲ ನಳಿಸಿದ ಕೋಲೆ 14 ಮುಂಜ ಮುಚ್ಚಲಿಕಿಲ್ಲ ಗಂಜಿಗೆ ಲವಣಿಲ್ಲ ಸಂಜೆ ದೀಪಕೆ ತೈಲವಿಲ್ಲದೆ ಕೋಲೆ 15 ಅತಿಥಿಗಿಕ್ಕಲಿಲ್ಲ ಪ್ರತಿಮೆ ಪೂಜೆಗಳಿಲ್ಲ ವ್ರತನೇಮಗಳನು ಕಟ್ಟಿರಿಸಿದ ಕೋಲೆ 16 ತೆಪಕಾರನ ಪದಾರ ಕಾಲಟದೊಳು ಜಪ ತಪಗಳಿಲ್ಲದೆ ಕೊಳ ತನ್ನಿಸಿದ ಕೋಲೆ 17 ನಗರದ ಕೋಲೆದ್ದು ತೆಪರಾರ ಮೇಲ್ಬಿದ್ದು ಜಿಗಿದು ಹಿಂದಕೆ ಜಾರಿ ಜುಣುಗಿದ ಕೋಲೆ 18 ಹಿಂದಣ ಬೆಳೆಮಣ್ಣ ಕೂಡಿತು ಕುಳಿಯಲಿ ಮುಂದಣ ದುದುರಿತು ಹಣ್ಣಾಗಿ ಕೋಲೆ 19 ಕೆಳಗು ಮೇಲಕು ದಂಡು ಬಳಪ್ರಾಂತ ದೊಳುದಂಡು ನೆಲೆಗೊಂಡು ಜನರು ತಲ್ಲಣಿಪರು ಕೋಲೆ 20 ಸುಬ್ಬರಾಯನ ವೀರಭದ್ರನ ಪ್ರಸಾದ ಸರ್ವಜನರ ಬಾಯ್ಗೆ ಬಿತ್ತಣ್ಣ ಕೋಲೆ 21 ನರರೂಪ ಧರಿಸಿ ಲಕ್ಷ್ಮೀಶನು ಹೊಯ್ಸೂವ ಕೋಲೆ 22
--------------
ಕವಿ ಪರಮದೇವದಾಸರು
ಗಣಾಧೀಶ ಗೌರೀಶ್ ವಾಗೀಶ ಶ್ರೀಶಾನ'ುಸಿ ಬೇಡುವ ಪ್ರಸಾದವನು ಜಗದೀಶಾನೆಲಸಿ ಹೃದಯದಿ ಬಂದು ನುಡಿಸು ದಯದಿಂದಾನೀ ನುಡಿಸಿದಂತೆ ನುಡಿಯುವೆ ಸ್ಪೂರ್ತಿುಂದಾ 1ದೇಹ ದೇವಾಲಯವು ದೇವರೊಳಗಿಹನುಮನದ ಗರ್ಭಾಲಯದಿ ಮಲಗಿಕೊಂಡಿಹನುನಾಲಿಗೆಯ ನಾಮಗರ್ಜನೆಯ ಬಲದಿಂದಾಮನದ ಕದ ತೆಗೆಯೆ ಕಾಣುನನು ಗೋ'ಂದಾ 2ಮನವೆ ಕಾರಣವು ಬಂಧಮೋಕ್ಷಗಳಿಗೆಮನವೆ ಕಾರಣ'ಲ್ಲಿ ಸುಖದುಃಖಗಳಿಗೆಮನಸು ಬಿಗಿ'ಡಿದ್ಹಿಡಿದು 'ಷಯಗಳ ತ್ಯಜಿಸುಮನತು ನಾಮಸ್ಮರಣೆಯೊಳು ಸದಾ ಇರಿಸು 3ಯಾವಾಗಲೂ ರಾಮ ನಿನ್ನೊಳಗೆ ಇರುವಾಭಾವದಿಂದಲಿ ಕರೆಯೆ 'ಒ' ಎಂದು ಬರುವಾದೇವರನು ನಂಬಿದರೆ ಸರ್ವದಾ ಕಾವಾಯಾವ ಅಂಜಿಕೆಯು ನಿನಗಿಲ್ಲ ತಿಳಿ ಜೀವಾ 4ನಿನ್ನೊಳಗೆ ನೀ ನಿನ್ನ ರಾಮನನು ನೋಡುನಿನ್ನ ಬೇಡಿಕೆಗಳನು ರಾಮನಲಿ ಬೇಡುಅನ್ಯರನು ಅಲಕ್ಷಿಸದೆ ಭಜನೆಯನು ಮಾಡುಪುಣ್ಯವಂತರ ಸಂಗದೊಳು ಸದಾ ಕೂಡು 5ಶ್ರವಣ ಭಕ್ತಿಯು ಬೇಕು ಮೊದಲು ಚೆನ್ನಾಗಿಶ್ರವಣವಾಗುವವರೆಗೆ ನಾದತಾನಾಗಿಭವ ಸಮುದ್ರವನು ದಾಟುವಡೆ ಸುಖವಾಗಿಶ್ರವಣವೇ ಮುಖ್ಯ ಸಾಧನವು ನಿಜವಾಗಿ 6ನಾದ ಹುಟ್ಟಿದ ಮೇಲೆ ನಾಮ ಕೀರ್ತನವುನಾಮ ಕೀರ್ತನದಿ ಅಸ್ಪಷ್ಟ ದರುಶನವುನೇಮ ಹೆಚ್ಚಾದಂತೆ ಸ್ಮರಣೆ ಶಾಶ್ವತವುಸ್ಮರಣೆಯೊಳು ಸಂಪೂರ್ಣ ವಸ್ತುದರುಶನವು 7ಅನನ್ಯ ಭಕ್ತಿಯ ಬಲವ ಬಣ್ಣಿಸುವದೇನುಕಣ್ಮುಂದೆ ಸರ್ವದಾ ಹರಿಯು ಕುಣಿಯುವನುಕಣ್ಣು ಮುಚ್ಚಣಿಕೆಯಾಟವನು ಆಡುವನುಅಣುರೇಣು ಪರಿಪೂರ್ಣನಾಗಿ ತೋರುವನು 8ಕುಣಿಯುವನು ಕುಣಿಸುವನು ನಗುತ ನಲಿಸುವನುದಣಿಯುವನು ದಣಿಸುವನು ಉಣುತ ಉಣಿಸುವನುಜನರಿಗದ್ಭುತ ಚಮತ್ಕಾರ ತೋರುವನುಕ್ಷಣ ಬಿಡದೆ ಕೆಳಗಿಳಿಯದಂತೆ ಕಾಯುವನು 9ದೇವರನು ನಂಬಿ ಕೆಡಕಾದವರು ಇಲ್ಲಜದೇವರನು ಬಿಟ್ಟು ಸುಖಹೊಂದಿದವರಿಲ್ಲಾದೇವರನು ಒಲಿಸುವೆಡೆ ಭಾವ'ರಬೇಕುಭಾವ'ಲ್ಲದ ಢೋಂಗಿನರ್ಚನೆಯು ಸಾಕು 10ಚಿನ್ನ ಬೆಳ್ಳಿಗಳ ಮಂಚಪವು ಬೇಕಿಲ್ಲಾಸಣ್ಣಕ್ಕಿ ಅನ್ನ ಪಕ್ವಾನ್ನ ಬೇಕಿಲ್ಲಮಣ್ಣು ಕುಳ್ಳಿಯೊಳು ಒಣ ಅಂಬಲಿಯು ಸಾಕುಘನ್ನ ಮ'ಮನಿಗೆ ನಿರ್ಮಲ ಭಕುತಿ ಬೇಕು 11ಶ್ರವಣ ಭಕ್ತಿಯ ದಾಟದವನು 'ಸಾಧಕ' ನುಪಾದಸೇವನದಿಂದ 'ಸಾಧು' ಆಗುವನುದಾಸ್ಯ ಭಕ್ತಿಯ ಮುಂದೆ 'ಸಿದ್ಧ' ನಾಗುವನುಸಖ್ಯಭಕ್ತಿಯ ಮುಂದೆ 'ಗುರು'ವು ಆಗುವನು 12ಭಕ್ತಿ ಮಾರ್ಗವು ಬಹಳ ಸುಲಭ ಸಾಧನವುಭಕ್ತಿ ಸರ್ವರಿಗೆ 'ಷಯದೊಳು ಪರಿಚಿತವು'ಷಯದೊಳಗಿನ ಪ್ರೀತಿ ಎಳೆದೆಳೆದು ತೆಗೆದುಪರಮಾತ್ಮನೊಳು ಇಡಲು ಭಕ್ತಿಯಾಗುವದು 13ಉಂಡದ್ದು ಶ್ರೀ ಹರಿಗೆ ನೈವೇದ್ಯವೆನ್ನುಕಂಡದ್ದು ಶ್ರೀ ಹರಿಯ ಪ್ರತಿರೂಪವೆನ್ನುಮಲಗಿದ್ದು ಶ್ರೀ ಹರಿಗೆ ಸಾಷ್ಟಾಂಗವೆನ್ನುಸುಲಭ ಪೂಜೆಯ ಮರ್ಮವೆನು ತಿಳಿದು ನೀನು 14ಸಾಲವನು ಮಾಡಿ ಹೋಳಿಗೆ ಹೊಡಿಯಬೇಡಾಜೇಲಿಗಂಜುತ ದೇಶಕಾರ್ಯ ಬಿಡಬೇಡಾಆಲಸ್ಯದಲಿ ಕಾಲವನು ಕಳಿಯಬೇಡಾಕೆಲಸದಲಿ ಕೀಳು ಮೇಲೆಂದು ಅನಬೇಡಾ 15ಸ್ವಚ್ಛ'ರಬೇಕು ಮನಬುದ್ಧಿ ದೇಹದೊಳುಅಚ್ಚುಕಟ್ಟಿರಬೇಕು ಸರ್ವಕಾರ್ಯದೊಳುಎಚ್ಚರಿರಬೇಕು ಜನಪಾತ್ರೆ ರಾತ್ರಿಯೊಳುಬಿಚ್ಚು ಮನ'ರಬೇಕು ಸ್ವಜನ 'ುತ್ರರೊಳು 16ಬಡತನವು ಬಂದಾಗ ಧೈರ್ಯ ಬಿಡಬೇಡ'ಡಿದು ನೆಂಟರ ಮನೆಯ ನೀ ಕೂಡಬೇಡದುಡಿದು ತಿನ್ನಲು ಸ್ವಲ್ಪ ಸಹ ನಾಚಬೇಡಮಡದಿ ಹುಟ್ಟಿದ ಮನೆಯ ನೀ ಸೇರಬೇಡಾ 17ಗಾಜಕಾರಣದೊಳು ' ಮುಚ್ಚುಮನ' ಬೇಕುಧರ್ಮಕಾರಣದೊಳಗೆ 'ಸ್ವಚ್ಛಮನ' ಬೇಕುಅರ್ಥಕಾರಣದೊಳಗೆ ' ಮೆಚ್ಚುಮನ'' ಬೇಕುಕಚ್ಚೆಕೈಗಳು ಸದಾ ಸ್ವಚ್ಛ'ರಬೇಕು 18ಸಂಸಾರ ಮಾಡುವಡೆ ಧನವ ಸಂಗ್ರ'ಸುಸನ್ಯಾಸಿಯಾಗುವೆಡೆ ವೈರಾಗ್ಯ ಬೆಳೆಸುಸರ್ವಕರ್ಮಗಳಲ್ಲಿ ಶ್ರೀಹರಿಯ ಸ್ಮರಿಸುಸರ್ವದಾ ಸಂತ ಸಂಗದೊಳು ಸಂಚರಿಸು19ಸಂತ ಸಂಗದೊಳು ಸಂಚರಿಸುವುದು ಸ್ನಾನಾಸಂತ ವಚನಾಮ್ರತದ ಪಾನವೇ ಸ್ನಾನಾಸಂತರನು ಸಂತೋಷಪಡಿಸುವುದು ಸ್ನಾನಾಶಾಂತಮನದಿಂ ಹರಿಯ ಚಿಂತಿಪುದ ಸ್ನಾನಾ 20ಬಾಲ್ಯದಲಿ ಬ್ರಹ್ಮಚರ್ಯದಿ ಬಲವ ಬೆಳೆಸುತಾರುಣ್ಯದಲಿ ದುಡಿದು ಧನವ ನೀ ಗಳಿಸುವೃದ್ಧಾಪ್ಯದೊಳು ಸದಾ ಶ್ರೀಹರಿಯ ಸ್ಮರಿಸುಶ್ರೀಹರಿಯ ಸ್ಮರಣೆಯೊಳು ಆಯುಷ್ಯ ಸವೆಸು 21ಮೊದಲು ನಿನ್ನ ಪ್ರಯತ್ನ ತಪ್ಪದೆಲೆ ಮಾಡುಅದು ನೀಗದಿರೆ ಮುಂದೆ ದೈವವನು ನೋಡುಮದುವೆಯಾಗುವ ಮೊದಲು ತಿಳಿತಿಳಿದು ನೋಡುದುಡಿದು ಧನ ಗಳಿಸಿ ಸುಖದಿಂದ ಬಾಳುವೆ ಮಡು 22ಧನ'ಲ್ಲದವನ ಸಂಸಾರ ಸುಖವಲ್ಲಾಮನೆಯೊಳಗೆ ನಿತ್ಯ ಕಿರಿಕಿರಿಯು ತರವಲ್ಲಾದನದಂತೆ ಹೆಣ್ಣು ನುಡಿಯುವುದು ಸರಿಯಲ್ಲಾಎಣಿಕೆುಲ್ಲದೆ ಮಕ್ಕಳಾಗುವುದು ಸಲ್ಲಾ23ನೆಂಟರೊಳು ಬಹುದಿನ ಕೆಳಗಿರಬೇಡಾ'ಫ್ರಂಟಸೀಟಿ'ನ ಮೇಲೆ ನೀ ಕೂಡಬೇಡಾಒಂಟಿಯಲಿ ಹೆಂಡತಿಯ ಬಿಟ್ಟು ಇರಬೇಡಾಗಂಟು ಒಬ್ಬರ ಕೈಗೆ ಕೊಟ್ಟು ಆಳಬೇಡಾ 24ನಿನ್ನಂತೆ ತಿಳಿ ಪರರ ಸುಖ ದುಃಖಗಳನುಅನ್ಯಥಾ ನೋಡದಿರು ಅಣ್ಣ ತಮ್ಮರನುಸರ್ವಥಾ ಸ'ಸದಿರು ಅನ್ಯಾಯಗಳನುತಿಳಿಯದೇ ಹಳಿಯದಿರು ಭಿನ್ನ ಮತಗಳನು 25ಅತಿ ಮತುಗಳು ಬೇಡ ಅತಿ ಮೌನ ಬೇಡಾಅತಿ ತಿನಸು ಬೇಡ ಅತಿ ಉಪವಾಸ ಬೇಡಾಅತಿ 'ಹಾರವು ಬೇಡ ಅತಿ 'ನಯ ಬೇಡಾಅತಿ ಉದಾರತೆ ಬೇಡ ಜೀನತನ ಬೇಡಾ 26ಭೂ'ುಂಗೆ ಭಾರವಾಗುತ ತಿರುಗಬೇಡಾಕೂಳಿಂಗೆ ಕಾಳಾಗಿ ನೀ ಕೂಡಬೇಡಸಾಲ ಸಿಗುವಾಗ ಸಂತೋಷ ಪಡಬೇಡಾಸಾಲವೇ ಶೂಲವೆಂಬುದು ಮರೆಯಬೇಡಾ 27ಹನಿಗೆ ಹನಿ ಕೂಡಿದರೆ ಹಳ್ಳದಾಗುವುದುತೆನಿಗೆ ತೆನಿ ಕೂಡಿದರೆ ರಾಶಿಯಾಗುವುದುಕ್ಷಣಬಿಡದೆ ಕಂಡಲ್ಲಿ 'ದ್ಯೆಯನು ಗಳಿಸುಕಣಬಿಡದೆ ಧನ ಧಾನ್ಯಗಳನು ಸಂಗ್ರ'ಸು 28ಮಾತು ಕೃತಿಗಳಿಗೆ ಬಲು ಮೇಳ'ರಬೇಕುನೀತಿಯೊಳು ತನ್ನ ಮನಸಾಕ್ಷಿ ಇರಬೇಕುಮಾತು ಬಲು ಸ'ುದ್ದು ಸತ್ಯ'ರಬೇಕುಸತ್ಯ'ಲ್ಲದ ಸುಳ್ಳು ಸ' ಮಾತು ಸಾಕು 29ಐಕ್ಯ'ದ್ದರೆ ಸೌಖ್ಯ ಭೇದದೊಳು ಬೇದಾಐಕ್ಯ'ದ್ದರೆ ಬಲವು ಕ್ಷಯಬೇನೆ ಭೇದಾಐಕ್ಯ'ದ್ದರೆ 'ಗ್ಗು ಭೇದದೊಳು ಕುಗ್ಗುಐಕ್ಯದಿಂದ ಸ್ವಾತಂತ್ರ್ಯ ರಥವನ್ನು ಜಗ್ಗು 30ತನ್ನ ಅಭಿಮಾನ ತನ್ನವರ ಅಭಿಮಾನತನ್ನ ಕುಲಗೋತ್ರ ಜಾತಿಯ ಸ್ವಾಭಿಮಾನತನ್ನ ಭಾಷಾರಾಷ್ಟ್ರ ಧರ್ಮಾಭಿಮಾನಮಾನವನಿಗಿರಬೇಕು ಇಲ್ಲದವ 'ಶ್ವಾನಾ' 31ತನ್ನತನ ಬಿಡಬೇಕು ತನ್ನವರಿಗಾಗಿತನ್ನವರ ಕುಲಗೋತ್ರ ಜಾತಿಗಳಿಗಾಗಿ ಕುಲಗೋತ್ರ ಜಾತಿಗಳ ತಾಯ್ನಾಡಿಗಾಗಿತಾಯ್ನಾಡು ನುಡಿಧರ್ಮ ಪರಮಾತ್ಮಗಾಗಿ 32ತನ್ನ ಉದ್ಯೋಗ ಮನಮುಟ್ಟಿ ಮಾಡುವರುಉಣಲು ಅಧಿಕಾರ ಆಮೇಲೆ ದೊರಕುವದುಉಣುವಾಗ ಶ್ರೀಹರಿಯ ಸ್ಮರಣೆ ಮಾಡುವದುಮನೆಯೊಳಗೆ ಶಿಸ್ತು ಶಾಂತಿಗಳ ಕಾಯುವದು33ಹರಿಕಥಾ ಕೀರ್ತನ ಪುರಾಣ ಪಠಿಸುವದುಸರಸ ವಾಙ್ಮಯದ ಅಭ್ಯಾಸ ಮಡುವದುತರು ಬರುವ ತನ್ನ ವ್ಯವಹಾರ ನೋಡುವದುಪರ ಪರಿಸ್ಥಿತಿಗಳನು ತೂಗಿ ನೋಡುವದು 34'ಶ್ರಾಂತಿ ಅಭ್ಯಾಸಿ ಸರಸ ಸಲ್ಲಾಪನಿಶ್ಚಿಂತೆುಂದ ನಿದ್ರೆಯು ಸೌಖ್ಯರೂಪನಿತ್ಯ ಮಾನವನ ದಿನಚರಿಯ ಈ ರೂಫನಿಶ್ರೇಯಸಕೆ ಸುಲಭ ಸಾಧನವು ಭೂಪಾ 35ಸ್ವಚ್ಛ ಹವೆ ನೀರು ವ್ಯಾಯಾಮ 'ಶ್ರಾಂತಿಸಾತ್ವಿಕ ಸಸತ್ವಾನ್ನ ಪಾನಗಳ ಪ್ರೀತಿಉಚ್ಚತಮ ಧ್ಯೇಯ ಆಚರಣೆಗಳ ರೀತಿಮೋಕ್ಷಕ್ಕೆ ಸಾಧನವು ಇಹದಿ ಸಂತೃಪ್ತಿ 36ದೇಹ ಬಿದ್ದರೆ 'ಂದೆ ಕೀರ್ತಿುರಬೇಕುಕೀರ್ತಿ ಬರುವಂಥ ಕಾರ್ಯವ ಮಾಡಬೇಕುಕಾರ್ಯದೊಳು ಕುಶಲತನ ದಕ್ಷತೆಯು ಇರಬೇಕುಫಲವು ಪರಮಾತ್ಮನಾಧೀನವೆನಬೇಕು 37ಸರ್ವದಾ ಸುಖವೆ ಇದ್ದವರು ಯಾರುಂಟುಅವರವರ ಕರ್ಮ ಫಲವೇ ಅವರ ಗಂಟುಬೆಳತು ಕತ್ತಲೆಯಂತೆ ಚಕ್ರ ಆರುಗುವದುಸುಖ ದುಃಖ ಬರುವಾಗ ಬಂದು ಹೋಗುವುದು 38ಅನುಭವದಿ ಹೆಚ್ಚು ಸಾಧನ ಬೆಳೆಯಬೇಕುಅನುಭವದ ಮಾತುಗಳು ಬಚ್ಚಿಡಲು ಬೇಕುಅನುಭವವು ಬಂತೆಂದು ಗರ್ವ ಪಡಬೇಡಾಗರ್ವದಿಂದಲಿ ಮತ್ತೆ ಕೆಳಗಿಳಿಯ ಬೇಡಾ 39ಅಡಗಿ ಅಂಬಲಿ ಅರ' ಅಂಚಡಿಯ ಕಡೆಗೆಹುಡುಗರ ಬಲಾರೋಗ್ಯ ನಡೆನುಡಿಯ ಕಡೆಗೆಕಡು ಚಾಣ್ಮೆುಂದ ನೋಡುವದು ಸತಿ ಪತಿ ಕೆಲಸಾ 40ಪತಿುಂದಲೇ ಸತಿಯು ಸತಿುಂದ ಪತಿಯುಸತಿಪತಿಯ ಪ್ರೇಮದಿಂದಾತ್ಮದುನ್ನತಿಯುಪತಿಯ ಕೋಪದಿ ಕಲ್ಲು ಆಗುವಳು ಸತಿಯುಸತಿಯ ಶಾಪದಿ ಕತ್ತೆಯಾಗುವನು ಪತಿಯು 41ಸಾ'ಗಂಜಲು ಬೇಡ ಸಾ'ಗಳಬೇಡಾಸಾವು ಅಂದರೆ ಭಯಂಕರ ತಿಳಿಯಬೇಡಾದೇಹಕ್ಕೆ ಬಾಲ್ಯ ಯೌವನ ಮುಪ್ಪಿನಂತೆದೇಹಾಂತರ ಪ್ರಾಪ್ತಿಯೇ ಮರಣಗೀತೆ 42'ದ್ಯಾರ್ಥಿ ಬಡವನಿದ್ದರೆ ಭಿಕ್ಷೆನೀಡುಅಶನಾರ್ಥಿ ಟೊಣಪನಿದ್ದರೆ ದೂರ ಮಾಡುಹಸಿವೆ ಚೆನ್ನಾಗಿ ಇದ್ದರೆ ಊಟ ಮಾಡುಹಸಿಯು ಸಾಕಷ್ಟು ಇದ್ದರೆ ಬಿತ್ತಿನೋಡು43ಶುದ್ಧ ಆಚರೆಣೆುದ್ದರೆ ಮಾತನಾಡುಬುದ್ಧಿ ಬಲು ಚುರುಕು ಇದ್ದರೆ ವಾದ ಮಡುದುಡ್ಡು ರಗಡಿದ್ದರೆ ಘಡಾಮೋಡ ಮಾಡುಜಡ್ಡು ಇದ್ದರೆ ಪಥ್ಯದುಪವಾಸ ಮಾಡು 44ಹಾಳುಹರಟೆಯ ಬಿಟ್ಟು ಶ್ರೀ ಹರಿಯ ಸ್ಮರಿಸುಕಾಲುವನು ನೋಡಿ ಸತ್ಕರ್ಮ ಆಚರಿಸುನಾಳೆ ಮಾಡುವೆನೆಂಬ ಮಾತು ದೂರಿರಿಸುನಾಳೆ ಮಾಡುವ ಧರ್ಮ ಇಂದು ನೀ ಮುಗಿಸು 45ಮನ ಮುಟ್ಟಿ ಸ್ಮರಣೆ ಸಂತತ ಮಾಡಬೇಕುಮನಸು ಓಡಲು ಮತ್ತೆ ಜಗ್ಗಿ ತರಬೇಕುಅನುಭವವು ಬಂದಂತೆ ಮನಸು ಕರಗುವದುಮನಸು ಕರಗಿದರೆ ವಾಸನೆಯು ಅಳಿಯುವದು 46ಎಲ್ಲ ಕಡೆಯಲಿ ಇರುವನೊಬ್ಬನೇ ದೇವಎಲ್ಲ ನಾಮಗಳಿಂದಲೂ ಕರೆಸಿಕೊಳುವಾಯಾವ ಬೇಕಾದ ಹೆಸರಿನ ದೇವರನ್ನುಭಕ್ತಿುಂ ಭಜಿಸಿದರೆ ಬಂದು ಪೊರೆಯುವನು47ಧನಕನಕದಾಶೆಯನು ತೊರೆದವನು ಸಂತವನಿತೆಯರ ಬಲೆಯೊಳಗೆ ಸಿಗದವನು ಸಂತಮನದಿ ಮಹಾದೇವನನು ಕಂಡವನು ಸಂತಜನರೊಳು ಜನಾರ್ಧನನ ನೋಡುವನು ಸಂತ 48ಘೋರ ಯುದ್ಧದಿ ನರನ ರಥವ ನಡೆಸಿಹನುಸೀರೆಯಾಗುತ ಸತಿಯ ಮಾನ ಉಳಿಸಿದನುನೀರಿನವನಾಗಿ ಎಂಜಲವ ಬಳಿದಿಹನುಪರಮ ಪುರುಷನ ಕರುಣೆಗೆಣಿಯು ಉಂಟೇನು 49ಹೃದಯ ದೊಳಗಿದ್ದ ಶ್ರೀಹರಿಯ ಮರೇತುಕಡುದ್ಯೆನ್ಯ ಬಿಡಬೇಡ 'ಷಯದೊಳು ಬೆರೆತುಕಾಮಧೇನು'ನ ಕೆಚ್ಚಲೊಳಿದ್ದ ನೀನುಅಮೃತವನು ಬಿಟ್ಟು ರತ್ನವನು ಕುಡಿವೆಯೇನು 50ಸರ್ವ ದುಃಖಗಳು ನಿರ್ಮೂಲವಾಗುವದುಸಂಸಾರ ಪರಮಾರ್ಥ ಕೂಡಿ ನಡೆಯುವವುಪ್ರಭು ರಾಮಚಂದ್ರನ ಪ್ರಸಾದ ಮ'ಮೆಯನುಪಠಿಸಿ ಆಚರಿಸಿದರೆ ಸುಖದಿ ಬಾಳುವನು 51ಜಯಜಯತು ಆರ್ಯ ಭೂಮತೆ 'ಖ್ಯಾತೆಜಯತು ಭಾರತಮಾತೆ ಸರ್ವಜನ ತ್ರಾತೆಜಯಜಯತು ಜಯ'ಂದ ಜನನಿ ಕಡು ಕರುಣಿಜಯ ಜಯತು ಸರ್ವ ಸಂಸ್ಕøತಿಯ ಮುಕುಟಮಣಿ 52ಅತಿಥಿ ಬಂದರೆ ಮನ ದೊಡ್ಡದಿರಲಿಒಣಹೆಮ್ಮೆ ಬೇಡ ಆದರದ ಮಾತಿರಲಿಮಾತು ಕೃತಿ ನಿಜ ಪ್ರೇಮ ತುಂಬಿರಲಿಊಟ ಉಪಚಾರದಿಂದ ಸಂತೋಷಗೊಳಲಿ 53ಗುಡಿಯೇಕೆ ಬೇಕು ಮನದೊಳಗೆ ಹರಿಯುಂಟುಅದರ ಕದ ತೆಗೆಯ ಪ್ರತಿಬಂಧವೇನುಂಟುಗುಡಿಯೊಳಗೆ ಹೊಗಿಸಬೇಕೆಂಬುವುದು ಛಲವುಛಲ 'ದ್ದರೇನದಕೆ ಆಧ್ಯಾತ್ಮ ಬೆಲೆಯು54ಮನ ಪ'ತ್ರ'ದ್ದರೆ ದೇವ ಒಲಿವಾಮನಸು ಅಪ'ತ್ರ'ದ್ದರೆ ದೇವ ಕುದಿವಾಮನ ಸುಪ್ರಸನ್ನ'ದ್ದರೆ ದೇವ ಒಲಿವಾಮನಸು ಧುಸುಮುಸು ಇದ್ದರೆ ದೇವ ಕುದಿವಾ 55ಮನಸು ನಿರ್ಭಯ'ದ್ದರಾ ದೇವ ಒಲಿವಾಮನಸು ನಿರ್ಮಲ'ದ್ದರಾ ದೇವ ಒಲಿವಾಮನಸು ನಿರಹಂಕಾರವಾದಾಗ ಬರುವಾಮನಸು ನಿಷ್ಕಪಟವಾದರೆ ಬಂದು ಪೊರೆವಾ 56ಅನ್ಯರಿಗೆ ನಿನ್ನ ಭಾರವ ಹಾಕಬೇಢನಿನ್ನ ಯೋಗ್ಯತೆ'ುೀರಿ ಭಾರ ಹೊರಬೇಡನಿನ್ನ ಮನೆತನದ ಜಗಳ ಬೈಲಿಗಿಡಬೇಡಹೆಣ್ಣು ಮಕ್ಕಳ ಮೇಲೆ ಕ್ಕೆ-ಎತ್ತಬೇಡ 57ನಿನ್ನ 'ರಿಮೆಯನು ನೀ ಹೇಳಬೇಡಅನ್ಯರನು ಕೀಳೆಣಿಸಿ ಮಾತಾಡಬೇಡಕಣ್ಮುಚ್ಚಿ ಇನ್ನೊಬ್ಬರನುಕರಣೆ ಬೇಡನಿನ್ನ ಸಂಸ್ಕøತಿಯ ವೈಶಿಷ್ಟ್ಯ ಬಿಡಬೇಡ 58ಸು'ಚಾರದಿಂದ ಧ್ಯೇಯವ ಗೊತ್ತುಪಡಿಸುಗೊತ್ತುಪಡಿಸಿದ ಧ್ಯೇಯವನ್ನು ನಿತ್ಯಸ್ಮರಿಸುಮುಟ್ಟಲಾ ಧ್ಯೇಯವನು ಶಕ್ತಿ ಸಂಗ್ರ'ಸುಶಕ್ತಿಯನು ಚಾತುರ್ಯದಿಂದ ನೀ ಬಳಿಸು 59ಸಮಯ ಪ್ರತಿಕೂಲ'ರೆ ವೈರಿಗಳ ನ'ುಸುನ'ುಸಿ ಒಳಹೊಕ್ಕವರ ಬಲವ ಹದಗೆಡಿಸುಶ್ರಮಪಟ್ಟು ಅ'ುತಬಲ ಗುಪಿತದಿಂ ಬೆಳಿಸುಸಮಯ ಸಾಧಿಸಿ ದುಷ್ಟಜನರನು ಸಂಹರಿಸು60ದೇಹದೊಳು ನೀನುಂಟು ದೇಹ ನೀನಲ್ಲನಾ ಎಂಬ ಜ್ಞಾನ ನಿನಗುಂಟು ಆದಕಿಲ್ಲನೀನು ಈ ದೇಹದಿಂದ ಹೊರಬೀಳಲಾಗಹೆಣವೆಂದು ಕರೆಯುವರು ದೇಹವನು ಬೇಗ 61ಹುಟ್ಟುವವ ನೀನಲ್ಲ ಹುಟ್ಟುವದು ದೇಹಬೆಳೆಯುವವ ನೀನಲ್ಲ ಬೆಳೆಯುವದು ದೇಹಸಾಯುವವ ನೀನಲ್ಲ ಸಾಯುವದು ದೇಹರೂಢಿಯೊಳು ನಿನಗಿದನು ಹಚ್ಚುವದು ಮೋಹ62ಖೋಡಿ ಮನವನು 'ಡಿದು ಸಾಧು ಮಡುವದುಸಾಧು ಮಾಡುತ ನಾಮ - ಘೋಷ ಹಚ್ಚುವದುಓಡಿ ಹೋಗಲು ಮತ್ತೆ ಎಳೆದೆಳೆದು ತಂದುಬೋಧಿಸುತ ನಾಮ ಜಪದೊಳು ಸೇರಿಸೆಂದು 63ಒಮ್ಮೆ ಹರಿನಾಮದೊಳು ಮನಸು ಸೇರಿದರೆಅದಕೆ ಆಗುವ ಸುಖವು ಆ ರುಚಿಯು ಬೇರೆಆ ರುಚಿಯ ಆ ಸುಖವು ಹತ್ತಿದರೆ ಮನಕೆತಿರುಗಿ ಎಂದಿಗೂ ಅದು ಹೋಗದದು 'ಷಯಸುಖಕೆ64ಚಿತ್ತ ಸ್ಥಿರ'ಲ್ಲದಿರೆ ಬುದ್ಧಿ ಸ್ಥಿರ'ಲ್ಲಬುದ್ಧಿ ಸ್ಥಿರ'ಲ್ಲದಿರೆ ಭಾವನೆಯು ಇಲ್ಲಭಾವನೆಯು ಇಲ್ಲದಿದ್ದರೆ ಶಾಂತಿುಲ್ಲ ಶಾಂತಿಯೇ ಇಲ್ಲದವ ಸುಖವೇನು ಬಲ್ಲ 65ಅನುಕೂಲ ಮತ ಮಾತ್ರ ನೀ ಎಣಿಸಬೇಡಪ್ರತಿಕೂಲ ಮತ ಉಪೇಕ್ಷೆಯ ಮಾಡಬೇಡಅನುಕೂಲ ಪ್ರತಿಕೂಲಗಳನು ತಿಳಿ ತಿಳಿದುಏನಾದರೊಂದು ಸಾಹಸ ಕಾರ್ಯ ಮಾಡು 66ಉದ್ಯೋಗದೊಳು ಸದಾ ಆನಂದ ಉಂಟುಉದ್ಯೋಗದೊಳಗೆ ಲಕ್ಷ್ಮಿಯ ವಾಸವುಂಟುಉದ್ಯೋಗವನು ಮಾಡಿ ದೇವರನು ಬೇಡುಉದ್ಯೋಗ ಬಿಟ್ಟು ಕುಳಿತರೆ ನಿನಗೆ ಕೇಡು 67ದೀರ್ಘ ಯೋಚನೆಯ ಮಾಡುತ ನೀ ಕೂಡಬೇಡಯೋಗ್ಯ ಮುಂಬೆಳಕು ಇಲ್ಲದೆ ಧುಮುಕಬೇಡ'ಗ್ಗಿ ಮೈಮರೆಯದಿರು ದೈವ ತೆರೆದಾಗಕುಗ್ಗಿ ಎದೆ ಒಡೆಯದಿರು 'ಧಿ ಕಾಡುವಾಗ 68ದೈವವನಕೂಲ'ದ್ದಾಗ ಎಚ್ಚರಿಕೆಗರ್ವ ಸೇರುವದು ತಿಳಿಯದಲೆ ಎಚ್ಚರಿಕೆಗರ್ವದಿ ಸ್ಮøತಿಗೆ ಸಮ್ಮೋಹವೆಚ್ಚರಿಕೆಸಮ್ಮೋಹದಿಂದ ಸರ್ವನಾಶ ಎಚ್ಚರಿಕೆ 69ದೈವ ಯತ್ನಗಳ ಗತಿ ಗಹನವಾಗಿಹುದುಒಬ್ಬೊಬ್ಬರನುಭವವು ಒಂದೊಂದು ಇಹುದುವಾದದಿಂ ಬಗೆಹರಿಯದಂಥ 'ಷಯ'ದುಇದರ ಹದ ತಿಳಿದು ಯತ್ನವಂ ಮಾಡುವದು 70ಜೋಲು ಮೋರೆಯ ಹಾಕಿ ನೀ ಕೂಡಬೇಡಕಾಲು ಅಪ್ಪಳಿಸಿ ಕೆಲಸಕೆ ಹತ್ತಬೇಡಸ್ಟೈಲು ಉಡುಗೆಯ ಉಟ್ಟುಕೊಂಡೋಡಬೇಡಮೈಲಿಗೆಯ ಮನದಿಂದ ಜಪ-ಮಾಡಬೇಡ 71ಕಾರ್ಯ ಮಾಡುವ ಜನಕೆ ಮರ್ಯಾದೆ ಮಡುಬಾಯಬಡುಕ ಜನರ ಕೃತಿಯನು ತಿಳಿದು ನೋಡುಧೈರ್ಯದಿಂ ದುರ್ಜನರ ಕೂಡ ಹೋರಾಡುಆರ್ಯ ಸಂಸ್ಕøತಿಯ ಸಂರಕ್ಷಣೆಯ ಮಾತು 72ಗುಣ ಕರ್ಮಗಳ ನೋಡಿ ಮಾನವನು ಮಾಡುಒಣ ಜನ್ಮ ಜಾತಿ ತುಸು ದುರ್ಲಕ್ಷ ಮಾಡುಗುಣ ಕರ್ಮದಿಂದ ಅತಿ ನೀಚನಾದವನುಜನುಮ ಮಾತ್ರದಿ ಹೇಗೆ ಶ್ರೇಷ್ಠನಾಗುವನು73ತಪ್ಪು ಇಲ್ಲದೆ ಕ್ಷಮೆಯ ಬೇಡುವವ ಮೂರ್ಖತಪ್ಪಿದರು ಒಪ್ಪಿದವನು ಕಡುಮೂರ್ಖತಪ್ಪು ಆಗುವದು ಮಾನವನ ಸಹಜಗುಣತಪ್ಪು ಒಪ್ಪುತ ತಿದ್ದಿಕೊಳ್ಳುವದು ಸುಗುಣ 74ನಿನ್ನ ಬಂಧುಗಳೆ ನಿನಗಾಗುವರು ಕೊನರೆಗೆಅನ್ಯರಿಗೆ ಆ ಕರುಳು ಬರುವದು ಹೇಗೆನಿನ್ನ ಬಂಧುಗಳೆಲ್ಲ ಮೂರ್ಖರೆನಬೇಡಅನ್ಯರಿಂದ ನೀ ಮೂರ್ಖನೆನಿಸಿಕೊಳಬೇಡ 75ಜನರ ಮನೆಗಳು ಬಹಳ ದಿವಸ ಇರಬೇಡಇರುವದೇ ಆದರವರಿಗೆ ಭಾರ ಬೇಡಅರಿತವರ ಕೆಲಸಗಳ ಮನೆಯಂತೆಮಡುಗೃಹದ ರೀತಿರಿವಾಜು ಕೆಡದಂತೆ ನೋಡು 76ದುಡ್ಡು ಇದ್ದಾಗ ಎಲ್ಲರ ಪ್ರೀತಿಯುಂಟುದುಡ್ಡು ಕಳಕೊಂಡು ಹೋದರೆ ಮೋರೆಗಂಟುದುಡ್ಡಿನಿಂದಲೆ ಜನರ ಬೆಲೆ ಕಟ್ಟಬೇಡದೊಡ್ಡ ಗುಣಗಳನರಿತು ನ'ುಸದಿರಬೇಡ 77ಧನದ 'ಷಯದಿ ಖಂಡ ತುಂಡ ಇರಬೇಕುಮನಬಿಚ್ಚಿ ಮೊದಲಿಗೆ ಮಾತಾಡಬೇಕುಒಣ ಮಬ್ಬುತನ ಮನದಮಂಡಿಗೆಯು ಬೇಡಕೊನೆಗೆ ಗುಣಗುಟ್ಟುತಲಿ ಹಳಹಳಿಸಬೇಡ 78ಯಂತ್ರಮಯ ಜೀವನದ ಯುಗವು ನಡೆದಿಹುದುಸ್ವಾತಂತ್ರ್ಯವೆಲ್ಲಿ ಬಡವರಿಗೆ ಉಳಿದಿಹುದುದ್ರವ್ಯಮಯವಾದ ವ್ಯವಹರ ಸಾಗಿಹುದುದೇವ ಧರ್ಮಕೆ ಅರ್ಧಚಂದ್ರ ಬಂದಿಹುದು 79ತಾಯ್ತನದ ಸುಖಕೆ ಸರಿಯಾದ ಸುಖ'ಲ್ಲತಾಯ್ತನದ ಕರುಳಿಂಗೆ ಬೆಲೆಯಂಬುದಿಲ್ಲತಾುಗಿಂದಧಿಕ ದೈವತವು ಬೇರಿಲ್ಲತಾಯ್ - ಸೇವೆಗಿಂದಧಿಕ ಪುಣ್ಯಾವೆ ಇಲ್ಲ 80ಚನ್ನಾಗಿ ಸಂಸಾರ ಮಾಡಬಲ್ಲವನುಸುಲಭದಿಂ ಪರಮಾರ್ಥವನು ಸಾಧಿಸುವನುಸಂಸಾರದೊಳಗಿದ್ದು ಸನ್ಯಾಸಿಯೆನಿಸುಸನ್ಯಾಸಿಯಾಗಿ ಸಂಸಾರದೊಳು ಈಸು81ಮನೆಯಲ್ಲಿಯೇ ಸ್ವರ್ಗ ಮನೆಯಲ್ಲಿಯೇ ನರಕಜಾಣರಿಗೆ ತಿಳಿಯುವದು ನೋಡಿದರೆ ಗಮಕಜಾಣ ಪ್ರೇಮಳ ಪತಿಯಮನೆ ಸತಿಗೆ ಸ್ವರ್ಗಕೋಣ ಕರ್ದಮ ಕಟುಕ ಪತಿುರಲು ನರಕ 82ಪತಿಯ ಮನ ಒಲಿಸಿ ಕೋತಿಯ ತೆರದಿ ಕುಣಿಸಿಅತ್ತೆ ಮಾವರು ಬಂಧುಬಳಗವನು ಹೊರನುಗಿಸಿಸ್ವೇಚ್ಛೆುಂ ಎದೆಮೆಟ್ಟಿ ಬೇರಿರುವ ಸೊಸೆಸೊಸೆಯಲ್ಲ ರಕ್ಕಸಿಯು ಕಿ'ಹೊಕ್ಕ ತೊಣಸಿ83ಸರ್ವದಾ ಸತ್ವಗುಣಿ ಶಾಂತ ನಿರುತಿಹನುರಾಜಸನ ಶಾಂತಿುಂ ಧಡಪಡಿಸುತಿಹನುಕಿರಿಕಿರಿಯು ತಾಮಸಿಗೆ ಬಿಟ್ಟುರುವದಿಲ್ಲಾತ್ರಿಗುಣಗಳ ದಾಟದಿದ್ದರೆ ಮೋಕ್ಷ'ಲ್ಲಾ 84ಅನ್ನದೊಳು ಮುಖ್ಯ ಸಾತ್ವಿಕ ಗುಣವು ಬೇಕುಸಂಪಾದನೆಯ ಮಾರ್ಗ ಸರಳ'ರಬೇಕುಸಂಸರ್ಗ ಸಂಸ್ಕಾರ ಸುಷ್ಟ'ರಬೇಕುಸಾತ್ವಿಕಾನಂದ ಮನದಿಂದ ಉಣಬೇಕು 85ಮೂಲ ಮನ'ಹುದು ಮೂರರೊಳೊಂದು ಪಾಲುಸನ್ನಿವೇಶಗಳಿಂದ ಮತ್ತೊಂದು ಪಾಲುತಿನ್ನುವಾ ಅನ್ನದಿಂದ ಉಳಿದೊಂದು ಪಾಲುಮೂರು ಕೂಡಿದ ಮನವೆ ನಿನಗೆ ಹರಿಗೋಲು86ಪ್ರಾರಬ್ಧವನುಭ'ಸಿ ತೀರಿಸಲು ಬೇಕುಅಪರೋಕ್ಷದಿಂದ ಸಂಚಿತ ಕಳಿಯಬೇಕುಸರ್ವದಾ ನಿರಪೇಕ್ಷ ಸತ್ಕರ್ಮ ಬೇಕುನಿರಭಿಮಾನದಿ ಕರ್ಮದ ಬೀಜ ಸುಡಬೇಕು87ದಯೆಯು ಧರ್ಮದಮೂಲ ದಯವಂತನಾಗುಭಯವು ದುಃಖದಮೂಲ ನಿರ್ಭಯನು ಆಗುಲೋಭ ಪಾಪದ ಮೂಲ ನಿರ್ಲೋಭಿಯಾಗುತ್ಯಾಗ ಪುಣ್ಯದ ಮೂಲ ತ್ಯಾಗಿ ನೀನಾಗು 88ನಿನ್ನ ಉದ್ಧಾರವನು ನೀ ಮೊದಲ ಮಾಡುಮನೆತನದ ಉನ್ನತಿಯಕಡೆಗೆ ನೀ ನೋಡುನಿನ್ನ ನೆರೆಹೊರೆ ಜನರ ಕಲ್ಯಾಣಮಾಡುಆಮೇಲೆ 'ಶ್ವದದ್ಧಾರ ಮಾತಾಡು 89ಹಳೆಯದಿದ್ದರೆ ಎಲ್ಲ ಒಳಿತು ಎನಬೇಡಹೊಸದೆಂಬ ಮಾತ್ರದಿಂದಲೆ ಹಳಿಯಬೇಡಒಳಿತು ಕೆಡಕುಗಳು ಎಲ್ಲದರಲ್ಲಿ ಇಹವುತಿಳಿದು ಉಪಯೋಗಿಸಿದರದು ಜಾಣತನವು 90ಕಾಲಮ'ಮೆಯ ಕಷ್ಟ ಬಂದಿತೆನಬೇಡಕಾಲಕ್ಕೆ ಹೆಚ್ಚಿನ ಮಹತ್ವ ಕೊಡಬೇಡಕಾಲ ನಿರ್ಮಾಣ 'ರಿಯರ ಕೈಯ್ಯೊಳಿಹುದುಎಂಥ 'ರಿಯರು ಅಂಥ ಕಾಲ ಬರುತಿಹುದು 91'ರಿಯರಾಚರಣಿಯಂ ಮನೆತನದ ಬೆಳಕು'ರಿಯರಾಚರಣೆುಂ ಮನೆತನಕೆ ಹುಳುಕು'ರಿಯರೇ ಕಾರಣರು ಮನೆಯ ಸುಸ್ಥಿತಿಗೆ'ರಿಯರೇ ಕಾರಣರು ಮನೆಯ ದುಸ್ಥಿತಿಗೆ 92ದೇಹವೇ ರಥವು ಸಾರಥಿಯು ಪರಮಾತ್ಮಜೀವ ಅರ್ಜುನ ಧರ್ಮ ಸಮ್ಮೂಡ ಆತ್ಮಸರ್ವ ಭಾವದಿ ಶರಣುಹೊಗು ಸಾರಥಿಗೆಸಾರಧಿಯು ಮುಟ್ಟಿಸುವ ನಿನ್ನ ಸದ್ಗತಿಗೆ 93ಜ್ಞಾನಪೂರ್ವಕ ''ತ ಕರ್ಮಗಳ ಮಾಡುಚಿತ್ತಶುದ್ಧಿಗೆ ಕರ್ಮಸಾಧನವು ನೋಡುಉದ್ದೇಶ ಪರಿಣಾಮಗಳ ತೂಕ ಮಾಡುಮೂಢತನ ರೂಢಿಗಳನರಿತು ಬಿಟ್ಟುಬಿಡು 94ಬಾಲಭಾವದಿ ದೇವರೊಳು ಹಟವಮಾಡುಬಾಲಭಾವದಿ ದೇವರೊಳು ಮಮತೆಮಾಡುಬಾಲಭಾವದಿ ದೇವರಿಗೆ ಬೇಡಿಕಾಡುಬಾಲಭಾವದಿ ನಿನ್ನ ಸರ್ವಸ್ವ ನೀಡು 95ಮಾತೃಭಾವದಿ ಅವನ ತೊಡೆಯ ಮೇಲಾಡುಮಾತೃಭಾವದಿ ನೀನು ವಾತ್ಸಲ್ಯ ಮಾಡುಮತೃಭಾವದಿ ತೂಗಿ ತೊಟ್ಟಿ ಮುದ್ದಾಡುಮಾತೃಭಾವದಿ ಬಿದ್ದು ಕಿರಿಕಿರಿಯಮಾಡು 96ಸಖ್ಯಭಾವದಿ ಹಾಲು ಮೊಸರೆರೆಯ ಬೇಕುಸಖ್ಯಭಾವದಿ ಬೆಣ್ಣೆ ಬಾಯ್ತುಂಬ ಬೇಕುಸಖ್ಯಭಾವದಿ ಕೊಳಲಿನೊಳು ಕುಣಿಯಬೇಕುಸಖನೆಂದು ಗೋಪಿಯಂದದಿ ಕುಣಿಸಬೇಕು 97ನಿನ್ನೊಳಗೆ ಆತನನು ನೀ ನೋಡಬೇಕುಅವನೊಳಗೆ ಸರ್ವವನು ನೀ ಕಾಣಬೇಕುತನ್ನತನ ಮರೆತು ಅವನೊಳು ಬೆರೆಯಬೇಕುಅವನ ಸೂತ್ರದ ಬೊಂಬೆ ನೀನಾಗಬೇಕು 98'ುೀನನಾದರೆ ಅವನ ಕಣ್ಣು ನೀನಾಗು ಕೂರ್ಮನಾದಾಗವನ ಬೆನ್ನು ನೀನಾಗುವರಾಹರೂಪದ ಹರಿಯ ಕೋರೆ ನೀನಾಗುನರಹರಿಗೆ ನೀ ಹದನವಾದ ನಖವಾಗು 100ವಟುವಾಮನಗೆ ಪಾದರಕ್ಷೆ ನೀನಾಗುದುಷ್ಟ ಸಂಹಾರಕನ ಪರಶು ನೀನಾಗುಅಟ'ವಾಸಗೆ ಬಿಲ್ಲುಬಾಣ ನೀನಾಗುದಿಟ್ಟ ಗೊಲ್ಲನ ಕರೆದ ಕೊಳಲು ನೀ ನಾಗು 101ಬುದ್ಧನಾದರೆ ಬುದ್ಧಿವಂತ ನೀನಾಗುಕಲ್ಕಿಯಾದರೆ ಚಲುವ ಕುದುರೆ ನೀನಾಗುಎಲ್ಲಿದ್ದರೂ ಅವನ ನೆರಳು ನೀನಾಗುಪ್ರಹ್ಲಾದ ದ್ರುವ ಅಂಬರೀಷ ನೀನಾಗು 102ಧನದೊಳಗೆ ಧನ ತವೋಧನನು ನೀನಾಗುಭಾಗ್ಯದೊಳು ವೈರಾಗ್ಯ ಭಾಗ್ಯವಂತನಾಗುಇಂದ್ರಿಯಂಗಳ ಜಯದಿ ನೀ ಶೂರನಾಗುಪಂಡಿತನು ತತ್ವದಾಚರಣೆಯೊಳು ಆಗು103ಸ್ವಾತಂತ್ರವೇ ಸ್ವರ್ಗ ಪರತಂತ್ರ ನರಕಮಾತೃಭೂ'ುಯ ಸೇವೆ ಮಡದವ ಶುನಕಪತಿತರುದ್ಧಾರ ಮಾಡುವದು ಸದ್ಧರ್ಮಪತಿತರನು ತುಳಿಯುವದು ಸೈತಾನಕರ್ಮ 104ಸಂಸಾರ ಸಾಗರವ ದಾಟಿಸಲು
--------------
ಭೂಪತಿ ವಿಠಲರು