ಒಟ್ಟು 1030 ಕಡೆಗಳಲ್ಲಿ , 88 ದಾಸರು , 803 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರುತಿ ಮಾಡೆವೆವು ನಾವು ಆನಂದನಿಲಯಗೆ ಆನಂದದಿಂದಲಿ ಪ ಗೋಕುಲದಲಿ ಪುಟ್ಟಿ | ಗೋವುಗಳನೆ ಕಾಯ್ದ ಗೋಪಾಲಕೃಷ್ಣನಿಗೆ 1 ನಂದಕುವರಗೆ | ಸಿಂಧುಶಯನಗೆ | ಇಂದೀವರಾಕ್ಷನಿಗೆ ನಾವು 2 ಶಾಮಸುಂದರಗೆ ದಾಮೋದರನಿಗೆ | ಪ್ರೇಮದಿಂದಲಿ ಶ್ರೀ ಕಮಲಾಕ್ಷಗೆ 3
--------------
ಶಾಮಸುಂದರ ವಿಠಲ
ಆರೋಗಣೆ ಮಾಡಮ್ಮ ಮಂಗಳಗೌರಿ ಬೇಡಿಕೊಂಬೆನೆ ನಿನಗೆ ಬೇಡಿದಡಿಗೆ ಎಡೆ ಮಾಡಿ ತಂದಿಟ್ಟಿಹೆ ಜೋಡಿಸಿ ನಿನಗೆ ಕೈ ಮುಗಿವೆನೆ ಮಹಾತಾಯೆ ಪ ನಂದಿವಾಹನನರ್ಧಾಂಗಿಯ ಪೂಜಿಸಿ ಗಂಧಕುಂಕುಮದಿಂದ ತಂದು ಕಸ್ತೂರಿ ಕಮಲದ ಪುಷ್ಪಗಳುಡಿ ತುಂಬಿ ನೈವೇದ್ಯವ ತಂದಿರಿಸುವೆ ತಾಯೆ 1 ಅಚ್ಚ ಮುತ್ತಿನ ಹರಿವಾಣದಿ ಮಾಲತಿ ಬಟ್ಟ್ಟಿವಿ ಗೌಲಿಗಳು ಅಷ್ಟಗುಳ್ಳವು ಶಾವಿಗೆ ಪರಡಿ ಪಾಯಸ ಭಕ್ಷ ಎಣ್ಣೋರಿಗೆ ಭಾರಿಬಟ್ಟಲು ತುಪ್ಪ 2 ಮಂಡಿಗೆ ಚೂರ್ಮವು ಬುಂದ್ಯ ಬೀಸೋರಿಗೆ ದುಂಡುಗುಳ್ಳೋರಿಗೆಯು ಚೆಂದವಾಗಿದ್ದ ಚಕ್ಕುಲಿ ಕರ್ಜಿಕಾಯ್ಗಳು ಅಂದವಾದ ಕಾಯಿರಸ ಶಾಖ ಪಾಕವು 3 ಸಣ್ಣ ಅಕ್ಕಿಯ ಶಾಲ್ಯಾನ್ನಕೊಪ್ಪುವ ತವ್ವೆ ಇನ್ನು ದಧ್ಯನ್ನಗಳು ಸನ್ಮತವಾಗಿದ್ದ ಶಾವಿಗೆಫೇಣಿ ಸಕ್ಕರೆ ರುಬ್ಬಿದ ಆಂಬೊಡೆ ರುಚಿಯಾದ ಕಲಸನ್ನ 4 ಘೃತ ಸೀಕರ್ಣೆ ಕಾಯ್ಹಾಲು ಹೊಯ್ಗಡುವನಿಟ್ಟು ಸಾರು ಸಾಂಬಾರ ಚಟ್ಟಣಿ ಕೋಸಂಬರಿ ನೀರೆ ನಿನಗೆ ಪನ್ನೀರು ತಂದಿರಿಸುವೆ 5 ದೇವಿ ನಿನ್ನ ಮನೋಭಾವ ತಿಳಿದು ನಾ ಭೀಮೇಶಕೃಷ್ಣನಿಗೆ ಬ್ಯಾಗ ಸಮರ್ಪಣೆ ಮಾಡಲು ಮಹಾದೇವ ಸ್ವಾದ ಸವಿದಾಸುಖದಿಂದಡ್ವಿಳ್ಯವ ಕೊಳ್ಳೆ 6
--------------
ಹರಪನಹಳ್ಳಿಭೀಮವ್ವ
ಆರ್ತಭಾವ ಸುಳಾದಿ ಧ್ರುವತಾಳ ವೊಂದು ತೋರೆನಗರವಿಂದನಯನ ಮಂದಾಕಿನಿಯ ಪಡೆದ ಮುದ್ದು ಚರಣ ಸುಂದರಾಂಗ ತೋರೆನಗೆ ಸುರೇಂದ್ರನಾಥ ಕಂದರ್ಪಪಿತನ ಕಾಲಂದಿಗೆ ರುಳಿ ಗೆಜ್ಜೆ ಚೆಂದುಳ್ಳ ಪದ್ಮರೇಖೆಯಿಂದೊಪ್ಪುವೊ ಇಂದಿರೆ ಕರಕಮಲದಿಂದ ಪೂಜಿತನಾದ ಚಂದ್ರವದನ ನಿನ್ನ ಚೆಲುವ ಪಾದ ಇಂದ್ರಾದಿ ಹರ ನಾರಂದ ಸುರಬ್ರಹ್ಮಾದಿ ವಂದ್ಯ ನಿನಗೆ ಕೋಟಿ ನಮೋ ನಮೋ ಎಂದು ಬೇಡುವೆ ದಯಾಸಿಂಧು ಎನಿಸಿದಾತ ಕಂದನಂದದಿ ನೋಡಿ ಸಲಹೋ ಎನ್ನ ಮಂದಬುದ್ಧಿಯ ಮಹಾಮದಡ ಪಾಮರ ಭವ ಬಂಧನದೊಳು ಸಿಲುಕಿ ನೊಂದೆನಯ್ಯ ಸಂದೇಹ ಮಾಡದೆ ಸಲಹದಿದ್ದರೆ ನಿನ್ನ ಹೊಂದಿ ಬಾಳುವುದೆಂತೊ ಮುಂದರಿಯೆ ಬಿಂದು ಮಾತ್ರದಿ ನಾಮಾಮೃತವ ಭೀಮೇಶಕೃಷ್ಣ ತಂದು ನೀಡೆನಿಗೆ ಇಂದೀವರಾಕ್ಷ 1 ಮಠ್ಯತಾಳ ಯುಗಳ ಪಾದಕೆ ಕೈಯ ಮುಗಿದು ಬೇಡುವೆನಯ್ಯ ಜಗದುದರನೆ ನಿನ್ನ ಜಾಣತನವ ಬಿಟ್ಟು ಅಗಣಿತಗುಣಮಹಿಮ ಅಂತರಾತ್ಮಕ ದೇವ ಬಗೆಬಗೆಯಲಿ ಸಲಹೋ ಭಕ್ತವತ್ಸಲ ನಿನ್ನ ಮಗುವೆಂದೆನ್ನ ಕಾಯೊ ಮಂದರೋದ್ಧರ ದೇವ ನಿಗಮಗೋಚರ ಸ್ವಾಮಿ ನಿಂತು ನೋಡುತ ಎನ್ನ ಚಿಗುರುದೋಷದಕುಡಿಯ ಚಿವುಟಿ ಹಾಕುತ ನಿನ್ನ ಸುಗುಣಗಳನೆ ಬಿಟ್ಟೆನ್ನವಗುಣವೆಣಿಸಿದರೆ ಇಗೋ ನಿನಗಪಕೀರ್ತಿ ಈಗ ಒಪ್ಪಿಸುವೆನು ಬಿಗಿದ ಭವಪಾಶ ಬಿಚ್ಚಿ ಭೀಮೇಶಕೃಷ್ಣ ತೆಗೆಯದೆ ನಿನ್ಹೊರತೀ ಜಗದೊಳಗುಂಟೇನಯ್ಯ 2 ವಚನ ಸಕಲ ಸ್ನಾನವು ನೇಮ ಹೋಮ ಜಪಂಗಳು ಸಕಲ ಪುಣ್ಯಕ್ಷೇತ್ರ ಮೂರ್ತಿನಾಮಂಗಳು ಸಕಲ ಪುರಾಣ ವೇದಾದಿಗ್ರಂಥಗಳು ಸಕಲ ಕಾರ್ಯವು ಸರ್ವೇಷ್ಟ ಫಲಂಗಳು ಸಾಯುಜ್ಯ ಪದವಿಗಳು ಲಕುಮೀಶ ಇವು ನಿನ್ನ ನಖಶಿಖ ಪರಿಯಂತ್ರ ಸಾರಥಿ ಸಮದೃಷ್ಟಿಲಿ ನೋಡಲು ಸಕಲಸಿದ್ಧ್ದಿಯು ಸರಿಯಾಗಿ ಕೈಗೂಡೋದು ಶಕಟಸುರಾಂತಕ ಕಕುಲಾತಿ ಮಾಡದೆ ಬಕನ್ವೈರಿಯೆನ್ನ ಭಾರವ ನೀ ವಹಿಸಲಿ ಬೇಕೊ ಇಕೋ ನಿನ್ನ ಚರಣಕ್ಕೆ ಈ ದೇಹ ಅರ್ಪಿಸುವೆ ಗೋಕುಲಾವಾಸ ನಿನ್ನ ಪಾದಕೆ ನಮಸ್ಕರಿಸುವೆ ಮುಕುತಿದಾಯಕ ಮುದ್ದು ಭೀಮೇಶಕೃಷ್ಣನೆ ಭಕುತಿಜ್ಞಾನದಲಿಡೊ ಭಯಹಾರಿ ಎನ್ನ 3 ಗೋಪಸುತನೆ ನಿನ್ನ ಗುರುವಿನ್ವಲ್ಲಭೆ ಮಹ ದಪರಾಧವೆಣಿಸದೆ ನೀ ಕರುಣದಲೆ ಸಾಂ- ದೀಪಗೆ ಸುತರನಿಟ್ಟ ಪಯಾಂಬುಧಿವಾಸ ಕೋಪದಿ ಬಯ್ದ್ದಾ ಶಿಶುಪಾಲಗೊಲಿದೆಯೊ ಶ್ರೀಪತಿ ಶರಣೆಂದಾ ದ್ರೌಪದಿ ಕಾಯ್ದಂತೆ ಕಾಪಾಡೊ ಈ ಭವಕೂಪದೊಳಗೆ ಬಿದ್ದೆ ನೀ ಪಿಡಿಕೈಯ ದಯಾಪರಮೂರುತಿ ಆಪತ್ತು ಬಾಂಧವ ಈ ದೇಹವೃಕ್ಷದಲಿ ದ್ವಾ- ಸೂಪರಣನಂತೆ ದೂರೇನೋ ಎನ್ನ ಸ- ಮೀಪದಲ್ಲಿದ್ದು ಸ್ವರೂಪ ತೋರದಲೆ ಸಂ- ತಾಪ ಬಡಿಸದಿರೆಂದಾಪನಿತು ಪೇಳ್ವೆ ಭೂಪಾಲ ಭೀಮೇಶಕೃಷ್ಣ ನಿನ್ನ ಪಾದ ನಾ ಪೊಂದಿದೆನೊ ದೊರೆ ನೀ ಪೊರೆಯೆಂದು 4 ಜತೆ ಏಸೇಸು ಕಾಲಕೆ ಬ್ಯಾಸರದೆ ಭೀಮೇಶಕೃಷ್ಣ ಲೇಸು ನೀಡೆನಗೆ ಸದಾ ಸುಮಂಗಳವ 5
--------------
ಹರಪನಹಳ್ಳಿಭೀಮವ್ವ
ಆವ ಬಲವಿದ್ದರೇನು - ವಾಸುದೇವನಾ ಬಲವು ನಿಜವಾಗಿ ಇರದನಕ ಪ ನೊಸಲಗಣ್ಣನ ಬಲ ನಾಲ್ಕು ತೆರದ ಬಲತ್ರಿಶುಲ ಡಮರು ಅಗ್ನಿ ಫಣಿಯ ಬಲವುಪಶುಪತಿಯ ರೂಪಿನ ಬಲದ ಶಿಶುಪಾಲನಅಸುರಮರ್ದನ ಕೃಷ್ಣ ಶಿರವ ಛೇದಿಸುವಾಗ 1 ಹರನ ಕರುಣದ ಬಲವು ಸುರರ ಗೆಲಿದಾ ಬಲವುಪರಮ ಶಕ್ತಿಯು ತನ್ನ ಭುಜದ ಬಲವುಧರೆಯನೆತ್ತಿದ ಬಲವುಳ್ಳ ಹಿರಣ್ಯಾಕ್ಷನಶಿರವ ಹರಿ ವರಾಹನಾಗಿ ತರಿವಾಗ2 ಮುನ್ನ ಗೆಲಿದ ಬಲ ಮುಕ್ಕಣ್ಣ ಹರನ ಬಲಘನ್ನ ಲಂಕಿಣಿಯ ಕಾವಲಿನ ಬಲವುತನ್ನ ವಂಶದ ಬಲವುಳ್ಳ ರಾವಣನ ಶಿರವಸನ್ನುತ ರಾಘವ ಪಟ್ಟನೆ ಪಾರಿಸುವಾಗ 3 ಲಿಂಗಪೂಜೆಯ ಬಲ ನಿಶ್ಚಿಂತನಾಗಿಹ ಬಲಹಿಂಗದೆ ಹರನು ಬಾಗಿಲ ಕಾಯ್ದ ಬಲವುಮುಂಗೈಯ ಶಕ್ತಿ ಸಾವಿರ ತೋಳ ಬಾಣನತುಂಗ ವಿಕ್ರಮ ಕೃಷ್ಣ ತೋಳ ಖಂಡಿಸುವಾಗ 4 ಈಸು ದೇವರ ಬಲಗಳಿದ್ದರೆ ಫಲವೇನುವಾಸುದೇವನ ಬಲವಿಲ್ಲದವಗೆದೇಶಕಧಿಕ ಕಾಗಿನೆಲೆಯಾದಿಕೇಶವನಲೇಸಾದ ಚರಣ ಕಮಲದ ಬಲವಿರದನಕ 5
--------------
ಕನಕದಾಸ
ಆವ ಸಿರಿಯಲಿ ನೀನು ಎನ್ನ ಮರೆತೆದೇವ ಜಾನಕೀರಮಣ ಪೇಳು ರಘುಪತಿಯೆ ಪ ಸುರರ ಸೆರೆಯನು ಬಿಡಿಸಿ ಬಂದೆನೆಂಬಾ ಸಿರಿಯೆಕರಿ ಮೊರೆಯ ಲಾಲಿಸಿದೆನೆಂಬ ಸಿರಿಯೆಶರಧಿಗೆ ಸೇತುವೆಗಟ್ಟಿದೆನೆನ್ನುವಾ ಸಿರಿಯೆಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ 1 ಕಡಲೊಳಗೆ ಮನೆಮಾಡಿ ಮಲಗಿದೆನೆಂಬಾ ಸಿರಿಯೆಮೃಢ ನಿನ್ನ ಸಖನಾದನೆಂಬ ಸಿರಿಯೆಬಿಡದೆ ದ್ರೌಪದಿ ಮಾನ ಕಾಯ್ದೆನೆಂಬಾ ಸಿರಿಯೆದೃಢವಾಗಿ ಹೇಳೆನಗೆ ದೇವಕೀ ಸುತನೆ2 ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆಕಾಮ ನಿನ್ನ ಸುತನಾದನೆಂಬ ಸಿರಿಯೆಆ ಮಹಾಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆಪ್ರೇಮದಲಿ ಹೇಳೆನಗೆ ಸ್ವಾಮಿ ಅಚ್ಯುತನೆ 3 ಮನುಜರೆಲ್ಲರು ನಿನ್ನ ಸ್ತುತಿಸುವರೆಂಬ ಸಿರಿಯೆಹನುಮ ನಿನ್ನ ಬಂಟನಾದನೆಂಬ ಸಿರಿಯೆಬಿನುಗು ದೈವಗಳು ನಿನಗೆಣೆಯಿಲ್ಲವೆಂಬ ಸಿರಿಯೆಅನುಮಾನ ಮಾಡದೆ ಪೇಳೊ ನರಹರಿಯೆ 4 ಇಂತು ಸಿರಿಯಲಿ ನೀನು ಎನ್ನ ಮರೆತರೆ ಸ್ವಾಮಿಪಂಥವೇ ನಿನಗಿಚಿದು ಆವ ನಡತೆಕಂತುಪಿತ ಕಾಗಿನೆಲೆಯಾದಿಕೇಶವ ರಂಗಚಿಂತೆಯನು ಬಿಡಿಸಿ ಸಂತೋಷವನು ಪಡಿಸೊ5ಚಿ
--------------
ಕನಕದಾಸ
ಆವಪರಿಯಿಂದಲಾದರೂ ರಾಮನಾಮವನು ಆವ ಪರಿಯಲಿ ನೆನೆದು ಸುಖಿಯಾಗು ಮನವೆ ಪ ಪಿತನಾಜ್ಞೆ ಲಕ್ಷಿಸದೆ ದೃಢದಿ ಪ್ರಹ್ಲಾದನು ಅತಿಶಯದಿ ಹರಿಯ ಧ್ಯಾನವ ಮರೆಯದೆ ಮತಿಗೇಡಿಯಾದ ಮಗನೆನುತ ಕುಲಗೆಡಿಸೆ ಶ್ರೀ ಪತಿಯು ತಾ ಬಂದು ಕಾಯ್ದುದೇ ಸಾಕ್ಷಿ 1 ದೋಷಹಿತನಾದ ದಶಶಿರನ ಒಡಹುಟ್ಟಿ ಕೇಶವನ ಧ್ಯಾನವನು ಮರೆಯದಿರಲು ಸಾಸಿರ ರಾಮಕಥೆಯುಳ್ಳನಕಾ ವಿ- ಭೀಷಣಗೆ ಸಾಮ್ರಾಜ್ಯವಿತ್ತುದೇ ಸಾಕ್ಷಿ 2 ಗಂಡರೈವರು ಸುತ್ತ ಕೆಲದಲಿರಲಾ ಸತಿಯ ಲಂಡ ದುಶ್ಶಾಸನ ಹಿಡಿದೆಳೆಯುತಿರಲು ಪುಂಡರೀಕಾಂಬಕನೆ ಸಲಹೆನಲು ಕರೆಯಲು ದ್ದಂಡನಾಭನೆ ಬಂದು ಕಾಯ್ದುದೇ ಸಾಕ್ಷಿ 3 ಯುದ್ಧಕೆ ನಡೆದಾಗ ಹಂಸಧ್ವಜಸುತನು ತನ್ನ ಬೇ ಕಾದ ಸತಿಯ ಆಜ್ಞೆಯ ನಡೆಸಲು ಪಿತನು ಕಾದೆಣ್ಣೆ ಕೊಪ್ಪರಿಗೆಯೊಳಗೆ ಸುಧನ್ವನ ಹಾಕೆ ಹರಿ ಕಾಯ್ದನೆಂಬುದ ಲೋಕವರಿದುದೆ ಸಾಕ್ಷಿ 4 ಉರ್ವಿಯೊಳು ವಿಪ್ರಜನ್ಮದಿ ಜನಿಸಿದಜಮಿಳಗೆ ಪೂರ್ವಸಂಚಿತ ಪಾಪಶೇಷವಿರಲು ಓರ್ವ ಸತಿಗಾಗಿ ಚಂಡಾಲತಿಯೊಳಗಾಗಿರೆ ಗೀರ್ವಾಣಪುರಿ ಲಕ್ಷ್ಮೀಶನೊಲಿದುದೇ ಸಾಕ್ಷಿ 5
--------------
ಕವಿ ಲಕ್ಷ್ಮೀಶ
ಆವಬಂಧುಗಳೆಲೋ ಜೀವ ವಿಚಾರಿಸೋ ಕಾವ ಸಮರ್ಥದೇವ ಹರಿಯಲ್ಲದೆ ಪ ಮಾಯಮೋಹವ ನೀಗಿ ಕಾಯಶುದ್ಧಲಿ ಮನ ಪಾದ ದಿವ್ಯಭಕ್ತಿಲಿ ಭಜಿಸೊ ಅ.ಪ ಜನನಿ ಬಂದಹಳೆಂಬೆ ಜನನಿರ್ದಳಾಧ್ರುವಗೆ ಜನಕನ ತೊಡೆಯಿಂದ ಕನಿಕರಿಲ್ಲದೆ ಮಲ- ಜನನಿ ನೂಕಲು ಕಂದ ವನಕ್ಹೊರಟು ಪೋಗಲು ಜನನಿ ಸಲಹಿದಳೆನೋ ವನಜಾಕ್ಷನಲ್ಲದೆ 1 ಸತಿಹಿತದವಳೆನುವೆ ಸತಿಯಿರ್ದು ಸುಗ್ರೀವ ಖತಿಪಟ್ಟಾಗ್ರಜನಿಂ ವ್ಯಥೆಯಿಂದುಸುರ ಬಿಡಲು ಸತಿಬಂದು ಪತಿಯನ್ನು ಹಿತದಿ ಕರೆದೊಯ್ದಳೆ ಹಿತದ ಬಂಧುಗಳಿವರೇ ಕ್ಷಿತಿಪತಿಯಲ್ಲದೆ 2 ಸುತರ ಬಲವಿಹುದೆನುವೆ ಸುತರತಿ ಬಲಾನ್ವಿತರು ಜಿತಮಾರನಿಗಿರೆ ಉರಿಹಸ್ತ ವರವಿತ್ತು ಗತಿದೋರದಿರುತಿರೆ ಸುತರು ನೆರವಾದರೆ ಗತಿ ರಮಾಪತಿಯೆನೆ ಹಿತದಿಂ ಮೊರೆಕಾಯ್ದ 3 ಬಂಧುಗಳತಿಶಯದ ವೃಂದನೆರೆದು ಇರ ಲಂದು ಕರಿಮಕರಿಕೆಯಿಂದ ಬಂಧನ ಪಡಲ ವಂದು ಬೆಂಬಲಗೊಟ್ಟು ಬಂಧನವ ಬಿಡಿಸಿದುವೆ ತಂದೆಯಾ ಶ್ರಿ ಮುಕ್ಕುಂದನಲ್ಲದಲೆ 4 ಹರಿಯೆ ಪರದೈವವೋ ಹರಿಯೆ ಪರಲೋಕವು ಹರಿಯೇ ಸ್ಥಿರಸುಖವು ಹರಿಯೆ ವರ ಮುಕ್ತಿಯೋ ಹರಿಯೆಂದು ಅಜಮಿಳ ನರಕಯಾತನೆ ಗೆದ್ದ ಪಾದ 5
--------------
ರಾಮದಾಸರು
ಇಕೋ ಈತ ವೆಂಕಟೇಶನೊ | ಭವದ | ಸಿಕ್ಕು ಬಿಡಿಸಿ ನೆನದವರಿಗೆ ಸಿಕ್ಕಿ ಮನದಿಂದಗಲದಿಪ್ಪಾ ಪ ಕರುಣ ಅರುಣ ಕಿರಣ ಪೋಲುವ | ಚರಣ ಧರಣಿ ತರುಣಿ ಸ್ಮರಿಸಿ | ಕರುಣಗಡಲಾ | ಧರಣಿಯಿಂದ ಉದ್ಧರಣೆ ಮಾಡಿದೆ ಪರಣನೀತ 1 ಮಂಡಿಯ ಮಂಡನ | ಕುಂಡಲ ಕಾಂತಿ | ಗಂಡ ಸ್ಥಳದಲಿ ಮಿರುಗೆ ತುಲಸಿ | ಕೌಸ್ತುಭ ಕಾಲ | ಪೆಂಡೆಯಿಟ್ಟು ನಂದನೀತ 2 ವಾಹನ ಆ ಖಂಡಲ ಇಕ್ಷುಕೋ | ಪರಮೇಷ್ಠಿ | ತೊಂಡರ ನಲಿದು ಕೊಂಡಾಡೆ ಚಂದಿರ ಮಂಡಲದೊಳು ಉ| ದ್ದಂಡನಾಗಿಯಿಪ್ಪಾ | ಪುಂಡ ದೈವನೀತ 3 ಪಂಜಿನಸಾಲು ಪರಂಜಳಿ ವಾದ್ಯ ವಿ | ರಂಜಿಸಲು ಜ್ಞಾನ | ಪುಂಜ ನಾರದ ಜಯ ಜಯ ಪೇಳಲು | ನಿರಂಜನ ಭಂಜನ ಈಶಾ 4 ಕರದ ಜನಕೆ ಸುರಧೇನು ಇದು | ನಿರುತದಲ್ಲಿ ಪೊರೆವ ಭಕ್ತರ | ಕರಿಯ ಕಾಯ್ದ ವಿಜಯವಿಠ್ಠಲ | ಪರಮ ಪುರುಷ ತಿರುಮಲನೀತ 5
--------------
ವಿಜಯದಾಸ
ಇದನೆ ಪಾಲಿಸು ಜನ್ಮ ಜನ್ಮಗಳಲಿ ಪ ಮಧುಸೂದನನೆ ನಿನ್ನ ಸ್ಮರಣೆ ದಾಸರ ಸಂಗ ಅ ಪುಣ್ಯಪಾಪ ಜಯಾಪಜಯ ಕೀರ್ತಿ ಅಪಕೀರ್ತಿ ಮನ್ಯುಮೋಹಾಸಕ್ತಿ ಕಾಮಲೋಭಾ ನಿನ್ನಾಧೀನವು ಎನ್ನದಲ್ಲವೆಂದಿಗು ಪ್ರಕೃತಿ ಜನ್ಮ ಗುಣಕಾರ್ಯವೆಂಬುವ ಜ್ಞಾನವೇ ಸತತ 1 ಗುಣಕರ್ಮ ಕಾಲಗಳ ಮನಮಾಡಿ ಜೀವರಿಗೆ ಉಣಿಸುತಿಹೆ ಸುಖದುಃಖ ಘನ ಮಹಿಮನೆ ಗುಣಗಳಭಿಮಾನಿ ಶ್ರೀವನಿತಾರಮಣ ಪ್ರಯೋ ಜನವಿಲ್ಲದಲೆ ಮಾಡಿ ಜನರ ಮೋಹಿಪಿಯೆಂಬೋ 2 ಈಶ ನೀನಾದ ಕಾರಣದಿಂದ ಸುಖದುಃಖ ಲೇಶವಿಲ್ಲವು ಸರ್ವಕಾಲಗಳಲಿ ಕೇಶವ ಜಗನ್ನಾಥ ವಿಠ್ಠಲನೆ ಭಕ್ತರ ಪ್ರ ಯಾಸವಿಲ್ಲದೆ ಕಾಯ್ವಿಯೆಂಬ ಸ್ಮರಣೆ ನಿರುತ 3
--------------
ಜಗನ್ನಾಥದಾಸರು
ಇಂದಿರಾರಾಧ್ಯನೆ ಬಂದು ನಿಲ್ಲೊ ಪ ಇಂದೆನ್ನ ಸಲಹೊ ಮಂದನಾನೊಂದನರಿಯೆ ಏ- ನೆಂದು ಕರೆಯಲೋ ಗೊವಿಂದ ಅ.ಪ ಜಲದೊಳಾಡುವ-ಕಲ್ಲಹೊರುವ ಎಲ್ಲಕಾಡಿನೊಳಾಡುವ ಭಳಿರೆ ಎರಡಂಗವ ತಳೆವ ವನಳಿವಗೋವನೆ ಕಾಯ್ದ ಮರೆವ ನಿನ್ನಯ ರೂಪವಾ ಸಲಿಲ ಹೊಕ್ಕು ಅಸುರನ ಸಂಹರಿಸಿ ಕಲಕಿಶರಧಿಯ ಸುಧೆಯನು ತರಿಸಿ ನೆಲಗಳ್ಳನ ಮದವನೆ ಮರ್ದಿಸಿ ಚೆಲುವಚೆಳ್ಳುಗುರಿನಿಂದುದರವ ಛೇದಿಸಿ ಸುಲಭದಿಂದ ಶುಕ್ರನ ಕಣ್ಮರಿಸಿ ಬಲುಕೊಬ್ಬಿದ ಕ್ಷತ್ರಿಯರನೊರೆಸಿ ಶಿಲೆಯ ಮೆಟ್ಟಿ ಮುನಿಸತಿಯರನುದ್ಧರಿಸಿ ಲೀಲೆಯಿಂದ ವ್ರಜನಾರಿಯರೊಲಿಸಿ ಸಲೆದಿಗಂಬರರೂಪವ ಧರಿಸಿ ಮಾಧವ 1 ಜಲದೊಳು ನಿಂದು ಕಣ್ಣಬಿಡುವ ಶೈಲವ ತಳೆವಾ ಕಲಕೀ ಮಣ್ಣ ಮೆಲುವ ಕಲ್ಲಕಂಭವ ಒಡೆವಾ ಬಲಿಯನೆ ಬೇಡುವ ಪರಶುವ ತೊಳೆದು ವನವನಗಳ ಚರಿಸುವ ಬಾಲೆಯರನಾಳ್ವ ಎಲ್ಲನಾಚಿಕೆಯ ಬಿಡುವ ಸಲ್ಲುವಹಯವೇರಿ ಮೆರೆವಾ ನಿನ್ನಯ ರೂಪವಾ ಎಲ್ಲವೇದವನುದ್ಧರಿಸಿ ವಾರಿಧಿಯಲಿ ತಳೆದು ಅಮೃತಮಥನಕೆ ಶಿಲೆಯ ಝಲಿಸಿ ನಿಲಸಿದೆ ನಿಜಕೆ ಧರಣಿಯ ಬಲ್ಲಿದ ಬಲಿಯ ಬಂಧಿಸಿ ಭಕ್ತಿಯ ಸಲ್ಲಿಸಿದೆ ಪಿತ ಪೇಳ್ದ ಆಜ್ಞೆಯ ಬಿಲ್ಲನೆತ್ತಿ ವರಿಸಿದೆ ಸೀತೆಯ ಮಲ್ಲರ ಮಡುಹಿ ತೋರಿದೆ ಚರಿಯ ಜಳ್ಳುಮಾಡಿತೋರ್ದೆ ಧರ್ಮಕೆ ಮಾಯ ಹುಲ್ಲುಣಿಸುವ ಹಯವೇರಿ ಮೆರೆದ ಶ್ರೀ ವಲ್ಲಭ ನಿನ್ನಯ ರೂಪವ ಸೊಲ್ಲಿಪರಾರೋ ಶ್ರೀಧರ 2 ನಿಗಮತಂದಿತ್ತೆ ನಗವಾನೆ ನೆಗವಾ ಮೊಗದೊಳು ಭೂಮಿಯ ಬಗೆವಾ ಉಗುರಿಂದುದರವ ಸೀಳ್ವ ತ್ಯಾಗಿಯನ್ಯಾಚಿಸುವ ಭೃಗುವಿಗೆ ಮುದವ ತೋರ್ವ ಸಾಗರಕೆ ಸೇತುಕಟ್ಟುವ ನೆನೆದಮೃತವ ಮೆಲುವ ಎಂದೆನಿಸಿ ಮೆರೆವ ನಿನ್ನಯ ರೂಪವಾ ಪೊಗಲಳವೇ ಭೂಧವ ನಿಗಮಕಾಗಿ ನೀ ತಮನ ಮರ್ದಿಸಿ ನಗವ ಬೆನ್ನಲಿ ಪೊತ್ತು ಸುಧೆಯನು ಸಾಧಿಸಿ ಹಗೆಯ ಹಿರಣ್ಯನ ಅಸುವನೆ ಹರಿಸಿ ಮಗುವಿನ ಭಕ್ತಿಗೆ ವ್ಯಾಪ್ತಿಯ ತೋರಿಸಿ ಬಾಗಿಲ ಕಾಯ್ದು ನೀ ಬಲಿಯ ರಕ್ಷಿಸಿ ಆ ಗರ್ವಿಸಿದರಸರ ಪರಶುವಿಂದ ವರೆಸಿ ಯಾಗರಕ್ಷಣೆಗೆ ನೀ ರಕ್ಷಕನೆನಿಸಿ ನೀಗಲು ಕುರುಕುಲ ಕಲಹವೆಬ್ಬಿಸಿ ಆಗಮ ಶಾಸ್ತ್ರಕೆ ಮಾಯವ ಕಲ್ಪಿಸಿ ಬೇಗ ಬಂದು ಹಯವೇರಿ ಮೆರೆವ- ಬೇಗದಿ ತೋರೋ ಶ್ರೀಪಾದವಾ 3
--------------
ಉರಗಾದ್ರಿವಾಸವಿಠಲದಾಸರು
ಇಂದು ಮುಂದಿಲ್ಲ ಪ ಶ್ರೀ ಮುಕುಂದಗೆ ಸಮರೆನಿಸುವರು ಲೋಕದೊಳು ಅ.ಪ. ವನಧಿ ಮಥನದಲ್ಲಿ ಅನಿಮಿಷರನ ಬಿಟ್ಟು ಜನನಿ ಲಕುಮಿ ನಾರಾಯಣನೊಲಿಸಿದಳಾ 1 ಪ್ರಪಿತಾಮಹನು ಲೋಕಾಧಿಪ ಬ್ರಹ್ಮಗೆ ತಪ ತಪವೆಂದು ಪೇಳಿದಗುಪಮೆ ಎನಿಸುವವರು 2 ಕೊಂದು ಶಿವನ ಕಾಯ್ದ ಇಂದಿರಾಪತಿಗೆಣೆ 3 ಮಂದರಾದ್ರಿಯನೆತ್ತಿ ಸಿಂಧುಮಥನ ಮಾಡಿ ವೃಂದಾರಕರಿಗೆ ಆನಂದವಿತ್ತು ಪರಿ4 ಭೃಗು ಮುನಿಪನು ಬ್ರಹ್ಮಾದಿಗಳ ಪರೀಕ್ಷಿಸಿ ಜಗನ್ನಾಥವಿಠಲ ತ್ರಿಗುಣವರ್ಜಿತನೆಂದು 5
--------------
ಜಗನ್ನಾಥದಾಸರು
ಇಂದು ವದನ ಇಂದುವದನ ಕುಂದರವದನ ಪ ಬಂದ ದುರಿತವನ್ಹಿಂದುಮಾಡಿ ಕರುಣಾ ಭವ ವಂದಿತ ಮುಕುಂದ ಹರಿ 1 ಪಾದ ದ್ವಂದ್ವ ಗತಿಯೆಂದೆ ಮುದದಿಂದ ಆನಂದಮಯ 2 ಪನ್ನಗಾದ್ರೀಶವರ ಹೆನ್ನೆಪುರ ನಿಲಯ ಆ ಪನ್ನ ಜನರನ್ನ ಕಾಯ್ವನೆ ತ್ವರದಿನ್ನು 3
--------------
ಹೆನ್ನೆರಂಗದಾಸರು
ಇಂದು ಇಂದುಧರನ ಪಾದದ್ವಂದ್ವಗಳನು ದಿನವು | ಎಂದೆಂದಿಗೆ ಬಿಡದೆ | ಪೊಂದಿದ್ದ ಪಾಪಗಳು | ನಿಂದಿರದಲೆ ಓಡಿ ಬೆಂದು ಪೋದವು ನೋಡಾ ಪ ಸತಿಗೆ ಅಧರ್Àಕಾಯ ಹಿತದಿಂದಲಿ ಇತ್ತು | ಚತುರತನದಲಿಳೆಯೊಳು ಪತಿತ ಮಾನವರಿಗೆ | ಮತಿಬಾಹದೊ ಮಾನಸ ಸತತ ದೃಢವನೀವ | ಪ್ರತಿದಿನದಲಿ ಕಾಯ್ವಾ 1 ವಿಷವ ಧರಿಸಿ ಸುಮನಸರ ನಡುವೆ ಮೆರೆದೆ | ಪಶುವಾಹನ ಪರಮೇಶ ಅಸುರಾರಿಗಲ್ಲದ | ಅಸುರರ ಕೊಲ್ಲುವ ರಂಜಿಸುವಾ | ಶಶಿ ಜಟಾ ಕಮನೀಯ ಮಣಿಮಕುಟಾ 2 ಕಡಲ ತಡಿಯವಾಸ | ವೊಡಿಯ ರಾಮನ ದಾಸ | ಮೃಡರುಂಡ ಮಾಲಾಭೂಷಾ || ಬಿಡದೆ ಸೇತುಬಂದ ವಿಜಯವಿಠ್ಠಲನ | ಅಡಿಗಡಿಗೆ ನೆನೆಸುವ ಶಿವರಾಮಲಿಂಗಾ 3
--------------
ವಿಜಯದಾಸ
ಇದು ಈಗ ಸಮಯ ಸೀತಾರಾಮ ಪ ಇದು ಈಗ ಸಮಯವು ಪದುಮದಳಾಕ್ಷನೆ ಸದಯದಿ ನಿಂದೆನ್ನ ಒದಗಿ ಕಾಯ್ವ ಶ್ರೀರಾಮ ಅ.ಪ. ಖಾಸವು ತುಂಬೆ ಕಂಠದಿ ಶ್ವಾಸವು ನಿಲ್ಲೆ ಘಾಸಿಯಾಗಲು ಘುರುಘುರುಕೆಂದು ಬÉೂೀರಿಡೆ ಸಾಸಿರ ಚೇಳು ಕಡಿದಂತಾಗುವಾಗ 1 ಕಾಲವು ಸಲ್ಲೆ ಪಂಚೇಂದ್ರಿಯಂಗಳು ಸಡಿಲೆ ಈ ದೇಹದಿ ಲಾಲಾ ಮೂತ್ರವು ಮಲ ಜೋಲಿ ಬೀಳುತಲಿರೆ ಕಾಲನ ದೂತರು ಬಂದು ಬಿಡದೆಳೆಯುತಿರುವಾಗ 2 ನಂದನಾದಿಗಳು ನಿಂದು ಗೋಳಿಡುತಿರೆ ಬಂಧು ಬಳಗಗಳು ಒಂದನು ನೋಡಿದೆ ಕುಂದುತ್ತ ಚಿತ್ತದಿ ನಿಂದಿರಲು ತಂದೆ ಧೇನುಪುರಿನಾಥ ಬಂದೆನ್ನ ಕಾಯೊ ಹೋಗುವಾಗ 3
--------------
ಬೇಟೆರಾಯ ದೀಕ್ಷಿತರು
ಇಂದು ಕಾಯಲಾ ಭಕ್ತವತ್ಸಲಾ ಬಂದು ಒದಗಿ ನಿಂದು ಭಯವ ದೂರ ಮಾಡಲಾ ಧ್ರುವ ಮೊರಿಯು ಕೇಳೆಲಾ ಹರಿಯು ನಿಶ್ಚಲಾ ದುರಿತ ಹರಿಸೆಲಾ 1 ಸುಳವದೋರಲಾ ಹೊಳೆದು ವಿಠ್ಠಲಾ ಖಳರ ಕೈಯ ಸೆಳೆದುಕೊಂಡು ಬಲೆಯ ಬಿಡಿಸೆಲಾ 2 ಬಂಧುಬಳಗ ದೈವ ಕುಲಕೋಟಿ ನೀನೆಲಾ3 ಹಿಂದೆ ಶರಣರ ಬಂದು ಕಾಯ್ದೆಲಾ ಸಂದು ವಿಘ್ನದೊಳು ಬಂದು ರಕ್ಷಿಸಿದೆಲಾ 4 ಅಂದು ಒದಗಿ ನೀ ಬಂದ ಪರಿಯಲಾ ಇಂದು ಅಭಿಮಾನ ಕಾವ ಬಿರುದು ನಿನ್ನದಲ್ಲಾ 5 ದಾತ ನೀನೆಲಾ ಅಣುಗ ನಿನ್ನ ದಾಸನೆಂದು ಪ್ರಾಣನುಳುಹೆಲಾ 6 ಪುಣ್ಯಪ್ರಭೆಯಿಂದಾ ಕಣ್ಣುದೆರಿಯಲಾ ಧನ್ಯಗೈಸಿ ಮಹಿಪತಿ ಮಾತ ಮನ್ನಿಸೆಲಾ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು