ಒಟ್ಟು 108 ಕಡೆಗಳಲ್ಲಿ , 3 ದಾಸರು , 99 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಧವ ತೀರ್ಥರ ಪ ಮೇದಿನಿಯೊಳು ನಾಲ್ಕು ವೇದÀಗಳಿಗೆ ಭಾಷ್ಯ ಸಾದರದಲಿ ರಚಿಸಿದ ಮೋದತೀರ್ಥರ ಸುತರ 1 ಸೂರಿಜನರ ಪರಿವಾರ ಸೇವೆಯ ಕೊಳುತ ಧಾರುಣಿಯೊಳಗೆ ಮಣೂರು ಪುರದಲಿ ಮರೆವರ2 ವೀಶಗಮನ ಚನ್ನಕೇಶವಾತ್ಮಕನಾದ ಶ್ರೀಶ ಕಾರ್ಪರ ನರಕೇಸರಿಯನೊಲಿಸಿದವರ 3
--------------
ಕಾರ್ಪರ ನರಹರಿದಾಸರು
ಮಾನವ ಗುರುಚರಣ ಸರೋಜವ ಪ ಶೇರಿದ ಶರಣರ ಘೋರ ಪಾತಕವೆಂಬೊ ವಾರಿದ ಗಣಕೆ ಸಮೀರ ಜಗನ್ನಾಥ ಸೂರಿವರ್ಯ ದಾಸಾರ್ಯರಂಘ್ರಿಯನುಅ.ಪ ತಾರತಮ್ಯವ ತಿಳಿಯದೀ ಕಲಿಯುಗದಿ ಮುಕ್ತಿ ದಾರಿಗಾಣದೆ ಭವದಿ ಬಿದ್ದ ಸಜ್ಜನೋ- ದ್ದಾರ ಮಾಡಲು ದಯದಿ ಬ್ಯಾಗವಾಟದಿ ನಾರ ಸಿಂಹಾಖ್ಯ ವಿಪ್ರಾಗಾರದೊಳುದ್ಭವಿಸಿ ಚಾರು ಸಾರವಧರೆಯೊಳು ಬೀರಿದಂಥವರ 1 ಮೇದಿನಿಯೊಳು ಚರಿಸಿ ವ್ಯಾಕ್ಯಾರ್ಥದಿ ಬಹುದು- ರ್ವಾದಿಗಳನೆ ಜಯಿಸಿ ಎನಿಸಿದರು ಪೂರ್ಣ ಭೋಧ ಮತಾಬ್ಧಿಗೆ ಶಶಿ ನೃಪಮಾನ್ಯರೆನಿಸಿ ಶ್ರೀದ ಪ್ರಹ್ಲಾದಾನುಜ ಸಲ್ಹಾದರೆ ಇವರೆಂದು ಪಾದ ಪಂಕಜಾ ರಾಧಕರಿಗೆಸುರ ಪಾದಪರೆನಿಪರ 2 ಕ್ಷೋಣಿ ವಿಬುಧ ಗಣದಿ ಸೇವೆಯಕೊಳುತ ಮಾನವಿಯೆಂಬೊ ಕ್ಷೇತ್ರದಿ ಮಂದಿರ ಮಧ್ಯ ಸ್ಥಾಣುವಿನೊಳು ಮುದದಿ ಕಾರ್ಪರವೆಂಬೊ ಕಾನನದಲಿ ಕೃಷ್ಣಾವೇಣಿ ಕೂಲದಿ ಮೆರೆವ ಶ್ರೀನಿಧಿ ನರ ಪಂಚಾನನಂಘ್ರಿಯುಗ ಧ್ಯಾನದಿ ಕುಳಿತ ಮಹಾನುಭಾವರನು 3
--------------
ಕಾರ್ಪರ ನರಹರಿದಾಸರು
ಮಾನವ ಗುರುವಿಷ್ಣು ತೀರ್ಥರ ಪ ಕರುಣದಿ ಜನಿಸಿ ತರಿದ ಭೀಷ್ಠೆಯ ಗರಿವರಂಘ್ರಿಯ ಅ.ಪ ತರುಣಿ ಗರ್ಭದಿ ಜನಿಸಿ ವಟು ವ್ರತವ ಧರಿಸಿ ವೇದವೇದಾಂತ ಶಾಸ್ತ್ರವ ಹರಣ ಮಂತ್ರವ ಜಪಿಸಿದವರನು 1 ಗುರುತುರಗವನುಸರಿಸಿ ಬರುತಿರಲು ಬಿಸಿಲೊಳು ಗುರುಪ್ರೀತಿಯನು ಬಯಸಿ ಗುರುವಿತ್ತ ಪಾದುಕವೆರಡು ಶಿರದಲಿ ಧರಿಸಿ ಮಹಿಮೆಯನು ತಿಳಿಸಿ ಧರಿಸಿ ದ್ವಿತಿಯಾ ಶ್ರಮದಿ ನೋಡಲು ಪರಮ ಸತ್ಕುಲ ಜಾದಿ ಗುಣಯುತ ತನದೋಳ್ಮೆರೆವರಂಘ್ರಿಯ2 ತಿರೆ ಮೃಗಲಾಂಚನ ಮುಖಸಹಿತದಿ ಹರಿದಾಸ ಪಾಡಿದ ಮಾಡಿರಿ ಧರ್ಮವೆಂಬುವ ಸುಖವನು ತ್ಯಜಿಸಿಪೊರಟರ 3 ಚರಿಸುತ ಗಮನ ಸ್ವಪ್ನದಿ ಸೂಚಿತ ಪ್ರವಚನ ವಿಜಯ ಮುನಿ ಮುನಿಯವಲ್ಲಿ ಯೊಳಿರುವ ಗುರುಗಳ 4 ಕುಮಾರಕರೆಂದೆನಿಸಿ ಸುಕ್ಷೇತ್ರ ಧ್ಯಾನಿಸಿ ಸೇರಿದವರ ಘ ಚಾರು 'ಕಾರ್ಪರ ನಾರಶಿಂಹ' ವಲಿಮೆ ಪಡೆದ ಚಾರು ಚರಣವ5
--------------
ಕಾರ್ಪರ ನರಹರಿದಾಸರು
ಮುಕ್ತಿಮಾರ್ಗಕೆ ಸೋಪಾನ ಪ ಕರ ಪರಿಶೇವನಾ 1 ತಿಮಿರ ಭಾಸ್ಕರನೆಂಬುವ ತವ ಬಿರುದಾವಳಿ ಸಂಕೀರ್ತನಾ 2 ಕ್ಷೋಣಿಸುರರಿಗೆ ದ್ರವ್ಯ ದಾನದಿಂದಲಿ ಜಿತ ಭಾನುಜರೆಂಬುವ ಭಾಷಣ 3 ಹರುಷತೀರ್ಥರ ಮತ ಶರಧಿಗೆ ಪೂರ್ಣ ಚಂದಿರನೆಂಬುವ ಶುಭಗಾಯನ 4 ಶರಣರ ಪೊರಿವ 'ಕಾರ್ಪರನರಸಿಂಹ'ನ ಕರುಣ ಪಾತ್ರ ತವಶೇವನಾ 5
--------------
ಕಾರ್ಪರ ನರಹರಿದಾಸರು
ಮುಂಚೆ ನೋಡಣು ಬನ್ನಿ ಜನಗಳೆ ಹಂಚಿನಾಳಿನವ ಹನುಮನ ವಾಂಛಿತಾರ್ಥಗಳೀವ ಭಾವಿ ವಿರಂಚಿದೇವ ಪದಾರ್ಹನಾ ಪ ಅಂದು ಕಪಿಕುಲದಿಂದ ದುಸ್ತರ ಸಿಂಧು ದಾಟಿದ ಧೀರನ ವಂದಿಸುತ ಭೂನಂದನೆಯು ಕ್ಷೇಮೆಂದು ರಾಮಗೆ ಪೇಳ್ದನ 1 ಧಾರುಣಿಯೊಳವತರಿಸಿ ಕುಂತಿ ಕುಮಾರನೆನಿಸಿದ ಧೀರನ ಕೌರವಾಂತಕನೆನಿಸಿ ಕೃಷ್ಣನ ಭೂರಿ ಕರುಣವ ಪಡೆದನ 2 ವಾದಿಗಳ ನಿರ್ವಾದ ಗೈಸಿದ ಬಾದರಾಯಣನ ಶಿಷ್ಯನ ಭೇದಮತವನು ಸ್ಥಾಪಿಸಿದ ಗುರು ಮೋದ ತೀರ್ಥ ಯತೀಂದ್ರನಾ 3 ಪಾಲಕಿಯ ಉತ್ಸವದಿ ಮೆರೆಯುತ ವಾಲಗವ ಕೈಕೊಳುವನ ಕಾಲಕಾಲಗಳಲ್ಲಿ ಭಜಕರ ಮ್ಯಾಳವನು ಪಾಲಿಸುವನಾ 4 ಶೇಷಭೂಷಣ ವಾಸವಾದಿಸು ರೇಶ ಭಕುತರ ಪೋಷನ ಶ್ರೀಶ ಕಾರ್ಪರವಾಸ ಸಿರಿನರ ಕೇಸರಿಗೆ ಪ್ರಿಯ ದಾಸನ5
--------------
ಕಾರ್ಪರ ನರಹರಿದಾಸರು
ರಂಗನಾಥ ಮಾಂ ಗಂಗಾಜನಕ ತುಂಗ ಮಹಿಮ ಮಂಗಳಾಂಗ ಪಾಹಿ ಪ ತಿಂಗಳ ತೇಜದಲಿ ಪೊಳೆಯುತ ಕಂಗೊಳಿಸುವ ಮುಕುಟ ಮಂಡಿತ ಬಂಗಾರದಾಭರಣ ಭೂಷಿತ ಶೃಂಗಾರದಿ ರಥವನೇರುತ ಮಂಗಳ ವಾದ್ಯಂಗಳುಲಿಯೆ ರಂಗನಾಥ ಪ್ರತಿವರ್ಷದಿ ತುಂಗಛತ್ರ ಚಾಮರ ವ್ಯಜ- ನಂಗಳ ವಿಭವದಿ ಬರುತಿರೆ ಕಂಗಳಿಂದ ನೋಳ್ಪ ಭಕ್ತ ಜಂಗುಳಿ ಪಾಲಿಸಲೋಸುಗ ಮಂಗಳಸಿರಿ ಜಾಲಹಳ್ಳಿ ಪುರನಿಲಯ ಪೊರೆ ಎನ್ನ1 ಹಿಂದಕೆ ಮುದಗಲ್ಲು ಪುರದಿ ಬಂದಿಹ ಉಪ್ಪಾರ ಜನದಿ ಬಂದು ಗೋಣಿಯೊಳಗೆ ಮುದದಿ ನಿಂದಿಯೊ ಪದಮೆಟ್ಟೆ ಬೆಟ್ಟದಿ ಅಂದಿನ ರಾತಿಯ ಸ್ವಪ್ನದಿ ಸಂದರ್ಶನವಿತ್ತು ಪುರದಿ ಮಂದಿರಕಾರ್ಯವ ಸೂಚಿಸ- ಲಂದು ರಾಯಗೌಡನಿಂದ ಬಂಧುರದಲಿ ನಿರ್ಮಿತ ಆ- ನಂದನಿಲಯ ಮಂದಿರ ಮು ಕುಂದನಂದ ಕಂದನೆ ಮದ್ ಹೃದಯದಲಿ ಸದಾತೋರೋ2 ವಾರಿಚರ ಮಂದರಧರ ಭೂ ಚೋರಮಥನ ಘೋರರೂಪನೆ ಚಾರು ಬ್ರಹ್ಮಚಾರಿ ವಾಮನ ಶೂರ ಪರಶುರಾಮನೆ ನಮೊ ಧಾರುಣಿ ಜಾವಲ್ಲಭ ಕಂ- ಸಾರಿ ವಸನದೂರನೆ ಹಯ ವೇರಿ ದುಷ್ಟ ದಿತಿಜರ ಭಯ ದೂರ ಮಾಡಿ ಕಾವದೇವ ಧಾರುಣಿಸುರ ಪರಿಪಾಲಕ ವಾರಿಜಭವ ನುತ ಕಾರ್ಪರಾ- ಗಾರವೀರ ನಾರಸಿಂಹ ನಮಿಸುವೆನು ರಮಾರಮಣ3
--------------
ಕಾರ್ಪರ ನರಹರಿದಾಸರು
ರಥವೇರಿ ಬರುತಿಹ ಗುರುವರನ್ಯಾರೆ ಪೇಳಮ್ಮಯ್ಯಾ ಪ ಟೀಕಾಕೃಧ್ಯ ತಿವರನಮ್ಮ ಅ.ಪ ಸ್ವೀಕರಿಸಿ ಮಾರುತನವತರಿಸಿ ಶೃತಿಸಮ್ಮತ ಶ್ರೀಮಧ್ಭಾಷ್ಯವತಾರಚಿಸಿ ಛಾತ್ರರಿಗೆ ವಿವರಿಸೆ ಕೇಳುತಲನುದಿನದಿ ಮಹಿಮ ಸುರಪತಿಯು ಕಾಣಮ್ಮ 1 ದೇಶಪಾಂಡ್ಯರಕುವರ ಕೇಳಲು ಗುರುವಚನ ಸಂಸಾರ ಸುಖವನ ಜಯ ತೀರಥರಮ್ಮ 2 ಸ್ಥಾಪಿಸಿದರು ಮುದದಿ ಶುದ್ಧಮಾಯಿ ಸುಭಟಧ್ವಜನಿಯ ಓಡಿಸಿದ ವಾಕ್ಸಾಯಕದಿಂದ ಮಧ್ವರಾಜಕೃತ ಸದ್ಗ್ರಂಥಗಳ ವಿಸ್ತಾರ ಮಾಡಿದ ಯತಿಧೀರಾ ಗೆಲಿದ ಪ್ರಸಿದ್ಧ ಕಾಣಮ್ಮ 3 ಚಾಮೀಕರಕೃತ ಚಾಮರ ಛತ್ರಗಳಿಂದ ಸೇವಿಪದ್ವಿಜರಿಂದ ಶ್ರವಣಕೆ ಪೀಯೂಷ ಭವಬಾಧೆ ಬಿಡಿಸಿದ ಶ್ರೀಮಳಖೇಡ ಸುಧಾಮ ಕಣಮ್ಮ4 ತೋಷಿತ ಬುಧನಿಕರ ಪಾವನತರಚರಿಯ ಶರಣುಜನಕೆ ಸುರತರುವೆನಿಸಿದ ಜಯರಾಯಾ ವಿದ್ವಜ್ಜನಗೇಯಾ ಧರೆಯೊಳು ಸಿರಿಕಾರ್ಪರ ನರಸಿಂಹನೆ ಪರನೆಂದರುಹಿದ ಗುರುವರನಮ್ಮ5
--------------
ಕಾರ್ಪರ ನರಹರಿದಾಸರು
ರಾಘವೇಂದ್ರರ ಸ್ತೋತ್ರ ಬಂದರಾ ರಾಘವೇಂದ್ರರಾಯರು ಮಂತ್ರ ಮಂದಿರ ವೆಂಬೀ ಸ್ಥಳಕೆ ವಿಭವದಿ ಪ ಇಂದು ಭಜಕ ದ್ವಿಜ ವೃಂದಕೆ ಪರಮಾ ನಂದ ಗರಿಯಲು ಶ್ಯಂದನವೇರಿ ಅ.ಪ ಶ್ಯಂದನವೇರಿ ಧಣಂ ಧಣ ವಾದ್ಯದಲಿ ಪೌರಜನ ಸಂದಣಿಸಿತು ಆನಂದದಿ ನೋಡುತಲಿ ಪ್ರಾರ್ಥಿಪರು ಮುಗಿಯುತಲಿಕೈಯಾ ಕವಿಗೇಯಾ ಶುಭಕಾಯಾ ಸುಧೀಂದ್ರರ ತನಯಾ ಗುರುವರಮಧ್ವ ಮು- ನೀಂದ್ರರಾ ಸುಮತಾಂಬುಧಿ ಚಂದಿರ ಅತಿ ಸುಂದರ ವೃಂದಾವನದಲಿ ನಿಂದಿಹರೆಂದರಿದೊಂದಿಪರಿಗೆ ಭವ ಬಂಧವ ಬಿಡಿಸಲು 1 ಸಡಗರದಲಿ ಬಿಳಿಗೊಡೆ ಚಾಮರ ವ್ಯಜನಾದಿಗಳನು ಪಿಡಿದು ಸೇವಿಸುವ ಎಡಬಲದಲಿ ಸುಜನಾ ಸಚ್ಛಾಸ್ತ್ರ ವೇದ ಪುರಾಣ ಪ್ರವಚನ ಪಾವನ್ನ ಗುರುಗಳ ಗುಣಸ್ತವನ ಮಾಡುವಾ ವರಗಳ ಬೇಡುವಾ ಕುಣಿಕುಣಿದಾಡುವಾ ಪಾಡುವಾ ಪೊಡವಿ ನಿರ್ಜರರ ಕಡು ವೈಭವದಲಿ 2 ಮಣಿ ಮುಕುಟ ದಿಂದ ದಿ- ಗ್ವಲಯ ಬೆಳಗುತಿಹ ಚಲುವ ಮುಖದ ಮಾಟಾ ಗಳದಲ್ಲಿ ಮೌಕ್ತಿಕದ ಹಾರ ಕೇಯೂರ ನೂಪರ ಸ- ಪೊಳೆಯುತ ಭಜಕರ ಕ- ಲುಷಾಭ್ರಕೆ ಮಾರುvರೆÀನಿಸುತ ಇಳೆಯೊಳು ಪಂಡಿತ ಯಳೆಮೇಲಾರ್ಯಗೊಲಿದು ಭಕುತ ವತ್ಸಲರೆಂದೆ ನಿಸುತ3 ಮಂಗಳ ತುಂಗ ತರಂಗಿಣಿ ತೀರದಲಿ ಭಕುತ ಜ- ನಂಗಳಿಗೆ ನಿಖಿಲಾರ್ಧಂಗಳ ಸಲಿಸುತಲೀ ಪಾಲಿಸುವ ದೇವ ಸ್ವಭಾವ ಶರಣ ಸಂಜೀವ ಕರದಲ್ಲಿಗೆ ಬರುವ ಎನ್ನುತ ತುತಿಪರು ದೃಗ್ಭಾಷ್ಪವ ಸುರಿಸುತ ಮೈಮರೆಯುತ ಬಲು ನಿರ್ಮಲ ಅಂತರಂಗದಿತವ ಪದಂಗಳ ಸ್ಮರಿಪರ ಸಂಘಕೆ ಸತತ ಸುಮಂಗಳವೀಯಲು 4 ಪುರದರಸನು ತನ್ನ ಸಿರಿಪರಿವಾರದಲಿ ಚರಿಸುತ ಬರುತ ಕಾಣುತಲೆ ಗುರುವರ ಚರಣದಲಿ ಕಾಣಕೆಯನ್ನಿತ್ತು ಶಿರಬಾಗಿ ಚನ್ನಾಗಿ ಆರುತಿಯ ಬೆಳಗಿ ಬರುತಿರೆ ರಥಸಾಗಿ ತೋರುವಾ ನೋಳ್ಪರ ನಯನಕ್ಕೆ ಪರಮೋತ್ಸವಾ ಶರಣರ ವಾಂಛಿüತಗಳ ಗರಿಯುವಾ ಪೊರೆಯುವ ಧರೆಯೊಳು ಮೆರೆಯುವ 'ಶಿರಿ ಕಾರ್ಪರ ನರಹರಿಯ' ನೊಲಿಸಿರುವ ಗುರು ಪ್ರಹ್ಲಾದರು 5
--------------
ಕಾರ್ಪರ ನರಹರಿದಾಸರು
ರಾಮದೂತ ನËಮಿಭಕುತ ಕಾಮಿತದಾತ ಸುರಶೇವಿತ ಪ ಈ ಮಹಿಯೊಳೂ ಗ್ರಾಮಕೂಡ್ಲಿಗಿ ಧಾಮಮಾರುತ ಪಾಹಿಸತತಅ.ಪ ಭೂಮಿಸುತೆಯ ಕ್ಷೇಮವಾರ್ತೆಯ ರಾಮಗರುಹಿದ ಪದಕೆರಗಿದ ಹೇ ಮಹಾತ್ಮನೆ ಪ್ರೇಮದಿ ರಘು ರಾಮ ನೀಡಿದ ಬ್ರಹ್ಮನ ಪದ 1 ಇಂದು ಕುಲದಿ ಬಂದು ಕೌರವ ವೃಂದ ಮಥಿಸಿದೆಯಾ ಪಾಂಡು ತನಯ ಪೊಂದಿದಿಯಾ ನಂದಗೋಪನ ಕಂದನ ಕೃಪೆಯಾ ಪಾಲಿಸಯ್ಯಾ 2 ವ್ಯಾಸಶಿಷ್ಯ ಯತೀಶ್ವರ ತವ ಶಾಸ್ತ್ರದಿ ಮತಿಯಾ ಕರುಣಿಸಯ್ಯಾ ಶ್ರೀಶಕಾರ್ಪರ ವಾಸ ಶ್ರೀನರ ಕೇಸರಿಗೆ ಪ್ರೀಯ ಮಧ್ವರಾಯಾ 3
--------------
ಕಾರ್ಪರ ನರಹರಿದಾಸರು
ರಾಮನ ನೋಡಿರೈ ಮಂಗಳ ನಾಮನ ಪಾಡಿರೈ ಪ ಪೂಜಿತನ ಸೀತಾನ್ವಿತನ ಅ.ಪ ದಶರಥ ಗೃಹದಿ ಸುಜನರ ಸಲುಹಿ ಬೆಸಗೊಳಲಂದು ಸೀತಾವರನಾ 1 ಚಿಂತಿಸು ರಾಮನ ಶುಭಲಕ್ಷಣಗಳನೇಕ ಕರ್ಮವಿಪಾಕ ದೊಳಗೀ ವಿಷಯಾ- ಖರೆಯ ಯತಿಕುಲವರ್ಯ ಚರಣ ಸುಜನೋದ್ಧರಣ 2 ಕುಂದಣ ಮಣಿಮಯದ ಕಿರೀಟ ಯುಕ್ತಲಲಾಟ ಚಿನ್ಮಯಗಾತ್ರದಿ ಮಿನುಗುವ ರತ್ನಾಭರಣ ಜಿತರವಿ ಕಿರಣ ಹರಣ ಕರುಣಾಪೂರ್ಣ ರಿಪುಕುಲಮಥನಾ 3 ಶುಭಕಾಯಾಕವಿಜನಗೇಯಾ ಹೇಮ ಕೊಳುವ ಮನದೊಳು ಪೊಳೆವ ವೇದಾ ಮನಕತಿಮೋದಾ ಮುನಿ ಸಂಶೇವÀ್ಯ 4 ಶುಭಚರಿಯ ಬಹು ಆ ಮಂದಿರದಿ ಪಾರಾ- ಸುನಾದ ಕೇಳಲು ಮೋದ ಪೊಕ್ಕರು ಗೃಹದಿ 5 ಪೊಂದಿರೆ ಮುದವ ಪುಡಕಿದರಾಗೆ ಬಾಲವ ಹೀಗೆ ಕುಂಡಲಿಶಯನ ಶ್ರೀರಾಮನೆ ದರ್ಶನವಿತ್ತ ಲಕ್ಷ್ಮಣಸಹಿತ6 ಧರೆಯೊಳು ಬಹುಯತಿಕರ ಪೂಜಿತ ಪದಪದುಮಸ- ಧಾಮ ನಿರುತ ಶೇವಿಸುವ ಧರೆಸುರ ನಿಕರಕೆ ಕೊಡುವ ಬೇಡಿದ ವರವ ಶರಣು ಜನಕೆ ಸುರ ತರುವೆನಿಸಿದ ಸುರಪ್ರಿಯ ಕಾರ್ಪರನಿಲಯ ತರು ಪಿಪ್ಪಲಗತ ಶಿರಿನಾರಸಿಂಹನೆ ಈತ ಶ್ರೀರಘುನಾಥಾ7
--------------
ಕಾರ್ಪರ ನರಹರಿದಾಸರು
ವಂದನೆ ಮಾಡಿರೈ ವ್ಯಾಸ ಮುನೀಂದ್ರರ ಪಾಡಿರೈ ಪ ವಂದಿಸುವರ ಭವಬಂಧವ ಬಿಡಿಸಿ ಆ ನಂದವ ಕೊಡುವ ಕರ್ಮಂದಿವರೇಣ್ಯರ ಅ.ಪ ಸದ್ಗುಣ ಸಾಂದ್ರಾ ಚಂದ್ರಿಕಾದಿ ಪ್ರಬಂಧತ್ರಯ ನಿರ್ಮಿಸಿದಾ ಮತವರ್ಧಿಸಿದಾ ಸತಿ ಮೆಚ್ಚಿಸಿದಾ ಹಿಂದಕೆ ಹರಿಯನು ಸ್ತಂಭದಿ ತೋರಿದ ಕಂದ ಪ್ರಹ್ಲಾದರೆ ಬಂದಿಹರೆನ್ನುತ 1 ಕೃಷ್ಣರಾಯನಿಗೆ ದುಷ್ಟಯೋಗ ಪರಿಹರಿಸಿ ರಾಜ್ಯವಹಿಸಿ ಯ- ಥೇಷ್ಟ ದಾನಫಲಕೊಟ್ಟು ನೃಪನನುಗ್ರಹಿಸಿ ರಾಜ್ಯದೊಳಿರಿಸಿ ಶ್ರೇಷ್ಠವಾದ ಸಿಂಹಾಸನದಲಿ ಕುಳ್ಳಿರಿಸಿ ಆಜ್ಞೆಯ ತಿಳಿಸಿ ಎಷ್ಟು ಮಹಿಮರೆಂದರಿತು ಇವರ ಮನ ಮುಟ್ಟಿ ಭಜಿಪರಿಗ ಭೀಷ್ಟೆಯಗರಿವರ 2 ಸೂರ್ಯಯತಿ ಕುಲ- ವರ್ಯ ಗುರುಮಧ್ವಮ ತದಿಸದ್ವೈಷ್ಣವ ಕುಮುದಕೆ ಭಾರ್ಯಾ ಪಾವನ ಚರ್ಯ ಪರಮಮಹಿಮ ಬ್ರಹ್ಮಣ್ಯ- ತೀರ್ಥರಿಗೆ ತನಯಾ ಕವಿಜನಗೇಯಾ ಶರಣರ ಪೊರಿಯುವ ಶಿರಿಕಾರ್ಪರನರಹರಿಯ ನೊಲಿಸಿರುವ ಪರಮ ಮಹಾತ್ಮರ3
--------------
ಕಾರ್ಪರ ನರಹರಿದಾಸರು
ವರ ಹಳ್ಳೇರಾಯಾ ಮಾಂಪಾಲಯ ಪ ಕರ ಮುಗಿವೆನು ದುಮ್ಮದ್ರಿನಿಲಯ ಅ.ಪ ತರಣಿ ಕುಲತಿಲಕ ಸಿರಿರಾಮನ ಪದ ಸರಸಿಜ ಮಧುಕರ ಸುರಗಣ ಸೇವ್ಯಾ 1 ಸೋಮ ಕುಲಜ ಬಲರಾಮನನುಜನ ಪ್ರೇಮಪಾತ್ರ ಬಲಭೀಮನೆ ಕೃಪಯಾ2 ಸಿರಿಕೃಷ್ಣನೆ ಪರತರನೆಂದರುಹಲು ವಿರಚಿತ ಶಾಸ್ತ್ರ ಶ್ರೀ ಗುರು ಮಧ್ವಾರ್ಯ 3 ಯವನ ಕುಲದಿ ಭಜಿಸುವರಿಗೊಲಿದೆಯಾ ಅವನಿಸುರಾರ್ಚಿತ ಶ್ರೀ ಪವಮಾನತನಯಾ4 ಶರಣು ಜನಕೆ ಸುರತರುವೆಂದೆನಿಸಿದ ಸಿರಿಕಾರ್ಪರ ನÀರಹರಿಗತಿ ಪ್ರೀಯಾ 5
--------------
ಕಾರ್ಪರ ನರಹರಿದಾಸರು
ವಾಗ್ದೇವಿ ಭಾರತಿ ನೀಡೆನಗೆ ಸುಮತಿ ನಂದಸುತನ ಪದದಿ ಕೊಡು ರತಿ ಪ ಕಳೆದು ಮನದಿ- ಗರಿಯೆ ಬಂದು ಬೇಗ ಅ.ಪ ಇಂದು ಮೌಲಿ ಮುಖ್ಯ ಸುರಗಣ ವಂದಿತಳೆ ಎನ್ನ ಅನುದಿನ ನಂದ ಮುನಿಯ ಶಾಸ್ತ್ರವಚನ ಛಂದದಿಂದ ಪಠಣ ಶ್ರವಣಾನಂದವಾಗುವಂದದಿ ಗುರು ಗಂಧ ವಾಹನರಾಣಿ ನಿನಗೆ1 ಪೇಳಲಳವೆ ನಿಮ್ಮ ಮಹಿಮೆಯ ಕಾಲಭಿಮಾನಿ ಕೇಳುವೆ ಸುಜ್ಞಾನ ಭಕುತಿಯ ಕಾಲಕಾಲಗಳಲ್ಲಿ ಎನ್ನ ಶುಭ ಲೀಲೆಗಳನು ಪಾಡಿ ಪೊಗಳುವಂತೆ ಜನನಿ 2 ಚಾರು ಕೃಷ್ಣಾತೀರಸಂಸ್ಥಿತಾ ಉದಾರ ಚರಿತ ನೀರಜಾಸನಾದಿಸುರನುತಾÀ ಶೇರಿದ ಭಕುತರಿಗೆ ತ್ರಿದಶ ಭೂರುಹ ವೆಂದೆನಿಸಿದಂಥಾ ಪಾರ ಮಹಿಮ ಕಾರ್ಪರಸಿರಿ ನಾರಸಿಂಹನ ಸೊಸೆಯೆ ನಿನಗೆ 3
--------------
ಕಾರ್ಪರ ನರಹರಿದಾಸರು
ವಿಜಯರಾಯ ಭಜಿಸೋ ಹೇ ಮನುಜಾ ನೀ ಪ ಪಾದ ಭಜಿಸುವ ಮನುಜರ ವೃಜಿನ ವಾರಿಧಿಗೆ ಕುಂಭಜರೆನಿಸಿದ ಗುರು ಅ.ಪ ಮೊದಲು ಬೃಗುಮುನಿರೂಪದಿ ಶೀ- ಘ್ರದಿ ಪೋಗಿ ಬರಲು ಶ್ರೀಹರಿ ಲೋ- ವಿಧಿ ವಿಷ್ಣು ಶಿವರೊಳು ಪದುಮನಾಭನಕಿಂತ ಅಧಿಕರಿಲ್ಲೆಂದು ನಾ ರದ ಮುನಿಗರುಹಿದ 1 ಜಗದೊಳು ಸಕಲ ಕ್ಷೇತ್ರ ತೀರ್ಥಗಳ ಮಹಿಮೆಯ ವರ್ಣಿಸುತ ಖಗರಾಜ ಗಮನ ಶ್ರೀ ಭಗವದ್ಗುಣಗಳನ್ನು ಬಗೆ ಬಗೆ ಪದಸುಳಾದಿಗಳಿಂದ ತುತಿಸಿದ 2 ಕಾಶಿಯೊಳಗೆ ಸಂಪ್ರಾಪ್ತ ಪುರಂದರ ದಾಸರಿಂದಲಿ ಅಂಕಿತ ಶೇಷಶಯನ ಶ್ರೀನಿವಾಸ 'ಕಾರ್ಪರನರ- ಕೇಸರಿ ' ಗತಿ ಪ್ರಿಯ ದಾಸರೆಂದೆನಿಸಿದ 3
--------------
ಕಾರ್ಪರ ನರಹರಿದಾಸರು
ವೃಂದಾವನೀ ದೇವಿ ವಂದಿಸುವೆ ಶ್ರೀ ತುಳಸಿ ವಂದಾರು ಜನತತಿಗೆ ಮಂದಾರಳೆನಿಸಿರುವಿ ಸಂದೇಹವಿಲ್ಲವಿದಕೆ 1 ಅಂದು ಧನ್ವಂತರಿಯು ತಂದಿರುವ ಪೀಯೂಷ ದಿಂದ ಪೂರಿತ ಕಲಶದಿ ಇಂದಿರಾಪತಿಯ ಆನಂದ ಬಾಷ್ಪೋದಕದ ಬಿಂದು ಬೀಳಲು ಜನಿಸಿದಿ2 ಶ್ರೀ ತುಳಸಿ ನಿನ್ನನು ನಿಕೇತನದಿ ಪೂಜಿಪರ ಪಾತಕವ ಪರಿಹರಿಸುವಿ ಶ್ರೀ ತರುಣಿಪತಿಗೆ ಬಲುಪ್ರೀತಿ ವಿಷಯಳೆನಿನ್ನ ನಾ ಸ್ತುತಿಸಲೆಂತು ಜನನಿ 3 ಸರ್ವ ತೀರ್ಥಗಳೆಲ್ಲ ತರುಮೂಲದಲ್ಲಿಹವು ಸರ್ವ ವಿಬುಧರು ಮಧ್ಯದಿ ಸರ್ವ ವೇದಗಳೆಲ್ಲ ತರುಅಗ್ರಭಾಗದಲಿ ಇರುತಿಹರು ಬಿಡದೆ ನಿರುತ 4 ತುಳಸಿ ನಿಮ್ಮಯ ಲಕ್ಷದಳಗಳಿಂದಲಿ ಲಕ್ಷ್ಮಿನಿಲಯನಂಘ್ರಿಗಳರ್ಚಿಸಿ ಕಲುಷ ವರ್ಜಿತನಾಗಿ ಬಲುಬೇಗ ಶ್ರೀಹರಿಯ ಒಲುಮೆ ಪಡೆವನು ಜಗದೊಳು 5 ತುಳಸಿ ದೇವಿಯೆ ನಿನಗೆ ಜಲವೆರೆದು ಕುಂಕುಮದ ತಿಲಕವಿಡುತಲಿ ನಿತ್ಯದಿ ಲಲನೆಯರು ಪೂಜಿಸಲು ಒಲಿದಿತ್ತು ಸೌಭಾಗ್ಯ ಸಲಹುವಿಯೆ ಕರುಣದಿಂದ 6 ಮಾಧವ ಪ್ರಿಯ ತುಳಸಿ ಸಾದರದಿ ನಿನ್ನೊಳಗೆ ಶ್ರೀದೇವಿ ನಿಂದಿರುವಳು ಮೋದಮುನಿ ಶಾಸ್ತ್ರವನು ಬೋಧಿಸುವ ಬುಧಜನರ ಪಾದಸೇವೆಯ ಕರುಣಿಸು 7 ಮಿತ್ರನುದಯದಲೆದ್ದು ಚಿತ್ತನಿರ್ಮಲರಾಗಿ ಭಕ್ತಿಯಲಿ ಶ್ರೀ ತುಳಸಿಯ ಮೃತ್ತಿಕೆಯ ಧರಿಸಿದ ಮಹಾತ್ಮರನು ಕಂಡು ಯಮ ಭೃತ್ಯರಂಜುವರು ಭಯದಿ 8 ಇಂತು ಶ್ರೀತುಳಸಿ ಸೀಮಂತಿನಿಯ ಸ್ತೋತ್ರವ ನಿ- ರಂತರದಿ ಪಠಿಸುವವರ ಚಿಂತಿತ ಪ್ರದನಾಗಿ ನಿಂತು ಕಾರ್ಪರದಿ ಸಿರಿ ಕಾಂತ ನರಹರಿ ಪೊರೆವನು 9
--------------
ಕಾರ್ಪರ ನರಹರಿದಾಸರು