ಒಟ್ಟು 181 ಕಡೆಗಳಲ್ಲಿ , 45 ದಾಸರು , 167 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ದೇವ ಜಯ ದೇವ ಜಯ ಗುರು ನಾಗೇಶ ದಯಗುಣದಲಿ ನೀ ಮಾಡೊ ಭವತಾಪ ನಾಶ ದ್ರುವ ಜನ್ಮ ಮರಣಗಳೆಂಬ ಖಚ್ಚಿಖವಡಿಗಳು ನಿಮ್ಮ ನಾಮಸ್ಮರಣಿಲೆ ಓಡುದು ದುರಿತಗಳು ಬ್ರಹ್ಮಾನಂದದ ಸುಖ ಭಾಸುದು ಮನದೊಳು ನಮ್ಮ ಸ್ವಾಮಿ ನೀನೆ ಅಹುದೊ ಕೃಪಾಳು 1 ತಾಪತ್ರಯವೆಂಬುದು ಬಲು ಪೀಡಿಯ ಗುಣ ಆಶೆÀ ನೀನೆ ಪರಿಹಾರ ಮಾಡೊ ಘನ ಕರುಣ ಕೋಪತಾಪವೆಂಬುದು ತದ್ದುದುರೀಯ ಗುಣ ಕೃಪೆಯಿಂದಲಿ ಮಾಡುದು ನಿಮ್ಮ ಶ್ರಮ ನಿರ್ವಾಣ 2 ದುರಿತ ಸಂಹಾರ ಸುರಜನ ಸಹಕಾರ ಕರುಣಾಕರ ಗುರುಮೂರ್ತಿ ಮುನಿಜನ ಮಂದಾರ ತರಳ ಮಹಿಪತಿಸ್ವಾಮಿ ಘನ ಕೃಪಾಕರ ಶರಣ ರಕ್ಷಕ ಪೂರ್ಣ ನೀ ಜಗದೋದ್ಧಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಾಗಿಸಬೇಕು ಜಗದ್ಗುರುವಿನ ಕೃಪೆಯಿಂದ ಧ್ರುವ ಜಾಗಿಸದಲ್ಲದೆ ಖೂನ ಸುಗಮ ಸುಪಥದೋರದು ನಿಧಾನ ಯೋಗಿಜನರ ನಿಜಧನ ಆಗುದು ಸ್ವಾಧೀನ 1 ಜಾಗಿಸಿ ನೋಡಲು ಸ್ವಸುಖ ಬಗೆಬಗೆದೋರುತದೆ ಅನೇಕ ಅಗಣಿತಗಮ್ಯಾಲೋಲಿತ ಶ್ರೀಗುರು ಕೌತುಕ 2 ಝಗಿಝಗಿಸುವ ಜಗಜ್ಯೋತಿ ಜಾಗಿಸಿದ ಶ್ರೀ ಸದ್ಗುರುಮೂರ್ತಿ ಸಾಗಿ ಭವನಿದ್ರೆಯವಾರ್ತಿ ನೀಗಿದ ಮಹಿಪತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜೀವನ್ಮುಕ್ತನೆ ಇದ ಮಾಡು ನಿನಗುಂಟೆ ಜೋಡುದಿವಸದಿಂದಲಿ ದೃಢನಾಗಿ ಸಾಧಿಸುಕೇವಲ ಶಿವನೀನಾಗುವಿ ಆಗುವಿ ಪ ಏರಿಸು ವಾಯುವನು ಏರಿಸಿದ ಬಳಿಕಪೂರಿಸು ಕುಂಭವನು ಘಳಿಗಿಂತಿರಲಲ್ಲಿಭೇರಿಯ ಕಹಳಾರವ ಮೃದಂಗವಸಾರಿಯೆ ಕೇಳುತ ಶ್ರಮವನು ಹರಿಸುತ 1 ಆರು ನೆಲೆಗೆ ಮುಟ್ಟಿನಿಲ್ಲು ನಿಂತ ಬಳಿಕಕಾರಣ ಮೃಡನಾಳಪೊಕ್ಕು ಮರವೆಂದು ಕಳೆದಿಕ್ಕುವಾರಿಯಮೃತಧಾರೆ ತ್ರಿವೇಣಿಯಸಾರಸನದಿಯಲಿ ಮುಳುಗುತ ಮುಳುಗುತ 2 ಚಂದ್ರಮಂಡಲ ಎದುರಲಿ ಇರಲು ನೋಡುತಲಿಮುಂದೆ ಜೋತಿರ್ಮಯವಿರಲು ಬ್ರಹ್ಮವೆ ತಾನಿರಲುಇಂದ್ರಾದಿಗಳಿಗಳವಡದಿಹ ಸ್ಥಾನವಾನಂದದೆ ಎರೈ ಗುರು ಕೃಪೆಯಿಂದಲಿ 3 ಕರ್ಮ ಅವಿದ್ಯೆಯನುಳಿದುತಾಮರ ಸಾಧಿಪ ನಂದದಿ ಬೆಳಗುತ4 ನಿತ್ಯ ಆಗುವುದು ತಥ್ಯಾಯೋಗಿ ಜನಕೆ ಇದು ಪಥ್ಯಾ ಸತ್ಯವಿದು ಸತ್ಯಭೋಗೈಶ್ವರ್ಯದ ಮುಕ್ತಿಗಧಿಪತಿಯಾಗು ಚಿದಾನಂದ ಗುರು ನೀನಾಗಿಯೆ5
--------------
ಚಿದಾನಂದ ಅವಧೂತರು
ತನ್ನೊಳು ತಿಳಿಯೊ ಪ್ರಾಣಿ ಪುಣ್ಯಸಾಧನಿ ಧ್ರುವ ತನ್ನಿಂದಲೆ ತಾ ನೋಡುವ ಖೂನ ಚೆನ್ನಾಗ್ಯದನುಭವ ಜ್ಞಾನ ಸನ್ಮತ ಸುಖದೋರುವ ಚಿದ್ಫನ ಭಿನ್ನವಿಲ್ಲದೆ ನೋಡುವದುನ್ಮನ 1 ಮೂಲವಿಡಿದು ನಿಜ ನೋಡುವದರಿಂದ ಮ್ಯಾಲೆ ದೋರುತಲದೆ ಬ್ರಹ್ಮಾನಂದ ಕೀಲು ತಿಳಿದರೆ ಸದ್ಗುರು ಕೃಪೆಯಿಂದ ಒಲಿದು ಬಾಹನು ತಾ ಮುಕುಂದ 2 ಸೆರಗವಿಡಿದು ನೋಡುಲು ಗುರುಮುಖ ಮೂರು ಲೋಕಕ ಬಲು ಪರಮ ವಿವೇಕ ತರಳ ಮಹಿಪತಿ ಆತ್ಮಾನುಭವ ಸುಖ ದೋರುತಲದೆ ತಾ ಘನ ಕೌತುಕ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಪ್ಪು ಕ್ಷಮೆ ಮಾಡೊ ಕೃಪೆಯಿಂದ ನೋಡೊ ಧ್ರುವ ನೀನೆ ದಯಾನಿಧಿ ನಾನೆ ಅಪರಾಧಿ ಖೂನ ದೋರು ಹಾದಿ ಸ್ಥಾನ ನಿಜಗಾದಿ 1 ಅನಾಥನೆಂದು ನೋಡಿ ಸುನಾಥ ಎನ್ನ ಮಾಡಿ ಸ್ವಾನಂದ ಸುಖ ನೀಡಿ ಮನ್ನಾಥ ನಿಜಗೂಡಿ 2 ಹೆಳಲಾರೆ ಬಹಳ ಕೇಳೋ ನೀ ದಯಾಳ ತಾಳಿ ಎನ್ನ ತೋಳ ಬಾಳ ವಿಶ್ವಪಾಲ 3 ಸೇವೆ ಇದೆ ನಮ್ಮ ಭಾವಿಸುದು ನಿಮ್ಮ ಪಾವನಗೈಸು ವರ್ಮ ಸುವಿದ್ಯ ಪರಬ್ರಹ್ಮ 4 ಬಂದ ಮ್ಯಾಲೆ ಶರಣಕುಂದಬ್ಯಾಕೊ ಪೂರ್ಣ ಕಂದ ಮಹಿಪತಿ ಗುಣ ಚಂದಮಾಡೊ ಕರುಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಪ್ಪು ಕ್ಷಮೆ ಮಾಡೋ ಕೃಪೆಯಿಂದ ನೋಡೋ ಪ ನೀನೆದಯಾನಿಧಿ ನಾನು ಅಪರಾದಿ ಖೂನದೋರೋ ಹಾದಿ ಸ್ಥಾನ ನಿಜಾನಾದಿ 1 ಅನಾಥನೆಂದು ನೋಡಿ ಸನಾಥನೆನ್ನಮಾಡಿ ಸ್ವಾನಂದ ಸುಖನೀಡಿ ಮನ್ನಾಥ ನಿಜಗೂಡಿ2 ಹೇಳಲಾರೆ ಬಹಳಾ ಕೇಳೋನೀದಯಾಳಾ ತಾಳಿಯನ್ನ ತೋಲಾಬಾಲವಿಶ್ವಷಾಲಾ 3 ಸೇವಿ ಇದೇನಮ್ಮ ಭಾವಿಸುದು ನಿಮ್ಮ ಪಾವನ್ನಗೈಸು ವರ್ಮಾ ಸುನಿತ್ಯ ಪರಬ್ರಹ್ಮಾ 4 ಬಂದ ಮ್ಯಾಲೆ ಶರಣಾ ಕುಂದವ್ಯಾಕೋ ಪೂರ್ಣ ಕಂದ ಮಹಿಪತಿಗುಣಾ ಛಂದ ಮಾಡೋಕರುಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಾತ್ವಿಕ ಹಿನ್ನೆಲೆಯ ಹಾಡುಗಳು ಪಾದಪೂಜೆಯನು ಮಾಡುವೆ ರಾಮಾ ಪಾದಪೂಜೆಯನು ಪ ಕಾಯಾ ವಾಚದಲೀ ಮನಸಿನಿಂದ ನ್ಯಾಯ ಮಾರ್ಗದಲೀಅ.ಪ. ಘನ ಭಕ್ತಿರಸವೆಂಬ ನೀರನು ತಂದು ತನುವೆಂಬ ಘಟದಿಂದ 1 ವರಭೂತದಯೆಯೆಂಬ ಗಂಧವ ಪೂಸಿ ಪರಮ ಸುಕೃತಿಯಿಂದ 2 ದಾನಧರ್ಮಗಳೆಂಬ ಹೂವನು ಹಾಕಿ ವೀಣಾದಿ ಸ್ವರದಿಂದ 3 ಸತ್ಯ ಜ್ಞಾನಗಳೆಂಬ ಮಂತ್ರವ ಹÉೀಳಿ ಅತ್ಯಂತ ಕೃಪೆಯಿಂದ 4 ಸ್ವಾರ್ಥ ತ್ಯಾಗವು ಯೆಂಬ ಆರತಿ ಮಾಡಿ ನರ್ತನಸ್ತುತಿಯಿಂದ 5 ದೇಹವಾಹುತಿಕೊಟ್ಟು ಅರ್ಪಣೆ ಮಾಡಿ ಮೋಹದುಪೇಕ್ಷೆಯಿಂದ6 ಭಕ್ತರಾಕೃತಿಯಿಂದ 7 ಜನುಮಕ್ಕೆ ಬರದಂತೆ ಬೇಡುವೆ ನಿಂದು ತನುಬಂಧ ಹರಿವಂತೆ 8 ಪನ್ನಗಶಯನನನ್ನು ಪೂಜಿಪೆನಿಂದು ಚನ್ನಕೇಶವನನ್ನು 9
--------------
ಕರ್ಕಿ ಕೇಶವದಾಸ
ತಿಳಿದುಕೊಳ್ಳಿ ಖೂನ ಬಲ್ತು ನಿಜ ಜ್ಞಾನ ಧ್ರುವ ಹಾದಿ ಅದೆ ಹಿಂದಗಾಧ ಅದೆ ಮುಂದೆ ಭೇದಿಸಿನ್ನು ತಿಳಿದುಕೊಳ್ಳಿ ಗುರುಕೃಪೆಯಿಂದ 1 ಲಬ್ಧ ಅದೆ ಹಿಂದೆ ಶಬ್ದ ಅದೆ ಮುಂದೆ ಲಬ್ಧವಾಗಿ ಕೇಳಿಕೊಳ್ಳಿ ಗುರುದಯದಿಂದ 2 ಅರ್ಥ ಅದೆ ಹಿಂದೆ ಸ್ವಾರ್ಥ ಅದೆ ಮುಂದೆ ಅರ್ತು ಇದೆ ಕೇಳಿಕೊಳ್ಳಿ ಗುರು ಜ್ಞಾನದಿಂದೆ 3 ಗುಂಭ ಅದ ಹಿಂದೆ ಡಂಭ ಅದೆ ಮುಂದೆ ಇಂಬು ಇದೇ ತಿಳಿದುಕೊಳ್ಳಿ ಗುರು ಜ್ಞಾನದಿಂದೆ 4 ನೋಟ ಅದೆ ಮುಂದೆ ಕೂಟ ಅದೆ ಹಿಂದೆ ನೀಟವಾಗಿ ಗುರುವಿಗೆ ಕೇಳಬೇಕು ಒಂದೆ 5 ಮನವು ಅದೆ ಮುಂದೆ ಘನವು ಅದೆ ಹಿಂದೆ ತನುವಿನೊಳು ಮಾಡಿಕೊಳ್ಳಿ ಖೂನ ನಿಜ ಒಂದೆ 6 ದೇಹ್ಯ ಅದೆ ಮುಂದೆ ಸೋಹ್ಯ ಅದೆ ಹಿಂದೆ ಸೋಹ್ಯ ದೋರಿಕೊಡುವ ಮಹಿಪತಿ ಗುರು ತಂದೆ7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿಸು ದಾಸನ ನಿರುತ ನಿಲಯ ಕರುಣಾರ್ಣವ ತಿಳಿಯದಾಡಿದ ವಚನ ಹೊಲೆಗಲಿಸದಿಳೆಯೊಳು ಪ ಗುಪಿತದಿಂ ತವಪಾದ ಜಪಿಸಿ ಆನಂದಿಸದೆ ಅಪರಾಧಿಯಾಗಿರುವೆ ಕೃಪೆಯಿಂದ ಕ್ಷಮಾಮಾಡಿ 1 ಬಿನುಗುಮತಿಗೈದಂಥ ಘನತಪ್ಪುಗಣಿಸದೆ ಚಿನುವiಯಾತ್ಮನೆ ಬೇಗ ಕನಿಕರದಿ ಮೊರೆ ಕೇಳಿ 2 ಸುಲಭಭಜಕರಿಗತಿ ಚೆಲುವ ಶ್ರೀರಾಮಯ್ಯ 3
--------------
ರಾಮದಾಸರು
ತೇಲಿದೆ ಅಯ್ಯಾ ತೇಲಿದೆ ಪ ತೇಲಿಬಾರದಂಥ ಸುಳಿಯ ಮಡುವುಮುಳುಗಿ ನೀಲಶಾಮನ ಪಾದಕಮಲಕರುಣದಿಂದ ಅ.ಪ ಪಾರಾವಾರಿಲ್ಲದ ಮಡುವು ಕಾಲು ಜಾರಿ ಬಿದ್ದಿದ್ದೆ ತಪ್ಪಿದಡವು ಬಲು ಮೇರೆದಪ್ಪಿದ ತೆರೆ ಸೆಳವು ಉಲಿ ದ್ಹಾರಿಬರುವ ಜಲಚರವು ಆಹ ಮೀರಿದಂಧಕಾರ ನೀರಿನ ಸುಳಿಯೊಳು ಘೋರಬಡುತಲಿರ್ದೆ ಮುಳುಮುಳುಗೇಳುತ 1 ತಂಡತಂಡದಿ ಒದಗುವ ಬಲು ಗಂಡಸುಳಿಯು ತಿರುಗುವ ಒಳ ಗೊಂಡ ಮತ್ಸ್ಯಮಕರಿಭಯವ ಆಹ ಕಂಡು ಕಾಣದೆ ಬಿದ್ದು ಗುಂಡಿಗೊಡೆದು ನಾನು ಬೆಂಡಾದೆ ಕಂಗೆಟ್ಟು ಮುಳುಮುಳುಗೇಳುತ 2 ಹಿಂದಕ್ಕೆ ಏನಾದದ್ದಾಯ್ತು ಶ್ರೀಶ ಮುಂದೆ ಎನ್ನಗೆ ಇಂಥ ಹೊತ್ತು ಈಶ ಎಂದೆಂದು ತರದಿರು ಮತ್ತು ಕೇಶ ಕಂದನ ಸನ್ಮಾರ್ಗಕ್ಹೊತ್ತು ಆಹ ಸಿಂಧುಶಯನ ಎನ್ನ ತಂದೆ ಶ್ರೀರಾಮ ನಿನ್ನ ಬಂಧುರಂಘ್ರಿಯ ಕೃಪೆಯಿಂದ ನಾ ಉಳಕೊಂಡೆ 3
--------------
ರಾಮದಾಸರು
ತೊರೆದು ಪೋಗುವುದುಚಿತವೇ | ಶ್ರೀ ಗುರುವರ ಹರಣ ನೀಗುವುದುಚಿತವೇ ಪ. ಕಮಲ ನಂಬಿ ಇರುವಂಥ ತರಳೆಯ ಜರಿದು ಮೋಸದಿ ಇಂತು ಅ.ಪ. ಆರನಾ ಪೂಜಿಸಲಿ | ಪರಿಪರಿಯಿಂದ ಆರನಾ ಸ್ತುತಿಗೈಯ್ಯಲಿ | ಪೇಳೆನ್ನ ಗುರುವೆ ತೋರದು ಮನಸಿಗೆ ಬೇರೊಂದು ಮತಿ ಇನ್ನು ಕಾರುಣ್ಯಮೂರ್ತಿ ಮತ್ತಾರ ಸೇವಿಸಲಿನ್ನು ಧಾರುಣಿಯೊಳ್ ನಿಮ್ಮ ಹೊರತಿ ನ್ನಾರು ಕಾಯುವರಿಲ್ಲವೆಂದು ಸೇರಿದವಳನು ಬಿಟ್ಟು ಶ್ರೀ ಗುರು ಮಾರನಯ್ಯನ ಪುರಕೆ ಪೋಪರೆ 1 ತುಪ್ಪ ಸಕ್ಕರೆ ಸವಿದಾ | ಶುಭತನುವಿನ್ನು ಒಪ್ಪವಾಯಿತೆ ಶಿಖಿಗೆ | ಕ್ಷಣ ಮಾತ್ರದಲ್ಲಿ ಅಪ್ಪಾವು ಅತಿರಸ ಮೆಲ್ಲುವ ಇಚ್ಛೆಯು ತೃಪ್ತಿಯಾಯಿತೆ ಪೇಳಿ ಅಪ್ಪಯ್ಯ ನಿಮಗಿನ್ನು ಅಪ್ಪ ಅಮ್ಮ ಸರ್ವಬಳಗವು ತಪ್ಪದಲೆ ನೀವೆಂದು ನಂಬಿದೆ ಒಪ್ಪಿಕೊಂಡೊಂಬತ್ತು ವರುಷವು ಇಪ್ಪ ರೀತಿಯ ಬಯಲು ಮಾಡಿ2 ಕಡುಕೃಪೆಯಿಂದಲಿ | ಪೇಳಿದ ಗೋಪ್ಯ ಒಡಲೊಳು ನೆನೆಯುತಲಿ | ಕುಣಿದಾಡುತಿದೆ ಒಡಲೊಳು ದೃಢಭಕ್ತಿಯೊಳ್ ನಂಬಿ ಬಿಡದೆ ನಿಮ್ಮಡಿಗಳು ನಡುವೆ ಬಂದೆಡರುಗಳ್ ಕಡೆಹಾಯ್ದು ಮಿಡುಕದೆ ಅಡಿಗಡಿಗೆ ಬೆಂಬಿಡದೆ ಚರಣವ ಪಿಡಿದು ಕೇಳಲು ಅಭಯವಿತ್ತ ನುಡಿಗಳೆಲ್ಲವು ಎತ್ತ ಪೋಯಿತೊ ಕಡಲಶಯನನ ಮಾಯವಕಟಾ 3 ಹಿಂದೊಬ್ಬರನು ಕಾಣೆನೊ | ನಿಮ್ಮಂದದಿ ಮುಂದೊಬ್ಬರನು ಕಾಣೆನೊ | ಈ ಕರುಣದವರ ಒಂದೊಂದು ಗುಣ ಗಣ ಬಂದು ಸ್ಮರಣೆ ಮನಕೆ ಕಂದಿ ಕುಂದಿಸುತಿದೆ ನೊಂದು ಬೆಂದು ಪೋದೆ ಚಂದವೇ ಇದು ಪೋಪ ತೆರವು ತಂದೆ ಸೈರಿಸಲಾರೆ ಗುರುವರ ತಂದೆ ಮುದ್ದುಮೋಹನರೆನಿಸಿದ ಸುಂದರಾತ್ಮಕ ಸುಗುಣಪೂರ್ಣ 4 ಎನ್ನಂತೆ ಬಳಲುವರು | ನಿಮ್ಮಯ ಶಿಷ್ಯ ರುನ್ನಂತೆ ಇರುತಿಹರೊ | ಬಹು ಭಕ್ತಿ ಉಳ್ಳವರು ಮನ್ನಿಸುತವರ ಸಂಪನ್ನ ಸಲಹಬೇಕು ಬಿನ್ನಪವಿದು ಕೇಳು ಮನ್ನಿಸು ಕೃಪಾಳು ಇನ್ನು ಸೈರಿಸೆ ಸೈರಿಸೆನು ನಿಮ್ಮ ಘನ್ನ ಮೂರ್ತಿಯ ಮನದಿ ತೋರೈ ಇನ್ನು ಗೋಪಾಲಕೃಷ್ಣವಿಠ್ಠಲನು ಭವ 5
--------------
ಅಂಬಾಬಾಯಿ
ತ್ರಾಹಿ ತ್ರಾಹಿ ತ್ರಾಹಿ ಎನ್ನಿ ಕೈಯ ಮುಗಿದೊಮ್ಮೆ | ಕೈ ... ತ್ರಾಹಿ ತ್ರಾಹಿ ತ್ರಾಹಿ ಎನ್ನಿ ಮನದಲಿನ್ನೊಮ್ಮೆ ಧ್ರುವ ಪುಣ್ಯಕ್ಷೇತ್ರವಹುದಿದು ಸಾರವಾಡಗ್ರಾಮ | ಸಾ... ಕಣ್ಣಾರೆ ಕಂಡು ಯಾತ್ರೆಗೆ ಬಾಹುದು ಬ್ರಹ್ಮಸ್ತೋಮ | ಬಾ... ಸಣ್ಣ ದೊಡ್ಡವರಿಗೆಲ್ಲ ಭಾಸುದು ಸಂಭ್ರಮ | ಭಾ... ದಣಿವು ಹಿಂಗಿ ದೋರುತಿಹುದು ಆನಂದೊಬ್ರಹ್ಮ 1 ಧರೆಯೊಳಧಿಕವಾದ ಕ್ಷೇತ್ರವಿದೆ ಕಾಶಿ | ಕ್ಷೇ... ಹರಿಯುತಿಹುದು ನೋಡಿ ಙÁ್ಞನ ಗಂಗೆಯು ಸೂಸಿ | ಙÁ್ಞ... ಸ್ಮರಣಿಯಿಂದ ಹರಿ ಸೇವ್ಯಾಹುದು ಪಾಪದರಾಶಿ | ಪಾ... ಗುರು ವಿಶ್ವೇಶ್ವರ ತಾರಿಸುತಿಹ ಕರುಣಿಸಿ 2 ಸರ್ವ ತೀರ್ಥ ಮಿಂದ ಫಲ ಬಾಹುದಿಲ್ಲೆ ನೋಡಿ | ಬಾ... ಪೂರ್ವ ಕರ್ಮಾದಿಗಳೆಲ್ಲ ಹೋದವಿಲ್ಲೆ ನೋಡಿ | ಹೋ... ಸರ್ವರು ಅರಿತು ನೀವು ಇದೆ ಯಾತ್ರೆಯ ಮಾಡಿ | ಇ... ನಿರ್ವಾಣ ಪರ್ವಣೀಯ ಫಲ ಬಾಹುದು ಕೈಗೂಡಿ3 ಪುಣ್ಯಗೈದ ವಿಶ್ವನಾಥ ಸತಿಸಹಗೂಡಿ | ಸ... ಜನುಮಾಂತ್ರದ ದೋಷಗಳದಿಲ್ಲೆ ನೋಡಿ | ಗ... ಘನ ಸುಖ ಪಡೆದುನುಮಾನ ಈಡ್ಯಾಡಿ | ಈ... ವರ್ಣಿಸಲಾಗುದು ಸ್ತುತಿ ಸ್ತವನ ಪಾಡಿ 4 ಮನವಿಟ್ಟು ಕೇಳಿ ಸ್ತುತಿ ಭಾವ ಭಕ್ತಿಯಿಂದ | ಭಾ... ಪುಣ್ಯಗೈತೆನ್ನ ಜೀವ ಅನುಭವದಿಂದ | ಅ... ಉನ್ಮನವಾಗಿ ದೋರಿತು ಬ್ರಹ್ಮಾನಂದ | ದೋ... ಧನ್ಯವಾದ ಮಹಿಪತಿ ಗುರು ಕೃಪೆಯಿಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತ್ರಾಹಿ ತ್ರಾಹಿ ಶ್ರೀಗುರು ಅವಧೂತ ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಸದ್ಗುರು ದೀನನಾಥ ಧ್ರುವ ತಪ್ಪು ಕ್ಷಮೆಯ ಮಾಡೊನೀ ಸ್ವಾಮಿ ನಮ್ಮ ಕೃಪಾಸಿಂಧು ಸದ್ಗುರು ಪರಬ್ರಹ್ಮ ಪಾಪಿ ದುರಾಚಾರಿಯು ನಾಪರಮ ಕೃಪೆಯಿಂದ ಕಾವದು ದಯನಿಮ್ಮ 1 ಗುಣದೋಷ ನೋಡದಿರೊ ಶ್ರೀಹರಿ ದುರಿತ ಕೋಟಿಗಳ ಸಂಹಾರಿ ನೀನಹುದೊ ಬಡವನಾಧಾರಿ ಅನುದಿನ ಕಾಯೊ ನೀ ಪರೋಪರಿ 2 ಒಮ್ಮೆ ಬಂಧನವ ಬಿಡಿಸೊ ಸಮ್ಯಕ ಙÁ್ಞನ ಸಾರದೊಳು ಕೂಡಿಸೊ ನಿಮ್ಮದಾಸ ಮಹಿಪತಿಯೆಂದೆನಿಸೊಬ್ರಹ್ಮಾನಂದದೊಳು ನಲಿದಾಡಿಸೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವನ ನೆರೆನಂಬಿರೊ ಶ್ರೀವರ ವೇಲಾಪುರಿಯ ಚೆನ್ನಿಗನ ಪ ಕರೆಯರಿಗೊರಳಭವನ ಕೃಪೆಯಿಂದ ದಶಗ್ರೀವ ನೆರೆಭಾಗ್ಯಪಡೆದು ಗರ್ವದೊಳಿರಲು ಅರೆಯಟ್ಟಿ ಶಿರಗಳ ಕುಟ್ಟಿಹಾಕಿ ತನ್ನ ಮೊರೆಹೊಕ್ಕ ವಿಭೀಷಣಗೆ ಪಟ್ಟಗಟ್ಟಿದ 1 ಭಾಗೀರಥಿಯ ತಾಳ್ದ ಮಹೇಶನ ತಲೆ ವಾಗಿಲ ಕಾಯಿಸಿಕೊಂಡಿಹ ಬಾಣನ ತಾಗಿ ತೋಳಕಡಿದ ಸುರನ ಕುಮಾರತಿಗೆ ಭೋಗಿಸುವಂತೆ ತಮ್ಮಗೆ ಕೈವರ್ತಿಸಿ ಕೊಟ್ಟ2 ಲೋಕದೊಳಜಭವಾದಿಗಳಿಂದ ಉಬ್ಬಿದ ಅ- ನೇಕ ರಕ್ಕಸರನೊಟ್ಟಿಗೆ ತಾಹೆನು- ತಾ ಕೊಟ್ಟ ವರವನೆ ಶಿರಮುಟ್ಟಿ ಕೊಂಡಾ ಕರು ಣಾಕರ ವರ ವೇಲಾಪುರಿಯ ಚೆನ್ನಿಗನ 3
--------------
ಬೇಲೂರು ವೈಕುಂಠದಾಸರು
ದೇವಾದಿ ದೇವಗೆಭಕ್ತ ಸಂಜೀವಗೆಶ್ರೀ ವಿಘ್ನೇಶ್ವರಗೆ ಜಯವೆಂದುಜಯವೆಂದು ಪಾರ್ವತೀಪುತ್ರಗೆಪಾವನಗಾತ್ರಗೆಫಣಿಯಜ್ಞ ಸೂತ್ರಗೆಹೂವಿನಾರತಿಯ ಬೆಳಗಿರೆ 1 ಸಿಂಧುರಗಮನೆಯರುಕುಂದಾಭರದನೆಯರುಇಂದುಶೇಖರಗೆ ಜಯವೆಂದುಜಯವೆಂದು ಇಂದ್ರಾದಿವಂದ್ಯಗೆನಿರ್ಜಿತಚಂದ್ರಗೆ ಸದ್ಗುಣಸಾಂದ್ರಗೆಕುಂದಣದಾರತಿಯ ಬೆಳಗಿರೆ 2 ವಾರಣದವನೆಗೆಧೀರಹೇರಂಬಗೆರಾವಣಾಸುರನ ಜಯಿಸಿದಜಯಿಸಿದಶರಣ ಮಂದಾರಗೆಶರಧಿ ಗಂಭೀರಗೆಕೌಸ್ತುಭಹಾರಗೆಮೇರುವೆಯಾರತಿಯ ಬೆಳಗಿರೆ 3 ಸುರರು ಹೂಮಳೆಗರೆಯೆತರುಣಿಯರ್ಪಾಡಲುಸುರದುಂದುಭಿ ಮೊಳಗೆ ಜಯವೆಂದುಜಯವೆಂದುಸಿಂಧುರವರ್ನಗೆಶೂರ್ಪಸುಕರ್ನಗೆಸರ್ವತ್ರಪೂರ್ಣಗೆಕುರುಜಿನಾರತಿಯ ಬೆಳಗಿರೆ 4 ಪಂಕಜಾಂಬಿಕೆಯರುಭೋಂಕನೆ ಪಾಡಲುಶಂಕರನ ಪುತ್ರ ಜಯವೆಂದುಪಾವನವೇಷಗೆವರದ ಗಣೇಶಗೆಕುಂಕುಮದಾರತಿಯ ಬೆಳಗಿರೆ 5 ರಮ್ಯವಾದಲತಿಗೆಯರಸವ ಪಾದಕೆ ತೊಡೆದುಕಮ್ಮೆಣ್ಣೆಯನು ಕಂಠಕನುಲೇಪಿಸಿಸುಮ್ಮಾನದಿಂದ ಪಟವಾಸ ಚೂರ್ಣವತಳಿದುನಿಮ್ಮ ಪೂಜಿಸುವೆನು ಗೌರಿದೇವಿ 6 ವರಧೂಪದೀಪ ಪರಿಪರಿಯ ನೈವೇದ್ಯ ಭಾ-ಸುರ ಸುತಾಂಬೂಲ ಸೀಗುರಿದರ್ಪಣನಿರುಪಮ ಛತ್ರ ಚಮರಾದಿ ಸೇವೆಯನು ಸ್ವೀ-ಕರಿಸಿ ಪಾಲಿಸೆ ಎನ್ನ ಗೌರಿ ದೇವಿ ಜಯ 7 ಇಂತು ಪರಿಪರಿಯ ರಾಜೋಪಚಾರಗಳಿಂದಸಂತತವು ನಿಮ್ಮ ಪಾದವ ಪೂಜಿಸಿನಿಂತು ಕರವನೆ ಮುಗಿದು ಧ್ಯಾನಿಸುತ ನಲಿನಲಿದುಸಂತಸದಿ ನಿಮ್ಮ ಸ್ತುತಿಸುವೆನು ಗೌರಿ ಜಯ 8 ಮತ್ತೇಭಗಮನೆಗೆ ಮಾಹೇಂದ್ರಸನ್ನುತೆಗೆಅತ್ಯಂತ ಪರಮ ಪಾವನ ಚರಿತೆಗೆನಿತ್ಯ ಸೇವೆಯನು ಮಾಡುವರ ರಕ್ಷಿಸುವಂಥಪ್ರತ್ಯಕ್ಷಮೂರ್ತಿ ಶ್ರೀಗೌರಿ ನಿಮಗೆ ಜಯ9 ಕಲಕೀರವಾಣಿಗೆ ಕಾಳಾಹಿವೇಣಿಗೆಕಲಧೌತಕಮಲ ಶೋಭಿತಪಾಣಿಗೆನಳಿನದಳನೇತ್ರೆಗೆ ನಾರಾಯಣೆಗೆ ನಮ್ಮ-ನೊಲಿದು ರಕ್ಷಿಸುವಂಥಾ ಶ್ರೀಗೌರಿಗೆ ಜಯ 10 ಕುಂಭಸಂಭವನುತೆಗೆ ಜಂಭಾರಿಪೂಜಿತೆಗೆರಂಭಾಸುನರ್ತನಪ್ರಿಯೆಗೆ ಶಿವೆಗೆರಂಭೋರುಯುಗಳೆಗೆ ಬಿಂಬಾಧರೆಗೆ ನಮ್ಮಬೆಂಬಿಡದೆ ರಕ್ಷಿಸುವ ಗಿರಿಜಾತೆಗೆ ಜಯ 11 ಮುತ್ತೈದೆತನಗಳನು ನಿತ್ಯಸಂಪದಗಳನುಉತ್ತಮಾಂಬರ ಛತ್ರಚಾರಮವನುಅತ್ಯಂತ ಪ್ರೀತಿಯಿಂದಿತ್ತು ರಕ್ಷಿಸಿ ಭಕ್ತವತ್ಸಲೆ ಶ್ರೀ ಗೌರಿದೇವಿ ತಾಯೆ12 ಎಂದೆಂದು ಈ ಮನೆಗೆ ಕುಂದದೈಶ್ವರ್ಯವನುಚಂದವಾಗಿಹ ಪುತ್ರ ಪೌತ್ರರನ್ನುಸಾಂದ್ರಕೃಪೆಯಿಂದಿತ್ತು ಸಲಹೆ ಕೆಳದಿಯ ಪುರದಿನಿಂದ ಶ್ರೀ ಪಾರ್ವತಾದೇವಿ ತಾಯೆ ಜಯ 13
--------------
ಕೆಳದಿ ವೆಂಕಣ್ಣ ಕವಿ