ಒಟ್ಟು 435 ಕಡೆಗಳಲ್ಲಿ , 62 ದಾಸರು , 303 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣಾ - ಶ್ರೀಕೃಷ್ಣಾ ಪ ಕೃಷ್ಣ ಕೃಷ್ಣ ಹರಿವೃಷ್ಟಿ ಕುಲೋದ್ಭವಸೃಷ್ಟಿ ಕರ್ತ ಹೃತ್ಪುಷ್ಕರ ನಿಲಯ ಅ.ಪ. ವಲಲ ಸಂರಕ್ಷಕ | ಅಲವ ಭೋದನುತಕಲಿಮಲ ಕಲುಷಹ | ನಳಿನೇಕ್ಷಣಪಾಹಿ 1 ನಂದನ ಕಂದ ಮು | ಕುಂದನೆ ಮಾಧವಸಿಂಧು ಶಯನ ಕೃಷ್ಣ | ಮಂದರೋದ್ಧಾರಿ 2 ಕರ | ಪರಿಗ್ರಹಿಸಿದನೇ 3 ಚಿತ್ತಜಾರಿ ಸಖ | ವಿತ್ತವನೊಲ್ಲೆನೊಭೃತ್ಯನ ಗೈ ಸ | ರ್ವೋತ್ತಮ ದೇವ 4 ಪಾಪಿಯು ಎನೆ ನಾ | ಶ್ರೀಪತಿ ನಿನ್ನನುನಾಪೊಂದಲು ಆ | ಪಾಪೆಲ್ಲಿ ಹುದೋ 5 ಕಾಮಪಿತನೆ ಸ | ದ್ಭೂಮ ಗುಣಾರ್ಣವಪಾಮರ ಮನುಜನ | ಪ್ರೇಮದಿ ಸಲಹೋ6 ಶಿರಿ ಸಹ ಗುರು ಗೋ | ವಿಂದ ವಿಠಲ ಹೃತ್‍ಸರಸಿಜ ಪೀಠದಿ | ದರುಶನ ವೀಯೋ7
--------------
ಗುರುಗೋವಿಂದವಿಠಲರು
ಕೃಷ್ಣಾ ಎಣಿಕ್ಯಾಕೈಯ್ಯ ನಮ್ಮ ಕೂಡ ತುಟ್ಟಿ ಮಿಸುಕಬಾರದು ನೋಡಬ್ಯಾಡ ಇಷ್ಟರಮೇಲೆ ತಿಳಿಯದ ನಾ ಮೂಢ 1 ಅಂದು ಏನಾಗಿತ್ತೈಯ್ಯ ನಿಮ್ಮ ಬುಧ್ದಿ ಬಂದು ಗೊಲ್ಲರೊಡನೆ ಕೂಡ್ಯಾಕಿದ್ದಿ ಸಂಧಿಸ್ಯವರುಚ್ಚಿಷ್ಟವೆಂದು ನೀ ಮೆದ್ದಿ ಇಂದು ಬ್ಯಾರೆ ನೋಡಲಿಕ್ಕೆ ಮರದ ಸುದ್ದಿ 2 ಕುಬ್ಜೆ ಕೂಡಿಕೊಂಬಾಗ ನೋಡಲಿಲ್ಲಿ ನಿಜಪದಕ ಯೋಗ್ಯಳ ಮಾಡಲಿಲ್ಲಿ ಅಜಮಿಳನೆಷ್ಟೆಂದು ಅರಿಯಲಿಲ್ಲಿ ಸೋಜಿಗೆಲ್ಲಾನು ನಿಮ್ಮದು ನಾ ಬಲ್ಲೆ 3 ಸುಮ್ಮನಿರಬೇಕೆನ್ನ ನೀ ಕೂಡಿಕೊಂಡು ನಿಮ್ಮ ಮಾತು ಒಡಿಯದು ಉದ್ದಂಡು ಇಮ್ಮನಾಗದಲ್ಲಿಂದ ಮನಗಂಡು ಬ್ರಹ್ಮಾನಂದ ಕೊಂಡಾಡುವೆ ಘನನುಂಡು 4 ಹಿಂದೆ ಭಕ್ತರೇನು ತಾಂ ಕೊಟ್ಟರಯ್ಯ ಇಂದು ನಾ ಕೊಡುವದೇನು ಹೇಳಯ್ಯ ಕಂದ ಮಹಿಪತಿ ನಾ ನಿಮ್ಮ ನಿಶ್ಚಯ ಎಂದು ಬಿಡದೆ ಸಲಹೊ ನೀ ನಮ್ಮಯ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಷ್ಣಾ ಎನ್ನ ಕಷ್ಟ ಹರಿಸೊ ಜಿಷ್ಣು ಸಾರಥಿಯೆ ಪ ಪಾದ ಮುಟ್ಟಿ ಭಜಿಸುವರ ಇಷ್ಟಾರ್ಥಗಳನೀವೆ ಸೃಷ್ಟಿಗೊಡೆಯ ದೇವ ಅ.ಪ ಶಿಲೆಯಾದಹಲ್ಯೆಯ ದುರಿತವ ತರಿದೆ ಸಲಿಲ ಮಡುವಿಲಿ ಮಕರದಿ ಕರಿಯ ರಕ್ಷಿಸಿದೆ ಸುಲಭದಿಂದಜಮಿಳನ ದುರಿತವ ತರಿದೆ ಕಲಿ ಸುಯೋಧನನ ಓಲಗದಿ ಗರ್ವ ಮುರಿದೆ 1 ವಿಶ್ವರೂಪನು ನೀನೆ ವಿಶ್ವವ್ಯಾಪಕನೆ ವಿಶ್ವೋದರನೆ ಕೃಷ್ಣಾ ವಿಶ್ವನಾಟಕನೆ ವಿಶ್ವಬಾಯೊಳು ತೋರ್ದ ವಿಶ್ವೋದ್ಧಾರಕನೆ ವಿಶ್ವಮಯನೆ ಸರ್ವ ವಿಶ್ವನು ನೀನೆ2 ಅಗಣಿತ ಮಹಿಮ ಆಶ್ಚರ್ಯನು ನೀನೆ ಬಗೆ ಬಗೆ ನಾಮಗಳಿಂದ ಪೂಜಿತನೆ ಖಗವರವಾಹನ ಕಂಸ ಮರ್ದನನೆ ನಿಗಮಗೋಚರ ನಿತ್ಯತೃಪ್ತನು ನೀನೆ 3 ಕನಕಗರ್ಭನ ಪಿತ ಕರುಣದಿ ಸಲಹೊ ಇನಕುಲ ತಿಲಕ ಸುಂದರ ಮೇಘಶಾಮ ದಿನಕರ ತೇಜ ಶ್ರೀ ಸನಕಾದಿ ಮುನಿನುತ ಹನುಮನಂತರ್ಯಾಮಿ ಮಮತೇಲಿ ಸಲಹೊ 4 ಕಮಲ ಸಂಭವನಯ್ಯ ಕಮಲಜಾತೆಯ ಪ್ರಿಯ ಕಮಲ ಪುಷ್ಪ ಮಾಲಾಲಂಕೃತ ಹರಿಯೆ ಕಮಲಭವೇಂದ್ರಾದಿ ಸುಮನಸರೊಡೆಯ ಶ್ರೀ-ಕಮಲನಾಭ ವಿಠ್ಠಲ ಕರುಣದಿ ಸಲಹೊ 5
--------------
ನಿಡಗುರುಕಿ ಜೀವೂಬಾಯಿ
ಕೃಷ್ಣಾ ನಿನ್ನ ಕನಿಷ್ಟ ಪೊಳವ ವುಂ ಗುಷ್ಟ ಭಜಿಸುವ ನಿಷ್ಠ ಜನರ ಉಚ್ಚಿಷ್ಟ ಎನಗದು ಮೃಷ್ಠಾನ್ನವಾಗಲಿಷ್ಟೇ ಬೇಡಿದೆನೊ ಪ ನರಲೋಕದ ಸುಖ ಪರಿಪರಿಯಲ್ಲಿ ಅರಿದೆನದರೊಳು ಪರಮ ಸೌಖ್ಯ ಎಳ್ಳರೆ ಅನಿತಿಲ್ಲ ಬರಿದೆ ಜನನ ಮರಣ ಪರಿಯಂತಾ ದುರಿತ ಧರೆಯೊಳಗೆ ನಿಂದಿಸಲಾರೆ ಸಾಕು ಶರಣು ಹೊಕ್ಕೆನು ಕರುಣಪಾಂಗನೆ ಕರವಿಡಿದು ಸಲಹೋ 1 ಆವುದುಂಟದು ದೇವ ಮಾಣಿಸು ಈ ವರವ ಕೊಂಡು ನಾ ಒಂದನು ವಲ್ಲೆ ಭಾವಶುದ್ಧ ವಾಕ್ಯವೆ ನಿಶ್ಚಯವೊ ಮಾನವ ಕಾವ ನೈಯನೆ ಕಾವ ಜೀವ ನಿನ್ನಂಘ್ರಿ ಸೇವೆ ಸಂಪದವೊ ಜಗತ್ರಯವ 2 ಹಡಗದೊಳಗಿಂದ ತಡಿಯದೆ ಬಂದಾ ಕಡಗೋಲ ನೇಣ ಪಿಡಿದ ಪಡುವಲಾ ಗಡಲ ತೀರದ ಉಡುಪಿನಲಿ ನಿಂದ ಅಡಿಗಡಿಗೆ ಪೂಜೆ ಬಿಡದೆ ಯತಿಗಳಿಂ ಉಘಡ ವಿಜಯ ವಿಜಯವಿಠ್ಠ ಲೊಡಿಯ ಭಕ್ತರ ಬಿರುದಿನ ಕಡು ಸಾಹಸಮಲ್ಲ3
--------------
ವಿಜಯದಾಸ
ಕೃಷ್ಣಾ ನೀ ಬೇಗನೆ ಬಾರೊಮುಖವನೆ ತೋರೋ ಪ ಕಾಶೀ ಪೀತಾಂಬರ ಕೈಯಲಿ ಕೊಳಲುಪೂಸೀದ ಶ್ರೀಗಂಧ ಮೈಯೊಳಗಮ್ಮ 1 ಉಡಿಯಲ್ಲಿ ಉಡಿಗೆಜ್ಜೆ ಬೆರಳಲಿ ಉಂಗುರಕೊರಳಲಿ ಹಾಕಿದ ಹುಲಿಯುಗುರಮ್ಮ2 ತಾಯಿಗೆ ಬಾಯಲ್ಲಿ ಜಗವನ್ನೆ ತೋರಿದಜಗದೋದ್ಧಾರಕ ನಮ್ಮ ಉಡುಪಿಯ ಶ್ರೀಕೃಷ್ಣ3
--------------
ವ್ಯಾಸರಾಯರು
ಕೃಷ್ಣಾ ಬಿಡು ದಾರಿ ದಾರಿ ದಾರಿ ಪ ನೀನೊಲಿದೆನ್ನಕೂಡ ಸರಸವ ನಾಡುವರೆ | ನಾನೆರೆ ಗಂಡುಳ್ಳ ನಾರಿ ನಾರಿ ನಾರಿ ನಾರಿ 1 ಮಾರಲು ಬಂದಿಹ ನೆರೆದ ಗೊಲ್ಲತೆಯರಾ | ಸೂರಿ ಸೂರಿ 2 ಗುರು ಮಹಿಪತಿ ಪ್ರಭು ಕಣ್ಣಿಲೆ ಕಂಡವರ | ಕರವ ಬಿಡವನಲ್ಲಾ ಜಾರಿ ಜಾರಿ ಜಾರಿ ಜಾರಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೃಷ್ಣಾತೀರದಿ ಕುಳಿತಿಷ್ಟವ ಸಲಿಸುವನ್ಯಾರೇ ಪೇಳಮ್ಮಯ್ಯ ಪ ಕಷ್ಟರಹಿತ ಸಂತುಷ್ಟರೆನಿಪ ಸತ್ಯೇಷ್ಟತೀರ್ಥ ಕರಜಪರಾಕ್ರಮರೇ ಅ.ಪ. ಬೋಧ ಮುನಿಯು ಮತ ಶುಭವಾರಿಧಿ ತಾರಕೆ ತಾರೆನೆನಿಪ ಜೀವತಾರ ಶಶಿಕಾಣಮ್ಮ 1 ಶುಭ ತಿಲುಕಾಂಕಿತದಿಂದೊಪ್ಪುವನ್ಯಾರೆ ಪೇಳಮ್ಮಯ್ಯಚಂದ್ರಕಂಠಮಾಲೆ ಕರದಿ ದಂಡವ ಧರಿಸಿಹನ್ಯಾರೆ ಪೇಳಮ್ಮಯ್ಯ ಚಂದ್ರಚರಣ ನಖಶಿಖ ಪರಿಪೂರ್ಣದಿಂದೊಪ್ಪುವ ಗುರುವರ್ಯ ಕಾಣಮ್ಮ 2 ವೃಂದಾವನವರ ಮಂದಿರ ಮಧ್ಯದಿ ರಾಜೀವನ್ಯಾರೇ ಪೇಳಮ್ಮಯ್ಯ ವೃಂದಾರಕ ವರವೃಂದ ವಿನುತನ್ಯಾರೆ ಪೇಳಮ್ಮಯ್ಯ ವೃಂದಾವನ ಸುಂದರ ಗುಣಗಳಿಂಧೊಳೆ ಯುವನ್ಯಾರೆ ಪೇಳಮ್ಮಯ್ಯ ವೃಂದಾವನದೊಳಗಾಶ್ರಿತ ತಂದೆವರದಗೋಪಾಲವಿಠಲನಸೇವಿಪರೇ 3
--------------
ತಂದೆವರದಗೋಪಾಲವಿಠಲರು
ಕೃಷ್ಣಾರ್ಪಿತವೆಂದು ಕೊಡುಲು ಎ-| ಳ್ಳಷ್ಟಾದರೂ ಮೇರು ಪರ್ವತ ಮೀರುವದು ಪ ಗಣ್ಯವಿಲ್ಲದೆ ಶಿಷ್ಯ ಸಹಿತ ಹರರೂಪ ಮುನಿ ಅ- ರಣ್ಯದಲಿ ಪಾಂಡವರು ಇರಲು ಬಂದು || ಪುಣ್ಯಬೇಕೆಂದೆನಲು ಬಂದು ದಳ ಶಾಖಾ ಕಾ- | ರುಣ್ಯದಲಿ ಹರಿ ಎನಲು ಅಪರಿಮಿತವಾದುದು 1 ಹಸ್ತಿನಾಪುರದಲ್ಲಿ ಸಕಲ ದೇವಾದಿಗಳ | ಮಣಿ ವಿದುರನ ಮನೆಯಲ್ಲಿ || ಹಸ್ತು ಬಂದುದಕೆ ಉಪಾಯವೇನೆಂದೆನಲು | ಹಸ್ತದೊಳು ಪಾಲ್ಗುಡತಿಯೆರಿಯೆ ಮಿಗಿಲಾದುದೊ2 ಅಣು ಮಹತ್ತಾಗಲಿ ಆವಾವ ಕರ್ಮಗಳು | ತೃಣನಾದರರಿತು ಅರಿಯದೆ ಮಾಡಲು || ಕ್ಷಣ ತನ್ನದೆನ್ನದೆ ಅರ್ಪಿತನೆ ನಿಕ್ಷೇಪ | ಗುಣನಿಧಿ ವಿಜಯವಿಠ್ಠಲನ ಪುರದಲ್ಲಿ 3
--------------
ವಿಜಯದಾಸ
ಕೃಷ್ಣಾರ್ಯರು ಮನವೇ ಲಾಲಿಸಿ ಕೇಳೊ ಬಿನ್ನೈಸುವೆನೊ ನಿನಗೆ ಚೆನ್ನಾಗಿ ವಡೆಯಾನಾ ಪಾದದಲ್ಲಿ ಭಕುತಿಯನ್ನೆ ಮಾಡಿ ಮಮತೆ ವಿಷಯಾದಿ ಅಹಂಕಾರ ಬುದ್ಧಿಯನ್ನೇ ಬೀಸಾಟಿ ದೃಢವಾಗಿ ಧೈರ್ಯದಿಂದ ಇದೇ ಸಾಧನವೆಂದುಗುಪಿತಾದಲ್ಲಿ ಸಂಚರಿಸೆ ಪಾಣಿಯಾ ಪಿಡಿದುತಾ ವಾಣಿ ಅರಸ ನಿರ್ಮಾಣವ ತೋರಿಸುವ ಪ್ರಾಣದೇವರು ಪ್ರಾಣವಪ್ಪಿಸಿ ಸಾಕುವಬಿಡದೆ ಪಂಚಪ್ರಾಣಾತ್ಮಕನಾದ ತಂದೆವರದಗೋಪಾಲವಿಠಲರೇಯಾನ ಭಜಿಸು ಬಿಡದೆ 1 ಇಂದು ಸಾಧನವೆಂದು ತಿಳಿದು ನಿನ್ನಿಂದ ನೀನೇ ಹಿಗ್ಗಿ ಕುಗ್ಗಾದೀರು ಮಗ್ಗುಲೊಳಗಿದ್ದ ಮಧ್ವದ್ವೇಷಿ ಬಂದು ಮದ್ದು ಹಾಕಿ ಮಣಿಸೂವ ಮಧ್ವರಾಯರ ಪಾದಪದ್ಮದಲ್ಲಿ ಬುದ್ಧಿಯನಿಟ್ಟರೆ ಬಾಧೆಯ ತಪ್ಪಿಸಿ ಉದ್ಧರಿಸುವ ಮುದ್ದು ಮುಖದ ತಂದೆವರದಗೋಪಾಲ- ವಿಠಲರೇಯಾನವಲಿಸು ಬಿಡದೆ 2 ಅನಾದಿ ಕಾಲದಿಂದ ನಿಜ ಗುರುರಾಯನು ನಿನ್ನೊಳಿದ್ದು ಜನಿಸಿ ಬಂದ ಸಾಧನ ಬಿಟ್ಟು ಸುಖದುಃಖ ಜಲಮಯ ಸಂಸಾರದೊಳಗೆ ಬಿದ್ದು ಬಾಯ್ಬಿಡುವಿ ಕಂಡ್ಯಾ ಆ ಗುರುರಾಯರ ಮೂರುತಿ ನಿನ್ನೊಳು ನೋಡುತ್ತ ಪಾಡುತ್ತ ಸುಖಿಯಾಗಿ ಸಕಲ ಕರ್ಮಗಳಾಚರಿಸಿ ತದ್ವಾರ ನವನಿಧಿ ರಾಜನ ಚರಣಕ್ಕೆ ಆರೋಪಿಸೆ ಕೈಗೊಂಡು ಹೊಸಹೂವ ಸುಂದರ ಮೂರುತಿ ತಂದೆವರದಗೋಪಾಲವಿಠ್ಠಲರೇಯಾನ ನಿಲ್ಲಿಸೊ ಬಿಡದೇ 3 ಅವರ ಬಳಿಯಲ್ಲಿ ಪೋಗಿ ನೀನೂ ನಿನ್ನದು ಎನ್ನದಿರು ಕಂಡ್ಯಾ ಮುನ್ನ ನಿನಗೆ ಘನ್ನವಾದ ವೈರಾಗ್ಯ ಪುಟ್ಟುವಾದೂ ಇನ್ನು ನೀನು ಮನದಾಶೆ ಎಂಬ ಪಿಶಾಚೀಗೆ ಒಳಗಾಗಿ ಏನಾಹೋದೋ ನಿನ್ನ ಘಾಸಿಯನರಿತು ಕ್ಲೇಶಾಪಾಶಾಗಳಿದ್ಯಾಡಿಪಶುಪತಿಪಿತನ ಪಡೆದ ತಂದೆವರದಗೋಪಾಲವಿಠಲರೇಯಾನ ವಲಿಸೋ ಬಿಡದೆ4 ಸದಾಕಾಲದಲ್ಲಿ ಇವರ ಸ್ಮರಣೆ ಮಾಡಿ ಧ್ಯಾನಕೆ ತಂದು ಯೋಗಾದಿ ನೋಡುವಾದೆ ಮಹಾ ನಿಜವಾದ ಭಕುತಿ ಇವರ ಪಾದಸ್ಮರಣೆ ಮಾಡಾದ ಮನುಜರಿಗೆ ಶ್ರೀಪದ್ಮ ರಮಣಾನು ಸೃಷ್ಟಿಸೂವ ಆ ಮನುಜಗೋಸುಗ ನರಕ ನರಕಾದೊಳಗಿಟ್ಟು ಕುಟ್ಟುವ ಕ್ಷಣ ಬಿಡದೆ ಎಷ್ಟು ಮಾಡಿದರೇನು ಉತ್ತುಮೋತ್ತಮರೆಲ್ಲ ಸೋತ್ತುಮರಾಯರ ದ್ರೋಹಮಾಡಿ ತುತ್ತುತುತ್ತೀಗೆ ಹಾಕಿಸಿಕೊಂಡು ಕುತ್ತೀಗೆ ಕಟ್ಟಿ ನಿತ್ಯಾದಲ್ಲಿ ಸ್ಮರಣೆಯ ಮಾಡಿದರೆ ನೃತ್ಯವಾಗೈಸುವ ಭಕ್ತಾವತ್ಸಲ ತಂದೆವರದಗೋಪಾಲವಿಠಲರೇಯಾನ ನಿಲ್ಲಿಸೋ ಬಿಡದೆ 5 ಜತೆ :ನವವಿಧಭಕುತಿಯನ್ನೇ ಅರಿತು ಗುರುಪೂಜೆ ಮಾಡಲು ತದ್ವಾರಾ ವಲಿದಾ ತಂದೆವರದಗೋಪಾಲವಿಠ್ಠಲಾ 6
--------------
ತಂದೆವರದಗೋಪಾಲವಿಠಲರು
ಕೇಳಿಸಲೊಲ್ಲದೇನೋ ಕೃಷ್ಣಾ ಕೇಳಿಕೇಳದಂತಿರುವಿಯೇನೋ ಪ ಬಾಳುವೆಯೊಲು ಕೀಳಾದೆನಾನಿಂತುಏಳಿಸೆನ್ನನು ಎಂದು ಕೇಳಿಕೊಳ್ಳುವದಿನ್ನು ಅ.ಪ ಯಾವತ್ತೂ ತಿಳಿದವನು ಎಂಬರು ಎನ್ನನೋವು ತಿಳಿಯದಾಯ್ತೇನುಸಾವಿರ ವಿಥಿಗಳಿದ್ದೆನ್ನಯ ಪಾಲಿಗೆದೇವಾ ಅವಲ್ಲವು ಕಿವುಡಾದವೇನೋ 1 ತುಂಬಿ ನಿಂತಿಹನೆಂಬೀಭಾವಕೆ ನೀನೆಂಬಿ ಆವಾವಜೀವರ ಭಾವವರಿತು ನೀಕಾವುದೆಂತೆಂಬೊ ಈ ವಚನವು ನಿನಗೆ 2 ಭೇದಭಾವವು ಇಲ್ಲೆಂದೂ ಸಾಧಿಸುವವುವೇದಗಳೆಲ್ಲ ಎಂದುಬಾಧೆಯ ಬಿಡಿಸೆಂದು ಬೇಡಿಕೊಳ್ಳುವೆಗದುಗಿನ ಆಧಾರಿ ದೇವನೆ ವೀರನಾರಾಯಣ 3
--------------
ವೀರನಾರಾಯಣ
ಕೇಳು ಪೊರೆ ಶಾಂತ ತಾಳು ರಂಗಾ ನಿನ್ನಾಳು ನಾನಿರುವೆ ಕೃಷ್ಣಾ ಪ ಆಳೋ ಅರಸನೇ ಅ.ಪ. ಗಾಣ ಎಳೆಯುವ ಕ್ವಾಣನಾದೆನೋ ಕಾಣವೋ ನಯನಾ ಕಾಣಿ ವೇಣುಗೋಪಾಲ 1 ಮಾಯಾ ಮಗನಿಗೆ ನಾಯನಾಗಿರುವೆ ಮಾಯಾ ಕಾಯೋ ನರಹರಿ 2 ಬೇಡುವರು ಧನ ಕಾಡಿ ಎನ್ನನು ನೋಡು ಫಣಿಶಯನಾ ನಾಡಿಗೊಡೆಯಾ ಕೈ ಜೋಡಿಸುವೆನಯ್ಯಾ 3 ಬೇಗ ತವದಾಸನಾಗಿ ಮಾಡಿಕೋ ಸಾಗರಶಯನಾ ಈಗ ಭವಭಯ ನೀಗಿಸೈಯ್ಯ ಕೈ ಸಾಗದಾಯಿತು ಭಾಗವತಪ್ರಿಯಾ 4 ಆಶಾ ಬಿಡಿಸಿ ನೀ ಲೇಸು ಕೊಡು ಹನುಮೇಶವಿಠಲನೇ ಘಾಸಿಯಾದೆನು ಪೋಷಿಸಯ್ಯ ರಮೃಶ ಪಂಢರಿವಾಸ ವಿಠಲ 5
--------------
ಹನುಮೇಶವಿಠಲ
ಕೊಡು ಕೃಷ್ಣನೇ ಎನ್ನ ಸಾಲವ ಬೇಗ ಕೊಡದಿದ್ದರೆ ಬಿಡೆನೊ ಪ. ತಡ ಮಾಡಿದೊಡೆ ನಿನ್ನಾಟದ ಬೆಡಗನು ಪೊಡವಿಗೆ ತಿಳಿಸುವೆನು ಜೋಕೆ ಅ.ಪ. ನೀರ ಪೊಕ್ಕರು ಬಿಡೆ ನಿನ್ನ ಭವ ವಾರಿಧಿ ದಾಟಿಸುವೆಂಬೆ ಭಾರ ಪೊತ್ತರೆ ನೀನೇ ಎನ್ನ ಸಂಸಾರ ಭಾರಕೆಂಬೇ ದೇವ ಕೋರೆ ತೋರಲು ಅಂಜುವೆನೆ ಭೂಮಿಯ ಮೇರೆ ಸಿಲಿಕದೋಡಿದರೂ ದೃಢವನು ಕೊಡದಿದ್ದರೂ ಬಿಡೆ ನಾ 1 ಕಂಬದೊಳಡಗಲು ಬಿಡೆನು ನಿನ್ನ ಡಿಂಬ ಭಜಿಪೆ ನರಹರಿಯೆ ಸಂಭ್ರಮದೊಳು ಬ್ರಹ್ಮಚಾರಿಯಾಗಲು ನಿನ್ನ ಹಂಬಲು ಬಿಡೆ ಕೊಡಲಿಯನು ತೋರಲು ಕದಂಬ ಬಾಹು ಛೇದಿಸಲು ರಾಮ ಕೊಡದಿದ್ದರೆ ದೃಢನಾ ದೇವ 2 ಒಂದು ಸ್ಥಳದಿ ಪುಟ್ಟಿ ತಿಳಿಸದೆ ಇ ನ್ನೊಂದು ಸ್ಥಳಕೆ ಪೋಗೆ ಕೃಷ್ಣಾ ಅಂದದ್ವಸನ ಬಿಟ್ಟು ಸುಂದರಿಯರ ವ್ರತ ಛಂದದಿ ಕಳೆದುನೀ ತೇಜೀಯೇರಲು ಸುಂದರ ಶ್ರೀ ಶ್ರೀನಿವಾಸ ನಿನ್ನಡಿ ದೃಢ ಕೊಡದಿದ್ದರೆ ಬಿಡೆನಾ 3
--------------
ಸರಸ್ವತಿ ಬಾಯಿ
ಕೊಳಲನೂದೆಲೋ ಕೃಷ್ಣ ಕೊಳಲನೂದೆಲೊ ಪ ಕೊಳಲನೂದು ಮನದ ದುಗುಡಕಳೆದು ಮತ್ತೆ ಮನಕೆ ಪ್ರಶಾಂತೆತಳೆಯುವಂತೆ ನಿತ್ಯಮಂ_ಜುಳ ಸ್ವರಗಳನ್ನು ತೆಗೆದು ಅ.ಪ. ತುಂಬಿ ನಳಿನಬೆರಳುಗಳು ತೂತು ಮುಚ್ಚಿತೆರೆದು ಸವಿಯ ನಾದದಲ್ಲಿ ನಿಸಾರ ನಿ ದ ಪ ಮ ಪ ನಿ ಎಂದು 1 ಇಲ್ಲಿ ಪೀಠದಿ ಎದ್ದು ನಿಲ್ಲು ಥಾ7ಟದಿಮಲ್ಲಿಗೆ ವನಮಾಲೆ ಕೊರಳೊಳಲ್ಲಾಡುತಿರಲು ರೂಪದಲ್ಲಿ ಮನವಿನೈಕ್ಯವಾಗಿತಲ್ಲೀನರಾಗುವಂತೆ ಕೃಷ್ಣಾ 2 ಎದ್ದುನಿಂತು ಮಾಟದಿ ನಿಂತು ಮುದ್ದು ನೋಟದಿಬಿದ್ದವರನು ನೋಡಿ ನಮಗೆಶುದ್ಧ ಬುದ್ಧಿ ಕೊಟ್ಟು ನಮ್ಮದುದ್ಧರಿಪುದು ಗದುಗಿನ ಪ್ರಸಿದ್ಧ ವೀರನಾರಾಯಣ 3
--------------
ವೀರನಾರಾಯಣ
ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀಹರಿಯ ಬಲಗೊಂಬೆ ಕೋಲೆ ಧ್ರುವ ನಿಗಮ ಚೋರ ರಾಕ್ಷಸನ ಕೊಂದು ರಕ್ಷಿಸಿ ವೇದವನುಳುಹಿದ ಕೋಲೆ ರಕ್ಷಿಸಿ ವೇದವನುಳುಹಿದ ಕ್ಷಿತಿಯೊಳು ಮಚ್ಛಾವತಾರನ ಬಲಗೊಂಬೆ ಕೋಲೆ 1 ಧರ್ಮ ನಡೆಯಲಾಗಿ ವರ್ಮವ ತಾಳಿದ ಕರ್ಮಹರ ಶ್ರೀ ಮೂರ್ತಿಯ ಕೋಲೆ ಕರ್ಮಹರ ಶ್ರೀಮೂರ್ತಿಯ ಧರೆಯ ಪೊತ್ತ ಕೂರ್ಮಾವತಾರನ ಬಲಗೊಂಬೆ ಕೋಲೆ 2 ಧರೆಯ ಕದ್ದಸುರನ ಕೋರೆದಾಡಿಂದ ಸೀಳಿ ಹೋರಿ ಹೊಯ್ದಾಡಿದ ನರಹರಿ ಕೋಲೆ ಹೋರಿ ಹೊಯ್ದಾಡಿದ ನರಹರಿ ಧರೆಯ ಗೆದ್ದ ವರಹಾವತಾರನ ಬಲಗೊಂಬೆ ಕೋಲೆ3 ದುರುಳ ದೈತ್ಯನ ಕೊಂದು ಕರುಳು ವನಮಾಲೆಯ ಧರಿಸಿದ ಕೋಲೆ ಕರುಳು ವನಮಾಲೆಯ ಧರಿಸಿದಾ ಹರಿ ನರಸಿಂಹಾವತಾರನ ಬಲಗೊಂಬೆ ಕೋಲೆ 4 ಪಾದ ಭೂಮಿಯ ಬೇಡಿ ಹೆಮ್ಮೆಯ ತಾ ಪರಿಹರಿಸಿದ ಕೋಲೆ ಹೆಮ್ಮೆಯ ತಾ ಪರಿಹರಿಸಿದ ಬ್ರಾಹ್ಮಣನಾಗಿ ವಾಮನಾವತಾರನ ಬಲಗೊಂಗೆ ಕೋಲೆ 5 ಆಜ್ಞೆಯ ಮೀರದೆ ಅಗ್ರಜಳ ಶಿರ ಶೀಘ್ರದಿಂದಲಿ ಇಳುಹಿದ ಕೋಲೆ ಶೀಘ್ರದಿಂದಲೆ ಇಳುಹಿದ ಶಿರವನು ಭಾರ್ಗವ ರಾಮನ ಬಲಗೊಂಬೆ ಕೋಲೆ 6 ಕಾಮದಿ ಸೀತೆಯನೊಯ್ದ ತಾಮಸದವನ ಕೊಂದು ನೇಮ ಸ್ಥಾಪಿಸಿದ ಇಳೆಯೊಳು ಕೋಲೆ ನೇಮ ಸ್ಥಾಪಿಸಿದ ಇಳೆಯೊಳು ರಾಮಾವತಾರನ ಬಲಗೊಂಬೆ ಕೋಲೆ 7 ದುಷ್ಟ ದೈತ್ಯರನೆಲ್ಲ ಕುಟ್ಟಿ ಮಡುಹಿದ ನೆಟ್ಟನೆ ಗಿರಿಯನೆತ್ತಿದ ಕೋಲೆ ನೆಟ್ಟನೆ ಗಿರಿಯನೆತ್ತಿದ ಬೊಟ್ಟಿಲೆ ಕೃಷ್ಣಾವತಾರನ ಬಲಗೊಂಬೆ ಕೋಲೆ 8 ಕದ್ದು ತ್ರಿಪುರವ ಪೊಕ್ಕು ಇದ್ದ ಸತಿಯರ ವ್ರತ ಸಿದ್ದಿಯ ತಾನು ಅಳಿದನು ಕೋಲೆ ಸಿದ್ದಿಯ ತಾನು ಅಳಿದನು ಬುದ್ದಿಯಲಿ ಭೌದ್ದಾವತಾರನ ಬಲಗೊಂಬೆ ಕೋಲೆ 9 ಮಲ್ಲ ಮಾನ್ಯರನೆಲ್ಲ ಹಲ್ಲು ಮುರಿಯಲಾಗಿ ನಲ್ಲ ತೇಜಿಯನೇರಿದ ಕೋಲೆ ನಲ್ಲ ತೇಜಿಯ ನೇರಿದ ಬಲ್ಲಿಹನಾಗಿ ಕಲ್ಕ್ಯಾವತಾರನ ಬಲಗೊಂಬೆ ಕೋಲೆ 10 ವಸ್ತು ಪರಾತ್ಪರ ವಿಸ್ತಾರ ತೋರಲಾಗಿ ಹತ್ತಾವತಾರ ಧರಿಸಿದ ಕೋಲೆ ಹತ್ತಾವತಾರ ಧರಿಸಿದ ಮಹಿಪತಿಯ ಅಂತರಾತ್ಮನ ಬಲಗೊಂಬೆ ಕೋಲೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗಮನ ಕೃಷ್ಣಾ ಪ ಇಂದಿರೇಯರಸ ಮುಕುಂದ ಮೂಜಗಕ್ಕೆ ತಂದೆತಾಯಿ ನೀನೇ | ಶ್ರೀರಾಮಾ ಅ.ಪ ಕೇಸರಿ ಪುನಗುಗಳೂ ನೀಸತಿ ಸಹಿತ ಸದಾ ಲೇಪಿತ ಶ್ರೀನಿ- ವಾಸ ಸುಗುಣಧಾಮಾ | ಶ್ರೀ ರಾಮ 1 ಸ್ಪುರಿಪಲಲಾಟದೊಳೂಧ್ರ್ವ ಪುಂಡ್ರಕ- ಸ್ತುರಿತಿಲಕವು ಬೆಳಗೇ ಹರಿದ್ರಾ ಕುಂಕುಮ ಮಂಗಲ ದ್ರವ್ಯ ನಿನ್ನ ಅರಸಿ ಜಾನಕಿ ದೇವಿಗೇ | ಶ್ರೀರಾಮ 2 ಕ್ಷತೆಯಿಲ್ಲದವನು ನೀನೆಂಬುವದ- ಕ್ಷತೆ ನಿನದಿದೊ ದೇವಾ ತ್ಪತಿ ಮಹಾನುಭಾವಾ | ಶ್ರೀರಾಮ 3
--------------
ಗುರುರಾಮವಿಠಲ