ಒಟ್ಟು 136 ಕಡೆಗಳಲ್ಲಿ , 46 ದಾಸರು , 124 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾರತಿ ದೇವಿಯೆ ಮಾರುತಿ ರಾಣಿಯೆ ಪ. ಮಂದಿ ನಾಲ್ವರನು ಹೊಂದಿಸಿ ಉದರÀದಿಒಂದೆ ರೂಪದಿ ಜನರಿಗೆ ತೋರುವ ಸತಿ1 ಸೀತಾಕಾಂತನ ದೂತನಾಗಿ ಪ್ರ-ಖ್ಯಾತಿಯ ಪಡೆದನ ಪ್ರೀತಿಯ ಸತಿಯಳೆ 2 ದುಷ್ಟ ಕಲಿಯ ಕುಲಕುಟ್ಟಿ ಕೆಡಹಿದ ಭಲಕಟ್ಟಾಳು ಭೀಮನ ಪಟ್ಟದಸತಿಯಳೆ 3 ಮೂರುಏಳುಕುಲ ಮಾಯಿಗಳನು ಗೆದ್ದುಬೋರೆಮರದ ಕೆಳಗಿರುವನ ಸತಿಯಳೆ 4 ಹಗಲಿರುಳೆನ್ನದೆ ಹಯವದನನ ಪದಹೃದಯ ಕಮಲದೊಳು ಭಜಿಪನ ಸತಿಯಳೆ 5
--------------
ವಾದಿರಾಜ
ಭೀಮಾ ಹೋ ಭಲಾರೆ ನಿಸ್ಸೀಮ ಹೋ ಭಾಪುರೆ ಹನುಮ ಹೋ ಪ. ನಿಜಜಿತಕಾಮ ಹೋ ಕಾರುಣ್ಯಧಾಮ ಹೋ ರಾಮಚಂದ್ರನ ಚರಣಕಮಲಸರಾಮ ಕಾರ್ಯಧುರಂಧರನೆ ಅ.ಪ. ಆಂಜನೇಯ ಸುಕುಮಾರ ಅದ್ಭುತಮಹಿಮ ರಾಮ[ನ] ದೂತನೆ ಅಂಜದುದಧಿಯ ದಾಟಿ ಅಸುರನ[ವ] ನವ ಕಿತ್ತನೆ ಕಂಜಮುಖಿ ಜಾನಕಿಗೆ ಮುದ್ರೆಯನಿತ್ತ ಬಲುಪ್ರಖ್ಯಾತನೆ ಮಾಡಿಸಿದೆ ಕಲಿ 1 ಅವನಿತನುಜೆಯ ಚೂಡಾರತ್ನವ ಅಂಬುಜಾಕ್ಷನಿಗಿತ್ತನೆ ಸಮರಕನುಕೂಲವೆಂದು ರಾಮಗೆ ಸುಗ್ರೀವನ ಕಾಣಿಸಿದನೆ ಕಮಲನಾಭನ ಆಜ್ಞೆಯಿಂದಲಿ ಕಪಿಬಲವ ಕೂಡಿಸಿದನೆ ಬಹುಪರಾಕ್ರಮಿಯಹುದಹುದೊ ಕಲಿ 2 ಅಗಳುಸಾಗರ ಮಧ್ಯದಲ್ಲಿಹ ನಗರವನು ಬಂದು ಮುತ್ತಿದೆ ಬಗೆದು ಕಲ್ಮರಗುಂಡಿನಿಂದಲಿ ವಿಗಡದೈತ್ಯರ ಮಡುಹಿದೆ ಬಗೆಬಗೆ ಮಯಾಜಾಲವನು ಗೆದ್ದು ಭರದೊಳದ್ರಿಯ ತುಡುಕಿದೆ ಜಗತ್ಪತಿಯ ಮೂರ್ಬಲವನೆಲ್ಲವ ಸಂಜೀವನವ ತಂದುಳುಹಿದೆ 3 ಪೃಥ್ವಿಯೊಳಗುದ್ದಂಡ ದೈತ್ಯರ ಸುತ ಸಹೋದರರ ಮಡುಹಿದೆ ಹತವ ಮಾಡಿ ಶ್ರೀರಾಮ ಬಾಣದಿ ಹತ್ತು ತಲೆಗಳ ಕೆಡಹಿದೆ ಪ್ರತಿಶತೇಶ್ವರ ಶ್ರೀರಮಣಿಯನ್ನು ತಂದು ರಾಘವಗೆ ಒಡಗೂಡಿಸಿದೆ ಮಾಡಿಸಿದೆ ಕಲಿ 4 ಕುಂಡಲ ಚಾರು ಯಜÉ್ಞೂೀಪವೀತನೆ ಸೂರ್ಯಚಂದ್ರಮರುಳ್ಳನಖ ವಜ್ರಕಾಯದಲಿ ನಿರ್ಭೀತನೆ ವೀರಕದನಕಠೋರ ರಾಣಿಬೆನ್ನೂರ ಬಯಲಾಂಜನೇಯನೆನೀರಜಾಕ್ಷನ ಹೆಳವನಕಟ್ಟೆರಂಗನ ಪ್ರಿಯದಾಸನೆ ಕಲಿ 5
--------------
ಹೆಳವನಕಟ್ಟೆ ಗಿರಿಯಮ್ಮ
ಭೂತರಾಜರು ಭೂತರಾಜ, ಭೂತರಾಜ, ಭೂತರಾಜ ಜೈ ಜೈ ಜೈ ಪ ಭಾವಿರುದ್ರ ಜೈ ಜೈ ಜೈ ಅ.ಪ. ವಿನುತ ಗುರುವಿನಲ್ಲಿ ಮುನಿಗೆ ಜೈ ಜೈ ಜೈ 1 ಹರಿಯ ಮುಖಜರನ್ನು ಬಹಳ, ಜರಿದು ಜರಿದು ಗರ್ವ ದಿಂದ | ಬೊಮ್ಮರಕ್ಕಸ ಜೈ ಜೈ ಜೈ 2 ಘೋರ ಅಡವಿ ಸೇರಿ ಭರದಿ, ದಾರಿಯಲ್ಲಿ ಬಂದ ಜನರ | ಸೊರೆಕೊಂಡು ಮಾನಧನವ, ಕ್ರೂರನೆಂದು ಕರಸಿ ಕೊಂಡೆ3 ಜ್ಞಾನ ಪೂರ್ಣ ಗುರುವಿನೊಡನೆ, ಮಾನವಾದ ಪಕ್ಷಗೈದೆ4 ಶರಧಿ ವಾದಿರಾಜ, ಭರದಿ ಹರಿಸಿ ಕೀಳು ಜನ್ಮ | ಚರಣ ಭಜಿಪ ಭಾಗ್ಯಕೊಡಲು, ಮೆರದೆ ಭೂತರಾಜ ನೆನಿಸಿ |5 ಕ್ಷಮಿಸನೇನು ಸುತನಪಿತನು, ನಮಿಸಿ ನಿಂತ ನಿನಗೆ ನುಡಿದ | ಸುಖದಿ ಬಾಳೆಂದು6 ಗಾತ್ರ ಕೆಂಪು ನೇತ್ರ | ಚಾರು ವಡವೆ ಗಣವ ಧರಿಸಿ, ವೀರ ರೂಪದಿಂದ ಮೆರೆವೆ 7 ಹಾರಿ ಹೋಗಿ ಧನಪನೆಡೆಗೆ, ತೋರಿ ನಿನ್ನಶೌರ್ಯ ಪಡದು | ಭಾರಿ ರತ್ನ ಮಕುಟ ನುತಿಸಿ, ನೇರ ಶಿರದಲಿಟ್ಟೆ ಗುರುವಿಗೆ 8 ಪಥದಿ ಖಳನ ಕೊಂದು ಬೇಗ ರಥ ಸಮೇತ ಬದರಿಯಿಂದ ಪೃಥಿವಿ ಅಳೆದೆ ದೊರೆಯತಂದು, ವಿತತ ಮಹಿಮ ದುಷ್ಠದಮನ 9 ಕ್ಷೇತ್ರಪಾಲ ಶರಣು ಭಾವಿಸೂತ್ರ ವಲಿಯ ಬಿಡಲು ನಿನ್ನ ಗಾತ್ರಕೆಡಹಿ ಬೇಡಿ ಕೊಂಬೆ, ನೇತ್ರ ನೀಡೊ ಹರಿಯ ಕಾಂಬ ಜೈ10 ಕಳೆದು ಬೇಗ ಹೊಲಸು ಮನವ, ಬೆಳಿಸಿ ಹರಿಯ ದೃಢಸುಭಕ್ತಿ ಕಲಿಯ ತುಳಿವ ಶಕ್ತಿ ನೀಡಿ, ಕಲಸೊ ಸಾಧುಸಂಗ ಜೀಯ, ಜೈ11 ಭಂಗ ಗೈದು ನಿಂತೆ ಅಲ್ಲ ಲಿಂಗ ತಂದೆ ಕದರಿಯಿಂದ, ತುಂಗ ಮಹಿಮ ಮಂಗಳಾಂಗ ಜೈ12 ಕುಣಿದು ಮುದದಿ ಭಜಿಪೆ ಗರಳ ಕಂಠ ಭಾವಿ ಶರಣು, ಚರಣ ಪಿಡಿವೆ ಸ್ತೋತ್ರಪ್ರೀಯ ಜೈ13 ವೈರಿ ವೃಂದ ಮೋದ ಕೊಡಿಸು ತಿರ್ಪೆಭೂಪ |ಜೈ14 ರಾಜ ಬಿರುದು ಸಹಿತ ಭಾರಿ | ವಾಜಿ ಏರಿ ನಡೆಯೆ ವಾದಿ ಅಳಿಯೆ ಸಿಗದು ಜೈ 15 ವಂದು ಕಮ್ಮಿ ನಾಲ್ಕು ಹತ್ತು, ತಂದೆ ವಿಧಿಯ ಕಲ್ಪಗಳಲಿ | ಇಂದು ಉಂಬೆ ದಿವ್ಯ ಪದವಿ16 ಭೀತಿ ಕರವು ನಿನ್ನ ರೂಪ, ವ್ರಾತ್ಯಗಣಕೆ ವಾದಿ ರಾಜ | ದೂತ ನಿನಗೆ ಪ್ರತಿಯ ಕಾಣೆ, ಪ್ರೀತಿ ಸುರಿಸು ಭೃತ್ಯರೆಮಗೆ ಜೈ17 ರಾಜ ರೆಡೆಯ ಬಲದಿ ನೆಲಸಿ, ರಾಜ ಮಂತ್ರಿ ಕೆಲಸ ನಡೆಸಿ ಸೂಜಿ ತಪ್ಪಿಗೆಡೆಯ ಕೊಡದೆ, ರಾಜ ಕ್ಷೇತ್ರ ಕಾಯುತಿರ್ಪೆ ಬೈ18 ಕರ್ಣ ಗುಂಪು, ನಿನ್ನ ಸ್ತುತಿ ಸೇವಿಸುವರು | ದೊಣ್ಣಿ ಸೇವೆ ದುಡುಕಿ ದವಗೆ, ಚಿಣ್ಣರೆಂದು ತಪ್ಪ ಕ್ಷಮಿಸು ಜೈ19 ಚಿತ್ರ ವೈಯ ನಿನ್ನ ಚರಿತೆ, ಭಕ್ತರಿಂದ ಕೊಂಡು ಹರಿಕೆ ಕಿತ್ತು ವಗೆದು ವಿವಿಧ ದೋಷ, ಎತ್ತಿ ಕೊಡುವೆ ಕಾಮಿತಾರ್ಥಜೈ20 ಭೂತ ಪ್ರೇತ ಬಾಧೆ ಸಕಲ, ಆರ್ತಿನಾಶ ಪದವ ಪಠಿಸೆ | ನಲಿವ ಜೈ ಜೈ ಜೈ 21
--------------
ಕೃಷ್ಣವಿಠಲದಾಸರು
ಭೂಮಿಜೆಯು ಸೀತೆಯು ಜನನಿ ಗರ್ಭವ ವಡೆದು ಬಂದಳು ದನುಜ ವಧಕೆಂದೇ ಪ ದುರುಳ ದನುಜರು ಪೆಸರು ರಾವಣ ಕುಂಭಕರ್ಣರು ಋಷಿ ಜನಂಗಳ ಮುಖವ ಕೆಡಿಸುತ ಮೆರೆಯುತಿರೆ ಕೇಳ್ದು 1 ಭವದ ಭಟ ಶ್ರೀರಾಮಚಂದ್ರನು ಮೂವರನು ಜರ ಕೂಡಿ ಜನಿಸಿದಾ ಭುವನ ಭಾರವ ಪರಿಹರಿಪೆನೆಂದಭಯ ತೋರುತಲೀ 2 ಸಿರಿಲಕುಮಿ ನಿಜವರನು ಜನಿಸಿದ- ನರಿತು ¥ರಮಾನಂದದಲಿ ತಾ ಭರದಿ ಮೈದೋರಿದಳು ಹರಿಗೆ ತಾನರಸಿ ಎನಿಸಿದಳು 3 ವಾನರರ ಸೇನಾಧಿಪನು ಪವ- ಸೂನು ಶ್ರೀ ಹನುಮನೆಂಬುವನು ದಾನವಾರಿ ಶ್ರೀ ರಾಮಚಂದ್ರಗೆ ಭೃತ್ಯನೆನಿಸಿದನು 4 ವಿಪಿನ ಚರವ್ಯಾಜದಲಿ ರಕ್ಕಸ- ರಪರಿಮಿತ ಕೆಡಹಿದನು ಧರಣಿಗೆ ವಿಪರೀತ ಬತ್ತದ ಶರಧಿಯನು ಹನುಮಂತನ್ಹಾರಿದನು 5 ಪ್ರತಿಭಟಿಸಿ ಶ್ರೀ ರಾಮಚಂದ್ರನು ಅತಿಮೆರೆವ ರಾವಣನ ಮಡುಹಿದಾ ಮತಿವಂತ ಹನುಮನಿಗೆ ಇತ್ತಾ ಚತುರವದನ ಪದಾ 6 ಧರಣಿ ಮಗಳಿಂಗೂಡಿ ರಾಮನು ಧರೆಯನೆಲ್ಲವನಾಳಿ ನ್ಯಾಯದಿ ಸ್ವರಗವಾಸಕೆ ತೆರಳಿದನು ನರಸಿಂಹವಿಠಲನು 7
--------------
ನರಸಿಂಹವಿಠಲರು
ಭೂರಿ ನಿಗಮವ ಕದ್ದ ಚೋರದೈತ್ಯನ ಗೆದ್ದ ಸಾರ ವೇದಗಳ ವಿಧಿಗಿತ್ತ ಸಾರ ವೇದಗಳ ವಿಧಿಗಿತ್ತ ಮತ್ಸ್ಯಾವ- ತಾರಗಾರತಿಯ ಬೆಳಗಿರೆ 1 ವಾರಿಧಿ ಮಥನದಿ ನೀರೊಳು ಗಿರಿ ಮುಳುಗೆ ತೋರಿ ಬೆನ್ನಾಂತ ಸುರನುತ ತೋರಿ ಬೆನ್ನಾಂತ ಸುರನುತ ಕೂರ್ಮಾವ- ತಾರಗಾರತಿಯ ಬೆಳಗಿರೆ 2 ಧಾತ್ರಿಯ ಕದ್ದೊಯ್ದ ದೈತ್ಯನÀ ಮಡುಹಿದ ಎತ್ತಿ ದಾಡೆಯಲಿ ನೆಗಹಿದ ಎತ್ತಿ ದಾಡೆಯಲಿ ನೆಗಹಿದ ವರಾಹ- ಮೂರ್ತಿಗಾರತಿಯ ಬೆಳಗಿರೆ 3 ಕಡು ಬಾಲನ ನುಡಿಗೆ ಒಡೆದು ಕಂಬದೊಳುದಿಸಿ ಒಡಲ ಸೀಳಿದ ಹಿರಣ್ಯಕನ ಒಡಲ ಸೀಳಿದ ಹಿರಣ್ಯಕನ ನರಸಿಂಹ ಒಡೆಯಗಾರತಿಯ ಬೆಳಗಿರೆ 4 ಸೀಮಾಧಿಪತಿ ಬಲಿಯ ಭೂಮಿ ಮೂರಡಿ ಬೇಡಿ ಈ ಮೂರು ಜಗವ ಈರಡಿಯ ಈ ಮೂರು ಜಗವ ಈರಡಿ ಮಾಡಿ ಅಳೆದ ವಾಮನಗಾರತಿಯ ಬೆಳಗಿರೆ 5 ಅಂಬರಕೇಶನ್ನ ನಂಬಿದ ಕತ್ರಿಯರ ಸಂಭ್ರಮ ಕುಲವ ಸವರಿದ ಸಂಭ್ರಮ ಕುಲವ ಸವರಿದ ಪರಶುರಾ- ಮೆಂಬಗಾರತಿಯ ಬೆಳಗಿರೆ 6 ತಂದೆ ಕಳುಹಲು ವನಕೆ ಬಂದಲ್ಲಿ ಸೀತೆಯ ತಂದ ರಾವಣನ ತಲೆಹೊಯ್ದ ತಂದ ರಾವಣನ ತಲೆಹೊಯ್ದ ರಘುರಾಮ- ಚಂದ್ರಗಾರತಿಯ ಬೆಳಗಿರೆ 7 ಶಿಷ್ಟ ಯಮಳಾರ್ಜುನರಭೀಷ್ಟವ ಸಲಿಸಿದ ದುಷ್ಟ ಕಂಸನ್ನ ಕೆಡಹಿದ ದುಷ್ಟ ಕಂಸನ್ನ ಕೆಡಹಿದ ನಮ್ಮ ಶ್ರೀ ಕೃಷ್ಣಗಾರತಿಯ ಬೆಳಗಿರೆ 8 ರುದ್ರನ್ನ ತ್ರಿಪುರದೊಳಿದ್ದ ಸತಿಯರ ಬುದ್ಧಿ ಭೇದಮಾಡಿ ಕೆಡಿಸಿದ ಬುದ್ಧಿ ಭೇದಮಾಡಿ ಕೆಡಿಸಿ ಬತ್ತಲೆ ನಿಂದ ಬೌದ್ಧಗಾರತಿಯ ಬೆಳಗಿರೆ 9 ಪಾಪಿಜನ ಭಾರಕ್ಕೆ ಈ ಪೃಥ್ವಿ ಕುಸಿಯಲು ತಾ ಪಿಡಿದು ಖಡ್ಗ ತುರಗವ ತಾ ಪಿಡಿದು ಖಡ್ಗ ತುರಗವೇರಿದ ಕಲ್ಕಿ- ರೂಪಗಾರತಿಯ ಬೆಳಗಿರೆ 10 ಮುತ್ತೈದೆ ನಾರಿಯರು ಮುತ್ತಿನಾರತಿ ಮಾಡಿ ಹತ್ತವತಾರಿ ಹಯವದನ ಹತ್ತವತಾರಿ ಹಯವದನನ ಪಾಡುತ ಚಿತ್ರದಾರತಿಯ ಬೆಳಗಿರೆ 11
--------------
ವಾದಿರಾಜ
ಮಂಗಳಂ ಜಯ ಮಂಗಳಂ ಪ ಆದಿನಾರಾಯಣನೆನಿಸಿದಗೆ ಪಾದದಿ ಗಂಗೆಯ ಪಡೆದವಗೆ ಸಾಧುಸಜ್ಜನರನ್ನು ಸಲುಹುವ ದೇವಗೆ ವಿ ನೋದ ಮೂರುತಿಯಾದ ವೆಂಕಟಗೆ 1 ಶಂಖ ಚಕ್ರಧರಿಸಿಪ್ಪವU ಪಂಕಜ ಹಸ್ತವ ತೋರ್ಪವಗೆ ಬಿಂಕದೊಳಸುರರ ಕೆಡಹಿದ ಧೀರಗೆ ಮೀ ನಾಂಕನ ಪಿತನಾದ ವೆಂಕಟಗೆ 2 ಪೀತಾಂಬರಧರನೆನಿಸಿದಗೆ ನೂತನ ನಾಮದಿ ಮೆರೆವವಗೆ ಪಾತಕನಾಶನ ಪರಮಪಾವನಗೆ ಅ ತೀತ ಮಹಿಮನಾದ ವೆಂಕಟಗೆ 3 ಖಗವಾಹನನೆಂದೆನಿಸಿದಗೆ ನಗಧರನಾಗಿಹ ಅಘಹರಗೆ ಮೃಗಧರರೂಪಗೆ ಮುಂಚಕಲಾಪಗೆ ಜಗದಾಧಾರಕ ವೆಂಕಟಗೆ 4 ಲೋಕನಾಯಕನಾದ ಕೇಶವಗೆ ಶೋಕಭಂಜನನಾದ ಮಾಧವಗೆ ಸಾಕಾರ ರೂಪಗೆ ಸರ್ವಾತ್ಮಕನಿಗೆ ಶ್ರೀಕರನೆನಿಸುವ ವೆಂಕಟಗೆ 5 ಆಲದ ಎಲೆಯೊಳ್ವೊರಗಿದಗೆ ಆ ಕಾಲದಿ ಅಜನನು ಪೆತ್ತವಗೆ ನಿಗಮ ವಿದೂರಗೆ ಕಾಲಕಾಲಾಂತಕ ವೆಂಕಟಗೆ 6 ಸ್ವಾಮಿ ಪುಷ್ಕರಣಿಯ ವಾಸನಿಗೆ ಭೂಮಿ ವರಾಹತಿಮ್ಮಪ್ಪನಿಗೆ ಪ್ರೇಮದಿ ಜಗವನು ಸಲುಹುವ ನಾಮದ ಸೋಮ ಸನ್ನಿಭನಾದ ವೆಂಕಟಗೆ 7
--------------
ವರಹತಿಮ್ಮಪ್ಪ
ಮಂಗಳ ಮಾರುತಿ ನಂದನಿಗೆಮಂಗಳ ಭಾರತಿ ಸುಂದರಗೆ ಪ ಮಂಗಳ ಮಾಧವನನು ದಿನ ಪಾಡುವಾನಂದತೀರ್ಥ ಸುರವಂದ್ಯನಿಗೆಅ.ಪ. ತರುಣಿ ರೂಪದಿ ಮೋಹಿಸುತಗರಡಿ ಮನೆಯೊಳು ಬಾರೆನುತದುರುಳನ ಮುಂದಲೆಗುರುಳನು ಪಿಡಿದುಧರೆಯೊಳು ಕೆಡಹಿದಿ ನೀ ತ್ವರಿತಾ 1 ಎಲ್ಲರು ಬಂದರು ಕೀಚಕರುಫುಲ್ಲಾಕ್ಷಿಯ ಚಿತಿಕ್ಹಾಕಿದರುವಲ್ಲಭೆ ಚೀರುವ ಕೇಳುತಕ್ಷುಲ್ಲಕರ ಹೆಡೆ ಖಂಡಿಸಿ ನೂರಾರು 2 ಸೈಂಧವ ವೇಷದಿಯನು ಪಿಡಿಯೆಸುಂದರಿ ನಿನ್ನಗೆ ಅಲ್ಪರಿಯೆತಂದು ಅವನ ಅವಳಿಂದ ವಧಿಸಿದೆಇಂದಿರೇಶನ ಪ್ರಿಯ ಸುರದೊರೆಯೆ 3
--------------
ಇಂದಿರೇಶರು
ಮಂಗಳ ಮುಖ್ಯಪ್ರಾಣೇಶಗೆ ಜಯ ಮಂಗಳ ಮೂಜಗವಂದಿತಗೆ ಪ. ಅಂಜನೆತನಯಂಗೆ ಮಾಪ್ರತಿ ಮಹಿಮಂಗೆ ಕಂಜನಾಭನ ಕಾರ್ಯದನುಕೂಲಗೆ ರಂಜಿಪ ಹನುಮಗೆ ಮಂಗಳ 1 ಆ ಮಹಗಡಲ ಲಂಘಿಸಿ ಹೋಗಿ ಲಂಕೆಯ ಧಮಧುಮ ಮಾಡಿ ವನವ ಕಿತ್ತು ರಾಮ ಮುದ್ರಿಕೆ ಜಾನಕಿಗೆ ತಂದಿತ್ತÀ ಹೇಮಾದ್ರಿ ಹನುಮಗೆ ಮಂಗಳ 2 ಸುತ್ತ ಸಾಗರ ಮಧÀ್ಯದಲ್ಲಿ ಲಂಕೆಯ ಮುತ್ತಿ ವನಜಾಕ್ಷಿಯ ಮುಂದೆ ಬಂದು ಹತ್ತು ತಲೆಯ ರಾವಣನೈಶ್ವರ್ಯವನಳಿದಗೆ ಖ್ಯಾತ ಹನುಮಗೆ ಮಂಗಳ 3 ಜಾತಿ ಬಂಧುಗಳ ಒಡಗೊಂಡು ಸಮುದ್ರದ ಸೇತುವ ಕಟ್ಟಿ ಸಾಹಸದಿಂದಲಿ ಸೀತಾಪತಿಯ ಬಲವ ನಡೆಸಿದ ಪ್ರ ಖ್ಯಾತ ಹನುಮಗೆ ಮಂಗಳ 4 ಈ ಕಾಡಕಪಿಯಲ್ಲ ನಿಮ್ಮ ಸೇವಕನೆಂದು ಬೇಡವೆಂದು ಸೀತೆಯ ಭಯಬಿಡಿಸಿ ಚೂಡಾರತ್ನ ಶ್ರೀ ರಾಮರಿಗಿತ್ತ ಬಂಟ ಕೊಂಡಾಡಿಸಿಕೊಂಬಗೆ ಮಂಗಳ 5 ಬಲ್ಲಿದ ರಾವಣೇಶ್ವರನ ಮಾರ್ಬಲವನು ಕಲ್ಲು ಮರದೊಳಿಟ್ಟು ಕೆಡಹಿದಗೆ ಜಲ್ಲುಕ ದೈತ್ಯರಿಗೆಲ್ಲ ಎದೆಯ ಶೂಲವಗಿದ ಧಲ್ಲ ಹನುಮಗೆ ಮಂಗಳ 6 ಬಲು ದೈತ್ಯರನೆಲ್ಲ ಗೆಲಿದು ಮುದ್ದೇನಹಳ್ಳಿಲಿ ಸ್ಥಿರವಾಗಿ ನಿಂದು ಭಕ್ತರ ಹೊರೆವ ಹೆಳವನಕಟ್ಟೆ ವೆಂಕಟೇಶನ ದೂತ ಚಲದಂಗ ಹನುಮಗೆ ಮಂಗಳ 7
--------------
ಹೆಳವನಕಟ್ಟೆ ಗಿರಿಯಮ್ಮ
ಮಗುವು ಕಾಣಯ್ಯ ಮಾಯದ ಮಗುವು ಕಾಣಯ್ಯ ಸುಗುಣಾ ವಾದಿರಾಜರೆ ಮೂಜಗವಾನುದರದೊಳಿಟ್ಟ ಪ ಏಕಾರ್ಣವಾಗಿ ಸಕಲ ಲೋಕವಾಕಾರವಳಿಯಲೂ ಏಕಮೇವಾದ್ವಿತೀಯವೆಂಬಾಗಮಕೆ ಸಮವಾಗೀ ಶ್ರೀಕರಾಂಬುಜದಿಂ ಪಾದಾಂಗುಲಿಯ ಪಿಡಿದು ಬಾಯೊಳಿಟ್ಟು ಶ್ರೀಕಾಂತ ವಟದೆಲೆಯ ಮೇಲ್ಮಲಗಿ ಬ್ರಹ್ಮನ ಪಡೆದಾ 1 ಮಾಯಾಪೂತನೀಯ ಕೊಂದು ಕಾಯವ ಕೆಡಹಿ ಶಕಟನನು ಸಾಯಬಡಿದು ವತ್ಸನ ಧೇನುಕನ ವೃಷಭನ ನೊಯ್ಯನೊದ್ದು ಯಮಳಾರ್ಜುನರಿಗೆ ಸಾಯುಜ್ಯವನಿತ್ತು ತನ್ನ ತಾಯಿಗೆ ತಾ ಮಣ್ಣುಮೆದ್ದು ಬಾಯಿ ಬಿಚ್ಚಿ ತೋರಿಸಿದಾ 2 ಕಡಹದಾ ಮರವನೇರಿ ಸಂಗಡಿಗರೊಂದಿಗೆ ಕಾಳಂದಿಯ ಮಡುವಲಿ ಧುಮುಕಿ ಕಲಕಿ ಜಲವಾ ಆ ಕಾಳಿಂಗನಾ ಪೆಡೆಯ ತುಳಿದು ಜಡಿಯಲವನಾ ಮಡದಿಯರು ಬೇಡಿಕೊಳ್ಳೆ ಕಡಲಿಗಟ್ಟಿ ಬಂದು ಎನ್ನ ತೊಡೆಯ ಮೇಲೆ ಮಂಡಿಸಿದ 3 ಬಳ್ಳಿಗಟ್ಟದುಡಿಯಲ್ಲಿ ಗುಲ್ಲಿಯ ಚೀಲಾವ ಸಿಕ್ಕಿಸಿ ಕಲ್ಲಿಗಟ್ಟ್ಯೊಗರ ಕಂಬಳಿಯ ಕೋಲು ತುದಿಯೊಳು ನಿಲ್ಲಿಸಿ ಹೆಗಲೊಳು ಕೊಂಬು ಕೊಳಲನು ಪಿಡಿದೂದುತ್ತ ಗೊಲ್ಲರೊಡಗೂಡಿ ಆಡುತೆಲ್ಲ ಗೋವುಗಳ ಕಾಯ್ದಾ 4 ಶ್ರುತಿತತಿಗಗೋಚರನು ಚುತಿದೂರನಾದಿಮೂರ್ತಿ ಚತುರ್ಮುಖಾದಿಶೇಷ ದೇವಾರಾಧ್ಯ ದೇವನು ಪತಿ ವೈಕುಂಠಕೇಶವನು ಯತಿಯೆ ನೀ ನೋಡಲು ಶರಣಾಗತನ ತೊಡೆಯೊಳು 5
--------------
ಬೇಲೂರು ವೈಕುಂಠದಾಸರು
ಮಗುವು ಕಾಣಿರಯ್ಯ | ಮಾಯದ | ಮಗುವು ಕಾಣಿರಯ್ಯ ಪ ಸುಗುಣ ವಾದಿರಾಜರೆ ಮೂಜಗವನು ತನ್ನುದರದೊಳಿಟ್ಟಅ ಮಾಯಾ ಪೂತನಿಯ ಕೊಂದು ಕಾಯವ ಕೆಡಹಿ ಶಕಟನ್ನಸಾಯಬಡಿದು ಧೇನುಕನ ವೃಷಭಾಸುರನನೋಯ ನೋಡದ್ಯಮಳಾರ್ಜುನಂಗೆ ಸಾಯುಜ್ಯವನೆ ಇತ್ತು ತನ್ನತಾಯಿಗೆ ತಾ ಮಣ್ಣ ಮೆದ್ದು ಬಾಯ ಬಿಟ್ಟು ತೋರಿಸಿದ1 ಏಕವರ್ಣವಾಗಿಯೆ ಸಕಲಲೋಕವು ಆಕಾರವಳಿಯೆಏಕಮೇವಾದ್ವಿತೀಯನೆಂಬಾಗಮಕೆ ಸರಿಯಾಗಿಶ್ರೀಕರಾಂಬುಜದಿಂ ಪಾದಾಂಗುಲಿಯಂ ಪಿಡಿದು ಬಾಯೊಳಿಟ್ಟುಶ್ರೀಕಾಂತ ವಟಪತ್ರದ ಮೇಲೊರಗಿ ಬ್ರಹ್ಮನ ಪಡೆದ2 ಕಡಹದ ಮರನೇರಿ ಸಂಗಡಿಗರೊಡನೆ ಕಾಳಿಂದಿಯಮಡುವ ಧುಮುಕಿ ಧುಮುಕಿ ಕಲಕಿ ಆ ಕಾಳಿಂಗನಪೆಡೆಯ ತುಳಿದು ಜಡಿಯಲವನ ಮಡದಿಯರು ಬೇಡಿಕೊಳ್ಳೆಕಡಲಿಗಟ್ಟಿ ಬಂದು ತಾಯ ತೊಡೆಯ ಮೇಲೆ ಮಲಗಿದಂಥ 3 ಕಲ್ಲಿಗಟ್ಟಿ ಗೂಡೆಯಲಿ ಗೋಲಿಯ ಚೀಲವನಿಕ್ಕಿಹಿಲ್ಲಿ ಕಟ್ಟೋಗರ ಕಡಕಲಕ್ಕಳೆಯಾ ತುದಿಯಲಿನಿಲ್ಲಿಸಿ ಪೆಗಲೊಳು ಕೊಂಬು ಕೋಲನೆ ಪಿಡಿದುಗೊಲ್ಲರೊಡಗೂಡಿ ನಮ್ಮೆಲ್ಲರ ಗೋವುಗಳ ಕಾಯ್ದ 4 ಪತಿ ವೈಕುಂಠ ಕೇಶವನುಯತಿಯೆ ನೀ ನೋಡಯ್ಯ ಶರಣಾಗತನ ತೊಡೆಯಿಂ ಮಾಯವಾದ 5
--------------
ಕನಕದಾಸ
ಮಾನ ನಿನ್ನದು ಅಭಿಮಾನ ನಿನ್ನದು | ದಾನವಾಂತಕ ರಂಗ ದಯಮಾಡಿ ಸಲಹೊಪ ಒಡೆಯಳು ಕುಳಿತಿರಲು ತೊತ್ತಿನ ಮುಂದಲಿಯ | ಪಿಡಿದೆÀಳೆದೊಯ್ದು ಘಾಸಿಯನು ಮಾಡಿ || ಅಡಿಗಡಿಗೆ ಅಪಮಾನಗೊಳಿಸಿ ಕೊಲೆ ಮಾಡಿದರೆ | ಒಡತಿಗಲ್ಲದೆ ಕೊರತೆ ಅವಳಿಗೇನಯ್ಯಾ1 ಸದನದೊಳು ಪುರುಷನು ಇರುತಿರಲು ಹೆಂಡತಿಯ | ಎದೆಯ ಮೇಲಿನ ಸೆರಗು ಸೆಳೆದುಕೊಂಡು|| ಒದೆದು ಕೈ-ಕಾಲಿಂದ ಮಾನಹಾನಿ ಮಾಡಿದರೆ | ಅದು ಪುರುಷಗಲ್ಲದೆ ವಧುವಿಗೇನಯ್ಯಾ 2 ಪಿತನ ಬಳಿಯಲಿ ಮಗನು ಕುಳಿತಿರಲು ವರ ಮನುಜ | ಖರೆಯಿಂದ ಕೆಡಹಿ ಪಾಶದಲಿ ಕಟ್ಟಿ ಬಿಗಿಯಾಗಿ || ಮತಿಗೆಡಿಸಿ ನಾನಾ ಪ್ರಕಾರ ಭಂಗವ ಮಾಡೆ | ಕ್ಷತಿ ತಂದೆಗಲ್ಲದೆ ಕುವರಗೇನಯ್ಯಾ3 ಆಳುವ ದೊರೆಯ ಸಮ್ಮುಖದಲಿ ಬಂಟನಿರೆ | ಖೂಳರು ಬಂದು ಶಸ್ತ್ರವನು ತೆಗೆದು || ಕೀಳು ಮಾಡಿ ಬಂಟನ ಅಭಿಮಾನ ಕೊಂಡರೆ ಏಳಲವು ಅರಸಗಲ್ಲದೆ ಬಂಟನಿಗೇನು 4 ಸತ್ಯ ಸಂಕಲ್ಪ ಸರ್ಮೋತ್ತಮ ಸುರಪಾಲ | ಅತ್ಯಂತ ಪಾಲಸಾಗರ-ಸದನನೆ || ಭೃತ್ಯರಪಮಾನ ಅಭಿಮಾನ ನಿನ್ನದು ಸದಾ | ಸಿರಿ ವಿಜಯವಿಠ್ಠಲರೇಯಾ 5
--------------
ವಿಜಯದಾಸ
ಮಾನವ ಪ ಅಜ ಭವೇಂದ್ರಾದಿಗಳು ವಂದಿಸುವ ಪಾದವನುಅ ಪಾದ ಕಾಕು ಶಕಟನ ಒದ್ದು ಕೊಂದ ಪಾದನಾಕ ಭೀಕರ ಬಕನ ಮೆಟ್ಟಿ ಸೀಳಿದ ಪಾದಲೋಕ ಪಾವನ ಗಂಗೆ ಪುಟ್ಟಿದ ಪಾದವನು 1 ಶಿಲೆಯ ಸತಿಯಳ ಬಂಧವಿಮುಕ್ತಿಗೊಳಿಸಿದ ಪಾದಒಲಿದು ಪಾರ್ಥನ ರಥವನೊತ್ತಿದ ಪಾದಕಲಿ ಸುಯೋಧನನ ಓಲಗದಿ ಕೆಡಹಿದ ಪಾದಕಲಕಿ ಕಾಳಿಂಗನ ಪೆಡೆ ತುಳಿದ ಪಾದವನು 2 ಗರುಡ ಶೇಷಾದಿಗಳು ಬಿಡದೆ ಪೊತ್ತಿಹ ಪಾದಧರೆಯನೀರಡಿ ಮಾಡಿ ಅಳೆದ ಪಾದಸಿರಿ ತನ್ನ ತೊಡೆಯ ಮೇಲಿರಿಸಿ ಒತ್ತುವ ಪಾದವರ ಕಾಗಿನೆಲೆಯಾದಿಕೇಶವನ ಪಾದವನು 3
--------------
ಕನಕದಾಸ
ಮುಖ್ಯಪ್ರಾಣ ಕರವೆತ್ತಿ ನಿಂದ ಪ ಹರಿಯೆ ಪರನೆನ್ನದವನ ಹಲ್ಮುರಿವೆನೆಂದು ಅ.ಪ. ಸಿರಿ ರಾಮನಾಜ್ಞೆಯನು ಸಿರದೊಳಾನುತ ಬಂದು ವರಕಪಿಗಳೊಡಗೂಡಿ ಸಿರಿದೇವಿಯನರಸುತ ಶರಧಿತಟಕೆ ಬಂದು ಸಿರಿಪೋದ ಪಥವರಿಯದೆ ಪರಿತೋರದಿರ್ದ ಹರಿವರರಿಗಭಯವಿತ್ತು 1 ಇರುಳು ಇಂದ್ರಜಿತುವಿನ ಶರಹತಿಯಲಳಿದಂಥ ಸಿರಿ ರಾಮ ನೋಡುತ ಮರುಗುತಿರಲಂದು ವರ ಜಾಂಬವನ ಸುಮತಿಯಲಿ ತ್ವರಿತದಿ ಸಂಜೀವನ ಗಿರಿಯ ತಹೆನೆನ್ನುತ 2 ಭರದಿ ದಶಶಿರನು ತಾನರಿಯದೆ ಹನುಮನ ಬಲ ಭರವಸದಲಿ ಮಾಡಿ ಮೂರು ಗುದ್ದಿನ ಪಂಥ ಕರಹತಿಗೆ ಕಂಗೆಟ್ಟು ಧುರವ ಬಿಟ್ಟೋಡುತಿರೆ ಅರಸಿ ಅಸುರನ ಪಿಡಿದ ಹರಿಸು ಋಣವನೆಂದು 3 ದುರುಳ ಕೀಚಕನಂದು ಕರಿಗಮನೆಯನು ಕಂಡು ಸ್ಮರಶರಹತಿಯಿಂದ ಉರುತರದಲಿ ನೊಂದು ಹರಿಣಾಕ್ಷಿಯನು ಬರಿಸಿ ಸೆರಗ್ಹಿಡಿದೆಳೆದುದನು ತರಳೆ ಮುಖದಿ ಕೇಳವನ ಸಿರ ಮುರಿವೆನೆಂದು 4 ಕುರುಪತಿಯ ಸಭೆಯಲಿ ದುರುಪದಿ ಗೈದ ಶಪಥ ಮರೆಯದೆ ದುಶ್ಶಾಸನನ ಧುರದಿ ಕೆಡಹಿ ಕೊಂದು ಉರ ಬಗೆದು ಕರುಳ ನಿಜತರುಣಿಗೆ ಮುಡಿಸುವಾಗ ಬರಲಿ ಬಿಡಿಸುವರೆಂದು ಉರು ಗದೆಯನು ಪಿಡಿದು 5 ಹರಿಹರರು ಸರಿಯೆಂದು ಹರಟುತಿರ್ದವರನು ಗುರುತರ ವಾಕುಗಳೆಂಬ ಬಿರುಬಾಣದಿಂದ ಗರ ಹೊಡೆದವರ ಮಾಡಿ ಪರತತ್ವವನು ಪೇಳಿ ಭರದಿ ನಡೆದೆ 'ಪರಮೋನಹತಿ ಸದೃಶ' ವೆಂದು 6 ಸರುವರಂತರ್ಯಾಖ್ಯ ಹರಿಯಾಜ್ಞಾನುಸಾರ ಸರುವ ಜೀವರಿಗೆ ತಾನು ಗುರುವೆನಿಸಿಕೊಂಡು ಸಿರಿ ರಂಗೇಶವಿಠಲನ ದುರಿತ ಭಯವಿಲ್ಲೆಂದು 7
--------------
ರಂಗೇಶವಿಠಲದಾಸರು
ಮುನಿದ ಭಾವುನದಂಡು ಕಂಡು ನಿನ್ನ ಮನೆಮಾರಿ ನಾಸೆಯನು ನೀಡಾಡು ಪ ಲಂಬಾಣಿ ಜನ ಬಂತು ನೋಡು ನೀನು ದಿಬ್ಬವ ಹತ್ತಿ ಕಾನಿಗೆ ಓಡು ತಂಬಿಗೆಗಳ ಜೊತೆಮಾಡು ತಲೆ ಚಂಬಿಗೆ ಬಂತು ಮಾನವರಿಗೆ ಕೇಡು 1 ಕಂಡ ಕಂಡವರನು ಹಿಡಿದು ಕರ ಚೆಂಡಾಡಿ ಹೊಯ್ದು ಕೆಡಹಿ ಮೆಟ್ಟಿ ತಿವಿದು ಖಂಡೆಯದೊಳು ಘಾಯ ಗರೆದು ಮೈ ರೊಂಡಿ ಮುರಿದು ಗಂಟಿಗೆ ನೀರನೆರೆದು 2 ಕತ್ತಿಯ ಕಿತ್ತು ಕೈಯೆತ್ತು ಗೋಣ ಕುತ್ತಿ ಹಸ್ತಕೆ ಹಸ್ತವನು ತರಿದೊತ್ತಿ ರಕ್ತ ಮಾಂಸದ ಕರುಳೊತ್ತಿ ಹಾ ರಿತು ಗೂಡಿಂದ ಜೀವನು ಕಣ್ಣ ಕುತ್ತಿ 3 ಹಂತಕಾರಿಗಳೊಂದೆ ರೂಪು ಪಾಪ ವಂತರಿಗಿನಜ ತೋರಿಸುವ ವಿದೂಪ ನರ ಕಂತೆಯ ಬಿಡದೆ ಸುಲಿಯಲಿಕೆ ಸಾಪು 4 ಶೀಲವಂತರು ಶೀಲಗೆಟ್ಟರು ದುಃ ಶೀಲರು ಶೀಲದಾಚಾರವ ಸೊಟ್ಟರು ಕೀಳು ಮೇಲೊಂದಾಯಿತಷ್ಟು ಲಕ್ಷ್ಮೀ ಲೋಲ ಮಾಡಿಸುವ ಕುಚೇಷ್ಟೆ ಇವಿಷ್ಟು 5
--------------
ಕವಿ ಪರಮದೇವದಾಸರು
ಯಾಕುಪೇಕ್ಷಿಸುವಿ ಕರುಣೈಕನಿಧಿ ನರಸಿಂಹ ವೈರಿ ಪುಂಜನನ ಶ್ರೀಕರನೆ ನೀನೆನಗೆ ಶರಣೆಂದು ನಂಬಿದೆನು ಸಾಕಬೇಕಯ್ಯ ದಾಸರನು ಪ. ಹುಡುಗ ಪ್ರಲ್ಹಾದ ಜಗದೊಡೆಯ ನೀನಹುದೆಂಬ ನುಡಿಯಲಾಲಿಸುತವನ ಪಿತನು ಕಡಿವೆನೆಂದೆದ್ದು ಮುಂದಡಿಯಿಟ್ಟು ಮುಂದರಸಿ ದೃಢ ಮುಷ್ಟಿಯಿಂದ ಖಂಬವನು ಬಡಿಯುತಿರೆ ಶತಕೋಟಿ ಸಿಡಿಲಂತೆ ಗರ್ಜಿಸುತ ಘುಡುಘುಡಿಸಿ ಬಂದು ದೈತ್ಯನನು ಪಿಡಿದೆತ್ತಿ ತೊಡೆಯ ಮೇಲ್ ಕೆಡಹಿ ದಶನಖದಿಂದ ಒಡಲ ಬಗೆದನೆ ನೀಚರನು 1 ನರಸಿಂಹನೆಂಬ ಈರೆರಡು ವರ್ಣವ ಜಪಿಸೆ ದುರಿತ ದೂರೋಡುತಿಹವೆಂದು ಸರಸಿಜೋದ್ಭವ ಶಂಭು ಸುರನಾಥ ಮುಖ್ಯಮುನಿ ವರರು ಕೊಂಡಾಡುತಿಹರಿಂದು ಅರಿತದನು ತ್ವತ್ಪಾದ ಸರಸಿಜವೆ ಶರಣೆಂದು ದೊರೆ ನಿನ್ನ ನಂಬಿಕೊಂಡಿಹೆನು ಅರಿಭಾವ ಸಾಧಿಸುವ ದುರುಳರನು ಪಿಡಿದವರ ಕರುಳ ತೆಗೆದೆತ್ತಿ ಬೀರದನು 2 ಅತಿ ಸೂಕ್ಷ್ಮಯಂದಗ್ನಿ ಗತಿಯನ್ನುಪೇಕ್ಷಿಸಲು ವಿತತವಾಗುವುದು ಕ್ಷಣದೊಳಗೆ ಜತನ ಮಾಡುವರದರ ಗತಿಯನಳಿಸುವುದು ಸ- ಮ್ಮತವಾಗಿರುವುದು ಜಗದೊಳಗೆ ಪತಿತಪಾವನ ಶೇಷಗಿರಿರಾಜ ನೀ ಯೆನಗೆ ಗತಿಯಾಗಿ ಸಲಹುವುದರಿಂದ ವಿತಥಾಭಿಲಾಷೆಯಾತತಾಯಿಗಳ ತ್ವರೆಯಿಂದ ಹತಮಾಡಿಸು ಶ್ರೀ ಮುಕುಂದ 3
--------------
ತುಪಾಕಿ ವೆಂಕಟರಮಣಾಚಾರ್ಯ