ಒಟ್ಟು 88 ಕಡೆಗಳಲ್ಲಿ , 33 ದಾಸರು , 86 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಮಣಿ ಮಂಜುಳವಾಣಿ ಕಮನೀಯ ಸುಶ್ರೋಣಿ ವಿಮಲ ಪಲ್ಲವಪಾಣಿ ಫಣಿಪವೇಣಿ ಮೀನಾಕ್ಷಿ ಯೀ ಚಿಂತೆ ನಿನಾಂತುದೇಂಕಾಂತೆ ಮೌನಮೇಂ ಮತಿವಂತೆ ಬಿರುಸದೆನಿತೆ ಕುಹಕರುಕ್ತಿಯ ಕೇಳಿ ಕಡುಕೋಪವನು ತಾಳಿ ಬಹುವಿಧದಿ ಬಳಲಿಸುವೆ ವಿಹಿತವೇನೆ ಹೆಬ್ಬುಲಿಯ ತೆರದಿಂದ ಬೊಬ್ಬಿರಿದು ಮತಿಯುಳಿದು ಅಬ್ಬರಿಸಿ ಕೂಗುವರೆ ಅಬ್ಜನೇತ್ರೆ ಕೈಪಿಡಿದ ರಮಣನೊಳು ಮುನಿಸೆ ತರುಣಿ ತಾಪಶಮನವ ಮಾಡು ನೋಡು ರಮಣಿ ಓಪನೆಂದೊಲಿದಾಡು ಕರವನೀಡು ಭೂಪಶೇಷಾದ್ರೀಶನತ್ತ ನೋಡು
--------------
ನಂಜನಗೂಡು ತಿರುಮಲಾಂಬಾ
ರಾಜೀವದಳನೇತ್ರ ರಾಮಚಂದ್ರನೆ ಶುಭ- ನಾಮಧೇಯನೆ ನಿನಗಾನಮಿಸುವೆನು ಪ ರಾಮರಾಕ್ಷಸಕುಲ ಭಯಂಕರ ರಾಮದಶರಥ ಪುತ್ರನೆ ವರ ಸಾಮಗಾನ ವಿಲೋಲ ಶ್ರೀವರ ರಾಮ ಭರತ ಶತ್ರುಘ್ನ ಪಾಲಕ ಅ.ಪ ಸುರರೆಲ್ಲ ನೆರೆದು ಋಷಿವರರೆಲ್ಲ ಒಂದಾಗಿ ವರ ಕ್ಷೀರಾಂಬುಧಿಯ ಸಾರುತ ವೇಗದಿ ಪರಮಾತ್ಮ ನಿನ ಕಂಡು ಪರಿಪರಿ ಸ್ಮರಿಸುತ ನೆರೆದರು ದೇವ ಗಂಧರ್ವ ನಾರದರೆಲ್ಲ ಗರುಡ ಗಮನನೆ ಉರಗಶಯನನೆ ಪರಮ ಪುರುಷನೆ ಪುಣ್ಯಚರಿತನೆ ತ್ವರದಿ ಎಮ್ಮಯ ಮೊರೆಯ ಕೇಳೆಂದು ಭರದಿ ಪ್ರಾರ್ಥನೆ ಮಾಡುತಿಹರು 1 ಖೂಳ ದೈತ್ಯರು ನಮ್ಮ ಬಾಳಗೊಡರೊ ದೇವ ಭಾಳ ವ್ಯಾಕುಲರಾಗಿ ದು:ಖಿಪೆವು ಕೇಳಿ ತಡಮಾಡದೆ ಪಾಲಿಸಿ ಸಲಹಯ್ಯ ಶ್ರೀಲೋಲ ಶ್ರೀವರ ಶ್ರೀವತ್ಸಲಾಂಛನ ಶ್ರೀಶ ಶ್ರೀ ಭೂದೇವಿ ರಮಣನೆ ಮಾತುಳಾಂತಕ ಮದನಜನಕನೆ ವಾಸುದೇವನೆ ಭಜಿಪ ಭಕ್ತರ ಸೋಸಿನಲಿ ರಕ್ಷಿಸುತ ಪೊರೆಯುವೆ 2 ಭಕ್ತವತ್ಸಲ ಸ್ವಾಮಿ ಭಕ್ತರ ಸುರಧೇನು ಯುಕ್ತ ಮಾತುಗಳಾಡಿ ಸಂತಯಿಸಿ ಸತ್ಯ ಸಂಕಲ್ಪನು ಮತ್ತವರನು ಕಳುಹಿ ಸತ್ಯಸಂಧನ ದಶರಥನುದರದಿ ಪುಟ್ಟಿ ಮತ್ತೆ ವಿಶ್ವಾಮಿತ್ರ ಬರಲು ಅರ್ಥಿಯಲಿ ಯಾಗವನೆ ನಡೆಸಲು ಸುತ್ತಿ ಬರುವ ಸುರರನೆ ಸದೆದು ಮತ್ತೆ ಯಾಗ ನಿರ್ವಿಘ್ನ ಮಾಡಿದ 3 ಸೀತಾಸ್ವಯಂವರಕ್ಕಾಗಿ ಬರುತಿರಲಾಗವರು ಗೌತಮ ಸತಿಯ ಶಾಪಹರಿಸಿ ಪಾತಕಿ ತಾಟಕಿಯನು ಕೊಂದು ಹರುಷದಿ ನಿ- ರ್ಭೀತನಾಗಿ ಮಿಥಿಲಾಪುರಕೆ ಸೇರಲು ಬಂದು ಆತ ಲಕ್ಷ್ಮಣನೊಡನೆ ಶಿವಧನು ನೀತಿಯಿಂದೆತ್ತುತಲಿ ಸೀತೆಯು ಪ್ರೀತಿಯಲಿ ವನಮಾಲೆ ಹಾಕಲು ಆಕೆಯ ಕೈಪಿಡಿದ ರಾಮನೆ 4 ರಾಮಲಕ್ಷ್ಮಣ ಭರತ ಶತ್ರುಘ್ನರಿಗೆ ಲಗ್ನ ನೇಮದಿಂದಲಿ ಮಾಡಿ ಕಳುಹಲಾಗ ಸಾಮಜವರ ಅಯೋಧ್ಯಾಪುರದಿ ಭಕ್ತ- ಸ್ತೋಮವನೆರಹಿ ರಾಜ್ಯಾಭಿಷೇಕವ ನಡಸೆ ಆ ಮಹಾಮುನಿ ಸ್ತೋಮ ಸುರಗಣ ರಾಮನಿಗೆ ಪಟ್ಟವೆನುತ ಹರುಷಿಸೆ ಆ ಮಹಾಕೈಕೆ ವರವ ಬೇಡುತ ರಾಮನಿಗೆ ವನವಾಸವೆನಲು 5 ವನವನ ಚರಿಸುತ ಘನರಕ್ಕಸರ ಕೊಂದು ವನಜಾಕ್ಷಿ ಮಾಯಾಮೃಗವೆ ಬೇಡಲು ವನಮೃಗ ಬೆನ್ನಟ್ಟಿ ತರುವೆನೆನುತ ಪೋಗಿ ಬಣಗು ರಾವಣ ಸೀತಾಹರಣವ ಮಾಡಲು ಕುರುಹು ಕಾಣದೆ ಸೀತೆಯ ವನವನದಿ ಚರಿಸುವ ಸಮಯದಲಿ ಕಪಿ ವರರ ಸೈನ್ಯವ ಕಳುಹಿ ಮುದ್ರಿಕೆ ಇತ್ತು ಜನಕ ಜಾತೆಯ ನೋಡಿ ಬರಲು 6 ಕಡಲ ಕಟ್ಟುತ ಸೈನ್ಯ ನಡಿಸಿ ಯುದ್ಧವ ಮಾಡೆ ಬಿಡದೆ ರಾವಣ ಸಹಿತೆಲ್ಲರನು ಕೊಂದು ಕಡು ಭಕ್ತನಿಗೆ ಲಂಕಾಪುರದಲಿ ಪಟ್ಟವ ಕಟ್ಟಿ ಮಡದಿ ಸಹಿತ ಪುಷ್ಪಕವನೇರಿ ಬರುತಿರೆ ಸಡಗರದಿ ಹನುಮಂತ ಭರತಗೆ ಒಡೆಯ ಬರುತಿಹನೆಂದು ಪೇಳಲು ಕಡುಹರುಷದಿ ಅಯೋಧ್ಯೆಯನಾಳಿದ ಕಡಲೊಡೆಯ ಕಮಲನಾಭ ವಿಠ್ಠಲನೆ 7 ಬಂದ ಶ್ರೀರಾಮಚಂದ್ರ ಭಾಗವತರ ಕೂಡಿಇಂದಿರೆ ಜಾನಕಿ ಸೌಮಿತ್ರಿ ಸಹಿತದಿ
--------------
ನಿಡಗುರುಕಿ ಜೀವೂಬಾಯಿ
ರಾಯರೆ ಗತಿಯು ನಮಗೆ | ವಾಯುಮತೋದ್ಧಾರ ಶ್ರೀ ರಾಘವೇಂದ್ರಗುರು ಪ ಯುಕುತ ಮಾಗಿಹ ಚೂತ ಸುಕುಜ ಗತಿಯು | ಅಕಳಂಕ ಶ್ರೀಮಂತ್ರಮಂದಿರದಿ ನೆಲೆಸಿಪ್ಪ 1 ಋಷಿಗಳಿಗೆ ಪ್ರಣವೆಗತಿ ಝಷಗಳಿಗೆ ಜಲವೆ ಗತಿ ಸಸಿಗಳಭಿವೃದ್ಧಿಗೆ ಶಶಿರವಿ ಗತಿಯೊ ಶಿಶುಗಳಿಗೆ ಜನನಿಗತಿ ಪಶುಗಳಿಗೆ ತೃಣವೆ ಗತಿ ಅಸಮ ಮಹಿಮೆಯಲಿ ಮೆರೆವ ಮಿಸುನಿ ಶಯ್ಯಜರಾದ 2 ಕಾಮಿನಿ ಮಣಿಯರಿಗೆ ಕೈಪಿಡಿದ ಕಾಂತಗತಿ ಭೂಮಿ ಬುಧರಿಗೆ ಮಧ್ವಶಾಸ್ತ್ರ ಗತಿಯೊ ಧಾಮ ಭಯ ಪೋಪುದಕೆ ಶಾಮಸುಂದರವಿಠಲ ಸ್ವಾಮಿ ನಾಮವೆ ಗತಿಯೊ 3
--------------
ಶಾಮಸುಂದರ ವಿಠಲ
ವಧು ವರರ ಯದ್ಧರಿಸೊ ಉದಧಿಶಯನ ಒದಗಿಸುತಲಾಯುರಾರೋಗ್ಯ ಸುಜ್ಞಾನ ಪ ಯತಿಪೂಜೆ ಕ್ಷಿತಿದೇವ ತತಿಸೇವೆ ತಿಥಿತ್ರಯದ ವೃತನೇಮ ಮೊದಲಾದ ಸತ್ಕಕರ್ಮವ ಮತಿಯಿಂದ ಗೈಯುತಲಿ ಪತಿತಪಾವನ ನಿನ್ನ ಕಥೆಗಳನು ಕೇಳ್ವದಕೆÉ ರತಿಯಿತ್ತು ಪ್ರತಿದಿನದಿ 1 ಹಿರಿಯರಲಿ ವಿಶ್ವಾಸ ಗುರುಮುಖದಿ ಉಪದೇಶ ಮರುತ ಸಚ್ಛ್ಯಾಸ್ತ್ರದಔಯಾಸವ ಸ್ಥಿರವಾದ ಮನವಿತ್ತು ಮರಿಯದಲೆ ಮಾರಮಣ 2 ಸಾಮಗಾನವಿಲೋಲ ಶಾಮಸುಂದರವಿಠಲ ಸ್ವಾಮಿಮನ್ನಿಸಿ ಎನ್ನ ಎನ್ನ ವಿಜ್ಞಾಪನೆ ಯಾಮಯಾಮಕೆ ನಾಮಸುಧೆಯನು ಸವಿಪ ಈ ಮಹಾಸುಖ ಗರೆದು ಪ್ರೇಮದಿಲಿ ಕೈಪಿಡಿದು 3
--------------
ಶಾಮಸುಂದರ ವಿಠಲ
ವರದ ನರಹರಿ ವಿಠಲ | ಪೊರೆಯ ಬೇಕಿವಳ ಪ ಕರಿವರದ ಶ್ರೀ ಹರಿಯೆ | ಕರುಣಿ ನೀನೆಂದರಿತುಮೊರೆಯಿಡುವೆ ನಿನ್ನಡಿಗೆ | ಮರುತಾಂತರಾತ್ಮಾ ಅ.ಪ. ದಾಸದೀಕ್ಷೆಯಲಿ ಮಹ | ದಾಶೆಯನು ಉಳ್ಳವಳಲೇಸಾಗಿ ಕೈಪಿಡಿದು | ನೀ ಸಲಹ ಬೇಕೋವಾಸವಾನುಜ ದಾಸ | ವೇಷದಿಂ ಸ್ವಪ್ನದಲಿಸೂಸಿ ಸೂಚಿಸಿದ ಉಪ | ದೇಶವಿತ್ತಿಹೆನೋ 1 ಮಧ್ವಮತ ಪದ್ಧತಿಗ | ಳುದ್ಧರಿಸಿ ಇವಳಲ್ಲಿಶ್ರದ್ಧೆಯಿಂ ತವಪಾದ | ಪದ್ಮಗಳ ಭಜಿಸೇಶುದ್ಧ ತತ್ವ ಜ್ಞಾನ | ಸದ್ಭಕ್ತಿ ವೈರಾಗ್ಯಮಧ್ವಾಂತರಾತ್ಮ ಅನಿ | ರುದ್ಧ ಪಾಲಿಪುದೋ 2 ಪತಿಯ ಕೈಂಕರ್ಯವನು | ಹಿತದಿಂದ ಮಾಳ್ಪಂಥಮತಿಯ ನೀ ಕರುಣಿಸುತ | ಕೃತ ಕೃತ್ಯಳೆನಿಸೋಕ್ಷೀತಿಭಾರಹರಣ ಶ್ರೀ | ಪತಿಯೆ ನೀ ಒಲಿದಿವಳಅತುಳ ವಿಭವದಿ ಮೆರೆಸಿ | ಗತಿಪ್ರದನು ಆಗೋ 3 ಸಂತತದಿ ತವನಾಮ | ಚಿಂತಿಸುವ ಸೌಭಾಗ್ಯವಂತೆಯೆಂದೆನಿಸಿವಳ | ಕಾಂತೆಯ ಸಖನೇಅಂತರಾತ್ಮಕ ನೀನೆ | ಅಂತರಂಗದಿ ತೋರಿಸಂತಸವ ನೀಡಯ್ಯ | ಪಂಥಭಿಧ ಹರಿಯೇ 4 ಸರ್ವಜ್ಞ ಸರ್ವೇಶ | ಸರ್ವವ್ಯಾಪಕ ದೇವನಿರ್ವಿಕಾರನೆ ಹರಿಯೆ | ದುರ್ವಿ ಭಾವ್ಯಾಸರ್ವವಿಧ ಪರತಂತ್ರ | ದರ್ವಿ ಜೀವಿಯ ಕಾಯೋಸರ್ವಸುಂದರ ಗುರೂ ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಾದಿರಾಜರು ಸಾಗಿಬಾರಯ್ಯ ಗುರುವೆ ವಾದಿರಾಜೇಂದ್ರಾರ್ಯ ಬಾಗುವೆ ನಾ ನಿನಗೆ ಶಿರವಾ ಪ. ಭಾಗವತರ ದುರಿತಾಘಂಗಳನೆ ಕಳೆದು ಬಂದಾ ದುರ್ವಾದಿಗಳನೆ ಮರೆದು ಸುರರೆಲ್ಲ ಇವರೆ ಮೇಲ್ ಪೂ ಮಳೆಯಗರೆದು ತುಂಬುರರು ನರದರು ಗಾನಗಳಿಂದ ಮೆರೆದು ಘಲುಘಲು ಘಲುರೆಂದು, ಅಪ್ಸರರು ನಾಟ್ಯಗಳ ಕುಣಿದು ಅ.ಪ. ಹೊದ್ದ ಕಾವೆ ಶಾಟಯಲೊಪ್ಪುವಾ ಶ್ರೀ ಮುದ್ರಿ ಗಂಧಾಕ್ಷತೆಯಿಂದಾ ಗಳದಲ್ಲಿ ಶ್ರೀ ತುಳಸಿ ಪುಷ್ಪಮಾಲೆಗಳಿಂದಾ ಝಗಝಗನೆ ಮುಖಕಮಲಳ್ಹೋಳವೋದು ಯೆಂದಾ ಋಜುಗಣದವರಹುದೆಂದು ಪೇಳುವಾನರನಿಂದಾ ಮಾಡುವವರಿಗೆ ಕ್ರಿಮಿಕೀಟಗಳು ದುರುವುವುದೇಹದಿಂದಾ ಬಂದ ಜನರಿಗ್ಹರುಷ ಬಡಿಸುವದರಿಂದಾ ಮುದದಿಂದಾ 1 ಏನುಪೇಳಲಿ ಗುರುವೆ ನಿನ್ನ ಮಹಿಮೆಯು ನೋಡಲಾಶ್ಚರ್ಯವೋ ಭೂತರಾಜರಿಂದ ಪೂಜೆಗೊಂಬುವ ಛಂದವೋ ಧಿಂ ಧಿಮಿ ಧಿಮಿಕೆಂದು ಕುಣಿದಾಡುವಾನಂದವೊ ಯಡಬಲದಿ ದ್ವಾರ ಪಾಲಕರಿರುವಾನಂದವೋ ಮುಕ್ತಿಯನೆ ಕೊಡುವಾ 2 ನಿನ್ನಂಥಾ ಕರುಣಿ ಗುರು ಇನ್ನಿಲ್ಲ ಧರೆಯೊಳು ಮನ್ನೀಸಿ ಸಲಹಯ್ಯ ಮಹರಾಯ ಘನ್ನ ಸಂಸಾರದೊಳು ಬನ್ನಪಟ್ಟು ಬಹಳ ನೊಂದೇನೀ ಕೈಪಿಡಿದು ಎಂದು ನಿಂದೀನೀ ಉದ್ಧಾರ ಮಾಡಬೇಕೆಂದು ಬಂದೀನಿ ಮಂದ ಭಾಗ್ಯ ಜೀವನ ಕುಂದುಗಳೆಣಿಸಿದಾಗೊದೊ ಇಂದು ಅಡಿಗಡಿಗೆ ನಮೋ ಬೇಡುವೆನೋ ಬಂಧೊ 3 ರುಕ್ಮಿಣಿ ಕಳುಹಿದಾ ವಾಲೆಯು ತಾನು ಶ್ರಿ ಕೃಷ್ಣಗರ್ಪಿಸಿದನು ದ್ವಿಜನು ಸಾಮಾನ್ಯವಲ್ಲವೋ ಈತ ಗುರುರಾಜನೆಂದೆನಿಸೀದಾ ದುರ್ವಾದಿಗಳು ಜಯಸೀದಾ ಪವಮಾನರಾಯನೆಂದೆನಿಸಿದಾ ಸುರರಿಗಮೃತವನುಣಿಸೀದಾ ವೃಂದಾವನ ಚಾರ್ಯರಿಂದ ಸೇವೆ ಸ್ವೀಕರಿಸೀದಾ ಸುಖವಸುರಿಸೀದಾ 4 ಸ್ವಾದೀಯಪುರದಲ್ಲಿ ಇರುವರೋ ಗುರುರಾಜರು ಅಮೃತ ಪಾನ ಬಂದ ಸೇವಕರಿಗಭೀಷ್ಟವ ಕರೆದು ತಾ ಕೊಡುವ ದ್ರಷ್ಟ ಜನರಾ ಫಲ್ಗಳ ಮುರಿವಾ ಸರ್ವೇಶನಲ್ಲದೆಂಬೋರ ಅಳಿವಾ ಮಧ್ವಮತವನ್ನುದ್ದಾರ ಮಾಡುವ ಕಾಳೀಮರ್ಧನಕೃಷ್ಣನೊಲಿವಾ 5
--------------
ಕಳಸದ ಸುಂದರಮ್ಮ
ವಾಸುದೇವನ ಭಜಿಸೊ ಪ ವೇಷಹಾಕಿದರೇನು ವೇದಾರ್ಥ ತಿಳಿದೀತೆ ಅ.ಪ ಉದರಂಭರಣಕ್ಕಾಗಿ ಪದ ಪದ್ಯಗಳ ಹೇಳಿ ತುದಿಮೊದಲಿಲ್ಲದ ದೋಷಕೆ ಗುರಿಯಾಗಿ ಸದಮಲನೆಂದರೆ ಸರ್ವರು ನಗರೇನೊ 1 ದುರಿತ ಪರಿಹರವೆಂದು ಆಡುತಲಿದೆ ಶೃತಿಯು ಕರಣತ್ರಯವು ಶುದ್ಧಿಯಿರ ಬೇಕದಕೆ ಮುಖ್ಯ ಕಾರಣ ಬಾಯಿಂದ ನುಡಿದರೇನಾಯಿತು2 ಪಂಚಸದ್ವರ್ಣಾವು ಪರಮಾತ್ಮನ ನಾಮ ವಂಚನೆ ಇದರೊಳಿಲ್ಲಾ ಸರ್ವರು ನುಡಿವರು ಗರ್ವವೇತಕೆ ನಿನಗೆ 3 ಕಾಲಕಾಲಕೆ ಹರಿಯೋಲಗವ ಮಾಡಿ ವೇಳೆಗೆ ದೊರೆತದ್ದು ಭುಂಜಿಸುತಲಿ ಲಕ್ಷ್ಮೀ- ಲೋಲನ ಕಂಡ ಕಂಡಲಿ ಸ್ಮರಣೆಗೈದೂ 4 ಹೊರಗೆ ಡಂಭವ ಬಿಡು ಒಳಗೆ ನಿಶ್ಚಲನಾಗು ಪರರಿಗೆ ಹಿತವ ತೋರು ಗುರುರಾಮವಿಠಲನು ಕರುಣದಿ ಕೈಪಿಡಿದು ಪರಮಸೌಖ್ಯವನೀವ ನಿಜಭಕ್ತನಾದರೆ 5
--------------
ಗುರುರಾಮವಿಠಲ
ಶ್ರೀ ರಮೇಶನೆ | ಶ್ರೀ ನಾರಸಿಂಹ ಶ್ರೀ ರಮೇಶನೆ ಪ. ಶ್ರೀ ರಮೇಶ ಸುರ ಸಾರ್ವಭೌಮ ಭವ ತಾರಕಗೊಳಿಸುವ ಕಾರಣಪುರುಷ ಅ.ಪ. ಆದಿಮೂಲನೆ | ಅಪಾರ ಮಹಿಮ ಖೇದದೂರನೆ ವಾದಿಪ ಪಿತನೊಳು ಸಾಧಿಪೆ ನಿನ ಮತ ಮೋದಗೊಳಿಸಿ ಪ್ರಹ್ಲಾದನ ಪೊರೆದೆ 1 ಶೌರಿ ಭೂಧರಾ ದೊರೆ ಕಾದಿದ ದುಷ್ಟ ದೈತ್ಯಾದಿಗಳ ಕೊಂಡು ಮೋದವಿತ್ತೆ ಭೂದೇವಿಗೆದೆ ಶ್ರೀಶಾ 2 ಭೂಪರೈವರು | ಎದುರಲ್ಲಿ ಇರಲು ಪಾಪಿ ಖೂಳರು ದ್ರೌಪದಿ ವಸನವ ಕೈಪಿಡಿದೆಳೆಯಲು ಪತಿ ಸಲಹೆನೆ ತಾಪವ ಬಿಡಿಸದೆ 3 ನೀರೊಳಾಡಿದೆ | ನೀ ಕಲ್ಲು ಪೊತ್ತು ನಾರಿಯ ತಂದೆ ನಾರಸಿಂಹ ವಟು ವೀರರಾಮಚಂದ್ರ ಜಾರಚೋರ ವಸ್ತ್ರದೂರನೆ ಕಲ್ಕಿ 4 ಗೋಪಾಲಕೃಷ್ಣ | ವಿಠ್ಠಲದೇವ ಕಾಪಾಡೊ ಕೃಷ್ಣ ರೂಪ ರೂಪಾಂತರ ವ್ಯಾಪಿಸಿ ಜಗದೊಳು ಶ್ರೀಪತಿ ಹೃದಯದಿ ರೂಪವ ತೋರೊ 5
--------------
ಅಂಬಾಬಾಯಿ
ಶ್ರೀ ಶ್ರೀನಿವಾಸ ಹರಿ ವಿಠಲ | ಜ್ಞಾನ ರೂಪೀ ಪ ದಾಸನನ ಮಾಡಿವನ | ಪೋಷಿಸಲಿ ಬೇಕೋ ಅ.ಪ. ಸಾಧನಜೀವಿಗಳ | ಕಾದು ಕೊಳ್ಳುವ ಭಾರಮಾಧವನೆ ನಿನದಲ್ಲೆ | ಯಾದವೇಶಾ |ಆದರದಿ ಕೈಪಿಡಿದು ಭೋಧಿಸು ಸುಜ್ಞಾನಮೋದ ಮುನಿ ಸದ್ವಂದ್ಯ | ಬಾದರಾಯಣನೇ 1 ಪರಮಾತ್ಮ ನರಹರಿಯ | ದರುಶನಕೆ ಮುಮ್ಮೊದಲುಪರಿಸರನು ಪ್ರಾಣನ್ನ | ಪರಮಗುರುದ್ವಾರಾದರುಶನನ ಗೈಸುತ್ತ | ಹರುಷವನೆ ನೀಡಿರುವೆಕರುಣಾ ಪಯೋನಿಧಿಯೆ | ಸರ್ವಾಂತರಾತ್ಮ 2 ಕಾಕು ಜನ ಸಂಗವನು | ಸೋಕಿಸದೆ ಸತ್ಸಂಗನೀ ಕೊಟ್ಟು ಲೌಕೀಕದಿ | ಸತ್ಕೀರ್ತಿಲಿರಿಸೋಮಾಕಳತ್ರನೆ ಸಕಲ | ಪ್ರಾಕ್ಕು ಕರ್ಮವ ಕಳೆದುಲೌಕೀಕಗಳೆಲ್ಲ ವೈ | ದೀಕ ವೆಂದೆನಿಸೋ 3 ಸಿರಿ | ಪದ್ಮನಾಭನೆ ದೇವಶ್ರದ್ಧೆಯಿಂದರುತಿಹನ | ಉದ್ಧರಿಸೊ ಹರಿಯೇ4 ಸರ್ವವ್ಯಾಪ್ತಸ್ವಾಮಿ | ನಿರ್ವಿಕಾರನೆ ದೇವದರ್ವಿ ಜೀವಿಯ ಮೊರೆಯ | ಶರ್ವಾದಿ ವಂದ್ಯಾನಿರ್ವಿಘ್ನ ಪೂರೈಸೆ | ಪ್ರಾರ್ಥಿಸುವೆ ಶ್ರೀ ಹರಿಯೆಸರ್ವ ಸುಂದರ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀ ಸತ್ಯಬೋಧರು ಕುರುಡನಿಗೆ ಕರವಿತ್ತು ಕೈಪಿಡಿದು ಕಾಯೋ ಪ ದೃಢಮತಿಯಿತ್ತು ತವ ಪಾದದಲಿ ಅ.ಪ. ಗರುಡಾರಿ ಭೂಷಣನ ಚರಣದಡಿಯೊಳಗಿದ್ದು ಘನ ತಪವ ಗೈವ ಮಹತ ಪರಿಯೊ 1 ಬೋಧತೀರ್ಥಾರ್ಯರ ಮತಕನುಸರಿಸಿಸದ್ಭಕುತ ಜನಕೆ ಭೇದಗಳ ಬೋಧಿಸುತ ಸತ್ಯಬೋಧಾಖ್ಯಯದೀ ಧರೆಯೊಳಗಮರವೇ 2 ಮ್ಲೇಚಪುರದಲಿ ಕುಳಿತು ಸಂಚಿತಾಗಾಮಿಗಳ ಕೊಂಚಮಾಡುತ ನಿಷ್ಕೆಂಚಿನರ ಪ್ರೀಯಾತಂದೆವರದಗೋಪಾಲವಿಠಲನ ಮಂಚ ಪದನಿಂದ ಪೋಷಿತನಾದ ಪ್ರಭುವೇ 3
--------------
ತಂದೆವರದಗೋಪಾಲವಿಠಲರು
ಶ್ರೀಪಾದರಾಜ ಪಾಲಿಸೊ ಕೈಪಿಡಿದೀ ಭವದ ಕೂಪಾರದಿಂದ ದಾಟಿಸೋ ಪ ಕಾಪಾಡೆಲೊ ಕರುಣಾ ಪಯೋನಿಧೆ ಭೂಪಚಂದ್ರ ಗಿರಿ ಪಾಪಗಳನ್ನು ಕಳದಿರುವೆ ಮದ್ಗುರುವೆ ಕರಮುಗಿವೆ ಭಜಕರ ಸುರತರುವೇ ಅ.ಪ ಮೇದಿನಿ ಪಾಲಪೂಜಿತ ವಿದ್ವಜ್ಜನವಿನುತ ಮೇದಿನಿ ಜಾತ ಪ್ರದಾತ ಮೋದಮುನಿಯ ಸುಮತೋದಧಿಚಂದಿರ ವಾದಿ ಮದಗಜ ಮೃಗಾಧಿಪ ಕವಿಜನಗೇಯ ಶುಭ ಕಾಯ ಧೃವರಾಯ ಆಶ್ವರ್ಯ ಚರ್ಯ1 ವಿಪ್ರಹತ್ಯಾದಿ ದೋಷಗಳನ್ನು ಕಳೆಯುವ ಮಹಿಮೆಯನು ಕ್ಷಿಪ್ರ ಶಂಖೋದಕ ಸಂಪ್ರೋಕ್ಷಿಸಿ ಬಲು ಕಪ್ಪುವಸನವನು ಸುಪ್ರಕಾಶಿಸಿದ ಮಹಿಮಾ ಶುಭನಾಮ ಜಿತಕಾಮಾ ಯತೆ ಸಾರ್ವಭೌಮ 2 ವಿಭುದೇಂದ್ರ ಸಹಿತ ಛಾತ್ರಾ ನಿಮ್ಮನ್ನು ಕೇಳಲು ಸೂ- ಸರ್ವಾತಿಶಯದಿಸ- ಮುಖಗೀತಾನಾಮದಿ ಪ್ರಖ್ಯಾತ 3 ಮೃಷ್ಟಾನ್ನ ಕೊಡುವೊ ಮಹಿಮೆಯ ಕೃಷ್ಣಗರ್ಪಿಸಿದ ಪಷ್ಠಿಶಾಕಯುತ ಮೃಷ್ಟಾನ್ನ ದ್ವಿಜ ತುಷ್ಟಿಗೈಸುವಿರಿ ನಿರುತ ಗುಣಭರಿತ ಪ್ರಖ್ಯಾತ ಪಾವನ ತರ ಚರಿತ 4 ಜಗದೊಳು ಸನ್ಮಾನ್ಯ ಚರಿಸಿ ಸತ್ಕರ್ಮವ ಘಳಿಸುವ ಪುಣ್ಯ ಶರಣುಜನಕೆ ಸುರತರುವೆಂದೆನಿಸುತ ಧರೆಯೊಳು ಮೆರೆಯುವ ಶಿರಿಕಾರ್ಪರ ಶುಭನಿಲಯ ಸುರಗೇಯ ಗುರುರಾಯ ನರಹರಿಗತಿ ಪ್ರೀಯ 5
--------------
ಕಾರ್ಪರ ನರಹರಿದಾಸರು
ಶ್ರೀಮನೋಹರ ನಿನ್ನ ನಾಮವೇ ಯೆನ್ನುಸಿರು ಕ್ಷೇಮ ನಾಡಿಗಳಲ್ಲಿ ತಿರುಗುತಿರಲಿ ಪ ಕಾಮಾದಿ ಷಡ್ವರ್ಗವ್ಯಾಪನೆಯನೋಡಿಸುತ ಪ್ರೇಮದಿಂ ಹೃತ್ಪದ್ಮದಲಿ ತೋರು ಸತತ ಅ.ಪ ಪ್ರಾಪಂಚಿಕರ ಮನವು ವಿಷಯಗಳಿಗೆಳೆವಂತೆ ಪಾಪಹರ ನಿನ್ನೊಳಗೆ ಯನ್ನ ಮನವಿರಲಿ ತಾಪತ್ರಯಂಗಳಿಗೆ ತನಯನನು ಸಿಲುಕಿಸದೆ ಕಾಪಾಡಿಕೋ ಸ್ವಾಮಿ ದಾಸಾನುದಾಸನಂ1 ಕನಸು ಎಚ್ಚರ ನಿದ್ದೆ ಎಂಬವಸ್ಥೆಗಳಲ್ಲಿ ದಿನಕರಪ್ರಭು ಮೂರ್ತಿಯವತಾರ ತೋರಿ ಅನುನಯದಿ ಪದಯುಗವ ಶರಣು ಹೊಂದುವ ಪರಿಯ ಕನಿಕರದಿ ಕರುಣಿಸೈ ಕಮಲನಯನ 2 ಕಫವಾತ ಪಿತ್ಥಗಳ ವಿಕೃತಿಗಳು ಬಾರದೆಲೆ ಅಪರಿಮಿತ ಸುಂದರಾನಂದ ನೀಡಿ ಸಫಲಮಂತ್ರವ ನುಡಿಸಿ ಕೃಪೆಯಿಂದ ಕೈಪಿಡಿದು ಸುಪಥದಿಂ ನದಿದಾಟಿ ಸೇರಿಸಿಕೊ ಅಡಿಗೆ 3 ಹರಿಹರೀ ಹರಿಯೆಂಬೆ ತಾಯಿ ತಂದೆಯೆ ಗುರುವೆ ದೊರೆಯೆನೀ ಸೋದರನು ಸಖನು ಬಂಧೂ ಧರಣೀಧರ ಸರ್ವತ್ರ ಬೆಂಬಿಡದೆ ಸಹಕರಿಸಿ ಪೊರೆವುದೈ ಭವನಾಶ ಹೆಜ್ಜಾಜಿ ಶ್ರೀಶಾ 4
--------------
ಶಾಮಶರ್ಮರು
ಶ್ರೀಲೋಲನೆ ಪರಿಪಾಲಿಪುದೆಮ್ಮನು ಕಾಲವಿಳಂಬಿಸದೇ ಪ. ಪೇಳಲೆಮಗೀ ನಾಲಿಗೆ ಸಾಲದು ಅ.ಪ ಅನಿಮಿಷರೂಪದಿಂದಾಗಮವನು ನೀನಜನಿಗೆ ತಂದಿತ್ತೆ ಪೂರ್ವದಿ ಘನ ಕಚ್ಛಪರೂಪದೊಳಾಗಿರಿಯನು ಬೆನ್ನೊಳಗಾಂತೇ ಅನಿಮಿಷರೊಡೆಯನ ಮನವನು ತಣಿಸಿದ ಫನಮಹಿಮನೆ ಶ್ರೀ ವನಜಜ ಜನಕನೆ ಶ್ರೀಲೋಲನೆ 1 ದುರುಳನ ಕರದಲಿ ಧರಣಿಯು ಸಿಲುಕುತ ಕರೆಕರೆಗೊಳ್ಳುತಿರೆ ವರಸೂಕರನಾಗುತ ದುರುಳನ ಛೇದಿಸಿ ಧರಣಿಯ ಕೈಪಿಡಿದೆ ಮತ್ತೆ ತರಳನ ಪೊರೆಯಲು ನರಕೇಸರಿ ರೂಪದಿ ಹಿರಣ್ಯಕನುದರದ ಕರುಳನು ಕಿತ್ತೆಸೆದೆÉೀ ಶ್ರೀಲೋಲನೆ 2 ಕಪಟತನದಲಿ ವಟುವಂದದಿ ಬಂದು ನೆಲವದಾನವ ಬೇಡಿ ಕಪಟವನರಿಯದೆ ದಾನವ ಕೊಟ್ಟನ ಪಾತಾಳಕೆ ಗುರಿ ಮಾಡಿ ಅಪರಿಮಿತಾನಂದದಿ ಮೆಚ್ಚಿ ಬಲೀಂದ್ರನ ಮನೆಬಾಗಿಲ ಕಾಯುವ ಗೊಲ್ಲ ನೀನೆನಿಸಿದೆ 3 ವರಮುನಿ ಜಮದಗ್ನಿಯ ರೇಣುಕಾಸುತ ಭಾರ್ಗವ ನೀನಾಗಿ ವರಪರಶುದರನೆಂದೆನ್ನಿಸಿ ಭೂಭುಜರನು ತರಿದಟ್ಟಿ ಧರಣೀಸುರರಿಗೆ ಸುರತರುವೆನಿಸಿದ 4 ಹರವಿರಂಚಿಯರ ವರಗಳ ಗರ್ವದೆ ದಶಶಿರದೈತ್ಯನು ಮೆರೆದು ಪರಿಪರಿ ವಿಧದಿಂ ಸುರಭೂಸುರರನು ಕರೆಕರೆಗೊಳಿಸುತಿರೆ ಧರಣಿಪ ದಶರಥ ತನುಭ ವರೆನ್ನಿಸಿ ನಿಶಿಚರ ಕುಲವನೇ ಸವರಿದ ರಾಘವ 5 ಅಷ್ಟಮದಂಗಳ ದಟ್ಟಣೆಯಿಂದತಿ ಅಟ್ಟಹಾಸದಿ ಮೆರೆದಾ ದುಷ್ಟ ಕಂಸನ ಮರ್ಧಿಸಿ ಧರಣಿಯ ಶಿಷ್ಟರ ಪಾಲಿಸಲು ವೃಷ್ಟಿವಂಶದಿ ಬಂದು ಕೃಷ್ಣನೆನಿಸಿ ತನ್ನ ಇಷ್ಟರಾದ ಪಾಂಡುಪುತ್ರರ ಸಲಹಿದ6 ಸಿದ್ದಿ ಸಂಕಲ್ಪದಿ ಬಲಭದ್ರನೆನ್ನಿಸಿ ಭವಬದ್ಧ ಜೀವಿಗಳಂ ಶುದ್ಧ ಮಾರ್ಗದಿ ಸಂಸ್ಕರಿಸಿ ಜಗವನು ಉದ್ಧರಿಸಲ್ಕಂಡು ಬುದ್ಧನೆಂದೊಳಿಸಿ ಮೆರೆದ ಸಂಕರ್ಷಣ ಭದ್ರಮಂಗಳ ಭವ್ಯಸ್ವರೂಪನೆ7 ಕಲಿಮಲದೋಷವ ತೊಳೆಯಲು ಪುನರಪಿ ಕಳೆಯೆ ನೀನೈತರುವೆ ಫಲತೆರದಲಿ ಭಕ್ತರ ಸಲಹಲು ಫಲರೂಪಗಳ ಕೈಕೊಳುವೆ ಹಲುಬುವ ಕಂದನ ಸಲಹೈ ಸಿರಿದೊರೆ 8
--------------
ನಂಜನಗೂಡು ತಿರುಮಲಾಂಬಾ
ಷಣ್ಮಹಿಷಿಯರು ನಗ್ನ ಜಿತು ನೃಪ ಭಗಿನಿ ತನುಜೆ ಕಾಯೇ |ಲಗ್ನ ಗೈಸೆನ್ನ ಮನ ದೋಷಘ್ನನಲ್ಲೀ ಪ ಮಿತ್ರಾಖ್ಯ ಹರಿಪ್ರಾಪ್ತಿ ನಿತ್ಯದಲಿ ಚಿಂತಿಸುತಮಿತ್ರವಿಂದಾಭಿಧೆಯು ನೀನು ಆಗೀ |ಎತ್ತ ನೋಡಿದರತ್ತ ಶ್ರವಣ ಭಕ್ತಿಗೆ ಮುಖ್ಯಪಾತ್ರವೆಂದರುಹುತ್ತ ಅಂತೆ ಆಚರಿಪೇ 1 ಹರಿಕಥಾಮೃತ ಸರಿತು ಹರಿಯದಿಹ ಸ್ಥಳವೇನುಹರಿ ಪದಾಶ್ರಿತರಹಿತ ಮತ್ತೆ ಉತ್ಸವವೂ |ವಿರಹಿತದ ಪಾತ್ರಗಳ ತ್ವರಿತದಲಿ ತ್ಯಜಿಸುತ್ತಸರಿಯುವುದೆ ಲೇಸೆಂದು ಭೋದಿಸಿಹೆ ದೇವಿ2 ಹರಿಕಥೆಯ ಕೇಳುವುದೆ ಕರ್ಣಕ್ಕೆ ಭೂಷಣವುಹರಿಕಥೆಯ ಪೇಳುವುದೆ ವಾಗ್ಭೂಷಣಾ |ಪರಿಪರಿಯ ಅಂಗಗಳ ಹರಿಪರವ ಗೈಯ್ಯುವುದೆಪರಮ ಸತ್ಸಾಧನವು ಎಂತೆಂದು ಪೇಳ್ದೇ 3 ಈ ಪರಿಯ ತಪದಿಂದ ಶ್ರೀ ಪತಿಯ ಮನ ಒಲಿಸಿಸಾಪರೋಕ್ಷಿತೆಯಾಗಿ ಶ್ರವಣ ಭಕ್ತಿಯಲೀ |ಆ ಪರಮ ಪುರುಷನ್ನ ಕೈಪಿಡಿದು ಕೃತಕೃತ್ಯೆನೀ ಪರಮ ಕೃಪೆಯಿಂದ ಕಾಪಾಡು ಎಮ್ಮ 4 ಇಂದಿರಾ ರಮಣಂಗೆ ಎಂದೆಂದು ವೈರಿಗಳುವಿಂದಾನುವಿಂದರೆಂಬೀರ್ವ ಭ್ರಾತೃಗಳ |ಸಂದು ದುರ್ಯೋಧನಗೆ ನಿನ್ನನರ್ಪಿದ ಹದನಮಂದಿ ಎದುರಿಲಿ ಕೃಷ್ಣ ಭಗ್ನವನೆ ಗೈದ 5 ಶ್ರವಣ ಭಕ್ತ್ಯಭಿಮಾನಿ ಚಿತ್ತದಲಿ ನೀನಿದ್ದುಪವನ ಮತ ತತ್ವಗಳ ಶ್ರವಣ ಗೈಸೀ |ಭವವನಧಿ ಉತ್ತರಿಪ ಹವಣೆ ನೀ ತೋರಿ ತವಧವಗೆ ಭಿನ್ನೈಸುವುದು ಎಮ್ಮ ಹಂಬಲವ 6 ಸವನ ಮೂರಲಿ ಆಯು ವಿವಿಧ ಭವಣೆಗಳಿಂದಪ್ರವಹಿಸುತ ಸಾಧನೆಗೆ ವಿಘ್ನವಾಗಿಹುದುಪವನಾಂತರಾತ್ಮ ಗುರು ಗೋವಿಂದ ವಿಠಲನಪಾವನ್ನ ಪದಕಾಂಬ ಹವಣೆ ತಿಳಿಸಮ್ಮಾ 7
--------------
ಗುರುಗೋವಿಂದವಿಠಲರು
ಸರಸಿಜಾಯತನೇತ್ರ ಸರಿಯಾರೆ ಧರೆಯೊಳಗೆ ಮೇರುಗಿರಿಯನೆಪೊತ್ತ ಧೀರನಿವನೆ ಅಪರಾಧವ ಪರಿಹರಿಸಿ ಕಾಪಿಡೆಂದೊರಲುವರ ಕೈಪಿಡಿದು ಕಾಪಾಡುವಾಪ್ತ ಬಂಧು
--------------
ನಂಜನಗೂಡು ತಿರುಮಲಾಂಬಾ