ಒಟ್ಟು 9381 ಕಡೆಗಳಲ್ಲಿ , 133 ದಾಸರು , 5307 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಕ್ಷಿಸೊ ಎನ್ನ ರಕ್ಷಿಸೋ ಪ ರಕ್ಷಿಸು ಎನ್ನನು ಅಕ್ಷಯಗುಣಪೂರ್ಣ ಲಕ್ಷುಮಿರಮಣನೆ ಪಕ್ಷಿವಾಹನನೇ ಅ.ಪ ಪಾದವಿಲ್ಲದೆ ಜಲದೊಳು ಮುಳುಗಾಡಿ ವೇದಚೋರಕನನ್ನು ಸೀಳಿ ಬೀಸಾಡಿ ವೇದಾಚಲದೊಳು ನಿಂತು ಕೈ ನೀಡಿ ಸಾಧು ಸಜ್ಜನಪಾಲ ನೀ ದಯಮಾಡಿ 1 ವಾರಿಧಿ ಮಥನದಿ ಸುರರಿಗೆ ಒಲಿದು ಮೇರು ಮಂದರವನ್ನು ನೀ ಹೊತ್ತೆ ಒಲಿದು ವಾರಿಜಾಕ್ಷನೆ ವೈಕುಂಠದಿಂದಿಳಿದು ಊರಿದೆ ಚರಣವ ಗಿರಿಯೊಳು ನಲಿದು 2 ಧರಣಿಯ ಒಯ್ದ ದಾನವಗಾಗಿ ನೀನು ಹರಣದ ಸೂಕರನಂತಾದುದೇನು ಚರಣ ಸೇವಕರಿಗೆ ನೀ ಕಾಮಧೇನು ಕರುಣದಿ ಸಲಹೆನ್ನ ನಂಬಿದೆ ನಾನು 3 ತರಳನು ಕರೆಯೆ ಕಂಬದೊಳುದಿಸಿದೆಯೊ ದುರುಳ ದಾನವರ ಪ್ರಾಣವ ವಧಿಸಿದೆಯೊ ಕರಳಮಾಲೆಯ ಕೊರಳೊಳು ಧರಿಸಿದೆಯೊ ಮರಳಿ ಬಂದವ ಫಣಿಗಿರಿಯನೇರಿದೆಯೊ 4 ಕೋಮಲ ರೂಪದಿ ಭೂಮಿಯನಳೆದೆ ಆ ಮಹಾಬಲಿಯ ಪಾತಾಳಕ್ಕೆ ತುಳಿದೆ ಸ್ವಾಮಿ ಪುಷ್ಕರಣಿಯ ತೀರದಿ ಬೆಳೆದೆ ಪ್ರೇಮದಿ ಭಕ್ತರ ಕಾಮಿಸಿ ಪೊರೆದೆ 5 ತಾತನಪ್ಪಣೆಯಿಂದ ಮಾತೆಗೆ ಮುನಿದೆ ಜಾತಿಕ್ಷತ್ರಿಯರ ವಿಘಾತಿಸಿ ತರಿದೆ ನೂತನವಾಗಿಹ ನಾಮದಿ ಮೆರೆದೆ ಧಾತುಗೆಟ್ಟೆನು ಸ್ವಧೈರ್ಯಗಳಿರದೆ 6 ದಶರಥನುದರದಿ ಶಿಶುವಾಗಿ ಬಂದೆ ವಸುಮತಿ ತನುಜೆಯ ಕುಶಲದಿ ತಂದೆ ಅಸುರರ ಹೆಸರನುಳಿಸದೆ ನೀ ಕೊಂದೆ ಕುಸುಮನಾಭನೆ ಶೇಷಗಿರಿಯಲ್ಲಿ ನಿಂದೆ 7 ಮಧುರೆಯೊಳುದಿಸಿ ಗೋಕುಲದಲ್ಲಿ ಬೆಳೆದೆ ಉದಧಿಯ ಮಧ್ಯದಿ ದುರ್ಗವ ಬಲಿದೆ ಹದಿನಾರು ಸಾವಿರ ಸತಿಯರ ನೆರೆದೆ ಉದಯವಾದೆಯೊ ವೇದಗಿರಿಯೊಳು ನಲಿದೆ 8 ಶಶಿಮುಖಿಯರನು ಮೋಹಿಸುವಂಥ ಬಗೆಗೆ ವ್ಯಸನವ ಬಿಡುವುದುಚಿತವೇನೊ ನಿನಗೆ ವಸುಧೆಗುತ್ತಮವಾಗಿ ಎಸೆವಂಥ ಗಿರಿಯೊಳು ಹಸನಾಗಿ ನಿಂತಿಹ ಚರಣ ಸನ್ನಿಧಿಯೊಳು 9 ವಾಜಿಯನೇರಿಯೆ ನೇಜಿಯ ಪಿಡಿದೆ ಮಾಜುವ ಕಲಿಯನ್ನು ಕಡೆಯೊಳು ಕಡಿದೆ ಮೂಜಗದೊಡೆಯನ ಮನದೊಳು ಇಡುವೆ ಮಾಜ ಬೇಡೆಲೊ ವೇಂಕಟೇಶ ಎನ್ನೊಡವೆ 10 ಹತ್ತವತಾರದ ವಿಸ್ತಾರದಿಂದ ಕರ್ತು ವರಾಹತಿಮ್ಮಪ್ಪನು ನಿಂದ ಭೃತ್ಯವತ್ಸಲನಾಗಿ ಭೂಮಿಗೆ ಬಂದ ಅರ್ಥಿಯೋಳ್ಭಕ್ತರ ಸಲಹುವೆನೆಂದ 11
--------------
ವರಹತಿಮ್ಮಪ್ಪ
ರಂಗನಾಡಿದನೊ ಮನ್ನಾರಿ ಕೃಷ್ಣನಾಡಿದನೊ | ಶೃಂಗಾರದಿಂದ ಗೋಪಾಂಗನೆಯ ಕೂಡ | ತುಂಗ ವಿಲಾಸ ತಾ ರಂಗ ಕೇಳಿಯಲಿ | ಸಂಗೀತ ಪಾಡುತ ಸಾಂಗೋಪಾಂಗದಿಂದಾ ಪ ಹೊಳಿಯ ಜನಕೋಕುಳಿಯ ಕಲಿಸಿ | ಗೆಳೆಯರೊಂದಾಗೆ ಕಳೆಯೆವೇರುತ್ತ | ಅಳಿಯ ಗರುಳಬಲಿಯರರಸಿ | ಇಳಿಯಾಳಗೋಕುಳಿ ವಸಂತವಾ | ಹಳೆಯ ಬೊಮ್ಮನ ಬಳಿಯವಿಡಿದು | ಪಳಿಯ ಚಲುವ ತಿಳಿಯಗೊಡದೆ 1 ಸಕ್ಕರೆದುಟಿ ಹೆಮ್ಮಕ್ಕಳು ಯೆಲ್ಲರು | ನಕ್ಕು ಕೈಯ ಹೊಯಿದ | ಕ್ಕರದಿಂದ ತಾ | ವರ್ಕರಾಗಿ ನಿಂದೂ ತೆಕ್ರ್ಕೊರಂಗಯೆಂದು | ಜಿರ್ಕೊಳವಿಲಿಂದಲಿಕ್ಕಿದರು | ಸೊಕ್ಕಿದಾ ನೆಡಸಿ ಹೊಕ್ಕು ಎರಗಿದಂ | ತೊಕ್ಕಟರಾಗಿ ದೇವಕ್ಕಿ ತನುಜನ ಸಿಕ್ಕಿಸಿಕೊಂಡರು | ಅಕ್ಕಟಾಬ್ಜಗಬ್ಧಿ ಉಕ್ಕಿದಂತೆ ಮನ | ಉಕ್ಕುತಲಿ 2 ನಾರಿಯರಿಂದ ಉತ್ತರವ ಲಾಲಿಸಿ | ತುಂಬಿ ಅ | ಪಾರನಾರಿ ಪರಿವಾರದವರ ಶರೀರವ ಮೇಲೆ | ವಿ | ಸ್ತಾರವಾಗಿ ಕಾರಿ ವಾರಿದನು ನೀರೆರದಂತಾಗೆ | ಆರೊಂದು ಬುದ್ಧಿಗೆ ಮೀರಿತಿದೊ ಎಂದು | ವಾರುಣಿಪತಿ ಪಂಕೇರುಹಾಭವ ಕಂ || ದರವ ಬಾಗಿಸಿ ಸಾರಿದರು 3 ಮೃಗ ಧ್ವನಿದೆಗೆದು ಪಾಡಲು | ನಗ ಬೆವರಿ ಪನ್ನಂಗ ನೋಡಾಗಲು | ಅಗಣಿತ ಮುನಿ ಚಿಗಿದು ಪಾಡಲು | ನಗ ಬೆವರಿ ಪನ್ನಂಗ ನೋಡಾಗಲು | ಅಗಣಿತ ಮುನಿ ಚಿಗಿದು ಪಾಡಲು ಪೊಗಳ ಬಗೆಯಿಂದ | ಮಣಿ ತಾರೆಗಳು ಚಂದ್ರ ನಗುತ ತಮ್ಮ ಪಥಗಳು ನಿಲಿಸಿ | ಮಂಗಳಕರವ ಮುಗಿದು ಸೋಜಿಗ ಜಗದೊಳಗಿದು ಮಿಗಿಲೆನುತಲಿ 4 ದುಂದುಭಿ ಮೊರಿಯೆ ಧಂ ಧಂ ಧಳಾ ಎಂದು | ವೃಂದಾರಕ ವೃಂದ ಚಂದದಿ ಪೂಮಳೆಯಂದುಗರಿಯಲು | ಚಂದಣಗಂದಿಯ ಒಂದಾಗಿ ನಿಂದರು ವಂದಿಸುತ | ಮಂದಹಾಸನಖ ದುಂದುಭಿ ಓಕಳಿಂದಲೆರಾರೈಪಾ ಸಿಂಧು ಮೆರೆದ ನಾರಂದವರದ ವಿಜಯವಿಠ್ಠಲ | ಪುರಂದರದಾಸರ ಮುಂದಾಡಿz ||5
--------------
ವಿಜಯದಾಸ
ರಾಘವೇಂದ್ರ ಯತಿಸಾರ್ವಭೌಮ ದುರಿ ತೌಗಘದೂರ ತೇ ನಮೋ ನಮೋ ಪ ಮಾಗಧರಿಪು ಮತಸಾಗರ ಮೀನ ಮ ಮಾಘ ವಿನಾಶಕ ನಮೋ ನಮೋ ಅ.ಪ. ಶ್ಲಾಘಿತ ಗುಣಗಣ ಸೂರಿಪ್ರಸಂಗ ಸ ದಾಗಮಜ್ಞ ತೇ ನಮೋ ನಮೋ ಮೇಘ ಶ್ಯಾಮಲ ರಾಮಾರಾಧಕ ಮೋಘ ಬೋಧತೇ ನಮೋ ನಮೋ 1 ತುಂಗಭದ್ರ ಸುತರಂಗಿಣಿ ತೀರಗ ಮಂಗಳಚರಿತ ಶುಭಾಂಗ ನಮೋ ಇಂಗಿತಜ್ಞ ಕಾಳಿಂಗ ಮರ್ದ ಯದು ಪುಂಗವ ಹೃದಯ ಸುಸಂಗ ನಮೋ ಸಂಗಿರ ಚಿಹ್ನಿತ ಶೃಂಗಾರಾನನ ತಿಂಗಳ ಕರುಣಾಪಾಂಗ ನಮೋ ಗಾಂಗೇಯ ಸಮಾಭಾಂಗ ಕುಮತ ಮಾ ತಂಗ ಸಿಂಗ ಶಿತ ಪಿಂಗ ನಮೋ 2 ಶ್ರೀ ಸುಧೀಂದ್ರ ಕರಜಾತ ನಮೋ ನಮೋ ಭೂಸುರ ನುತ ವಿಖ್ಯಾತ ನಮೋ ದೇಶಿಕ ವರ ಸಂಸೇವ್ಯ ನಮೋ ನಮೋ ದೋಷವಿವರ್ಜಿತ ಕಾವ್ಯ ನಮೋ ಕ್ಲೇಶಿತಜನ ಪರಿಪಾಲ ನಮೋ ನಮೋ ಭಾಸಿತ ಕರುಣಾಶೀಲ ನಮೋ ವ್ಯಾಸ ರಾಮ ಪದ ಭಕ್ತ ನಮೋ ನಮೋ ಶಾಶ್ವತ ಕರುಣಾಸಕ್ತ ನಮೋ 3 ಮಣಿ ಸಂ ಭಾವಿತ ಮಹಿಮ ಪಾಲಯ ಮಾಂ ಸೇವಾಪರ ಸರ್ವಾರ್ಥಪ್ರದ ವೃಂ ದಾವನ ಮಂದಿರ ಪಾಲಯ ಮಾಂ ಮಾರ್ಗಣ ಭುಜಗ ವಿನಾಯಕ ಭಾವಜ್ಞ ಪ್ರಿಯ ಪಾಲಯ ಮಾಂ ಕೇವಲ ನತಜನ ಪಾವನರೂಪ ಸ ದಾ ವಿನೋದಿ ಹೇ ಪಾಲಯ ಮಾಂ 4 ಸನ್ನುತ ಮಹಿಮ ಜಗನ್ನಾಥ ವಿಠಲ ಸನ್ಹಿತ ಮಾನಸ ಜಯ ಜಯ ಭೋ ಚಿಹ್ನಿತ ದಂಡಕಮಂಡಲ ಪುಂಡ್ರ ಪ್ರ ಪನ್ನೆ ಭಯಾಪಹ ಜಯ ಜಯ ಭೋ ಮಾನ್ಯ ಮಹಾತ್ಮ ಪ್ರಸನ್ನ ವದನ ಕಾ ರುಣ್ಯ ಪ್ರಯೋದಧೆ ಜಯ ಜಯ ಭೋ ಧನ್ಯ ಕ್ಷಮಾಸಂಪನ್ನ ಬುಧಜನ ಶ ರಣ್ಯ ಸದಾರ್ಚಿತ ಜಯ ಜಯ ಭೋ 5
--------------
ಜಗನ್ನಾಥದಾಸರು
ವಾರಿಜನಾಭನ ವನಜಾಂಘ್ರಿಗಳಿಗೆ ಕರವ ಕೊಂಡಾಡುವೆ ಪದವ 1 ದೇವದೈತ್ಯರು ಕೂಡಿ ಪಾಲಾಂಬುಧಿಯಲ್ಲಿ ಮೇರು ಮಂದರವ ಕಡೆಗೋಲು ಮಾಡಿದರು2 ವಾಸುಕಿ ಶರಧಿ ಮಧ್ಯದಲಿ ಹರಿ ಕೂರುಮನಾಗಿ ಮಂದರವನೆತ್ತಿದನು3 ಕಾಲಕೂಟ ವಿಷವಾಯು ಪಾನಮಾಡುತಲಿ ಮಹದೇವ ಕೋಪದಿ ನುಂಗಿ ನೀಲಕಂಠೆನಿಸೆ 4 ಕೌಸ್ತುಭ ಕಾಮಧೇನು ಸುರತರುವು ಹಸ್ತಿ ತೇಜಿಯು ಕಲ್ಪವೃಕ್ಷ ಸುಧೆ ಉದಿಸೆ 5 ಸಿಂಧು ಮಥನವ ಮಾಡಲು ಶ್ರೀದೇವಿ ಜನಿಸೆ ಮಂದಾರಮಾಲೆ ಕೈಯಿಂದಲಿ ಪಿಡಿದು 6 ಅರ್ಕಚಂದ್ರರ ಕಾಂತಿಗಧಿಕಾದ ಮುಖವು ದಿಕ್ಕು ದಿಕ್ಕಿಗೆ ಮಿಂಚಿನಂತೆ ಹೊಳೆಯುತಲಿ 7 ವಜ್ರಾಭರಣವು ಕಾಲಗೆಜ್ಜೆ ಸರಪಳಿಯು ಮಲ್ಲಿಗೆ ಕುಸುಮಗಳೊಂದೊಂದ್ಹೆಜ್ಜೆಗುದುರುತಲಿ 8 ಕುಡಿಹುಬ್ಬು ಕಡೆಗಣ್ಣ ನೋಡುತಲಿ ನಡೆದು ಬಂದಳು ತಾ ಬಡನಡುವಿನ ಒಯ್ಯಾರಿ 9 ಅತಿಹಾಸ್ಯಗಳಿಂದ ದೇವತೆಗಳ ಮಧ್ಯೆ ಈ ಪತಿ ಎಲ್ಲಿಹನೋ ತಾ 10 ಅರ್ಕನ್ವಲ್ಲೆನೆ ಅಗ್ನಿಯಂತೆ ಸುಡುತಿರುವನ ಶಕ್ರನ ಒಲ್ಲೆ ಮೈಯೆಲ್ಲ ಕಣ್ಣವಗೆ 11 ಸೋಮನ ಒಲ್ಲೆ ಕಳೆಗುಂದಿ ತಿರುಗುವನ ಪಾವನ ನಮ್ಮ ಗಾಳಿರೂಪದವನ12 ರುದ್ರನ್ವಲ್ಲೆನೆ ರುಂಡಮಾಲೆ ಹಾಕುವನ ಮುದಿಹದ್ದಿನಂದದಲಿ ಗರುಡ ಹಾರ್ಯಾಡುವನಲ್ಲೆ 13 ಶೇಷನ ಒಲ್ಲೆ ವಿಷದ ದೇಹದವನ ಗ- ಣೇಶನ್ವಲ್ಲೆನೆ ಡೊಳ್ಳು ಹೊಟ್ಟೆ ಗಜಮುಖನ 14 ಬ್ರಹ್ಮ ನಾಲಕು ಮೋರೆಗುಮ್ಮನಂತಿರುವ ಯಮ- ಧರ್ಮನ ಒಲ್ಲೆ ನಿಷ್ಕರುಣ ಘಾತಕನ 15 ಸುರಜನರ ನೋಡಿ ಗಾಬರ್ಯಾಗುವೆನು 16 ಮಂದ ಹಾಸ್ಯಗಳಿಂದ ಮಾತನಾಡುತಲಿ ಇಂದಿರೆಪತಿ ಪಾದಾರವಿಂದ ನೋಡುತಲಿ 17 ಗುಣದಲಿ ಗಂಭೀರ ಮಣಿಕೋಟಿತೇಜ ಎಣಿಕಿಲ್ಲದ ಚೆಲುವ ನೋಡೆನ್ನ ಪ್ರಾಣನಾಥ 18 ಹದಿನಾಲ್ಕು ಲೋಕ ತನ್ನುದರದಲ್ಲಿರುವ ಪದುಮಾಕ್ಷಗ್ವನಮಾಲೆ ಮುದದಿಂದ್ಹಾಕುವೆನು 19 ಕರ ವೈಜಯಂತಿ ಸರ ಮಣಿ ನಾ ಇರುತಿರೆ ವಕ್ಷಸ್ಥಳವು 20 ಶ್ಯಾಮವರ್ಣನ ಮುದ್ದು ಕಾಮನಜನಕ ಪ್ರೇಮದಿಂದ್ವೊಲಿವೆ ನಾ ಕಾಮಿಸಿ ಹರಿಯ 21 ಕಮಲಮುಖಿ ಬ್ಯಾಗ ಕಮಲಾಕ್ಷನ್ನ ನೋಡಿ ಕಮಲಮಾಲೆಯ ತಾ ಕಂದರದಲ್ಹಾಕಿದಳು 22 ಅಂಗನೆ ರಚಿಸಿ ತಾ ನಿಂತಳು ನಗುತ 23 ರತ್ನ ಮಂಟಪ ಚಿನ್ನ ಚಿತ್ರ ಪೀಠದಲಿ ಲಕ್ಷ್ಮೀನಾರಾಯಣರು ಒಪ್ಪಿ ಕುಳಿತಿರಲು 24 ಸಾಗರರಾಜ ತನ್ನ ಭಾಗೀರಥಿ ಕೂಡಿ ಸಿರಿ ಧಾರೆಯನೆರೆದ 25 ಅಚ್ಚುತ ಲಕುಮಿಗೆ ಕಟ್ಟಿದ ನಗುತ 26 ಮೇಲು ಕರಿಮಣಿ ಮಂಗಳ ಸೂತ್ರವ ಪಿಡಿದು ಶ್ರೀ ಲೋಲ ಲಕುಮಿಗೆ ತಾ ಕಟ್ಟಿದ ನಗುತ 27 ವಂಕಿ ಕಂಕಣ ಮುತ್ತಿನ ಪಂಚಾಳಿಪದಕ ಪಂಕಜಮುಖಿಗೆ ಅಲಂಕರಿಸಿದರು 28 ಸರಿಗೆ ಸರಗಳು ನಾಗಮುರಿಗೆ ಕಟ್ಟಾಣಿ ವರಮಾಲಕ್ಷುಮಿಯ ಸಿರಿಮುಡಿಗೆ ಮಲ್ಲಿಗೆಯ 29 ನಡುವಿನ್ವೊಡ್ಯಾಣ ಹೊಸ ಬಿಡಿಮುತ್ತಿನ ದಂಡೆ ಸಿರಿ ಪರಮಾತ್ಮನ ತೊಡೆಯಲ್ಲೊಪ್ಪಿರಲು 30 ಇಂದಿರೆ ಮುಖವ ಆ- ನಂದ ಬಾಷ್ಪಗಳು ಕಣ್ಣಿಂದಲುದುರಿದವು 31 ರಂಗನ ಕಂಗಳ ಬಿಂದು ಮಾತ್ರದಲಿ ಅಂಗನೆ ತುಳಸಿ ತಾನವತರಿಸಿದಳು32 ಪಚ್ಚದಂತ್ಹೊಳೆವೊ ಶ್ರೀ ತುಳಸಿ ದೇವಿಯರ ಅಚ್ಚುತ ತನ್ನಂಕದಲ್ಲಿ ಧರಿಸಿದನು 33 ಮಂಗಳಾಷ್ಟಕ ಹೇಳುತ ಇಂದ್ರಾದಿ ಸುರರು ರಂಗ ಲಕ್ಷುಮಿಗೆ ಲಗ್ನವ ಮಾಡಿಸಿದರು 34 ಅಂತರಿಕ್ಷದಿ ಭೇರಿನಾದ ಸುರತರುವು ನಿಂತು ಕರೆದಿತು ದಿವ್ಯ ಸಂಪಿಗೆ ಮಳೆಯ 35 ಲಾಜಾಹೋಮವ ಮಾಡಿ ಭೂಮವನುಂಡು ನಾಗಶಯನಗೆ ನಾಗೋಲಿ ಮಾಡಿದರು 36 ಸಿಂಧುರಾಜನ ರಾಣಿಗೆ ಸಿಂಧೂಪವನಿತ್ತು ಗಜ ಚೆಂದದಿ ಬರೆದು 37 ಚೆಲುವೆ ನೀ ಬೇಕಾದರೆ ಹಿಡಿಯೆಂದನು ರಂಗ 38 ಅಚ್ಚುತ ಎನ್ನಾನೆ ಲೆಕ್ಕಿಲ್ಲದ್ಹಣವ ಕೊಟ್ಟರೆ ಕೊಡುವೆನೆಂದಳು ಲಕ್ಷುಮಿ ನಗುತ 39 ತುಂಬಿ ಮರದ ಬಾಗಿನವ ಸಿರಿ ತಾ ಋಷಿಪತ್ನೇರನೆ ಕರೆದು40 ತುಂಬಿ ಮರದ ಬಾಗಿನವ ಹರದಿ ಕೊಟ್ಟಳು ತಾ ಋಷಿಪತ್ನೇರನೆ ಕರೆದು 41 ಕುಂದಣದ್ಹೊನ್ನಕೂಸಿನ ತೊಟ್ಟಿಲೊಳಿಟ್ಟು ಕಂದನಾಡಿಸಿ ಜೋಜೋ ಎಂದು ಪಾಡಿದರು42 ಕರಿ ಎಂದನು ರಂಗ 43 ಸುರದೇವತೆಗಳಿಗೆ ಸುಧೆ ಎರೆಯಬೇಕಿನ್ನು ಕರಿ ಎಂದಳು ಲಕ್ಷ್ಮಿ 44 ಹೆಣ್ಣನೊಪ್ಪಿಸಿಕೊಟ್ಟು ಚಿನ್ನದಾರತಿಯ ಕರ್ನೆ(ನ್ಯ?) ಸರಸ್ವತಿ ಭಾರತಿ ಬೆಳಗಿದರಾಗ 45 ಈರೇಳು ಲೋಕದೊಡೆಯನು ನೀನಾಗೆಂದು ಬಹುಜನರ್ಹರಸ್ಯೆರೆದರು ಮಂತ್ರಾಕ್ಷತೆಯ 46 ಪೀತಾಂಬರಧಾರಿ ತನ್ನ ಪ್ರೀತ್ಯುಳ್ಳಜನಕೆ ಮಾತುಳಾಂತಕ ಮಾಮನೆ ಪ್ರಸ್ತ ಮಾಡಿದನು 47 ಸಾಲು ಕುಡಿಎಲೆ ಹಾಕಿ ಮೇಲು ಮಂಡಿಗೆಯ ಹಾಲು ಸಕ್ಕರೆ ಶಾಖ ಪಾಕ ಬಡಿಸಿದರು 48 ಎಣ್ಣೋರಿಗೆ ಫೇಣಿ ಪರಮಾನ್ನ ಶಾಲ್ಯಾನ್ನ ಸಣ್ಣಶ್ಯಾವಿಗೆ ತುಪ್ಪವನ್ನು ಬಡಿಸಿದರು 49 ಏಕಾಪೋಶನ ಹಾಕಿದ ಶೀಕಾಂತಾಮೃತವ ಆ ಕಾಲದಿ ಸುರರುಂಡು ತೃಪ್ತರಾಗಿಹರು 50 ಅಮೃತ ಮಥನವ ಕೇಳಿದ ಜನಕೆ
--------------
ಹರಪನಹಳ್ಳಿಭೀಮವ್ವ
ಶ್ರೀ ಗಣಪತಿಗೆ ವಂದಿಸಿ ಕೆಳದಿಯ ಪುರದಭೋಗಮಂದಿರ ರಾಮೇಶ್ವರನ ರಂಭೋಗಮಂದಿರ ರಾಮೇಶ್ವರನ ಸನ್ನುತಿಸುತರಾಗದಿ ಪಾಡಿ ಪೊಗಳುವೆ ರಂ1 ವಾಣಿ ಪುಸ್ತಕ ವೀಣಾಪಾಣಿ ಪನ್ನಗನಿಭವೇಣಿ ಕಲ್ಯಾಣಿ ಶುಕ ರಂ-ವಾಣಿ ಶುಕವಾಣಿ ಬೊಮ್ಮನರಾಣಿ ಸನ್ಮತಿಯ ಕರುಣಿಸು ರಂ 2 ಧೃವ ಅಟ್ಠ ರೂಪಕ ಏಕತಾಳವು ಝಂಪೆತ್ರಿವಡೆ ತಾಳಗಳೊಡಂಬಡಲು ರಂ-ತ್ರಿವಡೆ ತಾಳಗಳೊಡಂಬಡೆ ಹೊಸ ಹರೆಯದಯುವತಿಯರೊಲಿದು ಹಾಡಿದರು ರಂ 3 ಗಂಗಾಧರ ಜಯ ಗೌರೀಪ್ರಿಯ ಜಯಅಂಗಜಹರ ಜಯವೆನುತ ರಂ-ಜಯವೆನುತಲಂಗನೆಯರುಪೊಂಗೋಲ ಪೊಯಿದು ಪಾಡಿದರು ರಂ 4 ಕಪ್ಪುಗೊರಳ ಜಯ ಸರ್ಪಭೂಷಣ ಜಯಮುಪ್ಪುರವನು ಜಯಿಸಿದವನೆ ರಂ-ಜಯಿಸಿದನೆ ಜಯವೆಂದುಒಪ್ಪದೆ ಪಾಡುತಾಡಿದರೆ ರಂ5 ದಿಮಿದಿಮಿ ದಿಮಿಕೀಟ ತಕಕಿಟನ ಕಕಿಟಕ್ರಮದಿ ನರ್ತಿಸುತಬಲೆಯರು ರಂ-ಅಬಲೆಯರು ಚಿನ್ನದ ಕೋಲಪ್ರಮುದದೊಳಾಡುತೊಪ್ಪಿದರು ರಂ6 ಅಚ್ಚ ಮುತ್ತಿನ ನಿಚ್ಚಳ ಸುಲಿಪಲ್ಲಒಚ್ಚೇರೆಗಣ್ಣು ಬಾಲೆಯರು ರಂ-ಬಾಲೆಯರು ಸಂಭ್ರಮದಿ ಮೈಮೆಚ್ಚುತ ಕೋಲನಾಡಿದರು ರಂ 7 ಭೃಂಗ ಕುಂತಳದ ಮತಂಗಜ ಗಮನದರಂಗುದುಟಿಯ ರಮಣೆಯರು ರಂರಮಣಿಯರು ಸೊಬಗನಾಂತುಹೆಂಗಳು ಪಾಡುತೊಪ್ಪಿದರು ರಂ8 ಜಲಜಗಂಧದ ನಳಿತೋಳ್ಗಳ ರಿಂಕಿದನೆಲೆಮೊಲೆಗಳ ತುಂಬಿಗುರುಳ ರಂಕರುಳ ಪದ್ಮಿನಿಯರುಚಳಕದಿ ಪಾಡುತಾಡಿದರು ರಂ9 ಪೊಂಬೊಗರಿಯ ತೆರದಿ ತುಂಬಿದ ಕುಚಗಳಬಿಂಬಾಧರದ ಕಂಬುಗಳದ ರಂಬಿಂಬಾಧರದ ಕಂಬುಗಳದ ಪದ್ಮಿನಿಯರುಸಂಭ್ರಮದಿಂದ ಪಾಡಿದರು10 ತೆಳುವಸುರಿನ ಕೊಬ್ಬಿದ ಕುಚಯುಗಳದಕಲಹಂಸಗತಿಯ ಮೋಹನದ ರಂಮೋಹನದ ಚಿತ್ತಿನಿಯರುಒಲಪಿನಂ ಪಾಡುತಾಡಿದರು ರಂ11 ಚಿನ್ನದ ಲತೆಯಂತೆ ಚೆನ್ನಾಗಿ ಬಳುಕುವಸನ್ನುತಾಂಗದ ಶಂಖರವದ ರಂರವದ ಶಂಖಿನಿಯರುಚೆನ್ನಾಗಿ ಪಾಡುತಾಡಿದರು ರಂ 12 ಅಪಳ್ಗಣ್ಣ ಮಂದಗತಿಯ ಮದಗಂಧದಶರೀರದ ಕೊಬ್ಬಿದ ಕೊರಳ ರಂಕೊರಳಿನ ಹಸ್ತಿನಿ(ಯರು)ತರುಣಿಯರೊಲಿದು ಪಾಡಿದರು ರಂ 13 ಸಿರಿಮೊಗದೊಳು ಬೆಮರೊಗೆಯೆ ಮೇಲುದುಜಾರೆ ಕರದ ಕಂಕಣ ಝಣರೆನಲು ರಂಕರದ ಕಂಕಣ ಝಣಝಣಝಣಝಣರೆನೆತರಳೆಯರ್ಪಾಡುತಾಡಿದರು ರಂ14 ದುಂಡುಮುತ್ತಿನ ಹಾರವಲುಗಲು ವಜ್ರದಕುಂಡಲಗಳು ನರ್ತಿಸಲು ರಂನರ್ತಿಸಲಂಗನೆಯರತಂಡ ಸಂಭ್ರಮದೊಳಾಡಿದರು ರಂ 15 ಕರುಣಸಾಗರ ಜಯ ಕರಿಚರ್ಮಾಂಬರ ಜಯವರದ ರಾಮೇಶ ಜಯವೆಂದು ರಂ-ವರದ ರಾಮೇಶ್ವರ ಪಾರ್ವತಿ ಜಯವೆಂದುಹರುಷದಿ ಕೋಲನಾಡಿದರು 16
--------------
ಕೆಳದಿ ವೆಂಕಣ್ಣ ಕವಿ
ಶ್ರೀನಿವಾಸ ಮಾ[ವಿಲಾಸ] ಮಾನವೇಶ ಈಶ ಶ್ರೀಶ ದೀನ ಪೋಷಕ ಕಲುಷ[ನಾಶ ಮಾಮನಸಂತೋಷ] ಪ ಗಾನಲೋಲ ಭಕ್ತಜಾಲ ದೀನರಿಗೆ ಕರುಣಾಲವಾಲ ಮಾ[ನ]ವರ್ಗೆ ವಿಲೋಲ ಸಂಕುಲ ದಾನವಾಬ್ಧಿ ಕುಲಾಲೀಲ 1 ಲಕ್ಷರೂಪನೆ ರಾಕ್ಷಸಾರಿ ಮೋಕ್ಷದಾತ [ನುತಪಾಲಕ] ಯಕ್ಷಪಾಧಿಪ ಸುತೆಯ ರಮಣ ಯಕ್ಷ ಕಿನ್ನರ ವಿನುತ ಚರಣ2 [ಲಕ್ಷ್ಯವಿರಲಿ ರಾಮದಾಸಾರ್ಚಿತ ಭಾಗವತ ಪ್ರೋಕ್ತ] ರಕ್ಷಿಸೈ ವರಪದ್ಮಚರಣ [ಮಾಂಗಿರಿ] ಭೂ ರಮೆಯ ರಮಣ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಕಲವೆಲ್ಲವು ಶಿವನ ಲಿಂಗದೊಳಗಡಗಿದುದು ಲಿಂಗವೆ ಮಾಲಿಂಗವಾಗಿ ತೋರುವುದು ಪ ಭಕುತಿಕರು ಮಮತೆಯೊಳು ಸ್ಥಾಪಿಸಿಯೆ ಅರ್ಚಿಸಲು ಸುಕೃತಫಲವನು ಅಳೆವ ಕೊಳಗವನು ಕಾಣೆ ಅ.ಪ ಆ ಮಹಾ ಸಹಸ್ರನಾಮದೊಳಗತ್ಯದಿಕ ಸೊಮೇಶನೆಂದೆಂಬ ಸ್ವಾಮಿಯನು ಕಂಡು ಸೋಮವಾರದ ದಿವಸ ಸಾಮರುದ್ರವ ಜಪಿಸಿ ನೇಮದಿಂ ಪೂಜಿಸಲು ಕಾಮಿತದ ಫಲವು 1 ಇನ್ನೇನ ವರ್ಣಿಸುವೆ ಈಶ ನಿನ್ನಯ ಮಹಿಮೆ ಉನ್ನಂತವಾಗಿ ಜಗದೊಳು ಚರಿಸಿತು ಪನ್ನಗೇಶನ ಬಲದ ಪಶ್ಚಿಮದ ದೆಸೆಯೊಳ್ ಪ್ರ- ಸನ್ನವಾದನು ಸೋಮನಾಥನೆಂದೆನುತ2 ಪಾದ ಪ್ರತ್ಯಕ್ಷವಾಗಿಯೆ ಸೋಮೇಶನೆಂದೀಗ ತಾ ಮೆರೆದುದು ಭುಕ್ತಿ ಮುಕ್ತಿಯನಿತ್ತು ಪ್ರೇಮದಿಂ ಸಲಹುತ್ತ ಕಾಮಿತಾರ್ಥವನೀವ 3 ಲೋಕೋಪಕಾರಕ್ಕೆ ಸೋಮೇಶ ನೀ ಬಂದೆ ಗೋಕರ್ಣ ಶ್ರೀಶೈಲ ಕಾಶಿ ರಾಮೇಶ್ವರವು ಬೇಕೆಂಬುದಿಲ್ಲಿನ್ನು ಎನ್ನ ಭೀತಿಯ ಗಿರಿಯ ಕುಲಿಶ ನೀನು ಜಗದೀಶ 4 ಜೋಕೆಯೊಳು ಮನದೊಳಗೆ ಅಡಗಿಸಿಯೆ ಭಜಿಸಿದರೆ ಯಾಕೆ ಮನದೊಳು ಬಿಡುವೆ ಶಿವನಾಮವನು ನೀನು ಏಕೆ ಕಡೆಯಲಿ ಕೆಡುವೆ ಮರುಳು ಜೀವನವೆ 5 ಸಡಗರದಿ ಸರ್ವವೂ ನಿನ್ನಲ್ಲಿ ಅಡಗಿದುದು ಜಡೆಯೊಳಗೆ ಅಡಗಿದುದು ಪೊಡವಿಗುತ್ತಮ ನದಿಯು ಉಡುಪತಿಯು ಅಡಗಿದನು ಊಧ್ರ್ವ ಫಣೆಯೊಳಗೆ ಪಿಡಿಯೊಳಗೆ ಅಡಗಿದುದು ವೇದ ಮೃಗರೂಪಾಗಿ 6 ಕಿಚ್ಚು ಅಡಗಿತು ಅವನ ಅಚ್ಚ ಹಣೆಗಣ್ಣಿನೊಳು ಮುಚ್ಚಿ ತೆರೆವಕ್ಷಿಯೊಳು ಮೂಜಗದ ಬೆಳಕು ಬಿಚ್ಚಿಟ್ಟಿ ವಿಷಕಂಠದೊಳು ಲೋಕವನು ಎಚ್ಚರಿಪ ಮಂತ್ರಗಳು ಬಾಯೊಳಗಡಗಿದುದು 7 ಶುದ್ಧ ಸ್ಫಟಿಕ ಥರದ ಕಾಯಕಾಂತಿಗಳುಳ್ಳ ಬದ್ಧುಗೆಯ ದಾರದಂದದಿ ಉರಗನೊಪ್ಪುಗಳು ಉದ್ದಿಶ್ಯವಾಗಿ ಭಜಿಸಿದ ಭಕ್ತರುಂಡಗಳು ತಿದ್ದಿಟ್ಟಿ ಆಭರಣ ತಿರಿಶೂಲಧರಣ 8 ಪುಲಿಕರಿಯ ಪೊಳವುಗಳು ನಳನಳಿಪ ವಸನಗಳು ಹೊಳೆವ ಮುಖತೇಜಗಳು ನಳಿನನೇತ್ರಗಳು ನಲಿವಗಣ ಕೋಟಿಗಳ ಮಧ್ಯದೊಳು ಕೈಲಾಸ ಇಳಿದು ಬಂದನು ನಮ್ಮ ಬಳಿಗೆ ಸೋಮೇಶ 9 ನಾಸಿಕದಿ ಕೌಮಾರಿಗವಧಿಯಾಗಿಹ ಸ್ಥಳ ವಿ- ಶೇಷವಾಗಿಹ ಶುದ್ಧ ರೌಪ್ಯಪುರದೊಳಗೆ ಭೂಸುರೋತ್ತಮಗೊಲಿದು ಭೂರಿಭಾಗ್ಯವನಳೆದು ವಾಸವಾದೆಯೊ ಜಗದೀಶ ಸೋಮೇಶ 10 ಭಾಳನೇತ್ರನೆ ನೀಲಕಂಠ ಶೂಲಾಸ್ಥಿಧರ ಕಾಲರುದ್ರ ವ್ಯಾಳಭೂಷ ಸರ್ವೇಶ ಲಾಲಿಸೈ ಬಿನ್ನಪವ ಪಾಲಿಸೆನ್ನನು ಬೇಗ ಬಾಲಕನು ಅಲ್ಲವೇ ಭಕ್ತಸುರಧೇನು 11 ಸಾರಿ ನೋಡಿರೊ ಮೂರು ಲಿಂಗವನು ನೀವೀಗ ಧಾರುಣಿಯಳೊಂದು ಶಿವಲಿಂಗವನು ಬೇಗ ಮೇರುವಿಗೆ ಸಮವಾದ ಹೇಮವನು ವಿಪ್ರರಿಗೆ ಧಾರೆಪೂರ್ವಕವಾಗಿ ಇತ್ತ ಫಲ ಒದಗುವುದು 12 ಶಿವನ ಪೂಜೆಯೆ ಭಕ್ತಿ ಶಿವನ ಪೂಜೆಯೆ ಮುಕ್ತಿ ಶಿವಮಂತ್ರವೆ ಶಕ್ತಿ ಶಿವನೆ ಪರಶಕ್ತಿ ಶಿವನಾಮವನು ಭಜಿಸಿ ಸಿರಿಯ ಪಡೆದನು ಹರಿಯು ಶಿವನ ಮರೆಯದೆ ಭಜಿಸು ಇಹಪರವ ಸೃಜಿಸು13 ನಿನ್ನನೇ ನಂಬಿದೆನು ಉನ್ನತಾನಂತೇಶ ಮನ್ನಿಸಿ ದಯದೋರು ಚಂದ್ರಮೌಳೀಶ ಇನ್ನು ಭಯವಿಲ್ಲೆನೆಗೆ ಹರಸೆನ್ನ ಸೋಮೇಶ ಎನ್ನೊಡೆಯ ಶ್ರೀಕೃಷ್ಣ ವರಾಹತಿಮ್ಮಪ್ಪ 14
--------------
ವರಹತಿಮ್ಮಪ್ಪ
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ 1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ಶ್ರೀಪತಿ
ಸಿಂಧು ಶಯನ ಬಾರೆಲೋ - ಮಂದರೋದ್ಧಾರೀಇಂದಿರೆಯರಸ ಮುಕುಂದನೇ ಪ ಮಾಧವ ಹೇ ದಯಾಂಬುಧೆ - ವಂದಿಸುವೆ ತ್ವತ್ಪಾದ ದ್ವಂದ್ವಕೇ ಅ.ಪ. ಹೃದಯ ಮಧ್ಯದಿ ಮಂಟಪಾ - ಬುಧ ಜನ ವಂದ್ಯಸಿದ್ಧವಾಗಿಹುವು - ಮಾಧವಾ |ಸಿದ್ಧ ಸಾಧನ ಪವನ - ಉದಾನಾದಿಗಳೆಲ್ಲಹೆದ್ವಾರಗಳ ಕಾದಿಹರೋ ||ಮಧು ವಿರೋಧಿಯೆ ನಿನ್ನ ಪದ - ಸದ್ವನಜ ಕೀರುತಿ ಸುಧೆಯ ಸವಿಯುವಮುದವ ಕರುಣಿಸು ಶ್ರೀದ ನರಹರಿ - ಹೃದಯ ಸದನಕೆ ವದಗಿ ಬೇಗ 1 ಚಿತ್ತ ಸಿಂಹಾಸನವೂ - ಚಿತ್ತ ಜನಯ್ಯಾಸ್ತೋತ್ರ ರತುನ ಖಚಿತವೂ ||ಉತ್ತಮ ಮತಿ ಸುದತೇರೂ - ಛತ್ರಿ ಚಾಮರಗಳಎತ್ತಿ ಬೀಸುತಲಿಹರೋ ||ಕೃತ್ತಿವಾಸನ ಸಖನೆ ಪರಮ ಸು - ಹೃತ್ತಮೋತ್ತಮ ಚಿತ್ಸುಖ ಪ್ರದಚಿತ್ತವಿಸು ಚಿತ್ತಾಖ್ಯ ಪೀಠಕೆ - ಸತ್ಯಕಾಮ ಶರಣ್ಯ ಶಾಶ್ವತ 2 ಭವ ಪಿತ ತೋಯ ಜಾಕ್ಷನೆ -ದಾಯ ನಿನ್ನದು ಎನ್ನ ಗತಿಗೇ ಪ್ರೇರ್ಯ ಪ್ರೇರಕ ಶ್ರೀಗುರು - ಗೋವಿಂದ ವಿಠಲನೆ ಕಾಯೊ ಬೇಗ 3
--------------
ಗುರುಗೋವಿಂದವಿಠಲರು
ಸುರಾಸುರಾರ್ಚಿತ ಸರೋಜಲೋಚನ ಸರಾಗದಿಂದೆನ್ನನೀಕ್ಷಿಸೈ ಪರಾಪರೇಶನೆ ಪರಾತ್ಪರನೆ ನೀ ಪರಾಕುಮಾಡದೆ ಪಾಲಿಸೈ ಪ ವಿರಾಜಮಾನ ಸುವಿರಾಜವಾಹನ ವಿರಾಟ್ಪುರುಷ ವಿಶ್ವಂಧರ ಕರಾರವಿಂದದಿ ಕರಾದಿಗಳ ಪಿಡಿ ಧರಾತಿಮರ್ದನ ಧುರಂಧರ 1 ಧರಾಧರಣಿಪಟು ಧರಾಧರಾಧಿಪ ಧುರಾವಹನ ದುರ್ಧರ್ಷಣ ಧರಾಮರರ ಬಹುಪರಾಭವವ ಬಲು ಸರಾಗದಲಿ ನಿರ್ವಾಪಣ 2 ಜರಾಮರಣಗಳ ನಿರಾಕರಿಸಿ ವಸುಂಧರಾಭರಣ ಗುಣಭೂಷಣ ಸುರಾರಿಮರ್ದನ ಶರಾಸನಾಂಚಿತ ಕರಾನಿಹಿತ ಮಣಿಕಂಕಣ 3 ಶಿರೀಷ ಕುಸುಮದ ಸರಿಸುಕೋಮಲಶರೀರ ನಿನ್ನದು ಈ ಪರಿ ಸಿರಿಯುದರದೊಳೇ ಸಿರಿಯಧರಿಸಿದ ಪರಿಯದೆಂತುಟೋ ಕೇಳ್ ಹರಿ 4 ಪಯೋಧಿತನಯಾ ವಯೋಸುರೂಪನೆ ದಯಾನಿಧೇ ಧರ್ಮಾತ್ಮನೆ ದಯಾರಸದಿ ಹೃತ್ಪಯೋಜಮಧ್ಯದಿ ನಿಯಾಮಿಸುವ ನಿರ್ಮಾಯನೆ 5 ವರೇಣ್ಯ ಸಜ್ಜನ ಶರಣ್ಯ ಪುಲಿಗಿರಿಯರಣ್ಯ ಮಧ್ಯವಿರಾಜಿತ ಹಿರಣ್ಮಯಾಂಬರ ಹಿರಣ್ಯಕಾಂತಕ ಹಿರಣ್ಯಗರ್ಭಸುಪೂಜಿತ 6 ವ್ಯಾಘ್ರನೆಂಬುವತ್ಯುಗ್ರ ದೈತ್ಯನಂ ನಿಗ್ರಹಗೈದ ಮಹಾತ್ಮನೆ ಶೀಘ್ರದಿ ಭಕ್ತಾನುಗ್ರಹಮಾಳ್ಪ ಸುರಾಗ್ರಗಣ್ಯ ಪುಣ್ಯಾತ್ಮನೆ 7 ಸುರರು ನರರು ನಿನ್ನರಿಮೆಯನರಿಯದೆ ನಿರುತವು ಸನ್ನುತಿಗೈವರೆ ಪರಮಪುರುಷ ಸುಖಕರ ನೀನೆನ್ನುತ ಪರಿಪರಿ ನಿನ್ನನೆ ಪೊಗಳ್ವರೆ 8 ಮೂಜಗ ಮಾಡುವ ಪೂಜೆಯಿಂದ ನೀನೀ ಜಗದಲಿ ಒಲಿದಿರ್ಪೆಯ ಮೂಜಗ ಪೂಜಿಪ ವ್ಯಾಜದಿಂದ ನಿಜಪೂಜೆಯ ನೀ ಕೈಗೊಂಬೆಯ 9 ನಿಜಪದದೊಳು ನೀನಜಭವ ಮುಖಸುರವ್ರಜಗೋಚರನಾಗಿಲ್ಲವೈ ಸುಜನರ ಪೊರೆಯವ ನಿಜಮತಿಯಿಂದಲಿ ತ್ರಿಜಗಕ್ಕೆ ಗೋಚರನಾಗಿಹೈ10 ನಿತ್ಯತೃಪ್ತ ನೀನತ್ಯುತ್ತಮ ನಿಜಭೃತ್ಯನಮತ್ರ್ಯನು ಮೋದದಿ ನಿತ್ಯದಿ ನಿನ್ನತ್ಯುತ್ತಮ ಪದದೊಳು ಭಕ್ತಿಯ ಪಾಲಿಸು ನೇಮದಿ 11 ಧರಣಿಯೊಳುರುತರ ಮೆರೆಯುವ ಫಣಿಭೂ ಧರದೊಳು ನಿರುತವು ಭಕ್ತರ ಸಿರಿವಲ್ಲಭ ವರದ ವಿಠಲ ಕರುಣಾಕರ 12
--------------
ವೆಂಕಟವರದಾರ್ಯರು
ಸ್ವಾಮಿ ಸರ್ವೋತ್ತಮಳೆ ಸಕಲ ಜನಕಾಧಾರೆ ಕಾಮಿತಾರ್ಥವನೀವ ಕರುಣಿ ಭೂದೇವಿ ಪ ಹರಿಯ ಪಾದದಲುದಿಸಿ ಹರಿಗೆ ವಧುವೆನಿಸಿ ಹರಿಗೆ ಸುತೆಯನು ಇತ್ತು ಹಿರಿಯಳಾದೆ ಹರಿನಾಮ ಕೀರ್ತನೆಯ ಹೊರೆವ ಧಾರುಣಿ ನಿನ್ನ ಮೊರೆಹೊಕ್ಕೆ ಮರೆಯದಿರು ಕರುಣದೋರೆನಗೆ 1 ಕ್ಷಮೆ ದಮೆಯು ಶಾಂತ ಸದ್ಗುಣವೊಪ್ಪುವಳೆ ನಿನಗೆ ಭ್ರಮೆಬಟ್ಟು ಭೂಭುಜರು ಕಡಿದುಕೊಳುತಿಹರು ಅಮಿತ ಮಹಿಳೆ ನಿನ್ನ ನಿಜವ ಬಲ್ಲವರಾರು ತಮಗೆ ಋಣವಿದ್ದುದನು ಕೊಂಡೊಯ್ವರಲ್ಲದೆ 2 ಚಿನ್ನ ಭಂಡಾರಗಳು ನಿನ್ನೊಡಲೊಳೊಪ್ಪಿದವು ಉನ್ನಂತ ರತುನಗಳು ನಿನ್ನೊಳಡಗಿಹವು ಅನ್ನ ಪಾನಂಗಳಿಗೆ ಬೀಜ ಮೂಲವೆ ನೀನು ನಿನ್ನ ಮರೆತಿಹ ಜನಕೆ ಮುನ್ನ ಸುಖವುಂಟೆ 3 ಒಬ್ಬ ರಾಯನ ಗೆಲುವೆ ಒಬ್ಬ ರಾಯನಿಗೊಲಿವೆ ಒಬ್ಬನಿಗೆ ಮೈಯ ನೀನು ಕೊಡುವೆ ಒಬ್ಬರಾದರು ನಿನ್ನ ನಿಜದಿ ಬಾಳ್ದಪರಿಲ್ಲ ಗರ್ಭಜಾತನ ಹರಿಯ ಕೈಯ ಕೊಲಿಸಿದೆಲಾ 4 ಅಂಬುಧಿಯೆ ವಸನಗಳು ಕುಂಭ ಕುಚಗಳೆ ಗಿರಿಯು ಸಂಭ್ರಮದ ನದಿ ಕಾಲುವೆ ನಿನ್ನ ಬೆವರುಗಳು ಎಂಭತ್ತನಾಲ್ಕು ಲಕ್ಷ ಜೀವರಾಶಿಗಳೆಲ್ಲ ತುಂಬಿಕೊಂಡಿರುತಿಹುದು ಅಂಗೋಪಾಂಗದಲಿ 5 ಮೂಢನಾದೆನು ನಿನ್ನ ಬೇಡಿಕೊಂಬರೆ ಮನದಿ ರೂಢಿ ದೇವತೆಯೆ ಮಾಡು ದಯವನು ನೀನು ಮನದಭೀಷ್ಟವನೆಲ್ಲ ಪಾಡು ಪಂಥವು ಬೇಡ ಪಡೆದ ಮಗನೊಡನೆ 6 ನಂಬಿದೆನು ನಾ ನಿನ್ನ ಕುಂಭಿನಿಯೆ ಕೈವಿಡಿದು ಇಂಬಾದ ಪದವಿಯನು ಸಂಭ್ರಮದಿ ಕೊಡುತ ಬೆಂಬಡದೆ ವರಾಹತಿಮ್ಮಪ್ಪ ಕರುಣದಲಿ ಹಂಬಲಿಪ ತೆರದಿಂದ ಸಲಹುವುದು ಜಗದಿ 7
--------------
ವರಹತಿಮ್ಮಪ್ಪ
ಹರನಕುಮಾರನ ಚರಣಕಮಲಗಳಿಗೆರಗಿ ಶಾರದೆಗೆ ವಂದಿಸುತ ಶರಧಿಶಯನಗೆ ಸೆರಗೊಡ್ಡಿ ಬೇಡಿಕೊಂಬೆ ಶರಧಿಸುತÉಯ ಕತೆಗ್ವರವ 1 ಸಾಕ್ಷಾತ ಶ್ರೀಹರಿ ವಕ್ಷಸ್ಥಳ ವಾಸಿಯೆ ಇಕ್ಷುಚಾಪದವನ ಪಡೆದ ಮೋಕ್ಷದಾಯಕಳೆ ಮಾಲಕ್ಷುಮಿ ಕರುಣಾಕ- ಟಾಕ್ಷದಿ ನೋಡಬೇಕೆನ್ನ 2 ಶ್ರಾವಣಮಾಸದಿ ಮೊದಲ ಶುಕ್ಕುರುವಾರ ಮಾ- ಧವನರಸಿ ಮಾಲಕ್ಷ್ಮಿ- ದೇವೇರ ಮಹಿಮೆ ಕೊಂಡಾಡುವೋದೀ ಕಥÉ ಕಿವಿಗೊಟ್ಟು ಕೇಳೋದು ಜನರು 3 ಬಡವ ಬ್ರಾಹ್ಮಣನೊಂದು ಪಟ್ಟಣದೊಳಗಿದ್ದ ಮಡದಿ ಮಕ್ಕಳ ಸಹಿತಾಗಿ ಹಿಡಿದು ತಂಬೂರಿ ತಂಬಿಗೆಯ ಗೋಪಾಳಕ್ಕೆ ಬಿಡದೊಂದು ಮನೆಯ ತಿರುಗುತಲಿ 4 ಸೊಸೆಯರು ನಾಲ್ಕು ಮಂದಿಯು ಗಂಡುಮಕ್ಕಳು ಹಸುಗೂಸುಗಳು ಮನೆತುಂಬ ಅಶನ ವಸನವಿಲ್ಲ ಹಸಿದ ಮಕ್ಕಳಿಗ್ಹಾಲು ಮೊಸರು ಅನ್ನವು ಮೊದಲಿಲ್ಲ5 ಅತಿಗುಣವಂತರು ಗತಿಯಿಲ್ಲ ಗ್ರಾಸಕ್ಕೆ ಮಿತಭೋಜನವ ಮಾಡುವರು ವ್ರತ ನೇಮ ನಿಷ್ಠೆ ನಿರುತ ದರಿದ್ರವನು ಶ್ರೀಪತಿ- ಸತಿ ದಯದಿ ನೋಡಿದಳು 6 ಒಂದು ದಿನದಿ ಬಂದ ಮಂದಿ ಮಂದಿರದಲ್ಲಿ ಚೆಂದಾದ ಸುಣ್ಣ ಸಾರಣೆಯು ರಂಗವಲ್ಲಿ ಚಿತ್ರ ಬಣ್ಣಕಾರಣೆ ಮಣಿ- ಮುಂದೆ ತೋರಣ ಕಟ್ಟುತಿರಲು 7 ಮನೆಮನೆಯಲ್ಲಿ ಮಾಲಕ್ಷ್ಮಿದೇವಿಯರ ಚಟ್ಟಿಗೆ ಬರೆವು- ದನು ತಾ ಕಂಡು ಇದು ಏನು ನೋವಿ (ನೋಂಪಿ?) ಎನಗೆ ಹೇಳಬೇಕೆಂದು ಘನ ಭಕ್ತಿಯಿಂದ ಕÉೀಳಿದನು 8 ಕ್ಷೀರಸಾಗರದಲ್ಲಿ ಹುಟ್ಟಿದ ಮಾಲಕ್ಷ್ಮಿದೇವಿ ದೇವರ ಪಟ್ಟದರಸಿ ಶ್ರಾವಣಮಾಸ ಸಂಪತ್ತು ಶುಕ್ಕುರುವಾರ ನಾವು ಪೂಜೆಯ ಮಾಡಬೇಕು9 ಎನಗೊಂದು ಚಟ್ಟಿಗೆ ಬರೆದುಕೊಟ್ಟರೆ ಎನ್ನ ಮನೆಯಲ್ಲಿ ಇಟ್ಟು ಪೂಜೆಪೆನು ವಿನಯದಿಂದ್ಹೇಳಿಕೊಂಡರೆ ಒಂದು ಚಟ್ಟಿಗೆ ಬರೆದÀುಕೊಟ್ಟರು ಬಲಗೈಲಿ 10 ಸಿರಿದೇವಿಚಟ್ಟಿಗೆ ಹಿಡಿದು ಗೋಪಾಳಕ್ಕೆ ಹೋದನು ಮನೆ ಮನೆಯಲ್ಲಿ ಗೂಡೆ ಅಕ್ಕಿ ಬ್ಯಾಳೆ ಬೆಲ್ಲತುಪ್ಪವ ತಂದು ನೀಡೋರು ಹಿಡಿ ಹಿಡಿರೆಂದು 11 ಕುಸುಮ ಮಲ್ಲಿಗೆ ಪತ್ರಫಲಗಳು ಪೂಜಾ ಸಾಧನ ಪದಾರ್ಥಗಳು ಆದಿಲಕ್ಷ್ಮಿದಯ ಆದಕಾರಣದಿಂದ ಆದರದಿಂದ ಕೊಡುವರು 12 ತಂದ ಪದಾರ್ಥ ತನ್ನ್ಹೆಂಡತಿ ಕರೆದು ಮುಂದಿಟ್ಟು ವಾರ್ತೆಗಳ ಹೇಳಿದನು ಇಂದು ಪೂಜೆಯ ಮಾಡು ಆ- ನಂದವ ಕೊಡುವಳು ನಮಗೆ13 ಕಬ್ಬು ಬಿಲ್ಲ್ಹಿಡಿವೋ ಕಾಮನ ಮಾತೆ ಮಾಲಕ್ಷ್ಮಿ ಉರ್ವಿಯೊಳುತ್ತಮಳೀಕೆ ಹಬ್ಬದೂಟಕÉ ಹೇಳಿ ಬಂದೆ ಬ್ರಾಹ್ಮಣಗÉ ಮ- ತ್ತೊಬ್ಬ ಮುತ್ತೈದೆಗ್ಹೇಳೆಂದ14 ಚಿಕ್ಕಸೊಸೆ ಎಣ್ಣೆ ಕುಂಕುಮ ಕೈಯಲ್ಲಿ ತಕ್ಕೊಂಡು ನಡೆದಳ್ಹಾದಿಯಲಿ ಚೊಕ್ಕ ಚಿನ್ನದ ಗೊಂಬೆಯಂಥ ಮುತ್ತೈದೆ ತಾ ಗಕ್ಕನೆ ಬಂದು ಕೇಳಿದಳು 15 ಹುಡುಗಿ ನೀ ಎತ್ತ ಪೋಗುವಿಯೆ ನಿಮ್ಮನೆಯೆಲ್ಲೆ ಅಡಿಗೆಯೇನೇನು ಮಾಡುವರು ಹಿಡಿದೆಣ್ಣೆ ಕುಂಕುಮ ಕೊಡುವೋದಿನ್ನ್ಯಾರಿಗೆ ಕೊಡಬಾರದೇನೆ ನೀಯೆನಗೆ 16 ದಾರಾದರೇನಮ್ಮ ದಾರಿ ನೋಡದ ಮುಂಚೆ ನೀನೇ ಬಾ ನಮ್ಮ ಮಂದಿರಕÉ ಹೇಳಿ ಮುತ್ತೈದೆಗೆ ಹಿಗ್ಗಿಲೆ ಬಂದತ್ತೆ ಮಾವನ ಮುಂದರುಹಿದಳು 17 ಮನೆಯ ಸಾರಿಸಿ ಸುಣ್ಣ ಕಾರಣೆ ರಂಗೋಲಿಯ ಬರೆದು ಬಾಗಿಲಿಗೆ ಬಣ್ಣವನು ಎರೆದು ಕೊಂಡೆಲ್ಲರು ಬ್ಯಾಗ 18 ಕಮಲ ಕ್ಯಾದಿಗೆ ಕಬ್ಬು ಕದÀಳಿ ಕಂಬವು ಬಾಳೆಗೊನೆ ಕಟ್ಟಿ ಚಿತ್ರ ಮಂಟಪವ ನಡುವ್ಯ್ಹಾಕಿ ಪದ್ಮ ಪೀಠಗಳ 19 ಚಟ್ಟಿಗೆಯೊಳಗಕ್ಕಿ ಐದು ಫಲವ ತುಂಬಿ ಮುತ್ತೈದೇರೆಲ್ಲ ನೆರೆದು ಕಟ್ಟಿದರ್ ಕೊರಳ ಮಾಂಗಲ್ಯ ಮಾಲಕ್ಷ್ಮಿ ಪ್ರತಿಷ್ಠೆ ಮಾಡಿದರು ಸಂಭ್ರಮದಿ 20 ಅರಿಷಿಣ ಕುಂಕುಮ ಗಂಧ ಬುಕ್ಕಿ ್ಹಟ್ಟು ಗೆಜ್ಜೆ- ವಸ್ತ್ರವು ಪಾರಿಜಾತ ಸಂಪಿಗೆಯು ಮುಡಿಸಿ ಮಲ್ಲಿಗೆದಂಡೆ ಒಡೆಸೆ ತೆಂಗಿನಕಾಯಿ ಉಡಿ ತುಂಬುತ್ತತ್ತಿ ಫಲಗಳು 21 ಭಕ್ಷ್ಯಶಾವಿಗೆ ಪರಮಾನ್ನ ಚಿತ್ರಾನ್ನ ಸಣ್ಣಕ್ಕಿ ಶಾಲ್ಯಾನ್ನ ಸೂಪಗಳು ಚಕ್ಕುಲಿ ಗಿಲಗಂಜಿ ಚೆಂದ ಚಿರೋಟಿ ಹಪ್ಪಳ ಸಂಡಿಗೆ ಆಂಬೊಡೆಗಳು22 ಘೃತ ಕ್ಷೀರ ಸಕಲ ಪಕ್ವಾನ್ನ ಮಂಡಿಗೆ ಬೀಸೋರಿಗೆ ಗುಳ್ಳೋರಿಗೆಯು ಚಂದ್ರನಂತ್ಹೊಳೆವೊ ಶಾವಿಗೆಯ ಫೇಣಿಯು ದಿವ್ಯ ಬುಂದ್ಯ ಬುರುಬುರಿ ಅನಾರಸವು23 ಬೇಕಾದ ಬೇಸನ್ನು ಬಿಳಿಯದಳಿಯದುಂಡೆ (?) ಮೋತಿಚೂರು ಚೂರ್ಮಲಾಡು
--------------
ಹರಪನಹಳ್ಳಿಭೀಮವ್ವ
ಹರಿಯೆ | ಕರುಣ ವಾರಿಧಿಯೆ | ಧೊರೆಯೇ |ವರ ಚರಣ ಸೇವೆಯನು ಕೊಡು ಹರಿಯೇ ಪ ಗಾಂಗೇಯ | ಶರದಿ ಸೆಣೆಸಲು ಅಂದುಸರಸದಲಿ ನೀ ಅವನ | ಪೊರೆಯಲಿಲ್ಲವೆ ಎಂದು 1 ದುರುಳ ದುಶ್ಯಾಸನ | ಸೀರೆ ಸಭೆಯಲಿ ಸೆಳೆಯೇತರಳೆ ಪಾಂಚಾಲೆ | ಓಲೆ ಕಳುಹಿದಳೆ ಹರಿಯೆತರುಳೆ ಕೈಗಾಯ ಬೇಕೆಂದು | ನಿನ್ನ ಧೊರೆಯೇಎರಳಾಕ್ಷಿಗಕ್ಷಯ್ಯ | ವಸನಿತ್ತೆ ಹರಿಯೇ 2 ಅಂದು ಬಲತಾಯಿ ಬಾಲಕನ | ತೊಡೆಯಿಂದ ನೂಕೇ |ಬಂದು ಕಾನನಕೆ ತಪಗೈದ | ತರಳನನು ಕಾಯ್ದೇ |ಇಂದು ನಾ ಮಾಡಿದಪರಾಧ | ವೇನಯ್ಯ ಹರಿಯೇ |ಕಂದನಪರಾಧ ಎಣಿಸುವಳೆ | ತಾಯಿ ಧೊರೆಯೇ3 ಗೌತಮರ ಮಡದಿಯನು | ಕಾಯಲಿಲ್ಲವೆ ಹರಿಯೆಔತಣವ ಕೊಟ್ಟು ಬರ | ಹೇಳಿದಳೆ ಧೊರೆಯೇ ||ವೀತಶೋಕನೆ ಎನ್ನ | ಮೊರೆ ಕೇಳಿಸದೆ ಹರಿಯೇಔತಪ್ರೋತ ನೀನೆಲ್ಲವನು | ತಿಳಿದಿರುವೆ ಧೊರೆಯೇ 4 ಬಲಿಯ ಯಾಚಿಸುತ | ನೀ ಅವನ ವಂಚಿಸಿದಿ ಹರಿಯೆತಲೆ ಬಾಗಲಲಿ ನಿಂದು | ನೀ ಅವನ ಪೊರೆದೆ ಧೊರೆಯೆಸಲೆ ಬೀದಿ ಬೀದಿಯಲಿ | ನಾ ಕೀರ್ತಿಸುವೆ ಹರಿಯೇಬಲು ದಯಾಪರ ಗುರು | ಗೋವಿಂದ ವಿಠಲೆಂದು ಧೊರೆಯೆ 5
--------------
ಗುರುಗೋವಿಂದವಿಠಲರು
ಹಲವು ಸಂಭ್ರಮಗಳಿಂ ಮನೆ ಕಟ್ಟಿದೀ ದೇವ ಪ ನೆಲೆಗೆಡಿಸಿ ಅದನಿಂದು ಕೆಡಹುತಿರುವೀ ಅ.ಪ ಪ್ರಾರಬ್ಧಕರ್ಮವೆಂತೆಂಬ ಹಳ್ಳವ ತೋಡಿ ಆರು ಜನ ಕೆಲಸಗಾರರನಲ್ಲಿ ಕೂಡಿ ಮೀರಿ ಮಾಯೆಯ ಭಾರಿ ಕಲ್ಕೆಸರುಗಳ ಹೂಡಿ ಭಾರಿನೆಲಗಟ್ಟು ರಚಿಸಿದರೊಂದುಗೂಡಿ 1 ಎಲುವಿನ್ಹಂದರ ಹರಹಿ ಬಲಿದ ಮಾಂಸದ ಗೋಡೆಗಳ ಮೇಲೆ ಚೆÀಲುವ ಚರ್ಮ ಹೊದ್ದಿಸಿ ಜಲರಕ್ತ ಕಾಲ್ವೆಗಳ ಹರಿಸಿ | ಸ್ವಚ್ಛತೆಯಿರಿಸಿ ಬಲುಉಸಿರುಬಲದಿಂದಲದ ಚಲನಗೊಳಿಸಿ 2 ಐದು ಇಂದ್ರಿಯಗಳೇ ದ್ವಾರ ಕಿಟಕಿಗಳಾಗೆ ಐದುಬಗೆ ವಿಷಯಗಳು ಆಹಾರವಾಗೆ ವೈದು ಯಮಪುರಿಗೆ ತಲ್ಪಿಸÀಲುಣಿಸನಿದನುಂಡು ಐದಿದುದು ನರಕಕೂಪಕೆ ಜೀವದಂಡು 3 ಕ್ಷೇತ್ರಜ್ಞ ನೀನು ನಿನ್ನಯ ಕಣ್ಣಮುಂದಿಂತು ಗಾತ್ರದಲಿ ವಾಸಿಪ ಜೀವನು ನಿನ್ನ ಮರೆತು ಕ್ಷೇತ್ರಘಾತಕಕಾರ್ಯವೆಸಗುತಿರಲಂದಂದೆ ನೇತ್ರ ಹಸ್ತಗಳ ಛೆÉೀದಿಸದೆ ಉಳುಹಿದೆಯೆಂತು 4 ಸರ್ವಸ್ವತಂತ್ರನೀ ಜೀವ ಪರತಂತ್ರನವ ಗರ್ವ ಅಜ್ಞಾನ ಅಂಧತೆಗಳಲಿ ಸಿಲುಕಿ ಸರ್ವ ದುಷ್ಕರ್ಮಗಳ ನಡೆಸಿ ಕೆಡಸಿಹನಿದನು ಸರ್ವದಾ ಕ್ಷಮಿಸಿ ಪೊರೆ ರಘುರಾಮವಿಠಲ 5
--------------
ರಘುರಾಮವಿಠಲದಾಸರು
ಹೂವ ಕೊಡೆ ದೇವಿ ಹೂವ ಕೊಡೆಯಾವಾಗಲೂ ನಿಮ್ಮ ಸಿರಿಮುಡಿಯೊಳಗಿರ್ಪ ಪ ವರಮಹಾಲಕ್ಷ್ಮಿ ನಿಮ್ಮ ಸಿರಿಮುಡಿಯನೆ ಕಟ್ಟಿಪರಿ ಪರಿ ಧೂಪ ಧೂಮಗಳನಿಕ್ಕಿಪರಿಮಳಿಸುವ ಸಂಪಿಗೆಯ ಪೂಸರವ ಸಿಂ-ಗರಿಸಿರಲಾಮಾಳಿಕೆಯೊಳು ಸಂಪಿಗೆ ಹೂವ 1 ಮರುಗ ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆಸರಸಿಜ ಮೊದಲಾದ ಕುಸುಮದಿಂದಪರಿಮಳಿಸುವ ನಿಮ್ಮ ಸಿರಿಮುಡಿಯೊಳಗಿರ್ಪಅರಳಿದ ಮಲ್ಲಿಗೆ ಹೂವ ಕಂಡೆ ಹೂವ 2 ವ್ಯೋಮಗಂಗೆಯೊಳಿಂದ ಹೇಮಕಾಮರಸವಕಾಮಿನಿಯರು ಕೊಯ್‍ತಂದದನುಶ್ರೀ ಮಹಾದೇವಿ ನಿಮ್ಮ ತುರುಬಿಗೆ ಮುಡಿಸಿರ-ಲಾ ಮಹಾಕುಸುಮ ಮಾಲಿಕೆಯೊಳು ತಾವರೆ ಹೂವ 3 ಮುತ್ತಿನ ಲಹರಿಯ ರತ್ನದ ರಾಗಟೆಯಸುತ್ತ ಮುತ್ತಲೂ ರಾರಾಜಿಸುವಪುತ್ಥಳಿಯ ಚಿನ್ನದಂತೆ ಘಮಘಮಿಸುವಉತ್ತಮವಾದ ಸುವರ್ಣದ ಕೇದಗೆ ಹೂವ 4 ಜಾತಿ ರತ್ನದ ನಡುವೆ ಜ್ಯೋತಿಯ ತೆರನಂತೆನೂತನವೆನಿಸಿ ಪ್ರಜ್ವಲಿಸುತಿಹಶಾತಕುಂಭದ ಚೌರಿಯ ಮೇಲೆ ಮುಡಿಸಿದಜಾತಿಮಲ್ಲಿಗೆ ಸಂಪಿಗೆ ಸೇವಂತಿಗೆ ಹೂವ 5 ಇಂದೀವರದಳನಯನೆ ಶುಭಪ್ರದೆಇಂದು ನಿಭಾನನೆ ಹೂವ ಕೊಡೆಮಂದಗಮನೆ ನಿಮ್ಮ ತುರುಬಿನೊಳೊಪ್ಪುವಮಂದಾರದ ಮೋಹನ ಮಾಲಿಕೆಯೆಂಬ ಹೂವ 6 ಚಂದ್ರಗಾವಿಯ ಸೀರೆ ಚೆಲುವ ಮುತ್ತಿನಸರದಿಂದಲೆಸೆವ ದೇವಿಹೂವ ಕೊಡೆಮುಂದಲೆ ಮುತ್ತಿನ ಸರದ ಮೇಲೊಪ್ಪುವಬಂಧುರಪೂಗಪುನ್ನಾಗ ಪಾರಿಜಾತದ ಹೂವ 7 ದೇವಿ ನಿಮ್ಮನು ಪೂಜೆಗೈದು ಮೆಚ್ಚಿಸಬಲ್ಲನಾವನೀ ಧರೆಯೊಳುಹೂವ ಕೊಡೆಪಾವನಾತ್ಮಕಿಯ ಪರಾಕ ಮಾಡದೆ ವರ-ವೀವ ಸಮಯವಿದು ಹೂವ ಕೊಡೆ ಹೂವ 8 ಮುತ್ತೈದೆತನವನು ನಿತ್ಯ ಸೌಭಾಗ್ಯವಉತ್ತಮ ಧನಕನಕಾಂಬರವಪುತ್ರ ಸಂತಾನವ ಕೊಡುವೆನೆನುತ ಕರ-ವೆತ್ತಿ ಅಭಯವಿತ್ತು ಹೂವ ಕೊಡೆ ಹೂವ 9 ಎಂದೆಂದೂ ಈ ಮನೆಗೆ ಕುಂದದ ಭಾಗ್ಯವಚಂದವಾಗಿಹ ಛತ್ರಚಾಮರವಚಂದ್ರ ಸೂರ್ಯರ ಪೋಲ್ವ ನಂದನರನುದಯ-ದಿಂದಲಿ ಕೊಟ್ಟು ರಕ್ಷಿಪನೆಂದು ಸೂಡಿದ ಹೂವ10 ವರದಾನದಿಯ ತೀರವಾಸ ಶ್ರೀ ಕೆಳದಿಯಪುರವರಾಧೀಶ ರಾಮೇಶ್ವರನಪರಮ ಪಟ್ಟದ ರಾಣಿ ಪಾರ್ವತಿ ನಿಮ್ಮಯಸಿರಿಮುಡಿಯೊಳಗಿರ್ಪ ಹೂವ ಕೊಡೆ ಹೂವ 11
--------------
ಕೆಳದಿ ವೆಂಕಣ್ಣ ಕವಿ