ಒಟ್ಟು 90 ಕಡೆಗಳಲ್ಲಿ , 34 ದಾಸರು , 90 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ವೆಂಕಟಾಚಲ ನಿವಾಸ ನಿನ್ನ ಸೇವಾನುಸೇವಕರ ದಾಸಾ ಎನಿಸಿ ಜೀವಿಸುವ ನರಗೆ ಆಯಾಸಾ ಯಾಕೆ ಶ್ರೀವರನೆ ಕೊಡು ಎಮಗೆ ಲೇಸಾ 1 ಕಂಸಾರಿ ಪ್ರಭು ನಿನ್ನ ದಿವ್ಯ ನಾಮ ಒದಗಲು ಜಿಹ್ವೆಗೆನ್ನಾ ದೋಷ ಸೀಮೆಗಾಣದಿದ್ದರೆನ್ನ ಸ್ವಾಮಿ ನೀ ಮರೆಯಲಾಗದು ಸುಪ್ರಸನ್ನ 2 ನೀಚ ಯೋನಿಗಳಲ್ಲಿ ಬಂದೆ ಇನ್ನು ನಾಚಿಕಿಲ್ಲವೊ ಎನಗೆ ತಂದೆ ನೀನೆ ಮೋಚಕನು ಬಿನ್ನಪ ವಿದೆಂದೆ ಸವ್ಯ ಸಾಚಿಸಖ ಕೈಪಿಡಿಯೋ ತಂದೆ 3 ನಾನೊಬ್ಬನೇ ನಿನಗೆ ಭಾರವಾದೆ ನೇನೊ ಸಂತತ ನಿರ್ವಿಕಾರ ಎನ್ನ ಹೀನತ್ವ ನೋಡಲ್ಕಪಾರ ಚಕ್ರ ಪಾಣಿ ಮಾಡಿದಿರೆನ್ನ ದೂರ 4 ಕಂಡ ಕಂಡವರಿಗಾಲ್ಪರಿದು ಬೇಡಿ ಬೆಂಡಾದೆ ನಿನ್ನಂಘ್ರಿ ಮರೆದು ದಿಟ ತೊಂಡವತ್ಸಲನೆಂಬ ಬಿರುದು ಕಾಯೊ ಪುಂಡರೀಕಾಕ್ಷ ನೀನರಿದು 5 ಈ ಸಮಯದೊಳೆನ್ನ ತಪ್ಪ ನೋಡಿ ನೀ ಸಡಿಲ ಬೇಡುವರೇನಪ್ಪ ನಿನ್ನ ದಾಸರ್ಪೆಸರ್‍ಗೊಳಲು ಬಪ್ಪಾ ದೋಷ ನಾಶವಾಗೋದು ತಿಮ್ಮಪ್ಪ 6 ಕಾಮಾದಿಗಳ ಕಾಟದಿಂದ ನಿನ್ನ ನಾ ಮರೆದೆ ಸಚ್ಚಿದಾನಂದ ಎನ್ನ ಈ ಮಹಾ ದೋಷಗಳ ವೃಂದ ನೋಡದೆ ನೀ ಮನ್ನಿಸೆನ್ನ ಮುಕುಂದ 7 ನೀ ಪಿಡಿದವÀರ ಸಹಸ್ರಾರ ಸುಜನ ಪಾಪಾಟವಿಗೆ ಸುಕುಠಾರಾ ಜಗ ದ್ವ್ಯಾಪಕನೆ ಎನ್ನ ಸಂಸಾರ ಘೋರ ಕೊಪದಿಂದೆತ್ತಯ್ಯ ಧೀರ 8 ಸಿಂಧೂರ ರಾಜ ಪರಿಪಾಲ ಕೋಟಿ ಕಂದರ್ಪ ಲಾವಣ್ಯ ಶೀಲ ಧರ್ಮ ಮಂದಾರ ಭೂಜಾಲಪಾಲ ಯೋಗಿ ಸಂದೋಹ ಹೃತ್ಕುಮುದ ಶೀಲಾ 9 ಶಿವನ ವೈರಿಯ ಕೊಂದ ಶಕ್ತ ಪುಣ್ಯ ಶ್ರವಣ ಕೀರ್ತನ ನಿನ್ನ ಭಕ್ತಾ ಜನರ ಭವದೊಳಗೆ ದಣಿಸುವುದು ಯುಕ್ತವೇನೊ ಭುವನ ಪಾವನ ನಿತ್ಯಮುಕ್ತ 10 ಶ್ರೀಕರ ಶ್ರೀಮದಾನಂತ ನಿಖಿಳ ಲೋಕೈಕನಾಥ ನಿನ್ನಂಥ ಸಖರ ನಾ ಕಾಣೆನೆಲ್ಲಿಯೂ ಮಹಂತಾ ಎನ್ನ ನೀ ಕಾಯೋ ಕಂಡ್ಯ ಭೂಕಾಂತಾ 11 ಕರ್ಮ ಚಿತ್ರತ್ವಗ್ರಸನ ಕಾಯ ಕರಣ ಮನಹಂಕಾರ ಘ್ರಾಣಾ ಬುದ್ದಿ ಚರಣ ಪಾಯೂಪಸ್ಥ ನಯನಜಾತ ಉರುಪಾಪ ಕ್ಷಮಿಸು ಶ್ರೀ ರಮಣಾ 12 ಅನಿಮಿತ್ತ ಬಂಧು ನೀಯೆನ್ನ ಬಿಡುವು ದನುಚಿತವೋ ಲೋಕಪಾವನ್ನ ಚರಿತ ಮನ ವಚನ ಕಾಯದಲಿ ನಿನ್ನ ಪಾದ ವನಜ ನಂಬಿದೆ ಸುಪ್ರಸನ್ನಾ 13 ನೀನಲ್ಲದೆನಗೆ ಗತಿಯಿಲ್ಲ ಪವ ಮಾನವಂದಿತ ಕೇಳೋ ಸೊಲ್ಲ ಎನ್ನ ಜ್ಞಾನೇಚ್ಛೆ ಕ್ರಿಯಂಗಳೆಲ್ಲಾ ನಿನ್ನ ಧೀನವಲ್ಲವೆ ಲಕ್ಷ್ಮೀನಲ್ಲಾ 14 ಪ್ರಾಚೀನ ಕರ್ಮಾಂಧ ಕೂಪದೊಳಗೆ ಯೋಚಿಸುವ ನರರ ಸಂತಾಪ ನಿನಗೆ ಗೋಚರಿಸದೇನೋ ಬಹುರೂಪ ವೆಂಕ ಟಾಚಲನಿಲಯ ಪಾಹಿ ಶ್ರೀಪಾ 15 ಯಾಕೆ ದಯ ಬಾರದೆನ್ನಲ್ಲಿ ನರಕ ನಾಕ ನರಕ ಭೂ ಲೋಕಂಗಳಲ್ಲಿ ಚರಿಸಿ ನಾ ಕಷ್ಟಪಟ್ಟ ಬಗ್ಗೆ ನೀ ಬಲ್ಲಿ ವೀತ ಶೋಕ ಕೊಡು ಭಕುತಿ ನಿನ್ನಲ್ಲಿ 16 ಬನ್ನ ಬಡಿಸುವರೇನೋ ಬಿಡದೆ ನಾನು ಮುನ್ನ ಮಾಡಿದ ಪಾಪ ಕೆಡದೆ ನೀ ಪ್ರ ಪನ್ನ ವತ್ಸಲನೆಂದು ನುಡಿದೆ 17 ತಾಪತ್ರಯಗಳಿಂದ ನೊಂದೆ ಮಹಾ ಪಾಪಿಷ್ಠರಲ್ಲನ್ನ ತಿಂದೆ ಇನ್ನು ಆಪರೇತೇಶ್ವರನ ಮುಂದೆ ಪೋಗಿ ನಾ ಪೇಕೊಳಲೇನು ತಂದೆ 18 ದೇಹ ಸಂಬಂಧಿಗಳ ಸಹಿತವಾಗಿ ನಾ ಹೊಂದಿದೆನು ಲೋಕಮೋಹಿತ ಎನ್ನ ಮೋಹಿಪ್ರದು ನಿನ್ನಗೇನು ವಿಹಿತ ಹೃದಯ ಬಾಹಿರಂತರದಿ ಸನ್ನಿಹಿತ 19 ಪೋಗುತಿದೆ ದಿವಸ ಕಮಲಾಕ್ಷ ಪರಮ ಅಪರೋಕ್ಷ ಎನಗೆ ಹೇಗಾಗುವುದೊ ಸುರಾಧ್ಯಕ್ಷ ದುರಿತ ನೀನು ಕಾಮಿತ ಕಲ್ಪವೃಕ್ಷ 20 ಗತಿಯಾರು ನಿನ್ನುಳಿದು ದೇವ ರಮಾ ಸಂಜೀವ ಎನ್ನ ಸತಿಸುತರ ಅನುದಿನದಿ ಕಾವ ಭಾರ ಸತತ ನಿನ್ನದು ಮಹಾನುಭಾವ 21 ದೊಡ್ಡವರ ಕಾಯ್ವುದೇನರಿದು ಪರಮ ದಡ್ಡರನು ಕಾಯ್ವದೇ ಬಿರುದು ಎನ್ನ ಗುಡ್ಡದಂತಹ ಪಾಪ ತರಿದು ಕಾಯೋ ವಡ್ಡಿ ನಾಯಕ ಸಾರೆಗರದೊ 22 ಜ್ಞಾನಿಗಳು ನೀಚರಲಿ ಕರುಣಾ ಮಾಡ ರೇನೋ ಬಿಡುವರೇ ರಥಚರಣ ಪಾಣಿ ಭಾನು ಚಂಡರವಿಕಿರಣ ಬಿಡದೆ ತಾನಿಪ್ಪನೆ ರಮಾರಮಣ23 ಆಡಲ್ಯಾತಕೆ ಬಹಳ ಮಾತಾ ಪರರ ಬೇಡಲಾರೆನೋ ಜಗತ್ರಾತಾ ಹೀಗೆ ಮಾಡುವರೇ ಕೆಳೆನ್ನ ಮಾತ ನೀನೆ ನೀಡೆನಗೆ ಪುರುಷಾರ್ಥ ದಾತಾ 24 ಬೇಡಲೇತಕೆ ಬಹಳ ಮಾತಾ ಎನ್ನ ಕೇಡು ನಿನ್ನದಲ್ಲೇ ಬಲಿದೌತ ಪಾದ ಬೇಡಿಕೊಂಬುವೆ ನಾನನಾಥ ದೂರ ನೋಡಲಾಗದು ಪಾರ್ಥಸೂತ 25 ನಿತ್ಯ ಬಿಡದೆ ಶಾರದೇಶನ ನುತಿಪ ಭಕ್ತ ಜನರ ಪಾರ ಸಂತೈಸುವುದು ಮಿಥ್ಯವಲ್ಲ ಶ್ರೀರಮಣ ಸಾಕ್ಷಿದಕೆ ಸತ್ಯಾ 26 ಪರಿಯಂತ ಶಯನ ಪ್ರಣತಾರ್ತಿ ಹರನೆಂಬೊ ಅಂಕಾ ಕೇಳಿ ಮಣಿದ ನಿನ್ನಂಘ್ರಿಗೆ ಶಶಾಂಕಾ ಭಾಸ ದಣಿಸಲಾಗದು ನಿಷ್ಕಳಂಕಾ27 ಕಾರ್ತವೀರ್ಯಾಜುನನ ಕೊಂದ ಭವ್ಯ ಕೀರ್ತಿ ನಿನ್ನಾನಂದ ವೃಂದ ಸತತ ಕೀರ್ತಿಸುವ ನರರ ಬಹುಕುಂದ ನೋಡ ದಾರ್ತನ್ನ ಪೊರೆಯೊ ಗೋವಿಂದ 28 ದಯದಿಂದ ನೋಡೆನ್ನ ಹರಿಯೆ ಜಗ ನ್ಮಯನೆ ಜ್ಞಾನಾನಂದ ವೃಂದ ಸಿರಿಯೆ ಮನಾ ಭಯದೂರರಿನ್ನೊಬ್ಬರರಿಯೇ 29 ನರಸಿಂಹ ನಿನ್ನುಳಿದು ಜಗವ ಕಾಯ್ವ ಪರಮೋಷ್ಠಿ ರಾಯನು ನಗುವ ನಿತ್ಯ ನಿರಯಾಂಧ ರೂಪದೊಳು ಹುಗಿವಾ 30 ದಾಸ ದಾಸರ ದಾಸನೆಂದು ಬಿಡದೆ ನೀ ಸಲಹೋ ಎನ್ನನೆಂದೆಂದೊ ನಿನ್ನ ನಾ ಸೇವಿಸುವೆ ಕೃಪಾಸಿಂಧು ಎಮ್ಮನು ದಾಸಿಸದÀನಿಮಿತ್ತ ಬಂಧೂ 31 ಎಂದೆಂದು ನೀ ಬಡವನಲ್ಲ ನಿನ್ನ ಮಂದಿರದೊಳಗೆ ಬಲ್ಯಲ್ಲಾ ಚಿದಾ ನಂದ ನೀ ಭಕ್ತ ವತ್ಸಲ್ಲಾ 32 ಕಾಮಿತಪ್ರದನೆಂಬ ಬಿರಿದು ಕೇಳಿ ನಾ ಮುದದಿ ಬಂದೆನೋ ಅರಿದು ಎನ್ನ ತಾಮಸ ಮತಿಗಳೆಲ್ಲ ತರಿದು ಮಮ ಸ್ವಾಮಿ ನೋಡೆನ್ನ ಕಣ್ದೆರದು33 ಹಿತವರೊಳು ನಿನಗಧಿಕರಾದ ತ್ರಿದಶ ತತಿಗಳೊಳು ಕಾಣೆನೋ ಪ್ರಮೋದ ನೀನೆ ಗತಿಯೆಂದು ನಂಬಿದೆ ವಿವಾದವ್ಯಾಕೊ ಪತಿತಪಾವನ ತೀರ್ಥಪಾದ 34 ಮಡದಿ ಮಕ್ಕಳು ತಂದೆ ತಾಯಿ ಎನ್ನ ಒಡಹುಟ್ಟಿದವರ ನೀ ಕಾಯಿ ಲೋಕ ದೊಡೆಯ ನೀನಲ್ಲದಿನ್ನಾರೈ ಎನ್ನ ನುಡಿ ಲಾಲಿಸೋ ಶೇಷಶಾಯಿ 35 ಅನುಬಂಧ ಜನರಿಂದ ಬಪ್ಪ ಕ್ಲೇಶ ವನುಭವಿಸಲಾರೆ ಎನ್ನಪ್ಪ ಉದಾ ಸೀನ ಮಾಡಿ ದಯಮಾಡದಿಪ್ಪರೇನೋ ಘನ ಮಹಿಮ ಫಣಿರಾಜತಲ್ಪ 36 ಹದಿನಾಲ್ಕು ಲೋಕಂಗಳನಾಳ್ವ ಬ್ರಹ್ಮ ಮೊದಲಾದವರು ನಿನ್ನ ಚಲ್ವನಖದ ವಿಧಿಸಲಾಪೆನೆ ನಿನ್ನ ಸಲ್ವಾ 37 ಧನ ಧಾನ್ಯ ಪಶು ಪತ್ನಿ ಗೇಹ ಜನನೀ ಜಾಮಾತ ಸಖ ನೇಹ ಅನುಜ ತನುಜಾಪ್ತವರ್ಗದಿಂದಾಹ ಸೌಖ್ಯ ನಿನಗರ್ಪಿಸಿದೆ ಎನ್ನ ದೇಹಾ 38 ನೀನಿತ್ತ ಸಂಸಾರದೊಳಗೆ ಸಿಲುಕಿ ನಾನೊಂದೆ ಕರೆ ನಿನ್ನ ಬಳಿಗೆ ಚರಣ ಧ್ಯಾನ ದೊರಕಲು ಭವದಿ ಮುಳುಗೆ ನಿನ್ನ ಕಾಣದಿರಲಾರೆನರ ಘಳಿಗೆ 39 ಸಲುಗೆ ಬಿನ್ನಪವ ನೀ ಕೇಳೋ ಎನ್ನ ಬಲು ದುರುಳತನವ ನೀ ತಾಳೋ ನೀನೆ ನೆಲೆಯಲ್ಲದೆನಗಾರು ಪೇಳೋ ಎನ್ನ ಕುಲದೈವ ಬಹುಕಾಲ ಬಾಳೋ40 ಸಾಂದೀಪ ನಂದನನ ತಂದ ನಂದ ಭವ ವೃಂದ ಕಳೆದು ಎಂದೆಂದು ಕುಂದದಾನಂದವೀಯೋ ಇಂದಿರಾರಮಣ ಗೋವಿಂದ41 ತೈಜಸ ಪ್ರಾಜ್ಞ ತುರಿಯಾ ಎನ್ನ ದುಸ್ವಭಾವವ ನೋಡಿ ಪೊರೆಯದಿಹರೆ ನಿಸ್ಪøಹ ನಾನಿನ್ನಂಘ್ರಿ ಮೊರೆಯ ಪೊಕ್ಕೆ ಅಸ್ವತಂತ್ರನ ಕಾಯೋ ಪಿರಿಯಾ42 ಇಹಪರದಿ ಸೌಖ್ಯ ಪ್ರದಾತ ನೀನೆ ಅಹುದೋ ಲೋಕೈಕ ವಿಖ್ಯಾತ ಮಹಾ ಮಹಿಮ ಗುಣಕರ್ಮ ಸಂಜಾತ ದೋಷ ದಹಿಸು ಸಂಸಾರಾಬ್ದಿ ಪೋತಾ 43 ಲೋಕಬಾಂಧವನೆಂಬ ಖ್ಯಾತಿಯನ್ನು ನಾ ಕೇಳಿದೆನು ಖಳಾರಾತಿ ಮನೋ ಶೋಕ ಮೋಹಾಜ್ಞಾನ ಭೀತಿ ಬಿಡಿಸು ಶ್ರೀ ಕರಾರ್ಚಿತ ಸ್ವಯಂ ಜ್ಯೋತಿ44 ಒಂದು ಗೇಣೊಡಲನ್ನಕಾಗಿ ಅಲ್ಪ ಮಂದಭಾಗ್ಯರ ಮನೆಗೆ ಪೋಗಿ ದೈನ್ಯ ದಿಂದ ಸತ್ಕರ್ಮಗಳ ನೀಗಿ ಕಂದಿ ಕುಂದಿದೆನೋ ಸಲಹೋ ಲೇಸಾಗಿ45 ಪಾತಕರೊಳಗಧಿಕ ನಾನಯ್ಯ ಜಗ ತ್ಪಾತಕವ ಕಳೆವ ಮಹಾರಾಯ ನಿನ್ನ ದೂತನಲ್ಲವೆ ಜೀಯ ಜಗ ನ್ನಾಥ ವಿಠ್ಠಲ ಪಿಡಿಯೋ ಕೈಯಾ 46
--------------
ಜಗನ್ನಾಥದಾಸರು
ಶ್ರೀಕಾಂತನನ್ನೊಲಿಸುವಾ ಬಗೆಯಾನೊರೆವೆ ಮಾನವ ಪ. ಶ್ರೀಕರಗುಣಯುತ ಪಾಕಶಾಸನವಿನುತ ಲೋಕೈಕ ವೀರನನ್ನೊಲಿಸುವಾ ತೆರನ ಪೇಳ್ವೆನಾಲಿಸು ಅ.ಪ. ಶಕ್ತಿ ಸಾಹಸಗಳಿಗೆ ಸೋಲುವನಲ್ಲ ರಕ್ಕಸಾಂತಕಮಲ್ಲ ಯುಕ್ತಿಮಾರ್ಗಕೆ ಮನವ ಸಿಲುಕಿಪನಲ್ಲ ಭಕ್ತವತ್ಸಲ ಸಿರಿನಲ್ಲ ವಿತ್ತ ಮೂಲಕದಿಂದ ಚಿತ್ತ ಚಲಿಸುವುದಲ್ಲ ಮುಕ್ತಿದಾಯಕನ ಮೆಚ್ಚಿಸಲ್ ವಿರಕ್ತಿಯಿಂ ಫಲವಿಲ್ಲ [ಮತ್ತ] ಖಿಲಾಂಡಕೋಟಿ ಬ್ರಹ್ಮಾಂಡನಾಯಕನ ಮೆಚ್ಚಿಸಲ್ ಭಕ್ತಿಯೊಂದೇ ಉತ್ತಮೋಪಾಯ ಕೇಳೆಲೈ1 ದೃಢದಿ ಶೈಶವದೊಳೇ ಅಡವಿಯನಾರಯ್ಯುತೆ ಪೊಡವೀಶನಡಿಗಿತ್ತ ತೊಡವಾವುದದ ಪೇಳ್ ಕಡು ಭಕ್ತನಾ ವಿದುರ ಪಡೆದನಸುರಾರಿಯಾಲಿಂಗನದ ಸುಖಮಂ ಮಡದಿಮಣಿ ಪಾಂಚಾಲಿ ಪಡೆದಳಕ್ಷಯಪ್ರದಾನಮಂ ತಡೆಯೇನು ಪೇಳಾ ಪರಮಾತ್ಮನೊಲ್ಮೆಗಿನ್ನು ದೃಢಭಕ್ತಿಗಿಂ ಮಿಗಿಲು ತೊಡವಾವುದಿರ್ಪುದೈ 2 ದಾನವವಂಶದಲಿ ಜನಿಸಿದನಾ [ಸು]ಜ್ಞಾನಿ ಪ್ರಹ್ಲಾದನು ಸಾನುರಾಗದಿ ಹರಿಯ ಭಕ್ತಿಯಿಂ ಧ್ಯಾನಿಸೆ ಕಂಬದಿಂ ನುನಿಸಿಯಾಕ್ಷಣದಲ್ಲಿ ಮನುಜಕೇಸರಿಯಾಗಿ ಘನದಾಕೋಪವನು ತಾಳಿ ದನುಜನ ಉರವ ಸೀಳಿ ಮನ್ನಿಸುತೆ ಭಕ್ತನಂ ನನ್ನಿಯಿಂ ಮೈದಡಹಿ ಉನ್ನತೋನ್ನತ ಪದವನಿತ್ತನಾಖಲಕುಠಾರಿಶೌರಿ ಮುನ್ನ ಭಕ್ತಿಯಿದುವೇ ಮುಖ್ಯಸಾಧನ ಕೇಳೈ 3
--------------
ನಂಜನಗೂಡು ತಿರುಮಲಾಂಬಾ
ಶ್ರೀಧರ ಕೇಶವ ಮುಕುಂದ ಜಯತು ಪ ಮಾಧವ ಮುರಹರ ಗೋವಿಂದ ಜಯತು ಭೂಧರ ನರಹರಿ ಮುಕುಂದ ಜಯತು ಯಾದವ ಗಿರಿಧರ ಗೋವಿಂದ ಜಯತು 1 ದಶರಥ ಸುತವರ ಮುಕುಂದ ಜಯತು ಶಶಿಧರ ಸುತವರ ಮುಕುಂದ ಜಯತು ನಿಶಚರ ಬಲಿಹರ ಗೋವಿಂದ ಜಯತು2 ನೃಪಾಲಕುಮಾರ ಮುಕುಂದ ಜಯತು ನೃಪಾಲ ಕುಠಾರ ಗೋವಿಂದ ಜಯತು ಅಪಾರ ಸಂಸಾರ ಗೋವಿಂದ ಜಯತು 3 ಸುರಾರಿ ಮದಕರಿ ಮೃಗೇಂದ್ರ ಜಯತು ಖರಾರಿಯನುಪಮ ನರೇಂದ್ರ ಜಯತು ಮುರಾರಿ ಹರಿ ಮಾಂಗಿರೀಂದ್ರ ಜಯತು 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀರಾಮ ಜಯರಾಮ ಶ್ರೀರಾಮರಾಮ ಕಾರುಣ್ಯ ನಿಧಿರಾಮ ಕೌಸಲ್ಯ ರಾಮ ಪ ಜಾನಕೀ ಪತಿರಾಮ ಜಯರಘುರಾಮ ಜಾನ್ಹವೀ ಪಿತರಾಮ ಸರ್ವೇಶರಾಮ 1 ಭಯ ನಿವಾರಣರಾಮ ಪಾವನರಾಮ ನಯಗುಣ ಶ್ರೀರಾಮ ನರಹರೇ ರಾಮ 2 ತ್ರಿಜಗ ಮೋಹನ ರಾಮ ದಿವಿಜೇಶರಾಮ ಅಜಭವನುತರಾಮ ಆನಂದರಾಮ 3 ಭುವನ ಪಾಲಕರಾಮ ಭೂಪತೆ ರಾಮ ಸವನ ರಕ್ಷಕರಾಮ ಶತ್ರುಘ್ನ ರಾಮ 4 ಭವ ವಿಮೋಚನ ರಾಮ ಪದ್ಮಾಕ್ಷರಾಮ 5 ವೈದೇಹಿ ಪತಿರಾಮ ವೈಕುಂಠರಾಮ ವೇದಗೋಚರ ರಾಮ ವೆಂಕಟೇಶರಾಮ 6 ಮಂಗಳಾತ್ಮಕರಾಮ ಮಾಧವರಾಮ ಶೃಂಗಾರ ಶೇಖರರಾಮ ಶ್ರೀರಾಮ ರಾಮ7 ದಶರಥಸುತರಾಮ ದನುಜಾರಿರಾಮ ಕುಶಲವ ಪಿತರಾಮ ಕೋದಂಡರಾಮ 8 ಕರುಣಸಾಗರ ರಾಮ ಕಾಕುಸ್ಥರಾಮ ಶರಧಿಶಯನ ರಾಮ ಶಾಶ್ವತರಾಮ9 ಶ್ರೀಕರಾವ್ಹಯರಾಮ ಶ್ರೀಧರರಾಮ ಪಾಕಾರಿಸುತ ರಾಮ ಪರಮೇಶರಾವÀು 10 ಮಧುರ ಭಾಷಣರಾಮ ಮಧುವೈರಿರಾಮ ಮದನಾರಿನುತರಾಮ ಮೌನೀಶರಾಮ 11 ಸತಿ ಶಾಪ ಖಂಡನ ರಾಮ ಪಾತಕ ಹರ ರಾಮ ಪ್ರಖ್ಯಾತ ರಾಮ12 ರಾಮ ಗರ್ವವಿರಾಮ ರಾಮಾಭಿರಾಮ ಸೌಮಿತ್ರಿವರರಾಮ ಸೌಂದರ್ಯರಾಮ 13 ಸುಗ್ರೀವಸಖರಾಮ ಶುಭಕರ ರಾಮ ಅಗ್ರಜಾಧಿಪ ರಾಮ ಅಮಿತಬಲರಾಮ 14 ಅನ್ಯಮಾನಸರಾಮ ರಘುರಾಮ ಇನಕುಲೇಶ್ವರ ರಾಮ ವಿಭುದೇಂದ್ರರಾಮ 15 ಚಾರು ಚರಿತ ರಾಮ ಜಯಜಯ ರಾಮ ಮಾರುತಾತ್ಮಜ ವಂದ್ಯ ಮಾನಿತರಾಮ 16 ವಾಲಿ ಮರ್ದನರಾಮ ವರದಶ್ರೀರಾಮ ಫಾಲಾಕ್ಷ ಸಖರಾಮ ಭದ್ರಶ್ರೀರಾಮ 17 ಸೇತುಬಂಧನ ರಾಮ ಚಿನ್ಮಯರಾಮ ಸೀತಾಪತೆ ರಾಮ ಜಿತದೈತ್ಯ ರಾಮ 18 ನತವಿಭೀಷಣರಾಮ ನಗಧರ ರಾಮ ಚತುರಾಶ್ಯಪಿತ ರಾಮ ಚಂದ್ರಶ್ರೀರಾಮ 19 ಮಾರೀಚ ಮದಭಂಗ ಮಹಾದೇವರಾಮ ವೀರಾಗ್ರಣೀರಾಮ ವಿಶ್ವೇಶರಾಮ 20 ರಾಮರಾಮ ರಾಮರಾಮ ಶ್ರೀರಾಮ ಕಾಮಿತಾರ್ಥಪ್ರದ ಕಲ್ಯಾಣರಾಮ 21 ಅಗಣಿತ ಮಹಿಮ ವಿಲಾಸ ಶ್ರೀರಾಮ ನಿತ್ಯ ಶ್ರೀರಾಮ 22 ಕಂಬುಕಂಧರ ರಾಮ ಘನತರರಾಮ ಕುಂಭಕರ್ಣಾಂತರ ಗೋವಿಂದರಾಮ 23 ಸುಜನ ಹೃತ್ಕಮಲ ಭಾಸುರ ಸೂರ್ಯರಾಮ ನೃಪತಿ ಶ್ರೀರಾಮ 24 ಲೀಲಾ ಮನುಜ ವೇಷ ರಿಪು ಜೈತ್ರರಾಮ ಪ್ರಕಟ ಪರಾಕ್ರಮ ರಾಮರಾಮ ಶ್ರೀರಾಮ 25 ಅಕಲಂಕ ನಿರುಪಮಾನ ಸಹಾಯ ರಾಮ ಭಕ್ತವತ್ಸಲ ದೀನ ಬಂಧು ಶ್ರೀರಾಮ 26 ಮುಕ್ತಿದಾಯಕ ರಾಮ ಪೂಜಿತರಾಮ ದಶಕಂಠ ಮರ್ದನ ತಾರಕನಾಮ 27 ಶಶಿಬಿಂಬ ವದನ ದಾಶರಥಿ ಶ್ರೀರಾಮ ನಾರಾಯಣಾಚ್ಯುತಾನಂತ ಶ್ರೀರಾಮ 28 ವಾರಿಜೋದರ ಶ್ರೀನಿವಾಸ ಶ್ರೀರಾಮ ಹರಧನುರ್ಭಂಗ ದಯಾನಿಧೆ ರಾಮ 29 ಪುರುಷೋತ್ತಮ ಪುರಾಣ ಪುರುಷ ಶ್ರೀರಾಮ ಸರ್ವಲೋಕ ಶರಣ್ಯ ಸೌಭಾಗ್ಯರಾಮ 30 ಶರ್ವರೀಚರ ಹರಕ್ಷ್ಮಾಪತೇರಾಮ ಸರಶಿಜನಾಭ ದಾಶಾರ್ಹ ಶ್ರೀರಾಮ 31 ಶರಣಾಗತ ತ್ರಾಣ ಶರಣು ಶ್ರೀರಾಮ ಮೂರ್ತಿ ಶ್ರೀರಾಮ 32 ಬುಧ ಜನಾಧಾರ ಸರ್ವೋತ್ತಮರಾಮ ವರ ಹೆನ್ನೆಪುರನಿವಾಸ ಶ್ರೀರಾಮ 33 ನರಸಿಂಹ ಭಕ್ತ ಚಿಂತಾಮಣಿ ರಾಮ ಇಷ್ಟದಾಯಕ ಹೆನ್ನೆ ವಿಠಲರಾಮ 34 ಕಷ್ಟ ರಕ್ಷಿಸುಯನ್ನ ಶ್ರೀರಾಮರಾಮ ಕುಜನವನ ಕುಠಾರ ಕೋವಿದ ರಾಮ 35
--------------
ಹೆನ್ನೆರಂಗದಾಸರು
ಶ್ರೀಹರಿದಾಸವೃಂದ ಸ್ತೋತ್ರ ದಾಸವರ್ಯರಿಗೊಂದಿಪೆ ದಾಸವರ್ಯರಿಗೆರಗಿ ಜನ್ಮಾಂತರದ ದೋಷವ ಪರಿಹರಿಸಿಕೊಂಬೆ ಪ ನಾರದ ಮುನಿಹರಿಯಾಜ್ಞ್ಞೆಯಿಂದಲೆ ಪುರಂ - ದರ ದಾಸರಾಗಿಜನಿಸಿದ ದಾ - ನಾರಾಯಣನ ದಿವ್ಯನಾಮದ ಮಹಿಮೆಯ ಮೂರು ಲೋಕಗಳಲ್ಲಿ ಹರಹಿದ 1 ಭಜಿಸುವ ಭಕುತರ ಅಗಣಿತದೋಷವ ನಿಜವಾಗಿ ಪರಿಹರಿಸುವಂಥ ದಾಸ - ಸುಜನ ಪೋಷಕ ದುಷ್ಟಕುಜನ ಕುಠಾರ ಶ್ರಿ ವಿಜಯರಾಯರ ಪಾದಕ್ಕೆರಗುವೆ 2 ಕೋಪರಹಿತಭಕ್ತ ಪಾಪವಿದೂರಕ ಭೃಂಗ ದಾ - ತಾಪ ಸೋತ್ತುಮಭವ ತಾಪನಿವಾರಕ ಗೋಪಾಲದಾಸರಿಗೆರಗುವೆ 3 ಧರಿಯಸುರರ ಉದ್ಧರಿಸಲೋಸುಗ ದಿವ್ಯ ಹರಿಕಥಾಮೃತ ಸಾರಗ್ರಂಥವದಾ - ವಿರಚಿಸುತಙÁ್ಞನಪರಿಹರಿಸಿದಂಥ ಹರಿಭಕ್ತಾಗ್ರಣಿ ಶ್ರೀ ಜಗನ್ನಾಥ 4 ಧರೆಯೊಳು ಹರಿಲೀಲಾಮೃತ ವೃಷ್ಟಿಗರೆಯಲು ಪರಿಪರಿ ಕಥೆಗಳ ರಚಿಸಿದ ದಾ - ವರದೇಂದ್ರ ಮುನಿಗಳ ಪಾದಸಾರಸಭೃಂಗ ಪರನುಸುಚರಿತ ಶ್ರೀ ಪ್ರಾಣೇಶ 5 ಹರಿಭಕ್ತಿ ಮಾರ್ಗವ ಪರಿಪರಿಶಿಷ್ಯರಿ ಗರುಹಿ ಕರುಣದಿಂದುದ್ಧರಿಸಿದ ದಾ - ಪರಮತತಿಮರಕ್ಕೆ ತರಣಿಸ್ವರೂಪ ಶ್ರೀ ಗುರುಪ್ರಾಣೇಶಾರ್ಯರಿಗೆರಗುವೆ6 ಗುರುಪಾದ ಸೇವೆಯ ಪರಿಪರಿಗೈದು ಈ ಧರಿಯೊಳು ಧನ್ಯರೆಂದೆನಿಸಿದ ದಾ - ಹರಿದಾಸ ಕುಲರತ್ನ ಸರುವ ಸದ್ಗುಣ ಪೂರ್ಣ ವರಶ್ರೀಪ್ರಾಣೇಶದಾಸಾರ್ಯ 7 ಗುರುಪ್ರಾಣೇಶರ ಕರಸರಸಿಜ ಸಂಜಾತ ಪರಮಭಾಗವತರೆನಿಸಿದ ದಾ ಮರುತಮತದ ತತ್ವವರಿದಂಥ ಸುಖದ ಸುಂ - ಮೋದ ವಿಠಲರೆಂಬ 8 ಭೂಮಿಯೋಳ್ ವರದೇಶ ವಿಠ್ಠಲನ ನಿಜಭಕ್ತ ಸ್ತೋಮಕ್ಕೆ ಶಿರಬಾಗಿ ನಮಿಸುವೆ ದಾ ಆ ಮಹಾತ್ಮರಪಾದರಜಾದೊಳೆನ್ನನು ದೇವ ನೇಮದಿಂದಲಿ ಹೊರಳಾಡಿಸೊ 9
--------------
ವರದೇಶವಿಠಲ
ಸಂಕಟ ಪರಿಹರಿಸಿ ಸಂಪದವಿಯ ಕೊಡುವ ಪ ಬಲನ ಭೂಸುರಹತ ಪೋಗಾಡಿದ ಮಂತ್ರ | ಬಲಿಯ ಕನಕ ಸ್ತೇಯ ಕಳದ ಮಂತ್ರಾ || ಬಲವಂತ ವೃಷಭನ್ನ ಸಂಹರಿಸಿದ ಮಂತ್ರಾ | ಕಲಿಯುಗದೊಳಗಿದೆ ಸಿದ್ಧ ಮಂತ್ರಾ || 1 ವೃದ್ಧ ಬ್ರಾಹ್ಮಣಗೆ ಪ್ರಾಯವನು ಕೊಟ್ಟ ಮಂತ್ರಾ | ಶುದ್ಧನ್ನ ಪರಿಶುದ್ದ ಮಾಳ್ಪ ಮಂತ್ರಾ | ಉದ್ಧರಿಸಿ ಕಾವ್ಯನ್ಯೊಂಚಿ ? ಮಾಡಿದ ಮಂತ್ರಾ | ಶ್ರದ್ಧೆಯನು ಪಾಲಿಸುವ ಸುಲಭ ಮಂತ್ರಾ2 ಗುರು ತಲ್ಪಕನ ದೋಷ ನಾಶನ ಮಾಡಿದ ಮಂತ್ರಾ | ಹರನ ಸುತ ಬರಲವನ ಪೊರೆದ ಮಂತ್ರಾ | ಸ್ಮರಿಸಲಾಕ್ಷಣ ಒಮ್ಮೆ ಮುಂದೆ ನಿಲುವ ಮಂತ್ರಾ | ಅರಸರಿಗೆ ವಲಿದಿಪ್ಪ ಆದಿ ಮಂತ್ರಾ 3 ಅಜ ಭವಾದಿಗಳಿಗೆ ಪಟ್ಟಗಟ್ಟಿದ ಮಂತ್ರಾ | ಗಜ ಮೊದಲಾದವರ ಕಾಯ್ದ ಮಂತ್ರಾ | ರಜ ದೂರವಾಗಿದ್ದ ರಮ್ಯವಾದ ಮಂತ್ರಾ | ಕುಜನ ಕುಲವನಕೆ ಕುಠಾರ ಮಂತ್ರಾ 4 ಪ್ರಣವ ಪೂರ್ವಕದಿಂದ ಜಪಿಸಲು ವೊಲಿವ ಮಂತ್ರಾ | ಅಣು ಮಹದಲೀ ಪರಿಪೂರ್ಣ ಮಂತ್ರಾ | ಸಿರಿ ವಿಜಯವಿಠ್ಠಲನ ಮಂತ್ರಾ | ಕ್ಷಣ ಕ್ಷಣಕೆ ಬಲ್ಲವರಿಗೆ ಪ್ರಾಣ ಮಂತ್ರಾ 5
--------------
ವಿಜಯದಾಸ
ಸೂತ್ರನಾಮಕಪ್ರಾಣ ಜಗತ್ರಾಣ ಸೂತ್ರನಾಮಕ ಜಗಸೂತ್ರನೆ ಹರಿಕೃಪಾ ಪಾತ್ರ ನೀನಹುದೋ ಸರ್ವತ್ರದಿ ನೀನೆ ಪ ದೇವಾ ನೀನಿಲ್ಲದಿರೆ ಜಗವೆಲ್ಲವು ತಾ ನಿರ್ಜೀವ ಜೀವ ಕೋಟಿಗಳೆಲ್ಲ ಕಾವ ಪಾವನಾತ್ಮಕ ಸಂಜೀವ ಲವಕಾಲ ಬಿಡದೆ ಎಮ್ಮೊಳಿರುವ ಭೋ ದೇವ ಅ.ಪ ಸಾಟಿ ಯಾರೆಲೆ ತ್ರಿಕೊಟಿರೂಪನೆ ನಿಶಾಚರ ಕುಲಕೆ ಕುಠಾರಿ ಅಜಾಂಡ ಖರ್ಪರದಿ ಸೃಷ್ಟಿಯೊಳು ಸಂಚಾರಿ ಪಟುತರ ತ್ರಿವಿಕ್ರಮ ಚಟುಲ ಮೂರುತಿ ಮನತಟದಲಿ ಭಜಿಸಿದ ಶ್ರೇಷ್ಠನೆ ನಿಜಪರಮೇಷ್ಠಿಪದವನು ತೊಟ್ಟು ಪಾಲಿಪೆ ನಿಂದು ಬ್ರಹ್ಮಾಂಡ ಪೊತ್ತು ಅಂದು ಜಗಭಾರ ವಹಿಸಿದೆಯೊ ದಯಾಸಿಂಧು ಎಂದೆಂದೂ 1 ಸರುವ ತತುವೇಶರ ವ್ಯಾಪಾರ ಧೀರ ನೀ ನಡೆಸೆ ಜಗಸಂಸಾರ ಕಾರಣನು ಜಗಕಾರ್ಯ ಕಾ ವೈರಾಗ್ಯ ಐಶ್ವರ್ಯ ನಿನ್ನಯ ಗುಣ ಸ್ವರೂಪತನುಕರಣೇಂದ್ರಿಯ ಕರ್ಮಫಲವನು ಜೀ ವರುಗಳಿಗುಣಿಪ ಅನಿಲರೂಪನೆ ತನುಗೋಳಕದಲಿ ನೀ ನೆಲ ಅಂದು ಸೃಷ್ಟಿಯೊಳು ಬಂದೂ ಪೊಂದಿ ಸರ್ವರೊಳು ನಿಂದು ಹಿಂದೂ ಇಂದೂ ಇನ್ನು ಮುಂದೂ ಕರುಣಾಸಿಂಧು ಎಂದೆಂದೂ 2 ಪ್ರಾಣಪ್ರಾತರ ಸಾಯಂಬೀತೆರ ಅಭಿಧಾನ ಗುಣಸ್ತವನ ಮಾಳ್ಪರೆಲ್ಲ ಸುರ ಗಣಾ ಮಣಿದು ಬೇಡುವರೆಲ್ಲ ಅನುದಿನಾ ಎಣೆಯುಂಟೆ ನೀನಮಿತ ಗುಣಗಣಾ ಶ್ರೀ ಮುಖ್ಯ ಪ್ರಾಣಾ ಜಗಬಂಧಕೆ ಮಹಾರಜ್ಜು ರೂಪ ನೀ ಚಿತ್ಸುಖಮಯ ವಪುಷ ಖಗಪ ಶೇಷ ಶಿವ ಶಕ್ರಾದೀ ಜಗ ಬದ್ಧವು ಕೇಶ ನಖಾಗ್ರ ಪರ್ಯಂತ ಚಿತ್ಸುಖ ಗಭೇದ ನೀ ಛಂದ ಶಾಸ್ತ್ರದಿ ತನು ತ್ವಗ್ರೋಮ ಉಷ್ಣಿಕ್ ಗಾಯತ್ರಿ ನರ ಮಾಂಸನುಷ್ಟುಪ್ ಅನುಷ್ಟಪು ಅಸ್ತಿಮಜ್ಜಾ ಜಗತೀ ಪಂಕ್ತಿ ಬೃಹತಿನಾಮಕ ಘನ್ನಾ ಉರಗಾದ್ರಿವಾಸ ವಿಠಲನ್ನ 3
--------------
ಉರಗಾದ್ರಿವಾಸವಿಠಲದಾಸರು
ಹನುಮಂತಾ | ಮದ್ಗುರುವೆ | ಹನುಮಂತ ಪ ಹನುಮಂತ - ಗುಣಗಣ ನಿಲಯ | ಮುನಿಸನಕಾದಿ ಜನ ಮನಾಲಯ | ಆಹಮನ ಆದೀಂದ್ರಿಯ ನಿಯ | ಮನವನೆ ಮಾಡುತ್ತಅನುನಯದಿಂದಲಿ | ಪಾಲಿಪೆ ಸರ್ವರ ಅ.ಪ. ಅಂಜನೆ ಕುವರನೆ ಹನುಮ | ಚಿಣ್ಣಕಂಜ ಸಖಗೆ ಹಾರ್ದನಮ್ಮಾ | ಇಂದ್ರಸಂಜಯನನ ಹೊಡೆದನಮ್ಮಾ | ಶಿಶುಅಂಜಲಿಲ್ಲವು ನೀ ನೋಡಮ್ಮಾ | ಆಹಸಂಜಯಪಿತ ತನ್ನ | ಶ್ವಾಸ ನಿರೋಧಿಸೆಅಂಜಲು ಮೂರ್ಜಗ | ಕಂಜಾಕ್ಷ ಸಲಹೀದ 1 ರಾಮರ ಭಂಟ ಧೀಮಂತಾ | ಬಲಭೀಮ ಭಯಂಕರ ಅಮಿತಾ | ರೂಪನಾಮಗಳ್ ಪೊಂದುವ ಸತತಾ | ನೋಡುಕಾಮನಯ್ಯನ ಕಾಣ್ವ ನಿರತಾ | ಆಹಭೀಮ ಪ್ರಾಣಾನಂದ | ಮುನಿಯೆಂದು ಕರೆಸುತ್ತಬೊಮ್ಮನ ಪದವಿಯ | ಸಮ್ಮುದದಿ ಪಡೆವಂಥ 2 ಹರಿಯೆ ನೀನು ಪ್ರತಿಬಿಂಬಾ | ಪುರಹರಿಗೆ ನೀನು ಗುರು ಬಿಂಬಾ | ಸುರಾಸುರರ ನೀದಂಡಿಪಾ ಡಿಂಬಾ | ನಿನ್ನವರಣ ವರ್ಣಿಸುವುದು ಗುಂಭಾ | ಆಹಹರ ಮುಖಾದ್ಯರು ನಿನ್ನ | ನಿರುತದಿ ಸುತ್ತಿಸುತ್ತಪರಿಪರಿ ಗುಣರೂಪ | ಕ್ರಿಯೆಗಳ ನೋಳ್ಪರು 3 ನಿನಗೆಣೆ ಯಾರೊ ಸಮೀರ | ಮಹವನಧಿಯ ದಾಟಿದ ಧೀರ | ದೈತ್ಯಜನರ ನೀ ಸವರಿದ್ಯೋ ವೀರ | ದಶಾನನನ ನೀ ಸದದೆಯಾ ಶೂರ | ಆಹಜನಕಜ ರಮಣನ | ನೆನೆ ನೆನೆ ನೆನೆಯುತಅನುಗಾಲ ಕಿಂಪುರುಷ | ಖಂಡದಲಿರುವಂಥ 4 ಕುರುಕುಲ ವನಕೆ ಕುಠಾರ | ದುಷ್ಟಜರೆಯ ಸುತನ ಸೀಳ್ದ ಧೀರ | ಸತಿತರಳೆ ದ್ರೌಪದಿ ಕಾಯ್ದ ವೀರ | ದುರುಳದುರ್ಯೋಧನನ ಅಸು ಹರ | ಆಹಕುರುವಂಶಕನಳನೆ | ಧರಣಿ ಭಾರವ ನಿಳುಹನರಮೃಗ ಲೀಲೆಯಂ | ದರಿಗಳ ತರಿದಂಥ 5 ಯತಿಕುಲ ಕುಮುದಕೆ ಸೋಮ | ದಶಮತಿಯೆ ಮಾಯ್ಗಳ ತರಿದ ಭೀಮ | ಅಹಂಮತಿಯ ಕಳೆ ಸಾರ್ವಭೌಮ | ಜಗತ್ಪತಿಗೆ ನೀ ಸುಪವಿತ್ರ ಧಾಮಾ | ಆಹವಿತತ ಶ್ರೀ ಹರಿಯೆ ಸ | ರ್ವೋತ್ತಮನೆಂಬಂಥಸೂತ್ರಾರ್ಥ ರಚಿಸಿ ಸ | ಚ್ಛಾಸ್ತ್ರವನರುಹಿದ 6 ಪವಮಾನ ಪೊಗಳುವೆ ನಿನ್ನ | ಭವಭವಣೆಯ ಪಡಲಾರೆ ಘನ್ನ | ಗುರುಗೋವಿಂದ ವಿಠಲಾನ | ಚರಣ | ತೋರೊತವಕದಿ ನಿನ್ನೊಳು ಪವನ | ಆಹನವ ವಿಧ ಭಕುತಿಗೆ | ನೆಲೆಯು ನೀನಾಗಿಹೆತವಕೀರ್ತಿ ಪೊಗಳಲು | ಶಿವನಿಗು ಅಳವಲ್ಲ 7
--------------
ಗುರುಗೋವಿಂದವಿಠಲರು
ಹನುಮಾ ಹನುಮಾಯನ್ನೆ ಉದ್ಧರಿಸುವೆ ನೀ ಜನುಮಾ ಪ ಭಂಜನ ನಿರಂಜನ ಎನ್ನ ಗುರುವೇ 1 ಸರ್ವಾಂತರಂಗಾ | ಕಿನ್ನರ ಫಣವರ ಯಕ್ಷ ವಿಧ್ಯಾಧರ ವಂದಿತನೇ 2 ವೃಂದವನಾಳಿ ಕುಠಾರಿ | ಛಂದದಿಂದಲಿ ಮಹಿಪತಿ ನಂದನ ಸಲಹುವಾನಂದದ ಮಾರುತಿ ಮೂರುತಿಯೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಿಡಿ ಹಿಡಿರಿಂದು ಸಿಕ್ಕಿದ ಕಳ್ಳನಾ ಬಿಡಬ್ಯಾಡಿರೆಂದಿಗೆ ಹಜ್ಜೆನೆಲಿಗೆ ತಾರನಾ | ಮೈಯ್ಯ ದೋರನಾ ಪ ಹೃದಯದೋಳಗಿನಾ ಗಂಟವ ಬಿಡುತಾ ಮುದದಿಕುಳ್ಳಿರಲಲ್ಲಿ ಬಂದು ನೋಡುತಾ ಇದರ ಚಿತ್ತ ಪೇಠಾರಿಗೆ ಕೈಯ್ಯಾನೀಡುತಾ ಒದಗಿಕದ್ದೊಯ್ದತಿರಗದೆ ಧನಿ ಮಾಡುತಾಧನಿ ಮಾಡುತಾ 1 ಖೂನ ತನ್ನಯ ಬಲ್ಲಾಸಾಧುಜನವಾ ಕಾಣುತಾರ್ಜಿತ ಶೆಳೆದು ಕೊಂಡು ಧನವಾ ಏನ ಹೇಳಲಿ ಬಿಡನು ಅವರ ಪ್ರಾಣವಾ ವನವಾಕೊಂಡು ಗೋಧನವಾ 2 ಅಡದಾರಿಯಾ ನಡದು ಹೋಗಿ ಬಿದ್ದನಾ ನಡುವೆ ತೊಳಲಿಸುವನು ವಿರುದ್ಧನಾ ಹಿಡಿ ಗುರು ಮಹಿಪತಿ ಪ್ರಭು ಪ್ರಸಿದ್ಧನಾ ಬಿಡದೆ ಭಂಡಾರಕಾಯಲಿಡುವ ಪ್ರಬುದ್ಧನಾ ವಾಜಿಲಿದ್ದನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
11. ವೆಂಕಟರಮಣನ ಸ್ತುತಿ47ಹಾರ ಕೇಯೂರ ಹೊನ್ನುಂಗುರದ ಬೆರಳುಹಾರದ ನಡುವೆ ಹಾಕಿದುವೇಳು ಪದಕ ||ತೋರ ಮುತ್ತಿನ ಕಂಠಮಾಲೆ ಮಾಣಿಕ ಶೋನೇರಿ ಗಿರಿವಾಸ ವೆಂಕಟ ಬಂದ ಮನೆಗೆ 2ಬಿಗಿದು ಸುತ್ತಿದನೀಲಬಿಡುಮುತ್ತಿನ ಒಂಟಿಮುಗುಳು ಬಿರಿದಂದದ ನಗೆ ದಂತಪಂಕ್ತಿ ||ಝಗಿಪ ಪೀತಾಂಬರ ಉಡೆಯ ಕಠಾರಿ ಪ-ನ್ನಗಗಿರಿವಾಸ ವೆಂಕಟ ಬಂದ ಮನೆಗೆ 3ಬಾಲಚಂದ್ರನ ಪೋಲ್ವಕಪೋಲಕುಂಡಲವುನೀಲಮಾಣಿಕ್ಯದಾಭರಣವನಿಟ್ಟು ||ಕಾಲಪೆಂಡೆಯವು ರತುನದ ಹಾವುಗೆಯುಮೇಲುಗಿರಿವಾಸ ವೆಂಕಟ ಬಂದ ಮನೆಗೆ 4ಕರಯುಗಲದಲಿ-ಶಂಖ-ಚಕ್ರವ ಪಿಡಿದುಎರಡೇಳುಭುವನತನ್ನುದರದೊಳಿಟ್ಟು ||ಗರುಡನ ಹೆಗಲೇರಿ ಜಗವ ಪಾಲಿಸುವಪುರಂದರವಿಠಲ ವೆಂಕಟ ಬಂದ ಮನೆಗ 5
--------------
ಪುರಂದರದಾಸರು
ಇಂದ್ರಸೇನ ನಾಥ ಹೋ, ತ್ರೈಲೋಕ್ಯ ವಿಖ್ಯಾತ ಹೋ |ಸವ್ಯಸಾಚಿ ಪ್ರೀತ ಹೋಮಧ್ಯಗೇಹಜಾತ ಹೋ ಪತರಣಿಬಿಂಬಕೆ ಜಿಗಿದೆ ಗದೆಯನು ವಗೆದೆಅಸುರಗ ಕರವನು ಮುಗಿದೆ |ಹರಿಗೆ ವಾರ್ತೆಯ ತಂದೆ ಜರಿಜನ ಕೊಂದೆನೀಂ ಬದರಿಯೊಳ್ನಿಂದೆ ಖಳಕುಲ |ತರಿದೆ,ವಜ್ರಶರೀರ, ಧರಣಿಯಭಾರವಿಳುಹಿದುದಾರಮತಿ, ಕಪಿ |ವರನೊಳತಿ ಕೃಪೆ ಮಾಡಿದೆ ದಾನವ |ಬೇಡಿದೆ ಸುಮತಿಯ ನೀಡಿದೆ 1ದಂಡ ಮೇಖಲ ಧಾರ ಕುಜನಕುಠಾರ|ಬ್ರಹ್ಮ ಶರೀರ ಜೈಸಿದೆಮಂಡೋದರಿ ವಲ್ಲಭನ ಚರಿಸಿದೆಯೋವನ|ತಂದೆ ಮಾಧವನ ಉಡುಪಿಲಿಚಂಡವಿಕ್ರಮರಾಮ ಸೇವಕ ಭೀಮ |ಸದಾಚಾರಧಾಮಯತಿ ಮೇ |ಷಾಂಡನ ಮೊರೆ ಕೇಳ್ದೆ ಕೀಚಕನನು ಸೀಳ್ದೆ ದ್ವಿಜಕುಲವಾಳ್ದೆ 2ಲಕುಮಿಗುಂಗುರವ ಕೊಟ್ಟಿ ರಣಕತಿ ಗಟ್ಟಿಶಾಟಿಯನುಟ್ಟಿ ಶರಧಿಯ ತ |ವಕದಿ ಕ್ಷಣದೊಳು ಹಾರಿದೆ ಉಗ್ರವ ತೋರಿದೆಜ್ಞಾನವ ಬೀರಿದೆ ಲಂಕೆಯ |ಸಕಲ ಸೌಖ್ಯವ ಕೆಡಿಸಿ ಪುಷ್ಪವ ಮುಡಿಸಿಐಕ್ಯವ ಬಿಡಿಸಿ, ವಟುವಪು |ಮುಕುತಿಪತಿಪ್ರಾಣೇಶ ವಿಠಲನದಾಸ ಸಲಹೋ ನಿರ್ದೋಷ3
--------------
ಪ್ರಾಣೇಶದಾಸರು
ಉತ್ಥಾನ ದ್ವಾದಶಿಯ ದಿವಸ(ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ)ರಂಭೆ : ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ.ಮಾನಿನೀಮಣಿ ಈತನ್ಯಾರೆ ಕರುಣಾನಿಧಿಯಂತಿಹ ನೀರೆ ಹಾ ಹಾಭಾನುಸಹಸ್ರ ಸಮಾನಭಾಷಿತ ಮ-ಹಾನುಭಾವನು ಸುಪ್ರವೀಣನಾಗಿಹ ಕಾಣೆ 1ಭಯಭಕ್ತಿಯಿಂದಾಶ್ರಿತರು ಕಾಣಿ-ಕೆಯನಿತ್ತುನುತಿಸಿಪಾಡಿದರು ನಿರಾ-ಮಯ ನೀನೇ ಗತಿಯೆಂದೆಲ್ಲವರು ಹಾ ಹಾಭಯನಿವಾರಣ ಜಯ ಜಯವೆಂದು ನುತಿಸೆ ನಿ-ರ್ಭಯಹಸ್ತತೋರುತ ದಯಮಾಡಿ ಪೊರಟನೆ2ಭೂರಿವಿಪ್ರರ ವೇದ ಘೋಷದಿಂದಸ್ವಾರಿಗೆ ಪೊರಟ ವಿಲಾಸ ಕೌಸ್ತು-ಭಾರತ್ನ ಹಾರ ಸುಭಾಸ ಹಾ ಹಾಚಾರುಕಿರೀಟಕೇಯೂರಪದಕಮುಕ್ತಾಹಾರಾಲಂಕಾರ ಶೃಂಗಾರನಾಗಿರುವನು 3ಸೀಗುರಿ ಛತ್ರ ಚಾಮರದ ಸಮವಾಗಿ ನಿಂದಿರುವ ತೋರಣದ ರಾಜಭೋಗನಿಶಾನಿಯ ಬಿರುದ ಹಾ ಹಾಮಾಗಧಸೂತ ಮುಖ್ಯಾದಿ ಪಾಠಕರ ಸ-ರಾಗ ಕೈವಾರದಿ ಸಾಗಿ ಬರುವ ಕಾಣೆ 4ಮುಂದಣದಲಿ ಶೋಭಿಸುವ ಜನಸಂದಣಿಗಳ ಮಧ್ಯೆ ಮೆರೆವ ತಾರಾವೃಂದೇಂದುವಂತೆ ಕಾಣಿಸುವ ಹಾಹಾಕುಂದಣಖಚಿತವಾದಂದಣವೇರಿ ಸಾ-ನಂದದಿ ಬರುವನು ಮಂದಹಾಸವ ಬೀರಿ 5ತಾಳ ಮೃದಂಗದ ರವದಿಶ್ರುತಿವಾಲಗಭೇರಿರಭಸದಿ ಜನಜಾಲಕೂಡಿರುವ ಮೋಹರದಿ ಹಾಹಾಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ-ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6ಊರ್ವಶಿ: ಈತನೆ ಭಾಗ್ಯನಿಧಿ ನೋಡೆ ನೀ ಮುದದಿ ಪ.ಈತನೆ ಈರೇಳು ಲೋಕದದಾತನಾರಾಯಣ ಮಹಾ ಪುರು-ಹೂತ ಮುಖ್ಯಾಮರವಿನುತನಿ-ರ್ಭೀತ ನಿರ್ಗುಣ ಚೇತನಾತ್ಮಕ ಅ.ಪ.ಮೀನ ರೂಪವೆತ್ತಾಮಂದರಪೊತ್ತಭೂನಿತಂಬಿನಿಯ ಪ್ರೀತಮಾನವಮೃಗಾಧಿಪ ತ್ರಿವಿಕ್ರಮದಾನಶಾಲಿ ದಶಾನನಾರಿ ನ-ವೀನ ವೇಣುವಿನೋದ ದೃಢ ನಿ-ರ್ವಾಣ ಪ್ರವುಢ ದಯಾನಿಧಿ ಸಖಿ 1ವಾರಿಜಾಸವಾನವಂದಿತ ಶ್ರೀಪಾದಯುಗ್ಮವತೋರಿಕೊಂಬುವ ಸಂತತಕೇರಿಕೇರಿಯ ಮನೆಗಳಲಿ ದಿ-ವ್ಯಾರತಿಯ ಶೃಂಗಾರ ಭಕ್ತರ-ನಾರತದಿ ಉದ್ಧಾರಗೈಯಲುಸ್ವಾರಿ ಪೊರಟನು ಮಾರಜನಕನು 2ಮುಗುದೆ ನೀ ನೋಡಿದನು ಕಾಣಿಕೆಯ ಕ-ಪ್ಪಗಳ ಕೊಳ್ಳುವನು ತಾನುಬಗೆಬಗೆಯ ಕಟ್ಟೆಯೊಳು ಮಂಡಿಸಿಮಿಗಿಲು ಶರಣಾಗತರ ಮನಸಿನಬಗೆಯನೆಲ್ಲವ ಸಲ್ಲಿಸಿ ಕರುಣಾಳುಗಳ ದೇವನು ಕರುಣಿಸುವ ನೋಡೆ 3ರಂಭೆ : ದೃಢವಾಯಿತೆಲೆ ನಿನ್ನ ನುಡಿಯು ಸುರಗಡಣಓಲಗಕೆ ಇಮ್ಮಡಿಯು ಜನ-ರೊಡಗೂಡಿ ಬರುತಿಹ ನಡೆಯು ಹಾ ಹಾಮೃಡಸರೋಜ ಸುರಗಡಣ ವಂದಿತಕ್ಷೀರಕಡಲ ಶಯನ ಜಗದೊಡೆಯನಹುದು ಕಾಣೆ 1ಮದಗಜಗಮನೆ ನೀ ಪೇಳೆ ದೇವಸದನವ ಪೊರಡುವ ಮೊದಲೇ ಚಂದ-ನದಪಲ್ಲಂಕಿಯ ತಂದು ಮ್ಯಾಲೆ ಹಾ ಹಾಮುದದಿಂದ ಬಾಲಕರೊದಗಿ ಸಂತೋಷದಿಚದುರತನದಿ ಪೋಗುವನು ಪೇಳೆಲೆ ನೀರೆ 2ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವಶ್ರೀರಮಾಧವನ ಲೀಲೆಘೋರದೈತ್ಯಕುಠಾರ ಲಕ್ಷ್ಮೀನಾರಾಯಣನ ಬಲಕರ ಸರೋಜದಿಸೇರಿ ಕುಳಿತ ಗಂಭೀರ ದಿನಪನಭೂರಿತೇಜದಿ ಮೆರೆವುದದು ತಿಳಿ 1ದೊರೆಯು ಬರುವನು ಎಂದು ಎಲ್ಲರಿಗೆ ಗೋ-ಚರಿಸುವನೊಲಿದುಇಂದುತರ ತರದ ಆರತಿಗಳನು ನೀವ್ಧರಿಸಿ ನಿಂದಿರಿಯೆಂದು ಜನರಿಗೆ-ಚ್ಚರಿಗೆಗೋಸುಗ ಮನದ ಭಯವಪ-ಹರಿಸಿ ಬೇಗದಿ ಪೊರಟು ಬಂದುದುರಂಭೆ :ಸರಸಿಜನಯನೆ ನೀ ಪೇಳೆಸೂರ್ಯಕಿರಣದಂತಿಹುದೆಲೆ ಬಾಲೆ ಸುತ್ತಿಗೆರಕವಾಗಿಹುದು ಸುಶೀಲೆ ಆಹಾಹರಿಯ ವೈಕುಂಠ ನಗರದಂತೆ ಜ್ಯೋತಿ ವಿ-ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1ಊರ್ವಶಿ : ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧದ್ವಾದಶಿಯೊಳಗೆ ಬಾಲೆಮಾಧವನ ಪ್ರೀತ್ಯರ್ಥವಾಗಿ ಶು-ಭೋದಯದಿ ಸಾಲಾಗಿ ದೀಪಾರಾಧನೆಯ ಉತ್ಸಹದ ಮಹಿಮೆಯಸಾದರದಿ ನೀ ನೋಡೆ ಸುಮನದಿ 1ನಿಗಮಾಗಮದ ಘೋಷದಿ ಸಾನಂದ ಸು-ತ್ತುಗಳ ಬರುವ ಮೋದದಿಬಗೆ ಬಗೆಯ ನರ್ತನ ಸಂಗೀತಾದಿಗಳ ಲೋಲೋಪ್ತಿಯ ಮನೋಹರದುಗುಮಿಗೆಯ ಪಲ್ಲಂಕಿಯೊಳು ಕಿರು 2ನಗೆಯ ಸೂಸುತ ನಗಧರನು ಬಹಚಪಲಾಕ್ಷಿ ಕೇಳೆ ಈ ವಸಂತ ಮಂ-ಟಪದಿ ಮಂಡಿಸಿದ ಬೇಗಅಪರಿಮಿತ ಸಂಗೀತ ಗಾನ ಲೋ-ಲುಪನು ಭಕ್ತರ ಮೇಲೆ ಕರುಣದಿಕೃಪೆಯ ಬೀರಿ ನಿರುಪಮ ಮಂಗಲಉಪಯಿತನು ತಾನೆನಿಸಿ ಮೆರೆವನು 3ಪಂಕಜಮುಖಿನೀ ಕೇಳೆ ಇದೆಲ್ಲವುವೆಂಕಟೇಶ್ವರನ ಲೀಲೆಶಂಕರಾಪ್ತನು ಸಕಲ ಭಕ್ತಾತಂಕವನು ಪರಿಹರಿಸಿಕರಚಕ್ರಾಂಕಿತನು ವೃಂದಾವನದಿ ನಿಶ್ಯಂಕದಿಂ ಪೂಜೆಯಗೊಂಡನು 4ಕಂತುಜನಕನಾಮೇಲೆ ಸಾದರದಿ ಗೃ-ಹಾಂತರಗೈದ ಬಾಲೆಚಿಂತಿತಾರ್ಥವನೀವ ಲಕ್ಷ್ಮೀಕಾಂತ ನಾರಾಯಣನು ಭಕುತರತಿಂಥಿಣಿಗೆ ಪ್ರಸಾದವಿತ್ತೇ-ಕಾಂತ ಸೇವೆಗೆ ನಿಂತಮಾಧವ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯ ಪಾಂಡುರಂಗ ಹೋ ಜಲದ ನಿಭಾಂಗ ಹೋ|ಜಗದಂತರಂಗ ಹೋ ಜಯ ಪಾಂಡುರಂಗ ಹೋ ಪನೀಲಭೂಧರವಾಸಕೌಸ್ತುಭಭೂಷ ರಮೆಯಾಧೀಶಸುಮನಸ|ಪಾಲ ಗುಣಗಂಭೀರ ನವನೀತಚೋರ ಕುಜನಕುಠಾರ| ನರಹರಿ ||ಫಾಲಲೋಚನಬಂಧು ದೈತ್ಯನ ಕೊಂದು ವೇದವ ತಂದು ದ್ರುಹಿಣಗೆ |ಮೇಲು ಶರುಣುದಲಿತ್ತೆ,ಮಂದರಪೊತ್ತೆ ಸುಂದರ ಮೂರ್ತಿ 1ನಿಗಮವಂದಿತ ರಾಮಹರಿಪೂರ್ಣ ಕಾಮ ಸದ್ಗುಣಧಾಮ, ವಾಮನ |ಮಗನ ಮೂಗಿಲಿ ಪುಟ್ಟಿ, ಹೇಮನ ಕುಟ್ಟಿ,ಅವನಿತಂದಿಟ್ಟಿ, ಈರೇಳು ||ಜಗದಿ ಪೂಜಿತನಾದಿ ಕೈಟಭ ಭೇದಿ ಇಭಪನ ಕಾಯ್ದಿ, ಪ್ರಣತರ |ಅಘವನೋಡಿಸುತಿಪ್ಪ ಹಲಾಯುಧತಲ್ಪಮನ್ಮಥನಪ್ಪ 2ವೇದ ವಿಸ್ತರ ಮಾಡ್ಡೀ, ದಾನವ ಬೇಡ್ಡೀ, ದನುಜನಿಗ್ಯೋಡ್ಡೀ, ಕುರುಕುಲ |ಸೂದನ, ಕಿರೀಟ ಸೂತ, ಪವಮಾನ ತಾತ, ದುರ್ಬಲನಾಥ ಎನ್ನನು ||ಆದರದಿ ಕೈಪಿಡಿಯೋ, ದುರಿತವ ತಡೆಯೊ, ದುರ್ಮತಿ ಕಡಿಯೊ,ಅಗಣಿತ|ಮೋದಪ್ರಾಣೇಶ ವಿಠಲ, ನರಮೃಗ, ನಿಟಿಲನೇತ್ರ, ಅಕುಟಲ3
--------------
ಪ್ರಾಣೇಶದಾಸರು
ಜೋ ಜೋ ಯಶೋದೆಯ ನಂದ ಮುಕುಂದನೆಜೋ ಜೋ ಕಂಸಕುಠಾರಿ ಪ.ಜೋ ಜೋ ಮುನಿಗಳ ಹೃದಯಾನಂದನೆಜೋ ಜೋ ಲಕುಮಿಯ ರಮಣ ಅಪಹೊಕ್ಕುಳ ಹೂವಿನ ತಾವರೆಗಣ್ಣಿನಇಕ್ಕಿದಮಕರ ಕುಂಡಲದಜಕ್ಕುಳಿಸುವ ಕದಪಿನ ಸುಳಿಗುರುಳಿನಚಿಕ್ಕ ಬಾಯ ಮುದ್ದು ಮೊಗದ ||ಸೊಕ್ಕಿದ ಮದಕರಿಯಂದದಿ ನೊಸಲೊಳಗಿಕ್ಕಿದ ಕಸ್ತೂರಿ ತಿಲಕ |ರಕ್ಕಸರೆದೆದಲ್ಲಣ ಮುರವೈರಿಯೆಮಕ್ಕಳ ಮಾಣಿಕ್ಯ ಜೋ ಜೋ 1ಕಣ್ಣ ಬೆಳಗು ಪಸರಿಸುತಿರೆಗೋಪಿಅರೆಗಣ್ಣ ಮುಚ್ಚಿ ನೋಡಿ ನಗುತ |ಸಣ್ಣ ಬೆರಳುಗಳ ಬಾಯೊಳಗಳವಡಿಸಿಪನ್ನಗಶಯನ ತೊಟ್ಟಿಲಲಿ ||ನಿನ್ನ ಮಗನ ಮುದ್ದನೋಡು ಎಂದೆನುತಲಿತನ್ನ ಪತಿಗೆ ತೋರಿದಳು |ಹೊನ್ನ ಬಣ್ಣದ ಸೊಬಗಿನ ಖಣಿಯೆ ಹೊಸರನ್ನದ ಬೊಂಬೆಯೆ ಜೋ ಜೋ 2ನಿಡು ತೋಳ್ಗಳ ಪಸರಿಸುತಿರೆ ಗೋಪಿಯತೊಡೆಯ ಮೇಲ್ಮಲಗಿ ಬಾಯ್ದೆರೆಯೆ |ಒಡಲೊಳಗೀರೇಳು ಭುವನವಿರಲು ಕಂಡುನಡುಗಿ ಕಂಗಳನು ಮುಚ್ಚಿದಳು ||ಸಡಗರಿಸುತ ತಾನರಿಯದಂತೆಯೆಹೊಡೆ ಮರುಳಿ ಮೊಗವ ನೋಡುತಲಿಕಡಲಶಯನ ಮೊಗವ ನೋಡುತಲಿಕಡಲಶಯನ ಶ್ರೀ ಪುರಂದರವಿಠಲನುಬಿಡದೆ ನಮ್ಮೆಲ್ಲರ ರಕ್ಷಿಸುವ 3
--------------
ಪುರಂದರದಾಸರು