ಒಟ್ಟು 83 ಕಡೆಗಳಲ್ಲಿ , 32 ದಾಸರು , 78 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣು ಶರಣುರಾಯಾ | ಸರಸಿ-ಜಾಲಯ ಪ್ರೀಯಾ | ಶರಣು ಪಾವನಕಾಯಾ | ಸಲಹುನಮ್ಮಾ ಪ ಸ್ತುತಿಯ ಮಾಡಲರಿಯೇ | ಯತಿ ಛಲಗುಣ ವರಿಯೇ | ಪಾವನ ದೇವ ದಯಾನಿಧಿಯೇ 1 ಶಿರಿವಧು ರಮಣನಾ ಚರಿತವ ಪೇಳುವೆ | ಕರುಣದಿ ಶ್ರೀಹರಿ ನುಡಿಸಿದಂತೆ | ಕೇಳಿ | ಧರಿಯೊಳು ಭಾಗವತರು ಯಲ್ಲಾ 2 ಬನ್ನಿ ಸಾತ್ವಿಕ ಗುಣ ಸಂಪನ್ನ ಮುತ್ತೈದೇರು | ಅನ್ಯ ಭಾವನೆಗಳಿಗೆ ತೊಡಕದೇ | ಯನುತಲಿ | ಉನ್ನತ ಸಂಭ್ರಮದಿ ನೆರೆದರು 3 ದಿವ್ಯಾಂಬರವನುಟ್ಟು ದಿವ್ಯಾಭರಣನಿಟ್ಟು | ದಿವ್ಯಾಕೃತಿಯಲಿ ವಪ್ಪುತಿಹಾ | ಮುನಿ | ಮದನ ಲಾವಣ್ಯನು 4 ಅನಾದಿ ಮಹಿಮ ಮೋಹನನಾದ ಕೃಷ್ಣನು | ಜ್ಞಾನಾಂಗನೇ ರುಕ್ಮಣಿ ವಧುವಿನಾ | ಈರ್ವರಾ | ಅನುಭವ ದೂಟಣಿಯನ್ನು ಮಾಡಲಾರಿ 5 ಸಡಗರದಿಂದಾ ಹೃದಯಾ ಪೊಡವಿಯೊಳೊಪ್ಪುದಾ | ದೃಢ ವಜ್ರದಿಂದಲಿ ರಚಿಸಿದಾ | ಜಗದಲಿ | ಒಡನೆ ರತಿ ರತ್ನಾಸನ ಹಾಕಿ 6 ಮ್ಯಾಲ ಭಾವಕಿಯರು ಮೂಲೋಕವಂದ್ಯರಾ | ಲೋಲವಧು ವರರನು ಕುಳ್ಳಿರಿಸಿ | ಹರುಷದಿ | ಮೇಲೆನಿಸಿ ಊಟಣಿಯ ಮಾಡಿಸಲು 7 ಶುದ್ಧ ಮತಿವಂತಿಯರು ಅಧ್ಯಕ್ಷರತರಾಗಿ | ಸಿರಿ | ಮುದ್ದು ಶ್ರೀ ಕೃಷ್ಣನು ವಲಿವಂತೇ 8 ನಾನಾ ಗಂಟಗಳುಳ್ಳಾ ಕಠಿಣವಾದಾ ಅಭಿ | ಮಾನ ಅರಿಷಿಣವನು ಸಣ್ಣ ಮಾಡೀ | ಈಗಾ | ಏನುಳಿಯದ್ಹಾಂಗ ವಿವೇಕದಿಂದ 9 ಹಮ್ಮಿನರಿಷಿಣವನು ಸಮ್ಯಜ್ಞಾನದ ಕದಿ | ಕಮ್ಯ ದೋರುವಂತೆ ಕಲಿಸುತಾ | ಶ್ರೀವರ | ಬ್ರಹ್ಮನ ಪಾಪಕ ಅರ್ಪಿಸಿದರು 10 ತ್ವರಿತ ಲಕ್ಷ್ಮೀ ಕಾಲಾ ಪರವಾ ವಪ್ಪಿಲೆ ಹಚ್ಚಿ | ಭರದಿಂದಾಕ್ಷಣ ಕ್ಷಣಕ ರುಕ್ಮಣಿ ಯಾಮುಖದಿಂದ | ಹರಿಯಾ ನಾಮಗಳನು ನುಡಿಸುತಾ 11 ಭಾವನಿಂದ ರಂಜಿಸುವ ಕುಂಕುಮ ಮ್ಯಾಲೆ | ಆ ವಿಮಲ ಮುಕ್ತಿಯ ಶೇಶೇ ನಿಟ್ಟು ಧ್ಯಾನಾ | ಲೇವಿಗಂಧವಾ ಲೇಪಿಸಿದರು 12 ಪರಿಮಳ ಸುವಾಸನೆಯ ಬೇರದ ಸುಮನ ಸರವಾ | ಕೊರಳಿಗೆ ಹಾಕಿದೆ ಪರಿಯಿಂದಾ ಕೃಷ್ಣನಾ | ಕರದಿ ನೇಮಿಸಿದರು ರುಕ್ಮಣಿಗೆ 13 ಆರ್ತ ಜಿಜ್ಞಾಸನು ಧನಾರ್ಥಿಯು ಬೈಲಿ ಘಳಿಗೆ | ಅರ್ತು ಮುಖದಲಿ ಕೊಟ್ಟು ಬಿಸುಡಿದರು ಬುಧರು | ನಿರ್ತದಿಂದಲಿ ನೋಡಿ ಇಬ್ಬರಿಂದ 14 ಮಗುಳೆ ಸಂಕಲ್ಪಾದಾ ಬಗೆದಾ ಕುಪ್ಪಸಿನ | ಬಿಗಿ ಬಿಗಿದು ಕಟ್ಟಿದಾ ಗಂಟವನು ಒಂದೇ | ಜಗದೀಶನಾ ಕೈಯಿಂದ ಬಿಡಿಸಿದರು 15 ಹರಿಯಾ ತೊಡೆಯ ಮ್ಯಾಲ ನಿಂದಿರಿಸಿ ರುಕ್ಮಿಣಿಯನು | ಕರದಿ ಶಾಂತಿ ಅಂಬಿ ಬಿಂಬಿಸಿದರು | ನೋಡಿ | ಧರಿಯೊಳಾನಂದವ ತೋರುವಂತೆ 16 ತನುವಿನಾರತಿಯೊಳು ಘನದೆಚ್ಚರ ದೀಪದಿ | ಮನದಿಂದಾ ಜಯಾ ಜಯಾವೆಂದೂ ಬೆಳಗೀ | ಮರಹು | ಅನುವಾಗಿ ತಾವು ನಿವಾಳಿಸಿದರು 17 ಮರೆವಾ ಪ್ರಕೃತಿ ಪುರುಷರ ಶರಗಂಗಳಾ ಯರಡಾ | ಭರದಿಂದ ಕಟ್ಟಿ ಸುವೃತ್ತಿಂದಾ | ಬಳಿಕಾ | ತ್ವರಿತ ನಿಜ ಮಂದಿರವ ಸಾರಿದರು 18 ಇಂತಿ ಪರಿಯಾಗಿಹ ಅಂತರನು ಭವದಾ | ಕಂತುಪಿತ ಲಕ್ಷ್ಮಿಯ ಚರಿತವನು | ನೋಡಿ | ಸಂತತ ಸುಖವನು ಪಡೆದರೆಲ್ಲಾ 19 ಇನಿತು ಸುಖ ಕರವಾದಾ ಅನುಭವ ದೂಟಣಿಯನು | ಅನುವಾಗಿ ನುಡಿಸಿದಾ ಯನ್ನ ಮುಖದೀ | ಈಗಾ | ಘನ ಗುರು ಮಹಿತಪಿ ಸುತ ಸ್ವಾಮಿ 20 ತಂದೆ ತಾಯಿ ಮಿತ್ರ ಬಂಧು ಬಳಗನಾದಿ | ಎಂದೆಂದೂ ಶರಣರ ಸಲಹುವಾ | ದೇವನೇ | ಇಂದೆನ್ನ ನುದ್ಧರಿಸು ದತ್ತಾತ್ರೇಯಾ 21
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸತ್ಸಂಗ ಮಾಡೊ ಮನವೆ ಚಿತ್ಸುಖ ನೋಡಲಿಕೆ ಅತಿಸೂಕ್ಷ್ಮಾನಂದ ಸುಪಥ ಅತಿಶಯಾನಂದ ಸದ್ಗತಿ ಸುಮೋಕ್ಷದಾಯಕ ಹಿತದೋರಿಕೊಡುವ ಸದ್ಗುರುನಾಥ ಧ್ರುವ ತೊಡಕಿ ಮಿಡುಕಬ್ಯಾಡ ಹಡಕಿ ವಿಷಯದೊಳು ಗಡಕವಾಗಿ ಕೆಡುಕ ಬುದ್ಧಿಯಿಂದ ಕೆಡುದೇನ ಬಡದ ಭವಣೆ ಬಟ್ಟು ತಾವು ಕೊಡುವರೇನ ಹಾಕಿ ವೈವಯಮನ ಬ್ಯಾಗೆ ಗುರುದಯಕರುಣ 1 ಸಿಲ್ಕಿಮಾಯ ಮಲ್ಕಿನೊಳು ಅಳ್ಕಿ ಆಲಪರಿಯಬ್ಯಾಡ ಬಲ್ಕಿ ಮಾಡಿಕೊಳ್ಳಿ ನೀ ಸುಜ್ಞಾನ ಕ್ಷುಲ್ಲಕ ಬುದ್ಧಿಗಾಗಿ ನಿನ್ನ ತನುವಿನೊಳಗೆ ಖೂನ ನುಲ್ಕಿ ಸುಟ್ಟ ಮಲ್ಕಿನಂತೆ ಜನಕಾಲಂಬ ತೋರಿ ನೀನು ಜಲಕಮಲದಂತಿರನುದಿನ ನಿಲ್ಕಿ ನೆಲೆಗೊಂಬುದಿದು ತಳಕು ತನ್ನೊಳಗದೆಯೆಂದು ನಾಲ್ಕುವೇದ ಸಾರುತಿದೆ ಪೂರ್ಣ2 ಮಾನವ ಜನ್ಮ ನಿರ್ತದಿಂದ ಅರ್ತು ಕೂಡಿ ಕರ್ತು ನಿಜಾನಂದ ಗುರುಬೋಧ ಥರಥರದಿ ತೋರಿ ಪೂರ್ಣ ಸಾರ್ಥಕ ಮಾಡುವದಿದು ತೀರ್ಥಪುಣ್ಯ ಸರ್ವಕ್ಷೇತ್ರವಾದ ಅರ್ಥಿಯಿಂದವಿಡಿದು ಗುರು ಪಡಿಯೊ ನಿನ್ನ ಸ್ವಹಿತದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾರವಲ್ಲ ಸಂಸಾರವಿದು ಪ ತನುವಿನ ಪಾಶವು ವನಿತೆರ ಪಾಶವು | ಉಣಲುಡುಪಾಶಾ ಹಣಗಳ ಪಾಶವು | ಮನೆ ಪಶು ಪಾಶಾ ಇನಿತಿಹ ಪಾಶದ | ಮನುಜಗ ಸುಖವೆ 1 ಭ್ರಾಂತಿಯ ಮಂದಿರ ಚಿಂತೆಯ ಮಡುವು | ಪಂಥವು ನರಕದ ಕಂತುವಿನಾಶ್ರಯ | ಖಂತಿಯ ನೆಲೆಭವ ಜಂತುರ ನೋಡಲು | ಸಿಂತರ ಬೀಳುವಂತಿನಾ ಜನುಮಾ 2 ತಾಪತ್ರಯ ನಾನಾ ಪರಿಯಿಂದಲಿ | ವ್ಯಾಪಿಸಿಕೊಂಡಿಹ ದೀಪರಿ ಭವಣಿ | ಆ ಪರಗತಿ ನಿನಗಾಪೇಕ್ಷಾದರ | ಪಡಿ ತಂದೆ ಮಹಿಪತಿ ಬೋಧಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸೂರ್ಯ | ಕಾಯೊಯತಿ ಸತ್ಯ ಧ್ಯಾನಾಖ್ಯವರ್ಯಾ ಪ ಧೃತ - ಕ್ಷಿತಿಯೊಳಗೆ ದುರ್ಮತವ ಖಂಡಿಸಿ | ಅತಿಹಿತದಿ ದ್ವೈತವನೆ ಬೋಧಿಸಿವಿತತ ಹರಿ ಪರನೆಂದು ಸಾಧಿಸಿ | ಮತಿಯ ಮನುಜರ್ಗೊರೆದ ತಾಪಸಿ ಅ.ಪ. ಪಾದ ವನಜಾ |ಸಾಪರೋಕ್ಷೀಕೃತ ಯತಿಜ | ತೋರೊಸುಪಥ ಮುಕ್ತಿಗೆ ಹತ ದಿತಿಜ |ಶ್ರೀ ಪತಿಯ ಚರಣಾಬ್ಜ ಮಧುಪನೆ | ಕೋಪ ಸಲ್ಲದು ಕೃಪೆ ಪಯೋನಿಧಿಪಾಪ ರಹಿತನ ಮಾಡಿಯನ್ನನು | ಪ್ರಾಪಿಸೆನಗೆ ಜ್ಞಾನಖ್ಯ ಸೂರ್ಯನ 1 ಕಾಶಿ ರಾಮೇಶ್ವರ ಕುಂಭ | ಕೋಣದೇಶ ಯಾತ್ರೆಗಳ್ಮಾಡಿ ಡಿಂಬಾ |ಮೀಸಲೆನಿಸಿ ಜಯಸ್ತಂಭಾ | ಹೂಡಿಶ್ರೀಶ ಸರ್ವೋತ್ತಮನೆಂಬಾ ||ಭಾಷೆಯನು ಕೈಗೊಂಡು ಚರಿಸುತ | ಕೃಷಿಯ ಮಾಡಿದೆ ಹರಿಯ ಮತವನುತೋಷಿಸಿದೆ ಸದ್ವೈಷ್ಣ್ವವೃಂದವ | ವಿಶದ ವಿದ್ವತ್ಸಭೆಯ ನೆರೆಸೀ 2 ಚಿತ್ತ ವಿಡುತ ಲಯದಿ ಚಿಂತನಾ | ಸಾರಿಸತ್ಯ ಪಾಂಡುರಂಗ ವಿಠಲನಾ |ಹತ್ತಿರ ಕಿತ್ತೊಗೆದೆ ತನುವಿನ ವರಚೈತ್ರ ಶುಕ್ಲದಿ ಆರೆಡನೆ ದಿಣ |ಕ್ಷಾತ್ರ ತೇಜದಿ ಮೆರೆದೆ ಗುರುವರ | ಕ್ಷಿತಿಯೊಳಗೆ ಸುರಾರು ನಿಮಗೆವಿತತ ಗುರುಗೋವಿಂದ ವಿಠಲನ | ಚಿತ್ತದಲಿ ಸ್ಮರಿಸುತ್ತ ಪೊರಟ 3
--------------
ಗುರುಗೋವಿಂದವಿಠಲರು
ಹನುಮರಾಯ ಎನ್ನ ದುರಿತದಾರಿದ್ರ್ಯವ ಪರಿಹರಿಸಿ ಸಲಹೋ ಹನುಮರಾಯ ಪ ದಿನದಿನ ಘನಘನ ತನುವಿನರೋಗವು ಹನುಮರಾಯ ಇನ್ನು ಘನವಾಯ್ತು ಕನಿಕರದಿಂದ ಕಡೆಹಾಯ್ಸಯ್ಯ ಹನುಮರಾಯ ಕ್ಷಣಸುಖವಿಲ್ಲದೆ ಅನುಪಮ ನೋಯುವೆ ಹನುಮರಾಯ ಹನುಮರಾಯ1 ಕಿರಿಕಿರಿಸಂಸಾರ ಪರಿಪರಿಬಾಧೆಯು ಹನುಮರಾಯ ಬೇಗ ಪರಿ ಬಾಧ್ಯಾಕೊ ಹನುಮರಾಯ ಇನ್ನು ಮರವೆಹರಿಸಿ ನಿಜಅರಿವು ಕರುಣಿಸಿ ಕಾಯೊ ಹನುಮರಾಯ 2 ಸ್ವಾಮಿ ಶ್ರೀರಾಮನ ಪ್ರೇಮದದೂತನೆ ಹನುವiರಾಯ ದೇವ ಪಾದ ಭಜಿಸುವೆನಯ್ಯ ಹನುಮರಾಯ ಈ ಮಹಕಷ್ಟದಿ ಕ್ಷೇಮ ಪಾಲಿಸಯ್ಯ ಹನುಮರಾಯ ನಿನ್ನ ಪ್ರೇಮದಿರಿಸಿ ಎನ್ನ ಮುಕ್ತಿಗ್ಯೋಗ್ಯನ ಮಾಡೊ ಹನುಮರಾಯ 3
--------------
ರಾಮದಾಸರು
ಹುಚ್ಚುಮನವೆ ನಿನ್ನ ಹುಚ್ಚಾಟವನೆ ಕಂಡು ರೊಚ್ಚುಬರುತಿದೆ ಎನಗೆ ಎಚ್ಚರಿರೆಲೆಲೇ ಪ ಉಚ್ಚೆಕುಣಿಯಲಿ ಬಂದು ಭವದ ಮಾಯಾ ಜಗವ ನೆಚ್ಚಿ ಸಕಲ ಮರೆದು ಮುಂದಿನ ಎಚ್ಚರವೆ ಮರೆತೆಲ್ಲೋ ಪಾಪಿ ಅ.ಪ ಒಳಗೊಂದು ಹೊರಗೊಂದು ತಿಳಿಯುತಲಳಿಯುವಿ ಅಳಿದುಹೋಗುವ ಇಳೆಯ ಸಲೆ ಸುಖಕೊಲಿದು ಮಲದ ಭಾಂಡದಿ ಸಿಲುಕಿ ಅನುದಿನ ಮಲಿನಗುಣದಿಂ ತೊಳಲಿಬಳಲುತ ಗಳಿಸಿಕೊಂಡು ಬಂದ ಸಮಯ ಕಳೆದುಕೊಳ್ಳುವಿಯಲ್ಲೋ ಪಾಪಿ 1 ಹಿಂದೊಂದು ಮುಂದೊಂದು ವಂದಿಸಿ ನುಡಿಯುತ ಮಂದ ನೀನಾಗಿ ಹಂದಿಯು ಮಲ ಮೆದ್ದತೆರದಿ ಕುಂದಿಪೋಗುವ ಬಂಧುಬಳಗಕೆ ನಂದುನಂದೆಂಬ ವಿಷಯಲಂಪಟ ರಂಧ್ರೆಯಲ್ಲಿ ಬಿದ್ದು ಕೆಡುವಿ ಪಾಪಿ 2 ನುಡಿಯೊಂದು ನಡೆಯೊಂದು ಕಡುದೃಢ ನುಡಿಯಾಡಿ ಒಡಲಕಿಚ್ಚಿಗೆ ಬಲು ಮಿಡುಕುತಲಿ ಕೆಡುವ ತನುವಿನ ಮೋಹ ಬಿಡದೆ ಪೊಡವಿಗಧಿಕ ನಮ್ಮೊಡೆಯ ಶ್ರೀರಾಮ ನಡಿಯ ನಂಬದೆ ಮಡಿದುಪೋಗುವಿ ಕಡೆಗೆ ಹೆಡತಲೆಮೃತ್ಯುಗೆದೆಯಾಗಿ 3
--------------
ರಾಮದಾಸರು
ಹ್ಯಾಗೆ ಕಾಂಬೆ ನಿನ್ನ ಪಾದವ ಶ್ರೀನಿವಾಸ ಯೋಗಿ ಗಮ್ಯ ರೂಪ ಮಾಧವಾ ರಾಗ ರೋಗ ಸಾಗರಸ್ತನಾಗಿ ಮುಳುಗಿ ಬಾಯ ಬಿಡುವೆ ನಾಗರಾಜಗೊಲಿದ ತೆರದಿ ಬೇಗಲೊದಗಿ ಬಂದು ಕಾಯೊ ಪ. ಮನಸು ಎನ್ನ ವಶಕೆ ಬಾರದೆ ಭಕ್ತಿ ಸಾ- ಧನಗಳೆನಗೆ ಸೇರಿ ಬಾಹದೆ ನೆನಸಿಕೊಳುವ ಕಾರ್ಯ ದೊರೆಯದೆ ಸರ್ವಕಾಲ ತನುವ ಕೆಡಿಸಿ ವ್ಯರ್ಥಮಾಡಿದೆ ಕನಲಿ ಕೂಗುತಿರುವ ಶಿಶುವ ಜನನಿ ಕರದೊಳೆತ್ತುವಂತೆ ಮೂರ್ತಿ ದೋರೊ 1 ಕಲಿಯ ಬಾಧೆಯಿಂದ ನೊಂದೆನು ಮಲಿನ ಮೋಹದೊಳಗೆ ನಿಂದೆನು ತ್ಯಾಜ್ಯವಾದ ಫಲಗಳೆಲ್ಲ ತಂದು ತಿಂದೆನು ಗಾಳಿಗೆ ಸಿಲುಕಿದೆಲೆಯ ತೆರದಿ ಹೊರಲುಗಾಣೆನೀ ದೇಹ ಪಾದ ನೆಳಲ ಬಯಸಿ ಬೇಡಿಕೊಳುವೆ 2 ಗಣನೆಯಿಲ್ಲವಾದ ಮರಗಳು ಇರಲು ಪುರು ತನುವಿನಂತೆ ಮುಖ್ಯವಾವದು ಅನುಭವಾತ್ಮ ಸುಖವನೀವದು ಆದರೇನು ಕನಸಿನಂತೆ ಕಾತಿರುವುದು ಪಾದ ವನಜಯುಗವನಿತ್ತು ಎನ್ನ ಮನದೊಳದಯವಾಗು ಮಾರಜನಕ ಮೂಡಲದ್ರಿವಾಸ3
--------------
ತುಪಾಕಿ ವೆಂಕಟರಮಣಾಚಾರ್ಯ
ಈ ಜೀವನಿಂದು ಫಲವೇನು |ರಾಜೀವಲೋಚನನ ಮರೆದಿಹ ತನುವಿನಲಿ ಪ.ಅರುಣನುದಯಲೆದ್ದು ಹರಿಸ್ಮರಣೆಯ ಮಾಡಿ |ಗುರು - ಹಿರಿಯರ ಚರಣಕಮಲಕೆರಗಿ ||ಪರಮಶುಚಿಯಾಗಿ ನದಿಯಲಿ ಮಿಂದು ರವಿಗಘ್ಯ |ವೆರೆಯದೆ ಮರೆಹ ಈ ಪಾಪಿತನುವಿನಲಿ 1ಹೊನ್ನಗಿಂಡಿಯಲಿ ಅಗ್ರೋದಕವನೆ ತಂದು |ಚೆನ್ನಾಗಿ ಹರಿಗೆ ಅಭಿಷೇಕ ಮಾಡಿ ||ರನ್ನದುಡಿಗೆಯುಡಿಸಿ ರತುನಗಳಳವಡಿಸಿ |ಕಣ್ಣಿರಲು ನೋಡಲರಿಯದ ಪಾಪಿತನುವಿನಲಿ 2ನಳನಳಿಸುವ ನಾನಾ ಪುಷ್ಪಗಳು ಶ್ರೀತುಳಸಿ |ಹೊಳೆವ ಕಿರೀಟ ಕೊರಳಲಿ ಪದಕ ||ನಳಿನಾಕ್ಷನಿಗೆ ಕರ್ಪುರದಾರತಿಯನೆತ್ತಿ |ಕಳೆಯ ನೋಡಲರಿಯದ ಪಾಪಿತನುವಿನಲಿ 3ವರಭಕ್ಷ್ಯಗಳುಪರಮಾನ್ನ ಶಾಲ್ಯನ್ನವು |ವರವಾದ ಮಧುಘೃತ ಕ್ಷೀರವನ್ನು ||ಸಿರಿನಾರಾಯಣಗೆ ಸಮರ್ಪಣೆ ಮಾಡಿ ತಾ - |ಎರಡು ಕೈಮುಗಿಯದ ಪಾಪಿತನುವಿನಲಿ 4ಉರಗಾದ್ರಿ - ಸ್ವಾಮಿಪುಷ್ಕರಣಿಗಳು ಮೊದಲಾದ |ಪರಿಪರಿ ತೀರ್ಥಗಳನೆಲ್ಲ ಮಿಂದು ||ತಿರುವೆಂಗಳಪ್ಪ ಶ್ರೀ ಪುರಂದರವಿಠಲನ |ಚರಣವನು ಭಜಿಸಲಯದ ಪಾಪಿತನುವಿನಲಿ 5
--------------
ಪುರಂದರದಾಸರು
ಈ ಶರೀರದ ಭ್ರಾಂತಿ ಇನ್ನೇಕೆ ಮನವೆ |ವಾಸುದೇವನ ನೆನೆದು ಸುಖಿಯಾಗು ಮನವೆ ಪ.ಕಾಲು ಜವಗುಂದಿದುವು ದೃಷ್ಟಿಗಳು ಹಿಂಗಿದುವು |ಮೇಲೆ ಜವ್ವನ ಹೋಗಿ ಜರೆಯಾದಗಿತು ||ಕಾಲ - ಕರ್ಮಾದಿಗಳು ಕೂಡಿದಾಕ್ಷಣದಲಿ |ಬೀಳುವೀ ತನುವಿನೊಳ್ ಇನ್ನಾಸೆಯ ಮನವೆ 1ದಂತಗಳು ಸಡಿಲಿದುವು ಧಾತುಗಳು ಕುಂದಿದುವು |ಕಾಂತೆಯರುಜರಿದು ಓಕರಿಸುವರು ||ಭ್ರಾಂತಿ ಇನ್ನೇಕೆ ಈ ತನುವು ಬೀಳದ ಮುನ್ನ |ಸಂತತ ಶ್ರೀ ಹರಿಯ ನೆನೆ ಕಾಣೊ ಮನವೆ 2ನೀರಬೊಬ್ಬುಳಿಯಂತೆ ನಿತ್ಯವಲ್ಲ ಈ ದೇಹ |ಸಾರುತಿದೆ ನೀ ಮೆಚ್ಚಿ ಮರುಳಾಗದೆ ||ಶ್ರೀರಮಣ ಪುರಂದರವಿಠಲನ ನೆನೆ ನೆನೆದು |ಸೂರೆಗೊಳ್ಳಿರೊ ಸ್ವರ್ಗ ಸುಮ್ಮನಿರಬೇಡಿ 3
--------------
ಪುರಂದರದಾಸರು
ತನುವಿನೊಳಗೆ ಅನುದಿನವಿದ್ದುಎನಗೊಂದು ಮಾತ ಪೇಳದೆ ಪೋದೆ ಹಂಸಾ ಪ.ಜಾಳಾಂದ್ರವೆಂಬದು ಒಂಬತ್ತು ಬಾಗಿಲ ಮನೆರೂವಾರವೆಂಬ ಒಂಬತ್ತು ಬಾಗಿಲ ದಾಟಿಗಾಳಿ ತಂಪಿನೊಳಿದ್ದು ತಾನು ಹಾರಿ ಪೋಪಾಗಕಾಯಕೆ ಹೇಳದೆ ಹೋಯಿತು ಒಂದು ಮಾತ 1ಹಳ್ಳ ಕೊಳ್ಳಗಳಲಿ ತಂಪಿನ ತಡಿಯಲಿಬಳ್ಳಿ ಕಾಯಿಕಾತು ಫಲವಾಯಿತುಒಳ್ಳೆಯ ತನಿಹಣ್ಣು ಉದುರಿ ತಾ ಪೋಪಾಗಬಳ್ಳಿಗೆ ಹೇಳದೆ ಹೋಯಿತು ಒಂದು ಮಾತ 2ಗಟ್ಟಿ - ಬೆಟ್ಟಗಳಲಿ ಶಾಖೆಯ ತುದಿಯಲಿಕಟ್ಟಿತು ಜೇನನು ಸುಖಕಾಗಿಗಟ್ಟಿ ತುಪ್ಪವನುಂಡು ನೊಣ ಹಾರಿ ಪೋಪಾಗಹಿಪ್ಪೆಗೆ ಹೇಳದೆ ಹೋಯಿತು ಒಂದು ಮಾತ 3ರವಿವಿಸ್ತಾರವ ಹಂಸ ಕೇಳಿದನೈ ನಿನ್ನಪೆಸರ ಪೇಳಲೆನ್ನಳವಲ್ಲರಸ ವಸ್ತುವನುಂಡು ಜ್ಯೋತಿ ತಾ ಪೋಪಾಗಪಣತಿಗೆ ಪೇಳದೆ ಹೋಯಿತು ಒಂದು ಮಾತು 4ಸಿರಿಪುರಂದರ ವಿಠಲನ ಮಾತು ಪುಸಿಯಲ್ಲಹಣೆಯ ಬರೆಹವ ಮೀರಲು ಬಲ್ಲುದೆ ?ಸರಸವನಾಣೆಯ ಮುತ್ತು ಆಗಲಿ ತಾ ಪೋಪಾಗತಿಪ್ಪಿಗೆ ಪೇಳಿದಾಯಿತು ಒಂದು ಮಾತ 5
--------------
ಪುರಂದರದಾಸರು
ತುಂಬಿಕೊಂಡಿರುತಿಹನೊಬ್ಬ ಜಗವಿಂಬಿಲ್ಲದೆಲ್ಲವ ಸಕಲವೆಲ್ಲವತುಂಬಿಪಆರರೊಳಗೆತುಂಬಿಅತ್ತತ್ತಲುತುಂಬಿಮೂರು ಠಾವಲಿತುಂಬಿಮೂರುಮನೆತುಂಬಿಬೇರೆ ಮೇಲಕೆತುಂಬಿಬೆಳಗಿನೊಳಗೆತುಂಬಿಸಾರಾಮೃತದಿತುಂಬಿಸಾಕ್ಷಾತ್ಕಾರದಲಿತುಂಬಿ1ಮನಸಿನೊಳಗೆತುಂಬಿಮನವರ್ತನದಿತುಂಬಿತನುವಿನಲ್ಲಿಯೆತುಂಬಿಸರ್ವಾಯವತುಂಬಿತನುತ್ರಯದಲಿತುಂಬಿತನುವಿನಲ್ಲಿಯೆತುಂಬಿಘನಸುಖದಿತುಂಬಿ2ಇಳೆಯ ಒಳಗೆತುಂಬಿಇಹಜಂಗಮದಿತುಂಬಿಬಲು ಸ್ಥಾವರದಿತುಂಬಿಬಯಲಿನಲ್ಲಿಯೆತುಂಬಿಕೆಳಗೆ ನಡುವೆತುಂಬಿಕೇವಲ ಕೊನೆಯತುಂಬಿಚಲಿಸದಂದದಿತುಂಬಿಚಿದಾನಂದನೇತುಂಬಿ3
--------------
ಚಿದಾನಂದ ಅವಧೂತರು
ಪಕ್ಷಿವಾಹನ ಶ್ರೀ ವಾಮನ್ನ ಅಂತ- |ರಿಕ್ಷಾಳಕ ಪ್ರಿಯ ಕಾಯೆನ್ನ ||ಋಕ್ಷಪನಿಭಮಾಯಾಕಕ್ಷಾಜಿÕ ಹರೆ ಜಗ- |ತ್ಕುಕ್ಷೆ ನಂಬಿದೆನೆನ್ನುಪೇಕ್ಷೆ ಮಾಡಲಿ ಬೇಡ ಪಅಂಜಿನಾಧರಾ ಧರಧಾಮಹೇ ನಿ |ರಂಜನ ವನಮಾಲಿ ಭೂಮಾ ||ಅಂಜಲಿಪುಟದಿಂದಲಂಜಿ ಬೇಡುವೆ ಬಲ |ಭಂಜನಾನುಜವಿತತತ್ರಿಜಗ||ಮಂಜುಳಾಂಗನೇ ವೀತ ಭೂಮುಖ |ಕಂಜನಾಭನೆ ತರುಣಿ ಶಿವನೃಪ||ಕುಂಜರವರದಕರವಪಿಡಿಯೊ 1ಪಾಠೀಣಕಮಠವರಾಹ| ನೀಚಹಾಟಕಾರಿವಟುಭೂಭುಜ ಹಾ ||ಖೇಟಾಹಬುದ್ಧಕಲ್ಕಿ ಘೋಟಕಾನನವಿಶ್ವ|ನಾಟಕ ಭೈಷ್ಮೀ ಮುಖ ವಧೂಟನಿಯರವಲ್ಲಭ||ಕೋಟಿಭಾಸ್ಕರತೇಜನಿನ್ನಯ |ಆಟ ತಿಳಿಯಲುಕೋಕನದಶುಭ||ಪೀಠ ಲಕುಮಿ ಅಶಕ್ತರಹರು ಕಿ |ರೀಟಸಖನಿನ್ನವರೊಳಗಿಡೊ 2ಶಂತನುವಿನ ವಂಶ ರಕ್ಷ | ಮಾತುಲಾಂತಕ ಜಲಜದಳಾಕ್ಷ ||ಮಂಥಾರಿ ಶಿಶುಪಾಲ ದಂತವಕ್ರ ಮುರಾದಿ |ಹಂತ ದಾನವರ ನಿಕೃಂತನಾಹಿಮದ ಹಾ ||ನಂತಧುನಿಪಿತ ವೇದ ವೇದ್ಯ ಅ |ನಂತ ಮಹಿಮನೆ ಅತ್ರಿ ಸುತ ನಿ- ||ಶ್ಚಿಂತ ಶ್ರೀ ಪ್ರಾಣೇಶ ವಿಠಲ ದು- |ರಂತ ಶಕ್ತಿಭವಾಬ್ಧಿಘಟಜಾ 3
--------------
ಪ್ರಾಣೇಶದಾಸರು
ಭಾಗೀರಥಿ ದೇವಿ ನಮೋ ||ಭಾಗೀರಥಿ ದೇವಿ ಭಯ ನಿವಾರಣ ಗಂಗೆ |ಸಾಗರನರ್ಧಂಗೆ ಸುತರಂಗೆ ಪವಾಮನ ವಾಮ ಪಾದಾಂಗುಷ್ಟನಖಸೋಕಿ |ಆ ಮಹ ಬ್ರಹ್ಮಾಂಡ ಸೀಳಾಲೂ | ಭಾಗೀ..... ||ತಾಮರಸಜ ಲೋಕಕ್ಕಿಳಿದು ಮಜ್ಜನವಾಗಿ |ಸ್ವಾಮಿ ಪಾದೋದಕಳೆನಿಸಿದೆ || ಭಾಗೀ... 1ಹರಿಪಾದ ಜಲ ದೊರಕುವದು ದುರ್ಲಭವೆಂದು |ಹರ ಪ್ರಾರ್ಥಿಸಲು ಜಡೆಯೊಳು ನಿಂದೆ | ಭಾಗೀ.... ||ಮೊರೆಯಿಡೆ ದೇವತೆಗಳಿಗೆ ವೊಲಿದು ಬಂದು |ಸುರನದಿಯೆಂದು ಕರೆಸಿಕೊಂಡೇ | ಭಾಗೀ..... 2ಚನ್ನಾಗಿ ಸ್ವರ್ಗದೊಳಗೆ ನಿಂತ ಕಾರಣ |ಸ್ವರ್ನದಿಯೆಂದು ಕರೆಸಿದೆವ್ವ | ಭಾಗೀ.... ||ಉನ್ನತಧೃವಮಂಡಲಕ್ಕೆ ಪೋಗಿ ಮುಟ್ಟಿದೆ |ನಿನ್ನಾಕಾಶ ಗಂಗೆ ಎಂಬೋರೆ | ಭಾಗೀ..... 3ಭಗೀರಥ ಬಹುಕಾಲ ಪ್ರಾರ್ಥಿಸೆ ಕರುಣದಿಂ |ಜಿಗಳಿ ಹೇಮಾದ್ರಿಗೆ ನಡೆತಂದೆ | ಭಾಗೀ.... ||ಸೊಗಸಿಲಿಂ ತ್ರಿಪಥಾಗಿ ದಕ್ಷಿಣದಲಿ ಬಂದು |ಸಗರರಾಯನ ಉದ್ಧರಿಸಿದೇ | ಭಾಗೀ..... 4ತವಕದಿಂದಲ್ಲಿ ಜಹ್ನು ಋಷಿಯಲ್ಲಿ ಜನಿಸಿ ಜಾ |ಹ್ನವಿಯೆಂದು ಸ್ತುತಿಸೋರೆ ಸುರರೆಲ್ಲ | ಭಾಗೀ.... ||ಭುವನದೊಳೆಲ್ಲರು ಪುನೀತರಾಗೋದು ಸಿದ್ಧ |ತವಪಾದಸ್ಮøತಿಮಾತ್ರದಿಂದಲೀ | ಭಾಗೀ...... 5ನಂದಿನಿ ನಳಿನಿ ಸೀತಾ ಮಾಲತೀ ಮಲಹ |ಮಂದರಧರ ಪದಿ ಶ್ರೀಗಂಗೆ | ಭಾಗೀ...... ||ಸುಂದರ ತ್ರಿಪಥ ಭಾಗೀರಥಿ ಭೋಗವತಿ |ವಂದೆಜಾಹ್ನವಿತ್ರಿದಶೇಶ್ವರಿ | ಭಾಗೀ.... 6ವಸುಗಳ ಮಾತು ಲಾಲಿಸಿ ರಾಯನಲಿ ಬಂದು |ಬಸುರಿಂದ ಪಡೆದು ಉದ್ಧರಿಸಿದೆ | ಭಾಗೀ.... |ಅಸಹ್ಯ ಕರ್ಮವ್ಯಾಕೆಂದೆನಲು ಕುಮಾರನ |ಕೊಸರುತ ನಿಜರೂಪವೈದಿದೇ | ಭಾಗೀ.... 7ನಮೊ ನಮೊ ಶುಭಗಾತ್ರೆ ನಮೊ ನಮೋ ಸುಚರಿತ್ರೆ |ನಮೊ ನಮೊ ಶಂತನುವಿನ ಮಿತ್ರೆ | ಭಾಗೀ..... ||ಶಮದಮಾದಿಗಳಿತ್ತುಪೊರೆಅನುದಿನದಲ್ಲಿ |ಅಮರವಿನುತಪಾದಪಂಕಜೆ | ಭಾಗೀ.....8ಕಾಣಲು ಪಾಪಹರವು ಮುಕ್ತಿ ಅಹುದು |ಸ್ನಾನದ ಫಲವು ಬಲ್ಲವರಿಲ್ಲ | ಭಾಗೀ...... ||ಕ್ಷೋಣಿಯ ಮ್ಯಾಲುಳ್ಳ ಸರಿದ್ವರಳೆನಿಸುವೆ |ಪ್ರಾಣೇಶ ವಿಠಲನ್ನ ದಯದಿಂದ | ಭಾಗೀ..... 9
--------------
ಪ್ರಾಣೇಶದಾಸರು
ಮನವೆನ್ನ ಮಾತ ಕೇಳದು - ಮಂದಜ್ಞಾನದಿ |ತನುವಿನಾಸೆಯ ಬಿಡಲೊಲ್ಲದು ಪವನಜನಾಭನೆ ನಿನ್ನ ನಾಮ ಸಾಸಿರವ |ನೆನೆಯದೆ ಕಂಡಕಡೆಗೆ ಎರಗುತಲಿದೆ ಅ.ಪದೇಹ ಸಂಬಂಧಿಗಳಾದವರೈವರು |ಮೋಹಪಾಶದಿಕಟ್ಟಿಬಿಗಿದಿಹರೈ ||ಕಾಯಅನಿತ್ಯವೆಂಬುದನರಿಯದೆ |ಮಾಯಾಪ್ರಪಂಚದಿಂದಲಿ ಬದ್ಧನಾಗಿಹೆ1ಸಾಧುಸಜ್ಜನರ ಸಂಗವ ಮಾಡಿ ಪರಗತಿ-|ಗಾಧಾರವನು ಮಾಡಲೊಲ್ಲದಯ್ಯ ||ಕ್ರೋಧಕುಹಕದುಷ್ಟರೊಡನಾಡಿ ಕಾಲನ |ಬಾಧೆಗೆ ಒಳಗಾಗುವಂತೆ ಮಾಡುತಲಿದೆ 2ಮದಗಜ ಮೈಯ ಮರೆತು ಮುಂದುಗಾಣದೆ |ಕದುವಿನೊಳಗೆ ಬಿದ್ದಂತಾದೆನಯ್ಯ ||ಹೃದಯ ಕಮಲದಲಿ ನಿಂತ ರಕ್ಷಿಸೋ ಎನ್ನ |ಪದುಮಾಕ್ಷ ವರದ ಶ್ರೀಪುರಂದರವಿಠಲ3
--------------
ಪುರಂದರದಾಸರು
ಶ್ರೀ ಗುರುವಿನ ನೆನದು ಸುಖಿಯಾಗು ಮನವೇ ನೀನುದುರ್ಗುಣ ಪಾಪಹರಿದು ಛೇದಿಸು ಜನನವಪನಾನಾ ಜನ್ಮದಿ ತೊಳಲಿ ನೀ ಬಂದುನರಮನುಷ ಜನ್ಮವ ತಾಳಿ ಮರತ ಕಂಡ್ಯಾ ತನುವಿನಲಿಧ್ಯಾನಿಸುಸದಾಕಾಲದಿ ದುರ್ಜನ ಬುದ್ಧಿಮಾಣಿಸು ಪರಂಜ್ಯೋತಿಯನೆನೆದು ನೆನೆದು ದೃಷ್ಟಿಸಿ ಕಾಣುಗುಣಜÕನ ಕರುಣಪ್ರಾಜÕನ ಜ್ಞಾನ ಸಿದ್ಧನ ಗುರುವ ಸಿದ್ಧನಮಾನಸ ರೂಪನ ಮೂಜಗ ವ್ಯಾಪನದೀನರನಾಥನ ವಾಙ್ಮಯಾತೀತನ1ಸುಜನರ ಸಂಗವ ಮಾಡದೆ ಸಾಯುತಲಿಹೆಕುಜನರ ಸಂಗದಿಂದ ಕರುಣವೆಂಬುದು ಮರೆತೆತ್ಯಜಿಪುದು ನಿನಗೆ ನೀತಿಯೆ ಥೂ ನಿನಗೆ ಬುದ್ಧಿಯೇಭಜಿಸು ಪರಾತ್ಪರವ ನೆನೆದು ದೃಷ್ಟಿಸು ಮನವೇತ್ರಿಜಗವಂದ್ಯನ ತ್ರಿಗುಣಕೆ ಮಾನ್ಯನೆಸುಜನವ್ರಾತನ ಸುಪ್ರಭಾತೀತನಭಜಕರ ಭಾಗ್ಯನ ಬಹುಗುಣ ಯೋಗ್ಯನಸರ್ವಬೇಧಜÕನ ನಯಸರ್ವಜÕನ2ಇರುವೆ ಮೊದಲುಗಜಕಡೆಯಾದ ಎಂಭತ್ತನಾಲ್ಕುತಿರುವಿನ ಲಕ್ಷಜೀವದಿ ಜನಿಸಿ ಜನಿಸಿ ಪುಟ್ಟುವಪರಿಯನೆಲ್ಲವ ಛೇದಿಪ ಉಪಾಯವ ತಿಳಿವಚಿರಕಾಲ ನೆನೆಯೋ ಕಂಡ್ಯಾ ಚಿದಾನಂದಾವಧೂತನಪರಮಪರೇಶನಪಂಡಿತಪುರುಷನ ಶರಣು ಜನಾಂಗನ ಸುಗುಣ ಕೃಪಾಂಗನಕರುಣಾ ಕಟಾಕ್ಷನ ಕಾರಣ ಮೋಕ್ಷನಮರಣ ವಿದೂರನ ಮುನಿಯತಿ ವರನ3
--------------
ಚಿದಾನಂದ ಅವಧೂತರು