ಒಟ್ಟು 177 ಕಡೆಗಳಲ್ಲಿ , 49 ದಾಸರು , 166 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸರಾಗಿರೊ ವೈಷ್ಣವ ದಾಸರಾಗಿರೊ ದಾಸರಾಗಿ ಬಯಲಾಸೆಯ ನೀಗಿ ರ- ಮೇಶನ ಗುಣವಾರಾಶಿಯೊಳಿರಿಸುವ ಪ. ಸುಂದರ ಮಾನಾನಂದತೀರ್ಥಮತ ಸಾಂದ್ರ ಸುಖಾಂಬುಧಿಮಿಂದ ಮಹಾತ್ಮರ 1 ದಿವ್ಯಲೋಕಜನ ಭವ್ಯೋಭಯವಿಧ ಕಾವ್ಯರಚನ ಲಾತವ್ಯಯತೀಂದ್ರರ 2 ಸೀತಾಪತಿ ರಘುನಾಥನ ಮನದೊಳ- ಗಾತು ಭಜಿಪ ಗಣನಾಥ ಜನಕನ 3 ಶ್ರೀ ಮಹೇಶ ವಟು ವಾಮನ ಪದಯುಗ ಸಾಮಜವಾಹನ 4 ಕಾಕರಟನದೊಳ ಭೀಕರ ಮತವ ನಿ- ರಾಕರಿಸಿರುವ ಸುಧಾಕರ ಮೂರ್ತಿಯ 5 ತಂತ್ರ ದೀಪಿಕಾ ಯಂತ್ರವ ರಚಿಸಿದ ಮಂತ್ರಾಲಯವರ ಮಂತ್ರದೇವತೆಯ 6 ಗೋಪಿನಾಥನೆ ಭೂಪನೆಂದು ಸಂ- ತಾಪವ ಬಿಡಿಸುವ ಶ್ರೀಪಾದರ ಪದ 7 ಮಂದಕಲಿಯ ಕಾಲಿಂದಲೊರಿಸಿದ ಪು- ರಂದರದಾಸರ ಹೊಂದಿ ಹರಿಯ ನಿಜ8 ಸುಜನ ಹೃದಂಬುಜ ಸುಖಕರ ದಿನಮಣಿ ವಿಜಯರಾಜ ಪದ ಭಜನೆಯ ಮಾಡುತ 9 ಭಂಗುರ ಭವಭಯ ಭಂಗದ ಸುಗುಣ ತರಂಗನ ಒಲಿಸಿದ ಮಂಗಳ ಮಹಿಮರ 10 ಹರಿಕಥಾಮೃತದ ತೆರೆಗಳೊಳಾಡುವ ಪರತರಸಾರವ ಸುರಿದ ಮಹಾತ್ಮರ 11 ಸಿಡುಕರ ಸಂಸ್ಕøತಿ ಕಡಲೊಳು ಮುಳುಗಲು ಬಿಡದಲೆ ಕೈಪಿಡಿದೊಡೆಯನ ತೋರ್ಪರ 12 ಅರಿಷಡ್ವರ್ಗವ ತರಿದು ಬಿಸುಟು ಶ್ರೀ- ವರನ ಕೃಪಾರಸ ಸುರಿಸಿದ ಧನ್ಯರ 13 ಮೂಕನ ವಾಗ್ಮಿಯ ಮಾಡಿ ಮುರಾರಿಗೆ ಸಾಕ ಕೊಟ್ಟಿ ದೀನಾಕರದಾಸರ 14 ಮಾತಿಗೆ ಕಂಸಾರಾತಿನಲಿಯೆ ಜಗ ನ್ನಾಥರೆಂ¨ ವಿಖ್ಯಾತಿ ಪಡೆದವರ 15 ತಾಪತ್ರಯಗಳ ತಪ್ಪಿಸಿ ವೆಂಕಟ ಭೂಪನ ಸದಯಾರೋಪಗೈದವರು 16
--------------
ತುಪಾಕಿ ವೆಂಕಟರಮಣಾಚಾರ್ಯ
ದೂರಮಾಡು ದೂರಮಾಡು ದುರ್ಜನ ನೆರೆಯ ಸಾರಸಾಕ್ಷನೆ ಬೇಗ ದುಷ್ಟಸಂಗತಿಯ ಪ ಸೇಂದಿ ಸೆರೆ ಕುಡಿದು ಮನಬಂದಂತೆ ಕುಣದಾಡಿ ನಿಂದಿಸಿ ಕಂಡವರಿಂ ತಿಂದು ಲತ್ತೆಯನು ಮಂದಿಯೋಳ್ಮುಖದೋರ್ವ ಹಂದಿಮನುಜರ ದರ್ಶ ನೆಂದೆಂದು ಬೇಡೆನಗೆ ಮಂದರಾದ್ರಿನಿಲಯ 1 ನೂತನದ ಮಾತಾಡಿ ಖ್ಯಾತಿಯಿಂ ತೋರ್ಪಡಿಸಿ ಮಾತುಮಾತಿಗೆ ವಂಚಿಸಾತುರಕೆ ಪರರ ಘಾತಗೈಯುವ ಮಹಪಾತಕರ ಸಂಗ ಮಮ ದಾತ ಜಗನ್ನಾಥ 2 ಧ್ಯಾನದಾಸರ ಕಂಡು ಜ್ಞಾನವಿಲ್ಲದೆ ತುಸು ಹೀನಮಾತುಗಳಾಡಿ ಏನುಕಾಣದಲೆ ಶ್ವಾನನಂದದಿ ಚರಿಪ ಮಾನಹೀನರ ನೆರಳು ಏನಿರಲುಬೇಡ ಮಮಪ್ರಾಣ ಶ್ರೀರಾಮ 3
--------------
ರಾಮದಾಸರು
ದೃಷ್ಟಾಂತವಾಗಿದೆಯೈ ಪ ಕೃಷ್ಣಾ ನೀಮಾಡಿರ್ಪ ಸೃಷ್ಟ್ಯಾದಿಗಳೆಲ್ಲ ಅ.ಪ ಜನರು ನಡೆವದೀಗ ನೋಡಲ್ ಮನಕೇ ಬಂದಂತೆ ಕಾರ್ಯಂಗಳೊಡಗೂಡಲ್ 1 ಧೃಡವಾಗಿಯೇ ತೋರ್ಪುದು ನಡೆನುಡಿ ಮೊದಲಾದ ನರರು ಮಾಳ್ಪುದೆಲ್ಲ 2 ಚತುರಾವಸ್ಥೆಗಳಿಂದಲಿ ಹಿತವೇಬೇಕೆಂದರು ಅಹಿತವಾಗುತಿರುವುದು 3 ತನ್ನಿಂತಾನೆ ನಡೆವದು ಭಿನ್ನಾಭಿನ್ನವಾಗಿ ಭೇದ ಪ್ರಪಂಚವು 4 ಗುರುರಾಮವಿಠಲಾ ನೀ ಮಾಡಿರ್ಪ ಕಷ್ಟಗಳು 5
--------------
ಗುರುರಾಮವಿಠಲ
ನಾ ಧನ್ಯ ನಾ ಧನ್ಯ ನಾ ಧನ್ಯನಿಂದು ಪ ಹೇ ದಯಾನಿಧೇ ನಿನ್ನ ಪಾದಾನುಗ್ರಹದಿಂದ ಅ.ಪ. ಏತರವ ನಾನೆಂದುದಾಸೀನ ಮಾಡದೆಲೆ ಲೇಸು ಮಮತೆಯ ಕೋರಿ ಈ ಸ್ಥಳಕೆ ಬಂದಿ ಆಸುರೀ ಭಾವವನು ನಾಶಗೊಳಿಸಿ ಎನ್ನ ನೀ ಸಲಹಿದೆಯೋ ಜಗದೀಶ ನಿರುಪಮ ಕರುಣಿ 1 ಸತ್ವಗುಣ ಪ್ರಚುರರಲಿ ನೀ ತೋರುವುದಕ್ಕಿಂತ ಅತ್ಯಧಿಕ ವಾತ್ಸಲ್ಯವೆನ್ನೊಳಗೆ ತೋರ್ಪೆ ಕರ್ತೃ ನೀನೆಂಬ ತತ್ವ ಮನಸಿಗೆ ತಂದೆ ಭಕ್ತವಾತ್ಸಲ್ಯಕ್ಕಿದು ಕುರುಹಲ್ಲವೇ ದೇವ 2 ಸುರಲೋಕಕ್ಕಿಂತಧಿಕ ಪದವಿ ಎನಗಿತ್ತೆ ನಿರುತಲೆನ್ನಯ ಬೆನ್ನು ಕಾಯುತಲಿರುವೆ ಕರುಣಿಗೆಣೆಗಾಣೆ ಕರಿಗಿರೀಶನೇ ನಿನ್ನ ಸ್ಮರಣೆಯನನವರತ ಇರುವಂತೆ ಕೃಪೆಮಾಡೋ 3
--------------
ವರಾವಾಣಿರಾಮರಾಯದಾಸರು
ನಾರದ ಪ್ರಿಯ ಕೃಷ್ಣ ನರಾಕಾರ ಜಾರ ಚೋರ ಶೂರ ಧೀರಪ ಘೋರತರವಾದ ಸಂಸಾರ ಸುಖ ದುಃಖಗಳ ಮೀರಿ ಪೊರೆವಂಥ ಬಲು ಭಾರಕರ್ತನೇ ಸೂರಿ ಜನರನು ಸದಾ ಸಾರಸಾಕ್ಷ ಬಿಡದಲೆ ಪಾರುಗಾಣಿಸುವ ದೇವಾ 1 ಮಂದಮತಿಯನಳಿದು ಚಂದದಿ ಸುಮಾರ್ಗವನ್ನು ನಂದದಿಂದ ತೋರ್ಪ ಮುಚುಕುಂದ ವಂದ್ಯನೆ ಎಂದಿಗೆಮ್ಮ ಗತಿಯೆಂದು ಹೊಂದಿ ಬೇಡ್ವ ಭಕುತರ ವÀಂದಿಸುವರ ಭವಬಂಧನ ಬಿಡಿಸುವ ದೇವಾ2 ದಾಶರಥೆ ಎನ್ನ ಕ್ಷೇಶ ನಾಶ ಮಾಡು ದಯದಿ ದಿ ನೇಶ ಶತಕೋಟಿ ಭಾಸ ಸಂಕಾಶ ಶ್ರೀಶ ವಾಸುದೇವ 3
--------------
ಜಗನ್ನಾಥದಾಸರು
ನಿತ್ಯ ನಿರುಪಮ ಚಿದಾನಂದ ಕರುಣಾಬ್ಧಿ ನೀನೆ ದೊರಕೆ ನಿಲುಕೆ ಅಪಮಂಗಳನೆ ಮಂಗಳವನಿತ್ತೆ ಮನಸಿಗೆ ನೀನು ಅಂಗ ಮಂಗಳವಾುತುಹಿಂಗಿದವು ದುರಿತಗಳು ಸಂಗವಿದ್ದರು ಜಡದ ತೊಂಗವವ ಮನ ಮೀರಿತುನುಂಗುತಿದೆ ದೋಷಗಳ ಬಂದಡೊಡಬನ ತೆರದಿ ಭಂಗವೆಂಬುದು ಹೋುತುಅಂಗ ಲಿಂಗದ ಕಾಂತಿ ಹೊಂಗಿ ಹೊರಹೊಮ್ಮುತಿದೆ ರಂಗ ನಿನ್ನೊಲವಾುತು ುನಿತು 1ಹೊನ್ನಿನೊಳಗಿದ್ದ ಮಲಿನವನಗ್ನಿ ಕಳಚಿದರೆ ಮುನ್ನಿನಂದದಿ ಮಲಿನವೆಹೊನ್ನಾದ ಕಬ್ಬಿನವು ಕಬ್ಬಿನದ ಸಂಗದಲಿುನ್ನು ಕಬ್ಬಿನ ಭಾವವೆಬೆಣ್ಣೆ ಕ್ಷೀರದಿ ಬಂದು ಘೃತವಾದ ಬಳಿಕ ತಾ ಬೆಣ್ಣೆಯಲ್ಲದೆ ಕ್ಷೀರವೆನಿನ್ನ ಕೃಪೆುಂದ ಮಂಗಳನಾಮವನು ಸ್ಮರಿಸೆ ನಿನ್ನವಗೆ ದೋಷ ಬಹವೆ ಇಹವೆ 2ಬಾಳೆಯನು ಬಿತ್ತಿ ಪ್ರತಿ ದಿವಸ ನೋಡಿದಡಲ್ಲಿ ನೀಳವಾಗಿಹುದು ಸುಳಿಯುಕಾಲ ಬಂದರೆ ಗೊನೆಯು ಹಾಯ್ದು ಫಲವಾಗಿರಲು ಮೇಲೊಮ್ಮೆಯುಂಟೆ ಯೆಲೆಯುಕಾಲ ಕರ್ಮಾಧೀನವಾಗಿರುವ ಸಂಸಾರ ಲೋಲ ಮನಸಿನ ವೃತ್ತಿಯುಜಾಲದಿಂದಿರಲಲ್ಲಿ ನಿನ್ನಂಘ್ರಿ ಸ್ಮರಣೆುಂಮೇಲುಂಟೆ ಕರ್ಮಗತಿಯು ಸ್ಥಿತಿಯು 3ವೃತ್ತಿ ಮಾಯಾಕಾರ್ಯ ಮಾಯೆ ನಿನ್ನಾಧೀನ ವೃತ್ತಿ ಮಾಯೆಯು ಕಲ್ಪಿತಸುತ್ತಿ ಸುಳಿಸುಳಿದಾಡಿ ಸತ್ಯದಂದದಿ ತೋರಿ ಮತ್ತೆ ನಿನ್ನೊಳಗರ್ಪಿತಚಿತ್ತು ತಾನೆ ನಾಮರೂಪಾದ ಬಗೆುಂದ ಚಿತ್ತು ಚಿತ್ತಾಹುದುಚಿತಸತ್ಯಸಂಧನು ನೀನು ಚಿತ್ತವನು ಬಿತ್ತರಿಸಿ ವೃತ್ತಿಯಾುತು ಬೆಳೆಯುತಾ ಇರುತಾ 4ಮನದ ಸಂಶಯ ಬಿಡದು ಶ್ರವಣಮನನಾದಿಗಳನನುದಿನವು ಮಾಡುತಿರಲುಮನಕೆ ಸಾಕ್ಷಿಕನಾದ ನೀನು ಘನಮಾಯೆಯನು ಮನಕೆ ಮರೆಮಾಡುತಿರಲುಚಿನುಮಯನೆ ಮಾಯೆಯನು ಕಡೆಗೆ ತೆಗೆಯಲು ಜ್ಞಾನ ಜನಿಸುವುದು ನೀನು ಕೊಡಲುಇನಕೋಟಿಸಂಕಾಶ ಇಭರಾಜದುರಿತಹರ ಎನಲು ನಿಜವಾಗುತಿರಲು ನಿಲಲು 5ತರಣಿಕಿರಣಗಳಿಂದ ಜನಿಸಿದಾ ಮೇಘಗಳು ತರಣಿಯನು ಮುಚ್ಚಲಳವೆತರಣಿ ತಾನೆನದಿವನು ಹರಹಿ ಹಿಂದಕೆ ತೆಗೆಯೆ ನೆರೆ ಹಿಂಗಿ ಹೋಗದಿಹವೆಪರಮಪುರುಷನು ನೀನು ಸ್ಮರಿಸಿ ಮಾಯೆಯ ಬೀಸಿ ತಿರುಗಿಸಲು ಮಾಯೆಗಿರವೆದುರಿತವಾಗಿರೆ ಜನಕೆ ನೆರೆ ಭಕ್ತಿಯನು ನೀನು ಕರುಣಿಸಲು ಮತ್ತೆ ಭವವೆ ಧ್ರುವವೆ 6ಅರಣಿುಂದುದುಭವಿಸಿದನಲ ಮುನ್ನಿನ ತೆರದ ಅರಣಿಯಾಗಿಯೆ ತೋರ್ಪನೆಅರೆದು ತಿಲವನು ತೆಗೆಯೆ ತೈಲವನು ತಿಲ ಬಳಿಕ ಇರುವದೆ ತೈಲದೊಡನೆಬೆರೆದು ಕರ್ಪುರವಗ್ನಿಯೊಡನಾಡಿ ಬೇರ್ಪಟ್ಟು ಮೆರೆವುದೆಂತಗ್ನಿಯೊಡನೆತಿರುಪತಿಯ ವೆಂಕಟನೆ ನಿನ್ನ ಚರಣದೊಳಿಟ್ಟ ಶರಣ ಮುನ್ನಿನ ಮನುಜನೆಯಹನೆ 7ಓಂ ಪುಣ್ಯ ಶ್ಲೋಕಾಯ ನಮಃ
--------------
ತಿಮ್ಮಪ್ಪದಾಸರು
ನಿಂದಾಸ್ತುತಿಗಳು ಎನ್ನ ಕೈಬಿಡುವೆಯೇನೋ ಪ ನಿನ್ನ ನಂಬಿದೆನಯ್ಯ ಭಕ್ತವತ್ಸಲನೆಂದು ಭಾರ ನಿನಗಿರೆ ಅ.ಪ ತಾಪಸಿಯಂತೆ ನಿನ್ನ ವಕ್ಷವನೊದ್ದು ತಾಪವನು ತೋರ್ಪಿದೆನೇನೋ ಗೋಪಿಯಂದದೆ ನಿನ್ನ ಒರಳಿಗೆ ಬಿಗಿದೆನೇ ಭೂಪ ಶಿಶುಪಾಲನಂದದೆ ಬೈದೆನೇ [ಚಾಪವಿಟ್ಟು] ಭೀಷ್ಮನಂದದೆ ಕಾದಿಪೆನೇನೋ ಶ್ರೀಪತಿ ನೀನೆನ್ನ ದೂರ ಮಾಡುವೆಯಲ್ಲ 1 ಜಾರಚೋರನು ನೀನೆಂದು ಯಶೋದಗೆ ದೂರು ಹೇಳದೆನೇ ಕೌರವನಂತೆ ಕಂಬಕೆ ಕಟ್ಟಿರೆಂದೆನೆ ಸಾರಿದೆನೇನೋ ಸತ್ರಾಜಿತನಂತೆ ಚಾರುರತ್ನವ ಕದ್ದ ಅಪರಾಧಿ ನೀನೆಂದು ಆ ರುಕ್ಮನಂತೆ ನಾರಿಚೋರನೆಂದೆನೆ 2 ಪುರುಹೂತನಂತೆ ನಾನು ಮಳೆಯಕರೆದು ಗಿರಿಯನ್ನು ಹೊರಿಸಿದೆನೇ ಧರಣಿಯ ಬಲಿ[ಯಿಂದ ಬೇಡುತಲಿರುವಾಗ ವರಮುನಿಯಂತೆ ಕಿಂಡಿಯ ಮುಚ್ಚಿದೆನೆ] ನರನಂತೆ ರಥವ ನಡಸೆಂದು ಹೇಳಿದೆನೇನೋ ಉರಗನಂತೆ ಕಟ್ಟಿದೆನೇ ಮಾಂಗಿರಿರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿನ್ನ ಹೊರತು ಅನ್ಯರನರಿಯೆನೂ ಶ್ರೀ ವಾಸುದೇವಾ ನಿನ್ನ ಹೊರತು ಅನ್ಯನರಿಯೆನೂ ನಿನ್ನ ಹೊರತು ಅನ್ಯರರಿಯೆ ಪನ್ನಗೇಂದ್ರವಾಸ ಹರಿಯೆ ಸನ್ನುತಾತ್ಮ ನಿಜವನಿತ್ತು ಪ್ರಸನ್ನ ಗುರುವರೇಂದ್ರ ದೇವಾ ಪ ಉರಗನ್ಹೆಡೆಯ ನೆರಳ ಸ್ಥಿರವೆಂದು ಕಪ್ಪೆಯು ನಿಂತ ತೆರದಿ ವಿಷಯದೊಳಗೆ ಬೆರದು ಬೆಂದೆನು ನಾ ದುರಿತ ದುಷ್ಟಗಣದಿ ಹರಿದೂ ಮೃತ್ಯುವನೆ ಮರೆದು ಅರಿವು ಮಾಯವಾಗಿರುವ ಎನ್ನಾ ಸ್ತರದ ಆತ್ಮಪ್ರಭೆಯ ಮರೆತು ಇರುವ ಎನ್ನ ಮೇಲೆ ನಿನ್ನ ಕರುಣವಿಟ್ಟು ಕಾಯ್ದ ದೇವಾ 1 ತತ್ವವಿಂಶತಿ ನಾಲ್ಕು ಕೂಡಿದಾ ಈ ದೇಹದಲಿ ಏ ಕತ್ವವಾಗಿ ಇದನೆ ನಂಬುತಾ ಮುನ್ನರಿಯದಲೆ ವಿ ಚಿತ್ರವಾಸ್ತುವನ್ನು ಮರೆತು ಸತ್ತು ಹುಟ್ಟಿತೊಳಲಿ ಬಳಲಿ ನಿತ್ಯ ನಿಜದೊಳಿಟ್ಟ ದೇವಾ 2 ಆದಿ ಮಧ್ಯ ಅಂತರಾಂತದಿ ತುಂಬಿರುವ ವಸ್ತು ನಾದ ಬಿಂದು ಸ್ವಪ್ರಕಾಶದಿ ಹೃದಯದಲಿ ತೋರ್ಪ ಭೇದಾತೀತ ನಿರ್ವಿಕಾರದಿ ಸುಬೋಧದಿ ಆದರದಿ ಶಾಂತಿ ನಿಜದಾದಿ ಸುಖವನಿತ್ತ ಗುರು ಪಾದಪದ್ಮ ನೆನೆದು ಪೂರ್ಣನಾದ ನಾರಾಯಣ ಪ್ರಭು 3
--------------
ಶಾಂತಿಬಾಯಿ
ನೀನೇ ಸಕಲವೆನಗೆ ಶ್ರೀರಾಮಚಂದ್ರ ನೀನೇ ದೊರೆಯರಸನೊ ಪ ಶ್ರೀನಿಧಿಯೆ ನಿನ್ನವರುಸತತ ಸಾನುರಾಗದ ಬಳಗವಹುದೈ ದೀನಜನಮಂದಾರ ನೇಹಂ ಶ್ರೀನಿಕೇತನ ಸತ್ಯಸಾರ ಅ.ಪ ತಾಮತಿಯು ಶ್ರೀ ಮನೋಹರ ಸಹಜರೆಲ್ಲ ಪ್ರೇಮ ಪಂಚ ರಾಮರೂಪವ ತೋರ್ಪನಾಡಿಯು 1 ಧನ್ಯ ಶರೀರವು ಮಾನ್ಯಗೆ ತಾಮಸದ ಸರೃಹವೂ ಕಣ್ಣನಿದ್ರೆಯು ಯೋಗಮುದ್ರೆಯು ಚಿಣ್ಣನ ಸಂಚರಂಗಳು ಸ್ವಾಮಿ ನಿನಗೆ ಪ್ರದಕ್ಷಿಣೆ 2 ಬಾಲನ ಮಾತುಗಳು ವೇದೊಕ್ತ ಸಶೀಲನ ಸ್ತೋತ್ರಗಳು ಕಾಲಂಕಾಲಗಳಲ್ಲಿ ಗೈಯುವ ಕಾರ್ಯಗಳು ಪರಮಾತ್ಮ ಸೇವೆಯು ಶ್ರೀಲತಾಂಗಿಯ ಲೋಲ ಧ್ಯಾನಿಪೆ ಪಾಲಿಸೈ ಜಾಜೀಶ ಕೇಶವ3
--------------
ಶಾಮಶರ್ಮರು
ನೀನೋಲಿದುದ್ದಕ್ಕೀ ಇಹ ಸೌಖ್ಯವೇಯಿನ್ನು ನಾನೊಲ್ಲೆ ನಾನೊಲ್ಲೆ ಸರ್ವೇಶಾ ಪ ನಿನ್ನನುರಾಗದಿ ಗತಿಯೆಂದು ನಂಬಿದ ಮಾನವನೊಡನೆ ನೀನಾಡುವದೆಲ್ಲಾ ಅ.ಪ ಷಡುರಸ ನಾನಾ ಸುಭೋಜನವ ಬಿಡಿಸಯ್ಯ ದಾನವ ಭಂಜನ ಒಡಲಿಗೋಸುಗ ನಿನ್ನನು ಸೇವಿಸುವೆ ತೋರಿಸದಿರೆ | ದಿವ್ಯಾಂಬರಗಳ ಉಡಿಸಿ ಸ್ವರ್ಣಾಭರಣಗಳ ತೊಡಿಸಿ | ಬರಿ ಮಾತಿನಲಿ ಮೊರೆ ಯಿಡುವೆನೊ ವಾಕ್ಕಾಯದಿಂದಲೀ 1 ಜನರು ಜನಪರಿಂದ ಮನ್ನಣೆ ಸ್ವಲ್ಪ | ಎನಗೆ ಹತ್ತದು ಕಾಣೊ ನಿನ್ನಾಣೆ || ಮನುಜನ ಸೈಸಿದವನ ಬಾಯೆನೆ ಬರೆವಾ | ವಿಭವ ದೊರೆಯದೆ | ಜನುಮದಲಿ ಬಂದದಕೆ ಮಹಾ ಸಾಧನವಿಧಾರಿ ತೋರಿಸಿ | ನಿನ್ನ ದಾಸನೆನಿಸದೆ | ನಿಸ್ಸಾರವೆಣಿಸಿ ತೋರ್ಪ ದೇವ ಸೈಸೈ 2 ಥಂಡ ಥsÀಂಡದಲೆನ್ನ ಮರುಗಿಸಿ | ಮಂಡಲದೊಳು ಪ್ರಚಂಡನೆನಿಸದಿರು | ಉಂಡ ಪರಾನ್ನಕೆ ದಂಡನೆ ಬಹಳಲ್ಲಿ | ತೊಂಡ ನಾನಯ್ಯ ಕರುಣಸಾಗರ | ಖಂಡ ಮತಿಯನು ಕೊಡದೆ ಮುಕ್ತರ | ಅಂಡ ಜಾಂಸಗ ವಿಜಯವಿಠ್ಠಲಾ 3
--------------
ವಿಜಯದಾಸ
ನೀರಜಗಂಧಿಯೇ ಹೇಳೇ ಸುಳಿದವರಾರಮ್ಮಾ | ನೀರಜ ಶರಪತಿ ಕಾಣಮ್ಮಾ ಪ ಅರುಣನಖಾಂಗುಲಿ ಗುಲ್ಫ ಗೆಜ್ಜೆ ಕಾ- ಪುರ ನೂಪುರದ ಲೊಪ್ಪುವನವದಾರಮ್ಮಾ | ಸರಸಿಯೊಳಗಪೊಕ್ಕು ತಮನಸುವ ಬಗೆದು | ವರಶೃತಿ ತಂದವ ಕಾಣಮ್ಮಾ 1 ಕಲಿ ದಶನಂದದಿ ಜಂಘೆ ಪೊಂಬಾಳೆಯ | ಪರಿಯ ತೊಡೆಯುಳ್ಳುವ ದಾರಮ್ಮಾ | ಶರಧಿ ಮಥಿಸುವಂದುಗಿರಿನಿಲ್ಲದಿರೆ ಬಂದು | ಭರದಿ ಬೆನ್ನೆವಿತ್ತವ ಕಾಣಮ್ಮ2 ಕಾಂಚನ ವಸನನಿರಿಯ ಮ್ಯಾಲ ವಡ್ಯಾಣ ಮಿಂಚಿನ ಘಂಟೆಯ ದಾರಮ್ಮಾ | ಕ್ಷಿತಿ ವಯ್ದದನುಜನ ಶೀಳಿ ವಿ | ರಂಚಿ ಗುಳಹಿದವ ಕಾಣಮ್ಮಾ3 ಕಿರಿಡೋಳ್ಳಾತ್ರಿವಳಿಯ ನವರತ್ನ ಪದಕಿಹ | ಉರಸಿನ ವತ್ಸನವ ದಾರಮ್ಮಾ | ನರಹರಿ ರೂಪದಿ ಹಿರಣ್ಯಕನನು ಕೊಂದು | ಶರಣನ ಕಾಯ್ದವ ಕಾಣಮ್ಮಾ4 ಕೌಸ್ತುಭಹಾರ ಮೌಕ್ತಿಕದ ಕೊರಳಲಿಹ | ಹಸ್ತ ಕಡಗದವ ನಾರಮ್ಮಾ | ಸ್ವಸ್ತಿ ಎನುತ ಬಂದು ಬೇಡಿ ಬಲಿಯಾಗರ್ವ | ಸ್ವಸ್ತಿ ಮಾಡಿವನು ಕಾಣಮ್ಮಾ5 ಕ | ಪೋಲ ಹೊಳಹಿನವ ದಾರಮ್ಮಾ | ಏಳು ಮೂರು ಬಾರಿ ಕ್ಷತ್ರಿಯ ರಾಯರ ಸೋಲಿಸಿ ಬಂದವ ಕಾಣಮ್ಮಾ6 ಕರ್ಪೂರ ಕರಡಿಗಿ ಬಾಯಿ ಸಂಪಿಗೆಯಂತೆ | ತೋರ್ಪ ನಾಶಿಕದವ ದಾರಮ್ಮಾ | ದರ್ಪ ಮುರಿದು ರಾವಣನ ತಲಿಯ ಧರೆ | ಗೊಟ್ಟಿಸಿದವ ನಿವ ಕಾಣಮ್ಮಾ7 ಕುಡಿಗಂಗಳ ಭ್ರೂಲತೆಯ ಪೆರೆನೆಣೆಸಲು | ಪೊಡವಿಯೊಳಗ ನಂಬಿದ್ದ ಪಾಂಡವರನು | ಬಿಡದೆ ಸ್ಪಾಪಿಸಿದವ ಕಾಣಮ್ಮಾ8 ಕುರುಳು ಗೂದಲು ತಳಕದ ಮಾಲ್ಯ ಮೌಲಿಕ | ಧರಸಿದ ಮುಕುಟವ ದಾರಮ್ಮಾ | ತರಳನಾಗಿ ಮುಪ್ಪುರ ನಾರಿಯರ ವೃತ | ತ್ವರಿತದಿ ಅಳಿದವ ಕಾಣಮ್ಮಾ9 ನೋಡಲು ಮನಸಿಗೆ ಮೋಹನೆ ಮಾಡುವ | ಪ್ರೌಡದಿ ಮನವವ ದಾರಮ್ಮಾ | ರೂಢಿಲಿ ಕುದುರೆಯ ಏರಿ ಕಲಿಮಲವ | ಝಾಡಿಸಿದವನಿವ ಕಾಣಮ್ಮ10 ಸಹಜದಿ ಸವಿಸವಿ ಮಾತಲಿ ಸೋಲಿಸು | ತಿಹ ಸರ್ವರಿಗಿವ ದಾರಮ್ಮಾ | ಮಹಿಪತಿ ಸುತನ ಹೃದಯದಲಿ ನಿಂತು ತನ್ನ| ಮಹಿಮೆ ಬೀರಿಸುವವ ಕಾಣಮ್ಮಾ11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀಲಕಂಠ | ನೀಲಕಂಠ | ನೀಲಕಂಠ | ಪಾಲಯ ಪ ಗಾಳಿದೇವನ ಒಲಿಮೆ ಯಿಂದಕಾಲಕೂಟ ಮೆದ್ದ ಶಿವನೇ ಅ.ಪ. ಸುಕೃತ ಭೃಕುಟಿ ಭವನೆ ಕಳೆವೆ ಪಾಪ 1 ಕಾವೇರಿಕೆ ನರ್ಮದೇಗಳ್ | ಸೇರ್ವ ಸನಿಯ ಶೈಲದಲ್ಲಿ ||ಭಾವ ಜಾರಿ ನಿನ್ನ ಪ್ರಭವ | ತೋರ್ವೆ ಜ್ಯೋತಿರೂಪ ಭಾವ 2 ಸುರರು ನಗುವ ಪರಿಯು ಅಲ್ಲವೆ | ಶರಣ ಜನರ ಪೊರೆಯೆ ಸ್ವೀಕರ 3 ಚಾರು ಚರಣಘೋರ ಭವವ ತಾರಿಪ ಓಂ | ಕಾರ ಪ್ರತಿಮ ಕಾಯೊ ಎಮ್ಮ4 ಹರಿಯ ಪದದ ನೀರನೀಗ | ಹರಿಯ ದ್ವಾರದಿಂದ ತಂದೂಹರಿಯ ದ್ವಾರ ತೋರ್ಪ ಭಾವಿ | ಹರಿಂ5ಶಯ್ಯಗೆ ಎರೆವೆನಂi5 5 ಮನವ ಆಳ್ವನೆ ಮೊರೆಯ ಕೇಳಿ | ಮನದ ಮಲಿನ ತ್ವರದಿ ತಳ್ಳಿಮನದಾಭಿಧನ ಚಿಂತೆಯಲ್ಲಿ | ಮನವನಿರಿಸೊ ಕೃಷ್ಣನಲ್ಲಿ 6 `ದೂಃ` ಎಂತ ಮರುತ ನಿನ್ನ | ಶರೀರದೊಳಗೆ ಇರುವನಲ್ಲಿದೂರುವಾಸ ತೋರೊ ಶ್ರೀಪ | ಗುರು ಗೋವಿಂದ ವಿಠಲ ರೂಪ 7
--------------
ಗುರುಗೋವಿಂದವಿಠಲರು
ನೋಡಿ ದಣಿಯದೊ ನಯನ ಪಾಡಿ ದಣಿಯದೊ ಜಿಹ್ವೆ ನಾಡಿಗೊಡೆಯನೆ ರಂಗ ದೇವ ದೇವ ಪ. ಬೇಡಲೇನನೊ ಸ್ವಾಮಿ ಕಾಡಲ್ಯಾತಕೊ ದೇವ ನೀಡೊ ನಿನ್ನ ಪದಕಮಲ ಶ್ರೀ ಶ್ರೀನಿವಾಸ ಅ.ಪ. ಶಿರದಲ್ಲಿ ಮಕುಟ ವರ ಫಣೆಯಲ್ಲಿ ತಿಲುಕವು ಉರದಲ್ಲಿ ಸಿರಿವತ್ಸ ಹಾರ ಪದಕಗಳು ಕರ ಶಂಖ ಚಕ್ರಯುತ ನೆರಿಗೆ ಪೀತಾಂಬರವು ಪಾದ ಕಮಲಗಳ 1 ಮಂದಹಾಸ ಮುಖಾರವಿಂದದಲಿ ಕಿರುನಗೆಯು ಬಂದ ಭಕ್ತರಿಗಭಯ ತೋರ್ಪಕರವೊ ನಿಂದು ಸ್ತುತಿಸುವರಿಗಾನಂದ ತೋರುವ ದಿವ್ಯ ಒಂದೊಂದು ಅವಯವದ ಸುಂದರಾಕೃತಿಯ 2 ವೇದವನೆ ತಂದು ಸುತಗಾದರದಿ ಇತ್ತೆ ಕ್ಷೀ- ರೋದಧಿಯ ಮಥಿಸಿ ಸುಧೆಯ ಸುರರಿಗುಣಿಸಿದೆಯೊ ಭೂದೇವಿಯನೆ ಪೊರೆದು ಉದ್ಭವಿಸಿ ಕಂಭದೊಳು ಪಾದದಲಿ ಭೂಮಿಯನು ಅಳೆದ ವಟುರೂಪಿ 3 ದುಷ್ಟ ಕ್ಷತ್ರಿಯರನೆ ಕುಟ್ಟಿ ಕೆಡಹಿದ ಶೌರಿ ದಿಟ್ಟತನದಲಿ ಅನ್ನ ಬಟ್ಟೆಯನೆ ತೊರೆದೆÀ ಕೊಟ್ಟು ಗೋಪಿಗೆ ಮುದವ ಮೆಟ್ಟಿ ಕಾಳಿಂಗನ ಬಿಟ್ಟು ವಸನವ ಕಲಿದುಷ್ಟರನೆ ಕೊಂದೆ 4 ಅಪದ್ರಕ್ಷಕ ನಿನ್ನ ವ್ಯಾಪಾರ ರೂಪಗಳು ತಾಪ ಪರಿಹರಗೈದು ಕಾಪಾಡೆಲೊ ಶ್ರೀಪತಿಯೆ ಅಂತರ್ಬಹಿವ್ರ್ಯಾಪ್ತ ನಿರ್ಲಿಪ್ತನೇ ತಾಪ ಪರಿಹಾರನೆ 5
--------------
ಅಂಬಾಬಾಯಿ
ನೋಡುವ ಬನ್ನಿರೆಲ್ಲರು ಲೋಕ ನಾಯಕ ಚೆಲ್ವ ಮೂಡಲ ಗಿರಿವಾಸ ಶ್ರೀವೆಂಕಟೇಶನ ಪ ಭೂಮಿಗೆ ವೈಕುಂಠವೆಂದು ತೋರುತ ನಿಂತ ಸ್ವಾಮಿ ಪುಷ್ಕರಣಿಯ ತೀರದೊಳು ಪ್ರೇಮದಿ ಭಕ್ತರ ಸಲಹಿಕೊಂಬುವನಂತೆ ಕಾಮಿತಾರ್ಥವನಿತ್ತು ಕಳುಹುವನಂತೆ 1 ಬ್ರಹ್ಮಾದಿ ಸುರರಿಂದ ಪೂಜಿಸಿಕೊಂಬನಂತೆ ನಿರ್ಮಲ ರೂಪದಿ ತೋರ್ಪನಂತೆ ಕರ್ಮಬಂಧಗಳನ್ನು ಕಡಿದು ಕೊಡುವನಂತೆ ಹೆಮ್ಮೆಯ ಪತಿಯೆಂದು ತೋರ್ಪನಂತೆ 2 ಆಡಿ ತಪ್ಪುವರಿಗೆ ಕೇಡ ಬಗೆವನಂತೆ ನೋಡಿಯೆ ನಡೆಯಲು ಕೊಡುವನಂತೆ ಮೂಡಿದ ಆದಿತ್ಯ ಶತಕೋಟಿ ತೇಜನಂತೆ ರೂಢಿಗೊಡೆಯ ನಮ್ಮ ವರಾಹತಿಮ್ಮಪ್ಪನಂತೆ 3
--------------
ವರಹತಿಮ್ಮಪ್ಪ
ಪಂಚೀಕರಣಮಾಡಿ ತಾ ಸಂಚರಿಸುವ ಪ ಪಂಚೀಕರಣತಿಳಿಯದೆ ಪ್ರಪಂಚದೊಳು ಮುಳುಗಿ ನಾ ವಂಚಿತನಾದೆ ವಿರಿಂಚಿಭಕ್ತಿಗೆ ಅ.ಪ ಸಚ್ಚಿದಾನಂದ ರೂಪ ವ್ಯಾಪ್ತರೂಪಿ ನಾರಾಯಣ ಅಪ- ಅಚ್ಯುತ ತನ್ನಿಚ್ಛೆಯಿಂದ ವೈಕೃತಾಕಾಶಕ್ಕೆ ಅಂಭ್ರಣಿದೇವಿಯರನೆ ಮುಖ್ಯ ಮಾಡಿದಾ 1 ಗುಣರಾಶಿಯೊಳು ಸತ್ವಕ್ಕೆ ಶ್ರೀದೇವಿಯರು ಮುಖ್ಯ ರಜಕೆ ಭೂದೇವಿ ತಮಕೆ ದುರ್ಗಾದೇವೇರು ಸತ್ಯಜ್ಞಾನಾನಂದದಯೆ ಮೌನಪಂಚೇಂದ್ರಿಯ ಜಯ ಅಕ್ರೌರ್ಯಗುರು ಸೇವೆಯೇ ಸತ್ವಕಾರ್ಯವು2 ತಮಕ್ರೋಧ ಅಹಂಕಾರ ಮದೋನ್ಮಾದ ಚಪಲೋದ್ಯೋಗ ಡಂಭ ಸ್ವಚ್ಛಂದರಜದ ಕಾರ್ಯವು ತಮದ ಕಾರ್ಯ ಅಜ್ಞಾನ ಮೋಹ ನಿದ್ರಾಲಸ್ಯ ಬುದ್ಧಿಶೂನ್ಯ ತಾಪವಾದಿ ಹಿಂಸಾಕಾರ್ಯವು 3 ಸತ್ವಪ್ರಾಚುರ್ಯದಿ ಮದ ಗುಣತ್ರಯವೈಷಮ್ಯಹೊಂದಿ ಶ್ರೇಷ್ಠಕಾರ್ಯಕೆ ಮಹತ್ತತ್ವವಾಯಿತು ಸಾತ್ವತಾಂಪತಿಯ ಇಚ್ಛೆಯಿಂದ ಮಹತ್ತತ್ವದಿ ಅಹಂಕಾರ ತತ್ವವೆಂಬುದೇರ್ಪಟ್ಟಿತು 4 ತೈಜಸ ತಾಮಸ ಅಹಂಕಾರ ವೆನುತಲಿ ಮೂರಹಂ- ಕಾರದಿ ಮೂರು ರುದ್ರರೂಪಗಳು ಬ್ರಹ್ಮವಾಯು ಶೇಷರಿಂದುದಯಿಸಿದರು5 ವೈಕಾರಿಕ ಅಹಂಕಾರದಿ ದೇವತಾ ದೇಹ ಮನಸು ತೈಜಸದಿಂದ ದಶೇಂದ್ರಿಯ ಹುಟ್ಟಿತು ತಾಮಸಾಹಂಕಾರದಿಂದುತ್ಪನ್ನವಾದುವು6 ಸರ್ವ ಮಿಳಿತಮಾಡಿ ಬ್ರಹ್ಮಾಂಡವನೆ ಸೇರಿ ಹರಿಯು ಪದ್ಮನಾಭರೂಪದಿಂದ ಶಯನಗೈದನು ಸರ್ವಲೋಕೋದ್ಧಾರ ಹರಿಯು ನಾಭಿಯೊಳು ಪದ್ಮ ತೋರಿ ಪದುಮದಲ್ಲಿ ಪದ್ಮಸಂಭವನಾಸೃಜಿಸಿದ 7 ಸರ್ವರಂತರ್ಯಾಮಿ ಸಕಲಜೀವರನ್ನು ಸೃಷ್ಟಿಗೈಸಿ ಜೀವಯೋಗ್ಯತಾ ಕಾರ್ಯ ನಡೆಸುತಿರುವನು ಸರ್ವಜೀವಕಾರ್ಯವು ಪಂಚವಿಂಶತಿತತ್ವ ಈ- ಶರಿಂದಲೆ ಕಾರ್ಯನಡೆಯತಿರುವುದು8 ಶಬ್ದತನ್ಮಾತ್ರದಿಂದ ಆಕಾಶ ಹುಟ್ಟಿತು ವಾಯುಹುಟ್ಟಿತು ಸ್ಪರ್ಶತನ್ಮಾತ್ರದಿ ರೂಪತನ್ಮಾತ್ರದಿ ಅಗ್ನಿಭೂತ ಹುಟ್ಟಿತು ಆಗ ರಸತನ್ಮಾತ್ರದಿ ಅಷ್ಟು ಹುಟ್ಟಿತು 9 ಈ ಪರಿವಿರಾಟದಿಂದುಯಿಸಿದವು ಆಕಾಶ ಕೊಂದೆ ಶಬ್ದಗುಣವು ಮಾತ್ರ ಇರುವುದು ಅಹುದು ವಾಯವಿಗೆ ಶಬ್ದ ಸ್ಪರ್ಶವೆರಡುಗುಣಗಳು10 ತೋರುತಿರ್ಪುದಗ್ನಿ ಶಬ್ದಸ್ಪರ್ಶರೂಪ ಗುಣಗಳು ಗುಣ ಶಬ್ದ ಸ್ಪರ್ಶ ರೂಪ ರಸ ಗಂಧವೈದು ಪರಿ ಭೂತಪಂಚಕಗಳ ಅರಿವುದು 11 ಪಂಚಭೂತಗಳು ತಮ್ಮ ಸ್ವಾಂಶಗಳ ಭಾಗಗೈಸಿ ಪ್ರ- ಪಂಚ ಕಾರ್ಯಕಿತ್ತ ಪರಿಯದೆಂತೆನೆ ಆಕಾಶ ದರ್ಧಭಾಗ ಭೂತ ಪ್ರೇತ ಪಿಶಾಚಿಗಳಿಗೂ ಉಳಿ ಪಾದ ಪಾದವೆನ್ನೆ ಜೀವಕೋಟಿಗೂ12 ವಾಯು ತನ್ನರ್ಧಭಾಗ ಪಕ್ಷಿ ಪನ್ನಗಾದಿಳಿಗೂ ಪಾದ ಭಾಗ ಜೀವಕೋಟಿಗೂ ಅಗ್ನಿತನ್ನರ್ಧಭಾಗ ದೇವ ಋಷಿಗಳಿಗೂ ಮಿಕ್ಕಧರ್Àದೊಳ್ ಪಾದಭಾಗ ಜೀವಕೋಟಿಗೂ13 ಅಪ್ಪುತನ್ನರ್ಧಂಶ ಜಲಚರಪ್ರಾಣಿಗಳಿಗು ಮಿಕ್ಕರ್ಧದೊಳು ಪಾದಭಾಗ ಜೀವಕೋಟಿಗೂ ಪೃಥ್ವಿ ತನ್ನರ್ಧಂಶ ಜಡಜೀವಕೋಟಿಗೂ ಮಿಕ್ಕ ರ್ಧದೊಳ್ ಪಾದಭಾಗ ಜೀವಕೋಟಿಗೂ14 ಪೃಥ್ವಿ ಅಪ್ಪು ತೇಜೋ ವಾಯು ಆಕಾಶಗಳು ಸೂಕ್ಷ್ಮರೂಪದಿಂದೆರಡೆರಡಾದವು ಆಕಾಶತನ್ನರ್ಧಾಂಶದಲ್ಲಿ ವಾಯ್ವಗ್ನಿ ಅಪ್ಪು ಪೃಥ್ವಿಗಳಿ ಗೆ ಕೊಟ್ಟು ಸ್ವಾಂಶ ಅಂತಃಕರಣವೆನಿಸಿತು 15 ವಾಯು ಸ್ವಾಂಶದಿಂದುದಾನವೆಂದೆನಿಸಿ ಮಿಕ್ಕ ಪೃಥ್ವೈ ಪ್ತೇಜಾಕಾಶಗಳಿಗೆ ತನ್ನ ಚಲನ ಕೊಟ್ಟಿತು ಅಗ್ನಿ ತನ್ನಸ್ವಾಂಶದಿಂದ ಚಕ್ಷುಸೇಂದ್ರಿಯ ವೆನಿಸಿ ವಾಯ್ವಾಕಾಶಅಪ್ಪು ಪೃಥ್ವಿಗುಷ್ಣ ಕೊಟ್ಟಿತು 16 ಅಪ್ಪು ತನ್ನ ಸ್ವಾಂಶದಿಂ ರಸವೆಂದೆನಿಸಿ ಮಿಕ್ಕ ವಾಯ್ವಾಕಾಶಾಗ್ನಿ ಪೃಥ್ವಿಗೆ ದ್ರವವ ಕೊಟ್ಟಿತು ಪೃಥ್ವಿತನ್ನ ಸ್ವಾಂಶದಿಂ ಗಂಧವೆಂದೆನಿಸಿ ಮಿಕ್ಕ ಅಪ್ತೇಜವಾಯ್ವಾಕಾಶಕೆ ಕಠಿಣ ಕೊಟ್ಟಿತು 17 ಭೂತಪಂಚಕಗಳಿಗೆ ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನ ರೂಪವು ಅಧಿಷ್ಠಾನರಾಗಿ ಅವರಂತರ್ಯಾಮಿಯಾಗಿ ಅನಿರುದ್ಧಾದಿ ಐದು ಭಗವನ್ಮೂರ್ತಿ ಇರುವುದು 18 ನಾಮರೂಪ ವರ್ಣಗುಣ ಸ್ವಭಾವ ತೇಜ ಸುಮುಖ ದೇವರಶಕ್ತಿ ಅಕ್ಷರ ಕ್ರಿಯಾ ಎಂಬೀ ಹತ್ತು ಗುಣಗಳು ಭೂತ ಒಂದಕ್ಕೆ ತಿಳಿದು ಉಪಾಸನ ಮಾಳ್ಪಾದೂ ಬುಧರು ಎಲ್ಲರು 19 ನಾಮವೇ ಆಕಾಶ ರೂಪ ಒಟ್ಟು ಭಾವ ಬಯಲು ವರ್ಣ ಕಪ್ಪು ಗುಣಶಬ್ದ ಕ್ರಿಯ ಅನುಗ್ರಹ ಮುಖವೇ ಈಶಾನ ದೇವತೆ ಪರಶಿವಶಕ್ತಿ ಪರಾಶಕ್ತಿ ಅಕ್ಷರವೇ ನಾದವು20 ನಾಮ ವಾಯುರೂಪ ಷಟ್ಕೋಣ ವರ್ಣನೀಲ ಮುಖ ತತ್ಪುರುಷ ದೇವತೆ ಸದಾಶಿವ ಶಕ್ತಿ ಅಕ್ಷರ ಬಿಂದುವೆನಿಪುದು 21 ನಾಮ ಅಗ್ನಿರೂಪ ಮುಕ್ಕೋಣವರ್ಣ ರಕ್ತವರ್ಣ ಮುಖ ಅಘೋರ ದೇವತೆ ರುದ್ರಶಕ್ತಿ ಪಾರ್ವತಿ ಅಕ್ಷರ ಮಕಾರ 22 ನಾಮ ಅಪ್ಪುರೂಪ ಅಧರ್Éೀಂದು ಶ್ವೇತವರ್ಣ ಸ್ವಭಾವದ್ರವ ಗುಣ ಮಾಧುರ್ಯ ವಿಷ್ಣುಶಕ್ತಿ ಅಕ್ಷರಉಕಾರ ಎಂದು ಪೇಳ್ವರು 23 ನಾಮವೇ ಪೃಥ್ವಿರೂಪ ಚತುಷ್ಕೋಣ ವರ್ಣ ಹೇಮ ಸ್ವಭಾವವೇಕಠಿಣ ಕ್ರಿಯ ಸೃಷ್ಟಿ ಗುಣವೆ ಗಂಧವು ಮುಖಸದ್ಯೋಜಾತ ದೇವತೆ ಬ್ರಹ್ಮಶಕ್ತಿ ಸರಸ್ವತಿ ಅಕ್ಷರ ಅಕಾರವು 24 ಉಕ್ತರೀತಿ ಹತ್ತು ಗುಣಗಳೊಳ್ ಭೂತ ಒಂದ- ಕ್ಕೆತಿಳಿದು ಈ ಜ್ಞಾನೇಂದ್ರಿಯಗಳೆಂತಾದವು ಎಂದರಿವುದು ಆಕಾಶಸಮಾನಾಂಶ ಅಗ್ನಿಯು ಮುಖ್ಯಾಂಶದಿರೆ ಶ್ರೋತ್ರೇಂದ್ರಿಯ ಹುಟ್ಟಿ ತೋರುತಿರುವುದು25 ವಾಯುಸಮಾನಾಂಶ ಬಂದು ಅಗ್ನಿ ಮುಖ್ಯಾಂಶದಿರೆ ತ್ವಗೇಂದ್ರಿಯವು ತಾನೆ ತೋರುತಿರುವುದು ಜಿಹ್ವೇಂದ್ರಿಯವು ತೋರುತಿರುವುದು26 ಘ್ರಾಣೇಂದ್ರಿಯವು ತಾನೆ ತೋರುತಿರುವುದು ಅಗ್ನಿ ಸ್ವಾಂಶದಿಂದ ಚಕ್ಷುಷೇಂದ್ರಿಯವೆಂದು ಹಿಂದೆಯೇ ಈ ವಿವರ ಪೇಳಿರುವುದು27 ಪೃಥ್ವಿಸಮಾನಾಂಶದೊಡನೆ ಆಕಾಶ ಸಮಾಂಶಸೇರೆ ವಾಗೇಂದ್ರಿಯವೆ ತಾನೆ ತೋರುತಿರುವುದು ಪೃಥ್ವಿ ಮುಖ್ಯಾಂಶದೊಡನೆ ವಾಯು ಸಮಾಂಶಸೇರೆ ಘ್ರಾಣೇಂದ್ರಿಯವು ತಾನೆ ತೋರುವುದು 28 ಪೃಥ್ವಿಮುಖ್ಯಾಂಶದೊಡನೆ ಅಗ್ನಿ ಸಮಾಂಶಸೇರೆ ಪಾದೇಂದ್ರಿಯವು ತಾನೆತೋರುತಿರ್ಪದು ಪೃಥ್ವಿ ಮುಖ್ಯಾಂಶರೊಡನೆ ಅಪ್ಪು ಸಮಾವಾಂಶ ಸೇರೆ ಪಾಯೇಂದ್ರಿಯವೆಂದು ತೋರುತಿರ್ಪುದು29 ಪೃಥ್ವಿಸ್ವಾಂಶವೇ ಗುಹ್ಯೇಂದ್ರಿಯವೆಂದು ಪೂ ರ್ವೋಕ್ತ ರೀತಿಗಣನೆ ತರುವುದು ಈ ರೀತಿ ಕರ್ಮೇಂದ್ರಿಯಗಳೆಲ್ಲ ಪೃಥ್ವಿ ತತ್ವದಿಂದಲೇ- ರ್ಪಟ್ಟು ಬೆಳಗುತಿರುವುದು30 ಆಕಾಶ ಸಮಾನಾಂಶ ಅಪ್ಪು ಮುಖ್ಯಾಂಶದಿರೆ ಶಬ್ದ ವಾಯು ಸ್ವಯಾಂಶದಿ ಅಪ್ಪು ಮುಖ್ಯಾಂಶದಿ ಸ್ಪರ್ಶತೋರ್ಪುದು ಅಗ್ನಿ ಸಮಾನಾಂಶ ಅಪ್ಪು ಮು ಅಪ್ಪು ಮುಖ್ಯಾಂಶದಿಂದಲೆ31 ಅಪ್ಪುಸ್ವಯಾಂಶವೇ ರಸವು ಎಂದೆನಿಸಿತು ತನ್ಮಾತ್ರಪಂಚಕಕ್ಕೆ ಮೂಲ ಅಪ್ಪುತತ್ವವು ಪ್ರಾಣಾದಿಪಂಚಗಳ ಮುಂದೆ ವಿವರಿಸಿಹುದು ವಾಯುತತ್ವವೇ ಅದಕೆ ಮುಖ್ಯಕಾರಣ32 ವಾಯು ಮುಖ್ಯಾಂಶದೊಳು ಆಕಾಶ ಸಮಾನಾಂಶ ಸೇರೆ ಸಮಾನ ವಾಯುವೆಂತೆಂದೇರ್ಪಟ್ಟಿತು ವ್ಯಾನ ವಾಯು ಎಂತೆಂದೇರ್ಪಟ್ಟಿತು 33 ವಾಯು ಮುಖ್ಯಾಂಶದೊಳು ಅಪ್ಪು ಸಮಾನಾಂಶ ಸೇರೆ ಅಪಾನವಾಯುವೆಂತೆಂದೇರ್ಪಟ್ಟಿತು ವಾಯು ಮುಖ್ಯಾಂಶದೊಡನೆ ಪೃಥ್ವಿಸಮಾನಾಂಶ ಸೇರಲು ಪ್ರಾಣ ವಾಯು ಉತ್ಪನ್ನವಾಯಿತು34 ವಾಯುವಿನ ಸ್ವಯಾಂಶವೇ ಉದಾನವಾಯುವೆನಿಸಿತು ಮುಂದೆ ವಿವರಿಸುವುದು ಜ್ಞಾನ ಪಂಚಕ ಈ ಜ್ಞಾನ ಪಂಚಕಕ್ಕೆ ಆಕಾಶ ತತ್ವವೇ ಮುಖ್ಯಕಾರಣವೆಂದು ಬುಧರು ಪೇಳ್ವರು35 ಆಕಾಶ ಮುಖ್ಯಾಂಶದಿ ವಾಯು ಸಮಾನಾಂಶ ಸೇರಿ ದಾಗಲೆ ಮನಸು ಎಂಬುವುದು ಹುಟ್ಟಿತು ಆಕಾಶ ಮುಖ್ಯಾಂಶದಿ ಅಗ್ನಿ ಸಮಾನಾಂಶ ಸೇರಿ ದಾಗಲೆ ಬುದ್ಧಿ ಎಂಬುದು ಗೋಚರವಾಯಿತು 36 ಸೇರೆ ಚಿತ್ತವೆಂಬುದು ವ್ಯಕ್ತವಾಯಿತು ಆಕಾಶ ಮುಖ್ಯಾಂಶದೊಳು ಪೃಥ್ವಿಸಮಾನಾಂಶ ಸೇರಿ ಅಹಂಕಾರವೆಂಬುದೇರ್ಪಟ್ಟಿತು 37 ಆಕಾಶ ಸ್ವಾಂಶವೇ ಕತೃತ್ವವೆಂದೆನಿಸಿತು ಈಪರಿಯ ತಿಳಿವುದು ಜ್ಞಾನಪಂಚಕ ಜ್ಞಾನೇಂದ್ರಿಯ ಕರ್ಮೇಂದ್ರಿಯ ಪಂಚತನ್ಮಾ ತ್ರಗಳಿಗೆ ಆಧ್ಯಾತ್ಮಿಕಾದಿಭೌತಿಕದೇವತೆಗಳ ತಿಳಿವುದು 38
--------------
ಉರಗಾದ್ರಿವಾಸವಿಠಲದಾಸರು