ಒಟ್ಟು 2985 ಕಡೆಗಳಲ್ಲಿ , 113 ದಾಸರು , 1991 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಇ) ಆತ್ಮನೀವೇದನೆಯ ಕೃತಿಗಳು ಆಕಾರವಿಲ್ಲದ ಅನಾದಿಯೊಳು ಪಂತ ಸಾಕಾರನಾಗಿಹನು ಶ್ರೀ ಲಕ್ಷ್ಮೀಕಾಂತ ಪ ಕುಸುಮಶರನೆ ಪೂವು ಅದರೊಳಗಿಲ್ಲ ಎಸೆಯೆ ಕೋದಂಡ ಕಬ್ಬೈಸೆ ಧನುವಲ್ಲ ಹೊಸ ಬಗೆಯಾಗಿ ನಾಂಟದ ಸರಳಲ್ಲ ವಿಷಮ ವಿಗ್ರಹಕಿನ್ನು ಕೇಳ್ ಪ್ರಾಣವಿಲ್ಲ 1 ಮುಂದುವರೆವರೆ ಮೋಹರದೊಳು ತನ್ನ ಚಂದದಿಂದೊಪ್ಪುವಂಗವ ಕಾಣೆ ಮುನ್ನ ಕುಂದದಕೇದಗೆಯೆಸಳಿವೆ ನೋಡು ತನ್ನ ಸಂಧಿಸಿತೇನೊ ಚಿದ್ರೂಪ ಗುಣರನ್ನ 2 ಸರಿಯಲ್ಲದವರೊಳು ಸಮರವ ಮಾಡಿ ಧುರದೊಳು ಮಿಗೆ ನೊಂದೆನಯ್ಯ ಮೈ ಬಾಡಿ ಪರಿಹರಿಸೆಲವೊ ಸುರಸತಿಯರ ಮಧ್ಯೆಕೂಡಿ ಸುರಪುರಪತಿ ದುರಿತವಿರದೊಂದುಗೂಡಿ3
--------------
ಕವಿ ಲಕ್ಷ್ಮೀಶ
(ಈ) ಆತ್ಮನಿವೇದನಾ ಕೃತಿಗಳು ಅಕಟಕಟ ಬಹಳ ಬಡತನವಡಸಿದುದೆ ನಿನಗೆ ಅಕಳಂಕ ಚರಿತ ಹರಿಯೆ ಪ ಪ್ರಕಟತನದಿಂ ಗೋದಾನಕ್ಕೆ ಕೈನೀಡುವರೇ ಸುಖಮಯ ಶರೀರ ಚನ್ನರಾಯಾ ಅ.ಪ ಹಿಂದೆ ಯಜ್ಞದಲಿ ಬಲಿಯಿತ್ತ ಭೂದಾನಕ್ಕೆ ದಂದಿಗೆ ಸಾಲದಾಯಿತೆ ಅಂದು ಕರ್ಣನು ಕೊಟ್ಟ ದಾನವನು ನೀ ಪಿಡಿದು ದಂದಿಗೆ ಸಾಲದಾಯಿತೆ ಇಂದು ನಿನ್ನಯ ದಾಸಾನುದಾಸನು ಕೊಟ್ಟ ಗೋದಾನ ದೊಂದೊಂದು ಗೋಗಳಿಗೆಛಂದದಲಿ ನಿಂದು ದಾನವ ಕೊಂಡೆಯಾ ಸ್ವಾಮಿ 1 ಉರದೊಳಗೆ ಅನವರತ ವಾಸವಾಗಿರುತಿಪ್ಪ ಶರಧಿಸುತೆ ಕೈಬಿಟ್ಟಳೇ ಬೆರೆತು ಪೋದುದೇ ಪಾಲ್ಗಡಲು ಮುನಿಸಿಕೊಂಡು ಬರಡಾಯಿತೇ ಕಾಮಧೇನೂ ತಿರುಕ ಹಾರುವನಂತೆ ಪರಿಪರಿಯ ದಾನಕ್ಕೆ ಭರದಿ ಕೈ ಒಡ್ಡುತಿಹರೆ ಪುರುಷೋತ್ತಮನೆಂಬ ಅಭಿಮಾನವಿನಿತಿಲ್ಲದೇ ದೂರಿಗೊಳಗಾಗಬಹುದೆ ಸ್ವಾಮಿ 2 ಇತ್ತ ದಾನದ ಗೋವುಗಳನೆಲ್ಲ ಗುಡಿಯೊಳಗೆ ಮೊತ್ತದಿಂ ಕೂಡಿಕೊಂಡೂ ಒತ್ತಿ ಮುದ್ರೆಯನು ನಾಮವನಿಟ್ಟು ಬಾಲಗಳಿ ಗೆತ್ತಿ ಘಂಟೆಗಳ ಕಟ್ಟೀ ಅರ್ಥಿಯಿಂ ತೋರಿಸಿ ಯೆನ್ನ ಕುಲಕೋಟಿಗಳಿ ಗಿತ್ತೆ ಸುರಪದವನು ಕರ್ತುೃ ವೈಕುಂಠ ವೇಲಾಪುರಾಧೀಶ್ವರನೇ ಭೃತ್ಯನ್ನ ಕಾಯೊ ಸತತ ಸ್ವಾಮಿ 3
--------------
ಬೇಲೂರು ವೈಕುಂಠದಾಸರು
(ಉ) ಆತ್ಮನಿವೇದನಾ ಕೃತಿಗಳು ಅಭಯ ಪ್ರದಾಯಕ ಶ್ರೀರಮೇಶ ಉಭಯವೇದ ಪೂಜಿತ ಪಾದಪದ್ಮ ಪ ಅನುಮಾನಿಸದಿರೊ ಶಿಶುವಾದೆನ್ನೊಳು ಏನತಿ ಕೋಪವೂ ಅಪ್ರಮೇಯದೇವ ಅ.ಪ ಅನ್ನ ವಸ್ತ್ರಗಳನೀವುದೆನಗೆ ಯೆಂದು ಯನ್ನ ತಂದೆ ಜಾಜೀಶನೆಂದು ಬಂದೆನಲ್ಲದೆ 1 ಇನ್ನು ಕಾಯ್ವರಾರಿರುವರಯ್ಯಾ ಮನ್ನಿಸುತ್ತಾ ನೀ ನಿನ್ನಕಂದನಾ ಬಿನ್ನಪವನು ಕೇಳು ಚೆನ್ನಕೇಶವಾ 2
--------------
ಶಾಮಶರ್ಮರು
(ಉ) ಆತ್ಮನಿವೇದನಾ ಕೃತಿಗಳು ಎಂದಿಗೊ ಕಂದನ ಪಾಲಿಸುವದು ಇನ್ನೆಂದಿಗೊ ಪ ಅಂದಿನಿಂದಲಿ ನಿನ್ನ ಸುಂದರ ಸೇವೆಗೆ ಬಂದು ಬೇಡುವೇನೋ ಮುಕುಂದ ಮಾಧವಾ 1 ಸಾಧು ಸಜ್ಜನರೊಳು ಭೇದವಳಿದು ನಿಜ ಪಾದವ ಕಾಣುವ ಬೋಧೆ ಆನಂದ 2 ವಾರವಾರ್ಚಿತ ಹರಿ ದಾಸ ತುಲಸಿರಾಮಾ ದೇಸಿಕ ನಿನ್ನ ನಿಜ ದಾಸನಾಗುವುದು3
--------------
ಚನ್ನಪಟ್ಟಣದ ಅಹೋಬಲದಾಸರು
(ಉ) ಆತ್ಮನಿವೇದನೆ ನೋಡದೆ ತ್ವರದಿ ಪ ಹೆಂಡತಿ ಮಕ್ಕಳ ಭ್ರಾಂತಿಯೊಳನ್ಯರ ದಂಡಿಸಿ ಧನವ ಹರಿಸಿದೆನೋ ಭಂಡತನದಲಿ ಪ್ರಚಂಡನಾದೆನೋ ಹರಿ ಪುಂಡರೀಕಾಕ್ಷನೇ 1 ನಾ ದಿನಗಳೆದೆ ಹೇ ಮಹಾಭಾವನೇ ಪಾಮರನಾದೆ ಎನ್ನ ನೀ ಮಮತೆಯಿಂದಲಿ 2 ಅಟ್ಟಮೇಲೆ ಒಲೆ ನೆಟ್ಟಗುರಿವಂದದಿ ಕೆಟ್ಟ ಮೇಲೆಚ್ಚರ ಹುಟ್ಟಿತೆನಗೆ ನೀ ದಯದಿ 3
--------------
ಹನುಮೇಶವಿಠಲ
(ಉ) ಆತ್ಮನಿವೇದನೆ ಪಾಲಿಸಯ್ಯಾ ಪ ಎನ್ನ ಜೀಯಾ ಅ.ಪ. ದಾನಕ್ಕೆ ಲೋಭ ಅಡ್ಡಾಯಿತೋ ಮಾನಕ್ಕೆ ಕೋಪಬೀಜವಂಕುರಿಸಿತೋ ಶ್ವಾನನಂದದಿ ಬಾಳಾಯ್ತೋ 1 ಮೃಗ ತಲೆ ಸಿಕ್ಕುತೊಳಲುವ ತೆರದಿ ಮಾಯಾ ಬಿದ್ದೆನೊ ಭರದಿ 2 ದುರಿತವ ತರಿದು ಕಾಪಾಡೋ ಕರವ ಬಿಡಬ್ಯಾಡೊ 3
--------------
ಹನುಮೇಶವಿಠಲ
(ಉಂಗುರ ಕಳೆದಾಗ ಮಾಡಿದ ಪ್ರಾರ್ಥನೆ) ಬೇಡಿಕೊ ಮೂಢಾ ಬೇಡಿಕೊ ಬೇಡಿಕೊ ಭಕ್ತವತ್ಸಲನಲ್ಲಿ ಭಕ್ತಿ ಮಾಡು ಪೂಜೆಯನು ಯಥಾಮತಿ ಶಕ್ತಿ ದೂಡುತ್ತ ದುರುಳರ ಕುಚಿತ್ತಯುಕ್ತಿ ರೂಢಿವಳಗೆ ಸಂಗ್ರಹಿಸು ವಿರಕ್ತಿ ಪ. ಲಾಭಾಲಾಭ ಜಯಾಪಜಂiÀiಗಳು ಸ್ವಾಭಾÀವಿಕವಾಗಿ ಬಹ ಹಗಲಿರುಳು ನಾ ಭಾಗಿ ವರದನ ಪದ ಪದ್ಮ ನೆರಳು ನೀ ಭಜಿಸಿದ ಮೇಲೆ ಬಾಯೊಳು ಬೆರಳು 1 ಯತ್ನವಿಲ್ಲದೆ ಬಹ ನಷ್ಟಗಳಂತೆ ರತ್ನ ಭಂಗಾರ ಸಿಕ್ಕುವುದ್ಯಾಕೆ ಚಿಂತೆ ನೂತ್ನವಾದ ಮೋಹವನು ಬಿಡು ಭ್ರಾಂತೆ ರತ್ನಗರ್ಭವ ನಂಬಿರುವುದೆ ನಿಶ್ಚಿಂತೆ 2 ಅರಿ ಮಿತ್ರೋದಾಸೀನರಿಲ್ಲವು ಹರಿಗೆ ಸರಿಯಾಗಿ ನಡೆಸುವ ಸರ್ವ ಜೀವರಿಗೆ ಪರ ವಸ್ತು ನೀನೆಂದು ಸೇವೆ ಮಾಳ್ಪರಿಗೆ ಸುರ ವೃಕ್ಷದಂತೆ ಕಾರಣವಾಹ ಸಿರಿಗೆ 3 ಋಣವಿಲ್ಲದೆ ವಸ್ತು ಕ್ಷಣವಾದರಿರದು ಉಣುವ ಭೋಗಗಳೆಂದು ತಪ್ಪವು ನೆರದು ಅಣು ಮಹತ್ತುಗಳಂತರಾತ್ಮನ ಬಿರುದು ಗಣನೆ ಮಾಳ್ಪರ ಕೂಡಿ ನೆನೆ ಮನವರಿದು 4 ಆಶಾ ಪಾಶದಿ ಸಿಕ್ಕಿ ಕೆಡದಿರು ವ್ಯರ್ಥ ಶ್ರೀಶನ ನೆನೆವುದೆ ಸಕಲ ವೇದಾರ್ಥ ಶೇಷಗಿರೀಶನು ಸತ್ಪುರುಷಾರ್ಥ ದಾಸಗೆ ತಾನಾಗಿ ಕೊಡಲು ಸಮರ್ಥ5
--------------
ತುಪಾಕಿ ವೆಂಕಟರಮಣಾಚಾರ್ಯ
(ಊ) ಆತ್ಮನಿವೇದನೆ ಇಟ್ಟಂತೆ ಇರುವೆನೊ ಹರಿಯೇ ನೀನು ಕೊಟ್ಟದ್ದನ್ನುಣ್ಣುವೆ ಮತ್ತೇನು ಧೊರೆಯೇ ಪ ಪಟ್ಟೆಪೀತಾಂಬರ ಕೊಟ್ಟರೆ ಉಡುವೆನುಬಟ್ಟೆಯಿಲ್ಲದಿರೆ ಚಿಂದಿತೊಟ್ಟು ನಾನಿರುವೆನೊಮೃಷ್ಟಾನ್ನ ಭೋಜನವಿತ್ತರೆ ಉಣ್ಣುವೆ ಉ-ಚ್ಛಿಷ್ಟನ್ನವನಿತ್ತನೆ ತುಷ್ಟಿಲೆ ತಿನ್ನುವೆ 1 ಹಾಸಿಗೆ ಕೊಟ್ಟರೆ ನಾ ಮಲಗುವೆಭೂಶಯನವಿತ್ತರೆ ಅಲ್ಲಿಯೆ ಒರಗುವೆಆ ಶಾಲು ಕೊಟ್ಟರೆ ಹೊದೆಯದೆ ಬಿಡದಾಕಾಶವ ಹೊದಿಯೆಂದರೆ ಹೊದೆಯುವೆ ಬರಿಯೆ 2 ನೀಕೊಟ್ಟರುಂಟು ಕೊಡದಿದ್ದರೇನುಂಟುಬೇಕು ಬೇಡಗಳು ನಿನ್ನಿಚ್ಛೆಯಾಧೀನಲೋಕೇಶ ಗದುಗಿನ ವೀರನಾರಾಯಣಸಾಕು ಬಿಡಿಸಯ್ಯ ನರಜನ್ಮದ ಗಂಟು 3
--------------
ವೀರನಾರಾಯಣ
(ಎ) ಮಂಗಳ ಪದಗಳು ಏಳಯ್ಯ ಬೆಳಗಾಯ್ತು ಏಳು ಬೇಗ ಪ ಏಳು ಪನ್ನಗಶಯನ ಏಳು ಗರುಡಗಮನ | ಏಳೈ ಕರುಣಾಕರನೆ ಏಳು ಲಕ್ಷ್ಮೀವರನೆ ಅ.ಪ ಕರವ ಮುಗಿದು ಶಿರವೆರಗಿ ಸಂಸ್ತುತಿಸುವ 1 ವೃಂದದೊಡನೆ ಬಂದು ನಿಂದು ಹಾರೈಸುವ 2 ಪತ್ನಿಯನೊಡಗೊಂಡು ಸ್ತೋತ್ರಮಾಡುವನಯ್ಯ 3 ಕಿನ್ನರ ನೆನೆವರ್ ನಾರದರ್ಗೂಡಿ ಚಿನ್ಮಯಾತ್ಮಕ ರಂಗ 4 ಭವ ಯೋಗಿಗಳ್ ನಿಜಸುಖಸಾಗರರೊಡಗೂಡಿ 5
--------------
ಸದಾನಂದರು
(ಕುಂಜಾರು ದುರ್ಗಾ) ರಮೇ ರಜನೀಕರಾಭಮುಖಿ ಕ್ಷಮಿಸೆನ್ನವಗುಣವಾ ತಮೋ ನಿವಾರಿಣಿ ಪ. ಚರಣಯುಗೇ ಕರತಂದಿರಿಸಿದ 1 ಶಿರೋಹರೆ ಮನವಿರಿಸು ಕಟಾಕ್ಷದಿ 2 ಸರೋಜಭವಪುರ ಹರ ಶಕ್ರಾದಿಕ ಸುರೇಡ್ಯ ವೆಂಕಟಗಿರಿ ವರನಾ ಪುಷ್ಕಳ ವರಪ್ರದಾಯಿನಿ ಚರಂತನಾನುಗಪರಾತ್ಮದರ್ಶಿನಿ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ) ಶ್ರೀನಿವಾಸಾಯ ನಮೋ ಪ. ಶ್ರೀನಿವಾಸಾಯ ಶತಭಾನುಪ್ರಕಾಶಾಯ ಶ್ರೀನಿವಾಸಾಯ ನಿಜ ಭಕ್ತಜನಪೋಷಾಯ ಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ. ದೋಷಗಂಧವಿದೂರ ಕೇಶಿಮುಖದಾನವ ವಿ- ನಾಶವಿಧಿಭವಸುಖನಿವಾಸ ವಾಸುಕಿಶಯನ ವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷ ದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ- ಭೂಷ ಭೂತಾತ್ಮ ಭವಪಾಶಹರ ಪರತರ ದ- ಕೇಶವಾಯ ನಮೋನಮಃ 1 ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶ ಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತ ಸನ್ನುತ ಪಾದನೀರರುಹದ್ವಂದ್ವನೆ ಸುರರು ತಿಳಿಯರು ನಿನ್ನ ಭೂರಿಮಹಿಮೆಗಳ ಸಾಕಾರವನು ಬಣ್ಣಿಸುವ ನಾರಾಯಣಾಯ ನಮೋ 2 ವೇದವೇದ್ಯನೆ ದುರಿತಶೋಧನೆ ದೈತ್ಯಗಣ- ಛೇದಕನೆ ಸುರಸುಪ್ರಸಾದಕನೆ ಭಕ್ತಜನ- ಸಮಾನಾಧಿಕ್ಯರಹಿತ ಸತತ ಆದಿತ್ಯ ಶತಕೋಟಿತೇಜೋವಿರಾಜ ಮಹ- ದಾದಿಕಾರಣ ಮಧುವಿರೋಧಿ ಮಂಗಲಸುಖಾಂ- ಮಾಧವಾಯ ನಮೋನಮಃ 3 ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು- ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ- ಸನ್ನುತ ಮಹೇಂದ್ರ ವಂದಾರುಜನತ್ರಿದಶಮಂದಾರ ಕೋಮಲಿತ ವೃಂದಾವನವಿಹಾರ ಕಂದರ್ಪಜನಕ ಬಾ- ತುಭ್ಯಂ ನಮಃ 4 ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷ ಮುಷ್ಟಿಕಾಸುರವೈರಿ ಮುನಿಜನಮನೋಹಾರಿ ಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇ ಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆ ತುಷ್ಟಿಯನು ನೀನಿತ್ತು ಸಲಹೊ ಸಾಮಜವರದ ತುಭ್ಯಂ ನಮೋ 5 ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತ ಬುಧಜನಪ್ರಿಯ ಭೂತಭಾವನ ಜಗನ್ನಾಥ ಮದನಕೋಟಿಸ್ವರೂಪ ವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ- ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸ ಮಧುಸೂದನಾಯ ನಮೋ 6 ಅಕ್ರೂರವರದ ಸದತಿಕ್ರಮರ ಗೆಲಿದ ಹಯ- ವಕ್ತ್ರ ವೈಕುಂಠಾಖ್ಯ ಪುರವಾಸ ಜಗದೀಶ ಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನು ಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ- ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿ ತ್ರಿವಿಕ್ರಮಾಯ ನಮೋನಮಃ 7 ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು- ದಾಮಸಖ ಪರಿಪೂರ್ಣಕಾಮ ಕೈರವದಳ- ಸುಜನಸ್ತೋಮಸುರಕಾಮಧೇನು ಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ- ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ- ಪ್ರಾಜ್ಞ ವಾಮನಾಯ ನಮೋನಮಃ 8 ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ- ರಾಧಭಂಜನ ಭವಾಂಬೋಧಿಕುಂಭಜ ಭಜಕ- ಚತುಷ್ಟಾದ ಪಾವನಚರಿತನೆ ಗಾಧಿಜಾಧ್ವರಪಾಲ ಗರುಡಧ್ವಜ ದಯಾಳು ನಾದಬಿಂದು ಕಲಾತೀತ ರುಕ್ಮಿಣಿನಾಥ ಶ್ರೀಧರಾಯ ನಮೋನಮಃ 9 ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ- ಕಾಶ ಪಾಲಿತನಿಖಿಳಭೂಸುರವ್ರಜ ಮಂದ- ದೂಷಣಾದ್ಯ ಸುರಹರನೆ ಈಶಪತಿಸೇವ್ಯಾಂಬರೀಶನೃಪವರದ ಪರ- ಮೇಶ ಕೋವಳಪೀತವಾಸ ಕರ್ದಮಶುಕಪ- ಹೃಷೀಕೇಶಾಯ ತುಭ್ಯಂ ನಮೋ 10 ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲ ಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ- ಬುದ್ಧ ಬುಧಜನಸುಲಭ ಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇ ತದ್ವೀಪವೈಕುಂಠಮಂದಿರತ್ರಯ ಸಾಧು- ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11 ಸಾಮಗಾನವಿನೋದ ಸಾಧುಜನಸುಖಬೋಧ ಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತ ಸಮರಂಗ ಭೀಮ ನಾಮಧಾರಕರ ಪರಿಣಾಮರೂಪಕ ಸುಜನ- ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣ ದಾಮೋದರಾಯ ನಮೋ 12 ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯ ವೆಂಕಟಾಚಲಸದಾಲಂಕಾರ ಶೇಷಪರಿ- ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗ ಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತ ಓಂಕಾರನಿಧನ ಸಾಮಕಭಕ್ತರಾನೇಕ ಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ 13 ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದು ಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯ ನೀ ಸಲಹೊ ದೇವದೇವ ಭೂ ಸಲಿಲ ಪಾವಕಾಕಾಶಾದಿ ಭೂತಾಧಿ- ವಾಸ ರಾಕ್ಷಸವನಹುತಾಶ ನಾನಾ ರೂಪ- ವಾಸುದೇವಾಯ ನಮೋ 14 ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲ ವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರ ಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನ ರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ- ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ- ಪ್ರದ್ಯುಮ್ನಾಯ ತುಭ್ಯಂ ನಮಃ 15 ಉದ್ಧವಾದಿ ಸಮಸ್ತ ಭಾಗವತಜನಕಮಲ- ಮಧ್ಯಚರರಾಜಹಂಸಾಯ ಮಾನಸದ ಶ್ರೀಹರಿಯೆ ವೈದ್ಯನಾಥವಿಧಾತನೆ ಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ- ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆ ಅನಿರುದ್ಧಾಯ ತುಭ್ಯಂ ನಮಃ 16 ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾ ಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷ ಮಂಗಲರಿತ ಗುರುತಮ ಗುಣಧ್ಯಕ್ಷನೆ ಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದ ಶರಭಂಗ ಮುನಿಪಾಲ ಶಮಿತದಾನವಜಾಲ ಪುರುಷೋತ್ತಮಾಯನ್ನಮೋ 17 ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್- ವಿಶ್ವತೋಮುಖ ವಿಶ್ವತೋಬಾಹು ಕರುಣಾಕ- ದಯಮಾಡು ಶ್ರೀವಕ್ಷಸ್ಥಲನಿವಾಸನೆ ಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ- ಮೋಕ್ಷದಾಯಕ ಯಜ್ಞಮೂರ್ತಿ ರೂಪತ್ರಯ ಮ- ಅಧೋಕ್ಷಜಾಯ ನಮೋನಮಃ 18 ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು- ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ- ಶಿರಪ್ರಕರಧೀರ ಪ್ರಹ್ಲಾದಾಭಿವರದ ಭೂರೀಕರರೂಪ ಭೂಮಕೀರ್ತಿಕಲಾಪ ಸಾರವಜ್ರಸ್ತಂಭದಿಂ ಬಂದ ನಂದ ಸುಕು- ನಾರಸಿಂಹಾಯ ನಮೋ 19 ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತ ಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ- ನಿರ್ಮಿಸುವ ಆಶ್ಚರ್ಯಕೃತ ಸಲೀಲ ಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯ ಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ- ಶ್ರೀಮದಚ್ಯುತಾಯ ನಮೋನಮಃ 20 ಚೈದ್ಯಮಥನ ಮನೋಜ್ಞಶುದ್ಧಾತ್ಮ ಸರ್ವಜ್ಞ ಹೊದ್ದಿಸಿದ ಪಾರ್ಥನಿಂಗೆ ಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ- ವಿದ್ದ ಮಾನಸವ ಪಾದದ್ವಯದೊಳಿರಿಸೈ ದ- ಜನಾರ್ದನಾಯ ನಮೋನಮಃ 21 ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದ ನಂದಗೋಪನ ಕಂದನೆನಿಸಿ ಬಾಲಕತನದ ಸುಂದರೀರಮಣ ಜಯತು ತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ- ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ- ಉಪೇಂದ್ರಾಯ ತುಭ್ಯಂ ನಮಃ 22 ಸ್ಥಿರಚರಾತ್ಮಕ ಧೇನುಚರ ದೇವಕೀಜಠರ- ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥ ದುರಿತದೂರ ಗಭೀರನೆ ನಿರತಿಶಯ ನಿಜನಿರ್ವಿಕಲ್ಪ ಕಲ್ಪಾಂತಸಾ- ಗರದಿ ವಟಪತ್ರಪುಟಶಯನ ಪುಣ್ಯಶ್ರವಣ ಹರಯೇ ನಮೋನಮಸ್ತೇ 23 ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ- ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ- ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾ ದುಷ್ಟ ನರಕಾದಿದಾನವರ ಮರ್ದಿಸಿದ ಜಗ- ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ- ಹರೇ ಕೃಷ್ಣಾಯ ತುಭ್ಯಂ ನಮಃ 24 ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆ ಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ- ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜ ಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು- ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ- ಲಕ್ಷ್ಮೀನಾರಾಯಣಾಯ ನಮೋ 25
--------------
ತುಪಾಕಿ ವೆಂಕಟರಮಣಾಚಾರ್ಯ
(ಕೋಲ ಹಾಡು) ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀ ರಾಮನ ಬಲಗೊಂಬೆ ರನ್ನದ ಪ. ಭೂಮಿಯೊಳಗೆ ಸೀತಾರಾಮನು ಜನಿಸಲು ಸೀಮೆಯ ನಾರಿ ಜನರೆಲ್ಲ ರನ್ನದಾ ಸೀಮೆಯ ನಾರಿ ಜನರೆಲ್ಲ ನೆರೆದು ಸು ಪ್ರೇಮದಿ ಪಾಡಿ ನಲಿದರು ರನ್ನದಾ 1 ಕುಂಡಲ ಕಂಠ ಮಾಲೆಯ ನೊಸಲಾ ತಿಲಕವು ರನ್ನದ ಮಾಲೆಯ ತಿಲಕನೊಸಲೊಳಗಿರಿಸಿದ ಬಾಲೇರು ಕೂಡಿ ನಲಿವುದ ರನ್ನದ 2 ಸಾರಸಂಭವ ಕ್ಷೀರ ವಾರುಧಿ ತಡಿಯಲ್ಲಿ ಭೋರನೆ ಬಂದು ಸ್ತುತಿಸಲು ರನ್ನದ ಭೋರನೆ ಬಂದು ಸ್ತುತಿಸಲು ರಾಮವ ತಾರನಾಗುವೆನೆಂದು ನುಡಿದನು ರನ್ನದ 3 ಪೃಥಿವಿ ನಾಯಕ ದಶರಥನಲ್ಲಿ ಜನಿಸಿದ ಕಥನೀಯ ಸುಗುಣ ಸಂಭೃತ ರಾಮರನ್ನದ ಕಥನೀಯ ಸುಗುಣ ಸಂಭೃತ ರಾಮ ಕೌಸಲ್ಯ ಸುತನೆಂದು ನಗುತ ಮನ್ಮಥನ ಜನಕನಿಗೆ 4 ಕೌಶಿಕ ಮುನಿಯ ಮಹಾಶೆ ಪೂರಿಸಿ ಯಜ್ಞ ಘಾಸಿ ಮಾಡಿದ ರಾಮ ಘಾಸಿ ಮಾಡಿದ ಜಗ ದೀಶನು ಸಕಲಾಭಿಲಾಷಾ ಪೂರಿಪೆನೆಂದು 5 ಪಾದ ಪಲ್ಲವವಿರಿಸುತ ಕಲ್ಲಾದ ಶಿಲೆಯನ್ನಹಲ್ಯೆ ಮಾಡಿದ ರಾಮ ಕಲ್ಲಾದ ಶಿಲೆಯನ್ನಹಲ್ಯೆ ಮಾಡಿದ ಸಿರಿ ನಲ್ಲ ಶಿವನ ಮಹ ಬಿಲ್ಲ ಮುರಿದನು 6 ಭೂತಳಾಧಿಪಜನವ್ರಾತಮಂಡಲದೊಳು ಸೀತೆಯನೊಲಿಸಿ ಶುಭದಿಂದ ರನ್ನದಾ ಸೀತೆಯನೊಲಿಸಿ ಶುಭದಿಂದ ಸ್ವಜನ ಸ- ಮೇತಾಯೋಧ್ಯಗೆ ಬಂದ ಖ್ಯಾತ ರಾಘವನಿಗೆ 7 ಜನಕನ ವಾಕ್ಯದಿಂದ ಜನಕಾತ್ಮಜೆಯ ಕೂಡಿ ವನಕಾಗಿ ನಡೆತಂದ ವನಜಾಕ್ಷ ರನ್ನದಾ ವನಕಾಗಿ ನಡೆ ತಂದ ವನಜಾಕ್ಷನಲ್ಲಿ ಶೂ- ರ್ಪನಖಿಯ ಮಾನಭಂಗವನು ಗೈದ ರನ್ನದಾ 8 ಖರದೂಷಣಾದಿ ದೈತ್ಯರ ಕೊಂದು ಮಾರೀಚ ದುರುಳನ ಸದೆದಾ ಧುರಧೀರ ರನ್ನದ ದುರುಳನ ಸದೆದಾ ಧುರಧೀರ ಶ್ರೀ ರಾಮ ಪರಿಪಾಲಿಸೆಮ್ಮನು ಕರುಣಾಳು ರನ್ನದ 9 ಪಾತಕಿ ದಶಕಂಠ ಸೀತೆಯನೊಯ್ದನೆಂದು ಕಾತರಗೊಂಡಂತೆ ಜನಕೆಲ್ಲ ರನ್ನದಾ ಕಾತರಗೊಂಡಂತೆ ಜನಕೆಲ್ಲ ತೋರ್ದ ರಘು ನಾಥನ ಮೊಖಲೀಲೆ ಖ್ಯಾತಿಯ ಪೊಗಳುತ10 ಮಂದರಾವಣ ಮೋಸದಿಂದ ಕೆಡಹಿದಂಥ ತಂದೆಯ ಸಖನಿಗಾನಂದ ಪದವನಿತ್ತ ತಂದೆಯ ಸಖನಿಗಾನಂದವ ಸಲಿಸಿ ಕ- ಬಂಧನ ದೈತ್ಯಯೋನಿ ಇಂದ ಬಿಡಿಸಿದಗೆ 11 ಬೇಡತಿ ಶಬರಿಯನ್ನು ನೋಡಿ ರಕ್ಷಣೆ ಮಾಡಿ ಪ್ರೌಢ ಮಾರುತಿಯಿಂದ ಕೂಡಿದ ರನ್ನದಾ ಪ್ರೌಢ ಮಾರುತಿಯನ್ನು ಕೂಡಿ ರವಿಜನ ಕಾ ಪಾಡಿ ವಾಲಿಯ ವಧೆ ಮಾಡಿದ ರನ್ನದಾ 12 ಪ್ರಾಣಾತ್ಮಜನು ನಾಗವೇಣಿಯ ವಾರ್ತೆಯ ತಾರೆ ಜಾಣತನದಲಿದ ಕ್ಷೀಣಾಂಬುಧಿಯೊಳಂದು ಜಾಣತನದಲಿದ ಕ್ಷೀಣಾಂಬುಧಿಯೊಳು- ಪ್ರ ವೀಣತನದಿ ಸೇತು ಕಾಣಿಸಿದವನಿಗೆ 13 ದೋಷಿ ರಾವಣನನು ನಾಶಗೈದಸುರಾರಿ ನೀಶ ನೀನೆನುತ ವಿಭೀಷಣಗೊರವಿತ್ತಾ ಈಶ ನೀನೆನುತಲಿವಿಭೀಷಣಗೊರವಿತ್ತ ವೈರಿ ಜಗದೀಶ ರಾಮನಿಗೆ 14 ಸೃಷ್ಟಿಜಾತೆಯ ಕೂಡಿ ಪಟ್ಟಾಭಿಷೇಕಗೊಂಡು ಶಿಷ್ಟ ರಕ್ಷಕನಾದ ಸಿರಿನಾಥ ರನ್ನದಾ ಶಿಷ್ಟ ರಕ್ಷಕನಾದ ಸಿರಿನಾಥ ವೆಂಕಟ ಬೆಟ್ಟದೊಡೆಯ ನಮ್ಮಭೀಷ್ಟವ ಕೊಡುವನ 15
--------------
ತುಪಾಕಿ ವೆಂಕಟರಮಣಾಚಾರ್ಯ
(ಜಗನ್ನಾಥದಾಸರು) ಇಂದು ಪ ಕಂಗಳ ಧಣಿ ರಂಗವೊಲಿದ ಮಹಾತ್ಮರ ಅ.ಪ ದ್ವಾಪರದಲ್ಲಿಯ ಶಲ್ಯರು ಇವರಂತೆ ತಪಸಿ ಪ್ರಹ್ಲಾದನ ಅನುಜರು ಇವರಂತೆ ಕಪಟರಹಿತ ಕಲ್ಕೀರ ಭೂಪನ ರೂಪರೇಶೆಯ ನಿರ್ಮಿಸಿ ಮೆರೆದವರ 1 ಎಂಥ ಪುಣ್ಯವಂತರು ನಮ್ಮ ಹಿರಿಯರು ಇಂಥ ಮಹಾತ್ಮರ ಸೇವಿಸಿ ಬದುಕಲು ನಿಂತು ಮನದಿ ಇವರ ನಾಮ ಭ್ರಾಂತಿಯಾಗಲು ಸಂತೋಷದಿ ಶಾಂತ ಹೊಳೆ ಹರಿಸುವರನು 2 ಶಿಷ್ಟ ಸದಾಚಾರ ಸೃಷ್ಟಿಸಿ ಜಗದಲಿ ಶ್ರೇಷ್ಠ ದಾಸರೆಂದು ಖ್ಯಾತರಾಗಿಹರ ಅಷ್ಟಮಾಂಗ ಸಾಷ್ಟಾಂಗದಿ ಎರಗಲು ಸೃಷ್ಟೀಶ ಸಿರಿವತ್ಸಾಂಕಿತನ ತೋರ್ಪರ 3
--------------
ಸಿರಿವತ್ಸಾಂಕಿತರು
(ಧರ್ಮಸ್ಥಳ ಮಂಜುನಾಥನನ್ನು ನೆನೆದು) ಯಾಕೆನ್ನ ಮೇಲೆ ನಿರ್ದಯ ಶ್ರೀಮಂಜುನಾಥ ಲೋಕೇಶ ಮಾಡು ನಿರ್ಭಯ ಪ. ಪಾಕಹಪ್ರಮುಖದಿವೌಕಸಮುನಿಜನಾ- ನೀಕವಂದಿತಪದಕೋಕನದ ಕೋವಿದ ಅ.ಪ. ಪಾಪಾತ್ಮಪಾಪಸಂಭವ ನಾನೆಂಬುವದಕಾ- ಕ್ಷೇಪವೇನಿಲ್ಲೋ ಮಾಧವ ಶ್ರೀಪರಮೇಶ್ವರ ಕೋಪಕಲುಷಹರ ತಾಪತ್ರಯಶಮನಾಪದ್ಭಾಂಧವ ಗೋಪತುರಂಗ ಮಹಾಪುರುಷ ಗಿರೀಶ 1 ಸೋಮಸುರ್ಯಾಗ್ನಿಲೋಚನ ಸದ್ಗುಣಪುಣ್ಯ- ನಾಮ ಪಾಪವಿಮೋಚನ ವ್ಯೋಮಕೇಶಾಚ್ಯುತಪ್ರೇಮ ಮಹಾಮಹಿಮ ಕಾಮಾರಿ ನಿನ್ನ ನಾ ಮರೆಹೊಕ್ಕೆನು ಹೇ ವiಹಾದೇವ ಸೋಮಚೂಡಾಮಣಿ 2 ಧರ್ಮಮಾರ್ಗನಿಯಾಮಕ ಸತ್ಯಾತ್ಮ ಪರ- ಬ್ರಹ್ಮ ಸುಜ್ಞಾನದಾಯಕ ನಿತ್ಯ ಸತ್ಕರ್ಮಪ್ರೇರಕ ಗಜ- ಚರ್ಮಾಂಬರಧರ ದುರ್ಮತಿಪ್ರಹರ ಭರ್ಮಗರ್ಭಜ ಭವಾರ್ಣವತಾರಕ 3 ಕಪ್ಪ ಕಾಣಿಕೆಗಳನು ತರಿಸುವರ- ಣ್ಣಪ್ಪದೈವವೆ ದೂತನು ತಪ್ಪದೆ ಚಂದಯ ಹೆಗ್ಗಡೆಯರ ಮನದೊ ಳಿಪ್ಪ ದಧಿಮಥನ ತುಪ್ಪದಂತೆಸೆವ ಕರ್ಪೂರಗೌರ ಸರ್ಪವಿಭೂಷಣ 4 ಪೊಡವಿಗಧಿಕವಾಗಿಹ ಕುಡುಮಪುರ- ಕ್ಕೊಡೆಯ ಭಕ್ತಭಯಾಪಹ ಕಡಲಶಯನ ಲಕ್ಷ್ಮೀನಾರಾಯಣಗತಿ- ಬಿಡೆಯದವನು ನಿನ್ನಡಿಗೆರಗುವೆ ವರ ಮೃಡಶಂಕರ ಕೊಡು ಕೊಡು ಮನದಷ್ಟವ 5
--------------
ತುಪಾಕಿ ವೆಂಕಟರಮಣಾಚಾರ್ಯ
(ನವಗ್ರಹ ಸ್ತೋತ್ರ) ಸತ್ಕಟಾಕ್ಷವಿರಿಸು ದಕ್ಷನಖವಜ್ರಿರಿಪುಪಕ್ಷದಹಿಸು ವಿರೂಪಾಕ್ಷ ಶರಣು ಪಕ್ಷವೃತ್ವಯನ ಸಂವತ್ಸರಾಖ್ಯ ದಯಮಾಡು ಶರಣೆಂದು ನಮಿಪೆ ನಿನ್ನ 1 ತೇಜೊರಾಶಿಯಾಗಿ ಮೆರೆವ ಕಮಲ ಘೂಕ ತಸ್ಕರರ ಗಣವ ನಾದಿಪತಿ ಗ್ರಹರಾಜ ನಿನ್ನ ಪದವ ವ್ಯಾಧಿಗಳ ಪರಿಹರಿಸು ಪಾವನಾತ್ಮ ಸಲಹೆನ್ನ ನಿರ್ಮಲಾತ್ಮ2 ನೀರುಮರಬಳ್ಳಿಸಕಲೌಷಧಿಗಳ ತಾರೆಗೊಲಿದಾಕೆಯಲಿ ಬುಧನಪಡದೇ ರಾಶಿ ಸಂಚಾರ ಮಾಳ್ಪೆ ಮೋಹದ ಬಲೆಯ ನೀರಜಾಕ್ಷ ಸಮನೋಜ ಮಾದೇವಿಸಹಜ 3 ಗುರುಮಿತ್ರ ಸಜ್ಜನತ್ರ ವ್ಯಾಮೋಹಗೊಳಿಸದಿರು ದಂಡಪಾಣಿ ರಾಜಕರುಣಾ ಪಾತ್ರನೆ ಕಾಮಚಾರಜ ಬಹುವಿಧಾಮಯವ ಪರಿಹರಿಸಿ ನೀ ಮನೋಹರ್ಷ ಪಾಲಿಸು ಧೀರನೆ ಕಮನೀಯ ಕಾಂತಿ ಕುಹಕಜನವಾರಿ4 ಪದುಮಗಳಿಗೆರಗುವೆನು ಪಾಲಿಸೆಂದು ಮಧು ವಿರೋಧಿಯ ಮನೋಭವನಣುಗ ಮಾತಿನಲಿ ಚದುರತೆಯನಿತ್ತು ಚಾತುರ್ಯಗೊಳಿಸು ಸದಯಾವಲೋಕ ನೀನೆಂದು ತಿಳಿದೆ ಮಾತ್ಸರ್ಯವೆಲ್ಲಬಿಡಿಸು ಪಾದ ಸ್ವರ್ಣವರ್ಣ ಸುಲಲಿತಾಂಗ 5 ಮಂತ್ರಜ್ಞ ಚೂಡಾಮಣಿ ಸದುಪಾಯಗಳ ತಿಳಿಸಿ ಸುರರ ಕಾವ ಉದಿತನಾಗಿರೆ ಸಕಲ ಬುಧರಿಗನುಕೂಲ ನಿತ್ಯದಲಿ ನಿಖಿಳ ಗ್ರಹೋನ್ನತ ಶಕ್ತಿಯೇ ಸಕಲಾರ್ಥ ಪಡದೀವನೆ ನಿನ್ನ ನಮಿಸುವೆನು ನೀನೊಲಿದು ಸಲಹೊ6 ಭಾರ್ಗವನೆ ಭಜಿಪೆ ನಿನ್ನ ತಪ್ಪು ಮರತು ಮುಖ್ಯವೆಂಬರ್ಥವರಿತು ಸೇವೆಗನುಕೂಲನಾಗಿರುವೆ ಕುರಿತು ಕಾಪಾಡು ಕರುಣ ವಹಿಸು7 ಮುನಿಸದಿರು ನಮ್ಮಮೇಲೆಂದೆಂದಿಗು ನಿನ್ನ ಘನವ ತ್ಯಜಿಸು ಭಂಗ ಶಕ್ತರಹರೆ ಪೇಳು ಮನ್ನಿಸುವ ಮಮತೆ ತಾಳು ಕನಸಿಲಾದರು ಕ್ರೋಧವಿಡದೆ ಕಾಪುವುದೆಂದು ನಿರುತದಿಂ ಕೈ ಮುಗಿದು ಬೇಡಿಕೊಳುವೆ 8 ವೀರ್ಯ ವಹಿಸಿದ ರಾಹು ಕೇತುಗಳನು ಶೌರ್ಯಾದಿಗಳ ದಯ ಮಾಡಿರಿ ಧಾರವೆಂದಿತ್ತಹರ್ಯಜ್ಞೆಯಿಂದ ನಾರ್ಯತನವೇನಿವರೊಳಿದ್ದರರಿತು ಮಂಗಳವಿತ್ತು ಸೌಖ್ಯ ಪಾಲಿಸಲಿ9
--------------
ತುಪಾಕಿ ವೆಂಕಟರಮಣಾಚಾರ್ಯ