ಒಟ್ಟು 412 ಕಡೆಗಳಲ್ಲಿ , 77 ದಾಸರು , 384 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಂದೇ ಬೇಡುವೆ ನಿನ್ನನು ನಿನ್ನಡಿಗಳನೆಂದಿಗು ನೆನೆವುದನು ಪ. ಒಂದೇ ಬೇಡುವೆನು ಮುಕುಂದ ಇದರ ಬಲ ದಿಂದ ಸರ್ವಾರ್ಥವ ಹೊಂದುವ ಮನದಿಂದ ಅ.ಪ. ಪಾತಕಗಳನೆಲ್ಲ ಪರಿಹರಿಸುವ ದುರ್ವಿ- ಘಾತಕವೈರ ಕತ್ತರಿಸುವುದು ಶ್ರೀಕರುಣಿಯ ಸನ್ನಿಧಾನವನಿರಿಸುವ ಆತತಾಯಿಗಳ ಭಂಗಿಸಿ ಬಾಧೆ ಪಡಿಸುವ 1 ಉಂಬಾಗ ಉಡುವಾಗ ಕೊಂಬಾಗ ಕೊಡುವಾಗ ತುಂಬಿದ ಜನರೊಡನಾಡುವಾಗ ನಂಬಿದ ಸತಿಯೊಳು ನಯನುಡಿ ನುಡಿವಾಗ ಅಂಬುದನಿಭ ನಿನ್ನ ಹಂಬಲಗೊಳುವುದ 2 ನಡೆವಾಗ ನುಡಿವಾಗ ಮಡಿಯನುಟ್ಟಿರುವಾಗ ಪೊಡವಿ ಪಾಲಕರೊಡನಾಡುವಾಗ ಕಡಲಶಯನ ನಿನ್ನ ನೆನೆವರೆ ನಾಚಿಕೆ ಕಾಲ ದೃಢದಿಂದ ಸ್ಮರಿಸುವ 3 ಖೇದ ಮೋದಗಳೆಂಬ ಭೇದವಿಡದೆ ಯಾವಾ- ಗಾದರು ಸರಿಯಾಗಿ ಸ್ಮರಿಸುವರ ಕಾದುಕೊಂಡಿರುವಂಥ ಕರುಣಿಯೆಂಬುದರಿಂದ- ಗಾಧ ಮಹಿಮೆ ನಿನ್ನ ಹಾದಿ ತೋರಿಸುವುದ 4 ಶ್ರಮವಿಲ್ಲದೆ ಸ್ಮøತಿ ಭ್ರಮಣೆ ಬಿಡಿಸುವ ಶ್ರೀ- ರಮಣ ವೆಂಕಟಗಿರಿ ನಾಯಕನೆ ನಮಿಸಿ ಬೇಡವೆನೆಂಬ ಮಮತೆಯಿರಿಸಿ ನಿನ್ನ ಕಮನೀಯಪದಕಲ್ಪದ್ರುಮ ನೆರಳಿರಿಸೆಂದು 5
--------------
ತುಪಾಕಿ ವೆಂಕಟರಮಣಾಚಾರ್ಯ
ಒಂದೇ ಮತ ಹರಿಯ ಮತ ಒಂದೇ ಭಾವ ಸಿರಿಯರಸನ ಭಾವ ಸಲಹಿದ ನರಹರಿ ಒಂದೇ ಮನದಂಬರೀಷನ ಕಾಯ್ದ ಹರಿ ಒಂದೇ ಮನದಿ ಧ್ರುವನ ಕಾಯ್ದ ಹರಿ ಒಂದೇ ಗಳಿಗೆಯಲಿ ತನ್ನುಂಗುಟದಿ ಸೋಕಿಸೆ ಕಲ್ಲಾಗಿದ್ದಹಲ್ಲೆಯ ಪೆಣ್ ಮಾಡಿದ ತಂದೆಯಂದದಿ ಭಕ್ತರ ಹಿಂದೆ ಕಾದಿದ್ದು ಕರುಣಾಸಿಂಧು ಭಕ್ತರ ಬಂಧು ಸುಂದರಿ ಸಿಂಧುಸುತೆಯರಸನ ನಿತ್ಯ ನೆನಯಿರಿ ಹರಿ ಭಕ್ತರು 1 ಸಾರ ನಾಲ್ಕು ಯುಗದಾಧಾರ ನಾಲ್ಕು ಮುಖದಲಿ ನೆಲಸಿ ಸೃಷ್ಟಿಕಾರ್ಯವ ನಡೆಸಿ ನಾಲ್ಕು ಮುಖ ಬೊಮ್ಮನಲಿ ನಾನಿಲ್ಲವೆನಿಸಿ ನಾಲ್ಕು ಯುಗದಲಿ ಜನಿಸಿದ ರಕ್ಕಸರಿಗೆ ತಿಳಿಸಿ ನಾಲ್ಕು ಲೋಕದಿ ಮೆರೆದ ನಾಕಚಾರ ವಂದ್ಯ ನಾಲ್ಕು ಹಸ್ತದಿ ನಾಲ್ಕು ವೇದತಂದಾ ಮೂರ್ತಿ ನಾಲ್ಕು ವೇದದ ಸಾರದಮೃತ ಭಕ್ತರಿಗಿತ್ತು ಹದಿನಾಲ್ಕು ಲೋಕಕೆ ನಾನೇ ಕರ್ತನೆಂದರಿಸಿ ನಾಲ್ಕು ವಿಧದಲಿ ಕಾವ ಶ್ರೀ ಶ್ರೀನಿವಾಸನ ಭಕ್ತರಾದರೆ ಈ ಕಲಿಯುಗದಿ ನಾಲ್ಕು ಜನರು ಮೆಚ್ಚುವರು ನಿಮ್ಮ ಹರಿ ಭಕ್ತರೆ ಕೇಳಿ2 ನಿನ್ನ ಸಹವಾಸ ಸೈ ನಿನ್ನ ಒಡನಾಟ ಸೈ ನಿನ್ನ ರೂಪ ಚತುರ ಬುದ್ಧಿ ಎನ್ನ ಸೈ ಎನ್ನಲಾಪರೆ ನಿನ್ನ ಕೈ ಚಳಕವಿಲ್ಲದಲೆ ಜೈಸುವದೆಂತೀ ಕಲಿಕಾಲದಿ ಸ್ವಾಮಿ ಜೈಲುವಾಸದಿ ಕೂತು ನಿನ್ನ ಕಲ್ಯಾಣವ ಕಟ್ಟಿದರೊ ನಿನ್ನ ಭಕ್ತರು ಜೈ ಕರುಣಾಕರ ನಿನ್ನ ಭಕ್ತರ ಮಹಿಮೆ ನಾ ಪೊಗಳುವದೆಂತೊ ಜೈ ಎನಿಸಿಕೊಳ್ಳಲು ನಿನ್ನೊಲುಮೆ ಕಾರಣವಲ್ಲವೆ ಜೈವೆಂಕಟ ಶ್ರೀಶಾ ಶ್ರೀ ಶ್ರೀನಿವಾಸ ನಿನ್ನ ಭಕ್ತರಿಗೆ ಜಯ ಅಪಜಯವೆಲ್ಲಿ ನಿನ್ನ ಭಕ್ತರಿಗೆ ಎಂದೆಂದಿಗೂ ಜೈ ಹರಿಭಕ್ತರ ನೆನೆಯಿರಿ ಹರಿಭಕ್ತರು 3 ಯನ್ನ ಯತ್ನವೇನಿಲ್ಲಿದರೋಳು ಪನ್ನಗಾದ್ರಿ ನಿವಾಸನಲ್ಲದೇ ಯನ್ನ ಯತ್ನ ಸಲ್ಲುವುದೇ ಎನ್ನ ಮನಸಿಲಿ ಬಂದು ನಿಂದು ತಾನೇ ನುಡಿಸಿದನಿಂದು ಚೆನ್ನಗಿರಿಯರಸ ಭಕ್ತ ಜನ ಬಂಧು ಬಂದು ನಿಂದು ಎನ್ನ ಮನದಭಿಲಾಷೆ ಸಲಿಸೆ ದೀನ ವತ್ಸಲನು ಎನ್ನ ಕರದಲಿ ಬರೆಸಿ ನಲಿದಾಡಿದ ತನ್ನ ವಾಣಿಯನಿತ್ತು ಎನ್ನ ಕುಲದೈವ ಶ್ರೀ ಶ್ರೀನಿವಾಸನ ಕೃಪೆ ಎನ್ನ ಮೇಲೆಂತುಟೊ ಕಾಣೆ ಇನ್ನು ಈ ವಾಣಿ ಹರಿಯದೆಂದು ನುಡಿವುದು ಹರಿಭಗವದ್ಭಕ್ತರು 4 ಪಾಮರರಿಗೆ ಕಲ್ಪತರು ಪಾಮರರಿಗೆ ಜಗದ್ಗುರು ವರವ ತೋರಿ ಪಾಮರರ ಪುನೀತರನು ಮಾಡೆ ಹರಿ ಪಾಮರೆಂದು ಲೆಕ್ಕಿಸದೇ ತಾವಲಿದು ನುಡಿಸಿದ ಪತಿತ ಪಾವನ್ನ ಶ್ರೀ ಶ್ರೀನಿವಾಸನದೇ ಈ ಉಕ್ತಿಯಲ್ಲರ ನೃತ್ರವಿಲ್ಲೆಂದು ತಿಳಿದು ಪಾಮರರನ್ನುದ್ಧರಿಸಲು ಹರಿಭಕ್ತರು ಪಠಿಸುವುದು ಈ ನುಡಿಯ 5 ಜತೆ ಶರಣು ಭಕ್ತರ ಪಾಲ ಶರಣು ಶ್ರೀಲೋಲಾ ಶರಣು ನಿನಗೆ ಸದಾ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ಒಲವಿಲ್ಲವೆನ್ನಬಹುದೇ ನೀರೆ ನಿನ್ನಲ್ಲಿ ಚೆಲುವ ವೇಲಾಪುರದ ಚೆನ್ನಿಗನಿರವ ನೋಡಿ ಪ ತರಳೆ ನಿನ್ನಯ ಮೋಹ ವಿರಹದಿರವದ ಬಗೆಯ ಸ್ಮರನರಳ ಸರಳುಗಳ ಉರವಣಿಯ ಘನವಾ ಪರೆಯದಿಂ ಮೋದಕದಿ ಬಿಂದುಗಳು ಮೊಳಗೆ ಕ ಸ್ತುರಿ ತಿಲಕ ಮಸುಳಿಸಲು ಬಂದ ಗುಣಮಣಿಯೇ 1 ನೀಲಜೀಮೂತಸನ್ನಿಭದೋರೆದುರುಬಿನ ಮೇಲೆ ಸುತ್ತಿದ ಬೆಂಮುರಿ ಜಾರೆಗುರುಳೂ ಭಾಳದಿಂ ಪರೆಯೆ ಕಡುತವಕದಿಂದೆನ್ನ ನುಡಿ ಗೇಳುತಲೆ ಬಂದನಿದೆ ನೋಡೆ ಗುಣಮಣಿಯೇ 2 ಸೋಗೆ ಮುಡಿಯಳೆ ನಿನ್ನ ಕಾಂಬೆನೆಂದರ್ಥಿಯಲಿ ರಾಗ ಮಿಗೆ ವೈಕುಂಠ ವಿಠಲನಾಥ ತಾನಾದ ಬೇಗದಿಂ ನೆರೆದು ಸುಖಿಯಾಗು ಪೆಣ್ಮಣಿಯೆ 3
--------------
ಬೇಲೂರು ವೈಕುಂಠದಾಸರು
ಒಲ್ಲೆನೀ ಕವಚ ಕುಂಡಲಗಳನ್ನು ಒಲ್ಲೆ ನಾನು ಕಿರೀಟ ಪಾದುಕೆಗಳನ್ನು ಪ ಹಗಲು ಹಾದರಗಿತ್ತಿಯಂತಿಪ್ಪ ಮನುಜನಿಗೆ ಸೊಗಸುವುದು ಸೊಗಸದೆಂಬರುಹಿಲ್ಲದೇ ಜಗದುದರ ನಿನ್ನಿಂದ ಶೋಭಿಸುವನಘ್ರ್ಯದ ವ ಸ್ತುಗಳ ಎನಗೀಯಲೇತಕೆ ಮೆಚ್ಚಿದೆಯೋ ದೇವ 1 ನೋಡಲೆವೆ ಸೀವುದಿದನಿಟ್ಟು ಕೈಕೊಂಡ ಪ್ರಾಣ ಗೂಡಿನೊಳಗಿಹುದೇ ಅಕಟಕಟ ಹರಿಯೇ ಬೇಡವೀ ಮಾಯ ಕೃಪೆಯಿಂದ ಸದ್ಭಕುತಿಯ ಜೋಡ ತೊಡಿಸಿದನೊಲ್ಲೆ ಕಾಡಬೇಡವೋ ದೇವ 2 ಶಿರಕೆ ಕರ್ಣಕೆ ಚರಣಗಳಿಗೆ ಕಥೆಯನ್ನು ಪೇ ಳ್ದೆರಗುವುದನೊಲಿದು ಕುಣಿದಾಡುವುದನು ಕುಂಡಲ ಕಿರೀಟಗಳನು ವರ ಪಾದುಕೆಗಳ ನಾನೊಲ್ಲೆ ಹರಿಯೇ 3 ನಿನ್ನ ದಾಸಾನುದಾಸ ದಾಸರ ಗುಣಾರ್ಣವದೊ ಳೆನ್ನೊಳೆಳ್ಳನಿತುಂಟೆ ಅಕಟಕಟ ಹರಿಯೇ ಬನ್ನಬಡಿಸಲು ಬೇಡ ದಕ್ಕದೀಯುಡುಗೊರೆಯು ಚುನ್ನವಾಡುವರು ಧಾತ್ರಿಯ ಮನುಜರೆಲೆ ದೇವ 4 ಇದನು ಕೊಡಬೇಕಾದಡೆಯು ಮುಕ್ತ್ಯಾಂಗನೆಯ ಮದುವೆಯನು ಮಾಡಿ ಯಾಬಳಿಕನಿತ ವೊದವಿಸುವುದುಚಿತ ಒಪ್ಪಂದವಾಗಿಹುದು ಚದುರ ವೈಕುಂಠ ವೇಲಾಪುರಾಧೀಶ 5
--------------
ಬೇಲೂರು ವೈಕುಂಠದಾಸರು
ಓ ದಯಾನಿಧೇ ನೀ ದಯಮಾಡೋ ಓಂಕಾರ ಪ್ರಣವ ಮೊದಲೋ ಪ ಬೀದಿ ಪದಗಳ ಪೂಜ್ಯಮಾಗಲಿ ಸಾಧು ಜನ ಹೃದಯಾಂತರಸ್ಧಿತಿ1 ರಾಧೆಯರಸ ಪರಾತ್ಪರನೆ ಜಾಯ ವೇದನಿಜ ವೇದಾಂತರಸ್ಥಿತಿ2 ಕೋಲುಪೇಟೆ ಪುರೀಶ ತುಲಸಿ ಮೂಲವಿಗ್ರಹದ ನಾದ ಕಾರಣ 3
--------------
ಚನ್ನಪಟ್ಟಣದ ಅಹೋಬಲದಾಸರು
ಕಂಜಾಕ್ಷ ಹರಿಯ ಕಂಡಲ್ಲದೆ ಈಪಂಜರದಿ ಈ ಗಿಣಿ ನಿಲ್ಲದೆ ಪ. ಬಾಲತÀನದಲ್ಲಿ ಮನೆಮನೆಯ ಪೊಕ್ಕುಪಾಲಕುಡಿದನು ಮನದಣಿಯಲಾಲಿಸಿದವನು ಇನ್ನು ಮುನಿಯಲೋಲಾಕ್ಷಿ ಬಿಡನ್ಯಾಕೀ ಗÀಸಣೆಯ 1 ಏಳುವರುಷದ ಶಿಶು ಪೋಗಿಆಲಸ್ಯ ಹಸುತೃಷೆÉಯ ನೀಗಿಶೈಲವಾಗಿ ನಿಂತಿದ್ದ ನಮಗಾಗಿಕಾಲಮ್ಯಾಲೆ ಬಿದ್ದನಿಂದ್ರ ಬಾಗಿ 2 ಕಾಳಿಂದಿಯ ಮಡುವಿನೊಳಾಡಿಕಾಳಿಯಾ ನಾಗಗೆÉ ಮದ ಹುಡಿಮೇಲೆ ಅವರೊಳು ಕೃಪೆಮಾಡಿಪಾಲಿಸಿದ ಕರುಣದಿ ನೋಡಿ3 ಪಾರಿಜಾತದ ಪೂಗಳ ತಂದುನಾರದ ಮುನೇಂದ್ರ ತಾನೆ ಬಂದುಸಾರಿದನಲ್ಲೆ ಗತಿ ನೀನೆಂದುನರ ಸುರರುಗಳಿಗೆ ಬಂಧು 4 ವೃಂದಾವನದೊಳಿವನ ಲೀಲೆ ಆ-ನಂದವನುಣಿಸಿತೆಲೆ ಬಾಲೆಎಂದವನ ಕತೆ ಕರ್ಣದೋಲೆ ಹಾ-ಗೆಂದು ಭಾವಿಸೆ ಪುಣ್ಯಶೀಲೆ 5 ಸಕಲ ಸುರರ ಶಿರೋರನ್ನಮುಕುತಿದಾಯಕ ಸುಪ್ರಸನ್ನಶ್ರೀಕೃಷ್ಣ ಅಟ್ಟಿದ ಉದ್ಧÀ್ದವನ್ನ ಬಂದುವಾಕು ಕೇಳಿ ಮನ್ನಿಸಿಯವನ6 ಚೆಲ್ವ ಹಯವದನನ್ನ ನೀರೆ ನಮ್ಮನಲ್ಲನವನಿಲ್ಲಿ ಬಾರದಿರೆಸುಲಭನ್ನ ಬೇಗ ಕರೆತಾರೆ ನಾ-ವೆಲ್ಲರವನಲ್ಲಿ ಹೋಹ ಬಾರೆ 7
--------------
ವಾದಿರಾಜ
ಕಡುಮುದ್ದು ಮೋಹನನಾದ ಈ ಸೊಬಗ ನ-ಮ್ಮುಡುಪಿನ ಕೃಷúರಾಯನ ನೋಡು ನೋಡುಪ. ಬೊಮ್ಮರುದ್ರಾದಿಗಳ ಕಣ್ಗೆಗೋಚರಿಸದನಿರ್ಮಲ ಚಿನ್ಮಯ ಬೊಮ್ಮವೆÉನಮ್ಮ ಚರ್ಮದೃಷ್ಟಿಗಳಿಗೆ ಗಮ್ಯವಾಯಿತ-ಮ್ಮಮ್ಮ ಇನ್ಯಾರ ಪುಣ್ಯವೊ ನೋಡು ನೋಡು 1 ಶುದ್ಧ ಸಿದ್ಧಾಂತವ ಜಗಕೆ ತೋರಿಸಿದಮಧ್ವಮುನಿಗೊಲಿದು ಬಂದಅಬ್ಧಿಜೆಯರಸನೀತನು ತನ್ನಹೊದ್ದಿದರಿಗರ್ಧ ಶರೀರವನೀವನೆ ನೋಡು ನೋಡು 2 ಪಾದ ಕಟಿ ವಕ್ತ್ರ ನೇತ್ರ ಮೌಳೀಯ ನಲ್ಲಗೊಲ್ಲಪಳ್ಳಿಯ ನೊಲ್ಲದೆ ಬಂದÀನೆ 3 - - - - - - - - - - ಅಲ್ಲಿ ಬೆಣ್ಣೆಗಳ್ಳನೆಂಬೊರಿವನೆಲ್ಲಇಲ್ಲದಿದ್ದರೆಲ್ಲಿಂದೆಲ್ಲಿಗಿಲ್ಲಿಯ ವಾಸ ನೋಡು ನೋಡು 4 ಶ್ರುತಿಗಗೋಚರನೆನಿಪ ಯತಿತತಿಮತಿಗೆ ಮೈಗೊಡದ ಬೊಮ್ಮಪತಿತ ಪಾತಕಿಗಳಿಗೆ ಕ್ಷಿತಿಯೊಳ-ಗತಿ ಸುಲಭವಾಯಿತಿನ್ನು ನೋಡು ನೋಡು 5 ಬಲ್ಲವರೆ ಬಲ್ಲರಿವನ ಈ ಮಹಿಮೆಯದುರ್ಲಭಕ್ಕೆ ದುರ್ಲಭನವಚೆಲ್ವ ಹಯವದನನಾದ ಭಕುತ ಯತಿ-ವಲ್ಲಭನಿಂದಿಲ್ಲಿ ಸುಲಭ ನೋಡು ನೋಡು 6
--------------
ವಾದಿರಾಜ
ಕಥನಾತ್ಮಕ ಹಾಡುಗಳು ನೋಡಬನ್ನಿರಿ ಕಾರ್ಪರೇಶನ ಪಾಡಿರೈ ಸರ್ವೇಶನಾ ರೂಢಿಯೊಳು ಶೇಷಾದ್ರಿನಿಲಯನ ಕೂಡಿಕೊಂಡಿಲ್ಲಿರುವನ ಪ ಚಿಪ್ಪಗಿರಿ ದಾಸಾರ್ಯರೀತರು ಪಿಪ್ಪಲವ ಕಂಡಾಗಲೇ ಕಾರ್ಪರಾರಣ್ಯೆಂಬ ಪದದಿ ಸಂಕ್ಷಿಪ್ತ ಮಹಿಮೆಯ ಪೇಳ್ದರು 1 ಅಪರದಿಗ್ಭಾಗದಲಿ ನೋಡಲು ಸಪತ ಋಷಿಗಳ ಸ್ಥಾನವು ತ್ರಿಪಥಗಾಮಿನಿ ವ್ಯಕ್ತಳಾದಳು ತಪಕೆ ವಿಶ್ವಾಮಿತ್ರರ 2 ಯತ್ರಶ್ವೇತ ಶೃಂಗ ಕೃಷ್ಣಾಚೋತ್ತರ ವಾಹಿನಿಯೊಳು ತತ್ತದಾನ ಸ್ನಾನ ಕಾಸಿಗೆ ಉತ್ತಮವು ಫಲವೀಯಲು 3 ಚಾರುಕೃಷ್ಣಾತೀರವಿದರೊಳು ಕಾರ್ಪರಾಖ್ಯ ಮುನೀಂದ್ರನಾ ಘೋರತಪ ಕೊಲಿದರಳೆ ಮರದಾಗಾರನೆನಿಸಿದ ಧೀರನ 4 ನೀರಜಾಸನ ಮುಖ್ಯ ಸುರ ಪರಿಹಾರ ಸೇವಿತ ಚರಣನ ಸೇರಿದವರಘ ದೂರ ಮಾಡುವ ಘೋರನರಹರಿ ರೂಪನ 5 ಇಂತು ಅಶ್ವತ್ಥಾಂತರದಿ ಸಿರಿಕಾಂತನರಿಯನೆ ವಿಪ್ರರೊಳ್ ಶಾಂತ ನಾರಪ್ಪಯ್ಯನೆಂಬ ಮಹಾಂತರಿಲ್ಲಿರುತಿಪ್ಪರು 6 ದೊಡ್ಡವರ ಗುರುತರಿಯದಿವರನು ದಡ್ಡರೆನ್ನುತ ಭ್ರಾತ್ರರು ದೊಡ್ಡ ಕೃಷ್ಣಾನದಿಯೊಳಿವರನು ಕಟ್ಟಿ ಹಾಕಲು ಕೋಪದಿ 7 ಕಡಲಶಯನನ ಕರುಣದಿಂದಲಿ ದಡಕೆ ಸೇರಿದನಂತರ ದೃಢ ವಿರಾಗದಿ ವೆಂಕಟಾದ್ರಿಗೆ ನಡೆದರಾಗಲೆ ಹರುಷದಿ 8 ಶುಭ ಪಂಕಜ ಷಟ್ವದಾಯಿತ ಚಿತ್ತರು ಕೃಷ್ಣನಿರುತಿಹ ಬೆಟ್ಟದಡಿಯನು ಮುಟ್ಟಿಮಲಗಲು ಸ್ವಪ್ನದಿ9 ಇಲ್ಲಿ ದರ್ಶನವಿಲ್ಲ ನೀವಿರುವಲ್ಲಿ ಪುಣ್ಯಸ್ಥಾನವು ಪೋಗಿರೋ ಭೂಸುರ 10 ಧೇನು ರೂಪದಿ ಬರುವೆ ಕಾರ್ಪರ ಕಾನನದ ಅಶ್ವತ್ಥದಿ ಕಾಣುವುದು ಕ್ಷೀರಾಭಿಷೇಚನ ಧ್ಯಾನಿಸೆನ್ನನು ದ್ವಿಜವರ 11 ಇಂತುಸ್ವಪ್ನದಿ ಸೂಚಿಸಿದ ವೃತ್ತಾಂತವನು ಸಂಚಿಂತಿಸಿ ಕಂತು ಜನಕನ ಇಚ್ಛೆಯಿಂದಲೆ ಸಂತಸದಿ ಗಿರಿಗೊಂದಿಸಿ 12 ಮುಂದೆ ನಡೆದರು ಹಿಂದೆ ಗೆಜ್ಜೆಗಳಿಂದ ಬರುತಿಹ ಗೋಗಳ ಗೋವಿಂದನಂಘ್ರಿಯ ಸ್ಮರಿಸುತ 13 ಕುರುಕಿ ಹಳ್ಳಿಯ ಗ್ರಾಮದಿ ತಿರುಮಲೇಶನ ಕಂಡರು 14 ಗುರುತನು ಕಾಣುತ ಬಂದನು ಎನ್ನುತ 15 ಮುನಿವರನು ಸುಖದಿಂದಿರುತಿರೆ ತಿರೆ 16 ಬಂದರಲ್ಲಿಗೆ ತಮ್ಮ ಗ್ರಾಮದ ಬಂಧು ಬಾಲಕರೆಲ್ಲರು ಕಾಯುವದೆನುತಲಿ 17 ಚಾರು ಶಿಲೆಯೊಳಗೊಂದುದಿನ ಅಂಗಾರದಲಿ ಪ್ರಾಣೇಶನ ಪರಿಹಾರನುನಿಮಗೆಂದರು 18 ಪಾದ ನಿಷ್ಠೆಯಿಂದಲಿ ಸೇವಿಸೆ ಸಿದ್ಧಿಗಳಾಗ್ವವು 19 ನಾರಪ್ಪಯ್ಯರೆಂಬ ಮಹಾತ್ಮರು ಹರಿ ಸಂತತ 20 ಧರಣಿಯನು ಸಂಚರಿಸುತ ಚೆನ್ನೂರ ಗ್ರಾಮದಿ 21 ತೋರಿತಂದಿನ ರಾತ್ರಿಯೋಳ್ ಮಹಿಮೆಯಾ 22 ಭೂಪನ ಸ್ಪಪ್ನದಿ ತರುವನು ತೋರಿಸಿ 23 ಕಟ್ಟಿಸೆಲೊ ಭೂಪತಿಯೆ ಮಂದಿರ ಕೃಷ್ಣವೇಣಿಯ ಗರ್ಭದಿ ಶ್ರೇಷ್ಠನೆನ್ನಯ ಕರುಣದಿ 24 ಸುಪ್ರಭಾತದಲೆದ್ದು ನೃಪತಿಯು ಸ್ವಪ್ನಸೂಚಿತ ಸ್ಥಾನವ ಕ್ಷಿಪ್ರ ನೋಡುವೆನೆನುತ ಸೈನ್ಯದಿ ಕಾರ್ಪರಕೆ ಬಂದಿಳಿದನು25 ಆನೆಗಳು ಕಟ್ಟಿರುವ ಶಿಲೆಗಳು ಕಾಣಿಸುವ ವೀಗಾದರು ನನಸೇವಿಸಿದನು 26 ಮಂದಿರವಮೇಲ್ ನಿರ್ಮಿಸಿ ಇಂದಿರೇಶನ ಪದಕೆ ಭೂಸಂಬಂಧ ವೃತ್ತಿಯನೊಪ್ಪಿಸಿ27 ಹಿಂದೆ ನೋಡಲು ಚಂದ್ರಶೇಖರ ನಂದಿಪತಿ ಮಂದಿರಗಳು ವಂದೇ ವತ್ಸರದೊಳಗೆ ಶಿಲ್ಪಿಗಳಿಂದ ಕಟ್ಟಿದ ಶಿಲೆಗಳು 28 ವೃಷ್ಟಿಯ ಮಹಿಮೆಯ ಕಾಮಿತಾರ್ಥವನೀವುದು 29 ಮಾಸ ದೊ ಶರಧಿ ಸೇರುವ ಸಮಯದಿ 30 ಷೋಡಶ ಕರಗಳಿಂ ಹೊರಟನು ವೃಕ್ಷದಿ31 ತೀರ್ಥ ಸ್ನಾನದ ನರಹರಿ ದರ್ಶನ 32 ದಕ್ಷಿಣಾಯನ ಪರ್ವದಲಿ ಈ ವೃಕ್ಷದೆಡೆಯಲಿ ಸ್ನಾನವು ಮೋಕ್ಷ ಮಾರ್ಗಕೆ ಸಾಧನವು ಪ್ರದಕ್ಷಿಣಾದಿಕಮೆಲ್ಲವು33 ಮಂದಿರವ ಕಾಣುತಲೆ ಶ್ರೀಗೋವಿಂದ ಗೋವಿಂದೆನುತಲಿ ಬಂಧು ವರ್ಗ ಸಮೇತ ಭಕುತರ ವೃಂದ ಬರುವದು ನೋಡಿರೈ34 ಪಾಲಿನಭಿಷೇಕದಿ ಅರ್ಚನ ಪಾಲಕಿಯ ಸೇವಾವಧಿ ವಾಲಗವ ಕೈಕೊಳುತ ಭಕುತರ ಪಾಲಿಸುವ ನರಸಿಂಹನ 35 ವಾರವಾರಕೆ ಭಕ್ತಜನ ಪರಿವಾರ ಸೇವೆಯಕೊಳ್ಳುತ ಘೋರತರ ಸಂಸಾರ ಭಯಪರಿಹಾರ ಮಾಡುವ ದೇವನ 36 ತಪ್ಪದಲೆ ಪ್ರತಿವರ್ಷ ದ್ವಿಜ ಸಂತರ್ಪಣಾದಿಗಳಿಂದಲಿ ಕೊಪ್ಪರದಿ ನವರಾತ್ರ ಮೊದಲಾದುತ್ಸವಾದಿಗಳಾಗ್ವವು 37 ಹಿಂದೆ ಚಾತುರ್ಮಾಸ್ಯ ಕಾಲವು ಬಂದಿರಲು ವಿಭುದೇಂದ್ರರು ಬಂದರಿಲ್ಲಿಗೆ ಶಿಷ್ಯರಾದ ಯತೀಂದ್ರ ನಾರಾಯಣಾರ್ಯರು38 ಆ ಸಮಯದಿ ರಘುನಾಥ ತೀರ್ಥ ಯತೀಶರಿಲ್ಲಿಗೆ ಬಂದರು ತೋಷದಲಿ ವಿಭುದೇಂದ್ರ ತೀರ್ಥಮುನೀಶರವರಿಗೆ ಪೇಳ್ದರು39 ವೃಕ್ಷದಲಿ ಸನಿÀ್ನಹಿತ ನರಹರಿಯಕ್ಷನೆದುರಿಗೆ ನಮ್ಮಯ ಶಿಷ್ಯರೋದುವ ಗ್ರಂಥದರ್ಥ ಪರೀಕ್ಷೆ ಮಾಡಿರಿ ಎಂದರು40 ಮೌನಿರಘುನಾಥಖ್ಯರವರನು ಏನು ಓದುತಿರೆನ್ನಲು ಆನುಪೂರ್ವಿ ಸುಧಾಖ್ಯ ಗ್ರಂಥಾರ್ಥಾನುವಾದವ ಮಾಡಲು41 ಮೇದಿನಿಯಲಿ ವಾದಿಜಯ ಸಂಪಾದಿಸಿರಿ ನೀವೆಂದರೂ ಸಾದರದಿ ನಿಮಗೆಲ್ಲ ಜನ ಶ್ರೀಪಾದರಾಜರು ಎನ್ನಲಿ42 ಸೇವೆಯ ಮಾಡಲು ಒಂದು ವತ್ಸರದೊಳಗೆ ಸತ್ಯಾನಂದ ಯತಿಗಳ ಜನನವು43 ಸತ್ಯಧರ್ಮರು ಬಂದರೀ ಸುಕ್ಷೇತ್ರದರ್ಶನ ಮಾಡಲು ಮುತ್ತಿನ್ಹಾರವ ಪದಕ ಸಹಿತಾಗಿತ್ತರೀ ನರಸಿಂಹಗೆ 44 ಇದ್ದರಿಲ್ಲಿ ಜ್ಞಾನವೃದ್ಧ ಜನಾರ್ದನಾಭಿದ ಒಡೆಯರು ಶುದ್ಧ ಮನದಲಿ ನರಹರಿಯ ಪದಪದ್ಮ ಸೇವೆಯ ಮಾಡುತ45 ಬಿಡದೆ ತಪವಾಚರಿಸಿ ಕಾರ್ಪರದೊಡೆಯನನುಪಮ ಕರುಣವ ನಿತ್ಯದಲಿ ಪರಿಶುದ್ಧ ಮಧುಕರ ವೃತ್ತಿಯಿಂ ತಂದನ್ನವ ಎತ್ತಿ ವೃಕ್ಷಕೆ ಕಟ್ಟುವರು ಇದು ಬುತ್ತಿ ನಾಳೆಗೆ ಎನ್ನುತ47 ಪನ್ನಗಾರಿ ಧ್ವಜನಿಗರ್ಪಿಸಿ ಉಣ್ಣುತಿಹರಾನಂದದಿ48 ಮಂದಮತಿ ಭೂದೇವನೊಬ್ಬನು ನಿಂದೆ ಮಾಡಿದನಿವರನು ತಂದು ಕಟ್ಟಿದ ಅನ್ನ ತಂಗಳೆಂದು ತಿಳಿಯದೆ ಉಂಬರು 49 ನಿಂದೆ ಮಾಡಿದ ವಿಪ್ರನನು ಕರೆಸೆಂದರರ್ಚನ ಸಮಯದಿ ತಂದು ವೃಕ್ಷದಿ ಕಟ್ಟಿದನ್ನವ ತಂದು ಕೆಳಗಿಡಿರೆಂದರು 50 ಪೋಗಲು ವಿಪ್ರನು ಕೆಳಗಿಂತೆಂದರು
--------------
ಕಾರ್ಪರ ನರಹರಿದಾಸರು
ಕಂದನಿಗೆ ಕಾಲಿಲ್ಲವಮ್ಮ, ಪುಟ್ಟಿ-ಪ ದಂದಿಂದ ಈ ಅಂಬೆಗಾಲು ಬಿಡದಮ್ಮ ಅ.ಪ ಮಳೆ ಹೊಳೆ ಕತ್ತಲೊಳು ತರಳ ಮಗ ಬೆದರಿದನೊಕಳೆಯುಳ್ಳ ಮುಖಕೀಗ ಗ್ರಹ ಸೋಕಿತೋಎಳೆಯ ಬೆಳದಿಂಗಳೋಳೆತ್ತಣ ದೃಷ್ಟಿ ತಾಕಿತೊಲಲನೆ ಮೀಸಲ ಹಾಲು ಮೆರೆದೆರೆದ ಪರಿಯೊ 1 ಬೆಣ್ಣೆಯನು ಮೆಲ್ಲುತ ಬೆದರಿ ಬಾಯಾರಿದನೊಉಣ್ಣೆ ಪೂತನಿ ಮೊಲೆಯ ವಿಷ ಸೋಂಕಿತೋಅಣ್ಣ ಪಾಪಿಯ ಭಯಕೆ ಅಂಜಿ ಕಾಲಿಟ್ಟನೊಹೆಣ್ಣು ದೈತೇಯರ ಕಾಲಲಿ ಬಂದ ಸರಕೊ 2 ಧುರವಿಜಯ ಶ್ರೀಕೃಷ್ಣರಾಯಗೆ ನಿಮ್ಮಹರದೇರಂದವ ತೋರಬಂದ ಪರಿಯೋಧರೆಗಧಿಕ ವಿದ್ಯನಗರವಳಿತೆಂದು ಉದಯಗಿರಿಯಿಂದ ಬಂದ ಮುದ್ದು ಬಾಲಕೃಷ್ಣಗೆ 3
--------------
ವ್ಯಾಸರಾಯರು
ಕರುಣಾರ್ಣವ ಶ್ರೀ ಗುರುವರ ಕರುಣಿಸೊ ನೀ ಎನ್ನ ಕರುಣಾಗತ ರಕ್ಷಾಮಣಿ ತವ ಚರಣಾಂಬುಜ ತೋರಿನ್ನ ಪ ಆನತಜನತತಿಜ್ಞಾನದ ಎನ್ನ - ಙÁ್ಞನವ ಕಳೆದಿನ್ನ ಮಾನದಿ ಸಲಹೆನ್ನಾ 1 ಕಾಮಿತ ಫಲಪ್ರದ ಕಾಮ್ಯಾರ್ಥವನೂ ಕಾಮಿಪ ಜನಕಿನ್ನ ಪ್ರೇಮದಿ ಅವರಭಿಕಾಮವ ಪೂರ್ತಿಸಿ ಕಾಮಧೇನುತೆರ ತೋರುವಿ ಘನ್ನ 2 ಶಿಷ್ಟೇಷ್ಟ ಪ್ರದನಿಷ್ಟಘ್ನನೆ ನೀ ಕಷ್ಟವ ಪರಿಹರಿಸಿನ್ನಾ ಎಷ್ಟೆಂಥೇಳಲಿ ಸೃಷ್ಟಿ ಯೊಳಗೆ ನಿನ್ನ ಶ್ರೇಷ್ಠ ಮಹಿಮೆಗಳನ್ನಾ 3 ಶಿಷ್ಟನೆ ನೀ ಪರಮೇಷ್ಟಿಯ ಸತ್ಪದಾ - ಧಿಷ್ಟತನೆಂದಿನ್ನಾ ಪ್ರೇಷ್ಟನೆ ಎನ್ನಯಭೀಷ್ಟೆಯ ನಿತ್ತು ಶ್ರೇಷ್ಠನ ಮಾಡಿನ್ನಾ 4 ಪಾತಕವನಕುಲ ವಿತಿಹೋತ್ರ ಸುಖ ದಾತನೆ ನೀ ಇನ್ನಾ ಈತೆರ ಮಾಡದೆ ನೀತ ಗುರುಜಗ - ನ್ನಾಥವಿಠಲ ಪ್ರಪನ್ನಾ 5
--------------
ಗುರುಜಗನ್ನಾಥದಾಸರು
ಕರೆದರೆ ಓ ಓ ಎನಬಾರದೆ ಮರೆತರು ಕೂಗಿನ ದನಿಕೇಳದೆ ರಂಗ ಪ ಶರಣಜನರು ಸಾಸಿರವಿದ್ದರೇನೋ ಮೊರೆಯಿಡುವವ ಕಂಡರರಿವಾಗದೇನೋ ಅ.ಪ ಲಕ್ಷಜೀವಿಗಳನ್ನು ರಕ್ಷಿಸುವವನೆಂದು ವಕ್ಷದೊಳಿರುವ ಶ್ರೀಲಕ್ಷ್ಮಿ ಹೇಳುವಳು ಪಕ್ಷಿರಾಜನ ಫಣಿಯಕ್ಷನಂಗನೆಯರು ಅಕ್ಷರ ಲೋಕಾಧ್ಯಕ್ಷನೆನುವರು 1 ಯೋಗವನರಿಯೆನು ಯಾಗವನರಿಯೆನು ತ್ಯಾಗ ಮಾಡುವ ಬುದ್ಧಿ ಎಳ್ಳನಿತಿಲ್ಲ ರಾಗ ರಚನೆಗಳ ಅರಿವೆನಗಿಲ್ಲ ನಾಗಶಯನ ಕಾಯೋ ಮಾಂಗಿರಿರಂಗ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕರೆದೆಡೆಗೆ ತಾ ಬರುವ ಕರೆದೆಡೆಗೆ ತಾ ಬರುವ ಪ ಬರುವೆ ತರುವ ಸುಖವ ಮುರುಳೀಧರನು ಅ.ಪ ತಿಳಿಯ ಭಕುತಿಯ ಪಡೆದ ಜನರಿಗೆ ಗೆಳೆಯನಿವ ಬಲು ಸುಲಭನು ಇಳೆಯಸುರರಾದರದಿ ಕರೆಯಲು ಹರುಷದಲಿ ನಲಿನಲಿಯುತಲಿ 1 ಸದನದಲಿ ಹದನಿಲ್ಲ ಈತನಿ ಗೊದಗಿಸುವುದತಿ ಸಾಹಸ ವಿಧಿಯ ಬರಹವು ಇಲ್ಲವೆನುತಲಿ ಹೆದರದಿರಿ ಮಧುಸೂಧನನು 2 ಇದು ನನದು ಇದು ನನದು ಎನುವ ಮದದ ವಚನಕೆ ನಗುತಲಿ ಇದು ನಿನದು ಎನ್ನಲು ಪ್ರಸನ್ನನು ವಿದುರನಾಲಯ ಪೊಕ್ಕಿಹ3
--------------
ವಿದ್ಯಾಪ್ರಸನ್ನತೀರ್ಥರು
ಕಲಿಯುಗದೊಳು ಕಂಡೆನು ನಿನ್ನೊಬ್ಬನ | ಕಲಿವಾಳದನಿಂಗಪ್ಪ || ಕಲಿತ ಬುದ್ಧಿಯು ಕಡೆಯಲಿ ನಿನ್ನ |ಕೆಲಸಕೆ ಏನೂ ಬಾರದಪ್ಪ ಪ ಎತ್ತು ಎಮ್ಮಿ ಆಕಳ ಹೋರಿ | ಜತನ ಮಾಡೀದೆಪ್ಪ || ಮೃತ್ಯು ದೇವತೆಗೆ ತುತ್ತು ಇದರೊಳು | ಮುಕ್ತಿ ನಿನಗಿಲ್ಲಪ್ಪಾ 1 ಹೊಲಮನಿಯೆಂದು ನಲಿನಲಿದಾಡುತ | ಒಲಒಲ ಗುಟ್ಟುವಿಯಪ್ಪಾ || ಹೊಲಮನಿ ಸಾಧಿಸಿ ಸಂಗಡ |ಒಯ್ದಿಲ್ಲಾ ನಿಮ್ಮಪ್ಪಾ 2 ಶುದ್ಧವಾಗಿ ನೀ ಕೋಶವ ಕಲಿತು | ಬದ್ಧವ ತಿಳಕೋಳಪ್ಪಾ || ಬುದ್ಧಿವಂತನು ನೀ ಸ್ವರ್ಗದ ಸುದ್ದಿಯು | ಸ್ವಲ್ಪವು ನಿನಗಿಲ್ಲಪ್ಪಾ 3 ರೋಗವ ನೀಗಿಸಿ ಜನರಿಗೆ ಭೋಜನ | ಭೋಗವನ್ನು ನೀ ಪಡೆದೆಪ್ಪಾ || ಹೋಗದು ಕರ್ಮವು ಇದರಲಿ ಮುಂದಿನ | ಆಗಮ ಮಹಿಮೆಯ ತಿಳಕೋಳಪ್ಪಾ 4 ಅಪರೂಪದ ನರದೇಹಕೆ ಬಂದು | ವಿಪರೀತ ವಿದ್ಯಾಕಪ್ಪ || ಗುಪಿತದಿ ಭವತಾರಕನ ಭಕ್ತರ |ಕೃಪೆಯನು ನೀ ಸಂಪಾದಿಸಪ್ಪಾ 5
--------------
ಭಾವತರಕರು
ಕಾಣದ ವಸ್ತುವು ಕಾಣುವುದು ಕೇಳದದನಿಯು ಕೇಳುವುದು ಇಂದಿನ ಕಾರ್ಯವು ನಾಳಿನ ಸಂಗತಿ ತಿಳಿಯುವುದು ಚಿರವಹುದು ಪ [ಜೀವ]ಹೇಗಿದ್ದರೆ ಹೀಗಾಗುವುದು ನಾ ಮಾಡುವ ಕೈ ವಶವಹುದು ಮನಸಿನ ಕಶ್ಮಲ ಕಳೆದಿರಬೇಕು 1 ಆಶೆಯ ಪಾಶವು ಸುಟ್ಟಿರಬೇಕು ಸೋದರ ಭಾವವು ನೆಟ್ಟಿರಬೇಕು ನೀ ಗತಿಯೆಂದರೆ ಸಾಕು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಣೆಯೇನೇ ತಂಗಿ | ಇವನಾ ಕಾಣೆಯೇನೇ ತಂಗಿ ಪ ವೇಣುವನೂದುವ ಮುದ್ದು ಮೋಹನ್ನನ ಅ.ಪ ಪೂತನಿಯಸುವಾ ಹೀರಿದನಿವನು ಮಾತೆಗೆ ಬಾಯಲಿ ಜಗವ ತೋರಿದನು 1 ಬಕ ಶಕಟಾಸುರನಿಕರವ ಸದೆದ ವಿಕಟ ಕಾಳಿಂಗನ ಹೆಡೆಯನು ತುಳಿದ 2 ಬೃಂದಾವನದಾನಂದ ಮುಕುಂದ ನಂದನಕಂದ ಮಾಂಗಿರಿಯ ಗೋವಿಂದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್