ಒಟ್ಟು 159 ಕಡೆಗಳಲ್ಲಿ , 38 ದಾಸರು , 112 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೋಗುವೆವಮ್ಮ ಪ ಉದಯವಾಗದ ಮುನ್ನ ಬರುವ ಕಣಮ್ಮ ಕದವ ಬಾರಿಸಿ ಒಳಪೊಕ್ಕ ಕಣಮ್ಮ ಮೊದಲೆನ್ನ ಮಗಳ ತಕ್ಕೈಸಿದನಮ್ಮ ಸದರದಲಿ ಮೊಸರನೆಲ್ಲ ಕುಡಿದ ಕಣಮ್ಮ 1 ಉಟ್ಟ ಸೀರೆಯ ಬೆಲೆ ಏನೆಂದಮ್ಮ ಪಟ್ಟೆ ಕುಪ್ಪಸಕೇನು ಪಣವೆಂದನಮ್ಮ ತೊಟ್ಟು ಕೊಂಡೆನ್ನನು ಬಿಡದೆ ಕಾಣಮ್ಮ 2 ನಸುಗಪ್ಪಿನೊಳು ಸಜ್ಜೆಮನೆಯೊಳಗಮ್ಮ ಮೊಸರು ಪಾಲ್ಬೆಣ್ಣೆಯ ಮೆದ್ದ ಕಾಣಮ್ಮ ಸೊಸೆಯು ಪಿಡಿಯೆ ಬಿಗಿದಪ್ಪಿದನಮ್ಮ ನಸು ಬೆವರಿಡೆ ತನು ಬಿಡದೆ ಕಾಣಮ್ಮ 3 ಜಾರ ಜೋರರ ಶಿಖಾಮಣಿಯಿವನಮ್ಮ ಯಾರೆಂದು ಹೊರಗೊಬ್ಬ ಕರೆಯೆ ಗೋಪಮ್ಮ ಚೋರ ಗಂಡಿಯ ಪೊಕ್ಕು ಓಡಿದನಮ್ಮ 4 ಊಚು ನೀಚುಗಳೇನು ಇವಗಿಲ್ಲವಮ್ಮ ನಾಚಿಕೆನಮಗಾಗುತಿದೆ ಹೇಳಲಮ್ಮ ಕೀಚಕರಿಪು ಕೋಣೆ ಲಕ್ಷ್ಮೀಶಗಮ್ಮ ವಾಚಿಸೆ ನೀನೊಂದ ಮಾತ ನಮ್ಮಮ್ಮ 5
--------------
ಕವಿ ಪರಮದೇವದಾಸರು
ಬಾರಯ್ಯ ಸ್ವಾಮಿ ಬಾರಯ್ಯ ಪ ಬಾರಯ್ಯ ಮುಖವನ್ನು ತೋರಯ್ಯ ತವಪಾದ ವಾರಿಜನಂಬಿದೆ ಮಾರಜನಕ ಬೇಗ ಅ.ಪ ಎಷ್ಟಂತ ಬಳಲಲಿ ನಾನು ಸಂಸಾರ ಕಷ್ಟದ ಕಾಡಿನೊಳಿನ್ನು ಧ್ವಂಸಾಗಿ ಭ್ರಷ್ಟತನದಿ ಬಾಳುವೆನು ಕಂಸಾರಿ ಇಷ್ಟುದಯವು ಬರದೇನು ಆಹ ಶಿಷ್ಟಜನುಮವೆಂದು ಅಟ್ಟಿ ಎನ್ನನು ಇಂಥ ಕೆಟ್ಟ ಬವಣೆಗೆ ಬಲಿಗೊಟ್ಟು ಬಿಡುವರೆ ಈಶ 1 ಜನನಿಜಠರದಲಿ ಎನ್ನ ಏನೆಂ ದೆನುತ ನೂಕಿದಿ ಪೇಳು ಮುನ್ನ ಸಾನಂದನುಪಮನು ತವಚರಣ ಆನಂದನುಕೂಲವಾದಂದಿಲ್ಲೇನ ಆಹ ಅನುಚಿತ್ತವೇನಯ್ಯ ದಿನವು ಪೋಯಿತು ಅರ್ಧ ಮನಕೆತರದಲಿಹಿ ಜನಕನೆ ಕರುಣದಿ 2 ಭಕ್ತವತ್ಸಲನೆಂಬ ಬಿರುದು ಮಾಜ ದ್ಹೊತ್ತು ನಿಖಿಲ ನೀನೆ ಬೆರೆದು ತ್ರಿಜ ಗೆತ್ತಿ ಆಳುವಿ ಮನವರಿದು ನೈಜ ದಿತ್ತು ಪೊರೆವಿ ಭಯತರಿದು ಆಹ ಕರ್ತನೆ ತವಪಾದ ಮರ್ತಿರಲಾರಿನ್ನು ತುರ್ತು ದಯವಾಗೆನ್ನೊಳರ್ತಿಯಿಂ ಶ್ರೀರಾಮ 3
--------------
ರಾಮದಾಸರು
ಬಾರೋ ವೆಂಕಟೇಶ ಬೇಗ ಬಾರೋ ಎನ್ನ ಮನೆಗೆ ಈಗ ಪ. ಬಾರೋ ಲಕ್ಷ್ಮೀರಮಣ ಶ್ರೀಶಾ ಬಾರೋ ಸರ್ವರ ಹೃದಯವಾಸ ಅ.ಪ. ಸರ್ಪಶಯನಾಗಿ ಬೇಗ ಕ್ಷಿಪ್ರದಿ ಲಕ್ಷ್ಮೀಸಮೇತ ಇರಲೂ ಪಾದ ತೊಳೆದ ದಯಾಳೂ 1 ಕುಂದನೊಂದೆಣಿಸದಂತೆ ಬಂದು ಕಾಯ್ದಜಮಿಳನಿಗೊಲಿದೆ ತಂದೆ ಬಾಧೆಗೆ ತರಳ ಕೂಗೆ ಬಂದೆ ಸ್ತಂಬದಿ ನಾರಸಿಂಹ 2 ಕರಿಯು ಕೂಗೆ ಸಿರಿಗ್ಹೇಳದೆಲೆ ಭರದಿಬಂದು ಕಾಯ್ದ ಹರಿಯೆ ತರುಳೆ ದ್ರೌಪದಿಗಕ್ಷಯವಿತ್ತಾ ಕರುಣವಾರಿದೆ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಬೆಳಗಾಗಲು ಅರಘಳಿಗೆಯು ಇರುತಿರೆ ಸ್ಮರಿಸುವೆ ವಿಶ್ವಮೂರುತಿಯನ್ನು ಬೆಳಗಾಗಲು ಹರಿಧ್ಯಾನವ ಮಾಡುತ ಬಹಿರ ಭೂಮಿಗ್ಹೋಗುತ ಮುನ್ನು 1 ಕಲಿ ಮೊದಲಾಗಿಹ ದೈತ್ಯರನೆಲ್ಲಾ ವಿ- ಸರ್ಜನೆ ಮಾಡುತ ಮತ್ತಿನ್ನೂ ದಂತ ಧಾವನೆಯ ಮಾಡುತ ಶ್ರೀ ಮಾ- ಧವನನು ಸ್ಮರಿಸುವೆ ನಾನಿನ್ನೂ 2 ಮುಖವನು ತೊಳೆಯುತ ಮುರಹರಿ ಧ್ಯಾನದಿ ಶ್ರೀತುಳಸಿಯ ನಮಿಸುತಲಿನ್ನೂ ಮೀಸಲ ನೀರನು ಎರೆಯುತ ಬೇಗದಿ ಮೃತ್ತಿಕಿ ಫಣಿಗಿಡುತಲಿ ಇನ್ನು 3 ಮೂರು ಪ್ರದಕ್ಷಿಣಿ ಮಾಡುತ ಬೇಗದಿ ಮುದದಿ ನಮಸ್ಕರಿಸುತಲಿನ್ನೂ ದೇವರ ಮನೆಕಡೆ ಪೋಗುತ ನಿಂದಿಹ ಜಯವಿಜಯರಿಗೊಂದಿಸಿ ಮುನ್ನು 4 ದೇವರ ದರ್ಶನಕಾಜ್ಞೆಯ ಕೇಳುತ ದೇವರ ಗೃಹದೊಳು ಪೋಗುತಲಿ ಮಾಯಾ ಪತಿಯನು ಮನದೊಳು ಧ್ಯಾನಿಸಿ ವಂದನೆ ಮಾಡುತ ಬೇಗದಲಿ 5 ದೇವರ ಮನೆಯನು ಸಾರಿಸಿ ಶಂಖುಚಕ್ರವುಗದೆ ಪದುಮನ್ಹಾಕುತಲಿ ಗಜವರದನ ಕೊಂಡಾಡುತ ಮುದದಿ ಗಜೇಂದ್ರ ಮೋಕ್ಷನ ಸ್ಮರಿಸುತಲಿ 6 ಗೋವೃಂದದ ಕಡೆ ಪೋಗುತ ಶ್ರೀ- ಗೋವಿಂದನ ಸ್ಮರಿಸುತ ನಿತ್ಯದಲಿ ಗೋಪೀ ಬಾಲನ ಗೋಕುಲವಾಸನ ಗೋವ್ಗಳ ಮಧ್ಯದಿ ಸ್ಮರಿಸುತಲಿ 7 ಬಾಲಕೃಷ್ಣನ ಲೀಲೆಯ ಪೊಗಳುತ ಬಾಲಲೀಲೆಗಳ ಕೇಳುತಲಿ ಪುರಾಣವ ಪೇಳುವ ದ್ವಿಜರಿಗೆ ವೃದ್ಧರಿಗೆರಗುತ ಪ್ರತಿನಿತ್ಯದಲಿ 8 ಮುರಳಿಯನೂದುತ ಮೆರೆಯುವ ಕೃಷ್ಣನ ಅನುದಿನ ಮಾಡುತಲಿ ಸರಸಿಜನಾಭನ ಸ್ಮರಿಸುತ ಮನದಲಿ ಸ್ನಾನಕೆ ತೆರಳುತ ಶೀಘ್ರದಲಿ 9 ನದಿಯ ಸ್ನಾನಕೆ ಪೋಗುವ ಸಮಯದಿ ನಾರದವಂದ್ಯನ ಸ್ಮರಿಸುತಲಿ ಭಾಗೀರಥಿಯಲಿ ಸ್ನಾನವು ಮಾಡುತ ಬಾಗುತ ಸಿರವನು ಬೇಗದಲಿ10 ಫಣಿರಾಜನ ಶಯನದಿ ಮಲಗಿಹ ಶ್ರೀ- ಪರಮಾತ್ಮನ ನೋಡುತ ಬೇಗ ಪಾದಗಳ ಸೇವಿಪ ಶ್ರೀ ಭೂದೇವಿಯ- ರೇನುಧನ್ಯರೆಂದೆನುತಾಗ11 ಪೊಕ್ಕಳ ಮಧ್ಯದಿ ಪೊರಟಿಹ ನಾಳದ ತುದಿಯಲಿ ರಂಜಿಪ ಕಮಲದಲಿ ಉದ್ಭವಿಸಿದ ನಾಲ್ಮೊಗನನು ನೋಡುತ ಬಗೆ ಬಗೆ ಪ್ರಾರ್ಥಿಸುತಲಿ ಇನ್ನು 12 ನೆರೆದಿಹ ಸುರ ಪರಿವಾರವೆಲ್ಲ ಶ್ರೀ- ಹರಿಯನು ವಾಲೈಸುತಲಿನ್ನೂ ಪರಮವೈಭವದಿ ಮೆರೆಯುವ ದೇವನ ಸ್ಮರಿಸುವೆ ಜಲಮಧ್ಯದೊಳಿನ್ನು 13 ದೇವರ ರಥವನು ತೊಳೆಯುವೆನೆಂಬ- ನುಸಂಧಾನದಿ ಸ್ನಾನವು ಮಾಡಿ ದೇವರ ರಥ ಶೃಂಗರಿಸುವೆನೆನ್ನುತ ಶ್ರೀಮುದ್ರೆಗಳ್ಹಚ್ಚುತ ಪಾಡಿ 14 ನಿತ್ಯ ಕರ್ಮಮುಗಿಸುವ ಬೇಗದಿ ಶ್ರೀ- ಹರಿಪೂಜೆಗೆ ಅಣಿಮಾಡುತಲಿ ಪುಷ್ಪಗಳನು ಗಂಧಾಕ್ಷತೆ ಶ್ರೀ ತುಳಸಿಯ ತಂದಿಡುವೆನು ಮೋದದಲಿ 15 ಪಂಚಭಕ್ಷ ಪಾಯಸಗಳ ಮಾಡುತ ಪಂಚಾತ್ಮಕ ನ ಸ್ಮರಿಸುತಲಿ ಮಿಂಚಿನಂತೆ ಹೊಳೆಯುವ ತಬಕಿಲಿ ತಾಂಬೂಲವ ನಿರಿಸುತ ಬೇಗದಲಿ 16 ಬ್ರಹ್ಮನು ಈ ವಿಧ ಪೂಜೆಯ ಪ್ರತಿದಿನ ಬ್ರಹ್ಮನ ಪಿತಗರ್ಪಿಸುತಲಿರಲು ಸುಮ್ಮಾನದಿ ಮಹಲಕುಮಿಯು ಇದ- ನೊಯ್ಯತ ಸುರಮುನಿ ವಂದ್ಯನಿಗೆ ತಾನರ್ಪಿಸಲು17 ಪರಮಾತ್ಮನು ಈ ವಿಧ ಸೇವೆಯ ಕೈ- ಗೊಳುತಲಿ ಸಂತಸ ಪಡಲಿನ್ನು ಅರಿತವರೆಲ್ಲರು ನಿರುತದಿ ಹರಿ ಧ್ಯಾ- ನವ ಮಾಡುತಲಿರೆ ತಾವಿನ್ನು 18 ದೇವಪೂಜೆ ವೈಶ್ವದೇವವು ನಿತ್ಯದಿ ಗೋಬ್ರಾಹ್ಮಣನರ್ಚಿಸಿ ಇನ್ನು ಸಾಯಂ ಸಮಯದಿ ಸಾಧುಗಳೊಡನೆ ದೇವರ ಕಥೆ ಕೇಳುತಲಿನ್ನೂ 19 ಝಾಮಝಾಮದಿ ಜಯಶಬ್ದಗಳಿಂ ಜಯಾಪತಿಯನು ಪೊಗಳುತಲಿ ಆರತಿ ಜೋಗುಳ ಹಾಡುತ ಮುದದಲಿ ಮಧ್ವೇಶಾರ್ಪಣ ಪೇಳುತಲಿ 20 ಮಲುಗುವಾಗ ಮುಕುಂದನ ಸ್ಮರಿಸುತ ಲಯ ಚಿಂತನೆಯನು ಮಾಡುತಲಿ ಕರಮುಗಿಯುತ ಕಾಯೇನ ವಾಚಾ ಎಂ- ದ್ಹೇಳುತ ಪ್ರಾಜ್ಞನ ಸ್ಮರಿಸುತಲಿ 21 ಝಾಮಝಾಮದಿ ಶ್ರೀ ಹರಿ ಮಾಧವ ಆಗಲು ಬೆಳಗಿನ ಝಾವದಿ ಸೃಷ್ಟಿಯ ಚಿಂತನೆ ಮಾಡಿ ಎಂದೆನುತ22 ಮಳಲಗೌರಿ ನೋಂತಿಹ ಸತಿಯರಿಗೆ ಮುರಳೀಧರ ಒಲಿದಿಹನೆನ್ನುತ ಉದಯವಾಗಲು ವಿಶ್ವನ ಸ್ಮರಿಸುತ ವಿಧಿ ನೇಮಗಳನುಸರಿಸುತ್ತ 23 ನಿತ್ಯದಿ ಈ ತೆರವಾಚರಿಸುವ ನರ ಮುಕ್ತನು ಧರೆಯೊಳಗೆಂದೆನುತ ಅತ್ಯುತ್ಸಾಹದಿ ಬರೆದೋದುತಲಿ- ದರರ್ಥವ ತಿಳಿದಾಚರಿಸುತ್ತ24 ಈ ವಿಧ ಚಿಂತನೆ ಮಾಡುವ ಮನುಜಗೆ ದಾರಿದ್ರ್ಯವು ದೂರಾಗುವದು ಮಾರಮಣನು ತನ್ನವರೊಡಗೂಡುತ ವಾಸವಾಗುವನೆಂಬುವ ಬಿರುದು25 ಕರೆಕರೆಗೊಳ್ಳದೆ ಕೇಳಿರಿ ನಿತ್ಯವು ಕನಕಗಿರಿವಾಸನ ಮಹಿಮೆ ಕನಲಿಕೆ ಕಳೆವುದು ಕಮಲನಾಭ- ವಿಠ್ಠಲನು ಕೊಂಡಾಡುತ ಮಹಿಮೆ 26
--------------
ನಿಡಗುರುಕಿ ಜೀವೂಬಾಯಿ
ಭಕ್ತರ ಸುರಧೇನು ಶಕ್ತರ ಬಂಧು ನೀ ಪ ಭಕ್ತರ ಮೊರೆ ಕೇಳೋ ಲಕ್ಷ್ಮೀಪ್ರಿಯ ರಮಣ ಅ.ಪ ಪ್ರಾಚೀನ ಹಿರಿಯರ ಯೋಚಿಸಿ ನೋಡಲು ಕಂಟಕ ವಿಮೋಚಿಸಿ ಕಾಯ್ದಯ್ಯ1 ಕರಿರಾಜ ಧ್ರುವಮುನಿ ವರ ವಿಭೀಷಣರನ್ನು ಪರಮಪದವನಿತ್ತು ಕರುಣದಿ ಪೊರೆದಯ್ಯಾ 2 ದೀನನೋಳ್ದಯವಾಗಿ ಹೀನಸ್ಥಿತಿ ಪರಿಹರಿಸೊ ಧ್ಯಾನಿಸುವರಿಗತಿ ಸುಲಭನೆ ಶ್ರೀರಾಮ 3
--------------
ರಾಮದಾಸರು
ಭಕ್ತವತ್ಸಲ ಭವಭಯ ಹರನೆ ಭಕ್ತಿ ಮುಕ್ತಿದ ಪರಿಪಾಲಿಸು ಧೀರನೆ ಪ. ಪ್ರತಿದಿನ ಉದಯಾರಂಭಿಸಿ ನಾ ಮಾಡುವ ಪಾಪ ತತಿಗಳನೆಲ್ಲವ ಭಸಿತಗೈಸಿ ಪತಿತಪಾವನ ಪರಮಾತ್ಮನ ರೂಪ ಶ್ರೀ- ಪಾದ ಸಂಸ್ಮøತಿಯಿತ್ತು ಕರುಣಿಸು 1 ವರದೇಶ ನಿನ್ನಯ ಚರಣಾರವಿಂದವ ಶರಣೆಂದು ನಂಬಿದ ನರರಿಗಿನ್ನು ಪುರುಷಾರ್ಥಗಳ ಸೇರಿ ಬರುವರಾಶ್ಚರಿಯವೆ ಕರಿರಾಜಗೊಲಿದ ಶ್ರೀಕರಮೂರ್ತಿ ದಯವಾಗು 2 ಘೋರ ಸಂಸೃತಿ ಪಾರಾವಾರ ದಾಟಿಸಲು ಬೇರಾರಿಲ್ಲ ನಿಜ ದಾಸೋದ್ಧಾರ ಹರೆ ವಾರಿಜಾಂಬಕ ವೆಂಕಟಾಚಲನಾಯಕ ಗಾರುಮಾಡದೆ ಬೇಗ ಬಾರೋ ಹೃತ್ಕಮಲದಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಕ್ತಾಧೀನಹರೇ ಭಕ್ತಾಧೀನ ವಿರಕ್ತ ವಿನೋದನ ಭುಕ್ತಿಮುಕ್ತಿದ ಸರ್ವಶಕ್ತಿ ನೀ ದಯವಾಗು ಪ. ಚಂಚಲ ಮನದಿ ಪ್ರಾಪಂಚಿಕ ಸುಖದಾಸೆ ಮಿಂಚಿ ಸಂಸ್ಕøತಿಯಲಿ ಸಂಚರಿಸಿ ಮುಂಚಿನ ಭವಗತ ಸಂಚಿತವರಿಯದೆ ಹಂಚಿಗು ಕಡೆಯಾದೆ ಪಂಚಾತ್ಮನ ನೆನೆಯದೆ 1 ಘೋರ ಸಂಸ್ಕøತಿ ಪಾರ ವಾರುಧಿ ಮುಳುಗ್ಯಾಡಿ ಪಾರುಗಾಣದೆ ಬಹು ಗಾರಾದೆನು ಶ್ರೀರಮಣನೆ ನಿನ್ನಾಧಾರವಲ್ಲದೆ ಮುಂದೆ ಕಂಸಾರಿ ನೀ ಕೃಪೆದೋರು 2 ಭವ ವಾಯು ಗಿರೀಶಾದಿ ದಿವಿಜರ ನಿರತ ಪ್ರೇರಿಸುವಂಥ ದೊರೆಯೆ ನಿನ್ನ ಸ್ಮರಿಸುವೆ ಪರಿವೃತಾಂತರ ನಿಯಾಮಕ ಲಕ್ಷ್ಮೀ- ವರ ವೆಂಕಟಾದ್ರೀಶ ನಿರುಪಧಿ ಕರುಣಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಾಗೀರಥಿ ಭಾಗೀರಥಿಬಾಗುವವರಿಗೆ ದಯವಾಗಿರತಿ ಪ. ಗಂಗೆ ಗೌತುಮೆ ತುಂಗೆ ಮಂಗಳೆ ಕೃಷ್ಣಿ ನಿನ್ನಹಿಂಗದೆ ಅವರನ ರಂಗಿಸುವರೆ ತಾಯಿ 1 ಮಾನಸ ಸರೋವರನಾನಾ ತೀರ್ಥಗಳೆಲ್ಲಧೇನಿಸಿ ನಿನ್ನಯ ಮಾನ್ಯವ ಪಡೆದಿವೆ2 ಬ್ರಮ್ಹಾಂಡ ಬಿಚ್ಚಿ ಪರಬೊಮ್ಮಗ ಮಗಳಾದಿಬೊಮ್ಮನ ತಂಗಿ ನಾವು ನಿನ್ನನು ನೆನೆದೆವು3 ಸತ್ಯ ಲೋಕವ ಸ್ಮರಿಸಿ ಮತ್ತೆ ಸ್ವರ್ಗಕೆ ಬಂದಿಪ್ರಾರ್ಥಿಸಿದ ದೈವ ನಿನ್ನ ಅರ್ಥಿಲೆ ಗೆಲಿಸಮ್ಮ 4 ಭಗೀರಥ ಕರೆಯಲು ನಗದಲ್ಲಿ ಬಿದ್ದು ಕಾಶಿನಗರಕ್ಕೆ ಬಂದ ರಮಿ ಮಗಳ ಬಲಗೊಂಬೆ 5
--------------
ಗಲಗಲಿಅವ್ವನವರು
ಮಂಗಳಂ ಶ್ರೀರಾಮಚಂದ್ರ ಭಂಗಿತಾಸುರೇಂದ್ರನೆ ವೀರ ಪ ರಾಜಕಾಂತಿ ಕೋಮಲಾಸ್ಯ ರಾಜರಾಜ ಪೂಜಿತ ರಾಜವಂಶಜಾ ಸಮೇತ ರಾಜ ಹೃದಯ ಮಿತ್ರನೆ 1 ಶಂಕರಾದಿ ಹೃದಯವಾಸ ಪಂಕಜಾನನ ಲಂಕಾನಗರ ಸಂಕಟಾರ್ತಿ ಶಂಕರಾಯ ಮಾಣ ದೇವ 2 ಕಾನನಾ ವಿನೋದ ಶ್ರೀದ ವಾನರಾದಿ ಗೀಯಮಾನ 3
--------------
ಬೇಟೆರಾಯ ದೀಕ್ಷಿತರು
ಮನವೇ ಮರೆವರೇನೊ ಹರಿಯಾ ಪ ಬಹು ಜನುಮಗಳಲ್ಲಿ ಬಟ್ಟ ಬವಣಿಗಳರಿಯಾ ಅ.ಪ. ವಿಷಯ ಚಿಂತನೆ ಮಾಡಸಲ್ಲ ಮೇಷ ವೃಷನನಾದನು ಹಿಂದೆ ಪೌಲೋಮಿ ನಲ್ಲ ಝಷ ಕೇತುವಿನ ಮ್ಯಾಳ ಹೊಲ್ಲ ನಿರಾ ಶಿಷನಾಗು ಯಮರಾಯನೆಂದೆಂದೂ ಕೊಲ್ಲ 1 ಧನವೆ ಜೀವನವೆಂಬಿ ನಿನಗೆ ಸುಯೋ ಧನ ನೋಡು ಧನದಿಂದ ಏನಾದ ಕೊನೆಗೆ ಅನಿರುದ್ಧ ದೇವನ ಮನೆಗೆ ಪೋಪ ಘನ ವಿಜ್ಞಾನವನೆ ಸಂಪಾದಿಸು ಕೊನೆಗೆ 2 ಹರಿದಾಸನಾಗಿ ಬಾಳೋ ಗುರು ಹಿರಿಯರ ಪಾದಕಮಲಕೆ ನೀ ಬೀಳೋ ನರರ ನಿಂದಾಸ್ತುತಿ ತಾಳೋ ದೇಹ ಸ್ಥಿರವಲ್ಲ ಸಂಸಾರ ಬಹು ಹೇಯ ಕೇಳೋ 3 ಹಲವು ತೀರ್ಥಗಳಲ್ಲಿ ಸ್ನಾನ ಮಾಡೆ ಮಲ ಪೋಯಿತಲ್ಲದೆ ನಿರ್ಮಲ ಜ್ಞಾನ ಫಲಿಸದೆಂದಿಗು ಹೀನ ಬುದ್ಧಿ ಕಳೆದು ಸೇವಿಸು ಸಾಧುಗಳನನುದಿನ 4 ಜಿತವಾಗಿ ಪೇಳುವೆ ಸೊಲ್ಲಾ ಹರಿ ಕಥೆಯಲ್ಲಿ ನಿರತನಾಗಿರು ಲೋಹ ಕಲ್ಲಾ ಪ್ರತಿಮೆ ಪೂಜಿಸಿದರೇ ನಿಲ್ಲ ಪರೀ ಕ್ಷಿತನೆಂಬ ರಾಯ ಈ ಮಹಿಮೆಯ ಬಲ್ಲಾ 5 ಜ್ಞಾನೇಚ್ಛಾ ಕ್ರಿಯಾ ಶಕ್ತಿ ತ್ರಯವಾ ತಿಳಿ ದಾನಂದ ಪಡು ಬಯಸದಿರುಭಯವಾ ಸಾನುರಾಗದಿ ಬೇಡು ದಯವಾ ನೀ ಮ ದ್ದಾನೆಯಂದದಿ ಚರಿಸು ಬಿಟ್ಟು ಭಯವಾ 6 ಭಾವ ಕ್ರಿಯಾ ದ್ರವ್ಯಾದ್ವೈತ ತ್ರಯ ಆವಾಗ ಚಿಂತಿಸು ಭೂಮ್ಯಾದಿ ಭೂತಾ ಜೀವಿಗಳೊಳು ಜಗನ್ನಾಥ ವಿಠಲ ಗಾವಾಸ ಯೋಗ್ಯವೆಂದರಿಯೋ ಸಂತತಾ 7
--------------
ಜಗನ್ನಾಥದಾಸರು
ಮಾಧವ ಗುರುವರ ಬೋಧಿಸು ಸುಖಸಾರ ಪಾದವ ಸ್ತುತಿಪೆನು ದಯವಾಗೊ ಸುಖಕರ ಪ ನಶಿಸಿಪೋಗುವ ಈ ವಿಷಮಸಂಸಾರದ ವಿಷಯದಾಸ್ಹರಿಸೆನಗೆ ಅಸಮಸುಖದ ಮಾರ್ಗ 1 ಅನುದಿನ ತ್ರಿಮಲಮೋಹಂಗಳ ಕ್ರಮದಿ ಖಂಡ್ರಿಸಿ ಮಹ ವಿಮಲಪದವಿ ಮಾರ್ಗ 2 ಮರವೆ ಮಾಯವ ತರಿದು ಅರಿವಿನಾಲಯದಿರಿಸಿ ಪರಮ ಶ್ರೀರಾಮನ ಚರಣಕಮಲಭಕ್ತಿ 3
--------------
ರಾಮದಾಸರು
ಮುಟ್ಟಲು ಮಾಯೆ ಹೋಯಿತು, ಗುರುರಾಯ ಪ ಜ್ಞಾನದ ಪ್ರಭೆಯು ತೋರಿತು ಅ-ಜ್ಞಾನ ನನ್ನದು ಹಾರಿತು 1 ಹರುಷಕೆ ಹರುಷವಾಯ್ತುನಿರಾಶೆಯು ಕಡೆಗಾಯಿತು 2 ಜ್ಞಾನಬೋಧನ ಪ್ರಭು ಯೋಗಿತಾನು ತಾನೆ ದಯವಾಗಿ3
--------------
ಜ್ಞಾನಬೋದಕರು
ಮುರಳಿ ವಿನೋದ ವಿಠಲ | ಪೊರೆಯ ಬೇಕಿವನಾ ಪ ದುರಿತ ದುಷ್ಕøತವೆಲ್ಲ | ದೂರ ಸಾಗಿಸುತಾ ಅ.ಪ. ಚಾರು ಯೌವನದಲ್ಲಿ | ಪರಿಪರಿಯ ಲೌಕಿಕದಿಮಾರಮಣ ಸ್ಮøತಿ ರಹಿತ | ಕರ್ಮವೆಸಗೀಜಾರಿ ಪೋಗಲು ಆಯು | ಆರಾಧ್ಯ ದೇವತೆಯಚಾರುತರ ಪೂಜಿಸಲು | ಸಾರಿ ಬಂದಿಹನಾ 1 ಹಿಂದೆ ಮಾಡಿರುವ ಬಹು | ಮಂದಿ ಜನಗಳ ಸೇವೆಇಂದಿರೇಶನೆ ನಿನ್ನ | ಸೇವೆ ಎಂದೆನಿಸೀಇಂದಿರಾರಾಧ್ಯ ಪದ | ಚೆಂದದಿಂ ಪೊರೆ ಇವನಮಂದರೋದ್ಧಾರಿ ಹರಿ | ಕಂದರ್ಪಪಿತನೇ2 ಧ್ಯಾನ ಯೋಗದಿ ಮನವ | ಸಾನುಕೂಲಿಸು ಇವಗೆಮಾನನಿಧಿ ಮಧ್ವಪದ | ರೇಣುನಾಶ್ರಯಿಸೀಗಾನದಲಿ ತವ ಮಹಿಮೆ | ಪೊಗಳಿಕೆಯನೆ ಇತ್ತು ಪ್ರಾಣಾಂತರಾತ್ಮಕನೆ | ಪಾಲಿಸೈ ಹರಿಯೆ 3 ದೇವಧನ್ವಂತರಿಯೆ | ಪಾವನಾತ್ಮಕ ನಿನ್ನಸೇವೆ ಗಯ್ಯುವವಗಿ | ನ್ನಾವ ದುರಿತಗಳೋಭಾವದಲಿ ಮೈದೋರಿ | ನೀವೊಲಿದು ತೋದರಂತೆದೇವ ತವ ದಾಸ್ಯವನು | ಇತ್ತಿಹೆನು ಹರಿಯೇ 4 ನಾರಸಿಂಹಾತ್ಮಕನೆ | ಕಾರುಣ್ಯದಲಿ ಹೃದಯವಾರಿರುಹ ಮಧ್ಯದಲಿ | ತೋರಿ ತವ ರೂಪ |ಪಾರುಗೈ ಭವವ ಗುರು | ಗೋವಿಂದ ವಿಠಲನೆಸಾರಿ ತವ ಪಾದವನು | ಪ್ರಾರ್ಥಿಸುವೆ ಹರಿಯೇ5
--------------
ಗುರುಗೋವಿಂದವಿಠಲರು
ಮೊದಲನೇ ಅಧ್ಯಾಯ ಪಾತಿವ್ರತ್ಯ ಮಹಾತ್ಮೆ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ನಿರ್ದೋಷ ಗುಣಪೂರ್ಣ ವಿಷ್ಣು ಸರ್ವೋತ್ತಮ ಸ್ವತಂತ್ರ ಶ್ರೀದ ಶ್ರೀಪತಿ ಜಗಜ್ಜನ್ಮಾದಿಕರ್ತನು ಸಚ್ಛಾಶ್ರ - ದಿಂದಲೇ ವೇದ್ಯನು ಮೂರು ವಿಧ ಜೀವರಿಗೆ ಯೋಗ್ಯ ಸಾಧನಕೆ ಗತಿಯ ಮಾಡುವ ಅವತಾರ ಲೀಲಾ 1 ಸುಪುಷ್ಪಭವ ಬ್ರಹ್ಮದೇವನೋಳ್ ತತ್ ಶಬ್ದವಾಚ್ಯನು ಶ್ರೀ ಪುರುಷೋತ್ತಮನೆ ಪ್ರಜಾಸೃಷ್ಟಿ ಮಾಡಿಸುವನು ತ್ರಿಪುರಾರಿ ಭಸ್ಮಧರ ರುದ್ರನೋಳ್ ತನ್ನಾಮದಲಿ ಶ್ರೀ ಪುರುಷೋತ್ತಮನೇ ಸಂಹಾರ ಮಾಳ್ಪ ಅಂತರ್ಯಾಮಿ 2 ಉರುಜ್ಞಾನ ಸುಖ ಬಲಾದ್ಯಮಿತ ಗುಣಧಾಮನ ಕರ ಚರಣಾದ್ಯವಯವಕ್ಕೂ ಅವಗೂ ಅವನು ಧರೆಯಲ್ಲಿ ಅವತಾರ ಮಾಡುವ ರೂಪಗಳಿಗೂ ಪರಿಪೂರ್ಣವಾಗಿ ಅಭೇದ ಭೇದಲೇಶವೂ ಇಲ್ಲ 3 ದ್ವಿ ಷೋಡಶ ಶುಭಲಕ್ಷಣ ತನುವುಳ್ಳ ಬ್ರಹ್ಮಗೂ ವಿಷಕಂಠ ರುದ್ರಗೂ ಪರಸ್ಪರ ಭೇದ ಅಂತಸ್ಥ ವಿಷ್ಣುಗೂ ಇವರುಗಳಿಗೂ ಭೇದವು, ಅಂತರ್ಯಾಮಿ ವಿಷ್ಣು ಒಬ್ಬನೇ ದ್ವಿರೂಪದಲ್ಲಿ ಇವರಲ್ಲಿಹ 4 ಹತ್ತಾವತಾರ ಮತ್ಸ್ಯಾದಿರೂಪಗಳು ಮಾತ್ರವಲ್ಲ ಅನಂತರೂಪನು ಅನಂತಗುಣ ಕ್ರಿಯಾವಂತನು ಕ್ಷಿತಿಯಲ್ಲಿ ಬಲಕಾರ್ಯಕ್ಕೆ ಕೆಲವು ಅವತಾರ ಹಿತಕರ ಹಲವು ಜ್ಞಾನಬೋಧಕ್ಕೇವೇ ಕೆಲವು 5 ಧ್ಯಾತ್ಮನು ಜ್ಞಾನಕಾರ್ಯಕ್ಕಾಗಿ ಅವತರಿಸುವನು ಶ್ರೀಮಾನ್ ಹಯಗ್ರೀವ ಸನತ್ಕುಮಾರ ದತ್ತ ಕಪಿಲ ಧೀಮಾನ್ ಪರಾಶರ ವಾಸವೀಸೂನು ಐತರೇಯಾದಿ 6 ದ್ವಾಪರದಲ್ಲೇವೆ ಅಲ್ಲಲ್ಲಿ ಕಲಿವಿಷ ಹರಡಿ ತಪೋಧನರು ಗೌತಮರು ಶಪಿಸೆ ಜ್ಞಾನಕುಂದೆ ಶ್ರೀಪ ವೇದವ್ಯಾಸ ಜ್ಞಾನ ತೇಜಃಪುಂಜ ಬಂದು ತೋರಿ ಆ ಪೀಡಿಸುವ ಅಜ್ಞಾನ ತರಿದು ಸಜ್ಞಾನ ಇತ್ತ 7 ಹಿಂದೆ ಬ್ರಹ್ಮದೇವರಾಜÉ್ಞಯಿಂ ಅತ್ರಿಋಷಿವರ್ಯರು ನಿಂತರು ಋಕ್ಷಗಿರಿಯಲ್ಲಿ ಅಪತ್ಯಾಪೇಕ್ಷೆಯಿಂದ ಅದ್ಭುತ ತಪವಚರಿಸಿ ಜಗದೀಶ್ವರ ಸಮ - ಪುತ್ರ ಕೊಡೆ ಚಿಂತಿಸಿ ಹರಿಯಲ್ಲಿ ಶರಣಾದರು 8 ಹರಿ ತಾನು ತನ್ನ ಅಧಿಷ್ಟಾನರಾದ ಬ್ರಹ್ಮೇಶ್ವರ ಕರಕೊಂಡು ಋಷಿ ಮುಂದೆ ನಿಂತು ಯುಕ್ತಮಾತನ್ನಾಡಿ ಮೂರು ಮಂದಿಗಳು ತಾವು ಪುತ್ರರಾಗುವೆವು ಎಂದ ತರುವಾಯ ತಾನಿತ್ತ ವರವ ಒದಗಿಸಿದನು 9 ಭಾಗವತ ಈ ವಿಷಯ ಒಳಗೊಂಡು ಇಹುದು ಪತಿ ವೇದವ್ಯಾಸ ಸಂಕೃತ ಈ ಭೂರಾದಿ ಜಗತ್ತಿನಲ್ಲಿ ಪ್ರಖ್ಯಾತ ಪುರಾಣಂಗಳೊಳ್ ಶ್ರೀ ಭಗವಾನ್ ದತ್ತಾತ್ರಯನ ಅವತಾರವು ವೇದ್ಯ 10 ಗೀರ್ವಾಣ ಛಂದಸ್ಸು ಅಷ್ಟಿಯಲಿ ಬರೆಯುವದೆಂದು ಶ್ರೀವರನ ಹಿತಾಜÉ್ಞಯಿಂ ಪ್ರಸನ್ನ ಶ್ರೀನಿವಾಸೀಯ ಶ್ರೀವಿಷ್ಣು ಸಹಸ್ರನಾಮ ಭಾಷ್ಯ ಕನ್ನಡದಲ್ಲಿ ಅಳವಡಿಸಿದಂತೆ ಅಷ್ಟೀ ಛಂದಸ್ಸಲಿ ಈ ಗ್ರಂಥವ 11 ಈ ಗ್ರಂಥದಲಿ ಶ್ರೀಭಾಗವತವು ಮಾರ್ಕಂಡೇಯವು ಭಾಗವತರಿಗೆ ಉಪಾಸನಾ ಹೇತು ಪಂಚರಾತ್ರ ಆಗಮವು ಒಳಗೊಂಡ ವಿಷಯಗಳು ಇವೆಯು ಕಾಯ ಶುದ್ಧಿಯಿಂ ಪಠಣೀಯವು 12 ಗುರುಮಂತ್ರ ಉಪದೇಶವಿಲ್ಲದಂತಹ ಸ್ತ್ರೀ ಜನ ಶೂದ್ರರು ಬ್ರಹ್ಮಬಂಧುಗಳು ಈ ಗ್ರಂಥ ಪಠಿಸಲು ಹರಿಭಕ್ತ ಸಾಧು ವೈದಿಕ ಬ್ರಾಹ್ಮಣರ ಅಪ್ಪಣೆ ಕೋರಿ ಅವರ ಅಪ್ಪಣೆಯಿಂದ ಓದಬಹುದು 13 ಪ್ರತಿಷ್ಠಾನಪುರದಲ್ಲಿ ಕೌಶಿಕಾಹ್ವಯ ದ್ವಿಜನು ವ್ಯಾಧಿ ಪೀಡಿತನು ಕುಷ್ಠಿ ನಡಮಾಡಲು ಅಶಕ್ತ ಆತನ ಪತ್ನಿಯು ಸಾಧುಗುಣವತಿ ಬಲುಶ್ರೇಷ್ಠ ಪತಿ ಹೇಳಿದಂತೆ ನಡೆಯುವಳು 14 ಒಂದು ದಿನ ಆ ಬ್ರಾಹ್ಮಣನು ನೋಡಿದ ಬಾಗಿಲಾಚೆ ಬೀದಿಯಲಿ ಹೋಗುತ್ತಿದ್ದ ಸುಂದರಿ ವೇಶ್ಯೆಯೋರ್ವಳಲಿ ಸೋತು ಮನ ಅವಳನ್ನು ತಾನು ಹೊಂದಬೇಕೆನ್ನಲು ಸಾಧ್ವಿಸತಿ ಪತಿಯನ್ನು ಎತ್ತಿದಳು ಸೊಂಟದಲಿ 15 ರಾತ್ರಿ ಕತ್ತಲೆಮಾರ್ಗ ತಿಳಿಯದಲೆ ಪತಿಯನ್ನು ಹೊತ್ತುಕೊಂಡು ಹೋಗುವಾಗ ಪತಿಯ ಕಾಲು ತಾಕಿತು ಹಾದಿಯಲ್ಲಿ ಕಬ್ಬಿಣ ಸಲಾಕದಲ್ಲಿ ಚುಚ್ಚಿಸಿ ಇದ್ದ ಕಟಿ ಸಮೀಪ ಹಾಹಾ 16 ಅನ್ಯಾಯದಿ ಆ ರಾಜ್ಯದರಸ ಆ ಮಹಾಮುನಿಯ ಧನಚೋರನೆಂದು ಶೂಲಕ್ಕೆ ಹಾಕಿಸಿದ್ದ ಆ ಶೂಲ ಕಾಣದೇ ಕೌಶಿಕನ ಕಾಲ್ತಗಲಿ ಬಲು ನೋವಾಗಿ ಮುನಿ ಶಾಪವಿತ್ತರು ಸೂರ್ಯೋದಯಲ್ಲೇ ಸಾಯೆಂದು 17 ಹಾಹಾ ಇದು ಏನು ಮುನಿಗಳಿಗೆ ನೋವಾಯಿತಲ್ಲಾ ಮಹಾತ್ಮರ ಶಾಪ ವೀಣಾಗಲಾರದು ಮಾಂಗಲ್ಯವ ಪತಿ ಅಂತಸ್ಥ ಶ್ರೀಹರಿಯ ಸ್ಮರಿಸಿ ಆ ಪತಿವ್ರತೆ ಹೇಳಿದಳು 18 ಸೂರ್ಯೋದಯವಾಗದಿದ್ದರೆ ಶಾಪವು ಫಲಿಸದು ಸೂರ್ಯೋದಯವಾಗಬೇಡಿ ಎಂದು ಹೇಳಿದಳು ಸಾಧ್ವಿ ಆರ್ಯಧರ್ಮ ಲೋಕಕಾರ್ಯ ಸರ್ವವೂ ಸ್ತಬ್ಧವಾದವು ಎಲೆಲ್ಲೂ ಕತ್ತಲೆಯು ಭಾನು ಉದಯಿಸಲಿಲ್ಲ 19 ಇಂದ್ರಾದಿ ದೇವರ್ಗಗಳು ಬ್ರಹ್ಮನಲಿ ಮೊರೆಯಿಡಲು ಪತಿವ್ರತೆ ಮಹಾತ್ಮನೆ ಮತ್ತೊಬ್ಬ ಪತಿವ್ರತೆಯೇ ಪ್ರತಿ ಮಾಡುವಳು ಅತ್ರಿಋಷಿ ಪತ್ನಿ ಅನಸೂಯಾ ಪತಿವ್ರತಾ ರತ್ನಳಾ ಸಹಾಯ ಕೇಳೆಂದರು ವೇಧ 20 ಶಕ್ರಾದಿ ಸುರರುಗಳು ಅನಸೂಯಾದೇವಿಯಲಿ ಕೋರಿಕೆ ಮಾಡಲು ಆಕೆ ದೇವತೆಗಳ ಸಮೇತ ಧೀರ ಪತಿವ್ರತೆಯಾದ ಕೌಶಿಕಾ ಗೃಹಕೆ ಹೋಗಿ ಪರಿಚಯ ಮಾಡಿಕೊಂಡು ಕೊಂಡಾಡಿದಳಾ ಸಾಧ್ವಿಯ 21 ಮಹಾಭಾಗರು ಇಂದ್ರಾದಿಗಳಿಗೂ ಅನಸೂಯಗೂ ವಿಹಿತೋಪಚಾರ ಪೂಜಾದಿಗಳ ಮಾಡಿ ಆ ಸಾಧ್ವಿ ಮಹಾಭಾಗ್ಯ ಆಗಮನ ಎನ್ನುತ್ತ ಕಾರಣವನು ಬಹು ಹಿತದಲಿ ಕೇಳಿದಳು ತನ್ನ ಸ್ಥಿತಿ ಹೇಳಿ 22 ಸೂರ್ಯ ಉದಿಸುವದಕ್ಕೆ ಪತಿ ಬದುಕಿಸಲ್ಪಡುವನು ಎನ್ನುತೆ ಕೌಶಿಕಾ ಸಾಧ್ವಿಯು ಅನುಮೋದನೆ ಕೊಂಡು ಇನ ಉದಿಸಲಿ ಎಂದ ಅಘ್ರ್ಯ ಕೊಟ್ಟಳು ಮುದದಿ 23 ಸೂರ್ಯ ಮುನಿಶಾಪ ಫಲಿಸಿತು ಬಿದ್ದ ಕೆಳಗೆ ಕೌಶಿಕ ತತ್‍ಕ್ಷಣವೇ ಬದುಕಿ ಎದ್ದ ಪತಿವ್ರತಾ ಶಿರೋಮಣಿ ಅನಸೂಯಾ ದೇವಿ ಪ್ರಭಾವ ಪತಿವ್ರತಾ ಮಹಾತ್ಮೆ ಜ್ವಲಿಸಿತು ಲೋಕದಲ್ಲಿ 24 ಕೌಶಿಕನ್ನ ಬದುಕಿಸಿದ್ದು ಮಾತ್ರವಲ್ಲದೇ ಸರ್ವ ಕುಷ್ಠಾದಿ ರೋಗ ಪರಿಹರಿಸಿ ಯುವವಾಗಿ ಮಾಡಿ ಅಯುಷ್ಯ ಬಹುನೂರು ವರ್ಷಗಳ ಅನುಗ್ರಹಿಸಿ ತುಷ್ಠಿ ಸುಖಜೀವನ ಒದಗಿಸಿದಳ್ ಅನಸೂಯಾ 25 ಅನಸೂಯೆಯ ಪಾತಿವ್ರತ್ಯ ಮಹಾತ್ಮೆಯ ಶ್ಲಾಘಿಸಿ ಏನು ವರ ಕೇಳಿದರೂ ಕೊಡುವವೆಂದು ಸುರಪ ಆನಿಮಿಷರು ಹೇಳಲು ಪತಿವ್ರತಾ ಶಿರೋಮಣಿ ವಿಧಿ ಶಿವ ತನ್ನಲ್ಲವತರಿಸಲೆಂದಳು 26 ತಥಾಸ್ತು ಎಂದ ದೇವತೆಗಳ ವರ ಸತ್ಯಮಾಡೆ ಸುತಪಸ್ವಿ ಅತ್ರಿಗೆ ಹಂಸ ವೃಷಾರೂಡರು ಪ್ರತ್ಯಕ್ಷದಿ ಹೇಳಿದಂತೆಯೂ ಅನಸೂಯ ಅತ್ರಿಗೆ ಪುತ್ರರೆಂದುದಿಸಿದರು ಸೋಮಸ್ತ ಬ್ರಹ್ಮೇಶ ವಿಷ್ಣು 27 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಾಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯನಮೋ ಪ್ರಿಯತಾಂ ಶರಣು 28 ಎರಡನೇ ಅಧ್ಯಾಯ ಶ್ರೀ ದತ್ತಾತ್ರಯ ಪ್ರಾದುರ್ಭಾವ ಸಾರ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಭೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಬ್ರಹ್ಮಾವಿಷ್ಟನು ಸೋಮ ಔಷಧಿಗಳ ರಾಜನಾದ ಉನ್ಮಾದ ಚರ್ಯದಿ ಕೋಪ ಪ್ರಕಟಿಸಿ ಮೆರೆವರು ತಮ್ಮ ಶಿಷ್ಯರೊಡಗೂಡಿ ಶಿವಾವತಾರ ದೂರ್ವಾಸ ಸುಮ್ಮನಸ ಸಜ್ಜನ ಹಿತರು ದುಷ್ಟನಿಗ್ರಹರು 1 ತನ್ನನ್ನ ತಾನೇ ಸುತನಾಗಿ ದತ್ತಮಾಡಿಕೊಂಡನು ವಿಷ್ಣು ಅತ್ರಿ ದಂಪತಿಗೆ ಆದ ಕಾರಣ ಪ್ರಖ್ಯಾತೆ ಉನ್ನಾಮ ದತ್ತಾತ್ರಯ ಕ್ಷೋಣಿ ಯೋಗ್ಯಾಧಿಕಾರಿಗಳಿಂ ಘನಭಕ್ತಿಯಿಂ ಶುಚಿಯಿಂ ಜಪ್ಯ ಸ್ಮರಣೀಯಿಂ ಶ್ರೋತವ್ಯ ಜಯತು 2 ಕಲ್ಯಾಣತಮ ಪೂರ್ಣ ಅಮಲ ಗುಣಗಣ ಸಿಂಧು ಮಾಲೋಲ ಶ್ರೀವಕ್ಷ ಶ್ರೀಶನೇ ಪ್ರಾದುರ್ಭವಿಸಿದನು ಚೆಲುವ ಅನುಪಮ ಸೌಂದರ್ಯಸಾರ ಸರ್ವೋತ್ತಮ ಲೀಲಾನಂದಮಯ ಚಿನ್ಮಾತ್ರಗಾತ್ರ ಭಕ್ತೇಷ್ಟದಾತ 3 ಕಮಲಾಸನಾವಿಷ್ಟ ಸೋಮ ರುದ್ರಾವತಾರ ದೂರ್ವಾಸ ತಮ್ಮ ತಮ್ಮ ಉದ್ಯೋಗಸಾಧನಕೆ ಬೇರೆ ಬೇರೆ ಹೋಗೆ ಸುಮನೋಹರ ರೂಪ ಶ್ರೀಮನೋರಮ ದತ್ತಾತ್ರಯ ಸುಮಹಾ ಯೋಗಿಯಾದ ನಿಸ್ಸಂಗ ಯೋಗೇಶ್ವರೇಶ್ವರ 4 ಅತ್ರೇಯರು ಮೂವರು ಹೀಗೆ ಬೇರೆ ಬೇರೆಯಾಗಿಯೇ ತಮ್ಮ ತಮ್ಮ ರೂಪದಲ್ಲೇ ಇದ್ದರು ಒಂದಾಗಿ ಅಲ್ಲ ಸೋಮ ಶಿವ ದತ್ತರಿಗೆ ಬೇರೆ ಬೇರೆ ಮಂತ್ರವುಂಟು ಸೋಮ ಪಂಚ ಶಿವ ಪಂಚ ದತ್ತ ನವಅಕ್ಷರವು 5 ಪ್ರೋದ್ಯ ದಿವಾಕರ ಪೋಲ್ವ ವರ್ಣವುಳ್ಳ ಶುಭಗಾತ್ರ ಆದಿತ್ಯ ಸಹಸ್ರಾಮಿತ ಮಹೋತ್ಕøಷ್ಟ ತೇಜಃಪುಂಜ ವ್ಯಾಪ್ತ ಸರ್ವತ್ರ ಜ್ಞಾನಾಭಯಕರನು ಬ್ರಹ್ಮಾದಿ ತ್ರಿದಿವ ಸುಬೋಧಕನು ಕಪಿಲನು ದತ್ತಾತ್ರಯ 6 ಇಂಥ ಮಹಾಮಹಿಮನು ಕಪಿಲ ದತ್ತಾತ್ರಯನು ಅಧಿಕಾರಿಗಳಿಗೆ ಅಪರೋಕ್ಷಜ್ಞಾನ ಮೋಕ್ಷದಾತ ಶ್ರೋತೃ, ಮಂತ್ರ, ಧ್ಯಾತೃಗಳಿಗೆ ಕಪಿಲ ದತ್ತಾತ್ರಯ ಭಕ್ತಿ ಮೆಚ್ಚಿ ಸದಾ ಸಂರಕ್ಷಿಸಿ ಇಷ್ಟಾರ್ಥ ಕೊಡುವ 7 ಪದ್ಮ ಭವಾದ್ಯಮರರಿಂ ಧ್ಯಾತ ದತ್ತಾತ್ರಯ ಹರಿ ಮೇದಿನಿ ನರರಂತೆ ಅವತಾರ ಲೀಲೆ ಚರಿಸಿ ಅದ್ಭುತ ಯೋಗಾನುಷ್ಠಾನದಿ ಇರುತಿರೆ ಜನರು ಈತನ ಸೌಂದರ್ಯ ಯೋಗಸಾಮಥ್ರ್ಯ ಹೊಗಳಿದರು 8 ಸಹಸ್ರಾರು ಋಷಿಪುತ್ರ ಬ್ರಹ್ಮಚಾರಿಗಳು ಬಂದು ಅಹರ್ನಿಶಿ ಯೋಗೇಶ್ವರೇಶ್ವರ ದತ್ತನಾಶ್ರಮದಿ ಬಹಳುತ್ಸಾಹದಲಿ ಸುತ್ತು ಮುತ್ತು ಗುಂಪುಗೂಡಿ ಮಹಾಯೋಗಾಭ್ಯಾಸಕ್ಕೆ ಚ್ಯುತಿಯ ಕಲ್ಪಿಸಿದರು 9 ಯೋಗ್ಯರು ಸಜ್ಜನರು ಈ ಭಕ್ತ ಋಷಿಕುವರರು ಯೋಗ್ಯಸಾಧನೆ ಅವರವರ ಆಶ್ರಮದಲ್ಲಿಯೇ - ಗೈಯಲಿ ಬೇಕೆಂದು ಅವರುಗಳು ಹೋಗೋ ಉಪಾಯ ನಿಶ್ಚೈಸಿ ಮುಳುಗಿದ ದತ್ತನು ಸರೋವರದೊಳು 10 ಸುರಮಾನದಿ ಸಾವಿರವರ್ಷ ಭಗವಾನ್ ದತ್ತನು ಸರೋವರದೊಳಿದ್ದನು ಹೊರಜನಕ್ಕೆ ಕಾಣದೆ ಆ ಋಷಿಪುತ್ರರು ತೀರದಲಿ ಇಕೋ ಈಗ ನಾಳೆ ಬರುವನು ಮೇಲೆ ಎಂದು ಕಾಯುತ್ತಿದ್ದರು ದೃಢದಿ 11 ಜಲಧಿ ಉಕ್ಕಿ ಹರಿದು ಕ್ಷೋಣಿಯ ಮುಳುಗಿಸದೆ ಜಲಮಧ್ಯ ತಾನಿದ್ದು ಕಾಯುವ ವಡವಾ ಮುಖಾಗ್ನಿ ಜಲಮಧ್ಯದಿ ಈಗ ಹೊಕ್ಕಿರುವ ದತ್ತಾತ್ರಯನು ಮುಳುಗಿರುವುದು ಆಶ್ಚರ್ಯವಲ್ಲ ಈರ್ವರೂ ಏಕ 12 ಬಲುದೀರ್ಘ ದೇವವರ್ಷಗಳು ಸಾಸಿರವಾದರೇನು ಶೀಲತಮ ವರವಾಯುವು ವರುಣನು ಬುಧಾದಿ ಜಲಾಭಿಮಾನಿಗಳು ಕಿಂಕರರಾಗಿ ಇರುತಿಹರು ಜಲಶಾಯಿ ನಾರಾಯಣ ಅವತಾರ ದತ್ತನಿಗೆ 13 ಒಂದು ದಿನ ಕೆರೆನೀರು ಚಲಿಸಲು ಸಂತೋಷದಿ ಬಂದರೂ ಬಂದರೂ ಎಂದು ಕೂಗೆ ಋಷಿಕುವರರು ಇಂದಿರಾಪತಿ ದತ್ತ ಮೇಲೆದ್ದು ಬಂದ ಬದಿಯಲ್ಲಿ ಇಂದಿರಾಂಗಿ ನಾರೀಮಣಿ ಓರ್ವಳ ಆಲಿಂಗಿಸುತ 14 ಯಾರನ್ನೂ ಲೆಕ್ಕಿಸದೆ ಕಾಮವಿಲಾಸ ಕೇಳಿಯ ಆ ಸ್ತ್ರೀಯೊಡನೆ ಮಾಡುತ್ತಿದ್ದುದು ಕಂಡು ಯುವಕರು ಯೋಗಿ ಹೀಗಾದರೆ ಎನ್ನುತ ತ್ವರಿತ ತೆರಳಿದರು ಜುಗುಪ್ಸೆಯಲ್ಲಿ ತ್ಯಜಿಸಿ 15 ಆ ಪುಣ್ಯವಂತ ಋಷಿಪುತ್ರರು ತಿಳಕೊಳ್ಳಲಿಲ್ಲ ಆ ಸ್ಛುರದ್ರೂಪಿಣಿ ನಾರಿ ಸಾಕ್ಷಾತ್ ಲಕ್ಷ್ಮೀದೇವಿಯೆಂದು ವಿಪುಲ ಮನ ಹರುಷ ತೋರಿಸಿ ದತ್ತಾತ್ರಯನು ಕೈಪಿಡಿದು ಲಕ್ಷ್ಮಿಯ ಕರೆದುಹೋದ ಆಶ್ರಮಕೆ 16 ಯಾವ ತನ್ನಾಶ್ರಮದಿ ಸ್ವಾಧ್ಯಾಯ ಪ್ರವಚನಗಳ್ ದಿವ್ಯ ಯೋಗ ಅಭ್ಯಾಸ ಶಿಷ್ಯರ್ಗೆ ಶೀಕ್ಷಾದಿಗಳ್ ಯಾವಾಗಲೂ ಹಿಂದೆ ನಡೆಸುತ್ತಿದ್ದನೋ ಅಲ್ಲಿ ಈಗ ದೇವಿಯೊಡನೆ ಲೀಲಾವಿಲಾಸಗಳ ತೋರಿಸಿದ 17 ಮಂದ ಧೀಗಳು ಈ ವಿಡಂಬನೆ ಕಂಡು ಮೋದದಲಿ ಶ್ರೀದತ್ತ ಈ ರೀತಿ ಆದನಲ್ಲಾ ಎಂದು ಮಾತನಾಡೆ ಸುಧೀಗಳು ಬೃಹಸ್ಪತ್ಯಾದಿಗಳು ದತ್ತಾತ್ರಯನು ಮೋದಚಿನ್ಮಯ ನಿರ್ದೋಷ ಹರಿ ಶ್ರೀಶನೆ ಎಂದರÀು 18 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯ ನಮೋ ಪ್ರಿಯತಾಂ ಶರಣು 19 -ಇತಿ ಎರಡನೇ ಅದ್ಯಾಯ ಸಂಪೂರ್ಣಂ - ಮೂರನೇ ಅದ್ಯಾಯ ಸಂಪತ್‍ಲಕ್ಷ್ಮೀ ವೃತ್ತಾಂತ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೊಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಸುರಪ ಜಂಭಾಸುರನಿಂದ ಅಪಜಯವ ಕೊಂಡು ಸುರಗುರು ಪ್ರೇರಣೆಯಿಂ ದತ್ತಾತ್ರಯನಲಿ ಹೋಗಿ ಶರಣು ಹೊಕ್ಕು ಸೇವಗೈಯಲು ಆಗ ಅವನನ
--------------
ಪ್ರಸನ್ನ ಶ್ರೀನಿವಾಸದಾಸರು
ಯಾರ ಭಯವೇನಿಹುದು ಶ್ರೀವೇಂಕಟೇಶ ನೀನೆ ದಯವಾದ ಮೇಲ್ಯಾರ ಹಂಗೇನು ಪ ಪೊಡವಿಯಾಳುವ ದೊರೆಯು ಒಡವೆವೊಯ್ದರೆಯೇನು ಅಡವಿಯೊಳು ಮೃಗಬಂದು ತಡೆದರೇನು ತೊಡೆಯನೇರುವ ಮಗನ ಅಡವಿಗಟ್ಟಿದರೇನು ನೆಗಳು ಕಾಲ್ಪಿಡಿದರೇನು 1 ವ್ಯಾಳ ಬಹುರೋಷದಲಿ ಕಾಲು ಸುತ್ತಿದರೇನು ಕಾಳ ರಾಕ್ಷಸ ಕೈಯ ಪಿಡಿದರೇನು ಜ್ವಾಲೆ ನಾಲ್ದೆಸೆಯಿಂದ ಮೇಲೆ ಮುಸುಕಿದರೇನು ಹಗೆ ತನಗೆ ವಿಷವಿಕ್ಕಲೇನು 2 ಯಾಗಕೋಸುಗ ಮೃಗವ ಹೋಗಿ ತರುವೆನುಯೆಂದು ರಾಗದೊಳು ಬಲವಂತ ಕರೆಯಲಾಗಿ ಮೃಗ ಬಂದು ಬಾಗಿಲೊಳು ಕಾಲ್ಪಿಡಿಯೆ ಆಗ ಬಿಡಿಸಿದವರಾರು ನಾಗಗಿರಿವಾಸ 3 ಕಡುಗಲಿಯು ದ್ರೌಪದಿಯ ಉಡಿಮಡಿಯ ಸೆಳೆವಂದು ಒಡೆಯ ರಕ್ಷಿಸುಯೆಂದು ನಡುಗುತಿರಲು ಮಡದಿಗಕ್ಷಯವಿತ್ತು ನುಡಿದ ಭಾಷೆಯ ಸಲಿಸಿ ಕೊಡಲಿಲ್ಲವೆ ನೀನು ಒಡೆಯ ಗಿರಿವಾಸ 4 ಕೆಡೆನುಡಿದು ಬಾಲಕನ ಅಡವಿಗಟ್ಟಲು ಪಿತನು ಸಡಗರದ ಮಡದಿಯಳ ಮಾತ ಕೇಳಿ ಒಡೆಯ ನೀನೆಯೆಂದು ಕಡುತಪವನರ್ಚಿಸಲು ಉಡುಗಣಕೆ ಮೇಲಾದ ಪದವ ತೋರಿದೆಲಾ 5 ಮೃಗ ಜಲದ ಹೊಂಡದೊಳಗಾಡುತಿರೆ ಕಂಡು ಕಡು ರೋಷದಲಿ ಕಾಲ್ಪಿಡಿಯಲು ಪುಂಡರಿಕಾಕ್ಷನನು ಭಯಗೊಂಡು ಕರೆದರೆ ತುಂಡಿಸಿದೆ ಚಕ್ರದೊಳು ನೆಗಳ ಗಂಟಲನು 6 ಒಬ್ಬನೆ ಪಥದೊಳಗೆ ಸರ್ಬಬಲನೈದುತಿರೆ ಹೆಬ್ಬಾವು ಆತನನು ಮೈಸುತ್ತಲು ಗರ್ಭದೊಳು ನಡುನಡುಗಿ ಉಬ್ಬಸವ ಬಿಡುತಿರಲು ಎಬ್ಬಿಸಿದರಾರಲ್ಲಿ ನಿರ್ಭಯವ ತೋರಿ 7 ದುರುಳ ದೈತ್ಯನು ತನ್ನ ಕುವರನನು ಕೊಲುವುತಿರೆ ಭರದಿಂದ ಕಂಬದೊಳು ಹೊರಟು ಬಂದು ನರಹರಿಯ ರೂಪದಲಿ ಕರುಳ ಮಾಲೆಯ ಧರಿಸಿ ತರಳನನು ಕಾಯಿದವರಾರು ಶ್ರೀಹರಿಯೆ 8 ಉರಿಯ ಮನೆಯಂದರಿಯದರಸರೈವರ ಹೊಗಲು ಇರಿಸಿರ್ದ ಬಾಗಿಲೊಳು ಉರಿ ಮುಸುಕಲು ಬೆರಸಿರ್ದ ನಿದ್ರೆಯೊಳು ಇರಿಸಿ ಕಾಯಿದವರಾರು ಕರೆಸಿ ದ್ರೌಪದಿಯನ್ನು ಕೊಡಿಸಿದವರಾರು 9 ಚಂದ್ರಹಾಸನು ವಿಷವ ತಿಂದು ಸಾಯಲಿಯೆಂದು ತಂದೆ ಬರೆದಿಹ ಲಿಖಿತ ನಂದನನು ನೋಡಿ ಮಂದಗಮನೆಯ ಕೊಟ್ಟು ಚಂದ್ರಹಾಸನ ನಿಲಿಸಾ ನಂದಳಿದ ಮಾಯವೇನೆಂದು ಹೇಳಯ್ಯ 10 ಕಾಯ ಭಯ ಹೊರತಾಗಿ ಮೀರಿದಾಪತ್ತಿನಲಿ ಕಡೆ ಸೇರಿಸೊ ಭೂರಮಣ ವರಾಹತಿಮ್ಮಪ್ಪ ಚರಣವನು ಕುಲಿಶ ನೀನಾಗು 11
--------------
ವರಹತಿಮ್ಮಪ್ಪ