ಒಟ್ಟು 928 ಕಡೆಗಳಲ್ಲಿ , 96 ದಾಸರು , 798 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಟವನಾಡುವ ಬಾರೋ ಶ್ರೀ ಕೃಷ್ಣ ಪ ನೋಟಕೆ ಜನಗಳ ಕೂಟವು ಕಾದಿದೆ ಅ.ಪ ದೊರೆಯು ನೀನಂತೆ ದೊರೆಯು ವಾಸಿಸಲು ಅರಮನೆ ಎಂದಿದನರಿಯಬೇಕಂತೆ ಪರಿಪರಿಯಲಿ ನಿನ್ನ ಸೇವೆಯು ಮಾಡಲು ಪರಿಚಾರಕ ನಾನಿರಬೇಕಂತೆ 1 ತಂದೆಯು ನೀನಂತೆ ತಾಯಿ ರುಕ್ಮಿಣಿಯಂತೆ ಮಂದಿಗಳೆಲ್ಲರು ಮಕ್ಕಳು ನಿನಗಂತೆ ಮುಂದೆ ಎಮಗೆ ನಿನ್ನ ದಿವ್ಯ ರಾಜ್ಯದಲಿ ಒಂದೊಂದು ಭಾಗವ ಬರೆದಿಡಬೇಕಂತೆ 2 ಬಿಂಬವು ನೀನಂತೆ ಕನ್ನಡಿಯೊಳು ಪ್ರತಿ ಯೋಗಿ ಪ್ರಸನ್ನ ಬಿಂಬದಿ ಬಿಂಬವ ನೋಡುವೆನಂತೆ 3
--------------
ವಿದ್ಯಾಪ್ರಸನ್ನತೀರ್ಥರು
ಆತ್ಮನಿವೇದನೆ ಅಂಜಬ್ಯಾಡ ಅಂಜಬ್ಯಾಡೆಲೋ ಜೀವ ಭವ ಭಂಜನ ಹರಿ ಶರಣರ ಕಾವಾ ಪ ಮಾತ ಹೇಳುವೆ ನಿನಗೊಂದ ಪರರಜ್ಯೋತಿ ಕಾಣುವತನಕೀ ಬಂಧ ಭೂತ ಭೇತಾಳಗಳಿಂದ ನಿನಗೆ ಭೀತಿ ಪುಟ್ಟಲಿಲ್ಲೋ ಮತಿಮಂದ 1 ಛೇದ ಭೇದಗಳು ನಿನಗೆಲ್ಲಿ ನೀ ಅ- ನಾದಿ ನಿತ್ಯವೆಂಬುದ ಬಲ್ಲಿ ವೇದ ಬಾಹ್ಯರಾಗದೆ ಇಲ್ಲಿ ಹರಿ ಪಾದ ಇನ್ಯಾಕೆ ಪೂಜಿಸಲೊಲ್ಲಿ 2 ನೀನು ನಿನ್ನದು ಅಲ್ಲವೋ ನೋಡಾ ದೇಹ ನಾನು ನನ್ನದೆಂಬರೋ ಮೂಢಾ ಮಾನಹಾನಿ ಮಾಡಿಕೊಳಬೇಡ ಬಿಡು ಸಾನುಬಂಧಿಗಳ ಸ್ನೇಹವ ಗಾಢ 3 ಅಹಿತಾದಿ ವಿಭೂತಿಯ ನೋಡೋ ಸೋಹಂ ಎಂಬರೆ ವಿಘಾತಿಯ ನೇಹವ ಪಡೆವರೆ ಗೀತೆಯ ಕೇಳಿ ಮೋಹವ ಕಳಕೋ ವಿಜಾತಿಯ 4 ಮಧ್ವವಲ್ಲಭ ಮಾಡಿದ ಗ್ರಂಥ ದೊಳಗದ್ವೈತತ್ರಯ ತಿಳಿದಂಥ ವಿದ್ವಾಂಸರು ಚರಿಸುವ ಪಂಥವನ್ನು ಸದ್ಭಕ್ತಿಲಿ ಸಾಧಿಸು ಭ್ರಾಂತ 5 ಜಾಗರ ಸ್ವಪ್ನ ಸುಷುಪ್ತಿಗಳೊಳು ವರ ಭೋಗಿಶಯನನ ರೂಪಗಳೇಳು ಭಾಗವತ ಬಲ್ಲವರ ಕೇಳು ಬೃಹ- ದ್ಯಾಗವ ಹರಿಗರ್ಪಿಸಿ ಬಾಳು 6 ಪಂಚಾತುಮ ಸಿಲುಕವ ಷಟ್ ಪಂಚ ಪಂಚಿಕೆಗಳ ಕರ್ಮವ ಮೀಟಿ ಪಂಚಿಕೆ ತಿಳಿದುಕೊಂಡರೆ ನಿಷ್ಪ್ರ ಪಂಚನಾಗಿ ನೀ ಕಡೆದಾಟಿ7 ಜ್ಞಾನೇಚ್ಛಾ ಕ್ರಿಯಾ ಶಕ್ತಿಗಳೆಂಬ ಈ ಮ- ಹಾನುಭಾವದಿ ನಿನ್ನ ಬಿಂಬ ತಾನೇ ಸರ್ವತ್ರದಲಿ ಕಾಂಬ ಇದ- ಕೇನು ಸಂದೇಹವಿಲ್ಲವೋ ಶುಂಭ 8 ತಾಪತ್ರಯಂಗಳು ನಿನಗೆಲ್ಲಿ ಪುಣ್ಯ ಪಾಪಕ್ಕೆ ಲೇಪನಾಗೋಕೆ ಹೊಲ್ಲ ಪ್ರಾಪಕ ಸ್ಥಾಪಕ ಹರಿಯೆಲ್ಲ ಜಗ ದ್ವ್ಯಾಪಕನೆಂದರಿತರೆ ಕೊಲ್ಲ 9 ಡಿಂಭದೊಳಗೆ ಚೇತನವಿಟ್ಟು ಜಗ- ದಂಬಾರಮಣ ಮಾಡಿದ ಕಟ್ಟು ಉಂಬುಡುವ ಕ್ರಿಯೆಗಳನಷ್ಟು ನಿನ್ನ ಬಿಂಬನಾಧೀನನಾದರೆ ಇಷ್ಟ 10 ಲಕ್ಕುಮಿ ಅವನ ಪಟ್ಟದ ರಾಣಿ ದೇ- ವರ್ಕಳು ಪರಿಚಾರಕ ಶ್ರೇಣಿ ವಕ್ಕಲು ನಾವೆಲ್ಲರು ಪ್ರಾಣಿ ದಶ- ದಿಕ್ಕುನಾಳುವ ನಮ್ಮ ದೊರೆಯ ನೀ 11 ಮತ್ರ್ಯಲೋಕದ ಸಂಪದ ಪೊಳ್ಳು ಜಗ ಮಿಥ್ಯಮತವೆಂದಿಗು ಜೊಳ್ಳು ಶ್ರುತ್ಯನ್ನರ್ಥ ಪೇಳ್ವದೇ ಸುಳ್ಳು ನೀ ಭೃತ್ಯನು ಕರ್ತನಾಗದಿರೆಲೋ ಕೇಳು12 ಮಾಧವನಲಿ ತನುಮನ ಮೆಚ್ಚು ಕ್ರೋಧರೂಪದ ಕಲಿಮಲ ಕೊಚ್ಚು ಮೋದತೀರ್ಥರ ವಚನವ ಮೆಚ್ಚು ವಾದಿ ಮತಕ್ಕೆ ಬೆಂಕಿಯ ಹಚ್ಚು 13 ಸವಿವುಳ್ಳರೆ ಕೇಳೆನ್ನಯ ಸೊಲ್ಲ ನಮ್ಮ ಪವನನಯ್ಯನ ಪ್ರೇರಣೆಯಿಲ್ಲ ಎವೆಯಿಕ್ಕಲರಿಯದೀ ಜಗವೆಲ್ಲ ಎಂದು ಶಿವ ತನ್ನ ಸತಿಗೆ ಹೇಳಿದನಲ್ಲ 14 ಧ್ರುವ ಬಲ್ಯಾದಿ ರಾಯರ ನೋಡು ನಿನ್ನ ಅವಗುಣಗಳನೆಲ್ಲಾ ಈಡ್ಯಾಡೋ ಅವಶ್ಯವಾಗಿ ಕರ್ಮವ ಮಾಡೋ ಮಾ- ಧವ ನಿನ್ನವನೆಂದು ನಲಿದಾಡೋ 15 ನಿಂದಾ ಸ್ತುತಿಗಳ ತಾಳಿಕೋ ಬಲು ಸಂದೇಹ ಬಂದಲ್ಲಿ ಕೇಳಿಕೋ ಬಂದವರಿಂದಲಿ ಬಾಳಿಕೋ ಗೋ- ವಿಂದ ನಿನ್ನವನೆಂದು ಹೇಳಿಕೋ 16 ತತ್ವವಿಚಾರವ ಮಾಡಿಕೋ ನಿನ್ನ ಭಕ್ತಿಯ ಆಳವ ಅಳಿದುಕೋ ಮಾಯಾ ಮೋಹ ಕಳೆದುಕೋ ನಿನ್ನ ಹತ್ತಿರ ಹರಿಯಿರುವ ನೋಡಿಕೋ 17 ಹಿಂಡು ದೈವಗಳಿಂದ್ಹಿರಿಯನೀತ ತನ್ನ ತೊಂಡನೆಂದದವರಿಗೆ ತಾ ಸೋತಾ ದಂಡಿಸಿ ದಯಮಾಡುವ ದಾತಾ ಭೂ- ಮಂಡಲದೊಳಗೆಲ್ಲ ಪ್ರಣ್ಯತಾ 18 ನಾಡ ಖೋಡಿ ದೈವಗಳಂತೆ ತನ್ನ ಬೇಡಲು ತಾ ಬೇಡಿಕೊಳನಂತೆ ನೀಡುವ ನಿಖಿಳಾರ್ಥವದಂತೆ ನಿಜ ನೋಡಿಕೋ ನಿನಗ್ಯಾತರ ಚಿಂತೆ 19 ಏನು ಕೊಟ್ಟರೆ ಕೈಚಾಚುವ ತನ್ನಾ- ಧೀನವೆಂದರೆ ನಸುನಾಚುವಾ ದಾನವ ಕೊಡಲೂರಿ ಗೀಚುವ ತನ್ನಲಿ ತಾನೇವೇ ಮನದೊಳು ಸೂಚುವ20 ಕರಕರದಲ್ಲಿ ತಾ ಬರುವಾನು ಮರತುಬಿಟ್ಟವರ ತಾ ಮರೆಯಾನು ನಿಜ ಶರಣರ ಕಾದುಕೊಂಡಿರುವಾನು ತನ್ನ ಸರಿಯಂದವರ ಹಲ್ಲು ಮುರಿದಾನು 21 ಆರು ಮುನಿದು ಮಾಡುವದೇನು ಪ್ರೇರ್ಯ ಪ್ರೇರಕರೊಳಗಿದ್ದು ಹರಿ ತಾನು ಓರಂತೆ ಕಾರ್ಯವ ನಡೆಸೋನು ಮುಖ್ಯ ಕಾರಣ ಶ್ರೀಹರಿ ಅಲ್ಲವೇನೋ 22 ಹಲವು ಹಂಬಲಿಸಲ್ಯಾತಕೆ ಹುಚ್ಚಾ ವಿದ್ಯಾ ಕುಲಶೀಲಧನದಿಂದ ಹರಿ ಮೆಚ್ಚಾ ಕಲಿಯುಗದೊಳಗಾರ್ಯರ ಪೆಚ್ಚಾ ತಿಳಿ ಸುಲಭೋಪಾಯಾದಿಗಳ ನಿಚ್ಯಾ 23 ದುರ್ಜನರೊಳು ದೈನ್ಯ ಬಡದಿರು ಸಾಧು ಸಜ್ಜನರೊಳು ವೈರ ತೊಡದಿರು ಅರ್ಜುನಸಖನಂಘ್ರಿ ಬಿಡದಿರು ನಿ- ರ್ಲಜ್ಜನಾಗಿ ಬಾಯ್ಬಿಡದಿರು 24 ಭಯರೂಪದಿ ಒಳಹೊರಗಿದ್ದು ನಿ- ರ್ಭಯ ನಾಮಕನು ಧೈರ್ಯವನೆ ಗೆದ್ದು ಭಯದೋರುವನೆಂಬುದೆ ಮದ್ದು ಮಹಾ ಭಯಕೃದ್ಭಯಹಾರಿಯನೆ ಪೊಂದು 25 ಪರಸತಿಯರ ಸಂಗವ ಬಿಡು ಹರಿ ಸರ್ವೋತ್ತಮನೆಂದು ಕೊಂಡಾಡು ಪರಮಾತ್ಮನ ಧ್ಯಾನವ ಮಾಡು ನರ ಹರಿದಾಸರಂಗಳ ಒಡಗೂಡು 26 ಸೃಷ್ಟಿಗೊಡೆಯ ಶ್ರೀದವಿಠಲ ವಿಷ್ಟಾವಿಷ್ಟನಾಗಿದ್ದೆಲ್ಲ ಇಷ್ಟಾನಿಷ್ಟವ ಕೊಡಬಲ್ಲ ಮನ- ಮುಟ್ಟಿದವರ ಬೆಂಬಿಡನಲ್ಲಾ 27
--------------
ಶ್ರೀದವಿಠಲರು
ಆದಿಯುಗದಿ ಮಹ ಆದಿದೈತೇಯನೊಬ್ಬ ಮೇದಿನಿಯೊಳ್ ಸ್ವರ್ಣಕಶ್ಯಪು ನಾಮದಿ ಸಾಧಿಸಿ ಬಂದವಗೊಬ್ಬ ಸೋದರ ಸ್ವರ್ಣಾಂಬಕನೆನಿಸಿ ಮೇದಿನಿ ಚೋರನಾಗಿ ಹತನಾದನು ಆದಿಶೇಷನೆ ವಿಷ್ಟಕ್ಸೇನ ತಾ- ನಾದ ಪ್ರಹ್ಲಾದ ಪ್ರಾಣಾವೇಶದಿಂದ ಸೋದರ ಜೀವಾಂಶಾಪಾನಾವಿಷ್ಟ ಸ- ಲ್ಹಾದನಾಮಕ ಮಿತ್ರನಾದ ಕ ಹ್ಲಾದ ವ್ಯಾನಾವೇಶದಿಂದ ಮೋದದಿ ಸೋಮಾಂಶೋದಾನಾಯುತ ನು- ಹ್ಲಾದ ನಾಮಕ ಸಂಭೂತನಾದ ಆದರೈವರಾದೈತ್ಯಗೆ ಪುತ್ರರು ಮೇದಿನಿ ಸುರರುದ್ಧಾರಗೋಸುಗ ಆದಿದೈವ ನಾರೇಯಣ ತಾ ನಾದಿಕಾರಣ ವಿಶ್ವಕರ್ತಾ ಮೋದಾನಂದ ಮೂರುತಿ ಸುಗುಣ ಭೋಧಪೊರ್ಣ ಸರ್ವಜ್ಞ ಸ್ವಾತಂತ್ರ ವೇದಪುರುಷಾದಿ ಜಡಾದಿ ಜಗಕೆ ಆಧಾರ ಹರಿ ಎಂಬ ಜ್ಞಾನವ ಭೋದಿಸಿ ಬೊಮ್ಮಮುಖರು ಹರಿ ಪಾದಸೇವಕರೆನುತ ನಿತ್ಯ ವಾದದಿ ವಾದಿಗಳ ಜಯಸಿದರವರ ಪಾದಸೇವಿಸಿ ಕರುಣಾಪಡೆದು ಆದಿ ಗುರು ಜಗನ್ನಾಥವಿಠಲನ್ನ ಆದರದಲಿ ಭಜಿಪೆ ಪರಮ ಸುಖ ರಾಗ :ಕಲ್ಯಾಣಿ ಅಸುರರ ಜನ್ಮದಿ ಪುಟ್ಟಿದ ಇವರಿಗೆ ಶ್ವಸನನ ಆವೇಶ ಸುರರಾವೇಶ ಬಲದಿ ಅಸಮಙÁ್ಞನ ಭಕುತಿ ವಿರಾಗವು ವಸುಧಿಯ ತಳದಿ ದಿನದಿನದಲ್ಲಿ ಪಸರಿಪ ಸೂರ್ಯನ ಪ್ರಭೆಯಂದದಲಿ ಮಿಸುಪದಕಿದೇ ಕಾರಣ ಉಂಟು ಬಿಸಜಾಂಬಕ ಹರಿಪೇಳಿದ ಇವರಿಗೆ ಅಸುರೇಶ ಹಿರಣ್ಯಕಶಿಪುವಿನಲ್ಲಿ ಶಿಶುಭಾವದಿಂದ ಜನಿಸಲು ಪೋಗಿರಿ ಪುಸಿಯಲ್ಲ ಮಚ್ಛಾಪÀ ಅಸುರಭಾವ ಪ್ರಲ್ಹಾದಾದ್ಯ ರಸಮಮಹಿಮರಾಗೀ ಜನಿಸಿರೆಂದು ಉಸುರಿದ ವಾಕ್ಯವು ಪ್ರಮಾಣ ಸಿದ್ಧವೆನ್ನಿ ವ್ಯಸನzಲೈವರು ಹರಿಯನೆ ಮತ್ತೆ ಬೆಸಗೊಂಡರೀಪರಿ ಪರಿಯಾ ಅಸುರನ ಪತ್ನಿಯ ಬಸಿರೊಳು ಪುಟ್ಟುವುದು ವಶವಲ್ಲವೋ ಸ್ವಾಮಿ ಕುಸುಮನಾಭನೆ ನಿನ್ನ ಅಸಮಲೋಕದ ಸುಖ ವಸುಧಿತಳಾದಲ್ಲಿ ಎಸಗದು ಎಸಗದು ಎಂದಿನಕಾಲಕ್ಕೂ ಮುಸುಕುವದಙÁ್ಞನ ದುಃಖದ ಭವದಲ್ಲಿ ಕಸವಿಸಿಗೊಳುತಾ ಙÁ್ಞನವನೀಗಿ ಬಿಸನಿಲಯನೆ ನಿನ್ನ ದರುಶನವಿಲ್ಲದೆ ಅಸುನಿಲ್ಲುವ ಬಗೆ ಯಾವುದು ಪೇಳೋ ಶಶಿಧರವಂದ್ಯ ಗುರುಜಗನ್ನಾಥ ವಿಠಲ ನಮ್ಮ ವ್ಯಸನವನು ಕಳೆದು ಸುಖವನು ಸಲಿಸೋ ರಾಗ - ಕಾಂಭೋದಿ ತಾಳ - ತ್ರಿವಿಡಿ ಭಕುತವಾಕ್ಯವ ಲಾಲಿಸಿ ತಾನಾಗ ಪರಿ ನುಡಿದನು ವಿಕಳ ಪೊಂದದೆ ನೀವು ತ್ವರಿತಾದಿ ಧರೆಯೊಳು ಸಕಲರು ಜನಿಸಲು ಮುಸಕದಙÁ್ಞನ ಲಕುಮಿ ಭೂಮಿಯ ಸಹಿತ ಇರುವೆನು ನಿಮ್ಮೊಳು ನಿತ್ಯ ಪರಿಪರಿ ಮಹಿಮವ ಪ್ರಕಟಮಾಡುವೆ ಮುಖ್ಯಪ್ರಾಣನಿಪ್ಪನು ಸತತ ಕಕುಲಾತಿ ಯಾಕಿನ್ನು ನಡಿರೆಂದು ಹರಿಯೆಂದ ಉಕುತ ವಾಕ್ಯದಲಿಂದ ದಿತಿಜನಲ್ಲಿ ಸುಕೃತಿಗಳೈವರು ಉದಯವೈದಿದರಾಗ ಮುಕುತಿದಾಯಕ ಗುರುಜಗನ್ನಾಥ ವಿಠಲನೆಂಬ ಭಕುತಿ ಪೂರ್ವಕ ಙÁ್ಞನವೃದ್ಧಿಯೈದಿದರು ರಾಗ - ಆರಭಿ ತಾಳ - ಅಟ್ಟ ಪಿರಿಯ ಪ್ರಲ್ಹಾದನ್ನ - ಕರದು ತೊಡೆಯ ಮೇಲೆ ಇರಿಸಿ ಪ್ರೇಮದಿ ನಿಮ್ಮ - ಗುರುವೇನು ಪೇಳ್ಯಾನೆ ಮರಿಯಾದೆ ಎನಮುಂದೆ - ಅರಹು ಎನಲು ಬಾಲ ಕಿರಿನಗೆ ಮುಖದಿಂದ - ಹರಿಯೆ ಸರ್ವೋತ್ತಮ ಹರಬೊಮ್ಮ ಮುಖರೆಲ್ಲ - ಪರಿವಾರಭೂತರು ಅರಿದಿಪ್ಪೆ ಎನ್ನಯ್ಯ ಸರಸಿಜಜಾಂಡಕ್ಕೆ ಅರಸು ತಾನಾಗಿದ್ದು ಇರುವಾದಿ ಚೇತನ ತರುವಾದಿ ಜಡಮಯ ಸರ್ವಸ್ಥಳದಲ್ಲಿ ನಿರುತದಿ ವ್ಯಾಪಿಸಿ ಇರುತಿಹ ಹರಿ ಎಂದು ಅರಿತ ಮಾನವÀÀನಿಗೆ ದೊರೆವೋನು ನಿಶ್ಚಯ ಅರಿತು ಪೇಳಿದ ತನ್ನ ತರಳಾನ ನುಡಿಕೇಳಿ ಭರದಿಂದ ಕಂಬವ ಕರದಿಂದ ಬಡಿಯಾಲು ನರಮೃಗಾಕಾರದಿ ಹೊರಗೆ ಬಂದಾದೈತ್ಯನು ದರವ ಬಗೆದು ಕರುಳಮಾಲೆಯತಾ ಕೊರಳೊಳು ಧರಿಸಿದ ಚರಜನ ಪರಿಪಾಲ ಬಿರುದು ಬೀರಿದ ನಮ್ಮ ಗುರುಜಗನ್ನಾಥವಿಠಲ ಶರಣರ ಮರೆಯನೋ ಧರಿತಳದೊಳಗೆ ರಾಗ :ಇಚ್ಛಾ :ತಾಳ - ಆದಿ ಈ ತೆರ ಪ್ರಹ್ಹಾದ ಹರಿಪಾದವ ಭಜಿಸಿ ಪ್ರೀತಿಯ ಪಡೆದು ಭೂಸುರಗಣಕೆ ಭೂತಳದೊಳಗೆ ಯತಿಗಳ ಕುಲಕೆ ನಾಥನು ವ್ಯಾಸಮುನಿ ಎನಿಸಿ ಮರಳಿ ಖ್ಯಾತ ಶ್ರೀ ರಾಘವೇಂದ್ರನೆಂದೆನಿಸಿ ಪ್ರೀತಿಯಿಂದಲಿ ಭಕ್ತರ ಪೊರೆಯಲು ನೀತಿ ಭಾವದಲಿ ಯತಿಯಾಶ್ರಮ ಪೊಂದಿ ಸೀತಾಪತಿರಾಮ ಯದುನಾಯಕ ಕೃಷ್ಣ ಭೀತಿಹರ ನರಸಿಂಹ ವ್ಯಾಸರ ಭಜಿಸಿ ದೂತರ ಮನೋರಥ ಪೂರ್ತಿಸಿ ಪೊರೆವನು ದಾತಗುರುಜಗನ್ನಾಥ ವಿಠಲನ್ನ ನೀತ ವಿಭೂತಿಯ ಪಡೆದು ನಿರ್ಭೀತನಾಗಿಹನು ಜತೆ ದೂತಜನರ ಮಹಾಪಾತಕ ಹರನೆನ್ನಿ ಪ್ರೀತಗುರುಜಗನ್ನಾಥವಿಠಲನೊಲಿವ ರಾಗ :ಶಂಕರಾಭರಣ :ತಾಳ :ಏಕ
--------------
ಗುರುಜಗನ್ನಾಥದಾಸರು
ಆಧಾರ ನೀನೆ ಶ್ರೀಹರಿ ಕಾಯೊ ದೊರೆ ಪ ಚಾರು ಚರಿತ ಮೂರುಲೋಕಕಾಧಾರ ನೀನೇ ಅ.ಪ ಸ್ವಾರಸ್ಯನೋಡಿ ನಿರಾಶೆಯಿಂದ ದೂರಾಗುವರು 1 ಧನಜನವು ಮನವು ಇಲ್ಲದವರೆಲ್ಲಾವನಜಾಕ್ಷ ನಿನ್ನ ನೆನಪು ಮಾಡದೆ ತೃಣಕೂ ಬಾರರು 2 ಜಾಗುಮಾಡದೆ ಬೇಗಾ ಬಾರಯ್ಯ 3 ಚನ್ನಕೇಶವ ಮನ್ನಿಸೊದೇವ ನಿನ್ನವನಿವ 4 ಪೊರೆಯುವನೀನಲ ಶರಣಜನರ ಪಾಲಕರುಣಾಲವಾಲ ಗುರುರಾಮ ವಿಠಲ ಸಿರಿಲೋಲ 5
--------------
ಗುರುರಾಮವಿಠಲ
ಆರಿಗಾರೋ ಕೃಷ್ಣ ಶೂರಕುಮಾರನೆಪ. ಆರಿಗಾರೋ ನಿನ್ನ ಹೊರತು ಪೊರೆವರೆನ್ನಶೂರ ಮಾರಜನಕ ಅಕ್ರೂರವರದ ದೊರೆಯೆಅ.ಪ. ಸತಿಸುತರು ಹಿತರೇನೊ ಮತಿಭ್ರಾಂತಿಬಡಿಸುವರುಗತಿ ಯಾರೊ ಮುಂದೆ ಗರುಡವಾಹನ ದೇವ1 ಆಶಪಾಶದಿ ಸಿಲುಕಿ ಘಾಸಿಪಟ್ಟೆನೊ ಬಹಳವಾಸುದೇವನೆ ನಿನ್ನ ದಾಸನೆಂದೆನಿಸಯ್ಯ 2 ಕಾಯ ಉ-ಪಾಯ ಯಾವುದೊ ಮುಂದೆ ರಾಯ ಹಯವದನ 3
--------------
ವಾದಿರಾಜ
ಆರಿಗ್ಯಾತಕೆ ಮೊರೆಯಿಡಲಿ ಸಾರಿದವರನ ಪೊರೆವ ಶ್ರೀರಮಣ ನೀನಿರಲು ಪ ಬೆಳಸಿಗೊಬ್ಬನ ಕೇಳೆ ಮಳೆಗೆ ಮತ್ತೊಬ್ಬನೆ ಅಳತಿಗೆ ಇನ್ನೊಬ್ಬನೆ ಹಾಗೆವೆ ವಳತಿಗೊಬ್ಬರು ದೊರೆಗಳೆ ಮ್ಯಾಲೆನ್ನ ಪ್ರಳಯಕೆ ಮತ್ತೊಬ್ಬನೆ ಪರಿಪರಿ ಖಳರ ಮಾತುಗಳೇ ಸ್ವಾಮಿ 1 ಆಕಾಲ ನೀನೆವೆ ಈ ಕಾಲದಲಿ ನೀನೆ ಸಾಕುವನು ಇನ್ನೊಬ್ಬನೆ ಸ್ಥಿರವಾಗಿ ತಾಕು ತಗಲಿಲ್ಲದೆಲೆ ಬೊಮ್ಮಾದಿ ಲೋಕಪತಿಗಳ ಒಡಿಯನೇ ಈ ವ್ಯಾಳ್ಯ ಲೋಕರನ ಕಾಯಬೇಕೊ ಸ್ವಾಮಿ 2 ಕಾಸು ಒಬ್ಬರಿಗಿಲ್ಲ ಲೇಸು ತೋರದಲೇವೆ ದೇಶಕೊಬ್ಬರು ಪೋದರೋ ಪೊಟ್ಟಿಗೆ ಕೂಸುಗಳ ಮಾರುಂಡರೋ ಈ ಜನರ ಕ್ಲೇಶಬಡಸದಲೆ ಪೊರಿಯೊ ಕರುಣದಲಿ ವಾಸುದೇವವಿಠಲ ಸ್ವಾಮಿ 3
--------------
ವ್ಯಾಸತತ್ವಜ್ಞದಾಸರು
ಆರು ಬಣ್ಣಿಪರಮ್ಮಶ್ರೀ ಹರಿಯ ದ್ವಾರಕೆಯ ದೊರೆಯ ಪ. ಭಾರ ಚರಿಯ ಹೇಳ ಸಿರಿಯು ಸೋತಳು 1 ಪಾದ ಬೇಡಿ ದೊರೆಯಭಾರ ಕೊಡಲಿ ಪೊತ್ತ ಹಿರಿಯ ನಾರಿ ತಂದ ಧೀರ ವರ್ಯ 2 ಚರಿಯ ನಾರಿಯರ ವೃತವನಳಿದ ಪರಿಯಏರಿದ ರಾಮೇಶ ಕುದುರೆಯ3
--------------
ಗಲಗಲಿಅವ್ವನವರು
ಆರು ಬಂದರು ಸಖಿ ತೇರಿನ ಬೀದಿಲೆಮಾರಜನಕನ ಸಾರುತ ಹೊಗಳುವರಾರೆ ಕರಿಪುರದಲಿ ಬಂದವರಾರೆ ಪ. ದುಷ್ಟ ದೈತ್ಯರ ಶಿರವ ಕುಟ್ಟಿ ತಮಸ್ಸಿಗೆ ಹಾಕಿಅಟ್ಟಹಾಸದಿಂದ ಭೇರಿ ಘಟ್ಯಾಗಿ ಹೊಯಿಸುವರಾರೆ1 ಕ್ರೂರ ದೈತ್ಯರ ಶಿರವ ಸೇರಿಸಿ ತಮಸ್ಸಿಗೆ ಭೋರೆಂಬೊ ತುತ್ತೂರಿ ಕಾಳಿ ಹಿಡಿಸುವರಾರೆ 2 ವೆಂಕಟನ ದ್ವೇಷಿಗೆ ಸಂಕಟ ಬಿಡದೆಂದುಡಂಕರದಿಂದಲೆ ಡಂಕಿಯ ಹೊಯಿಸುವರಾರೆ 3 ಖೂಳ ದೈತ್ಯರ ಶಿರವ ಸೀಳಿ ತಮಸಿಗೆ ಹಾಕಿಭಾಳಾ ರೌಸದಿಂದ ಕಾಳಿಯ ಹಿಡಿಸುವರಾರೆ4 ಭಾಗವತರ ಸುಖ ಹೀಗೆ ಉನ್ನತ ಎಂದು ಈಗ ತೋರುತ ಭರದಿ ನಾಗಸ್ವರ ಹಿಡಿಸುವರಾರೆ5 ಅಂಬುಜನಾಭನ ನಂಬಲು ಸುಖವಿತ್ತು ಬಂಬಂಬೆನುತ ಶಂಖವ ಸಂಭ್ರಮದಿ ಹಿಡಿಸುವರಾರೆ 6 ನಿರ್ಜರ ಹಂಸನೀ ಹೌದೆಂದು ಸಂಶಯ ಬಿಡಿಸುತ ಕಂಸಾಳೆ ಹೊಯ್ಸುವರಾರೆ7 ಎಷ್ಟೆಷ್ಟು ಕಾಲಕ್ಕೂ ಕೃಷ್ಣಗೆ ದೊರೆ ಎಂದುಶ್ರೇಷ್ಠಾದ ಜಾಂಗುಟಿ ಫಟ್ಯಾಗಿ ಹೊಯಿಸುವರಾರೆ8 ಕಬ್ಬು ಬಿಲ್ಲಿನಯ ಒಬ್ಬ ಜಗದೀಶನೆಂದುಅಬ್ಬರದಿ ಕರಣೆ ನಿರ್ಭಯದಿ ಹಿಡಿಸುವರಾರೆ9 ಮಿತಿಯಿಲ್ಲದೆ ಶೃತಿ ಸಾರುವ ಮಧ್ವಮvವೆÉ ಅಧಿಕವೆಂದು ಶೃತಿಯನೆÉ ಹಿಡಿಸುವರಾರೆ 10 ತಂದೆ ರಾಮೇಶನ ಹೊಂದಲು ಸುಖವೆಂದು ಸುಂದರ ಕೊಳಲನೆ ಮುಂದೆ ಊದಿಸುವರಾರೆ 11
--------------
ಗಲಗಲಿಅವ್ವನವರು
ಆರು ಬಾಳಿದರೇನು ಆರು ಬದುಕಿದರೇನುನಾರಾಯಣನ ಸ್ಮರಣೆ ನಮಗಿಲ್ಲದನಕ ಪ ಉಣ್ಣ ಬರದವರಲ್ಲಿ ಊರೂಟವಾದರೇನುಹಣ್ಣುಬಿಡದ ಮರಗಳು ಹಾಳಾದರೇನುಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನುಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು 1 ಅಕ್ಕರಿಲ್ಲದವಗೆ ಮಕ್ಕಳಿದ್ದು ಫಲವೇನುಹೊಕ್ಕು ನಡೆಯದ ನಂಟತನದೊಳೇನುರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನುಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು 2 ಅಲ್ಪ ದೊರೆಗಳ ಜೀತ ಎಷ್ಟು ಮಾಡಿದರೇನುಬಲ್ಪಂಥವಿಲ್ಲದವನ ಬಾಳ್ವೆಯೇನುಕಲ್ಪಕಲ್ಪಿತ ಕಾಗಿನೆಲೆಯಾದಿಕೇಶವನಸ್ವಲ್ಪವೂ ನೆನೆಯದ ನರನಿದ್ದರೇನು 3
--------------
ಕನಕದಾಸ
ಆರ್ತಭಾವ ಸುಳಾದಿ ಧ್ರುವತಾಳ ವೊಂದು ತೋರೆನಗರವಿಂದನಯನ ಮಂದಾಕಿನಿಯ ಪಡೆದ ಮುದ್ದು ಚರಣ ಸುಂದರಾಂಗ ತೋರೆನಗೆ ಸುರೇಂದ್ರನಾಥ ಕಂದರ್ಪಪಿತನ ಕಾಲಂದಿಗೆ ರುಳಿ ಗೆಜ್ಜೆ ಚೆಂದುಳ್ಳ ಪದ್ಮರೇಖೆಯಿಂದೊಪ್ಪುವೊ ಇಂದಿರೆ ಕರಕಮಲದಿಂದ ಪೂಜಿತನಾದ ಚಂದ್ರವದನ ನಿನ್ನ ಚೆಲುವ ಪಾದ ಇಂದ್ರಾದಿ ಹರ ನಾರಂದ ಸುರಬ್ರಹ್ಮಾದಿ ವಂದ್ಯ ನಿನಗೆ ಕೋಟಿ ನಮೋ ನಮೋ ಎಂದು ಬೇಡುವೆ ದಯಾಸಿಂಧು ಎನಿಸಿದಾತ ಕಂದನಂದದಿ ನೋಡಿ ಸಲಹೋ ಎನ್ನ ಮಂದಬುದ್ಧಿಯ ಮಹಾಮದಡ ಪಾಮರ ಭವ ಬಂಧನದೊಳು ಸಿಲುಕಿ ನೊಂದೆನಯ್ಯ ಸಂದೇಹ ಮಾಡದೆ ಸಲಹದಿದ್ದರೆ ನಿನ್ನ ಹೊಂದಿ ಬಾಳುವುದೆಂತೊ ಮುಂದರಿಯೆ ಬಿಂದು ಮಾತ್ರದಿ ನಾಮಾಮೃತವ ಭೀಮೇಶಕೃಷ್ಣ ತಂದು ನೀಡೆನಿಗೆ ಇಂದೀವರಾಕ್ಷ 1 ಮಠ್ಯತಾಳ ಯುಗಳ ಪಾದಕೆ ಕೈಯ ಮುಗಿದು ಬೇಡುವೆನಯ್ಯ ಜಗದುದರನೆ ನಿನ್ನ ಜಾಣತನವ ಬಿಟ್ಟು ಅಗಣಿತಗುಣಮಹಿಮ ಅಂತರಾತ್ಮಕ ದೇವ ಬಗೆಬಗೆಯಲಿ ಸಲಹೋ ಭಕ್ತವತ್ಸಲ ನಿನ್ನ ಮಗುವೆಂದೆನ್ನ ಕಾಯೊ ಮಂದರೋದ್ಧರ ದೇವ ನಿಗಮಗೋಚರ ಸ್ವಾಮಿ ನಿಂತು ನೋಡುತ ಎನ್ನ ಚಿಗುರುದೋಷದಕುಡಿಯ ಚಿವುಟಿ ಹಾಕುತ ನಿನ್ನ ಸುಗುಣಗಳನೆ ಬಿಟ್ಟೆನ್ನವಗುಣವೆಣಿಸಿದರೆ ಇಗೋ ನಿನಗಪಕೀರ್ತಿ ಈಗ ಒಪ್ಪಿಸುವೆನು ಬಿಗಿದ ಭವಪಾಶ ಬಿಚ್ಚಿ ಭೀಮೇಶಕೃಷ್ಣ ತೆಗೆಯದೆ ನಿನ್ಹೊರತೀ ಜಗದೊಳಗುಂಟೇನಯ್ಯ 2 ವಚನ ಸಕಲ ಸ್ನಾನವು ನೇಮ ಹೋಮ ಜಪಂಗಳು ಸಕಲ ಪುಣ್ಯಕ್ಷೇತ್ರ ಮೂರ್ತಿನಾಮಂಗಳು ಸಕಲ ಪುರಾಣ ವೇದಾದಿಗ್ರಂಥಗಳು ಸಕಲ ಕಾರ್ಯವು ಸರ್ವೇಷ್ಟ ಫಲಂಗಳು ಸಾಯುಜ್ಯ ಪದವಿಗಳು ಲಕುಮೀಶ ಇವು ನಿನ್ನ ನಖಶಿಖ ಪರಿಯಂತ್ರ ಸಾರಥಿ ಸಮದೃಷ್ಟಿಲಿ ನೋಡಲು ಸಕಲಸಿದ್ಧ್ದಿಯು ಸರಿಯಾಗಿ ಕೈಗೂಡೋದು ಶಕಟಸುರಾಂತಕ ಕಕುಲಾತಿ ಮಾಡದೆ ಬಕನ್ವೈರಿಯೆನ್ನ ಭಾರವ ನೀ ವಹಿಸಲಿ ಬೇಕೊ ಇಕೋ ನಿನ್ನ ಚರಣಕ್ಕೆ ಈ ದೇಹ ಅರ್ಪಿಸುವೆ ಗೋಕುಲಾವಾಸ ನಿನ್ನ ಪಾದಕೆ ನಮಸ್ಕರಿಸುವೆ ಮುಕುತಿದಾಯಕ ಮುದ್ದು ಭೀಮೇಶಕೃಷ್ಣನೆ ಭಕುತಿಜ್ಞಾನದಲಿಡೊ ಭಯಹಾರಿ ಎನ್ನ 3 ಗೋಪಸುತನೆ ನಿನ್ನ ಗುರುವಿನ್ವಲ್ಲಭೆ ಮಹ ದಪರಾಧವೆಣಿಸದೆ ನೀ ಕರುಣದಲೆ ಸಾಂ- ದೀಪಗೆ ಸುತರನಿಟ್ಟ ಪಯಾಂಬುಧಿವಾಸ ಕೋಪದಿ ಬಯ್ದ್ದಾ ಶಿಶುಪಾಲಗೊಲಿದೆಯೊ ಶ್ರೀಪತಿ ಶರಣೆಂದಾ ದ್ರೌಪದಿ ಕಾಯ್ದಂತೆ ಕಾಪಾಡೊ ಈ ಭವಕೂಪದೊಳಗೆ ಬಿದ್ದೆ ನೀ ಪಿಡಿಕೈಯ ದಯಾಪರಮೂರುತಿ ಆಪತ್ತು ಬಾಂಧವ ಈ ದೇಹವೃಕ್ಷದಲಿ ದ್ವಾ- ಸೂಪರಣನಂತೆ ದೂರೇನೋ ಎನ್ನ ಸ- ಮೀಪದಲ್ಲಿದ್ದು ಸ್ವರೂಪ ತೋರದಲೆ ಸಂ- ತಾಪ ಬಡಿಸದಿರೆಂದಾಪನಿತು ಪೇಳ್ವೆ ಭೂಪಾಲ ಭೀಮೇಶಕೃಷ್ಣ ನಿನ್ನ ಪಾದ ನಾ ಪೊಂದಿದೆನೊ ದೊರೆ ನೀ ಪೊರೆಯೆಂದು 4 ಜತೆ ಏಸೇಸು ಕಾಲಕೆ ಬ್ಯಾಸರದೆ ಭೀಮೇಶಕೃಷ್ಣ ಲೇಸು ನೀಡೆನಗೆ ಸದಾ ಸುಮಂಗಳವ 5
--------------
ಹರಪನಹಳ್ಳಿಭೀಮವ್ವ
ಆಲವವೆ ನಮಗೆ ಸಫಲವು ಕಾಣಿರೊ ಶ್ರೀಲಕುಮಿಯ ಪತಿಯ ನೆನೆವೆಯಾಗಿ ಪ ಕೀಳು ಜನರಿಂದ ಆಡುವಾ ನುಡಿಗಳು ಹಾಳು ಹರಟೆಗಳು ಬಹು ಜಾಳು ಮಾತುಗಳು ಕಾಲ ಪರಿವುದು ಕೇಳಿ ಜನರುಗಳೆ ನಾಳೆ ನೋಡಿದಂಥ ದಾಸರು ದೊರೆಯರು1 ವ್ಯಾಳೆ ಬಂದಾಗ ಸಾಧಿಸದವನಾ ಬಾಳಿವೆ ಬೋಳೆ ಅದು ಗೋಳಲ್ಲವೆ ಗಾಳಿ ಬಂದಾ ಕೈಲೆ ತೂರಿಕೊಳ್ಳಿರೊ ಮ್ಯಾಲೆ ತನ್ನೊಶವೇನೊ ದೇಶಕಾಲಗಳು 2 ಸೋಲಿಸಿ ದುರ್ಮತರ ಕೀಳು ಮಳಿಗೆಗಳ ಪರಿ ಸೀಲಿಸೊ ಪ್ರತಿ ದಿವಸದಲಿ ಅಲವ ಬೋಧರ ಮತವ ಲೀಲೆಯಿಂ ತಿಳಿಕೊಂಬ್ಯ ಪಾಲಿಸುವ ದಯದಿಂದ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
ಆವದೆನೆಗೆ ಪ್ರೀತಿ ಎಂದೆಂಬಿಯಾ | ದೇವ ದೇವಕಿ ತನುಜ ಬಿನ್ನಪವ ಮಾಡುವೆನೊ ಪ ದೊರೆತನವಲ್ಲೆ ಧನವಲ್ಲೆ ಒಬ್ಬರ ಬಳಿಯ | ಹಿರಿಯತನವಲ್ಲೆ ಹಿಗ್ಗುವುದು ವಲ್ಲೆ | ಹರಿ ನಿನ್ನ ಚರಣಗಳ ಸ್ಮರಿಸುವ ಭಾಗವತರ | ಅರಮನೆಯ ಬೀದಿಯಲಿ ಹೊರಳುವ ಭಾಗ್ಯವ ಕೊಡು 1 ಪಂಡಿತನಾಗಲಿವಲ್ಲೆ ಫಲವಲ್ಲೆ ನಾವು ಪ್ರ | ಚಂಡ ಯೋಗಗಳೊಲ್ಲೆ ಯಾಗವಲ್ಲೆ | ಥಂಡ ಥÀಂಡದಿ ನಿನ್ನ ಕೊಂಡಾಡುವರ ಬಳಿಯ | ಕೊಂಡರಾಗಿಪ್ಪವರ ಸೇರುವ ಭಾಗ್ಯವ ಕೊಡು 2 ಅಂದಣವೇರಲಿವಲ್ಲೆ ಆತ್ಮಸುಖವಲ್ಲೆ ನಾ | ನೆಂದು ಪೇಳುವರ ಸಂಗತಿಯವಲ್ಲೆ | ನಿತ್ಯ | ನಿಂದಂಗಳದೊಳಗೆ ಯಿಪ್ಪ ಭಾಗ್ಯವ ಕೊಡು 3 ರಸ ರಸಾಯನ ವಲ್ಲೆ ಹಸನಾದ ಪಟ್ಟಿ ರಂ | ಜಿಸುವದುವಲ್ಲೆ ರಾಗಗಳುವಲ್ಲೆ | ವಸುದೇವ ಸುತ ನಿನ್ನ ಪೆಸರು ಎಣಿಸುವವರ | ಶಿಶುವಾಗಿ ಬದಕುವ ಕುಶಲ ಭಾಗ್ಯವ ಕೊಡು 4 ಪುಣ್ಯ ತೀರ್ಥಗಳು ನಿನ್ನ ಮನಸಿಗೆ ಬಂದ | ವನ್ನು ಮಾಡಿಸು ಬಿಡದೆ ಮನ್ನಿಸೆನ್ನ | ಚನ್ನ ಮೂರುತಿ ಚೆನ್ನ ವಿಜಯವಿಠ್ಠಲರೇಯ | ಎನ್ನ ವಂದನೆಯನ್ನು ಮುನ್ನು ನೀ ಕೈಕೊಂಡು5
--------------
ವಿಜಯದಾಸ
ಆವಪರಿಯಲಿ ನಿನ್ನನು ವೊಲಿಸುವೆ ದೇವ ಎನ್ನೊಳಗೆ ಒಂದಾದರೂ ಗುಣವಿಲ್ಲಾ ಪ ಅರಿಯೆ ಧರ್ಮವ ಪಾಪ | ಮರಿಯೆ ಉತ್ತಮರನ್ನ ಕರಿಯೆ ನಾಮಕೆ ಬಾಯಿ | ತೆರಿಯೆ ಸುರಿಯೆ ಜರಿಯೆ ಮೋºಕೆ ಮನ | ಮುರಿಯೆ ವ್ಯಾಕುಲ ಜ್ಞಾನಾಂ | ಕುರಿಯ ನಿನ್ನವರೊಳು | ಬೆರಿಯೆನರಿಯೆ ಸರಿಯೆ ದುಸ್ಸಂಗ ಕಥಾ | ಬರಿಯೆ ಕರದಿ ಯಾತ್ರಿಗೆ ಹರಿಯೆ ಪುಣ್ಯ ತೀರ್ಥ | ವರಿಯೆ ಮೊರಿಯೆ ಹರಿಯೆ ಜಗದೊರೆಯೆ | ಸಿರಿದೊರೆಯೆ ಅಘ ಕರಿಗೆ ಕೇಸರಿಯೆ ಮತ್ತಾ | ರರಿಯೆ ನಿನ್ನವರ ಮರಿಯೆ1 ನಡಿಯೆ ಸುಮಾರ್ಗ ವ್ರತವಿಡಿಯೆ ಮುಡಿದ ಪೂವು ಮುಡಿಯೆ ಕಾಮದ ಮರ್ಮ | ತಡಿಯೆ ಕಡಿಯೇ ಕುಡಿಯೆ ಪಾಪೋದಕವ ನುಡಿಯೆ ಮಂಗಳ ವಾರ್ತಿ ಪಿಡಿಯೆ ಭಕುತಿ ನೀತಿ ಪಿಡಿಯೆ ಗುಡಿಯೇ ಸುಕೃತಿ ಕಾಳ | ಗೆಡಿಯೆ ಪರರೊಸ್ತಕ್ಕೆ ತೊಡಿಯೆ ಚಿಂತಾತುರವ | ವುಧಿಯೆ ಹೊಡಿಯೆ ಕೊಡಿಯೆ ಎನ್ನಗೊಡಿಯೆ ನೆಂ | ದೆಡೆಯಲ್ಲಿ ಸೂಸಿದಾ ಪುಡಿಯಲ್ಲಿ ವೊಡಬೆರಸೆ | ಅಡಿಗಡಿಗೆ ಎನ್ನ ಕಡಿಗೆ 2 ಸುಳಿಯೆ ಕೀರ್ತನಿಗೆ ಮದ | ವಳಿಯೆ ಗುರುನಿಂದಕರ ಹಳಿಯೆ ಕಾಮದ ಕುಪ್ಪೆ | ಕಳಿಯೆ ಬಳಿಯೆ ತೊಳಿಯೆ ಮನನ ನರಕಕ್ಕೆ | ಮುಳಿಯೆ ಸುಮತಿಮಾರ್ಗ ತಿಳಿಯೆ ಪದವಿಗೆ ಪೋಗಿ | ಇಳಿಯೆ ಬೆಳಿಯೆ ಛಳಿಯೆ ಮುಂದಿನ ಜನನ | ಹೊಳೆಯೆಂಬೋದು ಅರಿದು ಸಂಚಿತ ಕರ್ಮ | ವಳಿಯೆ ತುಳಿಯೆ ವುಳಿಯೆ ಬೊಬ್ಬುಳಿಯೆ ಈ | ಕಳೆಯೇನುವಲ್ಲನಭ ಸುಳಿ ಹೃದಯಾವಳಿಯಲ್ಲಿ | ವಿಜಯವಿಠ್ಠಲವೊಳಿಯೆ3
--------------
ವಿಜಯದಾಸ
ಇಟ್ಹಾಂಗೆ ಇರುವೆನೋ ಹರಿಯೇ ಎನ್ನ ದೊರೆಯೇ ಪ ಸೃಷ್ಟಿವಂದಿತ ಪಾದಪದುಮ ಶ್ರೀ ಹರಿಯೇ ಅ.ಪ. ಸಣ್ಣ ಶಾಲ್ಯೋದನ ಬೆಣ್ಣೆ ಕಾಸಿದ ತುಪ್ಪಚಿನ್ನದ ಹರಿವಾಣದಲಿ ಭೋಜನಘನ್ನ ಮಹಿಮ ನಿನ್ನ ಕರುಣ ತಪ್ಪಿದ ಮ್ಯಾಲೆ ಕ-ದನ್ನ ಕಾಣದೆ ಬಾಯ್ಬಿಡಿಸುವೆಯೋ ಹರಿಯೇ 1 ಕೆÀಂಪಿಲಿ ಪೊಳೆವ ಪೀತಾಂಬರ ಉಡಿಸುವಿಸೊಂಪಿನಂಚಿನ ಶಾಲು ಹೊದಿಸುವಿಯೋಕಪಿಲಹರೇ ನಿನ್ನ ಕೃಪೆಯು ತಪ್ಪಿದ ಮ್ಯಾಲೆಕಪರ್ದಕ ಕೌಪೀನವು ದೊರೆಯದೋ ಹರಿಯೇ 2 ಚಂದ್ರಶಾಲೆಯಲ್ಲಿ ಚಂದ್ರಕಿರಣದಂತೊಪ್ಪುವಚಂದದ ಮಂಚದೊಳ್ಮಲಗಿಸುವಿಮಂದರೋದ್ಧರ ನಿನ್ನ ಮಮತೆ ತಪ್ಪಲು ಧರ್ಮಮಂದಿರದೊಳು ತೋಳ್ತಲಗಿಂಬು ಹರಿಯೇ 3 ನರಯಾನದೊಳು ಕ್ಷಣ ನರವರನೆನಿಸುವಿವರಛತ್ರ ಚಾಮರ ಹಾಕಿಸುವಿಕರುಣಾನಿಧೇ ನಿನ್ನ ಕರುಣ ತಪ್ಪಿದ ಮ್ಯಾಲೆಚರಣರಕ್ಷೆಯು ದೊರೆಯದು ಶ್ರೀಹರಿಯೇ 4 ಗಂಗಾಜನಕ ಪಾಂಡುರಂಗ ನಿನ್ನಯ ಭಕ್ತರಸಂಗವಿರಲಿ ದುಷ್ಟರ ಸಂಗ ಬ್ಯಾಡಅಂಗನೆಯರ ಕೂಡಿ ಅನಂಗಬಾಣಕೆ ಸಿಲುಕಿಭಂಗವ ಪಡಲಾರೆ ಶ್ರೀರಂಗವಿಠಲ ಹರಿಯೇ 5
--------------
ಶ್ರೀಪಾದರಾಜರು
ಇಂಥಾ ಪ್ರಭುವ ಕಾಣೆನೋ ಈಜಗದೊಳ- ಗಿಂಥಾ ಪ್ರಭುವ ಕಾಣೆನೋ ಪ ಇಂಥಾ ಪ್ರಭುವ ಕಾಣೆ ಶಾಂತ ಮೂರುತಿ ಜಗ- ದಂತರಂಗನು ಲಕ್ಷ್ಮೀಕಾಂತ ಸರ್ವಾಂತರ್ಯಾಮಿ ಅ.ಪ. ಬೇಡಿದಿಷ್ಟವ ಕೊಡುವ-ಭಕ್ತರ ತಪ್ಪು ನೋಡದೆ ಬಂದು ಪೊರೆವ ಗಾಡಿಕಾರನು ಗರುಡಾ - ರೂಢ್ಯ ಗುಣವಂತ ಮಹಾ ಪ್ರೌಢ ಪ್ರತಾಪಿ ಜಗದಿ ಪಾಡಿ ಪೊಗಳಿ ಕೊಂಡಾಡುವವರ ಮುಂ- ಕೇಡಿಗನೇ ನಾಡಾಡಿಗಳಂದದಿ ಈಡುಂಟೇನೋ ಈ ವೆಂಕಟಗೆ-ಇಂಥಾ 1 ನಿಗಮ ತತಿಗಳರಿಯದ- ನೀರಜಭವಾ- ಸುರರು ಕಾಣದ ಜಗದೊಡೆಯನು ಭಕ್ತ- ರುಗಳಿಗೊಲಿದು ತ್ರಿಸ್ಥಾ- ನಗಳತ್ಯಜಿಸಿ ಕಲಿ ಅಗಣಿತ ಸುಗುಣಾರ್ಣವ- ಶ್ರೀ ಹರಿಯೇ ಜಗದೊಳು ಸೇವಾದಿಗಳನು ಕೊಳುತಿಹ ಅಘಹರ ಮೋಕ್ಷಾದಿಗಳನೆ ನೀಡುತ ನಗೆಮೊಗದಲಿ ಚನ್ನಿಗನಿಂತಹನೊ - ಇಂಥಾ 2 ಭಾರ್ಗವಿ ಭೂಮಿವಲ್ಲಭ - ಭವದೂರ ಭಕ್ತ ವರ್ಗಕೆ ಇವಸುಲಭ ನಿರ್ಗುಣ ನಿರ್ವಿಕಾರ- ಸ್ವರ್ಗದೈಶ್ವರ್ಯದಿಂದಾ- ನಘ್ರ್ಯದ ಪದವನೀವ ದೀರ್ಘಾಯುವಂತನೀತ ಭಾರ್ಗವರಾಮ ನೃಪರ್ಗಳನೆಲ್ಲರ - ಣಾಗ್ರದಿ ಜಯಿಸಿದ ಉಗ್ರಪ್ರತಾಪಿ ಅಗ್ರಗಣ್ಯ ಸದ್ವಿಗ್ರಹ ಶ್ರೀಮದ - ನುಗ್ರಹ ಮಾಡುತ ದುರ್ಗುಣ ಕಳೆವ 3 ನಿರ್ದುಃಖಾನಂದ ಭರಿತಾ - ನಿರ್ವಾಣ ಸುಖಕೆ ಆದ್ರ್ರಹೃದಯ ತೋರುತ ನಿದ್ರೆಯೊಳಿದ್ದವಗು - ಪದ್ರಬಡಿಸಿ ದೈತ್ಯ ಕ್ಷುದ್ರನಂಕೊಲಿಸಿ ಸು ಭದ್ರ ಜಗಕೆ ಇತ್ತ ನಿರ್ದಯನಲ್ಲ ಸಮುದ್ರಶಯನ ಗೋ- ವರ್ಧನ ಗಿರಿಯನು ಉದ್ಧರಿಸಿದ ಯದು ವರ್ಧನ ದನುಜ ವಿಮರ್ದನ ಲಕ್ಷ್ಮೀ ಜ - ನಾರ್ದನ ವರ ಶೇಷಾದ್ರಿ ನಿವಾಸ - ಇಂಥಾ 4 ವಾರಿಜಾಸನ ಮನೋಜಾ ಈರ್ವರು ಸುತರು ಸುರತರಂಗಿಣಿ ತನುಜಾ ಪುರವೇ ವೈಕುಂಠ ಇಂದ್ರಾದ್ಯ ಮರರು ಕಿಂಕರರು ಗರುಡವಾಹನ ಉರಗ ಪರಿಯಂಕ ನಿಷ್ಕಳಂಕ ಸರಿದೊರೆಗಳ ನಾನರಿಯೆನು ವೆಂಕಟ ಗಿರಿಯಲಿ ಇರುತಿಹ ಕರುಣೆಗಳರಸನೆ ಮರೆಯದೆ ಸಲಹೋ ಶರಣಾಗತರನು ಸಿರಿ ವಿಜಯವಿಠ್ಠಲಾ - ಇಂಥಾ 5
--------------
ವಿಜಯದಾಸ