ಸತ್ಯಪ್ರಿಯ ಗುರುರಾಯ ಮಂಗಳಕಾಯ
ಭೃತ್ಯ ಸಹಾಯ ಪ
ಮಧ್ವಮತಾಬ್ಧಿ ಚಂದ್ರ ಸದ್ಗುಣಸಾಂದ್ರ
ಅದ್ವೈತಮದ್ರಿ ಇಂದ್ರ ಇದ್ಧರಿಯೊಳಗನಿ
ರುದ್ಧನೆ ವರನೆಂದೆದ್ದು ನೆಗಹಿ ಕರ
ಬದ್ಧ ಕಂಕಣರಾಗಿ
ಸ್ಮರ ಮಾರ್ಗಣ ಗೆದ್ದ 1
ವಿತರಣದಲಿ ಬಲು ಶೂರಾ ಕೀರ್ತಿವಿಹಾರಾ
ಸತತ ವೇದಾರ್ಥ ವಿಚಾರ
ಮಿತಿ ಇಲ್ಲದೇ ಆ ಕಥಾಮೃತ ತತುವ ಮಾರ್ಗದಲಿ ವಿ
ಹಿತ ಶಿಷ್ಯರಿಗೆ ನಗುತ ಪೇಳಿದ ಅ
ದ್ಭುತ ಮಹಿಮಾ ಸಂಚರಿಸುತ ಆನಂದ ಭರಿತ 2
ನೆನೆಸಿದವರ ಸುರಧೇನು ನಿನಗೆಲ್ಲಿ ನಾನು
ಎಣೆಗಾಣೆ ಎಣಿಸಲು ಮೇಣೂ
ಮುನಿ ಸತ್ಯಭೋಧರ ಮನದಲ್ಲಿ ನಿಂದರ್ಚನೆಯನು ಮನದಲ್ಲಿ
ಘನವಾಗಿ ಕೈಕೊಂಬ ಗುಣದಿ ವಿಜಯವಿಠ್ಠಲನ ಚರಣಾಂಬುಜ
ಧ್ಯಾನ ಮಾಡುವ ತ್ರಾಣ3