ಒಟ್ಟು 89 ಕಡೆಗಳಲ್ಲಿ , 37 ದಾಸರು , 77 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದೆ ಕಂಡೆವು ಗುರುರಾಯನ ನಮ್ಮತÀಂದೆ ಸತ್ಯಾಭಿನವತೀರ್ಥನ ಫಲಿಸಬಂದೊದಗಿತು ನಮ್ಮಸುಕೃತಆನಂದರಸಾಬ್ಧಿ ಉಕ್ಕೇರಿತು ಪ.ಇದೀಗೆ ಕಲ್ಪದ್ರುಮ ಕಾಣಿರೈ ಅಹುದಿದೀಗೆ ಚಿಂತಾಮಣಿ ನೋಡಿರೈ ಮತ್ತಿದಿದೀಗೆಸುರಭಿಬಂದಿತೆನ್ನಿರೈ ತಮ್ಮಮುದದಿಂದ ಯತಿರೂಪವಾಯಿತೈ 1ಬಡವರ ದೊರೆ ನಮ್ಮ ಗುರುರಾಯ ಈಪೊಡವಿಲಿ ಯಾಚಕರಾಶ್ರಯ ಆಪ್ತಹಡೆದ ತಾಯಿತಂದೇರ ಮರೆಸಿದ ಎಮ್ಮೊಡೆಯ ಭಕ್ತಿ ಭಾಸವ ಬೆಳೆಸಿದ 2ಭಕ್ತಿ ಪಥವ ನೋಡಿ ನಡೆವನು ಯತಿಮುಕುಟಮಣಿಗೆ ಸರಿಗಾಣೆನು ಜ್ಞಾನಸುಖದ ಬಳ್ಳಿಯ ಬೆಳೆ ಬೆಳೆಸಿದ ಸಲೆಮುಕ್ತಿ ಮಂದಿರ ವಾತ್ರ್ಯರುಹಿಸಿದಒಂದೊಂದು ಗುಣಗಳ ಮಹಿಮೆಯು ಮತ್ತೆಂದಿಗೆ ಹೊಗಳಲಿ ತೀರವುಹಿಂದಾದ ಪೂತರು ಅಹರು ಯತೀಂದ್ರನ ಸಾಮ್ಯಕೆ ಸರಿಯಾರು 4ಗುರುಭಕ್ತಿನೆಲೆಕಳೆಮರೆಯದೆ ಶ್ರೀಧರಜೆ ರಾಘವಪಾದ ಜರಿಯದೆ ದೇವವರವೇದವ್ಯಾಸನ ಸೇವೆಗೆ ಒಂದರಘಳಿಗ್ಯಲಸ ತಾನೆಂದಿಗೆ 5ಹೊನ್ನ ತೃಣದೊಲು ಸೂರ್ಯಾಡಿದ ವಿದ್ಯೋನ್ನತರ ತವರುಮನೆಯಾದಮನ್ನಿಪ ಸುಜನಚಕೋರವ ಹೊರವಪೂರ್ಣ ಚಂದಿರನಂತಲ್ಲೊಪ್ಪುವ 6ತಪ್ತಲಾಂಛನ ತೀರ್ಥವೀವಾಗಭೃತ್ಯರುಪಟಳಕೊಲಿದು ನಲಿವನಾಗಕಪಟವ ಲೇಶಮಾತ್ರರಿಯನು ಇಂಥಗುಪ್ತ ಮಹಿಮಗೆಣೆಗಾಣೆನು 7ಸಕಳ ಪುರಾಣೋಕ್ತ ದಾನವ ಬಿಡದಖಿಳ ಧರ್ಮವನೆಲ್ಲ ಮಾಡುವನಿಖಿಳತತ್ವವನೊರೆದು ಹೇಳುವ ಈಅಕಳಂಕನೆಂದೂ ನಮ್ಮನುಕಾವ8ಕಷ್ಟ ಮೌನದಿ ವಾರಣಾಸಿಯ ಬಹುಶಿಷ್ಟರ ಸಲಹುತ ಯಾತ್ರೆಯ ಮಾಡಿತುಷ್ಟಿಬಡಿಸಿದಲ್ಲಿವಾಸರಬೇಡಿದಿಷ್ಟಾರ್ಥವನೀವನು ದಾಸರ 9ಪ್ರತಿದಿನ ಗುರುಪಾದುಕೆಯನಿಟ್ಟು ಮೇಲೆನೂತನವಸನಹೊನ್ನಾರ್ಚನೆಗಿಟ್ಟು ಮುಂದೆನುತಿಸಿಹಿಗ್ಗುವ ನವಭಕುತಿಂದ ಈವ್ರತಕಾಗಲಿಲ್ಲ ಒಂದಿನಕುಂದು10ಶ್ರೀಭಾಗವತಶಾಸ್ತ್ರ ಟೀಕನುಹರಿಗಾಭರಣವ ಮಾಡಿಟ್ಟನುಈ ಭೂಮಿಲಿಹ ಶಿಷ್ಯ ಜನರನು ತತ್ವಶೋಭಿತರನು ಮಾಡಿ ಹೊರೆದನು 11ಬಲುಹಿಂದ ಯವನನ ಬಲದಲ್ಲಿ ಕೃಷ್ಣಒಳಪೊಕ್ಕು ಸದೆದ ಪರಿಯಲ್ಲಿಕಲಿನೃಪ ಮ್ಲೇಚ್ಛನ ಬಂಧನ ತಪೋಬಲದಿಂದ ಗುರುರಾಯ ಗೆಲಿದನು 12ಭಕ್ತಿವಿರತಿಜ್ಞಾನಪೂರ್ಣನು ಸೇವಕ ಜನರಿಗೆ ಪ್ರಾಣಪ್ರಿಯನುಪ್ರಕಟಿಸಿದನು ನಿಜಕೀರ್ತಿಯನಿತ್ಯಸಕಲ ಸದ್ಗುಣಗಳ ವಾರ್ತೆಯ 13ಈಪರಿಬಹು ಪಟ್ಟವಾಳುತ ದಿವ್ಯಶ್ರೀಪಾದವ್ರತ ಪೂರ್ಣ ತಾಳುತಸ್ಥಾಪಿಸಿದನು ಮಧ್ವಸಿದ್ಧಾಂತ ದುಷ್ಟಕಾಪುರುಷರ ಮೊತ್ತ ಗೆದ್ದಾತ 14ಹರಿಗುಣ ಜಿಜ್ಞಾಸೆಯಿಂದ ಶ್ರೀಹರಿಮೂರ್ತಿ ಧ್ಯಾನ ಚಿಂತನೆಯಿಂದ ಶ್ರೀಹರಿನಾಮ ಸ್ಮರಣಶ್ರವಣದಿಂದ ಶ್ರೀಹರಿಪ್ರೀತಿಬಡಿಸಿದ ನಲವಿಂದ15ನಿರುತ ಉದಯಸ್ನಾನ ಮೌನವ ಶ್ರೀಗುರುಮಧ್ವಶಾಸ್ತ್ರವ್ಯಾಖ್ಯಾನವ ಮಹಾಗೀರ್ವಾಣ ವಾಕ್ಯದಿಂದ ಪೇಳುವ ಆತ್ಮಗುರುಗಳ ಸ್ಮರಣೆಯ ಮಾಡುವ 16ಗುರುಸತ್ಯನಾಥರ ತಂದನು ನಿಜಗುರುಪದವೇ ಗತಿಯೆಂದನು ತನ್ನಸ್ಮರಣೇಲಿ ಇಹರ ಕಾವನು ಬೇಡಿದರೆ ಅಭೀಷ್ಟಾರ್ಥವನೀವನು 17ಗುರುಸತ್ಯನಾಥಾಬ್ಧಿ ಸಂಜಾತ ಸಜ್ಜನರಹೃತ್ಕುಮುದತಾಪಸಂಹರ್ತಸರಸ ಸುಧಾಂಶು ವಾಕ್ಯಾನ್ವಿತ ಸಿತಕರನಹುದಹುದಯ್ಯ ಧರೆಗೀತ 18ಆವ ಪ್ರಾಣಿಯು ಗುರುಮಹಿಮೆಯ ಸದ್ಭಾವದಿ ನೆನೆಯಲು ಸುಖಿಯಾದದೇವ ಪ್ರಸನ್ವೆಂಕಟಾದ್ರೀಶ ಅವಗಾವಗೆ ಪಾಲಿಪ ಮಧ್ವೇಶ 19
--------------
ಪ್ರಸನ್ನವೆಂಕಟದಾಸರು
ಊರ್ವಶಿ :ಸಿಂಧುಶಯನ ವನದಿಂದಇಂದಿರೇಶ ಮುದದಿಂದ ಮೌನಿಮುನಿ-ವೃಂದದಿಂದ ಸ್ತುತಿವಂದನೆಗೊಳ್ಳುತ 1ಏಸುಲೋಭಿಯೊ ತಿಮ್ಮಶೆಟ್ಟಿ ಒಂದುಕಾಸಿಗೆ ಮಾರುವ ರೊಟ್ಟಿದಾಸರ ಕೂಡಿ ಜಗಜಟ್ಟಿ ಬಹುದೇಶವ ತಿರುಗುವ ಶೆಟ್ಟಿದೂಷಣಾರಿ ಪಾದಾಶ್ರಿತಜನರಭಿ-ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ 2ದೊಡ್ಡವನೈ ಮಹಾರಾಯ ಹಳೆದುಡ್ಡಿಗೆ ನೀಡುವ ಕೈಯಅಡ್ಡಿಗೈದರೆ ಬಿಡನಯ್ಯ ಇವಬಡ್ಡಿಕೇಳುವ ತಿಮ್ಮಯ್ಯದಡ್ಡುಕೇಸಕ್ಕಿಯ ಮಡ್ಡಿಪ್ರಸಾದವಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ 3ತಿರುಪತಿಗೆ ಪ್ರತಿಯಾಗಿ ಪಡುತಿರುಪತಿಯೆಂದಿಹಯೋಗಿಮೆರಸುವನೈ ಸ್ಥಿರವಾಗಿ ಶ್ರೀವರವೆಂಕಟ ಲೇಸಾಗಿಶರಣರು ಏನೆಂದು ಸಂತೋಷಿಪಕರುಣಾಕರ ಚಪ್ಪರ ಶ್ರೀನಿವಾಸನು 4ಈ ಪರಿಯಲಿ ಒಲಿದಿಪ್ಪಾ ಬಹುವ್ಯಾಪಾರಿ ತಿಮ್ಮಪ್ಪಾಕಾಪಟ್ಯರಿಗೆ ತಾನೊಪ್ಪನಮ್ಮಗೋಪಾಲಕಜಗದಪ್ಪಶ್ರೀಪರಮಾತ್ಮ ನಾನಾಪರಿ ವಿಭವದಿಗೋಪುರದಲಿ ತಾ ವ್ಯಾಪಿಸಿ ನಿಂದನು 5ರಂಭೆ : ನಾರೀವರ್ಯಾರಮ್ಮ ನೋಡಲುಸಾರಹೃದಯರಮ್ಮತೋರಣಛತ್ರಚಾಮರ ಬಿರುದುಗಳಿಂದಭೂರಿವಿಭವದಿಂದ ಸಾರಿಬರುವರಮ್ಮ1ಕರದಿ ಕಲಶವಿಹುದು ಶಾಲಿನನಿರಿ ಮುಂದಿರುತಿಹುದುಬೆರಳಿನೊಳುಂಗುರುವರದ್ವಾದಶನಾಮಧರಿಸಿ ಸಮಂತ್ರೋಚ್ಚರಿಸುತ ಬರುವರು 2ಮಂದಿಗಳೊಡ್ಡಿನಲಿ ಬರುವರುಮಂದಸ್ಮಿತದಲಿಚಂದದಿ ಜನಗಳಸಂದಣಿಮಧ್ಯದಿಇಂದಿರೆಯರಸನ ಧ್ಯಾನದಿ ಬರುವರು 3ಹಿಂಗದೆ ಬರುತಿಲ್ಲಿ ಮನಸಿನಇಂಗಿತವರಿತಿಲ್ಲಿಬಂಗಾರದ ಭೂಷಣಸಮುದಾಯದಿಅಂಗಜಪಿತನಿಗೆ ಶೃಂಗಾರಗೈವರು 4ವಿಪ್ರೋತ್ತಮರ ಗುಣ-ಕೆಂತು ಸೈರಣೆಯಾಂತು ನಾನಿರಲಿಚಿಂತಿತಾರ್ಥವನೀವ ಲಕ್ಷ್ಮೀ-ಕಾಂತ ಶ್ರೀನಿವಾಸನಂಘ್ರಿಯಸಂತಸದಿ ಪೂಜಾದಿ ಸತತಿ-ಯಾಂತಕೊಂಡಿಹೇಕಾಂತಭಕ್ತರು 1ಒಂದು ಭಾಗ ಪುರಾಣಿಕರು ತಾವೆಂದುಕೀರ್ತಿಯನು ಧರಿಸಿ ಮ-ತ್ತೊಂದು ಭಾಗದಿ ಜೋಯಿಸರುತಾವೆಂದು ಧರ್ಮವನು ಪಾಲಿಸಿಸಿಂಧುಶಯನನ ಚಾರುಚರಣ-ದ್ವಂದ್ವಕಾನತರಾಗಿ ಲೋಕದಿವಂದ್ಯರೆನಿಸಿಯಾನಂದ ಪರರಿವ-ರೆಂದು ಶ್ರೀಗೋವಿಂದ ನಡೆಸುವ 2ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿವಾದಗೈವ ಕುವಾದಿಗಳ ಮನ-ಭೇದಿಸುತ ನಿಜವಾದ ಮಾರ್ಗವಶೋಧನೆಗೆ ತಾವೈದಿಸುವ ಮಹಾಸಾಧುಗಳಿಂದ ದೃಢವಾದ ಮಾತಿದು 3ಅಂಬುಜಾಕ್ಷಿಯೇನೆಂಬೆಮೇಗರೆಡಂಭಮಾತಲ್ಲ ಧನಿಯ ಕು-ಟುಂಬವೆನುತಲಿ ತುಂಬ ಕೀರ್ತಿಯಗೊಂಬರೆ ಎಲ್ಲ ಸಂತಸಸಂಭ್ರಮದಿ ವೇದ್ಯಾಂಬುನಿಧಿಯಲಿತುಂಬಿರುವರೀ ಕುಂಭಿನಿಯೊಳು ಜ-ಸಂಬಡುವುದು ವಾಸಿಷ್ಠಗೋತ್ರಜ-ರೆಂಬ ವಿಪ್ರಕದಂಬಪೂಜ್ಯರು 4ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆಆಲೋಚಿಸಲರಿದಾ ಕಮಲಾಲೋಲನಮಹಾಲೀಲೆ 2ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇಮೂರ್ಲೋಕದೊಳಗೆ ಇಂಥಲೀಲೆಯ ನಾನರಿಯೆ 3ಫಾಲೇಂದು ಕುಂದದ ವರ್ಣಕೋಲು ಚಾಮರಗಳನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು 4ಚಂಡವೈಶ್ವಾನರನ ತೇಜಾಖಂಡದಿಂದೋರಂತೆಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ 5ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿಆದಿನಾರಾಯಣ ಮದುಸೂದನನೆ ಮುದದಿ 6ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರುನಾದಿನಿ ಕೇಳಿದರ ಪರಿಯನೀ ದಯದಿಂದುಸುರು 7ದೇವನಾಗಮನವೆಲ್ಲನೂದೀವಟಿಗೆ ಸೇವೆಯೆಂದು ಪೇಳುವರುಭಾವುಕರು ಮನದೊಳಂದು 1ಕೇಳಿದರೆ ಆಲಸಾಯನವನು ಸುರಿದುಆಯತವನು ವರ್ಣಿಸುವಡೆ ಬಾಯಿಯುಸಾವಿರ ಸಾಲದುಶ್ರೀಯರಸನ ಮಹಿಮೆಯರಿವದಾರಿಗಳವಲ್ಲ 3ಜಯಜಯ ಭಕ್ತಸುಪೋಷಣ ಜಯಜಯದೈತ್ಯವಿನಾಶನಜಯಜಯ ಜಾಹ್ನವಿತಾತ ಜಯಜಯ ಜಗದಾತಜಯಜಯ ರವಿಶತತೇಜ ಜಯಜಯಆಶ್ರಿತ ಸುರಭೂಜಜಯಜಯ ನಾದದಿಯೇರ್ದ ನಿರ್ಭಯತೋರುತ ಒಲಿದು 4* * *ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ-ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ 1ಸೇವೆಯ ಕೈಕೊಳ್ಳು ಎನುತಡ್ಡಬಿದ್ದರು ನೋಡೆ ತಂಗಿ ಭಕ್ತಿಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ-ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ 3ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ-ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ 4ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥಮೌರಿಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ-ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ 6ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ-ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ 7ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ-ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ 8ಚಿತ್ತೈಸಿದನಿಲ್ಲಿನಿತ್ಯಉತ್ಸಹಲೋಲ ನೋಡೆ ತಂಗಿ ಭಕ್ತ-ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ 9ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ 10ಯಾವಾಗಲು ಬರುವವನಲ್ಲ ಧನಿಯೆಂದುನೋಡೆ ತಂಗಿ ನಮ್ಮದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ 11ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ-ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12ಭೂರಿಕದಳಿಚೂತಪನಸ ಫಲಗಳನ್ನುನೋಡೆ ತಂಗಿ ಮಹಾ-ಮೇರುವಿಗೆಣೆಯಾದ ಮೇರ್ವೆಶೃಂಗಾರವ ನೋಡೆ ತಂಗಿ 13ಸುತ್ತುಮುತ್ತಲು ಝಲ್ಲಿಗಳಾನಂದವ ನೋಡೆ ತಂಗಿ ಅದ-ರೊತ್ತಿಲಿರುವ ಪಲ್ಲವ ಪೂಗಳ ಮಾಲೆ ನೋಡೆ ತಂಗಿ 14ಮೇಲೆ ಕಟ್ಟಿರುವ ಪತಾಕೆನಿಶಾನಿಯ ನೋಡೆ ತಂಗಿ ಸಾಲು-ಸಾಲಿನ ಅಂಕಣದೊಳಗಿಹ ಬೊಂಬೆಯ ನೋಡೆ ತಂಗಿ 15ಬಾಣಬಿರುಸು ಜೇನುಂಡೆಯ ಶಬ್ದವ ನೋಡೆ ತಂಗಿ ವೀಣಾ-ವೇಣುಸುಗಾನ ಸಂಗೀತ ಮನೋಹರ ನೋಡೆ ತಂಗಿ16ತಾಳಮೃದಂಗ ಸುಸ್ವರ ರಂಜಿತದಿಂದ ನೋಡೆ ತಂಗಿ ಗಣಿ-ಕಾಲತಾಂಗಿಯರ ಗಾಯನದಭಿನಯನ್ನು ನೋಡೆ ತಂಗಿ 17ಕಾಲುಂಗುರ ಗೆಜ್ಜೆಗಳಕಟ್ಟಿಕುಣಿವರು ನೋಡೆ ತಂಗಿ ತಮ್ಮಮೇಲುದನೋಸರಿಸುತ್ತ ಮೋಹಿಸುವರು ನೋಡೆ ತಂಗಿ 18ಕಂತುಪಿತನು ಇಲ್ಲಿ ನಿಂತನು ವಿಭವದಿ ನೋಡೆ ತಂಗಿ ತದ-ನಂತರದಲಿ ಆರತಿಯನುಗೊಂಡನು ನೋಡೆ ತಂಗಿ 19ಭೂತಪದೊಳಗೀ ನೂತನವೆಲ್ಲುಂಟು ನೋಡೆ ತಂಗಿ ಹರಿ-ಪ್ರೀತರಾಗಿರುವನಾಥರ ಸೇವೆಯ ನೋಡೆ ತಂಗಿ 20ವೇದೋದ್ಧಾರಕ ನಿನ್ನ ಪಾದವೇ ಗತಿಯೆಂದುನೋಡೆ ತಂಗಿ ಮಹಾ-ಸಾಧುಗಳತ್ತಲು ಕಾದುಕೊಂಡಿರುವರು ನೋಡೆ ತಂಗಿ 21ಚರಣನಂಬಿದ ತನ್ನ ಶರಣರ ಪೊರೆಯೆಂದುನೋಡೆ ತಂಗಿ ತಾನುತ್ವರಿತದಿ ಬಂದನು ಉರುತರ ತೋಷದಿ ನೋಡೆ ತಂಗಿ 22ಮನೆಮನೆಗಳ ಸಮ್ಮುಖದಲ್ಲಿ ದೀಪವ ನೋಡೆ ತಂಗಿ ಎಲ್ಲಾಜನಗಳು ಕೈಗಳ ಮುಗಿದು ನಿಂದಿರುವರು ನೋಡೆ ತಂಗಿ 23ರಾಜ ಬೀದಿಯೊಳು ವಿರಾಜಿಪ ತೋರಣನೋಡೆ ತಂಗಿ ಸುರ-ಭೂಜದಂತಿಹ ಮಹಾಸೋಜಿಗಕುರುಜವ ನೋಡೆ ತಂಗಿ24ಕಂತುಜನಕನಿಲ್ಲಿ ನಿಂತು ಪೂಜೆಯಗೊಂಡನೋಡೆ ತಂಗಿ ತದ-ನಂತರದಲಿ ಮನಸಂತೋಷಪಡಿಸಿದ ನೋಡೆ ತಂಗಿ 25ಮುಂದೆ ಬರುವ ಜನಸಂದಣಿಗಳ ಮಧ್ಯ ನೋಡೆ ತಂಗಿ ಇ-ನ್ನೊಂದು ಗೂಡಿನ ಪರಿಯಂದವ ನೀನಿತ್ತ ನೋಡೆ ತಂಗಿ 26ಮಾಣಿಕ್ಯರಾಸಿಯಮಾಣದೆಇಟ್ಟರೊ ನೋಡೆ ತಂಗಿ ಸರಿ-ಗಾಣೆ ಈ ಗುಡಿಗೆ ಜಾಣೆ ನೀ ಮನವಿಟ್ಟು ನೋಡೆ ತಂಗಿ 27ಮೂಡಿತೊ ಸೂರ್ಯನ ಕಿರಣಗಳೆಂಬಂತೆನೋಡೆ ತಂಗಿ ಇಂಥಗೂಡಿನೊಳಗೆ ದಯಮಾಡಿ ಸೇವೆಯಗೊಂಡ ನೋಡೆ ತಂಗಿ28ತರುಣಿಯರನ್ನಳೆಯಿತ್ತ ಶರಧಿಯಂತುಕ್ಕುತನೋಡೆ ತಂಗಿ ಭೂರಿ-ಹರುಷದಿಂ ಬರುವ ಭಕ್ತರನೇಕರು ನೋಡೆ ತಂಗಿ 29ಹರಿಯೇ ನೀ ಎಮ್ಮಯ ಪೊರೆಯೆಂದು ಭಕ್ತಿಯೊಳ್ನೋಡೆ ತಂಗಿ ಬಂದುಚರಣಕಾನತರಾಗಿ ಅರಿಕೆಯ ಗೈವರು ನೋಡೆ ತಂಗಿ 30ಮಕ್ಕಳನರಸಿ ಮಾತೆಯು ಪೋಗುವಂದದಿನೋಡೆ ತಂಗಿ ಮಹಾ-ರಕ್ಕಸವೈರಿಯು ದಯಮಾಡಿ ಪೊರಟನು ನೋಡೆ ತಂಗಿ 31ಪರಮಪುರುಷ ಭೂರಿವಿಭವದಿ ಬರುವುದನೋಡೆ ತಂಗಿ ಬಾಣಬಿರುಸುಗಳೆಲ್ಲವು ಸುರುಸುರುಯೆಂಬುದು ನೋಡೆ ತಂಗಿ 32ಫಲ್ಲನೆ ಹೊಳೆಯುವ ಹಿಮಕರಜ್ಯೋತಿಯನೋಡೆ ತಂಗಿ ಮನಘಲ್ಲೆನಿಸುತ್ತಿಹ ಬೆಡಿಖಂಬಧ್ವನಿಯನು ನೋಡೆ ತಂಗಿ 33ಭುಗಿಲು ಭುಗಿಲು ಧಗಧಗಲೆನ್ನುತಲಿದೆ ನೋಡೆ ತಂಗಿ ಕಿ-ಡಿಗಳನುಗುಳುವ ವಸನಪ್ರಕಾಶವ ನೋಡೆ ತಂಗಿ 34ಈ ರೀತಿಯ ವಿಭವದಿ ಏರಿದ ಮೇರ್ವೆಯ ನೋಡೆ ತಂಗಿ ರತ್ನ-ದಾರತಿಯಗೊಂಡನು ಶ್ರೀನಿವಾಸನು ನೋಡೆ ತಂಗಿ 35ಲೋಕದೊಳಗೆ ನೂತನವಿದೊಂದನು ನೋಡೆ ತಂಗಿ ಅ-ನೇಕ ಮಕ್ಕಳುಗಳ ನೇತಾಡಿಸುವದ ನೋಡೆ ತಂಗಿ 36ಪುತ್ರೋತ್ಸವ ಫಲಗಳು ದೊರಕಿದ ಕಾರಣ ನೋಡೆ ತಂಗಿ ಇದು-ಪುತ್ರ ಫಲಾವಳಿ ಹರಕೆಯಂಬರು ಕಾಣೆ ನೋಡೆ ತಂಗಿ 37ಇಳಿದನು ಇಂದಿರೆಯರಸನು ಮೇರ್ವೆಯ ನೋಡೆ ತಂಗಿ ರಥ-ದೊಳಗಿದ್ದ ಪರತತ್ವರೂಪನು ಸಹಿತಲಿ ನೋಡೆ ತಂಗಿ 38ಮಾಣದೆಭಕ್ತರ ಮಮತೆಯ ಕಾರಣ ನೋಡೆ ತಂಗಿ ಮುಖ್ಯ-ಪ್ರಾಣರಲ್ಲಿಗೆ ಪೋದರಿಬ್ಬರು ಒಂದಾಗಿ ನೋಡೆ ತಂಗಿ 39ಅವರಿವರಂತಲ್ಲ ದೊರೆ ಹನುಮಂತನು ನೋಡೆ ತಂಗಿ ಪಟ್ಟ-ದರಸನ ಸಹಿತಿಲ್ಲಿ ಇಳಿಸಿದನಲ್ಲವೆ ನೋಡೆ ತಂಗಿ 40ಹನುಮನ ಸೇವೆಯ ಕೈಕೊಂಡು ಕರುಣದಿನೋಡೆ ತಂಗಿ ಮತಘನವಾದ ಶೇಷತೀರ್ಥವ ನೋಡಿ ಬಂದನು ನೋಡೆ ತಂಗಿ41* * *ಬಂದನು ತ್ರೈಜಗದೀಶ ನಡೆ-ತಂದನು ರವಿಕೋಟಿಭಾಸ ಸರ್ವೇಶ ಪ.ಪಲ್ಲಂಕಿಯಲಿ ತಾನೇರಿ ಭಕ್ತ-ಸುಲ್ಲಭ ಸುತ್ತುಬರುವನೆಲೆ ನಾರಿಸಲ್ಲಲಿತಾರ್ಥ ಋಗ್ವೇದ್ಯಜುರ್ವೇದವ-ನೆಲ್ಲವ ಲಾಲಿಸಿ ಉಲ್ಲಾಸದೊಳಗೆ 1ಸಂಗೀತನರ್ತನಗಳನು ಪೂರ್ಣ-ಮಂಗಲಕರ ವೀಣಾವೇಣುಗಾನವನುಶೃಂಗಾರ ಪದ್ಮಮೃದಂಗ ಸರ್ವಾದ್ಯಪ್ರ-ಸಂಗದಿ ಒಲಿಯುತಗಜನಕನು 2ಕಪಟನಾಟಕಸೂತ್ರಧಾರಿ ಸರೀ-ಸೃಪಗಿರಿರಾಜ ದಾನವಕುಲವೈರಿಅಪರೂಪವಾದ ಮಂಟಪದಲಿ ಮಂಡಿಸಿಕೃಪೆಯ ಬೀರಿದನು ಸೇವಿಪ ಭಕ್ತರಿಂಗೆ 3ಭಕುತರಾಯಾಸವನೆಲ್ಲ ತನಶಕುತಿಯಿಂದಲಿ ಬಿಡಿಸಿದನದನ್ನೆಲ್ಲಅಖಿಳಭಯಗಳ ನಿವಾರಿಸಿ ತೆಗೆಯುತ್ತಮುಕುತಿದಾಯಕನು ಗೃಹಾಂತರಕ್ಕೈದಿದನು 4ಇಂದ್ರಾದಿ ದೇವತೆಯರನು ಅರ್ಧ-ಚಂದ್ರಶೇಖರಪ್ರಮಥಾದಿ ಗಣವನುಇಂದುಗೋವಿಂದನು ಚಂದದಿ ಸಂತುಷ್ಟಿ-ಹೊಂದಿಸಿ ಸರ್ವಾನಂದವ ತೋರ್ದನು 5ಆದ್ಯಂತ ಭಕ್ತರ ನೋಡಿ ಶ್ರೀಪ್ರ-ಸಾದವ ನೀಡಿ ಭಕ್ತರ ಒಡನಾಡಿಮುದ್ದುಮೋಹದ ಮಡದಿಯರ ಸಮೇತದಿಗದ್ದುಗೆಯಲಿ ಸಾನ್ನಿಧ್ಯ ತೋರಿದ ಕಾಣೆ 6ಈ ರೀತಿಯಲಿ ಶ್ರೀಹರಿಯು ನಾನಾಭೂರಿವಿಭವದ ಶೃಂಗಾರ ಶೋಭಿತವುನೀರೆ ಪಂಚಮಿ ಶುಭವಾರದ ದಿವಸದಸಾರಉತ್ಸಹ ಪೂರ್ಣ ತೋರಿಸಿ ಪೊರೆದನು7ಆರತಿಯನು ಎತ್ತಿದಳು ಜಯ-ಭೇರಿರವದಿ ಆಕಾಶನ ಮಗಳುವಾರಿಧಿಶಯನ ಮುರಾರಿ ಶ್ರೀಲಕ್ಷ್ಮೀ-ನಾರಾಯಣನ ಸಾಕಾರವನ್ನು ನೋಡಿ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಚೌತಿಯ ದಿವಸರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ-ಮೌರಿರಭಸದಿ ಲಕ್ಷ್ಮೀಕಾಂತಭೂರಿವೈಭವದಿ ಪೊರಟನೆತ್ತ ಯಾವಕಾರಣವೆಂದು ಪೇಳೆಲೆ ಸತ್ಯ 1ದೇವರ ಪೂಜೆಗೋಸುಗ ಬಂದಪಾವನಮೂರ್ತಿಯಾದುದರಿಂದ ನಮ್ಮಕಾವನು ಕರುಣಾಕಟಾಕ್ಷದಿಂದ 2ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ-ನ್ನಾಥನಿಗ್ಯಾವ ಕುಲವು ಕಾಣೆರೀತಿಯನರುಹಬೇಕೆಲೆ ಬಾಲೆ ಸರ್ವಚೇತನಾತ್ಮನ ನಾಟಕದ ಲೀಲೆ 3ಕೊಂಡಕಾರಣದಿ ಪೂಜೆಗಳೆಲ್ಲಕಂಡು ಪೊಗಳಲು ಕವಿಗು ಸಲ್ಲ ಇನ್ನುಪುಂಡರೀಕಾಕ್ಷನವನೆ ಬಲ್ಲ 4ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ-ಭೋಜನಾಭನು ತಾಕ್ಷ್ರ್ಯನ ಮೇಲೆರಾಜಬೀದಿಯೊಳ್ ಬರುವದೇನೆ ಇಂಥಸೋಜಿಗವೇನು ಪೇಳೆಲೆ ಜಾಣೆ 5ಬಟೆನಿಸ್ಸಾಳರವದಿ ಬರುವ ಚಂದಸಟೆಯಲ್ಲ ಕೇಳು ಕರುಣದಿಂದ ನಮ್ಮಕಟಕರಕ್ಷಿಸಲು ಬರುವ ಗೋವಿಂದ6ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ-ಗಲಭೆಗಳಿಂದ ಪೋಗುವದೇನೆನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ-ಜಲಜನಾಭನ ಮಹಿಮೆಯ ಜಾಣೆ 7ದೀಪವೆಂದೆನುತ ಭಕ್ತರು ಮುದದಿಶ್ರೀಪರಮಾತ್ಮ ವಿಲಾಸದಿ ಭಕ್ತ-ರಾಪೇಕ್ಷೆಗಳನು ಸಲ್ಲಿಸುವಂದದಿ 8ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ-ಸ್ತೋಮಜೇನುಂಡೆಬಿರುಸುಮಿಗಿಲುವ್ಯೋಮಕೇಶಗಳ ಪೊಗಳತೀರದು ಸರಿಭೂಮಿಯೊಳ್ ಕಾಣೆನೆಂಬಂತಾದುದು 9ಅಮಮ ಇದೇನೆ ಇಂದಿನ ಲೀಲೆ ಜನ-ರಮರಿಕೊಂಡಿಹರೇನಿದು ಬಾಲೆಸಮವಿಲ್ಲ ಇಂತೀ ವೈಭೋಗಕ್ಕೆಲೆ ನ-ಮ್ಮಮರಾವತಿಗಿಂತಧಿಕ ಬಾಲೆ 10ಲಾರ್ತಿ ಹರಣವಾಗ್ವದು ಜಾಣೆಕೀರ್ತಿತರಂಗಮಾಗಿಹುದೇನೆ ಶೇಷ-ತೀರ್ಥವೆಂದರೆ ಕೇಳಿದು ಪ್ರವೀಣೆ 11ರಂಭೆ :ಏಸುದೊಡ್ಡಿತೆ ಕೇಳಲೆ ಬಾಲೆ ಅನಂ-ತಾಸನದಂತೆ ಮರೆವುದಲ್ಲೇನಾಸಿರ ದೀಪಸೋಪಾನದಲೆ ಮಹಾ-ಶೇಷನಿಹನು ಮಧ್ಯದೊಳಿಲ್ಲೇ 12ಊರ್ವಶಿ :ಕರುಣಾಕರನು ನಮ್ಮೆಲ್ಲರನುನಿತ್ಯಪೊರೆಯಲೋಸುಗ ಬಂದನು ತಾನುಸುರುಚಿರ ಮಂಟಪವೇರಿದನು ಭೂ-ಸುರರಿಂದ ವೇದಘೋಷವ ಕೇಳ್ವನು 13ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮಸೃಷ್ಟಿಗೆ ಪೊಸತಾಗಿಹುದು ಕಾಣೆಕಟ್ಟಿಸಿದವನು ಪುಣ್ಯೋತ್ತಮನು ಪರ-ಮೇಷ್ಠಿ ಜನಕನ ಕೃಪೆಯಿನ್ನೇನು 14ಭಜಕರ ಮುಖದಿಂದೆಲ್ಲ ತಾನು ಭೂ-ಭುಜನಾಗಿ ನಡೆಸುವನಿದನೆಲ್ಲನುನಿಜವಾಗಿನಿತ್ಯಸಾಕಾರವನು ತೋರಿತ್ರಿಜಗವನೆಲ್ಲ ರಕ್ಷಿಸುತಿಹನು 15ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ-ದೊಡೆಯ ಪೊರಡುವ ಕಾಲದಿ ಭಾರಿಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥಕಡು ಬೆಡಗನು ಉಸುರೆಲೆ ಬಾಲೆ 16ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮತನುವಿಗೆ ಸೋಂಕಲದನೆಲ್ಲವಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ-ಧ್ವನಿಯೆಸಗಿದರು ಕೇಳಿದರಂದವ 17ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು-ಬರುವನು ವೇದನಿನಾದದಲಿವರರತ್ನ ಖಚಿತ ಮಂಟಪದಲ್ಲಿ ನಿಂತನಿರವದಿ ಸುಖದಾಯಕನಲ್ಲಿ 18ಶರಣರ ಪಾಪ ಮನಕೆ ತಾರ ದುಡಿದವರಭೇರಿಗೆರೆವ ಬಿಸಿನೀರವರಲಕ್ಷ್ಮೀನಾರಾಯಣಧೀರ ಸುರು-ಚಿರ ಸಿಂಹಾಸನವೇರಿದ ವೀರ 19
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಪ್ಪುಗಳನೆಲ್ಲ ನೀನೊಪ್ಪಿಕೊಳ್ಳೊ - ನ-|ಮ್ಮಪ್ಪ ಕಾಯಬೇಕುತಿಮ್ಮಪ್ಪನೀನೆಪಸತಿ-ಸುತ ಸಂಸಾರಗಳಿಗೆ |ಮತಿ ಹೀನನಾದೆನು ವ್ಯರ್ಥ ||ಮಿತಿಗಾಣೆನಯ್ಯ ಎನ್ನ ಪಾಪಗಳಿಗೆ |ಗತಿಯದಾವುದು ಪೇಳೊ ಮುಂದೆನಗೆ 1ಬಿಸಿಲು ಬಿರುಮಳೆ ಗಾಳಿಯೊಳಗೆ-ಬಲು-|ದೆಸೆಗೆಟ್ಟು ದೇವ ತಿರುಗಿದೆ ||ಹಸಿವು-ತೃಷೆಗಳು ಬಹು ಬಾಧಿಸಲು |ಹುಸಿಯಾಡಿದೆನಯ್ಯ ಹುಟ್ಟು ಮೊದಲು 2ಸ್ನಾನ-ಸಂಧ್ಯಾವಂದನವರಿಯೆ-ನಾನಾ-|ದಾನ-ಧರ್ಮದ ಗುರುತುಗಳಿಯೆ ||ಹೀನಜನರ ಸಂಗವ ಮರೆಯೆ-ಸು-|ಙ್ಞÕನಿಗಳನು ಬಾಯೆಂದು ಕರೆಯೆ 3ಗಂಗೆ ಅಗ್ರೋದಕಗಳ ತಂದು - ನಾ-|ಮಂಗಳಮಜ್ಜನಮಾಡಲಿಲ್ಲವೆಂದೂ ||ಹೊಂಗೇದಗೆ ಪುಷ್ಪವನೊಂದು ಶ್ರೀ-|ರಂಗಗರ್ಪಿಸಲಿಲ್ಲ ಕಾಯೊ ಬಂದು 4ಪೀತಾಂಬರದಿ ವಸ್ತ್ರಗಳಿಂದ -ದಿವ್ಯ-|ನೂತನವಾದ ಆಭರಣದಿಂದ ||ಪ್ರೀತಿಪಡಿಸಲಿಲ್ಲಾದರದಿಂದ-ಹೇ-|ಸೀತಾಪತೆ ಕೃಷ್ಣ ಹರಿಮುಕುಂದ 5ಗಂಧಾಕ್ಷತೆ ಪುಷ್ಪಗಳಿಂದ -ಬರಿ-|ಒಂದುದಳಶ್ರೀ ತುಳಸಿಯಿಂದ ||ಇಂದಿರೇಶನ ಅರ್ಚಿಸದರಿಂದ -ಬಹು-|ನೊಂದು ದೂರಾದೆ ಸದ್ಗತಿಯಿಂದ 6ಏಕಾರತಿ ದೂಪಾರತಿಯ -ಎಂದು-|ಶ್ರೀಕಾಂತ ನಿನಗೆ ನಾ ಮಾಡಲಿಲ್ಲ ||ವ್ಯಾಕುಲದಲಿ ಹೋಯಿತು ಹೊತ್ತು -ಬಂದು-|ನೀ ಕರುಣಿಸು ಲಕ್ಷ್ಮೀರಮಣ 7ಪಾಯಸ ಪಂಚಭಕ್ಷ್ಯಗಳಿಂದ -ಬಲು-|ಆಯತವಾದ ಶಾಕಗಳಿಂದ ||ತೋಯೆ ಶಾಲ್ಯನ್ನ ಸದ್ಘøತದಿಂದ -ಶ್ರೀ-|ಮಾಯಾಪತಿಗೆ ಅರ್ಪಿಸಲಿಲ್ಲ 8ಮಂಗಳಾರತಿಯ ನಾ ಮಾಡಲಿಲ್ಲ-ಜಯ-|ಮಂಗಳವೆನ್ನುತ ಪಾಡಲಿಲ್ಲ ||ಕಂಗಳ ನೋಟದಿ ನೋಡಲಿಲ್ಲ -ನರ-|ಸಿಂಗನೀ ಬಾಯೆಂದು ಕರೆಯಲಿಲ್ಲ9ಹರಿಯ ಪಾದಕೆ ಬಿದ್ದವನಲ್ಲ -ನರ-|ಹರಿಗೆ ಪ್ರದಕ್ಷಿಣೆ ಮಾಡಲಿಲ್ಲ ||ಹರಿದಿನದುಪವಾಸ ವ್ರತವು ಇಲ್ಲ -ಬಲು-|ಹರಿಯ ದಾಸರ ಸಂಗ ಎನಗಿಲ್ಲ 10ಹೋಮಾರ್ಚನೆ ಔಪಾಸನವೆಲ್ಲ |ನೇಮದಿಂದಲಿ ನಾ ಮಾಡಲಿಲ್ಲ ||ಕಾಮಾತುರನಾಗಿ ಕಂಡಕಂಡ ಕಡೆ |ಸ್ವಾಮಿಯ ಕಾಣದೆ ತಿರುಗಿದೆನೊ 11ಅತಿಥಿಗಳ್ ಬಂದರೆ ಮನೆಗೆ -ಅಂದೆ-|ಗತಿಯಿಲ್ಲವಯ್ಯ ಕೊಡುವುದಕೆ ||ಯತಿಯ ಕಂಡರೆ ನಿಂದಿಸಿದೆ-ಶ್ರೀ-|ರತಿಪತಿ ಪಿತ ನೀ ದಯ ಮಾಡೊ 12ಎಷ್ಟು ಹೇಳಲಿ ಎನ್ನವಗುಣವ -ಅವು-|ಅಷ್ಟು ಇಷ್ಟೆಂದು ಎಣಿಕೆಯಿಲ್ಲ ||ದೃಷ್ಟಿಯಿಂದ ನೋಡಿ ದಯ ಮಾಡೊ -ಶ್ರೀ-|ಬೆಟ್ಟದ ವೆಂಕಟ ಪುರಂದರವಿಠಲ 13
--------------
ಪುರಂದರದಾಸರು
ದಾರಿ ಏನಿದಕೆ ಮುರಾರಿ - ನೀ ಕೈಯ ಹಿಡಿಯದಿದ್ದರೆ-|ದಾರಿ ಏನಿದಕೆ ಮುರಾರಿ? ಪಕಷ್ಟ-ಕರ್ಮಂಗಳ ಎಷ್ಟಾದರು ಮಾಳ್ಪೆ |ಎಷ್ಟಾದರೂ ನುಡಿದೆ ಗುರುಹಿರಿಯರ ||ದುಷ್ಟರ ಸಂಗವ ಬಹಳ ಮಾಡಿದರಿಂದ |ಶಿಷ್ಟರ ಸೇವೆಯೆಂದರಾಗದೆನಗೆ 1ಪರರ ದೂಷಣೆ ಪರಪಾಪಂಗಳನೆಲ್ಲ |ಪರಿಪರಿಯಲ್ಲಿ ಆಡಿಕೊಂಬೆ ನಾನು ||ಹರಿನಾಮಾಮೃತವ ಹೇಳದೆ ಕೇಳದೆ |ಹರಟೆಯಲ್ಲಿ ಹೊತ್ತುಗಳೆದೆ ನಾ ಹರಿಯೆ 2ಪಾತಕಕರ್ಮಗಳ ಮಾಡಿದಜಾಮಿಳಗೆ |ಪ್ರೀತಿಯಿಂದಲಿ ಮುಕ್ತಿ ಕೊಡಲಿಲ್ಲವೆ? ||ನೂತನವೇಕಿನ್ನುಸೂರ್ಯಮಂಡಲ |ರೀತಿಯಾದನು ಸಿರಿಪುರಂದರವಿಠಲ 3
--------------
ಪುರಂದರದಾಸರು
ದಾಸ ಶೇಷಾದ್ರಿಯ ವಾಸ ತಿಮ್ಮಪ್ಪನ |ದಾಸನನು ಕರೆದೊಯ್ದು ||ಸಾಸಿರನಾಮ ವಿಲಾಸನ ಮೂರ್ತಿಯ |ಲೇಸಾಗಿ ತೋರೆನಗೆ ಪಬೆರಳು ಇಲ್ಲದ ಕೈಯೊಳುಂಡು ಜೀವಿಸುವನ |ಶಿರದ ಅಂದದ ದೇವನ ||ಉರುವ ಶಾಪಕೆ ತಾನು ಕಿರಿದಾಗಿ ಇರುವನ |ಶಿರದೊಳು ಧರಿಸಿದನ ||ಕೊರಳ ಮಾಲೆಯ ಪೆಸರೊಪ್ಪಿದ ಗಿರಿಯೊಳು |ಸ್ಥಿರವಾಗಿ ನೆಲಸಿಪ್ಪನ ||ಕರುಣವಾರಿಧಿ ವೆಂಕಟೇಶನ ಚರಣವ |ಕರೆದೊಯ್ದು ತೋರೆನಗೆ 1ವಾರಿಯೊಳುದಿಸಿದ ನಾರಿಯ ಮಧ್ಯದಿ |ಏರಿಯೆ ಕುಳಿತವನ ||ವಾರಿಜವದನದಿ ತೋರಿದ ಸಾರದಿ |ಮೂರೊಂದು ಪೆಸರವನ ||ಮೇರುವಿನಗ್ರದಿ ಊರಿದ ಚರಣವ |ಸಾರಿದವರ ಜೀವನ ||ಊರಿಗೆ ಕರೆದೊಯ್ದು ಶ್ರೀ ವೆಂಕಟೇಶ ಪ-||ದಾರವಿಂದವ ತೋರೆನಗೆ 2ಸೋತ ಮಾನಿನಿಯೊಳು ಜಾತವಾಗಿಯೆ ಮೇಲೆ |ಮಾತೆಯ ಸಲಹಿದನ ||ನೀತಿ ತಪ್ಪಿಯೆ ನಡೆವ ವಾತಭಕ್ಷಕರನ್ನು |ಘಾತಿಸಿ ತರಿದವನ ||ನೂತನವಾಗಿಹ ನಾಮ ಶೈಲದ ಮೇಲೆ |ಕಾತರದೊಳು ನಿಂದನ ||ಪಾತಕನಾಶನ ಶ್ರೀವೆಂಕಟೇಶನ |ರೀತಿಯ ತೋರೆನಗೆ 3ಋಷಿಯ ಮಕ್ಕಳನೆಲ್ಲ ಹಸಿವಿಗೆ ಗುರಿಮಾಡಿ |ವಶತಪ್ಪಿ ನಡೆವವನ ||ಬಸಿರೊಳಗುದಿಸಿಯೆ ಬಿಸಿಯನೆಲ್ಲವ ಅಂದು |ಎಸೆವ ಮಹಾವೀರನ ||ಪೆಸರೊಳಗೊಪ್ಪಿದ ಹಸನಾದ ಗಿರಿಯೊಳು |ಕುಶಲದಿ ನಿಂದವನ ||ನಸುಮುದ್ದು ಶ್ರೀ ವೆಂಕಟೇಶನ ಚರಣದ |ಬಿಸರುಹ ತೋರೆನಗೆ 4ಪಾದನಾಲ್ಕನು ಮೋದಿನಿಯೊಳಗೂರಿಯೆ |ಆದರಿಸುತ ಬಪ್ಪನ ಮೇ ||ಲಾದ ಪಾದವ ನಾಲ್ಕು ಅಂತರಿಕ್ಷದ ಮೇಲೆ |ಕಾದು ಕೊಳ್ಳುತಲಿಪ್ಪನ ||ಆದಿಯ ನಾಮಕ್ಕೆ ಅದ್ರಿಯನೊಡಗೊಂಡು |ಹಾದಿಯನಿತ್ತವನ ||ಸಾಧಿಸಿ ಇಂತಹ ಶ್ರೀ ವೆಂಕಟೇಶನ |ಪಾದವ ತೋರೆನಗೆ 5ಆದಿನಾರಾಯಣನೆಂಬ ಪರ್ವತನು |ಭೇದಿಸಿ ನಿಂತವನ ||ಸಾಧಿಸಿ ಮುಂದಣ ವೆಂಕಟಾದ್ರಿಯ ಮೇಲೆ |ಪಾದವನೂರಿದನ ||ಮೇದಿನಿಯೊಳಗುಳ್ಳ ಸಾಧುಭಕ್ತರನೆಲ್ಲ |ಕಾದುಕೊಳ್ಳುತಲಿಪ್ಪನ - ವಿ ||ನೋದ ಮೂರುತಿಯಾದ ಶ್ರೀ ವೆಂಕಟೇಶನ |ಪಾದವ ತೋರೆನಗೆ 6ಅತ್ತೆಯ ವರಿಸೆಯೆ ಮೆತ್ತ ಅಳಿಯಗಾದ |ಪುತ್ರಿಯ ತಂದವನ ||ಉತ್ತಮವಾಗಿಹ ಮಗಳ ಸನ್ನಿಧಿಯಲ್ಲಿ |ನಿತ್ಯದೊಳಿರುತಿಪ್ಪನ ||ಬತ್ತಲೆಯಾಗಿಹ ಸತಿಯಳ ಸತ್ಯಕ್ಕೆ |ಪುತ್ರನೆಂದೆನಿಸಿದನ ||ಹತ್ತಿರ ಕರೆದೊಯ್ದು ಪುರಂದರವಿಠಲನ |ನಿತ್ಯದಿ ತೋರೆನಗೆ 7
--------------
ಪುರಂದರದಾಸರು
ನಾರದ ಕೊರವಂಜಿ1ಜಯ ಜಯ ಜಯ ಜಯ ಜಯ ಜಯ ಪ.ಶ್ರೀ ರಮಾರಮಣ ಜಯ ಶ್ರೀಕರ ಗುಣಾಬ್ಧಿ ಜಯಶ್ರೀ ರುಕ್ಮಿಣೀಶ ಜಯ ಶ್ರೀ ಶ್ರೀನಿವಾಸ ಜಯನೀರಚರಕಮಠಕಿಟಿನೃಹರಿವಟುಭೃಗುಜ ರಘುವೀರ ಯದುಪತೆಬುದ್ಧಕಲ್ಕಿ ಸ್ವರೂಪಾ ಜಯ ಜಯ1ಶ್ರೀ ಮತ್ಕಪಿಲ ಋಷಭ ಯಜÕದತ್ತ ಕಂಸ್ತುಘ್ನ ?ಕೌಮಾರ ವ್ಯಾಸ ಹಯಗ್ರೀವ ಶ್ರೀಮದ್ದಜಿತ ಜಯಸ್ವಾಮಿ ಮಹಿದಾಸ ತಾಪಸ ಉರುಕ್ರಮಶೂಲಿವ್ಯಾಮೋಹ ಧನ್ವಂತರೆ ಹಂಸ ಶುಕ್ಲಾ ಜಯ ಜಯ 2ಆನಂದ ಜ್ಞಾನ ಬಲಮಯ ಚಿತ್‍ಸ್ವರೂಪ ಜಯಅನಂತ ಮಹಿಮ ವೈರಾಜ ಪುರುಷೋತ್ತಮ ಜಯಅನಂತ ಬ್ರಹ್ಮ ರುದ್ರೇಂದ್ರಾದಿಸೇವ್ಯಜಯಅನಂತ ಜೀವಗ ಪ್ರಸನ್ವೆಂಕಟ ಕೃಷ್ಣಾ ಜಯ ಜಯ 32ಶರಣು ಮಂಗಳ ದೇವತೇವರಶರಣುಚಿತ್ಸುಖಸಾಗರಶರಣುಅಗಣಿತಗುಣಶುಭಾಕರಶÀರಣು ವೆಂಕಟ ಮಂದಿರ 4ದುರುಳದೈತ್ಯರು ಸೊಕ್ಕಿ ವರದಲಿಧರೆಗೆ ಕಂಬನಿ ತರಿಸಲುತ್ವರದಿ ಸುರರಿಗೆ ಮೊರೆಯನಿಟ್ಟಳುಧರಿಸಲಾರೆನು ಎನುತಲಿ 5ಸರಸಿಜೋದ್ಭವಭವಪುರುಹೂತರರಿದು ಚಿಂತಿಸಿ ಮನದಲಿವರಪಯೋನಿಧಿಗೈದಿ ಸ್ತುತಿಸಲುಕರುಣದಲಿ ಅವತರಿಸಿದೆ 6ಬಂದು ಧರ್ಮದ ವೃಂದ ರಕ್ಷಿಪೆನೆಂದು ದೀಕ್ಷೆಯವಿಡಿದು ನೀಅಂದಗೆಡಿಸುತ ದನುಜನಿಕರವಹೊಂದಿ ದ್ವಾರಕ ನಗರವ 7ಇಂದಿರೆಯು ನಿನ್ನಿಚ್ಛೆಯನುಸರದಿಂದ ಕ್ರೀಡಿಪಳನುದಿನÀಮಂದಜನರಿಗೆ ಮೋಹಿಸುತನರರಂದದಲಿ ತೋರಿದೆ ಹರೆ 8ದೇವಋಷಿ ನಾರದನು ಶ್ರೀಪದಸೇವೆಗÉೂೀಸುಗ ಕೊರವಿಯಭಾವದಲಿ ಜಗದಂಬೆ ರುಕ್ಮಿಣಿದೇವಿಯಳ ಬಳಿಗೈದು ತಾ 9ದೇವ ನಿನ್ನಯ ಬರವ ಬೆಸಸಿದಕೋವಿದತೆಯನು ಪೇಳುವೆಶ್ರೀವರ ಪ್ರಸನ್ವೆಂಕಟ ಕೃಷ್ಣಪಾವನ ಮತಿಯ ಕರುಣಿಸೊ 103ಶ್ರೀ ರಂಭೆ ಭೀಷ್ಮಕನಭೂರಿಪುಣ್ಯದ ಗರ್ಭವಾರಿಧಿಯಲ್ಲಿ ಜನಿಸಿನಾರಿ ರುಕ್ಮಿಣಿಯೆಂಬ ಚಾರುನಾಮದಿಕಳೆಯೇರಿ ಬೆಳೆದಳಂದವ್ವೆ 11ಜನನಿಜನಕರೆಲ್ಲ ತನುಜೆಯ ಹರಿಯಂಘ್ರಿವನಜಕೆ ಕೊಡಬೇಕೆನ್ನೆನೆನೆದು ತಾನೊಂದು ರುಕ್ಮನು ದಮಘೋಷನತನುಜಗೆ ತಂಗಿಯನು 12ಕೈಗೂಡಿಸುವೆನೆಂಬ ವೈಭವದಲ್ಲಿರೆವೈಮನಸದೊಳು ಕನ್ಯೆಯುಸುಯ್ಗರಿಯುತ ಮುರವೈರಿ ಪ್ರಸನ್ವೆಂಕಟಕೃಷ್ಣಯ್ಯನೊಳ್ ಮನವಿಟ್ಟಿರೆ 134ದನುಜಮಥನÀ ಹರಿಸೇವೆ ಇದೆಂದುಅನಿಮಿಷಮುನಿ ಧರೆಗಿಳಿದು ತಾ ಬಂದುವನಿತೆ ಕೊರವಂಜಿಯ ವೇಷವÀ ಧರಿಸಿಜನಪ ಭೀಷ್ಮಕನೋಪವನದಲ್ಲಿ ನೆಲಸಿ 14ಹಲವು ಕೊರವಿಯರ ಕೂಡಿ ಸಿಂಗರದಿಬೆಲೆ ಇಲ್ಲದುಡಿಗೆ ತೊಡಿಗೆ ಇಟ್ಟು ಮುದದಿಇಳೆಯ ಜನರು ಮೋಹಿಸುವಪರಿಇಹಳುಕೆಳದೇರ ಗಡಣದಲಿ ಚೆಲುವೆ ಒಪ್ಪಿದಳು 15ಮಂಜುಗಾವಿಯ ಸೀರೆ ನಿರಿತೆಗೆದುಟ್ಟುಕೆಂಜೆಡೆ ಬಿಟ್ಟೋರೆದುರುಬಿನ ಕಟ್ಟುಪಂಜಿನೋಲೆಯ ಮೂಗುತಿಯ ಬಲಿದಿಟ್ಟು ಗುಲಗಂಜಿ ಹೊಂದಾಳೆ ಸರಗಳಳವಟ್ಟು 16ಕಂಚುಕಪುಟ ಬಿಗುಪೇರಿದ ಕಟ್ಟುಚಂಚಲನೇತ್ರಕಂಜನ ಕಾವಲಿಟ್ಟುಮಿಂಚುವಾಭರಣಿಟ್ಟು ಪ್ರಸನ್ವೆಂಕಟ ಕೃಷ್ಣನಂ ಚಿಂತಿಸಿ ಜಯ ಜಯಯೆಂದಳುಕೊರವಿ175ಅಡಿಗಡಿಗೆ ಝಣ ಝಣರೆಂದು ನಡೆತಂದು ನಡೆತಂದುಮಡದಿ ರಾಜಬೀದಿಯಲಿನಿಂದು18ಮೃಡಗಹಿತನ ಪಟ್ಟದಾನೆ ಮಂದಗಮನೆ ಮಂದಗಮನೆಕಡುಮೌನಿ ಜನರ ಮೋಹಿನೆ 19ಚಪಲ ನೋಟಕೆ ನಾಗರಿಕರು ನೋಟಕರು ನೋಟಕರುಲಿಪಿಯ ಚಿತ್ರದೊಲು ನಿಂತಿಹರು 20ನಿಪುಣೆಕೊರವಿಶ್ರೀಪ್ರಸನ್ವೆಂಕಟ ಕೃಷ್ಣನ್ನ ಕೃಷ್ಣನ್ನಶ್ರೀಪ್ರÀ್ರಸಾದವ ಬೇಡುತಿದ್ದಳಣ್ಣ 216ಬೆಡಗಿನ ಗಮನದಿ ಎಡಬಲಕೊಲಿದುಕಡಗ ಶಂಖದ ಬಳೆ ನುಡಿಸುತ ನಡೆದುಅಡಿಗೊಮ್ಮೆ ತಿರುಮಲ ಒಡೆಯನ ನೆನೆದು ತಕ್ಕಡ ಧಿಗಿಧಿಮಿಕೆಂದುಜಡಿದುತಾಳ್ವಿಡಿದು22ತಿಗುರಿದ ಗಂಧ ಸೆಳ್ಳುಗುರಿನ ನಾಮಮೃಗಮದದ ಬೊಟ್ಟಿನ ನಗೆಮೊಗದ ಪ್ರೇಮಮಗುವನುಡಿಯಲೆತ್ತಿ ಜಗಚ್ಚರಿಯಮ್ಮಹೆಗಲ ರನ್ನದ ಬುಟ್ಟಿ ಮುಳ್ಳುವಿಡಿದಮ್ಮ 23ನಗರದ ಜನದ ಕಣ್ಣಿಗೆ ಕೌತುಕೆನಿಸಿಬಗೆ ಬಗೆ ಒಗಟು ಮಾತುಗಳನುಚ್ಚರಿಸಿನಗರಾಧಿಪತಿಯ ಮನೆಯಕೇಳಿನಡೆದುಮಿಗೆ ಪ್ರಸನ್ವೆಂಕಟ ಕೃಷ್ಣಗೆ ಕೈಮುಗಿದು 247ಬ್ರಾಹ್ಮರ ಕೇರಿಗೆ ಬಂದಳಾಕೊರವಿಪರಬ್ರಹ್ಮನ ಗುರುತ ಕೇಳುತ್ತನಮ್ಮಮ್ಮ ನಮ್ಮವ್ವೆ ನಮ್ಮಜ್ಜಿ ನೀಡೆಂದುಸನ್ಮಾನದಾಲಯವ ಪೊಗುತಾ 25ಇಂತಪ್ಪ ಸೊಬಗುಳ್ಳ ಕೊರವಿಯನು ಕಂಡುನೃಪನಂತಃಪುರದ ಸತಿಯರೈದಿಕಂತುವಿನ ಜನನಿಗೆ ಕರವೆರಡು ಮುಗಿದು ಏಕಾಂತ ಪೇಳಿದರು ಚೆನ್ನಾಗಿ 26ಓರ್ವ ಕಾಲಜ್ಞಾನ ಪೇಳ್ವ ಕೊರವಮ್ಮ ನಮ್ಮೂರ್ವಳಗೆ ತಿರುಗುತಿಹಳಮ್ಮಸರ್ವೇಶ ಪ್ರಸನ್ವೆಂಕಟ ಕೃಷ್ಣನಾಗಮದನಿರ್ವಚನ ಕರೆಸಿ ಕೇಳಮ್ಮ 278ಬಂದಳು ನೃಪನರಮನೆಗೆ ತಾನಿಂದಲ್ಲಿ ನಿಲ್ಲದೆ ಕಿಲಿಕಿಲಿ ನಗುತಾ ಕುಲು ಕುಲು ನಗುತಾ ಪ.ಬಂದ್ಹೇಳಿದ ನುಡಿಗೇಳ್ದು ಪೂರ್ಣೇಂದುವದನೆ ಮುದತಾಳ್ದುಮಂದಿರಕೆ ಕರೆಸಿದಳು ನಲವಿಂದಲಿ ಬಲು ಬೆಡಗಿನ ಕೊರವಂಜಿ 28ತಳಪಿನ ಮುತ್ತಿನ ಕಟ್ಟುಶುಭತಿಲಕದ ಹಚ್ಚೆಯ ಬಟ್ಟುಅಲುಗುವ ಮೂಗುತಿಯಬಲೆ ಸಲೆಬಳುಕುತ ಬಡನಡುವಿನ ಚಪಲೆ 29ಬಟುಗಲ್ಲದ ಮಕರಿಕಾಪತ್ರ ಪವಳದುಟಿ ದಾಡಿಮರದಗೋತ್ರವಿಟಮೃಗಸ್ಮರಶರ ನೇತ್ರ ಕೊರಳ್ದಟಿಸುವಮಣಿಮುತ್ತಿನ್ಹಾರಗಳೊಲಪಲಿ30ಇಟ್ಟೆಡೆ ಮೊಲೆಯ ಪಟ್ಟಿಕೆಯು ಶ್ರೋಣಿಮುಟ್ಟುವ ಮುಡಿಯ ಮಾಲಿಕೆಯುಬಿಟ್ಟ ಮುಂಜೆರಗಮಲಿಕೆಯು ಕಣ್ಣಿಟ್ಟ ಮೃಗಕೆ ಭ್ರೂಸ್ಮರಕಾರ್ಮುಕೆಯು 31ತೆಳ್ವೋದರದ ತ್ರಿವಳಿಯ ಜಗುಳಿಬೀಳ್ವ ಮಣಿಮುಕ್ತಾವಳಿಯಸಲ್ಲಲಿತ ಸಂಪಿಗೆ ಕಳೆಯ ಗೆಲ್ವಚೆಲ್ವೆಕೊರವಿಪುರವೀಥಿಯ ಬಳಿಯ32ಕಿಣಿ ಕಿಣಿ ರವದ ಕಿಂಕಿಣಿಯುಝಣ ಝಣತ್ಕಾರಿಪಂದುಗೆ ಮಣಿಯುಕಣಿ ಕಣಿ ಒಯ್ಯೆಂಬೊಕ್ಕಣಿಯು ಕುಚಕುಣಿ ಕುಣಿಸಿ ನಟಿಪ ನಡೆವಾಂಗನೆಯು 33ಸಿಂಗನ ಉಡಿಯಲ್ಲಿಕಟ್ಟಿಉತ್ಸಂಗದೊಳೊಲಪಿನ ದಿಟ್ಟಿರಂಗ ಶ್ರೀ ಪ್ರಸನ್ವೆಂಕಟ ಕೃಷ್ಣಾಂಗನೆಯನು ಕಾಂಬುವೆನೆಂಬ ತವಕದಿ 349ವಚನಪದುಮನಾಭನ ರಾಣಿ ರಾಣಿವಾಸದಲಿಯದುಕುಲೇಂದ್ರನ ಚರಣೋಚ್ಚಾರಣೆಯಲ್ಲಿರಲುಒದಗಿ ಬಂದಳುಕೊರವಿಕರೆಯುತ್ತ ತಾನುಚದುರ ಪ್ರಸನ್ವೆಂಕಟ ಕೃಷ್ಣನರಸಿಯನು 3510ಎಲ್ಲಿಹಳೆಲ್ಲ್ಲಿಹಳಾ ರಾಯನ ಮಗಳೆಲ್ಲಿಹಳೆ ನೀಡೆಯವ್ವನಲ್ಲೆ ಬಾ ನಲ್ಲೆ ಬಾ ನಲ್ಲೆ ಬಾ ರುಕ್ಮಿಣಿನಲ್ಲೆ ಬಾರೆ ಮುಂದಕವ್ವ 36ಬಲ್ಲೆ ನಾ ಬಲ್ಲೆ ನಿನ್ನಯ ಮನದೆಣಿಕೆಯಸೊಲ್ಲುವೆನೆ ನೀಡೆಯವ್ವನಿಲ್ಲದು ನಿಲ್ಲದಕ್ಕಿಯು ನಿನ್ನದ್ಹಸಿತ ಕೈಒಳ್ಳೆ ಕಜ್ಜಾಯ ನೀಡೆಯವ್ವ 37ಕೆಟ್ಟೋಗರಕೆ ಚಿತ್ತವಿಟ್ಟ ಕೊರವಿಯಲ್ಲಮೃಷ್ಟಾನ್ನವ ನೀಡೆಯವ್ವಶ್ರೇಷ್ಠಾದ ಶಾವಿಗೆ ಬಟ್ಟುವಿ ಪಾಯಸಹೊಟ್ಟೆ ತುಂಬ ನೀಡೆಯವ್ವ 38ಅಟ್ಟಿಟ್ಟ ಪಂಚವಿಧ ಭಕ್ಷ್ಯ ಎನಗಿಂದುಇಷ್ಟ ಕಾಣೆ ನೀಡೆಯವ್ವಇಷ್ಟುಣಲಿಕ್ಕೆನ್ನತುಷ್ಟಿಬಡಿಸಿ ಸತ್ಯಗೋಷ್ಠಿಕೇಳೆ ನೀಡೆಯವ್ವ39ಮನ್ನಣೆ ಇಲ್ಲದ ಮನೆಯ ಹೊಗುವಳಲ್ಲಕನ್ನೆ ಬಾರೆ ಮುಂದಕವ್ವಮುನ್ನ ರಕ್ಕಸನೊಯ್ದ ಮಡದಿಗೆ ಒಳಿತವನೆಲ್ಲ ಹೇಳಿದ್ದೆನವ್ವ 40ನಿನ್ನ ಪ್ರಾಣದ ಪ್ರಿಯನೊಬ್ಬನೆ ಪರದೈವಕನ್ನೆ ಕೇಳಜಕಾಮರವ್ವಕಣ್ಣಾರ ಕಾಂಬೆ ನಿನ್ನಣ್ಣನಪಾಟುಪ್ರಸನ್ನವೆಂಕಟ ಕೃಷ್ಣನಿಂದವ್ವ 4111ಚೂರ್ಣಿಕೆಈ ವಾಕ್ಯವಂಕೇಳಿತೀವಿ ತೋಷವ ತಾಳಿದೇವಿ ರುಕ್ಮಿಣಿಯಕ್ಕ ಪಾವನ ಹಾಸಂಗಿಯಿಕ್ಕಿಆವಲ್ಲಿಂ ಬಂದ್ಯವ್ವ ದೇವಲೋಕದ ಕೊರವೆಈ ಒಳ್ಳೆ ಮೆಚ್ಚು ಮಾತು ಆವಾಗನುಭವೆಂ ಮಾತೆಹೀಗೆಂದಾಸನ ಕೊಟ್ಟು ಬಾಗಿಲೊಳು ಕಾವಲಿಟ್ಟುಬೇಗ ಪ್ರಸನ್ವೆಂಕಟ ಕೃಷ್ಣನಾಗಮವ ಮನದಿ ಕೇಳ್ದಳವ್ವೆ 4212ಕುಳ್ಳಿರೆ ಕುಳ್ಳಿರೆ ಕುಳ್ಳಿರೆ ಕೊರವಂಜಿಫುಲ್ಲಬಾಣನಾನೆ ಕುಳ್ಳಿರೆಸೊಲ್ಲಮ್ಮ ಸೊಲ್ಲಮ್ಮ ಹಲವು ಮಾತಿನ ಜಾಣೆಎಲ್ಲ ಬಯಕೆಯನೆಲ್ಲ ಸೊಲ್ಲಮ್ಮ ಕೊರವಂಜಿ 43ಆದರದಾ ಮಾತ ಕೇಳುತ ಕುಳಿತಳುಯಾದವರರಸ ಮುಕುಂದನಕೋದಂಡಪಾಣಿ ತಿರುವೆಂಗಳ ಮೂರ್ತಿಯಪಾದಕೆ ಮಾಡಿದಳೊಂದನೆ ಕೊರವಂಜಿ 44ಮಣಿಮಯ ಬುಟ್ಟಿಯ ಎಡದಲಿಟ್ಟುಕೊಂಡುವನಿತೆ ಪದ್ಮಾಸನವಿಟ್ಟಳುಮಿನುಗುವ ಎಳೆನಗೆಯಣುಗನ್ನ ಮಲಗಿಸಿವನಿತೆ ರುಕ್ಮಿಣಿಯನ್ನು ಕರೆದಳು ಕೊರವಂಜಿ 45ಜಾಣೆ ಬಾರೆ ಸುಗುಜಾಣೆ ಬಾರೆ ನಾರಿಮಾಣಿಕಳೆಕಟ್ಟಾಣಿಬಾರೆವಾಣಿಪತಿಪಿತ ಪ್ರಸನ್ವೆಂಕಟ ಕೃಷ್ಣನರಾಣಿ ಬಾರೆಸುಪ್ಪಾಣಿಬಾರೆ ಕಲ್ಯಾಣಿ ಬಾರೆ ಫಣಿವೇಣಿ ಬಾರೆಶುಭಶ್ರೋಣಿ ಬಾರೆ ಎಂದು ಕರೆದಳು ಕೊರವಂಜಿ 4613ವಚನಅಮ್ಮ ರುಕ್ಮಿಣಿಯಮ್ಮ ಉಮ್ಮ್ಮಯವಟ್ಟುಮುಮ್ಮೊರದ ರತುನ ಮುತ್ತಿನ ಕಾಣಿಕಿಟ್ಟುಪರಬೊಮ್ಮಪ್ರಸನ್ವೆಂಕಟಕೃಷ್ಣನ ಅಡಿಗಳನಮ್ಮಿಸುತ ಮನೋರಥವÀ ಮನದಿ ಬೆಸಗೊಳ್ಳಲು 47ಉಂಡ ಊಟ ಕಂಡ ಕನಸು ಪುಂಡರೀಕಾಂಬಕಿಯೆತಂಡ ತಂಡದ ವಾರುತೆಗಳ ಪೇಳುವೆನು ಸಖಿಯೆಹಿಂಡುದೈವದಗಂಡಪ್ರಸನ್ವೆಂಕಟ ಕೃಷ್ಣನ ಕಣ್ಣಾರಕಂಡು ಸಾರುವಕೊರವಿಎಳ್ಳನಿತು ಸಟೆಯರಿಯೆ4815ಚೂರ್ಣಿಕೆಕಾಸಿನಾಸೆಯವಳು ನಾನಲ್ಲಭಾಷೆ ಹುಸಿದರೆ ಬಿರುದು ಬಿಸುಡುವೆನೆಲ್ಲಭಾಷೆ ಪಾಲಕರು ನಮ್ಮ ಸಿದ್ಧರೆಲ್ಲ ಲೇಸುಲೇಸೆಂದುಕೇಸಕ್ಕಿತಿಮ್ಮಯ್ಯನ ಬೆತ್ತವ ಮುಟ್ಟೆಲೆ ದುಂಡೆಎನ್ನ ಮನದ ದೈವ ಎನ್ನಕ್ಕ ಕೇಳೆಯವ್ವತಿರುಮಲೆ ತಿರುವೆಂಗಳಯ್ಯವರಅಹೋಬಲ ನರಸಿಂಗಯ್ಯಹರಿಕಂಚಿ ವರದರಾಜಯ್ಯಶಿರಿ ರಂಗದ ರಂಗರಾಯಯ್ಯಬದರಿಯ ನರನಾರಾಯಣಯ್ಯಪುಂಡರೀಕವರದ ಪಂಢರಿರಾಯ ಎಮ್ಮಉಡುಪ ಕುಲಜ ಮನ್ನಾರು ಕೃಷ್ಣಮ್ಮಒಡ್ಡಿಜಗನ್ನಾಥ ಅಲ್ಲಾಳನಾಥಯದುಗಿರಿನಾಥ ಶಿರಿಮುಷ್ಣನಾಥಕೃತಪುರದ ವೀರ ನಾರಾಯಣಕೊಲ್ಲಾಪುರದ ಕನ್ನೆ ವೇಲಾಪುರದ ಚೆನ್ನಅನಂತಶಯನ ಜನಾರ್ದನ್ನಅನವರತಪರಸನ್ನ ವೆಂಕಟ ಕೃಷ್ಣನ ಕನ್ನೆಇಂತಪ್ಪಾನೇಕ ದೈವ ಏಕವೆಂದು ಏಕಾನೇಕವೆಂದುನಂಬಿಪ್ಪೆನೆ ಕೇಳೆಯವ್ವ 4916ಇಂತಿಪ್ಪ ಎನ್ನ ಮನೆಯ ದೈವ ಅವರಂತವ ಬೊಮ್ಮರರಿಯರವ್ವ ವಿಶ್ರಾಂತಿಲಿ ಕೊಂಡಾಡುವೆನವ್ವ ನಾನುಕಂತುವಿನಣ್ಣನ ಮಗಳವ್ವ 50ಇಪ್ಪಲ್ಲಿಪ್ಪಕೊರವಿನಾನಲ್ಲ ಹೋಗಿಬಪ್ಪೆ ಹದಿನಾಲ್ಕು ಲೋಕಕೆಲ್ಲಛಪ್ಪನ್ನದೇಶಗಳ ಸುದ್ದೀನೆಲ್ಲಕೇಳಿಬಪ್ಪುವ ಕಜ್ಜವ ಕೃಷ್ಣ ಬಲ್ಲ 51ಆವಾವ ದೇಶದ ಸುದ್ದಿ ಕೇಳವ್ವ ನಿನ್ನಭಾವದ ಬಯಕೆಯನೆಲ್ಲ ಕೇಳವ್ವಶ್ರೀವರ ಪ್ರಸನ್ನವೆಂಕಟಾದ್ರಿ ಕೃಷ್ಣ ದ್ವಾರಕಿಂದಾವಾಗ ಬಪ್ಪನೆಂದು ಕೇಳವ್ವ 5217ಚೂರ್ಣಿಕೆಓಯಮ್ಮ ನಿನ್ನವರುಗಳು ಆ ಬಲಮಗು ಮದನಕಾಮಬುಡುಕ್ಕಾನೆ ಪರತಾನು ಚಿಂತಿಶೆ ಮಾಣಮ್ಮನಾ ತಿರುಕ್ಕಿ ವಂದ ದೇಶ ಐವತ್ತಾರು ಶೊಲ್ಲರೆಅಂಗ ವಂಗ ಕಳಿಂಗ ಕಾಂಬೋಜ ಭೋಟಕರ್ನಾಟಕ ಘೋಟ ಮಹಾಘೋಟಜಿನ್ನ ಮಹಾಜಿನ್ನ ಜೊನ್ನಗಕಾಶ್ಮೀರ ತುರುಷ್ಕಮಾಗಧಬಂಗಾಳ ಗೌಳ ಮಾಳವ ಮಲೆಯಾಳನೇಪಾಳ ಗೌಡ ಗುರ್ಜರ ಕೊಂಕಣದರ್ದುರಬರ್ಬರ ಸೌರಾಷ್ಟ್ರ ಮಹಾರಾಷ್ಟ್ರಸಂಬರ ಮುಂಗಿಳ ಘೋಟ ಮುಖಏಕಪಾದ ಸೌಳ ಸಂಸಾಳಕಆನರ್ತ ಹಮ್ಮೀರ ಕೊಮ್ಮೀರಮತ್ಸ್ಯಪಾಂಚಾಲರಾಜಶೇಖರ ವರಶೇಖರ ಯುಗಂಧರ ಮಧ್ಯದೇಶಲಂಬಕರ್ಣ ಸ್ತ್ರೀರಾಜ್ಯ ಆಂಧ್ರ ದ್ರವಿಡಅರವ ಕನ್ನಡ ತುಳುವ ತುಳಾಂಡಜಾಳೇಂದ್ರ ಕೈಕೇಯ ಕೌಸಲ ಕಂಚಿಕನೋಜ ಸವ್ವೀರಸಿಂಧುಕೇರಳವೈದರ್ಭ ದೇಶದೊಳ್ಕುಂಡಿನಾಪುರದೊಳ್ ನಿನ್ನಂ ಕಂಡುಮನದಂಡಲಿಕೆಗೆ ಸಾಗಿತ್ತೆನೆಲೆ ದುಂಡೆ 5318ಈ ನಾಡ ಚರಿಸಿ ನಿನ್ನರಸುತ ಬಂದೆನೆಜಾಣೆ ಬಂಗಾರವ್ವ ಕೈ ತೋರೆ 54ನಿನ್ನ ಕಾಣುತ ಹಸಿವೆ ನೀರಡಿಕೆಲ್ಲ ಹೋಯಿತುಜಾಣೆ ಬಂಗಾರವ್ವ ಕೈ ತೋರೆ 55ಸಂಧಾನಕ್ಹಾರುವನಟ್ಟಿದ್ದೆ ಮೊದಲಹುದೇನೆ ಮಂಗಳದೇವಿ ಕೈ ತೋರೆ 56ನೀ ಬರೆದೊಕ್ಕಣೆ ಯದುರಾಯನರಿತಾನುಸೌಭಾಗ್ಯವಂತೆ ಕೈ ತೋರೆ 57ರಥವನೇರಿಕೊಂಡು ಬರಹ ನೋಡಿಕೊಳ್ವಜಾಣೆ ಬಂಗಾರವ್ವ ಕೈ ತೋರೆ 58ಧ್ಯಾನದ ಕಳವಳ ಮುಸುಡುಗಂಟಿನ ಚಿಂತೆಮಾಣು ಮಂಗಳದೇವಿ ಕೈತೋರೆ 59ತ್ರಿಭುವನೇಶ ಪ್ರಸನ್ನವೆಂಕಟ ಕೃಷ್ಣತಾ ಬಹನೆಲೆ ದುಂಡಿ ಕೈ ತೋರೆ 6019ಚೂರ್ಣಿಕೆಎಲೆಲೆ ಎಳೆವೆಂಗಳೆ ಎಲೆ ಹುಲ್ಲೆಗಂಗಳೆಮಹಾಭೂಷಣದ ಮಾರುವೇಣಿ ಮಡದಿಯರಸುಪ್ಪಾಣಿಕೀರವಾಣಿ ಕಿಸಲಯಪಾಣಿಕಂಧಿಜ ಬಿಂಬವದನೆ ಕುಲಿಶಮಣಿರದನೆಮದನಕಾರ್ಮುಕೋಪಮ ಭ್ರೂಲತೆಯಳೆ ಮಹಾಲಕುಮಿಯಳೆಅರುಣವಿಧ್ರುಮಾಧರೆ ಅಬ್ಜಜಾ ಕಂಧರೆಅರ್ಧಚಂದ್ರನ ಪೋಲ್ವಡಿ ಪಣೆಯಳೆ ಅನಘ್ರ್ಯ ಚೂಡಾಮಣಿಯಳೆಸಿಂಧೂರಸೀಮಂತಿನಿಯೆಸಿರಿತಿಲಕದ ಶೋಭಿನಿಯೆನುಣ್ಗದಪುನಾಸಿಕಮಣಿಯಳೆ ನೂತನೊಜ್ರದೋಲೆಯಳೆನಿಷ್ಕ ಕಂಠಾಭರಣೆಯಳೆ ನಿತ್ಯಮಂಗಳ ಸೂತ್ರಿಯಳೆನಿಡುಜಾಲಕ ಮಾಲೆಯಳೆಬುಗುಡಿ ಚಳತುಂಬು ಕೊಪ್ಪಿನ ಕಿವಿಯಳೆಬಾವಲಿ ನಾಗೋತ್ರ ಪೊಂಬರಳೆಲೆ ಲಲಿತ ಬಾಹುಲತೆಯಳೆಲಸತ್ವನಜಕೋರಕ ಸ್ತನಿಯಳೆಕಡು ತೆಳ್ವೋದರಿ ನಿಮ್ನ ನಾಭಿಯಳೆಕಂಠೀರವಕಟಿಯಳೆ ಕರಭೋರು ಯುಗಳೆಯಳೆಅಪರಂಜಿಕಂಚುಕಾಂಬರ ಉತ್ತರೀಯಳೆಅಮೂಲ್ಯ ಕಾಂಚಿದಾಮಾಂಕಿತಳೆಬಟುಗನ್ನಡಿ ಜಾನುದ್ವಯಳೆ ಬ್ಞಣ ಪಂಚಕನ ಬತ್ತಳಿಕೆ ಜಂಘೆಯಳೆಕೋಮಲತರಾಂಘ್ರಿ ಸರಸಿಜಯುಗಳೆನೀಲಪಚ್ಚ ಪದ್ಮರಾಗ ಹೀರ ಮುತ್ತಿನ ಪೆಂಡೆಯಳೆಕಾಲಂದಿಗೆ ಮೆಂಟಿಕೆ ವೀರಮುದ್ರೆ ಕಿರಿ ಪಿಲ್ಲಿಯಳೆಮಣಿಮಯಾಂಗುಲ್ಯದ ವಲಯಾಭರಣೆ ಮದಗಜಗಮನೆಪ್ರತಿಯಿಲ್ಲದ ರನ್ನದ ಬೊಂಬೆ ಪರಬೊಮ್ಮನ ಪಟ್ಟದ ರಂಭೆಬಾಬಾ ತಾತಾ ಎಂದು ವಾಮಕರವಬೇಡಲಿತ್ತಳಾ ರುಕ್ಮಿಣಿ ತಾಯಿ 6120ಜಗದ ನಾರಿಯರ ಕೈಗಳ ಕಂಡೆನವ್ವಮೃಗಮದಗಂಧಿ ನಿನ್ಹೋಲ್ವರಿಲ್ಲವ್ವ 62ಯುಗಯುಗಾಂತರ ದೇಶ ದೇಶದಲ್ಲವ್ವಅಗಲ್ಯಾಟವಿಲ್ಲ ನಿನ್ನರಸ ನಿನಗವ್ವ 63ಸವತೇರು ಬಹಳುಂಟು ನೆಂಟರ ಜಾಣೆ ಎಲೆ ಬೀಗರ ಸುಗುಣೆಯುವತಿ ಪ್ರಸನ್ವೆಂಕಟ ಕೃಷ್ಣ ನಿನ್ನ ಪ್ರಾಣ 6421ಕಣಿ ಕೇಳೆ ಕಣಿ ಕೇಳೆ ಕಣಿ ಕೇಳೆ ಚೆಲ್ವೆಕಣಿ ಕೇಳೆ ನಿನ್ನ ಮನದಾ ಮಾತ್ಹೇಳ್ವೆಎಣಿಕೆಗೊಳ್ಳದಿರಮ್ಮಇಂದುನಾಳೆಂದುಗುಣನಿಧಿ ಗೋಪಾಲ ಬಹ ದಯಾಸಿಂಧು 65ತ್ರುಟಿಯುಗವಾಗಿದೆ ನಿನಗೀಗ ಮುಗ್ಧೆಕುಟಿಲಮಾಗಧಸಾಲ್ವ ನೆನೆವ ದುರ್ಬುದ್ಧೆಘಟಿಸದೆಂದಿಗೆ ಖಳರ ಮನೋರಥ ಸಿದ್ಧೆದಿಟವೆನ್ನವಾಕುಸುರಲೋಕ ಪ್ರಸಿದ್ಧೆ66ಹಿಂದೊಮ್ಮೆ ಖಳರು ಗೋವಿಂದ ಬಂದಾಗಮಂದಮತಿಯಲಿ ಮನ್ನಿಸದಿರಲಾಗಇಂದ್ರ ಸಿಂಹಾಸನವ ಹರಿಗೆ ಕಳುಹಿಸಿದವೃಂದ ದೈತ್ಯರಿಗೆಲ್ಲ ಭಯವ ಸೂಚಿಸಿದ 67ಜಂಭಾರಿಕುಲಿಶಕಂಜುತ ಪೋಕರೆಲ್ಲಥಂಬಿಸಿದರು ವಾಗಾಡಂಬರವೆಲ್ಲಅಂಬುಜಾಕ್ಷಗೆ ನಿನ್ನತಾತಪೂಜಿಸಿದಅಂಬುಜನಾಭ ತನ್ನೊಳುವಿಶ್ವತೋರ್ದ68ಅದನೆಲ್ಲ ಬಲ್ಲ್ಯವ್ವ ಹರಿಯ ನಿಜನಲ್ಲೆಬೆದರಿದೊಲ್ಲೋರ್ವ ನಿನ್ನ ಮಾಯವ ಬಲ್ಲೆಪದುಮಜ ಭವರ ಹೃದಯಾಬ್ಜ ನಿಯಂತ್ರೆಉದಧೀಶನಾಜÕದಿ ಸರ್ವಸ್ವತಂತ್ರೆ 69ಕೇಳಮ್ಮ ನಿನ್ನ ಹೆತ್ತವರಿಗೆ ನಿನ್ನಮೇಲೆ ಹಂಬಲ ಬಹಳ ಪಾಪಿ ನಿಮ್ಮಣ್ಣಆಲೋಚನೆಯಿಲ್ಲದೆ ನಿಶ್ಚೈಸಿದ್ದಾನೆ ಶಿಶುಪಾಲಗೆ ನಿನ್ನ ಕೊಡುತೇನಂತೈದಾನೆ 70ಆಗಲ್ಯಾಕವನಿಂದಲೀಕಜ್ಜ ಬುರ್ರಾಬೇಗ ಭೀಷ್ಮಕನಂತರ ಬಲ್ಲ ಶ್ರೀಧರ್ರಾಸಾಗರಶಯನ ತಾ ಸಮಯಕೈತರುವನೇಗಿಲಧರನು ಕೃಷ್ಣನ ಕೂಡ ಬರುವ 71ಆ ಗೌರಿ ಮೌನಿಯೆಂಬುವಳ ಪೂಜೆಯಲಿಯೋಗವಾಗಿದ್ರ್ದಾ ಕಾಪುರುಷ ಸಭೆಯಲ್ಲಿಮೇಘಮುಸುಕಿರ್ದ ಚಂದಿರನಂತೆ ನಿನ್ನಯೋಗೇಶ ಪ್ರಸನ್ವೆಂಕಟ ಕೃಷ್ಣ ನೊಯ್ವ ಚೆನ್ನ 7222ಇನಿತೆಲ್ಲ ಕೊರವಂಜಿಕರವಪಿಡಿದು ಹೇಳಿಕ್ಷಣ ಕ್ಷಣಕೊಡೆಯನ ಹೊಗಳಿನೆನಪಿಗೆ ಬೆಸಗೊಂಬೆ ಕಾಲಜ್ಞಾನದ ವಾರ್ತೆಎನಗೆ ತಿಮ್ಮಯ್ಯ ಹೇಳೆಂದು 73ಶ್ರೀ ರುಕ್ಮಿಣಿಯ ಮನದುಲ್ಲಾಸವನೆಲ್ಲಪೂರೈಸುವೆನೆಂಬ ನುಡಿಯತೋರು ಎನ್ನಯ ನಾಲಿಗೆಯಿಂದಲುಸುರುವೆವೀರ ದ್ರಾವಿಡ ವೆಂಕಟಯ್ಯ 74ಶರಣ್ಯೆಲೆ ಸತ್ಯನೆ ಶರಣ್ಯೆಲೆ ನಿತ್ಯನೆಶರಣು ಶರಣು ನಿತ್ಯಮುಕ್ತಶರಣು ಪರೇಶನೆ ಶರಣು ಅವಿನಾಶನೆಶರಣು ಪ್ರಸನ್ವೆಂಕಟ ಕೃಷ್ಣ 7523ವಚನಓ ರುಕ್ಮಿಣಿ ತಾಯಾರೆಉನ್ನ ಮನಸಿಲೆ ನಿನೈಚ್ಚ ಕಾರ್ಯಂ ಕೈಕ್ಕೂಡಿನಾಲ್ಎನಕ್ಕೆ ಎನ್ನ ಸಂತೋಷಂ ಪಣ್ಣಿರಾಯ್ಓಯಮ್ಮ ಉನ್ ಪ್ರಾಣನಾಯಗನ್ ಶ್ರೀಕೃಷ್ಣನ್ ವಂದುಪೊಟ್ಟಣೆ ಕೈ ಪಿಡಿಚ್ಚಿ ಕಲ್ಯಾಣಂ ಪಣ್ಣಿಕೊಳ್ಳರಾಂಇಂದ ವಾರ್ತೆ ತಪ್ಪಿನಾಲ್ ನಾಂ ಕೊರ್ತಿಯೇ ಅಲ್ಲೆಉನ್ ತಮಯನ್ ರುಗ್ಮಂ ವೇಕ್ಕತ್ತೆ ಕೊಲ್ಲರಂ ವರಾನುಓಯಮ್ಮ ಇಂದ ವಾರ್ತೆಯೈ ಪಣ್ಣಿಕೋ ಅª, À್ಮು 7624ಮದ್ಯಪಾನಿತಾಮಸಯವನನ ಕೊಲಿಸಿದನೆನಿದ್ರೆಗೈವ ರಾಯನಿಂದಲಿಸದ್ದಿಲ್ಲದೆ ಮಧುರೆ ಜನರ ಸಾಗರದಮಧ್ಯ ದ್ವಾರಕೆಯಲ್ಲಿಟ್ಟನೆ 77ಯವನ ಸೈನ್ಯಜಲಧಿಬತ್ತಿಸಿ ಸಾಲ್ವಾದ್ಯರಹವಣಮುರಿದು ನಿಜರ ಹೊರೆವನು ನಿನ್ನವಿವಹ ಮಾಳ್ಪೆನೆಂಬ ಮಾಗಧನು ಚೈದ್ಯ ತನ್ನಕುವರನೆಂದು ಮಾನವಿಡಿದಿಹ 78ಇನಿತರೊಳು ರಂಗರಾಯನು ಮೋಹರದಿಮಣಿರಥವನೇರಿ ಬಹನುವನಿತೆ ನಿನ್ನಂದಣವ ನೋಡುತ ಜಿಗಿವನಲ್ಲಿಂದ ಘನತರ ಮೃಗೇಂದ್ರನಂದದಿ 79ನರಿಯ ಹಿಂಡಿನೊಳಗಿನಾನೆಯ ಒಯ್ವ ತೆರದಿಹರಿನಿನ್ನಪ್ಪಿಕೊಂಡುಹಾರುವಗರುಡನಮೃತ ಕಲಶವ ಸುರರ ಗೆದ್ದುಹರುಷದಿಂದೊಯ್ಯುವಂತೆ ಒಯ್ವನು 80ಸರಸಿಯಾಬ್ಜ ಹಂಸ ಒಯ್ವವೋಲ್ ಪರಮಪುರುಷತ್ವ, ರಿಯ ತನ್ನ ರಥಕೆ ಒಯ್ವನೆಬರಿಯ ದುಗುಡವ್ಯಾಕೆ ಬಾಲಕಿಪ್ರಸನ್ವೆಂಕಟ ಕೃಷ್ಣ ನಿನ್ನ ಮೆಚ್ಚುಗಾರನೆ 81ಬಂದನೆಂಬ ನುಡಿಯು ಬರುತಿದೆಜವದಿಕೃಷ್ಣಬಹನೆಂಬ ನುಡಿಯು ಬರುತಿದೆ 8225ಚೂರ್ಣಿಕೆನೀಡೆಯವ್ವ ಎನ್ನ ಮನೆ ಗಂಡನ ಕಾಟ ಘನ್ನವವ್ವಕ್ಷಣಕೈದು ನಡೆಯವನವ್ವಒಮ್ಮಾನ ತಿರಿತಂದರೆ ಇಮ್ಮಾನ ಬೇಡುವನವ್ವಚೆಂಬಣ್ಣ ಕರಿಬಿಳಿಯಬಟ್ಟೆನಮ್ಮತ್ತೆಗಳವ್ವಆರು ಮಂದಿ ಗಂಡನ ಗೆಳೆಯರವ್ವಏಳು ಪದರು ಮೂರು ತ್ಯಾಪೆ ಗುಡಲುಂಟವ್ವಎಪ್ಪತ್ತೆರಡು ಸಾವಿರ ನುಲಿಯ ಸಿಂಬಿಗಳವ್ವಗುಡಲೊಳು ಮೂರು ಒಲೆಯುಂಟವ್ವಗುಡಲು ಬಿದ್ದರೆ ನುಲಿಗೆ ಮಾರ್ಯೆವ್ವಒಂಬತ್ತು ಗುದ್ದಿನೊಳಗೆ ಹತ್ತು ಹೆಗ್ಗಣದೋಡ್ಯಾಟವವ್ವಕೊರವನ ಕೈಯಿಚ್ಛೆ ಮೂರು ನಾಯಿಗಳವ್ವಎಣಿಕಿಲ್ಲದ ಕುತ್ತಗಳುಂಟವ್ವಕೊಬ್ಬಿನ ಸವತೇರೆಂಟು ಮಂದಿ ಕೊರವಗೆ ಮಚ್ಚೂಡುವರವ್ವಸಂಸಾರದಲೆಳ್ಳನಿತು ಸುಖವಿಲ್ಲವ್ವಅತ್ತೆಗಳಾಟ ಗಂಡನ ಬ್ಯಾಟ ಸವತಿಯರ ಕಾಟನೆರೆಹೊರೆಯವರ ನೋಟ ಮನೆಯ ಮಾಟಗತರಸದೂಟಕಂಜಿ ನಡುನಡುಗಿಮೂರೂರ ಹಾದಿ ಮೆಟ್ಟಿ ಬಂದುಆರೂರರಸಿನ ಮೊರೆ ಹೊಕ್ಕೆನೆಯವ್ವವಿದರ್ಭದೇಶದ ಕುಂಡಿನಾಪುರದೊಳು ನಿನ್ನ ಗುರುತಕೇಳಿಉಪವನದ ಪ್ರದ್ಯೋತನಾಳ್ವ ಎರಡು ಬಾವಿಯ ಮ್ಯಾಗಣಹೂವಿನ ತೋಟದ ನಡುವೆ ಬುತ್ತಿಯನುಂಡು ನಿನ್ನ ಕಂಡುಕುಂತಳಾಪುರದಲ್ಲಿ ಕುಳಿತುಂಬಬ್ರಹ್ಮಾನಂದದವರ ಭಾಗ್ಯವ ಬೇಡ ಬಂದೆನೆ ಅವ್ವಅಸುವಿಗೆ ಹಾಲನೆರೆಯವ್ವಶಿಶುವಿಗೆನವನೀತನೀಡೆಯವ್ವಬಂಗಾರೆವ್ವ ಸಿಂಗಾರೆವ್ವ ಸೋರ್ಮುಡಿಯವ್ವಮಲ್ಲಿಗೆದುರುಬು ಸಂಪಿಗೆದುರುಬುಪಚ್ಚೆ ಮರುಗ ಮುಡಿವಾಳ ಶಾವಂತಿಗೆ ತುರಬಿನವ್ವಪ್ರಸನ್ವೆಂಕಟಕೃಷ್ಣನ ತೋಳ್ತಲೆಗಿಂಬಿನವ್ವ ನೀಡೆಯವ್ವ 8326ವಚನಇಂತಾಧ್ಯಾತ್ಮವಂ ಪೇಳಿಕಂತುವಿನಯ್ಯನ ಕಾಂತೆಯಂ ಸಂತಸಪಡಿಸಿಅಂತರಂಗದಿ ಚಿಂತಾಯಕನಂ ನೆನೆನೆನೆದುಭ್ರಾಂತಿ ಪರವಶಾದಂತೆ ಕೆಂಜೆಡೆಯಂ ತೂಗಿ ತೂಗಿಅಂತದತ್ಯಂತ ತೂಳಂತುಂಬಿಇಂತೆಂದಳಾ ಕೊರವಂಜಿ 8427ಬರುತಾನೆ ಜಾಣೆ ಬರುತಾನೆಬರುತಾನೆ ಚೆಲ್ವೆ ಬರುತಾನೆ 85ಹಿಂಡುಭಂಡರೆಲ್ಲ ಕೂಡಿ ನಿನ್ನ ಮುಚ್ಚಲು ಎತ್ತಿಕೊಂಡು ಒಯ್ವ ಜಾಣ ಬರುತಾನೆಪುಂಡರೀಕಸುರಗಿ ಖಡ್ಗ ಭಿಂಡಿವಾಲ ನುಗ್ಗುಮಾಡಿದಂಡಿಸುವ ಜಾಣ ಬರುತಾನೆ 86ಕುಂಡಿನಾಪುರದಿ ನೆರೆದ ಕೊಂಡಿ ಕುಹಕರ ತಲೆಯಚಂಡನಾಡ್ವ ಜಾಣ ಬರುತಾನೆಮಂಡೆಯಲ್ಲಿ ಪಚ್ಚಚೂಡವಿಟ್ಟು ರುಕ್ಮನಭಿಮಾನಕೊಂಡೇನೆಂಬ ಜಾಣ ಬರುತಾನೆ 87ತಂಡ ತಂಡದಲ್ಲಿ ನಿನ್ನಯ್ಯನ ಸದ್ವಾಸನನ್ನಉಂಡೇನೆಂಬ ಜಾಣ ಬರುತಾನೆಲೆಂಡದಾನವಾರಿ ಪ್ರಸನ್ನವೆಂಕಟಕೃಷ್ಣ ಬೊಮ್ಮಾಂಡಪತಿ ಜಾಣ ಬರುತಾನೆ 8828ಚೆನ್ನೆ ಕೊರವಂಜಿ ಮಾತು ಶ್ರೀಕನ್ಯೆಕೇಳಿನಲಿವಾಂತುಮನ್ನಿಸಿ ಗುಣವ ಕೊಂಡಾಡಿ ಮುಕ್ತಿರನ್ನಗಾಣಿಕೆಯನು ನೀಡಿ 89ಎಲೆ ಸತ್ಯಲೋಕದ ಕೊರವೆ ನೀಬಲು ಸತ್ಯ ನುಡಿದೆ ನಾನರಿವೆಛಲದಂಕ ದೇವರದೇವ ಈಖಳರೊಳು ಒಯ್ವುದರಿದವ್ವ 90ಹರಿರಥವೇರಿ ಬಾಹೋಣ ಕಾಪುರುಷರ ಮತ ಕೆಡಿಸೋಣಗುರುಪ್ರಸನ್ವೆಂಕಟ ಕೃಷ್ಣ ಬಂದುಹೊರೆವುದುಂಟೇನವ್ವ ರಮಣಿ 9129ನಂಬಲೇನೆ ನಿನ್ನ ಮಾತು ಕೆಳದಿ ಕೊರವಮ್ಮ ನಮ್ಮಂಬುಜಾಕ್ಷ ಬಾಹನೇನೆ ದೇವಿ ಕೊರವಮ್ಮ 92ಉಡಿಯ ಕಂದನಾಣೆ ಇಡುವೆ ನಂಬೆ ರುಕ್ಮಿಣಿ ನಾನುಡಿವ ನಾಮದಾಣೆ ಇಡುವೆ ನಂಬು ರುಕ್ಮಿಣಿ 93ಎಡದ ತೋಳು ತೊಡೆಕಂಗಳುಹಾರಲೊಳಿತೇನೆ ಚಿಲಿಪಿಲಿನುಡಿವಶಕುನಎಡದ ಗೌಳಿಯ ನುಡಿಯು ಒಳಿತೇನೆ94ಕಡಲಶಯನ ನಿನ್ನ ಪ್ರಾಣದೊಡೆಯ ಬಪ್ಪನೌ ಎನ್ನಪಡೆದನಯ್ಯ ಪ್ರಸನ್ನವೆಂಕಟಕೃಷ್ಣ ತಪ್ಪನೌ 9530ನಿನ್ನಗಂಡಬೆಣ್ಣೆಗಳ್ಳ ಕನ್ನೆಗೊಲ್ಲತಿಯರ ನಲ್ಲಕಣ್ಣೆವೆ ಸನ್ನೆಗಾರ ನಂದಗೋಪ ಕುಮಾರ 96ಚಿನ್ನತನದಿ ದಶಲಕ್ಷ ಚಿನ್ನರ ಪಡೆದನು ದಕ್ಷಪೊನ್ನ ಕೊಳಲನೂದಿ ಮೂಜಗವ ಮೋಹಿಸುವ 97ಉನ್ಮತ್ತಮಾತುಳನ್ನ ತುಳಿದ ತನ್ನ ಪೆತ್ತವರೆಡರ್ಗಳೆದಮನ್ನಿಸಿ ಪಾಂಡವರÀ ಪೊರೆದ ಚಿನ್ಮಯ ಸುಖದ 98ಪೆಣ್ಗಳ್ ಹದಿನಾರುಸಾವಿರದ ನೂರೆಂಟನಾಳ್ವ ಚದುರನಿನ್ನ ಪ್ರಾಣ ಪ್ರಿಯ ಬಂದ ಪ್ರಸನ್ನವೆಂಕಟ ಕೃಷ್ಣ ಮುಕುಂದ 9931ನುಡಿ ನುಡಿಯೆಲೆ ಬಡನಡುವಿನ ಮಡದಿ ನಿನ್ನುಡಿಗುಚಿತವಕೊಡುವೆನಡಿವಿಡಿವೆ ಮನವಿಡುವನೆ ಕಡಲೊಡೆಯ ಕೈವಿಡಿವನೆ ಎನ್ನ ಕಡೆಯ ನೋಡಿ ನುಡಿವನೆ ಸವಿನುಡಿಯಕಡು ಬಲಿಭುಜ ಗಡಣಂಗಳ ನಡುವ್ಹಂಸನಪಡಿಮಿಡುಕುವೆನುಡಿ ಬೇಗೆಂದು ಪಡೆಗೂಡಿ ಹಲಿಯೊಡನಾಗಮ ನುಡಿಯೇ ನಿನ್ನುಡಿಗಮೃತವ ಪಡೆಯೇ ಮತ್ತೀಜಡಜಡಿ ಲೋಕೊಡೆಯೆ ಪ್ರಸನ್ನವೆಂಕಟ ಕೃಷ್ಣರಾಯನನುಡಿಯೆಲೆ ನುಡಿನುಡಿಯೆ ನುಡಿನುಡಿಯೆ 10032ಹರಿಬರುತಾನೆ ಗುರುತು ಗಂಟ ಕಟ್ಟೆಪಕೇಳೆ ನರಸಿಂಗನಂಗನೆಯನೊಯಿದು ಕೆಟ್ಟನರಿಗಳಾಳಬಲ್ಲವೇನೆ ನಲಿದು ನೀನುದುರುಳರಿಗೆ ದಕ್ಕಬಲ್ಲ್ಯೇನಮ್ಮ ನಿನ್ನಾಚರಣೆಯೆಲ್ಲ ಜಗದ್ವಿಡಂಬನಮ್ಮ 101ನನ್ನ ತರಳನಾಣೆ ಸಟೆಯನಾಡೆನಮ್ಮ ನಾನೊರೆದವಾಕುಸಾಕ್ಷಿ ಬರುತಾವಮ್ಮ ಮ್ಯಾಲರಕೆಯುಳ್ಳ ತಾಯಿಯಾದರೆ ನೀ ನನ್ನಕರೆಸಿ ಕೇಳೆ ನಿನ್ನ ಮನೆಗೆ ಜಾಣೆ 102ನಿನ್ನ ಹೆಸರ ತಕ್ಕ ಊಟವ ನೀಡೀಗ ನಾಹಸಿದೆನೆಂದು ಉಂಡುಕೊರವಿಬೇಗಪ್ರಸನ್ನವೆಂಕಟ ಕೃಷ್ಣನ ರಾಣಿಗೆÉ ಹಾರೈಸಿದಳು ಬಸುರು ಬುಡುಕೆಂದು 10333ಚಕ್ಕನೆ ನಿಂತಳು ಕೊರವ್ಯಮ್ಮ ಕಂಡುಫಕ್ಕನೆ ನಿಂತಳು ರುಕ್ಮಿಣಮ್ಮ ಪ್ರಾಣದಕ್ಕರ ಬಿಡಲಾರೆ ನಿನ್ನ ಗೆಳತಿ ಪ್ರೇಮಉಕ್ಕುತಿದೆ ನೀ ಹೋಗುವುದೊಳಿತೆ ಎನಲು ನಕ್ಕು 104ಶ್ರೀ ಗೋಪಾಲ ಬಾಹನಕ ನಿಲ್ಲೆ ವಿಯೋಗ ತಾಳಲಾರೆ ನೀ ಬಲ್ಲೆಹೀಗೆನೆÀ್ನ ಬೇಡಿಕೊಂಡಳು ಮರುಳೆ ನೆನೆದಾಗೆ ಬಹೆನೆಂದ್ಹೇಳಿ ತೆರಳೆ ಅನುರಾಗದಿಂದ 105ಆವ ಪರಿಂದಾರೆ ಹರಿಸೇವೆ ಮಾಡಿದೇವಋಷಿ ನಿಜಾನಂದ ತೀವಿಶ್ರೀವರ ಪ್ರಸನ್ವೆಂಕಟ ಕೃಷ್ಣನ ಮಹತೇವಿಡಿದು ಹೊಗಳುತ ಮುನಿರನ್ನ ರಾಮೆಯಾಜÕದಿ 10634ಸುರಋಷಿಪೇಳ್ದ ಒಕ್ಕಣೆಯಹರುಷದಿ ಕೇಳ್ದ ರುಕ್ಮಿಣಿಯಅರಸ ಪ್ರಸನ್ನವೆಂಕಟ ಕೃಷ್ಣನಿರುತದಿ ಜಯ ನಮಗೀವ 107ಜಯ ಜಯ ಚಿನ್ಮಯಮೂರ್ತಿಜಯ ಜಗನ್ಮಯ ಸ್ವಚ್ಛಕೀರ್ತಿಜಯ ಜಯ ಪ್ರಸನ್ವೆಂಕಟ ಕೃಷ್ಣಜಯಮೂರ್ತಿನಿನಗೆ ಶರಣು108
--------------
ಪ್ರಸನ್ನವೆಂಕಟದಾಸರು
ನೂತನಕೆ ನೂತನ ಬಲು ನೂತನಶೇಷಗಿರಿವಾಸ ನಿನ್ನ ಮಹಿಮೆ ನೂತನವು ಪಮಾಡದನೆ ಮಾಡಿಸುವಿ ನೋಡದನೆ ನೋಡಿಸುವಿಬೇಡದಿದ್ದುದನೆಲ್ಲ ಕಾಡಿ ಬೇಡಿಸುವಿನಾಡೊಳಗೆ ನಿನ್ನ ಪೋಲುವರುಂಟೆ ಸರ್ವೇಶಮೂಡಲಗಿರಿವಾಸ ನಿನ್ನ ಮಹಿಮೆ ನೂತನವು 1ಅಣುಮೇರು ಮಾಡಿಸುವಿ ಘನತೃಣವ ಮಾಡಿಸುವಿಘನಕೃಪಾಂಬುಧಿ ನಿನ್ನ ಮಹಿಮೆ ನೂತನವೊಅಣಕವಾಡುವರಲ್ಲಿ ಕುಣಿಸಿ ಮರೆಸುತಲಿರುವಿಫಣಿಶಾಯಿ ನಿನ್ನ ಮಹಿಮೆ ಪ್ರತಿಕ್ಷಣಕೆ ನೂತನವು 2ಕಮಲಸಂಭವ ಪಿತನೆ ಕಮಲಜಾತೆಯ ರಮಣವಿಮಲ ಮುನಿಗಳ ಹೃದಯಕಮಲಶೋಭಿತನೆಕಮಲದಳನೇತ್ರನೆ ಕಮಲನಾಭ ವಿಠ್ಠಲಕಮನೀಯರೂಪನಿನ್ನ ಮಹಿಮೆ ನೂತನವೊ3
--------------
ನಿಡಗುರುಕಿ ಜೀವೂಬಾಯಿ
ಪಂಚಮಿಯ ದಿನರಂಭೆs :ಏನಿದು ಇಂದಿನವಿಭವನಮ್ಮಶ್ರೀನಿವಾಸನ ಮಹಾತ್ಮವಮಾನಿನಿರನ್ನೆ ನೀ ಪೇಳೆ ಭಕ್ತಾ-ಧೀನದ ಚರಣದ ಲೀಲೆಭಾನುಉದಯದಲಿ ವೀಣಾದಿ ಸು-ಗಾನ ವಾದ್ಯ ನಾನಾವಿಧ ರಭಸದಿ 1ಎತ್ತಲು ನೋಡಿದಡತ್ತ ಜನ-ಮೊತ್ತವಿಲಾಸವಿದೆತ್ತಚಿತ್ತದಿ ನಲಿನಲಿದಾಡಿ ತೋಷ-ವೆತ್ತಿರುವನು ಒಟ್ಟುಗೂಡಿಸುತ್ತುಮುತ್ತು ಒತ್ತೊತ್ತಿಲಿಹರು ವಿ-ಪ್ರೋತ್ತಮ ಶ್ರೀಹರಿಭಕ್ತರ ಮಯವಿದು 2ಚಾಮರ ಛತ್ರ ಸಿಗುರಿಯು ಜನ-ಸ್ತೋಮಪತಾಕೆ ತೋರಣವುಹೇಮದ ಕಂಚುಕಿ ಈಟಿ ಗುಣ-ಧಾಮನ ಬಿರುದುಗಳ್ ಕೋಟಿಆ ಮಹಾಭೇರಿ ಪಟಹ ನಿಸ್ಸಾಳಕಸಾಮಗಾನ ಸಾಮ್ರಾಜ್ಯವೋಲಿಹುದು 3ಬಾಲರು ವೃದ್ಧ ಯೌವನರು\ಜನ-ಜಾಲವೆಲ್ಲರು ಕೂಡಿಹರುಲೋಲಸ್ರೀಮುಂದ್ರಾಂಕಿತದಿ ಬಹು ವಿ-ಶಾಲ ದ್ವಾದಶನಾಮ ಮುದದಿಆಲಯದೊಳಗಿಹ ಬಾಲಕಿಯರು ಸಹಸಾಲಂಕೃತ ಸಮ್ಮೇಳದಿ ನಲಿವರು 4ಒಂದು ಭಾಗದಿ ವೇದಘೋಷ ಮ-ತ್ತೊಂದು ಭಾಗದಿ ಜನಘೋಷಇಂದಿನ ದಿನದತಿಚೋದ್ಯ ಏ-ನೆಂದು ವರ್ಣಿಸುವದಸಾಧ್ಯಚಂದಿರಮುಖಿ ಯಾರೆಂದೆನಗುಸುರೆಲೆಮಂದರಧರಗೋವಿಂದನ ಮಹಿಮೆಯ5ಪೇಳಲೇನದಾ ಮೂರ್ಲೋಕದೊಳಗೀ ವಿ-ಶಾಲವ ನಾ ಕಾಣೆ ಪ.ಸೋಜಿಗಸೌಭಾಗ್ಯ ಸಂಪದಕಿದು ಬೀಜ ಕಾಣೆಲೆರಾಜೀವನಾಭನ ಪೂಜಾವಿನೋದದಿರಾಜವದನೆ ವನಭೋಜನದಿಂದಿನ 1ನೇತ್ರದ ಕಲ್ಮಷವಡಗುವದು ಪವಿತ್ರವಾಗಿಹಗೋತ್ರಕುಮಾರಿ ಪ್ರೀತ್ಯರ್ಥದಿ ಕೊಟ್ಟಿಹರಾತ್ರಿ ಪೂಜೆ ಗೈವ ಮಾತ್ರದಿ ಪೊರಟರು 2ಇಂದಿನ ದಿನದಂದವನೂತನವೆಂದು ನೀ ಪೇಳುವಿಚಂದಿರ ಮುಖಿ ಜನಸಂದಣಿಗಳು ಮಹಾಮಂದಿ ಓಲೈಸುವರಿಂದು ಮುಕುಂದನ 3ಬಾರೆ ನಾರೀಮಣಿ ವೈಯ್ಯಾರೆ ನೀರೆ ಬಾರೆ ಪ.ನಿನ್ನಿಂದಾಯಿತ್ತು ಪುಣ್ಯ ಸಂಪಾದನೆ ಕಣ್ಣಾರೆಕಾಣುವ ಯೋಗಭೋಗ 1ಎನಗತಿ ಮನವು ನಿನಗತಿ ಛಲವುಜನುಮಾಂತರ ಪುಣ್ಯವೈಸೆ ನೀ 2ರಂಭೆ : ಏನಮ್ಮ ಬಾರಿತ್ತಲು ನೋಡೀತನ್ಯಾರಮ್ಮಾಭಾನುಕೋಟಿ ಪ್ರಕಾಶದಿಂದ ಮೆರೆವನಮ್ಮಾ ಪ.ಅನವರತದಿಂದ ಬರುವ ಪುರುಷನಲ್ಲಮೀನಕೇತನ ಶತರೂಪ ಕಾಣೆ 1ನೂತನ ಪುರುಷನಿವನ್ಯಾರೆಂದರಿಯೆನಮ್ಮಾಶಾತಕುಂಭದ ಮಂಟಪವೇರಿ ಬರುವನಮ್ಮಾ 2ಸುರುಚಿರಫಣಿಪ ಪೆಡೆ ಶಿರದೊಳಿರುವದಮ್ಮಾತರತರ ರತ್ನವರದ ಬಾಯೊಳಿರುವದಮ್ಮಾ 3ಕೊರಳೊಳು ಕೌಸ್ತುಭವ ಧರಿಸಿಕೊಂಡಿಹನಮ್ಮಾಪರಮಪುರುಷನಂತೆ ತೋರುವನು ಅಮ್ಮಾ4ಬಾಲಾರ್ಕನಂತೆ ಮುಖ ಪ್ರಜ್ವಲಿಪುದುನೀಲಮಾಣಿಕ್ಯ ಕಾಂತಿಯ ಸೋಲಿಪುದು 5ಮೂರ್ಲೋಕದೊಳಗೆ ಸರಿಯುಪಮೆತೋರಲರಿಯೆಕಾಲಿಗೆರಗುವೆನು ಪೇಳಬೇಕು ಸಖಿಯೆ 6ಕರದೊಳು ಶಂಖಚಕ್ರವ ಧರಿಸಿಕೊಂಡಿಹನಮ್ಮಾಬೆರಳೊಳು ವಜ್ರದುಂಗುರವನಿಟ್ಟವನಮ್ಮಾ 7ವರರತ್ನಖಚಿತದಾಭರಣದಿಂದ ಮೆರೆವಚರಣಸರೋಜದೊಳು ರೇಖೆಯಿಂ ಶೋಭಿಸುವ8ವಲ್ಲಭೆಯರ ಸಹಿತುಲ್ಲಾಸದಿ ಬರುವಖುಲ್ಲರ ಮಾನಸಕೆ ಝಲ್ಲೆನಿಸಿ ಮೆರೆವ 9ಬಲ್ಲಿದಪುರುಷನಿವನೆಲ್ಲಿಂದ ಬಂದಎಲ್ಲವ ಪೇಳೆಲೆಗೆ ನಲ್ಲೆ ಸದಾನಂದ 10ಊರ್ವಶಿ :ನೋಡುನಿತ್ಯಾನಂದಕರನಮೂಡಗಿರಿಯಿಂದೋಡಿ ಬಂದನ ನೋಡೆ ಪ.ಛಪ್ಪನ್ನೈವತ್ತಾರು ದೇಶಕಪ್ಪಕಾಣಿಕೆಗೊಂಬ ತೋಷಸರ್ಪಶೈಲ ರಾಜವಾಸಚಪ್ಪರ ಶ್ರೀ ಶ್ರೀನಿವಾಸ 1ತಿರುಗುತ್ತಿಪ್ಪಾ ತಿರುಮಲೇಶಶರಣ ರಾಮನ ಭಕ್ತಿಪಾಶದುರುಳಿನಲಿ ನಿಂದಿರ್ಪಶ್ರೀಶತರಿಸುವನುಕಾಣಿಕೆವಿಲಾಸ2ಪಟ್ಟದರಸನಾದ ದೇವಸೃಷ್ಟಿಯಾಳುವಜಾನುಭಾವದೃಷ್ಟಿಗೋಚರವಾಗಿ ಕಾಯ್ವಇಷ್ಟವೆಲ್ಲವ ಸಲಿಸಿ ಕೊಡುವ 3ವೃಂದ ನೆರಹಿ ವನಕೆಅಂದಣವೇರಿ ಮುಕುಂದನೊಲವಿನಲಿಕುಂದಣಮಂಟಪವೇರಿ ಮತ್ತೊಬ್ಬನುಸಂದರುಶನವಂ ನೀಡುತ ಯಿಬ್ಬರುಒಂದಾಗುತ್ತಾನಂದವ ಬೀರುತ್ತ 1ಅಕ್ಕ ನೀನೋಡುಬಹುಮಾನದಿಸಿಕ್ಕಿದಿ ಬಿರುದು ಪೊತ್ತಾತೆಕ್ಕೆಪಕ್ಕೆಯ ವಿಲಾಸ ಮನಸಿನೊಳುಉಕ್ಕುವದತಿ ತೋಷಇಕ್ಕೆಲದಲಿ ಬೀಸುವ ಚಾಮರಗಳ ವಕ್ಕಣಿಸುವಸ್ತುತಿಪಾಠಕ ಜನಗಳಮಿಕ್ಕಿ ನೊಡುವ ನೋಟಕೆ ಮನಸಿನೊಳುಝಕ್ಕೆನ್ನುವ ಕ್ಷಿತಿಗಕ್ಕಜ ತೋರುತ್ತಾ 2ಛತ್ರ ಚಾಮರ ತೋರಣ ಪತಾಕೆಪವಿತ್ರ ನಿಶಾನಿಧಾರಣಾಸುತ್ರಾಮಾರ್ಚಿತ ಚರಣಭಕ್ತರನುಪವಿತ್ರಗೈಯುವ ಕಾರಣಮಿತ್ರಮಂಡಳವನು ಮೀರಿ ಪೊಳೆವುತಿಹರತ್ನಖಚಿತ ಮಂಟಪದಲಿ ಮಂಡಿಸಿಧಾತ್ರಿಯೊಳಗೆ ಅನ್ಯತ್ರವಿಲ್ಲೆಂಬುವಕೀರ್ತಿಯ ಧರಿಸಿ ಜಗತ್ರಯಪಾವನ 3ವಾಲಗಶ್ರುತಿಭೇರಿಡಿಂಡಿಮನಿಸ್ಸಾಳ ಪಟಹಭೂರಿತಾಳ ಮೃದಂಗ ರವದಿಂದಜನಜಾಲಕೂಡಿರುವಮೇಳವಿಸುತ್ತನುಕೂಲಿಸಿ ಬಹು ಬಿರುದಾಳಿಗೆ ಸಂಭ್ರಮದೇಳಿಗೆಯಿಂದಲಿಕೋಲು ಪಿಡಿದು ಓಹೋಯೆಂಬಂಥ ವಿ-ಶಾಲ ಭಕ್ತರ ಮೇಲು ಸಂತೋಷದಿ 4ದೇಶದೇಶದ ಜನರು ನಾನಾ ವಿಧಭಾಷೆ ಪ್ರವರ್ತಕರುಆಶಾಪಾಶರು ಪಾತಕಮಾನಸ-ರೀ ಸಮಯದಿ ಶ್ರೀನಿವಾಸನೆ ಎಮ್ಮಯದೋಷಗಳೆಲ್ಲವ ನಾಸಿಸು ಯೆನುತಭಿ-ಲಾಷೆಯ ಜನಗಳ ಪೈಸರದಿಂದಲಿ 5ವೇದಶಾಸ್ತ್ರಪೌರಾಣಪ್ರಜÕರು ತರ್ಕವಾದಿಪಾಠಕ ಜಾಣಸಾಧು ಕುಶಲದಿ ವಿದ್ಯಾಪ್ರವೀಣವಿನೋದ ಸಿದ್ಧ-ಸಾಧ್ಯ ಸಾದರದಿಂದ ಸರಸಕವಿ ವಾಗೀಂ-ದ್ರಾದಿಗೀರ್ವಾಣಸಮುದಾಯದಿಂದ ಕೃ-ಪೋದಯ ತೋರುತ್ತಾದಿಮೂರುತಿ ಜಯ-ನಾದದಿ ಭಕ್ತರಮೋದಪಡಿಸುತ್ತಾ6ರಂಭೆ : ನಾರಿ ಕೇಳೆ ಶ್ರೀರಮಾಧವಸ್ವಾರಿ ಪೊರಟ ಕಾರಣ ಪೇಳೆ 1ಯಾವ ರಾಜ್ಯದಿ ಪ್ರಭುದೇವಸ್ವಾರಿಯಠೀವಿಯ ಕಾಣೆ ಅಂತರ್ಭಾವವೇನೆ 2ಭೂರಿದೇಶವ ಸಂತತಪ .ವೀರವೈಷ್ಣವ ಭಕ್ತರು ಸದ್ಭಕ್ತಿಯಸಾರದಿ ನಿಲಿಸಿದರುಮಾರಜನಕನಿಗೆ ಮನನಿಲ್ಲದೆ ಸಂ-ಚಾರಕೆ ತಾ ಮೈದೋರಲು ಬೇಕೆಂ-ಬೀ ರೀತಿಗೆ ತಾ ಪೂರ್ವಸ್ಥಾನ ವಿ-ಚಾರಕೆ ಬಂದಿಹ ಕಾರಣವೀಗಲೆ 1ರಾಜ ಬಂದನೆ ಅಮ್ಮಾ ಆಶ್ರಿತಸುರ-ಭೂಜಬಂದನೆ ಅಮ್ಮಾಓಜೆಯಿಂದಲಿ ಕಾಣಿಕೆಯನ್ನು ಒಪ್ಪಿಸಿರಾಜಕದಿವ್ಯಾರತಿಯನು ಎತ್ತುತರಾಜೀವನಾಭನೆ ರಕ್ಷಿಸೆನುತ್ತಲಿಸೋಜಿಗಪಟ್ಟೆಲ್ಲಾಜನವಿರ್ದುದು 2
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಿನ್ನಪಲಾಲಿಸಯ್ಯ ಭಕ್ತಪರಾಧ-ವನ್ನು ಕ್ಷಮಿಸಬೇಕಯ್ಯ ಪ.ಅನ್ಯಾಯ ಕಲಿಕಾಲಕ್ಕಿನ್ನೇನುಗತಿಸುಪ್ರ-ಸನ್ನ ನೀನಾಗು ಸುಬ್ರಹ್ಮಣ್ಯ ಪಾವನಚರಿತ ಅ.ಪ.ಮಕ್ಕಳ ಮಾತೆಯಂದದಿ ಕಾಯುವ ಮಹ-ದಕ್ಕರದಿಂದ ಮುದದಿಸೊಕ್ಕಿನಿಂ ನಡೆವರ್ಗೆ ತಕ್ಕ ಶಿಕ್ಷೆಯನಿತ್ತುರಕ್ಕಸಾರಿಯೆ ಹಿಂದಿಕ್ಕಬ್ಯಾಡೆಮ್ಮನುದಿಕ್ಕಿಲ್ಲದವರ ಧಿಕ್ಕಾರ ಗೈದರೆಮಿಕ್ಕವರೆಮ್ಮನು ಲೆಕ್ಕಿಪರಿಲ್ಲ ದೇ-ವರ್ಕಳಮಣಿ ನಿನಗಕ್ಕಜವಲ್ಲವುಕುಕ್ಕುಟಧರವರ ಮುಕ್ಕಣ್ಣತನಯ 1ಜಾತಿ ನೀತಿಯನು ಬಿಟ್ಟು ಡಾಂಭಿಕತನದರೀತಿಗೆ ಪ್ರೀತಿಪಟ್ಟುಸೋತು ಹಣವ ಕೊಟ್ಟು ಖ್ಯಾತರೆಂಬುವಗುಟ್ಟುಮಾತು ಮಾತಿಗೆ ತೋರಿ ಘಾತವ ಗೈವರ್ಮೀರಿಯಾತುಧಾನರಗುಣಯಾತಕ್ಕರಿಯದುಭೂತೇಶ್ವರಸಂಜಾತ ಸುರನರ-ವ್ರಾತಾರ್ಚಿತ ಪುರಹೂತಸಹಾಯಕನೂತನಸಗುಣವರೂಥಪುನೀತ2ಯಾವ ಕರ್ಮದ ಫಲವೋ ಇದಕಿ-ನ್ಯಾವ ಪ್ರಾಯಶ್ಚಿತ್ತವೋಯಾವ ವಿಧವೊ ಎಂಬ ಭಾವವರಿತ ಪುರುಷಈ ವಸುಧೆಯೊಳಿಲ್ಲ ಶ್ರೀವಾಸುದೇವ ಬಲ್ಲದೇವ ಲಕ್ಷ್ಮೀನಾರಾಯಣನಪಾದಸೇವಕನೀ ಮಹಾದೇವನ ಸುತ ಕರು-ಣಾವಲಂಬಿಗಳಕಾವನಮ್ಮಯ ಕುಲ-ದೇವ ವಲ್ಲೀಪತಿ ಪಾವಂಜಾಧಿಪ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಭೀಮ ಶ್ಯಾಮ | ಕಾಮಿನಿಯಾದನೂ ಪಹೆಂಗಳೆ ನೂತನ ಶ್ರೀಂಗಾರವಾದನುಉಂಗುರಗೂದಲೊಳಿಂಗಿಸಿ ರಾಗಟಿ ||ಹಿಂಗೂವ ತೆರ ಕಳಿಂಗನ ವೇಣಿಗೆರಂಗನಿಕ್ಕಿದ ಚವುರಿಂಗೆ ಗೊಂಡೆಯೂ ||ತಿಂಗಳರ್ಧಾಫಣಿಮಂಗಾಳ ಕುಂಕುಮಕಂಗಳಿಗೆ ಕಪ್ಪು ಭಂಗಾರದೋಲಿಯು ||ಜಂಗು ಬ್ಯಾಳೀ ಸರ ಅಂಗಾಜ ಸತಿಯಭಂಗೀಪ ಚಲುವ ಅಂಗವಾದ 1ಏಕಾವಳಿಸರ ತೂಕದ ಸರಿಗೆ |ಲೋಕದೊಳಿಲ್ಲದ ಬೇಕಾದ ಭಾಪುರೆ ||ಹಾಕೀದ ಚಿತ್ರ ಕಂಚೂಕವ ಬಿಗಿದ-ನೇಕಪರಿವಸ್ತವೂ ಕರಕೇ ||ಆ ಕಂಠೀರವನ ಸೋಲಿಪ ಕಟಿಪಟ್ಟಿಸೋಕೆಯಿಳೀ ಸೀರಿ ಮೂಖ ಹರಿದ್ರ ನಾ- |ಸೀಕಾದಿ ಮೂಗುತಿಯು ಕಟ್ಟಿದಾ ಗಿಳಿಯಾಕಾನಾ ಬಾವುಲಿಯೂ ಕಿವಿಗೇ 2ಲುಲ್ಲುರುಳೀ ಪದದಲ್ಲಿ ಕಡಗಾವುಘಲ್ಲೆಂಬೊ ಗೆಜ್ಜಿಯ ಬಲ್ಲೀದ ಶಬ್ದವು ||ಎಲ್ಲೆಲ್ಲಿ ಜಗದೋಳಿಲ್ಲದ ಪರೀಯಪಿಲ್ಲ್ಯಾವನ್ನು ಬಟ್ಟಿನಲ್ಲಿಟ್ಟಾನೋ ||ಕೊಲ್ಲೂವೆನುವ ಆವಲ್ಲಿಹನೆನುತಹಲ್ಲು ತಿನುತಾಲಿಸೊಲ್ಲುಸೊಲ್ಲೀಗೆ ತಾ |ಕುಲ್ಲೂತ ಪಾತಕಿದ್ದಲ್ಲಿಗೆ ನಡೆದನಿಲ್ಲಾದೆದನುಜದಲ್ಲಾಣನೂ 3(ಈ ಪದವನ್ನು ದಾಸರಾಯರ ಕೃತ ಭೀಮಸೇನ ವಿಲಾಸದಿಂದ ಸಂಗ್ರಹಿಸಿದೆ.)
--------------
ಪ್ರಾಣೇಶದಾಸರು
ಮಾಧವಾನಂತ ಗೋವಿಂದಗೆ ಮಂಗಳಸಾಧು ಜನರ ಆನಂದಗೆ ಮಂಗಳಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನೂತನ ಜಲಧರಗಾತ್ರಗೆ ಮಂಗಳ |ಪೀತಾಂಬರಧರ ನಿಜಸೂತ್ರಗೆ ಮಂಗಳ1ಅಂಬುಜನಾಥ ದಾಮೋದರಗೆ ಮಂಗಳಕಂಬುಚಕ್ರಾಬ್ಜ ಗದಾಧರಗೆ ಮಂಗಳ2ಮಂದಹಾಸನ ಲಕ್ಷ್ಮೀಲೋಲಗೆ ಮಂಗಳ |ಕಂದ ಗಿರೀಶ ಪೋಷಿಸುವಗೆ ಮಂಗಳ3
--------------
ಜಕ್ಕಪ್ಪಯ್ಯನವರು
ರಂಗ ರಥವನೇರಿದನಕ್ಕ- ಮೋಹ- |ನಾಂಗ ನಮ್ಮ ಸೇರದೆ ಪೋಗುವನಕ್ಕ ಪಮಾತುಳಮಥರೆಯೊಳಿಹನಂತೆ - ಅಲ್ಲಿ |ಮಾತಾಪಿತರಿಗೆ ಬಂಧನವಂತೆ, ಇವರು |ನೂತನ ಬಿಲ್ಲಿನ ಅರ್ಥಿಗಳಂತೆ ||ಪೀತಾಂಬರಧರನ ಪೂಜೆ ನೋಡುವೆನೆಂಬ |ಆತುರದಿಂದಿರೆ ಅಕ್ರೂರನೊಡನೆ ಈಗ 1ಬಲರಾಮ ಬಂಧುವಿನೊಡಗೂಡಿ ನಂದ-|ನಡಿಗೆ ಯಶೋದೆಗೆ ವಂದನೆ ಮಾಡಿ-ತಾವು |ಬಿಡಲಾರೆವೆಂದು ಭಾಷೆಯ ನೀಡಿ ||ತಡೆಯೆನೆನುತ ತಾಯಿಗೆ ಭರವಸೆಯಿತ್ತು |ಕಡಲಶಯನನು ಕಾತರದಿಂದಲಿ ಈಗ 2ಮಧುರಾ ಪಟ್ಟಣದ ಮಾನಿನಿಯರು ಅತಿ |ಚದುರೆ ಚೆಂಚಲೆ ಚಾಪಲತೆಯರು-ನಮ್ಮ |ಮದನನಯ್ಯನ ಮೋಹಿಸುತಿಹರು ||ಕಧಿಜನಾಭ ನಮ್ಮ ಪುರಂದರವಿಠಲ |ಪದುಮನಾಭನ ಪಯಣವ ನಿಲ್ಲಿಸಕ್ಕ 3
--------------
ಪುರಂದರದಾಸರು
ವರುಣಗೂ ನಾರಾಯಣಗು ನೆಂಟತನ ಮಾಡುವದಕೆ |ಸರಿಯೆ ಸಂದೇಹವೇನು ಸಮ್ಮೀಸಿ ನೋಡಿರಿ ಪಹೆಂಡಾರು ಬಹು ಮಂದಿ ಜಾರಾ ಪುತ್ರನು ಒಬ್ಬ |ಪಂಡೀತ ಮಗನೊಬ್ಬ ಸಮನೆಲ್ಲಿ ನೋಡಿ1ವಂಶಾ ವಂದೆ ಇಬ್ಬರದು ಛಲದಿಂದ ಕೊಲ್ಲುವಂಥಾ |ಕೂಸು ಪಾಲಿಸಿದಾರು ಸಮನೆಲ್ಲಿ ನೋಡಿ 2ಸ್ಥೂಲಾ ವಿಗ್ರಹದವರು ಜಡ ಚೇತನಗಳಿಗೆ |ಆಲಯವಾಗಿಹರು ಸಮನೆಲ್ಲಿ ನೋಡಿ 3ಕನಕಾ ಭೂಮಿ ವಜ್ರದಾಹಾರ ಒಬ್ಬಾಗೊಬ್ಬಾಗೆ |ವನಮಾಲಿವೈಜಯಂತಿಸಮನೆಲ್ಲಿ ನೋಡಿ 4ತುಳಿಸೀಕೊಂಡೂ ಕೋಪಿಸದೆಲೆವೇ ಹಿಗ್ಗಿದಾರು |ಕಲುಷಾ ವಿದೂರರೂಪಸಮನೆಲ್ಲಿ ನೋಡಿ 5ದ್ವಾರಕ ಪಟ್ಟಣವ ಪ್ರೀತಿಂದ ಪಾಲೀಸೀ |ಹಾರಾವ ಮಾಡಿದಾರು ಸಮನೆಲ್ಲಿ ನೋಡಿ 6ವೃದ್ಧಿ ಹ್ರಾಸಗಳಿಲ್ಲಾ ಅನ್ನಾದಾಪೇಕ್ಷವಿಲ್ಲ |ನಿದ್ರಾ ಶೂನ್ಯರಾಗಿಹರು ಸಮನೆಲ್ಲಿ ನೋಡಿ 7ಸರಸೀಜಾರೂಪಉಳ್ಳವರು ಪೂರ್ತಿ ಮಾಡಿದಾರು |ಸುರರಾ ಮನೋಭೀಷ್ಟಿಯಾ ಸಮನೆಲ್ಲಿ ನೋಡಿ 8ವಿಧಿಯಿಂದ ಜನಿಸಿದಾರು ಜನರೀಗಸಹ್ಯವಾಗಿ |ಒದರುವರು ಇದರಿಂದ ಸಮನೆಲ್ಲಿ ನೋಡಿ 9ನೂತನ ಯಜೊÕೀಪವೀತಾವ ಧರಿಸುವರು ಪ್ರ- |ಖ್ಯಾತಿ ವಸ್ತು ಕೊಟ್ಟಾರು ಸಮನೆಲ್ಲಿ ನೋಡಿ 10ದಾರಿ ತೋರಿದಾರು ವಾನರಾಗಳಿಗೆ ಗುಂಜಿ |ಹಾರಾಯೀಸೂವರಿದು ಸಮನೆಲ್ಲಿ ನೋಡಿ11ವಾಸಾವಿವರ್ಜಿತಾರು ದ್ವೇಷಿಗಳ ಶರೀರ |ನಾಶಾಗೈಸಿದರಿದು ಸಮವೆಲ್ಲಿ ನೋಡಿ12ಶೋಧಿಸೀ ನೋಡಿದಾರೆ ಕರ್ದಾಮ ಜಾಲಯಳ |ಭ್ಯೋದಯಕ್ಕೆ ಕಾರಣರು ಸಮವೆಲ್ಲಿ ನೋಡಿ13ಧರಿಗಾನಂದಾವಿತ್ತಾರಾಲಂಕಾರವಾಗಿ ಖಳರಾ |ತರಿದು ಭಾರವ ಕಳದು ಸಮವೆಲ್ಲಿ ನೋಡಿ 14ಶ್ರೀನಿವಾಸಾಗೆ ಮಾವನೀತಾ ನೀತಾಗು ಹಾಗೆ |ಪ್ರಾಣೇಶ ವಿಠ್ಠಲನು ಸಮವೆಲ್ಲಿ ನೋಡಿ 15
--------------
ಪ್ರಾಣೇಶದಾಸರು
ಶ್ರೀ ಆಂಗೀರಸ ನಾಮ ಸಂವತ್ಸರ ಸ್ತೋತ್ರ149ಶ್ರೀ ಲಕ್ಷ್ಮೀ ಭೂಮಾ ನೃಸಿಂಹನ್ನ ಆರಾಧಿಸಿಶೀಲ ಉದ್ಭಕ್ತಿಯಲಿ ಸ್ತುತಿಸುವ ಶನೈಶ್ಚರಇಳೆಯಲ್ಲಿ ವಿಂಧ್ಯಾಚಲ ದಕ್ಷಿಣ ದೇಶದಲಿ ಹೊಳೆಯುತಿಹÀರಾಜನಾಗಿ ಆಂಗೀರಸ ಸಂವತ್ಸರದಿ ತಂ ನಮೋ ಪಸೂರ್ಯಛಾಯಾಸೂನುಸೂರಿಸಾಧುಗಳಿಗೆಕಾರ್ಯಾನುಕೂಲ ಸರ್ವೇಷ್ಟ ಪೂರೈಸುವನುಕ್ರಿಯಾ ರೂಪದಿ ವಿಷ್ಣುವರವಾಯು ದೇವನೊಳು ಇರುತಸಂವತ್ಸರ ನಾಯಕರೋಳು ಕ್ರಿಯೆಗಳ ಮಾಡಿಸುವ 1ನರಹರಿಯ ಒಲುಮೆ ಶನಿರಾಜನಲಿ ಬಹು ಉಂಟುನರಕ್ಷೇಮೋಪಾಯ ಅಂದು ದಶರಥಗೆ ಪೇಳಿದ ಪಾದ್ಮದಿಹರಿನಾಮೋಚ್ಛಾರಣೆ, ಶನಿಕೃತ ನೃಹರಿ ಸ್ತೋತ್ರ ಪಠಣದಿಪಾರುಗಾಣುವರು ಸಾಧು ಸಜ್ಜನ ಭಕ್ತರು 2ಅನಂದಮಯ ಹರಿಯು ಆಂಗೀರಸ ಸಂವತ್ಸರದಿಜನರಿಗೆ ಯೋಗ್ಯತಾನುಸಾರ ಸುಖವನ್ನೇಈವಜನರಿಗೆ ಆದಿಯಲಿ ಸುಕ್ಷೇಮ ಕಾಲವು ಕಥೆಯಲ್ಲಿ ದುರ್ಭಿಕ್ಷನೂತನ ವಸ್ತು ಉತ್ಪತ್ತಿ, ಧಾನ್ಯಾದಿಗಳು ಸಮೃದ್ಧಿ ಇದ್ದರೂ ಕ್ಷಾಮ 3ಬ್ರಹ್ಮಪಾರ ಸ್ತೋತ್ರವ ಕಂಡು ಋಷಿಗೆ ಉಪದೇಶಿಸಿದಬ್ರಾಹ್ಮಣೌಷಧಿ ಪತಿಯು ಸುಧಾಮೂರ್ತಿ ಚಂದ್ರಮಹಿಗೆ ಅಹ್ಲಾದವ ನೀವನು ಮಂತ್ರಿಸ್ಥಾನವ ವಹಿಸಿಅಜಸ್ಪತಿ, ಬೃಹಸ್ಪತಿ, ಶನಿಕುಜಗೋಪಾಲಸರ್ವರಿಗೂ ನಮೋ ನಮೋ 4ರಸನೆ ಲೋಲ್ಯಾಟವಾಹನಆಟೋಪ ಹೆಚ್ಚಿದರೂರಸನೆ ಸಹ ಭಕ್ತಿಯೂ ಸಹ ಹೆಚ್ಚುವುದು ಮದುವೆ ಜನನ ಕಡಿಮೆಶಾಸ್ತ್ರ, ವಿಜ್ಞಾನ, ವಿಷ್ಣು ಸಹಸ್ರನಾಮ ಪ್ರತಿಪಾದ್ಯಸರಸಿಜಾನನತಾತಪ್ರಸನ್ನ ಶ್ರೀನಿವಾಸನಲಿ ಶರಣು ಶರಣಾದೆ5ಶ್ರೀ ಲಕ್ಷ್ಮೀ ಭೂಮಾ ನೃಸಿಂಹನ್ನ ಆರಾಧಿಸಿಶೀಲ ಉದ್ಭಕ್ತಿಯಲಿ ಸ್ತುತಿಸುವ ಶನೈಶ್ಚರಇಳೆಯಲ್ಲಿ ವಿಂಧ್ಯಾಚಲ ದಕ್ಷಿಣ ದೇಶದಲಿ ಹೊಳೆಯುತಿಹರಾಜನಾಗಿ ಆಂಗೀರಸ ಸಂವತ್ಸರದಿ ತಂ ನಮೋ ಪ
--------------
ಪ್ರಸನ್ನ ಶ್ರೀನಿವಾಸದಾಸರು