ಒಟ್ಟು 754 ಕಡೆಗಳಲ್ಲಿ , 84 ದಾಸರು , 658 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದು ಹೊಂದಿಕೆಯಲ್ಲಾ ಭಕುತಿಗೆ ಪ ಗುರುವೆಂದಾಡುತ ನೆರೆನರನಂಬಿ | ಪರಗತಿ ಮಾರ್ಗವ ಎಂತು ನೀ ಕಾಂಬಿ 1 ಕಲ್ಲಿನೊಳಗ ಹರಿಭಾವಿಸಿ ನುಡಿವೀ | ಇಲ್ಲಿ ನೋಡೆಂದರ ಸಂಶಯ ಹಿಡಿವೀ 2 ನುಡಿಯಾಪಸಾರ ಸಂಗಡಿಯೊಳು ಬೆರೆದು | ಧೃಡಗೊಳ್ಳಲಿಲ್ಲ ವಿವೇಕದ ಸಂದು 3 ಹಮ್ಮಿಲಿ ಕೇಳದೇ ಜ್ಞಾನದ ಗುಟ್ಟು | ಧರ್ಮ ಜರಿದು ಜನ ಹೋಯಿತು ಕೆಟ್ಟು 4 ತಂದೆ ಮಹಿಪತಿ ಕರುಣಿಸದನಕಾ | ಎಂದಿಗೆ ದೊರೆಯದು ಸ್ವಾತ್ಮದ ಸುಖಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದೇ ಪರಮಾರ್ಥ ಪ್ರಾಪ್ತಿಗೆ ಸೋಪಾನ ತಿಳಿ ಇದರಲ್ಲಿ ಬೇಡಿನ್ನು ಅನುಮಾನ ಇದೇ ಬಕುತಿಮಾರ್ಗವೇ ಸುಲಭ ಸೋಪಾನ ತಿಳಿ ವೈರಾಗ್ಯಜ್ಞಾನಾದಿಗಳ ತಾಣಾ ಪ ಸಂಸಾರದೊಳಗಿರ್ದ ಜೀವಂಗೆ ಸುಖದುಃಖದಿ ಬಳಲುವ ಮನುಜಂಗೆ ಕಂಸಾರಿ ಶ್ರೀ ಕೃಷ್ಣನಾಮವೊಂದೇ ಪಾಪ ಸಂಹಾರಿ ಪರಶಿವನಾಮವೊಂದೇ ಈ ಸಂಸಾರ ದಾಂಟುವಾ ನಿಜತಾಣಾ1 ನಿಷ್ಕಾಮ ಮನದಿಂದ ಭಜಿಸಲ್ಕೆ ಬಹು ದುಷ್ಕರ್ಮ ಫಲವೆಲ್ಲ ತೊಲಗಲ್ಕೆ ಶ್ರೇಷ್ಠ ವೈರಾಗ್ಯವು ನೆಲೆಸಲ್ಕೆ ಬಲು ಜಿಜ್ಞಾಸೆ ಮನದಲ್ಲಿ ಜನಿಸಲ್ಕೆ ಈ ಪರಮಾತ್ಮಧ್ಯಾನ ಮಹಾಸಾಧನಾ 2 ಆತ್ಮಜ್ಞಾನದ ಬೋಧನೆಗೊಂಡು ಪರಮಾತ್ಮನ ರೂಪವೆ ತಾನೆಂದೂ ಬರಿ ತೋರ್ಕೆ ಜಗವೆಲ್ಲ ಪುಸಿ ಎಂದೂ ಪರಮಾತ್ಮನೆ ನಿತ್ಯನು ನಿಜವೆಂದೂ ಪರಜ್ಞಾನವ ನೀಡಲ್ಕೆ ಈ ಸಾಧನ 3 ಪರಮಾರ್ಥನುಭವಿಗಳ ಸಂಗ ನೆರೆದೊರಕುತಲಿರುತಿರೆ ಭವಭಂಗ ವರ ಭಕ್ತಿ ಮಾರ್ಗದಿ ದೊರಕುವದೆಂದ ಇದೆ ಪರಮಾರ್ಥ ಪ್ರಾಪ್ತಿಗೆ ಮೂಲವೆಂದ ಇದೆ ಗುರುಶಂಕರಾನಂದಕೃಪೆಯಿಂದ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇವೆ ಬಂದದಾ ಖೂನವು | ಇದೇವೆ ಸಾರ್ಥಕ ಜನುಮವು ಪ ಹೊತ್ತು ಹೋಗದ ಬೀದಿ ಮಾತುಗಳಾಡದೆ ಚಿತ್ತಕ ಆಲೇಶ ತರಗುಡನು ಉತ್ತಮರೊಳುಕೂಡಿ ಶ್ರೀಹರಿ ಮಹಿಮೆಯಾ ನಿತ್ಯ ಕಥಾಮೃತ ಸೇವಿಪನು 1 ಹಾಲವನೆರೆದರೆ ಸರಕನೆ ಕುಡಿಯದ ಬಾಲಕನಂದದಿ ಈ ಮನವು ಕಾಲಕಾಲಕ ಸದ್ಭೋದವ ಕೇಳಿಸಿ ಮ್ಯಾಲ ಸ್ವಹಿತ ಕೊಡುವನು 2 ಉದರದ ಧಾವತಿಗನುದಿನ ಬೆರತಿರ ಇದರೊಳಗೆಚ್ಚರ ಹಿಡಿದಿಹನು ಮದಮತ್ಸರಳಿದು ಗುರುಮಹಿಪತಿ ಪದ ಪದುಮದಹಿಷ್ಠೆಯ ಜಡಿದಿಹನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇನಿತೆಂದು ಶಾಸ್ತ್ರ ಪೇಳುವವು ಪ ಪುನಹ ಪುನಹ ಭಗವತ್ಪ್ರಾಪ್ತಿ ಬೇಕೆಂಬುವರಿಗೆ ಅ.ಪ. ಅನುಬಂಧಿಗಳಲಿ ಮಮತೆಯನೆ ಬಿಡು ವಿಷಯ ವಾ ಸನೆಯನೀಡಾಡು ಸುಜ್ಞಾನ ಭಕ್ತಿಯ ಬೇಡು ಮನದಲ್ಲಿ ಹರಿಯ ಮೂರ್ತಿಯನೆ ನೆರೆ ನೋಡು ಸುಜ್ಞ ರನು ಕೊಂಡಾಡು ಅಜ್ಞಾನಿಗಳ ಸಹವಾಸ ಸುಡು ವನಜನಾಭನ ಪೂಜೆ ಮಾಡು ಪ್ರತಿ ಕ್ಷಣ ಬಿಡದೆ ಭಗವದ್ಗುಣಗಳ ಕೊಂಡಾಡು 1 ಪರಮಾಣು ಮೊದಲ್ಗೊಂಡು ವ್ಯಕ್ತ ತತ್ತ್ವದೊಳ ಹೊರಗೆ ವ್ಯಾಪಕನಾಗಿ ತದ್ರೂಪ ನಾಮದಿಂ ಕರೆಸುತಲಿ ತದ್ವಿಕಾರಗಳಿಲ್ಲದಲೆ ಸೃಷ್ಟಿ ಪರಿಪಾಲನೆ ಲಯಗಳನೆ ಮಾಡಿ ಮೋದಿಸುತಾ ಪರಮಾತ್ಮನೊಬ್ಬನಿಹನೆಂದು ಹರಿಗೆ ಮರೆಯದಲೆ ಮಹಿಮೆಗಳ ಪೊಗುಳುತಿರು ಮನುಜಾ 2 ಹರಿಭಕ್ತರಿದ್ದೆಡೆಗೆ ಹರಿದು ಹೋಗಲಿ ಬೇಕು ತಿರಿಯ ಕ್ಪುಂಡ್ರಗಳ ನಿಂದಿಸಬೇಕು ಹರಿಯ ನಾಮತ್ರಯಾಂಕಿತರಿಗೆರಗಲು ಬೇಕು ಗುರು ಹಿರಿಯರ ವಗುಣಗಳೆಣಿಸದಿರ ಬೇಕು ಮ ತ್ಸರವ ಬಿಡಬೇಕು ಭಕ್ತರಲಿ ಹೀಗೆ ಒರೆದೊರೆದು ಪೇಳುವರು ಬುಧರು ನಿತ್ಯದಲಿ 3 ನಿತ್ಯ ನೈಮಿತ್ತಿಕ ಸುಕರ್ಮ ಮಾಡಲು ಬೇಕು ಕೃತ್ಯವಲ್ಲದೆ ಲೋಕವಾರ್ತೆಗಳ ಬಿಡಬೇಕು ಚಿತ್ತದಲಿ ಹರಿಪಾದ ಚಿಂತಿಸುತಲಿರಬೇಕು ವಿತ್ತದೇಹಾಗಾರ ಭಗವಂತನದೆಂದು ದೇ ಪರಿಯಂತ ಮಾಳ್ಪ ಕರ್ಮ ಸತ್ಯಸಂಕಲ್ಪಕಿವು ಪೂಜೆ ಎನಬೇಕು 4 ಸೀತೋಷ್ಣ ಸುಖ ದುಃಖ ಮಾನಾಪಮಾನ ಜಯ ಭೀತಿ ನಿರ್ಭೀತಿ ಅಪಜಯ ಜ್ವರಾಪಸ್ಮಾರ ಭೂತ ಬಾಲ ಗ್ರಹ ಮೃಗಸರ್ಪ ನೃಪ ಚೋರ ಯಾತನೆಗೆ ಭಯಪಡದೆ ಸರ್ವತ್ರದಲಿ ಜಗ ನ್ನಾಥವಿಠ್ಠಲನ ಸ್ಮರಿಸುತಿರು ಮಹಾ ಪಾತಕವ ಪರಿಹರಿಸಿ ಪೊರೆವ ದಯದಿಂದಾ 5
--------------
ಜಗನ್ನಾಥದಾಸರು
ಇನಿಯಗೆನ್ನೊಡನೆ ಮುನಿಸೋ ಪ್ರೀತಿಯೋ ಪೇಳೆವನಜಾಕ್ಷಿಯವನೆಸಗಿದುದಾ ಪೇಳ್ವೆನೆ ಪ ಮೃಗಮದ ತಿಲಕವ ಪಣೆಗೆ ತಾನಿಡಲಿಲ್ಲಅಗಿಲುಗಂಧವ ಮೈಗೆ ತೀಡಲಿಲ್ಲ ಸೊಗಸು ಸಂಪಿಗೆ ಸರವಮುಡಿಸಿ ಝಗಝಗಿಪ ಮುತ್ತಿನ ಸರವಹಾಕದೆ ಎನ್ನ ಮುಗುಳು ಮೊಲೆಗೆಸೆಳ್ಳುಗುರಿಕ್ಕದಿದ್ದ ಮೇಲೆ1 ಗುರುಕುಚರ್ಚಿತ ಮೃಗಮದ ಪತ್ರವ ಸೆರಗಿನಿಂದೊರಸಿದನೆಕುಂಕುಮಗಂಧವ ಭರದಿ ಲೇಪಿಸಿದನೆ ತಾನೆತಾಂಬೂಲವ ಹರುಷದಿ ಕರದಿತ್ತನೆಆಲಿಂಗಿಸಿ ಪರಮ ಸಂತೋಷದಿ ತಿರುಗಿ ನೋಡಿದನೆ 2 ಧರಿಸಿದ ಮಿಸುನಿಯ ಆಭರಣಂಗಳ ಭರದಿಂದ ತೆಗೆದ ತಾನೆಚಿನ್ನದುಂಗುರವ ಬೆರಳಿಗೆ ನಲಿದಿಟ್ಟನೆತರುಣಿ ಬಾರೆಂದು ನಂಬುಗೆಗೊಟ್ಟನೆಶ್ರೀ ಕೆಳದಿಯ ಪುರದ ರಾಮೇಶ ಎನ್ನನೆರೆದು ಮನ್ನಿಸಿದನೆ3
--------------
ಕೆಳದಿ ವೆಂಕಣ್ಣ ಕವಿ
ಇನ್ನಾದರೂ ದಯಬಾರದೇ ದಾಸನಮೇಲೆ ಇನ್ನಾದರೂ ದಯಬಾರದೇ ಪ ಪನ್ನಗ ಶಯನನೇ ಚೆನ್ನಕೇಶವನೇ ನಿಂನ್ನನು ನಂಬಿದ ಶರಣನಮೇಲೇ ಅ.ಪ ಹಲವು ಯೋನಿಗಳಲ್ಲಿ ನೆರೆ ಪುಟ್ಟಿ ಬಂದೇ ಹಲವು ಯಾತನೆಗಳ ಸಹಿಸುತ್ತ ಬಂದೇ ಹಲವು ರೀತಿಗಳಿಂದ ದುಃಖವ ತಿಂದೇ ಸಲೆ ನಂಬಿ ಹರಿಗೀಗ ಶರಣೆಂದು ಬಂದೇ 1 ಸೇರಿ ಬಗೆಯುತಲಿವೆ ಪಂಚ ವ್ಯಾಘ್ರಗಳೂ ಗಾರು ಮಾಡುತಲಿದೆ ಅಹಂ ಎಂಬ ಸಿಂಹವು ಶೆರಿಯ ಭಜಿಸುತ್ತ ಬಲೆದಾಟಿ ಬಂದೇ 2 ಬಂಧು ಬÁಂಧವರೆಂಬ ಕ್ರೂರವರ್ಗಗಳೆನ್ನ ತಿಂದು ಸುಲಿಯುತಲಿವೆ ವಂಚಿಸಿ ಹರಿಯೇ ಅಂದದಿ ದೂರ್ವಾ ಪಟ್ಟಣದಿ ನಿತ್ತಿರುವಂಥ ಸಿಂಧು ಶಾಯಿಯೇ ರಂಗ ಸಲಹೆನ್ನ ತಂದೇ 3
--------------
ಕರ್ಕಿ ಕೇಶವದಾಸ
ಇನ್ನಾರೆ ನೆರೆ ತಿಳಿ ನಿಜ ಹಿತವನು ಪ ಇನ್ನಾರೆ ನೆರೆ ತಿಳಿ ನಿಜ ಹಿತವನು | ನಿನ್ನೊಳು ನೀನು ಮರಳು ಮನವೇ | ತನ್ನ ಹಿತವ ತಾ ನರಿಯದೆ ಮರೆದು | ದಣ್ಣನೆ ದಣಿವುದು ಸುಖದನುವೇ 1 ಸಂತರಿಗೆರಗಿ ಶರಣವ ಮಾಡಿ | ಸದ್ಭೋಧ ಕೇಳಲು ಬೇಸರಿಕೆ | ಪಂಥದಿ ಲೆತ್ತ ಪಗಡಿ ಜೂಜೂ ಮಂಡಿಸಿ | ಎಂದಿಗೆ ದಣಿಯೇ ನೀ ವಂದಿನಕೆ 2 ಒಂದರೆ ಘಳಿಗೆಯ ಹರಿಕಥೆ ಮಾಡುವ | ಸ್ಥಳದಲಿ ಕೂಡಲು ತೂಕಡಿಕೆ | ಛಂದದಿ ಹಾಸ್ಯ ಕುವಿದ್ಯಗಳಾಟವ | ನೋಡುದರಲಿ ಮಹಾ ಎಚ್ಚರಿಕೆ 3 ಪಥ | ಅನುಸರಣಿಯೊಳಗೆ ನಿರ್ಭಯವು | ಧನ ಧರ್ಮದಂಧರ ಮನಸವ ಹಿಡಿಯಲು | ಕಾಶಿನ ಆಶೆಗೆ ಬೆಜ್ಜರವು 4 ತೃಷೆಯದ ಕಾಲಕೆ ಬಾವಿ ತೋಡುವೆನೆಂಬಾ | ವನ ಪರಿಯಲಿ ಮತಿವಿಡಿಯದಿರು | ವಸುಧಿಲಿ ಮಹಿಪತಿ ನಂದನ ಪ್ರಭುವಿನ | ಶರಣ ಹುಗಲು ದಿನ ಗಳೆಯದಿರು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇನ್ನೆಷ್ಟು ಹರಿಮಹಿಮೆ ಬಣ್ಣಿಸ್ಹೇಳಲಿ ನಿನಗೆ ನಿನ್ನೊಳು ನೀ ತಿಳಿದು ಧನ್ಯಾನಾಗೆಲೊ ಮನಸೆ ಪ ತನ್ನನ್ನು ಭಜಿಪರ ತನ್ನಂತೆ ನೋಡುವ ಉನ್ನತ ಕರುಣ್ಯೆಂದು ಚೆನ್ನಾಗಿ ನೆರೆನಂಬಿ 1 ಮೊರೆಯಿಟ್ಟು ಬೇಡುವ ಚರಣದಾಸರನಗಲಿ ಅರೆಗಳಿಗೆಯಿರ ಹರಿ ಚರಣಕ್ಕೆ ಮರೆಬೀಳು 2 ನಂಬಿದ ಭಕುತರ ಚರಣದಾಸರನಗಲಿ ನಂಬಿ ನೀ ನಗಲದೆ ಗುಂಭದಿಂ ಸ್ಮರಿಸೆಲೊ 3 ಮಾನವು ಪೋದರೇನು ಹಾನಿಯೊದಗಿದರೇನು ಪ್ರಾಣಪೋದರು ಹರಿಧ್ಯಾನ ಮರೆಯದಿರು 4 ನಾಶವಿಲ್ಲದೆ ತನ್ನ ದಾಸರ ಕಾಯ್ವನನು ಮೇಷ ಶ್ರೀರಾಮಪಾದ ಧ್ಯಾಸದೊಳಿಡು ಗಟ್ಟಿ 5
--------------
ರಾಮದಾಸರು
ಇರಬಾರದೊ ಬಡವ ಜಗತ್ತಿನೊಳಗೆ | ಪರದೇಶಿ ಮಾನವಗೆ ದಿಕ್ಕು ಮತ್ತಾವನು ಪ ಪೊಡವಿಪತಿ ದೃಷ್ಟಿಗಳು ಒಳ್ಳೆವಲ್ಲಾವೆಂದು | ಬಿಡದೆ ಜನ ಪೇಳುವುದು ಸಿದ್ಧವಯ್ಯಾ | ಬಡವ ನಾನಯ್ಯ ನಾನಾ ಕಷ್ಟಬಟ್ಟೆರಡು | ಒಡವೆ ಸಂಪಾದಿಸಲು ಅಪಹರಿಸಿದ ನೋಡು 1 ದಿನ ಪ್ರತಿ ದಿನದಲ್ಲಿ ಕರಳು ಕಟ್ಟಿಕೊಂಡು | ಹಣದಾಸಿಯಿಂದ ನಾ ಘಳಿಸಿದ್ದೆನೊ | ಮನೆವುಗೆ ಬಂದು ಮಾಡಿಕೊಂಡೊಯ್ದಿಯಾ ಧರ್ಮವೇ | ವನಜನಾಭನೆ ನಿನ್ನ ದೊರೆತನಕೆ ಶರಣೆಂಬೆ2 ದೊರೆಗಳಾ ಲಕ್ಷಣವಿದೆ ಎಂದೆಂದಿಗೆ ತಮಗೆ | ಸರಿಬಂದ ಕಾರ್ಯಮಾಡುವರಲ್ಲದೇ | ನೆರೆಯವರದೇ ತಪ್ಪೇ ವಿಜಯ ವಿಠ್ಠಲರೇಯ | ಮರಳೆ ಮಾತಾಡಿದರೆ ಅಪರಾಧ ಹೊರಿಸುವರು 3
--------------
ವಿಜಯದಾಸ
ಇವನ ಕಂಡಿರ್ಯಾ ಕಾವಕರುಣನ ಭಾವ ಭಾವಿಸುವ ಪರಿಯಾಗುವ ದೇವನ ಧ್ರುವ ಸಗುಣಲೀಹ್ಯನಾ ಭಕುತಿಗೊಲಿವನಾ ಸುಗಮದಿಂದ ನಿಗಮನುಳುಹಿ ನಗವ ನೆಗೆದನಾ 1 ಸಿರಿಯ ಲೋಲನಾ ವರಕೃಪಾಲನಾ ಧರಿಯನುಳುಹಿ ತರಳಗೊಲಿದು ಪ್ರಿಯವಾದನಾ2 ವರವ ಬಲಿಗೆ ಇತ್ತು ದೋರಿದ ಭಾರ್ಗವರೂಪನಾ 3 ಪರಮ ಆತ್ಮನಾ ಹರಿಸರ್ವೋತ್ತಮನಾ ಸುರರ ನೆರೆಯ ಬಿಡಿಸಿ ಹೊರಟ ಪಾಂಡವಪ್ರಿಯನಾ 4 ಹೊಳೆವ ತೇಜನಾ ಮೂಲೋಕ ಪಾವನಾ ಹಳಿದು ವ್ರತವ ನೋಡಿ ಹಯವನೇರಿ ಸುಳಿದನಾ 5 ಘನ ಮಹಿಮನಾ ದಯಾ ನಿಸ್ಸೀಮನಾ ದೀನ ಮಹಿಪತಿಸ್ವಾಮಿ ಭಾನುಕೋಟೆ ದೀಪ್ತನಾ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇವನೆವೆ ಮಾನವನು ನೋಡಿರೋ ಇವನೆವೆ ಮಾನವನು ಪ ದಾವನು ಶ್ರಿ ಹರಿ ಪಾವನ ನಾಮವ ಆವಾಗ ನೆನೆವುತ ಸಾವಧನಾದಾ ಅ.ಪ ಹಿಂದಿನ ಪುಣ್ಯದಲಿ ನಾನೀಗ ಬಂದೆನು ನರದೇಹದಲಿ | ಮುಂದಾವ ಗತಿಗಳೋ ಛಂದದ ತಿಳಿಯದು | ಮಂದರ ಧರ ಸಲಹೆಂದು ಮೊರೆಯಿಡುವ 1 ಇದ್ದಷ್ಟರೊಳುದಾವ ಶೇವೆಗೆ ಕದ್ದಿರ ತನುಮನವಾ | ಸಿದ್ಧರ ನೆರೆಯಲಿ ಶಿದ್ಧ ಬೋಧಾಮೃತ | ಬುದ್ಧಿಲಿ ಸೇವಿಸಿ ಗದ್ದಳವಾಗಾ 2 ಗುರು ಮಹಿಪತಿ ಸ್ವಾಮಿ ಚರಣಕ ಶರಣೆಂದವನು ಪ್ರೇಮಿ | ಗುರು ವಚನವನಂದದಿ ಧರೆಯೊಳು ನಡೆಯುತ | ಗುರು ಭಕ್ತಿ ಜಾಗಿಸಿ ಗುರುತನಕ ಬಂದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಷ್ಟು ದಯವುಳ್ಳವನ ಯಾಕೆ ಬರಬೇಡೆಂದಿಇಷ್ಟು ನಿರ್ದಯಳೆ ನೀನು ಪ. ಇನ್ನೆಲ್ಲಿ ಪೋಗಲೆ ರತಿಯಿಲ್ಲದಿದ್ದರೆ ನಿನಗೆ ಪೂಮಾಲೆ ತಾ ಎನೆಸಣ್ಣ ಕಮಲದೆಲೆಯ ಬಣ್ಣದ ಗಿಣಿ ಬರೆದುವ ಸಣ್ಣ ಸೀರೆಯ ಕೊಡುವೆನೆಕಣ್ಣಿಗೆ ಪ್ರಿಯವಾದ ಕಮಲಮಯ ಕುಪ್ಪಸವ ಕರೆದು ಕೈಯಲಿ ಕೊಡುವೆÀನೆಬಿನ್ನಣದಿಂದಲಿ ಬಗೆಬಗೆಯಲಿ ನಿನಗೆ ಬಾಯಮುದ್ದನುವ ಕೊಡುವೆನೆ ಸಖಿಯೆ1 ತಳಿರು ಸುಳಿಗರೆವÀ ರುಮಾಲೆತÀಲೆಯಲ್ಲಿ ಸುತ್ತಿ ಬಾಹನ ಥಳಥಳಿಪ ನ-ವಿಲುಗರಿ ಮುತ್ತಿನ ತುರಾಯವ ಸಿಕ್ಕಿ ತರುಣಿ ನಿಲ್ಲಲಿ ಬಾಹೆನೆ ಸಖಿಯೆ 2 ಉರುಟಾಣೆ ಮುತ್ತುಗಳುಚಿತವಾಗಿವೆ ನಿನ್ನ ಉರುಟು ಕುಚಗಳ ಪಿಡಿವೆನೆಮುದದಿಂದ ನಿನ್ನ ಮುಖ ಕಿರುಬೆವರನೆಒರೆÀಸಿ ಕಸ್ತೂರಿತಿಲಕವನಿಡುವೆನೆಸಿರಿಯರಸ ಹಯವದನ ರಂಗನ ಚರಣವನು ನೆರೆನಂಬಿ ಭಜಿಸು ಸಖಿಯೆ ಸಖಿಯೆ3
--------------
ವಾದಿರಾಜ
ಈ ಊರೋಳ್ಳೇದು ಪ ದೇವರ ಕೃಪೆ ಒಂದಾದರೆ ಸಾಕು ಅ.ಪ ತಂಟೆ ಮಾಳ್ಪ ಭಂಟರೈವರ ಗೆದ್ದರೆ ತಾನೆಲ್ಲಿದ್ದರು ಭಯವಿಲ್ಲಣ್ಣ 1 ಜಲತೃಣ ಕಾಷ್ಠಕೆ ವಸತಿ ಈ ಊರು ಬಲು ಸಜ್ಜನಗಳ ನೆರೆ ಈ ಊರು ಫಲಗಳುಂಟು ಮಾಡುವುದೀ ಊರು ಹೊಲಗದ್ದೆ ತೋಟಗಳಿಹ ಊರು 2 ಕೇಳಿದ ಪದಾರ್ಥ ದೊರೆಯುವ ಊರು ವೇಳೆಗೆ ಅನುಕೂಲವು ಈ ಊರು ತಾಳ ಮೇಳ ವಾದ್ಯಗಳಿಹ ಊರು ಸೂಳೆ ಬೋಕರಿಗೆ ಕಷ್ಟದ ಊರು 3 ಕಷ್ಟಪಡುವ ನರ ಭ್ರಷ್ಟನಲ್ಲವೇ ಮೂರು ಬಿಟ್ಟು ತಿರುಗುವ ಜನರಿಗೆ 4 ನರಜನ್ಮವೆಂಬ ಊರಿಗೆ ಬಂದು ಗುರುರಾಮವಿಠ್ಠಲನ ಕರುಣನ ಪಡದರೆಕರತಲಾಮಲಕವಿದು ಕೈವಲ್ಯಕೆ 5
--------------
ಗುರುರಾಮವಿಠಲ
ಈ ಧರೆಯೊಳಗಿಂಥಾ ಸೊಬಗ ಕಾಣೆನೋ ಪ ಕಂತುಪಿತ ತನ್ನ ಕಾಂತೇಯರೊಡಗೂಡಿ | ನಿಂತು ಮಜ್ಜನಗೊಂಡು ಸಂತಸವಾಂತಪರಿಅ.ಪ ನಂದಾವ್ರಜದಿ ಇಂದ್ರನೂ | ಕುಪಿತನಾಗಿ | ಅಂಧವೃಷ್ಟಿಯ ಕರೆಯಲು | ಸಿಂಧೂಶಯನ ಗಿರಿಯ | ಮಂದಹಾಸದಿ ನೆಗಹಿ | ಸುಂದರ ಗೋವ್ಗಳನೆ | ಚೆಂದಾದಿಂದಲೆ ಪೊರೆಯೆ | ಅಂದು ತೋರಿದುಪಕೃತಿಯ ನೆನೆದು ಗೋ | ವೃಂದಗಳೈ | ತಂದಿಂದಿರೆಯರಸಗೆ | ಮಿಂದು ಮಧುರಕ್ಷೀರಧಾರೆಯ ಕರೆಯಲು | ನಂದಕುವರಾನಂದವ ಬೀರಿದ 1 ಕಿರಿಯರೊಡನೆ ಕೂಡುತ | ಗೋಪಾಲನು | ಮುರಲಿನಾದವ ಗೈಯುತ | ಹರಿಣಾಕ್ಷಿಯರಮನೆ | ಹರುಷದಿಂದಲೇ ಪೊಕ್ಕು | ಪರಿಪರಿ ಲೀಲೆಯಿಂ | ಬೆರಗು ಮಾಡುತಲಿರೆ | ವರ ಧದಿಘೃತ ಭಾಂಡಗಳನೊಡೆದು | ಯದುವರನಾಲೈಸುತ ಬರುವರ ಸುಳಿವನು | ಸರಸದಿ ಕಂಡಾಕ್ಷಣದಿಂದೋಡಲು | ಸುರಿದುದು ಶಿರದಲಿ ದಧೀಘೃತಧಾರೆಯು 2 ಕರುಣಾಸಾಗರ ಹರಿಯು | ಮೋಹದಿ ವರ | ಭೈಷ್ಮಿಭಾಮೇರ ಕೂಡುತಾ | ಭರದಿ ಕುಣಿಯಲವರ ಶಿರದಿ ಮುಡಿದ ಸುರಗೀ | ಅರಳುಮಲ್ಲಿಗೆಯೊಳು | ಸೆರೆಬಿದ್ದ ಮಧುಪಗಳ | ನೆರೆದು ಝೇಂಕರಿಸುತ | ಹರುಷದಿ ಸುರಿಸಲು ಸುರ ಸಂದೋಹವು | ಪರಿ 3 ಅಂಗಳದೊಳು ಆಡುತ | ಮಂಗಳಮೂರ್ತಿ | ಸಂಗಡಿಗರ ಸೇರುತಾ | ಮುಂಗುರುಳ್ಗಳ ಮೇಲೆ | ಕೆಂದೂಳಿಯನೇ ಧರಿಸಿ | ಗೋಪಿ ರಂಗನ್ನಪ್ಪಿದಳು ಮುದದೀ || ಅಂಗನೆ ರುಕ್ಮಿಣಿ ಭಂಗಿಯ ನೋಡಲು | ಅಂಗಜ ಪಿತನನು | ಪಿಂಗದೆ ಬೇಡಲು | ಮಂಗಳಾಂಗಿ ಮನದಿಷ್ಟವ ಸಲಿಸಲು | ಸಿಂಗರಗೊಂಡನು | ಸಕ್ಕರೆ ಸುರಿಸುತೆ 4 ಸುರನದೀ ಜನಕ ತಾನೂ | ಕುಂಜವನದಿ | ಸರಸಿಜಾಕ್ಷೇರ ಕೂಡುತ | ಸರಸವಾಡುತಲಿರೇ | ಪರಮ ಸಂತೋಷದಿ | ತರುಲತೆಗಳು ಹರಿಯ ಚರಣ ಸೇವೆಯಗೈಯ್ದು | ಕದಳಿಗಳುದುರಿಸೆ | ಗಳಿತ ಫಲಂಗಳು | ಸರಸಿಜನಾಭನು ಕರುಣಿಸಿ ಭಕುತರ | ಶಿರಿಯಾಳಪುರದೊಳು ಮೆರೆದನು ವಿಭವದಿ 5 ವ್ಯಾಸರಾಜರ ಪೀಠದೀ | ರಂಜಿಪ ಲಕ್ಷ್ಮೀಶತೀರ್ಥರಿಂ ಸೇವಿಪ ಭವ | ಪರಿಪರಿ ನರಳುವ ದಾಸರ ಸಲಹಲಿನ್ನು | ಸಾಸಿರ ಶಂಖದಿ ಪೂಜೆಯಗೊಳುತಿರೆ | ದೇಶದೇಶದ ಜನರಾಲಿಸಿ ಬರುತಿರೆ | ಶ್ರೀಶಕೇಶವ ತನ್ನ ಮಹಿಮೆಯ ತೋರಿದ 6
--------------
ಶ್ರೀಶ ಕೇಶವದಾಸರು
ಈತನೆಂಥಮಹಿಮೆ ನೊಡಿರೆ ರಂಗಯ್ಯ ರಂಗ ಈತನೆಂಥ ಮಹಿಮ ನೋಡಿರೆ ಪ ಈತನೆಂಥ ಮಹಿಮ ಓರ್ವ ಮಾತೆಯುದರದಿ ಜನಿಸಿ ಮತ್ತೊಬ್ಬ ಮಾತೆಕೈಯಿಂದ ಬೆಳೆದು ಗೋಕುಲ ನಾಥ ನವನೀತಚೋರನೆನಿಸಿದ ಅ.ಪ ಕಾಳಕೂಟ ವಿಷವ ಕುಡಿಸಿದ ಆ ಮಾಯದೈತ್ಯಳ ಕಾಲನ ಆಲಯಕೆ ಕಳುಹಿದ ಮಡುವನ್ನು ಧುಮುಕಿ ಕಾಳಿ ಹೆಡೆಮೆಟ್ಟಿ ನಾಟ್ಯವಾಡಿದ ಗೋವುಗಳ ಕಾಯ್ದ ಬಾಲನೆಂದೆತ್ತೊಯ್ಯಲು ಬಂದ ಖೂಳ ಶಕಟನ ಸೀಳಿ ಒಗೆದು ಕಾಳಗದಿ ಧೇನುಕನ ತುಳಿದು ಬಾಲಲೀಲೆಯ ತೋರಿ ಮೆರೆದ 1 ಪರಿಪರಿಯ ಮಾಯದಿಂ ಕಾಡ್ವ ಭೂಭಾರಿಯಾಗಿ ಧರಣಿಜನರತಿಶಯದಿ ಬಳಲಿಸುವ ಪರಮಕಂಟಕ ದುರುಳ ಕಂಸನೆಂಬುವನ ಶಿರವ ತರಿದ ಮಾಧವ ಧರಣಿತಾಪವನ್ನೆ ಕಳೆದು ಸೆರೆಯ ಬಿಡಿಸಿದ ಜನನಿ ಜನಕರ ಮಹಿಮೆ ತೋರ್ದ 2 ಗೊಲ್ಲ ಬಾಲರ ಸಮೂಹವನು ನೆರೆಸಿ ಮನೆಯಲ್ಲಿ ಯಾರು ಇಲ್ಲದ ಸಮಯವನೆ ಸಾಧಿಸಿ ಮೆಲ್ಲಮೆಲ್ಲನೆ ಎಲ್ಲ ಬಾಲರ ಒಳಗೆ ತಾ ಹೊಗಿಸಿ ಪಾಲ್ಮೊಸರು ಸವಿಸಿ ಕಳ್ಳ ಕೃಷ್ಣೆಮ್ಮ ನಿಲ್ಲಗೊಡನೆಂದು ಗೊಲ್ಲಸ್ತ್ರೀಯರು ಗುಲ್ಲುಮಾಡಲು ನಿಲ್ಲದೋಡಿ ತಾ ಪುಲ್ಲನಾಭನು ಎಲ್ಲಿ ನೋಡಿದರಲ್ಲೆ ತೋರುವ 3 ಶಿಶುವು ಈತನೆಂದು ಮುದ್ದಿಸುವಾಗ ಕುಶಲದಿಂದಪ್ಪಿ ಅಧರ ಸವಿಯುವ ಎಂಥ ಶಿಶುವನೆ ಹಸುಮಗಾಗೆಳೆದೊಯ್ದು ರಮಿಸುವ ಮಿಸುಗಗೊಡನಿವ ಕಸಿದು ಭಾಂಡ ದೆಸೆದೆಸೆಗೆ ಎಳೆದು ವಸುಧೆಯೊಳು ತನ್ನ ಅಸಮ ಮಹಿಮೆಯ ಪಸರಿಸಿದ ಹರಿ4 ಮಣ್ಣು ತಿಂದು ತಾಯ ಬಳಿಗೈದಕಂದ ಏನಿದು ಮಣ್ಣು ತಿನ್ವರೆ ಉಗುಳೆಂದೆಶೋದೆ ಕಣ್ಣು ತಿರುವÀಲು ತನ್ನ ಬಾಯೊಳ್ಬ್ರಹಾಂಡ ತೋರಿದ ಭಿನ್ನವಿಲ್ಲದ ತನ್ನ ತಾನು ಅರಿಯದೆಶೋದಿನ್ನು ಈರೂಪವಡಗಿಸೆನ್ನಲು ಸಣ್ಣಮಗುವಾಗಿ ಚಿಣುಫಣುವಿಡಿದುನ್ನ - ತೋನ್ನತ ಆಟವಾಡಿದ 5 ಪರಿಪರಿಯಲಿ ಕಾಡ್ವ ಕೃಷ್ಣನ್ನ ವರದೇವಿ ತಡೆಯದೆ ಸರವೆನಡುವಿಗ್ಹಚ್ಚಿ ತರಳನ್ನ ಸರಸರನೆ ಬಿಗಿದು ಒರಳಿಗ್ಹಾಕಿ ಕಟ್ಟಿ ಮುರಹರನ ಮರೆಯಾಗಲಾಕ್ಷಣ ಊರುತಂಬೆಗಾಲು ಊರಬೀದಿಲಿ ಒರಳನೆಳೆಯುತ ಹೊರಗೆ ಹೋಗಿ ತರಗುಳಿರಕಿಲದೊರಳ ಸೇರಿಸಿ ಮುರಿದು ಶಾಪದಿಂ ಮುಕ್ತಮಾಡಿದ 6 ಪುಂಡತನದಿಂ ಸೊಕ್ಕಿಮರೆಯುವ ಆ ರುಗ್ಮನಿಡಿಕೈಯ ಬಂಡಿಗಾಲಿಗೆ ಕಟ್ಟಿ ಶ್ರೀಧರ ರುಗ್ಮಿಣಿಯನ್ನು ಕೊಂಡು ಗೋಕುಲ ಸೇರಿ ವೈಭವ ನಡೆಸಿ ಯಾದವ ರ್ಹಿಂಡಲಿಗೂಡಿಸಿ ಪುಂಡದೇವಿಯುದ್ದಂಡತನದಿ ಕೈ ಕೊಂಡ ಕಲ್ಯಾಣ ಗಂಡುಗಲಿಗಳ ಗಂಡನೆನಿಸಿದ ಹಿಂಡುದೇವರ ಸಾರ್ವಭೌಮ 7 ಚರಣದಾಸರ ಒಡೆಯ ತಾನಾದ ವರ್ಣಿಸಲಳವಲ್ಲ ಚರಣದಾಸರ ದಾಸನೆನಿಸಿದ ಪುಸಿಯಲ್ಲ ಕೇಳಿರಿ ನರನ ಕುದುರೆಯ ವಾಘೆಯನು ಪಿಡುದು ರಥವ ನಡೆಸಿದ ಕರೆಯಲೋಡಿದ ಸರಸಿಯಲ್ಲಿಗೆ ಭರದಿ ಒದಗಿದ ಕುರುಪಸಭೆಯಲ್ಲಿ ಪರಮ ನಿಗಮಗಳ್ಗಿರುವನಗೋಚರ ಸ್ಮರಿಸಿದವರಿಗೆ ಭರದಿ ನೆರವಾದ 8 ತಾಳಿಬಂದ ನಾರಾಯಣಾವತಾರ ಪಾಲಿಸಲು ಜಗವಂ ಬಾಲಗೋಪಾಲ ಭಕ್ತರಾಧಾರ ಗೊಲ್ಲನೆನಿಸಿ ಲೀಲೆನಡೆಸಿದ ಶಾಮಸುಂದರ ಭವಜಾಲಪರಿಹರ ಕಾಳರಕ್ಕಸರೊಳು ಕಾದಿ ನಿರ್ಮೂಲಮಾಡಿ ಜಗಪಾಲಿಸಿದ ತ್ರಿ ಜಾನಕಿಲೋಲ ಶ್ರೀರಾಮ 9
--------------
ರಾಮದಾಸರು