ಒಟ್ಟು 268 ಕಡೆಗಳಲ್ಲಿ , 52 ದಾಸರು , 239 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚನ್ನಕೇಶವ ಇನ್ನೇನಿನ್ನೇನಿನ್ನು ಯನಗಿನ್ನೇನಿನ್ನೇನಿನ್ನು ಪ. ಚನ್ನಕೇಶವನಿವನನ್ನು ಹೃದಯದೊಳ್ ಚೆನ್ನಾಗಿ ನೆಲಸಿರಲಿನ್ನೇನ ಬೇಡುವೆ 1 ಭುವಿಜಾತೆಯೆನ್ನ ಮಾತೆ - ಭುವಿನಾಥನೆನ್ನ ತಾತ ಇವರೆನ್ನೊಳಿರುತಿರೆ ಭವಕ್ಲೇಶ ಪರಿದಿರೆ 2 ಅಂಡಜವಾಹನಾಖಂಡಲಾರ್ಚಿತನ ಪುಂಡರೀಕಾಕ್ಷನ ಕಂಡು ಕೊಂಡಾಡಿದೆ 3 ಧರೆಯೊಳಧಿಕ ಶೇಷಗಿರಿಯೊಳು ನೆಲಸಿರ್ಪ ವರದ ಶ್ರೀನರಹರಿ ವರದನೆನ್ನೊಳಿರೆ 4
--------------
ನಂಜನಗೂಡು ತಿರುಮಲಾಂಬಾ
ಜನ್ಯಧರ ದೂರ್ವಾಸ ಪ್ರಮುಖ ಮುನಿ ಸ ನ್ಮಾನ ಕರುಣಿ ವಿಲಾಸ ಶ್ರೀ ಶ್ರೀನಿವಾಸ ಪ ಎನ್ನವಗುಣ ಸಹಸ್ರವೆಣಿಸದೆ ನಿನ್ನವರೊಳಗೆಣಿಸಿ ಅನುದಿನ ಮನ್ಮನಾಲಯದೊಳು ನೆಲಸು ಮೈ ಗಣ್ಣನನುಜ ವರಾಭಯ ಶ್ರೀಕರ ಅ.ಪ. ಕಾಮಿತಪ್ರದಕೋಲಾ ಅಂಜನಾಧಿರÀ ಧಾರ ಧಾಮ ಭೂಮಿ ವಿಲೋಲಾ ಶಂಖಣನೃಪವರದ ಹೇಮ ಲೋಚನ ಕಾಲಾ ದ್ವಿಜ ಮಹಿಳೆಯುಳುಹಿದ ಶಾಮಲಾಂಗ ಸುಶೀಲಾ ವೆಂಕಟ ಕುಲಾಲ ಭೀಮಗೊಲಿದ ಮಹಾಮಹಿಮನೆ ಪಿ ತಾಮಹನ ನಾಸೋದ್ಭವನೆ ವಿಯ ಜಾಮಾತ ಕಟಿಸು ತ್ರಾಮಸುತಸೂತ ಪ್ರಮೋದಾಸು ಧಾಮ ಸೌಖ್ಯ ಪ್ರದವರಾಹ ತ್ರಯೀಮಯನೆ ಪ್ರಣತಾರ್ತಿಹರ ಬಲ ಸದನ ಸಹಸ್ರನಾಮ ಸಾಮಜಪತಿ ಪೋಷಕ ರಿಪುವನ ಧೂಮಧ್ವಜ ವಿಧಿಭ ಸೇವಿತ ವ್ಯೋಮಾಳಕಸಖ ಸರ್ವಜ್ಞರ ಮಾಮನೋಹರ ಮನ್ನಿಪುದೆಮ್ಮ 1 ದೀನಜನ ಮಂದಾರ ದೇವಕಿಸುತ ಜಗ ತ್ರಾಣ ಗುಣ ಗಂಭೀರ ಪೃಥ್ವೀಶ ತೋಂಡ ಮಾನವರದ ಉದಾರ ಲುಬ್ದಕನ ವಿಷ್ವ ವೈನತೇಯ ವರೂಥ ಖಳ ಸ್ವ ರ್ಭಾನುವಿನ ತಲೆಗಡಿದು ರವಿಶಶಿ ಕವಿ ಶನಿಗಳ ಶ್ರೇಣಿಯಲಿ ಮಾನಿಗಳ ಮಾಡ್ಡ ಮ ಕಲಿಮಲಾಪಹಾರಿ ಕೃ ಶಾನುಸಖ ಸಂಪೂಜ್ಯ ಸುಮನಸ ಧೇನು ಶರಣ ಜನರ್ಗೆ ಸಂತತ ಆ ನಮಿಸುವೆ ನಳಿನಜಪಿತ ನಿ ನಿರವದ್ಯ ನಿರುಜ ಬ್ರ ಹ್ಮಾಣಿ ಸುರನಿಕರ ನಿಲಯನುಸಂ ಧಾನಕೆ ಕೊಡು ಬಹುವಿಧಕರ್ಮ 2 ಸೇವ್ಯ ದಾರವಿಂದ ಮಹಂತಾ ಸತ್ವಾದಿ ತ್ರಿಗುಣವಿ ದೂರ ದಿತಿಜ ಕೃತಾಂತಾ ಗುಣರೂಪ ಪಾರಾ ವಾರ ವಿಗತಾದ್ಯಂತಾ ಶ್ರೀ ಭೂಮಿಕಾಂತಾ ಕಮಠ ವರಹ ಕ ಕಶಿಪು ವಿದಾರಣನೆ ಭಾ ಗೀರಥಿಯ ಪದನಖದಿಪಡದಂಗಾರ ವರ್ಣನೆ ಭೃಗುಕುಲೋದ್ಭವ ವಾರಿನಿಧಿಬಂಧನ ವನೌಕಸ ವಾರ ಪೋಷಕ ನಂದಗೋಪ ಕು ಮಾರ ತ್ರಿಪುರ ವಿದೂರ ತುರಗವನೇರಿದ ಜಗನ್ನಾಥವಿಠಲ ಸಾರುವೆ ತವÀ ಪದಪಂಕಜ ಜಂ ಭವ ಭಯ ತಾರಕ ನಿನ್ನವರೊಳು ತತ್ವ ವಿಚಾರಕೊಡು ಚಿರಕಾಲದಲಿ 3
--------------
ಜಗನ್ನಾಥದಾಸರು
ಜಯ ಜಯ ಮಂಗಳಜಯ ಮಂಗಳ ಅಮರಾಧೀಶನಿಗೆ ಪ ಕಪ್ಪು ಗೊರಳನಿಗೆ ಕರುಣಾಸಮುದ್ರಗೆ ಕಾಮ ಸಂಹಾರ ಮಾಡಿದಗೆಮುಪ್ಪುರ ಗೆಲಿದಗೆ ಮೂಜಗದೊಡೆಯಗೆ ಮೂರನೆಯ ಗುಣದಾ ಮನೆಯವಗೆಒಪ್ಪುವ ದಶಭುಜ ತೋಳಲಿ ಡಮರುಗ ವಿಡಿದಿಹ ಪಾಶಾಂಕುಶಧರಗೆತಪ್ಪದೆ ಭಕ್ತರಿಗೊಲಿವಗೆ ಪಾಲಿಪ ಕರುಣಕೋಟಿ ಪ್ರಕಾಶನಿಗೆ 1 ಸುರನದಿ ಧರಿಸುತ ಮೆರೆದವಗೆಕೊರಳೊಳು ರುಂಡದ ಮಾಲೆಯ ಹಾಕಿಹಕೋಮಲ ಸ್ಫಟಿಕ ಪ್ರಕಾಶನಿಗೆಕರದಲಿ ಕಂಕಣ ಧರಿಸಿಹ ಮೂರ್ತಿಗೆ ಕಣ್ಣುರಿಭಾಳದಿ ರಂಜಿಪಗೆ 2 ದೇಶದಿ ಪೆಸರಾಗಿರುತಿಹ ಅಮರಾಧೀಶನು ಎನಿಪ ನಾಯಕಗೆಮಾಸದ ಮಂಜಿನ ಮಲೆಯೊಳು ನೆಲಸಿಯೆ ಆಸೆಯನೆಲ್ಲವ ಸಲಿಸುವಗೆಶ್ರೀಸಚ್ಚಿದಾನಂದಾವಧೂತ ದೊರೆ ಶಿರತಾರಕ ಅಮರೇಶನಿಗೆ 3
--------------
ಚಿದಾನಂದ ಅವಧೂತರು
ಜಿತಮನವ ನೀಡೆನಗೆ ಜಿಷ್ಣುಸಖನೆ ರತಿಪತಿಪಿತ ನಿನ್ನ ಹಿತದಿ ಭಜಿಸುವೆನೊ ಪ. ದುಷ್ಟ ಇಂದ್ರಿಯಗಳು ಕೆಟ್ಟ ವಿಷಯಗಳಲ್ಲಿ ಕಟ್ಟ್ಟೆ ಎನ್ನಯ ಮನವ ಸೆಳೆಯುತಿಹವೊ ಕೃಷ್ಣಮೂರುತಿ ನೀನೆ ದೃಷ್ಟಿಯಿಂದಲಿ ನೋಡಿ ಒಟ್ಟುಗೂಡಿಸಿ ನಿನ್ನ ಪಾದದಲ್ಲಿಡಿಸೊ 1 ಎಂಟು ಜನ ದುಷ್ಟರು ಆರು ಜನ ಕಳ್ಳರು ಕಂಟಕರಾಗಿನ್ನು ಕಾಡುತಿಹರೋ ಎಂಟುದಳಗಳಿಪ್ಪ ನೆಂಟರೆನಗಾಗರೊ ಎಂಟೆರಡು ಇಂದ್ರಿಯವ ಬಂಧನದೊಳಿರಿಸೊ 2 ಮೂರು ತಾಪಗಳಿಂದ ಮೂರು ಗುಣದೊಳು ತಿರುಗಿ ಮೂರು ಮಾರ್ಗವ ಕಾಣೆ ಮುರವೈರಿಯೆ ಮೂರು ಅವಸ್ಥೆಗಳ ವಿವರವರಿಯದ ಎನಗೆ ದಾರಿ ತೋರಿ ಸಲಹೊ ಕಾರುಣ್ಯನಿಧಿಯೆ 3 ಡಿಂಬ ಮಧ್ಯದಲಿರುವ ಅಂಬರದಲಿ ನಿನ್ನ ಬಿಂಬರೂಪವ ತೋರೊ ಶಂಭು ಸಖನೆ ಅಂಬುಜನಾಭ ಎಪ್ಪತ್ತೆರಡು ಸಾಹಸ್ರ ತುಂಬಿದ ನಾಡಿಯೊಳು ರೂಪಗಳ ತೋರೊ4 ಮನದಲ್ಲಿ ನೆಲಸಿಹನೆ ಮನುಶಬ್ದವಾಚ್ಯನೆ ಮನದಿಂದ ಭಿನ್ನನೆ ಮನಪ್ರೇರಕ ಮನವ ನಿನ್ನಲಿ ನಿಲಿಸಿ ಅನುಗಾಲ ಸಲಹುವುದು ಚಿನುಮಯನೆ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ತತ್ವಚಿಂತನೆ ಅರಿಯಲಳವೇ ಜ್ಞಾನಿಯ ಹೊರಗಿನ ಬಡರೂಪದಿ ಪ ಧರೆಯು ಉದರದಿ ನೆಲಸಿಹ ಪರಿಪರಿ ವಿಧ ಸಿರಿಯನು ಅರಿವುದು ಬಲುಸುಲಭವೆ ಅ.ಪ ಹುಚ್ಚರಂದಿ ಕಾಂಬೋರು ಜನ ಮೆಚ್ಚಿಗೆಯನು ಬಯಸರು ಅಚ್ಚರಿಯಲಿ ನಡೆವರು ಎಚ್ಚರಿಕೆಯ ಪೊಂದದಂತೆ 1 ಒಡವೆ ವಸನಗಳೆಲ್ಲವ ಸಡಗರವನು ಅರಿಯರು ಕಡು ಬಡತನ ಕ್ಲೇಶಕೆ ನಡುಗಲರಿಯರು ಸುಲಭದಿ 2 ಮೇದಿನಿಯಲಿ ದಿನಗಳ ಮೋದದಿಂದಲಿ ಕಳೆವರು ಮಾಧವನಲಿ ಭಕುತರು ಬೂದಿ ಮುಚ್ಚಿದ ಕೆಂಡದಂತೆ 3 ಮರುಳು ಮೋಸವನರಿಯರು ಸರಳಮನದಲಿ ಇರುವರು ಕೆರಳಿದ ಸುಮದಂದದಿ ತಿರುಳುಗಳನು ಸುಲಭದಿ 4 ಭಕ್ತ ಪ್ರಸನ್ನನೊಳು ಆಸಕ್ತ ಸನ್ಮನ ಯುಕ್ತರು ಯುಕ್ತಿ ಚತುರತೆಯರಿಯರು ಹುತ್ತದೊಳಿಹ ಸರ್ಪದಂತೆ 5
--------------
ವಿದ್ಯಾಪ್ರಸನ್ನತೀರ್ಥರು
ತನು ಮನ ಧನ ನಿನ್ನವಯ್ಯ ವನಜನಾಭ ಮಾರನಯ್ಯ ಪ ಮನಸು ನನಸು ನಿನ್ನವಯ್ಯ ಕನಸು ಕಿನಸು ನಿನ್ನವಯ್ಯ ದಿನ ದಿನ ದಿನ ಭಜಿಪೆನಯ್ಯ ಮನದಿ ನೆಲಸೋ ನೀ ರಂಗಯ್ಯ ಅ.ಪ ಸ್ನಾನ ಸಂಧ್ಯಾ ಜಪವು ತಪ ಧ್ಯಾನಪೂಜೆ ಧೂಪ ದೀಪ ದಾನ ಧರ್ಮ ನೇಮ ಲೋಪವೇನನರಿಯೆ ವಿಶ್ವರೂಪ 1 ಎನ್ನದೆಂಬುದಾವುದಿಲ್ಲ ಎನ್ನ ಕಾರ್ಯವೆನ್ನದಲ್ಲ ಎನ್ನ ಪೊರೆವರಾರು ಇಲ್ಲ ನಿನ್ನ ಬಿಟ್ಟರೇ ಗತಿಯಿಲ್ಲ2 ನಿನ್ನ ಸನ್ನಿಧಿ ಎನ್ನದೇಶ ನಿನ್ನ ಭಜನೆ ಎನ್ನ ಕೋಶ ನಿನ್ನ ಕೃಪೆಯೇ ಎನ್ನ ದೋಷನಾಶ ಸನ್ನುತಕಾಯೋ ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಿಗಣೆಯ ಕಾಟವೇ ಕಾಟ-ಚಲ್ವ-ಸುಗುಣೆಯ ಕೂಟವೇ ಕೂಟಪ ಹಗಲಿರುಳೆನ್ನದೆ ಬಗೆಬಗೆ ರತಿಯೊಳು- ಸೊಗಯಿಸಿದೇಹಧಾತುಗಳನು ಕೆಡಿಸುವ ಅ.ಪ. ನಿಶಿಯೊಳಗನುದಿನ ಬಾಧಿಪ 1 ಹಾಸಿಗೆ ಮಂಚಾದಿಗಳಲಿ ಶರೀರದ ನಾಡಿಯನಿಲ್ಲಿಸುವ 2 ಸದ್ದಡಗಲು ಜತೆಗೂಡುತ-ಸುಖ-ನಿದ್ರೆಯ ಸಮಯವನೊಡುತ ನಮ್ಮ ನೊದ್ದಾಡಿಸುತಿಹ 3 ಹೆಗಲಿನ ಮೂಲದೊಳೇರಿ-ನಮ್ಮಬಗಲಿನ ಸಂದಿಗೆ ಸೇರಿ ಬೇಗದಿನುಗುಳಿಕದ್ದೋಡುವ 4 ಚಿಗಟದ ಹಿಂದೊಡಗೂಡಿ-ನಮ್ಮ-ತೊಗಟೆ ರಕ್ತದ ಸವಿನೋಡಿ ಬುಗುಟಿದ್ದಗಾಯವ ವಿಗಟವಮಾಡುವ 5 ನೋಟಕ ನೀನಾಗ ಬಹುದೆ-ಕಪಟ-ನಾಟಕಧಾರನೆ ಬರಿದೆ ನಿಶಾಟದಲ್ಲಣ ನಿನ್ನಕೂಟದ ಜನರಿಗೆ 6 ದುರಿತ ಕೋಲಾಹಲನೆಂದೆ-ನಿನ್ನ ಬಿರುದನು ಪೊಗಳುತ ನಿಂದೆ ಧರೆಯೊಳುತ್ತಮ-ಪುಲಿಗಿರಿಯೊಳು ನೆಲಸಿಹವರದವಿಠಲ ನಿನ್ನ ಶರಣರಾದವರಿಗೆ 7
--------------
ಸರಗೂರು ವೆಂಕಟವರದಾರ್ಯರು
ತುಂಗಭದ್ರ ನದಿ ತೀರದಿ ನೆಲಸಿಹನ್ಯಾರೆ ಪೇಳಮ್ಮಯ್ಯ ಪ. ರಂಗ ತಾನು ಇಲ್ಲಿರುತಿಹನಮ್ಮ ಅ.ಪ. ಶಂಖ ಚಕ್ರ ತ್ರಿಶೂಲವ ಧರಿಸಿಹನ್ಯಾರೇ ಪೇಳಮ್ಮಯ್ಯ ಶಂಕಿಸದಂದದಿ ತೋರುವನಮ್ಮ 1 ಈ ಪರಿರೂಪವ ಧರಿಸಲು ಕಾರಣವೇನೇ ಪೇಳಮ್ಮಯ್ಯ ಈ ಪರಿರೂಪವ ಧರಿಸಿಹನಮ್ಮ 2 ಪರಿ ಶುದ್ಧ ಸಾತ್ವಿಕರಿಗೆ ಹ್ಯಾಗೇ ಪೇಳಮ್ಮಯ್ಯ ಶುದ್ಧ ಜ್ಞಾನವನಿತ್ತು ಸಲಹುವನಮ್ಮ 3 ವಿಷ್ಣು ಭಕ್ತರ ಮನಸಿಗೆ ತೋರುವ ಮತಿ ಏನೇ ಪೇಳಮ್ಮಯ್ಯ ಬಿಟ್ಟಿರಲಾರದ ಗುಟ್ಟು ಕಾಣಮ್ಮ 4 ಪರಿ ಲೀಲೆ ಇದೇನೆ ಪೇಳಮ್ಮಯ್ಯ ಹರಿಯು ತಾನು ಒಲಿಯನು ಕಾಣಮ್ಮ 5 ಪರಿ ಹ್ಯಾಗೇ ಪೇಳಮ್ಮಯ್ಯ ಪರಿ ಧರಿಸುವದೊಂದರಿದೇನಮ್ಮ 6 ಹರಿಹರ ಕ್ಷೇತ್ರದಿ ನೆಲಸಿಹ ಸ್ವಾಮಿಯ ಭಜಿಸುವದ್ಹ್ಯಾಗೇ ಪೇಳಮ್ಮಯ್ಯ ಕರಕರೆ ಭವವನು ಕಳೆಯಬೇಕಮ್ಮ 7 ಶ್ರೀಸತಿ ಪಾರ್ವತಿ ಸಹಿತದಿ ನೆಲಸಿಹನ್ಯಾರೇ ಪೇಳಮ್ಮಯ್ಯ ಶೇಷಭೂಷಣ ಸಹ ಶ್ರೀನಿವಾಸ ಕಾಣಮ್ಮ 8
--------------
ಅಂಬಾಬಾಯಿ
ತುಂಗಾತೀರದಿ ನೆಲಸಿಹಗೆ | ಮಂಗಳ ಗುರು ರಾಘವೇಂದ್ರನಿಗೆ | ಗಂಗಾಜನಕನ ಭಕುತ ಶ್ರೇಷ್ಠ ಯತಿ | ಪುಂಗವನೆನಿಸುತೆ ಮೆರೆವವಗೆ ||ಮಂಗಳಂ ಜಯ ಮಂಗಳಂ|| ಪ ದಾವಣಗೆರೆಯೊಳು ನಿಂದವಗೆ| ಕೋವಿದ ಭೂಸುರ ಸೇವ್ಯನಿಗೆ| ಧಾವಿಸಿ ಬರುತಿಹ ದೀನಜನಾಳಿಗೆ| ದೇವ ತರುವಿನಂತೀವನಿಗೆ ||ಮಂಗಳಂ ಜಯ ಮಂಗಳಂ|| 1 ಶುದ್ಧ ಟೀಕೆಗಳ ರಚಿಸಿದಗೆ| ಪರಿ | ಮೂರ್ತಿ ರಾಘವೇಂದ್ರನಿಗೆ ||ಮಂಗಳಂ ಜಯ ಮಂಗಳಂ|| 2 ಭಾಸುರ ರಘುವೀರಾರ್ಚಿಪಗೆ| ಶ್ರೀಶಕೇಶವ ಪಾದಾರಾಧಕಗೆ ಸುರ| ರೀಶನೆನಿಪ ರಂಗನಾಥನಿಗೆ | ಮಂಗಳಂ ಜಯ ಮಂಗಳಂ||3
--------------
ಶ್ರೀಶ ಕೇಶವದಾಸರು
ತುಳಸಿದೇವಿ ಪದಕೇ | ನಾರೇರು | ಬೆಳಗಿರಿ ಆರುತಿಯಾ ಪ ಬೆಳಗುವುದೂ ನಮ್ಮ | ಅಳಗಿರಿ ರಂಗನಲಲನೆ ಶ್ರೀ ತುಳಸಿಗೆ | ಕಲಿಮಲ ಹಾಗೆ ಅ.ಪ. ದಳಪ್ರತಿ ದಳದಲ್ಲಿ | ಶ್ರೀಹರಿ | ನೆಲಸಿಹ ತಾನಲ್ಲಿಒಲಿಮೆಲಿ ಭಕುತರ | ಹಲವು ಸೇವೆಗಳಿಗೊಲಿದು ಅಭೀಷ್ಟವ | ಸಲಿಸುವ ದೇವಿಗೆ 1 ಅಮೃತ | ಕಲಶವ | ಧರಿಸುತ ಧನ್ವಂತ್ರಿಬರಲು ನಯನದಿಂ | ಮರುಳೆ ಆನಂದಕೆವರ ಬಿಂದೋದ್ಭವೆ | ಹರಿ ಪ್ರಿಯೆ ತುಳಸೀ 2 ಇಂಬು ತೋರಿ ಇರಲುಅಂಬುಜಾಕ್ಷ | ಗುರು ಗೋವಿಂದ ವಿಠಲನ |ತುಂಬಿ ದ್ವೈಭವದಿ | ಸಂಭ್ರಮ ಸೇವಿಪ 3
--------------
ಗುರುಗೋವಿಂದವಿಠಲರು
ತೆಪ್ಪದುತ್ಸವ ನಿನಗೆ ಏನು ಹಿತವೋ ಅಪ್ಪ ಹನುಮಯ್ಯ ನಿನ್ನಾಟಕೇನೆಂತೆಂಬೆ ಪ. ರಾಮ ಉಂಗುರ ಸತಿಗೆ ಕಂಡಿತ್ತು ಬಾರೆನಲು ನೇಮದಿಂದಲಿ ನೂರು ಯೋಜನುದಧಿ ಪ್ರೇಮದಿಂದಲಿ ಹಾರಿ ಕುರುಹು ತಂದಾ ಮಹಿಮ ಈ ಮಡುವಿನ ಜಲದಿ ಈ ಆಟವಾಡುವುದು 1 ಕುರುಕುಲಾರ್ಣವವೆಂಬ ಘನ ಶತ್ರು ಸೈನ್ಯವನು ಒರಸಿ ಕ್ಷಣದಲಿ ಭುಜಬಲದ ಶೌರ್ಯದಲಿ ಧುರವೆಂಬ ಶರಧಿಯನು ಲೀಲೆಯಲಿ ದಾಟಿದಗೆ ವರ ಸರೋವರದ ಈ ಜಲದಾಟವಾಡುವುದು 2 ಅನ್ಯ ದುರ್ಮತ ಮಹಾರ್ಣವನು ಶೋಷಿಸುತ ಬಹು ಉನ್ನತದ ವೇದ ಶಾಸ್ತ್ರಾರ್ಣವದಲಿ ಚೆನ್ನಾಗಿ ಈಜಿ ಶ್ರೀ ಹರಿಚರಣ ದಡ ಸೇರ್ದ ಘನ್ನ ಮಹಿಮನಿಗೆ ಈ ಚಿನ್ನ ಮಡುವೀಜುವುದು 3 ಮುಕ್ತಿಯೊಗ್ಯರ ಕರ್ಮಶರಧಿಯನು ದಾಟಿಸುತ ಮುಕ್ತರಾಶ್ರನ ಪುರ ಸೇರಿಸುವನೆ ಅತ್ಯಂತ ಅಲ್ಪ ಈ ಜಲದಾಟವಾಡಿದರೆ ಭಕ್ತರಾದಂತ ದಾಸರು ನಗರೆ ಹನುಮ 4 ವರ ಕದರುಂಡಲಿಯಲ್ಲಿ ನೆಲಸಿರುವ ಭಕ್ತರಿಗೆ ಮರುಳುಗೊಳಿಸುತ ಮಹಾ ಮಹಿಮನೆನಿಸಿ ಪರಿಪರಿಯ ಉತ್ಸವಪಡುವೆ ಶ್ರೀ ಕಾಂತೇಶ ಸಿರಿರಮಣ ಗೋಪಾಲಕೃಷ್ಣವಿಠ್ಠಲನ ದಾಸ 5
--------------
ಅಂಬಾಬಾಯಿ
ತೊಲಗು ನೀ ತೊಲಗಿನ್ನು ಅಭಿಮಾನವೆಅಲೆಬಡಿಸದಿರೆನ್ನನೂ ಹಲವು ಜನರಕಾಲಕೆಳಗೆ ನಿಲ್ಲಿಸಿಯನ್ನ ಹೊಲೆಗೆಲಸವ ಮಾಡಲೆಳಸಿ ನೆಗ್ಗಿದೆಯಲ್ಲ ಪಸತಿಸುತ ಪೋಷಣೆಯು ಮುಖ್ಯವು ಮಾತಾಪಿತೃಗಳಾರಾಧನೆಯು ಬಳಗ ಬಂಧು ತತಿಗಳ ಮನ್ನಣೆಯು ಕುಲ ಜಾತಿ ದೇವತೆಯ ಪೂಜಿಪ ಹಬ್ಬವು ಬಿಡಕೂಡದುವ್ರತ ಉಪವಾಸವಾರತಿಯಕ್ಷತೆಯು ಮುಂಜಿಯುಸುತೆಗೆ ಮದುವೆಯೆಂದು ಮತಿಗೆಡಿಸಿದೆಯಲ್ಲ 1 ಅರೆಘಳಿಗೆಯು ನಿಲ್ಲಲು ವೇಳೆಯ ಕೊಡದೆರಗಿಸಿ 'ಷಯದೊಳು ನಾನಾ ಬಗೆಹರುಬಿಗೆ ಹರುಸಲು ಮನವನೀಕೊರಗಿಸಿ ಕುಣಿಸುತಲು ಒಂದೇ ಕ್ಷಣಹರಿನಾಮ ಸ್ಮರಣೆಗೆ ತೆರಹುದೋರಿಸದಾಯುಹರಿದು ಪೋಗುವ ಹಾಗೆ ಕರಗಿಸಿದುದೆ ಸಾಕು 2ಶ್ರವಣಕೆ ಮನ'ತ್ತೆಯಾ ನಾಮ ಸ್ಮøತಿ ಸ'ಯ ಸೇ'ಸಬಿಟ್ಟೆಯ ಸಜ್ಜನರೊಳೊಂದುವ ದಾರಿಯ [ತೋರಿ]ದೆಯ ಎಂದಾದರು ಶಿವಸೇವೆಗಳ ತಂದೆಯ 'ೀಗಾಗುವ ಹವಣನರಿಯದೆ ಸಂಗವ ಮಾಡಿ ನಿನ್ನೊಳಗ'ವೇಕವನು ಪಡೆದವನಾದೆನಯ್ಯಯ್ಯೊ 3ಕಂಡವರೊಡವೆಯನು ತಂದು ಕರೆದು'ಂಡು ಬಳಗವನ್ನು ಮನ್ನಿಸಿಯವರ್ಕೊಂಡಾಡೆ ಹರುಷವನು ತೋರಿಸಿ ಬಹಭಂಡಾಟನಡತೆಯನು ಕರೆಸಿಯನ್ನಗುಂಡಿಗೆ ನೂಕಿಸೆ ಕಂಡೆ ನಿನ್ನಾಟವಮೊಂಡಮುಂಡೇದೆನ್ನೀ ಕೂಗಕೇಳಿ ಬೇಗ 4ಶ್ರೌತ ಸ್ಮಾರ್ತದ ಬಟ್ಟೆಯ ಹೊಂದುವರೆ ನೀನೋತು ಮಾರ್ಗವ ತೊಟ್ಟೆಯ ಅನ್ಯಾಯದ ರೀತಿಯ ನೀ ಬಿಟ್ಟೆಯ ನರಕಬಪ್ಪ ಭೀತಿಯ ನೀತೊಟ್ಟೆಯ ಯೇನೆನ್ನದೆಲೆಕಾತರಿಸುತ ಕಾಮಕಾತು ಕ್ರೋಧವ ಮಾಡಿಮಾತಿಗಾದರು ಒಮ್ಮೆ ಸೋತವನಾದೆಯ 5ಕಲಹವ ಜನರೊಳಗೆ ಗಂಟಿಕ್ಕಿತುತೊಲಗಿಸಿ ಬಯಲೊಳಗೆ ನಿಲ್ಲಿಸಿಯೆನ್ನಹಲವು ಬಗೆಯ ಮಾತಿಗೆ ಗುರಿಯ ಮಾಡಿಬಳಲಿ ಬಾಡುವ ರೀತಿಗೆ ಕಂಗೆಡಿಸಿದೆಕಾಲದೊಳು ಧನದೊಳು ಬಲದೊಳು ಛಲದೊಳುನೆಲೆಗೊಂಡು ನೀಯೆನ್ನ ಥಳಿಸಿದುದೇ ಸಾಕು 6ಅರಿಯದಾದೆನು ನಿನ್ನನು ಅದರಿನಿಂದಹುರಿದೆ ನೀನೆನ್ನುವನು ಚಿಕ್ಕನಾಗಪುರದೊಳಗಜ್ಞರನು ರಕ್ಷಿಸಲಾಗಿಗುರುವಾಸುದೇವಾರ್ಯನು ನೆಲಸಿಹನುಮರೆಯೊಕ್ಕೆರಗಿ ನಿನ್ನ ಪರಿಯ ಪೇಳಲು ಜ್ಞಾನದುರಿಯೊಳು ದ'ಪನೆಚ್ಚರ ನಿಲಬೇಡಿನ್ನು 7
--------------
ವೆಂಕಟದಾಸರು
ತೋರಿಸೋ ಶ್ರೀಹರಿ ನಿನ್ನ ತೋರಿಸೋ ಪ ತೋರಿಸೋ ಹರಿ ವಿಶ್ವಮಯ ನಿನ್ನರೂಪವ ತಾರಿಸೋ ಭವಸಾಗರದಿಂದಲೆನ್ನನು ಅ.ಪ ಜಲ ಭೂ ಖೇಚರ ಪ್ರಾಣಿವರ್ಗಗಳೊಳು ನೆಲಸಿ ಅವ್ಯಕ್ತನಾಗಿಹ ನಿನ್ನ ರೂಪವ 1 ತೃಣ ಲತೆ ತರು ವನಸ್ಪತಿ ವರ್ಗಗಳೊಳು ಅಣಗಿ ಅವ್ಯಕ್ತನಾಗಿಹ ನಿನ್ನ ಮೂರ್ತಿಯ2 ಪಂಚಭೂತ ತನ್ಮಾತ್ರಂಗಳೊಳಡಗಿ ಪ್ರ ಪಂಚಕವ್ಯಕ್ತನಾಗಿಹ ನಿನ್ನ ಮೂರ್ತಿಯ 3 ಭೂತಜಾಲದ ಹೃತ್ಪೀಠದಿ ಮಂಡಿಸಿ ರಥಿಕನಾಗಿ ದೇಹರಥವ ಚಾಲಿಪ ನಿನ್ನ 4 ತಾರಾಗಣದಿ ಚಂದ್ರ ಸೂರ್ಯಾದಿಗ್ರಹ ಪರಿ ವಾರದೊಳಡಗಿ ಜ್ಯೋತಿರ್ಮಯನಹ ನಿನ್ನ 5 ತಳಿರೆಲೆ ಹೂ ಹೀಚು ಕಾಯಿ ಧಾನ್ಯಂಗಳ ಬೆಳೆಸಿ ಶೋಭಿಪ ದಿವ್ಯ ವಿವಿಧರೂಪಂಗಳ 6 ಅಂಗ ಪ್ರತ್ಯಂಗ ಕರಣಗಳೊಳಡಗಿಹ ಮಂಗಳಮಯ ಚತುರ್ಮೂರ್ತಿಗಳಿರವನು 7 ಅಜಭವ ಸುರಮುಖ್ಯ ದೇವಗಣದೊಳಿಪ್ಪ ಸುಜನರಂತರ್ಯಾಮಿ ಚರಪ್ರತಿಮೆಗಳನ್ನು 8 ಅಂಬುಜಾಂಬಕಿ ಜಗದಂಬೆ ಸಿತಾಪತಿ ಬಿಂಬಮೂರುತಿ ರಘುರಾಮವಿಠಲ ನಿನ್ನ9
--------------
ರಘುರಾಮವಿಠಲದಾಸರು
ತ್ತಾತ್ವಿಕವಿವೇಚನೆ ಏಕ ಪಂಚಾಶದ್ವರ್ಣವಾಚ್ಯ ಶ್ರೀಕಳತÀ್ರನೆ ಸರ್ವಶಬ್ದಗೋಚರನಯ್ಯ ಪ ಕಾಯ ಕಾರ್ಯಕಾರಣವನನುಸರಿಸಿ ತ್ರಿಕರಣದೊಳಗಿದ್ದು ಕ್ರಿಯವ ನÀಡೆಸುವ ದೇವಅ.ಪ ಅಜಾನಂದೇಂದ್ರೇಶ ಶಿರ ಮುಖ ನೇತ್ರದೊಳು ನಿಜರೂಪ ಉಗ್ರ ಊರ್ಜ ಕರ್ಣದೊಳು ನಿಜ ಋತುಂಬರ ಋಘನಾಸದಲ್ಲಿ ಲೃಶಾ ಲೃಜ ವರ್ಣವಾಚ್ಯ ಗಂಡ ಸ್ಥಳದಲ್ಲಿಪ್ಪ 1 ಅನಂತಾರ್ಥಗರ್ಭನೆ ನೀ ವಾಚಿಯಲ್ಲಿ 2 ಕಪಿಲ ಖಪತಿ ಗರುಡ ಘರ್ಮ ದಕ್ಷಿಣಭುಜದೊಳ್ ಅಪರಿಚ್ಛಿನ್ನನೇ ನೀನು ಸಂಧಿಗಳಲಿ ಸುಫಲದಾತನೆ ಙಸಾರನಾಮದಲಿದ್ದು ಅಂಗುಲ್ಯಾಗ್ರದಲ್ಲಿ ನೀ ನಿರುತರಲಿ ನೆಲಸಿರ್ಪೆ 3 ಝೂಟಿತಾರ ವರ್ಣವಾಚ್ಯವ ಮಾಡಿ ನಿರುತದಲಿ ವಾಮಭುಜ ಸಂಧಿಗಳಲ್ಲಿರುವೆ ಬೆರಳ ಅಗ್ರದಿ ಞಮನಾಮದಲಿ ನೆಲೆಸಿರುವೆ 4 ಟಂಕ ಠಲಕ ಡರೌಕ ಢರಣಣಾಕ್ಮಕ ನೀ ನಾ ಟಂಕ ರಹಿತ ದಕ್ಷಿಣ ಪಾದದಲ್ಲಿ ಬಿಂಕವಿಲ್ಲದೆ ತಾರ ಥಪತಿ ದಂಡಿ ಧನ್ವೀ ನಮ್ಯನಾಮನೆ ವಾಮಪಾದ ಸಂಧಿಗಳಲ್ಲಿ 5 ಪರಫಲಿ ವರ್ಣವಾಚ್ಯ ದೇಹದಪಾಶ್ರ್ವ ಬಲಿ ಭಗನಾಮ ಪೃಷ್ಟ ಗುಹ್ಯದಲಿ ನಿರುತ ಮನ ವರ್ಣವಾಚ್ಯ ನೆನಿಸಿಹೆ ದೇವ ತುಂದಿ ಸ್ಥಾನದಲಿ ಎಂದೆಂದು ನಿಂದೆ6 ಯಜ್ಞ ಹೃದಯದಿ ರಾಮ ತ್ವಕ್‍ಲಕ್ಷ್ಮೀಪತಿ ರುಧಿರ ಶಾಂತಸಂವಿತ್ ಮಾಂಸದಲ್ಲಿ ಸುಜ್ಞ ಷಡ್ಗುಣ ಮಜ್ಜ ಸಾರತ್ಮ ಅಸ್ತಿಯು ಹಂಸ ಸ್ನಾಯುಳಾಳುಕ ನೀ ಪ್ರಾಣದಲ್ಲಿ 7 ಕ್ಷಕಾರವಾಚ್ಚ ಶ್ರೀ ಲಕ್ಷ್ಮೀ ನರಸಿಂಹ ಕ್ಷರ ಜೀವರಾ ದೇವ ಸರ್ವ ಸ್ಥಳದಲ್ಲಿಪ್ಪ ಶ್ರೀಕರಾರ್ಚಿತ ನಿನ್ನ ವಾಕ್ ಮನೋರೂಪಗಳು ಸಕಲ ಸಚ್ಛಾಸ್ತ್ರಾಗಮಗಳಾಗಿಹವೋ 8 ಸ್ವರವರ್ಣ ಸಂಯುಕ್ತ ಶಬ್ದವಾಕ್ಯದಿ ಸಕಲ ಪುರಾಣಾಗಮದಿ ಶಾಸ್ತ್ರ ಸರ್ವದಿ ನಿತ್ಯ ನಿರುತ ನಿನ್ನನುದಿನದಿ ಪೊಗಳುತಿಹವೋ 9 ಸ್ವಪ್ರಯೋಜನಕಾಗಿ ವರ್ಣ ಭೇದದಿ ವಾಕ್ಯ ಅಪ್ರಕೃತವಾಗೆಷ್ಟೋ ನಾನುಚ್ಚರಿಸಿದೆ ಸ್ವಪ್ರಯೋಜನ ರಹಿತ ಶ್ರೀವೇಂಕಟೇಶ ಶ್ರೀ ಉರಗಾದ್ರಿವಾಸ ವಿಠಲ ಜಗದೀಶ10
--------------
ಉರಗಾದ್ರಿವಾಸವಿಠಲದಾಸರು
ದರುಶನವಾಯಿತು ಪಂಢರೀಶನ ಪ ದರುಶನದಿಂದಲಿ ಧನ್ಯರಾದೆವು ಸರಸಿಜಭವನ ನಾಭಿಯಲಿ ಪಡೆದವನ ಅ.ಪ ತಂದೆತಾಯಿಯರ ಭಕ್ತಿಯಿಂದ ಸೇವಿಸುವರಿಗೊಲಿದಾ- ನಂದಪದವಿಯನಿತ್ತ ನಂದನ ಕಂದನ 1 ಇಷ್ಟ ಭಕುತ ಕೊಟ್ಟ ಇಟ್ಟಿಗೆ ಮೇಲೆ ನೆಲಸಿ ಶಿಷ್ಟರ ಸಲಹುವ ವಿಠ್ಠಲರಾಯನಂಘ್ರಿ 2 ಉರದಲಿ ಸಿರಿಯನು ಧರಿಸಿ ಸುರರ ಕಾರ್ಯ ನೆರವೇರಿಸುವ ಜಗದ್ಭರಿತನ ಶ್ರೀಪಾದ 3 ನಾಗಶಯನ ನಿಖಿಲಾಗಮವೇದ್ಯನ 4 ಮುಕುತಿದಾಯಕ ಗುರುರಾಮವಿಠಲ ಚರಣ5
--------------
ಗುರುರಾಮವಿಠಲ