ಒಟ್ಟು 381 ಕಡೆಗಳಲ್ಲಿ , 79 ದಾಸರು , 350 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಮಲ ಪರ ಭವ ಬಂಧ ನಮಗೆಕುಹಕ ಬುದ್ಧಿಯಲಂದು ಬಯಲ ಭ್ರಾಂತಿಗೆ ಸಂದುಬಹು ದುಃಖಬಟ್ಟುದ ನೆನೆದು ನಾವಿಂದು 1ತನುವಿದನೆನಿತು ಪೋಸಲು ಮತ್ತೆವನಿತಾದಿ ಜನರ ನಂಬಿರಲುಧನ ತನ್ನದೆಂದು ಬಚ್ಚಿಡಲು ಭೋಗಕನುಕೂಲವಾುತೆಂದೆನಲುತನುವಳಿುತು ಜನ ಸಡಿಲಿತು ಗಳಿಸಿದಧನ ಹೋುತನುಮಾನವೇತಕಿನ್ನಿನಿತು 2ಸುಖವೆಂಬದು ದುಃಖ ತಿಳಿಯೆ ಮದಮುಖರಾಗದಿರಿ ಮನವೆಳೆಯೆಸುಖಪರಿಪೂರ್ಣನು ಹರಿಯೆ ುನ್ನುಸುಖವುಂಟು ನಮಗಾತನೊಲಿಯೆಸಕಲ ಲೋಕೇಶ ಶ್ರೀ ತಿರುಪತಿ ವೇಂಕಟೇಶನಕುಟಿಲ ಭಕುತರಿಗುಂಟು ಸಂತೋಷ 3ಓಂ ಶ್ರೀ ಹರಯೇ ನಮಃ
--------------
ತಿಮ್ಮಪ್ಪದಾಸರು
ಕರ ಪ ಸೂರಿನಿವಾಸ ಭೋಗಾಪುರ ಮಂದಿರ ಮಾಮುದ್ಧರ ಅ.ಪ ಶ್ರೀರಘುವರನಾಜ್ಞೆಯಿಂದಲಿ ವಾರಿಧಿಯಕ್ಷಣದಲಿ ಹಾರಿ ಭೂಮಿಸುತೆ ಗೆರಗುತಲಿ ಮುದ್ರಿಕೆಯ ಕೊಡುತಲಿ ಶ್ರೀರಾಮಗೊಂದಿಸಿದಿ ಕ್ಷೇಮದಲಿ ಇಹಳೆಂದು ಪೇಳಿ 1 ಇಂದು ಕುಲದಿ ಪಾಂಡು ನೃಪತಿಯ ಎನಿಸಿದೆಯೊ ತನಯ ಬಂಥ ಕೌರವ ವೃಂದ ಮಥಿಸಿದೆಯಾರಣದೊಳಗೆ ವಿಜಯ ನಂದಸುತನ ನೊಲಿಮೆ ಪಡದಿಯಾ ಭೀಮಶೈನರಾಯ 2 ಮೇದಿನಿ ಸುರಗೃಹದಿ ಜನಿಸಿದ ವೇದಾರ್ಥ ತಿಳಿಸಿದ ವಾದಿಗಳ ನಿರ್ವಾದಗೈಸಿದ ದಿಗ್ವಲಯ ಚರಿಸಿದ ಭೇದ ಭೋದಕ ಶಾಸ್ತ್ರವಿರಚಿಸಿದ ಶ್ರೀ ಪೂರ್ಣಬೋಧ 3 ಕಾಲಕಾಲಗಳಲ್ಲಿ ದ್ವಿಜಜನ ಬರುತಿಹರು ನಿನ್ನ ಧೂಳಿ ದರುಶನಾಬಿಷೇಚನ ಶೇವಿಪರು ಘನ್ನ ಪಾಲಿಸಬೇಕಯ್ಯ ಭಕುತರನಾ ಪಾಂಚಾಲಿರಮಣ 4 ನೀರಜಾಸನಾದಿ ಸುರಗಣ ವಂದಿತ ಸುಚರಣ ಕಾರ್ಪರ ಶಿರಿನಾರಸಿಂಹನ ಒಲಿಸಿರುವ ನಿನ್ನ ಹರಣ 5
--------------
ಕಾರ್ಪರ ನರಹರಿದಾಸರು
ಕರುಣಾ ಪೊಂದಿರೆ ಕೊರತೆಗಳುಂಟೆ ಶ್ರೀ ನರಹರಿಯ ಪ ನರಿಗಳ ಕೂಗಿಗೆ ಹುಲಿಯಂಜುವುದೆ ಬಿರುಗಾಳಿಗೆ ದೊಡ್ಡ ಗಿರಿ ನಡುಗುವುದೆ ಅ.ಪ ನಾನು ತಾನೆಂದು ಕುಣಿಯುತಲಿದ್ದ ಮಾನವರನು ಜರಿದು ನೀನೆ ಸೇವೆಯನು ಮಾಡೆಂದೆನುತ ತಾನೊಲಿಯುತಲಿ ಹೀನ ಜನರು ಅಪಮಾನವ ಬಯಸಲು ನಾನಿಹೆನೆನ್ನುವ ಜಾನಕಿನಾಥನ 1 ಬಂಧುಗಳೆನ್ನ ನಿಂದಿಸುತಿಹರು ಒಂದನೂ ಕೊಡೆಯೆಂದು ಹಿಂದು ಮುಂದೆನಗೆ ಕುಂದು ಕೋರುವರು ಒಂದನರಿಯರು ಮುಂದೆ ಎನಗೆ ಬಲು ತೊಂದರೆಗಳಿರುವು ವೆಂದು ಪೇಳುವರು ಮಂದರಧರನ 2 ಧನಿಕನಲ್ಲೆಂದು ಅಲ್ಲಗೆಳೆಯುವರು ಧನವಿಲ್ಲದಿರಲು ಘನತೆ ಎಂತೆಂದು ಜರಿಯುತಲಿಹರು ಮನವನರಿಯರು ಧನ ಪಿಶಾಚಿಯನು ಮನದಿಂದ ತೊಲಗಿಸಿ ಮನದಲಿ ನೆಲಸಿಹ ವನರುಹ ನಯನನ 3 ನಂಬಿದರೆಮ್ಮ ಧನಕನಕಗಳ ತುಂಬುವೆವೆಂಬ ಜಂಭದ ಮಾತ ನಂಬದೆ ಇರಲು ಹಂಬಲಿಸುವರು ನಂಬುವ ಭಕುತರ ಹಿಂಬಾಲಿಸುತಲಿ ಬೆಂಬಲಿವೀಯುತವ ಅಂಬುಜನಾಭನ 4 ಚತುರನಲ್ಲೆಂದು ಅತಿದೂರುವರು ಹಿತರಂತೆ ನಟಿಸಿ ಮಿತಿಮೀರಿ ಎನಗೆ ಬೋಧಿಸುತಿಹರು ಮನ್ಮತಿಯನರಿಯರು ರತಿಪತಿಯೆನ್ನನು ಪ್ರಸನ್ನನಾಗಿ ದಿವ್ಯ ಗತಿ ತೋರುತಲಿರೆ ಚತುರತೆಯೇತಕೆ 5
--------------
ವಿದ್ಯಾಪ್ರಸನ್ನತೀರ್ಥರು
ಕರುಣಾಳುವೈ ನಿಂನ ಭಜನೆಯೊಂದೇ ಸಾಕು ಭರದಲಿ ಪಾಪಿಯ ಶುದ್ಧ ಮಾಡಲಿಲೇ ಪ ಅಜಮಿಳ ಜನ್ಮದಿ ಘೋರ ಪಾಪವ ಗೈದು ಭಜನೆ ಮಾಡಲು ತನುನೀಗು ಕಾಲದಲೀ ಭಜಕರ ಲೋಲನೆ ಹೀನನಿಗೊಲಿದು ನೀ ಕುಜನನ ಪರೆದು ಮೋಕ್ಷವನಿತ್ತೆ ಹರಿಯೇ1 ದುರುಳ ವಾಲ್ಮೀಕನು ಹೀನ ಕೃತ್ಯವಗೈದು ಸುರಮುನಿಯಾಜÉ್ಞಯಿಂ ನಾಮವಭಜಿಸೇ ದುರಳನ ಸರಸದ ಭಕ್ತಿಗೆ ವಲಿಯುತ ಪರಮ ಙÁ್ಞನವನು ನೀ ನಿತ್ತೆ ಶ್ರೀಹರಿಯೆ 2 ತರಳ ದಾಸರುಕೂಡಿ ಹರಿ ನಿಂನ ಸ್ತುತಿಸಲು ನಿರುತ ಭಕ್ತರಿಗೆ ನೀನೊಲಿದೆ ಶ್ರೀಕಾಂತಾ ಪರಮ ಆದರದಿಂದ ಹರಿಯಂನ ಮನವನ್ನು ಪರಿ ಶುದ್ಧಮಾಡಿ ದೀನನ ಸೇರೋ ಹರಿಯೇ 3 ರಂಗನ ಮಹಿಮೆಯ ನುಡಿಯಲಾರೆನು ನಾನು ಅಂಗಜ ಪಿತನಾದ ದಶರೂಪಧರನ ನಿತ್ಯ ದೂರ್ವಾಪುರದಿನಿತ್ತುಮಂಗಳ ಪದವೀವ ಚೆನ್ನಕೇಶವನೆ 4
--------------
ಕರ್ಕಿ ಕೇಶವದಾಸ
ಕರುಣಿಸೈ ಗುರುರಾಯ ಚರಣತೀರ್ಥವನು ಹರಣ ಭಯದೊಳು ಲಕುಮೀರಮಣನೊಲಿವಂದದಲಿ ಪ ದೇಶ ದೇಶವ ತಿರುಗಿ ಬೇಸರದು ಈ ಚರಣ ಭೂಸುರವ ಪೂಜಿಸುವದು ಈ ದಿವ್ಯ ಚರಣ ಕ್ಲೇಶವೆನಿಸದೆ ತೀರ್ಥದಾಸೆಯ ಬಿಡದ ಈ ಚರಣ ಕಾಶಿ ರಾಮೇಶ್ವರಕೆ ನಡೆದ ಚರಣ1 ಹಾವಿಗೆಯನೊಲ್ಲದೆ ಹಾದಿ ನಡೆದಿಹ ಚರಣ ದೇವಿ ಭಾಗೀರಥಿಗೆ ಇಳಿದ ಚರಣ ಕಾವಿ ವಸ್ತ್ರವನುಟ್ಟ ಕಾಶಿವಾಸಿಯ ಚರಣ ಕೋವಿದರು ವಂದಿಸುವ ದಿವ್ಯ ಚರಣ2 ಗಟ್ಟಿ ಬೆಟ್ಟವ ತಿರುಗಿ ಕಷ್ಟಬಟ್ಟಿಹ ಚರಣ ಸೃಷ್ಟಿಗುತ್ತಮ ನದಿಯ ಮಿಂದ ಚರಣ ಇಷ್ಟಗಳನೆಲ್ಲ ತಾ ಪಡೆದುಕೊಂಡಿಹ ಚರಣ ಕೃಷ್ಣಮೂರ್ತಿಯ ಬಳಿಗೆ ಬಂದ ಚರಣ 3 ಶುದ್ಧ ವೈಷ್ಣವರೆಲ್ಲ ಉಜ್ಜಿ ತೊಳೆವ ಚರಣ ಬದ್ಧ ಮುಕ್ತರಿಗೆಲ್ಲ ಸಿದ್ಧಿಯಹ ಚರಣ ಮಧ್ವರಾಯನ ಮತದಿ ಎದ್ದು ತಿರುಗುವ ಚರಣ ವಿದ್ಯೆನಿಧಿ ಗುರುರಾಯ ಬಾಳ್ದ ಚರಣ 4 ಧರಣಿಯನು ಬಲವಂದು ದಣಿದು ಬಂದಿಹ ಚರಣ ಕೈವಲ್ಯ ಪಡೆದ ಚರಣ ವರಾಹತಿಮ್ಮಪ್ಪನಿಹ ಗಿರಿಯನೇರಿದ ಚರಣ ಸ್ಥಿರವಾಗಿ ಉಡುಪಿಯೊಳು ನಿಂದ ಚರಣ 5
--------------
ವರಹತಿಮ್ಮಪ್ಪ
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕರ್ಮವೆ ನಿತ್ಯನಿರ್ಮಲ ಮೂರುತಿ ಇರುವನು ಎಲ್ಲೆ ಕರ್ಮ ಮಾಡಲು ಬರುವನವೆಲ್ಲೆ ಪ ಹೆಣ್ಣು ಹೊನ್ನು ಮಣ್ಣು ಘಳಿಪುದಲ್ಲದೆ ಕರ್ಮ ಕರ್ಣ ಜಿಹ್ವೆಂಗಳು ಮಾಳ್ಪವು ಕರ್ಮ ಉಣ್ಣುವುದುಡುವುದಲ್ಲದೆ ಪ್ರತಿನಿತ್ಯದ ಕರ್ಮ ಅಣ್ಣನ್ಯಾರು ಸಂಪÉ್ರೀರಕ ತಿಳಿಯಲು ಧರ್ಮ 1 ಕರ್ಮ ವಲ್ಲವೆ ಮೋಹಿಪ ಹೆಂಡತಿಯ ರಕ್ಷಣ ಕರ್ಮವಲ್ಲವೆ ದೇಹ ಜಾತರನ್ನೋದುವುದು ತಮವಲ್ಲವೆ ಊಹಿಸಿ ಹರಿಸೇವೆ ಇದೇ ಧರ್ಮವಲ್ಲವೇ 2 ಕರ್ಮ ತಿಳಿಂiÀiಲಾ ಸಂಗ ನಿಜಾರ್ಧಾಂಗಿಯೊಡನೆ ಕರ್ಮವರಿಯಲಾ ಮಂಗಳ ವಾದ್ಯಗಳ ಶ್ರವಣ ಕರ್ಮವಹುದಲಾ ರಂಗಗರ್ಪಣವೆನ್ನೊಲಿವÀ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ಕಲಿರಾಯ ಬಂದಿಹನು ಕಾಣಿಕೆಯ ಪಿಡಿದು ಚೆಲುವಿನಿಂದನುಸರಿಸಿ ಕುಲವನುದ್ಧರಿಸಿ ಪ ಮೂರು ಯುಗದೊಳು ತಾನು ಸೇರಿಕೊಂಡನು ವನವ ಚೋರರಾಯರ ಸಂಗ ಬೇಡವೆನುತ ವೀರನಾಗಿಯೆ ಬಂದ ನಾಲ್ಕನೆಯ ಯುಗದೊಳಗೆ ಸಾರಿ ಬನ್ನಿರೊ ನಮ್ಮ ದೊರೆಯ ಮನ್ನಿಸಲು 1 ಮದಮುಖರ ಕಾಣುತಲೆ ಮುದದಿಂದ ಮನ್ನಿಸುತ ಕದನಕರ್ಕಶರನ್ನು ಕಾಮಿಸುವನು ಒದಗಿದನ್ಯಾಯಗಳನೊಲಿಸಿಕೊಂಬನು ತಾನು ಬೆದರಿಕೆಯು ಬೇಡ ನೀವಿದಿರುಗೊಳ ಬನ್ನಿ 2 ಸತ್ಯವೆಂಬುದನೆಲ್ಲ ಹತ್ತಿಸಿದ ಬೆಟ್ಟವನು ಮಿಥ್ಯ ನಿರ್ಮಳಕೆಲ್ಲ ಕುತ್ತಿಗೆಗೆ ಬಂತು ಒತ್ತಿಯಾಳುವ ಧರ್ಮ ಸತ್ತು ಹೋದನು ಹಿಂದೆ ಮೃತ್ಯು ಭಯ ನಮಗಿಲ್ಲ ಹತ್ತಿರಕೆ ಬನ್ನಿ 3 ತಪ್ಪಿ ಹೋಯಿತು ಶಾಸ್ತ್ರ ತಪ್ಪಾಯ್ತು ಪೌರಾಣ ಮುಪ್ಪು ಬಂದುದು ವೇದ ಕಪ್ಪಾದನಗ್ನಿ ತುಪ್ಪನ್ನ ಬೇಡವಗೆ ಇಪ್ಪ ಭಯಗಳು ಹೋಯ್ತು ಒಪ್ಪಿ ಕಾಣಿಸಿಕೊಂಡು ಸುಖಿಯಪ್ಪ ಬನ್ನಿ 4 ಸ್ನಾನವೆಂಬುದು ಯೆಲ್ಲ ಮಾನಿನಿಯ ಅಡಿಗೆಯೊಳು ಮೌನ ಜಪಗಳನೆಲ್ಲ ಕೃಷಿಕೊಂಡನು ಹಾನಿಯಾದರು ಯಜ್ಞಹೀನರಾದರು ಪಿತೃಗ ಳೇನ ಮಾಡುವರಿವರು ಅನುಮಾನ ಬೇಡೆನುತ 5 ದಯಯೆನಿಪವನು ಹೋಗಿ ಕೊಯ್ಸಿಕೊಂಡನು ಕೊರಳ ಭಯವಿಲ್ಲ ಹಿರಿಯರೂ ವ್ಯಯವ ಸೇರಿದರು ನಯನೀತಿ ಹೇಳುತಿಹ ಗುರುವಿನೊಳು ಕಣ್ಣಿಲ ್ಲ ಜಯವಾಯ್ತು ದೇಶದೊಳು ಹೊಯ್ಸಿ ಡಂಗುರುವ 6 ಶಿವನು ದುರ್ಗವ ಬಲಿದ ಜವನು ದಂಡವನಿಟ್ಟ ಬವಣೆಬಡುವನು ಕಮಲಭವನು ತನ್ನೊಳಗೆ ಹವಣನರಿಯದೆ ವಿಷ್ಣು ತವಕಿಸುವ ಮನದೊಳಗೆ ಕವಲು ಮನ ಬೇಡಿರಲು ಬಹುದು ಇವನೊಳಗೆ 7 ಪತಿಯ ಮರೆತಳು ಸತಿಯು ಸುತ ಮತಿಯ ತಪ್ಪಿದನು ಯತಿ ಸತತ ಮನದೊಳಗೆ ಖತಿಗೊಂಬನು ಚತುರವರ್ಣಾಶ್ರಮವ ಜೊತೆಯಾಗಿ ನಡೆಸುತಿಹ ಮತಿಯುತನು ದೃಢವೆಂದು ಕಾಯವನುಸರಿಸಿ8 ತಾಯಿ ತಂದೆಯ ಕೊಂದು ಜೀವ ಹಾನಿಯ ಮಾಡಿ ಬಾಯ ಹೊಯ್ದರು ಕೇಳ ಬಡವರನ್ನು ಮಾಯವಾದಿಯ ಮಾತು ಕೂಡಿಸುವ ಜೀವವನು ರಾಯರಾಯರ ಮುಂದೆ ನಡೆಸುತ್ತಲಿಹರು 9 ಆಡಿಗಾರರ ತಂದು ನಾಡ ಊಳಿಗಕಿಡುವ ನೋಡಿದನ್ಯಾಯ ಮಾತುಗಳ ಹಿಡಿತರುವನು ಕೂಡಿಸುವ ಜೀವವನು ಎಳೆನೀರು ಸಕ್ಕರೆಯು ಬೇಡಿದಿಷ್ಟಾರ್ಥದೊಳು ನೋಡಿ ನಡೆಸುವನು 10 ಕೆಟ್ಟನೀತಿಯ ಒಳಗೆಯಿಟ್ಟುಕೊಂಡರೆ ನಿಮ್ಮ ಗಟ್ಟಿಬಡಿಸುವ ದೊರೆಯು ದೃಷ್ಟಿಯಲಿ ನೋಡ ಕಷ್ಟವಿಲ್ಲದೆ ಸುಖದಿ ಹೊಟ್ಟೆಯನು ಹೊರಕೊಂಡು ಸೃಷ್ಟಿಯೊಳು ವರಪತಿಯ ಮುಟ್ಟಿ ಸೇವಿಪುದು 11 ಕಾಲದರಸಿನ ನೋಡಿ ಮೂಲ ಪಡಕೊಂಬುವರು ಆಲಸ್ಯವನು ಬಿಟ್ಟು ಸೇವಿಸುವುದು ಶಾಲು ಸಕಲಾಭರಣ ತೋಲಾಗಿ ಬರುತಿಹುದು ಜಾಲರೂಪವದಾಗಿ ಮನಕೆ ತೋರುವುದು 12 ತಾಯಿ ತಂಗಿಯರನ್ನು ಮೋಹಿಸಲು ದೊರೆರಾಯ ಬಾಯಹೊಯಿಯೆಂದೆನುತ ನೋಯನುಡಿ ಪೇಳ ಆಯವಾಗಿಹ ಪುರುಷ ಸಾಯಲಾಕ್ಷಣ ಬಂದು ಕಾಯವನು ಬಳಸುವನು ಮೋಹವನು ತೋರಿ13 ಹೀಗೆಂದು ಚರನೋರ್ವ ಕೂಗಿ ಕರೆಯಲು ಬಂದು ಅಗಲೇ ಎದ್ದು ಇದಿರಾಗಿ ಪರಿಜನವು ಬೇಗದೊಳಗನುಸರಿಸಿ ಭೋಗವನು ಕೈಕೊಂಡು ರಾಗದೊಳಗಿದ್ದರಾ ಭವಜಲದ ನಡುವೆ 14 ಹೇಡಿಗಳು ಬರಬೇಡಿ ಮೂಡ ಗುಡ್ಡೆಯ ಸೇರಿ ಕಾಡಫಲವನು ಮೆದ್ದು ಕೋಡಗಲ್ಲಿನೊಳು ಆಡುತಿಹ ವರಾಹತಿಮ್ಮಪ್ಪನ್ಹತ್ತಿರದಿ ಬೇಡಿಕೊಳ್ಳಿರೊ ಎನುತ ನೋಡಿ ನಗುತಿಹರು 15
--------------
ವರಹತಿಮ್ಮಪ್ಪ
ಕಾಕು ನೀಮೀನ ಮೇಷಂಗಳನೆಣಿಸದೆ ನೂಕು 1ಸಾಕು ಮಂದನಾಗಬೇಡ ನಿನಗೆಬೇಕಾದ ಸುಖವಿದೆ ನಿನ್ನೊಳು ನೋಡಶೋಕ ಮೋಹಗಳನೀಡಾಡ ನಿನ್ನನೀ ಕಂಡು ನಿಜ ಸುಧೆಯೊಳಗೋಲಾಡ2ನಿನ್ನೊಳು ನಿಜ ಸುಖವುಂಟು ನೀನನ್ಯವನಳಿದು ನೋಡಲು ಕೈಗಂಟು ಭಿನ್ನ ಬುದ್ಧಿಯನೆಲ್ಲದಾಂಟುಸನ್ನುತಾನಂದಾಮೃತವನೊಲಿದೀಂಟು 3ಗುರುವಿನ ಕೃಪೆುಲ್ಲದಿಲ್ಲಾ ಮುಕ್ತಿಕರೆದರೆ ಬರುವರೆ ಕಾಮಿನಿಯಲ್ಲಪರಮ ಧೈರ್ಯವ ಮಾಡುವನಲ್ಲ ನಿನ್ನಮರೆಯದೆ ನೋಡು ನಾನೆಂದಿದನೆಲ್ಲಾ 4ಈ ಪಾಳು ಕರ್ಮದಲೇನು ಈಗನಾ ಪೇಳಿದೆ ಕಂಡುದ ಮಾಡು ಮಾಣುಕೋಪವ ಬಿಡು ಸುಖಿ ನೀನು ಸದ್ಯಗೋಪಾಲಾರ್ಯರ ಕಂಡೆ ಇನ್ನೇನೂ 5
--------------
ಗೋಪಾಲಾರ್ಯರು
ಕಾಣಲಿಲ್ಲವೆಂದೆನಬೇಡಿ ಪ ಜಾಣನವನು ನಿಮ್ಮ ಕೋಣೆಯೊಳಗಿರುವಾ ಗು ಡಾಣವ ತುಡುಕುವ ನೆರೆನೋಡಿ ಅ.ಪ ಸುಲಭನು ನಿಮಗವನೊಲಿವನು ನಿಮ್ಮೆಡೆ ನಿಲುವನು ನಲಿವನು ಕೈನೀಡೀ ಸಲಿಸಿರಿ ಬೆಣ್ಣೆಯ ಮೆಲುವನು ಕಿಲಕಿಲ ನುಲಿವನು ಚಲಿಸಲು ಬಿಡಬೇಡಿ 1 ಅಳುಕುತ ಬಳುಕತ ಬಳಲುತ ಸುಳಿಯುತೆ ಘಳಿಲನೆ ಪೋಪನೆಚ್ಚರವಿರಲಿ ಎಳನಗೆಯಿಂದ ಪಾಲೆರೆಯಿರಿ ಮನ ದೊಳಚ್ಚಳಿಯದ ಮೋದವು ನೆಲೆಸಿರಲಿ 2 ಮನವೆಂಬುವುದೇ ವನರುಹವಮ್ಮಾ ಕನಸುನೆನಸಿನೊಳಾ ವನಜವನರ್ಪಿಸೆ ನೀನೆಂಬುದನೇ ಮರೆಯುವಿರಮ್ಮಾ [ತನುಮನ ಅವನಡಿ ಸೇರುವುದಮ್ಮಾ] 3 ಪಡಸಾಲೆಯೊಳಿವ ನಿಲ್ಲುವನಲ್ಲಾ ಅಡಿಗೆಯ ಕೋಣೆಯ ಬಿಡುವನಲ್ಲ ಒಡೆಯ ಶ್ರೀಮಾಂಗಿರಿಪತಿಯನು ನೋಡದ ಮಡದಿಯಿಲ್ಲವೆಂಬುದು ಸಟೆಯಲ್ಲ 4 ನೀವಿರುವಾಯೆಡೆ ಪಾಲ್ಗಡಲಮ್ಮಾ ನೀವಡಿಯಿಡುವುದೇ ಕಡೆಗೋಲಮ್ಮಾ ದಧಿ ನವನೀತವು ನೀವಿರೆ ಮಾಂಗಿರಿರಂಗನುಂಟಮ್ಮಾ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಸನಿತ್ತಿರಿ ಭರದಲಿ ಹಾಗದ ಕಾಸನಿತ್ತಿರಿ ಭರದಲಿ ಪ. ವಾಸುದೇವನ ದಯೆಯೆ ಸಾಕು ಕಾಸುಬೇಡಿದವರಲ್ಲ ನಾವ್ ಕೃಪಣರ ಕಾಸಮುಟ್ಟುವರಲ್ಲ ನಾವ್ ಅ.ಪ ಘನತೆಯೊಂದಿಹ ಧನಿಕರೆಂದು ಗಣಿಸಿಸಾರಿದೆವಿಲ್ಲಿಗೆ ಘನತೆಗೊಪ್ಪುವ ಬಗೆಯ ತೋರದೆ ಧನದ ಮೋಹದಿ ಮೆರೆದಿರೆ ನೀವ್ ಅಣುಗಿಯರೋಳ್ ಮುಳಿದಿರೇ 1 ಮಂದಿಯಿದಿರೋಳ್ ಮೌನದಿಂ ನೀ ವಿಂದು ಲೋಭದ ಮಂತ್ರದಿಂ ತಂದೆ ನಿಮ್ಮೀ ಒಂದು ಹಣವನು ಕೈಗೊಂಡು ನೀವೇ ನಲಿಯಿರಿ ಬಂಧು ಮಿತ್ರರನೊಲಿಸಿರಿ 2 ಭಳಿರೆ ನೀವೌದಾರ್ಯಗುಣದೊಳು ಬಲಿದರೆನ್ನಿಸಿ ಮೆರೆದಿರೆ ಜಲಜಲೋಚನ ಶೇಷಶೈಲನಿವಾಸನೊಲವಿಂ ಸಂತತಂ ನಲಿದು ಸುಖಿಸಿರಿ ಸಂತತಂ 3
--------------
ನಂಜನಗೂಡು ತಿರುಮಲಾಂಬಾ
ಕುಲ ಕುಲ ಕುಲವೆನ್ನುತಿಹರು ಪ ಕುಲವ್ಯಾವುದು ಸತ್ಯಸುಖವುಳ್ಳ ಜನರಿಗೆ ಅ ಕೆಸರೊಳು ತಾವರೆ ಪುಟ್ಟಲು ಅದ ತಂದುಬಿಸಜನಾಭನಿಗರ್ಪಿಸಲಿಲ್ಲವೆಹಸುವಿನ ಮಾಂಸದೊಳುತ್ಪತ್ತಿ ಕ್ಷೀರವವಸುಧೆಯೊಳಗೆ ಭೂಸುರರುಣಲಿಲ್ಲವೆ1 ಮೃಗಗಳ ಮೈಯಲಿ ಪುಟ್ಟಿದ ಕತ್ತುರಿಯತೆಗೆದು ಪೂಸುವರು ದ್ವಿಜರೆಲ್ಲರುಬಗೆಯಿಂದ ನಾರಾಯಣನ್ಯಾವ ಕುಲಅಗಜ ವಲ್ಲಭನ್ಯಾತರ ಕುಲದವನು 2 ಆತ್ಮ ಯಾವ ಕುಲ ಜೀವ ಯಾವ ಕುಲತತ್ತ್ವೇಂದ್ರಿಯಗಳ ಕುಲ ಪೇಳಿರಯ್ಯಆತ್ಮಾಂತರಾತ್ಮ ನೆಲೆಯಾದಿಕೇಶವನುಆತನೊಲಿದ ಮೇಲೆ ಯಾತರ ಕುಲವಯ್ಯ 3
--------------
ಕನಕದಾಸ
ಕೃಷ್ಣದ್ವೈಪಾಯನ ಗುರುರಾಜರ ಚರಣ ಕಮಲಕಾನಮಿಪೆ ಶಿರಬಾಗಿ ಬಿನ್ನೈಪೆ ಪ ವೇದವ್ಯಾಸರ ಕರಕಮಲಜರೆನಿಸಿ ವೇದೇಶರ ಮುಖದಿ ವೇದಾಂತ ಸುಶಾಸ್ತ್ರ ಜ್ಞಾನವ ಘಳಿಸಿ ಮೇದಿನಿಯೊಳು ಚರಿಸಿ ಮೇದಿನಿ ಸುರರಿಗೆ ಮೋದವ ಗರೆದ 1 ಧರಿಜಾರಮಣನ ಪದಪೂಜಿಸಿದಂಥ ಶ್ರೀ ವ್ಯಾಸರ ಮಂತ್ರ ಧರಿಯೊಳು ಜಪಿಸಿದರಿವರೆ ಮಹಾಂತರೆನಿಸಿದರತಿ ಶಾಂತ ವರುಣಿಸಲೊಶವೆ ಗುರುವರ ಮಠದಲಿ ಸುರಗಂಗೆಯು ಬಂದಿರುವ ಮಹಿಮೆಯನು 2 ವರ ಭೀಮಾತಟದಿ ವಿರಾಜಿಸುವಂಥ ಕುಸುಮೂರುತಿ ಸಂಸ್ಥ ಶರಣಾಗತ ಜನರಿಗೆ ಸಕಲಾಭೀಷ್ಟ ಗರಿಯುವ ಸುಸಮರ್ಥ ಧರೆಯೊಳು ಮೆರೆಯುವ 'ಶಿರಿ ಕಾರ್ಪರ ನರಹರಿ' ಯ ನೊಲಿ-ಸಿರುವ ಪರಮ ಮಹಾತ್ಮ3
--------------
ಕಾರ್ಪರ ನರಹರಿದಾಸರು
ಕೃಷ್ಣನು ನೆಲಸಿರಲು ನಾಕದ ಸಿರಿಯ ನಿರಾಕರಿಸುವ ಸಿರಿತಾಹರ್ಷದೊಳು1 ಮೋಹಿಸಿ ಮನದಿ ಪತಿ ಭಾವದಿ ನೋಡುತ ಭರದಿ 2 ಕಾಮಿಸಿ ಕಾಡಲು ಕಾಕುತ್ಸ್ಥನು ಬಲರಾಮ ಸಹಜನವತಾರದಲಿ ಕಾಮಿತವಹದೆನೆ ಕಾಮಿನಿ ರಾಧಾ ನಾಮದಿ ಜನಿಸಿರೆ ಗೋಕುಲದಿ 3 ಒಂದಾನೊಂದಿನ ನಂದಾದಿಗಳಾ ನಂದಾನ್ವಿತಮತಿ ವೃತ್ತಿಯಲಿ ಒಂದಾಗಿ ಧರಾ ವೃಂದಾರಕರನುವಿಂದಾರಾಧಿಪ ಭಕ್ತಿಯಲಿ 4 ಬಂದರು ವರಕಾಳಿಂದಿಯ ತೀರದಿ ನಂದನದಂತಿಹ ವನದೆಡೆಗೆ ಮುಕುಂದನ ಧ್ಯಾನಿಸುತಡಿಗಡಿಗೆ 5 ಗೋಧನ ದಾನದಲ್ಲಿ ಬಲ್ಲಿದ ಭೋಜನದಲ್ಲಿ ದಣಿಸಿ ಸುಖದಲ್ಲಿರುತಿರಲಾಸಮಯದಲಿ 6 ಸುಜನ ಸ್ತುತದಿನಕರ ನೈದಿರಲು ನಿಸ್ತುಲತಮದಿ ಸಮಸ್ತರದೃಷ್ಟಿಗಳಸ್ತಗೊಳಿಸೆ ಜನಭಯಗೊಳಲು 7 ರಾಧೆಯತಾನೋಡಿ ಕಂದನ ನೀನೇ ಮಂದಿರಕೈದಿಸು ಎಂದರೆ ಬಂದಳು ನಗೆಗೂಡಿ 8 ಬಾ ಕಮಲಾಸನನ ತೊರುವೆ ಶಶಿವದನಾ 9 ನೀನೊಲಿದುದನು ಬೇಡನಿನ್ನನೆ ಕೂಡಿಹೆನು 10 ತನ್ನಯಮನದೊಳಗೆ ಚರಿತ್ರನು ಕಾಮಿನಿಗೆ11 ಬಲು ಸಡಗರದಿ ವೃತ್ತಕುಚಗಳಿಂದೊತ್ತಿಮನೊಭವನರ್ಥಿಗೆ ಸೊಕ್ಕುವ ಕಾತರದಿ 12 ಕರುಣನಾದೊಡೀಗಲೇ ಬೆರೆದು ಬರುತಿರ್ದಳು ನಲಿದು 13
--------------
ಸರಗೂರು ವೆಂಕಟವರದಾರ್ಯರು
ಕೃಷ್ಣಾ ಬಿಡು ದಾರಿ ದಾರಿ ದಾರಿ ಪ ನೀನೊಲಿದೆನ್ನಕೂಡ ಸರಸವ ನಾಡುವರೆ | ನಾನೆರೆ ಗಂಡುಳ್ಳ ನಾರಿ ನಾರಿ ನಾರಿ ನಾರಿ 1 ಮಾರಲು ಬಂದಿಹ ನೆರೆದ ಗೊಲ್ಲತೆಯರಾ | ಸೂರಿ ಸೂರಿ 2 ಗುರು ಮಹಿಪತಿ ಪ್ರಭು ಕಣ್ಣಿಲೆ ಕಂಡವರ | ಕರವ ಬಿಡವನಲ್ಲಾ ಜಾರಿ ಜಾರಿ ಜಾರಿ ಜಾರಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು