ಒಟ್ಟು 424 ಕಡೆಗಳಲ್ಲಿ , 71 ದಾಸರು , 389 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನ ಬೇಡಲೊ ನಿನ್ನ ದೇವಾಧಿ ದೇವ ಪ ಏನಹುದೊ ನಿನ್ನೊಳಗೆ ಮಹಾನುಭಾವ ಅ.ಪ ವನಧಿ ಹಾಸಿಗೆಯು ವಟಪತ್ರವನಿತೆಯರ ಬೇಡಲೆ ಬ್ರಹ್ಮಚಾರಿಘನ ಸಖ್ಯವನು ಬಯಸೆ ನೆನೆಯುವರ ಮನದಲಿಹೆತಿನುವುದಕೆ ಕೇಳುವೆನೆ ನವನೀತಚೋರ 1 ಒಡವೆಗಳ ಬಯಸೆ ಶಿಖಿಪಿಂಛ ತುಳಸಿ ಪತ್ರಕಡು ಸೈನ್ಯವನೆ ಬಯಸೆ ಗೋಪಾಲನುಬಿಡದೆ ರೂಪವÀ ಬಯಸೆ ನೀಲಮೇಘಶ್ಯಾಮಉಡುವುದಕೆ ಕೇಳುವೆನೆ ಸ್ತ್ರೀವಸನ ಚೋರ 2 ಶಕ್ತಿಯನು ಗೋಪಿಕಾ ಸ್ತ್ರೀಯರಲಿ ವ್ರಯಗೈದೆಭಕ್ತಿಯನು ಸತ್ಯವಂತರಿಗಿತ್ತಿಹೆಭಕ್ತರನು ವಂಚಿಸುತ ನೀನು ಬಚ್ಚಿಟ್ಟಿರುವಮುಕ್ತಿ ಕಾಂತೆಯ ಕೊಡು ಸುಖಿಪೆನೊ ಶ್ರೀಕೃಷ್ಣ3
--------------
ವ್ಯಾಸರಾಯರು
ಏನು ಮಾಯವೊ ಹರಿಯೆ ಶ್ರೀನಿವಾಸನೆ ನಿನ್ನ ಧ್ಯಾನಿಸುವವರನು ಪೊರೆವೆ ಸಾನುರಾಗದಲಿ ಪ ಜ್ಞಾನಿಗಳು ಹಗಲಿರುಳು ಮೌನದಿಂದಲಿ ಭಜಿಸಿ ದಾನವಾಂತಕ ನಿನ್ನ ಧ್ಯಾನ ಮಾಡುವರು ಅ.ಪ ಬಡತನದಿ ಬಹು ವ್ಯಥೆಯ ಪಡುತ ಸತಿಸುತರಿರಲು ನುಡಿಯೆ ಭಯ ಭಕ್ತಿಯಲಿ ಒಡೆಯರಿಲ್ಲೆಮಗೆ ಮೃಡಸಖನು ಇಹನೆನಲು ಹಿಡಿಯವಲಿಯ ಕೊಡಲು ಕೆಡದ ಸೌಭಾಗ್ಯವನು ಒಡನೆ ನೀಡಿದೆಯೊ 1 ಅಂದು ದುಶ್ಖಾಸನ ನೃಪನಂದನೆಯ ಬಾಧಿಸುತ ನಿಂದು ಸೀರೆಯ ಸೆಳೆಯೆನೊಂದು ದುಃಖಿಸುತ ಇಂದಿರಾಪತಿ ಕೃಷ್ಣ ಇಂದೆನಗೆ ನೀನೆ ಗತಿ ಎಂದೊಡಕ್ಷಯವಿತ್ತು ಅಂದು ಸಲಹಿದೆಯೊ 2 ಮಡುವಿನಲಿ ಗಜರಾಜ ಪಿಡಿದ ಮಕರಿಗೆ ಸಿಲುಕಿ ಮಡದಿ ಮಕ್ಕಳನಗಲಿ ಕಡೆಗೆ ಸೊಂಡಿಲಲಿ ಪಿಡಿದ ಕುಸುಮವನು ಜಗದೊಡೆಯಗರ್ಪಿತವೆನಲು ದಡದಡನೆ ಬಂದೆಯೊ ಮಡದಿಗ್ಹೇಳದಲೆ 3 ಅಂದು ದೂರ್ವಾಸಮುನಿ ಬಂದು ಶಿಷ್ಯರ ಸಹಿತ ಇಂದೆಮಗೆ ಹಸಿವೆನಲು ನೊಂದು ಶ್ರೀಹರಿಯೆ ತಂದೆ ನೀ ಸಲಹೆನಲು ಬಂದೆ ಬಹಳ್ಹಸಿವೆಯಲಿ ಒಂದು ಪತ್ರದ ಶಾಖ ಉಂಡು ಸಲಹಿದೆಯೊ 4 ಹಿಂದಜಾಮಿಳ ತನ್ನ ಬಂಧುಬಳಗವ ತ್ಯಜಿಸಿ ಅಂದು ಇಹಸುಖದಿ ಆನಂದ ಪಡುತಿರಲು ಬಂದರಾಗ ಯಮಭಟರು ನಿಂದು ಬಾಧಿಸುತಿರಲು ಕಂದನಾರಗನೆನಲು ಅಂದು ಸಲಹಿದೆಯೊ 5 ಚಿಕ್ಕವನು ಪ್ರಹ್ಲಾದ ಮಕ್ಕಳಾಟದ ಧ್ರುವನು ರಕ್ಕಸಾಂತಕನ ಮೊರೆ ಇಕ್ಕಿ ಪ್ರಾರ್ಥಿಸಲು ತಕ್ಕವರಗಳನಿತ್ತು ತಕ್ಕೈಸಿ ಅಣುಗನನು ಮಿಕ್ಕಭಕುತರ ಪೊರೆದೆ ಲಕ್ಕುಮಿಯ ರಮಣ 6 ಈ ಪರಿಯಲಿ ಬಹುಭಕುತರಾಪತ್ತುಗಳ ಹರಿಸಿ ಶ್ರೀಪತಿಯ ರಕ್ಷಿಸಿದಿ ಆಪನ್ನಜನರ ಗೋಪತಿ ಕೃಷ್ಣ ಜಗದ್ವ್ಯಾಪಕನೆ ನೀ ಸಲಹಿ ತಾಪಸರ ಒಡೆಯ ಹೃದ್ವ್ಯಾಕುಲವ ಕಳೆವೆ 7 ಕಾಳಿ ಮಡುವನೆ ಧುಮುಕಿ ಕಾಳಿಂಗನ್ಹೆಡೆ ತುಳಿದೆ ಕಾಳದೇವಿಯರಮಣ ಕಾಲಿಗೆರುಗುವೆನು ಕಾಳಯುಕ್ತಿನಾಮ ಸಂವತ್ಸರದಿ ಸುಜನರಿಗೆ ಭಾಳ ಸುಖಹರುಷಗಳ ಲೀಲೆ ತೋರಿಸುವ 8 ಭ್ರಮಿಸಿ ಇಹ ಸುಖದಿ ಮನ ಶ್ರಮ ಪಡುತಲಿರೆ ದೇವ ರಮೆಯ ರಮಣನೆ ಪೊರೆಯೊ ಮಮತೆಯನು ಬಿಡದೆ ಕಮಲಸಂಭವಜನಕ ಕಮಲನಾಭ ವಿಠ್ಠಲ ಸುಮನಸರ ಒಡೆಯ ಹೃತ್ಕಮಲದಲಿ ಪೊಳೆವ 9
--------------
ನಿಡಗುರುಕಿ ಜೀವೂಬಾಯಿ
ಏನು ಹೇಳಲಿ ನಿನಗ ಮನವೇ ನಾ ಇನ್ನೇನು ಹೇಳಲಿ ನಿನಗೆ ಶ್ರೀನಾಥನಂಘ್ರಿಯ ನೀನೋಲೈಸದಿಹುದೇನೋ ಪ ಮನುಷ್ಯದೇಹ ಧರಿಸಿ ಸದ್ಗತಿಯ | ಜ್ಞಾನದಾರಿ ತ್ಯಜಿಸಿ ನೀ ಭಕುತಿ ಸುಖ | ಖೂನವಿಲ್ಲದೆ ಚರಿಸಿ | ಏನೂ ಇಲ್ಲದೆ ವಿದ್ಯಾ ಮಾಟಕ ಭ್ರಮಿಸಿಹುದೇನಾ 1 ವಿಷಯ ಸುಖ ಹರಿದು ಸಂಸಾರದಿ | ನಿಶಿದಿನದಲಿ ಸವೆದು ತಾಪತ್ರಯ | ಘಸಣಿಯೊಳಗ ಕುದಿದು | ಪಶುವಿನ ಪರಿಯಲಿ ಯಚ್ಚರ ಮರೆದಿಹುದೇನಾ 2 ಇನ್ನಾರೆ ಹಿತವರಿಯೋ ಸದ್ಗುರುವಿನ | ಮನ್ನಿಸಿ ಗತಿ ಪಡಿಯೋ ಹರಿಯ ನಾಮವಾ | ಚನ್ನಾಗಿ ನಂಬಿ ನಡಿಯೋ | ಸನ್ನುತ ಮಹಿಪತಿ ಬೋಧಾಮೃತ ಸವಿಯದೇನಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆಂಬೆ ನಿಮ್ಮ ಕರುಣವು ದೇವವರ್ಯ, ಶ್ರೀಮ- ಪ ದಾನಂದತೀರ್ಥಾರ್ಯ ಹರಿಕಾರ್ಯಧುರ್ಯ ಅ.ಪ. ವಾರಿಧಿಯ ಗೋಷ್ಪಾದ ನೀರಂತೆ ದಾಟ್ಯಂದುಮಾರು ಮಲೆತಾಕ್ಷನನು ಮುರಿದು ಮೆರೆದೆಸಾರಿ ಬಹ ರಕ್ಕಸರ ಮುರಿದÉೂಟ್ಟಿ ನೀನಿಂದುಮೇರೆಯಿಲ್ಲದ ಭವಾಂಬುಧಿಯ ದಾಟಿಸಿದೆ 1 ದಾನವನಶೋಕವನ ಕಿತ್ತು ಈಡ್ಯಾಡಂದುಶ್ರೀನಾಥಗೆನುತ ಲಂಕೆಯನುರುಪಿದೆಮಾನವರ ಶೋಕವನ ಬೇರೊರಸೆ ಕಿತ್ತಿಂದುದಾನವರಿಹ ಪುರವ ಪೂರೈಸಿ ಮೆರೆದೆ 2 ಬೇಗ ಸಂಜೀವನವ ತಂದಿತ್ತು ಪೊರೆದ್ಯಂದುನಾಗಪಾಶದಿ ನೊಂದ ಕಪಿಕಟಕವಈಗ ಹರಿಭಕುತಿ ಸುಧೆಯ ನೆರೆದು ಪಾಲಿಸಿದೆರಾಗದಿಂ ಭವಪಾಶಬದ್ಧ ಜನರುಗಳನ್ನು 3 ಭವಾಬ್ಧಿ ಮಗ್ನ ಜನಗಳನಿಂದು 4 ಹತ್ತು ದಿಕ್ಕನು ಗೆಲಿದು ರಾಜಸೂಯದಿ ಅಂದುಚಿತ್ತೈಸಿ ಹರಿಗಗ್ರ ಪೂಜೆಯನು ಮಾಡಿದೆಹತ್ತೆರಡು ಮತ್ತೊಂದು ದುರ್ಭಾಷ್ಯ ಜರಿದಿಂದು ಬಿತ್ತರಿಸಿದೆ ಭಾಷ್ಯದಿಂದಗ್ರಪೂಜೆಯನು 5 ದ್ರೌಪದಿಯ ಸಂತವಿಟ್ಟಂದು ಮುಡಿ ಪಿಡಿದೆಳೆದಪಾಪಿ ದುಶ್ಶಾಸನನ ಬಸುರನ್ನು ಬಗೆದೆಪಾಪಿ ಜನರುಗಳೆಳೆಯೆ ವೇದಾಂತ ದೇವಿಯರಶ್ರೀಪತಿಗೆ ಸೇರಿಸಿದೆ ಭಾವವರಿದಿಂದು 6 ಅಂದು ಕಲಿಯಂಶ ದುರ್ಯೋಧನನ ಸಂದುಗಳಕುಂದದೆ ಮುರಿದೆ ಗದೆಯಿಂದ ಸದೆದುಇಂದು ಕಲಿಯನನೇಕ ಶಾಸ್ತ್ರ ಶಸ್ತ್ರಗಳಿಂದಕೊಂದೆಳೆದೆ ಹರಿಯ ಮನ್ನೆಯದಾಳು ಭಳಿರೆ 7 ಶ್ರುತಿಪಂಕಜಗಳರಳೆ ಅಜ್ಞಾನ ತತಿಯೋಡೆಗತಿಗಳಡಗೆ ಮಿಥ್ಯವಾದಿ ಖಳರಕುಮತಗಳು ಮುರಿಯೆ ಸತ್ಪಥವು ಕಾಣಿಸಲುವಿತತವಾಯಿತು ನಿನ್ನ ಪ್ರಭೆ ಸೂರ್ಯನಂತೆ 8 ಜ್ಞಾನಚಂದ್ರಿಕೆ ಪೊಳೆಯೆ ಭಕ್ತಿವಾರಿಧಿಯುಕ್ಕೆಮನ ಚಕೋರವು ವಿಷ್ಣುಪದದಿ ನಲಿಯೆದೀನ ಜನ ಭಯವಡಗೆ ತಾಪತ್ರಯಗಳೋಡೆಆನಂದತೀರ್ಥೇಂದು ಶ್ರೀ ಕೃಷ್ಣ ತಾ ಮೆಚ್ಚೆ 9
--------------
ವ್ಯಾಸರಾಯರು
ಕಂಡು ನಮಿಸಿದೆ ನಿನ್ನ | ಕಡಗೋಲ ಪಿಡಿ- ದುದ್ದಂಡ ದೇವವರೇಣ್ಯ ತಾಪತ್ರಯಗಳಘ ಹಿಂಡು ಓಡಿಸು ರನ್ನ ಪೊರೆ ಸುಪ್ರಸನ್ನ ಪ. ಕಂಡೆ ನಿನ್ನಯ ಬಾಲರೂಪವ ಪುಂಡರೀಕದಳಾಯತಾಕ್ಷನೆ ಕುಂಡಲೀಶಯ ನಿನ್ನ ಚರಣದಿ ದಂಡವಿಕ್ಕುವೆ ಗೋಪಿಬಾಲ ಅ.ಪ. ಜನನ ಮರಣದಿ ನೊಂದೆ | ಶ್ರೀ ಜಾನಕೀಪತೆ ಪ್ರಣತ ಜನರಿಗೆ ತಂದೆ | ನೀ ಕಾಯದಿದ್ದರೆ ಘನವೆ ನಿನಗಿದು ಎಂದೆ | ಪಾಲಿಪುದು ಮುಂದೆ ಜನಮ ಜನುಮದ ಕರ್ಮಗಳ ನಾ ಅನುಭವಿಸಿ ಪೂರೈಸಲಾಪೆನೆ ಘನಮಹಿಮ ದಯ ಮಾಡಿದಲ್ಲದೆ ಕೊನೆಯ ಕಾಣೆನು ವಿಷಯ ವಾಸನೆ ವನಜ ಸಂಭವ ಪವನ ರುದ್ರಾ ದ್ಯನಿಮಿಷಿರಿಗಿನಿತಿಲ್ಲ ಮಹಿಮೆಯು ನಿನಗೆ ವಿೂರಿದರುಂಟೆ ದನುಜದಲ್ಲಣ ದಯದಿ ಸಲಹೊ 1 ಕಾಮಪಿತ ಮಧ್ವೇಶ | ಸೌಂದರ್ಯ ಸಾರ ತಾಮಸರ ವಿಧ್ವಂಸ | ಸಜ್ಜನರ ಕಾಯುವ ಕೋಮಲಾಂಗನೆ ಶ್ರೀಶ | ಲಕ್ಷ್ಮೀ ನಿವಾಸ ಹೋಮಕುಂಡದಿ ಪುಟ್ಟಿದಾ ಸತಿ ಕಾಮಿಗಳ ಉಪಟಳಕೆ ಸಹಿಸದೆ ಶ್ರೀ ಮನೋಹರ ಕಾಯೊ ದ್ವಾರಕೆ ಧಾಮ ನೀ ಗತಿ ಎನುತವರಲೆ ಪ್ರೇಮದಿಂದಕ್ಷಯವನಿತ್ತ ನಾಮ ಮಂಗಳ ನಿರ್ಮಲಾತ್ಮಕ ಸೋಮಶತಪ್ರಭ ಸೌಮ್ಯರೂಪ ತ್ರಿ- ಧಾಮ ಭಕ್ತರ ಕಾಮಿತಾರ್ಥನೆ 2 ಆದಿಮಧ್ಯವಿದೂರ | ಆನಂದ ಪೂರ್ಣ ಸಾಧು ಮನದಿ ವಿಹಾರ | ಸರ್ವಜ್ಞರಾಯರ ಹಾದಿ ತೋರಿಸೊ ಧೀರ | ಸುಜ್ಞಾನಸಾರ ವೇದ ಶಾಸ್ತ್ರಗಳರ್ಥವರಿಯೆನು ಮಾಧವನೆ ಮಮಕಾರದಲಿ ನಾ ಹಾದಿ ತಿಳಿಯದೆ ನೊಂದೆ ಅಜ್ಞತೆ ಹೋದಡಲ್ಲದೆ ನಿನ್ನ ಕಾಣುವ ಮೋದ ಬರುವುದೆ ಮಧ್ವವಲ್ಲಭ ಭೇದ ಮತಿ ಕೊಡು ತಾರತಮ್ಯದಿ ನೀ ದಯದಿ ಒಲಿದೆನ್ನ ಮನದಲಿ ಆದರದಿ ನೆಲೆಸಿನ್ನು ಪೊಳೆಯೊ 3 ಕಡಲಶಯನನೆ ಶ್ರೀಶ | ಕಡಗೋಲ ಕೈ ಪಡುಗಡಲ ತೀರದಿ ವಾಸ | ಕಮಲೇಶ ನಾ ನಿ- ನ್ನಡಿಯ ಕಂಡೆನು ನಾಶ | ರಹಿತನೆ ಪ್ರಕಾಶ ಎಡೆಬಿಡದೆ ನಿನ್ನಸ್ಮರಿಪ ಧ್ಯಾನವ ಕೊಡುತ ಮಧ್ಯದಿ ತಡೆವ ಸಂಸೃತಿ ತಡೆದು ಸಂತ ಚಿಂತನೆಯ ದೃಢ ಒಡಲೊಳಗೆ ನೆಲೆಸಯ್ಯ ಬಿಡದೆ ಪತಿ ಸತಿ ಪಿತ ಕಡಲವಾಸನೆ ಕಡಲ ಬಂಧನ ಕಡಲ ಮಧ್ಯದಿ ಪುರವ ರಚಿಸಿದೆ ಕಡು ದಯಾಂಬಯಧೆ ಕಾಯೊ ಸತತ 4 ಅಷ್ಟಯತಿ ನುತಪಾದ | ಸುಖ ತೀರ್ಥ ಹೃದಯ ದೀಷ್ಟಿತನೆ ಸನ್ಮೋದ | ಸಜ್ಜನರ ಮನದಾ ಭೀಷ್ಟವೀವ ಪ್ರಮೋದ | ಕರುಣಿ ಸುಪ್ರಸೀದ ಕೊಟ್ಟೆ ಮನು ಮುನಿಗಳಿಗೆ ಜ್ಞಾನವ ತುಷ್ಟಿಪಡಿಸುತÀ ಸುರರ ಸುಧೆಯಲಿ ಕುಟ್ಟಿ ಅಸುರನ ಕೋರೆದಾಡಿಲಿ ಕುಟ್ಟಿ ಅರಸರ ಕಟ್ಟಿ ಜಟೆಯನು ಮಟ್ಟಿ ಕಂಸನ ಬಿಟ್ಟು ವಸನವ ದಿಟ್ಟ ಕಲ್ಕಿ ಗೋಪಾಲಕೃಷ್ಣ ವಿಠ್ಠಲನೆÀ ಶ್ರೀ ಉಡುಪಿಲೋಲ5
--------------
ಅಂಬಾಬಾಯಿ
ಕದರಿ ನರಹರಿ ವಿಠಲ | ಮುದದಿ ಪೊರೆ ಇವಳಾ ಪ ಬೆದರಿ ಬೆಂಡಾಗಿ ತವ | ಪದಕೆ ಬಿದ್ದಿಹಳಾ ಅ.ಪ. ಬನ್ನ ಬವಣೆಗಳೇ ?ಇನ್ನು ಪೇಕ್ಷಿಸದೆ ಕಾ | ರುಣ್ಯ ವೀಕ್ಷಣ ತೋರೊಪನ್ನಂಗಶಯ್ಯ ಹರಿ | ಮನುಜ ಮೃಗವೇಷಾ 1 ಸ್ವಾಪದಲಿ ನೀ ತೋರ್ದ | ಆಸನಿಯ ಅಂಕಿತವ ಪ್ರಾಪಿಸಿಹೆ ಇವಳಿಗೆ | ಶ್ರೀಪತಿಯೆ ಕೇಳೋ |ನೀ ಪಾಲಿಸುತ್ತಿವಳ | ತಾಪತ್ರಯಗಳ ಕಳೆಯೆಹೇ ಪಯೋಜ ಭವನುತ | ಪಾಪಾತಿದೂರಾ 2 ಪಾದ | ಪದ್ಮಗಳ ಭಜಿಪಾಮುಗ್ದೆಯನು ಪೊರೆಯೆಂದು | ಮಧ್ವಾಂತರಾತ್ಮಕನೆಬುದ್ಧಿ ಪೂರ್ವಕ ಬೇಡ್ವೆ | ಶ್ರದ್ಧೆ ಪತಿಸುತನೇ 3 ಐಹಿಕಾಮುಷ್ಮಿಕದ | ಬಹು ಪರಿಯ ಸುಖ ಸೌಖ್ಯಶ್ರೀಹರಿಯೆ ಕರುಣಿಸುತ | ಕಾಪಾಡೊ ಇವಳಾಸ್ನೇಹ ಸತ್ಸಂಗದಲಿ | ಪಾಲಿಸುತ ನೀನಾಗಿಮೋಹ ಮಮತೆಯ ಕಳೆದು | ಸಾಧನವ ಗೈಸೋ 4 ತರಳ ಪ್ರಹ್ಲಾದನನ | ಪೊರೆಯಲಿಲ್ಲವೆ ಹರಿಯೆವರ ಧ್ರುವನನ ಪಾಂಚಾಲಿ | ಅಜಮಿಳರ ಪೊರೆದೆಮರುತಾಂತರಾತ್ಮ ಗುರು | ಗೋವಿಂದ ವಿಠ್ಠಲನೆಪೊರೆಯ ಬೇಕಿವಳ ಬಹು | ಕಾರುಣ್ಯದಲಿ ಹರಿಯೇ 5
--------------
ಗುರುಗೋವಿಂದವಿಠಲರು
ಕದವನಿಕ್ಕಿದ ಕಾರಣೇನೆ ಮುದದಿ ಕೇಳೆ ಮೋಹನಾಂಗಿ ಸದನಕ್ಕಾಗಿ ಬಂದೆ ನಾನು ಸರಸವ್ಯಾತಕೆ ಸುಂದರಾಗಿ ಪ ಇಂದು ನಾನು ಬಂದೆ ದ್ರೌಪದಿ ಬಂದು ಬಾಗಿಲನ್ಹಾಕುವೋದು ಚೆಂದವೇನೆ ಚಂದ್ರಮುಖಿಯೆ ಬಂದು ಬಾಗಿಲು ತೆಗೆಯೆ ನೀನು 1 ಅಂಧಕಾರ ರಾತ್ರಿಯಲಿ ಬಂದವರ್ಯಾರೆಂದು ಅರಿಯೆ ನಿಂದು ಗುರುತೇನೆಂದು ಪೇಳಲು ಬಂದು ಬಾಗಿಲು ತೆಗೆವೆ ನಾನು 2 ಕಂಡರಿಯೆ ಎನ್ನ ಪರಾಕ್ರಮ ಖಾಂಡವವನವ ದಹಿಸಿದೆನೆ ಗಾಂಡೀವಾರ್ಜುನರಾಯ ನಾನು 3 ಗಾಂಡೀವಾರ್ಜುನರಾಯನಾದರೆ ದುಂಡು ಬಳೆ ಕಂಕಣಗಳಿಟ್ಟು ಗೊಂಡ್ಯ ರಾಗಟೆ ಹೆರಳಲ್ಹಾಕಿ ನೀ ಷÀಂಡರೂಪವ ಧರಿಸ್ಹೋಗೊ 4 ಕ್ಷೀರಸಾಗರದಲ್ಲೆ ತಾ ಮಂ- ದರ ಪೊತ್ತಮೃತವನೆ ತಂದ ಧೀರ ಕೂರ್ಮಗೆ ಮೈದುನಾದಂಥ ಶೂರ ಫಲ್ಗುಣರಾಯ ನಾನೆ 5 ಫಲ್ಗುಣರಾಯನಾದರೇನೊ ಸದ್ಗುಣ ಸಂಪನ್ನ ಬಿರುದು ಭದ್ರದೇವಿಯ ಕದ್ದು ತರುವಾಗ ಬುದ್ಧಿ ದಾರಲ್ಲಿಟ್ಟೆದ್ದಿರ್ಹೇಳೊ 6 ಪರಮೇಶ್ವರನ ಒಲಿಸಿಕೊಂಡು ಪಾಶುಪತಾಸ್ತ್ರ ಪಡೆದೆ ನಾನು ಪರಮ ಆಪ್ತ ವರಾಹನ ಕರುಣಕ್ಕೆ ಪಾತ್ರನಾದಂಥ ಪಾರ್ಥರಾಯನೆ 7 ಪಾಶುಪತಾಸ್ತ್ರ ಪಡೆದರೇನು ದೇಶ- ದೇಶ್ಯಾತ್ರೆತೀರ್ಥ ಚರಿಸಿ ಆಸೆ ಬಿಡದೆ ಸನ್ಯಾಸಿಯಾದಂಥ ಮೋಸಗಾರನೆ ಮನೆಗೆ ಪೋಗು 8 ಕೋಟಿ ದೈತ್ಯರ ಕೊಂದೆ ಎನ್ನಸರಿ- ಸಾಟಿಯಾರೀ ಲೋಕದೊಳಗೆ ಆ- ರ್ಭಟದವತಾರ ನಾರಸಿಂಹನೆ ನೀಟಾದಭಕ್ತ ಕಿರೀಟಿಯಲ್ಲವೆ 9 ಕೋಟಿ ದೈತ್ಯರ ಕೊಂದು ಜೂಜಿ- ನಾಟ ಸೋತ್ವನ ತೋಟ ತಿರುಗಿ ಪಾಟುಬಟ್ಟು ವಿರಾಟನಲ್ಲೆ ನಾ(ನ?)ಟರಾಟಕೆ ನಿಂತಿರ್ಯಾಕೊ 10 ಮಾತಿಗೆ ಮಾತಾಡೋರೇನೆ ಅ- ಭೂತಳವ ಬೇಡಿದ್ವಾಮನಗೆ ದೂತ ನಾ ಶ್ವೇತೂವಾಹನನೆ 11 ಶ್ವೇತೂವಾಹನ ನಿಮ್ಮ ಸತಿಗೆ ನಾಥರಿದ್ದೂ ಅನಾಥಳಂತೆ ಅ- ಜ್ಞಾತದಲ್ಲಿ ಸುದೇಷ್ಣೆ ಸೇವೆಗೆ ದೂತಿಯಾದ ಪ್ರಖ್ಯಾತಿ ದಾರದೊ 12 ಹೆತ್ತತಾಯಿ ಶಿರವನಳಿದ ಕ್ಷತ್ರೇ- ರಂತಕ ಭಾರ್ಗವಗೆ ನಿತ್ಯದಲಿ ನಿಜಸೇವಕ ಭೀ- ಭತ್ಸುರಾಯ ನಾನಲ್ಲವೇನೆ 13 ಧೀರ ಭೀಭತ್ಸುರಾಯ ನಿನ್ನ ನಾರಿಯ ಸಭೆಗೆಳೆದು ತಂದು ಸೀರೆ ಸೆಳೆವಾಗ ಶೂರರಾದರೆ ದಾರದಾರಂತೆ ನೋಡಿರ್ಯಾಕೊ 14 ಕಾಮ ಮೋಹಗಳಿಂದ ನಿನ್ನಲ್ಲೆ ಪ್ರೇಮದಿ ನಾ ಬಂದೆನೀಗ ರಾಮರಾಜÉ್ಞಗೆ ನಿಜ ಸೇವಕ- ನಾದ ವಿಜಯರಾಯ ನಾನೆ 15 ವಿಜಯರಾಯ ನೀನ್ಹೌದೊ ತೇಜಿದಿ- ಗ್ವಿಜಯಕೆನುತದರ್ಹಿಂದೆ ಪೋಗಿ ಮಗನ ಕೈಯಿಂದ ವಧೆಯು ನೀತವೆ ಮೊದಲೆ ಪರಾಜಿತನಾದಿರ್ಯಾಕೊ 16 ಶ್ರೇಷ್ಠರೊಳು ಮಹಾಶ್ರೇಷ್ಠ ನಾನೆ ಅಸ್ತ್ರವಿದ್ಯದಲ್ಲಧಿಕನೆಂದು ಕೃಷ್ಣಮೂರುತಿ ಒಲಿಸಿಕೊಂಡಂಥ ಕೃಷ್ಣೆ ನಲ್ಲನೆ ಕೃಷ್ಣೆ ಕೇಳೆ 17 ಸಾರಥಿ ಆದ್ದರಿಂದ ಹಸ್ತಿನಾವತಿ ಪಟ್ಟಣಾಳ್ವುದು ಇಷ್ಟು ದಾರ ದಯದಿಂದ್ಹೇಳೊ 18 ಅಂಗನಾಮಣಿ ನಿನ್ನ ಅಂಗ- ಸಂಗ ಬಯಸಿ ನಾ ಬಂದೆನೀಗ ಅಂಗದ್ವಸ್ತ್ರವಬಿಟ್ಟ ಬೌದ್ಧಗೆ ಸಖನು ನಾ ಸವ್ಯಸಾಚಿ ಅಲ್ಲವೆ 19 ಭುಜ ಪರಾಕ್ರಮಿ ಸವ್ಯಸಾಚಿ ನಿನ್ನೆರಡು ಕೈದಡ್ಡಿನ್ಯಾತಕೇಳೊ ದ್ವಿಜರ ಸುತರ ತಂದುಕೊಡದೆ ಮೊದಲೆ ಮಾಡಿದ ಪ್ರತಿಜ್ಞವೇನೊ 20 ಅಂಜೋನಲ್ಲ ನಾನರಿಗಳಿಗೆ ಕಲಿ- ಭಂಜನ ಕಲ್ಕ್ಯಾವತಾರಗೆ ಕಂಜಚರಣಕ್ಕೆ ವಂದಿಸುವೆ ಧ- ನಂಜಯ ನಾನಲ್ಲವೇನೆ 21 ಸೈಯೊ ನೀ ಧನಂಜಯರೇಯ ಸುರಪತಿಗೆ ಪತ್ರವನೆ ಬರೆದು ಶರದ ಪಂಜರ ಕಟ್ಟಿ ನೀ ಕುಂ- ಜರವನಿಳಿಸಿದ ಕಾರಣೇನೊ 22 ನಿನ್ನ ಸರಿ ಮಾತಾಡುವೋರ ಧನ್ಯರ ನಾ ಕಾಣೆನೆಲ್ಲು ಳನ್ನು ಕೇಳಿದಿನ್ಯಾಕೆ ತಡೆವೆ 23 ದಶ ನಾಮಗಳ ಕೇಳಿ ದ್ರೌಪದಿ <ಈಔಓಖಿ ಜಿಚಿ
--------------
ಹರಪನಹಳ್ಳಿಭೀಮವ್ವ
ಕಮಲನಾಭ ನಿಮ್ಮ ಪಾದಕಮಲ ನಂಬಿ ಭಜಿಪೆ ಶ್ರೀ ಮಾಧವ ಪ ಪಕ್ಷಿಗಮನ ನಿಮ್ಮ ನಿರ್ಮಲಕ್ಷಯನಾಮ ಎನ್ನ ಜಿಹ್ವೆಗೆ ಲಕ್ಷ್ಯದಿತ್ತು ಪಿಡಿದು ಬಿಡದೆ ರಕ್ಷಿಸ್ಯಾದವ 1 ಮಂದಭಾಗ್ಯ ನಾನು ನಿಮ್ಮ ಬಂಧುರಂಘ್ರಿಕುಸುಮ ಮರೆ ಬಂದು ಬಿದ್ದೆ ದಯದಿ ಕಾಯೋ ಮಂದರೋದ್ಧಾರ 2 ಅರಿಯದೆ ನಾ ಮಾಡಿದಂಥ ಪರಮದುರಿತ ತರಿದು ತವ ಚರಣಸೇವೆ ನೀಡಿ ಪೊರೆಯೈ ಉರಗಶಯನ 3 ನಾನಾ ಬೇನೆಯೊಳಗೆ ಬಿದ್ದು ಹಾನಿಯಾಗಿ ಬಳಲುವಂಥ ಹೀನ ಬವಣೆ ತಪ್ಪಿಸಿನ್ನು ದಾನವಾಂತಕ 4 ಕ್ಷಣಕೆಕ್ಷಣಕೆ ಮಾನವರಿಗೆ ಮಣಿದು ಬೇಡಿ ಜೀವಿಸುವ ಬಿನಗುಕೃತಿ ಗೆಲಿಸು ದಯದಿ ದೀನಮಂದಾರ 5 ಜನಿಸಿದಂದಿನಿಂದ ನಾನು ಘನ ತಾಪತ್ರಯದಿ ನೊಂದೆ ಮನಕೆ ತಂದು ರಕ್ಷಿಸಿನ್ನು ಜನಕಜಾವರ 6 ಬುದ್ಧಿಯಿಲ್ಲದೆ ಕೆಟ್ಟೆನಭವ ಬಧ್ಧಜನರ ಸಂಗದಿ ಬಿದ್ದು ಶುದ್ಧಮತಿಯ ನೀಡಿ ಸಲಹು ಪದ್ಮನಾಭನೆ 7 ವಿಶ್ವ ವಿಶ್ವಾಕಾರ ನಿಮ್ಮ ವಿಶ್ವಾಸೆನಗೆ ಕೃಪೆಯ ಮಾಡಿ ನಶ್ವರೆನಿಪ ಮತಿಯ ಬಿಡಿಸು ವಿಶ್ವರಕ್ಷನೆ 8 ನೀನೆ ಗತಿಯು ಎನಗೆ ದೇವ ನಾನಾದೈವವರಿಯೆ ಸತ್ಯ ಜ್ಞಾನಪಾಲಿಸೊಳಿದು ಬೇಗ ಜ್ಞಾನಸಾಗರ 9 ಕೆಟ್ಟ ಹೊಟ್ಟೆ ಕಷ್ಟಕಡಿದು ದುಷ್ಟ ಭ್ರಷ್ಟ ಸಂಗ ತರಿದು ಶಿಷ್ಟ ಸಂಗ ದೊರಕಿಸೆನಗೆ ಸೃಷ್ಟಿಕರ್ತನೆ 10 ಸುಜನ ಸಹ ವಾಸದಿರಿಸನುಮೇಷ ಎನ್ನ ವಾಸುದೇವನೆ 11 ಹೀನ ಹೀನ ಜಗ ಅಭಿಮಾನ ತೊಲಗಿಸಧಿಕ ನಿಮ್ಮ ಧ್ಯಾನಾನಂದ ಕರುಣಿಸಯ್ಯ ಜನಾರ್ದನ12 ಭಾರವೆನಿಪ ವಿಷಮಸಂಸಾರ ಸುಲಭದಿಂದ ಗೆಲಿಸು ಘೋರ ಭವದ ತಾಪಹರ ನಾರಾಯಣ 13 ದೇಶದೇಶಂಗಳನು ತಿರುಗಿ ಅಸಂಬದ್ಧನಾದೆ ಸ್ವಾಮಿ ದೋಷ ಮನ್ನಿಸಯ್ಯ ಎನ್ನ ಈಶಕೇಶವ 14 ಸಂಚಿತಿಂದೀಗಳಿ( ಯಿ)ಸೆನ್ನ ಮುಂಚಿತಾಗಮ ಗೆಲಿಸು ಜೀಯ ಸಂಚಿತಾಗಮ ರಹಿತ ವಿರಂಚಿತಾತನೆ 15 ಚಾರುವೇದ ಪೊಗಳುವಂಥ ತೋರಿಸಯ್ಯ ನಿನ್ನ ಮೂರ್ತಿ ಮೂರು ಲೋಕ ಸಾರ್ವಭೌಮ ನಾರಸಿಂಹ 16 ಮದನನಯ್ಯ ಮುದದಿ ಬೇಡ್ವೆ ಸದಮಲ ಸಂಪದವ ನೀಡು ಸದಮಲಾಂಗ ಸರ್ವಾಧಾರ ಮಧುಸೂದನ 17 ಸಕಲ ವಿಘ್ನದೂರ ಮಾಡಿ ಮುಕುತಿಪಥಕೆ ಹಚ್ಚು ತ್ವರಿತ ಭಕುತರಿಷ್ಟ ಪೂರ್ಣ ಆದಿಲಕುಮಿನಾಯಕ 18 ದರ್ಜುಮಾಡಿಸೆನ್ನ ನಿಮ್ಮ ಮರ್ಜಿಪಡೆದ ಭಕ್ತರೊಳಗೆ ದುರ್ಜನಾಗಿ ದಯಾರ್ಣವ ನಿರ್ಜರೇಶನೆ 19 ಪೋಷಿಸೆನ್ನನುಮೇಷ ನಿಮ್ಮ ದಾಸನೆನಿಸಿ ವಸುಧೆಯೊಳು ಆಸೆಯಿಂದ ಬೇಡಿಕೊಂಬೆ ಕ್ಲೇಶನಾಶನೆ 20 ನಿರುತ ಮನದಿ ಹರಿಯ ನಾಮ ಬರೆದು ಓದಿ ಕೇಳುವರಿಗೆ ಪರಮ ಮುಕ್ತಿ ಕೊಡುವ ಮಮ ವರದ ಶ್ರೀರಾಮ 21
--------------
ರಾಮದಾಸರು
ಕರ ಪ ಪಾಪ ವಿಮೋಚಕ ತಾಪವಿದೂರಕ ತಾಪತ್ರಯಗಳನೇಕ ಪರಿಹಾರಕ 1 ದೋಷನಿವಾರಕ ತೋಷಪ್ರದಾಯಕ ದಾಸಜನರ ಚಿತ್ತವಾಸನಾಯಕ 2 ಗಗನದೊಳಿರುವಂಥ ಜಗದೊಡೆಯನೇ ನೀನು ನಿಗಮಗೋಚರ ಶ್ರೀ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ಕರುಣಾದಿ ಪಿಡಿ ಕರವಾ ದೇವರ ದೇವ ಪ ಕರುಣಾದಿ ಪಿಡಿಕರ ಸರಸಿಜಾಂಬಕ ಎನ್ನ ಗುರು ರಘುಪತಿ ಪಾಲಾ ಮರುತಾಂತರಿಯಾಮಿ ಅ.ಪ ಗತಶೋಕ ಜಿತಮಾಯ ಪತಿತ ಪಾವನವೇದ್ಯ ಪ್ರತಿಪಾದ್ಯ ಕ್ಷಿತಿಪ ಭಾರತಿ ಕಾಂತ ವಂದ್ಯಾ ಆ ನತರ ಪಾಲಕ ದುಷ್ಟದಿತಿಜಾರಿ ತವಪಾದ ಶತಪತ್ರ ಬಿಡದೆ ಸಂತತ ಭಕುತಿಯಲಿಂದ ಸ್ತುತಿಪಾರ ಮಿತ ಅಘವಾ ಕಳೆದು ಮತ್ತೆ ಹಿತದಿ ಸದ್ಗತಿ ಕೊಡುವಾ ನಿನ್ನಯ ದಿವ್ಯಾಚ್ಯುತವಾದ ಘನದಯವಾ ಪೊಗಳು ವಂಥ ಮತಿವಂತರನು ಕಾಣೆ ಶತಮುಖಜಜ ಮಾವಾ 1 ಅನಿಮಿತ್ಯ ಬಂಧುವೆ ವನಚಾರಿ ಕೂರ್ಮನೆ ಕನಕ ನೇತ್ರಾರಿ ಪಾವನತರ ನರ ಪಂಚ ನಾನಾ ರೂಪದಿಂದ ಬಾಲನಾ ಕಾಯ್ದೊನರ ಹರಿಬಲಿ ನಿತ್ಯ ಅನಘಾತ್ಮ ಜನನೀಯ ಕೊಂದಾನೆ ಜನಕ ಜಾಪತಿಯ ರು ಕ್ಮಿಣಿ ಮನೋಹರನೆ ವಸನದೂರ ಹಯರೂಢ ಜನನ ರಹಿತ ವಿಖ್ಯಾತಾ ನಮಿಸುವೆ ಅನಿಮಿಷಪಜನ ಸುತಾ ಬೇಡಿಕೊಂಬೆ ಅನುದಿನದಲಿ ಮಮತಾ ಕನಕೋದರನ ತಾತಾ 2 ಸರಿವೀರ ಹಿತ ಬಲಿಸರಸಿ ಜಾಂಬಕ ಮುರ ಹರ ಹರ ವಂದಿತ ಹರಿಮುಖ ಹರಿನುತ ಪಾದ್ಯ ಹರಸು ಎನ್ನಯ ಅಘ ನಿರುತ ನಿನ್ನ ಡಿಂಗರರ ನೀಕರದಿತ್ತು ಗುರುವಿನ ಚರಣಾದಿ ಸ್ಥಿರ ಭಕುತಿಯ ಕೊಟ್ಟು ವರ ಶಿರಿಗೋವಿಂದ ವಿಠಲನೆ ನೀ ಯನ್ನ ಮರಿಯದೆ ಮಮತೆಯಿಂದಾ ನಿತ್ಯ ಗರಿಯುತಲಿರು ಆನಂದಾ ನಿನ್ನಯ ಪಾದಾದಿರಲಿ ಮನಸು ಮುಕುಂದಾ ದುರುಳ ಭವದ ಬಂಧ 3
--------------
ಅಸ್ಕಿಹಾಳ ಗೋವಿಂದ
ಕರೆ ಕರೆ ಭವದೊಳು ಮುಳುಗಿರುವೆ ದುರಿತದೂರನೆ ದು:ಖ ತರ ತರ ವ್ಯಥೆಯಲಿ ಪ ಅಗಣಿತ ಮಹಿಮನೆ ಸುಗುಣಗಳನುದಿನ ಬಗೆ ಬಗೆ ಸ್ಮರಿಸುವ ಬಗೆ ಮರೆದು ಹಗಲಿರುಳೆನ್ನದೆ ನಿಗಮವೇದ್ಯನ ನಾಮ ಬಗೆ ಬಗೆ ಪೊಗಳಿ ಕೊಂಡಾಡಿ ಸ್ತುತಿಸದಲೆ 1 ಜನುಮ ಜನುಮದಲಿ ಜನಿಸಿ ಬರುವ ದು:ಖ ಕೊನೆಗಾಣದಾಗಿದೆ ಕರುಣಾನಿಧೆ ಅನಿಮಿಷರೊಡೆಯ ಶ್ರೀ ಘನ ಮಹಿಮನ ನಾಮ ಮನದಣಿ ಪೊಗಳಿ ಕೊಂಡಾಡಿ ಸ್ತುತಿಸದಲೆ2 ನಾನು ನನ್ನದು ಎಂಬ ಹೀನವೃತ್ತಿಗಳಿಂದ ಹಾನಿಯಾಯಿತು ಆಯು ಶ್ರೀನಿಧಿಯೆ ಜ್ಞಾನಿಗಳೊಡನಾಡಿ ಮೌನದಿಂದಿರದಲೆ ಶ್ವಾನಸೂಕರನಂತೆ ತಿರುಗಿ ಬಾಯ್ಬಿಡುತಲಿ 3 ರಂಗನ ಮೂರ್ತಿಯ ಕಂಗಳಿಂದಲಿ ನೋಡಿ ಭಂಗಗಳಳಿಯುವ ಹರಿದಾಸರ ಸಂಗದೊಳಿರಿಸು ಉತ್ತುಂಗ ಮಹಿಮಪಾಂಡು- ಭವ ಭಂಗ ಬಿಡಿಸೆನ್ನದೆ4 ಪಾದ ಪೊಂದಿ ಭವದಘ ವೃಂದವ ಕಳೆಯುವನೆಂದೆನ್ನುತ ಬಂಧಕ ಮೋಚಕನೆಂದರಿಯದೆ ಭವ ಬಂಧನದೊಳು ಸಿಕ್ಕಿ ಬಳಲಿ ಬಾಯ್ಬಿಡುತಲಿ5 ಪರಿ ಮೋಹ ಮಾತುಳಾಂತಕ ಕೃಷ್ಣ ಮಾತು ಮಾತಿಗೆ ಹರಿ ಹರಿ ಎನ್ನದೆ ಸೋತು ಬಂದೆನೊ ದೇವ ಮಾತರಿಶ್ವನಪ್ರಿಯ ಕೋತಿ ಬುದ್ಧಿಯ ಬಿಡಿಸೆಂದು ತುತಿಸದಲೆ 6 ಕಮಲ ಪತ್ರಾಕ್ಷ ಶ್ರೀ ಕಮಲಜಾತೆಯ ಪ್ರಿಯ ಕಮಲನಾಭ ವಿಠ್ಠಲ ವಿಠ್ಠಲ ಹರೇ ಸುಮನಸರೊಡೆಯ ಶ್ರೀ ಭ್ರಮರಕುಂತಳೆ ಪ್ರಿಯಶ್ರಮ ಪರಿಹರಿಸೆಂದು ನಮಿಸಿ ಸ್ತುತಿಸುವೆನು 7
--------------
ನಿಡಗುರುಕಿ ಜೀವೂಬಾಯಿ
ಕಲಯಾಮಿ ಶ್ರೀನಿವಾಸಂ-ಕಲಭಾಷ ಮಿಂದುಹಾಸಂ ಪ ಕಮನೀಯಹೇಮ ಚೇಲಂ-ಕಮಲಾಲಯಾನುಕೂಲಂ ಕಮಲಾಭಿರಾಮ ಮಾಲಂ 1 ಸುಮಬಾಣ ಸುಂದರಾಂಗಂ-ಸುಮನನಾರ್ಪಿತಾಂತರಂಗಂ ನಮದಾರ್ತಿ ಸಂಗ ಭಂಗಂ 2 ಜಲಜಾಪ್ತ ಪತ್ರನೇತ್ರಂ-ಜಲದೋಪಮಾನ ಗಾತ್ರಂ ಜಲಜಾಪ್ತ ಪುತ್ರ ಮಿತ್ರಂ 3 ಕುಂದೋಪಮಾನ ರದನಂ-ಚಂದ್ರೋಪಮಾನ ವದನಂ ಬೃಂದಾರಕಾರಿ ದಮನಂ 4 ಅಜವಂದ್ಯ ಚರಣಕಮಲಂ-ನಿಜ ಸೌಖ್ಯ ಕರಣ ಕುಶಲಂ ಭಜನೀಯ ವರದ ವಿಠಲ-ಕಲಯಾಮಿ ಶ್ರೀನಿವಾಸ 5
--------------
ಸರಗೂರು ವೆಂಕಟವರದಾರ್ಯರು
ಕಾಪಾಡಬೇಕು ಮಹಾಲಿಂಗ ಸುರೋತ್ತುಂಗ ಶ್ರೀಪತಿಚರಣಾರವಿಂದಸದ್ಭಂಗ ಪ. ತಾಪತ್ರಯಾಗ್ನಿಯೊಳ್ಬೆಂದೆ ಬಲು ನೊಂದೆ ಆಪತ್ತುಗಳ ಪರಿಹರಿಸೆನ್ನ ತಂದೆ 1 ಅಜ್ಞಾನವನು ದೂರಮಾಡು ದಯದಿ ನೋಡು ಸುಜ್ಞಾನ ಹರಿಭಕ್ತಿ ಶ್ರದ್ಧೆಯ ನೀಡು 2 ಪಾವಂಜೆ ಕ್ಷೇತ್ರಾಭರಣ ದೀನೋದ್ಧರಣ ದೇವ ಲಕ್ಷ್ಮೀನಾರಾಯಣಪದಶರಣ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾಪಾಡಬೇಕು ಮಹಾಲಿಂಗ ಸುರೋತ್ತುಂಗ ಶ್ರೀಪತಿಚರಣಾರವಿಂದಸದ್ಭಂಗ ಪ. ತಾಪತ್ರಯಾಗ್ನಿಯೊಳ್ಬೆಂದೆ ಬಲು ನೊಂದೆ ಆಪತ್ತುಗಳ ಪರಿಹರಿಸೆನ್ನ ತಂದೆ 1 ಅಜ್ಞಾನವನು ದೂರಮಾಡು ದಯದಿ ನೋಡು ಸುಜ್ಞಾನ ಹರಿಭಕ್ತಿ ಶ್ರದ್ಧೆಯ ನೀಡು 2 ಪಾವಂಜೆ ಕ್ಷೇತ್ರಾಭರಣ ದೀನೋದ್ಧರಣ ದೇವ ಲಕ್ಷ್ಮೀನಾರಾಯಣಪದಶರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಮಪಿತ ಪದಸರಸಿರುಹ ಭೃಂಗ ಭಂಗ ಪ ದಾಕ್ಷಾಯಿಣೀಪತೇ ಬಾಗಿ ವಿಜ್ಞಾಪಿಸುವೆ ದಾಕ್ಷಿಣ್ಯ ಲವಲೇಶವಿಲ್ಲವೊ ನನಗೆ ಸಾಕ್ಷಿಯೇಸು ಕೊಡಲಿದಕೆ ಬ್ರಹ್ಮನ ಶಿರ ತರಿದೆ ಸಾಕ್ಷಾತು ಪಿತನೆಂಬುದ ನೀ ಲಕ್ಷ್ಯವಿಡದೆ 1 ಸ್ಮರ ನಿನ್ನ ಕಿರಿತಂದೆ ಅಕ್ಷಿತೆರದೀಕ್ಷಿಸವನ ಬಿಡದೆ ದಹಿಸಿನಿಂದೆ ದಕ್ಷ ನಿನಗೇನಾಗಬೇಕು ತಿಳಿದು ನೋಡೊ ತಕ್ಷಣದಲವನನೆತ್ತಿ ಹರಿಗಡಿದೆ ನೀನು 2 ಪಾಪಯೇಸು ಮಾಡಿದರೆಯು ಭಯವೇನು ನಿನಗೆ ಶ್ರೀಪತಿ ರಂಗೇಶವಿಠಲಗೆ ಸರ್ವವರ್ಪಿಸಿ ತಾಪತ್ರಯ ದೂರ ವಿರಾಗಿಯಾಗಿ ಮನಸ್ಸು ನಿ- ಪರಿ ಮನಸ ಕೊಡು ಗುರುವೆ 3
--------------
ರಂಗೇಶವಿಠಲದಾಸರು