ಒಟ್ಟು 72 ಕಡೆಗಳಲ್ಲಿ , 32 ದಾಸರು , 71 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಾಕುಮಾಡದೆಪರಾಮರಿಸಿಎನ್ನಪರಾಧಂಗಳ ಕ್ಷಮಿಸೋ ಪಧರಾರಮಣ ಫಣಿಧರಾಮರಾರ್ಚಿತಸುರಾಧಿಪತಿವಿಧಿಹರಾದಿ ವಂದಿತಅ.¥ Àನರರೊಳಗೆ ಪಾಮರನು ನಾನಿಹಪರಕೆ ಸಾಧನವರೀಯೆ ಶ್ರೀಹರಿ ||ಚರಣಕಮಲಕೆ ಶರಣುಹೊಕ್ಕೆನುಕರುಣದಿಂದ ನಿನ್ನ ಸ್ಮರಣೆಯೆನಗಿತ್ತು 1ಜಪವನರಿಯೆನು ತಪವನರಿಯೆನುಉಪವಾಸ ವ್ರತಗಳ ನಾನರಿಯೆ ||ಕೃಪಾವಲೋಕನದಿಂದ ಆ ಪಾಪಗಳನೆಲ್ಲಅಪಹತವ ಮಾಡೋ ಅಪಾರಮಹಿಮನೇ 2ಕರಿರಾಜನುದ್ಧರಿಸಿ ದ್ರೌಪದಿಯಮೊರೆಯ ಲಾಲಿಸಿ ತರುಳಗೊಲಿದು ನೀಸಿರಿರಮಣ ನಿನ್ನ ಸರಿಯಾರ ಕಾಣೆಪುರಾರಿನುತಸಿರಿಪುರಂದರವಿಠಲ3
--------------
ಪುರಂದರದಾಸರು
ಪ್ರಸನ್ನ ಶ್ರೀ ಜಯರಾಮಚಂದ್ರ ಸ್ತೋತ್ರ143ಬಿಸಜನಯನನೆ ಇವಗೆ ಒಲಿಯೋ ದಯದಿಂದ ಪವೇದ ತತಿಗಳಿದಿರ್ಯ ಉರುಗುಣಾಂಬುಧಿ ಶ್ಶಾಮಸುಂದರನೆ ಸೀತಾಸಮೇತ ವಿಭು ನಿನ್ನಪಾದಪದುಮಗಳಲ್ಲಿ ಹನುಮದಾದಿಗಳೆಲ್ಲಆದರದಿ ಸರ್ವದಾ ಭಜಿಸುವರೋ ಸ್ವಾಮಿ 1ವರಅಭಯಕರಗಳಲ್ಲಿ ಶರಚಾಪ ಪಿಡಿದಿರುವಿಕಾರುಣ್ಯ ಬೀರುವ ನೋಟ ಮುಗಳ್‍ಹಾಸಶರಣಾದೆ ನಿನಗೆನಾ ಸುಕೃತ್ ವಿಭುವೇ ಸದಾವರಜ್ಞಾನ ಭಕ್ತ್ಯಾದಿ ಐಶ್ವರ್ಯ ಈಯೋ 2ಅನಂತಾರ್ಕ ಶಶಿಅಧಿಕ ಕಾಂತಿಯಿಂ ಜ್ವಲಿಸುತಿಅನಂತ ಪಾಪಗಳೆÀಲ್ಲ ಮನ್ನಿಸಿ ದಯದಿಎನ್ನ ಇವನ ಸರ್ವವೈಷ್ಣವರ ಕಾಯಯ್ಯವನರುಹಾಸನ ಪಿತ ಪ್ರಸನ್ನ ಶ್ರೀನಿವಾಸ 3
--------------
ಪ್ರಸನ್ನ ಶ್ರೀನಿವಾಸದಾಸರು
ಬಾರೆ ಶ್ರೀ ಮಹಾಲಕ್ಷ್ಮಿದೇವಿಯೆ ಬೇಡುತಿರ್ಪೆವು ಪಸಾರಸಾಕ್ಷಿಯೆ ಸರ್ಪವೇಣಿಯೆನಾರಿಯೆ ವೈಯ್ಯಾರಿಯೆ ಶ್ರೀಹರಿ ಸಹಿತದಿ ಅ.ಪಯಜÕನಾಮಕ ಹರಿಯ ರಾಣಿಯಜÕ ಇಂದಿರಾಹಿರಣ್ಯಹರಿಣಿಸುಜÕರಾದ ಜನರ ಪೊರೆವೆಸತ್ಯಾಶ್ರಿ ನಿತ್ಯಾಶ್ರೀ ಸುಗಂಧಿ ಸುಂದರಿ 1ಪ್ರಾಜÕಸುಖಾ ಸುಗಂಧಿ ಸುಂದರಿವಿದ್ಯಾ ಶ್ರೀ ಸುಶೀಲದೇವಿಸುಜÕರಾದ ಜನರೊಳಿರಿಸುತಕ್ಷಣ ಈಕ್ಷಿಸು ಸುಲಕ್ಷಣ ದೇವಿಯೆ 2ಶಾಂತಿಮಾಯೆಕೃತಿಯೆಇಂದಿರೆಶಾಂತಚಿತ್ತದಿ ಧ್ಯಾನಿಸುವರಾ ನಿ-ರಂತರದಿ ಪೊರೆವೆ ಜಯಮಂಗಳೆ ಉತ್ತುಂಗಳೆ ಶೃಂಗಾರ ರೂಪಳೆ 3ನಗುತ ನಗುತ ಬಾರೆ ಬೇಗನಗಧರನ ಸನ್ನಿಧಿಗೆ ಈಗಖಗವಾಹನನ ಮಡದಿ ನಿನ್ನಅಡಿಗಳ ಪೂಜಿಪೆ ಸಡಗರದಿಂದಲಿ 4ಪರಿಮಳೋದಕದಿಂದ ನಿನ್ನಚರಣಗಳನು ತೊಳೆದು ದಿವ್ಯವರಮಣಿಯ ಪೀಠದಲಿ ಕೂಡಿಸಿಪರಿಪರಿ ಪುಷ್ಪದಿ ಪೂಜಿಸಿ ನಲಿಯುವೆ 5ಹರಿಯರಾಣಿ ನಿನಗೆ ದಿವ್ಯಹರಿದ್ರಾಕುಂಕುಮಾಕ್ಷತೆಗಳಿಂದವರಕಲ್ಹಾರಪೂವ್ಗಳಿಂದಲಿಸುರಗಿ ಶಾವಂತಿಗಿ ತುರುಬಿಗೆ ಮುಡಿಸುವೆ 6ಎಣ್ಣೂರಿಗೆ ಹೋಳಿಗೆಯು ಕಡಬುಸಣ್ಣನಕ್ಕಿ ಶಾಲ್ಯನ್ನಗಳುಇನ್ನು ಬಗೆ ಬಗೆಯ ಭಕ್ಷಂಗಳನೂಸ್ವರ್ಣ ಪಾತ್ರೆಗಳಲ್ಲಿ ಇರಿಸುತ ನಲಿವರು 7ಕ್ಷೀರಘೃತದಧ್ಯಾನ್ನ ಮಂಡಿಗೆಶಾವಿಗೆ ಪರಮಾನ್ನಗಳನುಶ್ರೀರಮೇಶನಿಗರ್ಪಿಸೆನುತಬೇಡುವೆ ಪಾಡುವೆ ಕೊಂಡಾಡುತ ನಲಿಯುವೆ 8ಮುದ್ದು ಮಹಾಲಕ್ಷ್ಮಿ ನಿನಗೆಇಡಲಿ ದೋಸೆಗಳ ಸಹಿತಪದ್ಮನಾಭನಿಗರ್ಪಿಸೆನುತಶ್ರದ್ಧೆಯಿಂ ನಮಿಸುತ್ತಾ ಬೇಡುತಲಿರುವರು 9ಗಂಗಾಜನಕನರಸಿ ನಿನಗೆಮಂಗಳಾರುತಿಗಳ ಮಾಡಿಹಿಂಗಿಸುವೆ ಪಾಪಗಳೆನುತಾವಂದಿಸಿ ಸಾಷ್ಟಾಂಗದಿಂ ಚಂದದಿ ಪ್ರಾರ್ಥಿಪೆ 10ಕರ್ಪೂರದ ಅಡಿಕೆ ವೀಳ್ಯಅರ್ಪಿಸುತಲಿ ನಿನ್ನ ಪೂಜಿಸಿಮುಪ್ಪುರಾಂತಕ ಕಮಲನಾಭವಿಠ್ಠಲ ವಿಠ್ಠಲ ವಿಠ್ಠಲನರಸಿಯೆ 11
--------------
ನಿಡಗುರುಕಿ ಜೀವೂಬಾಯಿ
ಬಾರೋ ವೆಂಕಟಗಿರಿನಾಥ| ದಯ-ದೋರೈ ಭಕುತರ ಪ್ರೀತ ಪ.ಮಾರಪಿತ ಗುಣಹಾರ ಮಂದರ-ಧಾರ ದೈತ್ಯಸಂಹಾರ ಸುಜನೋದ್ಧಾರ ಮಮಹೃದಯಾರವಿಂದಕೆಬಾರೋ ಕೃಪೆದೋರೋ ವೆಂಕಟ ಅ.ಪ.ವೃಷಭಾಸುರನೊಳು ಕಾದಿ ಸಾ-ಹಸವ ಮೆರೆಸಿದ ವಿನೋದಿವಶಗೈದು ದೈತ್ಯನ ಶಿರವ ಕತ್ತ-ರಿಸುತಲಿ ನೀನಿತ್ತೆ ವರವವಸುಧೆಯೊಳಗಿಹ ಸುಜನರನು ಮ-ನ್ನಿಸುತಲಿಷ್ಟವನಿತ್ತು ಕರುಣಾ-ರಸದಿ ಸಲಹುವ ಬಿಸಜನಾಭ ಶ್ರೀ-ವೃಷಭಾಚಲವೊಡೆಯ ವೆಂಕಟ 1ಅಂಜನೆಯೆಂಬಳ ತಪಕೆ ಭಕ್ತ-ಸಂಜೀವನೆಂಬ ಶಪಥಕೆರಂಜಿಪ ಪದವಿತ್ತೆ ಮುದದಿ ಖಿಲ-ಭಂಜನಮೂರ್ತಿ ಕರುಣದಿ|ಮಂಜುಳಾಂಗ ಶ್ರೀರಂಗ ಸುರವರಕಂಜಭವವಿನುತಾದಿ ಮಾಯಾ-ರಂಜಿತಾಂಘ್ರಿ ಸರೋರುಹದ್ವಯಅಂಜನಾಚಲವೊಡೆಯ ವೆಂಕಟ 2ಶೇಷನ ಮೊರೆಯ ತಾಕೇಳಿಬಲುತೋಷವ ಮನಸಿನೊಳ್ತಾಳಿದೋಷರಹಿತನೆಂದೆನಿಸಿ ಕರು-ಣಾಶರಧಿಯ ತಾನೆ ಧರಿಸಿಶ್ರೀಶಹರಿಸರ್ವೇಶ ನತಜನ-ಪೋಷ ದುರ್ಜನನಾಶ ರವಿಶತ-ಭಾಸ ಕೌಸ್ತುಭಭೂಷವರಶ್ರೀ-ಶೇಷಾಚಲವಾಸ ವೆಂಕಟ 3ಮಾಧವವಿಪ್ರ ವಿರಹದಿ ಭ್ರಷ್ಟಹೊಲತಿಗಳನು ಸೇರ್ದ ಮುದದಿಸಾದರದಲಿ ನಿನ್ನ ಬಳಿಗೆ ಬರೆನೀ ದಯಾನಿಧಿ ಕಂಡು ಅವಗೆಶೋಧಿಸುತ ಪಾಪಗಳೆಲ್ಲವಛೇದಿ ಬಿಸುಡುತನಿಂದುವೆಂಕಟ-ಭೂಧರದ ನೆಲೆಯಾದ ನಾದವಿ-ಭೇದಬಿಂದು ಕಲಾದಿಮೂರುತಿ 4ಧನಪತಿಯೊಳು ತಾನು ಸಾಲಕೊಂಡಘನಕೀರ್ತಿಯಿಂದ ಶ್ರೀಲೋಲವನಿತೆ ಪದ್ಮಾವತಿಪ್ರೀತ ಭಕ್ತ-ಜನಸುರಧೇನು ಶ್ರೀನಾಥವನಧಿಶಯನ ಮುರಾರಿಹರಿಚಿ-ಧ್ವನಿನಿಭಾಂಗ ಸುಶೀಲ ಕೋಮಲವನಜನಾಭನೀಯೆನ್ನ ಕೃಪೆಯೊಳ-ಗನುದಿನದಿ ಕಾಯೊ ಕೃಪಾಕರ 5ಛಪ್ಪನ್ನೈವತ್ತಾರು ದೇಶದಿಂದಕಪ್ಪವಗೊಂಬ ಸರ್ವೇಶಅಪ್ಪ ಹೋಳಿಗೆಯನ್ನುಮಾರಿಹಣ-ಒಪ್ಪಿಸಿಕೊಂಬ ಉದಾರಿಸರ್ಪಶಯನ ಕಂದರ್ಪಪಿತ ಭಜಿ-ಸಿರ್ಪವರ ಸಲಹಿರ್ಪ ಕುಜನರದರ್ಪಹರಿಸುತ ಕಪ್ಪಕಾಣಿಕೆಒಪ್ಪಿಗೊಂಬ ತಿಮ್ಮಪ್ಪಶೆಟ್ಟಿಯೆ 6ಚಾರುಚರಣತೀರ್ಥವೀಂಟಿ ನಿನ್ನೊ-ಳ್ಸಾರಿ ಬರುವ ಪುಣ್ಯಕೋಟಿಸೇರಿದೆ ಕೊಡು ಮನೋರಥವ ಲಕ್ಷ್ಮೀ-ನಾರಾಯಣನೆನ್ನೊಳ್ದಯವತೋರುನಿರತಸಮೀರಭವ ವರ-ದಾರವಿಂದದಳಾಕ್ಷ ತಿರುಪತಿವೀರ ವೆಂಕಟರಮಣ ಮದ್ಬಹು-ಭಾರನಿನ್ನದು ಪಾಲಿಸೆನ್ನನು7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಂಗಳಾರತಿಯ ಮಾಡಿರೊ ಶ್ರೀನಿವಾಸಗೆ ಪ.ಸಂಗಸುಖದ ಭಂಗವೆಲ್ಲಹಿಂಗಿತೆಂದು ಹೊಂಗಿ ಮನದಿ ಅ.ಪ.ಘಟ್ಟಿಹೃದಯ ತಟ್ಟೆಯಲ್ಲಿಕೆಟ್ಟ ವಿಷಯ ಬತ್ತಿ ಮಾಡಿಶ್ರೇಷ್ಠ ಜ್ಞಾನ ತೈಲವೆರೆದುವಿಷ್ಣುನಾಮ ಬೆಂಕಿ ಉರಿಸಿ 1ಶ್ರದ್ಧೆಯಿಂದ ಎತ್ತಿ ಮನದಬುದ್ಧಿಪ್ರಕಾಶಗಳು ತೋರಿಎದ್ದ ಕಾಮಕ್ರೋಧಗಳನುಅದ್ದಿ ಪಾಪಗೆದ್ದು ಮನದಿ 2ತತ್ತ್ವಪ್ರಕಾಶಗಳ ತೋರಿಚಿತ್ತಮಾಯಕತ್ತಲೆಯನುಕಿತ್ತುಹಾಕಿ ಹರಿಯಮೂರ್ತಿಸ್ವಸ್ಥ ಚಿತ್ತದಿಂದ ನೋಡಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ರಾಮ ಎನ್ನುವ ಎರಡು ಅಕ್ಷರದ ಮಹಿಮೆಯನು |ಪಾಮರರು ತಾವೇನ ಬಲ್ಲರಯ್ಯ ಪರಾಯೆಂದ ಮಾತ್ರದೊಳು ರಕ್ತ ಮಾಂಸದೊಳಿದ್ದಆಯಸ್ಥಿಗತವಾದ ಅತಿಪಾಪವನ್ನುಮಾಯವನು ಮಾಡಿ ಮಹಾರಾಯ ಮುಕ್ತಿಯ ಕೊಡುವದಾಯವನು ವಾಲ್ಮೀಕಿ ಮುನಿರಾಯ ಬಲ್ಲ 1ಮತ್ತೆ ಮ ಎಂದೆನಲು ಹೊರಬಿದ್ದ ಪಾಪಗಳುಒತ್ತಿ ಒಳ ಪೊಗದಂತೆಯೆ ಕವಾಟವಾಗಿಚಿತ್ತ ಕಾಯಗಳ ಸುಪವಿತ್ರ ಮಾಡುವ ಪರಿಯಭಕ್ತವರ ಹನುಮಂತ ತಾನೊಬ್ಬ ಬಲ್ಲ 2ಧರೆಯೊಳೀ ನಾಮಕ್ಕೆ ಸರಿಮಿಗಿಲು ಇಲ್ಲೆಂದುಪರಮವೇದಗಳೆಲ್ಲ ಪೊಗಳುತಿಹವುಸಿರಿಯರಸ ಶ್ರೀಪುರಂದರ ವಿಠಲ ರಾಮನನುವರಕಾಶಿಯೊಳಗಿಪ್ಪ ಶಿವನು ತಾ ಬಲ್ಲ 3
--------------
ಪುರಂದರದಾಸರು
ವೃಂದಾವನವೇ ಮಂದಿರವಾಗಿಹಇಂದಿರೆಶ್ರೀ ತುಳಸಿ ||ನಂದನಂದನ ಮುಕುಂದಗೆ ಪ್ರಿಯಳಾದ |ಚೆಂದದ ಶ್ರೀ ತುಳಸಿ ಪತುಳಸಿಯ ವನದಲಿ ಹರಿಯಿಹನೆಂಬುದ |ಶ್ರುತಿಸಾರುತಲಿದೆಕೇಳಿ|ತುಳಸೀದರ್ಶನದಿಂದ ದುರಿತಗಳೆಲ್ಲವುದೂರವಾಗುವುವುಕೇಳಿ||ತುಳಸೀ ಸ್ಪರ್ಶವ ಮಾಡೆ ದೇಹ ಪಾವನವೆಂದುತಿಳಿದಿಲ್ಲವೇನು ಪೇಳಿ |ತುಳಸೀಸ್ಮರಣೆ ಮಾಡಿ ಸಕಲೇಷ್ಟಗಳ ಪಡೆದುಸುಖದಿಂದ ನೀವು ಬಾಳಿ 1ಮೂಲಮೃತ್ತಿಕೆಯನು ಮುಖದಲಿ ಧರಿಸಲುಮೂಲೋಕ ವಶವಹುದು |ಮಾಲೆ ಕೊರಳಲಿಟ್ಟ ಮನುಜಗೆ ಮುಕ್ತಿಯಮಾರ್ಗವು ತೋರುವುದು ||ಕಾಲಕಾಲಗಳಲಿ ಮಾಡುವ ದುಷ್ಕರ್ಮಕಳೆದು ಬೀಸಾಡುವುದು |ಕಾಲನ ದೂತರ ಕಳಚಿ ಕೈವಲ್ಯದಲೀಲೆಯ ತೋರುವುದು 2ಧರೆಯೊಳು ಸುಜನರ ಮರೆಯದೆ ಸಲಹುವವರಲಕ್ಷ್ಮಿ ಶ್ರೀ ತುಳಸಿ |ಪರಮಭಕ್ತರ ಪಾಪಗಳನೆಲ್ಲ ತರಿದು ಪಾ-ವನಮಾಡುವಳು ತುಳಸಿ ||ಸಿರಿಆಯು ಪುತ್ರಾದಿ ಸಂಪದಗಳನಿತ್ತುಹರುಷವೀವಳು ತುಳಸಿ |ಪುರಂದರವಿಠಲನಚರಣಕಮಲಗಳಸ್ಮರಣೆಯೀವಳು ತುಳಸಿ 3
--------------
ಪುರಂದರದಾಸರು
ವ್ಯಾಪಾರವೆನಗಾಯಿತುಶ್ರೀಪತಿಯ ಪಾದಾರವಿಂದ ಸೇವೆಯೆಂಬ ಪಹರಿಕರುಣವೆಂಬಂಗಿಗುರುಕರುಣಮುಂಡಾಸುಹರಿದಾಸರ ದಯವೆಂಬ ಒಲ್ಲಿ ||ಪರಮಪಾಪಗಳೆಂಬ ಪಾಪೋಸವನೆ ಮೆಟ್ಟಿದುರುಳಾತ್ಮರಾದವರ ಎದೆ ಮೇಲೆ ನಡೆವಂಥ 1ಬಿಳಿಯ ಕಾಗದ ಹೃದಯ ಬಾಯಿ ಕಲಮದಾನಿನಾಲಗೆಯೆಂಬ ಲೆಕ್ಕಣಿಕೆ ||ಶ್ರೀಲೋಲನ ದಿವ್ಯನಾಮವೆಂಬುವ ಲೆಕ್ಕಶೀಲದಿ ಬರೆದು ಶ್ರೀಹರಿಗೆ ಒಪ್ಪಿಸುವಂಥ 2ನುಡಿನುಡಿಗಾನಂದ ಬಾಷ್ಪ ರೋಮಾಂಚನಮುಡುಪಿನೊಳಗೆ ಇಟ್ಟ ಕೈಜೀತವು ||ಕಡಿಮೆ ಸಂಬಳಕೆಲ್ಲ ಮುಕ್ತಿಸಾಧನವನ್ನುಕೊಡುವ ತೆರನಂತೆ ಚೀಟಿ ಬರೆಸಿಕೊಟ್ಟ 3ಹಿಂದಿನ ಸಂಸಾರ ಆಗಮನದ ಭಯಎಂದೆಂದಿಗದರ ಚಿಂತೆಯು ಬಿಟ್ಟಿತು ||ಮುಂದಿನ ಸಂಸಾರ ಸ್ಥಾನ ಭಾರಕೆಲ್ಲಸಂದಾಯವನು ಮಾಡಿ ಕತಬಿ ಹರಿಸಿಕೊಟ್ಟ 4ಕಂಡಕಂಡವರ ಕಾಲುಗಳಿಗೆರಗಿ ನನ್ನಮಂಡೆದಡ್ಡುಗಟ್ಟಿ ಬಳಲಿದೆನೊ ||ಪುಂಡರೀಕಾಕ್ಷಶ್ರೀಪುರಂದರವಿಠಲನುಕಂಡು ವೀಳೆಯ ಕೊಟ್ಟು ತನ್ನ ಸೇವೆಗೆ ಇಟ್ಟ 5
--------------
ಪುರಂದರದಾಸರು
ಶ್ರೀಶ ಶ್ರೀಹಯವದನ ಮೂರ್ತಿಗೊಂದಿಸುವೆಸಾಸಿರ ನಾಮದ ಒಡೆಯನೀನೆಂದು ಪನಿನ್ನ ನೋಡುವ ಇಚ್ಛೆಯಿಂದ ನಿನ್ನದಾಸರುಇನ್ನು ಗಾವುದ ದೂರದಿಂದ ಬರುತಿಹರುನಿನ್ನ ಭಕ್ತರ ಕೂಡಿ ನಿನ್ನ ಸೇವೆಯ ಮಾಡಿನಿನ್ನ ದರುಶನದಿಂದ ಧನ್ಯರಾಗುವರು 1ಹರಿದಾಸರೆಲ್ಲರೂ ಪರಮಸಂಭ್ರಮದಿಂದಹರಿದಿನದಜಾಗರಹರಿಸ್ಮರಣೆಯಿಂದಪರಮವೈಭವದಿ ತನ್ನ ಸ್ಮರಿಸುತಿಹ ಸುಜನರನುಕರುಣದಿಂದಲಿಕಾವಸಿರಿರಮಣನೆಂತೆಂದು2ಆಪತ್ತು ತಾಪತ್ರಯಂಗಳೆಲ್ಲವುನೀಗಿಶ್ರೀಪತಿಯೆ ರಕ್ಷಿಸು ರಕ್ಷಿಸೆಂದೆನುತಗೋಪತೀ ಕೃಷ್ಣನ್ನಪಾಡಿ ಪೊಗಳುವರನ್ನುಕಾಪಾಡುವನು ಸಕಲಪಾಪಗಳ ಹರಿಸಿ 3ಸೋದೆಯಲಿ ನೆಲೆಸಿರುವ ವಾದಿರಾಜರಿಗೊಲಿದುಆದರದಿ ಅವರಿತ್ತ ಸೇವೆ ಕೈಗೊಂಡುಶೋಭ ಕೃತುನಾಮ ಸಂವತ್ಸರದಿ ಸುಜನರಿಗೆಶೋಭನಂಗಳನಿತ್ತು ನೀದಯದಿ ಪೊರೆವೆ 4ಕಡು ಹರುಷದಿಂದಿತ್ತ ಕಡಲೆ ಹೂರಣ ಸವಿದುದೃಢ ಭಕ್ತರನು ಪೊರೆದೆ ಕಡುಹರುಷದಿಮೃಡನಸಖನಿನ್ನಂಘ್ರಿ ಬಿಡದೆ ಧ್ಯಾನಿಪ ಭಾಗ್ಯತಡೆಯದಲೆ ಪಾಲಿಸೈ ಕಮಲನಾಭ ವಿಠ್ಠಲ 5
--------------
ನಿಡಗುರುಕಿ ಜೀವೂಬಾಯಿ
ಸಂತರೆ ಭವದೂರರು ಹಿತಕಾರ್ಯರು ಪ.ಸಂತರ ಸೇವೆ ಶ್ರೀಹರಿ ಸೇವೆಸಂತರ ಮತವೆ ಹರಿಸಮ್ಮತವುಸಂತರ ಮತಿಯೆ ಮುಕುತಿಯ ಗತಿಯುಸಂತರಪಾದಚಿಂತನೆಗಾಹ್ಲಾದ1ಸಂತರಗಾತ್ರಭುವನಪವಿತ್ರಸಂತರ ನೋಟ ಪಾಪಗಳೋಟಸಂತರ ವಚನ ಧರ್ಮವಿರಚನಸಂತರ ಸಂಗ ತೋಷತರಂಗ 2ಸಂತರಿಂದೈಹಿಕಾಮುಷ್ಮಿಕ ಸೌಖ್ಯಸಂತರ ಅಭಯವಿರಲಾವಭವಸಂತರ ಕಂಡವ ನಿಜ ಸುಖ ಕಂಡಸಂತ ವಿಯೋಗ ತಮಸಿನಭೋಗ3ಸಂತರಖೇದವಂಶ ವಿಚ್ಛೇದಸಂತರ ಪ್ರೀತಿ ಶುಭಪದಪ್ರಾಪ್ತಿಸಂತರ ವಾರ್ತಾಖಿಳ ಪುರುಷಾರ್ಥಸಂತರ ಮಹಿಮಿ ಹೊಗಳ್ವಾತ ಪ್ರೇಮಿ 4ಸಂತರ ಊರೆ ಎನ್ನ ತವರೂರುಸಂತರ ಗತಿಗೋತ್ರರು ಎನಗಾಗಿಸಂತರ ಪದವನಪ್ಪಿದರೊಲಿವಸಂತರಿಗರಸ ಪ್ರಸನ್ವೆಂಕಟೇಶ 5
--------------
ಪ್ರಸನ್ನವೆಂಕಟದಾಸರು
ಸುಮ್ಮನೆ ಬಾಹೂದೆ ಮುಕುತಿ - ನಮ್ಮ |ಚೆನ್ನಾದಿ ಕೇಶವನ ದಯವಾಗದನಕ ಪ.ಮನದಲ್ಲಿ ದೃಢವಿರಬೇಕು - ದುರ್ |ಜನರ ಸಂಗತಿಯನು ನೀಗಲುಬೇಕು ||ಅನಮಾನಂಗಳ ಬಿಡಬೇಕು - ತನ್ನ |ತನು - ಮನ ಹರಿಗೆ ಒಪ್ಪಿಸಿ ಕೊಡಬೇಕು 1ಕಾಮ - ಕ್ರೋಧವ ಬಿಡಬೇಕು -ಹರಿ |ನಾಮಸಂಕೀರ್ತನೆ ಮಾಡಲುಬೇಕು ||ಹೇಮದಾಸೆಯ ಸುಡಬೇಕು - ತ |ನ್ನಾ ಮನ ಹರಿಯ ಪಾದದಲಿಡಬೇಕು 2ಪಾಪಗಳನೆ ಕಳೆಯಬೇಕು - ಜ್ಞಾನ |ದೀಪ ಬೆಳಕಿನಲಿ ಲೋಲಾಡ ಬೇಕು ||ತಾಪ ರಹಿತಗೈಯಬೇಕು - ನಮ್ಮಓಪ ಪುರಂದರವಿಠಲನೊಲೆಯ ಬೇಕು 300
--------------
ಪುರಂದರದಾಸರು