ಒಟ್ಟು 1539 ಕಡೆಗಳಲ್ಲಿ , 86 ದಾಸರು , 1241 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರಾ ರಮಣ ಗೋವಿಂದನಾ ಜ್ಞೆಯ ಪಡೆದು ಬಂದಿರುವ ದಾಸರಿವರು ಪ ಇಂದು ಧರ್ಮದಿ ಹರಿಯ ಬಾಂಧವರ ಗೃಹ ಸ್ವರ್ಣ ಮಂದಿರವಾಗುವುದೆಂದು ಸಂದೇಶ ಕಳಿಸಿರುವ ಅ.ಪ ಸತ್ವ ರಜ ತಮ ಭೇದವಿಹುದು ದಾನಗಳಲ್ಲಿ ಕರ್ತವ್ಯವೆಂದರಿತು ಭಕ್ತಿಯಿಂದ ಉತ್ತಮೋತ್ತಮ ದೇಶ ಪಾತ್ರ ಕಾಲಗಳರಿತು ಪ್ರತ್ಯುಪಕೃತಿಯ ಗಣಿಸದಿತ್ತ ದಾನವೇ ಶ್ರೇಷ್ಠ 1 ಶ್ರಾವಣದ ಶನಿವಾರ ಶ್ರೀ ವ್ಯಾಸರಾಜರ ಮಾಧವ ದೇಶಕಾಲ ಪಾತ್ರ ಈ ವಿಧದ ಯೋಗವಿನ್ಯಾವ ಜನಗಳಿಗುಂಟು ನೀವು ನೀಡುವ ದಾನ ಕಾವುದಾಪತ್ತಿನಲಿ 2 ಒಂದು ಹಿಡಿಯವಲಕ್ಕಿ ತಂದಿತಾ ಬ್ರಾಹ್ಮಣಗೆ ಎಂದೂ ಕೇಳದ ಸಕಲ ಸೌಭಾಗ್ಯವ ಇಂದು ನೀಡಿರಿ ಮಿತ್ರ ಬಾಂಧವರೆ ದೇವಕಿಯ ಕಂದನ ಪ್ರಸನ್ನತೆಯ ಬಂದು ಪಡೆಯಲಿಬಹುದು 3
--------------
ವಿದ್ಯಾಪ್ರಸನ್ನತೀರ್ಥರು
ಇಂದಿರಾದೇವಿ ಕಾಯೆ ಕರುಣಾಂಬುಧಿಯೆ ಪ ಮಾಯೆ ನಾರಾಯಣನ್ನ ಜಾಯೆ ಸತತ ಜ್ಞಾನ | ವೀಯೆ ಭಕ್ತರ ಪ್ರೀಯೇಅಪ ಕನ್ನಾಮಣಿಯೆ ಕಾಮಿನಿ ಮಂಗಳವಾಣಿ | ಸನ್ನುತೆ ಲೋಕ ಜನನಿ | ನಿನ್ನ ಚರಣಯುಗ್ಮ | ವನ್ನೆ ನಂಬಿದೆ ಸುಪ್ರಸನ್ನೆ ಸರ್ವಜೀವರ | ಭಿನ್ನೆ ಭಾಗ್ಯಸಂಪನ್ನೆ || ಮನ್ನಿಸಿ ಮುದದಿಂದ | ಬಿನ್ನಪ ಲಾಲಿಸು | ಚನ್ನೆ ಚಕ್ರ ಪಾಂಚಜನ್ಯ ಧರಾದೇವಿ 1 ಅತಿದಯವಂತೆ ನೀನೆಂದು ಬೇಗದಿ ಬಂದು | ನುತಿಸಿದೆ ದೀನನಾಗಿಂದೂ | ಪತಿತರೊಳಿಡದಲೆ | ಗತಿಗೆ ಸಮ್ಮೊಗಮಾಡು | ತ್ಪತ್ತಿ ಸ್ಥಿತಿ ಲಯಕರ್ತೆ ಅತುಳ ಶೋಭನಮೂರ್ತೆ | ಪತಿಯಲಿ ಜನಿಸಿದೆ| ಪತಿಗೆ ಸತಿಯಾದೆ | ಪತಿಯ ಸಂಗಡ ಜ | ನಿತಳಾದ ಚರಿತೆ2 ಕುಂಕುವರತ ರಾಜಿತೆ ಧವಳಗೀತೆ | ಪಂಕಜಸದನೆ ಖ್ಯಾತೆ | ಲೆಂಕಾ ವತ್ಸಲೆ ಸರ್ವಾಲಂಕಾರ ಮಾಯೆ ರವಿ | ಸಂಕಾಸೆ ಬಹುಕಾಲ | ಸಂಕಟವ ವಿನಾಶೆ | ಕ | ಳಂಕವಾಗದಂತೆ3
--------------
ವಿಜಯದಾಸ
ಇಂದಿರೆ ಪ ನೀರಜ ನಿಲಯೆ ಅ.ಪ ಬಾರೆನ್ನಯ ಭವನಕೆ ಭಾಗ್ಯದ ನಿಧಿ ಪೂರಗೊಳಿಸೆ ಮನ ಕೋರಿಕೆಗಳನು1 ಕೊಳಲೂದುವ ಗೋವಳನಿಲ್ಲಿರುವನು ತಿಳಿನಗುಮೊಗದಲಿ ಬೆಳಗೆಲೆ ಭವನವ 2 ಚಿನ್ನದ ಹೊಗೆಯಾಡಿಸೆ ಈ ಮಂದಿರ ನಿನ್ನದೇ ಭಕುತ ಪ್ರಸನ್ನನ ಪ್ರಿಯಳೆ3
--------------
ವಿದ್ಯಾಪ್ರಸನ್ನತೀರ್ಥರು
ಇಂದಿರೆ ಅರಸ ಚಂದ್ರಮಂಡಲಮಂದಿರಾಖಿಳವಂದ್ಯ ಹಯಮುಖಎಂದೆಂದೆನ್ನ ಮನದಿಂದಗಲದಿರುಮಂದರಾದ್ರಿಧರ ಪ. ತುಂಗಮಹಿಮ ತುರಂಗವದನ ಶು-ಭಾಂಗ ರಿಪುಕುಲಭಂಗ ಸುಜನರಸಂಗ ಎನ್ನಂತರಂಗ ಮಲಿನವಹಿಂಗಿಸುವುದೆಂತೊಮಂಗಳಾಬ್ಧಿತರಂಗದುಬ್ಬಿಗೆತಿಂಗಳೆನಿಸುವ ಅಂಗಜನ ತಂದೆರಂಗ ನಿನ್ನ ಪಾದಕೆಂಗಮಲದಲ್ಲಿಭೃಂಗನಪ್ಪುದೆಂತೊ 1 ವಾರಿಜಾಕ್ಷ ಮುರಾರಿ ಮದವೆಂಬೋಮಾರಿ ಮುಸುಕಿತು ಸಾರಿ ಮತ್ಸರಮಾರನೊಡಗೂಡಿ ದಾರಿ ತಪ್ಪಿಸಿಗಾರುಮಾಡಿತೆನ್ನ ನಾ-ನಾರೆ ಕ್ರೋಧಮಹೋರಗನ ವಿಷ-ಧಾರೆಗೆ ಭಯಕಾರಿ ಹರಿ ನಿನ್ನಚಾರುಚರಣವ ಸಾರಿದೆನಿಂದುತೋರಿ ಸಲಹಬೇಕು 2 ಧsÀನ್ಯ ಸುರರಜೀವನ್ನ ಕರುಣಸಂ-ಪನ್ನ ನಿತ್ಯಪ್ರಸನ್ನ ಚಿನುಮಯಪನ್ನಗಾರಿವಾಹನ್ನ ಶಶಿಸಮ-ವರ್ನ ಹಯವದನನಿನ್ನ ಪಾದಪಾವನ್ನಸುರತರು-ವಿನ್ನ ನೆಳಲೊಳಿಟ್ಟೆನ್ನ ಸಲಹಬೇ-ಕನ್ಯಥಾ ಗತಿಶೂನ್ಯ ನಾನೆಲೊಪೂರ್ಣಪುರುಷರನ್ನ 3
--------------
ವಾದಿರಾಜ
ಇಂದಿರೆಯೊಡನೆ ನಿಲಯಕೆ ಬಂದಾ ಪ ಬೃಂದಾವನಾಂಚನನು ಶರ ದಿಂದುವದನ ಮುನಿವೃಂದ ನುತಚರಿತ ಅ.ಪ ಗಜ ತುರಗ ಪತಾಕ ತು ತ್ತೂರಿ ವರ ಛತ್ರಿ ಚಾಮರ ತಾಳ ಮೇಳ ಬಿರುದಾವಳಿ ಸಹಿತದಿ ಪೌರಬೀದಿಯಲಿ ಮೆರೆಯುತ ಶೌರಿಯು 1 ಪಾರಿಜಾತ ಸುಜಾತ ಮಲ್ಲಿಕಾ ಚಾರು ಮಾಲತೀಹಾರ ತುಳಸೀ ಹಾರವನರ್ಪಿಸಿ ನೀರಜನಾಭನಿಗೆ ನಾರಿಜನರು ಆರತಿಯನು ಬೆಳಗಿರೆ 2 ವೇದಘೋಷ ಜಯಘೋಷ ಜನರ ಸಂ ತೋಷ ಧ್ವನಿಯು ತುಂಬಿತು ಗಗನ ಯಾದವ ವಂಶ ಪ್ರಸನ್ನನು ಎಮ್ಮವ ನಾದನಿಂದು ಹಿರಿದಾಯಿತು ಜನುಮವು 3
--------------
ವಿದ್ಯಾಪ್ರಸನ್ನತೀರ್ಥರು
ಇಂದಿರೇಶ ನಿನ್ನ ಚರಣದ್ವಂಧ್ವವನ್ನು ಬಿಡೆನೊ ಕರುಣಾ ನೊಂದಿರುವೆನೊ ಮನದಿ ಬಹಳ ಹಿಂದುಮುಂದು ತೋರದಿಹುದು ಬಂಧು ಬಳಗವೆಲ್ಲ ನೀನೆ ಎಂದಿಹೆನೊ ಅರವಿಂದಲೋಚನ ಅ.ಪ ಊರು ಊರು ಸುತ್ತಿ ದಣಿದು ಸಾರರಹಿತ ಶಾಸ್ತ್ರಗಳ ವಿ ಕಾಲ ಕಳೆದೆನೋ ಉದಾರಚರಿತ ಭೂರಿ ಕರಣದಿಂದ ನಿನ್ನ ಚಾರುಚರಣ ಸೇವೆ ರುಚಿಯು ತೋರಿ ಮನಕೆ ಸಂತಸದಿ ಮುರಾರಿ ಎನಗೆ ಗತಿಯೆನುತಲಿ 1 ದುರಿತ ಸ್ತೋಮಗಳಲಿ ಮುಳುಗಿ ಬಳಲಿದೆನೊ ನಿಸ್ಸೀಮ ಮಹಿಮ ನಾಮಸ್ಮರಣ ಮಾತ್ರದಿಂದ ಪಾಮರ ಜನರುಗಳ ಯೋಗ ಕ್ಷೇಮ ವಹಿಸಿ ಪೊರೆಯುವಂಥ ಕಾಮಧೇನು ನೀನೆಂದರಿತು 2 ಮಾತಿನಲ್ಲಿ ಮಲ್ಲರೆಂದು ಖ್ಯಾತಿ ಪಡೆದ ಜನಗಳಿರಲು ಯಾತರವನು ಇವನು ಎನ್ನದಿರು ದೂತ ಪ್ರಸನ್ನನೇ ಸೋತು ವಿವಿಧ ಕಾರ್ಯಗಳಲಿ ಆತುರದಲಿ ನಿನ್ನ ಪರಮ ಪ್ರೀತಿಯ ಪಡೆಯುವುದೇ ದೊಡ್ಡ ನೀತಿಯೆಂದು ಅರಿತು ಸತತ 3
--------------
ವಿದ್ಯಾಪ್ರಸನ್ನತೀರ್ಥರು
ಇಂದು ನಮ್ಮ ಮನಿಲ್ಯಾನಂದೋಬ್ರಹ್ಮಾ ತಂದೆ ಸದ್ಗುರು ದಯ ಏನೆಂದ್ಹೇಳಲಿ ಸಂಭ್ರಮ ಧ್ರುವ ಹರುಷ ತುಂಬೇದ ಬಹಳ ತೆರವಿಲ್ಲೆಳ್ಳಷ್ಟು ಸ್ಥಳ ಸಿರಿಯನಾಳ್ವ ದಯಾಳ ಹರಿ ಬಂದಾನೆ ಕೃಪಾಳ 1 ಸೂಸುತಲಿ ಸಂತೋಷ ಪಸರಿಸ್ಯದ ಉಲ್ಹಾಸ ಭಾಸುತಾನೆ ಸರ್ವೇಶ ಭಾಸ್ಕರ ಕೋಟಿ ಪ್ರಕಾಶ 2 ಪ್ರಾಣಕಾಗೇದ ಪ್ರಸ್ತ ಮನಕಾಗೇದ ತಾಂ ಸ್ವಸ್ತ ಸಅನುಭವದ ಸುವಸ್ತ ಖೂನಾಗಿ ಬಂದು ಸಾಭ್ಯಸ್ತ 3 ಹೇಳಲಿಕ್ಕಳವಲ್ಲ ಹೊಳವ ಸುಖದ ಸೊಲ್ಲ ತಿಳಿದ ಮಹಿಮೆ ಬಲ್ಲ ಸುಳವು ಸೂಕ್ಷ್ಮವೆಲ್ಲ 4 ಕರ್ತುತಾಂ ದಯಮಾಡಿ ಅರ್ತು ಬಂದೊಡಮೂಡಿಆರ್ಥಿಯಿಂದೆವೆ ನೋಡಿ ಬೆರ್ತು ಮಹಿಪತಿಕೂಡಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮನಿಲಿ ಬ್ರಹ್ಮಾನಂದ ತಂದೆ ಸದ್ಗುರು ಸ್ವಾಮಿ ಕೃಪೆಯಿಂದ ಧ್ರುವ ವಸ್ತುದಯ ಬೀರುವಾನಂದ ಪ್ರಸ್ತ ಹಸ್ತ ಬಂದವರಿಗೆ ಸಾಧ್ಯಸ್ತ ಪ್ರಸ್ತ ಉಂಟಾಗಿದೆ ನೋಡಿ ಸಮಸ್ತ ಸ್ವಸ್ತ ಚಿತ್ತಲುಣಬೇಕು ಪ್ರಶಸ್ತ 1 ಉಂಬುದಕನುಮಾನ ಮಾಡಬ್ಯಾಡಿ ಕೊಂಬುದೆಲ್ಲ ಬಾಯಿದೆರೆದು ಬೇಡಿ ತುಂಬಿತುಳುಕುತಲ್ಯಾನಂದ ನೋಡಿ ಅಂಬುಜಾಕ್ಷನ ಸುಖಾಶ್ರಯ ಮಾಡಿ 2 ಸ್ವಾನುಭವದ ಪ್ರಸ್ತ ಸರ್ವಕಾಲ ತಾನೆ ತಾನಾಗಿ ದೋರುತದಚಲ ದೀನಮಹಿಪತಿಗಾನಂದ ಸುಕಾಲ ಭಾನುಕೋಟಿತೇಜ ದಾಸಾನುಕೂಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಸಾರ್ಥಕವಾಯ್ತು ಹಿಂದೆ ಮಾಡಿದ ಪೂಜೆ ಪ ಬಂದು ಗುರುವರ್ಯರ ಬೃಂದಾವನವ ನೋಡಿ ಅ.ಪ ಮಂಗಳತರಂಗಿಣಿಯ ತಂಗಾಳಿ ಸೇವಿಸುತ ತುಂಗ ಫಣಿಶಾಯಿಯ ಅಪಾಂಗಪಾತ್ರರ ಕಂಡು1 ಜ್ಞಾನ ವೈರಾಗ್ಯ ಭಕ್ತಿಗಳ ಮೂರ್ತಿಗಳಂತೆ ನಾನಾಭರಣ ಸೇವೆ ಅರ್ಪಿಸಿದವರ ಕಂಡು 2 ಸ್ವಾಂತವನು ಗೆಲಿದು ಪ್ರಸನ್ನ ಮಾನಸರಾಗಿ ಶಾಂತಿಯನು ಪಡೆದ ಏಕಾಂತ ಭಕುತರ ನೋಡಿ 3
--------------
ವಿದ್ಯಾಪ್ರಸನ್ನತೀರ್ಥರು
ಇಂದು ಹೊಳೆವುತದೆ ಸುಚಿನ್ಹಬೋಧ ತಂದಿ ಕಂಡೆವೇನೊ ಸದ್ಗುರು ಶ್ರೀಪಾದ ಧ್ರುವ ಪ್ರಾಣದೊಡಿಯ ಬಾವ್ಹಾಂಗನೇನೊ ಪೂರ್ಣಕ್ಷಣಕೊಮ್ಮಾಗುತದೆ ಸುಶಕುನ ಕಣ್ಹುಬ್ಬಾರುತದೆ ಬಲದೆನ್ನ ಚೆನ್ನಾಗ್ಯಾಗಮ್ಮ ತಾನೇನೊ ಸುಪ್ರಸನ್ನ 1 ತೋಳಭುಜಹಾರುತದೆ ಬಲುಬಹಳ ವ್ಯಾಳ್ಯಕೊದಗಿಬಂದೆನೇನೊ ದಯಾಳ ಸುಳವುದೋರುತದೆ ನಿಶ್ಚಳ ಸುಳಿದೊಮ್ಮೆ ಬಂದನೇನೊ ಕೃಪಾಳ 2 ಬುದ್ಧಿ ಮನಸಿಗಾಗುತದೆ ವಿಕಾಸ ಸಿದ್ಧಿಸೋರುವ್ಹಾಗಾದೆ ಪ್ರಕಾಶ ಸದ್ಯ ಹೃದಯವಾಗುತದೆ ಉಲ್ಹಾಸ ಸಾಧ್ಯವಾಗುವ್ಹಾಂಗ್ಹಾನೇನೊ ತಾ ಸರ್ವೇಶ 3 ಪ್ರೇಮ ಉಕ್ಕಿಬರುದೆನ್ನೊಳಗೆ ಸ್ವಾಮಿದರುಷಣಾದೀತೇನೊ ತಾ ಈಗ ರೋಮರೋಮವು ಬಿಡದೆ ಎನಗೆ ಬ್ರಹ್ಮಾನಂದ ಭಾಸುತದೇನೊ ಬ್ಯಾಗ 4 ಖೂನದೋರಿಬರುತದೆನಗೊಂದು ಭಾನುಕೋಟಿ ತೇಜ ತಾ ಬಾವ್ಹಾಂಗಿಂದು ದೀನ ಮಹಿಪತಿಗುರು ಕೃಪಾಸಿಂಧುಮನೋಹರ ಮಾಡುವ್ಹಾಂಗ್ಹಾನೆ ಬಂದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಇದೇ ಬ್ರಹ್ಮಮಯ ಸದಮಲಾನಂದೋದಯ ಸಾಧುಜನ ಹೃದಯ ಸದ್ಗುರು ದಯ ನಿಶ್ಚಯ ಧ್ರುವ ಸಾರಿಚಲ್ಲೆದ ಪೂರ್ಣ ಹರಿಯ ಸುಖ ನಿಧಾನ ಸುರಮುನಿಗಳ ಪ್ರಾಣ ಶರಣಜನರಾಭರಣ 1 ಬಣ್ಣಬಣ್ಣಭಾಸುವ ಪುಣ್ಯಶ್ಲೋಕರಾಜೀವ ಸಣ್ಣ ದೊಡ್ಡದಲ್ಲೀವ್ಹ ಕಣ್ಣಿಗೆ ಕಾಣಿಸುವ 2 ಗುಹ್ಯಕೆ ಗುಹ್ಯವಾದ ಮಹಾಮಹಿಮೆಯ ಬೋಧ ಮಹಿಪತಿ ಸದ್ಗೈಸಿದ ಮಹಾಗುರು ಸುಪ್ರಸಾದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದ್ರಪ್ರಸ್ಥದಲ್ಲೆ ಕುಂತಿ ನಂದ(ನ) ರಾಜಸೂಯ್ಯಾಗವನು ಆ- ನಂದದಿ ಮಾಡಿಂದಿರೇಶಗರ್ಪಿಸಿದನು 1 ಮಂದಬುದ್ಧಿ ಕೌರವನು ಚೆಂದನೋಡಿ ಸೈರಿಸದೆ ಪಾಂಡವರ ಪಟ್ಟಣದಿಂದ್ಹೊರಗ್ಹಾಕುವೆನೆಂದನು 2 ಘಾತಕ ದುರ್ಯೋಧನ ತನ್ನ ಮಾತುಳ ಶಕುನಿಯ ಕೇಳಿ ಪ್ರೀತಿಂದೆ ಪಾಂಡವರ ಕರೆಸಿ ದ್ಯೂತವಾಡಿದ 3 ಆಗ್ರಾದಿಂದಾಟಗಳ ಸೋಲಿಸಿ ಶೀಘ್ರದಿಂದ್ವನವಾಸವ ಚರಿಸಿ ಅಜ್ಞಾತ್ವಾಸೊಂದೊ(ದ್ವ?) ರುಷವೆಂದು ಪ್ರತಿಜÉ್ಞ ಮಾಡಿದ 4 ಸೋತು ಧರ್ಮ ಸಕಲೈಶ್ವರ್ಯ ಸಾದೇವ ನಕುಲ ಭೀಮರ ಪಾರ್ಥ ದ್ರೌಪದಿಯ ಪಣಕಿಟ್ಟು ಕೂತನಾಗಲೆ 5 ಆನೆ ಕುದುರೆ ಅಷ್ಟೈಶ್ವರ್ಯ ಬ್ಯಾಗೆ ತನ್ನಿರಿ ಭಂಡಾರವನು ಹೋಗಿ ದ್ರೌಪದಿ ಕರೆಯಿರೆಂದು ಹೇಳಿದನಾಗ 6 ಕರವ ಮುಗಿದು ನಿಂತು ಇಂದು ನಮ್ಮ ರಾಜಸಭೆಗೆ ಬನ್ನಿರೆಂದರು 7 ದಾಯವಾಡಿ ಸೋತರಿನ್ನುಪಾಯವಿಲ್ಲೀಗೆ 8 ಇಂದಿರೇಶನ ದಯವು ನಮ್ಮಲ್ಲಿದ್ದ ಕಾರಣದಿಂದೀಗ ದುರಿತ ಬಯಲಾಗುವುದ್ಹ್ಯಾಗೆಂದು ನುಡಿದಳು 9 ಚಂದ್ರ ಜ್ಯೋತಿಯಂತೆ ಹೊಳೆವೊ ಮಂದಗಮನೆ (ಇ)ಂದು ವದನೆ ದುಂಡು ಮಲ್ಲಿಗೆಶಿರವ ಬಾಗಿ ಬಂದು ನಿಂತಳು 10 ಕಂಡು ದುರ್ಯೋಧನ ದ್ರೌಪದಿ ನಿನ್ನ ಗಂಡರಡವಿಗೈದುವೋರು ಹೆಂಡತ್ಯಾಗಿರೆನ್ನ ಬಳಿಗೆ ಬಾರೆ ಎಂದನು 11 ಕೆಂಡ ತುಂಬಿದ ಕೊಂಡದೊಳು ಕಂಡೂ ನೀ ಹಾರುವರೇನೊ ತುಂಡು ಮಾಡಿ ಕಡಿವೋರೈವರು ಬ್ಯಾಡೋಯೆಂದಳು 12 ಪತಿಗಳಿಂದೆ ರಹಿತಳೆ ದ್ರೌಪದಿಯೆ ನೀನತಿ ಹರುಷದಿಂದೆ ಸತಿಯಾಗಿ ಬಾಳ್ಹಿತದಿಂದೆನ್ನಕೂಡೇಯೆಂದನು 13 ಪತಿಯಿಂದೆ ರಹಿತಳು ಭಾನುಮತಿಯೋ ಧೃತರಾಷ್ಟ್ರ ಗಾಂಧಾರಿ ಸುತಹೀನರಾಗುವರತಿ ಬ್ಯಾಗೆ ಮತಿಗೇಡಿ ಕೇಳೊ 14 ಪಟ್ಟೆ ಮಂಚಕ್ಕೊಪ್ಪುವ್ಯಂತೇ ಬಾರೇಯೆಂದನು 15 ಅಷ್ಟ ಬಡವರೈವರು ನಿನ ಶಿರ ಕುಟ್ಟಿ ಯಮಪಟ್ಟಣಕ್ಕೆ ಅಟ್ಟಿ ರಾಜ್ಯಕ್ಕಧಿಕಾರ್ಯವರು ಕೇಳೋಯೆಂದಳು 16 ಹೇಮ ಇಚ್ಛ ಮಾಡಿದ್ದೇನೀಗೆನ್ನ ಕೂಡೆ ಎಂದನು 17 ಹುಚ್ಚು ಹಿಡಿದಿತೇನೋ ನಿನಗೆ ಉಚ್ಚು ಬಡಿದು ನಿನ್ನ ಹಲ್ಲು ನುಚ್ಚು ಮಾಡಿ ಕೊಲ್ಲೋರೈವರು ಬ್ಯಾಡೋಯೆಂದಳು 18 ಬಡನಡುವಿನ ವೈಯಾರಿ ಕಡುಚೆಲ್ವೆ ದ್ರೌಪದಿಯೆ ಎನ್ನ ತೊಡೆಯಮ್ಯಾಲೆ ಒಪ್ಪುವ್ಯಂತೆ ಬಾರೆಯೆಂದನು 19 ಕಡುಪಾಪಿ ನೀ ನುಡಿವೋ ನಾಲಿಗೆ ಕಡಿದು ಭೀಮನ ಗದೆಯು ನಿನ್ನ ಉರ ಭೇದಿಸುವೋದನು ನೋಡೇನೆಂದಳು 20 ಅಂಗನೆ ನಿನ್ನಂಗಸಂಗವಾಗದಿದ್ದರೆ ನಿನ್ನ ಮಾನ- ಭಂಗ ಮಾಡಿ ಬತ್ತಲೆ ನಾ ನಿಲಿಸೇನೆಂದನು 21 ಪುಂಡ ಖಳ ನಿನ್ನುದರ ಓಕುಳಿಕೊಂಡಮಾಡೋಕುಳಿಯನಾಡಿ ಚೆಂಡನಾಡಲು ನಿನ್ನ ಶಿರವ ನೋಡೇನೆಂದಳು 22 ಪಾಪಿ ದುಶ್ಶಾಸನನು ಬಂದು ದ್ರೌಪದಿಯ ಮುಂದೆ ನಿಂತು ನೂತನದ ನಿರಿಯ ಪಿಡಿದು ಸೆಳೆಯುತಿದ್ದನು 23 ನಿಲ್ಲೊ ಪಾಪಿ ನಿನ್ನ ರಕ್ತ ಎರೆದು ಹಲ್‍ಹಣಿಗಿಯಲ್ಹಿಕ್ಕಿ ಎಲ್ಲ ಕರುಳ್ವನಮಾಲೆಯ ಮಾಡಿ ಮುಡಿವೆನೆಂದಳು 24 ಮಂಗಳ ಮೂರುತಿ ಮಾರಜನಕ ಎನ್ನ ರಕ್ಷಿಸೆಂದು ಕರವ ಮುಗಿದು ನಿಂತಳು 25 ಮಡುವಿನಲ್ಲೆ ಮುಚ್ಛನಾಗಿ ಬಿಡದೆ ವೇದವ ತಂದು ಕ್ಷೀರ- ಕಡಲ ಕಡೆದ ಕೂರುಮ ಎನ್ನ ಕಾಯೋಯೆಂದಳು 26 ಕಡುಕ್ರೂರ ವರಾಹಾವತಾರ ಹಿಡಿದು ಹಿರಣ್ಯಾಕ್ಷನ ಕಂಬ ವೊಡೆದು ಬಂದಾರ್ಭಟಿಸುವ ಸಿಂಹ ಕಾಯೊ ಎಂದಳು 27 ಬಡವನಾಗಿ ಬಲಿಯ ದಾನ ಬೇಡಿಕೊಂಡ್ವಾಮನನೆ ದೊಡ್ಡ ಕೊಡಲಿ ಪಿಡಿದು ಕ್ಷತ್ರಿಯರನೆ ಕಡಿಬ್ಯಾಗೆಂದಳು 28 ಹತ್ತು ತಲೆಯ ರಾವಣನ ಹತವಮಾಡಿದ್ದವನೆ ಗೋಪೀ ಪುತ್ರನಾದ ಕೃಷ್ಣ ಎನ್ನ ರಕ್ಷಿಸೆಂದಳು29 ಬತ್ತಲಿದ್ದ ಬೌದ್ಧ ನೀ ಬಿಟ್ಟೊ ್ವಸ್ತ್ರ ಎನಗುಡುಗೊರೆಯ ಕೊಟ್ಟು ಹತ್ತಿ ತೇಜಿ ಹರುಷದಿಂದ ಬಾರೋಯೆಂದಳು 30 ಕ್ಷೀರಸಾಗರದಲ್ಲೆ ನೀ ಶ್ರೀಲಕ್ಷ್ಮೀ ಸಹಿತ ಇದ್ದರೇನು ಭೂ ವೈಕುಂಠವಾಸಿ ಎನ್ನ ಕಾಯೋಯೆಂದಳು 31 ಅನಂತಾಸನದಲ್ಲೆ ಆದಿಲಕ್ಷ್ಮೀ ಸಹಿತಾಗಿದ್ದರೇನು ಸೇತೂ(ಶ್ವೇತ?) ದ್ವೀಪವಾಸಿಯೆನ್ನ ಕಾಯೋಯೆಂದಳು 32 ಮಧುರಾ ವಾಸಿ ವೃಂದಾವನ ಗೋವ್ರಜದಲ್ಲಿದ್ದರೇನೊ ಕೃಷ್ಣ ಒದಗಿಬಂದೀಗೆನ್ನಭಿಮಾನ ಕಾಯೋಯೆಂದಳು 33 ಬ್ಯಾಗೆ ಬಿಟ್ಟೀಗೆನ್ನ ಬಳಿಗೆ ಬಾರೋಯೆಂದಳು 34 ಕಾಂತ ಅಕ್ಷಯವೆಂದ ವಸ್ತ್ರಾನಂತವಾದುವು 35 ಕೆಂಪು ಹೂವು ಇರುವಂತಿಗೆಯು ಪಂಚಪೈಠಣಿ ಪಗಡಿ ಬಣ್ಣ ಚಿಂತಾಕು ಪೈಠಣಿಯ ನಿರಿ ಸೆಳೆಯುತಿದ್ದನು 36 ಕರಿಯ ಹೂವು ಕಡ್ಡಿಪೈಠಣಿ ಸೆರಗು ಜರದ ಚಾರಖಾನಿ ಪರಿಪರಿ ಪತ್ತಲಗಳ ತಾ ಸೆಳೆಯುತಿದ್ದನು 37 ಬಿಳಿಯ ಹೂವು ಬಟ್ಟ ಮುತ್ತಿನ ಹೊಳೆವೊ ನಿಂಬಾವಳಿಯು ಚಂದ್ರ ಕಳೆಯ ಸೀರೆಗಳನೆ ಪಿಡಿದು ಸೆಳೆಯುತಿದ್ದನು 38 ಸೂರೂತಿ ಸುಗುತೀಯ ಬಣ್ಣ ಭಾರಿ ಬಾಳೆಪಟ್ಟೆಗಳನು ದ್ವಾರ್ಯಾಮನಿ ಖಂಬಾವತಿ ಸೀರೆ ಸೆಳೆಯುತಿದ್ದನು 39 ತಬಕಾದ್ಹೂವೆಳ್ಳ್ಹೂವು ಗೆರೆ ಸಾಸಿವೆಯ ಚಿಕ್ಕಿ ಸರಪಳ್ಯಂಚು
--------------
ಹರಪನಹಳ್ಳಿಭೀಮವ್ವ
ಇಂದ್ರಾಕ್ಷಿ ಸಲಹೆ ಬಂದು | ಸಂರಕ್ಷಿಸಿ ಇಂದ್ರಾಕ್ಷಿ ಸಲಹೆ ಬಂದು ಪ ಚಂದ್ರಶೇಖರನಂಕ ಸಂಸ್ಥಿತೆ ಚಂದ್ರ ಬಿಂಬಾನನೆ ದಯಾನ್ವಿತೆ ಇಂದ್ರ ಮುಖ ಸುರಗಣ ಸಮರ್ಚಿತೆ ತಂದ್ರ ಪರಿಹೃತೆ ಭಕ್ತತತಿ ಹಿತೆ ಅ.ಪ. ಅರಿಯದ ತರಳನಮ್ಮ | ನಿನ್ನಂಘ್ರಿ ಸೇವಿಪ ಮೆರೆವ ಭಾಗ್ಯವ ನೀಡಮ್ಮ | ಮರೆಯದಿರಮ್ಮಾ ಶರಣ ಜನರನು ಪೊರೆವೆನೆನ್ನುತ ಕರದಿ ಪಿಡಿದಿಹೆ ಬಿಡದೆ ಉನ್ನತ ದರವಿಯನು ಸಿದ್ದಾನ್ನ ಪಾತ್ರೆಯ ಕರುಣಿ ತ್ರಿಜಗಜ್ಜನನಿ ಸುಗುಣಿಯೆ 1 ನಿತ್ಯಾನಂದಿನಿ ಮೋಹಿನಿ | ಸುಗತಿ ಪ್ರದಾಯಿನಿ ಭೃತ್ಯಾನುಗ್ರಹ ಕಾರಿಣಿ | ಬುಧ್ಯಾಭಿಮಾನಿ ನಿತ್ಯಮಂಗಳೆ ಭೃತ್ಯವತ್ಸಲೆ ಸತ್ಯರೂಪಿಣಿ ಮೃತ್ಯುನಾಶಿನಿ ನಿತ್ಯತ್ವತ್ಪದ ಭಜಿಪ ಸಂಪದ- ವಿತ್ತು ಪಾಲಿಸೆ ಶ್ರೀ ಕಾತ್ಯಾಯಿನಿ 2 ಭೀಮಾ ಭೈರವನಾದಿನಿ | ಕುಮಾರ ಜನನಿ ಕಾಮನಿಗ್ರಹನ ರಾಣಿ | ವರವರ್ಣಿನಿ ಬ್ರಾಹ್ಮಿ ವೈಷ್ಣವಿ ಬ್ರಹ್ಮಚಾರಿಣಿ ಚಾಮುಂಡೇಶ್ವರಿ ಕೋಲರೂಪಿಣಿ ಭ್ರಮರಿ ಶಾಕಾಂಬರಿ ನೃಸಿಂಹಿಣಿ ಅಮಿತರೂಪಿಣಿ ಅಹಿತ ಮಾರಿಣಿ 3 ಸರ್ವಮಂಗಳ ಮಾಂಗಲ್ಯೆ | ಸರ್ವಾರ್ಥದೆ ಶಿವೆ ಶರ್ವನರ್ಧಾಂಗಿಯೆ | ಪರ್ವತನ ತನಯೆ ಶರ್ವಬ್ರಹ್ಮರ ವರದಿ ಕೊಬ್ಬಿ ಸು- ಪರ್ವರನು ಕಂಗೆಡಿಸೆ ದನುಜರು ಸರ್ವಶಕ್ತಳೆ ಮುರಿದು ಖಳರನು ಉರ್ವಿಭಾರವ ನಿಳುಹಿ ಪೊರೆದೌ 4 ಅಜಿತೆ ಭದ್ರದೆ ಆನಂದೆ | ನಿನ್ನನು ಬಿಡದೆ ಭಜಿಪರ ಪೊರೆವಳೆಂದೆ | ನಾನಿಂದು ಬಂದೆ ಕುಜನಮರ್ಧಿನಿ ಕುಟಿಲ ಹಾರಿಣಿ ಗಜಗಮನೆ ಗಂಭೀರೆ ಗುಣಮಣಿ ವೃಜಿನ ಪರಿಹರೆ ವಿಘ್ನಸಂಹರೆ ನಿಜ ಪದಾಂಬುಜ ಭಜಕನೆನಿಸಿ 5 ಶಿವದೂತಿ ಪರಮೇಶ್ವರಿ | ರುದ್ರಾಣಿ ಚಂಡಿಕೆ ಶಿವೆ ಭವೆ ಜ್ಞಾನೇಶ್ವರಿ | ಸೌಂದರ್ಯಲºರಿ ಭುವನ ಮೋಹಿನಿ ದೈತ್ಯನಾಶಿನಿ ತಾಪ ಜ್ವರ ನಿವಾರಿಣಿ ಕವಿಭಿರೀಡಿತೆ ದೇವ ಪೂಜಿತೆ ವಿವಿಧ ಫಲಗಳ ಒಲಿದು ಕೊಡುವಳೆ 6 ಶೃತಿ ಸ್ಮøತಿ ಶ್ರದ್ಧೆ ಮೇಧಾ | ವಿದ್ಯಾಸರಸ್ವತಿ ಧೃತಿ ಶಾಂತಿ ಕಾಂತಿ ವಾದಾ | ಎನಿಸುತ್ತ ಮೆರೆವ ವಿತತ ಮಹಿಮಳೆ ವಿಶ್ವತೋಮುಖೆ ಅತುಳ ಭುಜಬಲೆ ಭದ್ರಕಾಳಿಯೆ ಪಾವನಿ ಸತ್ವಶಾಲಿನಿ ಸತಿ ಶಿವಪ್ರಿಯೆ ನೀಡಿ ಸುಮತಿಯ 7 ಅರಿದರಾಂಕುಶ ಮುಸಲ | ಮುದ್ಗರಚಾಪ ಮಾರ್ಗಣ ಪಾಶ ಪರಶು ಘಂಟಾ ಶಕ್ತಿ ಪಾತ್ರೆಯು ವರಗದಾಭಯ ಕರದೊಳೊಪ್ಪುತ ದುರುಳರನು ಸಂಹರಿಸಿ ಸಂತತ ಸುರನರೋರಗರನ್ನು ಪೊರೆಯುವ 8 ಮಾರಿ ಮಸಣಿ ಹೆಮ್ಮಾರಿ | ಕರೆಕರೆದುಗೊಳಿಸುವ ಕ್ರೂರ ಶಾಕಿನಿ ಡಾಕಿನಿ | ಪೂತಣಿಯೆ ಮುಖರು ಘೋರ ರೂಪದಿ ಬಂದು ಪೋರರ ಗಾರುಗೊಳಿಸುತ್ತಿರಲು ತವಪದ ಸಾರಿ ನೆನೆದರೆ ತೋರಿ ಹಿಮ್ಮಡಿ ದೂರ ಸರಿವರು ಮುಗಿದು ಕರಗಳ 9 ತಾಪತ್ರಿತಯ ತಪ್ತರ | ಆಹ್ಲಾದಪಡಿಸಲು ಗೋಪತಿ ಮುಖವ ತೋರ | ಕೃಪಾಂಬುನಿಧಿಯೆ ತಾಪಸಾರಾಧಿತ ಪದಾಂಬುಜೆ ಶ್ರೀಪತಿಯ ಸೊದರಿಯೆ ನೀ ನಿಜ- ರೂಪುದೋರಲು ಪಾಪತಾಪ ಪ್ರ- ಳಾಪ ಮಾಡದೆ ರಾಪುಗೈವುದೆ 10 ದುರ್ಗಮ ಸಂಕಟದಿ | ಬಿದ್ದಿಹೆನಮ್ಮಾ ನಿರ್ಗಮ ಕಾಣೆನಮ್ಮಾ | ಉದ್ಧರಿಸಮ್ಮಾ ದುರ್ಗದಿಂತಾರಿಸುವೆ ಭಕ್ತರ ದುರ್ಗೆ ನಾಮಾಂಕಿತದಿ ಎಂಬರು ಕರವ ಸು- ಮಾರ್ಗ ತೋರಿಸೆ ದುರ್ಗೆ ಜನನಿಯೆ 11 ಸುರಾಸುರ ಸಂಗ್ರಾಮದಿ | ಮುರವೈರಿ ದಯದಿ ಸುರರು ಗೆಲ್ಲರು ಮುದದಿ | ಗರ್ವಿಸಲು ಭರದಿ ಹರಿಯ ರೂಪಾಂತರದಿ ತೃಣವನು ಧರೆಯೊಳಿರಿಸುತ ಬಲ ಪರೀಕ್ಷಿಸಿ ಸುರರು ಜಯಿಸದೆ ಮರುಳರಾಗಲು ಬರದೆ ಪರತತ್ವವನು ಕರುಣದಿ 12 ಕಿಂಕರ ಶಂಕರಿಯೆ | ಶತ್ರು ಭಯಂಕರೆ ಓಂಕಾರೆ ಹೂಂಕಾರೆಯೇ | ಸ್ಮಿತ ಅಟ್ಟಹಾಸೆ ಪಂಕಜಾಂಬಕಿ ರಕ್ತನಯನ ಕ ಳಂಕಮುಖಿ ಅತ್ಯುಗ್ರವದನೆ ನಿ ಶ್ಯಂಕ ಬಿಂಕದಿ ಬಂದೆ ಕಾಲದಿ ಮಂಕುಹರೆ ಸಂಕಟದೆಯೆನಿಸುವೆ 13 ರಕ್ತಬೀಜಾಸುರನ | ರಕ್ತವನು ಹೀರಿದ ಶಕ್ತಳೆಂದೆನುತ ನಿನ್ನ | ನಂಬಿದೆನು ಎನ್ನ ಉಕ್ತಿಲಾಲಿಸಿ ಒತ್ತಿ ವಿಘ್ನವ ಇತ್ತು ಜ್ಞಾನ ವಿರಾಗ ಭಕ್ತಿಯ ಮುಕ್ತಪಾವನ ಮಾಡಿ ಸಂತತ ಮುಕ್ತಿಕಾಂತನ ಸ್ಮರಣೆ ಪಾಲಿಸಿ14 ಮಹಿಷನ ಸಂಹರಿಸಿ | ಮಹಿಯನ್ನು ಪಾಲಿಸಿ ಮಹಿಸೂರೆ ನೆಲೆಯೆನಿಸಿ | ಪತಿಸಹಿತವಸಿಸಿ ಮಹಿಪತಿಗಳಾದಿಯಲಿ ಸರ್ವರಿಂ ಅಹರಹರ್ ಸೇವೆಯನು ಕೊಳುತ ಮಹಿಮೆ ತೋರುತಿರುವೆ ಪ್ರತಿದಿನ ಅಹಹ ಬಣ್ಣಿಸಲೊರೆವೆ ನರರಿಗೆ 15 ಚಂಡ ಮುಂಡರ ಮರ್ದಿಸಿ | ಚಾಮುಂಡಿಯೆನಿಸಿ ಖಂಡೆಯವನು ಝಳಪಿಸಿ | ಪುಂಡರನು ವಧಿಸಿ ಖಂಡ ಪರುಶುವಿನಂತೆ ಅದÀಟರ ರುಂಡಮಾಲೆಯ ಕೊಂಡು ಭೂತಗ- ಳ್ಹಿಂಡು ಡಿಂಡಿಮ ಡಂಡೆಣಿಸಲು ತಾಂಡವಾಡಿದ ಚಂಡಕಾಳಿಯೆ 16 ಶುಂಭ ನಿಶುಂಭರನು | ಕುಂಭಿಣಿಗೆ ಕೆಡಹೆ ಸುರರು | ಕುಂದುಭಿಯ ಹೊಡೆಯೆ ಡೊಂಬ ಕೊಳಾಸುರನ ಸೂಕರ ಡಿಂಬ ತಾಳುತ ಸೀಳಿ ದೈತ್ಯ ಕ- ದಂಬವೆಲ್ಲಕೆ ಕಂಭ ಸಂಭವ ನಿಂಬು ರೂಪವ ನಂಬಿ ತೋರಿದೆ 17 ಸಕಲ ಶಕ್ತ್ಯಾತ್ಮಕಳೆ | ಭುವಿಯಲಿ ಈ ಪರಿ ಪ್ರಕಟಳಾಗುತ ಖಳರ | ಕಟಕವನು ತರಿದು ಭಕುತವರ್ಗಕೆ ಬಂದ ಸಂಕಟ ನಿಕರ ಪರ್ವತ ವಜ್ರವೆನಿಸುತ ಮುಕುರದಂದದಿ ಪೊಳೆದು ಪೊರೆಯುವೆ ವಿಕಟನಾಮದಿ ನಿಕಟದಿರುತ 18 ಜ್ಞಾನೇಚ್ಚಾ ಕ್ರಿಯ ರೂಪಳೆ | ನಿನ್ನನು ನುತಿಸಿ ಆನತಿಸಿದವರಿಗೆ | ಪ್ರಸನ್ನಳಾಗಿ ಮಾನ ಸತಿಸುತ ಧ್ಯಾನ ಧನಮನೆ ಜ್ಞಾನ ಭಕ್ತಿ ವಿರಕ್ತಿ ಮುಂತವ ದೇನು ಬೇಡಲು ಕೊಡುವೆ ನಿನ್ನ ಸಮಾನರಾರನು ಕಾಣೆ ಜಗದೊಳು 19 ಅಂಗನಾಮಣಿಯರಿಗೆ | ಮಾಂಗಲ್ಯವೃದ್ಧಿಗೆ ಮಂಗಳಗೌರಿಯೆಂದು | ಪ್ರಸಿದ್ಧಿಗೊಂಡು ರಂಗುಮಾಣಿಕದ್ಹಸೆಯ ಪೀಠದಿ ಮಂಗಳದ್ರವ್ಯಗಳಿಂದೊಪ್ಪುತ ಮಂಗಳೇಕ್ಷಣದಿಂದ ಕುಳಿತಿಹೆ 20 ವೈದ್ಯ ಜ್ಯೋತಿಷ ಪುರಾಣ | ವೇದಾಂತ ಮುಂತಹ- ಗಾಧ ಗ್ರಂಥಗಳನು | ನಿಜಪತಿಯ ಮುಖದಿ ಸಾಧಿಸಿದೆ ಸಜ್ಜನರಿಗೋಸುಗ ಬೋಧಿಸಿದೆ ಗುಹ ಗಣಪ ಮುಖರಿಗೆ ಆದಿದೇವನ ಒಲಿಮೆ ಪಡೆಯಲು ಹಾದಿ ತೋರಿದೆ ಹೇ ದಯಾನಿಧೆ 21 ಅಷ್ಟಬಾಹುಗಳಿಂದಲಿ | ಅಷ್ಟಾಯುಧಂಗಳ ದಿಟ್ಟತೆಯಿಂ ಧರಿಸಿ | ಅಷ್ಟಾತ್ಮನಂವೆರಸಿ ಶಿಷ್ಟ ನಾಲ್ಮಡಿ ಕೃಷ್ಣ ಭೂಪನ ಇಷ್ಟದೇವತೆಯಾಗಿ ನೆಟ್ಟನೆ ಬೆಟ್ಟದಲಿ ರಂಜಿಸುವೆ ಭಕ್ತರಿಷ್ಟ ಹರಿಸುತ ಕೊಟ್ಟಭೀಷ್ಟವ 22 ಸಂತರ ನುಡಿಗಳು | ನಾನಾಂತು ನಿನ್ನಯ ಚಿಂತಿತಾರ್ಥದ ಪದವ | ಸ್ವಾಂತದಲಿ ತಂದು ಇಂತು ತುತಿಸಿದೆನರಿಯೆನನ್ಯಯಥ ಪಂಥವನು ಎನ್ನಂತರಂಗವ ನಂತು ತಿಳಿದಿಹೆ ಜನನಿ ಕೊಡು ಶ್ರೀ- ಕಾಂತ ಭಕ್ತಿಯ ಮುಂತೆ ಕರುಣದಿ 23
--------------
ಲಕ್ಷ್ಮೀನಾರಯಣರಾಯರು
ಇಂದ್ರಿಯವಶಕನ ಮಾಡಿದಿರೆನ್ನಮುಂದುವರಿವೆನರಿಯದೆ ಸುಪ್ರಸನ್ನಾಪಎನ್ನೊಳಿರುವ ಗುಣದೋಷ ಸೂಕ್ಷ್ಮಂಗಳಚನ್ನಾಗಿ 'ವರಿಸಿ ತಿಳಿದು ನೋಡೆಮನ್ನಿಸಿ ಪೊರೆವ ಕರುಣ ಬರದಿದ್ದರುನಿನ್ನವನೆಂಬಭಿಮಾನದಿಂ ಗುರುವೆ1ಶೈಲಕೆ ಸ್ಥೂಲತೆ ಜಾಲಾಂದ್ರಗತ ರೇಣುಜಾಲಕೆ ಸೂಕ್ಷ್ಮತೆಯತಿ ಲಾಘವತೂಲಕೆ ಬಂದಿಪ್ಪ ಸ್ವಾಭಾ'ಕವ ನೋಡಿತಾಳಲಾರದವನಂದದಿ ಮುಂದುವರಿಸುವೆನು2ಮಶಕ ಮಕ್ಷುಕ ಮಲ ಕ್ರಿ'ು ಖರ ಸೂಕರಶಶ ಗಜ ತುರಗ ವ್ಯಾಘ್ರಾಧಿಗಳಪಶುಗಳ ಸಂದಣಿಗಳಲಿ ಕೊಂಬೆನು ಎನ್ನವಶ'ಲ್ಲವೆಂದಿವ ವೊಳಗುಗೈವವರುಂಟೆ 3ಪರರೆನ್ನೊಳಿಹ ಗುಣ ದೋಷಾನುಸಾರದಿಹರುಷ 'ಷಾದಜನಕ ವಾಕ್ಯವಅರಿತರಿಯದೆ ನುಡಿದರೆ 'ಚಾರಿಸಿ ನಾನೆಚ್ಚರುಗೊಳ್ಳದು ಭ್ರಮೆುಂ ಕೆಡುತಿಹೆನಾಗಿ 4ಪರರ ದೂಷಣೆಯ ನಾ ಮಾಡಿದರುಪರರೊಳು ಬರಿದೆ ದ್ವೇಷವನೆಸಗಿದರು ಮುಂದೆ'ರಿಯರ ವಚನವ ಹಳಿದರು ಸಟೆಯನುಚರಿಸಿದರಾಗಲೆನಗೆ 'ಪ್ರಹತಿ ದೋಷ 5ರಾಗ ದ್ವೇಷದ ಬಲ'ಡಿದನ್ಯಧರ್ಮವನಾಗಮವಂತರ ಸಮ್ಮತವಾಕೂಗಿ ವಾದಿಸಿ ಜುಸುವ ಬುದ್ಧಿಗೈದರಿನ್ನಾಗಲಿ ಸುರೆಯನ್ನೀಂಟಿದ ದೋಷವೆನಗೆ6ಪರನಾರಿಯರ ರೂಪು ಲಾವಣ್ಯವನು ನೋಡಿಕರಗಿದೆನೈ ಕಾಮಾಧೀನನಾಗಿಬರಿಯನೃತವನಾಡ್ದೆನೈ ತಪ್ಪಿದೆನು ಮುಂದೆಬರಲಿ ಸ್ವರ್ಣಸ್ತಿಯ ದೋಷವೆನಗೆ ಸ್ವಾ'ು 7ಆರಾದರೇನವರೆಸಗಿದ ಕರ್ಮದದಾರಿಯೊಳಿರೆ ನಿಗ್ರ'ಸಿನು ಮುಂದೆದೂರಿಕೊಂಡರೆ ಕೇಳಿ ಖತಿಗೊಂಡೆನಾದರೆಸಾರಲಿ ಗುರುದಾರಗಾ'ುದೋಷವು ನನ್ನ 8ಆವಜನ್ಮದ ಸುಕೃತವೊ ನಿನ್ನ ಚರಣದಸೇವೆ ದೊರಕಿ ಧನ್ಯನಾದೆನಯ್ಯಾಭಾವನೆಯಳವಡದ ಅಭಿಮಾನದಿಂದನ್ಯಜೀವರೊಳ್ದೋಷವನೆಣಿಸಿ ನಾನೊಂದೆನೂ 9ಎನ್ನ ಜನನಿ ಜನಕರು ನಿನ್ನ ಚರಣದೊಳ್ಚೆನ್ನಾಗಿ ನಿಂದರು ಸದ್ಗುರುವೆನಿನ್ನವನಾದೆ ನಾನಿಲ್ಲ ಜನುಮವೆನಗೆನ್ನುತಿದ್ದರು ರಾಗಾದಿಗಳಾಶೆ ಬಲುಹಯ್ಯ 10ಮರೆತು ನಡದೆನು ತಪ್ಪಿದೆನಯ್ಯ ಚಿಕನಾಗಪುರವಾಸ ಗುರು ವಾಸುದೇವಾರ್ಯನೆಪರಮ ಪಾಪಿಗಳ ಸಂಸರ್ಗದೋಷವೆನಗೆಬರಲಿ ಮಾಡಿದ ಪ್ರತಿಜ್ಞೆಯ ಬಿಟ್ಟೆನಾದರೆ 11
--------------
ವೆಂಕಟದಾಸರು
ಇನ್ನೇನ ಮಾಡುವೆ ಇನ್ನಾರ ಬೇಡುವೆ ಪ್ರ-ಸನ್ನ ಚೆನ್ನಕೇಶವ ಎನ್ನ ಬಿನ್ನಪವಮನ್ನಿಸಿ ದಿನದಿನದಲ್ಲಿನಿನ್ನನರ್ಚಿಪಂತೆ ಮಾಡು ಪ. ಮೊಲೆಯುಂಬ ಹಸುಗೂಸು ಮಾತನಾಡಿ ತನ್ನಮನದಭೀಷ್ಟವ ಪೇಳ್ವುದೆಚೀರಿ ಅಳುವದೈಸೆ ಅದನರಿತು ಅದರ ತಾಯಿಅಪ್ಪ್ಪಿಮುದ್ದಾಡಿಸುತ್ತಬಳಲಿಕೆÀ ಪೋಪಂತೆ ನಸುಬಿಸಿಪಾಲನುಬಾಯೆಂದು ಕುಡಿಸುವಳುಸಿರಿಲಲನೆಯರಸ ನಮ್ಮ ಈ ಪರಿಯಲಿನೀನು ಲಾಲಿಸಿ ಸಲಹಬೇಕು 1 ಕರಿ ಕರೆಯಲುಪೊರೆದಂತೆ ಪೊರೆಯೆನ್ನನುಮಕರಿಯ ಕೊಂದು ಪೊರೆದಂತೆ2 ಹುಲಿಯ ಕಂಡೋಡುವ ಹುಲ್ಲೆಯ ಮರಿಯಂತೆಭವದ ಬೇಗೆಯಲಿ ಬೆಂದೆ ವಿಘಳಿಗೆ ಘಳಿಗೆಯೊಳು ಅಲಸದೆ ಪಾಪವಗÀಳಿಸುವ ಗÀಸಣೆಗಂಜೆತುಳಸಿಯ ದಳದಿಂದ ಸಂತುಷ್ಟನಹ ನಿನ್ನಒಲಿಸುವ ಭಾಗ್ಯದಲ್ಲೆ ಈ ಇಳೆಗೆ ಭಾರವಾದೆಇಹಪರ ದುಃಖದ ಹಂಬಲಿಕೆ ಎಳ್ಳಷ್ಟು ಇಲ್ಲಸನ್ಮಾರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ ಅಪವರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ3 ಹೆಂಡಿರ ಸಾಕಲಾರದೆ ಹೆಣ್ಣು ಮಕ್ಕಳುಗಳಕಂಡ ಕಂಡವಗೆರ್À ಮಾರಿ ಜಗಭಂಡನೆನಿಸಿಕೊಂಡೆ ಬಡತನ ಹಿಂಗದೆಕೊಂಡೆಯಗಳ ಪೇಳುವೆಉಂಡುಡುವರ ಕಂಡು ಮತ್ಸರ ಮಾಡುವೆತಂಡ ತಂಡÀದವರಿಂದ ಕಡಗೊಂಡರ್ಧನ ಕೊಡದೆ ಕಲ್ಲಪೊರುವೆನು ಕೋ-ದಂಡವೇರಿಸಿ ಕೊಂಡೆನು 4 ದಂಡವಿಡಿದು ವೇಷಧಾರಿಯೆಂಬುದ ಕೈಕೊಂಡು ರಾವಣನಂತೆ ಚರಿಸಿ ಎನ್ನಮಂಡೆ ಬೋಳು ಮಾಡಿ-ಕೊಂಡು ಇಳೆಯೊಳು ಪರಸತಿಯರ ಮೋಹಿಪೆಪುಂಡರೀಕಾಕ್ಷ ಈ ಪರಿಯ ಕ್ಲೇಶಗಳನುಉಂಡರೆÀ ವೈರಾಗ್ಯ ಬಾರದು ಎಲೆಪಾಂಡವಪ್ರಿಯ ಇನ್ನಾರಿ ಗುಸುರುವೆನು ಉ-ದ್ದಂಡಭಕ್ತರ ಸೇರಿಸೊ ಕೈ-ಕೊಂಡು ನಿನ್ನುದ್ದಂಡಭಕ್ತರ ಸೇರಿಸೊ5 ತಪ್ಪಿದರೆ ತಾಯಿ ತನ್ನ ಮಕ್ಕಳುಗಳತಕ್ಕೈಸಿಕೊಂಬವೊಲು ಕಾಮ-ನಪ್ಪ ಎನ್ನಪ್ಪ ಒಂದು ಕೊರತೆಯ ಕಾಣದೆಕರುಣದಿ ಕಾಯಬೇಕುಅಪಾರಮಹಿಮ ನೀನಾಶ್ರಿತ ಜನರನುಅತ್ತ ಹೋಗೆನ್ನೆ ಗಡ ನೀನ-ಪ್ರತಿಮಹಿಮನೆನಿಸಿಕೊಂಡೆ ಅದರಿಂದಅಮರರ ಶಿರೋರನ್ನವೆ ಅರ್ಜುನಸಖಅಮರರ ಶಿರೋರನ್ನವೆ 6 ಸರಿಮಿಗಿಲಿಲ್ಲದ ಸರ್ವೇಶ ಹರಿಯೆಂದುಸಿರಿಹಯವದನರಾಯ ನಿನ್ನಪರಮ ಮುನಿಗಳೆಲ್ಲಪರೀಕ್ಷೆಮಾಡಿ ನೋಡಿಮುನ್ನ ನಿರ್ಣೈಸಿದರುಹಿರಿಯರ ಮಾತನು ಪಾಟಿಮಾಡದನಗೋತ್ರ ಸೂತ್ರಗಳು ಪೋಕುಪ್ರವರ ಗೋತ್ರ ಋಷಿಮೂಲಯೆಂದು ಪ್ರಸಿದ್ಧ ಇನ್ನಾರು ನಿನ್ನಂಥವರು 7
--------------
ವಾದಿರಾಜ