ಒಟ್ಟು 175 ಕಡೆಗಳಲ್ಲಿ , 62 ದಾಸರು , 166 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಿನದಿನದೊಳು ಬಿಡದೊನಜಾಕ್ಷ ಪಾದ ಭಜಿಸಿ ನೀ ಸುಖಿಯಾಗೊ ಮನವೆ ಪ ನಂಬುಗೆ ಕಾರಣ ಅಂಬುಜಾಕ್ಷನ ಶ್ರೀಪಾ ದಾಂಬುಜ ಒಲಿಸಲು ಕುಂಭಿಣಿಯೊಳಗೆ ನಂಬಿ ಪ್ರಹ್ಲಾದ ಕರೆಯೆ ಕಂಬದಿಂ ಬಂದವನ ಬೆಂಬಿಡದಲೆ ಕಾಯ್ದನೆಂಬೋಕ್ತಿ ಕೇಳಿ ತಿಳಿದು 1 ದುರಿತದ ತವರಿದು ನರಕಕ್ಕೆ ಬೇರೆಲೊ ಮರವೆಸಂಸಾರ ಮಹಸರಸಿನಸರೋವರ ಸುರಸಿನೊಳ್ ಸಿಲ್ಕಲು ತಿರುಗರೆಂಬುವ ಹರಿಶರಣರ್ವಾಕ್ಯಗಳು ಸ್ಥಿರನಂಬೀ ಅರಿತು 2 ಕಿರಿಕಿರಿ ಸಂಸಾರ ಪರಿಪರಿಬಾಧಿಪ ಉರಿಕಿನ ತಿಂಡಿಯಿದು ನೆರೆನಂಬಬೇಡ ಜರಸುಖವಿಲ್ಲದ ಎರವಿನ ಕಾಯಕ್ಕೆ ಹಿರಿಹಿರಿ ಹಿಗ್ಗಿ ಕೆಡದಿರು ವಿವರಿಸಿನೋಡಿ 3 ಸತಿಸುತರಿವರೆಲ್ಲ ಅತಿಭಾಗ್ಯ ಇರುವನಕ ಸತತ ನಿನ್ನಯ ಸೇವೆ ಹಿತದಿಂ ಮಾಳ್ಪರು ಗತಿಸಿ ಪೋಗಲು ಭಾಗ್ಯ ಸತಿಸುತರೆ ನಿನ ಗತಿವೈರಿಗಳು ಕಾಣೊ ಮತಿಹೀನ ಮನಸೆ 4 ಇರುಳು ಹಲವು ಪಕ್ಷಿ ನೆರೆದುಂಡು ವೃಕ್ಷದಿ ತಿರುಗಿ ಉದಯದೊಳು ಹಾರಿಹೋಗ್ವ ತೆರದಿ ಸರುವ ಅಸ್ಥಿರವೆಂದು ಅರಿತು ವಿಚಾರಿಸಿ ಸ್ಥಿರಸುಖವನು ಪಡೆಯೊ ಶ್ರೀರಾಮನಡಿಗ್ಹೊಂದಿ 5
--------------
ರಾಮದಾಸರು
ದೇವದೇವತೆಗಳ ಸ್ತುತಿ ಅಂಬುಧಿಶಯನ ಪೀತಾಂಬರಧರ ಕಮಳಾಂಬಕ ಸಿರಿರಮಣ ನಂಬಿದ ಭಕ್ತರ ಬೆಂಬಿಡದಿಹನೆಂಬುದಕೆ ಸಹಜಗುಣ ಪ ಒರಲುತ್ತಾ ಸಭೆಗೆ ಬರಲು ಒತ್ತಿ ಮುದ್ದಿಸುತಿರಲು ಪೊರೆದೆಯೋ ಧ್ರುವನ1 ಹರಿನಾಮವನು ಬರೆಯೆ ವಿರಚಿಸೆ ಕೇಳದಿರೆ ದುರುಳಬಾಧಿಸೆ ಮಗನ ಮೂರ್ತಿ ವರವಿತ್ತು ಪೊರೆದೆಯೋ ಪ್ರಹ್ಲಾದನ 2 ಶಾಪವನೀಯ ಲಗಸ್ತ್ಯನಿಂದ್ರದ್ಯುಮ್ನ ಭೂಪತಿ ಗಜವಾಗಲು ಕೋಪದಿ ನೆಗಲ್ವಿಡಿಯೊ ಗುಪಿತದಿ ಮೊರೆಯಿಡಲು ಸೀಳ್ದು ಪೊರೆದೆಯೋ ಗಜವ 3 ಮರ್ಮವನರಿತು ಬರಲು ಅನ್ನವನೀಯೆನಲು ಪೊರೆದೆಯೋ ಪಾಂಡುವರ 4 ಹರಿವಾಸವರವ ಮಾಡಲು ನರಿಯೆ ಬಂದು ವರವಿತ್ತು ಪೊರೆದೆಯೋ ವೇಣುಗೋಪಾಲ 5
--------------
ಕವಿ ಪರಮದೇವದಾಸರು
ನಗಬಹುದು ನೀ ಮುಗುಳು ನಗೆಯಾ ಗುರುರಾಯಮಿಗೆ ಕಂಡು ದೇಹಾಭಿಮಾನಿಗಳ ಬಗೆಯಾ ಪತನ್ನ ತಾನರಿಯಲೀಸದ ಮಾಯೆಗೊಳಗಾಗಿಅನ್ಯರೇತೋಜಾತಮಾದ ದೇಹವ ನೋಡಿತನ್ನಿಂದ ತಾ ಕಾಣಪಡುತಿಹುದಿದಲ್ಲವೆಂದೆನ್ನಲಾರದೆ ದೋಷದಿಂದಾಉನ್ನತದ ಮಾಂಸ ರಕ್ತಾಸ್ತಿಮಲ ಮೂತ್ರಂಗಳಿನ್ನೆನೆದುನಾರುವ ನವದ್ವಾರ ಮಾರ್ಗದಿಂತನ್ನ ಮರಸುವದೇಹವೆತನ್ನದೆಂದು ಮರೆದುಣ್ಣುರಿವಾತಗಳ ಕಂಡೂ ಮಾಯೆ ಭಾಪೆನ್ನುತ್ತ ಬೆರಳೊಲದು ಕೊಂಡು ಬಗೆಗಂಡೂ 1ಬಿಟ್ಟ ಮನೆ ಜನ ಧನಂಗಳಲಿ ಮತ್ತೂ ಮನವನಿಟ್ಟು ವಾಂತ್ಯಾಶನವನುಂಬ ನಾಯಂದದಲಿಪಟ್ಟಣಂಗಳಲಿ ತಿರುಗುತ ಪರರ ಬಾಧಿಸುತಕೆಟ್ಟ ಬುದ್ಧಿುಂದ ಧೃತಿಗುಂದಿಕೊಟ್ಟಪುದು ಕರ್ಮವೆಂಬುದ ಮರೆತು ಗೇಣುದ್ದಹೊಟ್ಟೆ ಬಟ್ಟೆಗೆ ದೈನ್ಯ ಬಟ್ಟು ಮೂಢತೆುಂದಕೆಟ್ಟೆನಿನ್ನಾರು ರಕ್ಷಿಪರೆಂದು ಚಿಂತಿಸುವಹೊಟ್ಟೆಹೊರಕರನು ನೋಡುತ್ತಾ ಕಟಕಟಾಕೆಟ್ಟರಿವರೆಂದು ಹಾಸ್ಯವನು ಮಾಡುತ್ತಾ 2ತಾನಾತ್ಮನೆಂಬುದನು ಕೇಳಿದ್ದುದೃಷ್ಟಾನುಮಾನಂಗಳಿಂ ನಂಬಿಗೆಯೆುಲ್ಲದದರಲ್ಲಿಮಾನಾವಮಾನಂಗಳಿಂ ಹರುಷ ಶೋಕಾದಿಹೀನಬುದ್ಧಿಗಳ ಮಾಡುತ್ತಾಜ್ಞಾನಮಾರ್ಗದಲಿ ವಿಶ್ವಾಸವಿಲ್ಲದೆ ತನ್ನ ಕಾಣಲಾರದೆ ಭೇದ ಬುದ್ಧಿುಂ ವ್ರತತೀರ್ಥಸ್ನಾನಾದಿುಂದ ಮುಕುತಿಯ ಪಡೆಯಬೇಕೆಂಬಮಾನವರ ಭ್ರಾಂತಿಯನು ತಿಳಿದೂ ಇವರ್ಗಳಿಗೆಸ್ವಾನುಭವವಿಲ್ಲೆಂದು ಸಮತೆಯಲಿ ನಿಂದೂ 3ರಾಗವನು ಬಿಡಲಾರದಾಶಾಪಿಶಾಚಕೊಳಗಾಗಿ ಸತ್ಸಂಗ ಸತ್ಕಥೆಯ ಕೇಳಿಕೆಗಳನುನೀಗಿ ಧನಿಕರೊಳಿಚ್ಚಿತವನಾಡಿ ಸದ್ಧರ್ಮತ್ಯಾಗಿಯಾಗ್ಯನೃತಕ್ಕೆ ಪೊಕ್ಕೂಹೀಗೆ ತಿರುಗುತ ಪರಾನ್ನಾದಿ ಭೋಗಕ್ಕಾಗಿಕಾಗೆಯಂದದಲಲ್ಲಿಗಲ್ಲಿಗೆ ಸದ್ಗತಿುೀವಯೋಗ ಮಾರ್ಗವ ಬಿಟ್ಟುಭ್ರಾಂತರಾದಿರಿ ಮಹದ್ರೋಗಿಗಳ ಕಂಡು ಬೆಸಗೊಂಡು ಇವರ್ಗೆ ಭವರೋಗ ಬಿಡದೆಂದು ನಿಜಪದದಲ್ಲಿ ನಿಂದೂ 4ಇಂತರಿವ ಜನರಲ್ಲಿ ನಿಂತು ಸನ್ಮತಿುತ್ತುಚಿಂತೆಗಳ ಬಿಡಿಸುತ್ತಲಂತರಾತ್ಮಕನಾಗಿಸಂತಗೋಪಾಲಾರ್ಯ ಗುರುವರ್ಯನಾಗಿ ವೇದಾಂತದರ್ಥವನು ಬೋಧಿಸುತಾಅಂತವಿಲ್ಲದ ನಿಜವ ತೋರಿ ಪಾಲಿಸಿ ಮುದವಂತಾಳ್ದು ಸಕಲ ಸಂಶಯಗಳನು ಪರಿಹರಿಸಿಶಾಂತರಾದಿರಿ ಮೋಹಹೋುತ್ತು ನಿತ್ಯ ಸ್ವಾತಂತ್ರ್ಯವಾುತು ಗೆದ್ದಿರೆನುತಾಸಂತತಾನಂದಕನುಗೈದು ಕೈ ಹೊುದೂ 5
--------------
ಗೋಪಾಲಾರ್ಯರು
ನನ್ನ ಕರ್ಮವು ಬಂದು ಇನ್ನು ಬಾಧಿಸುತಿರೆ ಅನ್ಯರೇನ ಮಾಡುವರೈ ಪ ಕನ್ನೆ ಶಿರೋಮಣಿ ದ್ರೌಪತಿ ವರದನೆ ಎನ್ನ ಪಾಲಿಸೊವೋ ಪ್ರಸನ್ನ ರಂಗನಾಥ ಅ.ಪ ಭಿಕ್ಷಕ್ಕೆ ಬಂದಾಗ ಲಕ್ಷ್ಯವಿಡದೆ ಹೋಗಿ ಸಾಕ್ಷಿಯ ನಾಕಂಡೆನೈ ಪಕ್ಷಿ ವಾಹನನೆ ನೀರಕ್ಷಿಸಬೇಕಯ್ಯ ಸಾಕ್ಷಾತನೆಂತೆಂಬೊ ಮೋಕ್ಷಾಧಿಕಾರಿಯೆ 1 ದೋಷಕ್ಕೆ ಗುರಿಯಾದೆನೈ ಆಶೆಯ ಬಿಡಿಸಯ್ಯಾ ಶ್ರೀ ವೆಂಕಟರಮಣ ದೋಷರಹಿತ ಗುರುವು ದಾಸ ತುಲಸೀರಾಮ 2
--------------
ಚನ್ನಪಟ್ಟಣದ ಅಹೋಬಲದಾಸರು
ನಂಬೂ ವಿಷ್ಣು ಪಾದಧ್ಯಾನಾ ನರನೆ ಪಾಮರನೆ ಇನ್ನು ಕುಂಭಿಣಿ ಪಾತಕಗಳೆಂಬವು ಬಾಧಿಸಾವು ಜನ್ಮ ಜನ್ಮದಿ ಪ ಅಜಾಮಿಳಾ ವ್ಯಾಸಾಂಬರೀಷ ಶಂಭುಶಂಕರ ರಾಣಿಗ್ಹೇಳಿದ ಶ್ರೀರಾಮಮಂತ್ರವನೇ ಕೂಡಾ 1 ಕಾಯಿದದ್ದು ನೋಡು ಸುಧೆನುಣಿಬಡಿಸಿದ ನೋಡು ಭಾಗ್ಯವು ಕೊಟ್ಟದ್ದು ನೋಡು ಅರಿಮುಖಲಿ ಚಕ್ರವೆತ್ತಿದಗೆ ಇತ್ತ ಐಶ್ವರ್ಯವು ನೋಡು 2 ಮೂಲ `ಹೊನ್ನೆವಿಠ್ಠಲ’ ಭಗವಂತಾನಾ ನಂಬಿದವ ಕಲದ----ಅಕಾಲ ಸುಖ ಸಂಭ್ರಮ ಪಡೆದು ಕಡೆಗೆ ಕಾಣೋ ನೋಡಾ 3
--------------
ಹೆನ್ನೆರಂಗದಾಸರು
ನರಸಿಂಹ ನರಸಿಂಹ ನಮಿಸುವೆನೊ ಘೋರ ದುರಿತ ಬೆನ್ನ ಬಿದ್ದಿದೆ ಪರಿಹರಿಸೋ ಶ್ರೀ ನರಸಿಂಹ ಪ ಪರಮೇಷ್ಠಿ ಹರ ಸುರಪತಿ ಮುಖರಾ ಸುರನಿಕರ ಪೊರೆವ ಪ್ರಭೊ ಪ್ರವರ ದುರಿತವು ಅವರನ್ನ ಬಾಧಿಸದಂತೆ ಪೊರೆದ ಪರಿಯಿಂದ ಎನ್ನ ಪೊರೆಯೊ 1 ಕಾಯ್ದು ತನ್ನಯ ತನ್ನ ತಂದೆಯ ಬಾಧೆ ಭಯದಿಂದ ಮನದಲ್ಲಿ ನಿನ್ನ ನೆನಿಯೆ ದಯದಿಂದ ನೀ ಕಂಭದಲಿ ಬಂದು ಪೊರೆದಂತೆ ಎನ್ನ ಭಯ ಪರಿಯೆ ಪೊರೆ ಶ್ರೀ ನರಸಿಂಹ 2 ನಿನ್ನ ಪೆಸರೆಂದರೆ ದುರಿತಂಗಳು ತನ್ನಿಂದ ತಾನೆ ಜರಿಯುವವು ಚನ್ನಾಗಿ ಶರಣರ ಪೊರೆದದಕೆ ನಿನ್ನವರೆಂದು ಕೇಳಿ ಬಲ್ಲೆ ಶ್ರೀ ನರಸಿಂಹ 3 ನಖ ಮುಖ ಶಿಖಿ ತನ್ನ ನೆನೆಯೆ ಸುಖಿತರವಾಹೋದು ಶರಣರಿಗೆ ಮಖಭುಜ ರವಿ ಸಾಕ್ಷಿ ಇದಕಾಗಿರೆ ವಿಖನಸಾರ್ಚಿತ ಪಾದ ಸುಖಮಯನೆ ಶ್ರೀ ನರಸಿಂಹ ಕಾಯೊ 4 ಅರಿದರೀಧರ ವರ ಕರಯುಗನೆ ಕರಯುಗ ಜಾನು ಶಿರದಲ್ಲಿಪ್ಪನೆ ಶಿರದಿಂದೊಪ್ಪುವ ಕರತಳನೆ ವರ ವಾಸುದೇವವಿಠಲ ಪೊರೆಯೊ ಶ್ರೀ ನರಸಿಂಹ ಕಾಯೊ 5
--------------
ವ್ಯಾಸತತ್ವಜ್ಞದಾಸರು
ನಾರಾಯಣ ಎನ್ನಿರೋ ನಾರಾಯಣ ಎನ್ನಿ ನಾರದÀಪ್ರಿಯನಿಗೆ ನಂದನ ಸುತ ಮುಕುಂದ ಮುರಾರಿಗೆ ಪ ಕೆಟ್ಟ ಅಜಮಿಳನ ಬಂದು ಕ(ಟ್ಟಲ್ಯ)ಮ ಪಾಶದಿ ತಾ ಕಂ- ಗೆಟ್ಟು ಹರಿನಾಮವ ಕರೆಯೆ ಕೊಟ್ಟ ತನ್ನ ಪಟ್ಟಣ ಪದವಿ 1 ಕಾಲಕಾಲಕೆ ಗೋಪಾಲನ ನೆನೆಯದೆ ಬಿಟ್ಟು ಕಾಲಕಳೆಯಲು ಯಮಭಟರು ಕರೆದÀು ಬಾಧಿಸದೆ ಬಿಡರು 2 ಸ್ನಾನ ಜಪ ತಪವ್ಯಾಕೆ ಮೌನ ಮಂತ್ರವ ಬಿಟ್ಟು ದಾನವಾಂತಕ ಕೃಷ್ಣನ್ನ ಧ್ಯಾನದೊಳಿಟ್ಟರಗಳಿಗೆ 3 ಲೆಕ್ಕವಿಲ್ಲದ ದೇಶ ತುಕ್ಕಿ ತಿರುಗಿದರಿಂದೆ ದುಃಖವಲ್ಲದೆ ಜ್ಞಾನ ಮುಕ್ತಿ ದೊರಕುವುದೇನು 4 ಬಿಟ್ಟು ವಿಷಯವ ಭೀಮೇಶಕೃಷ್ಣನಲ್ಲಿಟ್ಟು ಧ್ಯಾನ ಹತ್ತು ಹರಿಪುರ ಸೋಪಾನ ರಕ್ಷಿಸುವ ಖಗವಾಹನ 5
--------------
ಹರಪನಹಳ್ಳಿಭೀಮವ್ವ
ನಾರಾಯಣ ನಾರಾಯಣ ನಾರಾಯಣ ನಾರಾಯಣ ನಾರಾಯಣ ನರಹರಿಯೆ ಪ. ನಾರಾಯಣ ನರಹರಿಯೆ ಹಯವದನ ಸ್ವಾಮಿ ನೀ ಎನಗೆ ದಯವಾಗೊ ಅ.ಪ. ನಿಗಮವ ಕದ್ದೊಯ್ದ ದುಗುಡ ದೈತ್ಯನ ಕೊಂದು ಆಗಮವ ತಂದು ಅಜಗಿತ್ತೆ ಆಗಮವ ತಂದು ಅಜಗಿತ್ತೆ ಹಯವದನ ಆದಿಮೂರುತಿಯೆ ದಯವಾಗೊ 1 ಕೂರ್ಮರೂಪದಿ ಬಂದು ಆ ಗಿರಿಯನೆತ್ತಿದ ಪ್ರೇಮದಿ ಸುರರಿಗಮೃತವ ಪ್ರೇಮದಿ ಅಮೃತವನಿಕ್ಕಿದ ಹಯವದನ ಸ್ವಾಮಿ ನೀ ಎನಗೆ ದಯವಾಗೊ 2 ಕ್ರೋಡರೂಪದಿ ಬಂದು ಮೂಢದೈತ್ಯನ ಕೊಂದು ರÀೂಢಿಯ ನೆಗಹಿ ಜಗಕಿತ್ತೆ ರÀೂಢಿಯ ನೆಗಹಿ ಜಗಕಿತ್ತೆ ಹಯವದನ ಪ್ರೌಢ ನೀ ಎನಗೆ ದಯವಾಗೊ 3 ಶಿಶುವ ಬಾಧಿಸುತಿರ್ದ ಕಶಿಪನ್ನ ಸೀಳಿದಿ ಕುಶಲದಿಂ ಕರುಳ ಮಾಲೆಯ ಕುಶಲದಿಂ ಮಾಲೆ ಧರಿಸಿದ ಹಯವದನ ಬಿಸಜಾಕ್ಷ ಎನಗೆ ದಯವಾಗೊ 4 ವಾಮನರೂಪದಿ ಬಂದು ಭೂಮಿ ಓರಡಿ ಮಾಡಿ ವ್ಯೋಮಕ್ಕೆ ಚರಣವ ನೀಡಿದೆ ವ್ಯೋಮಕ್ಕೆ ಚರಣವ ನೀಡಿದ ಹಯವದನ ವಾಮನ ಎನಗೆ ದಯವಾಗೊ 5 ಕೊಡಲಿಯ ಪಿಡಿದು ಕಡಿದೆ ದುಷ್ಟನೃಪರ ಹಡೆದ ತಂದೆಯ ಮಾತು ಸಲಿಸಿದೆ ಹಡೆದ ತಂದೆಯ ಮಾತು ಸಲಿಸಿದ ಹಯವದನ ಒಡೆಯ ನೀ ಎನಗೆ ದಯವಾಗೊ 6 ಸೀತೆಗೋಸ್ಕರ ಪೋಗಿ ಸೇತುವೆಯ ಕಟ್ಟಿದೆ ಭೂತ ರಾವಣನ ಮಡುಹಿದೆ ಭೂತ ರಾವಣನ ಮಡುಹಿದೆ ಹಯವದನ ಖ್ಯಾತ ನೀ ಎನಗೆ ದಯವಾಗೊ 7 ಗೊಲ್ಲರ ಒಡನಾಡಿ ಬಲ್ಲಿದಸುರÀನ ಕೊಂದು ಮಲ್ಲರೊಡನಾಡಿ ಮಡುಹಿದೆ ಮಲ್ಲರೊಡನಾಡಿ ಮಡುಹಿದ ಹಯವದನ ಫುಲ್ಲಾಕ್ಷ ಎನಗೆ ದಯವಾಗೊ 8 ತ್ರಿಪುರರ ಸತಿಯರಿಗುಪದೇಶವನಿಕ್ಕಿ ತ್ರಿಪುರರನೆಲ್ಲ ಮಡುಹಿದೆ ತ್ರಿಪುರರನೆಲ್ಲ ಮಡುಹಿದ ಹಯವದನ ನಿಪುಣ ನೀ ಎನಗೆ ದಯವಾಗೊ 9 ತೇಜಿಯನೇರಿ ರಾಹುತನಾಗಿ ನೀ ಮೆರೆದೆ ಮೂರ್ಜಗಕ್ಕೆ ಕಲ್ಕಿಯೆಂದೆನಿಸಿದೆ ಮೂರ್ಜಗಕ್ಕೆ ಕಲ್ಕಿಯೆಂದೆನಿಸಿದೆ ಹಯವದನ ಭೋಜ ನೀ ಎನಗೆ ದಯವಾಗೊ 10 ವಾದಿರಾಜರಿಗೊಲಿದು ಸ್ವಾದೆಪುರದಲಿ ನಿಂದು ವೇದದ ಕಥೆಯನರುಹಿದೆ ವೇದದ ಕಥೆಯನರುಹಿದ ಹಯವದನ ಮಾಧವ ನೀ ಎನಗೆ ದಯವಾಗೊ 11
--------------
ವಾದಿರಾಜ
ನಿನ್ನ ಮಾತ ಕೇಳಿ ಗಾಳಿ ನಿಲ್ಲಬೇಕೆ ಶೀತವನ್ನು ಸಹಿಸು ನೀನು ಮಾಯಾಬಲೆಗೆ ಸಿಲುಕೆ ಪಮುನ್ನ ಕಾಯವೆತ್ತಬೇಡವೆಂದಡದಕೆ ನೀನುಧನ್ಯನಾಗದೀಗ ಋತುಧರ್ಮಕಳುಕೆ ಅ.ಪಬಲೆಯ ಬೀಸಬೇಡವೆಂದು ಪಕ್ಷಿ ಪೇಳಲು ಕೇಳಿಬಲೆಯ ಬೀಸುದಿಪ್ಪುದೆಂತು ಪಕ್ಷಿ ಸಿಕ್ಕಲುಅಳುಕಿ ಸಾದು ಬಲೆಯ ಬಾಧೆ ಬಲಿಗನಾಗಲು ಹಾಗೆಛಳಿಯು ನಿನ್ನ ಬಾಧಿಸದು ಪರಮನಾಗಲು1ಬಲಿಗನಂತು ಪಕ್ಷಿ ಭಕ್ಷಣೆಯ ಮಾಳ್ಪನು ಹಾಗೆನಳಿನನಾಭ ತಾನು ವಿಷಯಾಸಕ್ತನೊ ಯೇನುಸಿಲುಕದಿಪ್ಪನೊಂದರೊಳಗೆಂಬುದಿದೇನು ಎಂದುಬಲಿಯವಾಗೆ ಶಂಕೆ ಮನವೆ ನಿನಗೆ ಪೇಳ್ವೆನು 2ಇಲ್ಲವಾದ ಜಗª ಮಾಯೆುಂದ ನಿರ್ಮಿಸಿ ತಾನುಅಲ್ಲಿ ಪೊಕ್ಕು ಉಳ್ಳದೆಂಬಹಾಗೆ ನಟಿಸಿನಿಲ್ಲಲೀಸದಿದನು ಮತ್ತೆ ಕ್ಷಣದೊಳಳಿಸಿ ಕೂಡೆನಿಲ್ಲುವನು ನಿಜದಿ ನಿರ್ವಿಕಾರಿಯೆನಿಸೀ 3ತಾನು ಸುಖಿಸುವಂತೆ ಎನ್ನ ಸುಖಿಸಬಾರದೆ ಲೋಕದೀನಬಂಧುವೆಂಬ ನುಡಿಯ ಹೋಗಲಾಡದೆಮಾನವರ ತನ್ನ ಹಾಗೆ ಕಾಣಬಾರದೆ ಎಂದುನೀನು ಕೇಳೆ ಪೇಳ್ವೆ ನಿನ್ನ ಮಾತ ಮೀರದೆ 4ಆನಂದರೂಪಗೆ ದುಃಖ ತೋರಿಸುವದೆ ಆತನೀನೆಂದೊಮ್ಮೆ ತಿಳಿಯೆ ನಿನಗೆ ದುಃಖ ಮರೆಯದೆಭಾನುವಿನ ಮುಂದೆ ತಮವು ನಿಲ್ಲಬಲ್ಲುದೆ ಜೀವನಾನೆಂಬುದರಿಂದ ಸುಖವು ಮರೆಸಿಕೊಂಡಿದೆ 5ವೇದದಲ್ಲಿ ಪೇಳಿದಂತೆ ಋಗಳೆಲ್ಲರೂ ತಾವುವೇದವೇದ್ಯಬ್ರಹ್ಮವೆಂದು ಸುಖವ ಕಂಡರೂಆದಿಮಧ್ಯತುದಿಗಳಲ್ಲಿ ಬ್ರಹ್ಮವೆಂಬರು ಅದಸಾದರದಿ ಸಾಧಿಸಲು ಸುಖವ ಕಾಂಬರು 6ಅರಿವು ಮರವೆ ಎರಡು ಬಳಿಕ ಕರಣಧರ್ಮವೂ ತಾವುಕರಣಸಾಕ್ಷಿಯಾದ ನಿಜವನರಿಯಲರಿಯವುಕುರುಹನಿಟ್ಟು ನೋಡಲರಿವಿನೊಳಗೆ ಬೆರೆವವೂ ಕೂಡೆತಿರುಪತೀಶ ವೆಂಕಟೇಶನೊಳಗೆ ಬೆರೆವವೂ7ಕಂ||ತನು ತಾ ಜೀವನ ನುಡಿಗೇಳ್ದನುವಾಗಿ ಮೇಲೆ ಮುಕ್ತಿಮಾರ್ಗಕ್ಕೆತನದಿಅನುಕೂಲನಪ್ಪೆನು ನಾ ನಿನ್ನನು ಮೀರೆನೆನುತ್ತ ಪೇಳುತ ತನುವಾದಿಪುದು
--------------
ತಿಮ್ಮಪ್ಪದಾಸರು
ನೀತಿಯೆ ಎನ್ನ ಬಾಧಿಸುವುದಿನ್ನು ಪ. ಎಲ್ಲಿಯೂ ಎನಗೆ ನೀನಲ್ಲದೆ ಬೇರೆ ಗತಿ ಸಿರಿನಲ್ಲ ನೀ ಬಿಡುವುದು 1 ಶ್ರೀಯರಸ ನೀನೆ ತಂದೆತಾಯಿಗಳೆಂದು ಬಾಯಬಿಟ್ಟೊದರಲು ಕಾಯದೆ ಕಠಿಣ 2 ಭೂಧರಾಧೀಶಾಯುರ್ವೇದ ವಿದಾಯಕ ಮಾಧವ ನೀ ಎನ್ನ ವ್ಯಥೆಗೊಳಿಸುವುದು 3
--------------
ತುಪಾಕಿ ವೆಂಕಟರಮಣಾಚಾರ್ಯ
ನೀನಲ್ಲದಲೆ ಇನ್ನು ನಾನಾರ ಕೂಗಲೊ ಮಾನನಿಧಿ ಗೋಪಾಲ ಶ್ರೀನಿಧಿಯೇ ಪ. ಶ್ರೀನಿವಾಸನೆ ಎನ್ನ ನಾನಾ ಪರಿಯ ಕಷ್ಟ ನೀನೆ ಬಿಡಿಸಿ ಸಲಹೊ ಮಾನಾಭಿಮಾನದೊಡೆಯ ಅ.ಪ. ಕಡುಕೋಪದಿಂ ಖಳನು ಹುಡುಗನ ಬಾಧಿಸೆ ದೃಢ ಭಕ್ತಿಯಿಂದ ನಿನ್ನಡಿಯ ಭಜಿಸೆ ಕೆಡಹಿ ಅಸುರನ ಕೊಂದು ಒಡನೆ ಭಕ್ತನ ಕಾಯ್ದೆ 1 ತೊಡೆಯನೇರಲು ಬರೆ ಜಡಿದು ನೂಕಲು ತಾಯಿ ಒಡನೆ ಮನದಿ ನೊಂದು ಪೊಡಮಡುತ ಅಡವಿ ಅಡವಿ ತಿರುಗಿ ದೃಢದಿ ಭಜಿಸೆ ಧ್ರುವ ಒಡನೆ ಓಡಿ ಬಂದು ದೃಢಪಟ್ಟ ಕೊಡಲಿಲ್ಲೆ 2 ಕರಿ ಕರೆಯೆ ತಡೆಯದೆ ಸಲಹಿದ ಪೊಡವೀಶ ನೀನಲ್ಲೆ ಕಡುಕರುಣಿ ಬಡವಗೆ ಸಿರಿಯಿತ್ತೆ ಮಡದಿಗಕ್ಷಯವಿತ್ತೆ ಕಡುದ್ರೋಹಿಗಳ ಕೊಲಿಸಿ ಒಡನೆ ಐವರ ಕಾಯ್ದೆ3 ಚಿನುಮಯ ಗುಣಪೂರ್ಣ ಅಣು ಮಹತ್ ಅಂತರಾತ್ಮ ಎಣಿಸಲಾಹೊದೆ ನಿನ್ನ ಘನ ಮಹಿಮೆ ಮನಸಿಜಪಿತ ಸರ್ವ ಮನನಿಯಾಮಕ ಹರಿ ಮನದಲ್ಲಿ ನೀ ನಿಲ್ಲೊ 4 ಶ್ರೀಪದ್ಮಭವನುತ ನಾ ಪಾಮರಾಳಿಹೆ ಗೋಪಾಲಕೃಷ್ಣವಿಠಲ ಶ್ರೀಪತಿಯೆ ನೀ ಪಾರು ಮಾಡದೆ ಕಾಪಾಡುವವರ್ಯಾರೊ ತಾಪ ಬಿಡಿಸಿ ಸಲಹೋ5
--------------
ಅಂಬಾಬಾಯಿ
ನೀನೊಲಿದರೇನು ಏನಿಲ್ಲ ಹರಿಯೆ ಪ ನೀನೊಲಿಯದಿರೆ ಮಾತ್ರ ಏನೇನು ಇಲ್ಲ ಅ.ಪ. ಸಾಧನವು ಸಂಪತ್ತು ಸಾಧಿಸದೆ ದೊರೆಯುವುದುಪಾದಗಳ ಸೇವೆ ತಾ ತಾನಾಗಿ ಲಭಿಸುವುದುಖೇದ ವ್ಯಸನಗಳೆಲ್ಲ ಬಾಧಿಸದಲೋಡುವುದುಸಾಧು ಸಂಗವು ಭಕ್ತಿ ಬೋಧಿಸದೆ ಬರುವವು 1 ವಾಸುದೇವನೆ ವಿಪುಲ ಐಸಿರಿಯನೀಡುತಲೆಬೇಸರದೆ ನಿನ್ನವರ ಲೇಸಾಗಿ ಸಲಹುವೆಯೊದಾಸ ಭಕುತರು ಶೆರಗ ಹಾನಿ ಬೇಡಿದರೇನುಶೇಷಶಯನನೆ ನಿನ್ನ ಈಸು ಮಹಿಮೆಯ ತಿಳಿಯೆ 2 ಮನಸು ನಿನ್ನಡಿಗಳಲಿ ಕೊನೆತನಕ ಇರಿಸುವದುಘನಕೆಲಸ ನಿನದಯ್ಯ ಮನುಜರಿಗೆ ಸಾಧ್ಯವೇತನುಮನಗಳಿವು ನಿನ್ನವೆ ನನದೆಂಬುದೇನುಂಟುಧಣಿಯ ಗದುಗಿನ ವೀರನಾರಾಯಣನೆ ಒಲಿಯೋ 3
--------------
ವೀರನಾರಾಯಣ
ನೀರಜಾಕ್ಷ ನಿನ್ನೂರಿಗೆ ಪೋಗುವ ದಾರಿಯ ತೋರಯ್ಯ ಪ ದಾರಿಯ ಕಾಣದೆ ಅ.ಪ ಜನ್ಮಾಂತರ ಕೃತ ಕರ್ಮಗಳೆಂಬುವ ಹೆಮ್ಮರಗಳು ಬೆಳೆದು ಧರ್ಮನಿರೋಧ ವಿಕರ್ಮದ ಬಳ್ಳಿಯು ಬಿಮ್ಮನೆ ಬಿಗಿವಡೆದು ಕಂಟಕ ವೆಮ್ಮನು ಕಾಲಿಡಲಮ್ಮಗೊಡವು ಹರಿ1 ದಾರಿಯೊಳಡಸಿಹುದು ರಾರು ಮಂದಿ ಮುಳಿದು ಸಾರಿ ಸಾರಿ ಬಾಯಾರಿಸುತಿರ್ಪವು 2 ಯನು ದಾಂಟುವೊಡರಿದು ಧನಕನಕಾದಿಗಳೆನಿಪ ಪಿಶಾಚಗಳನವರತವು ಬಿಡವು ತನು ಸಂಬಂಧದ ಜನಗಳು ದುರ್ಮೃಗ ವನು ಪೋಲುತ ನಮ್ಮನು ಬಾಧಿಸುತಿರುವರು 3 ಕ್ಷುದ್ರವಿಷಯಗಳುಛಿದ್ರವಹುಡುಕುವ ವಧ್ರುವದೇಹದೊಳು ಕದ್ರುಸುತರವೊಲುಪದ್ರವ ಗೈವ ಭದ್ರದ ಭೀತಿಗಳೂ ಪದ್ರವ ಜರೆಯೆಂಬುದ್ರಿಕ್ತಾಂಗನೆ 4 ಸುರನರವರರೊಳು ಶರಣೋಪಾಯವರ ವರದವಿಠಲ ನಿಜ ಚರಣವ ನಂಬಿದೆ 5
--------------
ವೆಂಕಟವರದಾರ್ಯರು
ನೀರಜಾಕ್ಷನಿನ್ನೂರಿಗೆ ಪೋಗುವ ದಾರಿಯ ತೋರಯ್ಯ ಪ ತೊಳಲುವೆ ದಾರಿಯ ಕಾಣದೆ ಅ.ಪ. ಜನ್ಮಾಂತರಕೃತ ಕರ್ಮಗಳೆಂಬುವ ಹೆಮ್ಮರಗಳು ಬೆಳೆದು ಧರ್ಮನಿರೋಧವಿ ಕರ್ಮದ ಬಳ್ಳಿಯು ಬಿಂಮನೆ ಬಿಗಿವಡೆದು ಲಮ್ಮಗೊಡವುಹರಿ 1 ಮೀರಿಬರಲುಘನ ಚೋರರು ಕಾದಿಹರಾರುಮಂದಿ ಮುಳಿದು ಸಾರಿ ಬಾಯಾರಿಸುತಿರ್ಪವು 2 ದಾಂಟುವೊಡರಿದು ಧನಕನಕಾದಿಗಳೆನಿಪ ಪಿಶಾಚಗಳನವರತವು ಬಿಡವು ಪೋಲುತ ನಮ್ಮನು ಬಾಧಿಸುತಿರುವರು3 ಕ್ಷುದ್ರವಿಷಯಗಳು ಛಿದ್ರವಹುಡುಕುವ ವಧ್ರುಗದೇಹದೊಳು? ಕದ್ರುಸುತರವೋಲುಪದ್ರವಗೈವವಭದ್ರದ ಭೀತಿಗಳೂ ಜರೆಯೆಂಬುದ್ರಿಕ್ತಾಂಗನೆ4 ನರಿಗಳ ಪರಿಯಲಿ ನರಳುವರೆಲ್ಲರು ನರಕಗಳನುಭವಿಸಿ ವರದ ವಿಠಲನಿಜ ಚರಣವೆ ನಂಬಿದೆ 5
--------------
ಸರಗೂರು ವೆಂಕಟವರದಾರ್ಯರು
ನೆನೆ ಕಂಡ್ಯ ಮನವೆ ಸದ್ಗುರು ದಿವ್ಯಪಾದ ಖೂನ ತೋರುವದಿದೆ ನಿಜಬೋಧ ದ್ರುವ ನೆನೆಯಬೇಕೊಂದೆ ಭಾವದಿಂದೆ ತಾನೆತಾನಾಗುವ ಗುರು ತಾಯಿತಂದೆ 1 ಘನ ಸುಖ ಕೊಡುವ ಅನುಭವದಲಿಡುವ ಜನನ ಮರಣದ ಬಾಧಿಯ ಮೂಲಗಡೆವ 2 ಗುರುವಿಂದಧಿಕ ಬ್ಯಾರಿಲ್ಲ ಸುಖ ತಿರುಗಿ ನೋಡಲು ತನ್ನೊಳಾದ ತಾ ಕೌತುಕ 3 ಇದೆ ನಿಜಬೋಧ ಸ್ವಸುಖದ ಭೇದಿಸಿದವರಿಗಿದೆ ಸುಪ್ರಸಾದ 4 ಗುರುತಾ ತೋರುವ ಸುರಿಮಳೆಗರೆವ ಅನುದಿನ ಹೊರೆವ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು