ಒಟ್ಟು 1005 ಕಡೆಗಳಲ್ಲಿ , 92 ದಾಸರು , 788 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ ಪ ಬಹುಜನರು ನೆರೆ ತಿಳಿದು ಪೇಳಿ ಮತ್ತಿದನು ಅ ಕುಹಕ ಯುಕುತಿಹೇವವಿಲ್ಲದ ಹೆಣ್ಣು ಗಜುಗ ಬೆಳೆದ ಕಣ್ಣುಸೇವೆಯರಿಯದ ದಣಿಯು ಕಲ್ಲಿನಾ ಕಣಿಯು1 ಧರ್ಮವಿಲ್ಲದ ಅರಸು ಮುರಿದ ಕಾಲಿನ ಹೊರಸುನಿರ್ಮಲಿಲ್ಲದ ಮನಸು ಅದು ಕಜ್ಜಿ ತಿನಿಸುಶರ್ಮವಿಲ್ಲದ ಗಂಡು ಕರಿಯ ಒನಕೆಯ ತುಂಡುಮರ್ಮವಿಲ್ಲದ ಮಾತು ಒಡಕು ಮಡಕೆ ತೂತು 2 ಭೃತ್ಯ ಅವ ಕ್ರೂರ ಕೃತ್ಯ 3 ಬಂಟ ಒಡಕು ಹರವಿಯ ಕಂಠಗಂಡಗಂಜದ ನಾರಿ ಅವಳೆ ಹೆಮ್ಮಾರಿ 4 ದಾತ ಅವ ಹೀನ ಜಾತಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿಮುಟ್ಟಿ ಭಜಿಸದ ನರನು ಅವನೆ ವಾನರನು 5
--------------
ಕನಕದಾಸ
ಆ ಬಾಲೆಯರಬಗೆ ಬಗೆ ಸೋಲಿಸಿಬರುವಂಥ ಮೇಲು ಮೇಲಾದ ಕೋಲಪ. ಸಾಗರನ ತನುಜಳು ಬಳುಕುತಬಾಗುತ ನಾಗವೇಣಿ ರುಕ್ಮಿಣಿಆಗ ಗೋವಿಂದಗೆ ಬೇಗನೆ ವಂದಿಸಿ ಹೋಗಬೇಕು ಮುಯ್ಯಕ್ಕೆ1 ಬಡನಡು ಬಳುಕುತ ಮಡದಿ ಮೋಹದ ರಾಣಿಖಂಡಿ ಮುದ್ದು ಸುರಿಯುತಲೆ ನಡೆದು ಬಂದು ಕೃಷ್ಣನಡಿಗೆರಗಿಭಾಮೆ ನುಡಿದಳು2 ಪೊಡವಿ ಪಾಲಿಪವಪ್ಪನೀ ನಡೆಮುಯ್ಯಕ್ಕೆನುತಲಿ ನುಡಿದಳು ಸತ್ಯಭಾಮೆ ಉಡಬೇಕು ವಸ್ತ್ರಂಗಳಇಡಬೇಕು ಭೂಷಣನಡೆ ಬೇಗ ಕೃಷ್ಣರಾಯ 3 ಮಾಧವ ಸಿಂಧೂಶಯನ ನೀನು ಬಂದರೆಮುಯ್ಯಕ್ಕೆ ಛsÀಂದ ತೋರುವುದೆಂದರು 4 ನೀಲ ಮೊದಲಾದ ಬಾಲೆಯರು ರಂಗಗೆ ಮೇಲೆ ಮೇಲೆ ವಂದಿಸಿ ಶ್ರೀಲೋಲ ರಾಮೇಶÀ ನೀಆಲಸ್ಯ ಮಾಡದೆ ಪಾಲಿಸಬೇಕೆಂದರು5
--------------
ಗಲಗಲಿಅವ್ವನವರು
ಆತ್ಮನಿವೇದನೆ ನೆಂತು ಪೂಜಿಸಿದೆನೈ ನೀರಜಾಕ್ಷ ಪ ಕಂತುಪಿತ ಎನ್ನ ನೀ ಕಾಯ್ವೆಯೆಂತೊ ಕಮಲಾಕ್ಷ ಅ.ಪ ಗಂಗೆಯುದಕದಿ ಮಿಂದು ಸಿಂಗರದ ಮಡಿಯುಟ್ಟು ಮಂಗಳದ ನಾಮ ಮುದ್ರೆಗಳ ಧರಿಸೀ ಅಂಗಕರಣಗಳ ಶೋಧಿಸಿ ನ್ಯಾಸ ಮಂತ್ರದಿಂ ದಂತ ರಂಗದಿ ಬಿಂಬಮೂರ್ತಿಯ ಚಿಂತಿಸಿದೆನೇ1 ನಿರ್ಮಲೋದಕದಿಂದ ಅಭಿಷೇಚನವ ಗೈದು ನಿರ್ಮಾಲ್ಯ ತೀರ್ಥವನು ಸೇವಿಸಿದೆನೇ ಮರ್ಮವರಿತಾದಿಮೂರ್ತಿಯೆ ನಿನ್ನ ಬಿಂಬವನು ನಿರ್ಮಲಾಂತಃಕರಣ ಪೀಠದಲಿ ನಿಲಿಸಿದೆನೇ 2 ಶುಭ್ರವಸ್ತ್ರಗಳ ಪರಿಮಳ ಗಂಧ ಪುಷ್ಪಗಳ ನಘ್ರ್ಯ ತುಳಸಿಗಳನರ್ಪಿಸಿ ನಲಿದೆನೇ ಅರ್ಭಕನು ನಾ ಕನಕರತ್ನಾಭರಣಗಳನು ಅಬ್ಧಿ ತನಯಳರಮಣ ನಿನಗೆ ಅರ್ಪಿಸಿದೆನೇ 3 ಧೂಪದೀಪಗಳಿಂದ ವಾದ್ಯ ವೈಭವದಿಂದ ರಾತ್ಮನೆಂದರಿತು ನೈವೇದ್ಯವರ್ಪಿಸಿದೆನೇ 4 ವಿವಿಧ ಖಾದ್ಯಗಳಲ್ಲಿ ವಿವಿಧ ರಸ ರೂಪದಲಿ ವಿವಿಧ ಸಾನ್ನಿಧ್ಯಗಳ ಧ್ಯಾನಿಸಿದೆನೇ ಭವರೋಗಪೀಡಿತನು ನಾ ನಿನ್ನ ಹವಣರಿತು ಸುವಿಹಿತ ವಿಧಿಯಂತೆ ಪೂಜಿಸುವ ಪರಿಯೆಂತೋ5 ಸರ್ವಶಕ್ತನು ನೀನು ಸರ್ವಜ್ಞಪತಿ ನೀನು ಸರ್ವದಾ ತೃಪ್ತನೋ ನಿಗಮವೇದ್ಯಾ ಸರ್ವಭೂತಾಂತರ್ಗತನು ನಿನಗೆ ಉಣಬಡಿಸೆ ಗರ್ವಿಶಠನಜ್ಞತಮನೆನಗೆ ವಶವೇ 6 ವೇದಶಾಸ್ತ್ರಗಳ ಗಂಧವನರಿಯೆ ಹರಿಯೆ ನಿನ ಸಾದರದಿ ನಮಿಪೆ ಪೊರೆ ರಘುರಾಮವಿಠಲ 7
--------------
ರಘುರಾಮವಿಠಲದಾಸರು
ಆತ್ಮನಿವೇದನೆ ಯಾವಾಗಲೂ ನಿನ್ನ ಸೇವೆಯೊಳಿರುವಂತೆ ಕಾವುದೆನ್ನಯ ನಿಜದೀ ಕೃಪಾನಿಧೇ ಈ ಪರಿಯಿಂದನಾ ಭಾರಿ ಭವದಿ ನೊಂದೆ ತೋರೋ ನಿನ್ನಯ ಚರಣಾ ನಾರಾಯಣ ಪ ಆಶಾಪಾಶದಲಿ ನಾ ಘಾಸಿಯಾದೆನು ದೇವಾ ವಾಸನೆಯೊಳು ತೊಳಲಿ ಬಹು ಬಳಲಿ ವಾಸುದೇವನೆ ನಿನ್ನ ಪಾದದೊಳಗೆನ್ನಯ ಬೇಸರದಲೆ ರಕ್ಷಿಸೋ ನಿಜಪಾಲಿಸೋ 1 ನೀರಮೇಲಿನ ಗುಳ್ಳೆಯಂತೆ ತೋರುವ ಕಾಯ ಸೇರಿ ನಂಬಿದೆ ಭರದಿ ಬಹು ವಿಧದಿ ದೂರನಾದೆನು ನಿಜದರಿವುನಾನರಿಯದೇ ಸೇರಿಸೊ ನಿಜ ಸುಖದಿ ಪ್ರಬೋಧದಿ 2 ನಂಬಿದವರ ಕಾಯ್ವ ಸಂಭ್ರಮ ಪೊತ್ತವ ಶಂಭು ಶಂಕರ ಪ್ರಿಯನೇ ಸರ್ವೇಶನೇ ಇಂಬು ದೋರೆನ್ನಾ ಚಿದಂಬರ ನಿಜಪದ ನಂಬಿ ನಿಲ್ಲುವ ತೆರದಿ ಸದೃಢದೀ 3 ತತ್ವಮಸಿ ಮಹಾ ವಾಕ್ಯವ ಶೋಧಿಸಿ ನಿಸ್ತರಿಸುವ ಭವವಾ ಉಪಾಯವಾ ಚಿತ್ತಚೈತನ್ಯವಾಗಿ ನಿತ್ಯಶಾಂತಿಸ್ವಸುಖ ಸತ್ಯ ಸದ್ಗುರು ಸ್ವಾನಂದಾ ಸಹಜಾನಂದಾ4 ಕಡಹದಾ ಮರನೇರಿ ಮಡುವಾ ಧುಮ್ಮಿಕೃಇದ್ಯೋ ಪಿಡಿದು ಕಾಳಿಂಗನಾ ಹೆಡೆ ಕುಳಿದು ಕುಣಿದ್ಯೋ ಸಡಗರದಿಂದಲಿ ಮಾತೆಯ ತೊಡೆಯ ಮೇಲೆ ಬಂದು ಕುಳಿತೆ5 ದುರುಳ ದುಷ್ಟರ ಶಿರವ ಶರದಿಂದಾ ಕಡಿದೆಯೊ ಶರಣ ಬಂದ ದೀನರನು ಸಲಹಿದೆಯೊ ಪರಮ ಪುರುಷನೇ ನಿನ್ನ ಸ್ಮರಣೆಯೊಳಿರಿಸೆನ್ನಾ 6 ಅನ್ಯಾಯದಲಿ ಕುರುಪತಿಯ ಮಡುಹಿದೆಯೊ ಕರ್ಣನ ಕಂಠವ ಕತ್ತರಿಸಿದೆಯೊ ಧನ್ಯಧರ್ಮಾರ್ಜುನರ ಶಿರವಾ ಸನ್ಮತದಿಂದಲಿ ಕಾಯ್ದೆ 7 ಪುಂಡಲೀಕನ ಭಕ್ತಿಗೆ ಮೆಚ್ಚಿ ಪಂಡರಪುರದಲ್ಲಿ ನಿಂತೆನಿ ಹೆಚ್ಚಿ ತಂಡತಂಡದಲ್ಲಿ ಬರುವ ಹಿಂಡುಭಕ್ತರುಗಳ ಕೂಡುವ 8 ಕಂತು ನಾರಾಯಣ ಶಾಂತಿ ಪದದಲಿ ವಿಶ್ರಾಂತಿಯ ಕೊಟ್ಟಿನ್ನಾ ಭ್ರಾಂತಿಗಳನೆಲ್ಲ ತೋರಿಸಿ ಸಂತ ಸಂಗದೊಳಿರಿಸೆನ್ನಾ 9
--------------
ಶಾಂತಿಬಾಯಿ
ಆದಿಕೇಶÀವನ ಪಾಡಿ ಸುಜನರು ಮೋದದಿಂದಲಿ ಕೂಡಿ ಭವ ಬೇಡಿ ಪ ಅಸ್ಥಿರ ಸಂಸಾರ ಮೇಲು ದುಃಖಪಾರವಾರ ಇಲ್ಲಿ ವಸ್ತಿ ತ್ರಿವಾಸರಾ ಸ್ವಸ್ಥ ಚಿತ್ತದಿಂದ ಹರಿಯ ನೆನೆಯದಾಗ ಬ್ಯಾಡಿರಿ ಭೂಭಾರ 1 ಪರಿ ಜಾರಿ ಬೀಳುವುದಕ್ಕೆ ನೀರೊಳು ತೊಳೆದು ಪರಿಮಳತೊಡೆ ಮಲಸೋರದೆ ಪೇಳಿದರೆ 2 ಮಡದಿ ಮಕ್ಕಳು ಬಂದು ನಿನ್ನ ಕಡೆ ಹಾಸೋಕೆ ಬಂದು ನಿಮಗೆ ಕೆಡಬ್ಯಾಡಿರಿ ಹರಿಪರಮ ದಯಾಸಿಂಧು 3 ಸಂಗಡ ಬಂದು ರಕ್ಷಿಪರೇನು ಕಷ್ಟಬಟ್ಟು ನೀವು ಘಳಿಸಿ ಹೂಳಿದರೆ ಹುಟ್ಟಿದ್ದಾಯಿತೇನು 4 ನಗೆಗೇಡು ನಿಮ್ಮ ಬಟ್ಟಿ ಮೂರಾಬಟ್ಟಿ 5 ಅರಮಾಯಾ ಇನ್ನು ಪರಿ ಆದೀತು ನಿಮ್ಮ ಕಾಯಾ 6 ಇದು ಘಟ್ಟಿಯೆ ಸಂಸ್ಕøತಿಯು ಬಿಟ್ಟಿಗಾರರು ನಿಮ್ಮ ಕಟ್ಟುವನಿತರೊಳು ಮುಟ್ಟಿ ಭಜಿಸೆ ಹರಿಯಾ 7 ಮೇಲು ಸರಿಪರಿವಾರಗಳಾ ನರಸಿಂಹವಿಠಲಗರ್ಪಿಸಿ ಸುಖಿಸುವ ನರವರ ಜನ್ನವೇ ಸಫಲಾ 8
--------------
ನರಸಿಂಹವಿಠಲರು
ಆರತಿಯ ಬೆಳಗಬನ್ನಿರೆ ಆರತಿಯ ಬೆಳಗಬನ್ನಿರೆ ಪಾರ್ವತಿದೇವಿಯರಿಗೆ ಕೀರುತಿ ಕೊಂಡಾಡುತಲಿ ಪರ್ವತರಾಜನ ಮಗಳಿಗೆ ಆರತಿಯ ಬೆಳಗಬನ್ನಿರೆ ಪ ವಾಲೆ ಕಠಾಣಿ ಚಿಂತಾಕು ಮ್ಯಾಲೆ ಸರಿಗೆ ಸರ ಮುತ್ತುಗಳು ಕಾಲಗೆಜ್ಜೆಸರಪಳಿನಿಟ್ಟ ಫಾಲಾಕ್ಷನ ಮಡದಿಗೆ 1 ರಂಗುಮಾಣಿಕ್ಯದ ಹೆರಳು ಬಂಗಾರದಾಭರಣವಿಟ್ಟು ದುಂಡುಮಲ್ಲಿಗೆ ಮುಡಿದು ಕುಳಿತ ಮಂಗಳಾದೇವಿಯರಿಗೆ 2 ದುಂಡುಮುತ್ತಿನ ಮುಕುರ್ಯವು ಚಂದ್ರ ಬಾಳ್ಯಬುಗುಡಿನಿಟ್ಟು ದುಂಡು ಹರಡಿ ಕಂಕಣಕಮಲ ದ್ವಾರ್ಯನಿಟ್ಟ ವಾರಿಜಾಕ್ಷಿಗೆ 3 ಜಾತಿಮಾಣಿಕ್ಯದ ವಂಕಿ ನೂತನಾದ ನಾಗಮುರಿಗೆ ಪ್ರೀತಿಯಲಿ ಪೀತಾಂಬ್ರನುಟ್ಟು ಜ್ಯೋತಿಯಂತೆ ಹೊಳೆವೊ ಗೌರಿಗೆ 4 ನೀಲವರ್ಣ ಭೀಮೇಶಕೃಷ್ಣ ಧ್ಯಾನಮಾಡುತ ಕೃಷ್ಣನ ನೀಲಕಂಠನ ಸಹಿತ ಕುಳಿತ್ವಿಶಾಲನೇತ್ರೆ ಪಾರ್ವತಿಗೆ5
--------------
ಹರಪನಹಳ್ಳಿಭೀಮವ್ವ
ಆರಿಗಾರು ಇಲ್ಲವಯ್ಯ ಆರಿಗಾರು ಇಲ್ಲವಯ್ಯ ಪ ಮಡದಿಯೆಂಬಳು ಯಾಕೆಬಿಡದೆ ಪಂಕ್ತಿಯ ಊಟ ಎಂಬ ಭಾವ ಮೈದುನನೇಕೆಪಡದ ತಂದೆ ತಾಯಿ ಏಕೆ ಪಡಿತತ್ವ ಯಾಕೆಬಡಿಯುತ ಯಮನೀಗ ಒಯ್ಯೆ ಬಿಡಿಸಿಕೊಂಬರಿಲ್ಲ 1 ಅಣ್ಣತಮ್ಮನು ಯಾಕೆ ಅಳಿಯನು ಯಾಕೆಬಣ್ಣದ ಬಾಳು ತಾನೇಕೆ ಬಂಧುಗಳದೇಕೆಚಿನ್ನಕೊಪ್ಪರಿಗೆ ಯಾಕೆ ಚಿತ್ರಮನೆಯಾಕೆಕಣ್ಣ ಕಟ್ಟಿ ಕಾಲನೆಳೆಯ ಕಾವರಾರು ಇಲ್ಲವಯ್ಯ2 ಆರ ನಂಬಿದರು ನಿನ್ನಕಡೆ ಹಾಯಿಪರಿಲ್ಲನೂರು ಬಾರಿ ತಿಳಿದು ನೋಡು ನಿನ್ನೊಳಗೆಲ್ಲಧೀಧೀ ಚಿದಾನಂದ ಹೊಂದೆಯುಕ್ತಿಯಹುದೆಲ್ಲಬಾರೆ ಜನನ ಮರಣಕೆ ಸಂದೇಹವಿಲ್ಲ 3
--------------
ಚಿದಾನಂದ ಅವಧೂತರು
ಆರು ಸಂಗಡ ಬಾಹೊರೆಲೆ ಮನುಜ ನಿನಗೆ ಹಾರೈಸಿ ಬಳಲುವೆ ಬರಿದೆ ಭವದೊಳಗೆ ಪ ಗುರುಹಿರಿಯರಗ್ನಿಯ ಪರಿಮುಖದಿ ನಿನ್ನಯ ಕರಪಿಡಿದು ಮಾಂಗಲ್ಯ ಧರಿಸಿಕೊಂಡರ್ಧ ಶರೀರವೆನಿಸುವ ಸತಿಯು ಮರಣ ಕಾಲದಿ ನಯನ ತಿರುಗುವುದ ಕಂಡಂಜಿ ತಿರಿಗಿನಿಂತಳುತಿಹ್ಯಳು 1 ತನುಜಮನುಜರಿವರೆಲ್ಲ ನಿನಗತಿಹಿತ ಬಂಧು ಮಣಿದು ಸೇವಿಪರು ನಿನ್ನನುದಿನವು ಬಿಡದೆ ತನುಬಿಟ್ಟ ಕ್ಷಣದಿ ನನನಿನಗೆನುತ ಮನೆಕೀಲಿ ಘನ ಜಗಳ ಕಾಣು ಬಿದ್ದ್ಹೆಣದ ಪರಿವಿಲ್ಲದೆ 2 ಕುಲವಿದ್ಯವ್ಯವಹಾರ ಕಳವುಕೊಲೆ ನೃಪಸೇವೆ ತಲೆ ಬಾಗಿ ಜನರಲ್ಲಿ ಬಲುದೈನ್ಯ ಬಟ್ಟು ಗಳಿಸಿ ಹೂಳಿದ ದ್ರವ್ಯ ಎಳೆದೊಯ್ಯಲ್ಯಮ ನಿನ್ನ ತಲೆಯೆತ್ತಿ ನೋಡದಲೆ ನೆಲದಿ ನಿಲ್ಲುವುದು 3 ಭೂಮಿ ನಿನ್ನದು ಎಂದು ನೇಮವನು ಬರಕೊಂಡು ಕೋಮಲ ಮನೆಕಟ್ಟಿ ತಾಮಸದಿ ನಲಿವಿ ಭೂಮಿಯ ರಿಣತೀರಿ ನೀ ಮಡಿದಾಕ್ಷಣ ಬಹಿ ರ್ಭೂಮಿಯೋಳ್ಹುತಿವರೆಲೆ ಪಾಮರ ಮನುಜ 4 ಬಂಧುಬಾಂಧವರೆಲ್ಲ ಹಿಂದೆ ಉಳಿಯುವರು ಮಂದನಾಗದೆ ತಂದೆ ಶ್ರೀರಾಮ ಪಾದಾರವಿಂದಮಂ ನಂಬಿ ಭವಬಂಧವನು ಗೆಲಿಯೊ 5
--------------
ರಾಮದಾಸರು
ಆವ ತ್ರಾಣವು ಎನ್ನೊಳಿನಿತಿಲ್ಲವಯ್ಯ ಭಾವಜಪಿತ ನೀನೆ ದಯಮಾಡಬೇಕೊ ಪ ಗುಡಿಯ ಕಟ್ಟಿಸಲೆ ನಾ ಒಡುಕುಕವಡೆನಗಿಲ್ಲ ಬಡವರಿಗೆ ಅನ್ನಿಟ್ಟಿಲೆ ಹಿಡಿಧಾನ್ಯವಿಲ್ಲ ಕೊಡುವೆನೆನೆ ಧರ್ಮವ ಪಡೆದು ನಾ ಬಂದಿಲ್ಲ ಬಿಡುವೆನೇ ದು:ಸ್ಸಂಗ ಅಡರಿಹ್ಯರು ರಿಣವು 1 ದೃಢಧ್ಯಾತ್ಮಗೈವೆನೆನೆ ನಡೆವ ಶಕ್ತ್ಯೆನಗಿಲ್ಲ ಮಡಿಮಾಡ್ವೆನೆನೆ ಮನವು ತಡೆವಶಕ್ತಿಲ್ಲ ಸುಡಲೆ ಕಾಮಾದಿಗಳು ತೊಡರಿಹ್ಯದು ಸಂಸಾರ ನುಡಿಯಲೆ ಸತ್ಯ ಸದಾ ಬಡವನಾಗಿಹೆನು 2 ಒಡೆಯ ಶ್ರೀರಾಮ ನಿನ್ನಡಿಯ ಗುರುತರಿಯೆ ಕಡುಮೂರ್ಖ ಜನ್ಮವನು ಪಡೆದಿಹೆನು ಜಗದಿ ಒಡೆಯ ಸರ್ವಕೆ ನೀನೆ ಜಡಮತಿಯು ಗಡ ಕಡಿದು ದೃಢಭಕ್ತಿ ಸುಖವಿತ್ತು ಪಿಡಿದು ಸಲಹಯ್ಯ 3
--------------
ರಾಮದಾಸರು
ಆವ ಸುಕೃತವುಈ ನಾರಿಯರು ಈಪರಿ ಸುಖಿಸುವುದು ಪ. ಪಂಕಜನಾಭಗೆ ಶಂಖೋದಕವೆತ್ತಿಅಂಕದಲ್ಲಿಹೊ ಲಕುಮಿಯಅಂಕದಲ್ಲಿಹೊ ಲಕುಮಿಯ ನಲ್ಲಗೆಅಸಂಖ್ಯಸ್ತೋತ್ರವನೆ ಸ್ತುತಿ ಸೋರು 1 ದುರ್ಗಾದೇವಿಯ ರಮಣ ಭಾರ್ಗವಿರಾಮಗೆಶೀಘ್ರದಿ ಕೊಟ್ಟು ಕವಳವಶೀಘ್ರದಿ ಕೊಟ್ಟು ಕವಳವ ಗೋಗ್ರಾಸವಸ್ವರ್ಧುನಿ ಜನಕ ಕುಳಿತಾನೆ 2 ಹರಿವಾಣ ಇದ್ದಲ್ಲೆರಂಗಯ್ಯ ಬಂದು ಕುಳಿತಾನೆ 3 ವೀತದೋಷನ ಮುಂದೆ ಮಾತಿನಮಧುರೆಯರು ಜಾತಿ ಮಾಣಿಕದ ಸಮೆಜಾತಿ ಮಾಣಿಕದ ಸಮೆ ತಂದಿಟ್ಟುಜ್ಯೋತಿಗಳ ಹಚ್ಚಿ ಎಡಬಲ 4 ಮಂದಗಮನೆಯರೆಲ್ಲ ಮಿಂದು ಮಡಿಯನುಟ್ಟುಇಂದಿರಾಪತಿಯ ಎಲೆಯಲಿಇಂದಿರಾಪತಿಯ ಎಲೆಯಲಿ ಬಡಿಸೋರುಕುಂದದೆ ಕೊಟ್ಟ ಸೌಭಾಗ್ಯ5 ಬಂದ ಜನರೆಲ್ಲ ಮಿಂದು ಮಡಿಯನುಟ್ಟುಇಂದಿರಾಪತಿಯ ಜೊತೆಯಾಗಿಇಂದಿರಾಪತಿಯ ಜೊತೆಯಾಗಿ ಊಟಕ್ಕೆಬಂದು ಕುಳಿತವರು ಕಡೆಯಿಲ್ಲ 6 ಉಪ್ಪು ಉಪ್ಪಿನಕಾಯಿ ಹಪ್ಪಳ ಸಂಡಿಗೆಒಪ್ಪುವ ಬುತ್ತಿ ಕಲಸನ್ನಒಪ್ಪುವ ಬುತ್ತಿ ಕಲಸನ್ನ ಬಡಿಸೋರುಸುಪ್ಪಾಣಿ ಮುತ್ತು ಉದುರುತ7 ಹೊನ್ನಹರಿವಾಣದಿ ಅನ್ನಭಕ್ಷ್ಯವ ತುಂಬಿಚೆನ್ನರಾಮೇಶನ ಎಡೆಯೊಳುಚೆನ್ನರಾಮೇಶನ ಎಡೆಯೊಳು ಬಡಿಸೋರುರನ್ನ ಮುತ್ತುಗಳು ಉದುರುತ8
--------------
ಗಲಗಲಿಅವ್ವನವರು
ಆವುದು ಖರೆಯೆಲೊ ಜೀವನೆ ಆವುದು ನಿಜವೆಲೊ ಪ ಆವುದು ಖರೆಯಲೋ ಜೀವ ಜಗದ ಸುಖ ಮಾಯದೆಲ್ಲನು ಭಾವಿಸಿ ನೋಡೋಅ.ಪ ಬಡತನ ನಿಜವೇನೋ ನಿನಗೀ ಕಡುಸಿರಿ ಸ್ಥಿರವೇನು ಮಡದಿ ಮಕ್ಕಳು ನಿನ್ನ ಸಂಗಡ ಕಡೆತನಕಿಹ್ಯರೇನೊ ಹೆಡತಲೆ ಮೃತ್ಯು ಬಂದು ಪಿಡಿದು ಎಳೆಯುವಾಗ ಅಡರಿಕೊಂಡು ನಿನ್ನ ಬಿಡಿಸಿಕೊಂಬುರೇನು 1 ರಾಜ್ಯ ಭಂಡಾರವೆಲ್ಲ ನಿನಗೆ ಸಹಜವಾದದ್ದಲ್ಲ ಗೋಜುಪ್ರಪಂಚ ನಿಖಿಲವಂ ದಿನಮಾಜಿಹೋಗುವುದೆಲೊ ಸೋಜಿಗವಾಗಿ ಮಿಂಚು ತೇಜದಡಗುವಂತೆ ಈ ಜಗ ಸಮಾಜ ನಿಜವಿನಿತಿಲ್ಲೆಲೊ 2 ಕತ್ತೆಯಂತೆ ಕೂಗಿ ಜನ್ಮವ್ಯರ್ಥ ಕಳೆಯಬೇಡೊ ಉತ್ತಮರಿಗೆ ಬಾಗಿ ಸತ್ಯಪಥಕೆ ಹೊಂದು ಪಾಡೊ ನಿತ್ಯ ನಿರ್ಮಲ ಸರ್ವೋತ್ತಮ ಶ್ರೀರಾಮಪಾದ ಭಕ್ತಿಯಿಂ ಪಾಡಿ ಮುಕ್ತಿಯ ಪಡೆಯೊ3
--------------
ರಾಮದಾಸರು
ಆಶಾ ಪಾಶದಲಿ ಬಿದ್ದು ಘಾಸಿಯಾಯಿತು ಜೀವ ವಾಸುದೇವನೆ ನಿಮ್ಮ ಆಶೆಗೆನ್ನ ಮನವಿಲ್ಲ ಪ ಮಡದಿಯಾಗಲು ಮತ್ತೆ ಮನೆಯಾ ಮಾಡುವದಾಶಾ ಒಡಗೂಡಲದು ಮಕ್ಕಳಾಗುವಾಶಾ ಬಿಡದೆ ಕುಟುಂಬ ಪೋಷಣೆಯಾಗುವಾದಾಶಾ ಕಡಲ ಶಯನಾ ನಿಮ್ಮ ಆಶೆಗೆನ್ನ ಮನವಿಲ್ಲ 1 ಅನ್ನವಾಗಲು ವಸ್ತ್ರ ಅಲಂಕಾರದಾಶಾ ಇನ್ನು ಮಕ್ಕಳ ಮುಂಜಿ ಮದುವಿಯಾಶಾ ತನ್ನ ನೆಂಟರಸರಿಯಾ ಮಾಡುವದಾಶಾ ಪನ್ನಗಾಶನವಾಹನಾಶೆಗೇ ಮನವಿಲ್ಲ 2 ನಡೆವಕಾಲಕೆ ದೊಡ್ಡ ಕುದುರೆ ಏರುವದಾಶಾ ಅಡರಲು ರಥದಿಂದ ಆಂದಣಾಶಾ ಕಡಿಗೆ ತೀರದ ಹೊನ್ನು ಹಣದ ಸಂಗ್ರಹದಾಶಾ ಪೊಡವಿಧರನೇ ನಿಮ್ಮ ಆಶೆಗೆ ಮನವಿಲ್ಲ 3 ಒಂದೊದಗಲು ಮತ್ತೆ ಒಂದು ಬಯಸುದಾಶಾ ಎಂದಿಗೇ ಸರಿಯದು ವಿಷಯದಾಶಾ ಕುಂದಿದ ತನುವಿನ ಬಲವಾಗುವದಾಶಾ ಇಂದಿರೇಶನ ಆಶೆಗೆನ್ನ ಮನವಿಲ್ಲ 4 ಆಶೆಯೆಂಬಾ ನದಿಯ ಸುಳಿಯ ಬಿಡಿಸಿ ನಿಜ ದಾಸರಾ ಸಂಗ ಮನವ ತಿದ್ದೀ ಲೇಸಾಗಿ ಮಹಿಪತಿ ಸುತ ಪ್ರಭು ಭಕುತಿಯಾ ಆಶೆ ಹೆಚ್ಚಿಸಿ ಎನ್ನ ದಯದಿ ಪಾಲಿಸೋ ದೇವಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆಳ್ವಾರ್-ಆಚಾರ್ಯ ಸ್ತುತಿಗಳು ನೀರಾಟವ ನೋಡಿದೆ ನೀರಜಾಕ್ಷನ ರಾಣಿ ಗೋದಾದೇವಿಯ ಪ ಶ್ರೀವಿಲ್ಲಿಪುತ್ತೂರ ಶ್ರೀತುಳಸಿವನದಲ್ಲಿ ಶ್ರೀವಿಷ್ಣುಚಿತ್ತರಾ ಪುತ್ರಿಯೆಂದೆನಿಸಿ ಸುಪುತ್ರಿಯೆಂದೆನಿಸಿ ಶ್ರೀ ದೇವಿ ತಾನುದಿಸೆ ಬೇಗ ತೀವ್ರ ಹರುಷದಿಂ ಬೆಳೆಯುತ್ತಲಿದ್ದಾಳಲು 1 ಪುತ್ರಿಗೆ ತಕ್ಕಂಥ ವರವಿಲ್ಲವೆನುತಾಲೆ ಚಿತ್ತದೊಳಗೆ ಯೋಚಿಸಿದ ಆಳ್ವಾರರು ಪೆರಿಯಾಳ್ವರರು ಭಕ್ತವತ್ಸಲನಾ ವರಿಸಬೇಕೆನುತಾನೆ ಅರ್ಥಿಯಿಂದಲೆ ನೀರಾಟವನೆನೆದಾಳು 2 ಶ್ರೀಶವಾಸನೆಗಳ ಭಾವಿಸೀ | ಗೊಲ್ಲ ವಾಸನೆಗಳ ಭಾವಿಸೀ ವಾಸುದೇವನಾ ವರಿಸಬೇಕೆನುತಾಲೆ ಉ ಲ್ಲಾಸದಿಂದಲೆ ಹೆಂಗಳ ಕೂಡೆ ಪೊರಟಾಳು 3 ಮುತ್ತು ಮಾಣಿಕದಾಭರಣವನಿಟ್ಟು ಸುತ್ತೆಣೆ ಗಂಟನ್ಹಾಕಿ ದೇವಿ ಸುತ್ತೆಣೆ ಗಂಟನ್ಹಾಕಿ ಉತ್ತಮನಾಗಿದ್ದ ಪುಷ್ಪಗಳನೆ ಮುಡಿದು ಚಿತ್ತದೊಳೊಲ್ಲಭನಪ್ಪಣೆಗೊಂಡು ಪೊರಟಾಳು 4 ಮಾರ್ಗಶಿರ ಮಾಸದಿ ಪೊತ್ತೊಂದು ದಿವಸಾದಿ ಬೇಗ ತಾ ಪೊರಟೂ ಮಹಾಲಕ್ಷಿ ತಾ ಪೊರಟ ಳಾಗ ಬೀದಿಯನು ಸುತ್ತಿ ಮಂಟಪದಲಿ ನಿಂದು ಮಂಗಳಾರತಿಯನೆತ್ತೀ ಮಾರು ವಸ್ತ್ರವ ತೆಗದಾರು 5 ದಂತಧಾವನ ಮಾಡಿ ಕಂತುಪಿತನರಸೀಗೆ ಅಂತರಂಗದ ಭಕ್ತರು ಬೇಗ ಅಂತರಂಗದ ಭಕ್ತರು ಸಂತೋಷದಿಂದಲೆ ಮುಖವನ್ನು ತೊಳೆದು ಶ್ರೀ ಕಾಂತಗೆ ವಸ್ತ್ರದಿಂ ಮುಖವನೊರೆಸಿದಾರು 6 ಭಾಪು ಛತ್ರಿಚಾಮರ ಸೂರೆಪಾನವಾ ಜನ ಬೀಸಿ ಗೋಪಿ ಮುಕ್ತಿದಾಯಕಿಗಾಗ ಮುಕ್ತಿದಾಯಕಿಗಾಗ ದರ್ಪಣವನು ತೋರಿ ಕಂದರ್ಪನ ಮಾತೆಗೆ ಧೂಪ ದೀಪ ಕರ್ಪೂರದಾರತಿಯೆತ್ತಿದರು 7 ಬೇಗಾದಿಲಕ್ಷಿಗೆ ಆಭರಣ ಸಡುಲಿಸಿ ಆಗ ಮುಡಿಯ ಬಿಚ್ಚಿ ದೇವೀಗೆ ಆಗ ಮುಡಿಯ ಬಿಚ್ಚೀ ಬೇಗಾದಿಂ ಕಂಮೆಣ್ಣೆ ಕಸ್ತೂರಿತೈಲ ಮೈಗೆ ತಾಳಮೇಳದ ಗತಿಯಿಂದಲೊತ್ತಿದ್ದರೂ 8 ಶ್ವೇತವರ್ಣದ ದಿವ್ಯ ನಾಗವಲ್ಲಿಗಳಿಂದ ಖ್ಯಾತಿ ಪಡೆದಿರುವಾ ಕ್ರಮುಕಾ ಬೇಗ ಖ್ಯಾತಿ ಪಡೆದಿರುವಕ್ರಮುಕಾ ನೂತನವಾದ ಕರ್ಪೂರವರ್ಣಗಳಿಂದ ಜಗ ನ್ಮಾತೆಗೆ ತಾಂಬೂಲವ ನೀಡಿದರೂ 9 ಸಣ್ಣವಾದ್ಯದೊಳಗೆ ನುಡಿಸೇ ಬೇಗ ವಾದ್ಯದೊಳಗೆ ನುಡಿಸÉೀ ಹಣೆಯೊಳಗೆ ಬಾಚಿ ಮಣಿಗಂಟನಿಕ್ಕಿ ಉಳಿದ ಎಣ್ಣೆ ಭಕ್ತರಿಗೆಲ್ಲ ಯಿತ್ತಾರು 10 ಮಿಂದು ಮಡಿಯನುಟ್ಟು ಚಂದದಿಂದಲೆ ದೇವಿ ತಂದ ನೈವೇದ್ಯವುಂಡೂ ಬೇಗ ನೈವೇದ್ಯವುಂಡು ಬಂದ ಭಕ್ತರಿಗೆಲ್ಲ ತೀರ್ಥಪ್ರಸಾದವಿತ್ತು ಮಂದಗಮನೆ ತನ್ನ ಮಂದಿರಕೆ ನಡೆದಾಳು 11 ಬೈತಲೆಗೆ ರಾಗಟೆ ಹೆರಳಿಗೆ ಭಂಗಾರಗೊಂಡೆಯವ ನಿತ್ತು ಪಾನುಪಟ್ಟಿಯು ಮುತ್ತಿನಬಟ್ಟೆ ಕಟ್ಟಿ ಬೇಗ ಮುತ್ತಿನಬಟ್ಟೆ ಕಟ್ಟಿ ಕತ್ತುರಿ ಬಾವುಲಿ ಕಮಲಸರಗಳೂ ಮುತ್ತಿನ ಮೂಗುತಿ ಮುಕುರಾವನಿಟ್ಟಳೂ 12 ಹಾರಪದಕ ಹಸ್ತಕಡಗ ಹರಡಿ ವಂಕಿ ಶೀರೆಕುಪ್ಪಸ ತೊಟ್ಟೂ ಬೇಗ ಶೀರೆಕುಪ್ಪಸ ತೊಟ್ಟು ಅಂದುಗೆ ಇಂದೀರಾದೇವಿ ತಾನಿಟ್ಟು ಬಂದಳು ಆಗಾ 13 ಭಾಷ್ಯಕಾರರು ಮೊದಲಾದ ಭಕ್ತರುಯೆಲ್ಲ ಲಕ್ಷ್ಮಿದೇವಿಗೆ ಆಗ ಭಾಗ್ಯಲಕ್ಷ್ಮಿಗೆ ಆಗಾ ಭಾರಿ ಯಾ ಶೀರೆ ಕುಪ್ಪುಸವನಿತ್ತು ಪುಷ್ಪ ಮರ್ಯಾದೆಗಳ ಮಾಡೀ ಕರೆತಂದರು ಬೇಗಾ 14 ಮಂದಗಮನೆ ಅಂದು ಗೋವಿಂದನ ಎದುರಲ್ಲಿ ಆ ನಂದದಿಂದಲೆ ಕುಳಿತೂ ಬೇಗ ಆನಂದದಿಂದಲೆ ಕುಳಿತು ಚಂದದಿಂ ಮಲ್ಲಿಗೆಮಾಲೆಯ ಕಳುಹಲು ಮಂದರೋದ್ದರ ತನ್ನಾ ಮಡಿದೀಗೆ ಕಳುಹಿದ 15 ಕೂಡಾರವಲ್ಲಿಯೆಂತೆಂಬೊ ದಿವಸದಲ್ಲಿ ಕೂಡಿ ಮನ್ನಾರುರಂಗನಾ ಬೇಗ ಮನ್ನಾರುರಂಗನಾ ಕ್ಷೀರಾನ್ನ ಭೋಜನಂಗಳ ಮಾಡಿದರು ಭೋಗಿಯ ದಿನದಿ ಕಲ್ಯಾಣವ 16 ಮಕರ ಸಂಕ್ರಾಂತೀಲಿ ಮಂದರೋದ್ದಾರ ಸಹಿತ ಚೊಕ್ಕ ಪಲ್ಲಕ್ಕಿಯೇರಿ ಬೇಗ ಚೊಕ್ಕ ಪಲ್ಲಕ್ಕಿಯೇರಿ ಪಕ್ಕ ಮೆರವಣಿಗೆಯಲಿ ಬಂದು ಹರುಷದಿಂದ ವೆಂಕಟಕೃಷ್ಣನ ಎಡದಲ್ಲಿ ಕುಳಿತಾಳು 17
--------------
ಯದುಗಿರಿಯಮ್ಮ
ಇಕೋ ಈತ ವೆಂಕಟೇಶನೊ | ಭವದ | ಸಿಕ್ಕು ಬಿಡಿಸಿ ನೆನದವರಿಗೆ ಸಿಕ್ಕಿ ಮನದಿಂದಗಲದಿಪ್ಪಾ ಪ ಕರುಣ ಅರುಣ ಕಿರಣ ಪೋಲುವ | ಚರಣ ಧರಣಿ ತರುಣಿ ಸ್ಮರಿಸಿ | ಕರುಣಗಡಲಾ | ಧರಣಿಯಿಂದ ಉದ್ಧರಣೆ ಮಾಡಿದೆ ಪರಣನೀತ 1 ಮಂಡಿಯ ಮಂಡನ | ಕುಂಡಲ ಕಾಂತಿ | ಗಂಡ ಸ್ಥಳದಲಿ ಮಿರುಗೆ ತುಲಸಿ | ಕೌಸ್ತುಭ ಕಾಲ | ಪೆಂಡೆಯಿಟ್ಟು ನಂದನೀತ 2 ವಾಹನ ಆ ಖಂಡಲ ಇಕ್ಷುಕೋ | ಪರಮೇಷ್ಠಿ | ತೊಂಡರ ನಲಿದು ಕೊಂಡಾಡೆ ಚಂದಿರ ಮಂಡಲದೊಳು ಉ| ದ್ದಂಡನಾಗಿಯಿಪ್ಪಾ | ಪುಂಡ ದೈವನೀತ 3 ಪಂಜಿನಸಾಲು ಪರಂಜಳಿ ವಾದ್ಯ ವಿ | ರಂಜಿಸಲು ಜ್ಞಾನ | ಪುಂಜ ನಾರದ ಜಯ ಜಯ ಪೇಳಲು | ನಿರಂಜನ ಭಂಜನ ಈಶಾ 4 ಕರದ ಜನಕೆ ಸುರಧೇನು ಇದು | ನಿರುತದಲ್ಲಿ ಪೊರೆವ ಭಕ್ತರ | ಕರಿಯ ಕಾಯ್ದ ವಿಜಯವಿಠ್ಠಲ | ಪರಮ ಪುರುಷ ತಿರುಮಲನೀತ 5
--------------
ವಿಜಯದಾಸ
ಇಂಥ ಜನಗಳಿಗೆ ಎಂಥಾದ್ದು ಹರಿಕಥೆ ಕುಂತಿಮಕ್ಕಳಿಗಾಯ್ತು ಕಾಂತಾರವಾಸ ಪ. ಸ್ವಂತ ಧರ್ಮವ ಬಿಟ್ಟು ಆಂತನ್ಯಧರ್ಮವ ಸಂತಾಪಕ್ಕೊಳಗಾಗಿ ಭ್ರಾಂತಿಪಟ್ಟಿಹರು 1 ಜೀವಿಸಿ ಮೃಗದಂತೆ ಸಾವನು ಬಗೆಯದೆ ಕೇವಲ ತಾಮಸ ಯಾವಜ್ಜೀವನವು 2 ಸರಕಾರದ ಭಯ ಸರ್ವರಿಗಿದ್ದರು ಸರಿಯಾಗಿ ನಡೆಯದೆ ಬರಿದೆ ಬಳಲುವರು 3 ಬಡವರ ಬಾಯನು ಹೊಡೆದು ತಂದು ತನ್ನ ಮಡದಿಮಕ್ಕಳಿಗುಣಬಡಿಸಿ ಮೆರೆವರೈ 4 ಲಕ್ಷ್ಮೀನಾರಾಯಣನ ಲಕ್ಷಣಾಂಕಿತರನ್ನು ಲಕ್ಷ್ಯಕ್ಕೆ ತಾರದ ಕುಕ್ಷಿಂಭರರು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ