ಒಟ್ಟು 103 ಕಡೆಗಳಲ್ಲಿ , 26 ದಾಸರು , 101 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾಕೆ ದಯಬಾರದೊ ಕಾಂತೇಶ ಪ್ರಾಣೇಶ ಸಾಕಲಾರದೆ ಪೋದೆಯಾ ಎನ್ನನು ಪ. ಏಕಚಿತ್ತದಿ ನಿನ್ನ ಚರಣ ನಂಬಿ ಬರಲು ಭಾರತೀಶ ಅ.ಪ. ತೊಳಲಿ ಬಳಲಿ ಸುಖ ಸುಳಿವೆಂಬೋದರಿಯದೆ ನಳಿನಾಕ್ಷನ ದಾಸ ನಿನ್ನ ಕೀರ್ತಿ ಇಳೆಯೆಲ್ಲ ಪೊಗಳಲು ಸಲಹುವನೆಂತೆಂದು ಬಳಿಗೆ ಬರಲು ಮನಕರಗದೆ ತಂದೆ 1 ಅಂದು ಕನಸಿನಲ್ಲಿ ಶಿರದಲ್ಲಿ ಕರವಿಟ್ಟೆ ಇಂದೆಲ್ಲಿ ಪೋಯಿತೊ ಆ ಕರುಣ ತಂದೆ ಮುದ್ದುಮೋಹನ ಗುರುಗಳ ವಚನವ ಇಂದು ಒಲಿದೆನ್ನ ಕಾಯೊ2 ವಿೂಸಲ ದಾಸ್ಯಕೆ ಆಶೆ ಮಾಡಿದೆನೆಂದು ದೋಷವೆಣಿಸುವರೆ ಎನ್ನಲಿ ನೀ ಶೇಷಶಯನನೆ ಬಲ್ಲೆನೊ ಇದರ ಮರ್ಮ ಘಾಸಿಗೊಳಿಸದೆ ನೀ ಅಭಯವನೀಯೊ 3 ರಾಮದಾಸ್ಯವ ಬಯಸಿ ನೇಮದಿಂದಲಿ ಇದ್ದು ರಾಮನಾಗಮ ಕಂಡು ಎರಗಿ ನಿಂದು ಪತಿ ಪಾದ ದಾಸ ಸಿದ್ಧಿಯ ಪಡೆದು ಭೂಮಿಯೊಳು ಖ್ಯಾತನಾದೆಯೊ ಆಂಜನೇಯ 4 ಚಿತ್ತಿದಿ ಕೃಷ್ಣನ ದಾಸತ್ವ ಸಾಧಿಸಿ ಮತ್ತೆ ಮುನಿಯಾಗಿ ಗ್ರಂಥವ ರಚಿಸಿ ಚಿತ್ತದಿ ಗೋಪಾಲಕೃಷ್ಣವಿಠ್ಠಲನ ಪಾದ ನಿತ್ಯದಿ ಭಜಿಪೆ ನೀ ಮತ್ತೆನ್ನ ಕಾಯೊ 5
--------------
ಅಂಬಾಬಾಯಿ
ರಂಗನಾಥಾ ಅಂಗಜಾಪಿತಾ [ಮಾ] ವಂದಿತ ಪ ಜಗದಾದಿ ಮೂಲಕಾರಣ ನಗಧರಾಘ ನಿವಾರಣ ಖಗನುತಾ ಭಕ್ತಕಂಕಣ 1 ದೀನಪಾಲ ಸ್ವರ್ಣಮೇಖಲಾ | ಗಾನಲೋಲಾನುಪಮಲೀಲಾ ಕರುಣಾಲವಾಲ 2 ತಾಮಸನಿಕರಮಾನಿತಾ ಶ್ಯಾಮಲಾಂಗಾ ಪೊರೆ ಶ್ರೀಯುತಾ ರಾಮದಾಸಾರ್ಚಿತ [ಮಾಂಗಿರೀಶ] 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಂಗಪ್ಪ ಬಂದವ್ನೆ ಬಾಗ್ಲಲ್ಲಿ ನಿಂತವ್ನೆ ಸಿಂಗಾರದಿಂದವ್ನೇ ತೆಂಗಿನಕಾಯ್ಬಾಳೆಹಣ್ತಂದು ನೋಡಿರೋ ಹೊಂಗೂಳನೊತ್ತವ್ನೇ ಪ ನಾಕ್ಮಳ ನಿಂತವ್ನೆ ನೀರಲ್ಲಿ ನಿಂತವ್ನೆ ನಾಕೈಯಾ ಪಡೆದವ್ನೇ ಇಕ್ಕೆಲದಲಿ ಸಂಕುಚಕ್ರವ ಹಿಡಿದವ್ನೆ ರಾಕ್ಷಸನ್ನ ಮೆಟ್ಟವ್ನೆ1 ಗಟ್ಟಿ ಬೆನ್ನಿನ ಮ್ಯಾಗೆ ಬೆಟ್ಟವ ಹೊತ್ತವ್ನೆ ಗಟ್ಟಿ ಗದೇ ಹಿಡಿದವ್ನೇ ಮಟ್ಟಸವಾದ ನಾಕ್ಕಾಲಲ್ಲಿ ನಿಂತವ್ನೆ ಸಿಟ್ಟಿಲ್ಲ ನಗತವ್ನೇ 2 ಮೊಳದುದ್ದ ಮೂಗ್ಯ್ಮಾಲೆ ಭೂಮಿಯ ಹೊತ್ತವ್ನೇ ಬೆಳಸವ್ನೇ ಕೋರೆಹಲ್ಲಾ ತೊಳಲಿಬಳಲವನಪ್ಪ ನಮ್ಮಪ್ಪ ರಂಗಪ್ಪ ಯೆಳನಗೆ ನಗ್ತಾನೇ 3 ಮೂಡ್ತವ್ನೆ ಕಂಬ್ದಲ್ಲಿ ನರಸಿಮ್ಮನಾಗವ್ನೆ ಹಿಡಿದವ್ನೆ ದೊಡ್ರಾಕ್ಷಸ್ನಾ ದೊಡ್ದುಗ್ರಲೊಟ್ಟೆಯ ಬಗಿತವ್ನೆ ಸಿಗಿತವ್ನೆ ಕೊಡುತೀನ್ವರವನೆಂತಾನೇ 4 ಗಿಡ್ಡ ಹಾರುವನಂತೆ ಮೂರೆಜ್ಜೆ ಭೂಮಿಯನಡ್ಡಡ್ಡ ಅಳೆದವ್ನೆ ಪಾಡ್ಯದ ಹಬ್ದಲ್ಲಿ ಬಲಿಯ ಕರೆತರುತಾನೆ ಬೇಡಿದ್ದ ಕೊಡುತಾನೇ 5 ಜಯ ಜಯ ಜಯವೆಂತಾನೇ ಕೈಯಲ್ಲಿ ಹಿಡಿದವ್ನೆ ಗಂಡುಗೊಲ್ಲಿಯ ನೋಡೋ ಭಯವಿಲ್ಲ ಕೈಮುಗಿಯೋ 6 ಶಿವನ ಬಿಲ್ಮುರಿದವ್ನೆ ರಾವಣನ ತರಿದವ್ನೆ ಭೂಮಿಯೆಲ್ಲವಾಳ್ತವ್ನೆ ತವಕದಿ ನೋಡಿರೆಲ್ಲಾ 7 ಮಡುವಿಗೆ ಧುಮುಕಿ ಕಾಳಿಂಗನ ತುಳಿದವ್ನೆ ಹಿಡಿದವ್ನೆ ಹೊಂಗೊಳಲಾ ಮಾನವ ಕಡುರೂಪವಂತ ನಮ್ಮ 8 ಮತ್ತರ ಮಡದೀರ ವ್ರತವನು ಕೆಡಿಸಲು ಬೆತ್ತಲೆ ನಿಂತವ್ನೇ ಕೃತ್ತಿವಾಸನ ಕೈಯ್ಯೊಳಿಂಬಾಗಿ ನಿಂದವ್ನೆ ಉತ್ತಮ ದೇವನಮ್ಮ 9 ದುರುಳರನೊದೆಯಾಕೆ ಹೊಂಟವ್ನೇ ಪದಕಮಲಕೆ ಯೆರಗೋ 10 ಮುದ್ದು ರಂಗಪ್ಪನಿಗೆ ಪೊಂಗಲು ನೇವೇದ್ಯ ಸಿದ್ಧ ಮಾಡಿರಯ್ಯಾ ಬದ್ಧವು ಅವ ನಮ್ಮ ಕಾಯೋದು ಸಟೆಯಲ್ಲ ಎದ್ದೆದ್ದು ತಲೆಬಾಗಿರೊ 11 ರಾಮನು ಅವನೇ ಕಾಮನಪ್ಪನು ನಿಸ್ಸೀಮ ನಮ್ಮ ರಂಗನೇ ರಾಮದಾಸನ ಮನದೊಳು ಮನೆ ಮಾಡ್ಯವ್ನೇ ಪಾಮರ ವರದನೆಂಬ ಮಾಂಗಿರಿ 12
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರತ್ನದೊಳಗಿದು ರತ್ನ ನವರತ್ನಗಳೊಳಗಿದು ರತ್ನ ಪ ಚಿತ್ತಜಪಿತನೆಂಬ ರತ್ನ ನಮ್ಮ ನಿತ್ಯಮುಕ್ತರಂಗರತ್ನ ಅ.ಪ ಭಕ್ತಪಾಲಕನೆಂಬ ರತ್ನ ಸತ್ಯಾಸಕ್ತ ವರದನೆಂಬ ರತ್ನ ಮುಕ್ತಿದಾಯಕ ರಾಮರತ್ನ ನಮ್ಮ ಯುಕ್ತಿಭರಿತ ಕೃಷ್ಣರತ್ನ1 ಗೋಪಾಲಕೃಷ್ಣನೆಂಬ ರತ್ನ ವರತಾಪಸವಿನುತ ಮಾರತ್ನ ಶ್ರೀಪತಿಯೆಂಬ ಜೀವರತ್ನ ನಮ್ಮ ಪಾಪವಿನಾಶಕರತ್ನ 2 ಚಾರು ವೇದದೊಳಿಹ ರತ್ನ ನಮ್ಮಶ್ರೀರಮಣ ಎಂಬರತ್ನ 3 ಕರಿರಾಜವರದ ಸುರತ್ನ ನಮ್ಮ ಕರುಣಾಕರಯೆಂಬ ರತ್ನ ಶರಣ ಜನರ ಹಸ್ತರತ್ನ ನಮ್ಮ ತರಳಧ್ರುವನ ಕಾಯ್ದ ರತ್ನ 4 ಪ್ರೇಮರಸಾನ್ವಿತ ರತ್ನ ಇದು ಶ್ರೀಮಾಂಗಿರಿರಂಗರತ್ನ ನಮ್ಮ ರಾಮದಾಸಾರ್ಚಿತ ರತ್ನ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಮ ನಿಮ್ಮ ನಾಮಧ್ಯಾನ ಜಿಹ್ವೆ ಮೇಲೆ ನಿಲಿಸು ಪ ಜಗದಭಿಮಾನ ಬಿಡಿಸಿ ಸುಗುಣ ಸಂತಸಂಗ ಪಾಲಿಸಿ ಸುಗುಣಾಂತರಂಗ ನಿನ್ನ ಸಗುಣ ಪೊಗಳಿಸೆನ್ನ ಮುಖದಿ 1 ಮದಮತ್ಸರಗಳನು ಬಿಡಿಸಿ ಸದಮಲ ಜ್ಞಾನಾನಂದದಿರಿಸಿ ಸದಮಲಾತ್ಮ ನಿಮ್ಮ ಮೂರ್ತಿ ಸದಾಯೆನ್ನ ನೇತ್ರದೊಳ್ನಿಲಿಸು 2 ಕಾಮಿತಂಗಳ ಕಡೆಹಾಯ್ಸಿ ಭೂಮಿ ಸೀಮೆ ಮೋಹ ತೊರೆಸಿ ಸ್ವಾಮಿ ಮಮಪ್ರಾಣದಾರ್ಯ ಶ್ರೀ ರಾಮದಾಸನೆನಿಸು ಒಲಿದು 3
--------------
ರಾಮದಾಸರು
ರೌದ್ರಿ ಭದ್ರಿ ಮಹಕ್ಷುದ್ರ ಛಿದ್ರಿ ಹಿ ಮಾದ್ರಿಯುದ್ಭವಿಗೆ ನಮೋ ನಮೋ ಪ ರುದ್ರರೂಪೆ ದಾರಿದ್ರ್ಯಮರ್ದನಿ ರುದ್ರನರ್ಧಾಂಗಿಗೆ ನಮೋ ನಮೋ ಅ.ಪ ನಿಗಮಾತೀತೆ ಮಹದಾಗಮನುತೆ ತ್ರೈ ಜಗದ ಮಾತೆಗೆ ನಮೋ ನಮೋ ಸುಗುಣಸಂತಜನರಘನಾಶಿನಿ ಸುಖ ಸ್ವರ್ಗಾಧಿಕಾರಿಗೆ ನಮೋ ನಮೋ 1 ಮೃಡಮೃತ್ಯುಂಜನನೆಡದೊಡೆಯೊಳು ಕಡುಸಡಗರವಾಸಿಗೆ ನಮೋ ನಮೋ ದೃಢತರ ಭಕ್ತರ ದೃಢದ್ವಾಸಿನಿ ಜಗ ದೊಡೆಯ ಮೃಡಾಣಿಗೆ ನಮೋ ನಮೋ 2 ಕಮಲೆ ಕಾತ್ಯಾಯಿನಿ ಉಮೆ ಶಿವೆ ಸಾವಿತ್ರಿ ಕಮಲನೇತ್ರೆಗೆ ನಮೋ ನಮೋ ಸುಮನ ಸೌಭಾಗ್ಯ ಶಮೆ ದಮೆ ದಯಾನ್ವಿತೆ ವಿಮಲ ಚರಿತ್ರೆಗೆ ನಮೋ ನಮೋ 3 ಭಂಡದನುಜಕುಲ ರುಂಡ ಚೆಂಡಾಡಿದ ಪುಂಡ ಉದ್ದಂಡೆಗೆ ನಮೋ ನಮೋ ಖಂಡ ಕಿತ್ತು ಖಳರ್ಹಿಂಡು ಭೂತಕಿತ್ತ ಚಂಡಿ ಚಾಮುಂಡಿಗೆ ನಮೋ ನಮೋ 4 ರಕ್ತಬೀಜರೆಂಬ ದೈತ್ಯರ ಮದ ಮುರಿ ದೊತ್ತಿದ ವೀರೆಗೆ ನಮೋ ನಮೋ ಮತ್ತೆ ಶುಂಭರ ಶಿರ ಮುತ್ತಿ ಕತ್ತಿರಿಸಿದ ಶಕ್ತಿ ಶಾಂಭವಿಗೆ ನಮೋ ನಮೋ 5 ಓಂಕಾರರೂಪಿಣಿ ಹ್ರೀಂಕಾರಿ ಕಲ್ಯಾಣಿ ಶಂಕರಿ ಶರ್ವಾಣಿಗೆ ನಮೋ ನಮೋ ಮ ಹಂಕಾಳಿ ನತಸುಖಂಕರಿ ಪಾರ್ವತಿ ಶಂಕರನರಸಿಗೆ ನಮೋ ನಮೋ 6 ಶೌರಿ ಔದರಿಯ ಶಾರದೆ ಶ್ರೀಕರಿ ಶೂರ ಪರಾಂಬೆಗೆ ನಮೋ ನಮೋ ಪಾರಾವಾರ ದಯೆಕಾರಿ ನಿರಾಮಯೆ ಧೀರ ಚಿದ್ರೂಪೆಗೆ ನಮೋ ನಮೋ 7 ಉಗ್ರರೂಪಿ ಭವನಿಗ್ರಹ ದುಷ್ಟ ಸ ಮಗ್ರ ಹರಿಣಿಗೆ ನಮೋ ನಮೋ ಆಗ್ರಭಕ್ತರಿಷ್ಟ ಶೀಘ್ರ ಕೊಡುವ ಜೈ ದುರ್ಗಾದೇವಿಗೆ ನಮೋ ನಮೋ 8 ಹೈಮಾವತಿಯೆ ನಿರ್ಮಾಯೆ ಮೂರುತಿ ಕೋಮಲ ಹೃದಯೆಗೆ ನಮೋ ನಮೋ ಭೀಮಪರಾಕ್ರಮಿ ರಾಮದಾಸಜನ ಪ್ರೇಮಪೂರ್ಣಿಗೆ ನಮೋ ನಮೋ 9
--------------
ರಾಮದಾಸರು
ಲೀಲೆಯೊಳಾಡಿಸೊ ಹರಿ ನಿನ್ನ ಲೀಲೆಯೊಳಾಡಿಸೊ ಪ ಲೀಲೆಯೊಳಾಡಿಸೊ ಕಾಲಕಾಲದಿ ನಿನ್ನ ಶೀಲನಾಮವೆನ್ನ ನಾಲಗ್ಗೆ ಕರುಣಿಸು ಅ.ಪ ಮಂದಮತಿಯ ಹರಿಸೋ ಮನ ಗೋ ವಿಂದನೊಳೊಡಗೊಡಿಸೊ ಎಂದೆಂದಿಗು ಆ ನಂದನ ಕಂದನ ಪಾದ ಮನಮಂದಿರದಿರಿಸೊ 1 ಶೀಲಗುಣವ ಕಲಿಸೊ ಭವಗುಣ ಜಾಲವ ಪರಹರಿಸೊ ಪಾಲಿಸಿ ನಿಮ್ಮ ಧ್ಯಾನಲೋಲನೆನಿಸಿ ಯಮ ದಾಳಿ ನೀಗಿಸಿ ಭವಮಾಲೆಯ ಗೆಲಿಸೊ 2 ಮೋಸ ಮಾಯ ಹರಿಸೊ ವಿಷಯ ದಾಸೆಯ ಪರಿಹರಿಸೊ ಭಾಸುರಕೋಟಿಪ್ರಭೆ ಸಾಸಿರನಾಮದ ಶ್ರೀಶ ಶ್ರೀರಾಮ ನಿಮ್ಮದಾಸೆನಿಸೊ 3
--------------
ರಾಮದಾಸರು
ವಂದಿಪೆ ಶ್ರೀಮನ್ನಾರಾಯಣಗೆ ವಂದಿಪೆ ಅಮ್ಮ ಲಕ್ಷ್ಮೀದೇವಿಗೆ ಪ ವಂದಿಪೆ ವಿಶ್ವಕ್ಸೇನರಿಗೆ ಕುಂದದಿರಲಿ ಎನ್ನ ಸನ್ಮತಿ ಎಂದು ಅ.ಪ ವಂದಿಪೆ ನಾ ಮೊದಲಾಳ್ವಾರರಿಗೆ ಅಂದದಿ ಹರಿಯ ತೋರಿಕೊಟ್ಟರಿಗೆ ಕಂದಮಿಳಲಿ ಸೊಲ್ವ ನುಡಿಗಳಿಗೆ ಪ್ರ- ಬಂಧದಿವ್ಯಗಳ ಬೆಳಗಿಸಿದವರಿಗೆ 1 ವಂದಿಪೆ ವಂದಿಪೆ ಆಚಾರ್ಯರಿಗೆ ಚಂದದಾ ಯತಿತ್ರಯರುಗಳಿಗೆ ಸುಂದರ ಶ್ರೀವೈಷ್ಣವ ತತ್ವಗಳನು ಹೊಂದಿಸಿ ಬಂಧಿಸಿ ಸ್ಥಾಪಿಸಿದವರಿಗೆ 2 ಇನ್ನು ವಂದಿಪೆ ಗುರುಪೀಠಕ್ಕೆ ಚೆನ್ನ ತಿರುನಾರಾಯಣಪುರಕೆ ಉನ್ನತ ರಂಗದಾಸಯತಿವರ್ಯಗೆ ಸನ್ನುತ ಪಿತಾನುಜ ಶಾಮದಾಸರಿಗೆ 3 ಸಾಜದಲೆನ್ನಲಿ ಅರಿವನು ಮೂಡಿಸಿ ಓಜನನಾಗಿಸೆ ಕೇಶವ ನಾಮದಿ ಆರ್ಜಿಸಿ ಉಪಾದಾನದಿ ಬಳಲಿದ ಪೂಜ್ಯಪಿತ ವೆಂಕಟರಂಗಾರ್ಯರಿಗೆ 4 ವಂದಿಪೆ ಕೊನೆ ಮೊದಲಿಲ್ಲದೆ ವಂದಿ- ಪೆಂ ದಾಸನ ಮಾಡಿದ ದೇವನಿಗೆ ತಂದೆ ಜಾಜಿಪುರಾಧೀಶನಿಗೆ ಮುದ- ದಿಂದ ಶ್ರೀ ಚೆನ್ನಕೇಶವಗೆ 5
--------------
ನಾರಾಯಣಶರ್ಮರು
ವಿಶ್ವಧಾರನೋ ಶ್ರೀಶ ವಿಶ್ವಕಾರನೋ ವಿಶ್ವ ವಿಶ್ವಭರಿತ ವಿಶ್ವರಕ್ಷ ವಿಶ್ವಚರಿತ ಪ ನಾದಭರಿತನೋ ಹರಿ ನಾದಾತೀತನೋ ವೇದಾಧರನೋ ರಂಗ ವೇದ ಗೋಚರನೋ ವೇದವೇದಾಂತ ಸ್ವಾದ ನಿಖಿಲ ಬೋಧರೂಪ ಭೇದರಹಿತ ಆದಿ ಅನಾದಿದಾತ ಸತತ ಸಾಧುಸಜ್ಜನವಿನುತ ಅಮಿತ1 ದೇವದೇವನೋ ಸ್ವಾಮಿ ದಿವ್ಯಚರಿತನೋ ಕಾವ ಕರುಣನೋ ಭಕ್ತಿ ಭಾವಪೂರ್ಣನೋ ಸಾವುಹುಟ್ಟು ಭಯವಿದೂರ ಮಾಯಗೆಲಿದ ಮಹಪ್ರಕಾಶ ಭಾವಜಜನಕ ಭವಭಂಗ ಸೇವಕಜನರ ಜೀವದಾಪ್ತ 2 ದೋಷನಾಶನೋ ಕೃಷ್ಣ ಮೀಸಲಾತ್ಮನೋ ಭಾಸುರಂಗನೋ ಜಗದೀಶ ಗಮ್ಯನೋ ವಾಸುಕಿಶಯನ ವಾಸುದೇವ ಸಾಸಿರನಾಮದೊಡೆಯ ಇಂದಿ ರೇಶ ಗೋವಿಂದ ಪೋಷಿಸೆನ್ನ ಶ್ರೀಶ ಶ್ರೀರಾಮದಾಸಪ್ರಿಯ 3
--------------
ರಾಮದಾಸರು
ವೀಣೆ ಧರಿಸಿದ ಕಾರಣೇನೊ ಹನುಮಾ ಜಾಣತನವಿದು ಏನು ಪೇಳೊ ಬಲಭೀಮ ಪ. ತ್ರೇತೆಯಲಿ ಶ್ರೀ ರಾಮದಾಸತ್ವ ಚರಿಸಿದುದು ಖ್ಯಾತಿ ಬರಲಿಲ್ಲೆಂದು ಮನದಿ ತಿಳಿದೂ ಪ್ರೀತಿಯಿಂದಲಿ ಕೃಷ್ಣನಂಘ್ರಿ ಗುಪ್ತದಿ ಭಜಿಸಿ ನೀ ತಪೋನಿಧಿ ಎನಿಸಿ ಮುನಿಯಾದ ಮಹಿಮಾ 1 ಮೂರು ಅವತಾರದಲಿ ತೋರದಂತ್ಹರಿ ದಾಸ್ಯ ಆರಾಧಿಸುತ ಮೀಸಲಾಗಿ ಚಲಿಸೇ ಧೀರಭಕ್ತರು ಬಯಲಿಗೆಳೆದು ಖ್ಯಾತಿಯ ಪಡೆಯೆ ತೋರದಂತಾಗೆ ಬೇಗನೆ ದಾಸ್ಯ ವಹಿಸೀ 2 ದಾಸರನುಭವಿಪ ಆನಂದ ನೋಡುತ ಭಾರ ತೀಶ ನೀ ಮೊದಲು ದಾಸನು ಎನಿಸಲು ವಾಸುಕೀಶಯನ ಗೋಪಾಲಕೃಷ್ಣವಿಠ್ಠಲಗೆ ದಾಸನಾಗುತ ವೀಣೆ ಪುಸ್ತಕವ ಪಿಡಿದಿಯಾ 3
--------------
ಅಂಬಾಬಾಯಿ
ವೇದವಿದಿತ ಶೌರೀ ಮುರಾರೀ ಮಧು ಕೈಟಭವೈರೀ ಪ ಭೋಗಿ ಶಯನ ಮಾಯ ಶ್ರೀಗುರು ಚಿನ್ಮಯ ನಾಗಭೂಷಣಹೃದಯಾ ಸದಯಾ ಅ.ಪ ನಡುಗಡಲಿನೊಳೆನ್ನ ಬಿಡಬೇಡ ಸಲಹೆನ್ನ ಅಡಿಗೆರಗುವೆ ನಿನ್ನ ಶ್ರೀಶ ಮೋಹನ್ನಾ ಕಡುಬಾಲ ಧ್ರುವ ತನ್ನದೃಢದಿ ನೆನೆಯೆ ನಿನ್ನ ಪಡೆದನು ಪದವಿಯ ತಾ ವಿನೀತ 1 ಅಜಮಿಳವರದನೆ ಗಜರಾಜಗೊಲಿದನೆ ಸುಜನ ಸಮ್ಮಾನಿತನೆ ಮಾಂಗಿರಿಯರಸನೆ ಅಜಸುರ ವಿನುತನೆ ರಾಮದಾಸಾರ್ಚಿತನೆ ಭಜಕ ವಾರಿಧಿಸೋಮ ವಿರಾಮಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶರಣು ಶರಣು ಶರಣು ಶ್ರೀ ಗಣನಾಥ ಪಶರಣು ಶ್ರೀಶಾರದೆಯೆ ಶರಣು ವೆಂಕಟರಮಣ ಶರಣು ಸದ್ಗುರುವೆಅ.ಪಶರಣು ಮಾತೆಯ ಪಿತನೆ ಶರಣು 'ತಬೋಧಕನೆಶರಣು ಬುದ್ಧಿಪ್ರದನೆ ಶರಣು ಸುಖಕರನೆಶರಣು ವೇದಾಂತೋಪವೇಶನೆ ಪೋಷಕನೆಶರಣು ಚನ್ನಾಂಬೆ ಶ್ರೀ ನಾರಾಯಣಾರ್ಯ 1Àರಣು ನಾರಾಯಣಾರ್ಯ ಸದ್ಗುರುವರ್ಯಶರಣು ಶ್ರೀವಾಸುದೇವಾರ್ಯ ಸದ್ಗುರುವೆಶರಣು ಶ್ರೀ ಕೃಷ್ಣಯೋಗೀಂದ್ರ ಸದ್ಗುಣಸಾಂದ್ರಶರಣು ಶ್ರೀ ವೆಂಕಟದಾಸಾರ್ಯ ಗುರುವರ್ಯ 2ಶರಣು 'ಪ್ರೋತ್ತಮನೆ ಶರಣು ಪ'ತ್ರೆಯರೆಶರಣು ಹರಿಹರ ಭಕುತರೆ ಮಹಾತ್ತಮರೆಶರಣು ಶ್ರೀ ಚಿಕ್ಕನಾಗಪುರವಾಸ ವೆಂಕಟೇಶಶರಣು ಮರೆಹೊಕ್ಕೆ ನಿಮ್ಮ ನಾನು ತಿಮ್ಮದಾಸ 3ಸಂಕೀರ್ಣ ಕೃತಿಗಳು
--------------
ತಿಮ್ಮಪ್ಪದಾಸರು
ಶ್ರೀ ವೆಂಕಟಾಚಲಪತಿ ನಿನ್ನ ಪಾದವೆ ಎನಗೆ ಗತಿ ಪ. ಧರ್ಮ ತತ್ವವನರಿಯೆ ಬಹು ದುಷ್ಕರ್ಮವ ನಾ ತೊರೆಯೆ ಭರ್ಮದಾಸೆ ಮರೆಯೆ ಆ ದೇವ ಶರ್ಮವ ನಿಜ ದೊರೆಯೆ 1 ಅಮಿತ ಪಾಪಿ ನಾನು ಸಂಸೃತಿ ದುರಿತ ನೀನು ನಮಿಪೆ ನಿನ್ನಡಿಗಳನು ಕಮಲಾ- ರ್ಕ ಮಿತ್ರನೆ ಸಲಹೆನ್ನು 2 ಸುತರ ಕುಚರಿತಗಳ ಮಾತಾ ಪಿತರುಗಳೆಣಿಸುವರೆ ಯೋನ: ಪಿತರು ಎಂಬ ಸಂಶ್ರುತಿ ಗೀತಾರ್ಥವ ವಿತತವ ಮಾಡುವರೆ 3 ಎನ್ನಪರಾಧಗಳನೆಣಿಸಲು ಷಣ್ಮುಖಗಳ ವಡದು ಬಿನ್ನಹ ಮಾಡುವೆ ನಿನ್ನ ದಾಸನೆಂ- ದೆನ್ನ ಪೊರೆಯೊ ದೊರೆಯೆ 4 ಪನ್ನಗಾಚಲವಾಸ ಬಹು ಕಾ- ರುಣ್ಯ ಸಾಗರೇಶ ಇನ್ನುಪೇಕ್ಷಿಸದೆ ಎನ್ನ ಪಾಲಿಸು ಪ್ರ- ಸನ್ನ ವೆಂಕಟೇಶ 5
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಗುರುಪ್ರಾಣೇಶದಾಸರಾಯರ ಸ್ತೋತ್ರ ತರುಳನ ಪರಿಪಾಲಿಸು ಜೀಯಾ ಪ ಪತಿ ಸದ್ವಂಶೋದ್ಭವನೆ ವರಕವಿ ಪ್ರಾಣೇಶರ ಸುತನೆ ಕೋಪವಿತಾಪಮೋಹಕ ಜಿತನೆ ಶ್ರೀ ಕಮಲಾಪತಿ ಸೇವಕನೆ ಭವಜನಿ ತಾಪದಾದಿ ಸಂ - ತಾಪ ಹರಿಸುತಲಿ ಶ್ರೀಪದ್ಮಜ ಮತ್ತಾಪಿನಾಕಿನುತ ಶ್ರೀಪರಮಾತ್ಮದಾಸರಿಗೆ ಸದಾಪರೋಕ್ಷ ತೋರ್ದಾ 1 ರತಿಪತಿ ಪಿತನನಾಮ ಸ್ಮರಣೆಯಲ್ಲಿ ನಲಿ - ಯುತಸುಖಿಸುವಕರುಣಿ ಬಿಡದೆ ಸಂತತ ಹರಿಗುಣಗಾನಾ- ದಲ್ಲಿ ಬಲುತರನಿರುತಿಹ ಜಾಣಾನಾನತಿ ಪತಿತನಾಗಿ ಇರುವೆ ಅತಿ ದುಷ್ಕøತಿಯನೆಸಗಿ ಸದ್ಗತಿಗೆ ದಾರಿಗಾಣೇ ಪತಿತಪಾವನ ನಿಮ್ಮನಾ ತುತಿಪೆನೆ ಮತಿಮಂದ2 ಮತಗಳಹಳಿದು ಪ್ರೇಮದಿಂದ ಪೊರೆದು ಪಾತಕಿ ಪಾಮರನೆನ್ನಗೆ ರಾಮ ಶ್ರೀವರದೇಶ ವಿಠಲನ ದೂತಮಹಾಮುನಿವರದೇಂ- ಪ್ರೇಮದಿ ಕೊಡು ಮುದದಿ 3
--------------
ವರದೇಶವಿಠಲ
ಶ್ರೀಪತೀ-ಎನಗೇನು ಗತೀ ನನಗಾಗಲಿ ನಿನ್ನಲಿ ರತೀ ಪ ಚಪಲ ತನದಿ ಬಹು ಕಪಟಭಕುತಿನಟಿಸಿ ಗುಪಿತ ದೋಷಿಯು ಆದೆ ಅ.ಪ. ಬಟ್ಟೆ ನೋಡಲು ಬಹು ಛಂಧ-ಮೇಲೆ ಘಟ್ಟಿ ಬಣ್ಣದ ಕಾವಿ ಶಾಟಿ ಹಾಗೆ ಪಟ್ಟೆಮಡಿಗಳ ಭಾರೀ ಥಳಕೊ-ಬಹಳ ದಟ್ಟ ತುಳಸೀಸರಗಳ ಹೊಳಪೂ ಆಹಾ ಸೃಷ್ಠಿಗೊಡೆಯನೆ ಎನ್ನ ಕೆಟ್ಟ ತನಗಳನ್ನು ಎಷ್ಟೆಂದು ಬಣ್ಣಿಪೆ ನಿಟ್ಟ ನೆನೆಯದೆ ಪರರ ದೃಷ್ಟಿನೋಡುತ ಹಿಗ್ಗಿ ಅಟ್ಟಹಾಸದಿ ಕುಣಿದು ಮಾನವ ನನಗೇ 1 ವೇದ ವಾದಗಳೇನು ಕಾಣೆ-ಶುದ್ಧ ಸಾಧು ಕರ್ಮಗಳೊಂದು ಇಲ್ಲ-ಜನರ ಮೋದಗೋಸುಗವೇನೆ ಎಲ್ಲ_ಕಾಮ ಕ್ರೋಧವ ನಿಬಿಡಿತೇನೇ ಬಿಚ್ಚೆಹೃದಯಾ ಆಹಾ ಮಧ್ವರಾಯರ ಶಾಸ್ತ್ರ ಗ್ರಂಥ ಸಹ ತಿಳಿಯದೆಲೆ ಸಿದ್ಧ ಸಾಧಕನಂತೆ ಸಾಧುಲಿಂಗವ ತೋರಿ ಮುಗ್ಧಗೈಯ್ಯುತ ಮಂದಿ ಮೆದ್ದು ಪಕ್ವಾನ್ನಗಳ ಗೆದ್ದುಕೊಳ್ಳುವೆ ಬಹಳ ದಕ್ಷಿಣೆ ಬಹುಮಾನ 2 ನೇಮನಿಷ್ಠೆಗಳಾಟ ಹೊರಗೆ-ಗೃಹದಿ ಪ್ರೇಮವಿಲಾಸ ಆಟ ಕೂಟಜನ ಸ್ತೋಮರೆಲ್ಲವ ನುಡಿವ ನೀತಿ ಖ್ಯಾತಿ ಕಾಮುಕನಾಗಿ ಚರಿಸಿದೆ ಜಗದೀ ಆಹಾ ಹೇಮದಾಸೆಗೆ ಸೂಳೆ ಪ್ರೇಮವ ತೋರ್ಪಂತೆ ಕಾಮಿತಪ್ರದ ನಿನ್ನ ನಾಮ ಸವಿಯನುಣ್ಣದೆ ತಾಮಸರಿಗೆ ಉಪದೇಶ ನೀಡುತ ಸತ್ಯ- ಭಾಮೆಯರಸ ನಿನಗೆ ದೂರನಾದೆನಲ್ಲಾ 3 ಹಾಡಿಹಾಡುವೆ ಎತ್ತಿ ಸುತ್ತ ಜನರು ನೋಡಿ ಹಿಗ್ಗುತ ಬಾಪು ಬಾಪು ನುಡಿಗೆ ಹಾಡಿನಲ್ಲಿಹ ಸವಿಯುಣ್ಣ ದೇನೆ ಆಡಿ ಆಡಿಪೆ ಶಿರವ ಜ್ಞಾನಿಯಂತೆ ಆಹಾ ಕೇಡು ಚಿಂತಿಸಿ ಪರರ ಸ್ವಾರ್ಥಗೋಸುಗನಿತ್ಯ ಕಾಡಿ ಬೇಡುತ ಜನರ ದೂಡುತಿಹೆ ಸಂಸಾರ ಪ್ರೌಢ ಭಕ್ತರ ಗೋಷ್ಠಿಕೂಡಿ ಭಜಿಸದ ಎನ್ನ ಗಾಢ ಡಂಭಕೆ ಜಗದಿ ಈಡು ಕಾಣಿಸು ಸ್ವಾಮಿ4 ಭಾರಿ ಶಾಲುಗಳನ್ನೆ ಹೊದ್ದು-ನಿತ್ಯ ಕೇರಿಕೇರಿ ಪುರಾಣಗಳನ್ನು ಮೆದ್ದು-ಹಾರಿ ಹಾರುತ ತತ್ವರಾಶಿ ನುಡಿದು-ಊರು ಜ- ನರಮುಂದೆ ಪಾಂಡಿತ್ಯ ತೋರ್ಪೆ ಆಹಾ ತೋರಿ ತೋರುವೆ ಪರಮವೈರಾಗ್ಯ ಭಕ್ತಿಯ ದೂರಿ ದೂಡುವೆ ಪರರ ಹುಳುಕುಗಳನು ಎತ್ತಿ ಪಾರುಗಾಣದ ಕರುಣ ತೋರದಿದ್ದರೆ ಇನ್ನು 5 ಗುಡಿಗೆ ಹೋಗುವೆ ನಾನು-ನಿತ್ಯ ಅಲ್ಲಿ ಬೆಡಗು ಸ್ತ್ರೀಯರ ಹುಡುಕುವುದೇನೆ ಕೃತ್ಯ ದೃಢಭಕುತಿಯನು ಮಾಡಲೊಲ್ಲೆ ಸತ್ಯ-ನ ಮಡದಿ ಮಕ್ಕಳಿಗಿಲ್ಲ ಭೃತ್ಯಾನುಭೃತ್ಯಾ ಆಹಾ ಹುಡುಕೀ ನೋಡಿದಾಗ್ಯೂ ವಿರಕ್ತಿ ಭಕ್ತಿಗಳಿಲ್ಲ ಬಿಡಲು ಪೊರೆಯೆ ಪುರಾಣಶಾಸ್ತ್ರಗಳನ್ನು ನಿತ್ಯ ಎನ್ನ ಅನಾದಿ ನೀ ಕಲಿಸದಿದ್ದರೆ ಈಗ 6 ದೊಡ್ಡ ಪಂಡಿತ ನಾನೆಂಬ ಹೆಮ್ಮೆ-ಶುದ್ಧ ದಡ್ಡನೆಂಬುದ ಬಲ್ಲೆ ಮನದಿ-ಹಾಗೂ ಅಡ್ಡ ಬೀಳೆನು ಭಕ್ತ ಗಣಕೆ ಸುಳ್ಳು ವೊಡ್ಡುತವರನು ಹಳಿದೂ-ಕುದಿದೇ ಮನದೀ ಆಹಾ ದುಡ್ಡುಗೋಸುಗ ಬಹಳ ದೊಡ್ಡ ದಾಸನು ಎನಿಸೀ ಹೆಡ್ಡಮಂದಿಯ ಮುಂದೆ ದೊಡ್ಡ ಭಾಷಣ ಮಾಳ್ವೆ ಗುಡ್ಡದೊಡೆಯನೆ ಭಕ್ತಜಿಡ್ಡುಲೇಶವು ಕಾಣೆ ದೊಡ್ಡ ನಾಮವ ಹಾಕಿ ಸಡ್ಡೆ ಮಾಡದೆ ತಿರಿವ 7 ಕಚ್ಚಿ ಬಿಡದಿಹ ತುಚ್ಛ ಕಲಿಯು-ಬಹಳ ಮೆಚ್ಚಿ ಬಂದಿಹ ನವನು ಬಿಡುವನೇನು ಇಚ್ಛೆ ನನ್ನದು ನಡೆಯದೇ ನೊಂದು ತುಚ್ಛ ವಿಷಯದಿ ಸೆಳೆದು ಸೆಳೆಯುತಿಹನು ಆಹಾ ಇಚ್ಛೆಯಿಂದಲಿ ಜಗವ ಸೃಜಿಸಿ ಪಾಲಿಪಲೀಲೆ ಹಚ್ಚಿಕೊಂಡಿಹ ನಿನಗೆ ನನ್ನ ಪಾಲಿಪುದೇನು ಹೆಚ್ಚು ಕಾರ್ಯವೆ ಜೀಯ ಮುಚ್ಚಿಕೊಂಡಹ ನಿನ್ನ ಸ್ವಚ್ಛ ಬಿಂಬವ ತೊರಿ ಮೆಚ್ಚಿ ಕೊಡದಿರೆ ಜ್ಞಾನ 8 ಶ್ವಾಸಮತದಲಿ ಜನ್ಮ ವಿತ್ತೆ-ವಿಜಯ ದಾಸರ ಪ್ರಿಯ ಮೋಹನ್ನ ಪರಂಪರೆಯ ದಾಸನೆನಿಸಿ ಯೆನ್ನ ಮೆರೆಸಿ ಹೀಗೆ ದೋಷಿಗೈವುದು ಥರವೆ ಶ್ರೀಭಕ್ತಪ್ರಿಯ ಆಹಾ ವಾಸುದೇವನೆ ತುರ್ಯಲೇಸು ದೃಷ್ಟಿಯ ಬೀರೆ ನಾಶವಾಗದೆ ದೋಷ ಭಾಸವಾಗದೆ ಜ್ಞಾನ ಕಾಸುಬೀಡೆನು ಹಿರಿಯ ದಾಸರ ಗುಣ ನೋಡಿ ಲೇಸು ನೀಡೆಂತೆಂಬೆ ಶ್ರೀಕೃಷ್ಣವಿಠಲಾ9
--------------
ಕೃಷ್ಣವಿಠಲದಾಸರು