ಒಟ್ಟು 127 ಕಡೆಗಳಲ್ಲಿ , 50 ದಾಸರು , 120 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೆಳಗಾಗಲು ಅರಘಳಿಗೆಯು ಇರುತಿರೆ ಸ್ಮರಿಸುವೆ ವಿಶ್ವಮೂರುತಿಯನ್ನು ಬೆಳಗಾಗಲು ಹರಿಧ್ಯಾನವ ಮಾಡುತ ಬಹಿರ ಭೂಮಿಗ್ಹೋಗುತ ಮುನ್ನು 1 ಕಲಿ ಮೊದಲಾಗಿಹ ದೈತ್ಯರನೆಲ್ಲಾ ವಿ- ಸರ್ಜನೆ ಮಾಡುತ ಮತ್ತಿನ್ನೂ ದಂತ ಧಾವನೆಯ ಮಾಡುತ ಶ್ರೀ ಮಾ- ಧವನನು ಸ್ಮರಿಸುವೆ ನಾನಿನ್ನೂ 2 ಮುಖವನು ತೊಳೆಯುತ ಮುರಹರಿ ಧ್ಯಾನದಿ ಶ್ರೀತುಳಸಿಯ ನಮಿಸುತಲಿನ್ನೂ ಮೀಸಲ ನೀರನು ಎರೆಯುತ ಬೇಗದಿ ಮೃತ್ತಿಕಿ ಫಣಿಗಿಡುತಲಿ ಇನ್ನು 3 ಮೂರು ಪ್ರದಕ್ಷಿಣಿ ಮಾಡುತ ಬೇಗದಿ ಮುದದಿ ನಮಸ್ಕರಿಸುತಲಿನ್ನೂ ದೇವರ ಮನೆಕಡೆ ಪೋಗುತ ನಿಂದಿಹ ಜಯವಿಜಯರಿಗೊಂದಿಸಿ ಮುನ್ನು 4 ದೇವರ ದರ್ಶನಕಾಜ್ಞೆಯ ಕೇಳುತ ದೇವರ ಗೃಹದೊಳು ಪೋಗುತಲಿ ಮಾಯಾ ಪತಿಯನು ಮನದೊಳು ಧ್ಯಾನಿಸಿ ವಂದನೆ ಮಾಡುತ ಬೇಗದಲಿ 5 ದೇವರ ಮನೆಯನು ಸಾರಿಸಿ ಶಂಖುಚಕ್ರವುಗದೆ ಪದುಮನ್ಹಾಕುತಲಿ ಗಜವರದನ ಕೊಂಡಾಡುತ ಮುದದಿ ಗಜೇಂದ್ರ ಮೋಕ್ಷನ ಸ್ಮರಿಸುತಲಿ 6 ಗೋವೃಂದದ ಕಡೆ ಪೋಗುತ ಶ್ರೀ- ಗೋವಿಂದನ ಸ್ಮರಿಸುತ ನಿತ್ಯದಲಿ ಗೋಪೀ ಬಾಲನ ಗೋಕುಲವಾಸನ ಗೋವ್ಗಳ ಮಧ್ಯದಿ ಸ್ಮರಿಸುತಲಿ 7 ಬಾಲಕೃಷ್ಣನ ಲೀಲೆಯ ಪೊಗಳುತ ಬಾಲಲೀಲೆಗಳ ಕೇಳುತಲಿ ಪುರಾಣವ ಪೇಳುವ ದ್ವಿಜರಿಗೆ ವೃದ್ಧರಿಗೆರಗುತ ಪ್ರತಿನಿತ್ಯದಲಿ 8 ಮುರಳಿಯನೂದುತ ಮೆರೆಯುವ ಕೃಷ್ಣನ ಅನುದಿನ ಮಾಡುತಲಿ ಸರಸಿಜನಾಭನ ಸ್ಮರಿಸುತ ಮನದಲಿ ಸ್ನಾನಕೆ ತೆರಳುತ ಶೀಘ್ರದಲಿ 9 ನದಿಯ ಸ್ನಾನಕೆ ಪೋಗುವ ಸಮಯದಿ ನಾರದವಂದ್ಯನ ಸ್ಮರಿಸುತಲಿ ಭಾಗೀರಥಿಯಲಿ ಸ್ನಾನವು ಮಾಡುತ ಬಾಗುತ ಸಿರವನು ಬೇಗದಲಿ10 ಫಣಿರಾಜನ ಶಯನದಿ ಮಲಗಿಹ ಶ್ರೀ- ಪರಮಾತ್ಮನ ನೋಡುತ ಬೇಗ ಪಾದಗಳ ಸೇವಿಪ ಶ್ರೀ ಭೂದೇವಿಯ- ರೇನುಧನ್ಯರೆಂದೆನುತಾಗ11 ಪೊಕ್ಕಳ ಮಧ್ಯದಿ ಪೊರಟಿಹ ನಾಳದ ತುದಿಯಲಿ ರಂಜಿಪ ಕಮಲದಲಿ ಉದ್ಭವಿಸಿದ ನಾಲ್ಮೊಗನನು ನೋಡುತ ಬಗೆ ಬಗೆ ಪ್ರಾರ್ಥಿಸುತಲಿ ಇನ್ನು 12 ನೆರೆದಿಹ ಸುರ ಪರಿವಾರವೆಲ್ಲ ಶ್ರೀ- ಹರಿಯನು ವಾಲೈಸುತಲಿನ್ನೂ ಪರಮವೈಭವದಿ ಮೆರೆಯುವ ದೇವನ ಸ್ಮರಿಸುವೆ ಜಲಮಧ್ಯದೊಳಿನ್ನು 13 ದೇವರ ರಥವನು ತೊಳೆಯುವೆನೆಂಬ- ನುಸಂಧಾನದಿ ಸ್ನಾನವು ಮಾಡಿ ದೇವರ ರಥ ಶೃಂಗರಿಸುವೆನೆನ್ನುತ ಶ್ರೀಮುದ್ರೆಗಳ್ಹಚ್ಚುತ ಪಾಡಿ 14 ನಿತ್ಯ ಕರ್ಮಮುಗಿಸುವ ಬೇಗದಿ ಶ್ರೀ- ಹರಿಪೂಜೆಗೆ ಅಣಿಮಾಡುತಲಿ ಪುಷ್ಪಗಳನು ಗಂಧಾಕ್ಷತೆ ಶ್ರೀ ತುಳಸಿಯ ತಂದಿಡುವೆನು ಮೋದದಲಿ 15 ಪಂಚಭಕ್ಷ ಪಾಯಸಗಳ ಮಾಡುತ ಪಂಚಾತ್ಮಕ ನ ಸ್ಮರಿಸುತಲಿ ಮಿಂಚಿನಂತೆ ಹೊಳೆಯುವ ತಬಕಿಲಿ ತಾಂಬೂಲವ ನಿರಿಸುತ ಬೇಗದಲಿ 16 ಬ್ರಹ್ಮನು ಈ ವಿಧ ಪೂಜೆಯ ಪ್ರತಿದಿನ ಬ್ರಹ್ಮನ ಪಿತಗರ್ಪಿಸುತಲಿರಲು ಸುಮ್ಮಾನದಿ ಮಹಲಕುಮಿಯು ಇದ- ನೊಯ್ಯತ ಸುರಮುನಿ ವಂದ್ಯನಿಗೆ ತಾನರ್ಪಿಸಲು17 ಪರಮಾತ್ಮನು ಈ ವಿಧ ಸೇವೆಯ ಕೈ- ಗೊಳುತಲಿ ಸಂತಸ ಪಡಲಿನ್ನು ಅರಿತವರೆಲ್ಲರು ನಿರುತದಿ ಹರಿ ಧ್ಯಾ- ನವ ಮಾಡುತಲಿರೆ ತಾವಿನ್ನು 18 ದೇವಪೂಜೆ ವೈಶ್ವದೇವವು ನಿತ್ಯದಿ ಗೋಬ್ರಾಹ್ಮಣನರ್ಚಿಸಿ ಇನ್ನು ಸಾಯಂ ಸಮಯದಿ ಸಾಧುಗಳೊಡನೆ ದೇವರ ಕಥೆ ಕೇಳುತಲಿನ್ನೂ 19 ಝಾಮಝಾಮದಿ ಜಯಶಬ್ದಗಳಿಂ ಜಯಾಪತಿಯನು ಪೊಗಳುತಲಿ ಆರತಿ ಜೋಗುಳ ಹಾಡುತ ಮುದದಲಿ ಮಧ್ವೇಶಾರ್ಪಣ ಪೇಳುತಲಿ 20 ಮಲುಗುವಾಗ ಮುಕುಂದನ ಸ್ಮರಿಸುತ ಲಯ ಚಿಂತನೆಯನು ಮಾಡುತಲಿ ಕರಮುಗಿಯುತ ಕಾಯೇನ ವಾಚಾ ಎಂ- ದ್ಹೇಳುತ ಪ್ರಾಜ್ಞನ ಸ್ಮರಿಸುತಲಿ 21 ಝಾಮಝಾಮದಿ ಶ್ರೀ ಹರಿ ಮಾಧವ ಆಗಲು ಬೆಳಗಿನ ಝಾವದಿ ಸೃಷ್ಟಿಯ ಚಿಂತನೆ ಮಾಡಿ ಎಂದೆನುತ22 ಮಳಲಗೌರಿ ನೋಂತಿಹ ಸತಿಯರಿಗೆ ಮುರಳೀಧರ ಒಲಿದಿಹನೆನ್ನುತ ಉದಯವಾಗಲು ವಿಶ್ವನ ಸ್ಮರಿಸುತ ವಿಧಿ ನೇಮಗಳನುಸರಿಸುತ್ತ 23 ನಿತ್ಯದಿ ಈ ತೆರವಾಚರಿಸುವ ನರ ಮುಕ್ತನು ಧರೆಯೊಳಗೆಂದೆನುತ ಅತ್ಯುತ್ಸಾಹದಿ ಬರೆದೋದುತಲಿ- ದರರ್ಥವ ತಿಳಿದಾಚರಿಸುತ್ತ24 ಈ ವಿಧ ಚಿಂತನೆ ಮಾಡುವ ಮನುಜಗೆ ದಾರಿದ್ರ್ಯವು ದೂರಾಗುವದು ಮಾರಮಣನು ತನ್ನವರೊಡಗೂಡುತ ವಾಸವಾಗುವನೆಂಬುವ ಬಿರುದು25 ಕರೆಕರೆಗೊಳ್ಳದೆ ಕೇಳಿರಿ ನಿತ್ಯವು ಕನಕಗಿರಿವಾಸನ ಮಹಿಮೆ ಕನಲಿಕೆ ಕಳೆವುದು ಕಮಲನಾಭ- ವಿಠ್ಠಲನು ಕೊಂಡಾಡುತ ಮಹಿಮೆ 26
--------------
ನಿಡಗುರುಕಿ ಜೀವೂಬಾಯಿ
ಭಾರತೀಶ ಕರುಣಾರಸ ಭೂಷಾ ಖರಾರಿ ದಯಾರಸ ಪೂರಿತ ವೇಷಾ ಪ. ಅಕ್ಷಪೂರ್ವಜನ ರುಕ್ಷಶರಾಹತಿ ವಿಕ್ಷತಕಪಿಗಳನೀಕ್ಷಿಸುತ ರೂಕ್ಷನ ನುಡಿ ಕೇಳ್ದಾಕ್ಷಣದೊಳಗರೆಲಕ್ಷಯೋಜನಕೆ ಲಂಘಿಸುತ ಕರತಲದೊಳಗಿಡುತ ಅಕ್ಷಿನಿಮೋಘಕೆ ಲಕ್ಷಕೊಡದೆ ನಿಜಪಕ್ಷದ ಜನರನು ರಕ್ಷಿಸಿದ 1 ಸೇರಿ ದುರಾಕೃತ ಕೌರವರ ಧಾರುಣಿಗೊರಗಿಸಿ ಘೋರ ರೂಪ ಕಿಂಮೀರನ ರಕ್ತನ ಕಾರಿಸುತ ಭಾರಿಗದೆಯ ಪಿಡಿದಾರುಭಟಿಸಿ ಬಹುವಾರಣ ತತಿಗಳ ಹಾರಿಸುತ ವೀರಜಗಧೀರಣ ಮೂರ್ತೆ 2 ಹಿಂಡುಗೂಡಿದಾ ಖಂಡಲ ರಿಪುಗಳು ಖಂಡ ಪರಶುಹರಿತಾನೆನುವ ಭಂಡಮಾತ ಭೂಮಂಡಲ ಮಧ್ಯದಿ ಪುಂಡುತನದಿ ಪ್ರಸ್ತಾಪಿಸುವ ಪಂಡಿತ ಮಾನಿಗಳೆನಿಸಿದ ಮೈಗಳ ಖಂಡಿಸಿ ತತ್ವವ ಬೋಧಿಸುವ ಬ್ರಹ್ಮಾಂಡಕೋಟಿಪತಿಯನುತಿರುವ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಾರ್ಗವಿ ದೇವಿಭೃಗುವಾರ ಬರಲಿಬೇಕು ಪ ಭೃಗುವಾರ ಬರಲಿಬೇಕ್ಹಗಲು ಪಾಯಸವುಂಡುನಗುತ ರಾತ್ರಿಲಿ ತಾಂಬೂಲಗಳ ಮೆಲ್ಲುವುದಕ್ಕೆ ಅ.ಪ. ನೂಪುರ ಮುಖ ಭೂಷನೀ ಪದ ಕುಣಿಸುತ್ತಶ್ರೀಪತಿ ಸಹ ಸುಖಾಲಾಪಗಳಾಡುತ 1 ಕಂಕಣ ಮುಖರತ್ನಾಲಂಕಾರಗಳನಿಟ್ಟುಕಿಂಕರರಿಗೆ ಮುಖಾಲಂಕಾರ ತೋರುತ2 ಶಂಕರ ಮುಖ್ಯ ಸುರಪುಂಖ ಮಧ್ಯದಿ ಶ್ರೀಮ-ದ್ವೇಂಕಟೇಶನ ದಿವ್ಯ ಟೊಂಕಾದೊಳಗೆ ಕೂತು 3 ಪಕ್ಷಿವಾಹನ ದಿವ್ಯ ವಕ್ಷಸ್ಥಳಾಶ್ರಿತೆಲಕ್ಷ್ಮೀಲೀಲಾಮೃತ ಲಕ್ಷ್ಮೀ ಕೇಳುವುದಕ್ಕೆ 4 ಇಂದಿರೇಶನ ಮೃದು ಸುಂದರೋತ್ಸಂಗದಿಪೊಂದಿ ಭಕ್ತರ ಪೂಜಾನಂದ ಭುಂಜಿಪುದಕ್ಕೆ 5
--------------
ಇಂದಿರೇಶರು
ಭೀಮ ಶೈನನೆ ಸತ್ಯಭಾಮಾ ಪ್ರಿಯನ ಪರಮ ಪ್ರೇಮ ಪಾತ್ರನೆ ಪಾಹಿಮಾಂ ಪ ಭೂಮಿಯೊಳು ಶೇವಿಸುವರಿಗೆ ಸುರ ಭೂಮಿರುಹ ವೆಂದೆನಿಸಿ ಪೊರೆಯಲು ಗ್ರಾಮ ಮೋತಂಪಲ್ಲಿ ಕ್ಷೇತ್ರ ಸುಧಾಮರಿಪುಕುಲ ಭೀಮನೆನಿಸಿದ ಅ.ಪ ರಾಮಕಾರ್ಯವನು ನಿಷ್ಕಾಮದಿ ಸಾಧಿಸಿ ಧಾಮ ಕಿಂಪುರುಷದಲ್ಲಿ ಭೂಮಿಜಾವಲ್ಲಭನ ಶುಭಗುಣ ಸ್ತೋಮಗಾನದಿ ರಮಿಸುತಿರೆ ಬಡ ಭೂಮಿದೇವನ ಪ್ರಾರ್ಥನದಿ ಬಂದೀ ಮಹಾ ಶಿಲೆ ಯೊಳಗೆ ನೆಲಸಿಹ 1 ರಾಜಕುಲಜ ಪಾಂಡುರಾಜ ನಾತ್ಮಜ ಧರ್ಮರಾಜನನುಜನೆನಿಸಿ ರಾಜ ಸೂಯಾಗವನೆ ಮಾಡಿಸಿ ಪೂಜಿಸಿದಿ ಸಿರಿಕೃಷ್ಣನಂಘ್ರಿಯ ರಾಜ ಕೌರವ ಬಲವ ಮದಿಸಿ ವಿರಾಜಿಸಿದ ಸುರರಾಜ ನಮೋ ನಮೋ 2 ಪುಟ್ಟಿಮೇದಿನಿ ಸುರಸದ್ಮದಿ ಗಜ ಪಂಚಾಸ್ಯನೆನಿಸಿಸು ಜನಕತಿ ಮೋದನೀಡಿದ 3 ಗಣಕೆ ಗಂಧವಾಹನನೆನಸಿ ಶೇಷ ಗಿರೀಂದ್ರಯಾತ್ರೆಗೆ ವೃಂದ ಸಲಹುವಿ 4 ಶೇರಿದವನೆ ಧನ್ಯನೋ ಭಜಿಸಿ ವಿಮುಕ್ತನಾದನು ಸುರಋಷಿಯ ಪದವನು 5 ಸುವಿಶಾಲ ಮಂಟಪ ಮಧ್ಯದಿ ಕೈಕೊಳುತ ಭಕುತರ ಗುರುವರ ಪಾಲಿಸೆನ್ನನು 6 ಬಂಗಾರದಾಭರಣಂಗಳಿಂದೊಪ್ಪುತ ಶೃಂಗಾರದಿಂ ಶೋಭಿತ ಸರ್ವೇಷ್ಟದಾಯಕ ಪ್ರಥಮಾಂಗನೆನಿಸಿದ 7
--------------
ಕಾರ್ಪರ ನರಹರಿದಾಸರು
ಮಾತೆ ದಾತೆ ಹಿತೆ| ಘನ ಸುಚರಿತೆ| ಮಾತೆ ದಾತೆ ಹಿತೆ ಪ ಮಾತೆ ಸದ್ಗುಣ ಭರಿತೆ ಘನ ವಿ| ಖ್ಯಾತೆ ಭುವನ ವಿರಾಜಿತೆ|| ದಾತೆ ದೀನಾನಾಥ ಜನಸಂ|ಪ್ರೀತಿಯುತೆ ಪರಿಪೋಷಿತೆಅ.ಪ ಕರವ ಜೋಡಿಸಿ| ವಿನಯದಿಂದಲಿ ಬೇಡುವ|| ಅಖಿಳ ಸಂಪದವೀಯುತ 1 ಪಾದ ಸೇವೆಯ ಗೈಯುವೆ|| ಆದರಿಸಿ ಪೊರೆಯೆನ್ನ ಸರ್ವಪ| ರಾಧಗಳನು ಕ್ಷಮಿಸುತ 2 ಜನನಿ ನೀನತಿಕರುಣೆಯಿಂದಲಿ| ಸುರರಿಗಭಯವನೀಯುತ|| ದುರುಳ ದೈತ್ಯನ ವಧಿಸಿ ನಂದಿನಿ| ನದಿಯ ಮಧ್ಯದಿ ನೆಲೆಸಿದ3 ಪಂಕಜಾಂಬಕಿ ಪರಮಪಾವನೆ| ಶಂಕರಿ ಸರ್ವೇಶ್ವರಿ|| ವೆಂಕಟಾಚಲನಿಲಯ ಶ್ರೀವರ| ವೆಂಕಟೇಶನ ಸೋದರಿ4
--------------
ವೆಂಕಟ್‍ರಾವ್
ಮಿಗೆ ಧನ್ಯ ನಾನಾದೆ ಜಗದ ವಳಗೆ ಅಘ ಕಳಿವ ಗುರುಪಾದಯುಗಳ ಕಣ್ಣಲ್ಲಿ ಕಂಡು ಪ ಮುಕುಟ ಮಂಡಿತ ದಿನಪ ಪ್ರಕರ ಸನ್ನಿಭ ಶಿರದಿ ಮಕರಂದ ಮಯವಾದ ಶಿಖದ ಸೊಬಗು ಅಕಳಂಕಮಾದ ಫಾಲಕೆ ವಪ್ಪುವ ತಿಲಕ ಭ್ರುಕುಟಿ ಮಧ್ಯದಿ ಪುಂಡ್ರ ಸುಖದ ದ್ವಯದ್ರಿಕ ಕಂಡು 1 ಹರಿನಾಮ ರವಿಯ ಕಂಡರಳುವೊ ಕರ್ಣಾಖ್ಯ ಸರಸಿರುಗ್ವಗಳು ಚಂದ್ರ ತೆರ ಶೋಭಿಪಾ ವರಕದಪಯುತ ವದನ ಕೊರಳು ಉರುಬಲದ ಭುಜ ಕರ ಹೃದಯ ಎರಡು ಘನ ಗೆರೆಯು ಉದರವ ಕಂಡು 2 ಧಿಟ ಕಟಿತ ಪಟರೋಮ ದಟಿತವಾಗಿಹ ಜಾನು ಚಟುಲಶಿರಿ ಗೋವಿಂದ ವಿಠಲ ನಾಮ ಪಠಿಸಿದಾಕ್ಷಣ ನಟಿಸುವ ಪಾದದ ಕಠಿಣ ಸಂಸಾರ ಸಂಕಟ ಕಳೆವ ರಜಕಂಡು 3
--------------
ಅಸ್ಕಿಹಾಳ ಗೋವಿಂದ
ಮೊದಲನೇ ಅಧ್ಯಾಯ ಪಾತಿವ್ರತ್ಯ ಮಹಾತ್ಮೆ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ನಿರ್ದೋಷ ಗುಣಪೂರ್ಣ ವಿಷ್ಣು ಸರ್ವೋತ್ತಮ ಸ್ವತಂತ್ರ ಶ್ರೀದ ಶ್ರೀಪತಿ ಜಗಜ್ಜನ್ಮಾದಿಕರ್ತನು ಸಚ್ಛಾಶ್ರ - ದಿಂದಲೇ ವೇದ್ಯನು ಮೂರು ವಿಧ ಜೀವರಿಗೆ ಯೋಗ್ಯ ಸಾಧನಕೆ ಗತಿಯ ಮಾಡುವ ಅವತಾರ ಲೀಲಾ 1 ಸುಪುಷ್ಪಭವ ಬ್ರಹ್ಮದೇವನೋಳ್ ತತ್ ಶಬ್ದವಾಚ್ಯನು ಶ್ರೀ ಪುರುಷೋತ್ತಮನೆ ಪ್ರಜಾಸೃಷ್ಟಿ ಮಾಡಿಸುವನು ತ್ರಿಪುರಾರಿ ಭಸ್ಮಧರ ರುದ್ರನೋಳ್ ತನ್ನಾಮದಲಿ ಶ್ರೀ ಪುರುಷೋತ್ತಮನೇ ಸಂಹಾರ ಮಾಳ್ಪ ಅಂತರ್ಯಾಮಿ 2 ಉರುಜ್ಞಾನ ಸುಖ ಬಲಾದ್ಯಮಿತ ಗುಣಧಾಮನ ಕರ ಚರಣಾದ್ಯವಯವಕ್ಕೂ ಅವಗೂ ಅವನು ಧರೆಯಲ್ಲಿ ಅವತಾರ ಮಾಡುವ ರೂಪಗಳಿಗೂ ಪರಿಪೂರ್ಣವಾಗಿ ಅಭೇದ ಭೇದಲೇಶವೂ ಇಲ್ಲ 3 ದ್ವಿ ಷೋಡಶ ಶುಭಲಕ್ಷಣ ತನುವುಳ್ಳ ಬ್ರಹ್ಮಗೂ ವಿಷಕಂಠ ರುದ್ರಗೂ ಪರಸ್ಪರ ಭೇದ ಅಂತಸ್ಥ ವಿಷ್ಣುಗೂ ಇವರುಗಳಿಗೂ ಭೇದವು, ಅಂತರ್ಯಾಮಿ ವಿಷ್ಣು ಒಬ್ಬನೇ ದ್ವಿರೂಪದಲ್ಲಿ ಇವರಲ್ಲಿಹ 4 ಹತ್ತಾವತಾರ ಮತ್ಸ್ಯಾದಿರೂಪಗಳು ಮಾತ್ರವಲ್ಲ ಅನಂತರೂಪನು ಅನಂತಗುಣ ಕ್ರಿಯಾವಂತನು ಕ್ಷಿತಿಯಲ್ಲಿ ಬಲಕಾರ್ಯಕ್ಕೆ ಕೆಲವು ಅವತಾರ ಹಿತಕರ ಹಲವು ಜ್ಞಾನಬೋಧಕ್ಕೇವೇ ಕೆಲವು 5 ಧ್ಯಾತ್ಮನು ಜ್ಞಾನಕಾರ್ಯಕ್ಕಾಗಿ ಅವತರಿಸುವನು ಶ್ರೀಮಾನ್ ಹಯಗ್ರೀವ ಸನತ್ಕುಮಾರ ದತ್ತ ಕಪಿಲ ಧೀಮಾನ್ ಪರಾಶರ ವಾಸವೀಸೂನು ಐತರೇಯಾದಿ 6 ದ್ವಾಪರದಲ್ಲೇವೆ ಅಲ್ಲಲ್ಲಿ ಕಲಿವಿಷ ಹರಡಿ ತಪೋಧನರು ಗೌತಮರು ಶಪಿಸೆ ಜ್ಞಾನಕುಂದೆ ಶ್ರೀಪ ವೇದವ್ಯಾಸ ಜ್ಞಾನ ತೇಜಃಪುಂಜ ಬಂದು ತೋರಿ ಆ ಪೀಡಿಸುವ ಅಜ್ಞಾನ ತರಿದು ಸಜ್ಞಾನ ಇತ್ತ 7 ಹಿಂದೆ ಬ್ರಹ್ಮದೇವರಾಜÉ್ಞಯಿಂ ಅತ್ರಿಋಷಿವರ್ಯರು ನಿಂತರು ಋಕ್ಷಗಿರಿಯಲ್ಲಿ ಅಪತ್ಯಾಪೇಕ್ಷೆಯಿಂದ ಅದ್ಭುತ ತಪವಚರಿಸಿ ಜಗದೀಶ್ವರ ಸಮ - ಪುತ್ರ ಕೊಡೆ ಚಿಂತಿಸಿ ಹರಿಯಲ್ಲಿ ಶರಣಾದರು 8 ಹರಿ ತಾನು ತನ್ನ ಅಧಿಷ್ಟಾನರಾದ ಬ್ರಹ್ಮೇಶ್ವರ ಕರಕೊಂಡು ಋಷಿ ಮುಂದೆ ನಿಂತು ಯುಕ್ತಮಾತನ್ನಾಡಿ ಮೂರು ಮಂದಿಗಳು ತಾವು ಪುತ್ರರಾಗುವೆವು ಎಂದ ತರುವಾಯ ತಾನಿತ್ತ ವರವ ಒದಗಿಸಿದನು 9 ಭಾಗವತ ಈ ವಿಷಯ ಒಳಗೊಂಡು ಇಹುದು ಪತಿ ವೇದವ್ಯಾಸ ಸಂಕೃತ ಈ ಭೂರಾದಿ ಜಗತ್ತಿನಲ್ಲಿ ಪ್ರಖ್ಯಾತ ಪುರಾಣಂಗಳೊಳ್ ಶ್ರೀ ಭಗವಾನ್ ದತ್ತಾತ್ರಯನ ಅವತಾರವು ವೇದ್ಯ 10 ಗೀರ್ವಾಣ ಛಂದಸ್ಸು ಅಷ್ಟಿಯಲಿ ಬರೆಯುವದೆಂದು ಶ್ರೀವರನ ಹಿತಾಜÉ್ಞಯಿಂ ಪ್ರಸನ್ನ ಶ್ರೀನಿವಾಸೀಯ ಶ್ರೀವಿಷ್ಣು ಸಹಸ್ರನಾಮ ಭಾಷ್ಯ ಕನ್ನಡದಲ್ಲಿ ಅಳವಡಿಸಿದಂತೆ ಅಷ್ಟೀ ಛಂದಸ್ಸಲಿ ಈ ಗ್ರಂಥವ 11 ಈ ಗ್ರಂಥದಲಿ ಶ್ರೀಭಾಗವತವು ಮಾರ್ಕಂಡೇಯವು ಭಾಗವತರಿಗೆ ಉಪಾಸನಾ ಹೇತು ಪಂಚರಾತ್ರ ಆಗಮವು ಒಳಗೊಂಡ ವಿಷಯಗಳು ಇವೆಯು ಕಾಯ ಶುದ್ಧಿಯಿಂ ಪಠಣೀಯವು 12 ಗುರುಮಂತ್ರ ಉಪದೇಶವಿಲ್ಲದಂತಹ ಸ್ತ್ರೀ ಜನ ಶೂದ್ರರು ಬ್ರಹ್ಮಬಂಧುಗಳು ಈ ಗ್ರಂಥ ಪಠಿಸಲು ಹರಿಭಕ್ತ ಸಾಧು ವೈದಿಕ ಬ್ರಾಹ್ಮಣರ ಅಪ್ಪಣೆ ಕೋರಿ ಅವರ ಅಪ್ಪಣೆಯಿಂದ ಓದಬಹುದು 13 ಪ್ರತಿಷ್ಠಾನಪುರದಲ್ಲಿ ಕೌಶಿಕಾಹ್ವಯ ದ್ವಿಜನು ವ್ಯಾಧಿ ಪೀಡಿತನು ಕುಷ್ಠಿ ನಡಮಾಡಲು ಅಶಕ್ತ ಆತನ ಪತ್ನಿಯು ಸಾಧುಗುಣವತಿ ಬಲುಶ್ರೇಷ್ಠ ಪತಿ ಹೇಳಿದಂತೆ ನಡೆಯುವಳು 14 ಒಂದು ದಿನ ಆ ಬ್ರಾಹ್ಮಣನು ನೋಡಿದ ಬಾಗಿಲಾಚೆ ಬೀದಿಯಲಿ ಹೋಗುತ್ತಿದ್ದ ಸುಂದರಿ ವೇಶ್ಯೆಯೋರ್ವಳಲಿ ಸೋತು ಮನ ಅವಳನ್ನು ತಾನು ಹೊಂದಬೇಕೆನ್ನಲು ಸಾಧ್ವಿಸತಿ ಪತಿಯನ್ನು ಎತ್ತಿದಳು ಸೊಂಟದಲಿ 15 ರಾತ್ರಿ ಕತ್ತಲೆಮಾರ್ಗ ತಿಳಿಯದಲೆ ಪತಿಯನ್ನು ಹೊತ್ತುಕೊಂಡು ಹೋಗುವಾಗ ಪತಿಯ ಕಾಲು ತಾಕಿತು ಹಾದಿಯಲ್ಲಿ ಕಬ್ಬಿಣ ಸಲಾಕದಲ್ಲಿ ಚುಚ್ಚಿಸಿ ಇದ್ದ ಕಟಿ ಸಮೀಪ ಹಾಹಾ 16 ಅನ್ಯಾಯದಿ ಆ ರಾಜ್ಯದರಸ ಆ ಮಹಾಮುನಿಯ ಧನಚೋರನೆಂದು ಶೂಲಕ್ಕೆ ಹಾಕಿಸಿದ್ದ ಆ ಶೂಲ ಕಾಣದೇ ಕೌಶಿಕನ ಕಾಲ್ತಗಲಿ ಬಲು ನೋವಾಗಿ ಮುನಿ ಶಾಪವಿತ್ತರು ಸೂರ್ಯೋದಯಲ್ಲೇ ಸಾಯೆಂದು 17 ಹಾಹಾ ಇದು ಏನು ಮುನಿಗಳಿಗೆ ನೋವಾಯಿತಲ್ಲಾ ಮಹಾತ್ಮರ ಶಾಪ ವೀಣಾಗಲಾರದು ಮಾಂಗಲ್ಯವ ಪತಿ ಅಂತಸ್ಥ ಶ್ರೀಹರಿಯ ಸ್ಮರಿಸಿ ಆ ಪತಿವ್ರತೆ ಹೇಳಿದಳು 18 ಸೂರ್ಯೋದಯವಾಗದಿದ್ದರೆ ಶಾಪವು ಫಲಿಸದು ಸೂರ್ಯೋದಯವಾಗಬೇಡಿ ಎಂದು ಹೇಳಿದಳು ಸಾಧ್ವಿ ಆರ್ಯಧರ್ಮ ಲೋಕಕಾರ್ಯ ಸರ್ವವೂ ಸ್ತಬ್ಧವಾದವು ಎಲೆಲ್ಲೂ ಕತ್ತಲೆಯು ಭಾನು ಉದಯಿಸಲಿಲ್ಲ 19 ಇಂದ್ರಾದಿ ದೇವರ್ಗಗಳು ಬ್ರಹ್ಮನಲಿ ಮೊರೆಯಿಡಲು ಪತಿವ್ರತೆ ಮಹಾತ್ಮನೆ ಮತ್ತೊಬ್ಬ ಪತಿವ್ರತೆಯೇ ಪ್ರತಿ ಮಾಡುವಳು ಅತ್ರಿಋಷಿ ಪತ್ನಿ ಅನಸೂಯಾ ಪತಿವ್ರತಾ ರತ್ನಳಾ ಸಹಾಯ ಕೇಳೆಂದರು ವೇಧ 20 ಶಕ್ರಾದಿ ಸುರರುಗಳು ಅನಸೂಯಾದೇವಿಯಲಿ ಕೋರಿಕೆ ಮಾಡಲು ಆಕೆ ದೇವತೆಗಳ ಸಮೇತ ಧೀರ ಪತಿವ್ರತೆಯಾದ ಕೌಶಿಕಾ ಗೃಹಕೆ ಹೋಗಿ ಪರಿಚಯ ಮಾಡಿಕೊಂಡು ಕೊಂಡಾಡಿದಳಾ ಸಾಧ್ವಿಯ 21 ಮಹಾಭಾಗರು ಇಂದ್ರಾದಿಗಳಿಗೂ ಅನಸೂಯಗೂ ವಿಹಿತೋಪಚಾರ ಪೂಜಾದಿಗಳ ಮಾಡಿ ಆ ಸಾಧ್ವಿ ಮಹಾಭಾಗ್ಯ ಆಗಮನ ಎನ್ನುತ್ತ ಕಾರಣವನು ಬಹು ಹಿತದಲಿ ಕೇಳಿದಳು ತನ್ನ ಸ್ಥಿತಿ ಹೇಳಿ 22 ಸೂರ್ಯ ಉದಿಸುವದಕ್ಕೆ ಪತಿ ಬದುಕಿಸಲ್ಪಡುವನು ಎನ್ನುತೆ ಕೌಶಿಕಾ ಸಾಧ್ವಿಯು ಅನುಮೋದನೆ ಕೊಂಡು ಇನ ಉದಿಸಲಿ ಎಂದ ಅಘ್ರ್ಯ ಕೊಟ್ಟಳು ಮುದದಿ 23 ಸೂರ್ಯ ಮುನಿಶಾಪ ಫಲಿಸಿತು ಬಿದ್ದ ಕೆಳಗೆ ಕೌಶಿಕ ತತ್‍ಕ್ಷಣವೇ ಬದುಕಿ ಎದ್ದ ಪತಿವ್ರತಾ ಶಿರೋಮಣಿ ಅನಸೂಯಾ ದೇವಿ ಪ್ರಭಾವ ಪತಿವ್ರತಾ ಮಹಾತ್ಮೆ ಜ್ವಲಿಸಿತು ಲೋಕದಲ್ಲಿ 24 ಕೌಶಿಕನ್ನ ಬದುಕಿಸಿದ್ದು ಮಾತ್ರವಲ್ಲದೇ ಸರ್ವ ಕುಷ್ಠಾದಿ ರೋಗ ಪರಿಹರಿಸಿ ಯುವವಾಗಿ ಮಾಡಿ ಅಯುಷ್ಯ ಬಹುನೂರು ವರ್ಷಗಳ ಅನುಗ್ರಹಿಸಿ ತುಷ್ಠಿ ಸುಖಜೀವನ ಒದಗಿಸಿದಳ್ ಅನಸೂಯಾ 25 ಅನಸೂಯೆಯ ಪಾತಿವ್ರತ್ಯ ಮಹಾತ್ಮೆಯ ಶ್ಲಾಘಿಸಿ ಏನು ವರ ಕೇಳಿದರೂ ಕೊಡುವವೆಂದು ಸುರಪ ಆನಿಮಿಷರು ಹೇಳಲು ಪತಿವ್ರತಾ ಶಿರೋಮಣಿ ವಿಧಿ ಶಿವ ತನ್ನಲ್ಲವತರಿಸಲೆಂದಳು 26 ತಥಾಸ್ತು ಎಂದ ದೇವತೆಗಳ ವರ ಸತ್ಯಮಾಡೆ ಸುತಪಸ್ವಿ ಅತ್ರಿಗೆ ಹಂಸ ವೃಷಾರೂಡರು ಪ್ರತ್ಯಕ್ಷದಿ ಹೇಳಿದಂತೆಯೂ ಅನಸೂಯ ಅತ್ರಿಗೆ ಪುತ್ರರೆಂದುದಿಸಿದರು ಸೋಮಸ್ತ ಬ್ರಹ್ಮೇಶ ವಿಷ್ಣು 27 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಾಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯನಮೋ ಪ್ರಿಯತಾಂ ಶರಣು 28 ಎರಡನೇ ಅಧ್ಯಾಯ ಶ್ರೀ ದತ್ತಾತ್ರಯ ಪ್ರಾದುರ್ಭಾವ ಸಾರ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಭೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಬ್ರಹ್ಮಾವಿಷ್ಟನು ಸೋಮ ಔಷಧಿಗಳ ರಾಜನಾದ ಉನ್ಮಾದ ಚರ್ಯದಿ ಕೋಪ ಪ್ರಕಟಿಸಿ ಮೆರೆವರು ತಮ್ಮ ಶಿಷ್ಯರೊಡಗೂಡಿ ಶಿವಾವತಾರ ದೂರ್ವಾಸ ಸುಮ್ಮನಸ ಸಜ್ಜನ ಹಿತರು ದುಷ್ಟನಿಗ್ರಹರು 1 ತನ್ನನ್ನ ತಾನೇ ಸುತನಾಗಿ ದತ್ತಮಾಡಿಕೊಂಡನು ವಿಷ್ಣು ಅತ್ರಿ ದಂಪತಿಗೆ ಆದ ಕಾರಣ ಪ್ರಖ್ಯಾತೆ ಉನ್ನಾಮ ದತ್ತಾತ್ರಯ ಕ್ಷೋಣಿ ಯೋಗ್ಯಾಧಿಕಾರಿಗಳಿಂ ಘನಭಕ್ತಿಯಿಂ ಶುಚಿಯಿಂ ಜಪ್ಯ ಸ್ಮರಣೀಯಿಂ ಶ್ರೋತವ್ಯ ಜಯತು 2 ಕಲ್ಯಾಣತಮ ಪೂರ್ಣ ಅಮಲ ಗುಣಗಣ ಸಿಂಧು ಮಾಲೋಲ ಶ್ರೀವಕ್ಷ ಶ್ರೀಶನೇ ಪ್ರಾದುರ್ಭವಿಸಿದನು ಚೆಲುವ ಅನುಪಮ ಸೌಂದರ್ಯಸಾರ ಸರ್ವೋತ್ತಮ ಲೀಲಾನಂದಮಯ ಚಿನ್ಮಾತ್ರಗಾತ್ರ ಭಕ್ತೇಷ್ಟದಾತ 3 ಕಮಲಾಸನಾವಿಷ್ಟ ಸೋಮ ರುದ್ರಾವತಾರ ದೂರ್ವಾಸ ತಮ್ಮ ತಮ್ಮ ಉದ್ಯೋಗಸಾಧನಕೆ ಬೇರೆ ಬೇರೆ ಹೋಗೆ ಸುಮನೋಹರ ರೂಪ ಶ್ರೀಮನೋರಮ ದತ್ತಾತ್ರಯ ಸುಮಹಾ ಯೋಗಿಯಾದ ನಿಸ್ಸಂಗ ಯೋಗೇಶ್ವರೇಶ್ವರ 4 ಅತ್ರೇಯರು ಮೂವರು ಹೀಗೆ ಬೇರೆ ಬೇರೆಯಾಗಿಯೇ ತಮ್ಮ ತಮ್ಮ ರೂಪದಲ್ಲೇ ಇದ್ದರು ಒಂದಾಗಿ ಅಲ್ಲ ಸೋಮ ಶಿವ ದತ್ತರಿಗೆ ಬೇರೆ ಬೇರೆ ಮಂತ್ರವುಂಟು ಸೋಮ ಪಂಚ ಶಿವ ಪಂಚ ದತ್ತ ನವಅಕ್ಷರವು 5 ಪ್ರೋದ್ಯ ದಿವಾಕರ ಪೋಲ್ವ ವರ್ಣವುಳ್ಳ ಶುಭಗಾತ್ರ ಆದಿತ್ಯ ಸಹಸ್ರಾಮಿತ ಮಹೋತ್ಕøಷ್ಟ ತೇಜಃಪುಂಜ ವ್ಯಾಪ್ತ ಸರ್ವತ್ರ ಜ್ಞಾನಾಭಯಕರನು ಬ್ರಹ್ಮಾದಿ ತ್ರಿದಿವ ಸುಬೋಧಕನು ಕಪಿಲನು ದತ್ತಾತ್ರಯ 6 ಇಂಥ ಮಹಾಮಹಿಮನು ಕಪಿಲ ದತ್ತಾತ್ರಯನು ಅಧಿಕಾರಿಗಳಿಗೆ ಅಪರೋಕ್ಷಜ್ಞಾನ ಮೋಕ್ಷದಾತ ಶ್ರೋತೃ, ಮಂತ್ರ, ಧ್ಯಾತೃಗಳಿಗೆ ಕಪಿಲ ದತ್ತಾತ್ರಯ ಭಕ್ತಿ ಮೆಚ್ಚಿ ಸದಾ ಸಂರಕ್ಷಿಸಿ ಇಷ್ಟಾರ್ಥ ಕೊಡುವ 7 ಪದ್ಮ ಭವಾದ್ಯಮರರಿಂ ಧ್ಯಾತ ದತ್ತಾತ್ರಯ ಹರಿ ಮೇದಿನಿ ನರರಂತೆ ಅವತಾರ ಲೀಲೆ ಚರಿಸಿ ಅದ್ಭುತ ಯೋಗಾನುಷ್ಠಾನದಿ ಇರುತಿರೆ ಜನರು ಈತನ ಸೌಂದರ್ಯ ಯೋಗಸಾಮಥ್ರ್ಯ ಹೊಗಳಿದರು 8 ಸಹಸ್ರಾರು ಋಷಿಪುತ್ರ ಬ್ರಹ್ಮಚಾರಿಗಳು ಬಂದು ಅಹರ್ನಿಶಿ ಯೋಗೇಶ್ವರೇಶ್ವರ ದತ್ತನಾಶ್ರಮದಿ ಬಹಳುತ್ಸಾಹದಲಿ ಸುತ್ತು ಮುತ್ತು ಗುಂಪುಗೂಡಿ ಮಹಾಯೋಗಾಭ್ಯಾಸಕ್ಕೆ ಚ್ಯುತಿಯ ಕಲ್ಪಿಸಿದರು 9 ಯೋಗ್ಯರು ಸಜ್ಜನರು ಈ ಭಕ್ತ ಋಷಿಕುವರರು ಯೋಗ್ಯಸಾಧನೆ ಅವರವರ ಆಶ್ರಮದಲ್ಲಿಯೇ - ಗೈಯಲಿ ಬೇಕೆಂದು ಅವರುಗಳು ಹೋಗೋ ಉಪಾಯ ನಿಶ್ಚೈಸಿ ಮುಳುಗಿದ ದತ್ತನು ಸರೋವರದೊಳು 10 ಸುರಮಾನದಿ ಸಾವಿರವರ್ಷ ಭಗವಾನ್ ದತ್ತನು ಸರೋವರದೊಳಿದ್ದನು ಹೊರಜನಕ್ಕೆ ಕಾಣದೆ ಆ ಋಷಿಪುತ್ರರು ತೀರದಲಿ ಇಕೋ ಈಗ ನಾಳೆ ಬರುವನು ಮೇಲೆ ಎಂದು ಕಾಯುತ್ತಿದ್ದರು ದೃಢದಿ 11 ಜಲಧಿ ಉಕ್ಕಿ ಹರಿದು ಕ್ಷೋಣಿಯ ಮುಳುಗಿಸದೆ ಜಲಮಧ್ಯ ತಾನಿದ್ದು ಕಾಯುವ ವಡವಾ ಮುಖಾಗ್ನಿ ಜಲಮಧ್ಯದಿ ಈಗ ಹೊಕ್ಕಿರುವ ದತ್ತಾತ್ರಯನು ಮುಳುಗಿರುವುದು ಆಶ್ಚರ್ಯವಲ್ಲ ಈರ್ವರೂ ಏಕ 12 ಬಲುದೀರ್ಘ ದೇವವರ್ಷಗಳು ಸಾಸಿರವಾದರೇನು ಶೀಲತಮ ವರವಾಯುವು ವರುಣನು ಬುಧಾದಿ ಜಲಾಭಿಮಾನಿಗಳು ಕಿಂಕರರಾಗಿ ಇರುತಿಹರು ಜಲಶಾಯಿ ನಾರಾಯಣ ಅವತಾರ ದತ್ತನಿಗೆ 13 ಒಂದು ದಿನ ಕೆರೆನೀರು ಚಲಿಸಲು ಸಂತೋಷದಿ ಬಂದರೂ ಬಂದರೂ ಎಂದು ಕೂಗೆ ಋಷಿಕುವರರು ಇಂದಿರಾಪತಿ ದತ್ತ ಮೇಲೆದ್ದು ಬಂದ ಬದಿಯಲ್ಲಿ ಇಂದಿರಾಂಗಿ ನಾರೀಮಣಿ ಓರ್ವಳ ಆಲಿಂಗಿಸುತ 14 ಯಾರನ್ನೂ ಲೆಕ್ಕಿಸದೆ ಕಾಮವಿಲಾಸ ಕೇಳಿಯ ಆ ಸ್ತ್ರೀಯೊಡನೆ ಮಾಡುತ್ತಿದ್ದುದು ಕಂಡು ಯುವಕರು ಯೋಗಿ ಹೀಗಾದರೆ ಎನ್ನುತ ತ್ವರಿತ ತೆರಳಿದರು ಜುಗುಪ್ಸೆಯಲ್ಲಿ ತ್ಯಜಿಸಿ 15 ಆ ಪುಣ್ಯವಂತ ಋಷಿಪುತ್ರರು ತಿಳಕೊಳ್ಳಲಿಲ್ಲ ಆ ಸ್ಛುರದ್ರೂಪಿಣಿ ನಾರಿ ಸಾಕ್ಷಾತ್ ಲಕ್ಷ್ಮೀದೇವಿಯೆಂದು ವಿಪುಲ ಮನ ಹರುಷ ತೋರಿಸಿ ದತ್ತಾತ್ರಯನು ಕೈಪಿಡಿದು ಲಕ್ಷ್ಮಿಯ ಕರೆದುಹೋದ ಆಶ್ರಮಕೆ 16 ಯಾವ ತನ್ನಾಶ್ರಮದಿ ಸ್ವಾಧ್ಯಾಯ ಪ್ರವಚನಗಳ್ ದಿವ್ಯ ಯೋಗ ಅಭ್ಯಾಸ ಶಿಷ್ಯರ್ಗೆ ಶೀಕ್ಷಾದಿಗಳ್ ಯಾವಾಗಲೂ ಹಿಂದೆ ನಡೆಸುತ್ತಿದ್ದನೋ ಅಲ್ಲಿ ಈಗ ದೇವಿಯೊಡನೆ ಲೀಲಾವಿಲಾಸಗಳ ತೋರಿಸಿದ 17 ಮಂದ ಧೀಗಳು ಈ ವಿಡಂಬನೆ ಕಂಡು ಮೋದದಲಿ ಶ್ರೀದತ್ತ ಈ ರೀತಿ ಆದನಲ್ಲಾ ಎಂದು ಮಾತನಾಡೆ ಸುಧೀಗಳು ಬೃಹಸ್ಪತ್ಯಾದಿಗಳು ದತ್ತಾತ್ರಯನು ಮೋದಚಿನ್ಮಯ ನಿರ್ದೋಷ ಹರಿ ಶ್ರೀಶನೆ ಎಂದರÀು 18 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯ ನಮೋ ಪ್ರಿಯತಾಂ ಶರಣು 19 -ಇತಿ ಎರಡನೇ ಅದ್ಯಾಯ ಸಂಪೂರ್ಣಂ - ಮೂರನೇ ಅದ್ಯಾಯ ಸಂಪತ್‍ಲಕ್ಷ್ಮೀ ವೃತ್ತಾಂತ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೊಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಸುರಪ ಜಂಭಾಸುರನಿಂದ ಅಪಜಯವ ಕೊಂಡು ಸುರಗುರು ಪ್ರೇರಣೆಯಿಂ ದತ್ತಾತ್ರಯನಲಿ ಹೋಗಿ ಶರಣು ಹೊಕ್ಕು ಸೇವಗೈಯಲು ಆಗ ಅವನನ
--------------
ಪ್ರಸನ್ನ ಶ್ರೀನಿವಾಸದಾಸರು
ಯತಿ ವರ್ಣನೆ ಕಾಶೀಮಠದ ಶ್ರೀ ಭುವನೇಂದ್ರರ ಸ್ತುತಿ ಕಂಡು ಕೃತಾರ್ಥನಾದೆ ಭುವನೇಂದ್ರರಂಘ್ರಿಯ ಕಂಡು ಕೃತಾರ್ಥನಾದೆ ಪ. ಕಂಡು ಕೃತಾರ್ಥನಾದೆ ಭೂ- ಮಂಡಲದಿ ಪೆಸರ್ಗೊಂಡು ಮೆರೆದಿಹ ಪುಂಡರೀಕದಳಾಕ್ಷ ಸತತಾ- ಖಂಡಸುಖ ಮಾರ್ತಾಂಡತೇಜರ ಅ.ಪ. ವಾರಿರುಹಭವಾಂಡದ ಭೂಮಧ್ಯ ವಿ- ಸ್ತಾರಜಂಬೂದ್ವೀಪದ ನವಖಂಡದೊಳ್ ಸಾರಭರತಖಂಡದÀ ಹಿಮಗಿರಿಯ ಪಾಶ್ರ್ವದ ತೋರ್ಪ ವಿಂಧ್ಯಾಚಲದ ಮಧ್ಯ ಭಾ- ಗೀರಥಿಯ ಪಶ್ಚಿಮ ಭೂಭಾಗದ ತೀರ ಕಾಶೀಮಠಸಂಸ್ಥಾನ ವಿ- ಚಾರಶಾಸ್ತ್ರವಿಶಾರದರ ಪದ 1 ವರ ರಾಜೇಂದ್ರ ಯತೀಂದ್ರರ ಕರಸಂಜಾ- ತರ ಗುರುಸುರೇಂದ್ರರ ಕರಕಮಲಮಧ್ಯದಿ ಧರಿಸಿರ್ದ ವಿಭುದೇಂದ್ರರ ಸರೋರುಹ ಕರಸಂಜಾತ ಮಹಾನುಭಾವರ ಕರುಣನಿಧಿ ಕಮನೀಯ ಸದ್ಗುಣ ಭರಿತ ಶ್ರೀಭುವನೇಂದ್ರರಂಘ್ರಿಯ 2 ಸುಂದರಮುಖಶೋಭೆಯ ಪೂರ್ಣಮಿ ಶುಭ ಚಂದ್ರಸನ್ನಿಭಕಾಂತಿಯ ಶೋಭಿಪ ನವ ಕುಂದರದನ್ತಪಂಕ್ತಿಯ ತಿಲಕದ ಛಾಯ ಮಂದಹಾಸಾನಂದ ಪುರಜನ ವೃಂದಪೂಜಿತಪಾದಪದ್ಮ ದ್ವಂದ್ವ ಸತತಾನಂದ ಸದ್ಗುಣ ಇಂದ್ರ ಶ್ರೀಭುವನೇಂದ್ರರಂಘ್ರಿಯ 3 ಶೃಂಗಾರರಸತೇಜರ ಯಮನಿಯಮಾದ್ಯ ಷ್ಟಾಂಗಯೋಗಸರ್ವಜ್ಞರ ಪಾಪಾತ್ಮರ ಕಂಗಳಿಗಗೋಚರ ಸತ್ಯಾವತಾರ ಮಂಗಳಾತ್ಮಕಸಂಗ ಸುಮಮನಸ ರಂಗ ಸಾಧ್ಯವೇದಾಂಕ ಕರುಣಾ ಪಾಂಗ ವಿಬುಧೋತ್ತುಂಗ ಅಂಗಜ ಭಂಗ ಶ್ರೀಯತಿಪುಂಗವರ ಪದ 4 ಎಷ್ಟೆಂದು ನಾ ಪೇಳಲಿ ಸದ್ಗುರುವರ- ರಿಷ್ಟಕೆ ತೋಷ ತಾಳಲಿ ದಾರಿದ್ರ್ಯದ ಕಷ್ಟವೆಲ್ಲ ಪರಿಹರಿಸಲಿ ದಯವಿರಲಿ ಎನ್ನಲಿ ಶ್ರೇಷ್ಠ ಗೌಡಸಾರಸ್ವತ ಸ- ಮಷ್ಟಿ ಕೊಂಕಣದೇಶವಿಪ್ರ ವಿ- ಶಿಷ್ಟ ಒಡೆತನ ಪಟ್ಟವಾಳುವ ಶ್ರೇಷ್ಠಯತಿವರರಂಘ್ರಿಕಮಲವ 5 ಆಶೆಯೊಂದುಂಟೆನಗೆ ಕಾವ್ಯವ ಓದ್ಯ- ಭ್ಯಾಸಗೈಯುವದು ಮಿಗೆ ಸನ್ನಿಧಾನದಿ ಪೋಷಿಸಿ ಎನ್ನ ಹೀಗೆ ರಕ್ಷಿಸಲು ಕಡೆಗೆ ಏಸು ಧನ್ಯನು ನಾನು ಕರುಣಾ ನಿಗಮ ವಿ- ಲಾಸರಂಘ್ರಿಗೆ ದಾಸದಾಸರ ದಾಸ ನಾನು ದಯಾಶರಧಿಯರ 6 ಸತತ ಸದ್ಯತಿಧರ್ಮದ ಪರಿಪಾಲಿಸಿ ಕ್ಷಿತಿಗತಿ ಪ್ರತಿವಾಸವನಂತೆಸೆವುತಾ ಮಿತ ಭಾಗ್ಯಸಂಪದವ ವಿಖ್ಯಾತವ ರತಿಪತಿಯ ಪಿತ ಕ್ರುತುಪಾಲಿತ ಸೂ- ನೃತಭಾಷಿತ ಲಕ್ಷ್ಮೀನಾರಾಯಣ ಸತತ ವೇದವ್ಯಾಸ ಶ್ರೀರಘು ಪತೀಚರಣಪೂಜಿತರ ಪದವನು 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯತಿ ವರ್ಣನೆ ಕಾಶೀಮಠದ ಶ್ರೀ ಭುವನೇಂದ್ರರ ಸ್ತುತಿ ಕಂಡು ಕೃತಾರ್ಥನಾದೆ ಭುವನೇಂದ್ರರಂಘ್ರಿಯ ಕಂಡು ಕೃತಾರ್ಥನಾದೆಪ. ಕಂಡು ಕೃತಾರ್ಥನಾದೆ ಭೂ- ಮಂಡಲದಿ ಪೆಸರ್ಗೊಂಡು ಮೆರೆದಿಹ ಪುಂಡರೀಕದಳಾಕ್ಷ ಸತತಾ- ಖಂಡಸುಖ ಮಾರ್ತಾಂಡತೇಜರಅ.ಪ. ವಾರಿರುಹಭವಾಂಡದ ಭೂಮಧ್ಯ ವಿ- ಸ್ತಾರಜಂಬೂದ್ವೀಪದ ನವಖಂಡದೊಳ್ ಸಾರಭರತಖಂಡದÀ ಹಿಮಗಿರಿಯ ಪಾಶ್ರ್ವದ ತೋರ್ಪ ವಿಂಧ್ಯಾಚಲದ ಮಧ್ಯ ಭಾ- ಗೀರಥಿಯ ಪಶ್ಚಿಮ ಭೂಭಾಗದ ತೀರ ಕಾಶೀಮಠಸಂಸ್ಥಾನ ವಿ- ಚಾರಶಾಸ್ತ್ರವಿಶಾರದರ ಪದ 1 ವರ ರಾಜೇಂದ್ರ ಯತೀಂದ್ರರ ಕರಸಂಜಾ- ತರ ಗುರುಸುರೇಂದ್ರರ ಕರಕಮಲಮಧ್ಯದಿ ಧರಿಸಿರ್ದ ವಿಭುದೇಂದ್ರರ ಸರೋರುಹ ಕರಸಂಜಾತ ಮಹಾನುಭಾವರ ಕರುಣನಿಧಿ ಕಮನೀಯ ಸದ್ಗುಣ ಭರಿತ ಶ್ರೀಭುವನೇಂದ್ರರಂಘ್ರಿಯ2 ಸುಂದರಮುಖಶೋಭೆಯ ಪೂರ್ಣಮಿ ಶುಭ ಚಂದ್ರಸನ್ನಿಭಕಾಂತಿಯ ಶೋಭಿಪ ನವ ಕುಂದರದನ್ತಪಂಕ್ತಿಯ ತಿಲಕದ ಛಾಯ ಮಂದಹಾಸಾನಂದ ಪುರಜನ ವೃಂದಪೂಜಿತಪಾದಪದ್ಮ ದ್ವಂದ್ವ ಸತತಾನಂದ ಸದ್ಗುಣ ಇಂದ್ರ ಶ್ರೀಭುವನೇಂದ್ರರಂಘ್ರಿಯ3 ಶೃಂಗಾರರಸತೇಜರ ಯಮನಿಯಮಾದ್ಯ ಷ್ಟಾಂಗಯೋಗಸರ್ವಜ್ಞರ ಪಾಪಾತ್ಮರ ಕಂಗಳಿಗಗೋಚರ ಸತ್ಯಾವತಾರ ಮಂಗಳಾತ್ಮಕಸಂಗ ಸುಮಮನಸ ರಂಗ ಸಾಧ್ಯವೇದಾಂಕ ಕರುಣಾ ಪಾಂಗ ವಿಬುಧೋತ್ತುಂಗ ಅಂಗಜ ಭಂಗ ಶ್ರೀಯತಿಪುಂಗವರ ಪದ4 ಎಷ್ಟೆಂದು ನಾ ಪೇಳಲಿ ಸದ್ಗುರುವರ- ರಿಷ್ಟಕೆ ತೋಷ ತಾಳಲಿ ದಾರಿದ್ರ್ಯದ ಕಷ್ಟವೆಲ್ಲ ಪರಿಹರಿಸಲಿ ದಯವಿರಲಿ ಎನ್ನಲಿ ಶ್ರೇಷ್ಠ ಗೌಡಸಾರಸ್ವತ ಸ- ಮಷ್ಟಿ ಕೊಂಕಣದೇಶವಿಪ್ರ ವಿ- ಶಿಷ್ಟ ಒಡೆತನ ಪಟ್ಟವಾಳುವ ಶ್ರೇಷ್ಠಯತಿವರರಂಘ್ರಿಕಮಲವ5 ಆಶೆಯೊಂದುಂಟೆನಗೆ ಕಾವ್ಯವ ಓದ್ಯ- ಭ್ಯಾಸಗೈಯುವದು ಮಿಗೆ ಸನ್ನಿಧಾನದಿ ಪೋಷಿಸಿ ಎನ್ನ ಹೀಗೆ ರಕ್ಷಿಸಲು ಕಡೆಗೆ ಏಸು ಧನ್ಯನು ನಾನು ಕರುಣಾ ನಿಗಮ ವಿ- ಲಾಸರಂಘ್ರಿಗೆ ದಾಸದಾಸರ ದಾಸ ನಾನು ದಯಾಶರಧಿಯರ6 ಸತತ ಸದ್ಯತಿಧರ್ಮದ ಪರಿಪಾಲಿಸಿ ಕ್ಷಿತಿಗತಿ ಪ್ರತಿವಾಸವನಂತೆಸೆವುತಾ ಮಿತ ಭಾಗ್ಯಸಂಪದವ ವಿಖ್ಯಾತವ ರತಿಪತಿಯ ಪಿತ ಕ್ರುತುಪಾಲಿತ ಸೂ- ನೃತಭಾಷಿತ ಲಕ್ಷ್ಮೀನಾರಾಯಣ ಸತತ ವೇದವ್ಯಾಸ ಶ್ರೀರಘು ಪತೀಚರಣಪೂಜಿತರ ಪದವನು7
--------------
ತುಪಾಕಿ ವೆಂಕಟರಮಣಾಚಾರ್ಯ
ಯೆಂದು ಪಿಡಿಯುವಿ ಕೈಯ್ಯ ಇಂದಿರೇಶ ಚಲುವ ಕೃಷ್ಣನೆ ಪ ಮುಂದೆ ಹೋಗಲು ಬಂಧಮಾಡುತ ಕುಂದು ಅಳಿಯುತ ತಂದೆ ದಯೆತೊರಿ ಅ.ಪ ಮಂದ ನಾನಯ್ಯ ಕಂದಿ ಕುಂದಿದೆ ಭವದಿ ಕೇಳಯ್ಯ ಬಂಧು ಬಳಗವು ಯಾರು ಇಲ್ಲಯ್ಯ ನಿಂದು ಮುಂದಿನ ದಾರಿ ನಡೆಸಯ್ಯ ಜೀಯಾ ಅಂದು ಸಭೆಯೊಳು ಮಂದಗಮನೆಯ ಒಂದು ನೊಡದೆ ಬಂದು ಸಲಹಿದ ಸಿಂಧು ಶಯನಾನಂದ ಮೂರುತಿ ನಂದನಂದನ ಶ್ಯಾಮಸುಂದರ ಬಂಧು ಸರ್ವರ ಬಂಧಮೋಚಕ ಮಂದರಾದ್ರಿ ಧರನೆ ಯದುಕುಲ ಚಂದ್ರ ಶೋಭಾಸಾಂದ್ರ ಕೃಷ್ಣನೆ ಬಂದು ಚಂದದಿ ಸಲಹಿ ಎನ್ನನು 1 ಬಾಲತನದಲ್ಲಿ ಲೀಲೆಗೋಷ್ಠಿಲಿ ಮೆರೆದೆ ನಾನಲ್ಲಿ ಮೇಲೆ ಯೌವನ ಒಡನೆ ಬಂತಲ್ಲಿ ಲಲನೆ ಕೇಳಿಲಿ ಮುಳುಗಿ ಹೋದೆನು ಅಲ್ಲಿ ಮೆಲ್ಲಮೆಲ್ಲನೆ ಮುಪ್ಪು ಬಂತಲ್ಲಿ ಕಾಲಕಳೆದೆನು ಪಗಡೆ ಜೂಜಿನಲಿ ಮಲ್ಲಮರ್ದನ ಮಾತುಲಾಂತಕ ಚಲ್ವಸೂಕರ ಪುಲ್ಲಲೊಚನ ಪುಲ್ಲನಾಭನೆನಲ್ಲ ಸರ್ವರ ಬಿಂಬರೂಪನೆ ಎಲ್ಲ ಕಾಲದಿ ಎಲ್ಲಮಾಡುತ ನಿಲ್ಲದೆಜಗ ಸಾರ ಶ್ರೀ ನಲ್ಲ ನಿನ್ನಯ ಎಲ್ಲ ಬಲ್ಲವರಿಲ್ಲ ಎಲ್ಲಿಯೂ ಬುದ್ಧ ಕಲ್ಕಿಯೆ ಸೊಲ್ಲು ಲಾಲಿಸಿ ಒಲಿದು ಬಂದ ನಾರಸಿಂಹನೆ ಇಲ್ಲ ಸಮರು ಅಧಿಕರೈಯ್ಯ ಪೂರ್ಣದೇವನೆ2 ಮೂರು ತಾಪವ ಹರಿಪ ಬಗೆಯೇನೋ ವೈರಿ ಆರರ ಭರದಿ ತರಿ ನೀನೂ ಮೂರು ಋಣಗಳು ಉಳಿಯೆಗತಿಯೇನು ಮೂರು ಕರ್ಮದಿ ಬಿಡಿಸಿ ಹೊರೆಯನ್ನು ಭಕ್ತಸುರಧೇನು ಸಾರಸಜ್ಜನ ಪ್ರಾಪ್ಯ ಶುಭಗುಣ ಸಾರ ಕರುಣಾ ಪೂರ್ಣವಾರಿಧಿ ಮಾರಜನಕನೇ ಋಷಭಮಹಿದಾಸ ತೋರು ಜ್ಞಾನವ ಬಾದರಾಯಣ ಮೀರಲಾರೆನು ವಿಷಯವಾಸನೆ ಭಾರತೀಶನ ಒಡೆಯ ಕೃಷ್ಣನೆ ಭಾರ ನಿನ್ನದು ಎನ್ನ ಪೊರೆವದು ಮತ್ಸ್ಯ ವಾಮನ ಧೀರ ಧೃವನಾ ಪೊರೆದ ವರದನೆ ಬೀರಿ ಭಕ್ತಿ ಜ್ಞಾನ ವೈರಾಗ್ಯ 3 ಎನ್ನ ಯೋಗ್ಯತೆ ನೋಡಿ ಫಲವೇನು ನಿನ್ನ ಘನತೆ ತೋರಿ ಪೊರೆ ನೀನು ನಿನ್ನ ದಾಸನ ಮಾಡು ಎನ್ನನ್ನು ಅನ್ಯಹಾದಿಯ ಕಾಣೆ ನಾ ನಿನ್ನು ಬೆನ್ನು ಬಿದ್ದೆನು ಇನ್ನೂಮುನ್ನೂ ಮಾಧವ ವಿಶ್ವ ತೈಜಸ ಪ್ರಾಜ್ಞತುರಿಯ ಹಂಸ ವಿಷ್ಣುವೇ ಜ್ಞಾನ ಭೋಧಕ ಸನತ್ಕುಮಾರನೇ ಮೌನಿ ದತ್ತಾತ್ರೇಯ ಹಯಮುಖ ದೀನವತ್ಸಲ ಯಜ್ಞ ಧನ್ವಂತ್ರಿ ಶ್ರೀನಿವಾಸ ರಾಮ ಕಪಿಲನೆ ಜ್ಞಾನ ನಿಧಿ ಮುನಿ ನಾರಾಯಣನೆ ನೀನೆ ಅನಿರುದ್ಧಾದಿ ರೂಪನು ಧ್ಯಾನಗೊಚರ ಶಿಂಶುಮಾರನೆ ಸಾನುಕೂಲದಿ ನೀನೆ ವಲಿಯುತ ಕರ್ಮ ಸಂಚಯ4 ಆದಪೊದ ಮಾತು ಏಕ್ಕಯ್ಯ ಮಧ್ವರಾಯರ ಪ್ರೀಯ ಶೃತಿಗೇಯ ಮೋದದಾಯಕ ಮುಂದೆ ಸಲಹೈಯ್ಯ ಪಾದಪದ್ಮದಿ ಶರಣು ಅಲ್ಲದೆ ಏನು ಮಾಡಲಿ ಜೀಯ ಅಯ್ಯ ತಿದ್ದಿ ಮನವನು ಕದ್ದು ಅಘವನು ಒದ್ದು ಲಿಂಗವ ಶುದ್ಧಜ್ಞಾನದ ಸಾಧು ಜಯಮುನಿ ವಾಯುವಂತರ ಮಾಧವ ಶ್ರೀ ಕೃಷ್ಣವಿಠಲನೆ ಪಾದ ಮಧುಪರ ವೃಂದ ಮಧ್ಯದಿ ವೇದ ಸಮ್ಮತ ಗಾನ ಸುಧೆಯನು ಶುದ್ಧಭಕ್ತಿ ಜ್ಞಾನದೊಡಗೂಡಿ ಮೆದ್ದು ಪಾಡುತ ಕುಣಿವ ಭಾಗ್ಯವ ಮುದ್ದು ಕೃಷ್ಣನೆ ನೀನೆ ಎನಗಿತ್ತು 5
--------------
ಕೃಷ್ಣವಿಠಲದಾಸರು
ಯೋಗನಿದ್ರೆಯ ಮಾಡುತಿಹನು ಕ್ಷೀರಸಾಗರಮಧ್ಯದಿ ಭೋಗಿಶಯನನು ಪಏಳು ಸುತ್ತಿನ ಪುರವಿದನೂ ಎಂಟುಪಾಲಾಗಿ ರಮಣಿ ತಾ ಕಾದಿರಲದನುಬಾಲಕನೊಬ್ಬ ಪಾಲಿಪನೂ ಮಂತ್ರಿನಾಲುವರೊಪ್ಪಿರೆ ಶ್ರೀಹರಿ ತಾನು 1ಕಾಲಜ್ಞಾನಿಗಳೈವರಿಹರೂ ಅವರೂಳಿಗಕೈವರು ಕಾದುಕೊಂಡಿಹರುವೇಳೆ ವೇಳೆಯ ಬಲ್ಲ ಭಟರು ತಮ್ಮಊಳಿಗವನು ಬಂದು ಪೇಳುತ್ತಲಿಹರು 2ಸಕಲ ಲೋಕಂಗಳ ಸೃಜಿಸಿ ಅಲ್ಲಿ ಸಕಲ ಲೋಕೇಶನು ತಾನೆ ವಿಶ್ರಮಿಸಿಸಕಲವ ತನ್ನೊಳಗಿರಿಸಿುೀಗಮುಕುತಿದಾಯಕ ವೆಂಕಟೇಶ ಶ್ರೀ ವೆರಸಿ 3ಕಂ||ಹರಿ ಪವಡಿಸೆ ಹರೆದೋಲಗಸುರರೆಲ್ಲರ್ ಸ್ಥಾನಕೈದಲಾನಂದಾಂಬುಧಿತೆರೆುಳಿದು ತಿರುಪತೀಶನಚರಣವೆ ತಾನಾಗಿ ನಿಂದುದೆನ್ನೆದೆಮನೆಯೊಳ್ ಓಂ ವೇದವೇದ್ಯಾಯ ನಮಃ
--------------
ತಿಮ್ಮಪ್ಪದಾಸರು
ರಕ್ಷಿಸು ಗುರುನಾಥಾ ಕೇಶವ ನೀನೇ ರಕ್ಷಿಸು ಸಿರಿನಾಥಾ ಪ ಅಕ್ಷಯ ದ್ರೌಪದಿಗಿತ್ತ ಶ್ರೀಕಾಂತನೇ ಶಿಕ್ಷಕ ನೀನೇ ಕನಕ ವಂದಿತನೇ ಅ.ಪ. ತರಳ ಪ್ರಲ್ಹಾದನಿಗೊಲಿದು ಧಾರುಣಿಯಲ್ಲಿ ಮೆರೆದ ಕಶ್ಯಪುವನ್ನು ಕೆಡಹಿದ ಹರಿಯೇ ದುರುಳ ಕಂಸನು ತನ್ನ ಪ್ರಜೆಗಳ ಹಿಂಸಿಸೆ ತರಿದು ಸಜ್ಜನರನ್ನು ಪೊರೆದ ಶ್ರೀಧರನೇ 1 ಭಜಿಸಲು ಕನಕನು ಉಡುಪಿ ಗ್ರಾಮದಲಾಗ ರಜನಿ ಮಧ್ಯದಿ ದಾಸಗೊಲಿದ ಶ್ರೀ ಹರಿಯೇ ಗಜವನ್ನು ರಕ್ಷಿಸಿ ಬಿರುದನು ತೋರಿದ ಭಜಕರ ಲೋಲನೆ ನೆರೆ ನಾರಾಯಣನೇ2 ಕಷ್ಟವ ನೀಗಿ ತಾ ಶಿಷ್ಟರ ಸಲಹಲು ಶ್ರೇಷ್ಠ ಮೂರುತಿ ರಂಗ ಬಹರೂಪವೆತ್ತೀ ಶಿಷ್ಟರ ರಕ್ಷಿಸಿ ಭ್ರಷ್ಟರ ಕೆಡಹಿದ ಸೃಷ್ಟಿಗೀಶನೆ ರಂಗ ಚನ್ನಕೇಶವನೇ 3
--------------
ಕರ್ಕಿ ಕೇಶವದಾಸ
ರಂಗವಾಲಿಯನಿಡು ತಂಗಿ ನಿನ್ನಂತರಂಗ ದಂಗಳ ಸಾರಿಸಿ ರಂಗಗರ್ಪಿತವೆಂದು ಪ. ಮಂಗಳಮಹಿಮ ಶ್ರೀ ಕೃಷ್ಣ ತನ್ವಲಿವ ಎಂದಂಗನೆ ಸುಭದ್ರೆಗೆ ರಂಗಹೇಳಿದ ಅ.ಪ. ಅರಿಷಡ್ವರ್ಗಹಂಕಾರ ಮದಗಳೆಂಬ ಮಮಕಾರವ ಬಿಟ್ಟು ಮುನ್ನ ತೊಡರಬಿಡಿಸಿ ನಿನ್ನ ಕಡೆಹಾಯಿಸುವ ಪಥ ದೊಡೆಯ ಶ್ರೀಧರಪಾದವದರೊಳು ನಿಲುವಂತೆ 1 ಶ್ವೇತ ಕಲ್ಲನೆ ಕುಟ್ಟಿ ಅಚ್ಚುತನಾಮ ಪವಳ ಬೆರಸಿ ಸ್ವಚ್ಛ ಮುತ್ತುಗಳೆಂಬಂಥ ಶೀಲತೆಯಿಂದ ಅಚ್ಚ ಶ್ರೀ ತುಳಸಿಯ ಕಟ್ಟೆಯ ಬೆಳಗುವಂಥ2 ಹರಿನಾಮದರಿಶಿನವದರ ಮಧ್ಯದಿ ತುಂಬಿ ಅರಿಗಳ ಕಡಿವಂಥ ಕುಂಕುಮವ ಪರಮಾನಂದದಿನೆಲ್ಲಿ ಕರಿಯ ಬಣ್ಣ ಹರುಷದಗಸೆ ಹಸುರ ಬೆರಸಿ ಶ್ರೀ ಶ್ರೀನಿವಾಸಗೆ 3
--------------
ಸರಸ್ವತಿ ಬಾಯಿ
ರಾಘವೇಂದ್ರ ಸ್ವಾಮಿಗಳ ಸ್ತೋತ್ರ ವೃಂದಾವನ ನೋಡಿರೋ - ಗುರುಗಳವೃಂದಾವನ ಪಾಡಿರೋ ಪ ವೃಂದಾವನ ನೋಡಿ - ಆನಂದ ಮದವೇರಿಚೆಂದದಿ ದ್ವಾದಶ ಪೌಂಡ್ರಾಂಕಿತಗೊಂಬ ಅ.ಪ ತುಂಗಭದ್ರಾ ನದಿಯ ತೀರದಿ ಇದ್ದತುಂಗ ಮಂಟಪ ಮಧ್ಯದಿಶೃಂಗಾರ ತುಲಸಿ ಪದ್ಮಾಕ್ಷ ಸರಗಳಿಂದಮಂಗಳಕರ ಮಹಾ ಮಹಿಮೆಯಿಂದೊಪ್ಪುವ 1 ಕರ ಮಹಾಮಹಿಮೆಯಿಂದೊಪ್ಪುವ 2 ಸಿಂಧು ನಿತ್ಯ ಸನ್ನಿಧಿಯಿಂದ ನಿರುತ ಪೊಜೆಯಗೊಂಬ 3
--------------
ವೆಂಕಟೇಶವಿಟ್ಠಲ
ವಾದಿರಾಜಗುರು ನಿಮ್ಮಡಿಗೆರಗುವೆ ಸಾದರದಿಂದಲಿ ಮಂದನ ಕೈಪಿಡಿಯೋ ಪ ಸಾಧುಜನಾಶ್ರಯ ಮೇದಿನೀಸುರತರು ಪಾದವಪಿಡಿದಿಹೆ ಬೋಧಿಸು ವಿಜ್ಞಾನ ಅ.ಪ. ಕಾದಿಡೆ ಸುಜನಕೆ ಮಧ್ವಾಗಮನಿಧಿ ಸಾದರದುದಿಸಿದಿ ಬುಧಜನಕುಲಮೌಳಿ ಬೂದಿಯ ಮಾಡುತ ದುರ್ಮತಜಾಲವ ಮಾಧವ ಮಧ್ವರ ಸೇವೆಯ ಸಲ್ಲಿಸಿದೇ 1 ಕವಿತಾವನಿತೆಯ ಕುಣಿಸುತ ಶಾಸ್ತ್ರವ ನವವಿಧ ರಸದಿಂ ಪೇಳಿದೆ ಶಿಷ್ಯರಿಗೆ ಭುವಿಯಲಿ ಮೆರೆದೆಯೋ ಮಧ್ವಾನುಜ ತೆರ ಪವನ ಮತಾಬ್ಧಿಯ ಸೋಮನೆ ಶರಣೆಂಬೆ2 ರಿಕ್ತಬ್ರಹ್ಮನ ಭಕ್ತರ ನೊಲ್ಲನು ಯುಕ್ತಿಗಳೆಂಬುವ ಮಲ್ಲಿಗೆ ಪಟ್ಟಲಿ ಶಕ್ತಯತೀಂದ್ರನೆ ಅಡಗಿಸಿ ಸರ್ವೋ- ದ್ರಿಕ್ತನ ಗುಣಗಣ ಸಾಧಿಸಿ ನೀ ಮರೆದೇ3 ತೀರ್ಥಕ್ಷೇತ್ರವ ಪಾವನಗೈಯ್ಯಲು ಸುತ್ತುತನೀಡಿದೆ ತೀರ್ಥಪ್ರಬಂಧವನೂ ಪಾರ್ಥಿವ ಮೊರೆಯಿಡೆ ಅಕ್ಷತೆನೀಡುತ ಶತ್ರುಗಳಳಿಸುತ ಪೊರೆದೆಯೊ ಕರುಣಾಳು4 ಅರವತ್ನಾಲ್ಕು ಕಲಾಜ್ಞನೆ ಗುಣನಿಧಿ ಸುರಗಣಗಚ್ಚಿರಿಯೇ ಸರಿ ತವ ಮಹಿಮ ಹರಿಸಿದೆ ಮೃತ್ಯುವ ರಾಜನ ಅಳಿಯಗೆ ಸಿರಿಪತಿ ವ್ಯಾಸರ ಕಂಡೆಯೊ ಪ್ರತ್ಯಕ್ಷ5 ಗುಂಡಕ್ರಿಯೆ ವೈಕುಂಠ ವರ್ಣನೆ ಕಂಡಕಂಡಪದ ಪುಂಜವ ಪಾಡುತಲೀ ಕೂಡದು ಭಾಷಾ ಸಡಗರ ವೆಂಬುದ ಪಂಡಿತನಿಕರಕೆ ತೋರಿದೆ ಯತಿತಿಲಕಾ6 ಜಂಗಮಗರುವನ ಭಂಗಿಸೆ ತವಕದಿ ಇಂಗಿಸಿ ಸಲಹಿದೆ ವಿಪ್ರರ ಕಷ್ಟಗಳ ಗಂಗಾಪಿತ ತ್ರಿವಿಕ್ರಮ ದೇವನ ಮಂಗಳ ಸುರಿಸಲು ಸ್ವಾದಿಲಿ ಸ್ಥಾಪಿಸಿದೆ7 ಗೋಧರ ಹಯಮುಖ ಸಾಕ್ಷಾತ್ತಿ ಎಂಬುವ ಛಂದದಿ ನೀಡಿದ ಓದನವೆಂತೆನೆ ಸಾಧ್ಯವೆ ಶೇಷನು ಪೊಗಳಲು ನಿಮ್ಮನು ಮಂದಿರನವನಿವ ನೆನ್ನುತ ಕೈ ಪಿಡಿಯೋ8 ಇಂದ್ರನ ದೂತರ ತಡೆಯುತ ದಿನತ್ರಯ ಚಂದದಿ ಕುಳಿತೆಯಾ ಬೃಂದಾವನದೊಳಗೆ ಇಂದಿಗು ನೋಳ್ಪರು ಬುಧಜನ ನಿಮ್ಮನು ವೃಂದಾರಕಗಣ ವಂದಿತ ಚರಣಯುಗ9 ಸುಂದರ ಹಯಮುಖ ರಾಮನು ಕೃಷ್ಣನು ವೇದವ್ಯಾಸರು ಹನುಮಾದಿ ತ್ರಯರು ಮಧ್ಯದಿ ಕುಳಿತಿಹ ನಿನ್ನ ಸುನಾಲ್ಕೆಡೆ ನಿಂದಿಹರೆಂಬುದು ಸಿದ್ಧವು ಮಹಮಹಿಮಾ 10 ಬೃಂದಾವನ ಪಂಚದಿ ಹರಿ ತಾನಿಹ ಚಂದದಿ ಸೇವೆಯ ಕೊಳ್ಳುತ ನಿನ್ನಿಂದ ಸುಂದರ ದಶಗಳ ಪಂಚನುರೂಪವ ವಂದಿಸಿ ನೋಡುತ ನೆನೆಯುವೆ ಏನೆಂಬೆ11 ಗಂಗಾಪಿತ ತ್ರಿವಿಕ್ರಮದೇವನ ಹಿಂಗದೆ ನೆನೆಯುವೆ ಲಕ್ಷಾಭರಣವನು ರಂಗಗೆ ನೀಡಿದೆ ನಮ್ಮಯ ಭವವನು ಇಂಗಿಸೆ ಕಷ್ಟವೇ ಗುರುವರ ದಯಮಾಡೋ12 ಜಯಮುನಿ ಹೃದಯದಿ ವಾಯುವಿನಂತರ ಜಯದಿಂ ನಲಿಯುವ ಶ್ರೀಕೃಷ್ಣವಿಠಲನ ದಯದಿಂ ತೊರಿಸು ಭಾವೀಜಯಾಸುತ ಹಯಮುಖ ಕಿಂಕರ ನಮಿಸುವೆ ಭೂಯಿಷ್ಠಾ13
--------------
ಕೃಷ್ಣವಿಠಲದಾಸರು