ಒಟ್ಟು 696 ಕಡೆಗಳಲ್ಲಿ , 86 ದಾಸರು , 603 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರೆ ಇಂದುವದನೇ ಸರಸಿಜಸದನೇ ನಿಂದಿತ ಜನಸೂದನೆ ಪ ವಂದಿಸುವೆನೆ ಅರವಿಂದಗಂಧಿನಿ ಮಂದಿರದಲಿ ಗೋವಿಂದನ ತೋರಿಸೆ ಅ.ಪ. ಮೂಲೋಕಮಾತೆ ವಿಖ್ಯಾತೆ ಕೈವಲ್ಯದಾತೆ ಕಾಲ ದೇಶದಿ ವ್ಯಾಪಿತೆ ಭಜಕರಪ್ರೀತೆ ಶೀಲೆ ಸಂಪೂರ್ಣ ಗುಣವ್ರಾತೇ ಫಾಲನಯನ ತ್ರಿದಶಾಲಯ ಪ್ರಮುಖರ ಪಾಲಿಸುತಿಹೆ ಮಂದಜಾಲಜನಕೆ ರಮೇ ಶ್ರೀಲತಾಂಗಿ ನಿನ್ನಾಳುಗಳೊಳು ಹರಿ ಲೀಲೆಯ ಮನದಲಿ ಅಲೋಚನೆ ಕೊಡೆ 1 ಲೋಕನಾಯಕಿ ಲಕುಮಿ ಶ್ರೀ ಸಾರ್ವ ಭೌಮೆ ಶೋಕರಹಿತ ಸುನಾಮೆ ನಾಕಜವನಧಿ ಸೋಮೆ ದೇವಲಲಾಮೆ ಸಾಕಾರವಂತೆ ಗುಣ ಸÉ್ತೂೀಮೆ ನೀ ಕರುಣಿಸಿ ಅವಲೋಕಿಸಿ ಎನ್ನಯ ಕಾಕುಮತಿಯ ಕಳೆದೇಕಾಂತದಿ ನಿತ್ಯ ಏಕ ಮನದಿ ಹರಿ ಶ್ರೀ ಕರಪದಧ್ಯಾನ ನೀ ಕರುಣಿಸು ನಿರಾಕರಿಸದಲೆ 2 ಜಾತರಹಿತ ಜಯವಂತೆ ದೈತ್ಯಕೃತಾಂತೆ ಸೀತಾಂಶುಕೋಟಿ ಮಿಗೆಕಾಂತೆ ಪಾತಕದೂರೆ ನಿಜಪಂಥೆ ನಿತ್ಯಾ ನಿಶ್ಚಿಂತೆ ನೀತದೂರಾದಿ ಮಧ್ಯಾಂತೆ ಪುರುಹೂತ ಮುಖಾವರ ವ್ರಾತ ವಿನುತೆ ಅತಿಪ್ರೀತಿಯಿಂದಲಿ ನಮ್ಮ ವಾತಜನಕ ಜಗನ್ನಾಥ ವಿಠಲನ ಮಾತು ಮಾತಿಗೆ ನೆನೆವಾತುರ ಮನ ಕೊಡೇ 3
--------------
ಜಗನ್ನಾಥದಾಸರು
ಇಂದಿರೇಶ ನಿನ್ನ ಚರಣದ್ವಂಧ್ವವನ್ನು ಬಿಡೆನೊ ಕರುಣಾ ನೊಂದಿರುವೆನೊ ಮನದಿ ಬಹಳ ಹಿಂದುಮುಂದು ತೋರದಿಹುದು ಬಂಧು ಬಳಗವೆಲ್ಲ ನೀನೆ ಎಂದಿಹೆನೊ ಅರವಿಂದಲೋಚನ ಅ.ಪ ಊರು ಊರು ಸುತ್ತಿ ದಣಿದು ಸಾರರಹಿತ ಶಾಸ್ತ್ರಗಳ ವಿ ಕಾಲ ಕಳೆದೆನೋ ಉದಾರಚರಿತ ಭೂರಿ ಕರಣದಿಂದ ನಿನ್ನ ಚಾರುಚರಣ ಸೇವೆ ರುಚಿಯು ತೋರಿ ಮನಕೆ ಸಂತಸದಿ ಮುರಾರಿ ಎನಗೆ ಗತಿಯೆನುತಲಿ 1 ದುರಿತ ಸ್ತೋಮಗಳಲಿ ಮುಳುಗಿ ಬಳಲಿದೆನೊ ನಿಸ್ಸೀಮ ಮಹಿಮ ನಾಮಸ್ಮರಣ ಮಾತ್ರದಿಂದ ಪಾಮರ ಜನರುಗಳ ಯೋಗ ಕ್ಷೇಮ ವಹಿಸಿ ಪೊರೆಯುವಂಥ ಕಾಮಧೇನು ನೀನೆಂದರಿತು 2 ಮಾತಿನಲ್ಲಿ ಮಲ್ಲರೆಂದು ಖ್ಯಾತಿ ಪಡೆದ ಜನಗಳಿರಲು ಯಾತರವನು ಇವನು ಎನ್ನದಿರು ದೂತ ಪ್ರಸನ್ನನೇ ಸೋತು ವಿವಿಧ ಕಾರ್ಯಗಳಲಿ ಆತುರದಲಿ ನಿನ್ನ ಪರಮ ಪ್ರೀತಿಯ ಪಡೆಯುವುದೇ ದೊಡ್ಡ ನೀತಿಯೆಂದು ಅರಿತು ಸತತ 3
--------------
ವಿದ್ಯಾಪ್ರಸನ್ನತೀರ್ಥರು
ಇಂದಿರೇಶ ಭಾಗವತ ಎಂದು ಬರುವನು ಇಲ್ಲೆ ಮಂದಸೂನನುನಮಗೆ ಮುಂದೆ ಗತಿಯೇನುದ್ಧವಾಒಂದು ಕಾರ್ಯವು ಬಾರದಂದಿನಾದಿಈಶ ಸುರಸುಂದರನು ಪೋದನಲ್ಲೋ ಉದ್ಧವಾ ಪ ಪತಿ ಸುತರ ಪರಿಚರಿಸುತಿಹ ನಮ್ಮಮರುಳು ಮಾಡಿದನುದ್ಧವಾ 1 ತೊರೆದು ಮನೆ ಧನಗಳನೆ ಬರಲು ಬಳಿಯಲಿ ಭಾಳತರಲಿ ಮಾಡಿದನುದ್ಧವಾಅರಿಯಲಿಲ್ಲವೊ ನಾವು ಸಿರಿಯರಸ ಇವನೆಂದುಪರಿಮೋಹಿಸಿದೆವುದ್ಧವಾ 2 ಮರುಗ ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆತುರುಬಿನೊಳಗಿಟ್ಟುದ್ಧವಾಸರಸ ಸೌಂದರ್ಯಕ್ಕೆ ಮರುಳಾದನಿವನೆಂದುಗರುವ ಮಾಡಿದೆವುದ್ಧವಾಅಂತು ನಮ್ಮನು ಬಿಟ್ಟು ಮರೆಯಾಗಿ ರೋಧಿಸಲುಭರದಿ ಬಂದನುದ್ಧವಾ 3 ಕೋಲು ಕುದುರೆಯನೇರಿ ಬಾಲಕರಕೂಡಿ ತಾ ಕೇಳಿ ಮಾಡಿದನುದ್ಧವಾಲೀಲೆ ಚತುರರ ಸದೃಶ ಬಾಲೆಯರಕೂಡಿ ತಾ ಕೋಲನಾಡಿದನುದ್ಧವಾ4 ದಧಿ ಬೆಣ್ಣೆ ನಮ್ಮಾಲಯದೊಳುತಿಂದು ಭಾಳ ಮೋಹಿಸಿದನುದ್ಧವಾ 5 ಗರಳ ಹರಿಸಿನುದ್ಧವಾಉರಿಯ ನುಂಗುತ ಮುಖದಿ ಬೆರಳೊಂದುಹತ್ತೊಂದು ವರುಷ ಇಲ್ಲಿದ್ದುದ್ಧವಾಅರಿಯಲಿಲ್ಲವೊ ನಾವು ಸಿರಿಯರಸ ಇವನೆಂದುಪರಿಮೋಹಿಸಿದೆವುದ್ಧವಾ 6 ಒಂದಿನಾದರೂ ಒಮ್ಮೆ ಮನದಿ ಗೋಕುಲದವರಇಂದು ಸ್ಮರಿಪನೆ ಉದ್ಧವಾಚಂದ್ರ ವದನೇರ ಸ್ನೇಹ ಕೂಡಿ ಪುರದೊಳು ನಮ್ಮನಿಂದು ಮರೆತನೆ ಉದ್ಧವಾ 7 ಬಂದು ಬಳಗವ ಬಿಟ್ಟು ಮಧುರೆಗೆಲ್ಲರುನಿನ್ನ ಹಿಂದೆ ಬರುವೆವೊ ಉದ್ಧವಾಕಂದರ್ಪ ಪಿತನಿವನ ಸ್ಮರಿಸುತಲೆ ದೇಹದಿಪ್ರಾಣವೊಂದೇ ಉಳಿದಿಹುದುದ್ಧವಾ8 ಪರಮ ವೈಕುಂಠನು ಸರತಿಯಲೆ ತೋರಿಸುತಮರುಳು ಮಾಡಿದನುದ್ಧವಾಗಿರಿಗಿರಿ ಝರಿಯೊಳಗೆ ಚರಿಸಿ ಚಿನ್ನದ ಚರಯಗುರುತು ಮಾಡಿದನುದ್ಧವಾಅರಿಯಲಿಲ್ಲವೋ ಸಿರಿಯರಸ ಇವನೆಂದುಪರಿಮೋಹಿಸಿದೆವುದ್ಧವಾ 9
--------------
ಇಂದಿರೇಶರು
ಇಂದು ಗುರುಪೂಜಿ ಮಾಡುವ ನಿಂದು ಮನದೊಳು ಹರುಷಪಡುವ ಧ್ರುವ ತಂದೆ ಸದ್ಗುರುಸೇವೆ ಮಾಡುವ ಬಂದ ಜನ್ಮದ ಹಾದಿ ಬಿಡುವ ಪಥ ಬ್ಯಾಗೆ ಹಿಡುವ ಹೊಂದಿ ಸದ್ಗತಿ ಮುಕ್ತಿ ಕೊಡುವ 1 ಬಂದು ಸಾರ್ಥಕ ಮಾಡುವ ಪಾದ ನೋಡುವ ತಂದು ರತಿಪ್ರೇಮ ನೀಡುವ ಒಂದು ನಾಮ ನಿಶ್ಚಯವಿಡುವ 2 ಒಂದು ಮನದಿ ಪೂಜಿಮಾಡುವ ಎಂದು ಬಿಡದೆ ನಾಮವ ಕೊಂಡಾಡುವ ಇಂದು ನಲಿನಲಿದಾಡುವ ಕಂದ ಮಹಿಪತಿಸ್ವಾಮಿ ನೋಡುವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಂದ ಕಂದ ಮುಕ್ಕುಂದನಾ| ಬಂದು ವದಗಿಹ ಬಹಳ ಪುಣ್ಯದಿ ಛಂದವಾಯಿತು ಚಲುವನಂಘ್ರಿಯ ಪ ಬಲಿಗೆ ಭೂಮಿಯ ಬೇಡಿ ಹೆಜ್ಜೆಯಾ| ಅಳತೆಯರಡಲಿ ಅಡಗಿಸಿ| ನಳಿನ ಜಾಂಡಕ ಸಖವ ಸೋಂಕಿಸಿ| ಸುರನದಿ ಪಡೆದ ನಂಘ್ರಿಯಾ 1 ಶಿಲೆಯು ಆಗಿರೆ ಶಾಪದಲಿ ಸೋಂ| ಕಲು ನಿಜಾಂಗದ ಕಾಣಿಸಿ| ನಲಿದು ಕಾಳೀಂದಿಯೊಳುರುಗನಾ| ತಲೆಯಳಾಟದಿ ತುಳಿದ ನಂಘ್ರಿಯಾ 2 ಮುನಿಜನ ಹೃದಯ ಮನೆಯ ದೀಪವು| ಯನಿಪ ಶ್ರೀದೇವಿ ಯರಸನಾ| ಮನದಿಗುರುವರ ಮಹಿಪತಿ ಪ್ರಭು| ನೆನೆವವರೊಳಗೆ ನೆಲೆಸಿಹನ ಪದ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ನೋಡಿದೆ ನಂದಕರ ಯೋ- ಗೀಂದ್ರ ವಂದಿತ ಚರಣನಾ ಪ ವಂದನೀಯ ಶುಭೋರು ಗುಣ ಗಣ ಸಾಂದ್ರಗುರುರಾಘವೇಂದ್ರನಾ ಅ.ಪ ವೇದತತಿ ಶತಮೋದಗಿತ್ತ(ನ) - ಆದಿ ಮತ್ಸ್ಯನ ತೆರದಲಿ ವೇದವಾದವ ಶೋಧಮಾಡಿ ಮೇದಿನೀಸುರಗಿತ್ತನಾ 1 ಕಮಠರೂಪದಲಮರ - ತತಿಗೆ ಅಮೃತ ನೀಡಿದ - ತೆರದಲಿ ಸ್ವಮತ ಸುಧೆಯನು ಪ್ರಮಿತಗಿತ್ತಿಹ ಅಮಿತ ಸುಮಹಾಮಹಿಮನ 2 ಧರಣಿಮಂಡಲ ಧುರುದಿ ದಾಡಿಲಿ ಧರಿಸಿ ತಂದನ ತೆರದಲಿ ಧರಣಿ - ಜನರಿಗೆ ಧರೆಯ ಮೊದಲಾದ ಪರಮಭೀಷ್ಟೆಯನಿತ್ತು ಪೊರೆವನ 3 ತರುಳಪಾಲನ ತೆರದಲಿ ದುರಿತರಾಶಿಯ ತರಿದು ತನ್ನಯ ಶರಣಜನಪರಿಪಾಲನ 4 ಬಲಿಯ ಯಙ್ಞದÀ ಸ್ಥಳದಿ ಭೂಮಿಯ ನಳೆದರೂಪನÀತೆರದಲಿ ಖಳರ ವಂಚಕÀ ತನ್ನ ತಿಳಿವಗೆ ಸುಲಭದಿಂದಲಿ ಒಲಿವನ 5 ಕೆಟ್ಟರೋಗವು ಶ್ರೇಷ್ಠಭೂತದ ಅಟ್ಟುಳಿಯನೆ ಕಳೆವನ 6 ಜನಕನಾಜ್ಞದಿ ವನವ ಚರಿಸಿದ ಇನಕುಲೇಶನ ತೆರದಲಿ ಜನರಿಗೀಪ್ಸಿತ ತನಯ ಮೊದಲಾದ ಮನದಪೇಕ್ಷೆಯ ನೀಡೊನ 7 ಕನಲಿ ದ್ರೌಪದಿ ನೆನೆಸಲಾಕೆಯ ಕ್ಷಣಕೆ ಬಂದನ ತೆರದಲಿ ಮನದಿ ತನ್ನನು ನೆನೆವ ಜನರನು ಜನುಮ ಜನುಮದಿ ಪೊರೆವನ 8 ಮುದ್ದು ಸತಿಯರ ಬುದ್ಧಿ ಕೆಡಿಸಿ(ದ) ಗೆದ್ದು - ಬಂದನ ತೆರದಲಿ ಮದ್ದು ಮತಿಯನು ತಿದ್ದಿ ಭಕುತಗೆ ಶುದ್ಧ ಙÁ್ಞನವ ನೀಡೊನ 9 ಕಂಟಕ ಕಲಿಯವೈರಿ ಕಲಿಕಿರೂಪನ ತೆರದಲಿ ಹುಳುಕು ಮನವನು ಕಳೆದು ತನ್ನಲಿ ಹೊಳೆವ ಮನವನು ಕೊಡುವನಾ 10 ನೀತ ಗುರುಜಗನ್ನಾಥ ವಿಠಲ ಭೂತಳಕ್ಕಧಿನಾಥನು ಆತನಂತ್ಯತಿನಾಥ ಜಗಕೆ ಪ್ರೀತಿಶುಭಫಲದಾತನ 11
--------------
ಗುರುಜಗನ್ನಾಥದಾಸರು
ಇದು ಮುಖ್ಯಸಾರ ಮನುಜರಿಗೆ ಪ ಇದು ಮುಖ್ಯಸಾರವೆಂದೊದರುತಿಹುದು ವೇದ ಸದುಮಲಾತ್ಮಕನಾದ ಪದುಮಾಕ್ಷನಲಿ ಭಕ್ತಿ ಅ.ಪ ಕೇಳಿಪೇಳುತಮನದಿ ತಾಳಿ ಸೇವಿಸಿ ಪೂಜಿ- ಸೋಲಾಡುತೊಂದಿಸಿ ಕಾಲವ ಕಳೆಯುವ 1 ದಾಸ್ಯಸಖ್ಯಾತ್ಮನಿವೇದನಗಳಿಂದ ಆ- ಲಸ್ಯವಿಲ್ಲದೆ ಪರಮಾತ್ಮನ ತಿಳಿಯುವ 2 ತೃಟಿಕಾಲವಾದರು ನಟಿಸದೆ ಮಾಯದಿಹಟದಿ ಶ್ರೀಗುರುರಾಮವಿಠಲನ ಭಜಿಸುವ 3
--------------
ಗುರುರಾಮವಿಠಲ
ಇಂದು ವನಜದಳಾಂಬಕ ದೊರೆಯ ಪ. ಕನಸಿನಲೆ ಕಂಡೆನು ಮನಸಿಜನಯ್ಯನ ದನುಜಸಂಕುಲವನೆಲ್ಲವ ಕ್ಷಣದಿಸವರಿದ ಕಡುಗಲಿರಾಮನ ಅ.ಪ. ವರ ರನ್ನಹಾರ ಕಿರೀಟ ಕೋಟಿತರಣಿಸನ್ನಿಭಸಂಕಾಶ ಕೌಸ್ತುಭ ಶ್ರೀವತ್ಸ ಲಾಂಚಿತವಕ್ಷ | ಕೊರಳೊಳು ಧರಿಸಿರ್ಪ ವರರತ್ನ ಹಾರಂಗಳ್ | ತರುಣಿ ಶ್ರೀ ತುಳಸೀ ವನಮಾಲೆಯಿಂದೊಲಿಯಲ್ | ಪರಮ ಮಂಗಳಮೂರ್ತಿವರದ ಹಸ್ತವನೆತ್ತಿ | ಶರಣಜನ ಮೋಹಿಪ ದುರುಳ ರಕ್ಕಸರ ಬೇರಸವರಿದ ಪಾರಕೀರ್ತಿ | ಅರಿತೆನಾ ತರಳ ಪ್ರಹ್ಲಾದನಂ ಪೊರೆದ ಕರುಣಾಮೂರ್ತಿ 1 ವೇದಪಾರಾಯಣಗೈವ ವರದ್ವಾದಶನಾಮದಿ ಮೆರೆವ ಕೀರ್ತನದಿಂ ಮೈಮರೆವ | ಸಾಧುಸಜ್ಜನವೃಂದ ಭಕ್ತಿಭಾವದಿ ಕೈಕಟ್ಟಿ | ಶ್ರೀಧರಾಚ್ಯುತ ಪಾದ ಸಮ್ಮುಖದಿ ನಿಂದು ಭಜಿಪರ ಪರಮಾದರದೆನೋಡಿ | ಶ್ರೀದೇವಿ ಕೆಲದೋಳ್ ನೆಲಸಿರಲ್ ಮನದಿ ಸಂತಸವು ಮೂಡಿ | ಸಾದರದಿ ಕರೆದಾದರಿಸಿ ಕಾಂಕ್ಷಿತಾರ್ಥವನೀಡಿ | ಮೋದಗೊಳ್ಳುತಿಹ ಶ್ರೀಧರನ ಕಂಡು ಮೈಮರೆದೆನೇನಿವನ ನೋಡಿ 2 ಕನಕಖಚಿತ ರತ್ನಮಂಟಪದ ಮಧ್ಯೆ | ಮಿನುಗುವ ಮಣಿಪೀಠದಿ ವೈದೇಹಿ | ವನಜಾಕ್ಷಿ ಕುಳಿತಿರಲು ಕೆಲದೊಳ್ ಮರುತಾತ್ಮಜ | [ನುನಮಿಸ] (ರ)ಲು ಪರಮಸಂಭ್ರಮದಿ ಸೋದರರು ಸಂಸೇವಿಸೆ | [ವÀನ] ತರಣಿಸುತ ಸಪರಿವಾರ ಸಂಭ್ರಮಿಸೆ, ಶರಣ ವಿಭೀಷ | ಣನು ಜಯಘೋಷವೆಬ್ಬಿಸೆ ವರವಸಿಷ್ಟಾದೈಖಿಲ | ಮುನಿವರ ರಾಶೀರ್ವಚಿಸೆ ಸರಸವಚನವೆರಸಿ ರಘುವರ ವರನೆ ತಾನೆಂದು ತೋರೆ 3
--------------
ನಂಜನಗೂಡು ತಿರುಮಲಾಂಬಾ
ಇದೇ ಪರಮಾರ್ಥ ಪ್ರಾಪ್ತಿಗೆ ಸೋಪಾನ ತಿಳಿ ಇದರಲ್ಲಿ ಬೇಡಿನ್ನು ಅನುಮಾನ ಇದೇ ಬಕುತಿಮಾರ್ಗವೇ ಸುಲಭ ಸೋಪಾನ ತಿಳಿ ವೈರಾಗ್ಯಜ್ಞಾನಾದಿಗಳ ತಾಣಾ ಪ ಸಂಸಾರದೊಳಗಿರ್ದ ಜೀವಂಗೆ ಸುಖದುಃಖದಿ ಬಳಲುವ ಮನುಜಂಗೆ ಕಂಸಾರಿ ಶ್ರೀ ಕೃಷ್ಣನಾಮವೊಂದೇ ಪಾಪ ಸಂಹಾರಿ ಪರಶಿವನಾಮವೊಂದೇ ಈ ಸಂಸಾರ ದಾಂಟುವಾ ನಿಜತಾಣಾ1 ನಿಷ್ಕಾಮ ಮನದಿಂದ ಭಜಿಸಲ್ಕೆ ಬಹು ದುಷ್ಕರ್ಮ ಫಲವೆಲ್ಲ ತೊಲಗಲ್ಕೆ ಶ್ರೇಷ್ಠ ವೈರಾಗ್ಯವು ನೆಲೆಸಲ್ಕೆ ಬಲು ಜಿಜ್ಞಾಸೆ ಮನದಲ್ಲಿ ಜನಿಸಲ್ಕೆ ಈ ಪರಮಾತ್ಮಧ್ಯಾನ ಮಹಾಸಾಧನಾ 2 ಆತ್ಮಜ್ಞಾನದ ಬೋಧನೆಗೊಂಡು ಪರಮಾತ್ಮನ ರೂಪವೆ ತಾನೆಂದೂ ಬರಿ ತೋರ್ಕೆ ಜಗವೆಲ್ಲ ಪುಸಿ ಎಂದೂ ಪರಮಾತ್ಮನೆ ನಿತ್ಯನು ನಿಜವೆಂದೂ ಪರಜ್ಞಾನವ ನೀಡಲ್ಕೆ ಈ ಸಾಧನ 3 ಪರಮಾರ್ಥನುಭವಿಗಳ ಸಂಗ ನೆರೆದೊರಕುತಲಿರುತಿರೆ ಭವಭಂಗ ವರ ಭಕ್ತಿ ಮಾರ್ಗದಿ ದೊರಕುವದೆಂದ ಇದೆ ಪರಮಾರ್ಥ ಪ್ರಾಪ್ತಿಗೆ ಮೂಲವೆಂದ ಇದೆ ಗುರುಶಂಕರಾನಂದಕೃಪೆಯಿಂದ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ಹೌದು ಭವತರಿಯುವ ಶಸ್ತ್ರ ಪದೇ ಪದೇ ಸಿರಿವರನ ಸ್ತೋತ್ರ ಪ ಅಧಮಮತಿಯ ಬಿಟ್ಟು ಸದಮಲ ಮನದಿಂ ವಿಧವಿಧ ಹರಿಯೆಂದೊದುರುತ ಕಾಣುವುದೆ ಅ.ಪ ದಾನಧರ್ಮಯಜ್ಞ ಇವು ಯಾಕೊ ಸ್ನಾನ ಮೌನ ಜಪ ಮತ್ತ್ಯಾಕೊ ನಾನಾ ಮಂತ್ರ ತಂತ್ರ ಗೋಜ್ಯಾಕೆಬೇಕೊ ಕ್ಷೋಣಿ ತಿರುಗಿ ಬಹು ದಣಿಲ್ಯಾಕೊ ನಾನಾಪರಿಯಲಿಂದ ದೀನದಯಾಪರ ಗಾನಲೋಲನ ಭಜನಾನಂದ ಪಡೆವುದೆ1 ವೇದಪುರಾಣ ಪುಣ್ಯ ಶಾಸ್ತ್ರಗಳ್ಯಾತಕೊ ಸಾಧನಸಿದ್ಧಿಗಳ ಬಲವ್ಯಾಕೋ ಭೇಧಯೋಗದ ಬಹು ಬೋಧಗಳ್ಯಾತಕೊ ಓದಿಓದಿ ದಿನಗಳಿಲ್ಯಾಕೊ ವೇದಗಮ್ಯದಾದಿ ಮೂರುತಿ ಶ್ರೀ ಪಾದವರಿತು ಆರಾಧಿಸುತಿರುವುದೆ 2 ಕಾಶಿ ಕಂಚಿ ಕಾಳಹಸ್ತಿ ತಿರುಗಲ್ಯಾಕೊ ಸಾಸಿರದೈವಕೆ ಬಾಗುವುದ್ಯಾಕೊ ಮಾಸಪಕ್ಷ ವ್ರತ ನೇಮಗಳ್ಯಾತಕೊ ಘಾಸಿಯಾಗಿ ದೇಹ ದಂಡಿಸಲ್ಯಾಕೊ ಶೇಷಶಯನ ನಮ್ಮ ಶ್ರೀಶ ಶ್ರೀರಾಮನ ಲೇಸಾದ ನಾಮವೊಂದೆ ಧ್ಯಾಸದಿಟ್ಟು ನುಡಿ 3
--------------
ರಾಮದಾಸರು
ಇವನೆ ಪ್ರಹ್ಲಾದನಿಂದಲಿ ಉಪಾಸ್ಯ ಪವಮಾನ ಪಿತ ಭಕ್ತವರದ ಲಕ್ಷ್ಮೀಶ ಪ. ವಲಯಕಾರದಿ ಶೇಷ ಛತ್ತರಿಯಾಗಿ ಹಲ ಮುಸಲ ಧರಿಸಿ ಎಡದಲಿ ವಾರುಣೀ ಬಲದಲ್ಲಿ ಶಂಬುಕ ವರ್ಣನೆಂಬ ಪುತ್ರನ ಸಹಿತ ನಲಿದು ಸೇರಿಸೆ ಇಂಥ ಆಸನದಿ ಕುಳಿತಾ 1 ಯೋಗಾಸನವನ್ಹಾಕಿ ಎಡತೊಡೆಯ ಮೇಲ್ ಸಿರಿಯು ಆಗಮನುತ ಬಲದ ತೊಡೆಯಲ್ಲಿ ವಾಯು ಭೋಗ ರೂಪನು ಸರ್ವ ಆಭರಣ ಶೃಂಗಾರ ಸಾಗರಾತ್ಮಜೆ ಪತಿಯು ಧರಿಸಿ ಮೆರೆವಂಥಾ2 ಶಿರದಿ ನವರತ್ನ ಮಕುಟವು ಫಣೆಯು ತಿಲಕವೂ ಕರ್ಣ ಕುಂಡಲವೂ ನಾಸಿಕ ಗಲ್ಲ ತೆರದ ಬಾಯ್‍ದಾಡೆಗಳು ದುರುಳರಿಗೆ ಘೋರ ವರಭಕ್ತರಿಗೆ ಅಭಯ 3 ಕಂಠ ಕೌಸ್ತುಭಮಣಿಯು ಶ್ರೀವತ್ಸ ತುಳಸಿ ಸರ ವೈಜಯಂತಿ ಹಾರಾ ಕರ ಶಂಖ ಚಕ್ರವು ಪದ್ಮ ಗದೆ ಅಭಯ ವಂಟಿ ಕರಶಿರಿ ಭುಜದಿ ದ್ವಯ ಯೋಗ ಚಿಹ್ನೆ 4 ಉರ ಉದರ ಶೃಂಗಾರ ಅರವಿಂದ ಪೊಕ್ಕಳಲಿ ಬ್ರಹ್ಮ ಮೆರೆಯೇ ಮಿರುಗುವೋ ಮಕುಟ ಉಟ್ಟಿರುವ ನಡು ಕಿರುಗೆಜ್ಜೆ ಕರಿಸೊಂಡಲಿನ ತೊಡೆಯು ಸುರವರದ ಚರಣಾ5 ಚರಣದಾಭರಣ ಸಾಲ್ಯೆರಳನಖ ಕಾಂತಿಗಳು ಪಾದ ಪದುಮಾ ಮೃಗ ಮುಖವು ನರಮೃಗಾಕೃತಿರೂಪ ತರಳ ಪ್ರಹ್ಲಾದನಲಿ ಕರುಣಾರ್ದ ದೃಷ್ಟಿ 6 ಎಡತೊಡೆಯಲಿ ಸಿರಿಯು ಬಲಕರದಿ ಪದುಮವ ಪಿಡಿದು ಎಡತೊಡೆಯ ಮೇಲೆ ಮದನನ ಕುಳ್ಳಿರಿಸುತಾ ಮದನ ಇರಿಸಿ ಹೂ ಬಾಣವನು ಪಿಡಿದು ರತಿ ಪದುಮ ಕರದಿಂದ ಶೋಭಿಸಲೂ 7 ಹರಿಗೆ ಬಲತೊಡೆಯಲಿದ್ದಂಥ ವಾಯುವು ತನ್ನ ಅರಸಿ ಭಾರತಿಯ ಎಡತೊಡೆಯಲಿಟ್ಟೂ ತರಳ ವಿಷ್ವಕ್ಸೇನನನು ಬಲದ ತೊಡೆಯಲ್ಲಿ ಇರಿಸಿಕೊಂಡತುಲ ಸಂತಸದಿಂದ ಮೆರೆಯೇ 8 ಚತುರ ಹಸ್ತನು ವಾಯು ಎಡಗೈಲಿ ಪಿಡಿದು ಗದೆ ಹಿತದಿ ಬಲಗೈಯ್ಯ ಭಕ್ತರಿಗಭಯ ತೋರ್ವ ಅತಿಭಕ್ತಿಯಿಂದುಭಯಕರ ಅಂಜಲಿಯ ಮಾಡಿ ಪತಿ ಭಿಕ್ಷೆ ಬೇಡುವಾ9 ನಾಭಿಯಲಿ ಬ್ರಹ್ಮ ಉದ್ಭವಿಸಿ ಹಸ್ತದಿ ವೇದ ಶೋಭಿಸಲು ಎಡತೊಡೆಯ ಮೇಲೆ ವಾಣೀ ಆಭರಣ ಶೃಂಗರದಿ ವೀಣೆ ಪುಸ್ತಕ ಧರಿಸಿ ವೈಭವದಿ ದೇವ ಮುನಿ ಎಡೆ ತೊಡೆಯೊಳಿರಲೂ10 ಬ್ರಹ್ಮ ಬಲತೊಡೆಯಲ್ಲಿ ಪಂಚಮುಖ ರುದ್ರನ್ನ ಸುಮ್ಮಾನದಿಂದ ಕುಳ್ಳಿರಿಸಿಕೊಂಡಿರಲೂ ಬ್ರಹ್ಮಸುತ ಕರದಿ ಆಯುಧ ಗೌರಿ ಎಡದಲ್ಲಿ ಷಣ್ಮುಖನ ಬಲ ತೊಡೆಯಲ್ಲಿಟ್ಟು ಮೆರೆಯೇ 11 ಗೌರಿಗಣಪನ ತನ್ನ ತೊಡೆಯೊಳಿಟ್ಟಿರಲು ಈ ರೀತಿಯಿಂದ ಪರಿವಾರ ಸಹಿತಾ ಶೌರಿ ಮೆರೆಯುವ ದಿವ್ಯ ಅದ್ಭುತಾಕೃತಿ ನೃಹರಿ ಪತಿ ಮನದಿ ತೊರೆ ಭಕ್ತರಿಗೆ 12 ಕಾಲನಾಮಕ ಗರುಡ ಬಾಲೆ ಸೌಪರ್ಣಿ ಲೀಲೆಯಿಂದಲಿ ಕೂಡಿ ಸಮ್ಮುಖದಿ ನಿಂದೂ ಓಲಗವ ಕೊಡುತ ಹರಿಗನುಕೂಲನಾಗಿರುವ ಲೀಲ ಮಾನುಷ ಇಂಥ ವೈಭವದಿ ಮೆರೆವಾ13 ಇಂತೆಸೆವ ಹರಿ ಎದುರು ನಿಂತು ಪ್ರಹ್ಲಾದ ಗುಣ ವಂತೆ ಸಾಧ್ವೀ ಸಾಧುಮತಿ ಸತಿಯ ಸಹಿತಾ ಅಂತರಂಗದಿ ಚಿಂತಿಸುತ ಅಂಜಲಿಯ ಕರದಿ ಶಾಂತಮನದಲಿ ಸುಖಿಸಿ ಆನಂದಿಸುವನೂ14 ವರಭಕ್ತ ಪ್ರಹ್ಲಾದ ವರದನ್ನ ಈ ರೂಪ ನರರು ಚಿಂತಿಸಲಳವೆ ಚರಿಪ ಭಕ್ತಿಯಲೀ ಪರಮ ಉತ್ಸಾರಕರನೊಂದೊಂದು ಅಂಶದಲಿ ವರ ಭಕ್ತರಲಿ ನೆಲಸೆ ಚಿಂತನೆಗೆ ನಿಲುವಾ 15 ಪರಿವಾರ ಆಭರಣ ಆಯುಧಗಳಿಂ ಮೆರೆವ ನರಹರಿಯ ಈ ರೂಪ ನಿರುತ ಸ್ಮರಿಸೇ ಗುರುವರದ ಕರಿಗಿರೀ ಯೋಗ ಭೋಗಾ ನೃಹರಿ ಕರುಣಿಸುವ ಮುಕ್ತಿ ಗೋಪಾಲಕೃಷ್ಣವಿಠಲಾ16
--------------
ಅಂಬಾಬಾಯಿ
ಇಷ್ಟುದಯ ಮಾಡಿದ್ದೆ ಅತಿ ಸೋಜಿಗ ಶೀಷ್ಟೇಷ್ಟದಾತ ಭ್ರಷ್ಟಮಾನವನಲ್ಲಿ ಪ. ಉದಯಕಾಲದಲೆದ್ದು ಪದುಮಸಂಭವ ಪಿತನ ವದನದಲಿ ನೆನೆಯದಲೆ ಮಾನುನಿಯರ ಚದುರತೆಗೆ ಮೆಚ್ಚುತಲೆ ಉದರ ಪೊರೆದನ ಮೇಲೆ ಚದುರ ಶ್ರೀಕೃಷ್ಣ ಬದಿಗನಾಗಿದ್ದು 1 ಕರುಣಾಸಮುದ್ರನ ಸ್ಮರಣೆ ಸಾಲದೆ ಎಂಬ ಪರಮ ಗುರುಗಳ ವಚನ ಮರೆತು ನಿನ್ನ ಸ್ಮರಿಸದೆಲೆ ನಿರುತದಿ ಪರರ ಬಾಗಿಲಿಗ್ಹೋಗಿ ಚರಣ ಧಣಿವುತ ಮನದಿ ಮರುಗಿದೆನೋ ಕೃಷ್ಣಾ 2 ಇನ್ನಾದರೆನಮನದಿ ಪನ್ನಗಾದ್ರಿನಿವಾಸ ನಿನ್ನ ಸ್ಮರಣೆಯ ಕೊಟ್ಟು ಮನ್ನಿಸೆನ್ನ ಘನ್ನ ಅಪರಾಧಗಳ ವರ್ಣಿಸಲಳವಲ್ಲ ಚೆನ್ನಿಗ ಶ್ರೀ ಶ್ರೀನಿವಾಸ ಘನ್ನ ಸಂಪನ್ನ ಸರಿಯಾರೋ 3
--------------
ಸರಸ್ವತಿ ಬಾಯಿ
ಈ ತನು ನೀನಲ್ಲಾ ನೀನಲ್ಲಾ |ತನುವಿನ ಗುಣವು ಇದುವೆ ಎಲ್ಲಾ ಪ ರೂಪಕ ಬಂದಿತು ಸ್ಥೂಲ ಸೂಕ್ಷ್ಮ |ರೂಪವು ಒಂದೇ ಬೀಜದ ಮೂಲಾ 1 ಕಾರಣ ದೇಹದೊಳಗೆ ಒಂದೇ | ಮಹಾ ಕಾರಣದಲಿ ನೋಡಿಂದೇ 2 ತನುಮನ ಧರ್ಮದ ಜ್ಞಾನವ ಬಿಟ್ಟು |ಉನ್ಮನದಿ ನೀ ಲಕ್ಷಿಸು ಲಕ್ಷಿಟ್ಟು 3 ತನುಮನ ಕರಣಗಳ್ ನಿನಗೆ ಬ್ಯಾರೆ |ತನುಮನ ನಿನಗಿಹುದೆಂದೆನಲಾರೆ 4 ಗುರುಭವತಾರಕ ದೇವನು ಒಲಿದರೆ |ತೋರುವನರಿವಿನ ನಿಜ ಭಾವಾ 5
--------------
ಭಾವತರಕರು
ಈ ಧರೆಯೊಳಗಿಂಥಾ ಸೊಬಗ ಕಾಣೆನೋ ಪ ಕಂತುಪಿತ ತನ್ನ ಕಾಂತೇಯರೊಡಗೂಡಿ | ನಿಂತು ಮಜ್ಜನಗೊಂಡು ಸಂತಸವಾಂತಪರಿಅ.ಪ ನಂದಾವ್ರಜದಿ ಇಂದ್ರನೂ | ಕುಪಿತನಾಗಿ | ಅಂಧವೃಷ್ಟಿಯ ಕರೆಯಲು | ಸಿಂಧೂಶಯನ ಗಿರಿಯ | ಮಂದಹಾಸದಿ ನೆಗಹಿ | ಸುಂದರ ಗೋವ್ಗಳನೆ | ಚೆಂದಾದಿಂದಲೆ ಪೊರೆಯೆ | ಅಂದು ತೋರಿದುಪಕೃತಿಯ ನೆನೆದು ಗೋ | ವೃಂದಗಳೈ | ತಂದಿಂದಿರೆಯರಸಗೆ | ಮಿಂದು ಮಧುರಕ್ಷೀರಧಾರೆಯ ಕರೆಯಲು | ನಂದಕುವರಾನಂದವ ಬೀರಿದ 1 ಕಿರಿಯರೊಡನೆ ಕೂಡುತ | ಗೋಪಾಲನು | ಮುರಲಿನಾದವ ಗೈಯುತ | ಹರಿಣಾಕ್ಷಿಯರಮನೆ | ಹರುಷದಿಂದಲೇ ಪೊಕ್ಕು | ಪರಿಪರಿ ಲೀಲೆಯಿಂ | ಬೆರಗು ಮಾಡುತಲಿರೆ | ವರ ಧದಿಘೃತ ಭಾಂಡಗಳನೊಡೆದು | ಯದುವರನಾಲೈಸುತ ಬರುವರ ಸುಳಿವನು | ಸರಸದಿ ಕಂಡಾಕ್ಷಣದಿಂದೋಡಲು | ಸುರಿದುದು ಶಿರದಲಿ ದಧೀಘೃತಧಾರೆಯು 2 ಕರುಣಾಸಾಗರ ಹರಿಯು | ಮೋಹದಿ ವರ | ಭೈಷ್ಮಿಭಾಮೇರ ಕೂಡುತಾ | ಭರದಿ ಕುಣಿಯಲವರ ಶಿರದಿ ಮುಡಿದ ಸುರಗೀ | ಅರಳುಮಲ್ಲಿಗೆಯೊಳು | ಸೆರೆಬಿದ್ದ ಮಧುಪಗಳ | ನೆರೆದು ಝೇಂಕರಿಸುತ | ಹರುಷದಿ ಸುರಿಸಲು ಸುರ ಸಂದೋಹವು | ಪರಿ 3 ಅಂಗಳದೊಳು ಆಡುತ | ಮಂಗಳಮೂರ್ತಿ | ಸಂಗಡಿಗರ ಸೇರುತಾ | ಮುಂಗುರುಳ್ಗಳ ಮೇಲೆ | ಕೆಂದೂಳಿಯನೇ ಧರಿಸಿ | ಗೋಪಿ ರಂಗನ್ನಪ್ಪಿದಳು ಮುದದೀ || ಅಂಗನೆ ರುಕ್ಮಿಣಿ ಭಂಗಿಯ ನೋಡಲು | ಅಂಗಜ ಪಿತನನು | ಪಿಂಗದೆ ಬೇಡಲು | ಮಂಗಳಾಂಗಿ ಮನದಿಷ್ಟವ ಸಲಿಸಲು | ಸಿಂಗರಗೊಂಡನು | ಸಕ್ಕರೆ ಸುರಿಸುತೆ 4 ಸುರನದೀ ಜನಕ ತಾನೂ | ಕುಂಜವನದಿ | ಸರಸಿಜಾಕ್ಷೇರ ಕೂಡುತ | ಸರಸವಾಡುತಲಿರೇ | ಪರಮ ಸಂತೋಷದಿ | ತರುಲತೆಗಳು ಹರಿಯ ಚರಣ ಸೇವೆಯಗೈಯ್ದು | ಕದಳಿಗಳುದುರಿಸೆ | ಗಳಿತ ಫಲಂಗಳು | ಸರಸಿಜನಾಭನು ಕರುಣಿಸಿ ಭಕುತರ | ಶಿರಿಯಾಳಪುರದೊಳು ಮೆರೆದನು ವಿಭವದಿ 5 ವ್ಯಾಸರಾಜರ ಪೀಠದೀ | ರಂಜಿಪ ಲಕ್ಷ್ಮೀಶತೀರ್ಥರಿಂ ಸೇವಿಪ ಭವ | ಪರಿಪರಿ ನರಳುವ ದಾಸರ ಸಲಹಲಿನ್ನು | ಸಾಸಿರ ಶಂಖದಿ ಪೂಜೆಯಗೊಳುತಿರೆ | ದೇಶದೇಶದ ಜನರಾಲಿಸಿ ಬರುತಿರೆ | ಶ್ರೀಶಕೇಶವ ತನ್ನ ಮಹಿಮೆಯ ತೋರಿದ 6
--------------
ಶ್ರೀಶ ಕೇಶವದಾಸರು
ಉತ್ಥಾನ ದ್ವಾದಶಿಯ ದಿವಸ (ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ) ರಂಭೆ ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ. ಮಾನಿನೀಮಣಿ ಈತನ್ಯಾರೆ ಕರು ಣಾನಿಧಿಯಂತಿಹ ನೀರೆ ಹಾ ಹಾ ಭಾನುಸಹಸ್ರ ಸಮಾನಭಾಷಿತ ಮ- ಹಾನುಭಾವನು ಸುಪ್ರವೀಣನಾಗಿಹ ಕಾಣೆ 1 ಭಯಭಕ್ತಿಯಿಂದಾಶ್ರಿತರು ಕಾಣಿ- ಕೆಯನಿತ್ತು ನುತಿಸಿ ಪಾಡಿದರು ನಿರಾ- ಮಯ ನೀನೇ ಗತಿಯೆಂದೆಲ್ಲವರು ಹಾ ಹಾ ಭಯನಿವಾರಣ ಜಯ ಜಯವೆಂದು ನುತಿಸೆ ನಿ- ರ್ಭಯ ಹಸ್ತ ತೋರುತ ದಯಮಾಡಿ ಪೊರಟನೆ2 ಭೂರಿ ವಿಪ್ರರ ವೇದ ಘೋಷದಿಂದ ಸ್ವಾರಿಗೆ ಪೊರಟ ವಿಲಾಸ ಕೌಸ್ತು- ಚಾರುಕಿರೀಟಕೇಯೂರಪದಕಮುಕ್ತಾ ಹಾರಾಲಂಕಾರ ಶೃಂಗಾರನಾಗಿರುವನು3 ಸೀಗುರಿ ಛತ್ರ ಚಾಮರದ ಸಮ ವಾಗಿ ನಿಂದಿರುವ ತೋರಣದ ರಾಜ ಭೋಗ ನಿಶಾನಿಯ ಬಿರುದ ಹಾ ಹಾ ಮಾಗಧ ಸೂತ ಮುಖ್ಯಾದಿ ಪಾಠಕರ ಸ- ರಾಗ ಕೈವಾರದಿ ಸಾಗಿ ಬರುವ ಕಾಣೆ4 ಮುಂದಣದಲಿ ಶೋಭಿಸುವ ಜನ ಸಂದಣಿಗಳ ಮಧ್ಯೆ ಮೆರೆವ ತಾರಾ ವೃಂದೇಂದುವಂತೆ ಕಾಣಿಸುವ ಹಾಹಾ ಕುಂದಣ ಖಚಿತವಾದಂದಣವೇರಿ ಸಾ- ನಂದದಿ ಬರುವನು ಮಂದಹಾಸವ ಬೀರಿ5 ತಾಳ ಮೃದಂಗದ ರವದಿ ಶ್ರುತಿ ವಾಲಗ ಭೇರಿ ರಭಸದಿ ಜನ ಜಾಲ ಕೂಡಿರುವ ಮೋಹರದಿ ಹಾಹಾ ಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ- ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6 ಊರ್ವಶಿ:ಈತನೆ ಭಾಗ್ಯನಿಧಿ ನೋಡೆ ನೀ ಮುದದಿಪ. ಈತನೆ ಈರೇಳು ಲೋಕದ ದಾತ ನಾರಾಯಣ ಮಹಾ ಪುರು- ವಿನುತ ನಿ- ರ್ಭೀತ ನಿರ್ಗುಣ ಚೇತನಾತ್ಮಕಅ.ಪ. ಮಂದರ ಪೊತ್ತ ಭೂನಿತಂಬಿನಿಯ ಪ್ರೀತ ಮಾನವಮೃಗಾಧಿಪ ತ್ರಿವಿಕ್ರಮ ದಾನಶಾಲಿ ದಶಾನನಾರಿ ನ- ವೀನ ವೇಣುವಿನೋದ ದೃಢ ನಿ- ರ್ವಾಣ ಪ್ರವುಢ ದಯಾನಿಧಿ ಸಖಿ 1 ವಾರಿಜಾಸವಾನವಂದಿತ ಶ್ರೀಪಾದಯುಗ್ಮವ ತೋರಿಕೊಂಬುವ ಸಂತತ ಕೇರಿಕೇರಿಯ ಮನೆಗಳಲಿ ದಿ- ವ್ಯಾರತಿಯ ಶೃಂಗಾರ ಭಕ್ತರ- ನಾರತದಿ ಉದ್ಧಾರಗೈಯಲು ಸ್ವಾರಿ ಪೊರಟನು ಮಾರಜನಕನು 2 ಮುಗುದೆ ನೀ ನೋಡಿದನು ಕಾಣಿಕೆಯ ಕ- ಪ್ಪಗಳ ಕೊಳ್ಳುವನು ತಾನು ಬಗೆಬಗೆಯ ಕಟ್ಟೆಯೊಳು ಮಂಡಿಸಿ ಮಿಗಿಲು ಶರಣಾಗತರ ಮನಸಿನ ಬಗೆಯನೆಲ್ಲವ ಸಲ್ಲಿಸಿ ಕರುಣಾ ಳುಗಳ ದೇವನು ಕರುಣಿಸುವ ನೋಡೆ3 ರಂಭೆ :ದೃಢವಾಯಿತೆಲೆ ನಿನ್ನ ನುಡಿಯು ಸುರ ಗಡಣ ಓಲಗಕೆ ಇಮ್ಮಡಿಯು ಜನ- ರೊಡಗೂಡಿ ಬರುತಿಹ ನಡೆಯು ಹಾ ಹಾ ಮೃಡ ಸರೋಜ ಸುರಗಡಣ ವಂದಿತ ಕ್ಷೀರ ಕಡಲ ಶಯನ ಜಗದೊಡೆಯನಹುದು ಕಾಣೆ1 ಮದಗಜಗಮನೆ ನೀ ಪೇಳೆ ದೇವ ಸದನವ ಪೊರಡುವ ಮೊದಲೇ ಚಂದ- ನದ ಪಲ್ಲಂಕಿಯ ತಂದು ಮ್ಯಾಲೆ ಹಾ ಹಾ ಮುದದಿಂದ ಬಾಲಕರೊದಗಿ ಸಂತೋಷದಿ ಚದುರತನದಿ ಪೋಗುವನು ಪೇಳೆಲೆ ನೀರೆ2 ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವ ಶ್ರೀರಮಾಧವನ ಲೀಲೆ ಘೋರ ದೈತ್ಯಕುಠಾರ ಲಕ್ಷ್ಮೀ ನಾರಾಯಣನ ಬಲಕರ ಸರೋಜದಿ ಸೇರಿ ಕುಳಿತ ಗಂಭೀರ ದಿನಪನ ಭೂರಿತೇಜದಿ ಮೆರೆವುದದು ತಿಳಿ1 ದೊರೆಯು ಬರುವನು ಎಂದು ಎಲ್ಲರಿಗೆ ಗೋ- ಚರಿಸುವನೊಲಿದು ಇಂದು ತರ ತರದ ಆರತಿಗಳನು ನೀವ್ ಧರಿಸಿ ನಿಂದಿರಿಯೆಂದು ಜನರಿಗೆ- ಚ್ಚರಿಗೆಗೋಸುಗ ಮನದ ಭಯವಪ- ಹರಿಸಿ ಬೇಗದಿ ಪೊರಟು ಬಂದುದು ರಂಭೆ :ಸರಸಿಜನಯನೆ ನೀ ಪೇಳೆ ಸೂರ್ಯ ಕಿರಣದಂತಿಹುದೆಲೆ ಬಾಲೆ ಸುತ್ತಿ ಗೆರಕವಾಗಿಹುದು ಸುಶೀಲೆ ಆಹಾ ಹರಿಯ ವೈಕುಂಠ ನಗರದಂತೆ ಜ್ಯೋತಿ ವಿ- ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1 ಊರ್ವಶಿ:ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧ ದ್ವಾದಶಿಯೊಳಗೆ ಬಾಲೆ ಮಾಧವನ ಪ್ರೀತ್ಯರ್ಥವಾಗಿ ಶು- ಭೋದಯದಿ ಸಾಲಾಗಿ ದೀಪಾ ರಾಧನೆಯ ಉತ್ಸಹದ ಮಹಿಮೆಯ ಸಾದರದಿ ನೀ ನೋಡೆ ಸುಮನದಿ1 ನಿಗಮಾಗಮದ ಘೋಷದಿ ಸಾನಂದ ಸು- ತ್ತುಗಳ ಬರುವ ಮೋದದಿ ಬಗೆ ಬಗೆಯ ನರ್ತನ ಸಂಗೀತಾ ದಿಗಳ ಲೋಲೋಪ್ತಿಯ ಮನೋಹರ ದುಗುಮಿಗೆಯ ಪಲ್ಲಂಕಿಯೊಳು ಕಿರು2 ನಗೆಯ ಸೂಸುತ ನಗಧರನು ಬಹ ಚಪಲಾಕ್ಷಿ ಕೇಳೆ ಈ ವಸಂತ ಮಂ- ಟಪದಿ ಮಂಡಿಸಿದ ಬೇಗ ಅಪರಿಮಿತ ಸಂಗೀತ ಗಾನ ಲೋ- ಲುಪನು ಭಕ್ತರ ಮೇಲೆ ಕರುಣದಿ ಕೃಪೆಯ ಬೀರಿ ನಿರುಪಮ ಮಂಗಲ ಉಪಯಿತನು ತಾನೆನಿಸಿ ಮೆರೆವನು3 ಪಂಕಜಮುಖಿ ನೀ ಕೇಳೆ ಇದೆಲ್ಲವು ವೆಂಕಟೇಶ್ವರನ ಲೀಲೆ ಶಂಕರಾಪ್ತನು ಸಕಲ ಭಕ್ತಾ ಕರ ಚ ಕ್ರಾಂಕಿತನು ವೃಂದಾವನದಿ ನಿ ಶ್ಯಂಕದಿಂ ಪೂಜೆಯಗೊಂಡನು4 ಕಂತುಜನಕನಾಮೇಲೆ ಸಾದರದಿ ಗೃ- ಹಾಂತರಗೈದ ಬಾಲೆ ಚಿಂತಿತಾರ್ಥವನೀವ ಲಕ್ಷ್ಮೀ ಕಾಂತ ನಾರಾಯಣನು ಭಕುತರ ತಿಂಥಿಣಿಗೆ ಪ್ರಸಾದವಿತ್ತೇ- ಕಾಂತ ಸೇವೆಗೆ ನಿಂತ ಮಾಧವ5
--------------
ತುಪಾಕಿ ವೆಂಕಟರಮಣಾಚಾರ್ಯ