ಒಟ್ಟು 313 ಕಡೆಗಳಲ್ಲಿ , 64 ದಾಸರು , 287 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋಪಿ ಇವನು ನಿನ್ನಾ ಪ ಜಗವ ನಿರ್ಮಿಸಿ ಪಾಲಿಸಿ ಅಳಿಸುವ ಅಗಣಿತ ಸುಗುಣಾ ಭರಣನೆ ಇವನು ಅ.ಪ ಬೆಣ್ಣೆಯ ಕದ್ದನು ಸಣ್ಣವನಿಹ ಬಹು ಚಿಣ್ಣರ ಕೂಡುತ ಗೋಗಣ ಕಾಯುವ ಮನ್ಮನ ಪುಥ್ಥಳಿ ಕಳಿಸುವದಾಗದು ಎನ್ನುವ ನುಡಿಗಳ ಬದಿಗಿಡು ತಾಯಿ ಉಣ್ಣುತ ಉಣ್ಣುತ ಮೊಲೆಯನು ಕೊಂದಿಹ ಉನ್ನತ ರಕ್ಕಸಿ ಪೂತಣಿಯನ್ನಿವ ಮಣ್ಣನು ಕಂಡರು ಕಂಸನದೂತರು ಪೂರ್ಣಾನಂದನು ಸರಿ ಇವನಮ್ಮ 1 ಜಾರ ಚೋರ ಸುಕುಮಾರನು ಸುಂದರ ನಾರೇರ ವಲಿಸಿ ಸೇರಿದ ನಿಶಿಯಲಿ ಪೋರನೆಂಬ ಮನ ದೂರವಗೈದುಗ ಭೀರ ಮಹಿಮ ಜಗ ಸಾರನೆಂದರಿಯೆ ಭಾರಿಗಿರಿಯನೆತ್ತಿ ಊರಿಗೆ ಊರನು ಸೇರಿಸಿ ಪೊರೆದಿಹಪಾರಮಹಿಮ ಜಂ ಭಾರಿದರ್ಪಹರ ಪೋರನೆ ಬಿಡುಬಿಡು ನಿಗಮ ಸಂಚಾರನೆ ಖರೆಯೆ 2 ಕಾಲ್ಗಳು ಸೋಕಲು ಶಕಟನು ಬಿದ್ದನು ಶೀಳುತ ಕೊಕ್ಕನು ಬಕನಂ ಕೊಂದನು ಕಾಳಿಯ ತುಳಿಯುತ ಗರ್ವವ ನಿಳಿಸಿದ ಲೀಲಾಜಾಲದಿ ಜ್ವಾಲೆಯ ನುಂಗಿದ ಬಾಲರು ಕೇಳಲು ಆಲಯತೋರಿದ ಪಾಲಿಸಿ ವರುಣನ ತಂದೆಯ ಕಂದನ ಲೋಲನೆ ಸರಿ ಜಗಮೂಲನು ಕೇಳೆ 3 ನೀರಜ ನಾಭಗೆ ಗೊಲ್ಲತಿಯ ಗಣ ಬೀರಲ್ ಸಾಧ್ಯವೆ ಮೋಹವ ನೆಂದಿಗು ಶ್ರೀರತಿದಾಯಕ ಕೊಳ್ಳುವನೇ ರತಿ ಭವ ತಾರಕ ಶುಭ ಶೃಂಗಾರ ಪೂರ್ಣ ಪರಿವಾರದಭೀಷ್ಠವ ಖರೆ ಭೂರಿದಯಾಮಯ ನಾರಾಯಣನಿವ ದೋಷ ವಿದೂರ 4 ಮೆಲ್ಲಗೆ ಬಾಯೊಳು ಎಲ್ಲವ ತೋರಿದ ಮಲ್ಲನು ಸರ್ವರ ವಲ್ಲಭ ಸಿದ್ಧವು ಗೊಲ್ಲನ ವೇಷದಿ ಇಲ್ಲಿಹನಮ್ಮ ಇಲ್ಲವೆ ಸಮರಿವಗೆಲ್ಲಿಯ ಸತ್ಯ ಮಲ್ಲರ ಮರ್ದಿಸಿ ಕೊಲ್ಲುತ ಕಂಸನ ನಿಲ್ಲಿಸಿ ಧರ್ಮವ ಕಾಯುವ ನಮ್ಮ ಬಲ್ಲಿದ “ಶ್ರೀಕೃಷ್ಣವಿಠಲ” ಬೇಗನೆ ನಿಲ್ಲಿಸಿ ಕೊಳ್ಳದೆ ಕಳುಹೇ ತಾಯಿ 5
--------------
ಕೃಷ್ಣವಿಠಲದಾಸರು
ಗೋಪಿ ದಾನವ ಕೋರುವಿ ಎಂಥಾ ಕೂಸಮ್ಮ ಶ್ರೀ- ಕಾಂತ ಸುಜನಮಾನಸಂತರಂಗದಿ ನಿತ್ಯ ನಿಂತು ನಲಿವ ಕೃಷ್ಣ ಪ. ಕ್ಷೀರ ವಾರಿಧಿಯಲ್ಲಿದ್ದನಾದರು ಬೆಣ್ಣೆ ಕ್ಷೀರವ ಕದ್ದು ಮೆದ್ದ ತೋರುವ ತತ್ವ ಶುದ್ಧ ಆದರು ಬಹು ಕ್ರೂರ ರಕ್ಕಸರ ಗೆದ್ದ ನೀರಜಾಲಯ ರಮಣ ಗೋಕುಲ ನಾರಿಯರ ಮೇಲ್ ಬಿದ್ದು ರಮಿಸಿದ ವಾರಿಜಾಸನ ವಂದ್ಯ ಸುರವರ ವೈರಿ ಶಕಟನ ಕಾಲಲೊದ್ದ 1 ಸಂಸಾರಾರ್ಣವ ತಾರಕನಾದರು ಪಾಂಡು- ವಂಶ ರಕ್ಷಣಕಾರಕ ಹಂಸಾದ್ಯ ಸುರಮಾರಕನಾದರು ನಾನಾ ಹಿಂಸಾದೋಷ ನಿವಾರಕ ಕಂಸಮರ್ದನ ವೈನತೇಯ ಶು- ಪಾದ ಕಮಲ ತಿ- ಲಾಂಶ ದೋಷರಹಿತ ಗೋಪಾ- ಲಾಂಶವೇರಿ ವಿನೋದಗೊಳುತಿಹ 2 ಶುದ್ಧ ಪೂರ್ಣಾನಂದ ಸುಜನಾರ್ತಿವಾರÀ ನಿ- ಷಿದ್ಧ ಕಲುಷದೂರಾ ಕ್ರುದ್ಧ ಖಳವಿದಾರ ಕಿಂಕರ ಪರಿಚರ ಸಿದ್ಧಾಂತ ಶ್ರುತಿ ಶೇಖರಾ ಬುದ್ಧ ರೂಪದಿ ಭೂತಪತಿಗೆ ಸ- ಮೃದ್ಧಿ ಜಯಪಾಲಿಸಿ ಸುರೋತ್ತಮ ಸಿದ್ಧವಂದಿತ ಶೇಷಗಿರಿಯೊಳ- ಗಿದ್ದು ದಾಸರನುದ್ಧರಿಸುತಿಹ 3
--------------
ತುಪಾಕಿ ವೆಂಕಟರಮಣಾಚಾರ್ಯ
ಗೋವಿಂದ ಗೋಪಾಲ ಗೋಪಿಕಾವಲ್ಲಭÉೂೀವರ್ಧನೋದ್ಧಾರಕಪ. ಶೌರಿ ಹರಿವಾರಿಜೋದ್ಭವವಂದ್ಯ ವಂದಿತ ಚರಿತ್ರಪುರಮರ್ದನಮಿತ್ರ ಪರಮಪವಿತ್ರ 1 ಗರುಡತುರಗಗಮನ ಕಲ್ಯಾಣಗುಣಗಣನಿರುಪಮಲಾವಣ್ಯನಿರ್ಮಲಶರಣ್ಯ ಪರಮಮುನಿವರೇಣ್ಯಭಕ್ತಲೋಕಕಾರುಣ್ಯ 2 ಇನಶಶಿಲೋಚನ ಇಂದುನಿಭಾನನಎನುತ ಕುಂಡಲನಾದನಕನಕಮಯವಾಸನ ಘನ ಪಾಪನಾಶನಎನುತ ಕುಂಡಲನಾದ ವೇಣುನಾದ ಹಯವದನ 3
--------------
ವಾದಿರಾಜ
ಗೋವಿಂದ ನಮೋ ಗೋವಿಂದ ಪ ಮಂದ ಮನವೇ ನೀನು ಅಂದು ನೋಡೆಲೊ ಒಮ್ಮೆ ಅ.ಪ ತಂದೆ ಗೋವಿಂದ ಎನ್ನೆಲೊ ಮನವೆ ಬಂದ ಬಂಧನವೆಲ್ಲವ ಕಳೆವ ಕುಂದುನಿಂದೆಗಳಿಲ್ಲದೆ ಕಾಯ್ವ ಹಿಂದೆ ಮುಂದೆ ತಾನೆ ನಿಂತಿರುವ ಆಹ ಸಿಂಧುಶಯನ ತನ್ನನ್ಹೊಂದಿ ಭಜಿಪರನ್ನು ಕಂದರೆನ್ನುತಾನಂದದಿ ಸಲಹುವ 1 ಎಲ್ಲಿ ಕರೆದರಲ್ಲೆಬರುವ ಸೊಲ್ಲು ಸೊಲ್ಲಿನೊಳಗೇ ನಿಂತಿರುವ ಅಲ್ಲಿಇಲ್ಲಿ ಎಂದೆಂಬ ಹೇವ ಇಲ್ಲ ಮಲ್ಲಮರ್ದನ (ಉಂ) ಚಲುವ ಆಹ ಪುಲ್ಲನಯನ ತನ್ನ ನಿಲ್ಲದೆ ಭಜಿಪರ ಲಲ್ಲೆನಿಂತುಕೊಂಡುಲ್ಲಾಸದಿ ಕಾಯುವ 2 ಇವರವರೆಂಬುವ ಭಾವ ದೇವ ಮಾವ ಮರ್ದನಗಿಲ್ಲೆಲವೋ ದಿವ್ಯಭಾವ ಭಕ್ತರ ಪಿಡಿದು ಕರೆವ ಕಾವ ಜೀವದಿ ಬಿಡಿದನುದಿನವು ಆಹ ಜಾವಜಾವಕೆ ಶ್ರೀರಾಮನ ಚರಣವ ಭಾವಿಸಿ ಭಜಿಪರ ಭಾವದೋಳ್ ಬೆರೆತಿರುವ 3
--------------
ರಾಮದಾಸರು
ಘಿಲ್ಲು ಘಿಲ್ಲೆನ್ನುತಲಿಘಮಕದಿಪಾಂಡವರುಫುಲ್ಲನಾಭನÀ ದಯಪಲ್ಲವನೋಡಿ ನಿಲ್ಲದಲೆ ಎಲ್ಲರೂ ಪ. ಸೂರಿ ಬಿಡವೋನೆ ದಯವನೆ1 ಸಲ್ಲು ಸಲ್ಲಿಗೆ ಲಕ್ಷ್ಮಿನಲ್ಲನ ಸ್ತುತಿಸುತಮಲ್ಲಿಗೆ ತುರುಬಿನಮಲ್ಲಿಗೆ ತುರುಬಿನ ಚಲುವಿಯರೆಲ್ಲ ಹೊರಡಲುಮಲ್ಲ ಮರ್ದನನ ಮನೆ ನೋಡ2 ಎಲ್ಲರು ಹೊರಡಲು ಹಲ್ಲಿ ಮಾತಾಡಿದವುಫುಲ್ಲನಾಭನ ದಯ ಚಲ್ಲುವುದೆನುತಲಿಫುಲ್ಲನಾಭನ ದಯ ಚಲ್ಲುವುದೆನುತಲಿವಾಲಿ ಗಂಟಿಟ್ಟ ನಕುಲನು3 ಅಂಗಳಕೆ ಬರುತಿರೆ ಮಂಗಳವಾದ್ಯಗಳಾದವುಹಂಗ ಹಾರಿದವು ಎಡಗಡೆಹಂಗ ಹಾರಿದವು ಎಡಗಡೆ ರಂಗಯ್ಯಆಲಿಂಗನವ ಕೊಡುವೋನು ನಿಜವೆಂದು 4 ತೇರಿನ ಬೀದಿಯ ದ್ವಾರದಿ ಬರುತಿರೆಕಾಗೆ ಹಾರಿದವು ಬಲಗಡೆ ಕಾಗೆ ಹಾರಿದವು ಬಲಗಡೆ ರುಕ್ಮಿಣಿಸೂರಿ ಬಿಡುವಳು ದಯವನ್ನೆ5 ರೂಢಿಗೊಡೆಯನ ಕೈಲಿ ನೀಡಿ ಮಂತ್ರಾಕ್ಷತೆನೋಡುವರು ದ್ವಿಜರು ದಯದಿಂದ ನೋಡುವರು ದ್ವಿಜರು ದಯದಿಂದ ಸತ್ಯಭಾಮಮಾಡುವಳು ಪರಮ ಕರುಣವ 6 ಅಕ್ಕಿ ತೆಂಗಿನಕಾಯಿ ಚಿಕ್ಕ ನಿಂಬೆ ಹಣ್ಣುಅಚ್ಚ ಮಲ್ಲಿಗೆ ಇದುರಿಗೆಅಚ್ಚ ಮಲ್ಲಿಗೆ ಇದುರಿಗೆ ರಮಿಯರಸುನಕ್ಕು ನುಡಿವನು ನಮಕೂಡ 7
--------------
ಗಲಗಲಿಅವ್ವನವರು
ಚದುರೇ ವೃಂದಾವನದೊಳು ನಿಂತಿಹನ್ಯಾರೇ ಪೇಳಮ್ಮಯ್ಯಾ ಪ ಸತ್ ಸಖಿಯರಿಗುಣಿಸುವ ಜಾರಚೋರ ಶ್ರೀಕೃಷ್ಣ ಕಾಣಮ್ಮಾ ಅ.ಪ. ನೀರೇ ನೋಡೋಣು ಬನ್ನಿರಿ ಎಂದುಈ ಬಾಲೇರು ಗೋಪಾಲನ ಗಾನಕೆ ಬಂದು ಬೆದರುತ ಮನದೊಳು ಮದನಾಟಕೆ ನಿಂದೂಮೋರೆಯ ತಿರುವುತ ಅಂದು ಮಾರನಯ್ಯ ತವ ಚಾರುಧರಾಮೃತ ಸೂರೆಗೈಯ್ಯೋ ಸದ್ಧೀರಿಯರೊ ನಾವು 1 ಬಾಲೆ ನಿನ್ನಾಳುವ ದಾರಿ ಬ್ಯಾರಿಲ್ಲಾ ಕಾಲಬಂದೊದಗದು ಕೇಳೆನ್ನ ಸೊಲ್ಲ ಮತ್ತಾವದೊ ತಂಗಾಳಿ ಬೀಸುವ ವ್ಯಾಳೆ ಬಂತಲ್ಲಾ ಮೋಹಿಸಿ ಬಂದೆವೊ ನಲ್ಲಾ ಫುಲ್ಲಲೋಚನ ಮೃದು ಮಲ್ಲಿಗೆ ಮುಡಿಸಿ ಮೆಲ್ಲಗೆ ಮರ್ದಿಸು ಮೃದು ಚಲ್ವಯರುಹರೆ 2 ಸಿಂಧೂ ರಾಜಕುಮಾರಿಯ ರಮಣ ಶರದಿಂದೂ ಮಂಡಲ ಮುಟ್ಟುತಲಿದೆ ಧ್ವನಿ ಹಸನಾ ಶಂಭೂರ ಶತ್ರಾದಿಗಳುಗರೆವರು ಪೂಮಳಿ ನಾನಾ ಗಣಶಿರಿಸುತ ಮರುಳಾಗಿ ಪೂ ಬಾಣಾನಾಟವನೋಡುತ ನಾರಿಯ ತ್ಯಜಿಸದೆ ಪರನಾರಿಯ ರೂಪದಿಂದ್ರಮಿಪ ಮುರಾರೇ 3 ಸುರನದಿ ಸ್ಮರಸುತ ರಾಣಿ ನಾಟ್ಯವನಾಡುತ ನವನವ ಪಾಡುತ ದಿದ್ಧಿದ್ಧಿಮಿಕಿಟ ತಾಂ ತಾಳದಿ ನಲಿಯುತ 4 ಶಶಿಸೂರ್ಯನೆಳಸನ್ನಿಭ ಪ್ರಖನಕರಾ ಸರಸೀಜಾದಳ ನುತ ಭಾವಿ ಸಮೀರಾ ಷಟ್ ಶತ ಬಂದು ವಿಂಶತಿಹಂ ಸಾಖ್ಯ ಮಂತ್ರ ಸಹಸ್ತಾದಿಂದ ಸೇವಿಪ ಮಧ್ವಮಧೀಶನ ಲೀಲೆಯನೆನಿಪರ ಬಂದು ತೋರುವಾತ ತಂದೆವರದಗೋಪಾಲವಿಠಲನು 5
--------------
ತಂದೆವರದಗೋಪಾಲವಿಠಲರು
ಚರ್ಯಗಳಿಂದನಾ ಗ್ರಹಬಾಧನೆಯು ಎಲ್ಲಿನೋಡು ಪ ಗುರುಕರುಣಾಪೂರ್ಣರಾಗಿರುತ ನೀನಿರುತದಲಿ ಪರಮ ಪ್ರೀತಿ ನಿಷ್ಟ ಗರಿಷ್ಟರಾಗಿ ಪರಮ ಹರುಷದಿ ಇರುವ ಭಾವಜ್ಞರನ ಪೊರೆವ ಭಾವಗವೇ ಗ್ರಹಗಳಾಗಿ 1 ಗ್ರಹವೇ ನಿಮ್ಮನುಗ್ರಹವು ಇಹಪರಕ್ಕೆರಡಕ್ಕೂ ಸಹಾಜವಾಗಿ ತೋರುವವು ಶಬ್ಧಮಾತ್ರ ಮಹಾದೇವ ನಿಮ್ಮ ಕರುಣಮಹಿಮೆಯನ್ನು ಈ ಪರಿ ಮಹಿಯೊಳಗೆ ಚರಿಸುವಂಥಾ 2 ಆವನಾರನ ಗತಿಯು ಆವನಾರನ ರೀತಿಯು ಆವನಾರನ ಸ್ಥಿತಿಯು ಅರಿತು ಇರುವಾ ಭಾವ ಭಾವಗಳಿಂದ ಫಣಿಯ ಲಿಖಿತಗಳಂತೆ ಯಾವ ಕಾಲ-----ಇರುವಾ 3 ಸೂತ್ರಧಾರನು ನೀನು ಸಕಲವನು ಇನ್ನು ಈ ಗಾತ್ರಗಳಿಗೆಲ್ಲ ಕಾರಣ ಕರ್ತನಾಗಿ ಮಾತ್ರದಲಿ ಪ್ರಾಣಿಗಳನ್ಯತಾಥ್ಯ------- ಪಾತ್ರ ನೀನಲ್ಲವೇನೈ 4 ದೂರು-----ತ್ರವೆ ಅವರಿಗಾಧಾರ ನೀನಾಗಿ --------------------------- `ಹೊನ್ನವಿಠ್ಠಲ' ದನುಜಮರ್ದನದೇವ --------------------- 5
--------------
ಹೆನ್ನೆರಂಗದಾಸರು
ಚಿಂತಯಾಮಿ ರಾಮಮಮಿತಮಹಿಮಂ ಶಾಂತದಾಂತ ಮಾಕಾಂತ ಧೀಮಂತ ಪ ಅಂತರಾತ್ಮಮಮಲ ಸುಗುಣ ಭರಿತಂ ಸಂತ ಹನೂಮಂತನಮಿತ ಚರಿತಂಅ.ಪ ಮೌನಿಯಾಗ ಪಾಲಮತುಳ ಶೂರಂ 1 ಮಾನಿನೀಮಣಿ ಶಾಪಭಂಗ ಚತುರಂ 2 ಜಾನಕೀ ಹೃದಯಾಪಹಾರ ಧೀರಂ 3 ಸಾನುಜ ಭರತೇಷ್ಟದಾತಮುದಾರಂ 4 ದಾನವ ಖರದೂಷಣ ಸಂಹಾರಂ 5 ಆನತ ಖಚರೇಂದ್ರ ಮೋಕ್ಷದಾತಾರಂ6 ಕಾನನ ಸತ್ಪಾವನಕರ ಸಂಚಾರಂ 7 ವಾನರಪತಿ ಸೇವಿತ ಪರಿವಾರಂ 8 ದಾನವ ರಾವಣ ಮರ್ದನ ಶೂರಂ9 ದೀನಪಾಲ ಮಾಂಗಿರಿಪತಿ ಗಂಭೀರಂ 10
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಗಜೀವನಾ ಪ ಶಾಮಸುಂದರ ಮುನಿಜನ ಮಾನಸ ಪಂಕಜ ಲೋಚನಾ ದಾಮೋದರ ಗೋಪೀಜನ ಮೋಹನಾ ಅಹಿಲ್ಯಾ ಶಾಪ ವಿಮೋಚನಾ 1 ಮಾಧವ ಹರಿ ಶ್ರೀ ವತ್ಸಾಂಕ ಜನಾರ್ಧನಾ ಯಶೋದಾ ನಂದನ ಯದುಕುಲ ಮಂಡಲಾ ಕಂಸ ಚಾಣೂರ ಮರ್ದನಾ2 ಸರಸಿಜ ಭವಭೆವ ಸುರಪತಿ ಪೂಜಿತ ಗುರುವರ ಮಹಿಪತಿ ನಂದನ ಸಾರಥಿ ಭವ ಭಂಜನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಗದ್ಗುರೋ ರಾಮ ತ್ರಾಹಿ ಶ್ರೀ ರಾಮಚಂದ್ರಜಗದ್ಗುರೋ ರಾಮ ತ್ರಾಹಿ ಪದಶರಥನಂದನ ದನುಜ ವಿಮರ್ದನಪಶುಪತಿನುತ ಗುಣ ರವಿನಯನ 1ಕೌಸಲ್ಯಾತ್ಮಜ ಕಮನೀಯಾನನಕೋಮಲ ಕುವಲಯ ದಳ ವರ್ಣ 2ವನಚರ ಪೋಷಕ ಸೇತು ವಿಧಾಯಕಘನ ಧನುಃಶರಧರ ಧೃತಲೋಕ 3ಜಯಜಯ ರಾಘವ ಜಾನಕೀವಲ್ಲಭಭಯಗಣ ನಾಶನ ಭಾನು ನಿಭ 4ದಶಮುಖ ನಂದನ ಮಾನ ವಿಭಂಜನಬಿಸಜಜ ಪೂಜಿತ ಪದನಳಿನ 5ಮುನಿಮಖಪಾಲಕ ತಾಟಕೀಶಿಕ್ಷಕಮುನಿಸತಿದಾಯಕ ಮುನಿತಿಲಕ 6ತರಣಿ ಕುಲೋದ್ಭವ ತಿರುಪತಿ ಗಿರಿವರಸ್ಥಿರಸ್ಥಿತ ವೆಂಕಟ ಸುಖಸಾರ 7ಓಂ ಮ್ಟುಕಾಸುರ ಚಾಣೂರ ಮಲ್ಲಯುದ್ಧವಿಶಾರದಾಯ ನಮಃಕಂ||ಸ್ಥಿರವಾರದರ್ಚನೆಯು ಸುಸ್ಥಿರ ಸಂಪದ್ಭಕ್ತಿ ವಿಜ್ಞಾನಪ್ರದವೆಂದೇಸ್ಥಿರಚಿತ್ತನಾಗಿ ಮಾಡ್ದೆನುಸ್ಥಿರವಾಗಿರು ಮನದಿ ನೀನೆ ವೆಂಕಟರಮಣಾ
--------------
ತಿಮ್ಮಪ್ಪದಾಸರು
ಜನನಿ ರುದ್ರಾಣಿ ರಕ್ಷಿಸು ಎನ್ನ ಜಗದೀಶನ ರಾಣಿ ಪ. ವನಜಭವಸುರಮುನಿಕುಲಾರ್ಚಿತೆ ಕನಕವರ್ಣಶರೀರೆ ಕಮಲಾ- ನನೆ ಕರುಣಾಸಾಗರೆ ನಮಜ್ಜನ- ಮನಮುದಾಕರೆ ಮಾನಿತೋದ್ಧರೆ ಅ.ಪ. ಆದಿಕೃತಾಯುಗದಿ ಪ್ರತಿಷ್ಠಿತ- ಳಾದೆ ಧರಾತಳದಿ ಆದಿತೇಯರ ಬಾಧಿಸುವ ದಿತಿ- ಜಾಧಮರ ಭೇದಿಸಿದೆ ಸಜ್ಜನ- ರಾದವರ ಮನ್ನಿಸಿದೆ ತ್ರೈಜಗ- ದಾದಿಮಾಯೆ ವಿನೋದರೂಪಿಣಿ 1 ಖಂಡ ಪರಶುಪ್ರೀತೆ ನಿಖಿಲಬ್ರ- ಹ್ಮಾಂಡೋದರಭರಿತೆ ಚಂಡಮುಂಡವೇತಂಡದಳನೋ- ದ್ದಂಡಸಿಂಹೆ ಅಖಂಡಲಾರ್ಚಿತೆ ಪಾಂಡುತನುಜ ಕೋದಂಡ ವಿತರಣೆ ಚಂಡಿಕೇ ಕರದಂಡಲೋಚನಿ2 ಸಿಂಧೂರ ಸಮಯಾನೆ ಸರಸ ಗುಣ- ವೃಂದೆ ಕೋಕಿಲಗಾನೆ ಸುಂದರಾಂಗಿ ಮೃಗೇಂದ್ರವಾಹಿನಿ ಚಂದ್ರಚೂಡಮನೋಜ್ಞೆ ಸತತಾ- ನಂದಪೂರ್ಣೆ ಮುನೀಂದ್ರನುತೆ ಸುಮ- ಗಂಧಿ ಗೌರಿ ಶಿವೇ ಭವಾನಿ 3 ಲಂಬೋದರಮಾತೆ ಲಲಿತ ಜಗ- ದಂಬಿಕೆ ಗಿರಿಜಾತೆ ಕಂಬುಕಂಠಿ ಕಾದಂಬನೀಕು- ರುಂಬಜಿತಧಮ್ಮಿಲ್ಲೆ ತವ ಪಾ- ದಾಂಬುಜವ ನಾ ನಂಬಿದೆನು ಎನ- ಗಿಂಬು ಪಾಲಿಸೆ ಶುಂಭಮರ್ದಿನಿ 4 ಘನವೇಣುಪುರವಾಸೆ ಸರ್ವಾರ್ಥದಾ- ಯಿನಿ ತ್ರೈಜಗದೀಶೆ ಸನಕನುತೆ ಶ್ರೀಲಕ್ಷುಮಿನಾರಾ- ಯಣಭಗಿನಿ ಶ್ರೀಮಹಿಷಮರ್ದಿನಿ ಮನಮಥಾಮಿತರೂಪೆ ಕಾತ್ಯಾ- ಯಿನಿ ನಿರಾಮಯೆ ಮಂಜುಭಾಷಿಣಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಜಂಭಾರಿಸುತ ಅಭವ ಪ ಪುರಹರ ಸಾಂಬ ತ್ರಿಯಂಬಕ ಶಂಬಕಾರಿ ರಿಪುಗಂಭೀರ ಕರುಣಿ ಅ. ಪ. ಭಸಿತ ಭೂಷಿತ ಶರೀರ-ಭಕ್ತರುದ್ಧಾರ ವಿಷಕಂಠ ದುರಿತಹರ ಪಶುಪತಿ ಫಣಿಹಾರ-ಪಾವನಕಾರ ನೊಸಲನಯನ ವಿಕಸಿತಾಂಬುಜ ಮುಖ ಶಶಿಧರ ಮತ್ತರಕ್ಕಸ ಮದ ಮರ್ದನ ಘಸಣೆಗೊಳಿಪ ತಾಮಸವ ಕಳೆದು ಮಾ- ಬಿಸಜ ಪಾದವ ತೋರೊ 1 ರಜತ ಪರ್ವತ ನಿವಾಸ ನಿರ್ಮಲ ಭಾಸ ಗಜವೈದ್ಯನಾಶ ಗಿರೀಶ ಸುಜನರ ಮನೋವಿಲಾಸ ವ್ಯೋಮಕೇಶ ತ್ರಿಜಗದಲ್ಲಣ ಗೌರೀಶ ಅಜಸುತನಧ್ವರ ಭಜನೆಯ ಕೆಡಸಿದೆ ಅಜಗರ ಮಂದಿ ಗಜಮುಖ ಜನಕನೆ ಗಜಗಮನ ಮುನಿ ತನುಜನ ಕಾಯ್ದನೆ ವಜ್ರಮುನಿ ವಂದಿತ ಭಜಿಸುವೆ ನಿನ್ನ2 ಮಧರಾಪುರಿ ನಿಲಯ ಮೃತ್ಯುಂಜಯ ಸದಮಲ ಸುಮನಗೇಯ ಸದಾ ನಮಿಪರ ಹೃದಯದೊಳಗುಳ್ಳ ಭಯ- ಸದೆಯುತ್ತ ಕೊಡು ಅಭಯ ಜಾಹ್ನವಿ ಧರಕೃತ ಮಾರಾ ನದೀತೀರದಿ ವಾಸವಾಗಿಪ್ಪ ಸೌಂದರ್ಯ ಮಧುಪುರಿ ವಿಜಯವಿಠ್ಠಲನ ಪದಾಬ್ಜಕೆ ಮಧುಪನೆನಿಪ ಪಂಚವದನ ಕೈಲಾಸ 3
--------------
ವಿಜಯದಾಸ
ಜಯ ಕಮಲಾಲಯ ರಮಣ ಜಯಪಾದಾಶ್ರಿತಭರಣ ಜಯಪೂರ್ಣಾಮೃತ ಕರುಣ ಜಯರತ್ನಾಭರಣ ಪ. ನಳಿನನಾಭನು ಪದ್ಮಲಲನೆಯರೊಡಗೂಡಿ ನಲಿವ ಕಾಲದೊಳೊಂದ ನುಡಿದ ಗೋವಿಂದ ಕಲಿಯೊಳಗವತಾರಗೊಳೆನೆಂದ ಮೊದಲಾಗಿ ಚೆಲುವೆ ದಾಸರಿಗೆನ್ನ ನೆಲೆ ತೋರ್ಪದೆಂದು 1 ಇಂದಿರೆ ತೋಷವ ತಾಳಿ ಮಂದಹಾಸದಿ ಪೇಳ್ದಳೊಂದುಪಾಯವನು ಹಿಂದೆ ಲಂಕಾಪುರದಿ ನೊಂದ ವೇದಾವತಿಯ ತಂದು ಲಗ್ನವ ಗಯ್ಯಲೆಂದು ಪೋಗುವುದು 2 ಹೀಗಾದರವತಾರವಾಗದ ಮರ್ಮವು ಸತ್ಯ ಸಾಗುವುದಖಿಳಾರ್ಥ ಭೋಗವ ನೀಡುವುದು ಈಗ ಮುನಿವ ನೆವದಿ ಸಾಗಿ ಕೊಲ್ಲಾಪುರದಿ ನಾಗಶಯನನೆ ನಿನ್ನ ನೆಲೆಯ ನಂಬಿರುವೆ 3 ವಿಕಸಿತ ಪದ್ಮಾನನೆಯ ಯುಕುತಿಯ ಮಾತಿಗೆ ಮೆಚ್ಚಿ ಸಕಲಾವತಾರ ಸಂಭೃತ ಶಕ್ತಿ ಹೆಚ್ಚಿ ಭಕುತ ವತ್ಸಲ ಭೂವರಾಹ ಮೂರ್ತಿಯ ಕಂಡು ಬಕುಳ ದೇವಿಯ ಸಹಾಯವನೆ ಕೈಗೊಂಡು 4 ರಮಾದೇವಿಯ ಕರಸಿ ಬ್ರಹ್ಮಾದಿಗಳ ಬೆರಸಿ ಬ್ರಹ್ಮ ಘೋಷವ ಬೆಳೆಸಿ ಬಹು ಸಂತೋಷಗೊಳಿಸಿ ಅಮರ ಸಭೆಯಲಿ ಭರ್ಮಪೀಠದಿ ಕುಳಿತ ನಿರ್ಮಲಾತ್ಮನ ನೋಡಿ ನಗುತೆಂದಳೊಧುವು 5 ಶುದ್ಧ ಪೂರ್ಣಾನಂದ ಶುಭಗುಣ ಗಣ ಸಾಂದ್ರ ಮುದ್ದು ಮುಖಾಂಬುಜವ ತೋರೊ ಗೋವಿಂದ ಮುದ್ದೆ ಕಸ್ತೂರಿ ಗಂಧಾ ಮೃಗಮದಾದಿಗಳಿಂದ ಮರ್ದಿಸೀದರಶಿನವ ಕೊಳ್ಳೊ ಮುಕುಂದ 6 ಹೂವ ತರುವೆನೆಂದು ಭಾಮೆಯರೊಡಗೊಂಡು ನಾವಂದು ವನದಲ್ಲಿ ನಿಂತಿರುವಲ್ಲಿ ಕಾವಿದಟ್ಟಿಯನುಟ್ಟು ಕುದುರೆ ಮೇಲಳವಟ್ಟು ಕೋವಿದ ಬಂದ್ಯಲ್ಲಿ ಕೋಪವ್ಯಾಕಿಲ್ಲಿ 7 ಮಾನಸವಾಗ ವಿಷಯದ ಮಾತುಗಳಾಡಿದ ಬಗೆಯ ನೀನಿಂದ ಮರೆತೆಯಾ ನಿನ್ನ ಸಂಸ್ಥಿತಿಯ ನಾನಾ ಚಿತ್ರದ ಗತಿಯ ನಿಜ ತುರಂಗದ ಗತಿಯ ಹೀನವಾದರೆ ಹೀಗೆ ತಾಳುವರೆ ಖತಿಯ 8 ಹಳತಾದದೊಂದಶ್ವ ಕಳದ ಚಿಂತೆಯ ತ್ಯಜಿಸು ಪೊಳೆವ ಸಾಸಿರ ಸಂಖ್ಯಗಳಲಿ ಕಣ್ಣಿರಿಸು ಬಳಲಿಸಿದವಳೆಂಬೊ ಛಲವತಾರದೆ ಮನಕೆ ನಲಿನಾಕ್ಷ ಮುಖವೆತ್ತಿ ತೋರೊ ಮಜ್ಜನಕೆ 9 ಹದಿನಾರು ಸಾವಿರ ಚದುರೆಯರನು ರಮಿಸಿ ಮೂರ್ತಿ ಸಾಕೆನಗೆ ಮದನಜನಕ ನಿನ್ನ ಮಹಾತ್ಮ್ಯಯನು ಬಲ್ಲೆ ಪದ ಪದ ಪಾಲಿಸಿದರರಸಿನ ಹಚ್ಚುವೆನು 10 ಕರಿವರ್ಣ ಸಂಕೋಚ ತರದಿರೊ ಮನದಲ್ಲಿ ಕರಿಯಾದ ಕಸ್ತೂರಿ ಪರಿಮಳವಿರದೆ ಸರಸಿಜಾತನ ಶಿರದ ಮೇಲಿರಿಸಿರುವ ಕರಕಂಜವನು ತೋರಲರಿಸಿನ ಹಚ್ಚುವೆನು 11 ಹಿಂಡು ಕೂಡಿದ ದೇವ ಮಂಡಲದೊಳಗಿಂಥ ಪುಂಡು ಮಾತುಗಳೆಂಬ ದಿಂಡೆಯಾತನವು ಗಂಡರಿದಿರು ಚಿಕ್ಕ ಹೆಂಡಿರಾಡುವ ಪರಿಯು ಪುಂಡರೀಕಾಕ್ಷ ಪಾಲಿಸು ತಪ್ಪಿದರೆಯು12 ಈ ನಿಂದಾಸ್ತುತಿಗಳನು ಧ್ಯಾನಿಸಿ ವೆಂಕಟವರನು ಮಾನಿನಿ ಪದ್ಮಾವತಿಗೆ ಮುಖವ ತೋರಿದನು ಸಾನುರಾಗದಿ ಶ್ರೀಭೂಮಾನಿನಿಯರೊಡಗೂಡಿ ತಾನಾಗಿ ದಯಮಾಡಿಲ್ಲಿಗೆ ಬಂದ ನೋಡಿ 13
--------------
ತುಪಾಕಿ ವೆಂಕಟರಮಣಾಚಾರ್ಯ
ಜಯ ಜಯ ಮಹಿಪತಿ ಆನಂದ ಮೂರುತಿ ಗುರುರಾಯಾ ಪ ಪರಮ ಪುರುಷ ಮಹಾದೀನೋದ್ಧರಣಾ | ದುರಿತ ನಿವಾರಣ ಪತಿತ ಪಾವನಾ | ಶರಣ ಜನರ ಪಾಲನಾ ಕರುಣಾ ಸಾಗರಾ 1 ಬೋಧ ಶರಾಸನ ಧರಿಸಿ | ಅಗಣಿತ ದುಷ್ಟ ಗುಣವ ಮರ್ದಿಸಿದೆ | ಭಕುತ ಹೃತ್ಪಂಕಜ ಸಂಚಾರಾ ಆಗಮ ಸನ್ಮತನೇ 2 ಜನನ ಮರಣ ಆಂಕುರ ಕುಠಾರ | ಜಾತಕ ಜಲಧರನೇ | ಅನುದಿನ ಕೃಷ್ಣನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯ ದೇವ ಜಯ ದೇವ ಜಯ ಗುರು ಮೈಲಾರಿ ಮನಮೈಲ ಮರ್ದಿಸಿದಯ್ಯ ನೀನೆ ಅಸುರಾರಿ ಧ್ರುವ ಖಡ್ಗವ ಕರದಲಿ ಪಿಡಿದು ಖಂಡಿಸಿದಙÁ್ಞನ ಖಂಡೇರಾಯೆನಿಸಿಕೊಂಡು ಪ್ರಕಟಿಸಿದನುದಿನ ಹಿಂಡದೈವಕೆ ಪ್ರಚಂಡನಹುದೊ ಪರಿಪೂರ್ಣ ಮಂಡಲದೊಳು ನಿಮ್ಮ ಕೊಂಡಾಡುದು ತಾ ಸುರಜನ 1 ಮಲಹರಣ ಮಾಡಲು ಧರಿಸಿ ಅವತಾರ ಮೂಲೋಕ ಪಾವನಮಾಡುವ ಸಹಕಾರ ಸಲಹುವೆ ಭಕ್ತಜನರಿಗೆ ನೀ ಘನ ಮಂದಾರ ಮಲೆತಿಹ ದೈತ್ಯರ ಸಂಹರಿಸುವೆ ನೀ ಅತಿಶೂರ 2 ಪತಿ ಅಹದು ಶ್ರೀಗುರು ಭೂಪತಿ ಬಾಹ್ಯಾಂತ್ರಿ ಬೆಳಗುವೆ ಶ್ರೀಪಾದಕೆ ಆರ್ತಿ ಇಹಪರಕೆ ದಾತನಹುದೊ ಶ್ರೀಪತಿ ಜಯಜಯವೆಂದು ಬೆಳಗುವೆ ದಾಸ ಮಹಿಪತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು