ಒಟ್ಟು 285 ಕಡೆಗಳಲ್ಲಿ , 49 ದಾಸರು , 233 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗದ್ಯ ದಂಡಕ ಅಧರ ಚುಬುಕ ದಂತಗಳ 10 ಅಗರು ಚಂದನದಮುತ್ತಿನ ಮಲುಕು ಪೆಂಡೆಯಸರ ಕೊರಳಲ್ಲಿಹತ್ತೆಗಟ್ಟಿದ ವಾಗ್ಗೊರಳು ಮುತ್ತುಗಳಮುತ್ತು ಮಾಣಿಕ ನವರತ್ನದ ಚಿಂತಾಕ-ವತ್ತಿ ಸೇರಿದ ಕಂಠಮಾಲೆ ಸರಗಳ 20 ಮಣಿ ತಾಯಿತ್ತುಮೆರೆವ ಹಮ್ಮೀರ ತಾಯಿತಿ ಕಾಂತಿಗಳಕಡಗ ಕಂಕಣ ಸುರಿಗೆ ಬಿಚ್ಚು ಬಳೆಗಳುಹಿಡಿವುಡಿಯಲ್ಲಿ ವಜ್ರದ ಥಳವುಗಳಕಡು ಮೋಹವಾದ ಮುರುಡಿಯ ಸರಪಣಿಝಡಿವ ಮುಂಗೈಯ ಮುರಾರಿ ಕವಡೆಯ30 ನೀಲ ವೈಜಯಂತಿ ಮಾಲೆ ಶೋಭಿಸುವ 40 ಕದಳಿ ನಖ ಚಂದ್ರಿಕೆಯ 50 ಕಮಲ ವಾಸವಾಗಿಪ್ಪ ಕೃಷ್ಣನಪದುಮ ಚರಣಕ್ಕೆ ನಮೊ ನಮೊ ನಮೋ ಎಂಬೆ ನಾ. 60
--------------
ವ್ಯಾಸರಾಯರು
ಗಂಧವಾಹನ ಮತವ ಪೊಂದವರು ಹಂದಿನಾಯಿಗಳಾಗಿ ಬಹುಕಾಲ ಕಳೆದಂತೆ ಪ ಇಳೆಯಾಣ್ಮನಿಲ್ಲದಾ ನಾಡು ಶೋಭಿಸದಂತೆ ಜಲವಿಲ್ಲದಾ ವಾಪಿ ಕೂಪದಂತೆ ನಳಿನ ಬಾಂಧವ ಮಿತ್ರನುದಯಿಸದ ದಿನದಂತೆ ಕುಲಹೀನನಾದವರ ಸಂಗಮಾಡಿದಂತೆ 1 ಕೋಣನಾ ಸಮ್ಮುಖದಿ ವೀಣೆ ಬಾರಿಸಿದಂತೆ ಜಾಣತನವಿಲ್ಲದಾಮಾತ್ಯನಂತೆ ವಾನರನ ಕೈಯಲ್ಲಿ ಮಾಣಿಕವ ಕೊಟ್ಟಂತೆ 2 ಶಾಮಸುಂದರನಾಮ ವರ್ಣಿಸದÀ ಕವಿಯಂತೆ ಪಾಮರಗೆ ಪೌರಾಣ ಪೇಳಿದಂತೆ ಕಾಮಾದಿಗುಣ ಬಿಡದೆ ಸನ್ಯಾಸಿಯಾದಂತೆ ಕೋಮಲಾಂಗದ ಸತಿಗೆ ಕ್ಲೀಬ ದೊರಕಿದಂತೆ 3
--------------
ಶಾಮಸುಂದರ ವಿಠಲ
ಗೋಪಿ ಸುಕೃತ ಪ ಸುಕೃತ 1 ಕೌಸ್ತುಭ ಸುಕೃತ 2 ಕಸ್ತೂರಿಯಿಟ್ಟು ಕಂಗಳಿಗೆ ಕಾಡಿಗೆ ಹಚ್ಚಿಮತ್ತೆ ಕದಪಿನಲಿ ಕುಂಕುಮವನೊತ್ತಿಮುತ್ತಿನಂದದೊಳಿರುವ ಬೆವರ ಸೆರಗಿನೊಳೊರೆಸಿಮುತ್ತು ತಾರೈಯೆಂದು ಮುದ್ದಾಡುವೋ ಸುಕೃತ3 ಅಸುರಕುಲ ಹರಣನಿಗೆ ಅಂಗಿಯನು ತೊಡಿಸಿ ಬಲುಕುಶಲದಿ ಪೀತಾಂಬರವನ್ನು ಉಡಿಸಿಪೊಸ ರತುನ ಬಿಗಿದ ಮಣಿಮಯದ ಮಕುಟವ ಮಂಡೆ-ಗೊಸವಿಟ್ಟು ನಲಿ ನಲಿದು ಮುದ್ದಾಡುವೊ ಸುಕೃತ4 ಶಂಖ ಚಕ್ರಾಂಕಿತಗೆ ಭುಜಕೀರ್ತಿಯನೆ ಧರಿಸ್ಯ-ಲಂಕಾರದಲಿ ತಾರೆ ಮಣಿಯ ಕಟ್ಟಿಕಂಕಣವು ಕಡಗ ಥಳಥಳಿಪ ಪವಳದಿ ರಚಿಸಿಬಿಂಕದಲಿ ತೊಟ್ಟಿಲೊಳಗಿಟ್ಟು ತೂಗುವ ಸುಕೃತ5 ಮುಂಗೈಯ ಮುರಿ ಮುತ್ತಿನುಂಗುರವು ಥಳಥಳಿಸೆರಂಗು ಮಾಣಿಕದ ಒಡ್ಯಾಣ ಹೊಳೆಯೆಕಂಗೊಳಿಸುತಿಹ ಕಾಂಚಿದಾಮವಲಂಕರಿಸಿ ಸ-ರ್ವಾಂಗದೊಳು ಗಂಧ ಪರಿಮಳವ ಸೂಸುವ ಸುಕೃತ6 ಕಡಗ ಪೊಂಗೆಜ್ಜೆ ಕನಕದ ಘಂಟೆ ಸರಪಳಿಯಬಿಡದೆ ಶ್ರೀಹರಿಯ ಚರಣದಲ್ಲಿ ಧರಿಸಿಪೊಡವಿಯನು ಅಳೆದ ಶ್ರೀಪುರುಷೋತ್ತಮನಿಗೆ ಮೆ-ಲ್ಲಡಿಯನಿಡು ಎಂದೆನುತ ನಡೆಯ ಕಲಿಸುವ ಸುಕೃತ7 ನೆಲನ ಈರಡಿಮಾಡಿ ಬಲಿಯ ಮೆಟ್ಟಿದ ಪಾದಚೆಲುವ ಚರಣದಿ ಭೂಮಿಯಳೆದ ಪಾದಶಿಲೆಯೆಡಹಿ ಬಾಲೆಯನು ಮಾಡಿದ ದಿವ್ಯವಾದಒಲಿದಿಟ್ಟು ನಡೆಯೆಂದು ನಡೆಯ ಕಲಿಸುವ ಸುಕೃತ8 ಅಂದಿಗೆ ಪಾಯ್ವಟ್ಟು ಕುಂದಣದ ಕಿರುಗೆಜ್ಜೆಸಂದಣಿಸಿ ಕಿರಿಬೆರಳೊಳುಂಗುರಗಳುಚೆಂದದ ಕಡಗ ಪಾಡಗ ಘಂಟೆ ಸರಪಣಿಯುಮಂದಗಮನನ ಪಾದಪದ್ಮಕ್ಕಿಡುವೊ ಸುಕೃತ9 ಸುಕೃತ 10 ದಿನಕರ ನಿಭಾಂಗ ಕೇಶವ ರಾಮಚಂದ್ರ ಮುನಿಸನಕಾದಿವಿನುತ ಕುಣಿದಾಡು ಎನುತತನ್ನ ಕರಗಳಲಿ ತಕ್ಕೈಸಿ ಕೃಷ್ಣನ ದಿವ್ಯಘನ್ನ ಚರಿತೆಯ ಪಾಡಿ ಪೊಗಳುವ ಸುಕೃತ11
--------------
ವ್ಯಾಸರಾಯರು
ಜನನಿ ಬ್ರಹ್ಮಾಣಿಯೆ | ವರ ವೀಣಾಪಾಣಿಯೆ || ಜನನಿ ಬ್ರಹ್ಮಾಣಿಯೆ ಪ. ಕರುಣಿಯೆ | ಫಣಿವೇಣಿಯೆ || ಬಾ ಬಾ ಶುಕವಾಣೀ | ಜನನೀ ಬ್ರಹ್ಮಾಣಿಯೆ 1 ದೋರುತೆ ವರಗಳೀಯುತೆ | ಬಾ ಬಾ ಗೀರ್ವಾಣೀ ಜನನಿ ಬ್ರಹ್ಮಾಣಿಯೆ 2 ವಿಮಲಚರಿತೆಯೆ || ಬಾ ಬಾ ವಾಗ್ವಾಣೀ | ಜನನಿ ಬ್ರಹ್ಮಾಣಿಯೆ 3
--------------
ವೆಂಕಟ್‍ರಾವ್
ಜನ್ಯಧರ ದೂರ್ವಾಸ ಪ್ರಮುಖ ಮುನಿ ಸ ನ್ಮಾನ ಕರುಣಿ ವಿಲಾಸ ಶ್ರೀ ಶ್ರೀನಿವಾಸ ಪ ಎನ್ನವಗುಣ ಸಹಸ್ರವೆಣಿಸದೆ ನಿನ್ನವರೊಳಗೆಣಿಸಿ ಅನುದಿನ ಮನ್ಮನಾಲಯದೊಳು ನೆಲಸು ಮೈ ಗಣ್ಣನನುಜ ವರಾಭಯ ಶ್ರೀಕರ ಅ.ಪ. ಕಾಮಿತಪ್ರದಕೋಲಾ ಅಂಜನಾಧಿರÀ ಧಾರ ಧಾಮ ಭೂಮಿ ವಿಲೋಲಾ ಶಂಖಣನೃಪವರದ ಹೇಮ ಲೋಚನ ಕಾಲಾ ದ್ವಿಜ ಮಹಿಳೆಯುಳುಹಿದ ಶಾಮಲಾಂಗ ಸುಶೀಲಾ ವೆಂಕಟ ಕುಲಾಲ ಭೀಮಗೊಲಿದ ಮಹಾಮಹಿಮನೆ ಪಿ ತಾಮಹನ ನಾಸೋದ್ಭವನೆ ವಿಯ ಜಾಮಾತ ಕಟಿಸು ತ್ರಾಮಸುತಸೂತ ಪ್ರಮೋದಾಸು ಧಾಮ ಸೌಖ್ಯ ಪ್ರದವರಾಹ ತ್ರಯೀಮಯನೆ ಪ್ರಣತಾರ್ತಿಹರ ಬಲ ಸದನ ಸಹಸ್ರನಾಮ ಸಾಮಜಪತಿ ಪೋಷಕ ರಿಪುವನ ಧೂಮಧ್ವಜ ವಿಧಿಭ ಸೇವಿತ ವ್ಯೋಮಾಳಕಸಖ ಸರ್ವಜ್ಞರ ಮಾಮನೋಹರ ಮನ್ನಿಪುದೆಮ್ಮ 1 ದೀನಜನ ಮಂದಾರ ದೇವಕಿಸುತ ಜಗ ತ್ರಾಣ ಗುಣ ಗಂಭೀರ ಪೃಥ್ವೀಶ ತೋಂಡ ಮಾನವರದ ಉದಾರ ಲುಬ್ದಕನ ವಿಷ್ವ ವೈನತೇಯ ವರೂಥ ಖಳ ಸ್ವ ರ್ಭಾನುವಿನ ತಲೆಗಡಿದು ರವಿಶಶಿ ಕವಿ ಶನಿಗಳ ಶ್ರೇಣಿಯಲಿ ಮಾನಿಗಳ ಮಾಡ್ಡ ಮ ಕಲಿಮಲಾಪಹಾರಿ ಕೃ ಶಾನುಸಖ ಸಂಪೂಜ್ಯ ಸುಮನಸ ಧೇನು ಶರಣ ಜನರ್ಗೆ ಸಂತತ ಆ ನಮಿಸುವೆ ನಳಿನಜಪಿತ ನಿ ನಿರವದ್ಯ ನಿರುಜ ಬ್ರ ಹ್ಮಾಣಿ ಸುರನಿಕರ ನಿಲಯನುಸಂ ಧಾನಕೆ ಕೊಡು ಬಹುವಿಧಕರ್ಮ 2 ಸೇವ್ಯ ದಾರವಿಂದ ಮಹಂತಾ ಸತ್ವಾದಿ ತ್ರಿಗುಣವಿ ದೂರ ದಿತಿಜ ಕೃತಾಂತಾ ಗುಣರೂಪ ಪಾರಾ ವಾರ ವಿಗತಾದ್ಯಂತಾ ಶ್ರೀ ಭೂಮಿಕಾಂತಾ ಕಮಠ ವರಹ ಕ ಕಶಿಪು ವಿದಾರಣನೆ ಭಾ ಗೀರಥಿಯ ಪದನಖದಿಪಡದಂಗಾರ ವರ್ಣನೆ ಭೃಗುಕುಲೋದ್ಭವ ವಾರಿನಿಧಿಬಂಧನ ವನೌಕಸ ವಾರ ಪೋಷಕ ನಂದಗೋಪ ಕು ಮಾರ ತ್ರಿಪುರ ವಿದೂರ ತುರಗವನೇರಿದ ಜಗನ್ನಾಥವಿಠಲ ಸಾರುವೆ ತವÀ ಪದಪಂಕಜ ಜಂ ಭವ ಭಯ ತಾರಕ ನಿನ್ನವರೊಳು ತತ್ವ ವಿಚಾರಕೊಡು ಚಿರಕಾಲದಲಿ 3
--------------
ಜಗನ್ನಾಥದಾಸರು
ಜಯ ಜಯ ಜಯ ಜಯ ಜಯ ವಿಷ್ಣುಪಾದ ಜಯ ಶೇಷಗಿರಿಯಲ್ಲಿ ಮೆರೆವಂಥಾ ಪಾದ ಜಯ ಭಕ್ತಕೋಟಿ ಜೀವರ ಸಲಹುವ ಪಾದ ಸಿರಿ ಪಾದ 1 ಧ್ವಜ ವಜ್ರಾಂಕುಶ ಪದ್ಮ ಪಾದ ನಿಜದಿ ಸಲಹುವ ಗಂಗಾಜನಕನ ಪಾದ ಮದಗಜಗಮನನ ಪಾದ ಪಾದ 2 ಪೀತಾಂಬರಧರನ ಪಾದ ಪಾದ ಸೀತಾಪÀತೆ ದಿವ್ಯಹನುಮಾನುತ ಪಾದ ಪಾದ 3 ಹಾರ ಪದಕವಿಟ್ಟ ಪಾದ ತನ್ನ ನಾರಿ ಲಕುಮಿ ಸಹ ಮೆರೆವಂಥ ಪಾದ ಪಾರುಗಾಣಿಪ ದಿವ್ಯ ನೋಟದ ಪಾದ ಪಾದ ಭವವಾರುಧಿ ದಾಟಿಸುವ ದಿವ್ಯಪಾದ 4 ಮಕರ ಕುಂಡಲಧರನ ಪಾದ ತನ್ನ ಸಖ ಪಾಂಡವರಿಗೆ ಒಲಿದಂಥ ಪಾದ ಶಿಖೆಯೊಳು ಮಾಣಿಕ್ಯ ಕಿರೀಟನ ಪಾದ ಪಾದ 5 ಪಾದ ಪಾದ ಅಮೃತ ತಂದ ಪಾದ ಅಚ್ಚ ಭೂಮಿಯ ತಂದ ಪಾದ ಪಾದ 6 ಭೂಮಿಯನಳೆದಂಥ ಪಾದ ಭೂವ್ಯೋಮ ತ್ರಿವಿಕ್ರಮ ವಾಮನ ಪಾದ ಸ್ವಾಮಿ ಪರಶುಧರನ ಪಾದ ಪಾದ 7 ಗೋಕುಲನಂದನ ಪಾದ ಶ್ರೀಪತಿ ಬೌದ್ಧನ ಪಾದ ಪರಿ ನೆನಯಲಿ ಶ್ರೀಪ ಕಲ್ಕಿ ಪಾದ ಪಾದ 8 ಹತ್ತಾವತಾರ ಎತ್ತಿದ ಪಾದ ಭಕ್ತರನೆಲ್ಲಾ ಸಲಹುವ ಪಾದ ಮುಕ್ತಿದಾಯಕ ಕೃಷ್ಣನ ಪಾದ ಪಾದ 9 ಮೂರು ಹೆಜ್ಜೆ ಭೂಮಿ ಬೇಡಿದ ಪಾದ ತನ್ನ ಹಾರೈಸಿದ ಭಕ್ತರಿಗೋಸುಗ ಊರಿ ವೆಂಕಟಗಿರಿಯೊಳ್ ಮೆರೆವಂಥಾ ಭಕ್ತ ಪಾದ 10 ಪಾದ ಮಸ್ತಕದಿ ರಾರಾಜಿಸುವ ಕಿರೀಟನ ಪಾದ ಕಸ್ತೂರಿ ರಂಗನ ಪಾದ ಪಾದ 11
--------------
ಸರಸ್ವತಿ ಬಾಯಿ
ಜಾಹ್ನವಿ ಜನಕ ಮೂಜಗತ್ಪತಿ ಸುರಕುಲ ಸನಕಾ ದೀಜನ ಮನೋಹರ ಮಾಣಿಕ್ಯ ಕನಕಾ ವೈಜಯಂತಿ ಹಾರ ಪಾವನ್ನ ಪದಕ ಪ ಕೇಶಿಭಂಜನ ವ್ಯೋಮಕೇಶ ವಂದಿತ ಪಾದ ಕ್ಲೇಶನಾಶನ ವಾತೇಶನ ಜನಕ ಕೇಶರಿರುಹ ಮುಂಜಿಕೇಶನೆ ಕುಂಕುಮ ಶೌರಿ 1 ವಾರುಣಿ ಪತಿನುತ ವಾರುಣನ ಭಯ ನಿ ವಾರಣಾ ವಾರಣಾಶಿ ಪುರದರಸೆ ವಾರಣ ನಗರಿಯ ವಾರನಹತಪಲ್ಲ ವಾರುಣಿ ಪಾಣಿಯೆ ನಾರಾಯಣನೆ ಜೋ ಜೋ 2 ಮಾದೇವಿ ರಮಣ ಭೂಮಿದೇವಿ ಉದ್ಧಾರ ಮಾಧುರ್ಯ ವಚನ ಉಮಾದೇವಿ ವಿನುತಾ ಮಾಧಾರ ಮಹಶೂರ ಮತ್ಕುಲನೆ ಪ್ರೇ ಮಾಧವ ರಾಯಾ 3 ಗೋವಳಿ ಪರಿಪಾಲ ಗೋವಳೇರಾ ಪ್ರಿಯಾ ಗೋವುಗಳ ಕಾಯಿದ ಗೋವಳರಾಯಾ ವಿಪ್ರ ಸಂರಕ್ಷ ಗೋವಿದಾಂಪತಿ ರಂಗ ಗೋವಿಂದ ನಂದ 4 ಮಧುಕೈಟಭಾಸುರ ಮದಗರ್ವ ಮರ್ದನ ನಿತ್ಯ ಮಧುರನ್ನ ಪಾನಾ ಮಧುರಾಪುರ ಪಾಲ ಮದಗಜ ಹರಣಾ ಶಾ ಮದವರ್ಣ ಶರೀರ ಮಧುಸೂದನನೆ 5 ಇಷ್ಟಭಕ್ತರ ಕುಲ ಇಷ್ಟದೈವವೆ ಸರ್ವ ಇಷ್ಟಾರ್ಥ ಕೊಡುವ ಬಲಿಷ್ಟನು ನಿನ್ನ ಇಷ್ಟ ಅಷ್ಟಯೆಂದು ತಿಳಿಯಲಿ ವಶವಲ್ಲ ವಿಷ್ಣು ಸರ್ವೋತ್ತಮ ವಿಶ್ವನಾಟಕನೆ6 ಅಕ್ರಮದಲಿ ಸ್ವರ್ಗ ಆಕ್ರಮಿಸಿ ಬಲಿ ವಿಕ್ರಮನಾಗಿ ಕಾಲಕ್ರಮಣಿ ಮಾಡೆ ಶಕ್ರಮರ್ಚಿಸೆ ಅನುಕ್ರಮನಾಗಿ ಪ ರಾಕ್ರಮದಲಿ ಬೆಳದೆ ತ್ರಿವಿಕ್ರಮನೆ 7 ವಾಮಲೋಚನೆಯರ ವಾಮನ ಕೆಡಿಸಿದೆ ವಾಮನವಾಶಿಷ್ಟವಾ ಮುನಿವಂದ್ಯ ವಾಮನದಲಿ ದಾನವಾಮನ್ಯಗಳರನ್ನು ಅ ವಮಾನ ಮಾಡಿದೆ ಸಿರಿವಾಮನನೆ 8 ಶ್ರೀಧರ ರಮಣನೆ ಶೃಂಗಾರ ವಾರಿಧಿ ಶ್ರೀಧನ ಸಂಪತ್ತಾಶ್ರಿತ ಜನರಿಗೆ ಶ್ರೀಧೇನು ನೀನಯ್ಯಾ ಶ್ರೀ ಕರುಣಾಕರ ಶ್ರೀದೇವಿ ಉರಭೂಷಾ ಶ್ರೀಧರನಂತಾ 9 ಋಷಿಕೇಶನ ತಾತ ಋಷಿಜನ ಸಂಪ್ರೀತ ಋಷಿಕುಲೋದ್ಭವ ಪುರುಷ ರಾಮ ಮಹಾ ಋಷಿನಾಮಧೇಯನೆ ಋಷಿಪತ್ನಿ ಪಾಲನೆ ಋಷಿಗಳ ಒಡೆಯನೆ ಹೃಷಿಕೇಶ ದೇವ 10 ಪದುಮಜಾಂಡದಲ್ಲಿ ಪದುಮೆ ಮಾತನು ಕೇಳಿ ಪದುಮನಾಭಿಯಲ್ಲಿ ಪದುಮಜನ ಪೆತ್ತ ಪದುಮಾಸ್ಯ ಪದುಮಾಕ್ಷ ಪದುಮಕರನೆ ಪಾದ ಪದುಮ ಮಿಗಲು ಕಾಂತಿ ಪದುಮನಾಭನೆ11 ಧಾಮನಿಧಿಕುಲನು ಧಾಮನೆ ನಿರುತ ತ್ರಿ ಧಾಮನಿವಾಸ ಸುಧಾಮನ ಮಿತ್ರ ಧಾಮ ಪುಣ್ಯಧಾಮ ಭಕ್ತ ಹೃದ್ವನಜ ಧಾಮ ಮಧುಕರನೆ ದಾಮೋದರ ಧರ್ಮಾ 12 ಶಂಖ ಸುರಾಹರಾ ನಿಃಶಂಕ ಚರಿತ ಶಂಖಪಾಣಿ ಶಶಾಂಕ ಸುವದನ ಸಂಖ್ಯೆಯಿಲ್ಲದೆ ತಾಯಿ ಸಂಕಲೆ ಹರಿಗಡಿದೆ ಸಂಕರುಷಣನುವುಜ ಸಂಕರುಷಣನೆ 13 ಪ್ರಧಾನ ಮೂರುತಿ ಪ್ರದ್ವೀಪ ವರ್ಣ ಸುಪ್ರದಾಯಕನೆ ಪ್ರದೇಶ ಪರಿಮಾಣ ವರಪ್ರದ ಸಿದ್ಧನೆ ಪ್ರದ್ಯುಕ್ತ ಅವ್ಯಕ್ತ ಪ್ರದ್ಯುಮ್ನ ವಿಶ್ವ14 ವಾಸುವಾನುಜ ಶ್ರೀನಿವಾಸ ಪುಂಡ್ರೀಕ ವಾಸುದೇವನ ಶಮನಪುರದಲ್ಲಿ ವಾಸಮಾಡಿಸಿದಯ್ಯಾ ವಾಸವಾರ್ಚಿತ ಶ್ರೀ ವಾಸುದೇವ 15 ಅನುಗಾಲವು ನಿನ್ನ ಅನುಸರಿಸಿದೆ ನಾನು ಅನುಕೂಲವಾಗಿ ಎನ್ನನು ಸಾಕುವುದು ಅನುಮಾನವ್ಯಾತಕೆ ಅನಿಮಿತ್ತ ಬಂಧು ಅನಿರುದ್ಧ ಶ್ರೀಶಾ 16 ಪುರುಷ ಪುರುಷ ಶ್ರೇಷ್ಠ ಪುರುಷಾರ್ಥ ಕಾರಣ ಪುರುಷೇಶ್ವರ ತತ್ಪುರುಷಾದಿ ಪುರುಷ ಪುರುಷ ಬೀಜ ವೇದ ಪುರುಷ ಪರಮ ಪುರುಷ ಪುರುಷರು ಮೋಹಿಸುವ ಪುರುಷೋತ್ತಮನೆ 17 ಅಕ್ಷಯ ಬಲ ಸಹಸ್ರಾಕ್ಷ ರಕ್ಷಕ ಅಕ್ಷರಪರ ಬ್ರಹ್ಮ ಗೀರ್ವಾಣಧ್ಯಕ್ಷ ಅಕ್ಷಯ ಪಾತ್ರಿಯ ಶಾಖಾದಳವನ್ನು ಅಕ್ಷಯ ಮಾಡಿದಧೋಕ್ಷಜ ಚಕ್ರಿ 18 ನರಸಖ ನರಹರಿ ನಾರಾಯಣ ವಾ ನರ ದಳನಾಯಕ ನಾರದ ವಿನುತ ನರಕ ಉದ್ಧಾರಕ ನರಕಾಂತಕ ಕಿ ನ್ನರ ಸುರನರೋರಗ ವೃಂದ ನರಸಿಂಹ 19 ಸಚ್ಚಿದಾನಂದಾತ್ಮ ಸಚಲ ವಿಗ್ರಹನೆ ಸಚ್ಚರಾಚರದೊಳೂ ಗುಣಪರಿಪೂರ್ಣ ಸಚ್ಛಾಸ್ತ್ರದಲಿ ನಿನ್ನ ಸಾಮರ್ಥಿ ಪರಿಪೂರ್ತಿ ಸಚ್ಚೂತ ಚುತಿ ದೂರ ಚಿನ್ಮಯ ರೂಪಾ 20 ಜನನ ಮರಣ ನಾಶ ಜನನಾದಿಕರ್ತಾಂ ಜನಸುತಗತಿ ಪ್ರೇಮಾಂಜನ ಗಿರಿಧಾಮ ಜನಕವರದ ಸಜ್ಜನರಘದಹನ ದು ರ್ಜನರ ಕುಲರಾತಿ ಜನಾರ್ದನನೆ 21 ವೀಂದ್ರವಾಹನ ಮಹೇಂದ್ರಧಾರನೆ ಗ ಜೇಂದ್ರನ್ನ ಬಿಡಿಸಿ ನಕ್ಷೇಂದ್ರನ ಸೀಳಿ ನಾ ಗೇಂದ್ರ ಶಯನ ಗುಣಸಾಂದ್ರ ಗೋಕುಲ ಚಂದ್ರ ಇಂದ್ರಮಣಿ ನಿಭ ರಾಮಚಂದ್ರ ಉಪೇಂದ್ರಾ 22 ಹರಿ ಎನುತಾ ಹರಿ ಹರಿದು ಓಡಿ ಬರೆ ಹರಿದು ಪೋಗಿ ಪರಿಹರಿಸಿದ ಖಳನ ಹರಿ ಹರಿಯು ನಲಿವನೆ ಹರಿರೂಪ ಪರಿ ಹರಿನಾಮವೆ ಗತಿ ಹರಿ ಸರ್ವೋತ್ತಮಾ23 ಕೃಷ್ಣದ್ವಯಪಾಯನ ಉತ್ಕøಷ್ಟ ಮುನೇಶ ಕೃಷ್ಟಿಗೆ ಬಂದ ಕಷ್ಟ ಓಡಿಸಿದೆ ಕೃಷ್ಣವತ್ರ್ಮನೆ ಸಂತುಷ್ಟೀಲಿ ಸುಖಬಡುವ ಕೃಷ್ಣಾವತಾರ ಕೃಷ್ಣ ಕಮಲೇಶ 24 ನಿನ್ನ ಮಹಿಮೆಯನ್ನು ಬಣ್ಣಿಸಲಳವಿಲ್ಲ ನಿನ್ನೊಳಗೆ ನೀನು ಬೀಯ ಬೀಜವನು ಎನ್ನ ಪಾಲಿಸುವುದು ವಿಜಯವಿಠ್ಠಲ ಪ್ರಸನ್ನ ಭಕ್ತರ ವರದ ಬಾಲ ಗೋಪಾಲ ಜೋ ಜೋ 25
--------------
ವಿಜಯದಾಸ
ಜೋ ಜೋ ರುಕ್ಷಿಣಿರಮಣ ಜೋ ಜೋ ಕಲ್ಯಾಣ ಜೋ ಜೋ ಗುಣಪರಿಪೂರ್ಣ ವೆಂಕಟರಮಣ ಪ. ರನ್ನ ಮಾಣಿಕದೊಜ್ರ ಚಿನ್ನ ಮಂಟಪದಿ ಘನ್ನ ನವರತ್ನದಿಂ ಮೆರೆವ ತೊಟ್ಟಿಲೊಳು ರನ್ನೆರಿಬ್ಬರ ಕೂಡಿ ನಲವಿಂದ ಕೃಷ್ಣ ಸನ್ನುತನಾಗಿ ಸುರರಿಂದ ಪವಡಿಸಿದ ಜೋ ಜೋ 1 ಕನಕಮಯ ಸರಪಳಿ ಥಳಥಳನೆ ಹೊಳೆಯೆ ಮಿನುಗುವಾಭರಣಗಳು ಝಗ ಝಗಿಸುತಿರಲು ಸನಕಾದಿ ಒಡೆಯನ ಫಣಿಪ ಹಿಂತೂಗೆ ಮುನಿವರನು ಮುಂದೆ ತಾ ಲಾಲಿ ಪಾಡಿದನು ಜೋ ಜೋ 2 ವೇದವನೆ ಕದ್ದವನ ಕೊಂದವನೆ ಜೋ ಜೋ ಸಾಧಿಸಿ ಸುಧೆ ಸುರರಿಗುಣಿಸಿದನೆ ಜೋ ಜೋ ಜಲಧಿ ಮೇದಿನಿ ತಂದೆ ಜೋ ಜೋ ಸಾಧಿಸಿ ಸುಧೆ ಸುರರಿಗುಣಿಸಿದನೆ ಜೋ ಜೋ 3 ಬಲಿಯನೊಂಚಿಸಿದಂಥ ತರಳನೆ ಜೋ ಜೋ ಕುಲವನೆ ಸವರಿದ ಬಲಶಾಲಿ ಜೋ ಜೋ ಲಲನೆ ಸೀತೆಯ ತಂದ ಶ್ರೀರಾಮ ಜೋ ಜೋ ಮೆಲಲು ಪಾಲು ಬೆಣೆÉ್ಣ ಕದ್ದವನೆ ಕೃಷ್ಣ ಜೋ ಜೋ4 ತ್ರಿಪುರ ಸತಿಯರ ವ್ರತವಳಿದೆ ಜೋ ಜೋ ಚಪಲತನದಿಂ ಹಯವನೇರಿದನೆ ಜೋ ಜೋ ಅಪರಿವಿತದವತಾರದಿಂ ಬಳಲಿ ಬಂದು ನಿಪುಣರೆಲ್ಲರು ಸ್ತುತಿಸೆ ಪವಡಿಸಿದೆ ಕೃಷ್ಣ ಜೋ ಜೋ 5 ಅರಸು ಜಯದೇವಿ ಸಂಕರ್ಷಣನೆ ಜೋ ಜೋ ಸಿರಿದೇವಿಪ್ರಿಯ ಶ್ರೀ ನರಹರಿಯೆ ಜೋ ಜೋ ವರರುಕ್ಮಿಣಿ ಸತ್ಯವರ ಕೃಷ್ಣ ಜೋ ಜೋ ಅರಸಿ ಪದ್ಮಾವತಿ ಸಹಿತ ವೆಂಕಟನೆ ಜೋ ಜೋ6 ನಾರದಾದಿಗಳೆಲ್ಲ ನರ್ತನದಿ ಪಾಡೆ ಊರ್ವಶಿ ಅಪ್ಸರರು ನೃತ್ಯವನು ಮಾಡೆ ತೋರೆ ಗಂಧರ್ವರು ಗಾನಗಳ ರಚನೆ ಸಾರಿಸಾರಿಗೆ ಭಕ್ತರೆಲ್ಲ ನುತಿಗೈಯೆ 7 ಭಕ್ತನಾದ ವಾಯು ಸಹಿತ ಪವಡಿಸಿದೆ ಜೊತ್ತಾದ ತೊಟ್ಲುಗಳು ಭೃತ್ಯರು ತೂಗೆ ಮತ್ತೆ ನಿವಿ್ಮೂರ್ವರಿಗೆ ನಿದ್ರೆ ಇನ್ನುಂಟೆ ಭಕ್ತರನು ಸಲಹಲು ಲೀಲೆ ಕೈಕೊಂಡೆ ಜೋ ಜೋ 8 ಶ್ರೀಪಾದಪದ್ಮಯುಗಳಕೆ ಎರಗಿ ನಮಿಪೆ ಗೋಪಾಲಕೃಷ್ಣವಿಠ್ಠಲನೆ ನೀ ಸಲಹೊ ಶ್ರೀ ಪದ್ಮಭವ ಭವರಿಂ ಸೇವೆ ಕೊಳುತ ಈ ಪಯೋಜ ಭವಾಂಡದೊಳು ಲೀಲೆ ತೋರ್ಪೆ ಜೋ ಜೋ9
--------------
ಅಂಬಾಬಾಯಿ
ತಾ ಕಾಯುತಿದ್ದ ಕೃಷ್ಣನು ಗೋಪಾಲರನೂಗೋಕುಲದಲ್ಲಿ ಗೂಢನೂ ಪುೀಕುಂಭಿನಿಯೊಳಗಿರುತಿಹ ದುಷ್ಟರನೂಕುವ ಬಿಲದಲಿ ಅನುಪಮ ಧೀರಾ ಅ.ಪಅಸಿತ ಪಕ್ಷವು ಬಂದುದೂ ಮಾಸಗಳೊಳುಎಸೆವೇಕಾದಶಿಯೆಂಬುದು ಬರಲು ಅಂದುಬಸವಾಸುರಾನಾ ಬಡಿದು ತಾನಂದು ವ್ರಜದಿ ವಸುಧೇಶ ನಿದ್ದನೊಲಿದು ಅಸುರನು ಅಳಿಯಲು ಆ ವ್ರಜವುಳಿಯಲು ಹಸುಗಳು ಹೆಚ್ಚಲು ಹರಿ ತಾನಲಿಯಲು ವಸಗೆವ್ರಜದೊಳಗೆ ಬಹುಮಸಗೆ ಹೆಸರಾಗೆ 1ದ್ವಾದಶೀ ದಿವಸಾದಲ್ಲಿ ಉದಯಕಾಲವಾದುದು ''ತದಲ್ಲಿ ಶ್ರೀಕೃಷ್ಣನಿಗೆಬೋಧವಾಗಲು ಬೇಗದಲಿ ಬಾಲರು ಸಹಾ ಮಾಧವಾ ಮುದದಿಂದಲಿಕಾದಿರೆ ಗೋವ್ಗಳ ಕಾನನಮಧ್ಯದಿಕಾದಲು ಬಂದಾ ಕೇಶಿಯನುದಯದಿಕಾದಿ ಅಸುವಸಿಗಿದಿ ವೊದ'ದೀ ಈ 'ಧದಿ 2ವೃಂದಾಖ್ಯವಾದವನಾದಿ ಗೋಪಾಲಕರಾ ವೃಂದದಾ ವರಸ್ತೋಮವಾಮದಿ ನಿಂದಿದ್ದನಾಗಾಕಂದರ್ಪಕೋಟಿತೇಜದಿ ಕುಂಭಿನಿಯನ್ನು ಹೊಂದಿಸಿದನು ಹರುಷದಿ ಮಂದರಧಾರನು ಮಂಜುಳ ಮ'ಮನು ನಿಂದಿಹ ನೀರನು ನಿಜಗುಣಧಾಮನು ಅಂದು ಅಜಬಂಧು ತಾನೆಂದೂ ಅಲ್ಲಿನಿಂದು3ಘನ ನೀಲಾಳಕದ ವೃಂದ 'ುಶ್ರಿತವಾದಾಮಣಿಮಯ ಮಕುಟದಿಂದಾ ಮೂಡುವ ಕಾಂತಿಪಣೆಯಲ್ಲಿ ಮೊಳೆಯುವಂದಾ ಕಸ್ತುರಿತಿಲಕ ಗಣನೆಗೆ ಬರುವ ಛಂದಾ ಗುಣಿಸುವರಾರಿದ ಗುಣನಿಧಿಯೊಪ್ಪಿದ ಪ್ರಣತಪ್ರೇಮದ ಪದ ಮುಖ ಪದ್ಮದಗುಣನೂ ಗುರುತರನೂ 'ನಯವನೂ 'ವರಿಪನೂ 4ಸಿಂಗಾರಿಯ ಸೋಲಿಸುವಾ ಸುಭ್ರುವದಿಂದಾಮಂಗಳವಾದ ಮುಖದ ಮನ್ನಿಸುತಿಹಕಂಗಳ ಕೋಡಿವರಿವಾ ಕಟಾಕ್ಷವನ್ನೂ ಸಂಗಿಸಿದ ಸುಸ್ಮಿತವಾ ತೊಂಗುತ ತೋರಲು ತನ್ನಾಸಿಕವೂರಂಗಿಸಿ ರಾಜಿಸೆ ರದನಚ್ಛದವೂಹೊಂಗೆ ುೀರಂಗೆ ನೋಳ್ಪಂಗೆ ಭವ'ಂಗೆ 5ಕುಂಡಲಗಳ ಕಾಂತಿಯೂ ಕರ್ನಾಗಳಲ್ಲಿಮಂಡಿತವಾಗಿ ಮತ್ತೆಯೂ ಮುಕುರದಂಥಾಗಂಡ ಸ್ಥಳಗಳಲ್ಲಿಯೂ ಗೋಚರಿಸುತ ದಿಂಡಾಗಿ ತೋರೆ ದೀಪ್ತಿಯೂ ಪುಂಡರೀಕಾಕ್ಷನು ಪೊಳೆಯುತಲಿದ್ದನು'ಂಡುತ ಖಳರನು ಹೆದರುವ ಜನರನುಕಂಡೂ ಕರಕೊಂಡೂ ಕೈಕೊಂಡೂ ಹುರಿಗೊಂಡೂ6ವೇಣುವ 'ವರಿಸಲು 'ೀರನಾ ಮುದ್ದೂತಾನೊಂದು ತೇಜ ತೋರಾಲು ಅಂಗುಲೀಗಳುಅನುಕೂಲಗಳಾಗಾಲು ಉಂಗುರಗಳೊಳು ಮಾಣಿಕ್ಯಗಳು ಮೂಡಲುಭಾನುವ 'ುೀರಲು ಬಾಹುಗಳೊಪ್ಪಲುಗಾನಗಳಾಗಲು ಗೋವ್ಗಳು ಕೇಳಲುತಾನು ತೋರಿದನು ಜಾಣುವನು ಜಗಧರನೂ 7ಭೋಗಿಯ ಭೋಗದ ಹಾಗೆ ಬಾಹುಗಳಿರೆತೂಗಿ ಜಾನುಗಳ ತಾಗೆ ಕೇಯೂರಗಳರಾಗ ರಂಜಿತಗಳಾಗೆ ಕಂಕಣವಲಯ ಯೋಗದಿಂದಿರೆ 'ೀಗೆಆಗಿನ ಕಾಲದಲಮರಿದ ಶೃಂಗದುೀಗುರು ಕೃಷ್ಣನ ಇಷ್ಟ ಕೊಳಲಿನಯೋಗೀ ಇಹಭಾಗೀ ಗತರಾಗೀ ಗುರಿಯಾಗೀ8ಕಂಬುಕಂಧರದಿಂದಲೂ ಅಲ್ಲಿರುತಿಹತೊಂಬೆ ತಾರಹಾರಗಳು ಲಕ್ಷ್ಮಿಯು ತಾನುಇಂಬೀನುರದಲಿರಲು ಕೌಸ್ತುಭಕಾಂತಿ ತುಂಬಿ ನಾಭಿಯ ತಾಕಲುಅಂಬುಜ ಸಂಭವನಾಲಯ'ರಲುಜೃಂಭಿಸಿ ಮಾಲೆಯು ಜೋಲಿಡುತಿರಲೂನಂಬೀ ಬಹುತುಂಬೀ ುಹವೆಂಬೀ ಜಗದಿಂಬೀ 9ಕಟಿತಟದತಿಶಯವು ಕಾಂಚಿಯಧಾಮಾಸ್ಪುಟವಾಗಿ ಸ್ವರ್ಣವಸ್ತ್ರವು ಊರುಗಳಲ್ಲಿಗೆಘಟಿಸಿರೆ ಗೂಢವಾದವೂ ಜಾನುಗಳಿಂದ ಪಟು ಜಂಘೆ ಪುದುಗಿಹವೂಕಟಕಗಳಿಂದಲು ಕಡುಚೆಲುವೆನ್ನಲುಅಟಸುತಲಡಿಗಳು ಅತಿಮೃದುವೆನ್ನಲುದಿಟನೂ ನರನಟನೂ ಭವತಟನೂ ಪಟುತರನೂ 10ಕಮಲ ಸೋಕಲು ಕಂದುವ ಲಕ್ಷ್ಮೀಯಕರಕಮಲಕೆ ಕಾಂತಿಯನೀವ ಯೋಗಿಯ ಹೃದಯಕಮಲದಿ ಕುಳಿತಿರುವ ುೀ ದಿವ್ಯಪಾದ ಕಮಲವಕಾಣಿಸುವಾಕಮಲೆಯ ಕಾಂತನ ಕಮಲಜ ಜನಕನ ಕಮಲವ ಕಾವನ ಕಾಂತಿಯ 'ುೀರ್ವನಕ್ರಮವೂ ಕಾಮದವೂ ಶ್ರಮ ಶಮವೂ ಶೋಭನವೂ 11ಬಲಿಯ ಬಳಿಗೆ ಬಂಜವು ಭಾಗ್ಯವನಿತ್ತುಸಲ'ದ ಸೌಮ್ಯಗಳಿವು ಬ್ರಹ್ಮನು ಬಂದುತೊಳೆಯಲು ಬಂದು ತೋರುತಿದ್ದವು ಆ ಪಾದಗಳೆ ಇಳೆಯೊಳಗಿರುತಿಹವೂಕಲಿಮಲಹರಗಳು ಕಲಿಗಳ ಕಾವವುತಾಳಿದವು ನಾಗನ ತದ್ವಶವಾಗಲುಸಿಲುಕೀ ಸಿರಿತುಳುಕೀ ಅಘಕಲಕೀ ಅವು ನಿಲುಕೀ 12ಅಂಕುಶವರ'ಂದವು ಧ್ವಜವಜ್ರವಂಕೀತವಾಗಿಯಾಢ್ಯಾವು ಲಕ್ಷ್ಮಿಯ ಕುಚಕುಂಕುಮವನ್ನು ಕದ್ದವು ಭೂ'ುಗೆ ಪಾದ ಪಂಕಜಗಳು ಬಂದಾವುಕಿಂಕರರಭಿಮತ ಕಂಕೆಯನಟ್ಟುತಮಂಕುಗಳೆನಿಸುತ ಮಲೆವರ ಮುರಿಯುತಶಂಕೆ ಸಲೆ ಕೊಂಕೆ ಹೊರೆುಂಕೆ ಸಿರಿಸೋಂಕೆ13ಈ ರೀತಿಯಲಿ ಈಶನು ಇರುತಲಿರೆನಾರದ ಬಂದು ನಿಂದನು ಕಾಣುತ ಕೃಷ್ಣಕಾರುಣ್ಯ ನಿಧಿ ಕೇಳ್ದನು ಕ್ಷೇಮಗಳನು ತೋರುತ ರೂಪವ ತಾನುವಾರಿಜನೇತ್ರನು ವರದವರೇಣ್ಯನು'ುೀರದೆ ಮುನಿಯನು ಮಾತನು ನುಡಿದನುಸಿರೀ ಅನುಸಾರೀ ಬಗೆದೋರೀ ಮುರವೈರೀ 14ಅರಿತನು ಆತನನುವ ಆ ಕಂಸಗಾಗಅರು' ತೋರಿಸಿದರ್ಥವ ಅದು ತನ್ನ ಕಾರ್ಯನೆರವೇರುವತಿಶಯವ ತಾನಾಗಿ ಮುನ್ನ ಪಿರಿದಾಗಿ ಪ್ರೇರಿಸಿರುವಕರುಣಾವನಧಿಯು ಕಾರ್ಯವ ತೋರಿಯುಮುರಹರಮೂರ್ತಿಯು ಮುಂದಿರುವಲ್ಲಿಯುಅರಿತೂ ಅಲ್ಲಿಕುಳಿತೂ ಬರೆಹೊತ್ತೂ ುದಿರಿತ್ತು 15ಕಾಣುತ ಮುನಿಕೃಷ್ಣನ ಮಾನಸದಲ್ಲಿಧ್ಯಾನಿಸಿದನು ದೇವನ ತಾ ಬಂದುದನ್ನುತಾನು ತೋರಿಸಲು ತತ್ತ್ರಾಣ ಬಂದಾಗ ನ'ುಸಿ ಪ್ರಾಣೇಶಗತಿಪ್ರ'ೀಣಾಕೃಷ್ಣಾ ಕಂಸಗೆ ಹೊದ್ದುವ ರೀತಿಗೆಶ್ರೀನಿಧಿಯಾದಗೆ ಸೂಚಿಸಿ ಸ್ವಾ'ುಗೆತಾನು ಅಜಸೂನು ಅರು'ದನು ಅರಿತದನೂ 16ಮಾನುಷಮೂರ್ತಿಯಾಗಿಯೆ ಭೂ'ುಗೆ ಬಂದುಆನತರನು ಆಳಿಯೆ ಅರ್ಥವ ಸಲಿಸಿಧೇನುವಾಗಿಹೆ ಧೊರೆಯೆ ಯೆನ್ನುತ 'ೀಗೆ ಆನತನಾಗುತಲಿಯೆಮಾನಸಪುತ್ರನು ಮಾತನು ನುಡಿದನುಶ್ರೀನಿಧಿ ತಿರುಪತಿ ವೆಂಕಟರಮಣನುತಾನೂ ತಾಳಿದನೂ ಮಾನಸನೂ ಮಾಡ್ದುದನೂ 17
--------------
ತಿಮ್ಮಪ್ಪದಾಸರು
ತ್ರಿಮೂರ್ತಿಗಳ ಲಾಲಿ ಜೋಜೋ ಬಾಲಕೃಷ್ಣ ಜೋಗುಳವ ಹಾಡುತ್ತ ತೂಗುವೆ ನಾ ಪ. ನವರತ್ನ ಖಚಿತದ ತೊಟ್ಟಿಲ ಕಟ್ಟಿ ನಾಗಸಂಪಿಗೆ ಜಾಜಿ ಮಾಲೆಯನ್ಹಾಕಿ ನಾಲ್ಕುವೇದದ ಸರಪಣಿ ಬಿಗಿದು ನಾಗಶಯನನ ಮಲಗಿಸಿ ಬೇಗ ರಾಗದಿ ಅನುಸೂಯ ಪಾಡಿ ತೂಗಿದಳು ಜೋ 1 ಮುತ್ತು ಮಾಣಿಕ್ಯದ ತೊಟ್ಟಿಲ ಕಟ್ಟಿ ಮುತ್ತು ಪವಳದ ಸರಪಣಿ ಬಿಗಿದು ಮುದದಿ ಮಲ್ಲಿಗೆ ಜಾಜಿ ಪುಷ್ಪವ ಕಟ್ಟಿ ಮುಕ್ತ ಬ್ರಹ್ಮನ ಮಲಗಿಸಿ ಬೇಗ ಅರ್ತಿಲಿ ಅನಸೂಯ ತೂಗಿದಳಾಗ 2 ನೀಲ ಮಾಣಿಕ್ಯದ್ವಜ್ರತೊಟ್ಟಿಲ ಕಟ್ಟಿ ಮೇಲೆ ಕೆಂಪಿನ ಸರಪಳಿ ಬಿಗಿದು ಮಾಲತಿ ಮಲ್ಲಿಗೆ ಮಾಲೆಯ ಕಟ್ಟಿ ನೀಲಕಂಠನ ಮಲಗಿಸಿ ಬೇಗ ಬಾಲನ ಅನಸೂಯ ತೂಗಿದಳಾಗ 3 ಈ ಪರಿಯಿಂದಲಿ ತೂಗುತಿರೆ ತಾಪಸ ಅತ್ರಿಋಷಿಯಾಗ ಬರೆ ಭೂಪರ ತೊಟ್ಟಿಲು ಕಾಣ ಬರೆ ಪರಿ ಶಿಶುಗಳು ಯಾರೆನ್ನುತಾ ಶ್ಚರ್ಯದಲಿ ಸತಿಯ ಕೇಳುತಾ 4 ನಮ್ಮ ಪುಣ್ಯದ ಫಲ ವದಗಿತೆಂದು ಮುನ್ನ ತ್ರಿಮೂರ್ತಿಗಳು ಶಿಶುರೂಪದಿ ಬಂದು ತನ್ನ ಪತಿಯ ಕೂಡ ಅರುಹುತಲೆ ಚಿನ್ನರ ತೂಗುತ್ತ ಹರುಷದಿ ಚೆನ್ನ ಶ್ರೀ ಶ್ರೀನಿವಾಸನ್ನ ತೂಗಿದಳು 5
--------------
ಸರಸ್ವತಿ ಬಾಯಿ
ಥಳಕು ಥಳಕು ಹೊಳೆವೋತನ್ನ ಬೆಳಕು ತುಂಬಿಭವನದೊಳು ಝಳಕು ಝಳಕು ಬಂದ ನಮ್ಮಜಾಣರಂಗನ ನೋಡುವ ಬಾರೆ ಅಂಗನೆ ಪ. ನೀಲ ಮಾಣಿಕ ರತ್ನದಿವ್ಯನಿಲವುಗನ್ನಡಿ ಹೊಳೆವ ಮಹಲಗಳ ಇಳಿದು ಬಂದ1 ಕೋಟಿ ಕೋಟಿ ಸೂರ್ಯರಂತೆ ಧಾಟತೋರೋ ಅಂಗಳದಿ ದಾಟಿ ದಾಟಿ ಇಳಿದು ಬಂದ 2 ನೂರು ಸೂರ್ಯರ ಬೆಳಕುತೋರುವಂತೆ ದ್ವಾರಗಳನು ವಾರಿಜಾಕ್ಷ ಇಳಿದು ಬಂದ 3 ಮುತ್ತಿನ ತ್ವಾರಣನವರತ್ನ ಹಂದರ ದಾಟಿಚಿತ್ರ ಚಾವಡಿ ಇಳಿದು ಬಂದ 4 ವಜ್ರ ಮಾಣಿಕವು ಬಹಳ ಸಜ್ಜ ತೊರೋ ಅಂಗಳದಿ ನಿರ್ಜರೋತ್ತಮನು ಬಂದ 5 ಪಚ್ಚದ ಪಾವಟಿಗೆ ರತ್ನಹಚ್ಚಿದ ಹೊಸ್ತಿಲವ ದಾಟಿಅಚ್ಯುತಾನಂತ ಬಂದ 6 ನಾಗಶಯನ ತನ್ನ ಮನೆಯ ಬಾಗಿಲ ಮುಂದೊಪ್ಪುತಿರಲು ಭಾಗವತರ ಮ್ಯಾಳದಿಂದ ಬಂದ7 ರುದ್ರಾದಿಗೊಂದ್ಯನ ಮುಂದೆ ಅಧ್ಯಾನ(ಅಧೀನ) ವೆಂಬುವರು ಕೋಟಿಮುದ್ದು ತೋರೋದಮ್ಮ ಸಭೆಯು 8 ಅಲ್ಲೆ ಅಲ್ಲೆ ನಿಂತ ಜನರು ಚಲ್ವರಮೆ ಅರಸನ ಮ್ಯಾಲೆಮಲ್ಲಿಗೆ ಸೂರ್ಯಾಡೋರೆಷ್ಟ 9
--------------
ಗಲಗಲಿಅವ್ವನವರು
ದಯಮಾಡಿ ನಡೆಸೆ ಶಾರದೆ ದಯಮಾಡಿ ನಡೆಸೆ ಪ. ಹೃಯಾಂಗಣದಿ ಸದನವ ಮಾಡುತ ವಿಧವಿಧ ನವರಸದುದಯದ ತನಕ 1 ಭೃಂಗಕುಂತಳೆ ಕೃಪಾಪಾಂಗೆ ಬ್ರಹ್ಮಾಣಿ ಕು- ರಂಗನಯನೆ ಶ್ರೀರಂಗಭಕ್ತಳೆ 2 ಭೂರಿ ಶಾಸ್ತ್ರವಿಚಾರವ ಪಾಲಿಸೆ ಧೀರ ಲಕ್ಷ್ಮೀನಾರಾಯಣನ ಸೊಸೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ದರ್ಪಣದಲಿ ಮುಖ ನೋಡಿಕೊಂಡನೆ ಪ ಮಲ್ಲಿಗೆ ಮುಗುಳಿನ ತೆರದಲಿ ಶೋಭಿಪ ಪಲ್ಲುಗಳಲೆ ಸಿರಿಯುಗಲ್ಲವು ಭೂಪತಿಯಂದದಿ ಬೃಸ್ವರಾಬಿಲ್ಲಿನ ಸೌಭಗವು1 ಶರದುದಿತಾಮಲ ತರುಣಿಕರಾರ್ಚಿತ ಸರಸಿಜದಳನಯನಾಕರುಣಪೂರ್ಣ ಕಟಾಕ್ಷ ರಕ್ಷಣ ವರಪಲ್ಲವರರಸನು 2 ರತ್ನಕುಂಡಲದ್ವಯ ಸಂಶೋಭಿತ ಸ್ತೋತ್ರಯುಗಳ ನೇಮಮಸ್ತಕದಲಿ ಮಾಣಿಕ ಮುಕುಟ ಶ್ರೀ ಉತ್ತಮ ಮುಖಧಾಮ 3 ನಿತ್ಯಾನಂದ ಚಿದಾತ್ಮಕ ಶಕ್ತನು ಭಕ್ತಕಾಮಿತದಾತಎತ್ತುವೆ ಕರಯುಗ ತವ ಕಮಲಕೆ ಚಿತ್ರ ಚರಿತ್ರ ಗಾತ್ರಾ 4 ನಾಸಕ ಚಂಪಕ ಕೋಶವು ಬಿಂಬಾಧರ ಯುಗಳದೋಷರಹಿತ ಸುರಾಹ ಸರೋಜ ಇಂದಿರೇಶ ವದನ 5
--------------
ಇಂದಿರೇಶರು
ದಾತ ಅವಗುಣ ಧೂತ ಅವಗುಣ ಧೂತ ದೇವಾಧಿದೇವ ಶ್ರೀದೇವ ಅವಧೂತ ಧ್ರುವ ಜೀವದ ಜೀವ ದೇವರ ದೇವ ವಾಸುದೇವ 1 ಪ್ರಾಣಕ ಪ್ರಿಯ ಮುನಿಜನಾಶ್ರಯ ಙÁ್ಞನಿಗಳಿಗೆ ಸಾಹ್ಯ ಅನುಕೂಲ ನಮ್ಮಯ್ಯ 2 ಅನಾಥ ಬಂಧು ಘನಕೃಪಾಸಿಂಧು ಅನುದಿನ ದೊರೆವ ದೀನನಾಥನೆಂದೆಂದು 3 ಮನದ ಮಾಣಿಕ ಅಣುರೇಣುಕ ವ್ಯಾಪಕ ಅನಂತಕೋಟಿ ಬ್ರಹ್ಮಾಂಡ ನಾಯಕ 4 ಪರಮ ಉದಾರ ಕರುಣಾಸಾಗರ ತರಳ ಮಹಿಪತಿಸ್ವಾಮಿ ಇಹಪರ ಸಹಕಾರ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾರಿ ನೋಡುವನು ರಂಗಯ್ಯನಿಮ್ಮ ದಾರಿ ನೋಡುವನು ಮುರಾರಿ ಮುದ್ದು ವೈಯ್ಯಾರಿ ನಿನ್ನಯಮಾರಿ ತೋರೆಂದು ದಾರಿ ನೋಡುವನು ಪ. ಏಳು ಸಾವಿರ ಮನೆಯು ತೆರವೆಂದು ಹೇಳಿದನಿಮಗಾಗಿ ಜಾಳಿಗೆ ಮುತ್ತು ಜಡಿಸೆಂದ ಜಾಳಿಗೆ ಮುತ್ತು ರಂಗಯ್ಯ ಜಡಿಸೆಂದ ಪಾಂಡವರ ಆಳು ಮಂದಿಗಳ ತಂದು ಇಳಿಸೆಂದ 1 ಕುಂದಣ ಕುಂದಣ ರತ್ನ ರಚಿಸೆಂದ ರಂಗಯ್ಯಪಾಂಡವರ ಬಂಧುಗಳ ತಂದು ಇಳಿಸೆಂದ 2 ನೀಲಮೇಘಶ್ಯಾಮ ಮುತ್ತಿನ ಮಹಲು ರಚಿಸೆಂದಮ್ಯಾಲೆ ಮಾಣಿಕವ ರಚಿಸೆಂದ ಮ್ಯಾಲೆ ಮಾಣಿಕವ ರಚಿಸೆಂದ ರಂಗಯ್ಯ ಪಾಂಡವರ ಬಾಲಿಯರ ತಂದು ಇಳಿಸೆಂದ 3 ಸದನ ವಿಸ್ತರಿಸೆಂದಹದಿನದಿ ರತ್ನ ರಚಸೆಂದಹದಿನದಿ ರತ್ನ ರಚಸೆಂದ ರಂಗಯ್ಯಪಾಂಡವರ ಮುದದಿಂದ ತಂದು ಇಳಿಸೆಂದ 4 ಚದುರ ರಾಮೇಶನು ಮಡದಿಯರೆದುರಿಗೆಮುದದಿ ದ್ರೌಪತಿಯ ಕರೆಯೆಂದಮುದದಿ ದ್ರೌಪತಿಯ ರಂಗಯ್ಯ ಕರೆಯೆಂದ ವಜ್ರದ ಸದನದಿ ತಂದು ಇಳಿಸೆಂದ 5
--------------
ಗಲಗಲಿಅವ್ವನವರು