ಒಟ್ಟು 1321 ಕಡೆಗಳಲ್ಲಿ , 103 ದಾಸರು , 1056 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರಿತವರಿಗತಿ ಸುಲಭ ಹರಿಯ ಪೂಜೆ ಪ ಅರಿಯದವ ನಿರ್ಭಾಗ್ಯತರ ಲೋಕದೊಳಗೆ ಅ.ಪ. ಹೈಮಾಂಡ ಮಂಟಪವು ಭೂಮಂಡಲವೆ ಪೀಠ ಸೋಮ ಸೂರ್ಯರೆ ದೀಪ ಭೂರುಹಗಳು ಚಾಮರಗಳತಿ ವಿಮಲ ವ್ಯೋಮ ಮಂಡಲ ಛತ್ರ ಯಾಮಾಷ್ಟಕರಗಳಷ್ಟದಳದ ಪದ್ಮವುಯೆಂದು 1 ಮಳೆಯೆ ಮಜ್ಜನವು ದಿಗ್ವಲಯಂಗಳೇ ವಸನ ಮಲಯಜಾನಿಲವೇ ಶ್ರೀಗಂಧ ಧೂಪಾ ಇಳೆಯೊಳಗೆ ಬೆಳೆದ ಧಾನ್ಯಗಳೆಲ್ಲ ನೈವೇದ್ಯ ಥಳ ಥಳಿಪ ಮಿಂಚು ಕರ್ಪೂರದಾರತಿಗಳೆಂದು 2 ನಕ್ಷತ್ರ ಮಂಡಲವೇ ಲಕ್ಷ ದೀಪಾವಳಿಯು ದಕ್ಷಿಣೋತ್ತರ ಅಯನಗಳೇ ಬನವು ವೃಕ್ಷ ವಲ್ಲಿಜ, ಸುಫಲ ಪುಷ್ಪಗಳೊಳಗೆ ಲಕ್ಷ್ಮೀ ವಕ್ಷ ವ್ಯಾಪಕನಾಗಿ ತಾನೆ ಭೋಗಿಪನೆಂದು 3 ಗುಡುಗು ಸಪ್ತ ಸಮುದ್ರ ಸಿಡಿಲು ಘೋಷವೇ ವಾದ್ಯ ಪೊಡವಿಪರಿಗೀವ ಕಪ್ಪವೇ ಕಾಣಿಕೆಗಳು ಉಡುಪ ಭಾಸ್ಕರರ ಮಂಡಲಗಳಾದರ್ಶಗಳು ನಡೆವ ನಡೆಗಳು ಹರಿಗೆ ಬಿಡದೆ ನರ್ತನವೆಂದೂ 4 ಯುಗ ಚತುಷ್ಟಯವೆ ಪರಿಯಂಕ ಪಾದಗಳಬ್ದ ಬಿಗಿವ ಪಟ್ಟಿಗಳು ಕಂದಾಯ ಕಸಿ ಯೊ ಗಗನ ಮೇಲ್ಗಟ್ಟು ಸಂಕ್ರಮಣಗಳೇ ಬಡವುಗಳೂ ಭಗವಂತಗುಪಬರ್ಹಣಗಳು ಷಡೃತುಗಳೆಂದೂ 5 ನಾಗವಲ್ಲೆಗಳೆ ದಿವಸಗಳು ಕರಣವೇ ಕ್ರಮಕೆ ಯೋಗಗಳೇ ಚೂರ್ಣ ರಾತ್ರೆ ತಾಂಶೊಕ ಭೋಗವತೀ ಜಲವೆ ಗಂಡೂಷೋದಕ ಶುದ್ಧ ಸಾಗರವೆ ಪಾದೋದಕ ವಿರಾಡ್ರ್ರೂಪಗೆಂದು6 ಶಾತಕುಂಭೋಧರಾಂಡಾಂತಸ್ಥ ರೂಪ ಸಂ ಪ್ರೀತಿಯಿಂದಲಿ ಯಜಿಸಿ ಮೋದಿಪರನಾ ಮಿತ ಶೋಕರ ಮಾಡಿ ಸಂತೈಸುತಿಹ ಜಗ ನ್ನಾಥ ವಿಠಲ ಒಲಿದು ಸರ್ವ ಕಾಲಗಳಲ್ಲಿ 7
--------------
ಜಗನ್ನಾಥದಾಸರು
ಅರೋಗಣೆಯ ಮಾಡೋ ವಾರಿಜರಮಣಾ| ಸಾರಿದವರಿಗೆ ಅಭಯವನೀವಕರುಣಾ ಪ ಪೊಂಬ್ಹರಿವಾಣದಿ ರನ್ನಬಟ್ಟಲುಗಳು| ಅಂಬುಜಾನನರಿಸಿ ಲಕುಮಿಯವೆರಸಿ 1 ಪರಿಪರಿ ಮಾವಿನ ತನಿವಣ್ಗಳ ನೋಡಿ| ಮೆರೆವ ಸುದ್ರಾಕ್ಷ ದಾಳಿಂಬರ ಸವಿಯಾ 2 ಶಾಲ್ಯೋದನ್ನದಿ ಸುಘೃತ ಪರಿಪರಿಯ ವಿ| ಶಾಲ ಶಾಖಂಗಳ ಸವಿಯನೆ ಕೊಳುತಾ 3 ಪಂಚ ಭಕ್ಷ್ಯವು ಕೆನೆವಾಲು ಸೀಕರಣಿಯು| ಮುಂಚೆ ಶರ್ಕರದ ಪಾಯಸ ಪರಿಪರಿಯ 4 ದಧ್ಯೋದನ್ನದಲುಹಗಾಯಿ ಸ್ವಾದಿಸುತಾ| ಸದ್ವಿದ್ಯದ ಮನ ಕಲ್ಪತರುವೆಲ್ಲಾ 5 ಪತ್ರಸುಮನ ಫಲತೋಯಭಕ್ತರುಕೊಟ್ಟ| ರರ್ಥಿಲಿ ಕೊಂಬೊ ದಯಾಳುತನದಲ್ಲಿ6 ತಂದೆ ಮಹೀಪತಿ ನಂದನ ಸಾರಥಿ| ಎಂದೆಂದು ಸ್ಮರಣೆಗೊದಗಿ ಮುದ್ದು ಮುಖದಿ7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅವತಾರತ್ರಯ ಚರಣ ಸೇವಕರನ್ನು ಪೊರೆದ ಪ್ರಾಣೇಶನ್ನಹರುಷಾದಿ ವಂದಿಸಿ ವರಬೇಡಿರೈ ಪ ಕರುಣ ಸಾಗರ ಕಲ್ಪತರು ಭಕ್ತ ಕುಮುದ ಚಂದಿರನೆನಿಸುತಭೀಷ್ಟ ಸುರಿಸುವ ನೋಡಿರೈ ಅ.ಪ. ಸುದತಿ ಜಾನಕಿಯಾಪದಕೆರಗಿ ಪೇಳಿದ ಮುದದಿ ರಾಮನಹೃದಯ ವಾರುತಿಯಾಮುದ್ರಿಕೆಯ ಸಲಿಸುತ ವದಗಿದಸುರತ ಒಡೆದ ಕೀರುತಿಯಾಪಿಡಿಯಲ್ಕೆ ಕ್ಷಣದೊಳು ಕದನಕಂಠಕನೆನಿಪರಾವಣನೆದುರಿಸಿ ಗರ್ವ ಶಿಕ್ಷಿಸಲುಪುಚ್ಛದಲಿ ಪಟ್ಟಣ ಸುಟ್ಟು ದಹಿಸಿದಸದಯಕಾಮನ ಕಾರ್ಯ ಪೂರ್ತಿಯಾ 1 ದುರುಳ ಹರಣ ಸಂನುತ ಚರಣ ಕಮಲª Àಧರೆಯೊಳಗೆ ಪರಿಪರಿ ಮೆರೆದಾ 2 ಮರಳಿ ಭೂಸುರನು ಮಂದಿರದೊಳು ಜನಿಸಿತಾಗುರು ಮಧ್ವಮುನಿಯೆಂದು ಕರೆಸೀದನುವರವೇದವ್ಯಾಸರಾ ಕರುಣಪಡೆದು ದೇಶ ಸಂಚರಿಸಿದಾನಿಂದಕರ ಧಿಕ್ಕರಿಸಿದಾ ಸೇವಕರನುದ್ಧರಿಸಿದಾಗ್ರಂಥಗಳ ರಚಿಸಿ ಭರದಿ ಕಲಿ ಸಂಕರನೋಳ್ವಾದಿಸಿದಾಗುರು ಇಂದಿರೇಶನೆ ಧರೆಗೆ ಪಿತನೆಂದರುಹಿ ಸಾಧಿಸಿದಾಕರಕಂಜಜಾತದಿ ಕರಕೆ ಶಾಸ್ತ್ರದರಿವ ಬೋಧಿಸಿದಾನವರತ್ನ ಭಾಸಿತ ಕರಣಕುಂಡಲಮಕುಟ ಸಕಲಾಭರಣ ಭೂಷಿತಸುಮನಸೋತ್ತುಮ ಮುನಿಪ ಮಾನಂದಾತ್ಮಬುಜಗುಣದರಸೆ ಘನಸುಂದರ ಸುಖಪ್ರದ 3
--------------
ಗುರುಇಂದಿರೇಶರು
ಅಷ್ಟಮಠದ ಯತಿಗಳು ನೋಡಿ ದಣಿದವೆನ್ನ ಕಂಗಳು ಉಡುಪಿಯಲ್ಲಿರುವ ಅಷ್ಟಮಠದ ಶ್ರೀಪಾದಂಗಳವರ ಪ. ಸುಧಿಂದ್ರತೀರ್ಥ ಗುರುವರ್ಯರು ಬಂದ ಭಕ್ತರಿಗೆ ಕರುಣಾಮೃತ ಮಳೆಗರೆವರು ಶ್ರೀಹರಿಯ ತೋರುವರು ನೇಮದಿಂದಲಿ ಇವರ ನಾಮ ನೆನೆದರೆ ಸ್ವಾಮಿ ಶ್ರೀರಾಮನು ಪ್ರಸನ್ನನಾಗುವನು 1 ವಿಭುದಪ್ರಿಯತೀರ್ಥ ಗುರುವರ್ಯರು ಬಂದಾ ದುರ್ಜನರ ಮನವನು ಜಯಿಸುವರು ಮಹಾನುಭಾವರು ತರ್ಕನ್ಯಾಯ ವೇದಾಂತ ನಿಪುಣರು ಮಹಾಗುಣವಂತರು 2 ವಿದ್ಯಾಪುಣ್ಯತೀರ್ಥ ಶ್ರೀಪಾದಂಗಳವರು ಬಂದ ಸೇವಕರಿಗೆ ಬ್ರಹ್ಮವಿದ್ಯಾ ಪಾಲಿಸುವರು ರ್ದುಜನರ ದುರ್ಬುದ್ಧಿ ಒದ್ದಿ ಕೆಡಹುವವರು 3 ವಿಶ್ವೇಂದ್ರತೀರ್ಥರು ಈ ಗುರುವರ್ಯರು ವಾದಿರಾಜರ ಪೂಜಿಸುವರು ಜಗಕೆ ಸುಖವ ಸುರಿಸುವರು ಭೂತಪ್ರೇತಪಿಶಾಚಾದಿ ಮಾಡುವರು ಭಕ್ತರಘ ಕಡಿವರು4 ಇವರು ಭವಸಮುದ್ರವ ನೀಗಿಸುವರು ಶಿಷ್ಯರಿಗ್ಹರುಷ ಪಡಿಸುವುದು ಆನಂದದಿಂದಲ್ಲಿ ಹೃನ್ಮಂದಿರದಲಿ ಇಂದಿರೇಶನ ನೋಡುವರು 5 ರಘುಮಾನ್ವತೀರ್ಥ ಗುರುವರ್ಯರು ಲೋಕಮಾನ್ಯರು ಭಕ್ತರಿಗತಿಪ್ರಿಯರು ಮಹಾನುಭಾವರು ಅನ್ನದಾನದಲಿ ದೈನ್ಯರು ಆನಂದ ಭರಿತರು ಸುರರಿವರು 6 ಲಕ್ಷ್ಮೀಂದ್ರತೀರ್ಥ ಶ್ರೀಗಳವರು ಇವರು ತಮ್ಮ ತುಷೆಯೊಳಗಿಟ್ಟುಕೊಂಡು ರಕ್ಷಿಸುವರು ಲಕ್ಷ್ಮೀರಮಣನ್ನ ಪಾದಾ ಅಪೇಕ್ಷೆಯ ಮಾಡುಸುವರು ಹರಿಯ ಭಜಿಸುವರು 7 ವಿಶ್ವಮಾನ್ಯತೀರ್ಥ ಈ ಗುರುವರ್ಯರು ಬಂದ ಭೂಸುರರಿಂದ ಅನುವಾದ ಮಾಡುವರು ನೋಡುವರಿಗಾನಂದ ಪಡಿಸುವರು ಸುಜ್ಞಾನ ಯತಿವರ್ಯರು 8 ಅಷ್ಟಮಠದ ಯತಿಗಳ ಮಹಿಮೆಯನ್ನು ನಿಷ್ಠೆಯಿಂದಲಿ ಪೇಳುವನು ಅವನು ಸುರನು ಇವರ ದೋಷಿ ಎಂದವರನೇ ನರಕಾಧಿ ಬಾಧಿಸುವುದು ಕೃಷ್ಣನ ಪೂಜಿಸುವರು 9
--------------
ಕಳಸದ ಸುಂದರಮ್ಮ
ಅಸುರ ಬಾಧಿಸುತಿರಲು ಋಷಿಗಳು ಸ್ತುತಿ ಮಾಡೆ ದಶರಥನ ಗರ್ಭದಲಿ ಜನಿಸಿ ಬಂದೆ 1 ಶಿಶುವಾಗಿ ಕೌಸಲೆಗೆ ಬಾಲಲೀಲೆಯ ತೋರ್ದು ಕುಶಲದಿಂ ನಾಲ್ವರ ಕೂಡೆ ಬೆಳೆದೆ 2 ಅಸುರರನೆ ಬಡಿದಟ್ಟಿ ಋಷಿಯ ಯಾಗವ ಕಾಯ್ದು ವಸುಧೆಯೊಳು ಶಿಲೆಯನ್ನು ಸತಿಯ ಮಾಡಿ 3 ಮಿಥಿಲ ಪಟ್ಟಣಕೈದಿ ಮೃಡನ ಧನುವನೆ ಮುರಿದು ಕರವ ಪಿಡಿದು 4 ಪಥದೊಳಗೆ ಬರುತ ಭಾರ್ಗವರೊಡನೆ ಹೋರಾಡಿ ದಶರಥಗೆ ಏಕೀಭಾವವನೆ ತೋರಿ 5 ಪರಮ ಹರುಷದಲಿ ಸಾಕೇತನಗರಿಗೆ ಬಂದು ಕಿರಿಯ ಮಾತೆಯ ಕಠಿಣ ನುಡಿ ಕೇಳಿ 6 ಚಿತ್ರಕೂಟಕೆ ಬಂದು ಕೃತ್ಯವೆಲ್ಲವ ನಡೆಸಿ ಭ್ರಾತೃ ಭರತನಿಗೆ ಪಾದುಕೆಯನಿತ್ತು 7 ವನದೊಳಗೆ ಸಂಚರಿಸಿ ಘನ ಕಾರ್ಯಗಳ ಮಾಡಿ ಹನುಮನ ಕಳುಹಿ ಮುದ್ರಿಕೆಯ ಕೊಡಲು 8 ಮಿತ್ರೆ ಜಾನಕಿಗರುಹಿ ರತ್ನ ಕೊಂಡು ಬರಲು ಶರಧಿ ಕಟ್ಟಿ 9 ದುಷ್ಟ ರಾಕ್ಷಸ ಕುಲವ ಕುಟ್ಟಿ ಬೇರನೆ ಸವರಿ ಸೃಷ್ಟಿಸುತೆ ಜಾನಕಿಯ ಅಗ್ನಿ ಹೊಗಿಸಿ 10 ಪಟ್ಟಣಕೆ ಬಂದು ಭರತನಿಗೆ ಪೇಳೆ ಅಷ್ಟಗಂಗೆ ಉದಕವನೆ ತಂದು 11 ಅಷ್ಟಋಷಿಗಳು ಎಲ್ಲ ಕೂಡಿ ಕೊಂಡು ಪಟ್ಟಾಭಿಷೇಕವನು ಮಾಡುತಿರಲಂದು 12 ಸೃಷ್ಟಿಯೊಳು ಜಗನ್ನಾಥವಿಠಲನಿಗೆ ಪುಷ್ಪ ವೃಷ್ಟಿಗಳನ್ನು ಕರೆದರಾಗ13
--------------
ಜಗನ್ನಾಥದಾಸರು
ಆ ಬಾಲೆಯರಬಗೆ ಬಗೆ ಸೋಲಿಸಿಬರುವಂಥ ಮೇಲು ಮೇಲಾದ ಕೋಲಪ. ಸಾಗರನ ತನುಜಳು ಬಳುಕುತಬಾಗುತ ನಾಗವೇಣಿ ರುಕ್ಮಿಣಿಆಗ ಗೋವಿಂದಗೆ ಬೇಗನೆ ವಂದಿಸಿ ಹೋಗಬೇಕು ಮುಯ್ಯಕ್ಕೆ1 ಬಡನಡು ಬಳುಕುತ ಮಡದಿ ಮೋಹದ ರಾಣಿಖಂಡಿ ಮುದ್ದು ಸುರಿಯುತಲೆ ನಡೆದು ಬಂದು ಕೃಷ್ಣನಡಿಗೆರಗಿಭಾಮೆ ನುಡಿದಳು2 ಪೊಡವಿ ಪಾಲಿಪವಪ್ಪನೀ ನಡೆಮುಯ್ಯಕ್ಕೆನುತಲಿ ನುಡಿದಳು ಸತ್ಯಭಾಮೆ ಉಡಬೇಕು ವಸ್ತ್ರಂಗಳಇಡಬೇಕು ಭೂಷಣನಡೆ ಬೇಗ ಕೃಷ್ಣರಾಯ 3 ಮಾಧವ ಸಿಂಧೂಶಯನ ನೀನು ಬಂದರೆಮುಯ್ಯಕ್ಕೆ ಛsÀಂದ ತೋರುವುದೆಂದರು 4 ನೀಲ ಮೊದಲಾದ ಬಾಲೆಯರು ರಂಗಗೆ ಮೇಲೆ ಮೇಲೆ ವಂದಿಸಿ ಶ್ರೀಲೋಲ ರಾಮೇಶÀ ನೀಆಲಸ್ಯ ಮಾಡದೆ ಪಾಲಿಸಬೇಕೆಂದರು5
--------------
ಗಲಗಲಿಅವ್ವನವರು
ಆ ಮಹಿಮಗೆ ಮಂಗಳಾರತಿಯ ಎತ್ತಿದರು 1 ಮತ್ಸ್ಯಾವತಾರ ಶ್ರೀಹರಿಯ ಅಕ್ಷಗಂಗಳದೊಂದು ಬೆಳಕು ನಿತ್ಯವೇದವ ತಂದ ಬೆಳಕು ತುಂಬಿತು ದ್ವಾರಾವತಿಗೆ 2 ಕೂರ್ಮಾವತಾರ ಶ್ರೀಹರಿಯ ಹೇಮಗಿರಿಯ ತಂದ ಬೆಳಕು ಬಲ್ಲಿದ ಕಾಯನ್ನ ಬೆಳಕು ತುಂಬಿತು ದ್ವಾರಾವತಿಗೆ 3 ವರಾಹಾವತಾರ ಶ್ರೀಹರಿಯ ಹೊಳೆದ ಕೋರೆದಾಡೆಯ ಬೆಳಕು ಧಾರುಣಿಯ ನೆಗವಿದ ಬೆಳಕು ತುಂಬಿತು ದ್ವಾರಾವತಿಗೆ 4 ನರಮೃಗರೂಪ ಶ್ರೀಹರಿಯ ಮೆರೆವೊ ನಖದ ಬೆಳಕು ಉರಿಗಣ್ಣು ಜ್ವಾಲೆಯ ಬೆಳಕು ತುಂಬಿತು ದ್ವಾರಾವತಿಗೆ 5 ವಾಮನಾವತಾರ ಶ್ರೀಹರಿಯ ಭೂಮಿಯನಳೆದೊಂದು ಬೆಳಕು ಬಾಲಕ ತನಯನ ಬೆಳಕು ತುಂಬಿತು ದ್ವಾರಾವತಿಗೆ 6 ಭಾರ್ಗವಾವತಾರ ಶ್ರೀಹರಿಯ ಮೆರೆÉವೊ ಬಲುಭುಜದೊಂದು ಬೆಳಕು ದುರುಳ ಕ್ಷತ್ರೆÉೀರ ಗೆದ್ದ ಬೆಳಕು ತುಂಬಿತು ದ್ವಾರಾವತಿಗೆ 7 ದಶರಥತನಯ ಶ್ರೀಹರಿಯ ಎಸೆವೊ ಬಿಲ್ಲುಬಾಣದ ಬೆಳಕು ಶಶಿವದನೆಯ ತಂದ ಬೆಳಕು ತುಂಬಿತು ದ್ವಾರಾವತಿಗೆ 8 ಗೋಪಿ ಮುದ್ದಾಡಿದ ಬೆಳಕು ದೇವಕ್ಕಿತನಯನ ಬೆಳಕು ತುಂಬಿತು ದ್ವಾರಾವತಿಗೆ 9 ಬೌದ್ಧಾವತಾರ ಶ್ರೀಹರಿಯ ಬುದ್ಧಿಪಲ್ಲಟದೊಂದು ಬೆಳಕು ರುದ್ರನ್ನ ಗೆಲಿದೊಂದು ಬೆಳಕು ತುಂಬಿತು ದ್ವಾರಾವತಿಗೆ 10 ಕಲ್ಕ್ಯವತಾರ ಶ್ರೀಹರಿಯ ಹೊಳೆವಾಖಂಡದೊಂದು ಬೆಳಕು ಗುರು ಹಯವದನನ್ನ ಬೆಳಕು ತುಂಬಿತು ದ್ವಾರಾವತಿಗೆ 11
--------------
ವಾದಿರಾಜ
ಆಂಜನೇಯನೆ ಅಮರವಂದಿತ ಕಂಜನಾಭನÀ ದೂತನೆ ಪ. ಮಂಜಿನೋಲಗದಂತೆ ಶರಧಿಯ ದಾಂಟಿದ ಮಹಾಧೀರನೆಅ.ಪ. ಆಂಜನೇಯನೆ ನಿನ್ನಗುಣಪರಾಕ್ರಮ ಪೊಗಳಲಳವೆ ಪ್ರಖ್ಯಾತನೆಸಂಜೀವನವ ತಂದು ಕಪಿಗಳ ನಂಜು ಕಳೆದ ಪ್ರಖ್ಯಾತನೆ 1 ಕಾಮನಿಗ್ರಹನೆನಿಸಿ ಸುರರಭಿಮಾನಿ ದೇವತೆಯೆನಿಸಿದೆರಾಮಪಾದಕ್ಕೆರಗಿ ನಡೆದು ನಿಸ್ಸೀಮ ನೀನೆಂದೆನಿಸಿದೆ 2 ಸಿಂಧು ಹಾರಿದೆ ಶೀಘ್ರದಿಂದಲಿ ಬಂದು ಸೀತೆಗೆ ನಮಿಸಿದೆತಂದು ಮುದ್ರೆಯನಿತ್ತು ಮಾತೆಯ ಮನವ ಸಂತೊಷಪಡಿಸಿದೆ 3 ಜನಕತನುಜೆಯ ಮನವ ಹರುಷಿಸಿ ವನವ ಕಿತ್ತೀಡಾಡಿದೆದನುಜರನ್ನು ಸದೆದು ಲಂಕೆಯ ಅನಲಗಾಹುತಿ ಮಾಡಿದೆ 4 ಶ್ರೀರಾಮಕಾರ್ಯವ ವಹಿಸಿ ಅಕ್ಷಕುಮಾರನನು ಸಂಹರಿಸಿದೆಘೋರ ರಕ್ಕಸರೆಂಬುವರನು ಮಾರಿವಶವನು ಗೈಸಿದೆ 5 ಭರದಿ ಬಂದು ಶ್ರೀರಾಮಪಾದಕ್ಕೆರಗಿ ಬಿನ್ನಹ ಮಾಡಿದೆಉರಗಗಿರಿ ಹಯವದನನ ಪರಮಭಕ್ತನೆಂದೆನಿಸಿದೆ6
--------------
ವಾದಿರಾಜ
ಆಡುವ ಬಾರೋ ಕೃಷ್ಣ ಓಡಿಬಾರೋ ಪ ನಾಡೆ ನಿನ್ನ ನೋಡಬಯಸಿ ಹಾಡುವೆನ್ನ ಕಣ್ಣಮುಂದೆ ಅ.ಪ ಓಡಿಬರುವೆ ನೀನು ಎಂದು ನೋಡಿ ಹಸುಗಳತ್ತ ಇತ್ತ ಬೇಡುತಿಹವು ನಿನ್ನ ಬರವ ಮೋಡಿಯೇಕೆ ಕೊಳಲನೂದಿ 1 ಕರವ ನೀಡಿ ಮಣ್ಣಮೆದ್ದನೆಂದು ತಾಯ ಕಣ್ಗೆ ತೋರ್ದೆ ಜಗವನೆಲ್ಲ 2 ಪೊಂಗಲೀವೆ ಬಾ ಮುಕುಂದ ಹೊಂಗೊಳಲಾನಂದದಿಂದ ತಂಗುವೆ ನಾ ನಿನ್ನ ಪಾದದಿ ಮಾಂಗಿರೀಶ ಮುದ್ದುರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಆತ್ಮನಿವೇದನೆ ನೆಂತು ಪೂಜಿಸಿದೆನೈ ನೀರಜಾಕ್ಷ ಪ ಕಂತುಪಿತ ಎನ್ನ ನೀ ಕಾಯ್ವೆಯೆಂತೊ ಕಮಲಾಕ್ಷ ಅ.ಪ ಗಂಗೆಯುದಕದಿ ಮಿಂದು ಸಿಂಗರದ ಮಡಿಯುಟ್ಟು ಮಂಗಳದ ನಾಮ ಮುದ್ರೆಗಳ ಧರಿಸೀ ಅಂಗಕರಣಗಳ ಶೋಧಿಸಿ ನ್ಯಾಸ ಮಂತ್ರದಿಂ ದಂತ ರಂಗದಿ ಬಿಂಬಮೂರ್ತಿಯ ಚಿಂತಿಸಿದೆನೇ1 ನಿರ್ಮಲೋದಕದಿಂದ ಅಭಿಷೇಚನವ ಗೈದು ನಿರ್ಮಾಲ್ಯ ತೀರ್ಥವನು ಸೇವಿಸಿದೆನೇ ಮರ್ಮವರಿತಾದಿಮೂರ್ತಿಯೆ ನಿನ್ನ ಬಿಂಬವನು ನಿರ್ಮಲಾಂತಃಕರಣ ಪೀಠದಲಿ ನಿಲಿಸಿದೆನೇ 2 ಶುಭ್ರವಸ್ತ್ರಗಳ ಪರಿಮಳ ಗಂಧ ಪುಷ್ಪಗಳ ನಘ್ರ್ಯ ತುಳಸಿಗಳನರ್ಪಿಸಿ ನಲಿದೆನೇ ಅರ್ಭಕನು ನಾ ಕನಕರತ್ನಾಭರಣಗಳನು ಅಬ್ಧಿ ತನಯಳರಮಣ ನಿನಗೆ ಅರ್ಪಿಸಿದೆನೇ 3 ಧೂಪದೀಪಗಳಿಂದ ವಾದ್ಯ ವೈಭವದಿಂದ ರಾತ್ಮನೆಂದರಿತು ನೈವೇದ್ಯವರ್ಪಿಸಿದೆನೇ 4 ವಿವಿಧ ಖಾದ್ಯಗಳಲ್ಲಿ ವಿವಿಧ ರಸ ರೂಪದಲಿ ವಿವಿಧ ಸಾನ್ನಿಧ್ಯಗಳ ಧ್ಯಾನಿಸಿದೆನೇ ಭವರೋಗಪೀಡಿತನು ನಾ ನಿನ್ನ ಹವಣರಿತು ಸುವಿಹಿತ ವಿಧಿಯಂತೆ ಪೂಜಿಸುವ ಪರಿಯೆಂತೋ5 ಸರ್ವಶಕ್ತನು ನೀನು ಸರ್ವಜ್ಞಪತಿ ನೀನು ಸರ್ವದಾ ತೃಪ್ತನೋ ನಿಗಮವೇದ್ಯಾ ಸರ್ವಭೂತಾಂತರ್ಗತನು ನಿನಗೆ ಉಣಬಡಿಸೆ ಗರ್ವಿಶಠನಜ್ಞತಮನೆನಗೆ ವಶವೇ 6 ವೇದಶಾಸ್ತ್ರಗಳ ಗಂಧವನರಿಯೆ ಹರಿಯೆ ನಿನ ಸಾದರದಿ ನಮಿಪೆ ಪೊರೆ ರಘುರಾಮವಿಠಲ 7
--------------
ರಘುರಾಮವಿಠಲದಾಸರು
ಆತ್ಮನಿವೇದನೆಯ ಹಾಡುಗಳು ಅಗಣಿತ ಗುಣ ಸಮುದ್ರ ನೀನು ಪ ಕಮಲಭವಗೆ ಮಿಕ್ಕವರ ಪಾಡೇನು ಅ.ಪ ಕಮಲ ನಿವಾಸನೆ 1 ಎನ್ನನಾದಿಕರ್ಮ | ಕಳೆಸುವುದು ಮುನ್ನು ನಿನಗೆ ಧರ್ಮ ಭವ ವಾರಿಧಿಯೊಳು ಭಿನ್ನೈಸುವುದೇತಕೆ ನೀನರಿಯಾ 2 ದ್ವಾಸುಪರ್ಣ ಶ್ರುತಿಯ | ಪ್ರಮಾಣದಿ ದಾಸನು ನಾನೈಯ್ಯ ಓ ಸೀತಾಪತಿ ಗುರುರಾಮ ವಿಠಲ ಶ್ವಾಸ ಬಿಡುವದಕೆ ಸ್ವತಂತ್ರವೆನಗಿಲ್ಲ 3
--------------
ಗುರುರಾಮವಿಠಲ
ಆತ್ಮವೃತ್ತ ವಾಸುದೇವ ವಾಸುದೇವ ಎಂದು ಸತತಮಾನ್ಯದಲ್ಲಿ ಹರಿಯ ನಾಮ ದ್ಯೋತಿಸುವರ ಸ್ಮರಿಸುವೇನು ಪ ಸೀತಾರಾಮಚಾರ್ಯ ಹೇಳಿದ ಮಾತುಗಳನು ಕೇಳಿ ಬಹಳಪ್ರೀತಿಯಿಂದಲವರ ಮಹಿಮ ಪೋತನಾನು ಪಾಡುವೇನು 1 ನರಹರಿಯ ಸಂನಿಧೀಲಿ ತರುಳರಾಮ ಪೇಳಿದಂಥಸರಸ ಪದಗಳನ್ನೆ ಬಹಳ ಹರುಷದಿಂದ ಕೇಳಿಹಾರು 2 ಇಂದಿರೇಶ ಕೃಷ್ಣನಿಲ್ಲೆ ಬಂದು ಪದಕ್ಕೆ ಯದುರೆ ನಾಥಮುಂದೆ ವಾರ್ಧಕಾದಿಯಂತೆಂದು ಭಾವ ಪೇಳಿಹಾರು 3 ಇಷ್ಟು ದಿವಸ ರಾಮನಂಘ್ರಿ ನಿಷ್ಠನಾಗುತೀಗ ನೃಹರಿಪುಟ್ಟಪಾದ ನಮಿಪಾ ಮುಂದೆ ಕೃಷ್ಣನಂಘ್ರಿ ಭಜಿಸುವಾನು 4 ಇಂದಿರೇಶ ಕೃಷ್ಣನನ್ನು ಹಿಂದೆಯೆಂದು ಮುದ್ರಿಕಿಲ್ಲಾಇಂದೆ ಬಂದಿಹುದು ಇದು ಅನಾದಿಯೆಂದು ಪೇಳಿಹಾರು 5
--------------
ಇಂದಿರೇಶರು
ಆದದ್ದ ಮರೆತು ಶ್ರೀ ರಂಗನ ಭಜಿಸಿರಿ ಮೋದದಿ ಹರಿಯ ಸೇವೆಯ ಮಾಡಿರಿ ಪ ಮುಕುಟವೆ ವಂದಿಸು ಮತ್ಸ್ಯಾವತಾರನ ಮುಖವೆ ನೀ ಕೀರ್ತಿಸು ಮುದ್ದು ಕೂರ್ಮನ ಸೂಕರ ರೂಪನ ನಖವೆ ನೀನಪ್ಪಿಕೊ ನರಸಿಂಹತನ 1 ವಕ್ಷವೆ ಹೊರು ನೀನು ಗಿಡ್ಡ ವಾಮನನನ್ನು ಪಕ್ಷವೇ ಪಿಡಿದಾಡು ಭಾರ್ಗವನನ್ನು ಕಕ್ಷವೆ ಯೆತ್ತು ಶ್ರೀ ರಾಮಚಂದ್ರನನ್ನು ಕುಕ್ಷಿಯೆ ಬೇಡು ಶ್ರೀ ಕೃಷ್ಣಾಮೃತವ 2 ಹರುಷದಿ ತೊಡೆಯೆ ನೀ ಬುಧನ ಕೂಡ್ರಿಸಿಕೊಳ್ಳು ಚರಣವೆ ಕಲ್ಕ್ಯಾನ ಮನೆಗೆ ನೀ ಪೋಗು ನಿತ್ಯ ದಶನಾಮ ಸ್ಮರಿಸಿರಿ ಸರಿಚನ್ನಕೇಶವ ನೊಲಿದು ಪಾಲಿಸುವಾ 3
--------------
ಕರ್ಕಿ ಕೇಶವದಾಸ
ಆನಂದನನಂದನೊಲಿಯೆ ಏನಂದದ್ದೆ ವೇದ ವೃಂದಾ ಪ 'ಅ'ಮೊದಲು 'ಕ'್ಷ ಕಾರಾಂತ ಈ ಮಹಾವರ್ಣಗಳೆಲ್ಲ ಸ್ವಾಮಿಯಾದ ವಿಷ್ಣುವಿನ ನಾಮವೆಂದು ತಿಳಿದವರಿಗೆ 1 ಪೋಪದು ಬರುತಿಪ್ಪುದು ಕೋಪಶಾಣಿ ಮಾಡುವುದು ರೂಪ ಲಾವಣ್ಯವು ಹರಿವ್ಯಾಪಾರವೆಂದವರಿಗೆ 2 ಪಾವಕ ವಾಯು ತರು ಫಲಪುಷ್ಪ ಬಳ್ಳಿಲಿ ಹರಿ ಒಳಗೆ ವ್ಯಾಪ್ತನೆಂದವಗೆ 3 ತಾರೊ ಬಾರೊ ಬೀರೊ ಸಾರೊ ಮಾರೊ ಕೋರೊ ಹಾರೊ ಹೋರೊ ಸೇರೊ ಕೋರೊದೆಂಬ ದಿಶಾಪ್ರೇರಣೆ ಎಂದವರಿಗೆ 4 ಮಧ್ವಶಾಸ್ತ್ರ ಪ್ರವಚನ ಮುದ್ದುಕೃಷ್ಣನ ದರುಶನ ಸಿದ್ಧ ವಿಜಯವಿಠ್ಠಲನ ಪೊಂದಿ ಕೊಂಡಾಡುವವರಿಗೆ 5
--------------
ವಿಜಯದಾಸ
ಆನಂದಮಯನಾದೆ ನಾನು ದಿವ್ಯ ಜ್ಞಾನಾಮೃತವನುಂಡು ಪೇಳಲಿನ್ನೇನು ಪ ಶರೀರ ಭ್ರಾಂತಿಗಳನೆಲ್ಲ ಕಳೆದು ಕರ್ಮ ದುರಿತ ಸಂಸಾರ ಆಶಾಪಾಶವಳಿದು ನರನೊಳಗೆ ನರನಾಗಿ ಸುಳಿದು ಸರ್ವ ಪರಿಪೂರ್ಣ ಭರಿತ ತಾನೆಂಬುದು ತಿಳಿದು 1 ಗುರುಕಟಾಕ್ಷದ ನೆಲೆ ನೋಡಿ ತಿರುಗಿ ಬರುವ ಹೋಗುವ ಭ್ರಮೆಗಳನೀಡಾಡಿ ಶರಣರ ಸ್ತೋಮದಿ ಕೂಡಿ ಭವ ಶರಧಿಯ ದಾಟಿ ಹಂಸಾತ್ಮಕನೊಳಾಡಿ ಆನಂದ 2 ಗುರುಚರಣಗಳ ಧ್ಯಾನಿಸುತಾ ಒಡನೆ ಎರಕವಾದಂತೆ ಬೇರೂರಿತು ಚಿತ್ತಾ ವರವಿಮಲಾನಂದ ಗುರುದತ್ತಾತ್ತೇಯನ ಕರುಣಾಸಮುದ್ರದೊಳ್ಬೆರೆದು ನಲಿವುತ್ತಾ ಆನಂದ 3
--------------
ಭಟಕಳ ಅಪ್ಪಯ್ಯ