ಒಟ್ಟು 88 ಕಡೆಗಳಲ್ಲಿ , 34 ದಾಸರು , 86 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶುಭ ಮಂಗಳ ಸುಜನಾಂಬುಧಿ ಚಂದ್ರಗೆ ಪ ಶ್ರೀ ಸುಧೀಂದ್ರ ಕುಮಾರಗೆ ಮಂಗಳ ಭೂಸುರನುತ ಮಹಿಮಗೆ ಮಂಗಳ ದೇಶಿಕ ಕುಲವನ ಜಾತನಿಗೆ ಮಂಗಳ ಭಾಸುರ ಕೀರ್ತಿಯ ಪಡೆದವಗೆ 1 ವೃಂದಾವನ ದಿವಿಯೊಳಗೆ ಸುರದ್ರುಮ ದಂದದಿ ರಾಜಿಸುವವಗೆ ಮಂಗಳ ಅಂಧ ಪಂಗು ಮೂಕ ಬಧಿರರೀಪ್ಸಿತ ಸಂದೋಹ ಸಲಿಸುವ ಮುನಿಗೆ 2 ವಿಪಿನ ಭಯ ವೀತಿಹೋತ್ರನಿಗೆ ಮಂಗಳ ವಾತ ಜನಕ ಜಗನ್ನಾಥ ವಿಠ್ಠಲನ ದೂತರ ಸಲಹುವ ದಾತನಿಗೆ 3
--------------
ಜಗನ್ನಾಥದಾಸರು
ಶ್ರೀ ಗುರು ಮೂರ್ತಿಯನು ನಂಬಿ ಧ್ಯಾನಿಸಿ ಜನರು | ನೀಗಿ ಚಂಚಲ ಚಿತ್ತದಾ ಭಾಗವತ ಧರ್ಮದಿಂದರ್ಚಿಸಲು ಕರುಣ ಮಳೆ | ಭವ ಪಾಶದೆಶೆಯಿಂದ ಪ ಎಳೆಯ ಮಾದಳಿರ ಸೋಲಿಸುವ ಮೃದುತರ ಬೆರಳ ನಖ ಚಲುವ ಪಾದಾ | ನಳ ನಳಿಪ ಪವಳ ಮಣಿಯಂತೆ ಹರಡಿನ ಸೊ.... ವಿಲಸಿತದ ಜಂಘೆದ್ವಯದಾ | ನಿಚ್ಚಳದ ಜಾನೂರದ ಸ್ಪುರದಾ | ವಲುಮೆಮಿಗೆ ತನು ಮಧ್ಯ ಸಂಪಿಗೆಯ ಗಂಭೀರನಾಭಿ ಕಿರು ಡೊಳ್ಳು ತ್ರಿವಳಿ ವಾಸನೆಯ ಛಂದಾ 1 ಪುತ್ಥಳಿಯ ಹಲಗಿ ಕಾಂತಿಯ ಲೊಪ್ಪುತಿಹ ಉರದ | ವತ್ತಿಡದ ಕೊರಳ ಮಾಟಾ| ಮಣಿ ಬಂಧ | ಮತ್ತ ಊರ್ಪರಿಯಕಟಾ | ಮೊತ್ತದೋರ್ವಂಡ ಭುಜ ಶ್ರವಣ ನುಣ್ಗದಪುಗಳು | ಹೆತ್ತ ಪಲ್ವಧರ ನೀಟಾ | ಸೂರ್ಯ ಪರಿನಯನ | ವೆತ್ತ ಭ್ರೂಲತೆ ಪೆರ್ನೊಸಲ ಸುಕೇಶಿಯ ಜೂಟಾ 2 ಮಣಿ ತೇಜದೊಳೆ ಯುಗ್ಮ ಕುಂಡಲಗಳು | ನವರತ್ನ ಹಾರ ಮಂಡಿತ ಪದಕ ವಡ್ಯಾಣ | ಠವ ಠವಿಸುತಿಹ ಸರಳು | ಬವರದೊಳು ಚಿತ್ತ ತೆತ್ತೀಸ ತಾಯಿತ ಕಡ ವಜ್ರ ದುಂಗುರಗಳು | ತವಕದೊಳ್ ನಿರೆ ಹಾಕಿ ದಂಬರವ ಮೌಲಿಕದ | ಕಾಲ ಕಡಗ ಅಂದುಗೆಗಳು 3 ದ್ವಿನಯನ ಮಧ್ಯ ರಾಜಿಸುವ ಮಂಟಪದೊಳಗ ಧ್ಯಾನ ಸಿಂಹಾಸನದಲಿ | ಸಾನು ರಾಗದಲಿ ಕುಳ್ಳಿರಿಸಿ ಚರಣ ದ್ವಯವ ಜ್ಞಾನ ಗಂಗೋದಕದಲಿ | ಮಾನಸದಿ ಅಭಿಷೇಕವನೆ ಮಾಡಿ ಸಲೆ ಪೂಸಿ ಆನಂದ ವಸ್ತ್ರ ಗುಣಲಿ | ಮೌನದಲಿ ಲಯಲಕ್ಷಿ ಗಂಧಾಕ್ಷತೆಯ ಸುಮನ ತಾನಿಟ್ಟು ಬೆಳಗಿ ಧೂಪದಿ ಏಕಾರತಿಗಳಲಿ 4 ಬಳಿಕ ಕಸ್ತೂರಿಯ ಕೇಶರದ ಚಂದನ ಪೂಸಿ | ಕಳೇವರಕ ವಪ್ಪಿಲಿಂದಾ | ಥಳ ಥಳನೆ ರಂಜಿಸುವ ಬಟ್ಟ ಮುತ್ತಿಶಾಶೆ ಗಳನಿಟ್ಟು ಬೇಗ ಛಂದಾ | ಚಲುವ ಮಲ್ಲಿಗೆ ಕುಂದರ್ಕೆ ಜಾಜಿ ಕೇತಕಿಯು ನಳಿನ ಮೊದಲಾದರಿಂದಾ | .....ರ ಮಾಲೆಯಾ ಹಾಕಿ ಪರಿಮಳದಿ ಧೂಪವನು | .....ಸಂಚಿತ ದಶಾಂಗದಿ ಚಕ್ಷು ಜ್ಯೋತಿಯಿಂದಾ 5 ವರಶಾಂತಿ ಶಕ್ತಿ ಯರ್ಚಿಸಿ ಕುಳ್ಳಿರಿಸಿ ಪುರುಷಾರ್ಥ ದೀಪಂಗಳು | ಮೆರೆಯುತ ಪ್ರಜ್ವಲಿಸಿ ತರುವಾಯ ಕನಕಮಯ | ಹರಿವಾಣ ಬಟ್ಟಲುಗಳು | ಪರಮಾನ್ನ ಪಂಚಭಕ್ಷಗಳನ್ನ ಸೂಪಘೃತ ಪರಿ ಪರಿಯ ಶಾಖಂಗಳು | ಸುರಸ ಪಾಲು ಮೊಸರು ತನಿವಣ್ಣಲುವಗಾಯಿಕೇಸರ | ಧರಿಯೊಳಗ ಲೇಹ ಪೇಹ ಮೊದಲಾದ ಭೋಜ್ಯಂಗಳು 6 ಇನಿತು ಅರ್ಪಿಸಿ ಸ್ವಾದುದಕ ಕೈದೊಳೆದು | ಗುಣದಿತ್ತು ತಾಂಬೂಲವಾ | ಅನುಭವದಾರತಿಯು ಪುಷ್ಪಾಂಜುಳಿ ನಮನ ಪ್ರದ ಕ್ಷಿಣ ಗೀತ ನೃತ್ಯ ಮುದವಾ | ಘನ ತೀರ್ಥಸು ಪ್ರಸಾದವ ಕೊಂಡು ಸೂರ್ಯಾಡಿ ಅನುವಾಗಿ ಸಖ್ಯದನುವಾ | ಮನುಜ ಜನ್ಮಕ ಬಂದು ಗುರು ಮಹಿಪತಿ ಸ್ವಾಮಿ | ಘನದಯವ ಪಡಕೊಂಡು ಪಡೆಯೋ ಮುಕ್ತಿಯ ಸ್ಥಳವಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ಜಗನ್ನಾಥತೀರ್ಥರ ದಿವ್ಯ ಮಹಿಮೆಯನು ರಾಜಿಸುವ ಹೈಮಲಿಪಿಯಲ್ಲಿ ಬರೆಯಲಿ ಬೇಕು ಪ ಸುಜನ ಸುರಭೂಜರಾಗಿಹ ಮಹಾ ಕರ ಸಂಜಾತ ಅ.ಪ ಉದ್ಭವಿಸಿದರು ಗಾಲವರು ಜಗದೊಳೆಂಬಂಶ ವೇದ್ಯವಾಯಿತು ಆಪ್ತಜನವೃಂದಕೆ ಮಧ್ವಮತ ತತ್ವಗಳನುದ್ಧಾರವನೆಗೈದ ದಿಗ್ಧಂತಿಗಳತಿ ಪ್ರಸಿದ್ಧ ಸ್ಥಾನವ ಪಡೆದ 1 ಸಕಲ ಶಾಸ್ತ್ರಾರ್ಥ ನಿರ್ಣಯಗೈವ ಪರಸೂತ್ರ ನಿಕರಗಳಿಗಲವಬೋಧರ ಭಾಷ್ಯವ ಸುಖದಿಂದಲರಿಯಲುಪಕೃತಿಗೈದ ಯತಿಕುಲ ತಿಲಕ ಭಾಷ್ಯಾದೀಪಿಕಾಚಾರ್ಯರೆಂದತಿ ಖ್ಯಾತ 2 ಸರ್ವಗುಣ ಗುಣಪೂರ್ಣ ಸರ್ವತ್ರ ವ್ಯಾಪ್ತ ಹರಿ ಸರ್ವಭಕ್ತ ಪ್ರಸನ್ನನೆಂದರುಹಲು ಉರ್ವನುಗ್ರಹ ಪಡೆದ ಸರ್ವತಂತ್ರ ಸ್ವತಂತ್ರ 3
--------------
ವಿದ್ಯಾಪ್ರಸನ್ನತೀರ್ಥರು
ಶ್ರೀ ರಾಘವೇಂದ್ರಾರ್ಯ ಬಾರೋ ಕಾರುಣ್ಯ ವಾರಿಧಿಯೆ ಬಾರೋ ಆರಾಧಿಪ ಭಕ್ತರಿಷ್ಟಾ ಪೂರೈಸುವ ಪ್ರಭುವೆ ಬಾರೋ ಪ ಪಾದ ರಾಜೀವ ಭೃಂಗನೆ ಬಾರೋ ರಾಜಾಧಿರಾಜರೊಳು ವಿ ರಾಜಿಸುವ ಚೆಲುವ ಬಾರೋ 1 ಕ್ಲೇಶ ಶ್ರೀ ಸುಧೀಂದ್ರ ಕರಸಂಜಾತ ವಾಸು ದೇವಾರ್ಚಕನೆ ಧೀರ ಬಾರೋ 2 ಸನ್ನುತ ಸದ್ಗುಣನೆ ಬಾರೋ ಮಾನ್ಯ ಜಗನ್ನಾಥವಿಠಲಾಪನ್ನ ಜನರ ಪ್ರೀಯಾ ಬಾರೋ 3
--------------
ಜಗನ್ನಾಥದಾಸರು
ಶ್ರೀ ರುಧಿರೋದ್ಗಾರಿ ಸಂವತ್ಸರ ಸ್ವಾಮಿ ಧನ್ವಂತರಿ ಸ್ತೋತ್ರ 155 ಆನಂದ ಚಿನ್ಮಾತ್ರ ವಪುಷ ಸರ್ವಾಧಾರ ಅನಘ ಕೂರ್ಮಹÀಯ ಶೀಷ್ರ್ಯ ಸ್ತ್ರೀರೂಪ ಅಜಿತ ಆನಮೋ ರುಧಿರೋದ್ಗ್ಗ್ಗಾರಿ ಸಂವತ್ಸರ ಸ್ವಾಮಿ ಅನುತ್ತಮ ಸರ್ವೋತ್ತಮ ಧನ್ವಂತರಿ ರಮೇಶ ಪ ರಾಜಗುರು ಮಂತ್ರಿಗುರು ಸÉೀನಾಧಿಪತಿ ಬುಧನು ರಾಜಿಸುವರು ಸೂರ್ಯೇಂದು ಕವಿ ಭೂಮ ರವಿಜ ಪ್ರಜ್ವಲಿಸಿ ನೀ ಇವರೊಳ್ ಕೃತಿಯ ನಡೆಸಿ ಲೋಕ ಪ್ರಜೆಗಳಿಗೆ ಮಳೆ ಬೆಳೆ ಸೌಖ್ಯವಿತ್ತು ಪÉೂೀಷಿಸುವಿ 1 ದೇಶದೇಶ ರಾಜ್ಯಾಧಿಪರ್ಗಳ ಪರಸ್ಪರ ಸಂಶಯ ದುರ್ಮನವ ಆಗಾಗ ಶಾಂತ ಮಾಡುವುದು ಮೋಸಗಾರ ಕುಜನರು ಚೋರ ಕ್ರೂರರು ಮಾಳ್ಪ ಹೊಸ ಹೊಸ ಚಟುವಟಿಕೆ ಪರಿಹರಿಸಿ ಕಾಯೋ ಲೋಕವನು 2 ವೇದವ್ಯಾಸವಿರಚಿತ ಸಾತ್ವಿಕ ಪುರಾಣಗಳ ಯಥಾರ್ಥ ಪೇಳಿದೆ ದುಷ್ಟಾರ್ಥ ಪೇಳಿ ಜನರ ಮೋಹಿಸಿ ಸಾಧು ಸ್ತ್ರೀಪುರುಷರ ಪ್ರೌಢಕನ್ಯೆ ಬಾಲರ ವಂಚಿಪ ಧೂರ್ತರನು ಅಡಗಿಸಿ ಸತ್ಯಧರ್ಮ ಸಂತಾನ ಬೆಳೆಸೋ 3 ರಾಜ ಸಚಿವನು ಬೃಹಸ್ಪತಿಯಂತರ್ಗತನಾದ ರಾಜರಾಜೇಶ್ವರನೆ ನೀ ಅಂದು ಮಾನವಿಗೆ ಮದುವೆ ಉಜ್ವಲ ತಪಸ್ವಿಗೆ ಪುತ್ರರ ಒದಗಿಸಿದಿ ಇಂದು ನಿಜ ಭಕ್ತಸುತ ಕಾಮ ಪರಕಾಮ ಜನರಿಗೆ ಒಲಿಯೋ 4 ಹಿಂದಿನ ಇಂದಿನ ಸ್ವಕರ್ಮ ಪರಕರ್ಮ ಲಬ್ಧ ಮಾಂದ್ಯ ನರತ್ವಕೆ ಚರ್ಮ ಸೂತಕ ಗರ್ಭಿ ವ್ಯಾಧಿಪೀಡಿತ ಸಜ್ಜನರಿಗೆ ಸುಖವೀಯೋ ವೇಧಪ ಪ್ರಸನ್ನ ಶ್ರೀನಿವಾಸ ರುಧಿರೋಧ್ಗಾರಿ ಸ್ವಾಮಿ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವಾದಿರಾಜರು ಸೋಜಗವೆನಿಸಿ ರಾಜಿಸುತಿದಕೊ ರಾಜರ ಭಾಗ್ಯವಿದು ಪ ಬುಧಜನಕೊಪ್ಪುವ ಪದ ಸುಳಾದಿ ಖಳ ರೆದೆಗಿಚ್ಚೆನಿಸುವ ಚತುರತೆಯಾ ಸದಮಲ ನಾನಾವಿಧ ಗ್ರಂಥದಿ ಹಯ- ವದನನ ಪೂಜೆಯು ಯಜಿಸುವುದೆಲ್ಲ1 ತಮ್ಮಯ ನೇಮವು ಒಮ್ಮಿಗು ಬಿಡದಂ- ತಮ್ಮಯ ಬಿಡದಲೆ ಸಮ್ಮೊಗದಾ ಅಮ್ಮಹ ಶಾಸಖಿ ಬÉೂಮ್ಮಭೂತವನು ಘಮ್ಮನೆ ನಿರ್ಮಿಸಿ ರಮ್ಮಿಪುದೆಲ್ಲ2 ಮೇದಿನಿಯೊಳಗೆ ಶುಭೋದಯಕಾರಕ ಸ್ವಾದೀಸ್ಥಳ ಸರ್ವಾಧಿಕವೈ ಪಾದದ್ವಯದ ಅಗಾಧ ಮಹಿಮನೇ ಶ್ರೀದವಿಠಲನಾರಾಧಿಪುದೆಲ್ಲ 3
--------------
ಶ್ರೀದವಿಠಲರು
ಶ್ರೀನಾಥ ಶ್ರೀನಾಥ ಶ್ರೀನಾಥ ಮೋಹಿನೀ ರೂಪ ತಾ ತಾಳಿದಾನೆ ಸುಕಲಾಪ ತಾನೋಡಿಸುವುದು ಹೃತ್ತಾಪ ವನಂಬೆನೆ ಹರಿಯ ಪ್ರತಾಪ ಪ ಬಂಗಾರದ ಲತೆಯಂತೆ ಬಳುಕುವಳು ಬಾಜು ಬಂದಿಗೆ ಗೊಂಡೆಗಳ ಕಟ್ಟಿಹಳು ಮುಂಗಾಲಿಲೆ ನಿರಿಗಿಗಳ ಚಿಮ್ಮುವಳು ಮೋಹನ ಮಾಲೆಗಳ ಕಟ್ಟಿಹಳು ಕುಂಭ ಕುಚದ ಭಾರಕ್ಕೆ ತಡಿಯಳೂ ತುದಿಬೆರಳಲಿ ಗಲ್ಲವನೊತ್ತಿಹಳು ಕೇಸರಿ ಗಂಧ ಹಚ್ಚಿಹಳು ಹೊಂಗ್ಯಾದಿಗೆ ಪೋಲುವ ಮೈಬಣ್ಣ ಹೊಮ್ಮಸದಲಿ ಹೋಲುವ ಈ ಹೆಣ್ಣು ಹಿಂಗಡೆಯಲಿ ವರ ಹೆರಳು ಭಂಗಾರ ಹಿಮ್ಮಡಿ ಬಡಿಯೋದು ಸರ್ಪಾಕಾರ ಭಂಗಿಸುವಳು ಬಹು ದೈತ್ಯರ ಹೃದಯ ಬಹು ವಿಲಾಸದಿ ತೋರ್ಪಳು ಸಖಿಯ ಅಂಗಜದರು ಗಂಧಕೆ ಅಳಿವೃಂದ ಆಡುತಲಿಗೆ ಝೇಂಕಾರಗಳಿಂದಾ ಸಂಗಡನೆರದ ಸುರಾಸುರರಿಂದ ಸತಿ ಚಲುವಿಂದಾ ಮಂಗಳಮುಖಿ ನಮ್ಮಂಗಳ ಮೋಹಿಸಿ ಭಂಗನ ಪಡಿಸುವಳೈ ತ್ರಿಜಗವ ಜಗಂಗಳ ಪಾಲಿಸುವಳು | ಮನ ಸಂಗಡ ಅಪಹರಿಸುವಳು | ಜಡ ಜಂಗಮಲಿಗೆ ಬಹು ಪ್ರೀತ್ಯಾಸ್ಪದಳು ಸಾರಂಗಿ | ಸಾರಂಗಿ | ಸಾರಂಗೀ ಸಾಂಬಮದ ಭಂಗಿ | ಬಹಳ ಸುಖಸಂಗಿ ಸುಂದರಿ ಲಲಿತಾಂಗಿ | ಮೋಹನಾಪಾಂಗೀ ಬಡು ಹೆಂಗಲ್ಲ ಈಕೆ ಬಹುಭಂಗ ಬಡುವಿರಿ ಜ್ವಾಕೆ || ಶ್ರೀನಾಥ || 1 ಕನ್ನಡಿಯಂದದಿ ಪೋಲುವ ಕಪೋಲ ಕರ್ಪೂರ ರಂಜಿತ ವರ ತಾಂಬೂಲ ಕಣ್ಣಿಗ್ಹಚ್ಚಿಹಳು ಕನಕದ ಕೋಲಾ ಕಾಮಿನಿಯಂದಡಿ ತೋರ್ಪಳು ಜಾಲಾ ಬಿನ್ನುಡಿ ಹಾಕಿದ ಚಂದ್ರದ ಕುಪ್ಪುಸ ಚಪಲಾಕ್ಷಿಯ ನೋಟದ ಬಲು ರಭಸಾ ಕರ್ಣಾಯತ ನೇತ್ರಗಳ ವುಲ್ಲಸಾ ವುನ್ನಂಕಾ ನಾಶಿಕದ ಬುಲಾಕು ವಜ್ರಮಯದ ವರಮಖರೆದ ಬೆಳಕು ಕರ್ಣದಿ ರತ್ನಖಚಿತ ತಟಾಂಕಾ ಕುಸುರು ಹಚ್ಚಿದ ಬಾಹುಲಿಗಳ ಬಿಂಕ ಸಣ್ಣ ನಡುವಿನೊಯ್ಯಾರದ ನಲ್ಲೆ ಸರಸಿಜನಾಭನ ಸೃಷ್ಟಿ ಇದಲ್ಲೆ ಬಣ್ಣಿಸಲಳವಲ್ಲವು ಸೌಂದರ್ಯ ಬಿಡಿಸುವುದು ಕೇಳ ಮುನಿಗಳ ಧೈರ್ಯ ಬೆಣ್ಣೆಯಂತೆ ಮೃದುವಾದ ಶರೀರ ಭಾಗ್ಯಹೀನರಿಗೆ ಇದು ಬಲುದೂರಾ ಕನ್ನೆ ಶಿರೋಮಣಿ | ಕಾಮನ ಅರಗಿಣಿ ಕೌಸ್ತುಭಮಣಿಗಳ ಹಾರೇ ಸುವರ್ಣವರ್ಣ ಸುಕುಮಾರೇ ಮೋಹನ್ನರಸನೆ ಗಂಭೀರೇ ಮೋಹನ್ನೆ ಮಧುರ ಮಧುರಾಧರ ಮಂಜುಳ ವಕುಜಲರೆ ಬಹೋಚ್ಚಧರೆ ಛÅಪ್ಪನ್ನ ಛಪ್ಪನ್ನ ದೇಶಗಳು ಚಲುವರಿದ್ದರೂ ಚಪಲಾಕ್ಷಿಗೆ ಸಮರಾರೇ ಗತ ಪುಣ್ಯದಿಂದ ಕೈಸೇರುವಳಲ್ಲದೇ ಕಾಮಾಂಧsÀರಿಗತಿ ದೂರೇ ಈ ಹೆಣ್ಣು | ಈ ಹೆಣ್ಣು | ಈ ಹೆಣ್ಣು ಸುರಾಸುರರನ್ನೆ ಮೋಹಿಸಳು ಚನ್ನ ಮನಕೆ ತರಳಿನ್ನ ಬಿಡು ವಿಷದ್ಹಣ್ಣು ಅಪೇಕ್ಷಿಸೆ ಮಣ್ಣು ಕೂಡಿಸುವಳು ತನ್ನ ಜನರಿಗಮೃತಾನ್ನ ಕೊಡುವಳು ಮಾನ್ಯಳು ಪರಮಸೋನ್ಯಳು | ಸುಗುಣ ಅರಣ್ಯ ವಿನಾಶೇ ಬ್ರಹ್ಮಾಂಡಜಾದ್ಯಂಗೀತೇ || ಶ್ರೀನಾಥ || 2 ಹುಡುಗಿ ನೋಡು ಹೊಸ ಪರಿಯಾಗಿಹಳು ಹದ ಮೀರಿದ ಯವ್ವನದಿ ಮೆರೆವಳು ಅರಳು ತುಂಬಿಹಳು ಮಂದಸ್ಮಿತದಲಿ ಮೋಹಿಸುತಿಹಳು ಬೆಡಗಿನಿಂ ನುಡಿಯ ಸವಿಯ ತೋರುವಳೂ || ಬಹು ವಿಧದಾಭರಣಗಳನ್ನಿಟ್ಟಹಳು ನಡಿಗಿಗಳಿಂದ ನಾಚುತ ಹಂಸ ನವಮಣಿ ಚಂದ್ರರ ಕೆಡಿಸಿತು | ನಂಬೆ ಜಡಿತ ಮುತ್ತಿನ ತಾಯಿತ ಕಠಾಣೀ ಜಗವನು ಮೋಹಿಸುವಳು ಸುಶ್ರೋಣೀ ಬಿಂಕದ ನುಡಿ ಸೊಬಗಿನ ಚಂದಾ ಅಡಗಿದವೆ ಪಿತಭೃಂಗಗಳಿಂದಾ ಹಿಡಗಿ ಮರಗಿ ಮಧ್ಯಶಮನ ಮರಗೀ ಕೇಸರಿ ಬಹು ಸೊರಗೀ ಉಡುಪತಿ ಕೋಟಿ ಪ್ರಭ ಧಿಕ್ಕಾರಾ ಉಲ್ಲಾಸದಿ ಮನ ಮುಖ ಚಂದಿರಾ ನಡಿಗಗಳಿಂದೆನೆ ರಾಜಿಸುತಿ ಹೋದೆ ನವರತ್ನದಯದೆ ಮಯದ ಫಣಿಕಟ್ಟು ಮೇಲ್ಪೊಡವಿವೊಳಗೆ ಪಡಿಗುಣಕ ಕಡಿಯಿಲ್ಲಾ ಸುಳ್ಳುನುಡಿಯಿಲ್ಲಾ ಯೆನ್ನೊಡೆಯಾ ಶ್ರೀ ವಿಜಯ ವಿಠ್ಠಲನಲ್ಲದೆ ಎಲ್ಲಿಂದ ಬಂದಳೋ ಕೆಳದೀ || ಶ್ರೀನಾಥ || 3
--------------
ವಿಜಯದಾಸ
ಸತತ ಸದಮಲ ಪತಿತಪಾವನ ಅತೀತಗುಣತ್ರಯಾನಂದನ ಶ್ರುತಿಗಗೋಚರ ಯತಿಜನಾಶ್ರಯ ಅತಿಶಯಾನಂದಾತ್ಮನ ಭಜಿಸು ಮನವೆ ಧ್ರುವ ಪವಿತ್ರಪ್ರಣವ ಸುವಿದ್ಯದಾಗರ ವ್ಯಕ್ತಗುಣ ಅವಿನಾಶನ ಘವಿಘವಿಸುವಾನಂದಮಯ ರವಿಕೋಟಿ ತೇಜಪ್ರಕಾಶನ ಭವರಹಿತ ಗೋವಿಂದ ಗುರುಪಾವನ ಪರುಮಪುರುಷನ ಭುವನತ್ರಯಲಿಹ್ಯ ಭಾವಭೋಕ್ತ ಸಾವಿರನಾಮ ಸರ್ವೇಶನ 1 ಮೂಜಗದಿ ರಾಜಿಸುತಿಹ್ಯ ತೇಜೋಮಯ ಘನಸಾಂದ್ರನ ಅಜಸುರೇಂದ್ರ ಸುಪೂಜಿತನುದಿನ ರಾಜಮಹಾರಾಜೇಂದ್ರನ ಭಜಕ ಭಯಹರ ನಿಜ ಘನಾತ್ಮಗಜವರದ ಉಪೇಂದ್ರನ 2 ಪರಾತ್ಪರ ಪರಿಪೂರ್ಣ ಪರಂಜ್ಯೋತಿ ಘನಸ್ವರೂಪನ ಪರಂಬ್ರಹ್ಮ ಪರೇಶ ಸುರವರನಾಥ ಗುರುಕುಲದೀಪನ ನಿರಾಳ ನಿರ್ವಿಶೇಷ ನಿರಾಕಾರ ನಿರ್ವಿಕಲ್ಪನ ಕರುಣದಿಂದಲಿ ಹೊರೆವ ಮಹಿಪತಿಸ್ವಾಮಿ ಚಿತ್ಸ ್ವರೂಪನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸುಶೀಲೇಂದ್ರರ ಸ್ತೋತ್ರ ಇಂದು ನೋಡಿದೆ, ಸುಶಿಲೇಂದ್ರ ಗುರುಗಳ ಕುಂದಣದ ಶಿಖರ ಮೌಕ್ತಿಕದಿಂದ ವಿರಾಜಿಸುವ ರಜತ ಅಂದಣವನೇರಿ ಸಂಭ್ರಮದಿಂದ ಮೆರೆದು ಬರುವ ಗುರುಗಳ ಪ ಧ್ವಜ ಪತಾಕೆಶ್ವೇತ ಛತ್ರ ರಜತವರ್ಣ ಚವರ ಚಾಮರ ಭಜಿಪÀ ಭಟರ ಸಂದಣಿಮಧ್ಯ ರಜನಿ ಪತಿಯ ತೆರದಿ ಶೊಭಿಪರಿಂದು 1 ಭೇರಿ ಕಹಳೆ ವಾದ್ಯನೇಕ ಚಾರುತರ ಶೃಂಗಾರವಾದ ವಾರಣಗಳು ಎಡಬಲದಲಿ ಸಾರಿಬರುವ ಸಂಭ್ರಮವನು 2 ಎಲ್ಲಿನೋಡೆ ಪಾಠಪ್ರವಚ - ನೆಲ್ಲಿ ನೋಡೆ ವೇದಶಾಸ್ತ್ರ ಎಲ್ಲಿ ನೋಡಲಲ್ಲಿ ಲಕುಮಿ ನಲ್ಲನ ಸತ್ಕಥಾಲಾಪವಿಂದುನೋಡಿದೆ 3 ಆ ಮಹಾಸುಶೋಭಿತಮಾದ ಹೇಮಮಂಟಪ ಮಧ್ಯಮೂಲ ರಾಮನಾರ್ಚನೆಗೃವ ವೃಂದ ಪ್ರೇಮದಿ ನೋಡಿ ಧನ್ಯನಾದೆ 4 ಈ ಮಹಾಗುರುವರ್ಯರ ಪದ ತಾಮರ¸ವÀ ಪೊಂದಿದ ಭಕ್ತರ ನೇಮದಿಂ ವರದೇಶ ವಿಠಲ ಕಾಮಿತಾರ್ಥಗರೆವ ಸತ್ಯ 5
--------------
ವರದೇಶವಿಠಲ
ಹರಿಯೆನೀನು ಒಲಿದಮೇಲೆ ಪರರ ಭಯವುಂಟೇ ಪ ಪÀರುಷವೇದಿ ಸೋಂಕಿದ ಕಬ್ಬಿಣ ಹೊನ್ನಲ್ಲವೇ ಸುರನದಿ ಭಾಗೀರಥಿಯೊಳು ಮಿಂದೂ ಪಾಪಿಯೇ1 ಗರುಡದೇವನಿದಿರೊಳು ಉರಗಬಾಧೆಯಿರುವುದೇ ಧರೆಯೊಳ್ ರವಿಯು ಉದಯನಾಗೆ ರಾತ್ರಿ ನಿಲ್ವುದೇ2 ಗುರುವಿನ ದಯೆಯಿರುವರೇ ಕುಲದವರೇಂ ಗಯ್ಯುವರು ಉರಿವ ಕಿಚ್ಚಿನಿದಿರೊಳಗೆ ಚಳಿಯ ಭೀತಿಯೇ 3 ಸಂಜೀವನ ಪಿಡಿದವಂ ಮರಣಕೆ ತಾನಂಜುವನೇ ಕಂಜನಯನ ಕಾಯ್ವನಿರಲು ಶನಿಯು ಹಿಂಸಿಪನೇ 4 ರಾಜತನ್ನವನಾಗಿರಲ್ ವಿರಾಜಿಸುತ್ತಲಿರುವನೈ ಜಾಜೀಶ ಕೇಶವನೇ ನಾನು ನಿನ್ನವನೈ 5
--------------
ಶಾಮಶರ್ಮರು
139-2ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ವಿಜಯದಾಸರಲಿ ಗೋಪಾಲದಾಸರಲಿನಿಜ ಗುರುಭಕ್ತಿ ವರ್ಧಿಸಿ ಹರಿದಾಸನಿಜಪಂಥದಿ ತನ್ನ ಸೇರಿಸೆ ಅನುಗ್ರಹಿಸೆನಿಜಭಾವದಲಿ ಆಚಾರ್ಯ ಬೇಡಿದರು 1ನರಸಿಂಹ ದಾಸರಾಗಿಹ ತಂದೆಮುಖದಿಂದವರಗಾಯತ್ರಿ ಮಂತ್ರ ಉಪದಿಷ್ಟರಾಗಿವರದೇಂದ್ರರಲಿ ಮೂಲಟೀಕಾದಿ ಗ್ರಂಥಗಳುಮಂತ್ರೋಪದೇಶವು ಕೊಂಡವರು ಮೊದಲೇ 2ಶ್ರೀನಿವಾಸಾಚಾರ್ಯರ ಕೋರಿಕೆಯಮನ್ನಣೆಮಾಡಿದರು ದಾಸಾರ್ಯರುಘನಮಹಾಸಚ್ಛಾಸ್ತ್ರ ತತ್ತ್ವ ವಿಷಯಗಳಕನ್ನಡಮಾತಲ್ಲಿ ಬೋಧಿಸಿದರು 3ಪ್ರಣವಹರಿ ಜಾಗ್ರದಾದ್ಯವಸ್ಥಾ ಪ್ರಣಯನಕೃಷ್ಣರಾಮ ನಾರಸಿಂಹವರಾಹವಿಷ್ಣು ಪರಂಜ್ಯೋತಿ ಪರಂಬ್ರಹ್ಮವಾಸುದೇವಏನೆಂಬೆ ಶ್ರೀಶ ಗುಣಕ್ರಿಯಾ ರೂಪಮಹಿಮೆ 4ಗಾಯತ್ರಿ ನಾಮಆಮ್ನಾಯಗಾಯನ ಮಾಡಿದಯದಿ ಜಗವೆಲ್ಲ ರಕ್ಷಿಸುವ ಸ್ವಾಮಿಹಯಗ್ರೀವ ಗಾಯತ್ರಿ ಮಂತ್ರ ಪ್ರತಿಪಾದ್ಯನುನಾರಾಯಣವಾಸುದೇವವೈಕುಂಠ5ತ್ರಾತಹಯ ಶೀರ್ಷನೆ ಗಾಯತ್ರಿ ನಾಮನುಭೂತಪೂರ್ಣ ವಾಗ್ವಶಿ ಶರೀರವ್ಯಾಪ್ತಪೃಥ್ವಿ ಆಶ್ರಯ ಪ್ರಾಣಾಧಾರ ಹೃದಯನುತ್ರಿಧಾಮ ಪಾದತ್ರಯ ಜಗತ್ಪಾದ ಸದೃಶ 6ಜ್ಞಾನ ಸುಖಬಲಪೂರ್ಣ ಸರ್ವ ಆಧಾರನುದಿನಪತೇಜಃ ಪುಂಜಚೇಷ್ಟಕ ಸ್ಫೂರ್ತಿದನುವನಜಜಾಂಡದ ಸರ್ವಕರ್ತನೂ ದೇವಭಜನೀಯ ಧ್ಯಾತವ್ಯ ಶ್ರೀ ನಾರಾಯಣನು 7ವರ್ಣಗಳು ನಿತ್ಯವು ವರ್ಣಾಭಿಮಾನಿಗಳೊಳ್ವರ್ಣಪ್ರತಿಪಾದ್ಯಹರಿ ಶ್ರೀ ಸಹ ಇಹನುಪೂರ್ಣ ಸುಗುಣಾರ್ಣವನುನಿರ್ದೋಷಸರ್ವಜಗತ್ಜನ್ಮಾದಿ ಕರ್ತನು ನಿಗಮೈಕವೇದ್ಯ 8ಶಬ್ದಗಳು ಸರ್ವವೂ ಮುಖ್ಯ ವೃತ್ತಿಯಲಿಮಾಧವನ್ನಲ್ಲಿಯೇ ವಾಚಕವಾಗಿವೆಯುವೈದಿಕ ಶಬ್ದಗಳು ಹರಿಗೇವೆ ಅನ್ವಯವುಸಂಸ್ತುತ್ಯ ದ್ರಷ್ಟವ್ಯ ಅನುಪಮೈಕಾತ್ಮ 9ಸತ್ಯಜ್ಞಾನಾನಂತಆನಂದಮಯಹರಿಯೆಶ್ರೋತವ್ಯ ಮಂತವ್ಯ ನಿಧಿ ಧ್ಯಾಸಿತವ್ಯವ್ಯಾಪ್ತನು ಸರ್ವತ್ರ ಸರ್ವದಾ ಸರ್ವಕ್ಕೂಆಧಾರ ಅಕ್ಷರನು ಕ್ಷರಾಕ್ಷರೋತ್ತಮನು 10ರಾಜಿಸುತಿಹ ನಮ್ಮ ದೇಹಾಖ್ಯ ರಥದಲ್ಲಿರಾಜರಾಜೇಶ್ವರನು ಶ್ರೀ ಹ್ರೀ ಸಮೇತಯುವರಾಜ ವಾಯುದೇವನ ಸೇವೆಕೊಳ್ಳುತಿಹರಾಜೀವೇಕ್ಷಣಹರಿಪ್ರಾಣನಾಮ11ಪ್ರಸ್ಥಾನತ್ರಯ ವೈದಿಕಶಾಸ್ತ್ರ ವಿಷಯಗಳುಇತಿಹಾಸಭಾಷಾತ್ರಯಪುರಾಣಗಳುಪ್ರತಿರಹಿತ ಸರ್ವೋತ್ತಮ ಸ್ವಾಮಿ ಶ್ರೀಶನ್ನಚಿಂತಿಸಿ ಕಾಣಲುಬಗೆ ತೋರಿಸುತಿವೆ 12ಆಚರಿಸಿ ಜ್ಞಾನ ಪೂರ್ವಕವಿಹಿತಕರ್ಮಅಚ್ಚಭಕ್ತಿಯಿಂದ ಚಿಂತಿಸಿ ಸ್ತುತಿಸೆಅಚ್ಚುತ ಸ್ವತಂತ್ರನು ಮುಖ್ಯ ಕಾರಣ ವಿಷ್ಣುಪ್ರೋಚ್ಯ ಸುಖವೀವನು ತೋರಿತಾ ಒಲಿದು 13ಮಧ್ವಮತ ಸಿದ್ಧಾಂತ ಪದ್ಧತಿ ಅನುಸರಸಿಸದನು ಸಂಧಾನ ಭಕ್ತಿ ಉನ್ನಾಹದಿಮಾಧವನ ಗುಣಕ್ರಿಯಾ ರೂಪಗಳ ಕೊಂಡಾಡಿಪದವಾಕ್ಯ ಶ್ಲೋಕ ಪದ್ಯಗಳ ನುಡಿಯುವುದು 14ಒಂದೊಂದು ಕೀರ್ತನೆ ಪದ್ಯ ಗ್ರಂಥಗಳಲ್ಲೂಇಂದಿರೇಶನು ತತ್ತತ್ ಪ್ರತಿಪಾದ್ಯ ಇಹನುಪದ್ಯ ಕೀರ್ತನೆ ಗ್ರಂಥ ವಿಷಯ ಶ್ರೀಹರಿಯಮಂತ್ರ ಚಿಂತಿಸಿ ಅರ್ಪಿಸಬೇಕು ರಚನೆ 15ಬೃಹತೀ ಸಹಸ್ರಸ್ವರ ವ್ಯಂಜನಾಕ್ಷರ ವಾಚ್ಯಶ್ರೀಹರಿಅಹರ್ನಿಶಿಕಾಯುವ ದಯಾಳುಅಹರಹ ಸದುಪಾಸ್ಯ ಬ್ರಹ್ಮ ಶಿವ ಈಡ್ಯನುದೇಹ ಒಳಹೊರಗಿಪ್ಪ ಸರ್ವಾಂತರ್ಯಾಮಿ 16ಸ್ವತಃ ಅವ್ಯಕ್ತನು ಸರ್ವದಾ ಸರ್ವತ್ರಸ್ವತಂತ್ರ ಪೂರ್ಣಜ್ಞಾನ ಆನಂದರೂಪಸ್ವಪ್ರಯತ್ನದಿ ಅಲ್ಲ ಮುಮುಕ್ಷುಗಳಿಗಪರೋಕ್ಷಮೋದಮಯ ಶ್ರೀಹರಿಯ ಪ್ರಸಾದದಿಂದಲೇ 17ಜ್ಞಾನಿಗೆ ಪ್ರತ್ಯಕ್ಷ ಹರಿಯ ಅವ್ಯಕ್ತತ್ವಅನ್ಯರಿಗೆ ವೇದ್ಯ ಸೂಕ್ಷ್ಮತ್ವಾನುಮಾನದಿತನ್ಮಾತ್ರ ತೇಜಸ್ಸು ಭೌತಿಕವು ಎಂಬಂಥಅಗ್ನಿಯ ಸೂಕ್ಷ್ಮತ್ವ ಸ್ಥೂಲತ್ವವೋಲ್ಲ 18ಎಲ್ಲೆಲ್ಲೂ ಎಂದೆಂದೂ ಏಕಪ್ರಕಾರದಲ್ಲಿಳಾಳಕನು ಅವ್ಯಕ್ತರೂಪ ಇರುತಿಹನುಇಲ್ಲ ಇವಗೆ ಎಂದೂ ಎಲ್ಲೂ ಪ್ರಾಕೃತರೂಪಒಲಿದು ಕಾಣುವ ತನ್ನ ಇಚ್ಛೆಯಿಂದಲೇ 19ಮೂಲರೂಪದಿ ಸೂಕ್ಷ್ಮತ್ವ ಅವತಾರಗಳಲಿಸ್ಥೂಲತ್ವವೆಂಬುವ ವಿಶೇಷವು ಇಲ್ಲಇಳೆಯಲ್ಲಿ ಕೃಷ್ಣಾದಿ ರೂಪಗಳ ಕಂಡದ್ದುಮಾಲೋಲನಿಚ್ಛೆಯೇ ಪುರುಷಯತ್ನದಿ ಅಲ್ಲ 20ಅರೂಪಮ ಕ್ಷರಂಬ್ರಹ್ಮ ಸದಾವ್ಯಕ್ತಂಆತ್ಮಾವರೇ ದ್ರಷ್ಟವ್ಯ ಎಂದುಈ ರೀತಿ ಅವ್ಯಕ್ತತ್ವ ಅಪರೋಕ್ಷತ್ವಎರಡು ಪೇಳುವಶ್ರುತಿವಿರೋಧವು ಇಲ್ಲ21ಆರಾಧನಾದಿ ಪ್ರಯತ್ನಕ್ಕೂ ಅವ್ಯಕ್ತಉರುಸುಖಮಯಅಪ್ರಾಕೃತಅವಿಕಾರಿಪರಮಪುರುಷ ಹರಿಯ ಇಚ್ಛಾಪ್ರಸಾದದಿಂಅಪರೋಕ್ಷಮೋಕ್ಷಗಳು ಲಭ್ಯಯೋಗ್ಯರಿಗೆ22ವನಜನಾಭನರೂಪಗುಣಮಹಿಮೆಕೇಳಿಅನುಭವಕೆ ಬರುವಂಥ ಮನನ ಸುಧ್ಯಾನಅನಘಹರಿಯಲಿ ಭಕ್ತಿ ಸುಖಬಾಷ್ಪ ಸುರಿಸೆತನ್ನಿಚ್ಚೆಯಿಂದಲೆ ಅಪರೋಕ್ಷವೀವ 23ಬ್ರಹ್ಮಪುರವನರುಹವೇಷ್ಮವ್ಯೋಮಸ್ಥದೇಹ ಸರ್ವಾಂಗಸ್ಥ ಸರ್ವನಾಡಿಸ್ಥಬಹಿರಂತರ ಸರ್ವಮೂರ್ತಾ ಮೂರ್ತಸ್ಥಮಹಾಮಹಿಮ ಹರಿಯು ಸರ್ವತ್ರ ಪ್ರಸಿದ್ಧ 24ಸರ್ವತ್ರ ವ್ಯಾಪ್ತನು ಸತ್ತಾದಿ ದಾತನುಸರ್ವದೊಳು ಸದಾಪೂರ್ಣಅಖಿಳಸಚ್ಛಕ್ತಸರ್ವೇಶ ಸರ್ವಾಧಾರನಾಗಿಹ ಸ್ವಾಮಿದೇವಿ ಲಕ್ಷ್ಮೀರಮಣ ವಿಷ್ಣು ನರಸಿಂಹ 25ಉಗ್ರವೀರನು ಮಹಾವಿಷ್ಣು ತೇಜಃಪುಂಜಸುಪ್ರಕಾಶಿಪ ಸರ್ವತೋಮುಖ ನೃಸಿಂಹಅರಿಗಳಿಗೆ ಭೀಷಣನು ಭಕ್ತರಿಗೆ ಇಷ್ಟಪ್ರದಸಂರಕ್ಷಕ ನಮೋ ಮೃತ್ಯುಗೇ ಮೃತ್ಯು 26ಪ್ರೋದ್ಯರವಿನಿಭದೀಪ್ತ ವರ್ತುಲ ನೇತ್ರತ್ರಯಹಸ್ತದ್ವಯ ಆಜಾನು ಮಹಾಲಕ್ಷ್ಮಿಯುತನುಸುದರ್ಶಿನಿ ಶಂಖಿಯುತ ಕೋಟ್ಯಾರ್ಕಾಮಿತತೇಜಉತ್ಕøಷ್ಟಅಖಿಳಸಚ್ಛಕ್ತ ನರಸಿಂಹ27ಇಂಥಾ ವಿಷಯಗಳ ಜಿಜ್ಞಾಸ ಉಪದೇಶಹಿತಮಾತ ಗೋಪಾಲದಾಸಾರ್ಯರಿಂದಮುದದಿಂದ ಶ್ರೀನಿವಾಸ ಆಚಾರ್ಯರು ಕೊಂಡುಪಾದಕೆರಗಿಹರಿಅಂಕಿತ ಬೇಡಿದರು28ವಾರಿಜಾಸನ ಪಿತನ ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 29- ತೃತೀಯ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಕಾಮದೆನಿಪ ಗುರುಸಾರ್ವಭೌಮ ಲಾಲಿ ಪಇಂದ್ರಲಾಲಿರಾಘವೇಂದ್ರಲಾಲಿ|ಸಾಂದ್ರಭಕ್ತಕುಮುದ ಪೂರ್ಣಚಂದ್ರಲಾಲಿ 1ತರಣಿಲಾಲಿ ನಿಜ ಕರುಣಿಲಾಲಿ|ಶರಣ ಜನರÀ ಕಾಯ್ವಗುಣಪೂರ್ಣಲಾಲಿ2ದೇವಲಾಲಿ ನಿಜಭಾವಲಾಲಿ|ಭಾವಿಸುವರನಿತ್ಯನೀಕಾವಲಾಲಿ3ರಾಜಲಾಲಿಕÀಲ್ಪಭೂಜಲಾಲಿರಾಜಿಸುವ ಯತಿಕುಲತೇಜಲಾಲಿ4ದಾತಲಾಲಿನಿಜತಾತಲಾಲಿಪ್ರೀತ ಗುರುಜಗನ್ನಾಥವಿಠಲದೂತಲಾಲಿ5
--------------
ಗುರುಜಗನ್ನಾಥದಾಸರು
ಕೃಷ್ಣವೇಣಿ164ನಮೋ ನಮೋ ಕೃಷ್ಣವೇಣಿನಮೋ ನಮೋ ಕೃಷ್ಣವೇಣಿ ಕಲ್ಯಾಣಿ ಪ.ಈ ಜನ್ಮದಘವು ನಾನಾ ಜನ್ಮಕೃತದೋಷಆರ್ಜಿತವಾದ ಪಂಚ ಮಹಾಪಾಪವುತ್ರಿಜಗತ್ಪಾವನಿಯೆ ನಿನ್ನ ಕಂಡು ನಾ ಕಳೆದೆರಾಜಿಸುವ ದಿವ್ಯಗತಿಯೀಯೆ ಎನ್ನತಾಯೆ 1ವಿಪ್ರಮುನಿ ಸುರನರರು ಕನ್ಯಕ್ಕೆಗುರುಬರಲುಕ್ಷಿಪ್ರನೆರೆದರು ಉಭಯತೀರವಿಡಿದುಸುಪ್ರಾರ್ಥನೆಯ ಮಾಡಿ ಆನಂದದಿ ಹರಿಯನೆ ಪ್ರಸನ್ನೀಕರಿಸಿಕೊಳ್ಳುವರಮ್ಮ 2ನಿರ್ಮಳಾತ್ಮಕÉ ಗಂಗೆ ಸಂಗೆ ಗುಣೋತ್ತುಂಗೆಹಿಂಗಿಸು ಭವವ ಪಾವನತರಂಗೆಜಂಗಮ ಜಡಾತ್ಮರನುದ್ಧರಿಸುತಿಹೆ ಸದಾಮಂಗಳ ಶ್ರೀಪ್ರಸನ್ವೆಂಕಟನೊಲುಮೆಯಲ್ಲಿ 3
--------------
ಪ್ರಸನ್ನವೆಂಕಟದಾಸರು
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥಪೂಗಪುನ್ನಾಗಜಂ |ಬೀರತರುಗುಲ್ಮಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆನೆಗಳೆ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜಾÕನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದಮಾಧವಕೃಷ್ಣನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದುಸಿಲ್ಕಿದೆನು ಬಲು ದಂದುಗದಮಾಯಾಪ್ರ-ಬಂಧಕನೆ ನೆಗಳಿನಿಂದ 5ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿಪರಮಪಾವನಮೂರ್ತಿ |ಪರಮೇಷ್ಟಿಪರಬ್ರಹ್ಮಪರಮಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕನಿರ್ಗುಣನಿರಂಜನನಿರಾಧಾರ |ನಿರವದ್ಯನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8ಮಣಿಮುಕುಟಕುಂಡಲಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯಜಯಾಎಂಬ ಸುರನರರಸಂ- |ದಣಿಯಿಂದೆಹರಿಮೆರೆದನು 9ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙ್ಞÕನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜಾÕನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದಪುರಂದರವಿಠಲನ
--------------
ಪುರಂದರದಾಸರು
ಪರಮೇಶ್ವರಿ ಪಾರ್ವತಿಸತಿವರದೆ ಶ್ರೀವನದುರ್ಗಾ ಪ.ತರುಣಾರುಣಶತಕೋಟಿಕರುಣಾನನೆ ಮಾಂಪಾಹಿಅ.ಪ.ಜಗದ್ಭರಿತೆ ಜನಾರ್ದನಿಜಗದೇಕ ಶರಣ್ಯೆನಿಗಮಾಗಮಶಿರೋರತುನೆಮಿಗೆ ಕೈಯುಗಮಂ ಮುಗಿವೆಯಗಜೆ ಶ್ರೀಜಗದಂಬಿಕೆ 1ಸದಾನಂದೆ ಸರೋಜಾಕ್ಷಿಸದಾವಳಿಸನ್ನುತೆತ್ರಿದಶಾರ್ಚಿತೆ ತ್ರಿಗುಣಾತ್ಮಕಿಸದಯೆ ಹೃದಯೆ ಮುದದಿಂ ಪದನಂಬಿದೆ ಪದುಮಾಲಯೆ 2ವಿರಾಜಿಸುವ ವಿಶ್ವೋತ್ತಮವರಚಿತ್ರಪುರೇಶ್ವರಿಹರಿಲಕ್ಷ್ಮೀನಾರಾಯಣಿಕರುಣಾಭರಣೆ ಶರಣೋದ್ಧರಣೆ ಶ್ರೀಚರಣಾಂಬುಜೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ