ಒಟ್ಟು 273 ಕಡೆಗಳಲ್ಲಿ , 55 ದಾಸರು , 251 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗರ್ವಿಸುವದು ತರವೆ ಗರ್ವಿಸುವದು ತರವಲ್ಲ ನೀವಿದ ಕೇಳಿ ಸರ್ವೇಶನೊಪ್ಪನೀ ನಡತೆಯ ಕಂಡರೆ ಪತೊಗರಿ :ಬೆಲ್ಲವೆ ಬಾ ನಾನು ತೊಗುರಿಬೇಳೆಯು ನನಗುಲ್ಲಾಸದಿಂದೊಂದು ಯೋಚನೆ ತೋರಿತುಎಲ್ಲರು ಒಬ್ಬಟ್ಟು ಒಳ್ಳಿತೆಂದೆಂಬರುಬಲ್ಲವರಾದರೆ ವಿವರಿಸದಿರುವರೆಸಲ್ಲದ ಮಾತನಾಡಲಿಬೇಡ ಸತ್ಯವನಿಲ್ಲಿ ನನ್ನೊಳು ಪೇಳು ಮತ್ತೆ ನಾಲುವರಿರುವಲ್ಲಿ ನ್ಯಾಯವ ತಿದ್ದಿಕೊಂಬ ನಾವಿಬ್ಬರುಇಲ್ಲದ ಬಳಿಕ ಗೋಧಿಯ ದೆಸೆುಂದೇನುಸಲ್ಲದ ತುಪ್ಪವನೇನ ಮಾಡಲಿಬೇಕುಒಳ್ಳೆಯತನ ನಿನ್ನೊಳು ಇರುವುದಿದನೆಲ್ಲವನೆನಗೆ ಪೇಳು ಸಟೆಯ ಪೇಳಬಲ್ಲೆನೆ ನಾ ನಿನ್ನೊಳು ನಿಮ್ಮೊಳು ನಾನೆಬಲ್ಲಿದನಲ್ಲವೆ ಕೇಳು ನನ್ನನೆ ಯೆಲ್ಲಾಕೊಳ್ಳುವರವನಿಯೊಳು ನೀನೂ ಸ್ವಲ್ಪವಲ್ಲವೆ ನಿಜ ನಮ್ಮೊಳು ಕೋಪಿಸಬೇಡಸಲ್ಲದ ವಸ್ತುಗಳು ಗೋಧಿಯು ಎಣ್ಣೆಯಲ್ಲವೆ ನಿತ್ಯದಲ್ಲೂ ತುಪ್ಪವ ಬಿಡುಪೊಳ್ಳುನುಡಿದರೆನ್ನ ಮಾತೆಲ್ಲ ಪಾಳು 1ಬೆಲ್ಲ :ಏನೆಲೆ ತೊಗುರಿಬೇಳೆಯೆ ನನ್ನ ಸ್ವಲ್ಪವೆಂದೇನು ಕಾರಣವನು ಕಂಡು ನನ್ನೊಡನೀಗನೀನುಸುರಿದೆ ಮಾತು ಹೆಚ್ಚಿ ಬರುತಲಿದೆುೀ ನಡೆ ನಿನ್ನಯ ಶ್ರೇಷ್ಠವದೆನಿಟಷ್ಟೂನಾನಿಲ್ಲದಿರಲು ಸೀಯಾಗುವದೆಂತುರೆನೀನು ಸುಮ್ಮನೆ ಹೇಳಿಕೊಂಬೆ ತನ್ನಯ ಸ್ತುತಿತಾನೆ ಮಾಡಿಕೊಂಬ ಮನುಜಗೆ ನರಕವೆಂಬೀನಿಗದಿಯನರಿತರೆ ಪರನಿಂದೆಯನೀನೆಚ್ಚರಂಗೆಟ್ಟು ಮಾಳ್ಪೆಯ ಇನ್ನಭಿಮಾನವನೀಗ ುರುಯೆನ್ನೆಡೆಯೊಳುನೀನಿರಬೇಡ ಸಾರು ಹೆಚ್ಚುಗೆ ನಿನ್ನದೇನದನೆನಗೆ ತೋರು ದುರ್ಜನರು ತಾವೀನುಡಿ ನಿಜವೆಂಬರು ಸತ್ಪುರುಷರುಮಾನಸದಲಿ ಒಪ್ಪರು ನಿನಗೆ ಅಭಿಮಾನ ಮೊದಲು ಇದ್ದರೂ ಹಾರು ಮುಂದುಜಾಣತನವೆಯಾದರೂ ಹೆದರದಿಪ್ಪೆಹೀನಾಯವೆ ಬಂದರೂ ನಾಲುವರೆನ್ನದೀನಡೆಯೆನ್ನುವರು ಎಂಬುದನೀಗನೀನರಿಯದೆ ಬಂದೆುದು ಪಾಪ ಬೇರು 2ಗೋಧಿ :ಹೋಗಲೆ ತೊಗುರಿ ಬೆಲ್ಲಗಳಿರ ನನ್ನನುಕೂಗಿ ಬೈವಿರಿ ಗೋಧಿ ಯೋಗ್ಯದ ವಸ್ತು ತಾನಾಗದು ಎಂದು ಕೊಬ್ಬಿದ ಮಾತನಾಡುತ ನೀಗಿಕೊಂಬಿರೆ ನಿಮ್ಮ ಮಾನವ ಸದರ ನಿಮಗಾಗಿದೆ ಕೊರಗಿಪರೆ ಮಾತಿನ ಪರಿಯೇಗುವುದೆನಿಸದಿರೆ ನಿಮ್ಮನು ತೃಣಕಾಗಿ ನಾ ಕಾಣುವರೆ ಕಾಣೆನು ಮಾನಹೇಗೆ ನಿಮ್ಮೊಳು ಹೋಗೆ ಯೆನಗೆ ಸಮನಾಗಲು ನೀವು ಬಲ್ಲಿರೆ ುೀ ಯಾಳೆಗೆಹೋಗಿ ನೀವು ಕೊಬ್ಬಿದರೆ ಈಶ್ವರ ಕೃಪೆಯಾಗುವದೆಂತೆನ್ನು ಮರೆಯೊಗಲೊಲ್ಲಿರೆ 3ಎಣ್ಣೆ :ಹರಟಿಕೊಂಬಿರೆ ನೀವೆ ನಿಮ್ಮೊಳು ನನ್ನನುಜರೆಯುತಲೆಣ್ಣೆುಂದೇನೆಂದು ನಾನಿಲ್ಲದಿರಲು ನೀವೆಂತೊಂದು ಗೂಡಿ ಬಾಳುವಿರಿದನರಿಯದೆ ಮುಂಗೆಟ್ಟು ನುಡಿದರೇನಾುತೀಪರಿಯಹಂಕಾರ ಲೇಸಲ್ಲ ಹೀನಾಯವುಬರುವದು ಪರರ ನಿಂದಿಸಿ ಜೀವಿಸುವುದುತರವಲ್ಲ ಸದ್ಗತಿಗೆಟ್ಟು ಕೊನೆಗೆ ಬರದಿರದು ನರಕ ಬೆಂಕಿುಂ ಮೂರುವೇಳೆ ನೀಕೊರಗುವೆ ಬೆಲ್ಲವೆ ಕೇಳು ತೊಗುರಿಯೆ ನೀನಿರದೆ ಸಾರಿಯೊಳು ಬೇಯುವೆ ಗೋಧಿಕೊರಗುವೆ ಕಲ್ಲಿನೊಳು ಚಚ್ಚಿಸಿಕೊಂಡುಇರುವದೆ ನಿಮ್ಮವೊಲು ಕಷ್ಟವದೆಂಬದರಿುರೆ ನೀವು ನನ್ನೊಳು ುಂಥಾ ನಡೆಬರುವುದೆ ಬಹು ಕೇಳಾ ಹೀನಾಯವುಬರದಿರದೀ ಬಾಳು ಯಾತಕೆ ಸುಖಕರ ಮಾರ್ಗ ತಾ ನಿಮ್ಮೊಳು ುಲ್ಲವು ುದನರಿಯದೆ ನಿಮ್ಮಳಲು ಬಿಡದು ನನ್ನಮರೆಯೊಕ್ಕು ಬದುಕುವದಿದು ಬಹುಮೇಲೂ 4ತುಪ್ಪ :ಜಗದೊಳು ನೀವೆ ಬಲ್ಲಿದರೆಂದು ನಿಮ್ಮೊಳುನಿಗದಿಯ ಮಾಡಿಕೊಂಬಿರಿ ಗರ್ವ ಹೆಚ್ಚಿತೆಸುಗುಣವಂತರು ನೀವಾದರೀಪರಿಯಲ್ಲಿಬಗುಳಿಕೊಂಬಿರೆ ತುಪ್ಪವಂ ಬಿಡುಯೆನ್ನುತಮಿಗೆ ಸುರತತಿ ಮೊದಲಾಗಿ ನನ್ನಿಂದಲಿಸೊಗಸಾಗಿ ಕೃಪೆವಡೆವರು ನಾನಿಲ್ಲದೆಮಿಗೆ ಶುದ್ಧರಾಗುವಿರೆಂತು ಬರಿದೆ ನಿಮ್ಮನಿಗದಿಯ ಪೇಳಿಸಿಶಾನಿಗೆ ನನ್ನ ನೀವಗಲಲು ರುಚಿಕರವೆಂತು ನಾನೊಪ್ಪೆನುನಿಗಮದ ಮಾತಿದುವೆ ಸಟೆಯ ಮಾಡಿಸೊಗಸಾಗಿ ಬಾಳಿ ನೀವೆ ಅನ್ಯಾಯಗಳಗಣಿತವಾಗಿುವೆ ನನ್ನಯ ನ್ಯಾಯನಿಗದಿಯಾದರೆ ಹೋಗುವೆ ತಪ್ಪಿದರೆ ಈಜಗದೊಳಗ್ನಿಯ ಪೊಗುವೆ ನಿಮಗೆ ಆಣೆಯಗಲಿದರಿಲ್ಲಿಂದವೆ ಪೋಟಾಟವೆಜಗದೊಳುತ್ತಮ ವಸ್ತುವೆ ನಾನೆಂಬರುಬಗೆುರೆನ್ನನು ನೀವೆ ಮೊಂಡರುಯೆಂದುಖಗವಾಹನಗೆ ಪೇಳುವೆ ಚಿಕ್ಕನಾಗನಗರಕೆ ನಡೆುರಿ ನ್ಯಾಯವ ತಿದ್ದುವೆ 5ಒಟ್ಟಾಗಿ :ದೇವ ಭಕ್ತಾವನ ಪಾವನ ಚರಿತ ಸುರಾವಳಿನುತಪಾದಭಾವಜ ಜನಕ ರಮಾವಲ್ಲಭಾನಂತ ಗೋವಿಂದ ಮಾಧವನೀವರಿಯದೆ ಪೋಗಲಾವಗತಿ ನಮಗೀ ವಸುಧೆಯೊಳ್ಮುನಿಭಾವಿತ ಚರಣನೆಸಾವಧಾನದೊಳು ಪರಾಮರಿಸಿುಂತಪ್ಪದಾವಲ್ಲಿುದ್ದಡಲ್ಲಿಗೆ ತಕ್ಕ ಶಿಕ್ಷೆಯನೇ ವಿರಚಿಸಿ ಗುಣವಿದ್ದಲ್ಲಿ ರಕ್ಷಿಪುದಾವ ಪರಿಯಲಾದರು ಜಗನ್ನಾಥನೆುೀವ್ಯವಹಾರವನು ನಿಗದಿಗೈದುನೀವೊಲಿದೆಮ್ಮುವನು ರಕ್ಷಿಸಬೇಕು ದೇವಾದಿದೇವ ನೀನು ಅನಾಥರ ಕಾವಲ್ಲಿ ದಯಾವಂತನುಸುಜನಪತಿ ಭಾವಿತ ಪಾದಪದ್ಮನು ನೀನೆ ಗತಿನಾವರಿದನ್ಯರನು ಬಾಳುವೆವೆಂತುರಾವಣಾರಿಯೆ ನೀನು ಕೈಪಿಡಿ ಗತಿುವರೆದಿಕ್ಕು ನೀನು ಮಾಡಿನ್ನೇನುಭಾವಿಸೆವನ್ಯರನು ನಮ್ಮಿಂದಲಿಸೇವೆಗೊಳುವ ನೀನಿರಲು ಭಜಿಸದೆ ನಾವು 6ಬರಿದೆ ಜಗಳವಾಡಬೇಡವೀಚೆಗೆ ಬನ್ನಿಒರೆಯುವೆ ಬುದ್ಧಿಯ ಕೇಳಲಿಚ್ಛಿಸಿದರೆತರುಣನಾಗಾಖ್ಯಪುರದ ವೆಂಕಟೇಶನುಗುರುವಾಸುದೇವಾವತಾರವ ತಾಳಿಯೆಕರುಣದಿಂ ತಿಮ್ಮದಾಸನ ಬಹುದೋಷವ ಪರಿದಾಳ್ದನೆಂಬ ಬಿರುದಪೊತ್ತು ನಾನೀಗಮೆರೆಯುವೆನೀವೆಲ್ಲ ಬರಿ ಮಾತ ಮಾಡದೆಶಿರದಲಿ ಹೊತ್ತು ನನ್ನಯ ನುಡಿಗೇಳಲುಬರುವುದು ಕೀರ್ತಿ ಮೂಜಗದೊಳಗದರಿಂದನೆರೆುೀಗ ನೀವೆಲ್ಲರೂ ಒಂದಾಗಿಯೆುರಲು ಸೌಖ್ಯವದೆಂಬರು ವಿಂಗಡದಿ ನೀವಿರಲು ಜನರು ಬೈವರು ಕೂಡಲು ನನ್ನಗುರುದಯ ಬಹುದೆಲ್ಲರು ಹಿಗ್ಗುವರು ಮತ್ತರಿತು ಸಾರವ ಕೊಂಬರು ಬಹಳ ಶ್ರೇಷ್ಠರುವದರಿಯದಿದ್ದರೂ ಹೊಣೆಯ ನೀವೆನೆರೆ ನಿಮ್ಮನೀ ಜನರು ಬೈಯದ ಹಾಗೆಉರು ಶಿಕ್ಷೆಯನೆ ಮಾಳ್ಪರು ಯಾರೆಂಬಿರೆಅರಿುರಿ ಗಂಗಪ್ಪ ಹೊಣೆ ಹೋಗಿನ್ನಾದರು7
--------------
ತಿಮ್ಮಪ್ಪದಾಸರು
ಗಾಢದಿಂ ಹರಿಯೇ ಪ ಹರಿಸದನಕ್ಕೆ ಹೋಗದ ತಪ್ಪು ಅಗ್ರೋದಕ ತಾರದೇ ಬಿಟ್ಟ ತಪ್ಪು ಸದಮಲಸುಜ್ಞಾನದಿ ಹರಿ ಕೀರ್ತನೆ ಕೇಳದೆ ಬಿಟ್ಟೆನ್ನ ತಪ್ಪು 1 ಸ್ನಾನ ಜಪವನು ಬಿಟ್ಟು ಕುಪಿತನಾಗಿ ಕಪಿಯಂತೆ ತಿರುಗಿದ ತಪ್ಪು ಅಪರಿಮಿತ ದ್ರವ್ಯ ಅಪಹರಿಸಿ ಕೆಟ್ಟ ಅಪಕೀರ್ತಿ ಹೊತ್ತೆನ್ನ ತಪ್ಪು ಅನುದಿನ ಸ್ನಾನ ಸಂಧ್ಯಾದಿಗಳನು ಬಿಟ್ಟ ತಪ್ಪು 2 ಮನಿ ಮನಿ ತಿರುಗಿದ ತಪ್ಪು ತನು ಸುಖಕಾಗಿ ವನಿತೇರ ರಮಿಸಿನಾ ಘನ ಪಾಪ ಮಾಡಿದ ತಪ್ಪು ಅನುದಿನದಲಿ ಹನುಮೇಶ ವಿಠಲನ ನೆನೆಯದೆ ಬಿಟ್ಟ ತಪ್ಪು 3
--------------
ಹನುಮೇಶವಿಠಲ
ಗುರು ಹೊಂದಿದವನೀಗ ಎಂದಿಗೂ ಕೆಡನುಮರಳಿ ಹುಟ್ಟಿದರೇನು ಗುರುವು ಕಾಯುವನು ಪ ಗುರು ಹೇಳಿದಂತಿರದೆ ಗುರು ಆಜ್ಞೆಯಂತಿರದೆಬರಿಯ ಪ್ರಾಪಂಚದ ನಡೆಯನೆ ನಡೆದುಮರೆತೆಯಾದರೇನು ಗುರು ಕರುಣ ತಾನದುವೆನರಕಕ್ಕೆ ಕಳುಹದೋ ಯಮನ ಸೇರಿಸದೋ 1 ತನ್ನ ಅವಗುಣದಿ ಜನ್ಮಗಳ ಸೇರಿದರೇನುಅನ್ಯಕೆ ಎಳಸದದು ಸೋಂಕಿನಲಿ ಮನವುಚೆನ್ನಾಗಿಯೇ ಗುರುದ್ವಾರವನು ಕಾದಿಹನುಭಿನ್ನಿಸದೆ ಪರತತ್ವ ಬೋಧೆ ಹೇಳುವನು 2 ಭ್ರಷ್ಟತ್ವದಿಂ ತನ್ನ ಪಾಪವನು ಉಣುತಲಿಹುಟ್ಟುತಿಹ ಹಂದಿ ಪಶುವಾಗಿ ತಾನುಘಟ್ಯಾಗಿ ನರಜನ್ಮ ಧರಿಸುತ್ತ ಕಡೆಯಲಿಶಿಷ್ಟ ಚಿದಾನಂದ ಬಗಳೆಯನು ಕೂಡುವನು 3
--------------
ಚಿದಾನಂದ ಅವಧೂತರು
ಗುರುರಾಜರ ನಂಬಿರೋ ಸಾರುವೆ ನಾ ಸಾರುವೆ ನಾ ಸಾರುವೆ ನಾ ಪ ಗುರು ವಾದಿರಾಜರ ಚರಣ ಸ್ಮರಣೆಯಿಂದ ದುರಿತ ರಾಶಿಗಳೆಲ್ಲ ಪರಿಹಾರವಾಗುವುದು ಅ.ಪ ಕರುಣಾಸಾಗರರಿವರು ಸ್ಮರಿಪರಘ ಸ್ಮರಿಸದೆ ಪರತತ್ವವರಿದು ಬಾರಿ ಬಾರಿಗೊದಗಿದಪಾರ ಸಂಶಯ ದೂರಗೈಸಿ ಮುರಾರಿ ಚರಣವ ತೋರ್ಪ ಸುರರಿಗೆ ಮರುತರೆನಿಪರು ಬರುÀವ ಕಲ್ಪಕೆ 1 ಗುರು ವಾದಿರಾಜರೆಂಬ ಸುರತರು ಇರುವುದು ಸೋದಾಪುರದಿ ಅರಿತು ನಿರುತದಿ ಪರಮ ಭಕುತಿಯಲಿ ಸೇರಿ ಸೇವೆಯ ಮಾಳ್ವ ಸುಜನಕೆ ಬೀರುವರು ಪುರುಷಾರ್ಥಗಳನು ಸುರರು ಮಹಿಮೆಯ 2 ಉಪಚಾರವಲ್ಲವಿದು ಶ್ರೀಪತಿಯಾಣೆ ಗುಪಿತದಿಂದಿವರ ಮಂತ್ರ ಜಪಿಸಿ ಭೂತರಾಜರೆಂಬೊರು ತಾಪಹಾರಕರಾಗಿ ಸುಜನಕೆ ತಪವ ಮಾಳ್ವರು ರುದ್ರ ಪದವಿಗೆ ಪಾದ ಇವರಲಿ 3
--------------
ಪ್ರದ್ಯುಮ್ನತೀರ್ಥರು
ಗೋಪಾಲ ದಾಸರಾಯ ನಿನ್ನಯ ಪಾದ ನಾ ಪೊಂದಿದೆನೊ ನಿಶ್ಚಯ ಪ ಈ ಪೀಡಿಸುವ ತ್ರಯತಾಪಗಳೋಡಿಸಿ ಕೈ ಪಿಡಿದೆÀನ್ನ ಕಾಪಾಡಿದ ಗುರುರಾಯ ಅ.ಪ. ಘೋರ ವ್ಯಾಧಿಯನೆ ನೋಡಿ | ವಿಜಯರಾಯ ಭೂರಿ ಕರುಣವ ಮಾಡಿ ತೋರಿದರಿವರೆ ಉದ್ಧಾರಕರೆಂದಂದಿ ಪಾದ ಸಾರಿದೆ ಸಲಹೆಂದು || ಸೂರಿಜನ ಸಂಪ್ರೀಯ ಸುಗುಣೋದಾರ ದುರುಳನ ದೋಷ ನಿಚಯವ ದೂರಗೈಸಿ ದಯಾಂಬುನಿಧೆ ನಿ ವಾರಿಸದೆ ಕರಪಿಡಿದು ಕರುಣದಿ ಅಪ ಮೃತ್ಯುಯವನು ತಂದೆ ಎನ್ನೊಳಗಿದ್ದ 1 ಅಪರಾಧಗಳ ಮರೆದೆ ಚಪಲ ಚಿತ್ತನಿಗೊಲಿದು ವಿಪುಲ ಮತಿಯನಿತ್ತು ನಿಪುಣನೆಂದೆನಿಸಿದೆ ತಪಸಿಗಳಿಂದಲಿ ಕೃಪಣ ವತ್ಸಲ ನಿನ್ನ ಕರುಣೆಗೆ ಉಪಮೆಗಾಣೆನೊ ಸಂತತವು ಕಾ ಶ್ಯಪಿಯೊಳಗೆ ಬುಧರಿಂದ ಜಗದಾ ಧಿಪನ ಕಿಂಕರನೆನಿಸಿ ಮೆರೆಯುವ 2 ಎನ್ನ ಪಾಲಿಸಿದಂದದಿ ಸಕಲ ಪ್ರ ಪನ್ನರ ಸಲಹೊ ಮೋದಿ ಅನ್ಯರಿಗೀಪರಿ ಬಿನ್ನಪ ಗೈಯೆ ಜ ಗನ್ನಾಥ ವಿಠಲನ ಸನ್ನುತಿಸುವ ಧೀರ || ನಿನ್ನ ನಂಬಿದ ಜನರಿಗೆಲ್ಲಿಯ ಬನ್ನವೋ ಭಕ್ತಾನು ಕಂಪಿಶ ರಣ್ಯ ಬಂದೆನೊ ಈ ಸಮಯದಿಅ ಹರ್ನಿಶಿ ಧ್ಯಾನಿಸುವೆ ನಿನ್ನನು 3
--------------
ಜಗನ್ನಾಥದಾಸರು
ಚರಣದಾಸರ ಸದುಹೃದಯ ನಿವಾಸನೆ ಸಿರಿರಾಮ ಪರಮ ಪಾವನೆ ವರಜಾಹ್ನವೀ ಜನಕನೆ ಸಿರಿರಾಮ ಪ ಶರಣಜನರ ಮೇಲ್ನುಡಿಯೋಳ್ಸಂಚಾರನೆ ಸಿರಿರಾಮ ನೆರೆನಂಬಿ ಭಜಿಪರ ಭವಮಲಹರಣನೆ ಸಿರಿರಾಮ ಕರುಣದೊದೆದು ಯುವತಿಕುಲವನುದ್ಧರಿಸದನೆ ಸಿರಿರಾಮ ವರದ ವಾಸುಕಿಶಾಯಿ ಜಗದೇಕ ಬಂಧುವೇ ಸಿರಿರಾಮ 1 ಧುರಧೀರವಾಲಿಯ ಗರುವನಿವಾರನೆ ಸಿರಿರಾಮ ಮರೆಬಿದ್ದ ಸುಗ್ರೀವನ ದು:ಖಪರಿಹಾರನೆ ಸಿರಿರಾಮ ಪರಮಭಕ್ತ್ಹನುಮಗೆ ಕರವಶನಾದನೆ ಸಿರಿರಾಮ ಶರಣುಬಂದಸುರಗೆ ಸ್ಥಿರಪಟ್ಟವಿತ್ತನೆ ಸಿರಿರಾಮ 2 ಶರಧಿಮಥನಮಾಡಿ ಸುರರ ರಕ್ಷಸಿದನೆ ಸಿರಿರಾಮ ಹರನಕೊರಳ ಉರಿ ಕರುಣದ್ಹಾರಿಸಿದನೆ ಸಿರಿರಾಮ ವರಗಿರಿನಂದನೆಮನ ಸೂರೆಗೈದನೆ ಸಿರಿರಾಮ ಸರುವದೇವರದೇವ ಅದ್ಭುತಮಹಿಮನೆ ಸಿರಿರಾಮ 3 ಕರಿಯ ರಕ್ಷಣೆಗಾಗಿ ಕಾಸಾರಕ್ಕಿಳಿದನೆ ಸಿರಿರಾಮ ತರುಣಿಮೈಗಾವಗೆ ಚರನಾಗಿ ನಿಂತನೆ ಸಿರಿರಾಮ ಚರಣದಾಸರಮನೆ ತುರಗವ ಕಾಯ್ದನೆ ಸಿರಿರಾಮ ಪರಮಭಾಗವತರನರೆಲವ ಬಿಟ್ಟಿರನೆ ಸಿರಿರಾಮ 4 ಅನುಪಮ ವೇದಗಳಗಣಿತಕ್ಕೆ ಮೀರಿದನೆ ಸಿರಿರಾಮ ಸನಕಸನಂದಾದಿ ಮನುಮುನಿ ವಿನಮಿತನೆ ಸಿರಿರಾಮ ವನರುಹ ಬ್ರಹ್ಮಾಂಡ ಬಲುದರದಿಟ್ಟಾಳ್ವನೆ ಸಿರಿರಾಮ ಮನಮುಟ್ಟಿ ಭಜಿಪರ ಘನಮುಕ್ತಿ ಸಾಧ್ಯನೆ ಸಿರಿರಾಮ 5
--------------
ರಾಮದಾಸರು
ಚಿಂತಯಾಮಿ | ರಘುರಾಮಂ | ಸುತ ಕೌಸಲ್ಯೋದರಜಂ |ಸಂತತ ಶರಣರ ಕೃಪಾ | ಪಾಂಗವೀಕ್ಷಾ ಹಸಿತಂ ಪ ಸರಿ ಗ ಸರೀ | ಮಪ ಧಪ ಧಾ | ರಿಸ ನಿಧ ನಿಧ | ಪಮ ಗರಿ ಸದದ್ರುತ - ಸರಿಮಾ ಗರಿ | ಮಪ ದಾಪಮ | ಪಧಸಾ ನಿಧ | ನಿಧ ಪದಪಧ ||ಗರಿ ಸಧ | ``ರಿ ಸ ಧಾ ಸ | ಧಾ ಗ ರಿ ನಿಧಮ | ಗರಿಸಧ | ರವಿ ಕುಲಾನ್ವಯತಿಲಕಂ | ಋಷಿ ವಿಶ್ವಾಮಿತ್ರ ಕೃತಹವನ ಹೋಮ, ಬಾಧಾಗ್ರಸ್ತ | ವಿಮೋಚನ, ಶೀಲಂಅವನಿಜೆ ವೈವಾ, ಹಕ್ಕಾನೀತಂ | ಲಕ್ಷ್ಮಣ ಸಹ, ವಿಧಿಲಾಗ5ನಂ |ಶಿವಧನುವಂ, ಮುರಿದು ರಾಜ | ರುಗಳ ಗರ್ವಹರ | ಶ್ರೀರಾಮಂ 1 ಮಗ ಸಾ ನಿóದ | ನಿóಸಾ ರಿಗಮ | ನಿಧ ಮಾಗರಿ | ಗಮ ಪಗರಿಸದ್ರುತ - ನಿಧನಿಸ ರಿಗಮ ಧನಿಪಧ | ನಿಸ ನಿಧ ನಿಸರಿಗ ಮಗಸನಿ ||ಗರಿಸಧ, ರಿಸ ಧಾ, ಸ ಧಾಆ, ಗರಿ || ನಿದಮ | ಗರಿಸಧ || ರಾಗ - ಧನ್ಯಾಸಿ : ಅನುಜ ಸತಿಸಹ | ವನವಾಸಂ |ನಿಶಿಚರ ಹನನ | ಶೂರ್ಪನಖಿ | ನಾಸಛೇದಂ | ಚರಿತಂ 2 ರಾಗ :ಧಾನಿಸಿ :ನಿಸ ಗಾಮ ಪ | ಗಮ ಪಾನಿಸ | ರಿಸ ರಿನಿ ಸಪ | ಧಪಗಾರಿಸನೀ ಸ ಗ ಮಪ ಗಾ ಮಪನಿಸ | ಪಾ ನಿಸ ಗರಿ ಸನಿಧಪ ನಿಸಗರಿಸಧಾ, ಆರಿಸ ಧಾಸ, ಧಾ, ಗರಿ ನಿಧಮ ಗರಿಸದ || ರಾಗ - ಪರ | ಮಾನುಗ್ರಹ ಶೀಲಂ ರಾಮಂ 3 ಗಾ ಪ ಗರಿ, ಗರಿ ಸಧಸರಿ | ಗಾಪ ದಸದಪ ಗರಿ ಸರಿಗಪಗಗ, ರಿಸ | ರಿಗ, ರಿರಿಸ ಧ | ಸರಿಗರಿ ನಪಗಪ ಧಪಧಸ |ಗರಿಸಧಾ, ಆರಿಸ ಧಾ, ಸದಾ, ಗರಿನಿಧಮ, ಗರಿಸದ || ರಾಗ ಪೂರ್ವಕಲ್ಯಾಣಿ : ಲೇಸು ಕಪಿಗಳ ನಿಚಯ | ಸೀತಾಕೃತಿ ಹುಡುಕುತ |ಆ ಸಮೀರನು | ವಾರಿಧಿಯನು | ಹಾರಿ ಲಂಕೆಯ ಪುರದಲ್ಲಿಅಣುರೂಪದಿ ಹುಡುಕುತ | ಸೀತಾಕೃತಿಯ | ಕಂಡನುದೇಶ ಪುಚ್ಛಾಗ್ನಿಯಲಿ | ದಹಿಸಿ ಸೀತೆ | ವಾರ್ತೆ ಪೇಳಿದನು 4 ಗಾಮಗರಿಸ | ಧ ಸರಿ ಗಮ | ಪಾ ಧಪಸ | ನಿಧಪ ಮಗರಿ |ಗಮಪ ಮಾಪಗಾ | ಮರೀಗ | ಸಾರಿಗಆಮ ಪಧ ಪಸಾ ನಿ |ಗರಿಸಧಾ, ಆಸಧಾ ಸಧಾ ಗರಿ ನಿಧ ಮ ಗರಿಸಧ || ರಾಗ :ಮುಖಾರಿ : ಸತಿ ಪರಿವಾರ ಪುಷ್ಪಕವಿ | ಸ್ವಪುರ ಖೊರಟ 5 ಪಾ ಮಗರಿ | ಸಾ ನಿಧ ಸರಿ | ಮಾಗರಿಸ | ರಿಮ ಪದ ನಿಧ ಸಾ ಸನಿ ಧಪ ಪಾ | ಮಗರಿಸ | ನಿಧಸರಿ ಮಪನಿಧ ಮಪಧಸ ||ಗರಿಸಧಾ ಆರಿಸ ಧಾಅಸ | ಧಾಅ ಗರಿ ನಿಧಮ ಗರಿಸಧ || ರಾಗ ಮಧ್ಯಮಾವತಿ : ಸುರರು ಭಾರ ಕಳೆದ5ುರು ಗೋವಿಂದ ವಿಠಲ 6 ರೀ ಮರಿ ಮಪ | ನೀ ಪಮ ಪನಿ ಸಾ ರಿಸನಿ | ಪಪ ಮಮರಿ ಸ || ರೀಪಮ ರಿಸನಿಪ ರಿಮಪಾ || ರಾಗ :ಪೂರ್ವಕಲ್ಯಾಣಿ || ಧಪ ಸಾ ನಿಧಪಮ | ಮಪಗರಿರಾಗ :ಮೋಹನ || ಸರಿಮಾ ಗರಿ ಸರಿಗಾ | ಪಗರಿ ಸರಿ ಪದಸ ರಾಗ :ಮುಖಾರಿ | ರೀ ಸದಾ ಪದಪ ಗಾರಿ ಸರಾಗ :ನಾಟಿಕುರಂಜಿ || ನಿಸ ಮಗ ಧನಿ ಪಧನಿಸ ರಾಗ : ಸಾವೇರಿ || ಗರಿ ಸದಾ ರಿಸ ಧಾ ಸ | ಧಾ ಗ ರಿ ನಿದಮ ಗರಿಸದ
--------------
ಗುರುಗೋವಿಂದವಿಠಲರು
ಛಳಿಸದಿರು ಚಂಡಿ ತನುವೆ ನೀನುಒಳಗಾಗದೊರಟುತನವೆ ತರವೆ ಪಗರ್ಭವಾಸವಗಳಿಸಿದೆ ಹಾಗೆ ನೀನರ್ಭಕತ್ವದಲಾಡಿದೆ ಬಿಡದೆನಿರ್ಭಯದಿ ನೀ ಬದುಕಿದೆ ಭೋಗದಲಿದುರ್ಭಗರ ದಾರಿಗೊಲಿದೆ ನಲಿದೆ 1ಕಾಮಾಂಧಕಾರಕೆಳೆದೆ ನನ್ನ ನಿಷ್ಕಾಮದಲಿ ನಿಲಿಲೀಸದೆ ಕಳದೆನೇಮಕ್ಕೆ ನೀನಲಸಿದೆ ಶೀತೋಷ್ಣಭೀಮಕ್ಕೆ ನೀ ಬೆದರಿದೆ ಬರಿದೆ 2ಕಾಲಗಳ ಬಹು ಕಳಸಿದೆ ವ್ಯರ್ಥದಲಿಶ್ರೀಲೋಲನನುಸರಿಸದೇ ಹೋದೆಮೂಲವನೆವರೆ ಮಾಡಿದೆ ದೋಷಗಳಕೀಲುಗಳಿಗಳಿಕಾಲ್ನೀಡಿದೆ ಜಡಿದೆ 3ಮನವೀಗ ಮಾಡಿತಿನಿತಾ ನಾನಿದಕೆಮನೆ ಮಾತ್ರವಾಗೆ ಮಾತನಿಡುತಾತನುವಿನಲಿ ತಪ್ಪಿಡಿಯುತಾ ಯಾಕೆ ನೀನೆನುವೆಯನೆ ನೀನೆ ಚಿತ್ತವ್ರಾತಾ 4ಮನ ನೀನೆ ನೀನೆ ಮನವೂ ಕ್ರಿಯೆಯಮನ ಮಾಡೆ ಮೂಡ್ದೆತನುವೂ ಘನವೂನೆನೆಯಲೆರಡಿಲ್ಲ ನೀವು ಏಕತ್ವವೆನುತೆಂದೆನಿರೆ ಬಂಧವೂ ದಿಟವೂ 5ಕಾರಣವೆ ಮನವಾದರೆ ಅದರೊಡನೆಹೋರುವೆನು ನಾನು ಹೆದರೆನದರೆತೋರೆ ನೀ ಮುಂದೆ ಬೇರೆ ಬಂಧನವೂಬೀರಿತಿದು ನೀ ಕಯ್ಯಾರೆ ತಾರೆ 6ನೀ ಬಾರದಿರುವೆಯಲ್ಲ ುೀಮಾತನಾ ಬಾಯಲೆನ್ನೆನಲ್ಲಾ ಸೊಲ್ಲಾಆ ಬಗೆಯ ಮೂಡಿತಿಲ್ಲ ಇದಿರಾಗಿನೀ ಬಂದು ನಿಲಲು ಸಲ್ಲಾ ಹೊಲ್ಲಾ 7ನನಗುಂಟು ಮನಸಿಗುಂಟು ವ್ಯವಹಾರನಿನಗಾಗಬಾರದಂಟೂ ನಂಟುಜನಿಸಿಬರೆ ಬಂತುಗಂಟು ಆವರಣವೆನಗಾುತು ಪದರವೆಂಟೂ ಬಂಟೂ 8ಅನುಮಾನವಿಲ್ಲವಿಸಿದಕೆ ಪ್ರತ್ಯಕ್ಷವನುಭವಿಸಿ ಪೇಳ್ದೆನದಕೆ ಅಳುಕೆಜಿನುಗದಿರು ಮುಂದೆ ಜೋಕೆ ಹರಿಯಂಘಿü್ರಯನುಸರಿಸದಂದವೇಕೆ ಬೇಕೆ 9ಹರಿಪಾದಪದ್ಮವನ್ನು ನಾನುಬೆರೆವೆ ನೀ ಬಳಲಿಕೆಯನೂ ುನ್ನೂತರಬೇಡ ತಥ್ಯವನ್ನು ಪಡೆವದಕೆಬರೆ ಮುಂದೆ ಬಹುಮಿತ್ರನೂ ನೀನು 10ಶರೀರವಿರೆ ಶ್ರಮವು ನಿನಗೆ ಜನ್ಮಗಳಧರಿಸುತ್ತ ದಣಿವು ನಿನಗೆ ಹೀಗೆಸರಿಯಾಯ್ತು ದುಃಖ ನಮಗೆ ಇದಕಂಡುಇರುವ ಬಗೆ ವಿಶ್ವದೊಳಗೆ ಹೇಗೆ 11ಅದರಿಂದ ನೀನು ನಾನು ಒಂದಾಗಿಹುದುಗಲಾದಿಯನೀಶನೂ ತಾನುಪದವಿಯನು ಪಾಲಿಸುವನು ಬಳಿಕಲಿನ್ನುದುಸುವಕಷ್ಟಗಳನೂ ಕೊಡನೂ 12ಬರುವದಾನಂದ ನಮಗೆ ತಿರುಪತಿಯವರದ ವೆಂಕಟರಮಣಗೆ ಎರಗೆಭರಿತಾತ್ಮಗಾವು ಹೊರಗೆ ಹೀಗೆ ನಾವಿರಲುಂಟು ದೇವನೊಳಗೆ ಸಲುಗೆ 13ಕಂ||ಛಂದಾನುವೃತ್ತಿ ಮೂರ್ಖರಿಗೆಂದಾಡಿದ ನುಡಿಯು ಸತ್ಯವಾುತೀ ದೇಹವುಮುಂದೊರದೆ ಪೇಳಲುತ್ತರನೀಂದೊಡಬಡಿಸುತ್ತ ಕೇಳಿಕೊಳುತಿಹದೊಲವಿಂ
--------------
ತಿಮ್ಮಪ್ಪದಾಸರು
ಛೀ ಯಾತರ ಜನ್ಮಾ | ನಾಯಿಗಿಂದತ್ತಾಧಮ ಪ ಛೀ ಯಾತರ ಜನ್ಮಾ ನಾಯಿ ಹಿಂದತ್ತಾಧಮ ಬಾಯಿ ಬಡಕನಾಗಿ ಮಯ್ಯ ಮರೆವರೇ ನಿಮ್ಮಾ ಅ.ಪ ಸಾಧುರಾನುಸರಿಸಿ | ಬೋಧನಾಮೃತ ಸೇವಿಸಿ | ಹಾದಿವಿಡಿದು ಗತಿ ಸಾಧಿಸಿ | ಘಾಸಿ 1 ಬುದ್ಧಿ ತನಗ ಇಲ್ಲಾ | ತಿದ್ದಿದರ ಕೇಳಲಿಲ್ಲಾ | ಇದ್ದೆರಡಾದಿನದೊಳು | ಸದ್ಯ ಸೌಖ್ಯ ಕಳೆದೆಲ್ಲಾ | 2 ಕಲ್ಲು ಕಟೆಯ ಬಹುದು | ಬಿಲ್ಲು ಮಣಿಸಬಹುದು | ನಿಲ್ಲದೇ ವನಕಿ ತುಂಡಾ | ಸಲ್ಲದಂತೆ ನೀನಾಗುದು 3 ಮರಹುಟ್ಟಿ ಮರ ಬಿದ್ದಾ | ತೆರನಾದೋ ಅಪ್ರಬುದ್ಧಾ | ತಿರುಗಿ ನೋಡಿನ್ನಾರೆ | ಚ್ಚರಿತು ನೀ ಮದದಿಂದ 4 ಗುರು ಮಹೀಪತಿಜನಾ ಧರಿಸಿರೋ ಸದ್ವಚನಾ ಸರಿಕರ ಕಂಡು ಹ್ಯಾವಾ ವರಿಸದೆ ಇಹುದೇನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಛೀ ಯಾತರ ಬುದ್ಧಿ | ಸೊಕ್ಕಿನ ಮಾತಿಲಿ ಬಲು ನÉೂಂದಿ ಪ ಗುರುಹಿರಯರ ಅನುಸರಿಸದೇ | ಹರಿಚರಣವ ಕೊಂಡಾಡದೇ | ಬರಡಾ ನಾಲಿಗೆ ಮಾಡಿದಿ ಬರಿದೇ 1 ವಳ್ಹವ ಹೊಲ್ಲವರಿಯದೇ | ಯಳ್ಳಿನಿತು ನೀ ವಿಚಾರಿಸದೇ | ನಿಲ್ಲದೇ ಮಾಡುವಿ ಬಗಳುವದೇ 2 ಕೆಂಡವ ಕಂಡು ನೆರೆ | ಮಂಡಿಯಾ ತುರಿಸುವರೆ | ತುಂಡತನ ಗುಣ ಬಿಡು ಇನ್ನಾರೆ 3 ಪೊಡವಿ ದೇವತೆಯ ಕೋಣಾ | ಯಡಬಲ ನೋಡದಿರಲೇನು | ಕಡೆಯಲಿ ಕೆಡುವರು ಒಂದಿನಾ 4 ಮಹಿಪತಿಸುತ ಪ್ರಭು ದಾಸರ ಕೈ | ಅಹುದೆನಿಸಿಕೊಂಬುದೆ ಸ್ವರ್ಗಯ್ಯ | ವಿಹಿತಲ್ಲೆಂಬುದೇ ನರ್ಕದಾಶ್ರಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯ ಜಯ ಮಂಗಳವೆನ್ನಿರೇ ಶ್ರಯಕರ ದತ್ತಾತ್ರೇಯ ಮೂರ್ತಿಗೆ ಪ ನೋಡಿ ಭಾರವ ಕೊಂಡು ನಿಂದುವದಗಿ ಬಂದು ಬೇಡಿದ ಕೊಡಲಿಕ್ಕೆ ಬಲುಧೀರನು ಮಾಡಿ ವಿಷಂ ಮೃತಮತಿಗೋಚರವಾಚಿ ರೂಢಿಸಿ ಹೊರೆವ ಸುಧಯ ನಿಧಿಗೆ 1 ಶಳವಿಗೆ ಹಾರಿಸದೆ ಶರಣಾವಗ ವಿಡಿ ದಿಳೆಯ ಸುಖವನಿತ್ತುದುರಿತ್ಹರಿಸಿ ತಿಳಿಯಲಣುಗತಪ್ಪ ತಾಯಿ ನೋಡದ ಸ್ಥಿರ ಒಲುಮಿ ಮೋಹನ ಬುದ್ಧಿಮಲಹಾರಿಗೆ 2 ಪೊಳೆವೆದೆಯೊಳು ನೆನಪಿಗೆ ಮೈಯ್ಯಾಲಿದು ಹರಿಸಿಲುವಾ ಮನೋರಾಮನುತ ಭಕ್ತಿಗೆ ಫಲ ಶಾಖನರೆನುಂಡು ಶಿಶುವಾಗಿರುವನಮ್ಮ ಸಲಹುವ ಮಹಿಪತಿ ಸುತ ಪ್ರಿಯಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯತೀರ್ಥ ಗುರು ಹೃದ್ಗುಹಾಂತರ ವಾಸ ವಾಯ್ವಂತರ್ಗತ ಶ್ರೀ ಕೃಷ್ಣಯ್ಯ ಜೀಯಾ ಪ ಕಾಯೈಯ ನಿನ್ನವ ನಿವನೆಂದು ಅನುದಿನದಿ ಕಾಯ ಮನ ವಚನದಲಿ ನಿನ್ನ ನೆನವಿರಲಿ ಜೀಯಾ ಶ್ರೀ ವಿಜಯರಾಯರ ಸೇವೆ ಕಾರ್ಯಗಳಿಗಭಯವ ನಿಡೈಯಾ ಜೀಯಾ 1 ಲೌಕಿಕದಲ್ಲಿಹನೆಂದು ನಿರಾಕರಿಸದೇಲೆ ನಿನ್ನ ಏಕಾಂತ ಭಕುತಿಯನಿತ್ತು ಸಲಹೋ ಶ್ರೀ ಕಳತ್ರನೆ ಇವನ ವ್ಯಾಕುಲಗಳ ಹರಿಸಿ ಕೃಪಾಕಟಾಕ್ಷದಿ ನೋಡಿ ಕಾಯಬೇಕೈಯಾ 2 ಭಕ್ತವತ್ಸಲ ನಿನ್ನ ಭಕ್ತನಿವನೆಂದೆನಿಸು ಭಕ್ತಿಬಲಜ್ಞಾನ ಸಾಧನವನಿತ್ತು ಶಕ್ತನೆನಿಸಿಹಪರದಿ ಭಕ್ತಿನಿನ್ನೊಳು ಇರಲಿ ಮುಕ್ತರೊಡೆಯ ಕೃಷ್ಣವಿಠಲ ಶ್ರೀ ವೆಂಕಟೇಶ 3
--------------
ಕೃಷ್ಣವಿಠಲದಾಸರು
ಜಯತೀರ್ಥ ಗುರು ಹೃದ್ಗುಹಾಂತರವಾಸ ಪ ವಾಯುವಂತರ್ಗತ ಕೃಷ್ಣಯ್ಯ ಜೀಯ್ಯ ಅ.ಪ ಕಾಯಯ್ಯಇವ ನಿನ್ನವನೆಂದು ಅನುದಿನ ಕಾಯ ವಾಚದಲಿ ನಿನ್ನ ನೆನವಿರಲಿ ಜೀಯ ಶ್ರೀ ವಿಜಯರಾಯರ ಸೇವಾ ಕಾರ್ಯಗಳಿಗಭಯವ ನೀಡಯ್ಯ 1 ಲೌಕಿಕದಲ್ಲಿಹನೆಂದು ನಿರಾಕರಿಸದಲೆ ನಿನ್ನ ಏಕಾಂತ ಭಕ್ತಿಯನಿತ್ತು ಸಲಹೋ ಶ್ರೀ ಕಳತ್ರನೆ ಇವನ ವ್ಯಾಕುಲವ ಹರಿಸಿ ಕೃ ಪಾ ಕಟಾಕ್ಷದಿ ನೋಡಿ ಕಾಯಬೇಕಯ್ಯ 2 ಭಕ್ತವತ್ಸಲ ನಿನ್ನ ಭಕ್ತನಿವನೆಂದೆನಿಸೊ ಭಕ್ತಿಬಲಜ್ಞಾನ ಸಾಧನವನಿತ್ತು ಭಕ್ತವತ್ಸಲನೆಂಬೊ ಬಿರುದು ನಿನ್ನೊಳು ಇರಲಿ ಮುಕುತರೊಡೆಯ ದೇವಾ ಶ್ರೀ ವೇಂಕಟೇಶ 3
--------------
ಉರಗಾದ್ರಿವಾಸವಿಠಲದಾಸರು
ಜೋ ಜೋ ಸುಚರಿತ್ರ ಪರಮ ಪವಿತ್ರಾ ಜೋ ಜೋ ಶತಪತ್ರನೇತ್ರ ಸುಗಾತ್ರಾ ಪ ಜೋ ಜೋ ವಟಪತ್ರಶಯನ ವಿಚಿತ್ರ ಜೋ ಜೋ ಸುಂದರಚಿತ್ರ ಸೀತಾಕಳತ್ರ ಅ.ಪ ಕುಶಿಕಾಧ್ವರಪಾಲಬಾಲ ಸುರನುತಿಪಾತ್ರಾ ಸನ್ನುತ ಸ್ವರರೂಪ ಚಿತ್ರ ನಿಶಿಚರಹರ ನಿತ್ಯಸುಖದಾತ ಮಿತ್ರಾ [ತ್ರಿಶಿರಾದ್ಯಸುರ ಸಂಹಾರಕನೇತ್ರ] 1 ಕರುಣಾಕಾರ ದಿವ್ಯ ಶಶಿಬಿಂಬವದನಾ ಶರಣಜನಾನತ ಮರಕತವದನಾ ಧರಣಿಜಲೋಲ ಭಾಸ್ಕರವಂಶಮದನಾ ನಿತ್ಯ ಮಾಂಗಿರಿಸದನಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜ್ಞಾನವಂತರ ಸಂಗವಿರಲು ಸ್ನಾನವ್ಯಾತಕೆ ಪ ನಾನು ಎಂಬುದ ಬಿಟ್ಟ ಮೇಲೆ ನರಕವ್ಯಾತಕೆ ಅ.ಪ. ಮೃತ್ತಿಕೆ ಶೌಚ ಮಾಡದವನ ಆಚಾರವ್ಯಾತಕೆಸತ್ಯವಾದಿ ಆಗದವನ ನಂಬಿಗೆ ಯಾತಕೆ ||ಚಿತ್ತಶುದ್ಧಿ ಇಲ್ಲದವನ ವೈರಾಗ್ಯವ್ಯಾತಕೆಉತ್ತಮ ಹಿರಿಯರಿಲ್ಲದಂಥ ಸಭೆಯು ಯಾತಕೆ 1 ಪತಿಯ ಆಜ್ಞೆ ಮೀರಿದವಳ ವ್ರತಗಳ್ಯಾತಕೆಸತಿಗೆ ಅಳುಕಿ ನಡಿಯುವವನ ಸಾಹಸವ್ಯಾತಕೆ ||ಯತಿಯ ನಿಂದೆ ಮಾಡುವವನ ಮತಿಯು ಯಾತಕೆಅತಿ ವಿರೋಧ ಬಡಿಸುವಂಥ ಅಣ್ಣನ್ಯಾತಕೆ 2 ಹರಿಕಥೆಯ ಕೇಳದವನ ಕಿವಿಯು ಯಾತಕೆಮುರಹರನ ಮೂರ್ತಿಯ ನೋಡದಂಥ ಕಂಗಳ್ಯಾತಕೆ ||ಮರುತ ಮತವ ಪೊಂದದವನ ಬಾಳ್ವೆ ಯಾತಕೆಎರಡಾರು ನಾಮವಿಡದ ಶರೀರವೇತಕೆ3 ತಂದೆ ತಾಯಿ ಮಾತು ಕೇಳದ ಮಕ್ಕಳ್ಯಾತಕೆಬಂಧು ಬಳಗ ಉಳ್ಳದವನ ಭಾಗ್ಯವ್ಯಾತಕೆ ||ಬಂದ ಅತಿಥಿಗನ್ನವನಿಕ್ಕದ ಸದನವೇತಕೆ ಗೋ-ವಿಂದನಂಘ್ರಿ ಸ್ಮರಿಸದಂಥ ನಾಲಿಗ್ಯಾತಕೆ 4 ಮಕ್ಕಳನ್ನ ಮಾರಿಕೊಂಬ ತಂದೆಯಾತಕೆರೊಕ್ಕಕಾಗಿ ಬಡಿದಾಡುವ ತಮ್ಮನ್ಯಾತಕೆ ||ಕಕ್ಕುಲಾತಿ ಬಡುವ ಸಂನ್ಯಾಸವ್ಯಾತಕೆಠಕ್ಕು ಭಕುತಿ ಮಾಡುವಂಥ ದಾಸನ್ಯಾತಕೆ 5 ಆಗಿ ಬರದವರ ಅನ್ನ ಉಣ್ಣಲ್ಯಾತಕೆರೋಗವಾದ ನರಗೆ ಹೆಣ್ಣಿನ ಭೋಗವ್ಯಾತಕೆ ||ಯೋಗಿಯಾದ ಮೇಲೆ ದ್ರವ್ಯದ ಆಶೆಯಾತಕೆಭಾಗೀರಥಿಯ ಮಿಂದ ಮೇಲೆ ಪಾಪವ್ಯಾತಕೆ 6 ವೇದವನ್ನು ಓದದಂಥ ವಿಪ್ರನ್ಯಾತಕೆಕಾದೊ ರಣಕೆ ಅಂಜುವಂಥ ಕ್ಷತ್ರಿಯನ್ಯಾತಕೆ ||ವಾದವನ್ನು ಮಾಡುವಂಥ ಬಂಟನ್ಯಾತಕೆಸಾಧುಗಳಿಗೆ ಎರಗದವನ ಶಿರವಿದ್ಯಾತಕೆ 7 ಯಾತ್ರೆ ತೀರ್ಥ ಮಾಡದಂಥ ಪಾದವ್ಯಾತಕೆಪಾತ್ರರ ಸಂಗವಾಗದವನ ಜನ್ಮವ್ಯಾತಕೆ ||ಸ್ತೋತ್ರಕೆ ಮರುಳಾಗುವವಗೆ ಸಾಧನ್ಯಾತಕೆಪಾರ್ಥ ಸಖನ ತಿಳಿಯದವನ ಜ್ಞಾನವ್ಯಾತಕೆ 8 ಗುರೂಪದೇಶವಿಲ್ಲದಂಥ ಮಂತ್ರವ್ಯಾತಕೆಅರಿತು ವಿದ್ಯ ಪೇಳದ ಉಪಾಧ್ಯನ್ಯಾತಕೆ ||ಹರುಷವನ್ನು ತಾಳದಂಥ ಜ್ಞಾನಿ ಯಾತಕೆಕರಣ ಶುದ್ಧಿ ಇಲ್ಲದವನ ಸ್ನೇಹವ್ಯಾತಕೆ 9 ಗಾಣ ಕಟ್ಟಿದೆತ್ತಿಗೆ ಗೆಜ್ಜೆಯಾತಕೆ ||ರಾಣಿ ಇಲ್ಲದವನು ಮಾಡುವ ಬದುಕು ಯಾತಕೆತಾನು ಉಣ್ಣದೆ ಪರರಿಗಿಕ್ಕದ ಧನವಿದ್ಯಾತಕೆ 10 ಧರ್ಮವಿಲ್ಲದೆ ರಾಜ್ಯ ಆಳುವ ಪ್ರಭುವಿದ್ದ್ಯಾತಕೆಮರ್ಮವರಿತು ನಡೆಯದಂಥ ಹೆಣ್ಣು ಯಾತಕೆ ||ನಿರ್ಮಲಾಂಗನಾದ ಮೋಹನ ವಿಠಲನ ಗುಣಕರ್ಮ ಕ್ರಿಯಾ ತಿಳಿದ ಮ್ಯಾಲೆ ನಿರ್ಣಯವ್ಯಾತಕೆ 11
--------------
ಮೋಹನದಾಸರು