ಒಟ್ಟು 85 ಕಡೆಗಳಲ್ಲಿ , 33 ದಾಸರು , 69 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳ ಪದಗಳು391ಕೋಲು ಕೋಲೆನ್ನಿರೆ ರನ್ನದ ಕೋಲು ಕೋಲೆನ್ನಿರೇಕೋಲು ಕೋಲೆಂದು ರನ್ನದಕೋಲಧರಿಸಿನಿಂದುಲೋಲಾಕ್ಷಿ ದೇವಿ ಚರಿತೆಯ ಸ್ಮರಿಸುತ್ತ ರನ್ನದಾಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಲೋಲಾಕ್ಷಿ ದೇವಿ ಚರಿತೆ ಸ್ಮರಿಸುತ್ತ ನಲಿದಾಡಿಪಾಲಿಸೆ ಧರೆಗೆ ವರವ ಕರದೀಗಳ್ ರನ್ನದಾ1ಆದಿದೇವಿಯು ಚತುರ್ವೇದ ಗರ್ಭನನಿತ್ಯಪಾದಸೇವೆಯ ಗೈವಳ್ ಮೋದದಿ ರನ್ನದಿಕೋಲು ಪಾದಸೇವೆಯ ಗೈವಳ್ಮೋದದಿ ಮಾಧವನ ಪೂಜಿಸಿ ನಮಿಸಿಕ್ಷೀರಾಬ್ಧಿಯೊಳ್ ರನ್ನದಾ2ಘೋರದಾನವರೆಲ್ಲ ಧಾರಿಣಿ ಬಾಧಿಸಲುವಾರಿಜೋದ್ಭವನಾರದಾದ್ಯರು ರನ್ನದಾವಾರಿಜೋದ್ಭವನಾರದಾದ್ಯರು ದೇವಿಯೊಳುದೂರಿಡೆಕೇಳಿಅಭಯವಿತ್ತಳು ರನ್ನದಾ3ಸುರರುದಾನವರೆಲ್ಲ ಶರಧಿಯ ಮಥಿಸಲುಅರವಿಂದಮುಖಿ ಲಕ್ಷ್ಮಿ ಜನಿಸಿದಳೆ ರನ್ನದಅರವಿಂದ ಮುಖಿಲಕ್ಷ್ಮಿ ಜನಿಸಲು ನಾರಾಯಣನರಸಿಯೆಂದೆನಿಸಿ ಮೆರೆದಳು ರನ್ನದಾ4ಅಘವಿನಾಶಿನಿ ಜಗದಾಂಬಿಕೆ ಕೀರವಾಣಿಸುಗುಣೆ ಸುಂದರಿ ಸುಶೀಲೆಯು ಫಣಿವೇಣಿನಗುವ ಮೊಗದ ಚಂದ್ರವದನೆಯು ರನ್ನದಾ5ದುಷ್ಟ ನಿಗ್ರಹರೆಂದು ಸೃಷ್ಟಿಗೆ ನಡೆತಂದುಶ್ರೇಷ್ಠಾದಿ ನೂರೊಂದು ರೂಪಾದಳ್ ರನ್ನದಾಶ್ರೇಷ್ಠಾದಿ ನೂರೊಂದು ರೂಪಾಗಿ ಶಿಕ್ಷಾ ರಕ್ಷಾಧ್ಯಕ್ಷಳೆನಿಸಿ ಖಡುಗ ಧರಿಸಿದಳ್ ರನ್ನದಾ6ಘೋರಮಹಿಷನ ಸಂಹಾರಕೆಂದು ಬಂದುಮಾರಾಂತು ರಣದಿ ದುರುಳನ ರನ್ನದಾಮಾರಾಂತು ರಣದಿ ದುರುಳನ ಮರ್ದಿಸಿಈರೇಳು ಜಗವಾ ಪೊರೆದಳು ರನ್ನದಾ7ಶುಂಭಾ ನಿಶುಂಭ ಖಳರೆಂಬ ದೈತ್ಯರ ಗೆಲಿದುಅಂಬುಜಾಲಯದಿ ನೆಲಸಿದಳ್ ರನ್ನದಾಅಂಬುಜಾಲಯದಿ ನೆಲೆಸಲು ಪೂಜಿಸಿದಕುಂಭಿನಿಸುರರಿಗೊಲಿದಾಳು ರನ್ನದಾ8ಚಂಡ ಮುಂಡಕರೆಂಬಘೋರದೈತ್ಯರನೆಲ್ಲತುಂಡು ತುಂಡಾಗಿ ಶಿರ ಖಂಡೀಸಿ ರನ್ನದಾತುಂಡು ತುಂಡಾಗಿ ಶಿರ ಖಂಡೀಸಿ ಮೆರೆದಳುಚಂಡಿ ಕರಾಳಿ ಚಾಮುಂಡಿಗೇ ರನ್ನದಾ9ರಕ್ತ ಬೀಜನಘೋರಶಕ್ತಿಯ ಪರೀಕ್ಷಿಸಿಮುಕ್ತಿ ಪಥವ ತೋರೆ ಮಾಂಕಾಳಿ ರನ್ನದಾಮುಕ್ತಿ ಪಥವ ತೋರೆ ಮಾಂಕಾಳಿ ಅರ್ಚಿಸಿದಭಕ್ತರಿಗೊಲಿದು ನಲಿದಳ್ ರನ್ನದಾ10ದೇವರಾಮನ ಸತಿಯಾಗಿ ಲಂಕೆಗೆ ಪೋಗಿರಾವಣಾದ್ಯರನೆಲ್ಲ ಕೊಲಿಸೀದಳ್ ರನ್ನದಾರಾವಣಾದ್ಯರನೆಲ್ಲ ಕೊಲಿಸೀದಳ್ ಸೀತೆಯು ತಾಪಾವಕನುರಿ ಹೊಕ್ಕಿ ಪೊರಟಳ್ ರನ್ನದಾ11ಸೃಷ್ಟೀಶ ಭೀಷ್ಮಕನ ತನುಜೆ ರುಕ್ಮಿಣೀದೇವಿಕೃಷ್ಣಮೂರ್ತಿಗೆ ಓಲೆ ಬರೆದಾಳು ರನ್ನದಾಕೃಷ್ಣಮೂರ್ತಿಗೆ ಓಲೆ ಬರೆದು ಒಲಿಸಿಕೊಂಡುಪಟ್ಟದರಸಿಯಾಗಿ ಬಾಳಿದಳು ರನ್ನದಾ12ಮಾನಿನೀಮಣಿಪದ್ಮಾವತಿಯು ಜಲಕೇಳಿಗೈದುಶ್ರೀನಿವಾಸನ ಕಂಡು ಸ್ಮರಿಸೀದಳ್ ರನ್ನದಾಶ್ರೀನಿವಾಸನ ಕಂಡು ಸ್ಮರಿಸಿ ಕಲ್ಯಾಣವೆಸಗಿತಾನೆ ವಿಷ್ಣುವ ಪೂಜೆಗೈದಳ್ ರನ್ನದಾ13ನವರಾತ್ರಿ ದಿನದಲಿ ನವದುರ್ಗಿ ರೂಪಿನಲಿನವಗಂಧ ಕುಂಕುಮಚಂದನಪುಷ್ಪಗಳಿಂದನವವಿಧ ಪೂಜೆ ಕೊಂಬಳ್ ರನ್ನದಾ14ಮಾರಿಪೂಜೆಯ ರಕ್ತ ಹಾರಕ್ಕೆ ಮನಗೊಂಬಾಕ್ರೂರಗಣಗಳೊಡ ಸೇರಿದಳ್ ರನ್ನದಾಕ್ರೂರಗಣಗಳೊಡ ಸೇರಿ ಧಾರುಣಿಯೊಳುಚಾರುವರ್ಣ ಪೂಜೆ ಕೈಕೊಂಬಳ್ ರನ್ನದಾ15ಸರ್ವಮಂಗಲ ಮಾತೆ ಸರ್ವಸಜ್ಜನ ಪ್ರೀತೆಸರ್ವ ಆಭರಣ ಭರಿತೇಯು ರನ್ನದಾಸರ್ವ ಆಭರಣ ಭರಿತೇಯು ಪೀತಾಂಬರನೆರಿಹಿಡಿದುಟ್ಟು ರನ್ನದಾ16ಹದಿನೆಂಟು ಪೌರಾಣದಿ ಮೆರೆವ ಈ ದೇವಿ ಚರಿತೆಹದಿನೆಂಟು ಪದವಾಗಿ ನುಡಿಸೀದಳ್ ರನ್ನದಾಹದಿನೆಂಟು ಪದದಿ ತಪ್ಪಿರಲು ತಿದ್ಯೋದಿದವರವಿಧವಿಧ ಮನದ ಬಯಕೆ ಒದಗುವಾದೆ ರನ್ನದಾ17ಮಂದಗಮನೆಧರಣಿಭಾರತಗ್ಗಿಸಿ ಬಂದುನಿಂದಾಳು ವಿಷ್ಣು ವಕ್ಷಸ್ಥಲದಲಿ ರನ್ನದಾನಿಂದಿರ್ದ ವಿಷ್ಣು ವಕ್ಷಸ್ಥಲದ ರಮೆಗೆ ಗೋವಿಂದದಾಸನು ಸರಿಸಿ ನಮಿಸೂವೆ ರನ್ನದಾ18
--------------
ಗೋವಿಂದದಾಸ
ಯಾಕಿಂತು ಮನಸೋತೆ ಏ ರುಕ್ಮಿಣೀದೇವಿಲೇಖನವ ಬರೆದು ನೀನಾ ಕೃಷ್ಣಗೆಪಲೋಕಮಾನ್ಯಳೆ ನೀನು ಬೇಕಾಗಿ ಮರುಳಾದೆಈ ಕೃಷ್ಣ ಯಾದವರ ಕುಲಕೆ ತಿಲಕಅ.ಪಜನಿಸಿದನು ಮಧುರೆಯೊಳು ದೇವಕಿಯ ಜಠರದಲಿತನಯನೆನಿಸಿದ ಗೋಪಿಗಿವನು ಗೋಕುಲದಿದನುಜೆ ಪೂತನಿಯಳ ಮೊಲೆಯುಂಡು ತೇಗಿದನುಮನೆ ಮನೆಯ ಪಾಲ್ಮೊಸರು ಕದ್ದು ಮೆದ್ದಾ1ತುರುವ ಕಾಯ್ದನ ವನದಿ ತಿರಿಯ ಬುತ್ತಿಯನುಂಡಶಿರಕೊರಳಿಗಾಭರಣ ನವಿಲ್ಗರಿಯ ತುಂಡುತರಳತನದಲಿ ಹಲವು ತರುಣಿಯರ ವ್ರತವಳಿದಕರಿಯನಿವ ಸ್ತ್ರೀಯರುಡುವ ಸೀರೆ ಕದ್ದೊಯ್ದ2ನಂದಗೋಕುಲದಿ ಸಾಕಿದ ಸ್ತ್ರೀಯರನು ಬಿಟ್ಟುಬಂದು ಮಧುರೆಯೊಳು ಮಾತುಳನ ಮರ್ದಿಸಿದಾಚಂದವೆ ಆ ಕುಬುಜೆ ಡೊಂಕ ತಿದ್ದಿಯೆ ನೆರೆದಸಿಂಧುಮಧ್ಯದಿಂzÀಗೋವಿಂದ ಮಾಗದಗಂಜಿ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಶ್ರೀ ಕೃಷ್ಣ ಪ್ರಾದುರ್ಭಾವ ಸ್ತುತಿ23ಪೂರ್ಣ ಸುಗುಣಾರ್ಣವನೇಅನಘಮಾಯಾರಮಣಆ ನಮಿಪೆ ಶ್ರೀ ಕೃಷ್ಣ ರುಕ್ಮಿಣೀನಾಥಜ್ಞಾನ ಸುಖ ಬಲ ಚೇಷ್ಟರೂಪ ದೇವಕೀತನಯಸೌಂದರ್ಯಸಾರ ಜಗತ್ ಜನ್ಮಾದಿಕರ್ತ ಪ.ಅನುಪಮಾದ್ಭುತ ಬಾಲಕನು ಅಂಬುಜೇಕ್ಷಣರತ್ನ ಕಿರೀಟ ಪೊಳೆವಕೌಸ್ತುಭಮಣಿಉರದಿ ಶ್ರೀವತ್ಸ ಚತುರ್ಭುಜನೇ | ಪಾಂಚಜನ್ಯ ಕೌಮೋದಕೀ ಸುದರ್ಶನ ಸರೋಜ 1ಉದ್ದಾಮ ಕಾಂಚನಾಂಗದ ಕಂಕಣಾದಿಗಳ್ಪೀತಾಂಬರ ಪಾದನೂಪುರ | ಪೂರ್ಣೇಂದುಮುದ್ದು ಮುಖ ಮುಗುಳ ನಗೆ ಸುಳಿಗೊರಳು ಶುಭನೋಟ |ಮೋದ| ಚಿನ್ಮಯ ಹೀಗೆ ಪ್ರಾದುರ್ಭವಿಸಿದೆಯೋ2ಈರೂಪವಸುದೇವ ನೋಡಿ ಸ್ತುತಿಸಿದ ನಿನ್ನಅರಿಯೆ ನಾ ವರ್ಣಿಸಲು ನಿನ್ನ ಗುಣರೂಪಶರಣು ಆತ್ಮನೇ ಪರನೇ ಉದ್ದಾಮ ಹರಿಕೃಷ್ಣಶರಣು ಸರ್ವಾಶ್ರಯನೇ ಶ್ರೀಶ ಮಾಂಪಾಹಿ3ಜಯತು ದೇವಕೀತನಯಸತ್ಯಾ ರುಕ್ಮಿಣೀ ಕಾಂತಜಯತುಪೂರ್ಣಪ್ರಜÕಹೃತ್ ಪದ್ಮ ಸಂಸ್ಥಜಯತು ಜಗತ್ ಜನ್ಮಾದಿಕರ್ತ ಜಗನ್ನಾಥಜಯತು ಜಗತ್ ಜನ್ಮಾದಿಕರ್ತ ಜಗನ್ನಾಥಜಯತು ವಿಧಿತಾತ &ಟsquo;ಪ್ರಸನ್ನ ಶ್ರೀನಿವಾಸ&ಡಿsquo; ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ರಾಜಸೂಯಾ ಅಗ್ರಪೂಜಾ ಸ್ತೋತ್ರ59ರಾಜನ ಭಾಗ್ಯವಿದು | ಧರ್ಮರಾಜನ ಭಾಗ್ಯವಿದು ಪರಾಜೀವಜಾಂಡದ ಏಕಸ್ವರಾಟ್ ಶ್ರೀಕೃಷ್ಣನರಾಜೀವಅಂಘ್ರಿಸುಯುಗ್ಮವರಾಜಸೂಯದಿ ತಾ ಪೂಜಿಸಿದ ಅ.ಪಚಿತ್ರವಿಚಿತ್ರವು ಸ್ತಂಭತೋರಣಗಳುರತ್ನ ಮಾಣಿಕ್ಯ ಮರುಗದದಿಚಂದ ಹೊಳೆವ ಸಭೆ ರಾಜರು ಸುತಪೋಧನರು ಕುಳಿತಿರೆ ಮಾಧವಗೆಮೊದಲು ಪೂಜೆಯ ಮಾಡಿ ಯಜÕವಾಚರಿಸಿದವಿಧಿಪೂರ್ವಕದಿ ಶ್ರಧ್ಧೆಯಲಿ1ಶಂತನುಸುತ ಗಾಂಗೇಯರು ನೆರೆದಿದ್ದಸಾಧು ಸನ್ಮುನಿಜನ ಮನದಂತೆಇಂದಿರೆಯರಸ ಶ್ರೀ ಕೃಷ್ಣಗೆ ಸಮರುಅಧಿಕರು ಇಲ್ಲದ ಜಗದೀಶವಿಧಿಈಶಾನದಿ ಸರ್ವನಿಯಾಮಕಕೃಷ್ಣನೇ ಪೂಜ್ಯನು ಎಂದರು ದೃಢದಿ 2ಗಂಗಾಜಲವ ಜಾಂಬೂನದ ಕಲಶದಿಮಾದ್ರೇಯನು ತಾ ತಂದೀಯೇಗಂಗಾಜನಕವರಾಂಗಿ ಸುವಕ್ಷ ಐಶಂಗವಾಸನ ಅರಿಶಂಖವ ಪಿಡಿದವನಅಂಘ್ರಿಸುಕಂಜದ್ವಯವ ಯುದಿಷ್ಠಿರಅವನೀಜನಗೈದ ಭಕ್ತಿಯಲಿ 3ಮನುಷ್ಯವತ್ ಲೀಲಾ ದ್ವಿಭುಜನು ಚಿನ್ಮಯಭಜಕಗೆ ಚತುರ್ಭುಜ ಕಾಣಿಸುವಜ್ಞಾನರೂಪದಿಹರಿವನಜಸಂಭವನಲಿಇಹ ಕ್ರಿಯಾರೂಪದಿ ವಾಯುನಲಿವಾಣೀ ಭಾರತಿಯಲಿ ಇಚ್ಚಾಶಕ್ತಿರೂಪದಿ ಪ್ರಚುರನು ಸರ್ವೇಶ 4ರಥನಾಭಿಯಲಿ ಅರಗಳ ತೆರದಿಸಮಸ್ತವು ಪ್ರತಿಷ್ಠಿತ ವಾಯುನಲಿಕ್ಷಿತಿಯಲಿ ಸ್ವಯಮೇವ ವಾಯುವೆಜನಿಸಿ ಜಗದಂತರಾತ್ಮ ಭೀಮನಾಗಿಯುಧಿಷ್ಠಿರನಲಿ ಸಮಾಭಿಷ್ಟನಾಗಿಹ ಸೌಮ್ಯರೂಪದಿ ಕೃಷ್ಣನ ಸೇವಿಸಲು 5ಸೌಮ್ಯರೂಪದಿ ಒಳಗಿದ್ದು ಶ್ರೀ ಕೃಷ್ಣಗೆಅಗ್ರ ಪೂಜಾದಿ ರಾಜಸೂಯತಾ ಮಾಡಿ ಸ್ವಯಂ ತನ್ನ ಅವತಾರಭೀಮಗೆ ಅಣ್ಣನೆಂದೆನಿಸುತಿಪ್ಪಧರ್ಮರಾಜನ ಕೈಯಿಂದ ಮಾಡಿಸಿದನುಭಕ್ತಾನುಕಂಪಿ ಶ್ರೀಹರಿಯ ಪ್ರೀತಿಸಿದ 6ಮನಶುಚಿಯಲಿ ಈ ನುಡಿಗಳ ಪಠಿಸುವಶ್ರವಣವ ಮಾಡುವ ಸುಜನರಿಗೆವನರುಹಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸಪಾಂಡವ ಪ್ರಿಯ ಶ್ರೀ ರುಕ್ಮಿಣೀಶಮನಶೋಕಾದಿ ತಾಪತ್ರಯ ನೀಗಿಸಿಯೋಗ್ಯವಾಂಛಿತವೀವ ಬಹುದಯದಿ 7
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ರುಕ್ಮಿಣೀಮಣಿ ಶ್ರೀಕೃಷ್ಣ ಪ್ರಿಯತರುಣಿ ಪಶ್ರೀ ರುಕ್ಮದಾಯಿನೀ ಶ್ರೀಯಂ ದೇಹಿ ದೇಹೀ ಅ.ಪಕ್ಷೀರವಾರಿಧಿ ಪುತ್ರಿ ಶಾರದೋತ್ಪಲ ನೇತ್ರಿಮಾರಸತಿ ಜಿತಗಾತ್ರಿ ಮಾಂಪಾಹಿಪಾಹಿ 1ಘೋರಕಲುಷವಿದಾರಿ ದಾರಿದ್ರ್ಯ ಪರಿಹಾರಿದ್ವಾರಕಾಪುರ ವಿಹಾರಿ ತ್ವಂತ್ರಾಹಿತ್ರಾಹಿ2ದಾಸ ತುಲಸೀರಾಮ ದಾಸನುತ ಹಿತ ಪ್ರೇಮವಾಸವಾರ್ಚಿತ ನಾಮ ವರಂ ದೇಹಿ ದೇಹೀ 3
--------------
ತುಳಸೀರಾಮದಾಸರು
ಶ್ರೀ ಸತ್ಯಪ್ರಿಯ ತೀರ್ಥವಿಜಯ124ಸತ್ಯಪ್ರಿಯ ತೀರ್ಥಾರ್ಯರಂಘ್ರಿ ವೃತತಿಜಯುಗ್ಮನಿತ್ಯಸ್ಮರಿಸುವೆ ಎನ್ನ ಹಿತದಿ ಕಾಯುತಿಹರು |ಸತ್ಯಾರುಕ್ಮಿಣೀ ರಮಣ ವ್ಯಾಸ ನರಹರಿಹಯವಕ್ತ್ರಶ್ರೀರಾಮನಿಗೆ ಪ್ರಿಯತರಮಹಂತಪಅಶೇಷಗುಣಗಣಾಧಾರ ವಿಭುನಿರ್ದೋಷಹಂಸ ಶ್ರೀ ಪತಿಯಿಂದುದಿತ ಗುರುಪರಂಪರೆಗೆಬಿಸಜಭವ ಸನಕಾದಿದೂರ್ವಾಸಮೊದಲಾದವಂಶಜರು ಅಚ್ಚುತ ಪ್ರೇಕ್ಷರಿಗೆ ನಮಿಪೆ 1ಪುರುಷೋತ್ತಮ ತೀರ್ಥ ಅಚ್ಚುತ ಪ್ರೇಕ್ಷರಕರಕಮಲ ಜಾತರೂ ಮಹಾಭಾಷ್ಯಕಾರರುವರವಾಯು ಅವತಾರ ಆನಂದ ತೀರ್ಥರಚರಣವನಜದಿ ನಾ ಸರ್ವದಾ ಶರಣು 2ಪದ್ಮನಾಭನರಹರಿಮಾಧವಅಕ್ಷೋಭ್ಯಅದ್ವಿತೀಯ ಸುಸ್ಪಷ್ಟ ಟೀಕಾಗಳಿತ್ತಮೇಧಾ ಪ್ರವೀಣ ಜಯ ತೀರ್ಥಾರ್ಯರಿಗೂವಿದ್ಯಾಧಿರಾಜರಿಗೂ ನಮೋ ನಮೋ ಶರಣು 3ವಿದ್ಯಾಧಿರಾಜರಿಗೆ ಶಿಷ್ಯರು ಈರ್ವರುಮೊದಲನೆಯವರು ರಾಜೇಂದ್ರ ತೀರ್ಥಾರ್ಯನಂತರ ಕವೀಂದ್ರ ತೀರ್ಥಾರ್ಯ ಇವರುಗಳಪಾದಾರವಿಂದಗಳಿಗೆ ನಾ ನಮಿಪೆ 4ವಾಗೀಶತೀರ್ಥರು ಕವೀಂದ್ರ ಹಸ್ತಜರುವಾಗೀಶಕರಜರು ರಾಮಚಂದ್ರಾರ್ಯಈ ಗುರುಗಳಿಗೀರ್ವರು ಶಿಷ್ಯರು ಇಹರುಬಾಗುವೇ ಇವರ್ಗಳಿಗೆ ಸಂತೈಸಲೆಮ್ಮ 5ಮೊದಲನೆಯವರು ವಿಭುದೇಂದ್ರ ತೀರ್ಥಾರ್ಯರುವಿದ್ಯಾನಿಧಿ ತೀರ್ಥಾರ್ಯರು ಅನಂತರವುವಿದ್ಯಾನಿಧಿ ಸುತ ರಘುನಾಥ ತೀರ್ಥರುವಂದಿಸುವೆ ಈ ಸರ್ವಗುರು ವಂಶಕ್ಕೆ 6ರಘುನಾಥ ಕರಕಮಲ ಜಾತ ರಘುವರ್ಯರಿಗೂರಘೂತ್ತಮ ವೇದವ್ಯಾಸ ವಿದ್ಯಾಧೀಶವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯನಾಥಸತ್ಯಾಭಿನವ ಸತ್ಯಪೂರ್ಣರಿಗೆ ನಮಿಪೆ 7ಸತ್ಯಪೂರ್ಣ ತೀರ್ಥರಿಗೆ ಶಿಷ್ಯರು ಇಬ್ಬರುಸತ್ಯವರ್ಯ ತೀರ್ಥರು ಮೊದಲನೆಯವರುಸತ್ಯವಿಜಯ ತೀರ್ಥರು ಎರಡನೆ ಶಿಷ್ಯರುವಂದನಾದಿ ಮರ್ಯಾದೆ ಮಾಳ್ಪುದು ಜೇಷ್ಠರಿಗೆ 8ಸತ್ಯವರ್ಯ ತೀರ್ಥರೇ ಮುಂದಕ್ಕೆ ಸತ್ಯಪ್ರಿಯರೆಂದು ಕರೆಸಿಕೊಂಡರು ವಿರಾಗಿಕೋವಿದರುಸುಂದರ ದೇಶವು ಗೋದಾವರೀ ಕ್ಷೇತ್ರಕ್ಕೆಸತ್ತತ್ವ ಬೋಧಿಸಲುವಿಜಯಮಾಡಿದರು9ಸತ್ಯ ವಿಜಯರುಗುರುಆಜೆÕಯಿಂ ತಾವೂನೂತತ್ವಬೋಧಸಂಚಾರ ಮಾಡಿದರು ಆಗಸತ್ಯಪೂರ್ಣ ತೀರ್ಥರು ತಾವೇ ಕರ್ನಾಟಕಪ್ರಾಂತ್ಯಕ್ಕೆ ಹೊರಟರು ದಿಗ್ವಿಜಯಕಾಗಿ 10ಸತ್ಯವರ್ಯ ತೀರ್ಥರು ಭಾವಿ ಸತ್ಯಪ್ರೀಯರುಗೋದಾವರೀ ತೀರವಿಜಯಮಾಡುವಾಗಭೂದೇವ ನರದೇವಪುರಿನಗರಪ್ರಮುಖರುಉತ್ಸಾಹದಿ ಭಕ್ತಿ ಮರ್ಯಾದೆ ಮಾಡಿದರು 11ಬಿಸಾಜಿಪಂತ ನಾರಾಯಣ ನರಳೀಪಂತವಿಶ್ವಾಸದಿ ಇಂಥಾ ಪ್ರಮುಖ ಜನರುಈ ಸಂನ್ಯಾಸ ರತ್ನ ಸತ್ಯಪ್ರಿಯ ಆರ್ಯರಿಗೆಸ್ವಾಗತ ಪೂಜೆ ಮಾಡಿದ್ದು ಖ್ಯಾತ 12ಸಜ್ಜನರು ದೊಡ್ಡವರು ನಾಯಕರು ಗುರುಗಳಪೂಜಿಸುವ ಸಮಯ ಬಂದು ಅಲ್ಲಿ ಮೊದಲನೆಬಾಜೀರಾವ್ ಎಂಬಂಥ ಅರಸನು ಅವನೂ ಸಹನಿಜ ಭಕ್ತಿ ಭಾವದಿಂದಲಿ ಪೂಜಿಸಿದ 13ತಾನು ಪೂಜಿಸಿ ಗ್ರಾಮ ದಾನ ಮಾಡಿದ್ದಲ್ಲದೆಘನಮಹಾತ್ಮ ಸ್ವಾಮಿಗಳ ಪೂಜಿಸಿರೆಂದುತ್ನನ ಮುದ್ರೆ ಪತ್ರ ಬೇರೆ ರಾಜರ್ಗೆ ಕಳುಹೆಂದುತನ್ನ ಸಹ ಬಂದಿದ್ದ ಮಂತ್ರಿಗೆ ಹೇಳಿದನು 14ಗೋದಾವರೀ ತೀರ ಸ್ಥಳಗಳಲಿ ಈ ರೀತಿಸತ್ಯಪ್ರಿಯ ಆರ್ಯರು ಸಂಚರಿಸಲಾಗಸತ್ಯ ಪೂರ್ಣ ತೀರ್ಥರು ದಕ್ಷಿಣದಲ್ಲಿಕ್ಷೇತ್ರಾಟನದಿ ಇರುತಿದ್ದರು ಮುದದಿ 15ಸತ್ಯಪೂರ್ಣರಿರುತ್ತಿದ್ದ ಸಂಚಾರ ಸ್ಥಳದಹತ್ತಿರವೆ ಕೊಂಗು ನಾಡುತೋಂಡದೇಶಸತ್ಯವಿಜಯರು ಅಲ್ಲಿ ಸಂಚರಿಸಿ ಬಂದರುಸತ್ಯ ಪೂರ್ಣರುಹರಿಪಾದಸೇರುವಾಗ16ಸತ್ಯವಿಜಯರ ಕೈಗೆ ಸಂಸ್ಥಾನ ಬರಲುಸತ್ಯಭಿನವ ಸತ್ಯಪೂರ್ಣರ ಪದ್ಧತಿಯಂತೆ ಸಂಸ್ಥಾನ ಆಡಳಿತ ಮಾಡುತ್ತಾಮತ್ತೂತೋಂಡದೇಶ ಸಂಚಾರಕ್ಕೆ ಹತ್ತಿದರು17ಎನ್ನ ಎನ್ನಂಥವರ ಅನಂತ ಅಪರಾಧಗಳಘನದಯದಿ ಕ್ಷಮಿಸಿ ಬಹು ಕೃಪದಿ ಪಾಹೀವನರುಹಾಸನಪಿತ ಮಧ್ವಸ್ಥ ಶ್ರೀಪತಿ`ಪ್ರಸನ್ನ ಶ್ರೀನಿವಾಸ' ಪ್ರಿಯ ಸತ್ಯಪ್ರಿಯ ಆರ್ಯ 18 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸೌಭಾಗ್ಯ ಸಪ್ತತ್ರಿಂಶತಿ71ಶರಣುವಿಧಿವಾಣೀಶ ಶರಣು ಧೃತಿ ಶ್ರಧ್ದೇಶ |ಶರಣು ಋಜುವರ್ಯರಲಿ ಶರಣು ಶರಣಾದೆ ಪಮೀನಕೂರ್ಮಕ್ರೋಡನರಸಿಂಹ ವಟುರೂಪರೇಣುಕಾತ್ಮಜ ರಾಮ ಶ್ರೀ ಕೃಷ್ಣ ಜಿನಜ ||ವಿಷ್ಣು ಯಶಸ್ಸುತ ಅಜಿತ ಶ್ರೀಶನಿಗೆ ಪ್ರಿಯತಮ |ಅನುಪಮ ಜೀವೋತ್ತಮರ ಚರಣಕಾನಮಿಪೇ 1ಪುರುಷವಿಧಿ ಕಾಲವಿಧಿ ವಾಸುದೇವೋತ್ಪನ್ನ |ವಿರಿಂಚ ಮಹತ್ತತ್ವತನು ಅನಿರುದ್ಧ ಜಾತ ||ನಾರಾಯಣ ನಾಭಿ ಕಮಲಜ ಚತುರ್ಮುಖನು |ಸರಸ್ವತೀಪತಿ ರುದ್ರ ತಾತನಿಗೆ ನಮಿಪೆ 2ಈ ನಾಲ್ಕು ಬ್ರಹ್ಮನ ಅವತಾರದಲಿ ಶುಕ್ಲ |ಶೋಣಿತಸಂಬಂಧ ಇಲ್ಲವೇ ಇಲ್ಲ ||ಜ್ಞಾನಾದಿ ಐಶ್ವರ್ಯದಲಿ ಯಾರು ನಾಲ್ಮುಗಗೆ |ಎಣೆ ಇಲ್ಲ ಹದಿನಾಲ್ಕು ಲೋಕದಲಿ ಎಲ್ಲೂ 3ಭಯವು ಅಜ್ಞಾನವು ಸಂಶಯವು ಇವಗಿಲ್ಲಸತ್ಯ ಲೋಕಾಧಿಪನ ಸುರರ ಅಧ್ಯಕ್ಷ ||ಹಯಮುಖ ತ್ರಿವೃತ್ತುರೀಯ ಹಂಸ ಇತರಾಸೂನು |ತೋಯಜಾಕ್ಷಕೇಶವನ ಪ್ರಥಮ ಪ್ರತಿಬಿಂಬ4ಜಗಜ್ಜನ್ಮಾದ್ಯಷ್ಟಕ ಕರ್ತನ ನಿಯಮನದಿ |ಜಗವ ಪಡೆದಿಹ ಬ್ರಹ್ಮಸತ್ವವಿಗ್ರಹನು ||ಖಗಪ ಭುಜಗಪ ಶಿವಾದ್ಯನಂತ ಜೀವೋತ್ತಮನು |ಅಘರಹಿತತಾರಕಗುರುಶತಾನಂದ5ಅವನಿಯಲಿ ಅವತಾರ ಬ್ರಹ್ಮದೇವನಿಗಿಲ್ಲ |ಭಾವಿ ಬ್ರಹ್ಮನು ಮುಖ್ಯವಾಯುದೇವ ||ದೇವೀಜಯಾ ಸಂಕರುಷಣಾತ್ಮಜನು ಈ |ಭುವಿಯಲ್ಲಿ ತೋರಿಹನು ಹರಿಯಪ್ರಥಮಾಂಗ6ಧೃತಿಪ್ರಭಂಜನವಾಯುಸ್ಮರಭರತ ಗುರುವರನು |ಮಾತರಿಶ್ವನುಸೂತ್ರಪವಮಾನ ಪ್ರಾಣ ||ಎದುರು ಸಮರಿಲ್ಲ ಈ ಬ್ರಹ್ಮ ಧಾಮನಿಗೆಲ್ಲೂ |ಸದಾ ನಮೋ ಭಾರತೀರಮಣ ಮಾಂಪಾಹಿ 7ರಥನಾಭಿಯಲಿ ಅರವೋಲ್ ಪ್ರಾಣನಲಿ ಸರ್ವವೂ |ಪ್ರತಿಷ್ಠಿತವೂ ಜೀವರ ದೇಹಕಾಧಾರ ||ತ್ರಾತಪೋಷಕ ಸರ್ವವಶಿ ಪ್ರಜ್ಞಾಶ್ರೀದನು |ತತ್ವಾದಿ ದೇವ ವರಿಷ್ಠ ಚೇಷ್ಟಕನು 8ಶ್ರೀಶ ಹಂಸಗೆ ಪ್ರಿಯಶ್ವಾಸಜಪ ಪ್ರವೃತ್ತಿಸುವ |ಬಿಸಜಜಾಂಡವ ಹೊತ್ತು ಕೊಂಡು ಇರುತಿಹನು ||ಅಸಮ ಸಾಮಥ್ರ್ಯದಿ ಸರ್ವ ಕ್ರಿಯೆ ಮಾಡಿಸುವ |ಶಾಸ್ತನಾಗಿಹ ಪಂಚಅವರಪ್ರಾಣರಿಗೆ9ಬಲ ಜ್ಞಾನಾದಿಗಳಲ್ಲಿ ಹ್ರಾಸವಿಲ್ಲವು ಇವಗೆ |ಎಲ್ಲ ಅವತಾರಗಳು ಸಮವು ಅನ್ಯೂನ ||ಶುಕ್ಲಶೋಣಿತಸಂಬಂಧ ಇಲ್ಲವೇ ಇಲ್ಲ |ಇಳೆಯಲಿ ಜನಿಸಿಹ ಹನುಮ ಭೀಮ ಮಧ್ವ 10ವಾಯುದೇವನ ಒಲಿಸಿಕೊಳ್ಳದ ಜನರಿಗೆ |ಭಯ ಬಂಧ ನಿವೃತ್ತಿಯು ಸದ್ಗತಿಯು ಇಲ್ಲ ||ಮಾಯಾಜಯೇಶನಪರಮಪ್ರಸಾದವು |ವಾಯು ಒಲಿದರೆ ಉಂಟು ಅನ್ಯಥಾ ಇಲ್ಲ 11ಶ್ರೀರಾಮಚಂದ್ರನು ಒಲಿದ ಸುಗ್ರೀವಗೆ |ಮಾರುತಿಯ ಒಲಿಸಿಕೊಂಡವನವನೆಂದು ||ಮಾರುತಿಯ ಒಲಿಸಿಕೊಳ್ಳದ ವಾಲಿ ಬಿದ್ದನು |ಕರ್ಣನೂ ಹಾಗೇವೇ ಅರ್ಜುನನು ಗೆದ್ದ 12ರಾಮನಿಗೆ ಸನ್ನಮಿಸಿ ವನದಿ ದಾಟುತ ಹನುಮ |ಶ್ರಮರಹಿತನು ಸುರಸೆಯನು ಜಯಿಸೆಸುರರು||ಪೂಮಳೆ ಕರೆಯಲು ಸಿಂಹಿಕೆಯನು ಸೀಳಿ |ಧುಮುಕಿದ ಲಂಕೆಯಲಿ ಲಂಕಿಣಿಯ ಬಡಿದ 13ರಾಮ ಪ್ರಿಯೆಗುಂಗುರವ ಕೊಟ್ಟು ಚೂಡಾರತ್ನ |ರಾಮಗೋಸ್ಕರ ಕೊಂಡು ವನವ ಕೆಡಹಿ ||ಶ್ರಮ ಇಲ್ಲದೆ ಅಕ್ಷಯಾದಿ ಅಧಮರ ಕೊಂದು |ರಾಮ ದೂತನು ಹನುಮ ಲಂಕೆಯ ಸುಟ್ಟ 14ಶ್ರೀರಾಮನಲಿ ಬಂದು ನಮಿಸಿ ಚೂಡಾಮಣಿಯ |ಚರಣದಿ ಇಡೆ ರಾಮ ಹನುಮನ ಕೊಂಡಾಡಿ ||ಸರಿಯಾದ ಬಹುಮಾನ ಯಾವುದು ಇಲ್ಲೆಂದು |ಶ್ರೀರಾಮ ತನ್ನನ್ನೇ ಇತ್ತಾಲಿಂಗನದಿ 15ಮೂಲ ರೂಪವನೆನೆದ ಲಕ್ಷ್ಮಣನ ಎತ್ತಲು |ಕೈಲಾಗದೆ ರಾವಣನು ಸೆಳೆಯೆ ಆಗ ||ಲೀಲೆಯಿಂದಲಿ ಎತ್ತಿ ರಾಮನಲಿ ತಂದನು |ಬಲವಂತ ಹನುಮ ಶೇಷಗುತ್ತಮತಮನು 16ಮೃತ ಸಂಜೀವಿನಿಯಾದಿ ಔಷಧಿ ಶೈಲವನು |ತಂದು ಸೌಮಿತ್ರಿ ಕಪಿಗಳಿಗೆಅಸುಇತ್ತ ||ಮುಂದಾಗಿ ಪೋಗಿ ಶ್ರೀರಾಮ ಬರುವುದು ಪೇಳಿ |ಕಾಯ್ದ ರಾಮಾನುಜನ ಅಗ್ನಿ ಮುಖದಿಂದ 17ಇತರರು ಮಾಡಲು ಅಶಕ್ಯ ಸೇವೆ ಹನುಮ |ಗೈದಿ ಮೋಕ್ಷವು ಸಾಲ್ದು ಏನು ಕೊಡಲೆನ್ನೆ ||ಸದಾ ಸರ್ವ ಜೀವರಿಂದಧಿಕ ಭಕ್ತಿ ಒಂದೇ |ಕೇಳ್ದ ಶ್ರೀರಾಮನ್ನ ವೈರಾಗ್ಯ ನಿಧಿಯು 18ಗಂಡು ಶಿಶು ಬೀಳಲು ಗುಂಡು ಪರ್ವತ ಒಡೆದು |ತುಂಡು ನೂರಾಯಿತು ಕಂಡಿಹರು ಅಂದು ಬೋ - ||ಮ್ಮಾಂಡದಲಿ ಪ್ರಚಂಡ ಭೀಮಗೆ ಸಮ |ಕಂಡಿಲ್ಲ ಕೇಳಿಲ್ಲ ನೋಡಿ ಭಾರತವ 19ಉಂಡು ತೇಗಿದಗರಳತಿಂಡಿಯ ಭೀಮನು |ಉಂಡು ಹಾಲಾಹಲವ ಹಿಂದೆ ಈ ವಾಯು ||ಹಿಂಡಿ ಸ್ವಲ್ಪವ ಮುಕ್ಕಣ್ಣಗೆ ಕೊಟ್ಟನು |ಬಂಡುಮಾತಲ್ಲವಿದುಕೇಳಿವೇದವನು20ಅರಗು ಮನೆಯಿಂದ್ಹೊರಟು ಸೇರಿ ವನವನು ಅಲ್ಲಿ |ಕ್ರೂರ ಹಿಡಿಂಬನ ಕೊಂದವನ ಸೋದರಿ ||ಭಾರತೀ ಯಕ್ಸ ್ವರ್ಗ ಶಿಕಿಯು ಹಿಡಿಂಬಿಯಕರಪಿಡಿದ ಭೀಮನು ಅನುಪಮ ಬಲಾಢ್ಯ 21ಬಕ ಕೀಚಕ ಜರಾಸಂಧಾದಿ ಅಸುರರು |ಲೋಕ ಕಂಟಕರನ್ನ ಕೊಂದು ಬಿಸುಟು ||ಲೋಕಕ್ಕೆ ಕ್ಷೇಮವ ಒದಗಿಸಿದ ಈ ಅಮಿತ |ವಿಕ್ರಮಭೀಮನಿಗೆ ಸಮರಾರು ಇಲ್ಲ22ಕಲಿಕಲಿಪರಿವಾರ ದುರ್ಯೋಧನಾದಿಗಳ |ಬಲವಂತ ಭೀಮನು ಬಡಿದು ಸಂಹರಿಸಿದ ||ಕಲಿಹರ ಸುಜನಪಾಲ ಭೀಮ ಸಮ್ರಾಟನ |ಕಾಲಿಗೆ ಎರಗುವೆ ದ್ರೌಪದೀ ಪತಿಗೆ 23ಮಾಲೋಲ ಕೃಷ್ಣನ ಸುಪ್ರೀತಿಗಾಗಿಯೇ |ಬಲ ಕಾರ್ಯಗಳ ಮಾಡಿ ಅರ್ಪಿಸಿದ ಭೀಮ ||ಕಲಿಯುಗದಿ ಈ ಭೀಮ ಅವತಾರ ಮಾಡಿಹನು |ಕಲಿಮಲಾಪಹ ಜಗದ್ಗುರು ಮಧ್ವನಾಗಿ 24ಹನುಮಂತನ ಮುಷ್ಠಿ ಭೀಮಸೇನನ ಗದೆ |ದಾನವಾರಾಣ್ಯವ ಕೆಡಹಿದ ತೆರದಿ ||ಆಮ್ನಾ ಯಸ್ಮøತಿ ಯುಕ್ತಿಯುತ ಮಧ್ವ ಶಾಸ್ತ್ರವು |ವೇನಾದಿಗಳ ಕುಮತ ತರಿದು ಸುಜನರ ಕಾಯ್ತು 25ಇಳೆಯ ಸುಜನರ ಭಾಗ್ಯಶ್ರುತಿಪುರಾಣಂಗಳು |ಪೇಳಿದಂತೆಕೊಂಡಯತಿರೂಪ ವಾಯು ||ಮೇಲಾಗಿ ಇದ್ದ ನಮ್ಮ ಅಜ್ಞಾನ ಕತ್ತಲೆಯ |ತೊಲಗಿಸಿದನು ಈ ಮಧ್ವಾಖ್ಯಸೂರ್ಯ26ದುರ್ವಾದ ಕುಮತಗಳು ಸಜ್ಜನರ ಮನ ಕೆಡಿಸೆ |ತತ್ವವಾದವ ಅರುಪಿ ಸಜ್ಜನರ ಪೊರೆದ ||ಮೂವತ್ತು ಮೇಲೇಳು ಗ್ರಂಥ ಚಿಂತಾಮಣಿ |ಸುವರ್ಣಕುಂದಣಪದಕ ಯೋಗ್ಯರಿಗೆ ಇತ್ತ27ದುಸ್ತರ್ಕ ದುರ್ಮತ ಬಿಸಿಲಿಲ್ಲಿ ಬಾಡುವ |ಸಸಿಗಳು ಸಾತ್ವಿಕ ಅಧಿಕಾರಿಗಳಿಗೆ ||ಹಸಿ ನೀರು ನೆರಳು ಈ ಮಾಧ್ವ ಮೂವತ್ತೇಳು |ಸಚ್ಛಾಸ್ತ್ರಪೀಯೂಷಗೋಕಲ್ಪ ತರುವು28ಮೂಢ ಅಧಮರ ದುಷ್ಟ ಮತಗಳ ಸಂಪರ್ಕದಿ |ಈಡಿಲ್ಲದ ಮೋದಪ್ರದ ಜ್ಞಾನ ಕಳಕೊಂಡು ||ಬಡತನದಿ ನರಳುವ ಸಜ್ಜನರ ಪೋಷಿಪುದು |ನೋಡಿ ಈಸುರಧೇನುಮಾಧ್ವ ಮೂವತ್ತೇಳ29ಬಿಲ್ವಪ್ರಿಯ ಶಿವ ಈಡ್ಯ ಸಾರಾತ್ಮ ಕೃಷ್ಣನ |ಚೆಲ್ವಉಡುಪಿಕ್ಷೇತ್ರದಲಿ ನಿಲ್ಲಿರಿಸಿ ||ಎಲ್ಲ ಭಕ್ತರಕಾವಸುಖಮಯ ಜಗತ್ಕರ್ತ |ಮೂಲ ರಾಮನ ಸಾಧು ಜನರಿಗೆ ಕಾಣಿಸಿದ 30ಮಹಿದಾಸ ಬೋಧಿಸಿದ ತತ್ವವನು ವಿವರಿಸುತ |ಮಹಂತಪೂರ್ಣಪ್ರಜÕಬದರೀಗೆ ತೆರಳಿ ||ಮಹಿಶಿರಿಕಾಂತ ಶ್ರೀ ವ್ಯಾಸನ ಬಳಿ ಇಹನು |ಅಹರಹ ಪ್ರೇಮದಿಂಸಂಸ್ಮರಿಸೆತೋರ್ವ 31ರಾಮ ಕೃಷ್ಣವ್ಯಾಸ ಜಾನಕೀಸತ್ಯಾ |ರುಕ್ಮಿಣೀಅಂಭ್ರಣಿಪ್ರಿಯತಮ ಹನುಮ ||ಭೀಮ ಮಹಾ ಪುರುಷೋತ್ತಮ ದಾಸರಿಗೆ |ನಮಿಪೆ ವಿಪಶೇಷ ಶಿವಾದ್ಯಮರ ಸನ್ನತರ್ಗೆ 32ಚತುರ್ಮುಖ ವರವಾಯು ಸರಸ್ವತಿ ಭಾರತಿಗೆ |ಸದಾ ಶ್ರೀಹರಿಯಲ್ಲಿ ಭಕ್ತಿ ಅಚ್ಛಿನ್ನ ||ಅತಿರೋಹಿತ ಜ್ಞಾನ ಪ್ರಾಚುರ್ಯರಾಗಿಹರು |ಸಾಧಾರಣವಲ್ಲ ಋಜುಗಳ ಮಹಿಮೆ 33ಋಜುಗಳರಾಜೀವಚರಣಗಳಿಗಾ ನಮಿಪೆ |ಭುಜಗಶಯ್ಯನಲಿ ಭಕ್ತಿ ಸಹಜ ಇವರಲ್ಲಿ ||ಭುಜಗಭೂಷಣಾದಿಗಳಿಗಧಿಕತಮ ಬಲಜ್ಞಾನ |ತ್ರಿಜಗಮಾನ್ಯರು ತ್ರಿಗುಣ ತಾಪವರ್ಜಿತರು 34ಅಪರೋಕ್ಷಋಜುಗಣಕೆ ಅನಾದಿಯಾಗಿಯೇ ಉಂಟು |ತಪ್ಪದೇ ಶತಕಲ್ಪ ಸಾಧನವ ಗೈದು ||ಶ್ರೀಪನಅಪರೋಕ್ಷಇನ್ನೂ ವಿಶೇಷದಿ |ಲಭಿಸಿ ಕಲ್ಕ್ಯಾದಿಸುನಾಮಧರಿಸುವರು35ಕಲ್ಕ್ಯಾದಿ ಪೆಸರಲ್ಲಿಪ್ರತಿಒಂದು ಕಲ್ಪದಲು |ಅಕಳಂಕ ಇವರು ಬಹು ಸುವಿಶೇಷ ಸಾಧನದಿ ||ಭಕ್ತ್ಯಾದಿ ಗುಣಕ್ರಮದಿ ಅಧಿಕ ಅಭಿವ್ಯಕ್ತಿಯಿಂ |ಮುಖ್ಯ ವಾಯು ಬ್ರಹ್ಮಪದವ ಪೊಂದುವರು 36ಈ ಬ್ರಹ್ಮಾದಿಗಳೊಳು ಇದ್ದು ಕೃತಿಮಾಡಿಸುವ |ಶಿರಿಸಹ ತ್ರಿವೃನ್ನಾಮ ಪ್ರಸನ್ನ ಶ್ರೀನಿವಾಸ ||ಸುಹೃದ ಸೌಭಾಗ್ಯದಗೆ ಜಯ ಜಯತು ಅರ್ಪಿತವು |ಹರಿವಾಯು ನುಡಿಸಿದಿದು ಜಯತು ಹರಿವಾಯ 37
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಕರ ಯದುಕುಲಶೇಖರ ದೇಹಿಲೋಕನಾಥ ದಾಸಲೋಲ ಮಾಂಪಾಹಿಪಶ್ರೀ ಮುರಳೀಧರಸಿಂಧುಗಂಭೀರಶ್ಯಾಮಸುಂದರ ಗೋಪೀಜಾರ ಯದುವೀರ 1ರುಕ್ಮಾಂಬರಧರ ರುಕ್ಮಗಿರೀಶಾರುಕ್ಮಿಣೀಧವ ಭವರೋಗ ವಿನಾಶಾ 2ಮಣಿಮಯ ಭೂಷಣ ಮಷಕಪುರೀಶಾಗುಣನಿಧಿ ಶ್ರೀವೇಣುಗೋಪಾಲ ಶ್ರೀಶಾ 3ಮಾರಜನಕಸುಕುಮಾರ ದಶವೇಷಾಧಾರುಣಿ ಶ್ರೀ ತುಲಸೀದಾಸ ಸುಪೋಷ 4
--------------
ತುಳಸೀರಾಮದಾಸರು
ಶ್ರೀಪುರಂದರದಾಸಾರ್ಯ ಸ್ತೋತ್ರ133ಹರಿದಾಸ ಶ್ರೇಷ್ಠ ಶ್ರೀಪುರಂದರದಾಸಾರ್ಯರಸರಸೀರುಹಾಂಘ್ರಿಯಲಿ ಶರಣಾದೆ ಸತತ ||ವೈರಾಗ್ಯ ಯುಕ್‍ಜ್ಞಾನ ಭಕ್ತ್ಯಾದಿ ಸಂಪತ್ತುಕರುಣದಲಿ ಒದಗಿಸಿ ಶ್ರೀಕೃಷ್ಣ ನ್ನೊಲಿಸುವರು ||ಈ ಪುಣ್ಯತಮ ಭರತಖಂಡದಲಿ ಪ್ರಖ್ಯಾತ ||ಕೃಪಾಂಬುಧಿ ಜಗನ್ನಾಥವಿಠ್ಠಲ ರುಕ್ಮಿಣೀಶ ||ರೂಪಗುಣ ಭೇಧವಿಲ್ಲದ ಪೂರ್ಣನಿರ್ದೋಷಶ್ರೀಪ್ರಸನ್ನ ವೇಂಕಟನೇ ನಮೋ ಪದ್ಮಾವತೀಶ 1ಪುರುಷರೂಪತ್ರಯ ಕ್ಷರಾ ಕ್ಷರೋತ್ತಮ ಭೂಮ |ಅರದೂರಗುಣನಿಧಿ ನಾರಾಯಣಗೆ ಶರಣು |ಸುಪ್ರೇಮಾತಿಶಯದಲಿ ಸದಾ ಪತಿಯ ಸೇವಿಸುವನಿರಾಮಯಳು ಸುಖಪೂರ್ಣಲಕ್ಷ್ಮಿಗೆ ಶರಣು 2ದ್ವಿಷೋಡಶ ಲಕ್ಷಣದಿ ರಾಜಿಪವಿಧಿದಶಪ್ರಮತಿಗು ವಾಣಿ ಭಾರತಿಯರಿಗು ನಮಿಪೆಶ್ರೀಶನ ಪೂರ್ಣಾನುಗ್ರಹ ಪೂರ್ಣಪಾತ್ರರುಉತ್ಕøಷ್ಟರಜುಸ್ತೋಮಚರಣಕಾನಮಿಪೆ3ಉತ್ತಮ ಶ್ಲೋಕನ್ನ ಜಪಿಸಿ ಪೂಜಿಪ ಶಿವಹೊತ್ತು ಸೇವಿಪಗರುಡಪರ್ಯಂಕಶೇಷಭಕ್ತಾಗ್ರಣಿ ಈ ಸರ್ವರಿಗು ನಮಿಸುವೆನುಮಾಧವನ ಷಣ್ಮುಹಿಷಿಯರಿಗು ನಮಿಪೆ 4ವಿಮಲ ಚರಿತರು ಉಮಾಸೌಪರ್ಣಿ ವಾರುಣಿಗು |ಅಮರೇಂದ್ರ ಮನ್ಮಥಮುನಿಗು ನಮನಮಾಡಿನಮಿಸುವೆ ಅಹುಪ್ರಾಣದೇವನಿಗೆಗುರುಶಚಿಕಾಮಸತಿ ಸುತದತ್ತ ಸ್ವಾಯಂಭುವಗೆ 5
--------------
ಪ್ರಸನ್ನ ಶ್ರೀನಿವಾಸದಾಸರು