ಒಟ್ಟು 82 ಕಡೆಗಳಲ್ಲಿ , 36 ದಾಸರು , 74 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀರಂಗೇಶವಿಠಲ | ಪೊರೆಯೆನ್ನ ಹೃದಯಾ- ಧಾರನೆ ಮಾಲೋಲ | ಸ್ಮರಕೋಟಿ ಸುಂದರಾ- ಕಾರ ನತಜನಪಾಲ | ಅರಿಮಸ್ತಕ ಶೂಲ ಪ ಆರು ಅರಿಗಳ ಗೆಲಿಸಿಯೆನ್ನಿಂ- ದಾರು ಎರಡನು ಮುರಿಸಿ ನಿನ್ನೊಳು ಆರು ಮೂರನೆಯಿತ್ತು ಸರ್ವದ ಪಾರುಗೈಯ್ಯಬೇಕೆಂಬೆ ದೇವ ಅ.ಪ. ಆನೆಗೊಂದಿ ನಿವಾಸ | ಭಕುತರ ನಿರಂತರ ಮಾನದಿಂ ಪೊರೆವ ಶ್ರೀಶ | ಎಂದೆಂದಿಗು ನಾನಿನ್ನ ದಾಸರ ದಾಸ | ನೆಂದು ಕರುಣಿಸು ನೀನೆನಗೆ ಲೇಸ | ಭಾನುಕೋಟಿ ಪ್ರಕಾಶ ಮಾನ ಅವಮಾನಗಳು ನಿನ್ನಾ- ಧೀನವೆಂದೇ ನಂಬಿಕೊಂಡಿಹ ದೀನನೆನ್ನನು ದೂರ ನೋಡದೆ ಸಾನುರಾಗದಿ ಪೊರೆವುದೈಯ್ಯಾ ನಳಿನಭವ ಅಂಡದೊಳಗೆ ದಾನಿ ನೀನಲ್ಲದನ್ಯರುಂಟೆ ಏನ ಬೇಡೆನು ನಿನ್ನ ಬಳಿಯಲಿ ಜ್ಞಾನ ಭಕುತಿ ವೈರಾಗ್ಯವಲ್ಲದೆ1 ವರಾಹ ಜನ ತಾಪ | ತ್ರಯ ದೂರ ವಾಮನ ಮಾನವೇಂದ್ರರ ಪ್ರತಾಪ | ವಡಗಿಸಿದೆ ಪ್ರಬಲ ದಾನವೇಂದ್ರನ ಶಾಪ | ನೀನೆ ಕಳೆದೆಯೊ ಶ್ರೀಪಾ ವಾನರ ಬಲ ನೆರಹಿಕೊಂಡು ನೀನು ರಾವಣನನ್ನು ಕೊಂದು ಮಾನಿನಿಯ ಪೊರೆದು ಶರಣಗೆ ನಿ ದಾನ ಮಾಡದೆ ಪಟ್ಟಗಟ್ಟಿದೆ ದಾನವಾಂತಕನೆಂಬ ನಾಮವ- ನ್ಯೂನವಿಲ್ಲದೆ ಪರಸತಿಯರಭಿ ಮಾನ ಕಳುಪಿದ ಜಾಣ ಕಲ್ಕಿಯೆ 2 ಸೂರಿಜನ ಪರಿಪಾಲ ಸದ್ಗುಣಗಣನಿಲಯ ಘೋರರಕ್ಕಸಕಾಲ | ವರಶೇಷತಲ್ಪವ ನೇರಿ ನಿರುಪಮ ಬಾಲ | ನಂದದಿ ನಿರುತ ನೀ ತೋರುತಿರುವೆಯೊ ಲೀಲ | ಶ್ರೀ ರಂಗೇಶವಿಠಲ ಮಾರ ಜನಕನೆ ಮಂಗಳಾಂಗನೆ ಕ್ರೂರ ಕುಲವನದಾವ ಅನಲನೆ ಭೂರಿ ಕರುಣವ ಬೀರಿ ಎನ್ನಸು ಭಾರ ನಿನ್ನದು ವಾರಿಜಾಕ್ಷನೆ ಎನ್ನ ಹೃದಯದಿ ಚಾರು ಬಿಂಬವ ಸಾರಿ ಬೇಡುವೆ ಬಾರಿ ಬಾರಿಗೆ ಶರಧಿ ಬಡಬನೆ3
--------------
ರಂಗೇಶವಿಠಲದಾಸರು
ಸಲ್ಲದೊ ಸಲ್ಲದೊ ಸರ್ವರು ಕೇಳಿ ನಮ್ಮ ಪುಲ್ಲನಾಭನ ಬಿಟ್ಟು ಖುಲ್ಲದೇವರ ಪೂಜೆ ಪ ಮಾರಿ ಮಸಣಿ ಜೆಟ್ಟೆ ಜೆಟ್ಟಿಂಗ ಭೇತಾಳ ವರ ಪೋತರಾಜಾ ಬೊಮ್ಮೆಯನು ಬೀರೆದೇವರು ಹಾದಿಬೀದಿಯ ಬಸವಣ್ಣ ಚಾರುದೈವ ಉಚ್ಚಾರವಲ್ಲದೆ ಹೊಲ್ಲಾ 1 ಯಲ್ಲಮ್ಮಾ ಯಕನಾತಿ ಅಡವಿಯ ಗಿಡದಮ್ಮ ಹಳ್ಳದ ತೀರದ ಹಾಳದೇವಿ ಅಮ್ಮ ಜಲದೇವಿ ಜಕ್ಕಮ್ಮನೆಂತೆನಲು ಸೊಲ್ಲು ಬರಿದೆ ವ್ಯರ್ಥವಲ್ಲದೆ ಫಲವಿಲ್ಲ 2 ಬನದಶಂಕರಿ ಕುಳ್ಳಹಟ್ಟಿಗೆ ಕರಿಮಾತೆ ವನಶಕ್ತಿ ಚವಡಮ್ಮ ಜವನಿಕೆ ಬಿನಗ್ಯ ಮಾಳಾದೇವಿ ಮಾಳಿಗೆ ಹಿರಿಯಕ್ಕ ಘನ ಪಿಶಾಚಿಗಳಿಂದ ಒಂದಿಷ್ಟು ಸುಖವಿಲ್ಲ 3 ಖಂಡೇರಾಯ ಮಲಕಚ್ಚಿನ ಗಡಿಗೆಮ್ಮ ಮುಂಡೆ ಮೂಕಾರುತಿ ಬೆಂಚೆಮ್ಮನು ಭಾಂಡಾರದ ದುರ್ಗಿ ಹಿರಿಯಣ್ಣ ಮೈಲಾರ ಹಿರಚು ಗುಂಪಿನ ಬಳಗ ಕಂಡರೇನಿಲ್ಲ 4 ಸುಣ್ಣದ ಕೆಸರು ಹಾಲು ಕೂಡಿ ಕುಡಿದಂತೆ ಅನ್ಯದೇವತೆಗಳ ಭಜನೆ ಹೊಲ್ಲ ಸಿರಿ ವಿಜಯವಿಠ್ಠಲನ ಯುಗಳಪಾದ ಸನ್ನುತಿಸಿದರೆ ಪರಮ ಪದವಿಯಮ್ಮ 5
--------------
ವಿಜಯದಾಸ
ಸಾಮಾಜಿಕ ಕೀರ್ತನೆಗಳು ಆಸೆತ ಬಿಡು ಮನವೆ ನಿನ್ನ ದುರಾಸೆಯ ಬಿಡು ಮನವೆ ಪ ಆಸೆಯ ಬಿಟ್ಟು ಶ್ರೀವಾಸುದೇವನ ಪಾದ ಘಾಸಿಯಾಗದೆ ನಂಬು ಲೇಸಾಗುವುದು ನಿನಗೆ ಅ.ಪ ಕಾಮಕ್ರೋಧಗಳ ಬಿಟ್ಟು ಮೋಹಮದಡಂಭ ಅಸೂಯೆಸುಟ್ಟು ಎಮ್ಮದು ತಮ್ಮದು ಎಂಬ ಭ್ರಾಂತಿಯ ಬಿಟ್ಟು [ನಮ್ಮ] ವನಜನಾಭನ ಪಾದದೊಳಗೆ ನೀ ಮನವಿಟ್ಟು 1 ಬರಿದೆ ನವರತ್ನ ರಜತ ಸುವರ್ಣ ಧನಧಾನ್ಯದಾಶೆಯ ಬಿಟ್ಟು ನಿರಾಶೆಯೊಳಿರು ನೀನು 2 ಹಾನಿವೃದ್ಧಿ ಯಶೋಲಾಭಗಳೆಲ್ಲ ಸ್ವಾಮಿಯಧೀನವಲ್ಲದೆ ನೀನು ಯೋಚನೆಯನ್ನು ಮಾಡಿಯೆ ಫನವೇನು ಪಾದ ನೇಮದಿಂದಲೆ ನಂಬು 3
--------------
ಯದುಗಿರಿಯಮ್ಮ
ಹರಿಕಥಾಮೃತಸಾರ ಫಲಸ್ತುತಿ (33ನೆಯ ಸಂಧಿ) ಹರಿಕಥಾಮೃತಸಾರ ಶ್ರೀಮ- ದ್ಗುರುವರ ಜಗನ್ನಾಥದಾಸರ ಕರತಳಾಮಲಕವೆನೆ ಪೇಳಿದ ಸಕಲ ಸಂಧಿಗಳ ಪರಮಪಂಡಿತಾಭಿಮಾನಿಗಳು ಮ- ತ್ಸರಿಸಲೆದೆಗಿಚ್ಚಾಗಿ ತೋರುವು- ದರಸಿಕರಿಗಿದು ತೋರಿ ಪೇಳುವುದಲ್ಲ ಧರೆಯೊಳಗೆ 1 ಭಾಮಿನಿಯ ಷಟ್ಪದಿಯ ರೂಪದ- ಲೀ ಮಹಾದ್ಭುತ ಕಾವ್ಯದಾದಿಯೊ- ಳಾ ಮನೋಹರ ತರತಮಾತ್ಮಕ ನಾಂದಿಪದ್ಯಗಳ ಯಾಮಯಾಮಕೆ ಪಠಿಸುವರ ಸು- ಧಾಮಸಖ ಕೈಪಿಡಿಯಲೋಸುಗ ಪ್ರೇಮದಿಂದಲಿ ಪೇಳ್ದ ಗುರುಕಾರುಣ್ಯಕೇನೆಂಬೆ 2 ಸಾರವೆಂದರೆ ಹರಿಕಥಾಮೃತ ಸಾರವೆಂಬುವುದೆಮ್ಮ ಗುರುವರ ಸಾರಿದಲ್ಲದೆ ತಿಳಿಯೆಂದೆನುತ ಮಹೇಂದ್ರನಂದನನ ಸಾರಥಿಯ ಬಲಗೊಂಡು ಸಾರಾ- ಸಾರಗಳ ನಿರ್ಣೈಸಿ ಪೇಳ್ದನು ಸಾರ ನಡೆವ ಮಹಾತ್ಮರಿಗೆ ಸಂಸಾರವೆಲ್ಲಿಹುದೊ 3 ದಾಸವರ್ಯರ ಮುಖದಿ ನಿಂದು ರ- ಮೇಶನನು ಕೀರ್ತಿಸುವ ಮನದಭಿ- ಲಾಶೆಯಲಿ ವರ್ಣಾಭಿಮಾನಿಗಳೊಲಿದು ಪೇಳಿಸಿದ ಈ ಸುಲಕ್ಷಣ ಕಾವ್ಯದೋಳ್ ಯತಿ ಪ್ರಾಸಗಳಿಗೆ ಪ್ರಯತ್ನವಿಲ್ಲದೆ ಲೇಸುಲೇಸೆನೆ ಶ್ರಾವ್ಯಮಾದುದೆ ಕುರುಹು ಕವಿಗಳಿಗೆ 4 ಪ್ರಾಕೃತೋಕ್ತಿಗಳೆಂದು ಬರಿದೆ ಮ- ಹಾಕೃತಘ್ನರು ಜರಿವರಲ್ಲದೆ ಸ್ವೀಕೃತವ ಮಾಡದಲೆ ಬಿಡುವರೆ ಸುಜನರಾದವರು ಶ್ರೀಕೃತೀಪತಿಯಮಲಗುಣಗಳು ಈ ಕೃತಿಯೊಳುಂಟಾದ ಬಳಿಕ ಪ್ರಾಕೃತವೆ ಸಂಸ್ಕøತದ ಸಡಗರವೇನು ಸುಗುಣರಿಗೆ 5 ಶ್ರುತಿಗೆ ಶೋಭನವಾಗದೊಡೆ ಜಡ ಮತಿಗೆ ಮಂಗಳವೀಯದೊಡೆ ಶ್ರುತಿ ಸ್ಮøತಿಗೆ ಸಮ್ಮತವಲದಿದ್ದೊಡೆ ನಮ್ಮ ಗುರುರಾಯ ಮಥಿಸಿ ಮಧ್ವಾಗಮಪಯೋಬ್ಧಿಯ ಕ್ಷಿತಿಗೆ ತೋರಿಸಿ ಬ್ರಹ್ಮವಿದ್ಯಾ ರತರಿಗೀಪ್ಸಿತ ಹರಿಕಥಾಮೃತಸಾರ ಸೊಗಸುವುದು 6 ಸಕ್ತಿ ಸಲ್ಲದು ಕಾವ್ಯದೊಳು ಪುನ- ರುಕ್ತಿ ಶುಷ್ಕ ಸಮಾಸ ಪದವ್ಯತ್ಯಾಸ ಮೊದಲಾದ ಯುಕ್ತಿ ಶಾಸ್ತ್ರ ವಿರುದ್ಧ ಶಬ್ದ ವಿ- ಭಕ್ತಿ ವಿಷಮಗಳಿರಲು ಜೀವ- ನ್ಮುಕ್ತಿಯೋಗ್ಯವಿದೆಂದು ಸಿರಿಮದನಂತ ಮೆಚ್ಚುವನೆ 7 ಆಶುಕವಿಕುಲಕಲ್ಪತರು ದಿ- ಗ್ದೇಶವರಿಯಲು ರಂಗನೊಲುಮೆಯ ದಾಸಕೂಟಸ್ಥರಿಗೆರಗಿ ನಾ ಬೇಡಿಕೊಂಬುವೆನು ಈ ಸುಲಕ್ಷಣ ಹರಿಕಥಾಮೃತ ಸಾರ ದೀರ್ಘ ದ್ವೇಷಿಗಳಿಗೆರೆಯದಲೆ ಸಲಿಸುವುದೆನ್ನ ಬಿನ್ನಪವ 8 ಪ್ರಾಸಗಳ ಪೊಂದಿಸದೆ ಶಬ್ದ ಶ್ಲೇಷಗಳ ಶೋಧಿಸದೆ ದೀರ್ಘ ಹ್ರಸ್ವಗಳ ಸಲ್ಲಿಸದೆ ಷಟ್ಪದಿಗತಿಗೆ ನಿಲ್ಲಿಸದೆ ದೂಷಕರು ದಿನದಿನದಿ ಮಾಡುವ ದೂಷಣವೇ ಭೂಷಣವು ಎಂದುಪ- ದೇಶಗಮ್ಯವು ಹರಿಕಥಾಮೃತಸಾರ ಸಾಧ್ಯರಿಗೆ 9 ಅಶ್ರುತಾಗಮಭಾವ ಇದರ ಪ- ರಿಶ್ರಮವು ಬಲ್ಲವರಿಗಾನಂ- ದಾಶ್ರುಗಳ ಮಳೆಗರಿಸಿ ಮೈಮರೆಸುವ ಚಮತ್ಕøತಿಯ ಮಿಶ್ರರಿಗೆ ಮರೆಮಾಡಿ ದಿತಿಜರ ಶಸ್ತ್ರದಲಿ ಕಾಯದಿಪ್ಪರಿದರೊಳು- ಪಶ್ರುತಿಗಳು ತಪ್ಪುವುವೇ ನಿಜ ಭಕ್ತಿಯುಳ್ಳರಿಗೆ 10 ನಿಚ್ಚ ನಿಜಜನ ಮೆಚ್ಚ ಗೋಧನ ಅಚ್ಚ ಭಾಗ್ಯವು ಪೆಚ್ಚೆ ಪೇರ್ಮೆಯು ಕೆಚ್ಚ ಕೇಳ್ವನು ಮೆಚ್ಚ ಮಲಮನ ಮುಚ್ಚಲೆಂದೆನುತ ಉಚ್ಚವಿಗಳಿಗೆ ಪೊಚ್ಚ ಪೊಸದೆನ- ಲುಚ್ಚರಿಸಿದೀ ಸಚ್ಚರಿತ್ರೆಯ ನುಚ್ಚರಿಸೆ ಸಿರಿವತ್ಸಲಾಂಛನ ಮೆಚ್ಚಲೇನರಿದು 11 ಸಾಧು ಸಭೆಯೊಳು ಮೆರೆಯೆ ತತ್ವಸು- ಬೋಧವೃಷ್ಟಿಯ ಗರೆಯೆ ಕಾಮ ಕ್ರೋಧ ಬೀಜವ ಹುರಿಯೆ ಖಳರೆದೆ ಬಿರಿಯೆ ಕರಕರಿಯ ವಾದಿಗಳ ಪಲ್ಮುರಿಯೆ ಪರಮವಿ- ನೋದಿಗಳ ಮೈ ಮರೆಯಲೋಸುಗ ಹಾದಿ ತೋರಿದ ಹಿರಿಯ ಬಹು ಚಾತುರಿಯ ಹೊಸ ಪರಿಯ 12 ವ್ಯಾಸತೀರ್ಥರ ಒಲವೊ ವಿಠಲೋ- ಪಾಸಕ ಪ್ರಭುವರ್ಯ ಪುರಂದರ ದಾಸರಾಯರ ದಯವೊ ತಿಳಿಯದು ಓದಿ ಕೇಳದಲೆ ಕೇಶವನ ಗುಣಮಣಿಗಳನು ಪ್ರಾ- ಣೇಶಗರ್ಪಿಸಿ ವಾದಿರಾಜರ ಕೋಶಕೊಪ್ಪುವ ಹರಿಕಥಾಮೃತಸಾರ ಕೇಳಿದರು 13 ಹರಿಕಥಾಮೃತಸಾರ ನವರಸ ಭರಿತ ಬಹುಗಂಭೀರ ರತ್ನಾ- ಕರ ರುಚಿರ ಶೃಂಗಾರ ಸಾಲಂಕಾರ ವಿಸ್ತಾರ ಸರಸ ನರಕಂಠೀರವಾಚಾ- ಜನಿತ ಸುಕುಮಾರ ಸಾತ್ವೀ- ಕರಿಗೆ ಪರಮೋದಾರ ಮಾಡಿದ ಮರೆಯದುಪಕಾರ 14 ಅವನಿಯೊಳು ಜ್ಯೋತಿಷ್ಮತಿಯ ತೈ- ಲವನು ಪಾಮರನುಂಡು ಜೀರ್ಣಿಸ- ಲವನೆ ಪಂಡಿತನೋಕರಿಪವಿವೇಕಿಯಪ್ಪಂತೆ ಶ್ರವಣಮಂಗಳ ಹರಿಕಥಾಮೃತ ಸವಿದು ನಿರ್ಗುಣಸಾರಮಕ್ಕಿಸ- ಲವ ನಿಪುಣನೈ ಯೋಗ್ಯಗಲ್ಲದೆ ದಕ್ಕಲರಿಯದಿದು 15 ಅಕ್ಕರದೊಳೀ ಕಾವ್ಯದೊಳು ಒಂ- ದಕ್ಕರವ ಬರೆದೋದಿದವ ದೇ- ವರ್ಕಳಿಂ ದುಸ್ತ್ಯಜ್ಯನೆನಿಸಿ ಧರ್ಮಾರ್ಥಕಾಮಗಳ ಲೆಕ್ಕಿಸದೆ ಲೋಕೈಕನಾಥನ ಭಕ್ತಿಭಾಗ್ಯವ ಪಡೆದ ಜೀವ ನ್ಮುಕ್ತಗಲ್ಲದೆ ಹರಿಕತಾಮೃತಸಾರ ಸೊಗಸುವದೆ16 ಒತ್ತಿ ಬಹ ವಿಘ್ನಗಳ ತಡೆದಪ ಮೃತ್ಯುವಿಗೆ ಮರೆಮಾಡಿ ಕಾಲನ ಭೃತ್ಯರಿಗೆ ಭೀಕರವ ಪುಟ್ಟಿಸಿ ಸಕಲಸಿದ್ಧಿಗಳ ಒತ್ತಿಗೊಳಿಸಿ ವನರುಹೇಕ್ಷಣ ನೃತ್ಯಮಾಡುವನವನ ಮನೆಯೊಳು ನಿತ್ಯಮಂಗಳ ಹರಿಕಥಾಮೃತಸಾರ ಪಠಿಸುವರ 17 ಆಯುರಾರೋಗ್ಯೈಶ್ವರ್ಯ ಯಶ ಧೈರ್ಯ ಬಲ ಸಮಸಹಾಯ ಶೌರ್ಯೋ ದಾರ್ಯ ಗುಣಗಾಂಭೀರ್ಯ ಮೊದಲಾದ ಆಯತಗಳುಂಟಾಗಲೊಂದ- ಧ್ಯಾಯ ಪಠಿಸಿದ ಮಾತ್ರದಿಂ ಶ್ರವ- ಣೀಯವಲ್ಲದೆ ಹರಿಕಥಾಮೃತಸಾರ ಸುಜನರಿಗೆ 18 ಕುರುಡ ಕಂಗಳ ಪಡೆವ ಬಧಿರನಿ- ಗೆರಡುಕಿವಿ ಕೇಳ್ವಹವು ಬೆಳೆಯದ ಮುರುಡ ಮದನಾಕೃತಿಯ ತಾಳ್ವನು ಕೇಳ್ದಮಾತ್ರದಲಿ ಬರಡು ಹೈನಾಗುವುದು ಕೇಳ್ದರೆ ಕೊರಡು ಪಲ್ಲವಿಸುವುದು ಪ್ರತಿದಿನ ಹುರುಡಿಲಾದರು ಹರಿಕಥಾಮೃತಸಾರವನು ಪಠಿಸೆ 19 ನಿರ್ಜರತರಂಗಿಣಿಯೊಳನುದಿನ ಮಜ್ಜನಾದಿ ಸಮಸ್ತ ಕರ್ಮವಿ- ವರ್ಜಿತಾಶಾಪಾಶದಿಂದಲಿ ಮಾಡಿದಧಿಕಫಲ ಹೆಜ್ಜೆಹೆಜ್ಜೆಗೆ ದೊರೆಯದಿಪ್ಪವೆ ಸಜ್ಜನರು ಶಿರತೂಗುವಂದದಿ ಘರ್ಜಿಸುತಲೀ ಹರಿಕಥಾಮೃತಸಾರ ಪಠಿಸುವರ 20 ಸತಿಯರಿಗೆ ಪತಿಭಕುತಿ ಪತ್ನಿ ವ್ರತ ಪುರುಷರಿಗೆ ಹರಿಷ ನೆಲೆಗೊಂ- ಡತಿಮನೋಹರರಾಗಿ ಗುರುಹಿರಿಯರಿಗೆ ಜಗದೊಳಗೆ ಸತತ ಮಂಗಳವೀವ ಬಹು ಸು- ಕೃತಿಗಳೆನಿಸುತ ಸುಲಭದಿಂ ಸ ದ್ಗತಿಯು ಪಡೆವರು ಹರಿಕಥಾಶಮೃತಸಾರವನು ಪಠಿಸೆ 21 ಎಂತು ವರ್ಣಿಸಲೆನ್ನಳವೆ ಭಗ- ವಂತನಮಲ ಗುಣಾನುವಾದಗ- ಳೆಂತು ಪರಿಯಲಿ ಪೂರ್ಣಭೋಧರ ಮತವ ಹೊಂದಿದರ ಚಿಂತನೆಗೆ ಬಪ್ಪಂತೆ ಬಹು ದೃ- ಷ್ಟಾಂತಪೂರ್ವಕವಾಗಿ ಪೇಳ್ದ ಮ- ಹಂತರಿಗೆ ನರರೆಂದು ಬಗೆವರೆ ನಿರಯಭಾಗಿಗಳು 22 ಮಣಿಖಚಿತ ಹರಿವಾಣದಲಿ ವಾ ರಣಸುಭೋಜ್ಯ ಪದಾರ್ಥ ಕೃಷ್ಣಾ ರ್ಪಣವೆನುತರ್ಪಿಸಿದವರಿಗೋಸುಗ ನೀಡುವಂದದಲಿ ಪ್ರಣತರಿಗೆ ಪೊಂಗನಡ ವರವಾ ಙ್ಮಣಿಗಳಿಂ ವಿರಚಿಸಿದ ಶ್ರುತಿಯೊ ಳುಣಿಸಿ ನೋಡುವ ಹರಿಕಥಾಮೃತಸಾರವನುದಾರ 23 ದುಷ್ಟರೆನ್ನದೆ ದುರ್ವಿಷಯದಿಂ ಪುಷ್ಟರೆನ್ನದೆ ಪೂತಕರ್ಮ ಭ್ರಷ್ಟರೆನ್ನದೆ ಶ್ರೀದವಿಠ್ಠಲ ವೇಣುಗೋಪಾಲ ಕೃಷ್ಣ ಕೈಪಿಡಿಯುವನು ಸತ್ಯ ವಿ- ಶಿಷ್ಟ ದಾಸತ್ವವನು ಪಾಲಿಸಿ ನಿಷ್ಠೆಯಿಂದಲಿ ಹರಿಕಥಾಮೃತಸಾರ ಪಠಿಸುವರ 24
--------------
ಶ್ರೀದವಿಠಲರು
ಹಲವು ಹಂಬಲಿಸಿದಲ್ಲೇನೂ ಇಲ್ಲ ಜಲಜನಾಭನ ಕರುಣÉೂೀದಯವು ತಪ್ಪಿದ ವೇಳ್ಯಾ ಪ ಬರಿಗಂಟು ಅಪೇಕ್ಷೆ ಬಯಸುವುದೆಲ್ಲಾ ಪೂರ್ವಾಕೃತ ಇದ್ದದ್ದು ಬಿಟ್ಟದ್ದೆ ಇಲ್ಲ ಬಿರುದು ಬಾವಲಿ ದೇಹಾಭಂಗ ಬಡುವಾದೊಂದೆ ಪರಿ ವ್ಯಥೆಯಿಂದ ಫಲವೇನೊ ಇಲ್ಲ ಮುಂದಾ 1 ಬಿತ್ತಿದ ಬೀಜ ಎಷ್ಟು ಬೆಳೆಯ----ಲಿನೂ ಸುತ್ತಾ ದೇಶವು ತಿರುಗಿ ಸೂಸಿದರೇನೂ ಪತ್ರ ಬರೆದ ಬ್ರಹ್ಮ ಫಣಿಯ ಲಿಖಿತವಲ್ಲದೆ ಪ್ರತ್ಯೇಕ ನಿನಗೊಂದು ಬಾಹೋದು ಇನ್ನುಂಟೆ 2 ಅನುಭವ ಇದ್ದವಲ್ಲಾ ------ಇಲ್ಲಾ ಮನದಿ ತಿಳಿದು ಇನ್ನು ಮರಿಯದು ಎಲ್ಲಾ ಘನ್ನ 'ಹೊನ್ನೆ ವಿಠ್ಠಲ ನಾ ಕರುಣಾವಿಲ್ಲ ----- ಮನಸಿನೊಳಗೆ ಸ್ಮರಿಸಿ ಮುಕುತನಾಗೋದು ಬಿಟ್ಟು 3
--------------
ಹೆನ್ನೆರಂಗದಾಸರು
ಆರ ಮಕ್ಕಳಾರ ರಾಣಿ ಆರ ಸಂಪದವಾರಿಜಾಕ್ಷನಿಟ್ಟ ತೆರದಿ ಇರು ಎಲೆಲೆ ಆತ್ಮಾ ಪ.ಬೇಡಿದರೆ ಕೊಡ ದೇವ ಬೇಡದಿದ್ದರೀವ ದೇವನೋಡುತಿಹ ಸುಮ್ಮನೆ ತಾನಾಡಿಪ ಜಗವರೂಢಿಯಲ್ಲಿ ಎಳೆ ಮಕ್ಕಳಾಡುವಂತೆ ಕೊಟ್ಟು ಕಳೆದುಓಡಿಸಾಡುತಿಹ ಯಂತ್ರಾರೂಢನ ಬಳಗಿದೆಲ್ಲ 1ಕಂದನ್ನಿಟ್ಟು ತಂದೆ ತಾಯಿ ತಂದೆ ತಾಯಿ ಮುಂದೆ ಕಂದನಹಿಂದೆ ಮುಂದೊಯ್ಯುವನ್ಯಮ ಸಂಬಂಧರಿಗ್ಹೇಳಿಚಂದದಿ ಜಗಜ್ಜೀವರು ದಂದುಗದಿ ತೊಳಲೆ ಕಂಡುಮಂದಸ್ಮಿತದೊಳಿಪ್ಪ ಮುಕುಂದನ ಮಾಯವಲ್ಲದೆ 2ಹಾವು ಹಾರವಕ್ಕು ಮೃತ ಜೀವರು ಸಂಜೀವರಕ್ಕುಪಾವಕತಂಪಕ್ಕು ವಿಷ ಪೀಯೂಷಮಕ್ಕುಆವಕಾಲದಿ ಶ್ರೀ ಪ್ರಸನ್ವೆಂಕಟೇಶನಂಘ್ರಿಯಭಾವದೊಳರ್ಚಿಸು ಕ್ಷುದ್ರ ಜೀವಿಗಳಾಸೆ ಸಲ್ಲ 3
--------------
ಪ್ರಸನ್ನವೆಂಕಟದಾಸರು
ಆವ ಕುಲವಾದರೇನು ಪ.ಭಾವದ ಎಲ್ಲಾನ ತಿಳದವನಿಗೆ ಮತ್ತೇ ಅಪಅಸುಡೊಂಕು ಕಬ್ದು ಇರಲು - ಅದರೊಳಗಿದ್ದರಸ ತಾನು ಡೊಂಕೇನಲೊ - ಮರುಳೆವಿಷಯಭಾವನೆ ಬಿಟ್ಟು ನೀ ಹೋಗಿ ಗುರುಗಳಹಸನಾಗಿ ಕೇಳು ಕಾಣೋ - ಮನುಜಾ 1ನಾನಾವರ್ಣದ ಆಕಳ - ಕ್ಷೀರದಲಿನಾನಾವರ್ಣಗಳಹುದೆ - ಮನುಜಾಹೀನ ಭಾವನೆಗಳನಿಂದಿಟ್ಟು ನೀ ಪೋಗಿಜ್ಞಾನಿಗಳ ಕೇಳು ಕಾಣೋ - ಮನುಜಾ 2ಶರಧಿಯೊಳ ತೆರೆನೊರೆಗಳಾ - ಪರಿಯಂತೆಶರೀರವಲ್ಲದೆ ಬೇರಿಹುದೇ ?ವರಪುರಂದರವಿಠಲನ ಸ್ಮರಿಸುತಿರಲು ನಿನಗೆಸಿರಿಯನು ಮುಕುತಿಯಹುದು - ಮನುಜಾ 3
--------------
ಪುರಂದರದಾಸರು
ಏಕೆ ದೇಹವನು ದಂಡಿಸುವೆ ವೃಥಾ - ಬಿಡ - |ದೇಕ ಚಿತ್ತದಿ ಲಕ್ಷ್ಮೀಕಾಂತಹರಿಎನ್ನದೆಪ.ಸ್ನಾನವನು ಮಾಡಿ ಧ್ಯಾನಿಸುವೆನೆನುತಲತಿ - |ಮೌನವನು ಪಿಡಿದು ಬಕಪಕ್ಷಿಯಂತೆ |ಹೀನ ಬುಧ್ಧಿಗಳ ಯೋಚಿಸಿ ಕುಳಿತು ಫಲವೇನು ||ದಾನವಾಂತಕನ ನಾಮಕೆ ಮೌನವುಂಟೆ ? 1ಜಪವ ಮಾಡುವೆನೆನುತ ಕಪಟಬುದ್ಧಿಯ ಬಿಡದೆ |ಗುಪಿತದಿಂದಲಿ ನೀನು ಕುಳಿತು ಫಲವೇನು ||ಅಪರಿಮಿತಮಹಿಮ ಶ್ರೀ ನಾರಾಯಣನೆಂದರೆ ||ಸಫಲವಲ್ಲದೆ ಬೇರೆ ಗತಿಯುಂಟೆ ಮರುಳೆ 2ಅಂದಜಾಮಿಳಗೆ ಸ್ಮರಣೆಯ ಮಾತ್ರದಲಿ ಮುಕುತಿ |ಹಿಂದೆ ಶ್ರೀಹರಿಯು ತಾ ಕೊಡಲಿಲ್ಲವೇ ? |ಸಂದೇಹವೇಕೆ ನೀನೊಂದು ಕ್ಷಣವಗಲದೆ |ತಂದೆ ಶ್ರೀ ಪುರಂದರವಿಠಲ ನೆನೆಮನವೆ 3
--------------
ಪುರಂದರದಾಸರು
ಒಂದೆರೆಡೇ ನಾ ಹೇಳಲುಎಂದಿಗು ತೀರವು ಅಪರಾಧ ಸಿರಿಕೃಷ್ಣ ಪ.ಪಾಪವ ಗಳಿಸಿದರೇನುಂಡಾರದ ಬಲ್ಲೆಆ ಪುಣ್ಯವಂತರ ಕೀರ್ತಿ ಬಲ್ಲೆಈಪರಿತಿಳಿದರು ಕೆಟ್ಟವೃತ್ತಿಯ ಬಿಡೆಆಪದ್ಬಂಧು ಇದೇನು ಮಾಯವೊ ಸ್ವಾಮಿ 1ತಾಪತ್ರಯವನುಭವಿಸುವಾಗ ಪಶ್ಚಾತ್ತಾಪವಲ್ಲದೆ ಮಾತೊಮ್ಮಿಗಿಲ್ಲಶ್ರೀಪತಿನೋಡುಚಿತ್ತದಕಪಟವಿಷಯಾಲಾಪವೆವಿಡಿದಿದೆ ಹಿತ ಹೊಂದದಯ್ಯ 2ಹಣ್ಣು ಹಂಚಿದ ತೆರ ಹೊತ್ತು ಹೋಯಿತು ಕಿಂಚಿತ್ಪುಣ್ಯ ಮಾಡಿಹೆನೆಂಬ ನಂಬಿಗಿಲ್ಲಚಿನ್ಮಯ ಮೂರುತಿ ಪ್ರಸನ್ವೆಂಕಟೇಶನಿನ್ನವನೆಂಬ ಹೆಮ್ಮೆಲಿ ಮಾಡಿದ ತಪ್ಪು 3
--------------
ಪ್ರಸನ್ನವೆಂಕಟದಾಸರು
ಕಲ್ಲುಸಕ್ಕರೆ ಕೊಳ್ಳಿರೊ - ನೀವೆಲ್ಲರು |ಕಲ್ಲುಸಕ್ಕರೆ ಕೊಳ್ಳಿರೊ ಪ.ಕಲ್ಲುಸಕ್ಕರೆ ಸವಿ ಬಲ್ಲವರೆ ಬಲ್ಲರು |ಫುಲ್ಲನಾಭಕೃಷ್ಣನ ದಿವ್ಯನಾಮವೆಂಬಅ.ಪಎತ್ತ ಹೇರುವುದಲ್ಲ ಹೊತ್ತು ಮಾರುವುದಲ್ಲ |ಒತ್ತೊತ್ತಿ ಗೋಣಿಯ ತುಂಬುವುದಲ್ಲ ||ಎತ್ತ ಹೋದರು ಮತ್ತೆ ಸುಂಕವು ಇದಕಿಲ್ಲ |ಹತ್ತೆಂಟು ಸಾವಿರಕೆ ಬೆಲೆಯಿಲ್ಲದಂತಹ 1ನಷ್ಟಬೀಳುವುದಲ್ಲ ನಾಶವಾಗುವುದಲ್ಲ |ಕಟ್ಟಿ ಇಟ್ಟರೆ ಮತ್ತೆ ಕೆಡುವುದಲ್ಲ ||ಎಷ್ಟು ದಿನವಿಟ್ಟರೂ ಕೆಟ್ಟು ಹೋಗುವುದಲ್ಲ |ಪಟ್ಟಣದೊಳಗೊಂದು ಲಾಭವೆನಿಸುವಂಥ 2ಸಂತೆಪೇಟೆಗೆ ಹೋಗಿ ಶ್ರಮಪಡಿಸುವುದಲ್ಲ |ಎಂತು ಮಾರಿದರದಕಂತವಿಲ್ಲ ||ಸಂತತ ಪುರಂದರವಿಠಲನ ನಾಮವ |ಎಂತು ನೆನೆಯಲು ಪಾಪ ಪರಿಹಾರವಲ್ಲದೆ 3
--------------
ಪುರಂದರದಾಸರು
ತಾನು ಮಾಡಿದಕರ್ಮ ತನಗಲ್ಲದೆ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಏನ ಮಾಡಿದರು ಹಿಂದಿನ ಕರ್ಮವಲ್ಲದೆ ಪ.ಮರಳಿ ಮರಳಿ ನೀರ ಹೊಕ್ಕು ಹೊರಟರೆ ಇಲ್ಲ |ಹೊರೆ ಹೊತ್ತು ತಲೆಪರಟೆಗಟ್ಟಿದರೂ ಇಲ್ಲ ||ಬರಿಯೆ ಭೂಮಿಯ ಕೆದರಿ ತೋಡಿ ನೋಡಿದರಿಲ್ಲ |ಪರರಿಗೆ ಬಾಯ್ದೆರೆದರೇನೊ ಇಲ್ಲ 1ಬಲಿದ ದೇಹವನಲ್ಪ ಮಾಡಿ ಬೇಡಿದರಿಲ್ಲ |ನೆಲದಿ ಕೊಲೆಗಡುಕ ತಾನಾದರಿಲ್ಲ ||ತಲೆಯಲಿ ಜಡೆಗಟ್ಟಿ ಅಡವಿ ಸೇರಿದರಿಲ್ಲ - |ಕೊಳಲೂದಿ ತುರುಗಳನು ಕಾಯ್ದರಿಲ್ಲ 2ಧೀರತನ ಬಿಟ್ಟು ದಿಗಂಬರನಾದರು ಇಲ್ಲ |ಮೀರಿದ್ದರಾಹುತ ತಾನಾದರಿಲ್ಲ ||ವರದ ಶ್ರೀ ಪುರಂದರವಿಠಲನ ಚರಣವ |ಸ್ಮರಿಸುತಅನುದಿನ ಸುಖಿಯಾಗಿರಯ್ಯ3
--------------
ಪುರಂದರದಾಸರು
ಭಕ್ತವತ್ಸಲನೆಂಬ ಚಿಹ್ನೆ ನಿನಗೆಯುಕ್ತವಲ್ಲದೆ ಆರಿಗೊಪ್ಪುವುದು ಕೃಷ್ಣ ಪ.ಎಲ್ಲ ಜಗದ ತಂದೆ ನಿನ್ನ ಮಗ ಆ ನಂದನೊಲ್ಲಭೆಯ ಕಂದನಾದಚೆಲ್ಲುವೆ ಅರಸಿ ನಿನ್ನಂಗನೆ ಲಕುಮವ್ವಗೊಲ್ಲತೇರಿಗೆಂತು ಸೋತಿದ್ದೆ ಸ್ವಾಮಿ 1ಮಂದಿ ರಾಜಾಂಡಕೋಟಿಗೆ ಗುರುವರ್ಯ ನೀನುಸಾಂದೀಪನi್ಞ್ಯಳಿಗವ ಮಾಡ್ದೆಮಂದಜಾಸನಆ ವಾಯು ನಿನ್ನ ಓಲೈಸುತಿರೆಕಂದನೆನಿಸಿದೆ ಯಶೋದಾದೇವಿಗೆ ಸ್ವಾಮಿ 2ಮೂರು ಚಾವಡಿ ಪಾರುಪತ್ಯದ ಪ್ರಭುವೆ ನೀನೇರಿದೆ ನರನ ಬಂಡಿಯನುದ್ವಾರಕೆಯ ಅರಸೆ ನೀ ಚೀರಿದರೋಡಿ ಬಂದುಆ ರಮಣಿಯಮಾನಉಳಿಸಿದೆ ಸ್ವಾಮಿ3ಮುಕ್ತದ್ರುಹಿಣರಿಂದಸೇವ್ಯನೀ ಧರ್ಮನಮಖದೊಳೆಂಜಲ ಪತ್ರ ತೆಗೆದೆಪ್ರಕಟಿತನಿತ್ಯಮಹಾತೃಪ್ತ ನೀ ವಿದುರನಕಕುಲತೆಯ ಔತಣಗೊಂಡು ಮುದಿಸಿದೆ ಸ್ವಾಮಿ 4ಹಲವು ಶ್ರ್ರುತಿಗಳಿಗೆ ನೀ ನಿಲುಕದೆ ನೆನೆದವಗೆಸುಲಭದಿ ಪೊರೆವ ಉದಾರಿಬಲದ ಮ್ಯಾಲೊಲಿಯುವ ದೊರೆಯಲ್ಲ ಭಕ್ತರಛಲರಕ್ಷ ಪ್ರಸನ್ನವೆಂಕಟ ಜಗದಧ್ಯಕ್ಷ ಸ್ವಾಮಿ 5
--------------
ಪ್ರಸನ್ನವೆಂಕಟದಾಸರು
ಮನವೆ ಶ್ರೀನಾರಾಯಣನನು ಸ್ಮರಿಸದೆಮಾಯಾಪಾಶಕೆ ಸಿಲುಕುವರೇ ಪ.ವನಜನಾಭನ ಪದ ವನರುಹಯುಗ್ಮವಅನುದಿನನೆನೆಯದೆ ಒಣಗುವರೇವನಿತಾಲಂಪಟನಾಗುತ ಸಂತತಮನಸಿಜಯಂತ್ರಕೆ ಮನಮರಗುವರೇ ಅ.ಪ.ತುಂಡು ಸೂಳೆಯರ ದುಂಡುಕುಚವ ಪಿಡಿದುಗಂಡಸುತನವನು ಕೆಡಿಸುವರೆದಂಡಧರನ ಬಾಧೆ ಹೆಂಡತಿಯನು ಪಡಕೊಂಡು ವೇದನೆಯನು ತಾಳುವರೆಕಂಡು ಕಂಡು ನೀ ಗುಂಡಿಗೆ ಬಾಳ್ವರೆಹೆಂಡಿರ ಸುಖರಸ ಉಂಡರು ಸಾಲದೆ 1ಬಂದ ಸುಖಕೆ ನೀ ಮುಂದುವರೆಯುತಲಿಮಂದಅಸಮ ದುಃಖ ತಾಳುವರೇಬಂದುದೆನ್ನ ಕಣ್ಣ ಮುಂದೆಯನುಭವಿಪೆಎಂದಿಗೆನ್ನಾಜೆÕಯು ಬಂದಪುದೋ ನಿಜ 2ಇಷ್ಟು ದಿನದಿ ನೀ ಭ್ರಷ್ಟೆಯರಲಿ ಮೋಹಪಟ್ಟ ಭಾಗ್ಯವನೆಲ್ಲ ತೋರೊ ನೀನುಕಷ್ಟ ಮಾನಧನ ನಷ್ಟವಲ್ಲದೆ ಎಳ್ಳಿ-ನಷ್ಟು ಸುಖವನ್ನು ಕಾಣೆನಿನ್ನುಇಷ್ಟಾರ್ಥಗಳೆಲ್ಲ ದೊರೆಕುವುದೈಪರಮೇಷ್ಠಿ ಪಿತನ ಮನಮುಟ್ಟಿ ನೀವ್ ಭಜಿಸಿರೊ 3ವಿಷಯ ಪಳಂಚಿತನಾಗುವ ಸಂತತಪಂಚಡಕೀರನು ಆಗುವರೇಮುಂಚೆ ಮಾಡಿದಕರ್ಮಸಾಲದೆಂದೆನುತಲಿಸಂಚಿತಪಾಪವ ಸಂಗ್ರಹಿಸುವರೇಚಂಚಲಾಕ್ಷಿಯರ ಚಪಲದ ಮಾತನುವಂಚನೆ ಎಂಬುದು ತಿಳಿಯದೆ ಇರುವರೆ 4ಸಾರಿಸಾರಿ ಕೈ ಮುಗಿದು ಬೇಡುವೆನು ವಿ-ಕಾರ ದುರ್ಬುದ್ಧಿಯ ಬಿಡು ಎಂದುಭಾರಿ ತಪ್ಪುಗಳ ಕ್ಷಮಿಸಿಕಾವಲಕ್ಷ್ಮೀನಾರಾಯಣ ನೀನೇ ಗತಿಯೆಂದುಪಾರಮಾರ್ಥಿಕ ವಿಚಾರವ ಮಾಡುತಶ್ರೀ ರಮೇಶನ ಚರಣಾರವಿಂದವ ಸೇರೋ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸಕ್ಕರೆ ಸವಿ ಸಮ ತತ್ವರಸಿಕಸುಖತೀರ್ಥರಲ್ಲದೆ ಶುನಿಕುತರ್ಕ ಪರ್ಣಾಶನ ನರಗುರಿ ಬಲ್ಲವೆಮುಕ್ತಿಪಥದಹವಣಪ.ಪಯಸ ಪಯವ ನಿರ್ಣೈಸಿ ಸೇವಿಪ ಹಂಸಚಯವಲ್ಲದೆ ಮಲವಬಯಸಿ ಮೆಲ್ಲುವ ವೃದ್ಧ ವಾಯಸ ತಾ ಬಲ್ಲದೆನಯರುಚಿಹೇಳಾ1ದ್ವಿಪಶಿರ ಪೀಯೂಷವ ಸಾಮಭೇದಜÕ ಮೃಗಾಧಿಪ ಬಲ್ಲಾಮೇಧ್ಯ ಆಮಿಷಚಪ್ಪರಿದುಂಬೊಶೃಗಾಲಶ್ವಾನತಾವು ಬಲ್ಲವೆಆ ಪರವಿಡಿಯ ಸುಖವ 2ಮಂಗಳಾಂಬುಜ ಮಕರಂದ ಭೋಜಕಶುಭಭೃಂಗವಲ್ಲದೆ ಅಶುಭಗುಂಗಿ ತಾ ಬಲ್ಲದೆಸುರಭಿಅಸುರಭಿ ಗುಣಂಗಳ ಬಗೆಗಳನು 3ಸುರತರುವಿಂಧನಸುರಭಿಪಶು ಪಾಮರಗೆ ಮಣಿಯೆ ಕಲ್ಲುವರಪೇಯ ವಿಷಗುರುಗುರುಕೃಪೆ ಹಿತದುರುಳನಿಗಪಕಾರ 4ಸಲ್ಲ ಕರುಧಿ ಗಿ? ರುಣೆ ಪಾಲ್ಗರಿದುಣ್ಣಲುಬಲ್ಲ ಪೂರಣಬೋಧರುಫುಲ್ಲನಾಭಪ್ರಸನ್ನವೆಂಕಟಪತಿಯಆಹ್ಲಾದ ಕಾರಣರು 5
--------------
ಪ್ರಸನ್ನವೆಂಕಟದಾಸರು