ಒಟ್ಟು 174 ಕಡೆಗಳಲ್ಲಿ , 17 ದಾಸರು , 155 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧನ್ವಂತ್ರಿ ನಿನ್ನ ಸ್ಮರಿಸಿ ಧನ್ಯರಾಗಿಹರ ಪಾದ ಧ್ಯಾನದೊಳಿರೆಸೆನ್ನ ಧನ್ಯನೆಂದೆನಿಸೊ ಪ ನಿನ್ನ ದಾಸರ ಕೀರ್ತಿ ನಿನ್ನ ದಾಸರ ವಾರ್ತೆ ನಿನ್ನ ನಾಮಾಮೃತವು ಎನ್ನ ಕಿವಿ ತುಂಬಿರಲಿ ಅ.ಪ ನಿನ್ನ ಪಾದದ ಸ್ಮರಣೆಯನ್ನು ಮಾಳ್ಪರ ಸಂಗ ಇನ್ನು ಪಾಲಿಸು ದೇವನೆ ಘನ್ನ ಮಹಿಮನೆ ಪರಮ ಪುಣ್ಯಶೀಲರ ಸೇವೆ ಇನ್ನು ಕರುಣಿಸೊ ಕೇಶವಾ ಸನ್ನುತಾಂಗನೆ ಭವಭಯವನ್ನು ಬಿಡಿಸೆಂದು ನಾ ನಿನ್ನ ಮೊರೆಯಿಡುವೆ ಹರಿಯೇ ಚನ್ನ ಶ್ರೀಗೋಪಾಲ ಗೋವಿಂದ ಕೇಶವ ನಿನ್ನ ನಾಮನಿರಂತರವು ಪಾ- ವನ್ನ ಮಾಡಲಿ ಎನ್ನ ಜಿಹ್ವೆಯಾ 1 ಆದರದಿ ನಿನ್ನ ಸ್ಮರಿಪ ಸಾಧುಜನರ ಸಂಗ ಭೇದವಿಲ್ಲದೆ ಕರುಣಿಸೊ ಆದಿ ಮೂರುತಿ ನಿನ್ನ ಆದರದಿ ಸ್ಮರಿಪ ಪರ- ಮಾದರವ ನಿತ್ತು ಸಲಹೊ ಮೋದ ಪಡುವ ಭಾಗ್ಯ ಮಾಧವನೆ ದಯಪಾಲಿಸೋ ಮಾಧವ ಜನಾರ್ದನ ಕ್ರೋಧಿ ಸಂವತ್ಸರವು ಭಕುತರ ಕ್ರೋಧಗಳ ಕಳೆಯುತ್ತ ಸಲಹಲಿ2 ಶರಣೆಂದು ಬೇಡುವೆ ಪರಿಪರಿ ಅಘಗಳ ಪರಿಹರಿಸೆಂದು ನಾ ಸ್ಮರಿಸಿಬೇಡುವೆನು ಸರಸಿ ಜೋದ್ಭವÀಪಿತನೆ ಸರಸಿಜಾಕ್ಷಿಯ ಕೂಡಿ ಹರುಷದಿ ನೆಲಸೆನ್ನ ಹೃದಯದಲಿ ದೇವ ಸರಸಿಜನೇತ್ರನೆ ಬಿಡದೆ ನಿನ್ನನು ಸ್ಮರಿಪ ಕಡುಭಾಗವತರ ಸಂಗವನೆ ನೀಡೈ ಮೃಡನ ಸಖನೆ ನಿನ್ನಂಘ್ರಿ ಸ್ಮರಿಸುವ ಭಾಗ್ಯ ತಡೆಯದಲೆ ಪಾಲಿಸುತ ಪೊರೆ ಶ್ರೀ ಕಮಲನಾಭ ವಿಠ್ಠಲನೆ ದಯದಲಿ 3
--------------
ನಿಡಗುರುಕಿ ಜೀವೂಬಾಯಿ
ನಂಬಿಗಿಟ್ಟ ಸಂಸಾರ ಇದು ನಂಬಿ ಹಂಬಲಿಸದಿರು ಪೂರಾ ಪ ಕಾಯವೆಂಬುದು ಸ್ಥಿರವಲ್ಲಾ ಅತಿ ಮಾಯಕೆ ಬಂದು ಸಿಕ್ಕಿದೆಲ್ಲಾ ಬಾಯಿ ರುಚಿಗಳು ಬಿಡು ಎಲ್ಲಾ ರುಚಿ ರುಚಿಸೆಲ್ಲಾ ತಂದೆ ತಾಯಿಗಳು ಇನ್ನು ಹೊಂದಿದ ಅದರಲ್ಲೆ ಬಗೆ ಮಾಯದೊಳು ಇರುವಾಗೆ ಆನಂದ ತೋರುವದು ನಿನ್ನೊಳಗೆ 1 ಧೊರೆತನ ದೌಲತ್ತು ಸ್ಥಿರವೆಂದು ಪರಿ ಪರಿಯಲಿ ವಿಹರಿಸು ಎಂದೂ ಪರಮಾತ್ಮನ ಭಜನಿಲ್ಲದೆಂದೂ ವ್ಯರ್ಥ ಪಾಪಕೆ ಒಳಗಾಗಿ ಕೆಡುವೆಂದೂ 2 ಬದುಕು ಬಾಳುವೆ ನಂಬಿಕೊಂಡು ಮುಂದೆ ತುದಿಗಾಣದೆ ಹೋಗ್ವದು ಕಂಡೂ ----------------------- ---------------------- 3 ಅಷ್ಟೂ ಶ್ರೀಹರಿ ಮಾಯವೆಂದೂ ಸ್ಪಷ್ಟದಿ ಮನದಲಿ ತಿಳಿಯಿಂದೂ ಶಿಷ್ಟ ಹೆನ್ನ ವಿಠ್ಠಲನೆಂದೂ ಉತ್ಕøಷ್ಟದಿ ಹೃದಯದಿ ಸ್ಮರಿಸಿಂದೂ 4
--------------
ಹೆನ್ನೆರಂಗದಾಸರು
ನಾನೇ ಭ್ರಮಿಸಿದೆನೋ ವಿಷಯ ಸಂಗ ನೀನೇ ನಲಿದಿತ್ತೆಯೋ ಪ. ಗಾನಲೋಲನೆ ಕೃಷ್ಣ ಏನೆಂಬುದರಿಯೆನೊ ಮೌನಿ ಜನಪ್ರಿಯ ಧ್ಯಾನಗಮ್ಯನೆ ರಂಗ ಅ.ಪ. ನೂಕುತ ದಿನ ಕಳೆದೆ ಕಾಕು ಯುಕುತಿಯಲ್ಲಿ ವ್ಯಾಕುಲ ಮನಕಿಲ್ಲ ಶ್ರೀಕಾಂತ ನಿನ್ನಿಚ್ಛೆ ಸುಖದುಃಖ ನಿಕರವ 1 ಆಟ ಪಾಟ ನೋಟವೂ ಊಟ ಕೂಟ ಕಾಟ ಕರ್ಮಗಳೆಲ್ಲವೂ ಹಾಟಕಾಂಬರ ನಿನ್ನಾಟವÉನ್ನಲುಭವ ದಾಟಿಸುವವೊ ತೆರೆ ಏಟಿಗೆ ಕೊಡುವುವೋ 2 ನರಕಕೆ ಕಾರಣವೋ ಹೇ ಶ್ರೀನರ ಹರಿ ನಿನ್ನ ಪ್ರೀತಿ ಕರವೋ ಸಂಚಿತ ಕರ್ಮ ಹರಿಸುತ ವರ ಸುಖ ಪಾಲಿಪ ಗುರುತಿನ ಪರಿಯೋ 3 ದೇಹಕ್ಕೆ ಹಿತಕರವೋ ಇಲ್ಲವೆ ಮನ ದಾಹಕ್ಕೆ ಮೃತ ಕರವೋ ದೇಹ ಮೋಹಾದಿಗಳಳಿದು ನಿಶ್ಚಲ ತತ್ವ ಶ್ರೀಹರಿ ತೋರುವ ತೆರವೊ ಒಂದರಿಯೆ 4 ಪಾಪಕ್ಕೆ ಹಿತಕರವೋ ಇಲ್ಲವೆ ಮನ ದಾಹಕ್ಕೆ ಮೃತ ಕರವೋ ದೇಹ ಮೋಹಾದಿಗಳಳಿದು ನಿಶ್ಚಲ ತತ್ವ ಶ್ರೀಹರಿ ತೋರುವ ತೆರವೊ ಒಂದರಿಯೆ 5 ಪಾಪಕ್ಕೆ ಕಾರಣವೋ ಈ ಕರ್ಮಗಳ ಳಾಪದುದ್ಧಾರಕವೋ ಗೋಪಾಲಕೃಷ್ಣವಿಠ್ಠಲನೆ ಮದ್ಗುರು ಬಿಂಬ ವ್ಯಾಪಾರದ್ವಯ ನಿಂದು ನೀ ಪ್ರೀತನಾಗಲೊ 6
--------------
ಅಂಬಾಬಾಯಿ
ನಾರಾಯಣ ವಿಠ್ಠಲನೆ ನೀನಿವನ ಕಾಪಾಡೊ ಹರಿಯೆ ಪ ನೀರಜಾಸನವಂದ್ಯ ಪೋರ ನಿನ್ನವನೆಂದುಕಾರುಣ್ಯದಲಿ ಕೈಪಿಡಿದು ಕಾಪಾಡೊ ಹರಿಯೇ ಅ.ಪ. ಜ್ಞಾನಾಯು ರೂಪಕ ಸು | ವಾಯುದೇವನೊಳಿದ್ದುನೀನಿವಗೆ ಜ್ಞಾನಾಯು ಸಂಪದವನೀಯೋ |ಮೌನಿಕುಲ ಸನ್ಮಾನ್ಯ ಪೂರ್ಣಪ್ರಜ್ಞರ ಮತದಿ ಜ್ಞಾನಿ ಎಂದೆನಿಸಿವನ ಕಾಪಾಡೊ ಹರಿಯೆ 1 ಗೋವುಗಳೊಳುದ್ಗೀಥ ಕಾವ ಕರುಣಿಯೆ ದೇವಭಾವದಲಿ ನೀನಿದ್ದು ಉದ್ಧರಿಸೊ ಹರಿಯೇ |ಆವ ಭವವನಧಿ ಲಕ್ಷ್ಮೀ ನರಹರಿಯೇನೋವುಗಳ ಪರಿಹರಿಸೊ ಪವನ ಪ್ರೀಯ 2 ಹೆಂಚು ಹಾಟಕದಲ್ಲಿ ಸಮಬುದ್ಧಿ ನೀನಿತ್ತುಪಂಚ ಪಂಚಿಕೆ ತತ್ವ ತರತಮವ ತಿಳಿಸುತ್ತಮಿಂಚಿನಂತಿವನ ಹೃತ್ಪಂಕಜದಿ ಪೊಳೆಯೊವಾಂಛಿತ ಪ್ರದನೆ ಗುರು ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ನಿಚ್ಚಳಾಗಲಿ ಬೇಕು ತಿಳಿದು ನಿಚ್ಚಳಾಗಲಿ ಬೇಕು ಪ ನಿಚ್ಚಮಾಡುವ ದೋಷರಾಶಿಗಳಳಿದು ನಿಚ್ಚಳಾಗಲಿ ಬೇಕು ಅ.ಪ ಪಾಪವೆಂಬುದು ಹೊರಗಿಹುದೆ ತನ್ನ ಅಪವರ್ಗಕೆ ಮಾರ್ಗವಹುದೆ ಬಲು ತಾಪಸಿಗಾದರು ಅದು ಸಾಧನವಹುದೆ 1 ಪುಣ್ಯವೆಂಬದು ಬೇರೆಯಿಲ್ಲಾ ನಾನಾ ರಣ್ಯ ಚರಿಸಿದರು ದೊರಕುವದಲ್ಲಾ ಮನ್ಯು ಬಿಡದೆ ಮತ್ತೊಂದಲ್ಲಾ ನಿರುತ ಅನ್ಯರಾಶಿ ಬದಲು ಗತಿಗವಸಲ್ಲಾ 2 ವೈಕುಂಠವೆಂಬೋದು ಅಲ್ಲೆ ಬರಿದೆ ಲೌಕೀಕ ತೊರದರೆ ಇಪ್ಪದು ಇಲ್ಲೆ ಈ ಕಲಿಯೊಳಗೆ ಈ ಸೊಲ್ಲೆವೊಲಿಸ ಬೇಕೆನೆ ಮಾರಿ ಓಡುವುದು ನಾ ಬಲ್ಲೆ 3 ಹರಿಸ್ಮರಣೆಗೆ ಪೋಪ ದೋಷ ಬಲು ಪರಿ ಧರ್ಮವ ಮಾಡಲು ಲೇಶ ಸರಿಯಾವು ತರುವಾಯ ಮೋಸದಿಂದ ತಿರುಗಿ ತಿರುಗಿ ಪುಟ್ಟಿ ಬಡವನು ಕ್ಲೇಶಾ4 ಒಬ್ಬರ ಸರಿಗಟ್ಟದಿರೊ ನಿನ ಕರ್ಮ ಸುಖವೆಂದು ಸಾರೊ ಉಬ್ಬಲ ದಾಡಿಪರಾರೊ ಎಲೆ ಲ್ಹಬ್ಬಿದ ವಿಜಯವಿಠ್ಠಲನೆಂದು ಸಾರೋ 5
--------------
ವಿಜಯದಾಸ
ನಿನ್ನ ಬಗೆ ಬಗೆ ರೂಪಗಳ ಉರಗ ಶಯ್ಯ ರಂಗಯ್ಯಾ ಪ ದಿತಿಸುತ ಸೋಮಕ ಶ್ರುತಿತತಿ ಕದ್ದೊಯ್ಯೆ ಶತಧೃತಿ ತಲೆವಾಗಿ ಚತುರತೆÉಯಿಂದಲಿ ಮತಿಪತಿ ಮತ್ಪಿತಾ ಪ್ರತಿಪತಿ ಕಲ್ಪಕ್ಕೆ ಗತಿಸ್ಥಿತಿ ನೀನೆಂದು ಅತಿ ತುತಿಸಲು ಸಂ ತತ ಹಿತ ಹಿರಿದಾಗಿ ಪ್ರತಿಯಿಲ್ಲವೆನಿಸಿದ್ದು ರಿತ ಪುಂಜದಾನವನ ತರಿದೊಟ್ಟಿ ಮತ್ಸ್ಯಾಕೃತಿಯಾ ಜಯ ಜಯವೆನುತಿರೆ ತ್ರಿಭುವನಾ 1 ಕೃತು ಭುಕು ದೇವಾರಿತತಿ ಸಂಗತಿಯಿಂದ ಮತಿ ಏಕರಾಗಿ ಸಂಮತದಿಂದ ನಡೆದು ಪ ರ್ವತವ ಕಿತ್ತಿ ತಂದು ಉ ನ್ನತವಾದ ಕ್ಷೀರೋದ ಪತಿಯೊಳಗಿಟ್ಟು ಅತಿಬಲದಿಂದ ನಗುತ ಮಥಿಸಲು ಮಹಾ ಕ್ಷಿತಿಧರ ಮುಣಗಿ ಪೋಗೆ ಹಾಹೋ ಎಂದು ಗತಿಗೆಟ್ಟ ಯೆಲ್ಲ ಕೂಗೆ ಕೇಳುತ ಬಂದು ಅತುಳ ಕಮಠನಾಗಿ ಪೊತ್ತೆ ಭಳಿರೆ ಮಿಗೆ2 ಗತಮಂದ ಮಾರೀಚ ಸುತ ಹೇಮನೇತುರಾ ಕ್ಷಿತಿಯ ಕದ್ದೌಯಿದು ದುರ್ಮತಿಯಿಂದ ವಿಬುಧÀರ ಖತಿಗೊಳಾಗೈಸಿ ಹಿಗ್ಗುತಲವ ತಿರುಗುತ್ತ ಪ್ರತಿಕೂಲನಾಗಿ ಸುವ್ರತಗಳ ಕೆಡಿಸುತ್ತ ಮಿತಿ ಮೀರಿ ಪಾತಾಳ ವಾಸವಾಗಿರಲು ಅದ್ಭುತ ಕಿಟಿ ರೂಪವಾಗಿ ರುತಲಿರೆ ಸತತಮರರು ಪಾಡೆ ಏನೆಂಬೆ ಶಿರವಾಗಿ 3 ಚತುರ ಮೊಗನವರನುತಿಸಿ ಪಡೆದು ಪ್ರಾಗ ರ್ವಿತನಾಗಿ ನೀಲಲೋಹಿತನ ಭಕುತಿಯಿಂದ ತತುವೇಶಜನರ ಶಕುತಿ ಕುಂದಿಸಿ ತಾನೆ ರತುನ ಗರ್ಭದೊಳು ದೇವತಿಯೆಂದು ಸಾರಿ ಬಾ ಳುತ್ತ ತನ್ನಾತ್ಮಜ ಭಾಗವತನ ಭಾಧಿಸಿ ಶಿರಿ ಗತಿಯೆಂದು ವಂದಿಸಲೆ ಕಂಭದಿ ಬಂದು ಸುರರು ಪೂಮಳೆ ಚೆಲ್ಲೆ 4 ಸುತಳ ಲೋಕಕ್ಕೀಶ್ವರ ಶತಕೃತ ಕವಿಯ ರಚಿಸಿ ಸಿತನಾಗಿ ರಥ ನನ್ನ ಚ್ಯುತ ಪದಸ್ಥನ ಮಾಡಿ ಸತುವ ಮಾರ್ಗದಲಿ ಪೂರಿತ ಭಾಗ್ಯತನದಲ್ಲಿ ಕೃತಕಾರ್ಯನಾಗಿರೆ ರಿತಮದದಲಿ ತಾ ನುತಿಸಲಾದಿತಿಯ ಗರ್ಭದಲ್ಲಿ ಜ ವಿತರಣೆ ನೆವದಿ ನಿಂದು ಭೂಮಿಯ ಕೊಂಡಜ ತತಿ ವಿಕ್ರಮತೀರಿತವಾದ ದಯಾಸಿಂಧು 5 ಸೂನು ಪೂಜಿತನಾಗಿ ಮುನಿಯಿಂದ ಪಿತನಗೋಸುಗ ಉಗ ಳುತ ರೋಷ ಕಿಡಿಗಳಾದ ಈರೈದು ಬಾಹೋ ದ್ವಿತೀಯ ಜಾತಿಯವನ ಹುತವ ಮಾಡಿದ ಗಂಭೀರಾ ನಿ ರುತ ಸತ್ಯವತಿ ನಂದನಕುವರ ಪರುಶ ಪಾಣಿ ಮೃತ ಜೀವಿಗಳ ಬದುಕಿಸಿದ ಮಹಾಧೀರಾ 6 ಚತುರಾತ್ಮ ಹರಿದೈವ ವೈವಸ್ವತ ಮನುಕುಲೋಧ್ಭವನಾ ಅನುಜ ಸಹಿತ ಪೋಗಿ ಮುನಿಯ ವಾ ರುತಿಯ ಮನ್ನಿಸಿ ಶಿಲಿ ಸತಿಯಳ ಮಾಡಿ ಭೂ ಪುರವಸಾರಿ ಪಿತನಾಜ್ಞ ತಿಳಿದು ಮಾ ರುತಿಯಿಂದ ಕಪಿಯ ವಿಗತಸಂತಾಪನ ಮಾಡಿ ಸೇತುವೆ ಕಟ್ಟಿ ಪತಿತರ ಶಿರ ಚೆಂಡಾಡಿ ಲಂಕಾನಗರ ಹಿತದಿಂದ ಭಕ್ತಗೆ ಪಟ್ಟಗಟ್ಟಿದÀ ನೋಡಿ 7 ಶತ್ರಪತ್ರಾರುಣ ದಳಾಯುತ ನಯನಾದೇವ| ತತಿ ವಂದ್ಯ ಗೋಕುಲ ಸ್ಥಿತಿ ಉದ್ಧಾರಕ | ಭಂಗ ಬಲಾ | ಚರಿತಪೂರ್ಣ ಕಂಸಾರಿ ಯುತ ಷೋಡಶಾಖ್ಯ ಯುವತಿಯರ ತಂದ ಅ| ಪ್ರತಿಮಲ್ಲ | ರತಿಪತಿ ಪಿತ ಫಲ್ಗುಣಗೆ ಭಾ | ಸಾರಥಿ ಎನಿಸಿ ಕಾಳಗದೊಳು | ಧೃತರಾಷ್ಟ್ರಜರ ಕೊಲ್ಲಿಸೆ ಸಭಯಲ್ಲಿ ಪರೀ | ಕ್ಷಿತಿನ ಉಳಿಹಿ ಕೀರುತಿ ಪೊತ್ತ ಗುಣರಾಶಿ 8 ವ್ರತದಿಂದ ಖಳರು ಧರಿತ ಸತ್ಕರ್ಮವ ಮಾಡೆ | ಗತಿಗೆಟ್ಟು ಸುರರ ಉಕುತಿಯಿಂದ ಕೈಮುಗಿದು | ಅಪ್ರಾಕೃತ ಕಾಯ ಶಿಶುವಾಗಿ || ಶ್ರುತಿ ಸರ್ವದಲಿ ಅನೃತವೆಂದು ತಿಳುಪಿ ಉ | ಚಿತ ಮಾರ್ಗದ ಬಿಡಿಸಿ ನಿ | ರ್ಜೀತ ಕಾರು ಪಾರ್ವತಿ ಪತಿಗೆ ಮಾರ್ಗಣವೆನಿಸಿ ತ್ರಿಪುರಾರಿಗೆ ಹುತಗೈಸಿ ಶಿವನ ಗೆಲಿಸಿ ವಿವಶಳನೆ ಪತಿವ್ರತೆಯರ ಲಜ್ಜೆಗೊಳಿಸಿದೆ ವಂಚಿಸೀ 9 ವಿಹಿತ ಧರ್ಮ ಮರೆದು | ಮಮತೆ ಜಾತಿ ಸಂಕರ | ವ್ರತದಲ್ಲಿ ನಾನಾ ದುಷ್ಕøತ ತುಂಬಿರಲು ದೇವತೆಗಳು ಮರುಗಿ ಅ | ರತರಾಗಿ ತುತಿಸಿ ತ್ವರಿತ ಸ್ವಭಾವದಲ್ಲಿ ನಿ | ಸಿತ ಖಡ್ಗಧರಿಸಿ ರಾ ಶೌರಿ | ಸುಕೃತ ನೆನೆವವರಿಗೆ ಭವಸಾಗರ ತಾರಿ10 ಶ್ರುತಿ ಶೀರ್ಷ ಶ್ರುತಿ ಉಪ | ಕೃತಿನಯ ಪಂಚಮ ಶ್ರುತಿ ಪಂಚರಾತ್ರಾ ಸಂ | ವತ ಮೂಲ ರಹಸ್ಯ | ತತುವಾದಿನಾಮನು | ಶ್ರುತಿಕಲ್ಪ ಕಥೆ ಸರ್ವ ಪ್ರತಿಪ್ರತಿ ವರ್ಣ ಸಂತತಿಯಲ್ಲಿ ನೀನೆ ವ್ಯಾ | ಪುತಮೂರ್ತಿ ಸಪ್ತ ಸಪುತ ಭುವನೇಶನೆಂದು ಅಚೌಧ್ಯರೊ ಪ್ಪುತ ಕೊಂಡಾಡುವರು ನಿಂದು | ಭಕುತಪೂ ಜಿತ ಕಾಯಾ ವಿಜಯವಿಠ್ಠಲನೆ ಪಾಲಿಸೊ ಇಂದು11
--------------
ವಿಜಯದಾಸ
ಪತಿ ವಿಠಲ | ರಕ್ಷಿಸೊ ಇವಳಾ ಪ ಪಕ್ಷೀಂದ್ರ ವಹ ಹರಿಯೆ | ಅಕ್ಷಯ್ಯ ಫಲದಾ ಅ.ಪ. ಮೋದ ತೀರ್ಥರ ಪ್ರೀಯಬೋಧಿಸೀ ತತ್ವ ಸಂ | ಧಾನವನೆ ಈಯೋ 1 ಫಣಿ ಶಾಯಿ | ಪ್ರಹ್ಲಾದ ವರದಾ 2 ಭವ ಭಂಗ ಕಳೆಯಲು ಸುಜನಸಂಗವನೆ ಕೊಟ್ಟು ಹರಿ | ಕಾಪಾಡ ಬೇಕೋಸಂಗರದಿ ಮೈದುನನ | ಭಂಗವಿಲ್ಲದೆ ಕಾಯ್ದೆಸಂಗೀತ ಲೋಲ ಸುಖ | ಶೃಂಗಾರ ಮೂರ್ತೇ 3 ಜ್ಞಾನಾನು ಸಂಧಾನ | ಸಾನು ಕೂಲಿಸಿ ಇವಳಪ್ರಾಣ ಪ್ರಾಣನು ನಿನ್ನ | ಧ್ಯಾನ ಮಾಳ್ಪಂತೇಮಾನಸಾದಲಿ ನಿಂತು | ಚೊದನೆಯ ಗೈಯ್ಯುತ್ತಗಾನ ಮಾಡಿಸೊ ದೇವ | ನಿನ್ನ ಮಹಿಮೆಗಳು4 ಪಾವನಾತ್ಮಕ ದೇವ | ಪಾವನ್ನ ತವ ಮಹಿಮೆಆವಾಗಲೂ ತುತಿಪ | ಭಾವವನೆ ಇತ್ತೂ |ಶ್ರೀವರ ಶ್ರೀ ಗುರೂ | ಗೋವಿಂದ ವಿಠ್ಠಲನೆಕಾವುದಿವಳನು ಎಂದು | ಪ್ರಾರ್ಥಿಸುವೆ ನಿನ್ನಾ 5
--------------
ಗುರುಗೋವಿಂದವಿಠಲರು
ಪದ್ಮೇಶ ವಿಠ್ಠಲನೆ | ಪೊರೆಯ ಬೇಕಿವನಾ ಪ ಸನ್ಮುದವ ನೀನಿತ್ತು ಪ್ರೇಮದಲಿ ಸಲಹೋ ಅ.ಪ. ಮನೊಮಾನಿ ಒಡೆಯನೇ | ಮನಸಿನಲಿ ನೀನಿದ್ದುಮನೊ ವಿಕಾರಕ್ಕೆಡೆಯು | ಉಚಿತವೇ ಹರಿಯೇ |ಮನಶಾಂತಿ ಕರುಣಿಸುತ | ಘನ್ನ ಸಾಧನಗೈಸೆಗುಣ ಉಳ್ಳವನು ಇವನು | ಅನಿಲಾಂತರಾತ್ಮಾ 1 ಆದಿ ಮೂರುತಿ ಹರಿಯೆ ಭೇಧ ಪಂಚಕತಿಳಿಸಿಮೋದ ತೀರ್ಥರ ಶಾಸ್ತ್ರ | ಭೋಧ ವದಗಿಸುತಾಸಾಧನ ಸುಮಾರ್ಗದಲಿ | ನೀದಯದಲಿಡು ಇವನವೇದಾಂತ ವೇದ್ಯ ಹರಿ | ಬಾದರಾಯಣನೇ 2 ತೈಜಸನು ನೀನಾಗಿ | ಯೋಜಿಸಿದ ಅಂಕಿತವಮಾಜದಲೆ ಇತ್ತಿಹೆನೊ | ಕಾರುಣ್ಯಮೂರ್ತೇಮೂಜಗಜ್ಜನ್ಮಾದಿ | ಕಾರಣನೆ ಸಂಸಾರಗೋಜುಗಳ ಬಿಡಿಸೊ ನಿ | ವ್ರ್ಯಾಜ ಮೂರುತಿಯೇ 3 ಸಾಧು ಸತ್ಸಂಗಗಳ | ನೀ ದಯದಿ ಕೊಟ್ಟವಗೆಕಾದುಕೋ ಕೈ ಬಿಡದೆ | ಯಾದವರೊಡೆಯಾಬಾಧೆ ಮನಸಿಗೆ ಬಂದಿ | ಹುದ ಕಳೆದು ಸಂತವಿಸುಮೋದ ಮುನಿ ಸಂಪ್ರೀಯ | ಧನ್ವಂತ್ರಿ ದೇವಾ 4 ಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪಂಪಾತೀರದ ಲಿಂಗಾ ಭವಭಸಿತಾಂಗಾ ಸಂಪುಲ್ಲಾಕ್ಷನ ತೋರೋ ಭಕ್ತ ಕೃಪಾಂಗ ಪ ನೀನೆ ಗತಿಯೆಂದು ನಿದಾನದಿಂದ ಧ್ಯಾನವ ಮಾಡಲು ದೈನ್ಯದಲಿಂದ ಮಾನಾಭಿಮಾನದೊಡಿಯನೆ ಆನಂದ 1 ಗಜಚರ್ಮಾಂಬರ ಗಂಗಾಧರ ಪುರವೈರಿ ಭಜಿಸಿದೆನೊ ನಿನ್ನ ಭಕ್ತಿಯಲಿ ಸಾಕಿರೆ ಕುಜನರೊಳಿಡದೆ ಉತ್ತಮವಾದ ದಾರಿ ನಿಜವಾಗಿ ತೋರಯ್ಯ ದೀನರುಪಕಾರಿ2 ಹೇಮಗಿರಿಯ ವಾಸಾ ಈಶನಿರೀಶಾ ಸೋಮಶೇಖರನೆ ಪಾರ್ವತಿಯ ವಿಲಾಸಾ ರಾಮ ಶ್ರೀ ವಿಜಯವಿಠ್ಠಲನೆ ನಿರ್ದೋಷಾ ಸ್ವಾಮಿಯ ನೆನೆವಂತೆ ಕೊಡು ಎನಗೆ ಮನಸಾ3
--------------
ವಿಜಯದಾಸ
ಪರತತ್ವ ವಿಠಲನೇ | ಪೊರೆಯ ಬೇಕಿವಳಾ ಪ ದುರಿತ ರಾಶಿಯ ತರಿದು | ಕರಪಿಡಿಯ ಬೇಕೋ ಅ.ಪ. ಕಾಲ ಕಾಲ ರೂಪಾತ್ಮಾ 1 ಗುರು ಕರುಣವಿಲ್ಲದಲೆ | ಹರಿಯೊಲಿಯನೆಂದೆಂಬಪರಮರಾಹಸ್ಯವನು | ಅರುಹಿ ಪ್ರೀತಿಯಲೀಕರುಣಿಸೋ ತವನಾಮ | ಸ್ಮರಣೆ ಸುಖ ಸಖ್ಯವನುಮರುತಾಂತರಾತ್ಮ ಹರಿ | ದುರಿತವನದಾವಾ 2 ಹರಿದಾಸ್ಯವತಿ ಕಷ್ಟ | ವಿರುವುದೆಂದರಿತಾಗ್ಯುಪರಿ ಪ್ರಶ್ನೆ ಭಕ್ತಿಯಲಿ | ಮೊರೆಯನಿಡುತಿರುವಾ |ತರಳೆ ಗಂಕಿತ ವಿತ್ತೆ | ವರ ಸ್ವಪ್ನ ಸೂಚ್ಯದಲಿಹರಿಯೆ ನಿನ್ನಾದೇಶ | ವಿರುವುದೆಂದರಿತು 3 ಪರಿ ಪರಿಯಗೈಯ್ಯುವಲಿಹರಿಯೆ ತವ ಸಂಸ್ಮರಣೆ | ಮರೆಯದಂತಿರಿಸೋ 4 ಜೀವೇಶ ಸನ್ನುತನೆ | ಜೀವರಂತರ್ಯಾಮಿಗೋವತ್ಸದನಿ ಗಾವು | ಧಾನಿಸೂವಂತೇ |ಕೈವಲ್ಯ ಪ್ರದ ಗುರೂ | ಗೋವಿಂದ ವಿಠ್ಠಲನೆಭಾವುಕಳ ಮಾಡಿವಳ | ನೀವೊಲಿಯ ಬೇಕೋ 5
--------------
ಗುರುಗೋವಿಂದವಿಠಲರು
ಪರಸೌಖ್ಯ ಪ್ರದ ವಿಠಲ | ಪೊರೆಯ ಬೇಕಿವಳಾ ಪ ದುರಿತ ದುಷ್ಕøತವೆಲ್ಲ | ದೂರ ಓಡಿಸುತಾ ಅ.ಪ. ಅಚ್ಯುತ ಕ್ಷಿತಿ ರಮಣ ಸೇವಾ 1 ಸಾಧನಕೆ ಸಹಕಾರಿ | ಸಾಧು ಜನ ಸತ್ಸಂಗನೀ ದಯದಿ ಒದಗಿಸುತ | ಕಾಪಾಡೊ ಹರಿಯೇ |ಮೋದ ತೀರ್ಥರ ಮತವ | ಭೋಧಿಸುತ ಇವಳೀಗೆಮೋದ ಪಾಲಿಸಿ ಹರಿಯೆ ಉದ್ಧಾರ ಮಾಡೋ2 ಮಾತೃದತ್ತವು ಎನ್ನೆ | ವೆಂಕಟೇಶನ ಪೂಜೆಸಾರ್ಥಕೆನಿಪುದು ಹರಿಯೆ | ಪಾರ್ಥ ಸಾರಥಿಯೇಕಾರ್ತಸ್ವರ ಮೊದಲಾದ | ಅರ್ಥಗಳ ಯೋಚಿಸಳುವಾರ್ತೆ ಎನ್ನನು ಭವವು ಆರ್ತರುದ್ಧರಣಾ 3 ತಂದೆ ಮುದ್ದು ಮೋಹನ್ನ | ಗುರುವನುಗ್ರಹವಿಹುದುಇಂದು ನಿಮ್ಮದಿ ನಮಿಸಿ | ಅಂಕಿತದ ಪದವಾಛಂದದಲ್ಯುದ್ಧರಿಸಿ | ಉಪದೇಶಿಸುತ್ತಿಹೆನುಮಂದನುದ್ಧಟ ತನವ | ತಂದೆ ಮನ್ನಿಪುದೋ 4 ಇಂದು ಮುಖಿ ಹೃದಯದಾ | ಅಂಬರದಿ ಪ್ರಕಾಶಿಸೆನೆನಂದ ತೀರ್ಥಸುವಂದ್ಯ | ಪ್ರಾರ್ಥಿಸುವೆ ನಿನಗೇತಂದೆ ಮುದ್ದು ಮೋಹನ್ನ | ವಿಠ್ಠಲನೆ ಗುರು ಗೋ-ವಿಂದ ವಿಠ್ಠಲ ಎನ್ನ | ಭಿನ್ನಪವ ಸಲಿಸೋ 5
--------------
ಗುರುಗೋವಿಂದವಿಠಲರು
ಪಾಂಡು ರಂಗ ವಿಠಲ | ಪೊರೆಯ ಬೇಕಿವಳ ಪ ಕುಂಡಲಿಯ ಶಯ್ಯ ಬ್ರ | ಹ್ಮಾಂಡದೊಡಿಯಾ ಅ.ಪ. ಹಸುಳೆ ತನ ಸ್ವಾಪದಲಿ | ಎಸೆವ ನಂಜುಡೇಶದರ್ಶನಾಕಾಂಕ್ಷಿಸುತ | ನುಸುಳಿ ಗುಡಿ ಪೊಗಲೂಅಸಮ ಗುರು ಸುಧೀಂದ್ರ | ಶಿಷ್ಯರನು ತಾ ತೋರಿಎಸೆವ ಸದ್ಗತಿಗೆ ಗುರು | ದರ್ಶನವೆ ಪಥವೆಂದೇ 1 ಲೀಲೆಯೊಳ್ ತೈಜಸನು | ಮಾಲೆಧರ ದಂಪತಿಯಶೀಲ ರೂಪವ ತಾಳಿ | ಬಾಲಕಿಯ ಬಯ್ದೂ |ಏಳಲನ ಮಾಡದಲೆ | ಶೀಲ ಗುರು ಬಳಿ ಪೋಗಿಬಾಲಕಿಯು ಪರಮಾನ್ನ | ಮೆಲುವಂತೆ ಮಾಡ್ಡಾ 2 ಗುರು ಹಿರಿಯರಾ ಸೇವೆ | ಹರಿಯಲ್ಲಿ ಸದ್ಭಕುತಿವರಜ್ಞಾನ ಪಾಲಿಸುತ | ಮೆರೆಸೊ ಈ ಶಿಶುವವರ ಪ್ರದಯಕನಾಗಿ | ಸರುವ ಸದ್ಧಭಿಲಾಷೆಗರೆನು ಹರ್ಷವನೀಯೋ | ಮರುತಾಂತರಾತ್ಮಾ 3 ಕಲಿಹೆಚ್ಚದಾ ಯುಗವು | ಸತಿಮಂತ್ರ ತಂತ್ರಗಳುಫಲಿಸಲಾರವು ಹರಿಯೆ | ಜಲಜನಾಭಾಚೆಲುವ ತವನಾಮ ಸ್ಮøತಿ | ಘಳಿಗೆ ಬಿಡದಲೆ ಕೊಟ್ಟುಒಲಿಯೊ ಕಾರುಣ್ಯನಿಧಿ | ಬಾಲ ಗೋಪಾಲ4 ಪಾವನದ ಅಂಕಿತವ | ಓದಿ ಸೂಚಿಸಿದಂತೆತಾವಕಳಿಗಿತ್ತಿಹೆನು | ಶ್ರೀ ವರನೆ ಹರಿಯೇ |ದೇವ ದೇವೇಶಗುರು | ಗೋವಿಂದ ವಿಠ್ಠಲನೆನೀ ವೊಲಿದು ದಾಸತ್ವ | ಭಾವ ಸಿದ್ಧಿಪುದೋ 5
--------------
ಗುರುಗೋವಿಂದವಿಠಲರು
ಪಾಲಿಸೀ ಪಸುಳೆಯನು ಪರಮ ಪುರುಷ ಪ. ಬಾಲೆ ನಿನ್ನವಳೆಂದು ಶ್ರೀ ಕರಿಗಿರೀಶ ಅ.ಪ. ನರಹರಿಯೆ ಲಕ್ಷೀಶ ತರಳೆ ನಿನ್ನವಳಿನ್ನು ತ್ವರಿತದಲಿ ಕಾಪಾಡು ತಡಮಾಡದೆ ಕರಕರೆಯ ರೋಗ ಬಾಧೆಯ ಬಿಡಿಸಿ ಹರಿ ನಿನ್ನ ಕರುಣಾಮೃತವಗರೆದು ಕಡುಕೃಪೆಯೊಳಿನ್ನು 1 ಫಣಿರಾಜಶಯನ ಪರ್ಯಂಕ ದೇವರದೇವ ಬಿನಗು ದೇವರ ಗಂಡ ಎಣೆಯುಂಟೆ ನಿನಗೆ ಮಣಿಯದಾಗ್ರಹದೇವಗಣ ಉಂಟೆ ನಿನಗಿನ್ನು ಕ್ಷಣ ಬಿಡದೆ ಸರ್ವಬಾಧೆಯ ಬಿಡಿಸಿ ಸತತ 2 ಪ್ರಾಣದೇವನೆ ಸರ್ವ ದೇವತೆಗಳಧಿನಾಥ ಪ್ರಾಣದೇವನು ನಿನ್ನ ಪ್ರಾಣ ಪದಕ ಪ್ರಾಣದೇವಗೆ ಪೇಳಿ ಪ್ರಾಣ ಭಯವನೆ ಬಿಡಿಸಿ ಪ್ರಾಣಸೂತ್ರವ ನಡಿಸಿ ತ್ರಾಣಗೆಡದಂತೆ 3 ನಿನ್ನ ದಾಸರ ದಾಸಳಿವಳು ಶ್ರೀಹರಿ ಕೇಳು ಎನ್ನ ಬಿನ್ನಪವ ನೀ ಬರಿದೆನಿಸದೆ ಚನ್ನಾಗಿ ಆಯುರಾರೋಗ್ಯ ಸಂಪದವಿತ್ತು ಮನ್ನಿಸಿ ಕಾಪಾಡು ಮಂಗಳಾತ್ಮಕನೆ 4 ಗುರುಕರುಣ ವರಬಲದಿ ಪುಟ್ಟಿದಾ ಶಿಶು ಇವಳು ಪರಮ ಮಂಗಳೆ ಎನಿಸಿ ಪಾಲಿಸೈ ಜಗದಿ ನಿರುತದಲಿ ನಿನ್ನ ಪದಭಕ್ತಿ ಜ್ಞಾನವ ಕೊಟ್ಟು ಹರಸಿ ಪೊರೆ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಪಾಲಿಸು ಶ್ರೀಶನೆ ಪರಮ ಪವಿತ್ರನೆ ಪಾವನ್ನ ಚರಿತನೆ ಪಾಲಿಸೆನ್ನ ಪ ಕಾಲಕಾಲಕೆ ನಿನ್ನ ಮಹಿಮೆಯ ತೋರಿಸಲಹುದು ಸರ್ವವ್ಯಾಪಕ ಮಾಯಾದೇವಿಯರಮಣ ಶ್ರೀಪತೆ ಕಾಯೊ ಶ್ರೀಹರಿವಾಸುದೇವನೆಅ.ಪ ವಾಸುದೇವನೆ ನಿನ್ನ ಸೋಸಿಲಿ ಭಜಿಪರ ಕ್ಲೇಶಗಳ್ಹರಿಸಿ ಸಂತೋಷವಿತ್ತು ದೋಷದೂರನ ನಾಮ ಆಸೆಯಿಂದ ಭಜಿಪರಸಂಗವನೂ ನೀಡೆನುತ ಬಿನ್ನೈಸುವೆನೂ ಎನ್ನೊಡೆಯ ನೀನೆಂದೆನುತ ಅಡಿಗಳಿಗೆರಗುವೆನೂ ಧೃಡಭಕುತಿ ನಿನ್ನೊಳಗಿರಿಸಿ ರಕ್ಷಿಪುದೆಂದು ಬೇಡುವೆನೂ ನುಡಿನುಡಿಗೆ ನಿನ್ನಯ ನುಡಿಗಳನು ನುಡಿವಂಥ ಭಕ್ತರ ಅಡಿಗಳಾಶ್ರಯ ಕೊಟ್ಟು ಕಾಯ್ವುದು ಬಡವನೆನ್ನಲಿ ಬೇಡ ಎನ್ನನು ಬಡವರಾಧಾರಿ ಶ್ರೀಹರಿ 1 ಶಂಖು ಚಕ್ರವು ಪದ್ಮಗದೆಯು ಹೊಳೆಹೊಳೆಯುತ್ತ ಬಿಂಕದಿಂದಲಿ ನಿಂತು ನೋಡುತಲಿ ಮಂಕುಮತಿಗಳನ್ನು ಶಂಕೆಯೊಳಗೆ ತಳ್ಳಿನೋಡುತ್ತ ನಿನ್ನಯ ಸದ್ಭಕ್ತರ ಶಂಕೆಗಳೆಲ್ಲವನು ಕ್ಷಿಪ್ರದಿ ಕಳೆಯುತ್ತ ಶ್ರೀಹರಿ ನಿನ್ನ ಪಾದ ಪಂಕಜಗಳೆ ಚಿಂತಿಸುವರಿಗೆ ಹರುಷ ನೀಡುತ್ತ ವೈರಿ ನಿನ್ನಯ ವಿಧವಿಧದ ಲೀಲೆಗಳ ತೋರುತ್ತ ಉದಯ ಭಾಸ್ಕರನಂತೆ ಪೊಳೆಯುತ್ತ ಮುದದಿ ಸಿರದಿ ಕಿರೀಟ ಹೊಳೆಯುತ್ತ ಸದಮಲಾತ್ಮಕ ಸತ್ಯಮೂರುತಿ2 ಹೃದ್ಗೋಚರನಾಗು ಪದ್ಮಾನಾಭ ಉದ್ಧರಿಸೆನ್ನನು ಉದ್ಧವಸಖನೆಂದು ನಂಬಿರುವೆ ಮನ್ಮನದ ಭಯಗಳವದ್ದು ಬಿಸುಡುತ ಸಲಹೊ ನರಹರಿಯೆ ಮಮಸ್ವಾಮಿ ನಿನ್ನಯ ಪದ್ಮ- ಪಾದಕೆ ನಮಿಪೆ ಶ್ರೀಹರಿಯೆ ಮೋಹಕ ಬಂಧವ ಬಿಡಿಸಿರಕ್ಷಿಸುತೆನ್ನ ಸಲಹು ಮಾಯಾಪತಿಯೆ ಬಹು ವಿಧದಿ ಪ್ರಾರ್ಥಿಪೆ ತೋಯಜಾಕ್ಷನೆ ತೋರು ನಿನ್ನಯ ಚಾರು ಚರಣಕೆ ಬಾಗಿ ನಮಿಸುವೆ ಕಾಯ್ವುದೆನ್ನನು ಕಮಲನಾಭವಿಠ್ಠಲನೆ ಶ್ರೀಹರಿ ವಾಸುದೇವನೆ 3
--------------
ನಿಡಗುರುಕಿ ಜೀವೂಬಾಯಿ
ಪಾಹಿಮಾಂ ಜಗದೀಶ ಭಕ್ತವಿಲಾಸ ಶ್ರೀ ಶ್ರೀನಿವಾಸನೆ ಹೇಳಲೊಶವಲ್ಲ ದೇವನೆ ಪ ಚಂಡಶಾಸಕ ಬಿರುದುವುಳ್ಳ ಪ್ರಚಂಡ ದೇವೋತ್ತುಂಗನೆ ಮದನ ಜನಕ ಕೋದಂಡಧರ ಶ್ರೀರಾಮನೆ 1 ವಿಕಟದಾನವ ಮೂಲ ಚ್ಛೇದನ ವಿಶ್ವರೂಪ ವಿನೋದನೆ 2 ಅಮಿತ ಮಹಿಮಾನಂದ ಹರನುತ ಕಮಲಸಂಭವ ನಯ್ಯನೆ ಸುಮನರಾದ ಸುಜನರಾ ಹೃದಯ ಕಮಲದಲಿ ನೀ ವಾಸನೆ 3 ಮಂಗಳಾಂಗ ವಿಹಂಗವಾಹನ ಮಾರಕೋಟಿ ಲಾವಣ್ಯನೆ ಅಂಗನಾಮಣಿ ಲಕುಮಿಪುರದಲಿ ಅಡಗಿಸಿಪ್ಪ ಶ್ರೀ ಲೋಲನೆ 4 ಶೌರಿ ಮಹಾಗುಣ ಶಾಂತನೆ ಕರುಣೆಸೆನ್ನನು ಕಾಯೊ ಬೇಗನೆ ವರದ `ಹೆನ್ನ ವಿಠ್ಠಲನೆ' 5
--------------
ಹೆನ್ನೆರಂಗದಾಸರು