ಒಟ್ಟು 205 ಕಡೆಗಳಲ್ಲಿ , 49 ದಾಸರು , 156 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾರುಗಾಣಿಸೊ ಎನ್ನ ಪಾವನಕಾಯ ಶ್ರೀ ಗುರು ರಾಘವೇಂದ್ರಾರ್ಯನೇ ಪ. ಶ್ರೀ ರಮಾಪತಿ ಗುಣವ ನೀ ಮನದೊಳು ತಿಳಿಸಿ ಭವ ಬಂಧ ಬಿಡಿಸೋ ಅ.ಪ. ಮಿಂಚಿನಂತಿಹ ಎನ್ನ ಚಂಚಲ ಮನದಲ್ಲಿ ಸಂಚಿತನೆ ಎನೆ ನೆಲಸೋ ಸಂಚಿತಾಗಮಿಗಳು ಕೊಂಚ ಉಳಿಯದ ತೆರದಿ ಪಂಚ ಭೇದಾರ್ಥ ತಿಳಿಸೊ ಪಂಚವಕ್ತ್ರನ ತಾತ ಮಿಂಚಿನಂದದಿ ಪೊಳೆವೊ ಹಂಚಿಕೆಯ ಎನಗೆ ತೋರೋ | ಮನಕ್ಹರುಷ ಬೀರೋ 1 ಶ್ರೀ ನರಹರಿ ಕೃಷ್ಣ ರಾಮ ವ್ಯಾಸರ ಪದವ ನೀ ನಿರ್ಮಲದಲಿ ನೆನೆವೆ ಮಾನನಿಧಿ ಮುರಹರಿಯ ಧಾಮತ್ರಯಗಳ ಮಾರ್ಗ ಕಾಮಿಸಿದ ಭಕ್ತಗೀವೆ ನಾನಧಮೆ ನಿನ್ನಡಿಗೆ ಬಾಗಿ ಭಜಿಸುವೆ ಗುರುವೆ ನೀನಿತ್ತ ನೋಡಿ ಪೊರೆಯೊ | ನೀ ದಯವ ಗರೆಯೊ 2 ತರಳತನದಲಿ ಶ್ರೀ ನರಹರಿಯ ಭಜಿಸುತ್ತ ಉರುತರದಿ ಭಾದೆ ಸಹಿಸಿ ಹರಿಯು ಸರ್ವತ್ರ ವ್ಯಾಪಕನೆಂಬೊ ಮಹಿಮೆಯ ಉರ್ವಿಯೊಳಗೆಲ್ಲ ನೆಲಸಿ ಸಿರಿ ಕೃಷ್ಣನಾ ಭಜಿಸಿ ಮರುತ ಮತವನೆ ಸ್ಥಾಪಿಸಿ | ಗುರುರಾಯನೆನಸಿ 3 ತುಂಗ ತೀರದಿ ನಿಂದು ಮಂಗಳರೂಪದಲಿ ಪಂಗು ಬಧಿರರ ಸಲಹುತ ಸಂಗೀತ ಪ್ರಿಯನೆನಿಸಿ ಶೃಂಗಾರರಾಮನ ಮಂಗಳರೂಪ ಭಜಿಸಿ ಹಿಂಗದೇ ಸುಜನರಿಗೆ ವರವ ಕೊಡುವೊ ಬಿರುದು ರಂಗನಾ ಪದದೊಲುಮೆಯೋ | ನಿನ್ನಯ ಮಹಿಮೆಯೋ 4 ಗೋಪಾಲಕೃಷ್ಣವಿಠ್ಠಲನ ಪರಿಪರಿಯಿಂದ ಪಾದ ಮೌಳಿ ನೋಳ್ಪೆ ಶ್ರೀ ಪತಿಯ ತೋರೆನಗೆ ಪಾಪ ಕಲುಷವ ಕಳದು ತಾಪಪಡಲಾರೆ ಭವದಿ ಕಾಪಾಡುವವರಿಲ್ಲ ನೀ ಕೃಪಾನಿಧಿಯೆಂದು ಪರಿ ಕೇಳ್ದೆ ಗುರುವೆ | ಭಕ್ತರ ಕಲ್ಪ ತರುವೆ5
--------------
ಅಂಬಾಬಾಯಿ
ಪುಣ್ಯ ಪೂರ್ವಾರ್ಜಿತವಿದು ಸುರ ಮಾನ್ಯ ಶ್ರೀ ನಿಲಯನ ದರುಶನ ಪ ಚೆನ್ನಿಗನೀತನು ಸುಜನರ ಪೊರೆಯಲು ಪನ್ನಗಾಚಲದಿ ಬಂದಿರುವುದು ಬಲು ಅ.ಪ ರಾಜ್ಯವಿವಗೆ ಹದಿನಾಲ್ಕು ಲೋಕಗಳು ಭೋಜ್ಯ ಚರಾಚರಜಗವೆಲ್ಲ ರಾಜೀವಾಲಯನಾಥನಿವನು ಬಲು ಸೋಜಿಗದಲಿ ಬಂದಿಹ ನೋಡಿ ಪೂಜ್ಯಚರಣ ಗುರುವ್ಯಾಸರಾಜ ಯತಿರಾಜ ರಚಿತ ದ್ವಿಕ್ಷಡಬ್ಧದ ಪೂಜೆಯ 1 ಸೌಂದರ್ಯದ ಗಣಿ ಇವನು ಎಲ್ಲರನು ತಂದೆಯಂತೆ ಸಲಹುವ ಸತತ ಒಂದೊಂದೆಡೆಯಲು ವ್ಯಾಪ್ತನಿವನು ತಾ ನೊಂದೆಡೆಯಲು ಸುಲಭದಿ ಸಿಗನು ನಂದತೀರ್ಥ ಪರಿವಾರ ಜನರು ಇವರೆಂದು ಹರುಷದಲಿ ಮುಂದೆ ನಿಂತಿಹುದು 2 ಪದ್ಮಾವತಿ ವಲ್ಲಭನಿವ ಮುನಿಜನ ಹೃದ್ಗತ ಪ್ರಕಟಾಮಿತ ಚರಿತ ಮುಗ್ಧಜನರು ಪರಮಾದರ ತೋರಲು ಸ್ನಿಗ್ಧನಾಗುವನು ಹರುಷದಲಿ ಛದ್ಮಕೆ ದೂರನು ಭಕ್ತ ಪ್ರಸನ್ನನು ಉದ್ಧರಿಸಲು ಈ ಸದ್ಮಕೆ ಬಂದಿಹ 3
--------------
ವಿದ್ಯಾಪ್ರಸನ್ನತೀರ್ಥರು
ಪುರಂದರ ಗುರುವರ್ಯ ಪ ಗುರುವರ್ಯ ಕಾಯಬೇಕೆನ್ನ ಮಧ್ವ ಗುರುಕೃತ ಗ್ರಂಥಾರ್ಥಜ್ಞಾನ ಕೊಟ್ಟು ಕರಣತ್ರಯ ಗಳಿಂದಾಚರಿಸುವ ಕರ್ಮವ ಹರಿಮಾಡಿಸುವನೆಂಬ ಸ್ಮರಣೆಯ ಕರುಣಿಸೊ ಅ.ಪ ಸುರಮುನಿ ನಿನ್ನ ಪ್ರಾರ್ಥನದಿ ಶ್ರೀ ಮ ದ್ಗುರು ವೇದವ್ಯಾಸರು ದಯದಿ ಪಾ- ಮರ ಪಂಡಿತರಿಗೆ ಸುಲಭದಿ ಧರ್ಮ ತಿಳಿದಾ- ಚರಿ ಪರೆಂದು ಮುದದಿ ಅರಿತು ನಿರುತ ಶೇವಿಪರಿಗೆ ಪರಮ ಮಂಗಳವೀವ ಭಾಗವತ ಗ್ರಂಥ ನಿರ್ಮಿಸಿದರು ಸತ್ಯ 1 ಕಲಿಯುಗದಲಿ ಹರಿನಾಮ ಜನರ ಕಲಿ ಕಲ್ಮಷಾದ್ರಿ ಸೂತ್ರಾಮ ಎಂದು ತಿಳಿದು ಕೀರ್ತಿಪರಿಗೆ ಪರಮ ಮಂ ಗಳ ಕರನಾಮದ ಮಹಿಮ ಎನುತ ಪುರಂದರ ಗಡ ದಲಿ ಪುಟ್ಟಿ ಬಲು ವಿಧ ಹರಿನಾಮಂ- ಗಳನು ವಿರಚಿಸಿದ 2 ಕಾಶ್ಯಾದಿ ಕ್ಷೇತ್ರ ಸಂಚರಿಸಿ ಪದ ರಾಶಿ ಸುಳಾದಿಗಳ ರಚಿಸಿ ಸಂ- ತೋಷ ತೀರ್ಥರ ಮತ ಬಲಿಸಿ ಗುರು ವ್ಯಾಸರಿಂದುಪದೇಶ ಗ್ರಹಿಸಿ ಜಗದಿ ಭೂಸುರ ಪಾಲಕ ಶ್ರೀಶಕಾರ್ಪರನರ ಕೇ ಸರಿ ಗತಿ ಪ್ರಿಯ ದಾಸರೆಂದೆನಿಸಿದ 3
--------------
ಕಾರ್ಪರ ನರಹರಿದಾಸರು
ಪುರಂದರ ಗುರುವೆ ಪ ಕಡು ಜ್ಞಾನ-ಭಕ್ತಿ-ವೈರಾಗ್ಯದ ನಿಧಿಯೆ ಅ.ಪ ವರ ಮಧ್ವಮತ ಕ್ಷೀರಾಂಬುಧಿಗೆ ಚಂದ್ರನಾದೆ | ಗುರು ವ್ಯಾಸರಾಯರಿಂದುಪದೇಶಗೊಂಡೆ || ಎರಡೆರಡು ಲಕ್ಷದಿಪ್ಪತೈದು ಸಾವಿರ | ವರ ನಾಮಾವಳಿ ಮಾಡಿ ಹರಿಗೆ ಅರ್ಪಿಸಿದೆ 1 ಗಂಗಾದಿ ಸಕಲ ತೀರ್ಥಂಗಳ ಚರಿಸಿತು | ರಂಗವದನ ವೇದವಾಸ್ಯನ || ಹಿಂಗದೆ ಮನದಲ್ಲಿ ನೆನೆದು ನೆನೆದು ಮರೆವ | ಮಂಗಳ ಮಹಿಮೆಯ ನುತಿಸಿ ನುತಿಸಿ ನಾ 2 ನಿನ್ನತಿಶಯಗುಣ ವರ್ಣಿಸಲಳವಲ್ಲ | ನಿನ್ನ ಸೇವಕನ ಸೇವಕನೆಂತೆಂದು || ಪನ್ನಗಶಯನ ಮುಕುಂದ ಕರುಣ ಪ್ರ | ಸನ್ನ ವಿಜಯವಿಠ್ಠಲ ಸಂಪನ್ನ 3
--------------
ವಿಜಯದಾಸ
ಪುರಂದರ ದಾಸರಾಜಾಪದಾಸರಾಜ ಹರಿದಾಸಪೀಠ ಸಂ-ಸ್ಥಾಪಿಸಿ ಘೋಸಿ ಬೆಳೆಸಿದ ಧೀರಾ 1ವ್ಯಾಸರಾಯರಿಂದ ದಾಸದೀಕ್ಷೆಯನುನೀ ಸ್ವೀಕರಿಸಿದಿ ಭೂಸುರವಂದ್ಯಾ 2ಶ್ರೀನಿವಾಸ ನವಕೋಟಿ-ನಾರಾಯಣದಾನ ಧರ್ಮದಲಿ ಬಲು ಜಿಪುಣಾ 3ಭೂಸುರ ವೇಷದಿ ದೇಶಾವರಿಗೆಶ್ರೀಶ ಬಂದರೆ ಷಣ್ಮಾಸ ಕಾಡಿದೆಯ 4 ಸಾಪಾದ ಪೈಸಾಗಳ ರಾಶಿ ಸುರು' ನೀಒಂದು ಪೈಸೆ ಆರಿಸಿಕೊ ಎಂದಿ 5ಸೋತು ಶ್ರೀಹರಿಯು ನಿನ್ನ ಸತಿಗೆ ಮೊರೆುಡೆಪತಿವ್ರತೆ ಕೊಟ್ಟಳು ರತ್ನದ ಮೂಗುತಿ 6ಭೂಪತಿ'ಠಲನು ಚಮತ್ಕಾರ ತೋರಿಸಿದಾಕ್ಷಣ ನೀ ಹರಿದಾಸನಾದೆಯೊ 7
--------------
ಭೂಪತಿ ವಿಠಲರು
ಪುರಂದರ ದಾಸರಾಯ ಪ ದಾಸರಾಯ ಪ್ರತಿವಾಸರದಲಿ ಶ್ರೀನಿ ವಾಸನ್ನ ತೋರೋ ದಯಾಸಾಂದ್ರ ಅ.ಪ. ವರದನಾಮಕ ಭೂಸುರನ ಮಡದಿ ಬ ಸಿರಲಿ ಜನಿಸಿ ಬಂದು ಮೆರೆದೆ ಧರಣಿಯೊಳು 1 ಕುಲಿಶಧರಾಹ್ವಯ ಪೊಳಲೊಳು ಮಡದಿ ಮ ಕ್ಕಳ ಕೂಡಿ ಸುಖದಿ ಕೆಲ ಕಾಲದಲಿದ್ಯೊ 2 ವ್ಯಾಸರಾಯರಲಿ ಭಾಸುರ ಮಂತ್ರೋ ಪ ದೇಶವ ಕೊಂಡು ರಮೇಶನ ಒಲಿಸಿದ್ಯೊ 3 ವಾಹನ ವಸ್ತುಗಳನೆಲ್ಲ ತೃಣಕೆ ಬಗೆದು ಕೃಷ್ಣಾರ್ಪಣವೆಂದೆ ಬುಧರಿಗೆ 4 ಕೃತಿ ಪೇಳಿ ಆ ಪ್ರಾಕೃತ ಹರಿಯಿಂದ ಸ್ವೀಕೃತ ನೀನಾದ್ಯೊ 5 ಮೂರ್ತಿ ಮಹಿಮೆಗಳ ಕೀರ್ತಿಸಿ ಜಗದಿ ಕೃತಾರ್ಥನೆಂದೆನಿಸಿದೆ6 ವನಧಿ ಪೋತನೆನಿಪ ಜಗ ನ್ನಾಥ ವಿಠ್ಠಲನ ಸುಪ್ರೀತಿಯಿಂದೊಲಿಸಿದೆ 7
--------------
ಜಗನ್ನಾಥದಾಸರು
ಪುರಂದರ ದಾಸರಾಯರ ಪೋಷಿಸುವ ಸಂತೋಷದಿಂದಲಿ ಪ ಪುರಂದರಗಡಾದ ಒಳಗೆ ಹಿರಿಯ ಸಾವುಕಾರನೆನಸಿ ಪರಿಪರಿಯ ಸೌಖ್ಯಗಳ ಸುರಿಸುತ್ತ ಇರುತಿರಲು ನರಹರಿ ತ್ವರಿತದಿಂ ಬ್ರಾಹ್ಮಣನಾಗುತ್ತ ಪೋಗುತ್ತ ಯಜಮಾನ ಕಂಡು ಜರಿದು ಬ್ರಾಹ್ಮಣನ್ಹೊರಗೆ ಹಾಕಲು ಮರುದಿವಸ ಮತ್ಹೋಗಿ ನಿಂತ 1 ಭಾರಿಭಾರಿಗೆ ಸಾವುಕಾರನ ಮೋರೆಗ್ಹೊತ್ತಿ ಮೇರೆಯಿಲ್ಲದೆ ಆರು ತಿಂಗಳು ಬೆನ್ನು ಬೀಳುತ್ತ ನಾಯಕರು ಈತನ ಆರು ಅಟ್ಯಾರೆಂದು ಬೈಯುತ್ತ ಬೇಸತ್ತು ಎರಡು ಹೇರು ರೊಕ್ಕಾ ಮುಂದೆ ಸುರಿಯುತ್ತ ಅದರೊಳಗೊಂದು ಡ್ಡಾರಿಸಿಕೋ ಎಂದು ಹೇಳಲು ನಾರಾಯಣ ಬಿಟ್ಹೋದ ನಗುತ2 ಹಿತ್ತಲಾ ಬಾಗಿಲಿಗೆ ಹೋಗಿ ಮತ್ತೆ ಆತನ ಮಡದಿಗಾಗಿ ವಿತ್ತ ತಾ ಯೆನುತ ತನ ಮಗನ ಮುಂಜ್ಯೆಂ ದೆತ್ತಿ ಕರದಿಂ ಬಾಯಿ ತೆರೆಯುತ್ತ ಆ ಪ್ರಾಣಿ ನುಡಿದಳು ಎತ್ತಣ ದ್ರವ್ಯವು ತನಗೆನುತ ನಿನ್ನ ಮೂಗಿನ ಮುತ್ತಿನ ಮೂಗುತಿಯ ಕೊಡು ಎನೆ ಉತ್ತುಮಳು ತೆಗೆದಿತ್ತಳಾಕ್ಷಣ 3 ಆಕಿ ಗಂಡನ ಕಣ್ಣೆದುರಿಗೆ ಹಾಕಿದನು ತಾ ಪಾಕಿ ಕೊಡೆಯೆನುತ ಅದು ಕಂಡು ಇದು ನ ಮ್ಮಾಕಿದೆಂದು ಈತ ನುಡಿಯುತ್ತ ಅನ್ಯರದು ಯಿಂಥಾ ದ್ಯಾಕೆ ಯಿರಬಾರದೆನ್ನುತ್ತಾ ಬೆಲೆ ಹೇಳು ಎನಲು ಎಂದಾಕೆ ಹೋದನು ತಿರೂಗಿ ಬಾರದೆ 4 ತಿರುಗಿ ಬ್ರಾಹ್ಮಣ ಬಾರದಿರಲು ಕರೆದು ತನ್ನ ಹೆಂಡತಿಯ ಬರಿಯ ನಾಶಿಕವನ್ನೆ ಕಂಡುನು ಮೂಗುತಿಯ ಎಲ್ಲೆನೆ ಮುರಿದಿಹುದು ಯೆಂದಾಕೆ ಹೇಳಲು ಒಳಗ್ಹೋಗಿ ನೀ ತಾರದಿರೆ ಅರೆವೆ ನಿನ್ನಯ ಜೀವವೆಂದನು ವಿಷಕೊಂಬೆನೆಂದು ಕರದಿ ಬಟ್ಟಲು ಧರಿಸಲಾಕ್ಷಣ ತ್ವರಿತದಲಿ ಹರಿ ಅದರೊಳಾಕಿದ 5 ಪುರುಷನಾ ಕೈಕೊಳಗೆಯಿಡಲು ತರಿಸಿ ತನ್ನಲ್ಲಿದ್ದ ಪೆಟ್ಟಿಗೆಯಾ ಅದು ಕಾಣದಿರಲು ಬೆರಗಾಗಿ ನೋಡಿದನು ಮಡದಿಯ ನಿಜ ಪೇಳುಯೆನಲು ಅರಸಿ ಪೇಳ್ದಳು ಕೊಟ್ಟ ಸುದ್ದಿಯಾ ಅಭಿಮಾನಕಂಜಿ ಅರದು ವಿಷವನು ಕುಡಿವೆನಲು ಸಿರಿರಮಣಾ ಕೊಟ್ಟ ಖರಿಯಾ 6 ಬಂದಿದ್ದ ಪರಿಪಕ್ವವೆನಗೆ ನ್ನಾವ ಕಾಲಕೆ ಆಗಬೇಕೆಂದ ವೈರಾಗ್ಯಭಾವದಿ ಜೀವಿಸಿಕೊಂಡಿರುವುದೇ ಛಂದ ಹೀಗೆನುತ ಮನೆ ಧನ ಕೋವಿದರ ಕರೆದಿತ್ತ ಹರುಷದಿ ಕಾವನಯ್ಯನ ದಾಸನಾದ 7 ಲಕ್ಷ್ಮಿಪತಿಯ ಪಾದದಲ್ಲಿ ಲಕ್ಷ್ಯವಿಟ್ಟು ವ್ಯಾಸರಾಯರ ಶಿಕ್ಷೆಯಿಂದಲಿ ಅಂಕಿತವ ಕೊಳುತ ತಿರಿಪಾದ ಐದು ಲಕ್ಷಪದ ಸುಳಾದಿ ಪೇಳುತ್ತ ಪ್ರತಿದಿವಸದಲ್ಲು ಅಪರೋಕ್ಷ ಪುಟ್ಟಲು ಮೋಕ್ಷಸ್ಥಾನಕ್ಕೆ ಕರೆದೊಯ್ದು ಅ ಧೋಕ್ಷಜನು ಸಂರಕ್ಷಿಸಿದ 8 ಘೊರ ನರಕದೊಳಗೆ ಬಿದ್ದಾ ಪಾರ ಜನರು ಚೀರುತಿರಲು ದ್ಧಾರ ಮಾಡಿದ ನಾರದಾರಿವರು ಅವ ತಾರ ಮಾಡಿ ಧಾರುಣಿಯಲಿ ಮತ್ತೆ ಬಂದರು ಸರುವೋತ್ತಮ ಹರಿ ನಾರಾಯಣನೆ ಎಂದು ಸಾರಿದರು ಹೀಗೆಂದು ತಿಳಿಯಲು ಮಾರ ಜನಕ ವಿಜಯವಿಠ್ಠಲ ಆರಿಗಾದರು ಒಲಿವ ಕಾಣಿರೊ 9
--------------
ವಿಜಯದಾಸ
ಪುರಂದರ ದಾಸರಾಯಾ | ನಮಿಸೆ ನಿಮ್ಮಚರಣ ಸರಸೀರುಹವಾ ಪ ಮೊರೆಹೊಕ್ಕ ಜನರ ನೀ | ಪೊರೆಯದೆ ಬಿಡುವರೆವರಪ್ರಹ್ಲಾದ್ ಗರುಹಿದಂ | ತರುಹು ಮಂತ್ರಾರ್ಥಿವ ಅ.ಪ. ದ್ವಾರಕ ಪುರದೊಳಗೆ | ನರ್ತನ ಗೈಯ್ಯೆವಾರ ಕಾಂತೆಯರೆಲ್ಲರೂ |ಭೋರಿಟ್ಟು ಮೊರೆಯುವ | ಸ್ವರಕೇಳಿ ಸುರರೆಲ್ಲಹರಿಯ ಓಲಗವಾರು | ಹೊಗುವರು ಎಂದರು1 ಓಲಗ ಸೇರ್ದ 2 ಷೋಡಶದ್ವಯ ಸ್ವರದಿ | ಮೈ ಮರೆಯುತ್ತಪಾಡಿ ಪೊಗಳಿ ಮುದದೀ |ಮೃಡವಂದ್ಯ ಹರಿಯವನ | ಕಡುಭಕುತಿಗೆ ಮೆಚ್ಚಿನೀಡುವೆ ವರವ ನೀ | ಬೇಡು ಬೇಡನೆ ಪೇಳ್ದ3 ಎಚ್ಚತ್ತು ಮುನಿ ನೋಡಿದ | ನಗುತಿರ್ಪಅಚ್ಚ್ಯುತನ್ನಾ ಬೇಡಿದ |ಸಚ್ಛಾರಿತ್ರನೆ ಕೇಳು | ನಿಚ್ಚಾಟೆನ್ನಯ ಕೂಡೆಪೆಚ್ಚ ಪೇರ್ಮಲಿ ಆಡು | ಲಕ್ಷಣಾಗ್ರಜನೇ 4 ಪುರಂದರ | ಗಡದಲ್ಲುದೀಸಿದ 5 ಚಿನಿವಾರ ವರದನಲ್ಲೀ | ಜನಿಸುತ್ತಧನ ನವಕೋಟಿಯ ಗಳಿಸೀ |ಘನ ಲೋಭಿ ದ್ವಿಜನ | ಜ್ಞಾನೋದಯ ಮಾಡುತಘನಗುಣ ಸಿರಿಪತಿ | ಅಣುಗನ್ನ ಪೊರೆದ 6 ಪುರಂದರ ದಾಸರ 7 ಹಿರಿಯ ವೈರಾಗ್ಯ ಪೊಂದಿ | ಸಕಲವನ್ನುಸಿರಿಕೃಷ್ಣಗರ್ಪಣೆಂದೀ |ಗುರು ವ್ಯಾಸರಲಿ ಪುರಂ | ದರನೆಂಬಂಕಿತ ಪೊಂದಿಪರಿಸರ ಮತ ಸರ್ವೋತ್ತಮವೆಂದು ಬರೆದಂಥ8 ಸಾರ ವಿಸ್ತಾರದಿವೇದ ಗಮ್ಯಾನಂದ | ಮಯನ ಬೋಧಿಸಿದ 9ನಾಲ್ಕಾರು ಜನ ಶಿಷ್ಯರ | ಜ್ಞಾನೀಗಳ ಲೋಕೋದ್ದಾರಕೆ ಈಯುತೆ ಕಾಕು ಮಾಯ್ಮತಗಳ | ಸಾಕಷ್ಟು ಖಂಡಿಸಿಮಾಕಳತ್ರನ ಮಹಿಮೆ | ಮನೆಮನೆ ಬೀರಿದ 10 ಮಾಸ ಪುಷ್ಯವದ್ಯದೀ | ಪರಮೋತ್ತಮಶಶಿ ರವಿಗಳ ಮೇಳದೀ |ರಸೆಯ ತ್ಯಜಿಸಿ ಗುರು ಗೋವಿಂದ ವಿಠಲನಎಸೆವ ಪಾದಗಳ್ಬಿಸಜ | ಸೇರುತ ಮೆರೆದಾ 11
--------------
ಗುರುಗೋವಿಂದವಿಠಲರು
ಪುರಂದರದಾಸರು ಎಂತು ಪೊಗಳಲಿ ನಾನು ಪ ಕಂತುಪಿತನೇಕಾಂತ ಭಕ್ತನ ಪಂಥವನು ಪದ ಪಂಕ್ತಿಯಲಿ ತುಂಬಿಟ್ಟು ಸಲಹಿದ ದಾಸವರ್ಯರ ಅ.ಪ. ನಿತ್ಯ ನೆನೆಯುತ್ತ ಪಂಡಿತೋತ್ತಮರೊಡನೆ ಸುಖಿಸುತ್ತ ಕಂಡು ಹರಿಯನು ಮುಂದೆ ಕುಣಿಯುತ್ತ ಕುಂಡಲಿಗೆ ನಿಜ ಭೂಷಣವು ಎನಿಸುತ್ತ ಭಂಡಜನರಾ ಪುಂಡುಮಾರ್ಗವ ಕಂಡಕಂಡೆಡೆ ಖಂಡ್ರಿಸುತ ಬ್ರಹ್ಮಾಂಡ ದೊಡೆಯನ ಭಕ್ತಿ ಬಿತ್ತುತ ಹಿಂಡಿ ಮತಿಮತ ರಸವ ಕುಡಿಸಿದ ದಾಸವರ್ಯರ 1 ಮೊದಲು ಗಾಯಕ ದೇವಸಭೆಯಲ್ಲಿ ಮುದದಿ ಕಾಮುಕ ಚೇಷ್ಟೆ ನಡೆಸುತಲಿ ಪದವಿಯಿಂ ಚ್ಯುತನಾಗಿ ದಾಸಿಯಲಿ ಉದಿಸಿ ಬಂದು ಸಾಧು ಸಂಗದಲಿ ಬದಿಗೆ ತಳ್ಳುತ ಭವದ ಕೋಟಲೆ ಮುದದಿ ಜಪಿಸುತ ವಾಸುದೇವನ ಪದವಿ ಸಾಧಿಸಿ ದೇವ ಋಷಿ ತಾ ಪದುಮನಾಭನ ನೆನೆದು ನರಕವ ಬ ರಿದು ಮಾಡ್ಡ ಮಹಾನುಭಾವನ 2 ಕಾಸಿನಾಶಯವು ಮೋಸವೆಂತೆಂದು ಹೇಸಿವಿಷಯದಿ ಲೇಸು ಸಿಗದೆಂದು ಶ್ರೀಶ ಸಿಗುವನು ದಾಸಗೆಂತೆಂದು ಆಶೆಯಿಂದಲಿ ಸಾರಬೇಕೆಂದು ಓಸು ಸಂಪದ ನೂಕಿ ಭರದಿಂ ವ್ಯಾಸರಾಯರ ಶಿಷ್ಯನೆನಿಸುತ ವಾಸುದೇವನ ದಾಸನಾಗುತ ದೋಷಜ್ಞಾನವ ನಾಶಮಾಡಿದ ದೇಶ ತಿರುಗಿದ ದಾಸವರ್ಯರ 3 ಭಕ್ತಿಯಿಲ್ಲದ ಗಾನ ತಾನಿನ್ನು ಕತ್ತೆಕೂಗನುಮಾನವಿಲ್ಲೆಂದು ನಿತ್ಯದೇವನ ಗಾನ ಗೈಯಲು ಗಾತ್ರವಿದು ನಿಜವೀಣೆಯೆಂತೆಂದು ಸಪ್ತಸ್ವರಗಳ ಕ್ಲಪ್ತಮರ್ಮಗ ಳೆತ್ತಿ ತೋರುತ ಶ್ರೇಷ್ಠತರ ಸಂಗೀತ ಸೂತ್ರ ಸಂಮತ ನೀತಿ ನುಡಿದಿಹ ದಾಸವರ್ಯರ 4 ಪೊಂದಿ ಪುಸ್ತಕ ದೀಚೆ ಬರದೆಂದು ಛಂದ ಮರ್ಮವ ತಂದಿಡುವೆ ನಮ್ಮೀ ಅಂದ ಕನ್ನಡ ದೊಳಗೆ ಎಂತೆಂದು ಕಂದ ವೃತ್ತ ಸುಳಾದಿ ಪದಗಳ ಛಂದ ಭೂಷಣವೃಂದ ನೀಡುತ ನಂದದಿಂ ಕರ್ಣಾಟಮಾತೆಯ ಮುಂದೆ ತಾ ನಲಿವಂತೆ ಮಾಡಿದ ದಾಸವರ್ಯರ 5 ನಾರಿ ಮನೆ ಪರಿವಾರ ಹರಿಗೆಂದು ಸಾರವನ್ನೆ ಮುರಾರಿ ಮನೆಯೆಂದು ಚಾರು ಶ್ರುತಿಗತಸಾರ ನಡತೆಯಲಿ ಸೂರಿಯಾದವ ತೊರಬೇಕೆಂದು ನೀರಜಾಕ್ಷನ ಧೀರ ದೂತನ ಸಾರ ಮನವನು ಸಾರಿ ಸಾರುತ ದೂರ ಒಡಿಸಿ ಮೂರು ಮತಗಳ ನೇರ ಸುಖಪಥ ತೋರಿಸಿದ ಮಹರಾಯ ದಾಸರ 6 ಕರ್ಮಕೋಟಲೆಗಿಲ್ಲ ಕೊನೆಯೆಂದು ಮರ್ಮತಿಳಿಯುತ ಬಿಂಬಹೃದಯಗನ ನಿರ್ಮಮತೆಯಿಂದೆಸಗಿ ಕರ್ಮಗಳ ಕರ್ಮಪತಿಗೊಪ್ಪಿಸುತ ಸರ್ವಸ್ವ ಭರ್ಮಗರ್ಭನ ಭಕ್ತಿ ಭಾಗ್ಯದಿ ಪೇರ್ಮೆಯಿಂ ಹರಿದಾಸನೆಸಿಸುತ ಶರ್ಮ ಶಾಶ್ವತವಿತ್ತು ಸಲಹುವ ವರ್ಮ ನೀಡಿದ ವಿಶ್ವಬಾಂಧವ 7 ಇಂದಿರೇಶನು ಮುಂದೆ ಕುಣಿಯುತಿರೆ ಕುಂದುಂಟೆ ಮಹಿಮಾತಿಶಯಗಳಿಗೆ ತಂದೆ ಕೌತಕ ವೃಂದ ಮಳೆಗರೆದು ಕಂದನನು ಪೊರೆದಂದವೇನೆಂಬೆ ಬಂದು ಸತಿಸಹ ಮಂದಿರಕೆ ಗೋ ವಿಂದ ಪಾಕವಗೈದು ಬ್ರಾಹ್ಮಣ ವೃಂದಕಿಕ್ಕುತ ದಾಸರಿಗೆ ಮುದ ಮಾಧವ ಭಾಗ್ಯಕೆಣೆಯುಂಟೆ 8 ದೀನ ಹೊಲೆಯಗೆ ಪ್ರಾಣ ಬರಿಸಿದನು ಏನು ಒಲ್ಲದೆ ಹರಿಯ ಯಜಿಸಿದನು ಜ್ಞಾನ ಭಾಗ್ಯದಿ ಮುಳುಗಿ ತೇಲಿದನು ದೀನ ಜನರುದ್ಧಾರ ಮಾಡಿದನು ದಾನಿ ಜಯಮುನಿ ವಾಯು ಹೃದಯಗ ಚಿನ್ಮಯ ಶ್ರೀ ಕೃಷ್ಣವಿಠಲನ ಗಾನ ಸುಧೆಯನು ಬೀರಿಸುತ ವಿ ಜ್ಞಾನವಿತ್ತ ಮಹೋಪಕಾರಿ ವಿಶೇಷ ಮಹಿಮನ 9
--------------
ಕೃಷ್ಣವಿಠಲದಾಸರು
ಪೋಷಿಸೆನ್ನ ದಾಸಶ್ರೇಷ್ಠನೆ ವಸುಧಿದೇವ ನಿಕರಪಾಲ ವ್ಯಾಸರಾಯನ ಪ್ರೇಮಪಾತ್ರನೆ ಪ ವೇದಸಾರವಾದ ಕವನಗೈದು ಪ್ರಾಕೃತದಿ ಜಗದಿ ಭೇದಜ್ಷಾನ ತಾರತಮ್ಯ ಬೋಧಿಸಿದ ಸಾಧುಶೀಲ 1 ಜ್ಞಾನಿ ವೀಣಾಪಾಣೆ ದೇವ ಮೌನಿ ದಾನಿ | ಸ ನ್ಮಾನಿ ಗಾನಲೋಲ ದೀನಪಾಲನ 2 ನಂದಗೋಪಕಂದ ಶಾಮಸುಂದರವಿಠಲಗೆ ಪರಮ ಯೆಂದು ಸಾರಿ ಸುಪಥ ತೋರಿ ಮಂದÀರನ್ನು ಪೊರೆದ 3
--------------
ಶಾಮಸುಂದರ ವಿಠಲ
ಪ್ರಾಣನಾಥ ಪ್ರಾಣನಾಥ ತ್ರಿಭುವನಚೇಷ್ಟ ಪ್ರದಾತಾ ಪ ಅಖಿಲನೇತಾ ಸುಗುಣಜಾತಾ ಶೂರ ಸೀತಾರಾಘವದೂತ ಅ.ಪ ನೂರು ಯೋಜನ ಶರಧಿಯ ಹಾರಿ ಲಂಕಾಪುರವ ಸೇರಿ ಹರುಷದಿ ಜನಕಕುಮಾರಿಗುಂಗುರವಿತ್ತ 1 ದುಷ್ಟ ದಶಕಂಧರನನು ಮುಷ್ಟಿತಾಡನದಿಂದ ಚೇಷ್ಟರಹಿತನ ಮಾಡಿ ದಿಟ್ಟತನದಲಿ ಮೆರೆದ 2 ಗಂಧಮಾದನ ಗಿರಿಯನು ಒಂದು ಕರದಲಿ ಸುಖದಿ ಪಾದ ದ್ವಂದ್ವಕೆರಗಿದ ಮುಖ್ಯ 3 ಕ್ರೂರನಿಶೇಚರಪತಿ ಪರಿವಾರವನು ಸದೆ ಬಡಿದು ಮೂರು ಜಗಂಗಳ ಮೀರಿದ ಕೀರುತಿಯ ಪೊಂದಿದ 4 ಇನ್ನು ಎರಡವತಾರಗಳನ್ನು ಧರಿಸುತ ಜಗದಿ ಪ್ರ ಸನ್ನ ಮಾಧವವ್ಯಾಸರನ್ನು ಸೇವೆಯ ಮಾಡಿದ 5
--------------
ವಿದ್ಯಾಪ್ರಸನ್ನತೀರ್ಥರು
ಪ್ರಾರ್ಥಿಸುವೆ ರಘುನಾಥತೀರ್ಥರ ಪ್ರಾರ್ಥಿಸುವೆ ಪುರುಷಾರ್ಥಪ್ರದರ ಪ ಸಾರ್ಥಕವಾಗಲು ಪಾರ್ಥಿವ ದೇಹವು ಜಗದಲಿ ಕೀರ್ತಿಗಳಿಸಿದವರ ಅ.ಪ ನೇದೃಶಂ ಸ್ಥಲಿಮಲಂ ಶಮಲಘ್ನಂ ನಾಸ್ಯತೀರ್ಥಂ ಸಲಿಲಸ್ಯಸಮಂ ವಾಃ ನಾಸ್ತಿ ವಿಷ್ಣುಂ ಸದೃಶಂ ನನುದೈವಂ ಸತ್ಯ ವಚನಗಳಿವೆಂದು ಸೂಚಿಸುತ ಆಸ್ತಿಕ ಜನಮನ ರಂಜಕ ತ್ರಿಮಕುಟ ಕ್ಷೇತ್ರನಿವಾಸ ಪವಿತ್ರತಮ ಚರಿತರ 1 ವ್ಯಾಸರಾಜ ಗುರುವರ್ಯ ರಚಿತ ತಾ ತ್ಪರ್ಯ ಚಂದ್ರಿಕಾ ಗ್ರಂಥವನು ವಾಸುದೇವ ನರಹರ್ಯನುಗ್ರಹದಿ ಉರ್ವರಿತವ ವಿರಚಿಸಿ ಮೆರೆದ ಶೇಷಚಂದ್ರಿಕಾಚಾರ್ಯರೆಂಬೊ ಗುರು ವ್ಯಾಸರಾಜರ ಪರಾವತಾರರ 2 ರಾಗ ದ್ವೇಷಗಳ ತೊರೆಯುತ ತ ನ್ನನು ರಾಗದಿಂದ ಭಜಿಸುವ ಜನಕೆ ಭೂಗಕಲ್ಪ ತರುವಂತೆ ಅರಿಷ್ಠವ ನೀಗಿ ಸಾಧು ಭೋಗಗಳೀವ ಯೋಗಿಜನ ಮನೋನಯನ ಪ್ರಸನ್ನ ಶ್ರೀ ರಾಘವೇಂದ್ರರಪರಾವತಾರರ 3
--------------
ವಿದ್ಯಾಪ್ರಸನ್ನತೀರ್ಥರು
ಬಾರಪ್ಪ ನೀ ಬಾರಪ್ಪಾ ಭಾರತಿರಮಣಾ ಮುಖ್ಯಪ್ರಾಣಾಗೋ'ನದಿನ್ನಿ ಹಣ್ಣಮಪ್ಪಾ ನೀ ಗಾಲವ ಕ್ಷೇತ್ರಕೆ ಬಾರಪ್ಪಾ ಪಗಾಲವಕ್ಷೇತ್ರಕ್ಕೆ ಬಾರಪ್ಪಾ ನೀ ಹೋಳಿಗೆತುಪ್ಪಾ ಹೊಡೆಯಪ್ಪಾಕೃಷ್ಣವೇಣಿಯ ತಟದ ಶಿಲೆಯೊಳು ಒಡಮೂಡುತ ನೀ ಇದ್ದೆಪ್ಪಾ1ಶಿಷ್ಟರಾದ ಶ್ರೀ ಉಮರ್ಜಿ ಆಚಾರ್ಯರ ನಿಷ್ಠೆಗೆ ಒಲಿದು ಬಂದೆಪ್ಪಾಶರಧಿಗೆ ಜಿಗಿದು ಸೀತಾದೇ'ಗೆ ರಾಮಮುದ್ರಿಕೆಯ ಕೊಟ್ಟೆಪ್ಪಾದುರುಳ ರಾವಣನ ಲಂಕಾಪಟ್ಟಣ ಸುಟ್ಟ ಕಪಿವರನು ನೀನಪ್ಪಾದುಷ್ಟ ಕೌರವನ ತೊಡೆಯ ಒಡೆದು ಗದೆಪಿಡಿದ ಭೀಮ ನೀ ಹೌದಪ್ಪಾ 2ದುಃಶಾಸನನ ಕರುಳ ಬಗೆದು ನರಸಿಂಹನ ಪ್ರೀತಿ ಪಡೆದೆಪ್ಪಾಹರಿಯದ್ವೇಗಳ ದುರ್ಮತಗಳನು ಮುರಿದು ಮಧ್ವಯತಿ ಆದೆಪ್ಪಾರಾಶಿ ರಾಶಿ ಸದಗ್ರಂಥ ರಚಿಸಿ ನೀ ವ್ಯಾಸರ ಸನ್ನಿಧಿ ಪಡೆದೆಪ್ಪಾಕೃಷ್ಣವೇಣಿತಟ ನರಾಹರಿ ಇರುವನು ರಾಯರು ಇರುವರು ಬಾರಪ್ಪಾ 3ಎಲ್ಲಿ ನರಹರಿ ಎಲ್ಲಿ ರಾಯರು ಅಲ್ಲಿ ನೀ ಇರಬೇಕಪ್ಪಾಪಾಪಿಷ್ಠರ ಗತಿಭಯಂಕರನು ನೀಪುಣೈವಂತರಿಗೆ ಸುಲಭಪ್ಪಾಭೂಪತಿ'ಠ್ಠಲನ ಭಕ್ತರ ಪೊರೆಯಲು ನೀ ಗಾಲವ ಕ್ಷೇತ್ರಕೆ ಬಾರಪ್ಪಾ 4ರುದ್ರದೇವರು
--------------
ಭೂಪತಿ ವಿಠಲರು
ಬಾರೊ ಹನುಮ ಬಾರೊ ಭೀಮ ಬಾರೊ ಮಧ್ವಮುನಿಪ ಪ. ಬಾರೊ ರಾಮಕೃಷ್ಣ ವೇದವ್ಯಾಸರ ಪ್ರಿಯ ಭಕ್ತ ಅ.ಪ. ಅಂಜನೇಯ ಸುತನು ಆಗಿ ಸಂಜೀವನ ಗಿರಿಯ ತಂದೆ ಕಂಜಲೋಚನೆಯ ವಾರ್ತೆ ಮಂಜುಭಾಷಣ ರಾಮನಿಗರುಹಿದೆ 1 ಪಾಪಿ ಕೌರವ ಕುಲವ ಕೊಂದು ದ್ರೌಪದಿಯ ಕಾಯ್ದ ಮಹಿಮ ಶ್ರೀಪತಿ ಶ್ರೀ ಕೃಷ್ಣನ ಭಜಿಸಿದ ಭೂಪ ಭೀಮಸೇನ ಬೇಗ 2 ಭೂಸುರ ಜನ್ಮದಲಿ ಬಂದು ಆಸೆಯಿಂದ ಆಶ್ರಮ ಕೊಂಡು ದೋಷಿ ಅನ್ಯಮತವ ಮುರಿದು ಭೂಸುರರ ಕಾಯ್ದ ಮಧ್ವ 3 ಸಕಲ ಸುಜನರ ಸೇವೆ ಕೊಂಡು ಮುಕುತಿಮಾರ್ಗಪ್ರದ ನೀನಾಗಿ ಭಕುತಿಮಾರ್ಗವ ತೋರಿ ಎನ್ನ ಹೃತ್ಕಮಲ ಮಧ್ಯದಲಿ ನಿಲ್ಲೊ 4 ಗೋಪಾಲಕೃಷ್ಣವಿಠ್ಠಲನ ರೂಪ ನೋಡುವ ಕೃಪೆಯ ಮಾಡೊ ಶ್ರೀಪತಿ ಶ್ರೀ ಶ್ರೀನಿವಾಸಗೆ ನೀ ಪ್ರೀತಿಕರನೆಂದು ನಮಿಪೆ 5
--------------
ಅಂಬಾಬಾಯಿ
ಬೇಗ ಪಾಲಿಸೊ ಬ್ರಹ್ಮಣ್ಯತೀರ್ಥ | ಕರುಣಿಸು ಇಷ್ಟಾರ್ಥ ಪ. ಯೋಗಿವರ ಶ್ರೀ ಅಬ್ಬೂರು ನಿಲಯ | ಸದ್ಭಕ್ತರಿಗತಿ ಪ್ರಿಯ ಅ.ಪ. ಸತ್ವಗುಣನೆ ಸರ್ವೋತ್ತಮ ಹರಿ ಪ್ರಿಯ | ಪಾವನ ಶುಭಕಾಯ ಚಿತ್ತದಲಿ ಹರಿ ಚಿಂತನೆ ಮಾಡುತಲಿ | ವರಗಳ ನೀಡುತಲಿ ಆತ್ಯಧಿಕದ ಕಣ್ವ ನದಿಯ ತೀರ ವಾಸ | ನಿನ್ನಲಿ ಹರಿ ವಾಸ ಸುಜನರುಗಳ ಪೊರೆವೆ 1 ಪ್ರೇಮದಿ ನೀ ಕೊಳಲು ಗೋಕ್ಷೀರವನೆರೆದೆ ಆಗಮಗಳ ಕಲಿಸಲು ಮೌಂಜಿಯ ಕಟ್ಟಿ | ಶ್ರೀಪಾದರಲಿ ಬಿಟ್ಟೆ ಯೋಗಿ ವ್ಯಾಸರಾಯರು ಎಂದ್ಹೆಸರಿಟ್ಟು | ಸನ್ಯಾಸವನೆ ಕೊಟ್ಟು 2 ಪಾಪಿ ಜನರ ಪಾವನಗೈಯುತಲಿ | ಶ್ರೀನಿಧಿ ಧ್ಯಾನದಲಿ ಕಾಪಾಡು ಸಧ್ಭøತ್ಯರ ದಯದಿಂದ | ತಪಸಿನ ಶಕ್ತಿಂದ ಶಿಷ್ಟರ ಪೊರೆಯುತಲಿ ಗೋಪಾಲಕೃಷ್ಣವಿಠ್ಠಲನನು ಹೃದಯದಲಿ | ನಿತ್ಯದಿ ಕಾಣುತಲಿ 3
--------------
ಅಂಬಾಬಾಯಿ