ಒಟ್ಟು 396 ಕಡೆಗಳಲ್ಲಿ , 74 ದಾಸರು , 370 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಓದಿ ಮರುಳಾದರಯ್ಯ ಬೋಧವಿಲ್ಲದೆ ಓದಿನೋಡಲದನರಿತು ಹರಿಯ ನೆನೆಯಲೊಲ್ಲದೆ ಪ. ಕರಣೇಂದ್ರಿಯ ಕಾಟಕೆ ಸಿಲುಕದ ಕರ್ಮದಾವುದು ಪರಗತಿ ವಿಚಾರವಿಲ್ಲದ ನಿಜದಾವುದು ಗುರುಚರಣ ಪರಿಚಯವಿಲ್ಲದ....ಯಾವುದು1 ಅಂತರಂಗ ಶುದ್ಧಿಯಿಲ್ಲದ ಕಂತೆಯಾವುದು ನಿತ್ಯ ಶಾಂತಿ ಶಮದಮವಿಲ್ಲದ ಭ್ರಾಂತಿ ಯಾವುದು ಸಂತತ ಸಮಾಧಾನದ ಚಿಂತೆಯಾವುದು ನಮ್ಮ ಕಪಟ ದಾವುದು 2 ಮಧ್ವಮತದ ಮಾರ್ಗವನ್ನು ಮೀರಿದಾವುದು ಶ್ರುತಿ ಸಿದ್ಧ ಹರಿಯ ಗುಣವ ಹಾಡಿಪಾಡದ್ಯಾವುದು ವೃದ್ಧರನ್ನು ಕೆಣಕಿ ಕಾಡಿ ಕೊಂಬದಾವುದು ಅದು ಸಿದ್ಧಯಮನ ಬಾಧೆಗೆ ಒಳಗಾಗುವದಾವುದು 3 ಸಾರತತ್ವ ಸುಧೆಯ ಸವಿಯ ದೂರಿದಾವುದು ಪರಿ- ವಾರ ಜನರ ಪೊರೆವರುಪಚಾರ ದಾವುದು ಸಾರಿ ತನ್ನ ಸಾಕ್ಷಿಗಿನ್ನು ಬಾರದಾವುದು ಅದು ಕೀರನಾಕ....ಯಾ ಸಂಸ್ಕಾರ ದಾವುದು 4 ಅನ್ನದ ಜೀವ ಭಿನ್ನಹರಿ ಎನ್ನದಾವುದು ದ್ವಾಸು- ಪರ್ನಪಥವ ಪಾ....ಮಾಡದಾವುದು ಧನ್ಯ ಹಯವದನ ನಾನೆನ್ನುವುದು ಅದು ಕುನ್ನಿಯಂತೆ ಹಲವು ಪರಿಯ ಕೂಗುವುದದು 5
--------------
ವಾದಿರಾಜ
ಕಟ್ಟಳೆ ನಿನ್ನದೆಂತೊ ಪ. ನಷ್ಟಗೈಸುವುದಿನ್ನು ಕಷ್ಟಪಡಿಸಲಿಬ್ಯಾಡ ಇಷ್ಟ ಕೃಷ್ಣಾರ್ಯನೆ ಅ.ಪ ಪುಟ್ಟಿದಾ ಮೊದಲಾಗಿ ನಷ್ಟತನವನೆ ಹೊಂದಿ ದುಷ್ಟರೊಳು ಶ್ರೇಷ್ಠನಾದೆ ಎಷ್ಟುದಿನ ಇದರಂತೆ ಇಟ್ಟಿರುವೆಯೊ ಗುರುವೆ ಇಷ್ಟೇವೆ ಎನ್ನ ಯೋಗ್ಯತೆಯು 1 ಪಾಪಿ ವಿಷಯ ಜ್ವಾಲೆಯು ಕುಪಿತದಿಂದೆನ್ನ ತಪಿಸಿ ಬೇಯಿಸುತಿದೆ ಕೃಪೆಯೆಂಬ ಮಳೆಗರೆದು ಉಪಶಮನವನೆ ಮಾಡು ಆಪದ್ಭಾಂಧವನಲ್ಲವೇ ಗುರುವೆ2 ಪಾಪಕಾರ್ಯರತನ ಪಾಪಿ ಎಂದೆನಿಸದೆ | ಜನರಿಂದ ತಪಸಿ ಎಂದೆನಿಸುವುದ್ಯಾತಕೆ ಭೂಪ ವಿಜಯ ರಾಮಚಂದ್ರವಿಠಲನ ಪಾದ ಪದುಮವ ನಂಬಿಹ ಗುರುವೆ 3
--------------
ವಿಜಯ ರಾಮಚಂದ್ರವಿಠಲ
ಕಂಡುದನು ಪೇಳ್ವೆ ಬ್ರಹ್ಮಾಂಡ ನಾಯಕನೆ | ಕೊಂಡೆಯವಿದಲ್ಲ ಗ್ರಹಕುಂಡಲವ ಶೋಧಿಸುತ ಪ ಮಕರ ಸತಿ ಲಗ್ನದಲ್ಲಿರ್ಪ ಜಲ ತಾರಕೇಂದು ದಶೆ ಯಲಿ ನಿನಗೆ ಜಲದೊಳಾವಾಸವಾಯಿತು ಹರಿಯೆ 1 ಮನುಮಥನ ತಾತ ಕೇಳಿನಸುತನು ನಾಲ್ಕನೆಯ ಮನೆಯೊಳಿರುವನು ಲಗ್ನಕಧಿಪನೆನಿಸಿ ಮನದಿ ಯೋಚಿಸಲಿಕಾ ಶನಿದಶೆಯೊಳಾ ಕುಧರ ವನು ಪೊತ್ತು ದಣಿದೆನೀವ ನಿಧಿಯೊಳು ಹರಿಯೆ2 ಮಂಗಳನೆ ಸುಖಕಧಿಪ ಮಂಗಳನು ಸಿಂಗರದಿ ಸಿಂಗರಾಶಿಯೊಳು ತಾ ಕಂಗೊಳಿಸುತ ತುಂಗವಿಕ್ರಮನವನೆ ಸಂಘಟಿಸಿದನು ವನದಿ ಹಿಂಗದೆ ಬೇರು ಮೆಲುವಂಗವನು ಹರಿಯೆ 3 ವಾರಿಜಾಸನ ಪಿತನೆ ಕ್ರೂರಕ್ಷೇತ್ರದಿ ರಾಹು ಸಾರಿರ್ಪ ರಾಶಿ ವೃಶ್ಚಿಕವೆನಿಸಲು | ಕಾರುಣಿಕನವನ ದಶೆಯಾರಂಭದಲಿ ನಿನಗೆ ಘೋರ ರೂಪವ ತಾಳಲಾಯ್ತು ನರಹರಿಯೆ 4 ಮಂದರೋದ್ಧರ ಕೇಳು ಚಂದಿರನ ರಾಶಿಗಾ ನಂದದಧಿಪತಿ ಸೂರ್ಯನಂದನನು ತಾ ನಿಂದು ಮೇಷದೊಳತ್ರಿಕಂದನ ನಿರೀಕ್ಷಿಸಲು ಬಂದುದೈ ಭಿಕ್ಷೆಯದರಿಂದ ನಿನಗೆಲೆ ಹರಿಯೆ 5 ಅಂಬುಜಾನನ ಕೇಳು ಒಂಭತ್ತರಧಿಪ ಶಶಿ- ಸಂಭವನು ಪಾಪದಿಂ ತುಂಬಿರ್ಪನು | ಸಂಭವಿಸಲವನ ದಶೆಯಿಂದ ನೀ ಕ್ಷತ್ರಿಯ ಕ-ದಂಬ ಮರ್ದಿಸಿ ಧರ್ಮಮಂ ಬಿಟ್ಟೆ ಹರಿಯೆ 6 ದುರಿತ ಸ್ಥಾನಾಧಿಪತಿ ಗುರುವೇಳನೆಯ ಮನೆಯೊಳಿರುವನದರಿಂ | ಹಿರಿಯರುಪದೇಶದಿಂದಿರದೆ ಭಾರ್ಯೆಯನಗಲಿ ಚರಿಸಿದೆಯರಣ್ಯದೊಳಗಿರುತ ನೀ ಹರಿಯೆ 7 ಘೋರಪಾಪವಿನಾಶ ನಾರಿರಾಶಿಯ ನವಮ-ಕಾ ರವಿಯು ಸಾರಿ ನಿಂದಿರ್ಪನದರಿಂ | ಚೋರವ್ಯಾಪಾರ ಪರನಾರಿಯರ ಕೂಡೆ ವ್ಯಭಿ-ಚಾರ ನಿನಗಾಯಿತು ರಮಾರಮಣ ಹರಿಯೇ 8 ಕೈವಲ್ಯ ತಾರಕನಾಥನು | ಪೂತ ಬುದ್ಧಿಸ್ಥಾನ ವಾದನದರಿಂಲಿಂ ಭೂತಲದಿ ಸ್ಥಾಪಿಸಿದೆ ನೂತನ ಮತವ ಹರಿಯೇ 9 ಪಾರವರ್ಜಿತ ಕವಿಯು ಸಾರಿರ್ದ ದಶಮದೊಳ್-ಗಾರವ ನೆನೆಯುಂಟು ಧೀರನೆನಿಸಿ | ಭೂರಿಮ್ಲೇಂಛರನು ಸಂಹಾರ ಗೈಯುತ ತೇಜಿಯೇರಿ ಮೆರೆಯುತ್ತಿರುವ ನಾರಾಯಣ ಹರಿಯೆ 10
--------------
ಅನ್ಯದಾಸರು
ಕಡೆವ ಬನ್ನಿ ಸಡಗರದಿಂದ ಘುಡಘುಡಿಸಿ ದೃಢವೆಂಬುದು ಕಡುಕಂಬನೆ ಮಾಡಿ ನಡನಡಿಸಿ ನುಡಿ ನಿಜ ವಡನೆ ಪಡಗವ ತಂದು ಜಡದಿಡಸಿ ಜಡದಿಡಸಿ ನವನೀತ ಗಡಬಡಿಸಿ ಗಡಬಡಿಸಿ 1 ಮೀಸಲಮನ ಕೆನೆ ಮೊಸರನೆ ಮಾಡಿ ಶೋಧಿಸಿ ಶೋಧಿಸಿ ವಾಸನೆ ಮೊಸರ ಕರುಣಿಕುಸಕಿರಿದು ಮರ್ದಿನಿ ಮರ್ದಿನಿ ಮೋಸಹೋಗದೆ ದುರಾಶದ ಕಿಲ್ಮಿಷ ಝಾಡಿಸಿ ಝಾಡಿಸಿ ಧ್ಯಾನ ಬಲಿದು ಸುವಾಸನೆಕಳಲ ಕಡೆವದಾರಂಭಿಸಿ 2 ನಾಮದಿವ್ಯಮಂತ್ರÀವ ಕಟ್ಟಿ ವಿಷಮ ಬಿಡಿಸಿ ವಿಷಮಬಿಡಿಸಿ ನೇಮದಿಂದ ಸುಪ್ರೇಮದರವಿಗಿ ಘಮಗುಡಿಸಿ ಘಮಗುಡಿಸಿ ಶಮೆದಮೆವೆಂಬ್ಹಗ್ಗನೆ ಸಮವಿಡಿದು ಧಿಮಿಗುಡಿಸಿ ಧಿಮಿಗುಡಿಸಿ ಶ್ರಮಜನ್ಮದಹರುವ ಕ್ರಮಗೊಂಡಾಹಂಬಿಡಿಸಿ 3 ನಾವು ನೀವೆಂಬ ಹೊಲೆಗುಡತಿಯನ್ಯರೆ ಬಿಡಿಸಿನ್ಯರೆಬಿಡಿಸಿ ಸಾವಧಾನದಲಿ ಅನುಭವಾಮೃತ ನಿಜಕುಡಿಸಿ ನಿಜಕುಡಿಸಿ ನವನೀತ ಝಲ್ಲಿಸಿ ಝಲ್ಲಿಸಿ ಸವಿಸವಿಗೊಂಡು ಸುವಿದ್ಯಸಾರಾಯವ ಅನುಭವಿಸಿ 4 ಕಡವು ಕುಶಲಿ ಒಬ್ಬಳೇ ಬಲುನಿಜಙÁ್ಞನಶಕ್ತಿ ಶಕ್ತಿ ಒಡಗೂಡಲು ನಿಜಬಾಹುದು ಕೈಗೂಡಿ ಸದ್ಗತಿ ಸದ್ಗತಿ ಪಡಕೊಂಡರು ಇದರಿಂದಲಿ ಮುನಿಜನ ವಿಶ್ರಾಂತಿ ವಿಶ್ರಾಂತಿ ಕೊಂಡಾಡಿದ ಅನುಭವಸ್ತುತಿ ಮೂಢಮಹಿಪತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರವ ಪಿಡಿದು ರಕ್ಷಿಸೈ ಪ ಸಿರಿ ಅ.ಪ ಉರಿವಕಿಚ್ಚಿನೊಳುನಿಂದು ಸ್ಮರಿಸಬಾರದಕೆಟ್ಟಪಾಪದಿ ಬೆರತುಸತಿಸುತಬಂಧುಮೋಹದಿ ಮರತು ವಿಷಯದಿ ಮುಳುಗಿಪೋದೆನು 1 ಇಂದು ನತಪಾಲ ನೀನೆ ಎಂದು ನುತಿಸಿ ಬೇಡುವೆ ಕರವಜೋಡಿಸಿ ಮತಿಯ ನೀನೆನಗಿತ್ತು ಬೇಗದಿ 2 ಬಾಧೆ ಘನವಾಗಿ ಇರುವದಯ್ಯ ಹರಡಿ ವೈಷ್ಣವರನ್ನು ದುಃಖದೊ ನಿರಂತರ ವ್ಯಾಪಿಸಿರ್ಪುದ 3 ಶ್ರೀಶನೀಕೋಪಬಿಟ್ಟುಸಂತತರಂಗ ದಾಸನೋಳ್ಮನವನಿಟ್ಟೂ ನಾಶಮಾಡದೆ ಬಿಟ್ಟರಿಳೆಯೊಳು ಪೋಷ ಯದುಗಿರಿವಾಸಪರಮನೆ4
--------------
ರಂಗದಾಸರು
ಕಲೆಯೇಹಂ ಶ್ರೀ ಕನಕಾದ್ರೀಶಂ ಜಲದೋಪಮ ಭಾಸಂ ಪ ಸುಲಲಿತ ಕರಧೃತ ಧರರಥ ಚರಣಂ ಕಲಿಕಲುಹಾಪಹ ಕಮನೀಯ ಚರಣಂ ತಿಲಕಿತ ದಿವ್ಯಲಲಾಟಂ ಕೌಸ್ತುಭ ಶೋಭಿತ ಮಣಿಸರಕೂಟಂ 1 ಸುಮಶರಕೋಟಿ ಮನೋಹರವೇಷಂ ಕಮಲಾಸಖಭಾಭರಣ ವಿಭೂಷಂ ಸುಮಹಿತಭಣಿತ ಸದೃಶಮಂಜು ಭಾಷಂ ವಿಮಲ ಹೃದಯ ಸೇವಕ ಪೋಷಂ2 ವಾರಿಜ ಭವಕೃತವಿವಿಧ ಸ್ತೋತ್ರಂ ಸಾರಸದಳ ವಿಸ್ತಾರಸುನೇತ್ರಂ ನಾರದ ಮುನಿಕೃತ ಪೂಜಾಪಾತ್ರಂ 3 ಶರದಿಂದು ಮಂಡಲ ಸುಂದರ ವದನಂ ವರಕುಂದ ಕುಟ್ಮಲ ಸನ್ನಿಭರದನಂ ಕರಸಂದರ್ಶಿತ ವೈಕುಂಠ ಸದನಂ ತರುಣ ತರಣಿಘೃಣಿ ರುಚಿದಂತ ಹಸನಂ 4 ತರುಣ ಶ್ರೀ ತುಳಸೀ ಶೋಭಿತ ಮಾಲಂ ಸರಸಿಜಗರ್ಭ ರುಚಿರ ದಿವ್ಯ ಚೇಲಂ ವರವ್ಯಾಘ್ರಭೂಧರ ವಿಹರಣ ಶೀಲಂ ವರದ ವಿಠಲ ಮಖಿಲಾಗಮಪಾಲಂ 5
--------------
ಸರಗೂರು ವೆಂಕಟವರದಾರ್ಯರು
ಕಳವಳಿಪುದೆನ್ನ ಮನ ಕಮಲಾಕ್ಷ ಬಾರದಿರೆ ಪ ನಳಿನಸಂಭÀವ ಲಿಖಿತವೇನಿಹುದೊ ಸಖಿಯೆ ಅ.ಪ. ಪೋದ ವಿಪ್ರನು ಬರದಿರಲು ಏನು ಕಾರಣವೊ ಹಾದಿಯಲಿ ವಿಘ್ನ ತಾನೊದಗಿತೊ ಮಾಧವನಿಗೆನ್ನೊಳು ಮಮತೆ ಬಾರದೆ ಹೊಯ್ತೆ ಮೇದಿನಿಯೊಳೇಕೆ ನಾ ಪುಟ್ಟಿ ಬಂದನೆ ಸಖಿಯೆ 1 ನಿನ್ನ ಹೊರತೆನಗಿನ್ನು ಅನ್ಯಗತಿಯಿಲ್ಲೆಂದು ಭಿನ್ನವಿಸಿಕೊಂಡಿದ್ದೇನಾಯಿತೆ ಕರ್ಮ ಬಲವಂತವಾಗಿರಲು ಬನ್ನಪಡಿಸುತಲೆನ್ನ ಬಳಲಿಪುದು ಸರಿಯೆ 2 ವಸುದೇವ ಸುತನಾಗಿ ಶಿಶುತನದ ಕ್ರೀಡೆಯೊಳ್ ಅಸುರರನು ಸಂಹಾರ ಮಾಡಿದವಗೆ ಶಿಶುಪಾಲನಾಕಾಲದ ವಶಮಾಡಲಸದಳವೆ ಕುಸುಮಾಕ್ಷಿ ಕರಿಗಿರೀಶನೆ ಗತಿಯು ಸಖಿಯೆ 3
--------------
ವರಾವಾಣಿರಾಮರಾಯದಾಸರು
ಕಾಮಾನ ಜನನಿಯೆ ಸೋಮಾನ ಸೋದರಿ ಸಾಮಾಜ ವರದನ ಪ್ರೇಮವ ಕೊಡಿಸಮ್ಮ ಪ ನೇಮಾದಿಂದಲಿ ಹರಿ ನಾಮಾವ ನುಡಿಸುತ ತಾಮಾಸ ಓಡುವಂತೆ ನೀಮಾಡಬೇಕಮ್ಮ ಅ.ಪ ನಿತ್ಯ ತೃಪ್ತಳೆನಿನ್ನ ನಿತ್ಯದಿ ಬೇಡಿಕೊಂಬೆ ಭೃತ್ಯರೊಳಗೆ ಎನ್ನ ಎತ್ತಿ ಸೇರಿಸೆ ತಾಯೆ || ಮತ್ತನಾಗದೆ ಭವದಿ ಉತ್ತುಮನೆನಿಸುತ ಆತ್ಮದಿ ಹರಿ ತೋರಿ ಕೃತಕೃತ್ಯನೆನಿಸಮ್ಮ 1 ದೇಶಕಾಲದಿನೀನು ಶ್ರೀಶಗೆ ಸಮಳಮ್ಮ ನಾಶಮಾಡುತ ದೋಷ ದಾಸಾನು ಎನಿಸಮ್ಮ || ಶ್ವಾಸಾಶೇಷರನೆಲ್ಲ ಲೇಸಾಗಿ ಆಳುವಳೆ ವಾಸುದೇವನಲ್ಲಿ ಆಸೇಯ ನೀಡಮ್ಮ 2 ಶೃತಿಯಲ್ಲಿ ನೀನಿದ್ದು ಸ್ತುತಿಸೀ ಶ್ರೀಹರಿಯನ್ನ ಮತ್ತೆಸೃಜಿಸುವಂತೆ ಎತ್ತಿಗಾನವ ಮಾಳ್ವೆ || ಎತ್ತ ನೋಡಲು ಬಲು ಕತ್ತಲೆಕಣಿ ತಾಯೆ ಸತ್ಯವ ಬಿಡದಂತೆ ಹತ್ತೀಸೆ ಹರಿದಾರಿ3 ಹರಿಯಂತೆ ಅವತಾರ ನಿರುತನೀ ಮಾಡುತ ಪರಿ ರೂಪದಿಂದ ಪರಿಚರಿಯ ನೀಮಾಳ್ವೆ || ಸರ್ವೇಶ ಹರಿಯಿಂದ ಸರ್ವಕಾಲದಿ ಕೂಡಿ ಸರ್ವಕಾರ್ಯವ ಮಾಳ್ವೆ ಸರಿಯಾರೆ ನಿನಗಮ್ಮಾ 4 ಅಕ್ಷರ ರೂಪಳೆ ಈಕ್ಷಿಸುಕರುಣದಿಂದ ತ್ರ್ಯಕ್ಷೇಶ ವಿಧಿಮಾತೆ ಅಕ್ಷರನರ್ಧಾಂಗಿ || ಕುಕ್ಷೀಲಿ ಬ್ರಹ್ಮಾಂಡ ಲಕ್ಷ್ಯವಿಲ್ಲದೆ ಪಡೆದಿ ಅಕ್ಷಯ ಮಾಡಿ ಜ್ಞಾನ ಮೋಕ್ಷಾವ ಕೊಡಿಸಮ್ಮಾ5 ವಿಕಾರ ಶೂನ್ಯಳೆ ಪ್ರಕೃತಿಗೆ ಮಾನಿಯೆ ನೀಕಾರ್ಯ ಕಾರಣಕ್ಕೆ ಮುಖ್ಯ ಹೇತುವೆ ತಾಯೆ || ಪ್ರಕೃತಿ ಬಂಧವ ಬಿಡಿಸಿ ಸಾಕಾರ ಮೂರುತಿ ಲೋಕನಾಯಕ ಹರಿಯ ಏಕಾಂತದಲಿ ತೋರೆ6 ತ್ರಿಗುಣ ಕಾರ್ಯಗಳೆಲ್ಲ ಸುಗುಣಿ ನೀ ಮಾಡುತ ನಿತ್ಯ ಪೊಗಳಿ ಹಿಗ್ಗುವೆ ಮಾತೆ || ಜಗವೆಲ್ಲ ಕುಣಿಸುತ ನಗುತಲೀಲೆಯಿಂದ ನಿಗಮಾದಿಗಳ ಮೀರಿ ಬಗೆ ಬಗೆ ಲೀಲೆ ಕಾಂಬೆ 7 ನಿತ್ಯಾ ಮುಕ್ತಳು ನೀನು ಪ್ರೀತಿಲಿ ನಮಿಪೆನೆ ಮಾತುಲಾಲಿಸಿ ಎನ್ನ ನಿತ್ಯದಿ ಸಲಹೆಮ್ಮ || ಹೆತ್ತ ತಾಯಿಯು ನೀನು ಎತ್ತಿ ಪೊರೆಯದಿರೆ ಎತ್ತ ಪೋಗಲಿ ನಾನು ಉತ್ತುಮರಮೆ ಹೇಳೆ 8 ಸಾಗರನ ಮಗಳೆ ಆಗಮರೂಪಳೆ ಹೋಗೀಸುಲಿಂಗವ ಸಾಗಿಸಿಗುಣಕಾರ್ಯ || ಭಾಗ್ಯ ಸ್ವರೂಪಳೆ ಬಾಗಿ ನಮಿಸುವೆ ಆಗು ಮಾಡಿಸು ಹರಿ ಗೀತೆಗಳೆನ್ನಿಂದ 9 ಮರುತ ದೇವನ ಪಿತನ ಉರದಲಿ ವಾಸಿಪಳೆ ಹರಿಗುರು ಚರಣದಿ ನಿರುತ ಭಕ್ತಿಯ ಕೊಟ್ಟು || ವಾರಿಜನಾಭನಲ್ಲಿ ಧಾರೆ ಧಾರೆಯ ಭಕ್ತಿ ಸಾರಸ ದಳನಯನೇ 10 ಮಾತು ಮಾತಿಗೆ ನಮ್ಮ ಖ್ಯಾತಾಜಯತೀರ್ಥ ನವನೀತ ಧರಿಸೀಹ || ಶ್ರೀ ತಾಂಡವ ಕೃಷ್ಣ ವಿಠಲರಾಯನ ಸ್ಮರಣೆ ಆತ್ಮಾದೊಳಗೆ ನಿಂತು ಖ್ಯಾತೀಲಿನಡಿಸಮ್ಮಾ 11
--------------
ಕೃಷ್ಣವಿಠಲದಾಸರು
ಕಾಯೋ ಕರುಣಾನಿಧೆ | ಶ್ರೀ ಹರಿ | ಖಗವರ ಗಮನಾ ಪ ಘೋರ ಸಂಸಾರದ ತಾಪದಿ ನೊಂದೆ | ಭವ ಭಯ ಅಘಕುಲ ಶಮನಾ 1 ಜ್ಞಾನ ಧ್ಯಾನದ ನಿಜ ಸಾಧನವರಿಯೆ | ನೀನೆ ಗತಿಯೆನುತ ಮಾಡುವೆ ನಮನಾ2 ಗುರು ಮಹೀಪತಿ ಪ್ರಭು ಅನಾಥ ಬಂಧು | ಚರಣದ ಭಜನೆಯ ಲಿರಿಸೆನ್ನ ಮನ |3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಲ ಕಳೆಯುವಿ ನಮ್ಮ ಐಕೂರಾರ್ಯರ ಸುವಾಕು ಕೇಳದೆ ಜೀವಿ ಪ ಮರುತಾಗಮ ಮರ್ಮವರಿಯದವರಿಗೆಲ್ಲಾ | ವರ ಭಾಗವತ ಗೀತಾ ಹರಿಕಥಾ ಮೃತ ತತ್ವ | ಯರಡೊಂದು ಕಾಲ ಕೃಪೆ ನೆಳಲಾಶ್ರಯಿಸದೆ 1 ಹರಿಮೂರ್ತಿ ಹರಿವ್ಯಾಪ್ತಿ ಹರಿಸತ್ಯ ಸುಚರಿತ್ರೆ | ಹರಿದಾಸರುಕ್ತಿ | ಹಿರಿದು ಕಿರಿದು ಭೇದ ನೆರೆ | ಸುರಹಸ್ಯವನರುಹಿ ಕಗ್ಗತ್ತಲೆ ಹರಿಸುವರಿವರೆ ನರ ನೀನಂಬದೆ2 ಮದಡ ಜನರಿಗೆಲ್ಲ ಪದಸುಳಾದಿಗಳನು | ಚತುರತನದಲಿಂದ | ವಿಧ ವಿಧ ವಿವರಿಸಿ | ಸದಮಲ ಸುಜ್ಞಾನ | ವದಗಿಸುವಂಥ ಈ ಬುಧರುಪದೇಶ ಮುದದಿ ಪಡೆಯದೆ 3 ಆಶೆ ಕ್ರೋಧಂಗಳ ಜಯಿಸುತ ಮನದಿಂದ ಕ್ಲೇಶಮೋದ ಸಮ ತಿಳಿದಿಹರೋ | ಯೇಸೇಸು ಕಾಲಕ್ಕೆ ಭೂಸುರೋತ್ತಮ ರಾದ | ಈ ಸುಗುಣರ ಸಹವಾಸ ದೊರೆವುದೆ 4 ಶ್ರೀ ಮುಖವಾಣಿಯು ಸಾಮಾನ್ಯವಲ್ಲವೋ ನೇಮದಿಂ ಕೇಳ್ವರ | ಶಾಮಸುಂದರ ಸುಧಾಮನಿಗೊಲಿದಂತೆ | ಪ್ರೇಮದಿಂ ಸಲಹುವ ನೀ ಮನದಲಿ ತಿಳಿ 5
--------------
ಶಾಮಸುಂದರ ವಿಠಲ
ಕಾವೇರಿ ಕನ್ಯಾರ್ಚಿತ ಸುಚರಿತ ದಿವಾಕರಾನತ ಸುರೇಶ ವಿನಮಿತ ಪ ಭವಾಬ್ಧಿ ವಿರಹಿತ ಸಮೀರಸುತನುತ ಶಿವಾ ನೃಹರಿ ಮಾಧವಾ ಕೃಪಾಯುತ ಅ.ಪ ರಮೇಶ ಧರಣಿಪ ಕುಮಾರ ಶಿರಧರ ಸುಮಾನ ವಿರಹಿತ ಪರಾತ್ಪರಾ ಶಮಾ ದಮಯು ತಕ್ಷಮಾ ಸುಧಾಕರ ನಮಾಮಿಶಂಕರ ವಿಮಾನಮಂದಿರ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕುಂದಣದಾರುತಿ ತಾರೆ ಕುಂದಣದಾರುತಿ | ಸುಂದರವದನ ಕಮಲನಾಭನಿಗೀಗ ಪ ಶೌರಿ ಸುರವಂದ್ಯಗೆ ವಾರಿಧಿಶಯನಗೆ | ಮುರವೈರಿ ಮದನಪಿತನಿಗೀಗ 1 ಮುಕ್ತಿ ಶುಭದಾತಗೆ | ಭಕ್ತರ ಪರಿಪಾಲಗೆ | ಲಕುಮೀಶಗೆ ಶುಭದಿ ಪೋಷಗೆ 2 ಶಾಮಸುಂದರಾಂಗಗೆ ಸಾಮಜೇಂದ್ರ ಪಾಲಗೆ ಸುಮನಯನ ಶಮಲದೂರಗೀಗ 3
--------------
ಶಾಮಸುಂದರ ವಿಠಲ
ಕುಶಲವರೆ ಲಾಲಿಸಿರಿ ಕಥೆಯನೆಲ್ಲವ ಪೇಳ್ವೆ ಕುಶಲಮತಿಗಳೇ ನಿಮ್ಮ ಕೌತುಕವು ಸಹಜವಲೆ 1 ಬಿಸರುಹಾಕ್ಷನ ಚರಿತೆ ಚಿತ್ರತರಮಹುದಲ್ತೆ ಉಸುರುವೆನು ಪೂರ್ವ ವೃತ್ತಾಂತವನು ನಾ ಮೊದಲೆ 2 ಅಸುರರುಪಟಳದಿಂದ ವಸುಧೆ ಭಾರವು ಹೆಚ್ಚೆ ಬಿಸಜಭವಮುಖ ಸುರರ ಮೊರೆ ಕೇಳಿ ಮನ ಮೆಚ್ಚೆ 3 ಬಿಸಜನೇತ್ರನು ತಾನು ದಶರಥನ ಸುತನೆನಿಸಿ ವಸುಮತಿಯಲುದಿಸಿ ಸಜ್ಜನರ ಸಂತಸಗೊಳಿಸಿ 4 ಹಸುಳೆತನದಲಿ ಅಸುರೆ ತಾಟಕಿಯ ಸಂಹರಿಸಿ ಕುಶಿಕಸುತನಧ್ವರವ ಕಡು ರಕ್ಷಣೆಯ ಮಾಡಿ 5 ಅಶಮವಾಗಿದ್ದಹಲ್ಯೆಯ ತಾನುದ್ಧರಿಸಿ ಅಸಮಾಕ್ಷಚಾಪವನು ಲೀಲೆಯಲಿ ತುಂಡರಿಸಿ 6 ಕರ ಪದ್ಮವನು ಗ್ರಹಿಸಿ ಎಸೆವೆರಡು ರೂಪದಲಿ ಘನಲೀಲೆ ಪ್ರಕಟಿಸಿ 7 ಕುಶಲದಿಂ ಯುವರಾಜ ಪಟ್ಟಕ್ಕೆ ಸನ್ನಾಹ ವೆಸೆದಿರಲು ವಿಧಿಲೀಲೆಯೇನೆಂಬನಾಹ 8 ದಶರಥನ ಕಿರುಮಡದಿ ಪಡೆದ ವರಕನುವಾಗಿ ಸತಿ ಅನುಜ ಸಹಿತನಾಗಿ 9 ವಸುಮತಿಯೊಳವತರಿಸಿ ಬಂದ ಕಾರ್ಯವ ನೆನೆದು ಅಸಮ ನಾಟಕ ಸೂತ್ರಧಾರಿ ಅಡವಿಗೆ ನಡೆದು 10 ಎಸೆವ ಗಂಗೆಯ ದಾಟಿ ಗುಹನನ ಧನ್ಯನಗೈದು ಋಷಿ ಭರದ್ವಾಜರಿಂ ಸತ್ಕಾರವನು ಪಡೆದು 11 ವಸುಮತೀಧರ ಚಿತ್ರಕೂಟದಲಿ ನಿಂತಿರಲು ಅಸಮ ಭಕ್ತವರೇಣ್ಯ ಭರತ ತಾನೈತರಲು 12 ಬಿಸಜಾಂಘ್ರಿ ಸಂಪೂತ ವರ ಪಾದುಕೆಗಳನಿತ್ತು ಕುಶಲಮತಿ ತಾನವನ ಕಳುಹಿ ಯೋಚಿಸಿ ಮತ್ತು 13 ಪೆಸರಾಂತ ದಂಡಕಾ ವನ ಪ್ರವೇಶವ ಮಾಡಿ ಅಸುರರನೇಕರು ಅಂತಕನ ಬಳಿದೂಡಿ14 ಋಷಿವರ್ಯ ಶರಭಂಗಗೀಕ್ಷಣದಿ ಸುಗತಿಯನು ಹಸನಾಗಿ ಕರುಣಿಸಿದ ಬಳಿಕ ಕುಂಭೋದ್ಭವನು 15 ಒಸಗೆಯಿಂದಿತ್ತ ದಿವ್ಯಾಸ್ತ್ರಂಗಳ ಸಂಗ್ರಹಿಸಿ ಪಸರಿಸಿಹ ವಿಲಸಿತದ ಪಂಚವಟಿಯಲಿ ನೆಲಸಿ 16 ಒಸಗೆಯಿಂದಿರೆ ಬಂದ ಶೂರ್ಪನಖಿಗತಿಭಂಗ ವೆಸಗಿ ಸೋದರನಿಂದ ಶೋಭಿಸೆ ಶುಭಾಂಗ 17 ಮಾಯಾ ಮೃಗಾಕಾರ ದಸುರ ಮಾರೀಚನಂ ಸಂಹರಿಸಿ ರಘುವೀರ 18 ಅಸಮ ಸೋದರ ಸಹಿತ ಆಶ್ರಮಕ್ಕೈತಂದು ದೆಸೆದೆಸೆಯೊಳರಸೆ ತನ್ನರಸಿ ಕಾಣದಿರಲು 19 ಹುಸಿವೇಷದಿಂ ಬಂದ ಖಳ ಕುಲಾಗ್ರಣಿಯಿಂದ ಶಶಿಮುಖಿಯು ಹಗರಣವಾಗಿರಲು ನಿತ್ಯಾನಂದ 20 ದೆಸೆಗೆಟ್ಟವನ ಪರಿಯಲತಿಶಯದಿ ಶೋಕಿಸುತ ದೆಸೆದೆಸೆಯೊಳರಸುತ್ತಾ ಬಸವಳಿದು ತಾ ಬರುತ 21 ಎಸೆವವರ ಋಷ್ಯಮೂಕಮತಂಗಾಶ್ರಮದಿ ಬಿಸಜಾಪ್ತಸುತನ ಕಂಡವನೊಡನೆ ತಾ ಮುದದಿ 22 ಉಸುರಿ ವಾಲಿಯ ವಧೆಗೈವೆನೆಂದಭಯವನು ಎಸೆವ ವಿಲಸಿತ ಮಹಿಮ ಕರಿಗಿರೀಶನು ತಾನು 23
--------------
ವರಾವಾಣಿರಾಮರಾಯದಾಸರು
ಕೃಷ್ಣ ಕೃಷ್ಣ ಬೇಡಿಕೊಂಡೆ ಕೃಪೆಯ ಪಾಲಿಸೋ ಪ ಎಷ್ಟು ಎಷ್ಟು ಕೇಳಿಕೊಂಡೆ ಎಳ್ಳಷ್ಟು ದಯಬಾರದೇ ಅ.ಪ ಬಳಲುತಿಹೆನು ಎತ್ತೋ ಕರುಣಿ 1 ನಿನ್ನ ಬಿಟ್ಟು ಇರುವೆನೆನೋ ನಿನ್ನದಯದಿ ನನ್ನ ಬದುಕು ನಿನ್ನ ಮರೆತೆ ತಪ್ಪುಕ್ಷಮಿಸು ನಿನ್ನ ದಾಸ ಪ್ರಾಣರಾಣೆ2 ಈಗ ಆಗ ಎಂದು ಹೇಳಿ ಭೋಗದಲ್ಲೇ ರತಿಯ ನೀಡಿ ನಾಗಶಯನ ನಾಮಸುಧೆಯ ಬೇಗ ಕೊಡದೆ ಬಿಡುವರೇನೋ3 ದಾಸನೆಂದು ಭಕ್ತಿಯಿತ್ತು ನಾಶಮಾಡೋ ಕುಂದುಗಳ ನೀ4 ಲೋಕವೆಲ್ಲ ಪೊರೆದ ನಿನಗೆ ಸಾಕೆ ಎನ್ನ ಕಷ್ಟವೇನೋ ನಾಕ ದೊರೆಯೆ ಪುಣ್ಯಶ್ಲೋಕ 5 ಬರಿಯ ಶುಂಠ ನಾನು ಹರಿಯೆ ಅರಿಯೆದಾರಿ ವಲಿಸೆನಿನ್ನ ಶರಣ ಜನರ ಬಿಡನು ಎಂಬ ಬಿರುದೊಂದೆ ಧೈರ್ಯವೆನಗೆ 6 ಶಿರಿಯರಮಣ “ಕೃಷ್ಣವಿಠಲ” ಶರಣು ಜ್ಞಾನ ಸುಖದ ಚರಣವೆರಡು ತೋರಿಸೆನಗೆ ನಿರುತ ಹೃದಯ ಕಮಲದಲ್ಲಿ 7
--------------
ಕೃಷ್ಣವಿಠಲದಾಸರು
ಕೆಟ್ಟೆ ಕೆಟ್ಟೆ ಕೆಟ್ಟೆ ಕೃಷ್ಣ ದೃಷ್ಟಿಕೊಟ್ಟು ಕೈಯ ಪಿಡಿಯೋ ಪ ಮೂರ್ತಿ ಬಿಟ್ಟರೆನ್ನ ಕಷ್ಟಬಿಡಿಸೆಯಾರ ಬೇಡಲೋ ಅ.ಪ ಕಟ್ಟಿತಾಳಿ ತೊರೆಯೆ ಗಂಡ ಕಷ್ಟವಲ್ಲೆ ಸತಿಗೆ ಪೇಳು ಶಿಷ್ಠ ದೊರೆಯೆ ದಾಸನೆಂಬಿ ಶ್ರೇಷ್ಠತಾಳಿ ಕಂಠದಲ್ಲಿದೆ ಬಿಟ್ಟಿ ಏನೋ ಬಿರದು ಎಲ್ಲ ಕಟ್ಟಿಕೊಂಡು ಮೆರೆಯುತಿಹುದು ಕೆಟ್ಟದೂರು ತಟ್ಟದಿರದು ಭ್ರಷ್ಠನೆನಿಸಬೇಡೊ ಎನ್ನ 1 ಎಡವಿ ಬೀಳೆ ಮಗುವು ತಾಯಿ ಕಡಿವಳೇನು ಪೊಡವಿಗೊಡೆಯ ಅಡಿಯ ಪಿಡಿದ ದಾಸನಾನು ಬಡವನಾದರೇನೂ ನುಡಿಯೋ ಭಾರ ನಿನಗೆ ತಡವು ಯಾಕೋ ಬರಿದೆ ಬಿಂಕ ಸಡಲಿ ಸುತ್ತ ಮಾಯಪಾಶ ದೃಢವ ಮಾಡು ಭಕ್ತಿ ವಿರಕ್ತಿ 2 ದೋಷಿಯಾದರೇನು ನಾನು ದೋಷದೂರನಲ್ಲೆ ನೀನು ನಾಶಮಾಡು ಬೀಸಿದೃಷ್ಠಿ ಮೀಸಲಲ್ಲೆ ನಿನಗೆ ಸ್ವಾಮಿ ಈಶ ಕರುಣಕುಂಟೆ ಮೇರೆ ಓಸು ಜಗದ ಭಾಸವೆಲ್ಲ ಶ್ರೀಶ ನೀನು ಕೊಟ್ಟರುಂಟು ದಾಸಪೋಷ ಶ್ವಾಸನಾಣೆ 3 ಗಂಟು ಕಳ್ಳ ನೀನೆ ಸತ್ಯ ಭಂಟನೆನ್ನ ಸ್ವತ್ತು ನೀನೆ ನೆಂಟ ಬೇರೆ ಇಲ್ಲದಿರಲು ಅಂಟಿಸಿರುವೆ ವಿಷಯ ಕಂಟಕ ತಂಟಿ ಬಿಟ್ಟು ಈಗಲೇನೆ ಅಂಟಿಕೊಳ್ಳೊ ಮನದಿ ಗಟ್ಟಿ ಕುಂಟು ಕಲೆಯ ಸುಟ್ಟುಬಿಟ್ಟು ಉಂಟು ಮಾಡು ಎಲ್ಲ ನನಗೆ 4 ಬೆಟ್ಟದೊಡೆಯ ಶ್ರೀನಿವಾಸ ಎಷ್ಟರವನೊ ನಾನು ಭೃತ್ಯ ಪಾದ ಪಿಡಿದಿಹೆ ಸುಟ್ಟು ಸುಟ್ಟು ಭವದಿ ಬೆಂದು ಇಷ್ಟು ನುಡಿದೆ ಜಯಮುನೀಂದ್ರ ಶ್ರೇಷ್ಟಹೃಸ್ಥಮಧ್ವ ಶ್ರೀ ಪ್ರೇಷ್ಟದೈವ ಕೃಷ್ಣವಿಠಲ5
--------------
ಕೃಷ್ಣವಿಠಲದಾಸರು